Tag: dadasaheb phalke

  • ಸ್ನೇಹಿತ ಬಿಎಂಟಿಸಿ ಬಸ್ ಡ್ರೈವರ್​​​ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಅರ್ಪಿಸಿದ ರಜನಿಕಾಂತ್

    ಸ್ನೇಹಿತ ಬಿಎಂಟಿಸಿ ಬಸ್ ಡ್ರೈವರ್​​​ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಅರ್ಪಿಸಿದ ರಜನಿಕಾಂತ್

    ನವದೆಹಲಿ: ತಮಿಳು ಸ್ಟಾರ್ ನಟ ರಜನಿಕಾಂತ್ ಸೋಮವಾರ ತಾನು ಸ್ವೀಕರಿಸಿದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು, ಸಿನಿಮಾ ಕ್ಷೇತ್ರಕ್ಕೆ ಬರಲು ತನ್ನನ್ನು ಪ್ರೇರೇಪಿಸಿದ್ದ ಸ್ನೇಹಿತ ಬಸ್  ಡ್ರೈವರ್​​​ಗೆ ಅರ್ಪಿಸುವ ಮೂಲಕ ಗಮನ ಸೆಳೆದಿದ್ದಾರೆ.

    ತನ್ನ ಮೊದಲ ಸಿನಿಮಾ `ಅಪೂರ್ವ ರಾಗಂಗಳ್’ ನಿರ್ದೇಶಕ ದಿವಂಗತ ಕೆ.ಬಾಲಚಂದರ್, ಸಿನಿಮಾರಂಗಕ್ಕೆ ಪ್ರವೇಶಿಸಲು ನೆರವಾದ ಸಹೋದರ ಸತ್ಯನಾರಾಯಣರಾವ್ ಹಾಗೂ ಎಲ್ಲ ನಿರ್ದೇಶಕರು, ನಿರ್ಮಾಕರು, ಥಿಯೇಟರ್ ಮಾಲೀಕರು, ತಂತ್ರಜ್ಞರು, ಅಭಿಮಾನಿಗಳಿಗೂ ಪ್ರಶಸ್ತಿ ಅರ್ಪಿಸಿ ರಜನಿಕಾಂತ್ ಕೃತಜ್ಞತೆ ಮೆರೆದಿದ್ದಾರೆ. ಇದನ್ನೂ ಓದಿ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ನಟ ರಜನಿಕಾಂತ್

    ರಜನಿಕಾಂತ್ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ ಕಥೆಯೇ ಒಂದು ರೋಚಕ. ಒಬ್ಬ ಸಾಮಾನ್ಯ ಬಸ್ ಕಂಡಕ್ಟರ್ ಆಗಿದ್ದ ಅವರು ಮುಂದಿನ ಚಿತ್ರರಂಗದಲ್ಲಿ ಕೋಟಿ ಕೋಟಿ ಸಂಭಾವನೆಯೊಂದಿಗೆ ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಸ್ಥಾನ ಪಡೆಯುವ ಮಟ್ಟಕ್ಕೆ ಬೆಳೆದಿದ್ದು ಸಾಧನೆಯೇ ಸರಿ. ತಾನು ಆ ಮಟ್ಟಕ್ಕೆ ಬೆಳೆಯಲು ಕಾರಣರಾದ ವ್ಯಕ್ತಿಗೆ ರಜನಿಕಾಂತ್ ತಮ್ಮ ಜೀವನದ ಅತ್ಯುತ್ತಮ ಸಾಧನೆ ಪ್ರಶಸ್ತಿಯನ್ನು ಅರ್ಪಿಸಿ ಧನ್ಯತೆ ಮೆರೆದಿದ್ದಾರೆ.

