Tag: Dalai Lama

  • ದಲೈಲಾಮಾ ಉತ್ತರಾಧಿಕಾರಿ ಸಂಘರ್ಷ- ದಲೈಲಾಮಾ ಜೊತೆ ಭಾರತದ ಸಂಬಂಧ ಹೇಗಿತ್ತು; ಚೀನಾ ಎಚ್ಚರಿಕೆ ಏನು?

    ದಲೈಲಾಮಾ ಉತ್ತರಾಧಿಕಾರಿ ಸಂಘರ್ಷ- ದಲೈಲಾಮಾ ಜೊತೆ ಭಾರತದ ಸಂಬಂಧ ಹೇಗಿತ್ತು; ಚೀನಾ ಎಚ್ಚರಿಕೆ ಏನು?

    – ಉತ್ತರಾಧಿಕಾರಿ ಆಯ್ಕೆ ಹೇಗೆ ನಡೆಯುತ್ತೆ?
    ಟಿಬೆಟಿಯನ್ನರ ಆಧ್ಯಾತ್ಮಿಕ ನಾಯಕ ದಲೈಲಾಮಾ ಅವರ ಉತ್ತರಾಧಿಕಾರಿ (Dalai Lama Succession) ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಇದೇ ಜು.6 ರಂದು 90ನೇ ಹುಟ್ಟುಹಬ್ಬ ಆಚರಿಸಿಕೊಳ್ಳಲಿರುವ 14ನೇ ದಲೈಲಾಮಾ ಅವರು ತಮ್ಮ ನಿಧನ ನಂತರ ಉತ್ತರಾಧಿಕಾರಿ ನೇಮಕ ಕುರಿತು ಮಾತನಾಡಿದ್ದಾರೆ. ಗಾಡೆನ್ ಫೋಡ್ರಾಂಗ್ ಟ್ರಸ್ಟ್ ಸಂಪ್ರದಾಯದಂತೆ ಉತ್ತರಾಧಿಕಾರಿ ನೇಮಿಸಬೇಕು ಎಂದು ಘೋಷಿಸಿದ್ದಾರೆ. ಅವರ ಈ ಮಾತು ವಿವಾದದ ಸ್ವರೂಪ ಪಡೆದುಕೊಂಡಿದೆ. ಘೋಷಣೆ ಹೊರಬೀಳುತ್ತಿದ್ದಂತೆ ಚೀನಾ ಎಂಟ್ರಿ ಕೊಟ್ಟಿದೆ. ಉತ್ತರಾಧಿಕಾರಿ ಆಯ್ಕೆ ವಿಚಾರದಲ್ಲಿ ದಲೈಲಾಮಾ ಮತ್ತು ಚೀನಾ ನಡುವೆ ಫೈಟ್ ನಡೆಯುತ್ತಿದೆ. ಇದರ ನಡುವೆ ಭಾರತದ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ.
    ಯಾರು ಈ ದಲೈಲಾಮಾ? ಉತ್ತರಾಧಿಕಾರಿ ವಿಚಾರ ವಿವಾದಕ್ಕೆ ಕಾರಣವೇನು? ಚೀನಾಗೆ ತಲೆನೋವೇಕೆ? ಇದರಲ್ಲಿ ಭಾರತದ ಪಾತ್ರ ಮತ್ತು ನಡೆಯೇನು ಎಂಬ ಪ್ರಶ್ನೆಗಳಿಗೆ ವಿವರ ಇಲ್ಲಿದೆ.
    14ನೇ ದಲೈಲಾಮಾ
    ಜಗತ್ತಿನ ಅತ್ಯಂತ ಪ್ರಭಾವಶಾಲಿ ಧರ್ಮಗುರುಗಳಲ್ಲಿ ದಲೈಲಾಮಾ (Dalai Lama) ಕೂಡ ಒಬ್ಬರು. ಇವರು 1935ರ ಜು.6 ರಂದು ಈಶಾನ್ಯ ಟಿಬೆಟ್‌ನಲ್ಲಿರುವ ಈಗಿನ ಚೀನಾದ ಕ್ವಿಂಗ್ಹೈ ಪ್ರಾಂತ್ಯದ ಟಕ್ಟ್ಸರ್ ಎಂಬ ಹಳ್ಳಿಯಲ್ಲಿ ಜನಿಸಿದರು. ಇವರ ಮೂಲ ಹೆಸರು ಲ್ಹಾಮ್ ಥೊಂಡುಪ್. 1937ರಲ್ಲಿ ಥೊಂಡುಪ್, ಹಿಂದಿನ (13ನೇ) ದಲೈ ಲಾಮಾ ಅವರ ಮರುಜನ್ಮ ಎಂದು ಗುರುತಿಸಲಾಯಿತು. 1940ರ ಫೆ.2 ರಂದು 13ನೇ ದಲೈಲಾಮಾ ಅವರ ಉತ್ತರಾಧಿಕಾರಿ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಪಟ್ಟಾಭಿಷೇಕ ಕೂಡ ನೆರವೇರಿತು. ಆಗ ಅವರ ವಯಸ್ಸು ಕೇವಲ 5 ವರ್ಷ. ಟೆಂಜಿನ್ ಗ್ಯಾಟ್ಸೊ ಎಂದು ನಾಮಕರಣ ಮಾಡಲಾಯಿತು.
    ಟಿಬೆಟ್‌ನಿಂದ ಭಾರತಕ್ಕೆ ಪಲಾಯನ
    ಟಿಬೆಟ್‌ನಲ್ಲಿ ಪ್ರಜಾಪ್ರಭುತ್ವವನ್ನು ಅಸ್ತಿತ್ವಕ್ಕೆ ತರುವುದು ದಲೈಲಾಮಾ ಅವರ ಹೆಬ್ಬಯಕೆ. ಆದರೆ, ಟಿಬೆಟ್ ಮೇಲಿನ ಹಿಡಿತ ಬಿಟ್ಟುಕೊಡಲು ಚೀನಾ ಸಿದ್ಧವಿಲ್ಲ. 1950ರಲ್ಲಿ ಚೀನಾವು ಟಿಬೆಟ್ ಮೇಲೆ ಅತಿಕ್ರಮಣ ನಡೆಸಿತು. ಆಗ 15ನೇ ವಯಸ್ಸಿನಲ್ಲಿ ಟಿಬೆಟ್‌ನ ಸಂಪೂರ್ಣ ರಾಜಕೀಯ ನಿಯಂತ್ರಣ ಪಡೆದ ಧರ್ಮಗುರುವಾಗಿದ್ದರು. 1956ರಲ್ಲಿ ಬೀಜಿಂಗ್‌ನಲ್ಲಿ ಚೀನಾದ ಪರಮೋಚ್ಚ ನಾಯಕ ಮಾವೋ ಝೆಡಾಂಗ್ ಮತ್ತು ನಾಯಕರೊಂದಿಗೆ ಶಾಂತಿ ಮಾತುಕತೆ ನಡೆಯಿತು. ನಂತರ 1959ರಲ್ಲಿ ಚೀನಾದ (China) ವಿರುದ್ಧ ಟಿಬೆಟ್‌ನಲ್ಲಿ ದಂಗೆ ನಡೆಸಲಾಯಿತು. ಅದು ವಿಫಲವಾಗಿ ದಲೈಲಾಮಾ ಅವರು ಸಾವಿರಾರು ಅನುಯಾಯಿಗಳೊಂದಿಗೆ ದೇಶವನ್ನು ತೊರೆದು ಭಾರತಕ್ಕೆ ಮಾಡಿದರು. ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನೆಲೆ ಕಂಡುಕೊಂಡರು.
    ನೊಬೆಲ್ ಪುರಸ್ಕಾರ 
    ಜಗತ್ತಿನ ಪ್ರಭಾವಶಾಲಿ ಧರ್ಮಗುರುಗಳಲ್ಲಿ ದಲೈಲಾಮಾ ಕೂಡ ಒಬ್ಬರು. ಅವರಿಗೆ ಟೆಬೆಟ್‌ನ ಹೊರಗೂ ಅನುಯಾಯಿಗಳಿದ್ದಾರೆ. ದಶಕಗಳಿಂದಲೂ ಜಗತ್ತಿನಾದ್ಯಂತ ಪ್ರವಾಸ ಮಾಡುತ್ತಾ ಟಿಬೆಟ್‌ನ ಸಾಂಸ್ಕೃತಿಕ ಮತ್ತು ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ದಲೈಲಾಮಾ ಶ್ರಮಿಸುತ್ತಿದ್ದಾರೆ. ಬೌದ್ಧ ತತ್ವಗಳ ಪ್ರತಿಪಾದಕರು. ಅಹಿಂಸೆ ಮತ್ತು ಶಾಂತಿ ಪ್ರತಿಪಾದನೆಗಾಗಿ 1989ರಲ್ಲಿ ನೊಬೆಲ್ ಶಾಂತಿ ಪುರಸ್ಕಾರ ಲಭಿಸಿದೆ. ಬಳಿಕ 2011ರಲ್ಲಿ ರಾಜಕೀಯ ಸ್ಥಾನಮಾನ ಪದತ್ಯಾಗ ಮಾಡಿ ಟಿಬೆಟನ್ನರ ಧರ್ಮಗುರುವಾಗಿ ಮುಂದುವರಿದರು. 2024ರಲ್ಲಿ ಅಮೆರಿಕಗೆ ಭೇಟಿ ನೀಡಿ ಮಂಡಿ ಚಿಕಿತ್ಸೆಗೆ ಒಳಗಾದರು. ಈ ಸಂದರ್ಭದಲ್ಲೇ ಮೊದಲ ಬಾರಿಗೆ ಉತ್ತರಾಧಿಕಾರಿ ಬಗ್ಗೆ ಪ್ರಸ್ತಾಪ ಮಾಡಿದ್ದರು.
    ಉತ್ತರಾಧಿಕಾರಿ ಘೋಷಣೆ ಏಕೆ ಮಹತ್ವದ್ದಾಗಿದೆ?
    ದಲೈಲಾಮಾ ಅವರ ಉತ್ತರಾಧಿಕಾರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಕೆಲ ದಿನಗಳ ಹಿಂದಷ್ಟೇ ಧರ್ಮಶಾಲಾದಲ್ಲಿ ನಡೆದ 90ನೇ ಹುಟ್ಟುಹಬ್ಬಕ್ಕೆ ಸಂಬಂಧಿಸಿದ ಸಮಾರಂಭವೊಂದರಲ್ಲಿ ದಲೈಲಾಮಾ ತಮ್ಮ ಉತ್ತರಾಧಿಕಾರಿ ಆಯ್ಕೆ ಕುರಿತು ಮಾತನಾಡಿದ್ದಾರೆ. ಆಯ್ಕೆ ಪ್ರಕ್ರಿಯೆ ಟಿಬೆಟಿಯನ್ ಬೌದ್ಧಧರ್ಮದ ಸಂಪ್ರದಾಯಕ್ಕೆ ಅನುಗುಣವಾಗಿಯೇ ನಡೆಯುತ್ತದೆ. ಗಾಡೆನ್ ಫೋಡ್ರಾಂಗ್ ಟ್ರಸ್ಟ್ ಉಸ್ತುವಾರಿಯಲ್ಲಿ ನಡೆಯಲಿದೆ ಎಂದು ದಲೈಲಾಮಾ ತಿಳಿಸಿದ್ದಾರೆ. ‘ನಾನು ಪುನರ್ಜನ್ಮ ಹೊಂದುತ್ತೇನೆ. ಅದರ ಆಧಾರದಲ್ಲಿಯೇ ಮುಂದಿನ ದಲೈಲಾಮಾ ಆಯ್ಕೆ ನಡೆಯಲಿದೆ’ ಎಂದು ಹೇಳಿದ್ದಾರೆ. ಈ ಹೇಳಿಕೆ ಬೌದ್ಧ ಧರ್ಮದ ಅನುಯಾಯಿಗಳಲ್ಲಿ ಅಪಾರ ಸಂತೋಷ ತಂದಿದೆ.
    ಆಯ್ಕೆ ಹೇಗೆ?
