Tag: Daivavani

  • ಧರ್ಮದರ್ಶಿಯಿಂದ ಮೈಲಾರಲಿಂಗೇಶ್ವರ ದೈವವಾಣಿ ದುರುಪಯೋಗ- ಕಾರ್ಣಿಕ ನುಡಿಯುವ ಗೊರವಯ್ಯ ಕಿಡಿ

    ಧರ್ಮದರ್ಶಿಯಿಂದ ಮೈಲಾರಲಿಂಗೇಶ್ವರ ದೈವವಾಣಿ ದುರುಪಯೋಗ- ಕಾರ್ಣಿಕ ನುಡಿಯುವ ಗೊರವಯ್ಯ ಕಿಡಿ

    ಹಾವೇರಿ: ಐತಿಹಾಸಿಕ ಸುಕ್ಷೇತ್ರವಾದ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದ ಮೈಲಾರಲಿಂಗೇಶ್ವರ ದೇವರ ಕಾರ್ಣಿಕದ ವಾಣಿಯನ್ನು ಧರ್ಮಧರ್ಶಿ ವೆಂಕಪ್ಪಯ್ಯ ಒಡೆಯರ್ ಮರು ವಿಶ್ಲೇಷಣೆ ಮಾಡಿ, ದೇವರ ಕಾರ್ಣಿಕ ನುಡಿಗೆ ಅಪಮಾನ ಮಾಡಿದ್ದಾರೆ ಎಂದು ಕಾರ್ಣಿಕ ನುಡಿಯುವ ಗೊರವಯ್ಯ ರಾಮಪ್ಪ ಹಾಗೂ ದೇವಸ್ಥಾನ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಪ್ರತಿವರ್ಷ ಮೈಲಾರಲಿಂಗೇಶ್ವರ ದೇವರ ಕಾರ್ಣಿಕ ಭರತ ಹುಣ್ಣುಮೆ ಆಗಿ ಮೂರು ದಿನಕ್ಕೆ ಗೊರವಯ್ಯ ಸ್ವಾಮಿ ಜಪತಪ ಮಾಡಿ 11 ದಿವಸ ಉಪವಾಸವಿದ್ದು ದೇವರ ವಾಣಿಯನ್ನ ನುಡಿಯುತ್ತಾರೆ. ಈ ವರ್ಷ ಮುತ್ತಿನ ರಾಶಿ ಮೂರು ಭಾಗವಾಗಿತಲೇ ಪಾರಾಕ್ ಎಂದು ವಾಣಿಯನ್ನ ಹೇಳಿದ್ದಾರೆ. ಇದನ್ನು ಧರ್ಮಮರ್ಶಿ ವೆಂಕಪ್ಪಯ್ಯ ಒಡೆಯರ್ ಅವರು ಆ ದಿನ ಮಾತ್ರ ವಿಶ್ಲೇಷಣೆ ಮಾಡಬೇಕು. ಅದರೆ ತಮ್ಮ ಲಾಭಕ್ಕಾಗಿ, ರಾಜಕೀಯ ವ್ಯಕ್ತಿಗಳು ಬಂದಾಗ ಕಾರ್ಣಿಕವನ್ನು ಹೇಳಿ ರಾಜಕೀಯ ಲಾಭ ಪಡೆಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದಾಗ ಮುಖ್ಯಮಂತ್ರಿ ಆಗುತ್ತೀರಿ ಅಂದಿದ್ದರು. ಈಗ ಎರಡು ದಿನದ ಹಿಂದೆ 2023ಕ್ಕೆ ಗಡ್ಡಧಾರಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿದ್ದಾರೆ. ಬಸವರಾಜ ಬೊಮ್ಮಾಯಿ 6-7 ತಿಂಗಳು ಮಾತ್ರ ಅಧಿಕಾರ ಮಾಡಲಿದ್ದಾರೆ ಎಂದಿದ್ದಾರೆ. ಈ ಹಿಂದೆ ಕೆ.ಎಸ್.ಈಶ್ವರಪ್ಪ ಹಾಗೂ ಬೈರತಿ ಬಸವರಾಜ ಸಹ ಕ್ಷೇತ್ರಕ್ಕೆ ಭೇಟಿ ನೀಡಿದಾಗ ನಿಮಗೆ ಮುಖ್ಯಮಂತ್ರಿ ಆಗುವ ಅವಕಾಶ ಇದೆ ಎಂದು ಹೇಳಿದ್ದಾರೆ. ದೇವರ ವಾಣಿಯನ್ನ ತಮಗೆ ಬೇಕಾದ ರೀತಿಯಲ್ಲಿ ತಿರುಚಿ ಹೇಳುತ್ತಿದ್ದಾರೆ. ಮೈಲಾರಲಿಂಗೇಶ್ವರ ಭಕ್ತರು ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಮಾತು ಕೇಳಬಾರದು ಎಂದು ಭಕ್ತರು ಹೇಳಿದ್ದಾರೆ.

