Tag: Dalpathi Vijay

  • ಪೂಜಾ ಹೆಗ್ಡೆ ಅವಕಾಶ ಕಿತ್ತುಕೊಂಡ ರಶ್ಮಿಕಾ ಮಂದಣ್ಣ

    ಪೂಜಾ ಹೆಗ್ಡೆ ಅವಕಾಶ ಕಿತ್ತುಕೊಂಡ ರಶ್ಮಿಕಾ ಮಂದಣ್ಣ

    ಮಿಳಿನಲ್ಲಿ ನಂಬರ್ ಒನ್ ನಟಿ ಸ್ಥಾನಕ್ಕೆ ಇಬ್ಬರು ನಾಯಕಿಯರ ಪೈಪೋಟಿ ನಡೆದಿದೆ. ಇಬ್ಬರೂ ಕನ್ನಡದ ಮೂಲದವರು ಎನ್ನುವುದು ವಿಶೇಷ. ಕಳೆದ ವರ್ಷ ಈ ಇಬ್ಬರೂ ನಟಿಯರ ಸಿನಿಮಾಗಳು ಸಮಗತಿಯಲ್ಲಿ ಸಾಗಿದ್ದವು. ತಲಾ ಐದೈದು ಸಿನಿಮಾಗಳನ್ನು ಕೊಟ್ಟ ಹೆಗ್ಗಳಿಕೆಗೆ ಇವರು ಪಾತ್ರರಾದರು. ಒಂದೇ ಸಮಯದಲ್ಲೇ ಇಬ್ಬರೂ ಸಂಭಾವನೆಯನ್ನೂ ಹೆಚ್ಚಿಸಿಕೊಂಡರು. ಬಾಲಿವುಡ್ ಗೂ ಹೋಗಿ ಬಂದರು. ಹೀಗಾಗಿ ಇಬ್ಬರ ಮಧ್ಯ ಭಾರೀ ಪೈಪೋಟಿ ಎದುರಾಗಿದೆ. ಇದನ್ನೂ ಓದಿ : ಚಕ್ಡಾ ಎಕ್ಸ್ ಪ್ರೆಸ್ ಸಿನಿಮಾಗಾಗಿ ಅನುಷ್ಕಾ ಬೌಲಿಂಗ್ ಪ್ರಾಕ್ಟಿಸ್

    ಅಂದುಕೊಂಡಂತೆ ಆಗಿದ್ದರೆ ತಮಿಳಿನ ಖ್ಯಾತ ನಟ ದಳಪತಿ ವಿಜಯ್ ಅವರ ಇನ್ನೂ ಹೆಸರಿಡದ ಚಿತ್ರಕ್ಕೆ  (‘ದಳಪತಿ 66’) ಪೂಜಾ ಹೆಗ್ಡೆ ನಾಯಕಿ ಎನ್ನಲಾಗಿತ್ತು. ಈ ಮಧ್ಯೆ ಕಿಯಾರಾ ಹೆಸರು ಕೇಳಿ ಬಂದಿತ್ತು. ಪೂಜಾ ಅಥವಾ ಕಿಯಾರಾ ಅವರೇ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಾರೆ ಎಂದು ತಮಿಳು ಚಿತ್ರರಂಗ ಹೇಳಿತ್ತು. ಆದರೆ, ಇದೀಗ ಚಿತ್ರಣವೇ ಬದಲಾಗಿದೆ. ಈ ಇಬ್ಬರೂ ನಾಯಕಿಯರು ಅವಕಾಶವಂಚಿತರಾಗಿ ಅವರ ಸ್ಥಾನಕ್ಕೆ ರಶ್ಮಿಕಾ ಮಂದಣ್ಣ ಬಂದಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ : ಉಪೇಂದ್ರ ಸಿನಿಮಾದ ಹೊಸ ಪೋಸ್ಟರ್ ವಿಶ್ಲೇಷಣೆ: ಏನೇನೆಲ್ಲ ಇದೆ, ತಲೆ ಕೆಟ್ಟು ಹೋಗತ್ತೆ!