    ಟಿಬೆಟಿಯನ್ ಬೌದ್ಧ ಸಂಪ್ರದಾಯವು ಬೌದ್ಧ ಸನ್ಯಾಸಿಯ ಆತ್ಮವು ಆತನ ಮರಣದ ನಂತರ ಪುನರ್ಜನ್ಮ ಪಡೆಯುತ್ತದೆ ಎಂದು ನಂಬುತ್ತದೆ. 1935 ರಂದು ಚೀನಾದ ಕ್ವಿಂಗ್ಹೈ ಪ್ರಾಂತ್ಯದಲ್ಲಿ ಲ್ಹಾಮ್ ಥೋಂಡಪ್ ಆಗಿ ಜನಿಸಿದ 14 ನೇ ದಲೈಲಾಮಾ ಅವರನ್ನು ಕೇವಲ ಎರಡು ವರ್ಷದವನಿದ್ದಾಗ, ಅವರ ಹಿಂದಿನ (13ನೇ) ದಲೈಲಾಮಾರ ಪುನರ್ಜನ್ಮ ಎಂದು ಗುರುತಿಸಲಾಗಿತ್ತು. ಹೊಸ ದಲೈಲಾಮಾ ಆಯ್ಕೆಯು ಟಿಬೆಟ್‌ನ ಬೌದ್ಧ ಧರ್ಮದ ಸಂಸ್ಕೃತಿ, ಶಿಷ್ಟಾಚಾರದ ಪ್ರಕಾರವೇ ನಡೆಯುತ್ತದೆ. ಆದರೆ, ಹಾಲಿ ದಲೈಲಾಮಾ ನಿಧನದ ನಂತರವೇ ಈ ಪ್ರಕ್ರಿಯೆ ನಡೆಯುತ್ತದೆ. ದಲೈಲಾಮಾ ಅವರೇ ಮರುಜನ್ಮ ಪಡೆದು ಆ ಹುದ್ದೆಯಲ್ಲಿ ಮುಂದುವರಿಯುತ್ತಾರೆಂಬುದು ಟಿಬೆಟಿಯನ್ನರ ನಂಬಿಕೆಯಾಗಿದೆ. ಹೊಸ ದಲೈಲಾಮಾ ಅವರನ್ನು ಗುರುತಿಸಲು ಹಳೆಯ ಸಂಪ್ರದಾಯ ವಿಧಾನಗಳನ್ನು ಅನುಸರಿಸಲಾಗುತ್ತದೆ. ಹಿಂದಿನ ದಲೈಲಾಮಾ ಬಿಟ್ಟುಹೋಗಿರುವ ಚಿಹ್ನೆಗಳು, ಜ್ಯೋತಿಷ್ಯದಿಂದ ಕಂಡುಕೊಂಡ ಮಾಹಿತಿಗಳು, ಆಧ್ಯಾತ್ಮಿಕ ಜ್ಞಾನವನ್ನು ವಿಶ್ಲೇಷಿಸಲಾಗುತ್ತದೆ. ಅಲ್ಲದೇ, ಹುಟ್ಟಿದ ಕೆಲವೇ ವರ್ಷಗಳಲ್ಲಿ ಯಾರಾದರೂ ಹಿಂದಿನ ದಲೈಲಾಮಾ ಅವರು ಬಳಸಿದ ವಸ್ತುಗಳು, ಅವರ ಆಪ್ತರನ್ನು ಗುರುತಿಸಿದರೆ ಅವರು ಮರುಜನ್ಮ ಪಡೆದವರೆಂದು ತಿಳಿಯಲಾಗುತ್ತದೆ.
    ದಲೈಲಾಮಾ ಅವರು ತಮ್ಮ ಉತ್ತರಾಧಿಕಾರಿಯನ್ನು ತಾವು ಜೀವಂತವಾಗಿರುವಾಗಲೇ ಹೆಸರಿಸಲಾಗುವುದು ಎಂದು ಹೇಳಿದ್ದಾರೆ. ಅಲ್ಲದೇ, ಟಿಬೆಟ್‌ನ ಹೊರಗೆ, ಚೀನೀ ಕಮ್ಯುನಿಸ್ಟ್ ಪಕ್ಷದ ನಿಯಂತ್ರಣದಲ್ಲಿ ಇಲ್ಲದ ಪ್ರದೇಶದಲ್ಲಿ ಜನಿಸುವವರಾಗಬೇಕು ಎಂದು ತಿಳಿಸಿದ್ದಾರೆ. ಟಿಬೆಟ್‌ನಿಂದ ಬಹುದೂರ ಭಾರತದ ಧರ್ಮಶಾಲಾದಿಂದಲೇ ತಮ್ಮ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ದಲೈಲಾಮಾ ತಿಳಿಸಿದ್ದಾರೆ. ಇದು ಟಿಬೆಟಿಯನ್ ಬೌದ್ಧರ ಧಾರ್ಮಿಕ ಸಂಸ್ಥೆ ಮತ್ತು ಟಿಬೆಟ್ ಸ್ವಾತಂತ್ರ್ಯ ಹೋರಾಟದ ಭವಿಷ್ಯದ ದೃಷ್ಟಿಯಿಂದ ಮಹತ್ವದ್ದಾಗಿದೆ.
    ಚೀನಾಗೆ ಸಿಟ್ಟು ಯಾಕೆ?
    ಟಿಬಿಟ್ ಮೇಲೆ ಚೀನಾ ಹಿಡಿತ ಸಾಧಿಸಿದೆ. ಅದನ್ನು ಬಿಟ್ಟುಕೊಡಲು ಡ್ರ್ಯಾಗನ್ ರಾಷ್ಟ್ರ ಸಿದ್ಧವಿಲ್ಲ. ಇಡೀ ಜಗತ್ತೇ ದಲೈಲಾಮಾ ಅವರ ಬಗ್ಗೆ ಗೌರವ ಭಾವನೆ ಹೊಂದಿದೆ. ಆದರೆ, ಚೀನಾ ಮಾತ್ರ ಅವರನ್ನು ಪ್ರತ್ಯೇಕತಾವಾದಿ ಎಂದು ನೋಡುತ್ತಿದೆ. ಉತ್ತರಾಧಿಕಾರಿ ಆಯ್ಕೆ ಬಗೆಗಿನ ದಲೈಲಾಮಾ ಅವರ ಮಾತಿಗೂ ವಿರೋಧ ವ್ಯಕ್ತಪಡಿಸಿದೆ. ದಲೈಲಾಮಾ ಒಬ್ಬರೇ ಉತ್ತರಾಧಿಕಾರಿ ಆಯ್ಕೆ ಮಾಡುವಂತಿಲ್ಲ, ಅದರಲ್ಲಿ ತನ್ನ ಪಾತ್ರವೇ ನಿರ್ಣಯವಾಗಬೇಕು ಎಂದು ಚೀನಾ ಪಟ್ಟು ಹಿಡಿದಿದೆ. ಅಷ್ಟೇ ಅಲ್ಲ ಟಿಬೆಟಿಯನ್ನರಿಗೆ ಭಾರತ ಆಶ್ರಯ ನೀಡಿರುವ ಬಗ್ಗೆಯೂ ಚೀನಾಗೆ ಅಸಮಾಧಾನ ಇದೆ. ಸಾಮ್ರಾಜ್ಯಶಾಹಿ ಕಾಲದ ಪರಂಪರೆಯಂತೆ ಉತ್ತರಾಧಿಕಾರಿಯನ್ನು ಅನುಮೋದಿಸುವ ಹಕ್ಕು ತನ್ನದು ಎಂದು ಚೀನಾ ಹೇಳಿದೆ. ದಲೈಲಾಮಾ ಅವರ ಪುನರ್ಜನ್ಮವನ್ನು ರಾಷ್ಟ್ರೀಯ ಕಾನೂನುಗಳನ್ನು ಅನುಸರಿಸುವ ಮೂಲಕ ನಿರ್ಧರಿಸಬೇಕು ಎಂದು ಹಟ ಹಿಡಿದಿದೆ. ಒಬ್ಬ ವಿಧೇಯ ಉತ್ತರಾಧಿಕಾರಿಯನ್ನು ನೇಮಿಸಿ ಟಿಬೆಟ್ ಅನ್ನು ನಿಯಂತ್ರಿಸಬೇಕೆನ್ನುವುದು ಚೀನಾದ ಉದ್ದೇಶವಾಗಿದೆ.
    ಭಾರತದ ನಡೆಯೇನು?
    ಹಾಲಿ ದಲೈಲಾಮಾ ಅವರು ಭಾರತದ (India) ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ. 1959ರಲ್ಲಿ ಪಲಾಯನಗೈದ ದಲೈಲಾಮಾಗೆ ಆಶ್ರಯ ನೀಡಿದೆ. ಪಲಾಯನ ಮಾಡಿದಾಗಿನಿಂದ ಧರ್ಮಶಾಲಾವೇ ಅವರ ನೆಲೆಯಾಗಿದೆ. ಪ್ರಸ್ತುತ 1.40 ಲಕ್ಷ ಟಿಬೆಟಿಯನ್ ಬೌದ್ಧರು ಭಾರತದಾದ್ಯಂತ ನೆಲೆ ಕಂಡುಕೊಂಡಿದ್ದಾರೆ. ಸುಮಾರು 45 ವಸತಿ ಪ್ರದೇಶಗಳಲ್ಲಿ ವಾಸವಾಗಿದ್ದಾರೆ. ಕರ್ನಾಟಕದಲ್ಲೂ ಟಿಬೆಟಿಯನ್ನರ ಮೂರು ವಸತಿ ಪ್ರದೇಶಗಳಿವೆ. ಈಗ ಉತ್ತರಾಧಿಕಾರಿ ಆಯ್ಕೆಯ ಸಂಘರ್ಷದಲ್ಲಿ ಭಾರತ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಚೀನಾದೊಂದಿಗಿನ ಗಡಿ ಸಂಘರ್ಷವೇ ಇದಕ್ಕೆ ಪ್ರಮುಖ ಕಾರಣ.
    ದಲೈಲಾಮಾ ಆಯ್ಕೆ ಟಿಬೆಟಿಯನ್ನರ ಹಕ್ಕು. ಮುಂದಿನ ದಲೈಲಾಮಾ ಯಾರೆಂಬುದನ್ನು ಸ್ಥಾಪಿತ ಸಂಸ್ಥೆ ಮತ್ತು ಟಿಬೆಟಿಯನ್ ಬೌದ್ಧ ನಾಯಕರು ನಿರ್ಧರಿಸುತ್ತಾರೆಂದು ಭಾರತ ಪ್ರತಿಕ್ರಿಯಿಸಿದೆ. ದಲೈಲಾಮಾ ಅವರನ್ನು ಅನುಸರಿಸುವವರೆಲ್ಲರೂ ಅವರ ಇಚ್ಛೆಯ ಪ್ರಕಾರ ನಿರ್ಧರಿಸಬೇಕು ಎಂದು ಭಾವಿಸುತ್ತಾರೆ. ದಲೈಲಾಮಾ ಅವರನ್ನು ಮತ್ತು ಜಾರಿಯಲ್ಲಿರುವ ಆಚಾರಗಳನ್ನು ಹೊರತುಪಡಿಸಿ ಬೇರೆ ಯಾರಿಗೂ ಉತ್ತರಾಧಿಕಾರಿ ನಿರ್ಧರಿಸುವ ಹಕ್ಕಿಲ್ಲ ಎಂದು ಚೀನಾಗೆ ನೇರವಾಗಿ ಭಾರತ ಟಕ್ಕರ್ ಕೊಟ್ಟಿದೆ. ಇದಕ್ಕೆ ಚೀನಾವೂ ಪ್ರತಿಕ್ರಿಯೆ ನೀಡಿದೆ. ದಲೈಲಾಮಾ ಉತ್ತರಾಧಿಕಾರಿ ಆಯ್ಕೆ ವಿಚಾರದಲ್ಲಿ ಭಾರತ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ಮಾತನಾಡಿದೆ. ದಲೈಲಾಮಾ ಅವರ ಉತ್ತರಾಧಿಕಾರವನ್ನು ಚೀನಾದ ಕೇಂದ್ರ ಸರ್ಕಾರ ಅನುಮೋದಿಸಬೇಕು. ಚೀನಾ ಕಾನೂನು ಮತ್ತು ನಿಬಂಧನೆಗಳನ್ನು ಪಾಲಿಸಬೇಕು ಎಂದು ಚೀನಾ ಹೇಳಿದೆ.
    14 ಮಂದಿ ದಲೈಲಾಮಾ ಎಲ್ಲಿಯವರು?
    ಇದುವರೆಗೆ 14 ಮಂದಿ ದಲೈಲಾಮಾ ಹುದ್ದೆಗೆ ಏರಿದ್ದಾರೆ. ಇವರಲ್ಲಿ ಇಬ್ಬರನ್ನು ಬಿಟ್ಟರೆ ಉಳಿದವರೆಲ್ಲಾ ಟಿಬೆಟ್‌ನವರೇ. 4ನೇ ದಲೈಲಾಮಾ (ಯೊಂಟೆನ್ ಗ್ಯಾಟ್ಸೊ) & 6ನೇ ದಲೈಲಾಮಾ (ತ್ಸಾಂಗ್ಯಾಂಗ್ ಗ್ಯಾಟ್ಸೊ) ಆಗಿ ಟಿಬೆಟ್‌ನವರಲ್ಲದವರು ಆ ಹುದ್ದೆಗೆ ಏರಿದ್ದಾರೆ. ಯೊಂಟೆನ್ ಅವರು ಮಂಗೋಲಿಯಾದಲ್ಲಿ ಹಾಗೂ ತ್ಯಾಂಗ್ಯಾಂಗ್ ಅವರು ಈಗಿನ ಅರುಣಾಚಲ ಪ್ರದೇಶದಲ್ಲಿ ಜನಿಸಿದ್ದರು.
  • ಜನಸೇವೆಗಾಗಿ 30-40 ವರ್ಷಗಳ ಕಾಲ ಬದುಕುವ ಆಶಯವಿದೆ – ಉತ್ತರಾಧಿಕಾರಿ ವದಂತಿಗೆ ತೆರೆ ಎಳೆದ ದಲೈ ಲಾಮಾ

    ಜನಸೇವೆಗಾಗಿ 30-40 ವರ್ಷಗಳ ಕಾಲ ಬದುಕುವ ಆಶಯವಿದೆ – ಉತ್ತರಾಧಿಕಾರಿ ವದಂತಿಗೆ ತೆರೆ ಎಳೆದ ದಲೈ ಲಾಮಾ

    ನವದೆಹಲಿ: ಮುಂದಿನ 30-40 ವರ್ಷಗಳ ಕಾಲ ಜನರಿಗೆ ಸೇವೆ ಸಲ್ಲಿಸಲು ಬದುಕುವ ಆಶಯ ಹೊಂದಿದ್ದೇನೆ ಎಂದು ಟಿಬೆಟಿಯನ್ ಆಧ್ಯಾತ್ಮಿಕ ನಾಯಕ (Tibetan spiritual leader) ದಲೈ ಲಾಮಾ (Dalai Lama) ಹೇಳಿದ್ದಾರೆ. ಅವರ 90ನೇ ಜನ್ಮದಿನವಾದ ಇಂದು ಉತ್ತರಾಧಿಕಾರಿಯ ಘೋಷಣೆಯ ಕುರಿತಾದ ವದಂತಿಗಳ ನಡುವೆ ಈ ಹೇಳಿಕೆ ನೀಡುವ ಮೂಲಕ ಎಲ್ಲಾ ಊಹಾಪೋಹಗಳಿಗೆ ಅಂತ್ಯ ಹಾಡಿದ್ದಾರೆ.

