Tag: dakshina kannad

  • ವ್ಯಾಕ್ಸಿನ್‍ಗಾಗಿ ಮುಗಿ ಬಿದ್ದ ಜನ- ಲಸಿಕಾ ಕೇಂದ್ರದಲ್ಲಿ ಜನ ಜಂಗುಳಿ

    ವ್ಯಾಕ್ಸಿನ್‍ಗಾಗಿ ಮುಗಿ ಬಿದ್ದ ಜನ- ಲಸಿಕಾ ಕೇಂದ್ರದಲ್ಲಿ ಜನ ಜಂಗುಳಿ

    ಮಂಗಳೂರು: ಜಿಲ್ಲೆಯಲ್ಲಿ ಸರಿಯಾದ ಮಾಹಿತಿ ಇಲ್ಲದೆ ವ್ಯಾಕ್ಸಿನ್‍ಗಾಗಿ ಪುಂಜಾಲಕಟ್ಟೆ ಲಸಿಕಾ ಕೇಂದ್ರದಲ್ಲಿ ಜನ ಮುಗಿ ಬಿದ್ದ ದೃಶ್ಯ ಕಂಡುಬಂದಿದೆ. ಇದನ್ನೂ ಓದಿ: ವೆಂಕಯ್ಯ ನಾಯ್ಡು ಟ್ವಿಟ್ಟರ್ ಖಾತೆಯ ಬ್ಲೂ ಟಿಕ್ ಮಾಯಕ್ಕೆ ಅಸಲಿ ಕಾರಣವೇನು ಗೊತ್ತಾ?

    ರಾಜ್ಯದಲ್ಲೇ ನಿನ್ನೆ ಎರಡನೇ ಅತೀ ಹೆಚ್ಚು ವ್ಯಾಕ್ಸಿನೇಷನ್ ಆದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ವ್ಯಾಕ್ಸಿನ್‍ಗಾಗಿ ಜನ ಮುಗಿ ಬೀಳುತ್ತಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಬೇಡಿಕೆ ಹೆಚ್ಚಾಗಿದೆ. ಬೆಳ್ತಂಗಡಿಯ ಪುಂಜಾಲಕಟ್ಟೆಯಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಜನ ವ್ಯಾಕ್ಸಿನ್‍ಗಾಗಿ ಇಂದು ಮುಗಿ ಬಿದ್ದಿದ್ದರು. ಇಂದು ಕೋವ್ಯಾಕ್ಸಿನ್ ಎರಡನೇ ಡೋಸ್ ನೀಡಲಾಗುತ್ತಿದ್ದು, ಆದರೆ ಜನ ಮೊದಲನೇ ಡೋಸ್ ಸಿಗುತ್ತೆ ಎಂದು ಎಲ್ಲಾ ಕಡೆಗಳಲ್ಲಿ ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದರು. ಇಂದಿನಿಂದ ಎಲ್ಲಾ ಕೇಂದ್ರಗಳಲ್ಲಿ ಕೋವ್ಯಾಕ್ಸಿನ್ ಎರಡನೇ ಡೋಸ್ ಮುಕ್ತವಾಗಿ ನೀಡುತ್ತಿದ್ದು, 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವಿಶೀಲ್ಡ್‍ನ್ನು ಮೊದಲನೇ ಡೋಸ್ ನೀಡಲಾಗುತ್ತಿದೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್‍ಗೆ ಹೊಸ ಮಾನದಂಡ ಪ್ರಕಟ – ಪಬ್ಲಿಕ್ ಟಿವಿ ಸಲಹೆ ಸ್ವೀಕರಿಸಿದ ಶಿಕ್ಷಣ ಇಲಾಖೆ

    ಭಾರತದಲ್ಲಿ ದೈನಂದಿನ ಕೊರೊನಾ ವೈರಸ್ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,20,529 ಕೇಸ್ ದಾಖಲಾಗಿವೆ. ಅಲ್ಲದೆ, 3,44,380 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

    ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,86,94,879ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,44,082ಕ್ಕೆ ತಲುಪಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,55,248ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,97,894 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,67,95,549ಕ್ಕೆ ತಲುಪಿದೆ.