    ಈವರೆಗೂ ತಮಿಳಿನ ಸ್ಟಾರ್ ಗಳ ಜತೆಯೇ ಹೆಚ್ಚಾಗಿ ನಟಿಸಿರುವ ರಶ್ಮಿಕಾ, ಈವರೆಗೂ ದಳಪತಿ ವಿಜಯ್ ಅವರ ಜತೆ ನಟಿಸಿರಲಿಲ್ಲ. ಇದೇ ಮೊದಲ ಬಾರಿಗೆ ಈ ಜೋಡಿ ತೆರೆಯ ಮೇಲೆ ಕಾಣಿಸಿಕೊಳ್ಳಲಿದೆ. ತಮಿಳಿನ ಖ್ಯಾತ ನಿರ್ದೇಶಕ ವಂಶಿ ಪೈಡಿಪಲ್ಲಿ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ನಾಯಕಿಯ ಆಯ್ಕೆಯನ್ನು ಇನ್ನಷ್ಟ ಅಧಿಕೃತಗೊಳಿಸಬೇಕಿದೆ. ಇದನ್ನೂ ಓದಿ : ಯಾಕೆ ಆ ವಿಡಿಯೋ ಹಾಕಿದ್ರು ಮೀರಾ ಜಾಸ್ಮಿನ್? ಅಭಿಮಾನಿ ಅಳಲೇನು ಕೇಳಿ

    ಈಗಷ್ಟೇ ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿರುವ ರಶ್ಮಿಕಾ, ಇದೀಗ ತಮ್ಮದೇ ಆದ ಯೂ ಟ್ಯೂಬ್ ಚಾನೆಲ್ ವೊಂದನ್ನು ಶುರು ಮಾಡಿದ್ದಾರೆ. ಮೊದಲ ದಿನವೇ ತಮ್ಮ ‘ಎಕ್ಸ್’ಗಳ ಬಗ್ಗೆ ಏನೂ ಕೇಳಬೇಡಿ ಎಂದು ವಾರ್ನ್ ಕೂಡ ಮಾಡಿದ್ದಾರೆ.

  • ಮಾರ್ಚ್ ನಲ್ಲಿ ರಿಲೀಸ್ ಆಗಲಿರುವ ಬಿಗ್ ಬಜೆಟ್ ಸಿನಿಮಾಗಳಿಗೆ ಮತ್ತೆ ಸಂಕಷ್ಟ

    ಮಾರ್ಚ್ ನಲ್ಲಿ ರಿಲೀಸ್ ಆಗಲಿರುವ ಬಿಗ್ ಬಜೆಟ್ ಸಿನಿಮಾಗಳಿಗೆ ಮತ್ತೆ ಸಂಕಷ್ಟ

    ರಡೂವರೆ ವರ್ಷಗಳಿಂದ ಕೊರೋನಾ ಹಾವಳಿಗೆ ತತ್ತರಿಸಿರುವ ಭಾರತೀಯ ಸಿನಿಮಾ ರಂಗ, ಚೇತರಿಸಿಕೊಳ್ಳಲು ಇನ್ನೂ ಹರಸಾಹಸ ಪಡುತ್ತಿದೆ. ಅಷ್ಟರಲ್ಲಿ ಚಿತ್ರರಂಗಕ್ಕೆ ಕ್ರಿಕೆಟ್ ಎಂಬ ಗುಮ್ಮ ಎದುರಾಗಿದೆ. ಇದನ್ನೂ ಓದಿ : ವಿಕ್ರಾಂತ್ ರೋಣ 2 ಮುನ್ಸೂಚನೆ ಕೊಟ್ಟರಾ ಸುದೀಪ್?

    ಕೋವಿಡ್  ಕಾರಣದಿಂದಾಗಿ ಬಿಗ್ ಬಜೆಟ್ ನ ಸಾಕಷ್ಟು ಚಿತ್ರಗಳು ಮಾರ್ಚ್ ನಲ್ಲಿ ರಿಲೀಸ್ ಆಗಲು ಪ್ಲ್ಯಾನ್ ಆಗಿದ್ದವು. ಅದರಲ್ಲೂ ಮಾರ್ಚ್ ಎರಡನೇ ವಾರದ ನಂತರ ಕನ್ನಡದ ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’ ನಿಂದ ಶುರುವಾಗುತ್ತಿದ್ದ ಈ ಬಿಡುಗಡೆಯ ಜೈತ್ರ ಯಾತ್ರೆ ಕೆಜಿಎಫ್ 2, ತೆಲುಗಿನ ಆರ್.ಆರ್.ಆರ್, ರಾಧೆ ಶ್ಯಾಮ್, ದಳಪತಿ ವಿಜಯ್ ಅವರ ‘ಬೀಸ್ಟ್’, ಮೆಗಾ ಸ್ಟಾರ್ ಚಿರಂಜೀವಿ ಅವರ ‘ಆಚಾರ್ಯ’ ಸೇರಿದಂತೆ ಸಾಕಷ್ಟು ಚಿತ್ರಗಳು ಬಿಡುಗಡೆಗೆ ಸಜ್ಜಾಗಿದ್ದು. ಈಗ ಸರಿಯಾಗಿ ಥಿಯೇಟರ್ ಗೆ ಪೆಟ್ಟುಕೊಡುವಂತೆ ಮಾರ್ಚ್ 27 ರಿಂದ ಮೇ 28 ರವರೆಗೆ. ಬರೋಬ್ಬರು ಒಂದು ತಿಂಗಳ ಕಾಲ ಭಾರತದ ಹೆಸರಾಂತ ಐಪಿಎಲ್ ಪಂದ್ಯಾವಳಿ ಆರಂಭವಾಗಲಿವೆ. ಇದನ್ನೂ ಓದಿ : ಏನಾಯ್ತು ಅಮಿತಾಭ್ ಬಚ್ಚನ್ ಗೆ? ಆತಂಕದಲ್ಲಿ ಅಭಿಮಾನಿಗಳು

    ಒಂದು ತಿಂಗಳ ಕಾಲ ನಿರಂತರವಾಗಿ, ಅದರಲ್ಲೂ ವೀಕೆಂಡ್ ನಲ್ಲೂ ಈ ಕ್ರಿಕೆಟ್ ಹಾವಳಿ ಇರುವುದರಿಂದ, ಜನರು ಚಿತ್ರಮಂದಿರಗಳತ್ತ ಬರುವುದು ಅನುಮಾನ. ಈ ಹಿಂದೆಯೂ ಐಪಿಎಲ್ ಮತ್ತು ಸಾಕಷ್ಟು ಕ್ರಿಕೆಟ್ ಪಂದ್ಯಾವಳಿಗಳು ಸಿನಿಮಾಗಳ ಬಾಕ್ಸ್ ಆಫೀಸಿಗೆ ಭಾರೀ ಹೊಡೆತ ಕೊಟ್ಟಿವೆ. ಹಾಗಾಗಿ ಭಾರೀ ಬಜೆಟ್ ಚಿತ್ರಗಳನ್ನು ನಿರ್ಮಾಣ ಮಾಡಿರುವ ನಿರ್ಮಾಪಕರು, ಐಪಿಎಲ್ ಗೆ ಹಿಡಿಶಾಪ ಹಾಕುವಂತಹ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ : ಕಂಠೀರವ ಸ್ಟುಡಿಯೋ ಆವರಣದಲ್ಲಿ 14 ಅಡಿ ಎತ್ತರದ ಅಂಬರೀಶ್ ಪ್ರತಿಮೆ

    ಕೇವಲ ಸಿನಿಮಾಗಳಿಗೆ ಮಾತ್ರವಲ್ಲ, ಮನರಂಜನಾ ಮಾಧ್ಯಮಕ್ಕೂ ಐಪಿಎಲ್ ಸಾಕಷ್ಟು ತೊಂದರೆ ಮಾಡಿದೆ. ಹಾಗಾಗಿ ಈ ವೇಳೆಯಲ್ಲಿ ಹೊಸ ಧಾರಾವಾಹಿಗಳಾಗಲಿ, ಹೊಸ ಹೊಸ ಶೋಗಳಾಗಲಿ ಪ್ರಾರಂಭವಾಗುತ್ತಿಲ್ಲ. ಐಪಿಎಲ್ ನಂತರವೇ ಹೊಸ ಹೊಸ ಕಾರ್ಯಕ್ರಮಗಳಿಗೆ ಪ್ಲ್ಯಾನ್ ಮಾಡಲಿವೆಯಂತೆ ಮನರಂಜನಾ ವಾಹಿನಿಗಳು.

    ಅದ್ಧೂರಿ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಚಿತ್ರಗಳ ನಿರ್ಮಾಪಕರು ಐಪಿಎಲ್ ಎದುರು ಹಾಕಿಕೊಂಡು ಸಿನಿಮಾ ಬಿಡುಗಡೆ ಮಾಡಬಹುದಾ? ಅಥವಾ ಐಪಿಎಲ್ ನಂತರ ರಿಲೀಸ್ ಮಾಡಬೇಕಾ ಎನ್ನುವ ಗೊಂದಲದಲ್ಲಿದ್ದಾರೆ. ಒಂದು ವೇಳೆ ಸಿನಿಮಾಗಳನ್ನು ಮುಂದು ಹಾಕಿದರೆ, ಅದರಿಂದ ಬೇರೆ ಬೇರೆ ರೀತಿಯಲ್ಲಿ ನಿರ್ಮಾಪಕರಿಗೆ ತೊಂದರೆ ಆಗಲಿದೆ. ಹಾಗಾಗಿ ಬಹುತೇಕ ಭಾರತೀಯ ಸಿನಿಮಾ ರಂಗಕ್ಕೆ ಆಘಾತಕ್ಕೆ ಒಳಗಾಗಿದೆ.