    ಮೆಕ್ಲಿಯೋಡ್ಗಂಜ್‌ನ ತ್ಸುಗ್ಲಾಗ್‌ಖಾಂಗ್‌ನ ಮುಖ್ಯ ದಲೈ ಲಾಮಾ ದೇವಸ್ಥಾನದಲ್ಲಿ ತಮ್ಮ 90ನೇ ಹುಟ್ಟುಹಬ್ಬಕ್ಕೂ ಮುನ್ನ ನಡೆದ ದೀರ್ಘಾಯುಷ್ಯದ ಪ್ರಾರ್ಥನಾ ಸಮಾರಂಭದಲ್ಲಿ ದಲೈ ಲಾಮಾ ಟೆನ್ಜಿನ್ ಗ್ಯಾಟ್ಸೊ ಅವರು ಮಾತನಾಡಿದರು. ಅವಲೋಕಿತೇಶ್ವರನ ಆಶೀರ್ವಾದ ತಮ್ಮೊಂದಿಗಿದೆ ಎಂಬ ಸ್ಪಷ್ಟ ಚಿಹ್ನೆಗಳು ಸಿಗುತ್ತಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮರಾಠಿ ಕಲಿಯಲ್ಲ ಎಂದಿದ್ದಕ್ಕೆ ಉದ್ಯಮಿ ಕಚೇರಿಯೇ ಧ್ವಂಸ

    ನಾನು ಇಲ್ಲಿಯವರೆಗೆ ನನ್ನ ಕೈಲಾದಷ್ಟು ಜನರ ಸೇವೆ ಮಾಡಲು ಪ್ರಯತ್ನಿಸಿದ್ದೇನೆ. ನಾನು ಇನ್ನೂ 30-40 ವರ್ಷಗಳ ಕಾಲ ಬದುಕುತ್ತೇನೆ ಎಂದು ಭಾವಿಸುತ್ತೇನೆ. ಇಲ್ಲಿಯವರೆಗೆ ನಿಮ್ಮ ಪ್ರಾರ್ಥನೆಗಳು ಫಲ ನೀಡಿವೆ. ನಾವು ನಮ್ಮ ದೇಶವನ್ನು ಕಳೆದುಕೊಂಡು ಭಾರತದಲ್ಲಿ ದೇಶಭ್ರಷ್ಟರಾಗಿ ವಾಸಿಸುತ್ತಿದ್ದರೂ, ಇಲ್ಲಿ ನಾನು ಬಹಳಷ್ಟು ಜನರಿಗೆ ಸೇವೆ ಮಾಡಲು ಸಾಧ್ಯವಾಗಿದೆ. ನಾನು ಇನ್ನಷ್ಟು ಜನರ ಸೇವೆ ಮಾಡಲು ಬಯಸುತ್ತಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಹೇಳಿಕೆ ವಿವಾದ | ಕೊಡವ ಸಮುದಾಯ ಎಲ್ಲರನ್ನೂ ಬೆಂಬಲಿಸಿದೆ: ನಟಿ ಪ್ರೇಮ

    ದಲೈ ಲಾಮಾ ಅವರ 90ನೇ ಹುಟ್ಟುಹಬ್ಬವನ್ನು ಮೆಕ್ಲಿಯೋಡ್ಗಂಜ್‌ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಆಚರಿಸಲಾಗುತ್ತಿದೆ. ಇಂದು ಕೇಂದ್ರ ಸಚಿವ ಕಿರಣ್ ರಿಜಿಜು, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು, ಹಾಲಿವುಡ್ ನಟ ರಿಚರ್ಡ್ ಗೆರೆ ಸೇರಿ ಇತರರು ಮುಖ್ಯ ಟಿಬೆಟಿಯನ್ ದೇವಾಲಯ ಮತ್ತು ದಲೈ ಲಾಮಾ ಅವರ ನಿವಾಸದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ʻಆಪರೇಷನ್ ಸಿಂಧೂರʼ ಯಶಸ್ಸಿನ ಬೆನ್ನಲ್ಲೇ 1 ಲಕ್ಷ ಕೋಟಿ ಮೊತ್ತದ ರಕ್ಷಣಾ ಯೋಜನೆಗಳಿಗೆ ಮೋದಿ ಸರ್ಕಾರ ಅಸ್ತು

    ದಲೈ ಲಾಮಾ ಅವರ ದೀರ್ಘಾಯುಷ್ಯ ಮತ್ತು ಆರೋಗ್ಯಕ್ಕಾಗಿ ಬೆಳಗ್ಗೆ ಬೌದ್ಧ ಮಠದಲ್ಲಿ ಪ್ರಾರ್ಥನಾ ಸಭೆಯನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 8:00ಗಂಟೆಗೆ ಪ್ರಾರಂಭವಾದ ಈ ಪ್ರಾರ್ಥನಾ ಸಭೆಯಲ್ಲಿ ದಲೈ ಲಾಮಾ ಸ್ವತಃ ಹಾಜರಿದ್ದರು. ಭಾನುವಾರ ದಲೈ ಲಾಮಾ ಅವರು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಲಿದ್ದಾರೆ. ಈ ವೇಳೆ ತಮ್ಮ ಅನುಯಾಯಿಗಳನ್ನು ಸಹ ಅವರು ಆಶೀರ್ವದಿಸಲಿದ್ದಾರೆ. ಇದನ್ನೂ ಓದಿ: 20 ವರ್ಷಗಳ ಬಳಿಕ ಮತ್ತೆ ಒಂದಾದ ಉದ್ಧವ್‌-ರಾಜ್‌ ಠಾಕ್ರೆ

    ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiran Rijiju), ದಲೈ ಲಾಮಾ ಅವರ 90ನೇ ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗವಹಿಸಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದರು. ಅವರು ದಲೈ ಲಾಮಾ ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿ, ದಲೈ ಲಾಮಾ ಅವರ ಹುಟ್ಟುಹಬ್ಬದ ಆಚರಣೆಯನ್ನು ಭಾನುವಾರ ಆಚರಿಸಲಾಗುವುದು ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದ್ದಾರೆ.

  • ಟಿಬೆಟನ್‌ ಧರ್ಮಗುರು ದಲೈ ಲಾಮಾಗೆ ಜೀವ ಬೆದರಿಕೆ – ಕೇಂದ್ರದಿಂದ ʻZʼ ಶ್ರೇಣಿಯ ಭದ್ರತೆ

    ಟಿಬೆಟನ್‌ ಧರ್ಮಗುರು ದಲೈ ಲಾಮಾಗೆ ಜೀವ ಬೆದರಿಕೆ – ಕೇಂದ್ರದಿಂದ ʻZʼ ಶ್ರೇಣಿಯ ಭದ್ರತೆ

    ನವದೆಹಲಿ: ಟಿಬೆಟನ್‌ ಧರ್ಮಗುರು ದಲೈ ಲಾಮಾ (Tibetan Spiritual leader Dalai Lama) ಅವರಿಗೆ ಜೀವ ಬೆದರಿಕೆ ಇರುವುದರಿಂದ ಕೇಂದ್ರ ಸರ್ಕಾರವು ‘ಜೆಡ್‌’ ಶ್ರೇಣಿಯ ಭದ್ರತೆಯನ್ನು (Z Category Protection) ಒದಗಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿದೆ.

    89 ವರ್ಷದ ಆಧಾತ್ಮಿಕ ನಾಯಕನಿಗೆ ಭದ್ರತೆ ನೀಡುವಂತೆ ಕೇಂದ್ರ ಗೃಹ ಸಚಿವಾಲಯವು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ವಿಐಪಿ ಭದ್ರತಾ ವಿಭಾಗಕ್ಕೆ ಸೂಚಿಸಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: Manipur | ಬಿರೇನ್‌ ಸಿಂಗ್‌ ರಾಜೀನಾಮೆ ಬೆನ್ನಲ್ಲೇ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ

    ದಲೈ ಲಾಮಾ ಅವರು ಹಿಮಾಚಲ ಪ್ರದೇಶ ಪೊಲೀಸರ ಭದ್ರತೆ ಹೊಂದಿದ್ದರು. ಆದ್ರೆ ದೆಹಲಿ ಮತ್ತು ಇತರ ಯಾವುದೇ ಸ್ಥಳಗಳಿಗೆ ಭೇಟಿ ನೀಡುವಾಗ ಪೊಲೀಸ್‌ ಭದ್ರತೆಯನ್ನು ವಿಸ್ತರಿಸಲಾಗುತ್ತಿತ್ತು. ಆದ್ರೆ ಕೇಂದ್ರ ಗುಪ್ತಚರ ಸಂಸ್ಥೆಗಳ ಪರಿಶೀಲನೆಯ ನಂತರ ಸರ್ಕಾರ ಏಕರೂಪದ ಭದ್ರತೆಗೆ ಸೂಚನೆ ನೀಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸುಮಾರು 30 ಸಿಆರ್‌ಪಿಎಫ್‌ ಕಮಾಂಡೋಗಳ ತಂಡವು ದಲೈ ಲಾಮಾಗೆ ರಕ್ಷಣೆ ನೀಡಲಿದೆ. ಅಲ್ಲದೇ ಮಣಿಪುರದ ಬಿಜೆಪಿ ನಾಯಕ ಸಂಬಿತ್ ಪಾತ್ರ ಅವರಿಗೂ ʻಜೆಡ್‌ʼ ಶ್ರೇಣಿಯ ಭದ್ರತೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕೈಕಾಲು ಕಟ್ಟಿ, ಕಂಪಾಸ್‌ನಿಂದ ಚುಚ್ಚಿ ಚಿತ್ರಹಿಂಸೆ – ನರ್ಸಿಂಗ್‌ ಕಾಲೇಜಿನಲ್ಲಿ ರ‍್ಯಾಗಿಂಗ್‌ ಕ್ರೂರತೆಯ ವಿಡಿಯೋ ವೈರಲ್‌

  • 30 ದಿನಗಳ ವಿಶ್ರಾಂತಿಗಾಗಿ ಮೈಸೂರಿನ ಬೈಲಕುಪ್ಪೆಗೆ 14ನೇ ದಲೈಲಾಮ ಆಗಮನ!

    30 ದಿನಗಳ ವಿಶ್ರಾಂತಿಗಾಗಿ ಮೈಸೂರಿನ ಬೈಲಕುಪ್ಪೆಗೆ 14ನೇ ದಲೈಲಾಮ ಆಗಮನ!

    ಮಡಿಕೇರಿ: ಟಿಬೆಟಿಯನ್ನರ ಸಾಂಪ್ರದಾಯಿಕ ಧರ್ಮಗುರುಗಳಾದ 14ನೇ ದಲೈಲಾಮ (14th Dalai Lama) ಅವರು 30 ದಿನಗಳ ವಿಶ್ರಾಂತಿಗಾಗಿ ಬೈಲಕುಪ್ಪೆಯ ಟಿಬೆಟಿಯನ್‌ ಕ್ಯಾಂಪ್‌ಗೆ (Tibetan Camp) ಆಗಮಿಸಿದ್ದಾರೆ.

    ಭಾನುವಾರ ಮಧ್ಯಾಹ್ನ ಬೆಂಗಳೂರಿನಿಂದ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿ, ಬೈಲಕುಪ್ಪೆಯ 4ನೇ ಕ್ಯಾಂಪಿನಲ್ಲಿರುವ ಎಲಿಫ್ಯಾಡ್‌ಗೇ ಸುರಕ್ಷಿತವಾಗಿ ಬಂದಿಳಿದರು.

    ದಲೈಲಾಮ ಅವರು ಆಗಮಿಸುತ್ತಿದ್ದಂತೆ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಟಿಬೇಟಿಯನ್ನರು, 6 ಕಿಮೀ ರಸ್ತೆ ಯುದ್ದಕ್ಕೂ ಟಿಬೆಟಿಯನ್ ಮಾದರಿಯ ಉಡುಪುಗಳನ್ನು ಧರಿಸಿ ಬೆಳಗ್ಗೆ 6 ಗಂಟೆಯಿಂದಲೇ ತಮ್ಮ ನೆಚ್ಚಿನ ಗುರುಗಳ ದರ್ಶನಕ್ಕೆ ಕಾದುಕುಳಿತಿದ್ದರು.

    ಜೆಡ್ ಪ್ಲಸ್ ಭದ್ರತೆ ಹೊಂದಿರುವ ದಲೈಲಾಮ ಅವರು ಆಗಮಿಸುತ್ತಿದ್ದಂತೆ, ಸುಮಾರು 250ಕ್ಕೂ ಹೆಚ್ಚು ಪೊಲೀಸ್ ಭದ್ರತೆಯಲ್ಲಿ ಎಲಿಫ್ಯಾಡ್ ನಿಂದ ಕಾರಿನ ಮುಖಾಂತರ ಲಕ್ಷ್ಮಿಪುರ ಗ್ರಾಮದಲ್ಲಿರುವ ತಶಿಲಾಂಪು ದೇವಸ್ಥಾನಕ್ಕೆ ತೆರಳಿದರು. ಈ ವೇಳೆ ಬೌದ್ಧ ಬಿಕ್ಕುಗಳು ಬಗೆ-ಬಗೆಯ ಹೂಗಳನ್ನು ಚೆಲ್ಲುತ್ತಾ ಆತ್ಮೀಯವಾಗಿ ದೇವಸ್ಥಾನದ ಒಳಗೆ ಬರಮಾಡಿಕೊಂಡರು. ಇಲ್ಲಿನ ಸ್ಥಳೀಯ ಟಿಬೆಟಿಯನ್ನರು ಸಾಂಪ್ರದಾಯಿಕ ನೃತ್ಯಗಳನ್ನು ಸಹ ಮಾಡಿದ ದೃಶ್ಯ ಕಂಡುಬಂದಿತು.

    ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಎಸ್‌ಪಿ ನಾಗೇಶ್, ಡಿವೈಎಸ್ಪಿ ಗೋಪಾಲಕೃಷ್ಣ, ವೃತ್ತ ನಿರೀಕ್ಷಕ ದೀಪಕ್, ಬೈಲಕುಪ್ಪೆ ಠಾಣಾಧಿಕಾರಿ ಅಜಯ್ ಕುಮಾರ್, ಸ್ಥಳೀಯ ಸೆಟಲ್ಮೆಂಟ್ ಅಧಿಕಾರಿಗಳಾದ ಗ್ಯಾಲಕ್, ಚಿಮ್ಮಿ ದೊರ್ಜಿ, ಟಿಡಿಎಲ್ ಸೊಸೈಟಿ ಅಧ್ಯಕ್ಷ ಜೋಡೆನ್, ಇಂಡೋ ಟಿಬೆಟಿಯನ್ ಫ್ರೆಂಡ್ಶಿಪ್ ಅಧ್ಯಕ್ಷ ಜವರೇಗೌಡ, ಸುತ್ತ ಮುತ್ತ ಟಿಬೆಟಿಯನ್ ದೇವಸ್ಥಾನದ ಹಿರಿಯ ಬೌದ್ಧ ಗುರುಗಳು ಇದ್ದರು.

  • ಧರ್ಮಶಾಲಾದಲ್ಲಿ ದಲೈಲಾಮ ಭೇಟಿಯಾದ ನ್ಯಾನ್ಸಿ ಪೆಲೋಸಿ- ಕಣ್ಣು ಕೆಂಪಗಾಗಿಸಿದ ಚೀನಾ

    ಧರ್ಮಶಾಲಾದಲ್ಲಿ ದಲೈಲಾಮ ಭೇಟಿಯಾದ ನ್ಯಾನ್ಸಿ ಪೆಲೋಸಿ- ಕಣ್ಣು ಕೆಂಪಗಾಗಿಸಿದ ಚೀನಾ

    ನವದೆಹಲಿ: ಭಾರತ ಪ್ರವಾಸದಲ್ಲಿರುವ ಅಮೆರಿಕಾದ ಹಿರಿಯ ರಾಜಕಾರಣಿ ನ್ಯಾನ್ಸಿ ಪೆಲೋಸಿ (Nancy Pelosi) ನೇತೃತ್ವದ ನಿಯೋಗ ಧರ್ಮಶಾಲಾದಲ್ಲಿ ಟಿಬೆಟ್ ಮುಖ್ಯಸ್ಥ ದಲೈಲಾಮ (Dalai Lama) ಅವರನ್ನು ಭೇಟಿ ಮಾಡಿರೋದು ಚೀನಾದ (China) ಕಣ್ಣು ಕೆಂಪಗಾಗಿಸಿದೆ.

    ಇತ್ತೀಚಿಗೆ ಅಮೆರಿಕ ಸಂಸತ್‌ನಲ್ಲಿ ದಿ ರಿಸಾಲ್ವ್ ಟಿಬೆಟ್ ಆಕ್ಟ್‌ಗೆ ಅನುಮೋದನೆ ನೀಡಲಾಗಿತ್ತು. ಇದರ ಪ್ರಕಾರ, ಟಿಬೆಟ್ (Tibet) ನಾಯಕರೊಂದಿಗೆ ಚೀನಾ ಚರ್ಚೆ ಆರಂಭಿಸಬೇಕು. ನೆಲದ ಸಂಸ್ಕೃತಿ ಕಾಪಾಡುವ ನಿಟ್ಟಿನಲ್ಲಿ ಒಪ್ಪಂದಕ್ಕೆ ಬರಬೇಕು ಎಂದು ಅಮೆರಿಕ ಕೋರಲಿದೆ. ಅಲ್ಲದೇ ಟಿಬೆಟ್ ಇತಿಹಾಸ, ಜನರ ಬಗ್ಗೆ ಚೀನಾ ಹಬ್ಬಿಸುವ ಸುಳ್ಳು ಸುದ್ದಿಗಳ ತಡೆಗೆ ಅಮೆರಿಕ ವಿದೇಶಾಂಗ ಇಲಾಖೆ ಕೆಲಸ ಮಾಡಲಿದೆ. ಇದಕ್ಕಾಗಿ ದೇಣಿಗೆ ಸಂಗ್ರಹಿಸಲು ಅವಕಾಶ ಸಿಗಲಿದೆ. ಬೈಡನ್ ಸಹಿ ಹಾಕಿದ ನಂತರ ಈ ಕಾಯ್ದೆ ಅನುಷ್ಠಾನಕ್ಕೆ ಬರಲಿದೆ. ಆದರೆ ಇದು ಜಾರಿಗೆ ಬರದಂತೆ ಮಾಡಲು ಅಮೆರಿಕ ಮೇಲೆ ಚೀನಾ ಒತ್ತಡ ಹೇರುತ್ತಿದೆ. ಇದನ್ನೂ ಓದಿ: ಕೇಂದ್ರ ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ವೇವ್ ಘಟಕ ಸ್ಥಾಪಿಸಲು ನಡ್ಡಾ ಸೂಚನೆ

    ಇದೀಗ ಪೆಲೋಸಿ-ದಲೈಲಾಮ ಭೇಟಿಯನ್ನು ಚೀನಾ ತೀವ್ರವಾಗಿ ಖಂಡಿಸಿದೆ. ಈ ಹಿಂದೆ ಟಿಬೆಟ್ ವಿಚಾರದಲ್ಲಿ ಅಮೆರಿಕಗೆ ನೀಡಿದ ಭರವಸೆಗಳಿಗೆ ಕಟಿಬದ್ಧರಾಗಿದ್ದೇವೆ. ದಲೈಲಾಮ ಜೊತೆ ಸಂಪರ್ಕ ಬೇಡ. ಜಗತ್ತಿಗೆ ತಪ್ಪು ಸಂದೇಶ ತಲುಪಿಸೋದನ್ನು ನಿಲ್ಲಿಸಿ ಎಂದು ಗುಡುಗಿದೆ. ಟಿಬೆಟ್ ಎಂದೆಂದಿಗೂ ಚೀನಾಗೆ ಅವಿಭಾಜ್ಯ ಅಂಗ. ಇದನ್ನು ಉಳಿಸಿಕೊಳ್ಳಲು ಯಾವುದೇ ಕ್ರಮಕ್ಕೆ ಬೇಕಾದರೂ ಮುಂದಾಗುತ್ತೇವೆ ಎಂದು ಬೀಜಿಂಗ್ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ತೆಪ್ಪ ಮುಳುಗಿ ಮೂವರು ಪ್ರವಾಸಿಗರು ದುರ್ಮರಣ

  • ಮಂಡ್ಯಗೆ ಬರಾಕ್‌ ಒಬಾಮಾ, ದಲೈಲಾಮಾ ಭೇಟಿ – ಹೆಲಿಪ್ಯಾಡ್‌, ಮೂಲಸೌಕರ್ಯಕ್ಕೆ ಸಿಎಂಗೆ ಮನವಿ

    ಮಂಡ್ಯಗೆ ಬರಾಕ್‌ ಒಬಾಮಾ, ದಲೈಲಾಮಾ ಭೇಟಿ – ಹೆಲಿಪ್ಯಾಡ್‌, ಮೂಲಸೌಕರ್ಯಕ್ಕೆ ಸಿಎಂಗೆ ಮನವಿ

    ಬೆಂಗಳೂರು: ಬರಾಕ್‌ ಒಬಾಮಾ (Barack Obama) ದಂಪತಿ ಭೇಟಿ ನೀಡಲಿರುವ ಮಂಡ್ಯದ (Mandya) ಹಲ್ಲೆಗೆರೆಯಲ್ಲಿ ಹೆಲಿಪ್ಯಾಡ್‌ ಹಾಗೂ ಇತರೆ ಮೂಲಸೌಕರ್ಯ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಮನವಿ ಮಾಡಲಾಗಿದೆ.

    ಮಂಡ್ಯದ ಹಲ್ಲೆಗೆರೆಯ ಭೂತಾಯಿ ಟ್ರಸ್ಟ್‌ನ ಅಧ್ಯಕ್ಷ, ಅಮೆರಿಕದ ವೈದ್ಯ ಡಾ. ಲಕ್ಷ್ಮಿನರಸಿಂಹ ಮೂರ್ತಿ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಶಾಸಕರಾದ ರವಿಕುಮಾರ್ ಗಣಿಗ, ಬಾಬು ಬಂಡಿಸಿದ್ದೇಗೌಡ ನೇತೃತ್ವದ ನಿಯೋಗವು ಗುರುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು. ಇದನ್ನೂ ಓದಿ: ಪರಿಷತ್ ನೂತನ ಸದಸ್ಯರಾಗಿ ಮೂವರು ನಾಯಕರಿಂದ ಪ್ರಮಾಣ ವಚನ ಸ್ವೀಕಾರ

    ಟ್ರಸ್ಟ್‌ನಿಂದ ಮಂಡ್ಯದ ಹಲ್ಲೆಗೆರೆಯಲ್ಲಿ ನಿರ್ಮಿಸುತ್ತಿರುವ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರ ಶಂಕುಸ್ಥಾಪನೆಗೆ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ದಂಪತಿ, ಟಿಬೆಟಿಯನ್ ಧರ್ಮಗುರು ದಲೈಲಾಮಾ (Dalai Lama) ಅವರು ಡಿಸೆಂಬರ್ ತಿಂಗಳಲ್ಲಿ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಲ್ಲೆಗೆರೆಯಲ್ಲಿ ಹೆಲಿಪ್ಯಾಡ್, ರಸ್ತೆ, ಚರಂಡಿ, ವಿದ್ಯುದ್ದೀಪ, ಕುಡಿಯುವ ನೀರು ಮುಂತಾದ ಸೌಕರ್ಯಗಳನ್ನು ಸರ್ಕಾರದ ವತಿಯಿಂದ ಒದಗಿಸಿ ಕೊಡುವಂತೆ ನಿಯೋಗವು ಮನವಿ ಮಾಡಿದೆ.

    ಈ ಕೇಂದ್ರವು ಹಲ್ಲೆಗೆರೆ, ಮಂಡ್ಯ ಜಿಲ್ಲೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ದೊಡ್ಡ ಕೊಡುಗೆಯಾಗಲಿದೆ ಎಂದು ನಿಯೋಗದ ಸದಸ್ಯರು ಕೇಂದ್ರದ ಕಾರ್ಯ ಸ್ವರೂಪವನ್ನು ವಿವರಿಸಿದರು. ಮಾತ್ರವಲ್ಲ ಟ್ರಸ್ಟ್ ಮಾಡುತ್ತಿರುವ ಸಾಮಾಜಿಕ ಕಾರ್ಯವನ್ನು ವಿವರಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರು, “ನೀವು ಮಾಡುವ ಒಳ್ಳೆಯ ಕಾರ್ಯಗಳಿಗೆ ನಿಮ್ಮ ಜೊತೆ ನಾವಿದ್ದೇವೆ. ಬೇಕಾದ ಎಲ್ಲ ಬೆಂಬಲ ನೀಡಲಿದ್ದೇವೆ. ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆದು ಸಂಬಂಧಪಟ್ಟ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತೇನೆ” ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಗೆ ತೆರಳಿ ಹೆಚ್‌ಡಿಕೆ ಆರೋಗ್ಯ ವಿಚಾರಿಸಿದ ಸಿಎಂ

    ವಿಧಾನ ಪರಿಷತ್ ಶಾಸಕ ದಿನೇಶ ಗೂಳಿಗೌಡ, ಶಾಸಕರಾದ ರವಿಕುಮಾರ್ ಗಣಿಗ, ಬಾಬು ಬಂಡಿಸಿದ್ದೇಗೌಡ, ಅಮೆರಿಕದ ಅಕ್ಕ ಸಂಸ್ಥೆಯ ಮಾಜಿ ಅಧ್ಯಕ್ಷ ಶಿವಮೂರ್ತಿ ಕಿಲಾರ ಮುಂತಾದವರು ನಿಯೋಗದಲ್ಲಿದ್ದು, ಸಿಎಂಗೆ ವಿವರಣೆ ನೀಡಿದರು.

    ಅಮೆರಿಕ ಹಾಲಿ ಅಧ್ಯಕ್ಷರಾದ ಜೋ ಬೈಡನ್ ಅವರ ವೈದ್ಯಕೀಯ ಸಲಹೆಗಾರ ಡಾ. ವಿವೇಕ್ ಮೂರ್ತಿ ಭಾರತೀಯ ಮೂಲದವರು. ಡಾ.ವಿವೇಕ ಮೂರ್ತಿ ಅಮೆರಿಕದ ಹಿಂದಿನ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೂ ವೈದ್ಯಕೀಯ ಸಲಹೆಗಾರರಾಗಿದ್ದರು. ಡಾ.ವಿವೇಕ್ ಮೂರ್ತಿ ಅವರ ತಂದೆ, ಅನಿವಾಸಿ ಭಾರತೀಯ ಡಾ. ಲಕ್ಷ್ಮಿನರಸಿಂಹ ಮೂರ್ತಿ (ಎಲ್.ಎನ್.ಮೂರ್ತಿ) ಅವರು ತಮ್ಮ ಮಾತೃಭೂಮಿಯ ಅಭ್ಯುದಯಕ್ಕೆ ಪಣ ತೊಟ್ಟಿದ್ದಾರೆ.‌ ಅವರ ಸ್ವಂತ ಊರು ಮಂಡ್ಯ ಜಿಲ್ಲೆಯ ಹಲ್ಲೆಗೆರೆಯಾಗಿದ್ದು, ಇಲ್ಲಿ 13 ಎಕರೆ ಪಿತ್ರಾರ್ಜಿತ ಜಮೀನಿದೆ. ಅದರಲ್ಲಿ ಭೂತಾಯಿ ಟ್ರಸ್ಟ್‌ನಿಂದ ಸುಮಾರು 80 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ‌ಮಟ್ಟದ ಯೋಗ ಮತ್ತು ಧ್ಯಾನ ಕೇಂದ್ರ ತೆರೆಯಲು ಯೋಜಿಸಿ, ಕಾರ್ಯಪ್ರವೃತ್ತರಾಗಿದ್ದಾರೆ. ಭೂತಾಯಿ ಟ್ರಸ್ಟ್‌ನಿಂದ ಮೂರ್ತಿ ಕುಟುಂಬವು ಮಹತ್ತರ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ. ಇದನ್ನೂ ಓದಿ: ರಾಜ್ಯ ಬಿಜೆಪಿಗೆ ಬಿಎಲ್ ಸಂತೋಷ್ ಟಾನಿಕ್ – ವಲಸಿಗರ ಪರ ಬ್ಯಾಟಿಂಗ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರೀ ಟೀಕೆಯ ಬಳಿಕ ಬಾಲಕನ ಬಳಿ ಕ್ಷಮೆ ಕೇಳಿದ ದಲೈ ಲಾಮಾ

    ಭಾರೀ ಟೀಕೆಯ ಬಳಿಕ ಬಾಲಕನ ಬಳಿ ಕ್ಷಮೆ ಕೇಳಿದ ದಲೈ ಲಾಮಾ

    ನವದೆಹಲಿ: ತನ್ನ ನಾಲಿಗೆಯನ್ನು ನೆಕ್ಕುವಂತೆ ಅಪ್ರಾಪ್ತ ಬಾಲಕನಿಗೆ (Boy) ಸೂಚಿಸಿ ಭಾರೀ ಟೀಕೆಗೆ ಒಳಗಾದ ಟಿಬೆಟಿಯನ್ ಆಧ್ಯಾತ್ಮ ನಾಯಕ ದಲೈ ಲಾಮಾ (Dalai Lama) ಇದೀಗ ಬಾಲಕ ಹಾಗೂ ಆತನ ಕುಟುಂಬದ ಬಳಿ ಕ್ಷಮೆ (Apology) ಕೇಳಿದ್ದಾರೆ.

    ದಲೈ ಲಾಮಾ ಅಪ್ರಾಪ್ತ ಬಾಲಕನೊಬ್ಬನಿಗೆ ತಮ್ಮ ನಾಲಿಗೆಗೆ ಮುತ್ತಿಟ್ಟು, ನೆಕ್ಕುವಂತೆ ಸೂಚಿಸಿದ್ದರು. ಇದರ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ ಭಾರೀ ಟೀಗೆಗೆ ಒಳಗಾಗಿದ್ದರು. ಇದೀಗ ಬೌದ್ಧ ಧರ್ಮ ಗುರು ತನ್ನ ವರ್ತನೆ ಹಾಗೂ ಮಾತುಗಳಿಂದ ಬಾಲಕ ಹಾಗೂ ಆತನ ಕುಟುಂಬಕ್ಕೆ ನೋವಾಗಿರಬಹುದು ಎಂದು ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.

    ವೀಡಿಯೋದಲ್ಲೇನಿದೆ?
    ಅಪ್ರಾಪ್ತ ಬಾಲಕನೊಬ್ಬ ದಲೈ ಲಾಮಾ ಅವರಿಗೆ ಗೌರವ ಸಲ್ಲಿಸಲು ತಲೆ ಬಾಗಿದ್ದಾನೆ. ಬಳಿಕ ದಲೈ ಲಾಮಾ ಬಾಲಕನಿಗೆ ತನ್ನ ಬಾಯಿಯನ್ನು ತೋರಿಸುತ್ತಾ ನಾಲಿಗೆಯನ್ನು ಹೊರ ಚಾಚಿದ್ದಾರೆ. ಈ ವೇಳೆ ಅವರು ನನ್ನ ನಾಲಿಗೆಯನ್ನು ನೆಕ್ಕುತ್ತೀಯಾ? ಎಂದು ಆತನ ಬಳಿ ಕೇಳಿರುವುದು ಕಂಡುಬಂದಿದೆ. ಬಳಿಕ ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿ ಭಾರೀ ಟೀಕೆಗೆ ದಲೈ ಲಾಮಾ ಗುರಿಯಾಗಿದ್ದಾರೆ. ಇದನ್ನೂ ಓದಿ: ಅಪ್ರಾಪ್ತ ಬಾಲಕನಿಗೆ ತನ್ನ ನಾಲಿಗೆ ನೆಕ್ಕುವಂತೆ ಸೂಚಿಸಿದ ದಲೈ ಲಾಮಾ – ಭಾರೀ ಟೀಕೆ

    ತನ್ನ ವಿವಾದಿತ ವರ್ತನೆ ಬಗ್ಗೆ ತಿಳಿಸಿದ ದಲೈ ಲಾಮಾ, ನಾನು ಭೇಟಿಯಾಗುವ ಜನ ಹಾಗೂ ಮಕ್ಕಳೊಂದಿಗೆ ಮುಗ್ಧ ರೀತಿಯಲ್ಲಿ ಮತ್ತು ತಮಾಷೆಗಾಗಿ ಈ ರೀತಿ ವರ್ತಿಸುತ್ತೇನೆ. ಆದರೆ ನನ್ನ ವರ್ತನೆಗೆ ಬಾಲಕ ಹಾಗೂ ಆತನ ಕುಟುಂಬಕ್ಕೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತದಂತೆ ನಾನು ರಷ್ಯಾದಿಂದ ಅಗ್ಗದ ಬೆಲೆಯಲ್ಲಿ ಕಚ್ಚಾ ತೈಲ ಖರೀದಿಗೆ ಮುಂದಾಗಿದ್ದೆ: ಇಮ್ರಾನ್ ಖಾನ್

  • ಅಪ್ರಾಪ್ತ ಬಾಲಕನಿಗೆ ತನ್ನ ನಾಲಿಗೆ ನೆಕ್ಕುವಂತೆ ಸೂಚಿಸಿದ ದಲೈ ಲಾಮಾ – ಭಾರೀ ಟೀಕೆ

    ಅಪ್ರಾಪ್ತ ಬಾಲಕನಿಗೆ ತನ್ನ ನಾಲಿಗೆ ನೆಕ್ಕುವಂತೆ ಸೂಚಿಸಿದ ದಲೈ ಲಾಮಾ – ಭಾರೀ ಟೀಕೆ

    ನವದೆಹಲಿ: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ (Dalai Lama) ಅವರಿಗೆ ಸಂಬಂಧಪಟ್ಟ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ದಲೈ ಲಾಮಾ ಅಪ್ರಾಪ್ತ ಬಾಲಕನೊಬ್ಬನಿಗೆ (Boy) ತಮ್ಮ ನಾಲಿಗೆಗೆ (Tongue) ಮುತ್ತಿಟ್ಟು ನೆಕ್ಕುವಂತೆ ಸೂಚಿಸಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

    ವೀಡಿಯೋದಲ್ಲಿ ಬಾಲಕನೊಬ್ಬ ದಲೈ ಲಾಮಾ ಅವರಿಗೆ ಗೌರವ ಸಲ್ಲಿಸಲು ತಲೆ ಬಾಗಿದ್ದಾನೆ. ಬಳಿಕ ದಲೈ ಲಾಮಾ ಬಾಲಕನಿಗೆ ತನ್ನ ಬಾಯಿಯನ್ನು ತೋರಿಸುತ್ತಾ ನಾಲಿಗೆಯನ್ನು ಹೊರ ಚಾಚಿದ್ದಾರೆ. ಈ ವೇಳೆ ಅವರು ನನ್ನ ನಾಲಿಗೆಯನ್ನು ನೆಕ್ಕುತ್ತೀಯಾ? ಎಂದು ಆತನ ಬಳಿ ಕೇಳಿರುವುದು ಕಂಡುಬಂದಿದೆ. ಇದನ್ನೂ ಓದಿ: ರಾಹುಲ್‌ ವಿರುದ್ಧ ಮಾನಹಾನಿ ಕೇಸ್‌ ದಾಖಲಿಸುತ್ತೇನೆ: ಅಸ್ಸಾಂ ಸಿಎಂ

     

    ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಕಂಡುಬಂದಿದ್ದೇ ತಡ. ಎಲ್ಲೆಡೆ ಬೌದ್ಧ ಧರ್ಮ ಗುರುವಿನ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಅಪ್ರಾಪ್ತ ಬಾಲಕನೊಂದಿಗೆ ದಲೈ ಲಾಮಾ ವರ್ತಿಸಿರುವ ರೀತಿಯನ್ನು ನೆಟ್ಟಿಗರು ಅಸಹ್ಯಕರ ಎಂದು ಕರೆದಿದ್ದಾರೆ.

    ದಲೈ ಲಾಮಾ ಸಾರ್ವಜನಿಕವಾಗಿ ಟೀಕೆಗೊಳಗಾಗಿರುವುದು ಇದೇ ಮೊದಲೇನಲ್ಲ. ಕೆಲ ವರ್ಷಗಳ ಹಿಂದೆ ಅವರು ತಮ್ಮ ಉತ್ತರಾಧಿಕಾರಿ ಮಹಿಳೆಯಾಗಬೇಕಿದ್ದರೆ ಅವರು ಅತ್ಯಂತ ಆಕರ್ಷಕವಾಗಿರಬೇಕು ಎಂದು ಹೇಳಿ ವಿವಾದವನ್ನು ಎಳೆದುಕೊಂಡಿದ್ದರು. ಈ ಹೇಳಿಕೆಯಿಂದ ಅವರು ವಿಶ್ವದಾದ್ಯಂತ ಭಾರೀ ಟೀಕೆಗೆ ಒಳಗಾಗಿದ್ದರು. ಇದನ್ನೂ ಓದಿ: 20ಕ್ಕೂ ಹೆಚ್ಚು ಬಿಜೆಪಿ ಶಾಸಕರಿಗೆ ಕೊಕ್‌ – ಲಿಸ್ಟ್‌ನಲ್ಲಿ ಯಾರಿದ್ದಾರೆ?

  • ಭಾರತ ಉತ್ತಮ ಸ್ಥಳ.. ನಾನು ಇಲ್ಲೇ ಇರಲು ಬಯಸುತ್ತೇನೆ: ದಲೈಲಾಮಾ

    ಭಾರತ ಉತ್ತಮ ಸ್ಥಳ.. ನಾನು ಇಲ್ಲೇ ಇರಲು ಬಯಸುತ್ತೇನೆ: ದಲೈಲಾಮಾ

    ನವದೆಹಲಿ: ಭಾರತ (India) ಉತ್ತಮ ಜಾಗವಾಗಿದ್ದು, ಇದು ನನ್ನ ಶಾಶ್ವತ ನಿವಾಸವಾಗಿದೆ. ಇದರಿಂದಾಗಿ ನಾವು ಭಾರತಕ್ಕೆ ಆದ್ಯತೆಯನ್ನು ನೀಡುತ್ತೇವೆ ಎಂದು ಟಿಬೆಟಿಯನ್ ಆಧ್ಯಾತ್ಮಿಕ ಗುರು ದಲೈಲಾಮಾ (Dalai Lama) ಹೇಳಿದರು.

    ಹಿಮಾಚಲ ಪ್ರದೇಶದ ಕಾಂಗ್ರಾ ವಿಮಾನ ನಿಲ್ದಾಣದಲ್ಲಿ ಚೀನಾ (China) ಘರ್ಷಣೆಯ ಕುರಿತು ಪ್ರತಿಕ್ರಿಯಿಸಿದ ಅವರು, ಯುರೋಪ್, ಆಫ್ರಿಕಾ ಮತ್ತು ಏಷ್ಯಾ ರಾಷ್ಟ್ರಗಳು ಸುಧಾರಣೆಗೊಳ್ಳುತ್ತಿವೆ. ಅದೇ ರೀತಿ ಚೀನಾವೂ ಹೊಂದಿಕೊಳ್ಳುತ್ತಿದೆ. ಆದರೆ ಚೀನಾಕ್ಕೆ ಹಿಂತಿರುಗಲು ಯಾವುದೇ ಅರ್ಥವಿಲ್ಲ. ನನಗೆ ಭಾರತವು ಉತ್ತಮ ಸ್ಥಳವಾಗಿದ್ದು, ಇದು ನನ್ನ ಶಾಶ್ವತ ನಿವಾಸವಾಗಿದೆ. ಇದಕ್ಕೆ ನಾನು ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದು ತಿಳಿಸಿದರು.

    ಡಿ. 9ರಂದು ಭಾರತ- ಚೀನಾ ಘರ್ಷಣೆ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದ್ದಾರೆ. ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದಲ್ಲಿ ತವಾಂಗ್‍ನ ವಾಸ್ತವಿಕ ನಿಯಂತ್ರಣ ರೇಖೆಯ ಬಳಿ ಚೀನಿಯರು ಭೂಸ್ವಾಧೀನಕ್ಕೆ ಯತ್ನಿಸಿದ್ದು, ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದರು. ಭಾರತೀಯ ಸೇನಾ ಕಮಾಂಡರ್‌ಗಳ ಸಮಯೋಚಿತ ಹಸ್ತಕ್ಷೇಪದಿಂದಾಗಿ ಚೀನಾ ಸೈನಿಕರು ತಮ್ಮ ಸ್ಥಾನಕ್ಕೆ ಮರಳಿದರು. ಅಲ್ಲದೇ ಸೇನಾ ಕಮಾಂಡರ್‌ಗಳ ಸಭೆಯಲ್ಲಿ ಗಡಿಯಲ್ಲಿ ಶಾಂತಿ ಕಾಪಾಡುವಂತೆ ಕೇಳಿಕೊಂಡರು.

    ಈ ಬಗ್ಗೆ ರಾಜ್ಯ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟನೆ ನೀಡಿದ್ದು, ಘಟನೆ ಸಂದರ್ಭದಲ್ಲಿ ಯಾವುದೇ ಸಾವು-ನೋವುಗಳಾಗಿಲ್ಲ. ಬದಲಿಗೆ ಕೆಲವು ಸೈನಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರಿಂದ ನಾಡದ್ರೋಹಿ ಘೋಷಣೆ – 20ಕ್ಕೂ ಹೆಚ್ಚು ಮಂದಿ ವಶ

    ದಲೈಲಾಮಾ ದೆಹಲಿಯಲ್ಲಿ 2-3 ದಿನಗಳ ಕಾಲ ಇರಲಿದ್ದು, ನಂತರ ಅವರು ಆಧ್ಯಾತ್ಮಿಕ ಬೋಧನೆಗಳು ಮತ್ತು ಇತರ ಕಾರ್ಯಕ್ರಮಗಳಿಗಾಗಿ ಬಿಹಾರದ ಬೋಧಗ್ಯಾಕ್ಕೆ ಹೋಗುತ್ತಾರೆ. ದೆಹಲಿಯಲ್ಲಿ ಕೆಲವು ಸಭೆಗಳು ಮತ್ತು ಕಾರ್ಯಕ್ರಮಗಳನ್ನು ಹೊರತುಪಡಿಸಿ, ದೆಹಲಿಯಲ್ಲಿ ಆರೋಗ್ಯ ತಪಾಸಣೆ ನಡೆಯಲಿದೆ. ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಒಡೆತನ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ

    Live Tv
    [brid partner=56869869 player=32851 video=960834 autoplay=true]

  • 3 ವರ್ಷಗಳ ನಂತರ ದಲೈಲಾಮಾ ದೆಹಲಿಗೆ ಭೇಟಿ

    3 ವರ್ಷಗಳ ನಂತರ ದಲೈಲಾಮಾ ದೆಹಲಿಗೆ ಭೇಟಿ

    ನವದೆಹಲಿ: ಸತತ 3 ವರ್ಷಗಳ ನಂತರ ಟಿಬೆಟ್‌ ಧರ್ಮಗುರು ದಲೈಲಾಮಾ ಅವರು ದೆಹಲಿ ಭೇಟಿ ನೀಡಲಿದ್ದಾರೆ.

    ಲಡಾಖ್‌ನಲ್ಲಿ ಒಂದು ತಿಂಗಳ ಕಾಲ ವಾಸ್ತವ್ಯದ ನಂತರ ದಲೈಲಾಮಾ ಅವರು ಶುಕ್ರವಾರ ದೆಹಲಿಗೆ ಭೇಟಿ ನೀಡಲಿದ್ದಾರೆ ಎಂದು ಲಡಾಖ್ ಬೌದ್ಧ ಸಂಘ ತಿಳಿಸಿದೆ. ರಾಜಕೀಯ ನಾಯಕರೊಂದಿಗೆ ದಲೈಲಾಮಾ ಅವರು ಸಭೆ ನಡೆಸುವ ಬಗ್ಗೆ ಯಾವುದೇ ಖಚಿತ ಮಾಹಿತಿಯಿಲ್ಲ. ಇದನ್ನೂ ಓದಿ: ಪ್ರವಾದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ- 3 ದಿನದೊಳಗೆ ಎರಡನೇ ಬಾರಿ ಅರೆಸ್ಟ್ ಆದ ಶಾಸಕ ರಾಜಾಸಿಂಗ್

    ಒಂದು ತಿಂಗಳು ವಾಸ್ತವ್ಯ ಹೂಡಿದ್ದ ಲಡಾಖ್‌ನಿಂದ ಆ.26ರಂದು ನಿರ್ಗಮಿಸಲಿದ್ದಾರೆ. ಲೇಹ್‌ನಿಂದ ವಿಮಾನದ ಮೂಲಕ ದೆಹಲಿಗೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಟಿಬೆಟಿಯನ್ನರು ಸಂಪೂರ್ಣ ಸ್ವಾತಂತ್ರ್ಯಕ್ಕಿಂತ ನಿಜವಾದ ಸ್ವಾಯತ್ತತೆಯನ್ನು ಬಯಸುತ್ತಿದ್ದಾರೆ. ಲಡಾಕಿಗಳು ಮತ್ತೊಮ್ಮೆ ಲಾಸಾಗೆ ಭೇಟಿ ನೀಡುವ ಸಂದರ್ಭ ಶೀಘ್ರವೇ ಒದಗಿ ಬರಲಿದೆ ಎಂದು ಈಚೆಗೆ ದಲೈಲಾಮಾ ಅವರು ವಿಶ್ವಾಸ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ನೊಟೀಸ್‍ನಿಂದ ಬೇಜಾರು ಆಗಿಲ್ಲ, ಭಯನೂ ಆಗಿಲ್ಲ, ನಾನು ಕರೆಕ್ಟಾಗಿ ಇದ್ದೀನಿ: ಕೆಜಿಎಫ್ ಬಾಬು

    ಟಿಬೆಟಿಯನ್ ಮಾತನಾಡುವ ಪ್ರದೇಶಗಳಲ್ಲಿ ನಮ್ಮ ಅಸ್ತಿತ್ವ, ಭಾಷೆ ಮತ್ತು ಶ್ರೀಮಂತ ಬೌದ್ಧ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಕಾಳಜಿ ಹೊಂದಿದ್ದೇವೆ ಎಂದು ಅಭಿಪ್ರಾಯಪಟ್ಟಿದ್ದರು.

    Live Tv
    [brid partner=56869869 player=32851 video=960834 autoplay=true]