Tag: dabaspete

  • ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ ಆರೋಪ – ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್

    ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ ಆರೋಪ – ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್

    – ತಪ್ಪಿದ್ರೆ ಅನಂತ್ ಕುಮಾರ್ ಕ್ಷಮೆ ಕೇಳ್ತಾರೆ: ಶಾಸಕ ಸುರೇಶ್‌ಗೌಡ

    ಬೆಂಗಳೂರು: ಕಾರು ಓವರ್ ಟೇಕ್ (Car Overtake) ಮಾಡಿದ್ದಕ್ಕೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಬಿಜೆಪಿ ಮಾಜಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಸೇರಿ ಮೂವರ ವಿರುದ್ಧ ದಾಬಸ್‌ಪೇಟೆಯಲ್ಲಿ (Dabaspete) ಪ್ರಕರಣ ದಾಖಲಾಗಿದೆ.

    ಓವರ್‌ಟೇಕ್ ವಿಚಾರವಾಗಿ ನೆಲಮಂಗಲದ ಹಳೇ ನಿಜಗಲ್ ಬಳಿ ಕಾರು ಅಡ್ಡಗಟ್ಟಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಸಲ್ಮಾನ್, ಸೈಫ್, ಇಲಿಯಾಜ್, ಗುಲಷಿರ್ ಉನ್ನೀಸಾ ಎಂಬವರು ದೂರು ದಾಖಲಿಸಿದ್ದಾರೆ. ಈ ಬೆನ್ನಲ್ಲೇ ಹೆಗಡೆ ಕಾರಿನಲ್ಲಿದ್ದ ನಾಲ್ವರನ್ನೂ ನೆಲಮಂಗಲ ಡಿವೈಎಸ್‌ಪಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದೆ. ಇದನ್ನೂ ಓದಿ: 2 ಕೋಟಿಗೂ ಅಧಿಕ ಮೌಲ್ಯದ ಫ್ಲ್ಯಾಟ್‌ ಸೇರಿ ʻಬಂಗಾರಿʼಗೌಡಳ 3.98 ಕೋಟಿ ಆಸ್ತಿ ಜಪ್ತಿ

    ಅನಂತ್ ಕುಮಾರ್ ಹೆಗಡೆ ಅವರಿಗೆ ಬೆದರಿಕೆ ಇರುವ ಕಾರಣ ಗನ್ ತೆಗೆದಿರೋದಾಗಿ ಗನ್‌ಮ್ಯಾನ್ ಶ್ರೀಧರ್ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ದಾಬಸ್ ಪೇಟೆ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಾಜಿ ಸಂಸದ ಡಿಕೆ ಸುರೇಶ್‌ಗೆ ಇಡಿ ಡ್ರಿಲ್ – ಜು.8ಕ್ಕೆ ಮತ್ತೆ ಬುಲಾವ್

    ಘಟನೆ ಸಂಬಂಧ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ ಪ್ರತಿಕ್ರಿಯಿಸಿ, ಅನಂತ್‌ಕುಮಾರ್ ಹೆಗಡೆ ಸೇರಿದಂತೆ ಮೂವರ ಮೇಲೆ ಎಫ್‌ಐಆರ್ ದಾಖಲಾಗಿದೆ, ಎ.1 ಅನಂತ್‌ಕುಮಾರ್ ಹೆಗಡೆ, ಎ2 ಗನ್ ಮ್ಯಾನ್, ಎ3- ಚಾಲಕ ಆರೋಪಿಗಳಾಗಿದ್ದಾರೆ. ತನಿಖೆ ಮಾಡಿ ಅಗತ್ಯವಿದ್ದರೆ ಬಂಧಿಸುತ್ತೆವೆ. ಇದರೊಂದಿಗೆ ಗಾಯಾಳುಗಳ ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಉಪಚುನಾವಣೆ ಫಲಿತಾಂಶ ಪ್ರಕಟ – ಎಎಪಿ 2, ಬಿಜೆಪಿ, ಕಾಂಗ್ರೆಸ್, ಟಿಎಂಸಿ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು

    ತಪ್ಪಿದ್ದರೆ ಕ್ಷಮೆ ಕೇಳ್ತಾರೆ: ಶಾಸಕ ಸುರೇಶ್
    ಈ ಕುರಿತು ಮಾತನಾಡಿರುವ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಮಾತನಾಡಿ, 5 ಬಾರಿ ಸಂಸದರಾಗಿ ಆಯ್ಕೆಯಾದವರು ಅನಂತ್ ಕುಮಾರ್. ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬರುವಾಗ ಮಾರ್ಗ ಮಧ್ಯೆದಲ್ಲಿ ಗಲಾಟೆ ನಡೆದಿದೆ. ಅನಂತ್ ಕುಮಾರ್ ಹೆಗಡೆ ಇದ್ದ ಕಾರಿಗೆ ಪಕ್ಕದಲ್ಲಿ ಬಂದ ಕಾರಿನವರು ಚಮಕ್ ಕೊಟ್ಟಿದ್ದಾರೆ. ಆಗ ಸರಿಯಾದ ರೀತಿಯಲ್ಲಿ ಹೋಗಿ ಅಂತ ಹೇಳಿದ್ದಾರೆ. ಗೊಂದಲವಾಗಿ ಗಲಾಟೆ ಶುರುವಾಗಿದೆ. ಗನ್ ಮ್ಯಾನ್ ಮತ್ತು ಡ್ರೈವರ್ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ರಸ್ತೆಯಲ್ಲಿ ಸಾಕಷ್ಟು ಆಕ್ಸಿಡೆಂಟ್, ಗೊಂದಲ ಆಗೋದು ಸರ್ವೇ ಸಾಮಾನ್ಯ. ಇಂತಹ ವಿಚಾರದಲ್ಲಿ ಗೊಂದಲ ಬೇಡ. ಕೂತು ಮಾತನಾಡಿ ಬಗೆಹರಿಸಿಕೊಳ್ಳೋಣ. ಅನಂತ್ ಕುಮಾರ್ ಹೆಗಡೆ ತಪ್ಪಿದ್ರೆ ಅವರು ಕ್ಷಮೆ ಕೇಳುತ್ತಾರೆ. ನಿಮ್ಮ ತಪ್ಪಿದ್ರೆ ನೀವು ಕ್ಷಮೆ ಕೇಳಿ ಅಂತ ಹೇಳಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ನನಗೆ ಚರಂಡಿ, ರಸ್ತೆಯೂ ಮಾಡಿಸೋಕೆ ಆಗ್ತಿಲ್ಲ – ಮೊಳಕಾಳ್ಮೂರು ಶಾಸಕ ಗೋಪಾಲಕೃಷ್ಣ ಅಸಹಾಯಕತೆ

    ಕಾಫಿ ಡೇಯಲ್ಲಿ ಕರೆಸಿ ಮುಸ್ಲಿಂ ಅವರ ಜೊತೆ ಮಾತನಾಡಿದ್ದೇನೆ. ಈ ಕೇಸ್ ಮುಂದುವರಿಸೋದು ಬೇಡ ಅಂತ ಹೇಳಿದ್ದೇನೆ. ಕಾಂಗ್ರೆಸ್‌ನವರು ಯಾವಾಗಲೂ ರಾಜಕೀಯವಾಗಿ ತುಷ್ಟಿಕರಣ ಮಾಡುತ್ತಿರುತ್ತಾರೆ. ಪೊಲೀಸ್ ಅವರು ರಾಜಕೀಯ ವ್ಯಕ್ತಿಗಳ ಪ್ರಭಾವಕ್ಕೆ ಒಳಗಾಗುವುದು ಬೇಡ. ಕಾನೂನಿನ ಪ್ರಕಾರ ತಪ್ಪಿದ್ರೆ ಕ್ರಮ ತೆಗೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: 2 ಶತಕ, ಡಿಫರೆಂಟ್ ಸೆಲೆಬ್ರೇಷನ್ – ಈ ಸಾಧನೆ ಮಾಡಿದ ಏಷ್ಯಾದ ಏಕೈಕ ವಿಕೆಟ್‌ ಕೀಪರ್‌ ಪಂತ್‌

  • ಯಶವಂತಪುರದಿಂದ ದಾಬಸ್‍ಪೇಟೆ ಕೈಗಾರಿಕಾ ಪ್ರದೇಶಕ್ಕೆ 6 ನೂತನ ಬಸ್‍ಗಳು

    ಯಶವಂತಪುರದಿಂದ ದಾಬಸ್‍ಪೇಟೆ ಕೈಗಾರಿಕಾ ಪ್ರದೇಶಕ್ಕೆ 6 ನೂತನ ಬಸ್‍ಗಳು

    ಬೆಂಗಳೂರು: ಗ್ರಾಮೀಣ ಭಾಗದ ಕಾರ್ಮಿಕರಿಗೆ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಇಲಾಖೆ 6 ನೂತನ ಬಸ್‍ಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕೈಗಾರಿಕ ಪ್ರದೇಶದಲ್ಲಿ ನೂತನ ಬಸ್‍ಗಳಿಗೆ ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ಹಾಗೂ ಸಂಸದ ವೀರಪ್ಪ ಮೊಯ್ಲಿ ಚಾಲನೆ ನೀಡಿದರು. ಇನ್ನೂ ಗ್ರಾಮೀಣ ಭಾಗದ ಸಾವಿರಾರು ಕಾರ್ಮಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಇಲ್ಲಿಯವರೆಗೂ ಖಾಸಗಿ ಬಸ್ ಮೂಲಕ ಸಂಚಾರ ಮಾಡುತ್ತಿದ್ದರು. ಹೀಗಾಗಿ ಸಾರಿಗೆ ಇಲಾಖೆ ವತಿಯಿಂದ ಇಂದು 6 ನೂತನ ಬಿಎಂಟಿಸಿ ಬಸ್‍ಗಳ ಸೇವೆ ಕಲ್ಪಿಸಲಾಗಿದೆ. ಈ ಬಸ್‍ಗಳು ಪ್ರತಿನಿತ್ಯ ಯಶವಂತಪುರದಿಂದ ದಾಬಸ್‍ಪೇಟೆ ಕೈಗಾರಿಕಾ ಪ್ರದೇಶಕ್ಕೆ 6 ಸುತ್ತುವಳಿಗಳನ್ನ ಅರ್ಧ ಗಂಟೆಯ ಅಂತರದಲ್ಲಿ ಕಾರ್ಯಾಚರಣೆ ಮಾಡುತ್ತವೆ.

    ಉದ್ಘಾಟನೆಯ ನಂತರ ಮಾತನಾಡಿದ ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ, ಪ್ರಮುಖವಾಗಿ ಕರ್ನಾಟಕ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ನೆಲಮಂಗಲದ ಪಟ್ಟಣಕ್ಕೆ ಹೈಟೆಕ್ ಬಸ್ ಕೋರ್ಟ್ ನಿರ್ಮಿಸಲಾಗುವುದು ಎಂದರು. ಬಸ್ ನಿಲ್ದಾಣದ ಜೊತೆಗೆ ಶಾಪಿಂಗ್ ಮಾಲ್, ಕಚೇರಿಗಳು, ಅಂಗಡಿಗಳನ್ನ ಒಳಗೊಂಡಿರುವಂತೆ ಕರ್ನಾಟಕ ರಾಜ್ಯದಲ್ಲೇ ವಿನೂತನ ಬಸ್ ನಿಲ್ದಾಣವನ್ನ ನಿರ್ಮಿಸಲಾಗುವುದು ಎಂದರು.

    ಬಸ್ ಉದ್ಘಾಟನಾ ಕಾರ್ಯಕ್ರಮಕ್ಕೆ ಜನರಿಲ್ಲದ ಕಾರಣ ಸ್ಥಳೀಯ ಕಾಂಗ್ರೆಸ್ ಮುಖಂಡರು ಕಾರ್ಖಾನೆಗಳಿಂದ ನೂರಾರು ಮಹಿಳಾ ಕಾರ್ಮಿಕರನ್ನ ಕರೆತಂದ ಪ್ರಸಂಗವೂ ಕೂಡ ನಡೆದು ಮುಜುಗರಕ್ಕೀಡಾಯಿತು.