    1950ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ರಜನಿಕಾಂತ್ ಮೂಲ ಹೆಸರು ಶಿವಾಜಿರಾವ್ ಗಾಯಕ್‍ವಾಡ್. ಬಾಲ್ಯದಲ್ಲಿ ತಾಯಿಯನ್ನು ಕಳೆದುಕೊಂಡ ರಜನಿಕಾಂತ್ ಬೆಂಗಳೂರಿನ ಆಚಾರ್ಯ ಪಾಠಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದರು. ನಂತರ ರಾಮಕೃಷ್ಣ ಮಿಷನ್ ಶಾಖೆಯಾದ ವಿವೇಕಾನಂದ ಬಾಲಕ ಸಂಘದಲ್ಲಿ ವ್ಯಾಸಾಂಗ ಮಾಡಿದರು. ಇಲ್ಲಿ ವೇದಗಳು, ಭಾರತೀಯ ಸಂಸ್ಕøತಿ ಇತಿಹಾಸವನ್ನು ಅಧ್ಯಯನ ಮಾಡುತ್ತ ನಾಟಕಗಳಲ್ಲಿ ಅಭಿನಯ ಮಾಡುತ್ತಿದ್ದರು.

    ಒಮ್ಮೆ ಏಕಲವ್ಯ ನಾಟಕದಲ್ಲಿ ಏಕಲವ್ಯನ ಸ್ನೇಹಿತನ ಪಾತ್ರದ ಅಭಿನಯಕ್ಕೆ ರಜನಿಕಾಂತ್ ಅಭಿನಯಕ್ಕೆ ವರಕವಿ ದ.ರಾ.ಬೇಂದ್ರೆ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಇದರಿಂದ ಪುಳಕಿತರಾಗಿ ಅಭಿನಯದ ಕಡೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳುತ್ತಾರೆ. ನಂತರ ಅವರು ಬಸ್ ಕಂಡಕ್ಟರ್ ಆಗಿ ಬೆಂಗಳೂರಿನಲ್ಲಿ ಕೆಲಸ ಆರಂಭಿಸುತ್ತಾರೆ.

    ಅಭಿನಯದಲ್ಲಿ ರಜನಿಕಾಂತ್‍ಗೆ ಇರುವ ಪ್ರತಿಭೆಯನ್ನು ಗುರುತಿಸಿದ ಸ್ನೇಹಿತನೂ ಆದ ಬಸ್ ಚಾಲಕ ರಾಜ್ ಬಹದ್ದೂರ್, ‘ನೀನು ಸಿನಿಮಾ ಕ್ಷೇತ್ರಕ್ಕೆ ಹೋಗು. ಉತ್ತಮ ಸಾಧನೆ ಮಾಡಬಹುದು’ ಎಂದು ಸಲಹೆ ನೀಡುತ್ತಾರೆ. ಸ್ನೇಹಿತನ ಸಲಹೆಯಂತೆ ರಜನಿಕಾಂತ್ ಸಿನಿಮಾ ರಂಗಕ್ಕೆ ಬರಲು ಆಸಕ್ತಿ ತೋರುತ್ತಾರೆ. ಇವರಿಗೆ ಬೆನ್ನೆಲುಬಾಗಿ ಅಣ್ಣ ಸತ್ಯನಾರಾಯಣ ರಾವ್ ಗಾಯಕ್‍ವಾಡ್ ಕೂಡ ನಿಲ್ಲುತ್ತಾರೆ. ಇದನ್ನೂ ಓದಿ: ಈ ಸೋಮವಾರ ತಲೈವಾಗೆ ಡಬ್ಬಲ್ ಖುಷಿ

    ಆಕಸ್ಮಿಕವಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಜನಿಕಾಂತ್ ಈಗ ಕೋಟಿ ಕೋಟಿ ಸಂಭಾವನೆ ಪಡೆಯುತ್ತಾ ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಅಷ್ಟೆ ಅಲ್ಲದೇ ಭಾರತೀಯ ಚಿತ್ರರಂಗದ ಜೀವಮಾನ ಸಾಧನೆಗಾಗಿ ನೀಡುವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ.

  • ಈ ಸೋಮವಾರ ತಲೈವಾಗೆ ಡಬ್ಬಲ್ ಖುಷಿ

    ಈ ಸೋಮವಾರ ತಲೈವಾಗೆ ಡಬ್ಬಲ್ ಖುಷಿ

    ಚೆನ್ನೈ: ದಕ್ಷಿಣ ಭಾರತದ ತಲೈವಾ ರಜನಿಕಾಂತ್ ಗೆ ಈ ಸೋಮವಾರ ವಿಶೇಷ ದಿನವಾಗಿದ್ದು, ಡಬ್ಬಲ್ ಖುಷಿಯಲ್ಲಿದ್ದಾರೆ.

    ರಜನಿಕಾಂತ್ ಅವರಿಗೆ ನಾಳೆ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಭಾರತೀಯ ಚಲನಚಿತ್ರ ಜಗತ್ತಿಗೆ ಅವರು ನೀಡಿದ ಅದ್ಭುತ ಕೊಡುಗೆಗಾಗಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆಯುತ್ತಿದ್ದಾರೆ.

    ಈ ವಿಷಯವನ್ನು ಇದೇ ವರ್ಷದ ಏಪ್ರಿಲ್‍ನಲ್ಲಿ ಬಿಜೆಪಿ ರಾಜ್ಯಸಭಾ ಸಂಸದ ಪ್ರಕಾಶ್ ಜಾವಡೇಕರ್ ಅವರು ಮೊದಲು ಘೋಷಿಸಿದ್ದರು. ರಜನಿ 1975 ರಲ್ಲಿ ಕೆ.ಬಾಲಚಂದರ್ ಅವರ ‘ಅಪೂರ್ವ ರಾಗಂಗಳ್’ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ತಮಿಳು ಚಿತ್ರರಂಗದಲ್ಲಿ 45 ವರ್ಷಗಳಿಗಿಂತಲೂ ಹೆಚ್ಚಿನ ಸಮಯ ಜನರನ್ನು ರಂಜಿಸಿದ್ದಾರೆ ಮತ್ತು ರಂಜಿಸುತ್ತಿದ್ದಾರೆ. ಇದನ್ನೂ ಓದಿ:  ಮಹಿಳೆಯರ ಸುರಕ್ಷಣೆಗಾಗಿ ಹೈದರಾಬಾದ್ ಪೊಲೀಸರ ವಿನೂತನ ಘಟಕ ಆರಂಭ

    ತಮಿಳು ಸೂಪರ್‌ಸ್ಟಾರ್ ನಾಳೆಯ ಈವೆಂಟ್‍ಗೆ ಮುಂಚಿತವಾಗಿ ಟ್ವಿಟ್ಟರ್ ನಲ್ಲಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಇದು ಮಾತ್ರವಲ್ಲದೇ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ಅವರು ಧ್ವನಿ ಆಧಾರಿತ ಸಾಮಾಜಿಕ ಮಾಧ್ಯಮ ವೇದಿಕೆಯನ್ನು ನಾಳೆ ಪ್ರಾರಂಭಿಸಲಿದ್ದು, ಇದು ಜನರಿಗೆ ‘ಉಪಯುಕ್ತ ಅಪ್ಲಿಕೇಶನ್’ ಆಗಿರುತ್ತದೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

    ಟ್ವೀಟ್ ನಲ್ಲಿ ಅವರು, ಎರಡು ವಿಶೇಷ ಹೆಗ್ಗುರುತುಗಳೊಂದಿಗೆ ನಾಳೆ ನನಗೆ ಒಂದು ಮಹತ್ವದ ಸಂದರ್ಭವಾಗಿದೆ. ಮೊದಲನೆಯದು, ಜನರ ಪ್ರೀತಿ ಮತ್ತು ಬೆಂಬಲದಿಂದಾಗಿ ಭಾರತ ಸರ್ಕಾರವು ನನಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. ಇನ್ನೊಂದು, ಜನರು ಈಗ ತಮ್ಮ ಧ್ವನಿಯ ಮೂಲಕ ತಮ್ಮ ಶುಭಾಶಯಗಳು ಮತ್ತು ಆಲೋಚನೆಗಳನ್ನು ತಮ್ಮ ಆಯ್ಕೆಯ ಯಾವುದೇ ಭಾಷೆಯಲ್ಲಿ ಬರೆಯಬಹುದು ಮತ್ತು ವ್ಯಕ್ತಪಡಿಸಬಹುದು ಎಂದು ಅವರ ಪುತ್ರಿ ಸೌಂದರ್ಯ ಅವರು ಪ್ರಾರಂಭಿಸುತ್ತಿರುವ ಅಪ್ಲಿಕೇಶನ್ ಬಗ್ಗೆ ಹೇಳಿ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

    2019ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಕಳೆದ ವರ್ಷ ಘೋಷಿಸಬೇಕಾಗಿತ್ತು ಆದರೆ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ 2019ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಂತೆ ಇದನ್ನು ಮುಂದೂಡಲಾಯಿತು. 2018ರಲ್ಲಿ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ದಾದಾಸಾಹೇಬ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

    ದಾದಾಸಾಹೇಬ್ ಫಾಲ್ಕೆಯು ಸಿನಿಮಾದಲ್ಲಿ ಮಾಡಿದ ಸಾಧನೆಯ ಶ್ರೇಷ್ಠತೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತೆ. ಈ ಪ್ರಶಸ್ತಿ ಚಲನಚಿತ್ರಗಳಲ್ಲಿ ನೀಡುವ ಅತ್ಯುನ್ನತ ಗೌರವವಾಗಿದೆ. ಈ ಗೌರವವನ್ನು ಸರ್ಕಾರದಿಂದ ನೀಡಲಾಗುತ್ತದೆ. ಭಾರತೀದಲ್ಲಿ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ಸಹ ಪಡೆದಿರುವ ರಜನಿಕಾಂತ್ ದಕ್ಷಿಣ ಭಾರತದ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ ಮತ್ತು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಇದನ್ನೂ ಓದಿ:  ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ FIR

    ಎಆರ್ ಮುರುಗದಾಸ್ ಅವರ ‘ದರ್ಬಾರ್’ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ರಜನಿ, ಶೀಘ್ರದಲ್ಲೇ ಅವರ ಬಹು ನಿರೀಕ್ಷಿತ ಚಿತ್ರ ‘ಅಣ್ಣತ್ತೆ’ ಯಲ್ಲಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಇದೇ ದೀಪಾವಳಿಯಂದು ಈ ಚಿತ್ರ ರಿಲೀಸ್ ಮಾಡಲಾಗುತ್ತೆ ಎಂದು ಚಿತ್ರತಂಡ ತಿಳಿಸಿದೆ.

  • ಹಾವೇರಿ ನಿರ್ದೇಶಕನಿಗೆ ದಾದಾಸಾಹೇಬ್ ಫಾಲ್ಕೆ ಜ್ಯೂರಿ ಪ್ರಶಸ್ತಿ

    ಹಾವೇರಿ ನಿರ್ದೇಶಕನಿಗೆ ದಾದಾಸಾಹೇಬ್ ಫಾಲ್ಕೆ ಜ್ಯೂರಿ ಪ್ರಶಸ್ತಿ

    ಹಾವೇರಿ: ದಾದಾಸಾಹೇಬ್ ಫಾಲ್ಕೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಾಗರ ಬಳ್ಳಾರಿ ನಿರ್ದೇಶನದ ಜಂಗಲ್ ಕ್ರೈ ಚಿತ್ರ ತೀರ್ಪುಗಾರರ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದುಕೊಂಡಿದೆ. ಈ ಪ್ರಶಸ್ತಿ ಬಾಚಿಕೊಂಡ ನಿರ್ದೇಶಕ ಸಾಗರ ಬಳ್ಳಾರಿ ಮೂಲತಃ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದವರು. ಬುಡಕಟ್ಟು ಜನಾಂಗದ ಅನಾಥ ಮಕ್ಕಳ ನೈಜ ಜೀವನದ ಕಥೆಯನ್ನು ಆಧರಿಸಿ ಈ ಚಿತ್ರ ನಿರ್ದೇಶಿಸಲಾಗಿದೆ. ಓಡಿಸ್ಸಾದ ಕಳಿಂಗ ಸೋಷಿಯಲ್ ಸೈನ್ಸ್ ಸಂಸ್ಥೆಯ ಬಾಲಕ 2007ರಲ್ಲಿ ಯುಕೆಯಲ್ಲಿ ನಡೆದ ರಗ್ಬಿ ಆಟದಲ್ಲಿ ಚಾಂಪಿಯನ್ ಆದ ಘಟನೆಯನ್ನು ಆಧರಿಸಿ ಚಿತ್ರವನ್ನು ನಿರ್ದೇಶಿಸಲಾಗಿದೆ.

    ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ದಾದಾಸಾಹೇಬ್ ಫಾಲ್ಕೆ ಅವರ ಜನ್ಮದಿನದಂದು ಆಚರಿಸಿಕೊಂಡು ಬರಲಾಗುತ್ತಿದೆ. ದೇಶದ ರಾಜಧಾನಿ ದೆಹಲಿ ಹಾಗೂ ದೆಹಲಿಗೆ ಹೊಂದಿಕೊಂಡ ನಗರಗಳಲ್ಲಿ ಈ ಚಲನಚಿತ್ರೋತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಾಗರ ಬಳ್ಳಾರಿ ನಿರ್ದೇಶಿಸಿದ ಜಂಗಲ್ ಕ್ರೈ ಚಲನಚಿತ್ರಕ್ಕೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಜ್ಯೂರಿ ಅತ್ಯುತ್ತಮ ಚಿತ್ರ 2021 ಎಂಬ ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಪ್ರಶಸ್ತಿ ದೊರೆತಿದೆ. ಬಾಲಿವುಡ್ ನ ಸೃಜನಾತ್ಮಕ ನಿರ್ದೇಶಕ ಸಾಗರಗೆ ಈ ಪ್ರಶಸ್ತಿ ದೊರೆತಿರುವುದು ಹಾವೇರಿ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಇದನ್ನೂ ಓದಿ: ಹೆಚ್ಚು ಮಕ್ಕಳಿರುವ ಪೋಷಕರಿಗೆ 1ಲಕ್ಷ ರೂ ಬಹುಮಾನ

    ಸುಮಾರು ವರ್ಷಗಳಿಂದ ಮುಂಬೈನಲ್ಲಿ ವಾಸವಾಗಿರೋ ನಿರ್ದೇಶಕ ಸಾಗರಗೆ ಮೋಟೆಬೆನ್ನೂರು ಅಂದರೆ ಎಲ್ಲಿಲ್ಲದ ಪ್ರೀತಿ. ವರ್ಷಕ್ಕೊಮ್ಮೆಯಾದರೂ ಕುಟುಂಬದವರ ಜೊತೆಗೆ ಮೋಟೆಬೆನ್ನೂರಿಗೆ ಬಂದು ಹೋಗುತ್ತಾರೆ. ವರ್ಷಕ್ಕೊಮ್ಮೆ ಊರಿಗೆ ಬರುವುದನ್ನು ಯಾವುದೇ ಕಾರಣಕ್ಕೂ ಸಾಗರ ಮರೆಯುವುದಿಲ್ಲ. ಮುಂಬೈನಲ್ಲೇ ಓದಿರೋ ಸಾಗರ, ಮುಂಬೈನ ಸತ್ಯಜೀತ್ ರೇ ಇನ್ ಸ್ಟಿಟ್ಯೂಟ್ ನಲ್ಲಿ ಅಧ್ಯಯನ ಮಾಡಿದ್ದಾರೆ. ಸಾಗರ ಈವರೆಗೆ ಐದು ಸೃಜನಾತ್ಮಕ ಚಿತ್ರಗಳನ್ನು ನಿರ್ದೇಶಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಇದೊಂದು ಹೆಮ್ಮೆಯ ಸಂಗತಿ. ಸಾಗರ ನಮ್ಮ ಮೋಟೆಬೆನ್ನೂರು ಗ್ರಾಮದವನು ಹಾಗೂ ನಮ್ಮ ಸಂಬಂಧಿ ಎನ್ನುವುದು ನಮಗೆ ಖುಷಿಯ ಸಂಗತಿ ಎಂದು ನಿರ್ದೇಶಕ ಸಾಗರ ಸಂಬಂಧಿ ರಮೇಶ ಬಳ್ಳಾರಿ ಹೇಳುತ್ತಾರೆ.