    ಮೈಲಾರಲಿಂಗೇಶ್ವರ ಹೆಸರಿನಲ್ಲಿ ಧರ್ಮಧರ್ಶಿ ವೆಂಕಪ್ಪಯ್ಯ ಒಡೆಯರ್ ದೈವವಾಣಿಗೆ ಅಪಮಾನ ಮಾಡುತ್ತಿದ್ದಾರೆ. ಹೀಗೆ ಮುಂದುವರಿಸಿದರೆ ಪ್ರತಿಭಟನೆ ಮಾಡುತ್ತೇವೆ ಎಂದು ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

  • ಸಿಎಂ ಬೊಮ್ಮಾಯಿ 6-7 ತಿಂಗಳು ಅಧಿಕಾರ, 2022ರಲ್ಲಿ ಗಡ್ಡಧಾರಿ ಹೊಸ ಮುಖ್ಯಮಂತ್ರಿ: ಮೈಲಾರ ದೈವವಾಣಿ

    ಸಿಎಂ ಬೊಮ್ಮಾಯಿ 6-7 ತಿಂಗಳು ಅಧಿಕಾರ, 2022ರಲ್ಲಿ ಗಡ್ಡಧಾರಿ ಹೊಸ ಮುಖ್ಯಮಂತ್ರಿ: ಮೈಲಾರ ದೈವವಾಣಿ

    – 2022ರ ಮಾರ್ಚ್ ನಲ್ಲಿ ಸಿಎಂ ಬದಲಾವಣೆ

    ವಿಜಯನಗರ: ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿ ಇನ್ನೂ ಒಂದು ವಾರ ಆಗಿಲ್ಲ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 6-7 ತಿಂಗಳು ಮಾತ್ರ ಅಧಿಕಾರ ನಡೆಸಲಿದ್ದಾರೆ. 2022ರ ಮಾರ್ಚ್ ನಲ್ಲಿ ಗಡ್ಡಧಾರಿ ವ್ಯಕ್ತಿ ಕರ್ನಾಟಕದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಹೇಳಿದ್ದಾರೆ.

    ಮೈಲಾರದಲ್ಲಿ ಭರತ ಹುಣ್ಣುಮೆಯಂದು ನಡೆದ ಕಾರ್ಣಿಕದ ದೈವವಾಣಿಯನ್ನು ಮತ್ತೆ ವಿಶ್ಲೇಷಣೆ ಮಾಡಿರುವ ಅವರು, ‘ಮುತ್ತಿನ ರಾಶಿ ಮೂರು ಭಾಗವಾಗಿತಲೇ ಪರಾಕ್’ ಎಂಬುದು ದೈವವಾಣಿ ಆಗಿತ್ತು. ಮೈಲಾರ ಭವಿಷ್ಯವಾಣಿಯಂತೆ ಈಗಿರುವ ಸರ್ಕಾರದಲ್ಲಿ ಮೂವರು ಜನ ಸಿಎಂ ಆಗಿ ಮುಕ್ತಾಯ ಆಗುತ್ತೆ. ಕೆಲವೇ ತಿಂಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆ ಎಂದಿದ್ದಾರೆ.

    ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಾವಧಿ ಪೂರ್ಣಗೊಳಿಸಲ್ಲ. ಕಳೆದ ಒಂದು ವಾರದ ಹಿಂದೆ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾರೆ. 6-7 ತಿಂಗಳು ಮಾತ್ರ ರಾಜ್ಯಭಾರ ಮಾಡುತ್ತಾರೆ. 2022ರ ಮಾರ್ಚ್ ನಲ್ಲಿ ಗಡ್ಡಧಾರಿ ವ್ಯಕ್ತಿ ಸಿಎಂ ಆಗುತ್ತಾರೆ ಎಂದು ವೆಂಕಪ್ಪಯ್ಯ ಒಡೆಯರ್ ಭವಿಷ್ಯ ನುಡಿದಿದ್ದಾರೆ.

    ಮೈಲಾರಲಿಂಗೇಶ್ವರನ ಭವಿಷ್ಯವಾಣಿ ಸುಳ್ಳಾಗಿಲ್ಲ ಎಂಬ ಪ್ರತೀತಿ ಇದೆ. ಹೀಗಾಗಿ ಸಿಎಂ ಬದಲಾವಣೆ ಕುರಿತ ಈ ಮಾತು ಭಾರೀ ಸಂಚಲನ ಮೂಡಿಸಿದೆ. ಗಡ್ಡಧಾರಿ ವ್ಯಕ್ತಿ ಯಾರು? ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ಶುರುವಾಗಿದೆ.

    ಈ ಹಿಂದೆ ಬಸವರಾಜ ಬೊಮ್ಮಾಯಿ ಕ್ಷೇತ್ರಕ್ಕೆ ಭೇಟಿ ನೀಡಿದಾಗ ಯಡಿಯೂರಪ್ಪನವರ ನಂತರ ನೀವೇ ಮುಖ್ಯಮಂತ್ರಿ ಆಗುತ್ತೀರಿ ಎಂದು ಹೇಳಿದ್ದೆ. ಅವರು ಒಂದು ಕ್ಷಣ ವಿಚಾರ ಮಾಡಿದರು. ದೇವರ ಆರ್ಶಿವಾದ ಇದ್ದರೇ ಆಗುತ್ತೇನೆ ಅಂದಿದ್ದರು. ಅದರಂತೆ ಈಗ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾರೆ ಎಂದಿದ್ದಾರೆ.

    ಕೆಲವೇ ದಿನಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಲಿದೆ. ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ವಹಿಸಬೇಕು. ಮಾಸ್ಕ್, ಸ್ಯಾನಿಟೈಸರ್ ಬಳಸಿ. ಅರ್ಹರು ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಿ ಎಂದು ಮೈಲಾರವಾಣಿಯಲ್ಲಿ ವೆಂಕಪ್ಪಯ್ಯ ಒಡೆಯರ್ ಹೇಳಿದ್ದಾರೆ.