  • ಲೋಕಸಭಾ ಚುನಾವಣೆ- ಸಂಸದ ನಳಿನ್ ಬದಲಾವಣೆಗೆ ಕೇಸರಿ ಪಡೆಯಿಂದ್ಲೇ ಒತ್ತಡ

    ಲೋಕಸಭಾ ಚುನಾವಣೆ- ಸಂಸದ ನಳಿನ್ ಬದಲಾವಣೆಗೆ ಕೇಸರಿ ಪಡೆಯಿಂದ್ಲೇ ಒತ್ತಡ

    ಮಂಗಳೂರು: ಲೋಕಸಭಾ ಚುನಾವಣೆಗೆ ಕಸರತ್ತು ಆರಂಭಗೊಂಡಿರುವಾಗಲೇ ಕರಾವಳಿಯಲ್ಲಿ ಹಾಲಿ ಸಂಸದರ ಬದಲಾವಣೆಗೆ ಒತ್ತಡ ಕೇಳಿಬಂದಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಗೆದ್ದು ಬಂದಿರುವ ಬಿಜೆಪಿಗೆ ಈ ಬಾರಿಯೂ ಮೋದಿ ಅಲೆಯ ಖಾತರಿ ಇದೆ. ಮತದಾರರು ಮೋದಿ ಕೈ ಹಿಡೀತಾರೆಂಬ ಭರವಸೆಯಲ್ಲೇ ಬಿಜೆಪಿ ನಾಯಕರಿದ್ದಾರೆ. ಆದರೆ, ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾಯಿಸಬೇಕೆಂಬ ಕೂಗು ಪಕ್ಷದ ಒಳಗೆಯೇ ಕೇಳಿಬಂದಿದೆ. ನಳಿನ್ ಬದಲು ಬೇರೊಬ್ಬ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಬಿಜೆಪಿ ಕಾರ್ಯಕರ್ತರೇ ಒತ್ತಡ ಹೇರುತ್ತಿದ್ದಾರೆಂಬ ಮಾಹಿತಿ ಹೊರಬಿದ್ದಿದೆ.

    ಪ್ರಧಾನಿ ಮೋದಿ ಬಗ್ಗೆ ಜಿಲ್ಲೆಯ ಮತದಾರರಲ್ಲಿ ಒಲವು ಇದ್ದರೂ, ಸಂಸದ ನಳಿನ್ ಕುಮಾರ್ ಬಗ್ಗೆ ಅಸಮಾಧಾನ ಇದೆ. ಅಭಿವೃದ್ಧಿ ಕೆಲಸಗಳಲ್ಲಿ ಹಿಂದೆ ಬಿದ್ದಿರುವುದು ಹಾಗೂ ಜನರ ಸಮಸ್ಯೆಗೆ ಸ್ಪಂದಿಸದಿರುವುದು ನಳಿನ್ ಮೇಲಿನ ಆರೋಪವಾಗಿದೆ. ಲೋಕಸಭೆಯಲ್ಲಿ ಕರಾವಳಿಯ ಸಮಸ್ಯೆ ಬಗ್ಗೆ ಹೇಳಿಕೊಳ್ಳಲಾಗದ ಸಂಸದನೆಂದು ಆರೋಪಿಸುವ ಮಂದಿ ಬಿಜೆಪಿಯಲ್ಲೇ ಇದ್ದಾರೆ. ಹೀಗಾಗಿ ಸಮರ್ಥ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸಬೇಕೆಂಬ ಕೂಗು ಕೇಳಿಬಂದಿದೆ.

    ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಈಗಾಗಲೇ ಆರ್‍ಎಸ್‍ಎಸ್ ಪ್ರಮುಖರು ಬೈಠಕ್ ನಡೆಸಿದ್ದಾರೆ. ನಳಿನ್ ಹೆಸರು ಬದಲಾದರೆ, ಬೇರೆ ಯಾರು ಅನ್ನುವ ವಿಚಾರದಲ್ಲಿ ಚಿಂತನೆ ನಡೆಸಿದ್ದಾರೆ. ಸದ್ಯಕ್ಕೆ ಪ್ರಬಲವಾಗಿ ಕೇಳಿ ಬರುತ್ತಿರುವುದು ಸತ್ಯಜಿತ್ ಸುರತ್ಕಲ್ ಹಾಗೂ ಇನ್ನೂ ಎರಡು ಮೂರು ಹೆಸರು.

    ಸತ್ಯಜಿತ್ ಅವರು ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡವರು. ಅಲ್ಲದೆ ಕರಾವಳಿಯಲ್ಲಿ ಪ್ರಬಲವಾಗಿರುವ ಸಮುದಾಯಕ್ಕೆ ಸೇರಿದವರು. ಸತ್ಯಜಿತ್ ಎರಡೂ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮತದಾರರನ್ನು ಹೊಂದಿರುವ ಬಿಲ್ಲವ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹೀಗಾಗಿ ಇವರ ಪರವಾಗಿ ಈಗಾಗಲೇ ಅಭಿಮಾನಿ ಸಂಘಗಳು ಹುಟ್ಟಿಕೊಂಡಿದ್ದು, ತಮ್ಮದೇ ಶೈಲಿಯಲ್ಲಿ ಪ್ರಚಾರ ಆರಂಭಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ತಿಪ್ಪೇಶ್ ಹೇಳಿದ್ದಾರೆ.


    ಸಂಸದ ನಳಿನ್ ಕುಮಾರ್ ಎರಡು ಬಾರಿ ಸಂಸದರಾದ್ರೂ, ಲೋಕಸಭೆಯಲ್ಲಿ ಮಿಂಚಲು ಸಾಧ್ಯವಾಗಿಲ್ಲ. ಸಚಿವರಾಗುವ ಅವಕಾಶ ಬಂದಿದ್ದರೂ ತಾನೇ ನಿರಾಕರಿಸಿದ್ದು ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿಸಿದೆ. ಆದ್ರೆ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಕರ್ನಾಟಕದಲ್ಲಿ ಯಾವುದೇ ಹಾಲಿ ಸಂಸದರನ್ನು ಬದಲಾಯಿಸುವ ಬಗ್ಗೆ ಇನ್ನೂ ಸುಳಿವು ನೀಡಿಲ್ಲ.

    ಹಿಂದೊಮ್ಮೆ ನಳಿನ್ ಮತ್ತು ಶೋಭಾರನ್ನು ರಾಜ್ಯ ರಾಜಕಾರಣಕ್ಕೆ ಹೋಗುವಂತೆ ತಿಳಿಸಿದ್ದರೂ ಅದು ಕಾರ್ಯಗತ ಆಗಿಲ್ಲ. ಈ ನಡುವೆ ಆರ್‍ಎಸ್‍ಎಸ್ ನಾಯಕರು ಮಾತ್ರ ಸಂಸದನ ಸ್ಥಾನಕ್ಕೆ ಸಮರ್ಥ ವ್ಯಕ್ತಿಯ ಹುಡುಕಾಟದಲ್ಲಿ ತೊಡಗಿದ್ದಾರೆ. ಹೀಗಾಗಿ ಎರಡು ಬಾರಿಯ ಸಂಸದ ನಳಿನ್ ಕುಮಾರ್ ಬದಲಿಗೆ ಯಾರು ಆ ಸ್ಥಾನವನ್ನು ತುಂಬಲಿದ್ದಾರೆ ಅನ್ನೋದು ಕುತೂಹಲಕ್ಕೆ ಕಾರಣವಾಗಿದೆ.


    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv