Tag: dalith

  • ದೇವಸ್ಥಾನ ಪ್ರವೇಶ ವಿಚಾರಕ್ಕೆ ಹಲ್ಲೆ- ಕಲ್ಲು ತೂರಾಟ, ಬೈಕ್ ಜಖಂ, 30 ಮಂದಿ ವಿರುದ್ಧ ದೂರು

    ದೇವಸ್ಥಾನ ಪ್ರವೇಶ ವಿಚಾರಕ್ಕೆ ಹಲ್ಲೆ- ಕಲ್ಲು ತೂರಾಟ, ಬೈಕ್ ಜಖಂ, 30 ಮಂದಿ ವಿರುದ್ಧ ದೂರು

    ಹಾವೇರಿ: ದೇವಸ್ಥಾನ ಪ್ರವೇಶದ ಮಾಡಿದರೆಂಬ ಕಾರಣಕ್ಕೆ ದಲಿತ (Assault On Dalith at Haveri) ಸಮುದಾಯದ ತಾಯಿ-ಮಗನ ಮೇಲೆ ಸವರ್ಣಿಯರು ಹಲ್ಲೆ ಮಾಡಿದ ಘಟನೆ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿಯಲ್ಲಿ ನಡೆದಿದೆ. ಇದು ಇಷ್ಟಕ್ಕೆ ನಿಲ್ಲದೇ, ದಲಿತರ ಮನೆಗಳ ಮೇಲೆ ಕಲ್ಲು ತೂರಿ, ಬೈಕ್ ಜಖಂ ಮಾಡಿದ್ದಾರೆ. ಅಷ್ಟೇ ಅಲ್ಲದೇ ಮನೆಗಳಿಗೆ ಬೆಂಕಿ ಹಚ್ಚಲು ಮೇಲ್ವರ್ಗದ ಮಂದಿ ಪ್ರಯತ್ನಿಸಿದ್ದಾರೆ.

    ಬಸವೇಶ್ವರ ಜಾತ್ರೆ (Basaveshwara Jathre) ಯಲ್ಲಿ ದೇವರ ಮೆರವಣಿಗೆಯನ್ನ ಗ್ರಾಮದ ಪ್ರಮುಖ ಬೀದಿಯಲ್ಲಿ ಮಾಡಲಾಯಿತು. ಮೆರವಣಿಗೆಯಲ್ಲಿ ದಲಿತರು ಭಾಗವಹಿಸಿ ಮೇಲ್ದರ್ಜೆಯ ಜನರ ಜೊತೆಗೆ ಕುಣಿಯಲು ಹೋದಾಗ, ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಎರಡು ಸಮುದಾಯದವರು ದೊಣ್ಣೆ, ಕಲ್ಲು, ಬಡಿಗೆ ಹಿಡಿದುಕೊಂಡು ಬಡಿದಾಡಿಕೊಂಡಿದ್ದಾರೆ. ಗ್ರಾಮದ ಅಂಬೇಡ್ಕರ್ ಬ್ಯಾನರ್ ಹರಿದು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಪ್ರಕರಣ ಸಂಬಂಧ 30ಕ್ಕೂ ಅಧಿಕ ಮಂದಿ ವಿರುದ್ಧ ಕುಮಾರಪಟ್ಟಣಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಒಟ್ಟಿನಲ್ಲಿ 21ನೇ ಶತಮಾನದ ಈ ಕಾಲದಲ್ಲಿಯೂ ಸಹ, ಮೇಲು ಕೀಳು, ಆ ಜಾತಿ ಈ ಜಾತಿಯಂತೆ ಬಡಿದಾಡಿಕೊಳ್ಳುತ್ತಿದ್ದಾರೆ. 30ಕ್ಕೂ ಅಧಿಕ ಸರ್ವಣೀಯರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲಾಗಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ: ಮಲಮಿಶ್ರಿತ ನೀರು ಸೇವಿಸಿ ಮೂವರ ಸಾವು; 21 ದಿನ ಕಳೆದ್ರೂ ತಪ್ಪಿತಸ್ಥರ‌ ಮೇಲೆ ಇಲ್ಲ ಕ್ರಮ

     

  • ಉಡುಪಿಯಲ್ಲಿ ದಲಿತ್ Vs ಎಸ್‌ಡಿಪಿಐ ಜಟಾಪಟಿ

    ಉಡುಪಿಯಲ್ಲಿ ದಲಿತ್ Vs ಎಸ್‌ಡಿಪಿಐ ಜಟಾಪಟಿ

    ಉಡುಪಿ: ದಲಿತ ಸಮುದಾಯಕ್ಕೆ ಸೇರಿದ ಆರಾಧನಾ ಕ್ಷೇತ್ರದ ಅಭಿವೃದ್ಧಿ ಕೆಲಸಕ್ಕೆ ಮುಸ್ಲಿಂ ಸಮುದಾಯದವರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ದಲಿತ್ ವರ್ಸಸ್ SDPI ಜಟಾಪಟಿ ನಡೆಯುತ್ತಿದೆ.

    2

    ದಲಿತ ಸಮುದಾಯಕ್ಕೆ ಸೇರಿದ ಆರಾಧನಾ ಕ್ಷೇತ್ರವಾದ ಬಬ್ಬುಸ್ವಾಮಿ ಮೂಲ ಕ್ಷೇತ್ರದ ಅಭಿವೃದ್ಧಿ ಕೆಲಸಕ್ಕೆ ಸರ್ಕಾರಿ ಸ್ಥಳ ಮತ್ತು ರಸ್ತೆ ಸಂಚಾರಕ್ಕೆ ಅಡ್ಡಿಯಾಗುತ್ತದೆ ಎಂಬ ನೆಪವೊಡ್ಡಿ ಮುಸ್ಲಿಂ ಸಮುದಾಯದವರು ತಡೆಯೊಡ್ಡಿದ್ದಾರೆ. ಕಂಚಿನಡ್ಕ ಕ್ಷೇತ್ರಕ್ಕೆ ಮೇಲ್ಚಾವಣಿ ಅಳವಡಿಸಲು ವಿರೋಧ ವ್ಯಕ್ತಪಿಸಿದ್ದಾರೆ. ಇದರಿಂದಾಗಿ ನೂರಾರು ದಲಿತ ಕಾರ್ಯಕರ್ತರು ಎಸ್‌ಡಿಪಿಐಗೆ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

    UDP

    ತುಳುನಾಡಿನ ಕಾರಣಿಕದ ಬಬ್ಬುಸ್ವಾಮಿ ಕ್ಷೇತ್ರಕ್ಕೆ ಕಬ್ಬಿಣದ ಚಪ್ಪರ ಅಳವಡಿಸಿದರೆ ವಾಹನ ಸಂಚಾರಕ್ಕೆ ತೊಡಕಾಗುತ್ತದೆ ಎಂದು ಮುಸ್ಲಿಂ ಸಮುದಾಯದ ಜನರು ಅಡ್ಡಿಪಡಿಸಿದ್ದಾರೆ. ಇಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಎಸ್‌ಡಿಪಿಐ ಸಂಘಟನೆ ಸಹ ಇದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇದರಿಂದ ಬೇಸತ್ತ ದಲಿತ ಮುಖಂಡರು ಪಕ್ಷದಿಂದ ಹೊರಬಂದಿದ್ದಾರೆ. ಇದನ್ನೂ ಓದಿ: ತಾಯಿ ಹೀರಾಬೆನ್ ಸ್ಕೆಚ್‍ನ್ನು ಮೋದಿಗೆ ಉಡುಗೊರೆಯಾಗಿ ನೀಡಿದ ಮಹಿಳಾ ಅಭಿಮಾನಿ

    ಹಿಂದೂ ಸಂಘಟನೆಗಳು ಮೇಲ್ಛಾವಣಿ ಅಳವಡಿಸಲು ಬಿಜೆಪಿ ಅಧಿಕಾರದಲ್ಲಿರುವ ಪಡುಬಿದ್ರಿ ಗ್ರಾಮ ಪಂಚಾಯಿತಿಗೆ ಒಂದು ವಾರದ ಗಡುವು ನೀಡಿವೆ. ಈ ಪ್ರಕರಣವನ್ನು ಇತ್ಯರ್ಥಗೊಳಿಸದೇ ಇದ್ದರೆ ದೊಡ್ಡ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

  • ಗುರುಗಳ ಮೇಲಿನ ಅಭಿಮಾನದಿಂದ ಯಾರಾದ್ರೂ ಪ್ರತಿಭಟಿಸಿದ್ರೆ ಅದು ಅವರ ವೈಯಕ್ತಿಕ ವಿಚಾರ: ಪೇಜಾವರಶ್ರೀ

    ಗುರುಗಳ ಮೇಲಿನ ಅಭಿಮಾನದಿಂದ ಯಾರಾದ್ರೂ ಪ್ರತಿಭಟಿಸಿದ್ರೆ ಅದು ಅವರ ವೈಯಕ್ತಿಕ ವಿಚಾರ: ಪೇಜಾವರಶ್ರೀ

    ಉಡುಪಿ: ಗುರುಗಳ ಮೇಲಿರುವ ಅಭಿಮಾನದಿಂದ ಯಾರಾದರೂ ಪ್ರತಿಭಟಿಸಿದರೆ ಅದು ಅವರವರ ವೈಯಕ್ತಿಕ ವಿಚಾರ. ನಾವಂತೂ ಯಾವುದೇ ಪ್ರತಿಭಟನೆ ನಡೆಸುವುದಿಲ್ಲ ಎಂದು ಪೇಜಾವರ ಶ್ರೀ ಹೇಳಿದ್ದಾರೆ.

    ಹಂಸಲೇಖ ಟೀಕೆಗೆ ಉತ್ತರಿಸಿದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪದ್ಮವಿಭೂಷಣ ಪ್ರಶಸ್ತಿ ಬಂದಿರುವುದು ನನ್ನ ಗುರುಗಳಿಗೆ. ಹಂಸಲೇಖ ಅವರು ನನ್ನ ಗುರುಗಳನ್ನೇ ಟೀಕಿಸಿರಬೇಕು. ಇಂತಹ ಮಾತು ಹಂಸಲೇಖ ಬಾಯಿಂದ ಬರಬಾರದಿತ್ತು. ಸಮಾಜ ಅವರನ್ನು ಎತ್ತರದಲ್ಲಿ ಇರಿಸಿ ಗೌರವಿಸುತ್ತದೆ ಎಂದರು.

    ಪ್ರಚಾರಕ್ಕೋಸ್ಕರ ಸಾಕಷ್ಟು ಮಂದಿ ಹೀಗೆ ಮಾಡುತ್ತಾರೆ. ಹಂಸಲೇಖ ಅವರಿಗೆ ಇದರಿಂದ ಪ್ರಚಾರ ಬೇಕಾಗಿರಲಿಲ್ಲ. ಶ್ರೀ ಕೃಷ್ಣನಿಗೆ ಅಗ್ರಪೂಜೆ ನೀಡುವಾಗ ಶಿಶುಪಾಲನೂ ಇದೇ ರೀತಿ ವಿರೋಧಿಸಿದ್ದ. ಶಿಶುಪಾಲನಿಗೆ ಕೃಷ್ಣನೇ ತಕ್ಕಶಾಸ್ತಿ ಮಾಡಿದ್ದ. ನನ್ನ ಗುರುಗಳು ಸಮಾಜದ ಎಲ್ಲರ ಹೃದಯದಲ್ಲಿ ಕೃಷ್ಣನನ್ನು ಕಂಡವರು. ಆದ್ದರಿಂದಲೇ ಅವರು ದಲಿತರ ಕೇರಿಗೂ ಹೋಗುತ್ತಿದ್ದರು ಎಂದು ಹೇಳಿದರು. ಇದನ್ನೂ ಓದಿ: ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ?: ಕ್ಷಮೆ ಕೇಳಿದ ಹಂಸಲೇಖ

    ನೆರೆಹಾವಳಿ ಭೂಕಂಪ ಆದಾಗಲೂ ಭೇಟಿ ನೀಡುತ್ತಿದ್ದರು. ಸಮಾಜದ ಎಲ್ಲರ ಉದ್ಧಾರವನ್ನು ವಿಶ್ವೇಶತೀರ್ಥರು ಬಯಸಿದ್ದರು. ಗುರುಗಳು ಜನರ ಹೃದಯದಲ್ಲಿ ಯಾವ ಕೃಷ್ಣನನ್ನು ಕಂಡಿದ್ದರೋ ಆ ಕೃಷ್ಣನೇ ಅದಕ್ಕೆ ಬೇಕಾದ ಪ್ರತಿಕಾರ ಮಾಡುತ್ತಾನೆ. ನಮ್ಮ ಉದ್ದೇಶ ಪ್ರಾಮಾಣಿಕವಾಗಿದೆ. ಯಾರೋ ಏನೋ ಅಂದ ಮಾತ್ರಕ್ಕೆ ನಮ್ಮ ಕೆಲಸ ನಿಲ್ಲಿಸುವುದಿಲ್ಲ. ಯಾರ ಹೊಗಳಿಕೆಗೂ ನಾವು ಈ ಕೆಲಸವನ್ನು ಮಾಡಿದ್ದಲ್ಲ. ದಲಿತರ ಜೊತೆ ನಾವು ಇದ್ದೇವೆ ದಲಿತರು ನಮ್ಮಿಂದ ಹೊರತಲ್ಲ. ಈ ಐಕ್ಯ ಸಂದೇಶ ನೀಡುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ ಎಂದು ತಿರುಗೇಟು ನೀಡಿದರು.

  • ದಲಿತ ಯುವಕ ಮೇಲ್ವರ್ಗದವರ ಮುಂದೆ ಊಟ ಮಾಡಿದ್ದೇ ತಪ್ಪಾಯ್ತು!

    ದಲಿತ ಯುವಕ ಮೇಲ್ವರ್ಗದವರ ಮುಂದೆ ಊಟ ಮಾಡಿದ್ದೇ ತಪ್ಪಾಯ್ತು!

    ಡೆಹ್ರಾಡೂನ್: 23 ವರ್ಷದ ದಲಿತ ಯುವಕನೊಬ್ಬ ಮೇಲ್ವರ್ಗದ ಜನರ ಮುಂದೆ ಊಟ ಮಾಡಿ ತನ್ನ ಪ್ರಾಣವನ್ನೇ ಕಳೆದುಕೊಂಡ ಅಮಾನವೀಯ ಘಟನೆಯೊಂದು ಉತ್ತರಾಖಂಡ್ ನ ಥೆರಿ ಜಿಲ್ಲೆಯಲ್ಲಿ ನಡೆದಿದೆ.

    ಮೃತ ದುರ್ದೈವಿ ಯುವಕನನ್ನು ಜಿತೇಂದ್ರ ಎಂದು ಗುರುತಿಸಲಾಗಿದೆ. ಈ ಘಟನೆ ಏಪ್ರಿಲ್ 26ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಜೀತೆಂದ್ರ ಭಾನುವಾರ ಥೆರಿ ಜಿಲ್ಲೆಯ ಶ್ರಿಕೋಟ್ ಗ್ರಾಮದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮೇಲ್ವರ್ಗದವರ ಮುಂದೆ ಕುರ್ಚಿಯಲ್ಲಿ ಕುಳಿತುಕೊಂಡು ತನ್ನ ಪಾಡಿಗೆ ತಾನು ಊಟ ಮಾಡಿಕೊಂಡಿದ್ದನು. ಈ ವೇಳೆ ಏಳು ಮಂದಿ ಬಂದು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

    ಸದ್ಯ 7 ಮಂದಿ ಆರೋಪಿಗಳಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ. ಜಿತೇಂದ್ರ ಮೇಲ್ವರ್ಗದ ಜನರ ಮುಂದೆ ಕುಳಿತು ಊಟ ಮಾಡುತ್ತಿದ್ದುದರಿಂದ ತಾಳ್ಮೆ ಕಳೆದುಕೊಂಡು ಅವರು ಆತನಿಗೆ ಥಳಿಸಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗೆ ಹಿರಿಯ ಪೊಲೀಸ್ ಅಧಿಕಾರಿ ಉತ್ತಮ್ ಸಿಂಗ್ ಜಿಮ್ ವಾಲಾ ಹೇಳಿದ್ದಾರೆ.

    ಯುವಕನ ಮೇಲೆ ಹಲ್ಲೆ ನಡೆದ ಪರಿಣಾಮ ಗಂಭೀರ ಗಾಯಗೊಂಡು ಡೆಹ್ರಾಡೋನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಆದರೆ ಚಿಕಿತ್ಸೆ ಫಲಕಾರಿಯಾಗದೇ 9 ದಿನಗಳ ನಂತರ ಆತ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾನೆ ಎಂದು ಅವರು ವಿವರಿಸಿದ್ದಾರೆ.

    ಘಟನೆ ಸಂಬಂಧ ಮೃತನ ತಂಗಿ ನೀಡಿದ ದೂರಿನಂತೆ ಗಜೇಂದ್ರ ಸಿಂಗ್, ಸೊಬಾನ್ ಸಿಂಗ್, ಕುಶಲ್ ಸಿಂಗ್, ಗಬ್ಬರ್ ಸಿಂಗ್, ಗಂಭೀರ್ ಸಿಂಗ್, ಹರ್ಬಿರ್ ಸಿಂಗ್ ಹಾಗೂ ಹುಕುಮ್ ಸಿಂಗ್ ಎಂಬ 7 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂಬುದಾಗಿ ವರದಿಯಾಗಿದೆ.

  • ಹೈಕಮಾಂಡ್ ದಲಿತರನ್ನ ಸಿಎಂ ಮಾಡಿದ್ರೆ ನನ್ನದೇನೂ ತಕರಾರು ಇಲ್ಲ, ಬಿಟ್ಟು ಕೊಡೋದಕ್ಕೆ ಸಿದ್ಧ: ಸಿಎಂ

    ಹೈಕಮಾಂಡ್ ದಲಿತರನ್ನ ಸಿಎಂ ಮಾಡಿದ್ರೆ ನನ್ನದೇನೂ ತಕರಾರು ಇಲ್ಲ, ಬಿಟ್ಟು ಕೊಡೋದಕ್ಕೆ ಸಿದ್ಧ: ಸಿಎಂ

    ಮೈಸೂರು: ಹೈಕಮಾಂಡ್ ದಲಿತರನ್ನು ಸಿಎಂ ಮಾಡುತ್ತೇವೆ ಎನ್ನುವ ನಿರ್ಧಾರ ತೆಗೆದುಕೊಂಡ್ರೇ ತಗೊಳ್ಳಿ. ಇದ್ರಲ್ಲಿ ನನ್ನದೇನೂ ತಕರಾರು ಇಲ್ಲ. ಎಲ್ಲಾ ಹೈಕಮಾಂಡ್‍ಗೆ ಬಿಟ್ಟ ವಿಚಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಕಾಂಗ್ರೆಸ್‍ಗೆ ದಲಿತ ಸಿಎಂ ಕೂಗು ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಏನಾದ್ರೂ ದಲಿತ ಸಿಎಂ ಅಂತಾ ಕೇಳಿದ್ರೆ, ನಾನು ಬಿಟ್ಟು ಕೊಡಲು ಸಿದ್ಧ ಎಂದು ಉತ್ತರಿಸಿದ್ದಾರೆ.

    ಕರ್ನಾಟಕದ ಈ ಚುನಾವಣೆ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಲೋಕಸಭೆಗೂ ಮುನ್ನ ಎರಡು ರಾಜ್ಯದ ಚುನಾವಣೆ ಬರುತ್ತೆ. ಅಲ್ಲಿಯೂ ನಾವೇ ಗೆಲ್ಲುತ್ತೇವೆ. ಅದರ ಜೊತೆ ಲೋಕಸಭೆಯಲ್ಲಿಯೂ ನಾವೇ ಗೆಲ್ಲುತ್ತೇವೆ ಅಂತ ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ರು.

    ನಾನೂ ಬದುಕಿರುವವರೆಗೆ ಜಾತಿವಾದಿಗಳು, ಮತೀಯವಾದಿಗಳ ವಿರುದ್ಧ ಹೋರಾಟ ಮಾಡುತ್ತೇನೆ. ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದೇನೆ. ಚುನಾವಣಾ ರಾಜಕೀಯ ನನಗೆ ಸಾಕಾಗಿದೆ. ಆದ್ರೆ ಸಕ್ರೀಯ ರಾಜಕಾರಣದಲ್ಲಿ ಇರುತ್ತೇನೆ. ನನ್ನ ಜೊತೆಗಿರುವವರಿಗೆ ಬೆಂಬಲವಾಗಿ ಇರುತ್ತೇನೆ ಅಂದ್ರು.

    ಇದೇ ವೇಳೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬರುವುದು ಸ್ವಲ್ಪ ಮಟ್ಟಿನ ಸತ್ಯ. ಅದು ಪೂರ್ಣ ಪ್ರಮಾಣದ ಸತ್ಯ ಅಲ್ಲ ಅಂತ ಮತದಾನೋತ್ತರ ಸಮೀಕ್ಷೆ ಕುರಿತು ಸಿಎಂ ಅಚ್ಚರಿ ಹೇಳಿಕೆ ನೀಡಿದ್ದಾರೆ.

    ಚಾಮುಂಡೇಶ್ವರಿ ಚುನಾವಣೆಯಲ್ಲಿ ನನ್ನ ಗೆಲುವು ಖಚಿತ. ಆದ್ರೆ ಅಂತರ ಕಡಿಮೆಯಾಗಬಹುದು. ಜೆಡಿಎಸ್ ವಿಪರೀತ ಹಣ ಹಂಚಿದ್ರು. ಹಣದಿಂದಲೇ ಚುನಾವಣೆ ಗೆಲ್ಲುತ್ತೇವೆ ಎಂದು ಅವರು ಅಂದ್ಕೊಂಡಿದ್ದಾರೆ ಅದು ಸಾಧ್ಯವಿಲ್ಲ. ಅವರ ಹಣದಿಂದ ನನ್ನ ಗೆಲುವಿನ ಅಂತರ ಕಡಿಮೆಯಾಗಬಹುದು ಅಷ್ಟೇ ಅಂದ್ರು.

    ಒಟ್ಟಿನಲ್ಲಿ ಎಲೆಕ್ಷನ್ ಅಖಾಡದ ಕಾರ್ಯ ಮುಗಿಸಿ ಸಿಎಂ ಸಿದ್ದರಾಮಯ್ಯ ರಿಲ್ಯಾಕ್ಸ್ ಮೂಡ್‍ನಲ್ಲಿದ್ದಾರೆ. ಶನಿವಾರ ವೋಟ್ ಮಾಡಿದ ಬಳಿಕ ಮೈಸೂರಿನ ನಿವಾಸದಲ್ಲಿ ರಿಲ್ಯಾಕ್ಸ್ ಮೂಡ್‍ನಲ್ಲಿರುವ ಸಿಎಂ, ಟ್ವೀಟ್ ಮೇಲೆ ಟ್ವೀಟ್ ಮಾಡ್ತಿದ್ದಾರೆ. ಬೆಂಬಲಿಗರೇ, ಕಾರ್ಯಕರ್ತರೇ, ಹಿತೈಷಿಗಳೇ ನಿರಾಳರಾಗಿರಿ. ನಿಮಗೆ ಇನ್ನೆರಡು ದಿನಗಳ ಕಾಲ ಚುನಾವಣೋತ್ತರ ಸಮೀಕ್ಷೆ ಮನೋರಂಜನೆ ನೀಡಲಿದೆ. ಎಕ್ಸಿಟ್ ಪೋಲ್‍ಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ.. ಗೆಲ್ಲೋದು ನಾವೇ. ವೀಕೆಂಡ್‍ನ್ನು ಎಂಜಾಯ್ ಮಾಡಿ ಎಂದು ಟ್ವಿಟ್ಟರ್‍ನಲ್ಲಿ ಸಿಎಂ ಸಿದ್ದರಾಮಯ್ಯ ಸಂದೇಶ ನೀಡಿದ್ದಾರೆ. ಇದರೊಂದಿಗೆ 6+4+2= 4 ಅಂತ ಮಾರ್ಮಿಕವಾಗಿ ಮತ್ತೊಂದು ಟ್ವೀಟ್ ಮಾಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ತಮ್ಮ ಚುನಾವಣಾ ಪ್ರಚಾರ ಭಾಷಣದಲ್ಲಿ ಕಾಂಗ್ರೆಸ್ ದಲಿತರನ್ನು ಕಡೆಗಣಿಸುತ್ತಿದೆ. ಈ ಕಾರಣಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಹುದ್ದೆ ತಪ್ಪಿತ್ತು ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ ಬಿಎಸ್ ಯಡಿಯೂರಪ್ಪ ಬೆಂಗಳೂರಿನ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಮೂವರು ಒಟ್ಟಿಗೆ ಪ್ರಚಾರ ನಡೆಸಲಿ ನೋಡೋಣ ಎಂದು ಸವಾಲು ಎಸೆದಿದ್ದರು. ಮತಗಟ್ಟೆ ಸಮೀಕ್ಷೆಯಲ್ಲಿ ಕೆಲವು ಈ ಬಾರಿ ರಾಜ್ಯದ ಅತಂತ್ರ ಪರಿಸ್ಥಿತಿ ನಿರ್ಮಾಣವವಾಗಲಿದೆ ಎಂದು ಭವಿಷ್ಯ ನುಡಿದ ಬೆನ್ನಲ್ಲೇ ಸಿಎಂ ದಲಿತ ಸಿಎಂ ವಿಚಾರದ ಬಗ್ಗೆ ತಮ್ಮ ನಿಲುವನ್ನು ತಿಳಿಸಿದ್ದು ಈಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    https://www.youtube.com/watch?v=h_B_PDUG2Yk

    https://www.youtube.com/watch?v=pFR9WyP41KU

  • ಕುದುರೆಯೇರಿ ಸವಾರಿ ಹೊರಟಿದ್ದ ದಲಿತ ಯುವಕನ ಬರ್ಬರ ಹತ್ಯೆ!

    ಕುದುರೆಯೇರಿ ಸವಾರಿ ಹೊರಟಿದ್ದ ದಲಿತ ಯುವಕನ ಬರ್ಬರ ಹತ್ಯೆ!

    ಅಹಮದಾಬಾದ್: ಕುದುರೆ ಏರಿ ಸವಾರಿ ಹೊರಟಿದ್ದ ದಲಿತ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಆಘತಕಾರಿ ಘಟನೆಯೊಂದು ಗುಜರಾತಿನ ಭಾವ್ ನಗರ್ ಜಿಲ್ಲೆಯಲ್ಲಿ ನಡೆದಿದೆ.

    21 ವರ್ಷದ ಪ್ರದೀಪ್ ರಾಥೋಡ್ ಮೃತ ದುರ್ದೈವಿ ಯುವಕ. ಘಟನೆಗೆ ಸಂಬಂಧಿಸಿದಂತೆ ಗುರುವಾರ ಸಂಜೆ ಭಾವ್ ನಗರ್ ಜಿಲ್ಲೆಯ ಉಮ್ರಾಲ ತಾಲೂಕಿನ ಟಿಂಬಿ ಗ್ರಾಮದಲ್ಲಿ ಮೂವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿ ಎಎಂ ಸೈಯದ್ ತಿಳಿಸಿದ್ದಾರೆ.

    ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ. ಅಲ್ಲದೇ ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದೇವೆ. ಪ್ರದೀಪ್ ಶವಪತ್ತೆಯಾದ ಪ್ರದೇಶದಲ್ಲಿ ಸಾವಿಗೂ ಮುನ್ನ ಕುದುರೆ ಮೇಲೆ ಕುಳಿತು ಸವಾರಿ ನಡೆಸುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಘಟನೆ ಸಂಬಂಧ ಹಳೆ ದ್ವೇಷ ಹಾಗೂ ಪ್ರೀತಿ-ಪ್ರೇಮ ಹೀಗೆ ವಿವಿಧ ರೀತಿಯಲ್ಲಿ ತನಿಖೆ ನಡೆಸಲಾಗುವುದು ಅಂತ ಅವರು ತಿಳಿಸಿದ್ದಾರೆ.

    ಮಗನನ್ನು ಕಳೆದುಕೊಂಡ ತಂದೆ ಕುಲ್ ಭಾಯ್ ರಾಥೋಡ್ ಉಮ್ರಾಲ್ ಪೊಲೀಸರಿಗೆ ದೂರು ನೀಡಿದ್ದು, ನನ್ನ ಮಗ ಇತ್ತೀಚೆಗೆ ಕುದುರೆಯೊಂದನ್ನು ಖರೀದಿಸಿದ್ದನು. ಆ ಬಳಿಕ ಕೆಲ ಮೇಲ್ವರ್ಗದ ಜನ ಮಗನ ವಿರುದ್ಧ ಸೇಡು ತೀರಿಸಿಕೊಳ್ಳಲು ಹೊಂಚು ಹಾಕುತ್ತಿದ್ದರು. ಅಲ್ಲದೇ ಕುದುರೆ ಮಾರದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದರು ಎಂಬುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

    ಗುರುವಾರ ಮಗ ತನ್ನ ಕುದುರೆಯೊಂದಿಗೆ ಫಾರ್ಮ್ ಹೌಸ್ ಹೋಗಿದ್ದನು. ಬಳಿಕ ಸಂಜೆ ಅಲ್ಲಿಂದ ಕರೆ ಮಾಡಿ ರಾತ್ರಿಯ ಊಟಕ್ಕೆ ಮನೆಗೆ ಬರುತ್ತೇನೆ ಅಂತ ಹೇಳಿದ್ದನು. ಆದ್ರೆ ರಾತ್ರಿಯಾದ್ರೂ ಆತ ಮನೆಗೆ ಬರಲಿಲ್ಲ. ಹೀಗಾಗಿ ನಾವು ಆತನ ಹುಡುಕಾಟ ಶುರುಮಾಡಿದೆವು. ಈ ವೇಳೆ ಆತ ಫಾರ್ಮ್ ಹೌಸ್ ಗೆ ಹೋಗೋ ಮಾರ್ಗದ ಬದಿಯಲ್ಲೆ ಕೊಲೆಯಾಗಿ ಹೋಗಿದ್ದನು. ಕುದುರೆಯೊಂದಿಗೆ ತನ್ನ ಮನೆಗೆ ವಾಪಾಸ್ಸಾಗುತ್ತಿದ್ದ ಸಂದರ್ಭದಲ್ಲಿ ಕೆಲ ರಜಪೂತ ವ್ಯಕ್ತಿಗಳು ಹರಿತವಾದ ಆಯುಧಗಳನ್ನು ಬಳಸಿ ನನ್ನ ಮಗನನ್ನು ಕೊಲೆ ಮಾಡಿದ್ದಾರೆ ಅಂತ ಪ್ರದೀಪ್ ತಂದೆ ತಮ್ಮ ದುಃಖ ತೋಡಿಕೊಂಡಿದ್ದಾರೆ.

    ಘಟನೆಗೆ ಕಾರಣವಾದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವೆಂದಲ್ಲಿ ಮನಗ ಶವಸಂಸ್ಕಾರ ಮಾಡುವುದಿಲ್ಲ ಎಂದು ಪ್ರದೀಪ್ ಪೋಷಕರು ಹಾಗೂ ಕುಟುಂಬಸ್ಥರು ಆಗ್ರಹಿಸಿದ್ದಾರೆ.

  • ದೇಗುಲಕ್ಕೆ ದಲಿತರನ್ನು ತಡೆಯಲು ಪ್ಲಾನ್- ಸತ್ತೋಗ್ತೀರಾ ಅಂತ ಸವರ್ಣೀಯ ಮಹಿಳೆ ಬೆದರಿಕೆ

    ದೇಗುಲಕ್ಕೆ ದಲಿತರನ್ನು ತಡೆಯಲು ಪ್ಲಾನ್- ಸತ್ತೋಗ್ತೀರಾ ಅಂತ ಸವರ್ಣೀಯ ಮಹಿಳೆ ಬೆದರಿಕೆ

    ತುಮಕೂರು: ದೇವಸ್ಥಾನವೊಂದಕ್ಕೆ ದಲಿತರು ಪ್ರವೇಶ ಮಾಡಿದ್ದರಿಂದ ಕುಪಿತಗೊಂಡ ಸವರ್ಣಿಯ ಮಹಿಳೆ ತನ್ನ ಮೇಲೆ ದೇವರು ಬಂದಂತೆ ನಾಟಕವಾಡಿ ದಲಿತರಿಗೆ ಬೆದರಿಕೆ ಹಾಕಿದ ವಿಲಕ್ಷಣ ಘಟನೆ ನಡೆದಿದೆ.

    ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬಿಳಿದೇವಾಲಯದ ಕೆಂಕೇರಮ್ಮ ದೇವಸ್ಥಾನದಲ್ಲಿ ಈ ನಾಟಕೀಯ ಬೆಳವಣಿಗೆ ನಡೆದಿದೆ. ಬಿಳಿದೇವಾಲಯದ ಗ್ರಾಮದ ಸವರ್ಣೀಯರು ಸೇರಿದಂತೆ ದಲಿತರಿಂದ ವಂತಿಗೆ ಸಂಗ್ರಹಿಸಿ ಕೆಂಕೇರಮ್ಮನ ಜಾತ್ರೆ ಮಾಡುವುದು ಇಲ್ಲಿನ ವಾಡಿಕೆ. ಆದ್ರೆ ದಲಿತರು ವಂತಿಗೆ ಕೊಡಬೇಕೇ ಹೊರತು ದೇವಸ್ಥಾನದ ಒಳಕ್ಕೆ ಬರುವ ಹಾಗಿಲ್ಲ. ಇದನ್ನೂ ಓದಿ: ವಿಡಿಯೋ: ಶಾಲಾ ಮುಖ್ಯಸ್ಥೆಯ ಮೈಮೇಲೆ ಬಂತಂತೆ ಮಹಾಕಾಳಿ- ತ್ರಿಶೂಲ ಹಿಡಿದು ಅಧಿಕಾರಿಗಳಿಗೆ ಆಜ್ಞೆ

    ಭಾನುವಾರ ನಡೆದ ಜಾತ್ರೆಯಲ್ಲಿ ಪ್ರಜ್ಞಾವಂತ ಕೆಲ ದಲಿತ ಯುವಕರು ದೇವಸ್ಥಾನ ಪ್ರವೇಶ ಮಾಡಿದ್ರು. ಇನ್ನೂ ಕೆಲ ದಲಿತರು ಪ್ರವೇಶ ಮಾಡೋದಕ್ಕೆ ಸವರ್ಣೀಯ ಮುಖಂಡರು ಅಡ್ಡಿಪಡಿಸಿದ್ರು. ಪರಿಣಾಮ ಎರಡೂ ಸಮುದಾಯದ ನಡುವೆ ಮಾತಿನ ಚಕಮಕಿ ಉಂಟಾಯಿತು. ಈ ನಡುವೆ ಸವರ್ಣಿಯ ಮಹಿಳೆಯೋರ್ವಳು ಮೈ ಮೇಲೆ ದೇವರು ಬಂದ ನಾಟಕವಾಡಿ, ದಲಿತರು ದೇವಸ್ಥಾನ ಪ್ರವೇಶ ಮಾಡಿದ್ದೀರಾ..? ಇದರಿಂದ ದೇವಸ್ಥಾನ ಮೈಲಿಗೆ ಆಗಿದೆ. ನಿಮಗೆ ವಾಂತಿ ಭೇದಿ ಬಂದು ಸಾಯುತ್ತಿರಾ ಎಂದು ಬೆದರಿಸಿದ್ದಾಳೆ.

    ಸವರ್ಣೀಯ ಮಹಿಳೆಯ ಬೆದರಿಕೆಗೆ ಜಗ್ಗದೆ ದಲಿತರು ಸ್ಥಳದಲ್ಲಿ ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ.

  • ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‍ನಿಂದ ಧರ್ಮ ರಾಜಕಾರಣ?- ದಲಿತರಿಗೆ ಸಿಗದ ಜಾಗ ಕ್ರಿಶ್ಚಿಯನ್ ರಿಗೆ ಸಿಕ್ತು

    ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‍ನಿಂದ ಧರ್ಮ ರಾಜಕಾರಣ?- ದಲಿತರಿಗೆ ಸಿಗದ ಜಾಗ ಕ್ರಿಶ್ಚಿಯನ್ ರಿಗೆ ಸಿಕ್ತು

    ಬೆಂಗಳೂರು: ಚುನಾವಣೆ ಹತ್ತಿರ ಆಗುತ್ತಿದ್ದಂತೆಯೇ ಕಾಂಗ್ರೆಸ್ ಓಟ್ ಬ್ಯಾಂಕ್ ರಾಜಕಾರಣ ಶುರುಮಾಡಿದೆ. ರಾಜ್ಯ ಸರ್ಕಾರ ಬೆಂಗಳೂರಿನ ಯಲಹಂಕದ ಮೇಡಿ ಅಗ್ರಹಾರದ ಸರ್ವೇ ನಂಬರ್ 24ರಲ್ಲಿ ಎರಡು ಎಕರೆ ಗೋಮಾಳ ಜಮೀನನ್ನು ಕ್ರಿಶ್ಚಿಯನ್ನರ ಸ್ಮಶಾನಕ್ಕೆ ಅಂತ ಮಂಜೂರು ಮಾಡಿದೆ.

    2013 ರಿಂದಲೂ ದಲಿತರಿಗೆ ಮನೆ ಕಟ್ಟಿಕೊಳ್ಳಲು ಜಾಗವಿಲ್ಲ. ಹೀಗಾಗಿ ಜಾಗ ಕೊಡಿ ಅಂತ ದಲಿತ ಯುವಕರ ಸೇವಾದಳ ಮನವಿ ಸಲ್ಲಿಸಿದಾಗ, ನಮ್ಮ ಬಳಿ ಜಾಗವಿಲ್ಲ ಅಂತ ಉತ್ತರ ನೀಡಿದ್ದ ತಹಶೀಲ್ದಾರ್ ಈಗ ಸಂಸದ ವೀರಪ್ಪ ಮೊಯ್ಲಿ, ಬೆಂಗಳೂರು ಅಭಿವೃದ್ಧಿ ಸಚಿವ ಕೆಜೆ ಜಾರ್ಜ್, ಮುಖ್ಯ ಸಚೇತಕ ಐವಾನ್ ಡಿಸೋಜಾ ಪತ್ರ ಬರೆದ ಮೇಲೆ ಕ್ರಿಶ್ಚಿಯನ್ನರಿಗೆ ಜಮೀನು ಮಂಜೂರು ಮಾಡಿದ್ದಾರೆ.

    ಕ್ರಿಶ್ಚಿಯನ್ನರ ಸ್ಮಶಾನಕ್ಕೆ ಜಾಗ ಕೊಡಿ ಅಂತ 2017ರ ನವೆಂಬರ್ 11ರಂದು ಸಂಸದ ವೀರಪ್ಪ ಮೊಯ್ಲಿ, ಡಿಸೆಂಬರ್ 12ರಂದು ಮುಖ್ಯ ಸಚೇತಕ ಐವಾನ್ ಡಿಸೋಜ, 2018ರ ಫೆಬ್ರವರಿ 09ರಂದು ಸಚಿವ ಕೆಜೆ ಜಾರ್ಜ್ ಪತ್ರ ಬರೆದು ಒತ್ತಡ ಹೇರಿದ್ದರು. ಇವರ ಒತ್ತಡಕ್ಕೆ ಮಣಿದು ಜಿಲ್ಲಾಧಿಕಾರಿ ಶಂಕರ್ ಸೂಚನೆ ಮೇರೆಗೆ ತಹಶೀಲ್ದಾರ್ ಮಂಜುನಾಥ್ ಎರಡು ಎಕರೆ ಗೋಮಾಳ ಜಮೀನನ್ನು ಕ್ರಿಶ್ಚಿಯನ್ನರ ಸ್ಮಶಾನಕ್ಕೆ ಮಂಜೂರು ಮಾಡಿದ್ದಾರೆ ಎಂದು ತಿಳಿದುಬಂದಿದೆ.

  • ಕುಂದಾಪುರದಲ್ಲಿ ಸರ್ಕಾರದಿಂದ ಬಡವರ ಮನೆ ತೆರವು – ಬೀದಿಗೆ ಬಿತ್ತು ನೂರಾರು ದಲಿತ ಕುಟುಂಬ

    ಕುಂದಾಪುರದಲ್ಲಿ ಸರ್ಕಾರದಿಂದ ಬಡವರ ಮನೆ ತೆರವು – ಬೀದಿಗೆ ಬಿತ್ತು ನೂರಾರು ದಲಿತ ಕುಟುಂಬ

    ಉಡುಪಿ: ಸರ್ಕಾರಿ ಜಮೀನಿನಲ್ಲಿದ್ದ 150 ಮನೆಯನ್ನು ಏಕಾಏಕಿ ಸರ್ಕಾರ ತೆರವು ಮಾಡಿದೆ.

    ಕುಂದಾಪುರದ ಕಂದಾವರದಲದ 25 ಎಕರೆ ಜಮೀನಿನಲ್ಲಿ ಮನೆ ಕಟ್ಟಿಕೊಂಡಿದ್ದ 150 ದಲಿತರ, ಕಾರ್ಮಿಕರ ಮನೆಗಳನ್ನು ತಹಶೀಲ್ದಾರ್ ತೆರವು ಮಾಡಿಸಿದ್ದಾರೆ. ಮನೆಗಳು ಬೀಳುತ್ತಿದ್ದಂತೆ ಸಂತ್ರಸ್ತರು ಪ್ರತಿಭಟನೆ ಮಾಡಿದರು. ಆದ್ರೆ ಪೊಲೀಸರ ಭದ್ರತೆಯಲ್ಲಿ ತಹಶೀಲ್ದಾರ್ ಕಾರ್ಯಾಚರಣೆಗೆ ಬುಲ್ಡೋಜರ್ ಗಳ ಬೆಂಬಲ ಸಿಕ್ಕಿತು.

    ಮನಬಂದಂತೆ ಸರ್ಕಾರಿ ಅಧಿಕಾರಿಗಳು ಮನೆಗಳನ್ನು ಉರುಳಿಸಿದರು. ಸ್ವಂತ ಜಮೀನಿಲ್ಲದ ಕುಂದಾಪುರದ ನಿವಾಸಿಗಳು ಕೆಲ ತಿಂಗಳ ಹಿಂದೆ ಸರ್ಕಾರಿ ಜಮೀನಲ್ಲಿ ಗುಡಿಸಲು ಕಟ್ಟಿಕೊಂಡಿದ್ದರು. 25 ಎಕರೆ ಜಮೀನಿನಲ್ಲಿ ಕೊರಗ, ದಲಿತರು, ಹಿಂದುಳಿದವರೇ ಹೆಚ್ಚು. ಕೂಲಿ ಕಾರ್ಮಿಕರು ಕೂಡಾ ಗುಡಿಸಲು ಹಾಕಿ ಜೀವನ ಶುರು ಮಾಡಿದ್ದರು. ಸರ್ಕಾರದ ಕಾರ್ಯಾಚರಣೆಗೆ ತಡೆಯೊಡ್ಡಿದ 8 ಮಂದಿ ಸಂತ್ರಸ್ತರ ಬಂಧನ ಕೂಡಾ ಆಗಿದೆ.

    ಇತ್ತ ಮನೆ ಕಳೆದುಕೊಂಡವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಸಂತ್ರಸ್ಥರಿಗೆ ಸಿಪಿಎಂ ನಾಯಕರು ಬೆಂಬಲಿಸಿದರು. ಪೊಲೀಸರು ಸಂತ್ರಸ್ತರನ್ನು ಬಂಧಿಸಿ ಮಾನವ ಹಕ್ಕನ್ನು ಉಲ್ಲಂಘನೆ ಮಾಡಿದ್ದಾರೆ. ಬದುಕುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ ಎಂದು ಕಾರ್ಮಿಕ ಮುಖಂಡ ವೆಂಕಟೇಶ ಕೋಣಿ ಘಟನೆಯನ್ನು ಖಂಡಿಸಿದ್ದಾರೆ.

    ಸಂತ್ರಸ್ತೆ ವಿಮಲ ಕಂದಾವರ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ನಾವು ವಿಷ ಕುಡಿಯಬೇಕು ಅಂತ ಅಂದ್ರೆ ಅಧಿಕಾರಿಗಳೇ ಹೇಳಲಿ, ಕುಡಿದು ಸಾಯ್ತೇವೆ. ನಾವು ಸಾಲ ಮಾಡಿ ಸಿಮೆಂಟ್ ಬ್ಲಾಕ್ ತಂದು ಗುಡಿಸಲು ಕಟ್ಟಿದ್ದೇವೆ. ಏಕಾಏಕಿ ಈ ತರ ದಾಳಿ ಮಾಡಿದ್ದಾರೆ. ನಮ್ಮ ಕಣ್ಣೆದುರೇ ಮನೆಗಳ ನೆಲಸಮ ಮಾಡಿದ್ದಾರೆ. ಚಿಕ್ಕ-ಚಿಕ್ಕ ಮಕ್ಕಳು, ಮಹಿಳೆಯರು ಬೀದಿಗೆ ಬಂದಿದ್ದೇವೆ. ಜಿಲ್ಲಾಧಿಕಾರಿಗಳೇ, ಎಸ್‍ಪಿಯವರೇ ಇದಕ್ಕೆ ಉತ್ತರ ಕೊಡಬೇಕಾಗಿದೆ ಎಂದು ಕಣ್ಣೀರು ಹಾಕಿದ್ದಾರೆ.

     

  • ದಲಿತ ಕುಟುಂಬಗಳಿಗೆ ಅನ್ನಭಾಗ್ಯ ಅಕ್ಕಿ ರದ್ದು- ಸೊಪ್ಪು ತಿಂದು ಕೊರೆಯುವ ಚಳಿಯಲ್ಲೂ ಪ್ರತಿಭಟನೆ

    ದಲಿತ ಕುಟುಂಬಗಳಿಗೆ ಅನ್ನಭಾಗ್ಯ ಅಕ್ಕಿ ರದ್ದು- ಸೊಪ್ಪು ತಿಂದು ಕೊರೆಯುವ ಚಳಿಯಲ್ಲೂ ಪ್ರತಿಭಟನೆ

    ಚಿಕ್ಕಬಳ್ಳಾಪುರ: ಅನ್ನಭಾಗ್ಯದ ಅಕ್ಕಿಗಾಗಿ ದಲಿತ ಸಮುದಾಯದ ಜನ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

    ಗ್ರಾಮ ತೊರೆದು ಬಂದು ಸೊಪ್ಪು ಸೆದೆ ತಿನ್ನುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಚೌಡದೇನಹಳ್ಳಿಯ ದಲಿತರು ವಿನೂತನವಾಗಿ ಪ್ರತಿಭಟಿಸಿದ್ದಾರೆ.


    ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲ ಅಂತ ದಲಿತರಿಗೆ ಸಿಗಬೇಕಾದ ಪಡಿತರ ಚೀಟಿ ರದ್ದು ಪಡಿಸಲಾಗಿತ್ತು. ಹೀಗಾಗಿ ಅಲ್ಲಿನ ಗ್ರಾಮದ ಜನ ಕಳೆದ ಒಂದು ವರ್ಷದಿಂದ ಪಡಿತರ ಸಿಗದೆ ಪರದಾಡುತ್ತಿದ್ದಾರೆ.

    ಈ ಹಿನ್ನೆಲೆಯಲ್ಲಿ ಇದೀಗ ಗ್ರಾಮ ತೊರೆದು ಗ್ರಾಮದ ಹೊರವಲಯದಲ್ಲೇ ವಾಸ್ತವ್ಯ ಹೂಡಿ ಪ್ರತಿಭಟನೆ ಮಾಡಿದ್ದಾರೆ. ತಮಗೆ ಸಿಗಬೇಕಾದ ಸೌಲಭ್ಯಗಳು ಒದಗಿಸುವಂತೆ ಆಗ್ರಹಿಸಿ ಕಳೆದ ರಾತ್ರಿಯಿಡೀ ಕೊರೆಯುವ ಚಳಿಯನ್ನು ಲೆಕ್ಕಿಸದೇ ದಲಿತ ಕುಟುಂಬಗಳು ಪ್ರತಿಭಟನೆ ನಡೆಸಿವೆ.