Tag: Daly

  • ಡಾಲಿ ಧನಂಜಯ ಹುಟ್ಟು ಹಬ್ಬಕ್ಕೆ ‘ಉತ್ತರಕಾಂಡ’ ಸಿನಿಮಾದ ಖದರ್ ಲುಕ್

    ಡಾಲಿ ಧನಂಜಯ ಹುಟ್ಟು ಹಬ್ಬಕ್ಕೆ ‘ಉತ್ತರಕಾಂಡ’ ಸಿನಿಮಾದ ಖದರ್ ಲುಕ್

    ವಿಜಯ್ ಕಿರಗಂದೂರು ಅರ್ಪಿಸುವ,ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ.  ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು. ಇದೇ ಕಾಂಬಿನೇಶನ್ ನಲ್ಲಿ “ಹೊಯ್ಸಳ” ಚಿತ್ರ ಸಹ ಬರುತ್ತಿದ್ದು, ಮೂರನೇ ಚಿತ್ರವಾಗಿ “ಉತ್ತರಕಾಂಡ” ನಿರ್ಮಾಣವಾಗಲಿದೆ.

    “ದಯವಿಟ್ಟು ಗಮನಿಸಿ”, ” ರತ್ನನ ಪ್ರಪಂಚ” ದಂತಹ ವಿಭಿನ್ನ ಚಿತ್ರಗಳ ನಿರ್ದೇಶಕ ರೋಹಿತ್ ಪದಕಿ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಕೆಲವು ದಿನಗಳ ಹಿಂದೆ ಈ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಆದರೆ ನಾಯಕ ಯಾರು ? ಎಂಬ ಕುತೂಹಲವಿತ್ತು‌. ಆ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಧನಂಜಯ ಅವರ ಹುಟ್ಟುಹಬ್ಬದ ದಿನದಂದೇ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಈ ಸುದ್ದಿಯನ್ನು ಹಂಚಿಕೊಂಡು, ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಇದನ್ನೂ ಓದಿ:ಮೂರನೇ ವಾರ ನಾಮಿನೇಷನ್‌ ಸ್ಟಾರ್ಟ್‌: ಉದಯ್‌ ಸೂರ್ಯಗೆ ಮನೆಯಿಂದ ಗೇಟ್‌ ಪಾಸ್?

    “ಉತ್ತರ ಕಾಂಡ” ಉತ್ತರ ಕರ್ನಾಟಕದ ಗ್ಯಾಂಗ್ ಸ್ಟರ್ ಕಥೆ ಆಧರಿಸಿದೆ.‌ ಉತ್ತರ ಕರ್ನಾಟಕದಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆಯುತ್ತದೆ. “ಹೊಯ್ಸಳ” ಚಿತ್ರದ ನಂತರ, ಜನವರಿಯಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗುತ್ತದೆ ಎಂದು ನಿರ್ದೇಶಕ ರೋಹಿತ್   ತಿಳಿಸಿದ್ದಾರೆ. ಚರಣ್ ರಾಜ್ “ಉತ್ತರ ಕಾಂಡ” ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಸ್ವಾಮಿ  ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್  ಸಂಕಲನ ಹಾಗೂ ವಿಶ್ವಾಸ್ ಅವರ ಕಲಾ ನಿರ್ದೇಶನವಿರುತ್ತದೆ.

    Live Tv
    [brid partner=56869869 player=32851 video=960834 autoplay=true]

  • ನಟ ಧನಂಜಯ್ ರಾಜಕೀಯ ಪ್ರವೇಶ: ನಡೀರಿ ಏನಾರ ಒಂದಿಷ್ಟು ಒಳ್ಳೆ ಕೆಲಸ ಮಾಡೋಣ ಅಂದ ಡಾಲಿ

    ನಟ ಧನಂಜಯ್ ರಾಜಕೀಯ ಪ್ರವೇಶ: ನಡೀರಿ ಏನಾರ ಒಂದಿಷ್ಟು ಒಳ್ಳೆ ಕೆಲಸ ಮಾಡೋಣ ಅಂದ ಡಾಲಿ

    ನಿನ್ನೆಯಿಂದ ನಟ ಡಾಲಿ ಧನಂಜಯ್ ರಾಜಕೀಯ ಪ್ರವೇಶ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಅದರಲ್ಲೂ ಅರಸಿಕೆರೆ ಶಿವಲಿಂಗೇಗೌಡರ ಬದಲಿಗೆ ಜೆ.ಡಿ.ಎಸ್ ಪಕ್ಷವು ಡಾಲಿ ಧನಂಜಯ್ ಅವರನ್ನು ಸ್ಪರ್ಧಾ ಕಣಕ್ಕೆ ಇಳಿಸಲಾಗುತ್ತಿದೆ ಎಂದು ಸುದ್ದಿಯಾಗಿತ್ತು. ನಟನೆಯಲ್ಲಿ ಸಿಕ್ಕಾಪಟ್ಟೆ ಬ್ಯುಸಿ ಇರುವಾಗ ಡಾಲಿಗೆ ರಾಜಕೀಯ ಬೇಕಿತ್ತಾ ಎಂದೂ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದರು. ಈ ಎಲ್ಲದರ ಕುರಿತು ಡಾಲಿ ಧನಂಜಯ್ ಪಬ್ಲಿಕ್ ಟಿವಿ ಡಿಜಿಟಲ್ ಜತೆ ಮಾತನಾಡಿದ್ದಾರೆ. ಇದನ್ನೂ ಓದಿ : ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ತಗೆದುಕೊಂಡು ಹೋದ ಮೊದಲಿಗರಾರು? ಹೀಗಿದೆ ನಟ ಜಗ್ಗೇಶ್ ಉತ್ತರ

    ‘ನಾನು ರಾಜಕೀಯ ಸೇರುತ್ತೇನೆ ಎಂದು ಯಾರಿಗೂ ಹೇಳಿಲ್ಲ. ಯಾವತ್ತೂ ಯೋಚಿಸಿಲ್ಲ. ಹೀಗೆ ಗೆಳೆಯರು ಸುದ್ದಿಯನ್ನು ಕಳುಹಿಸಿದ ಮೇಲೆ ನನಗೂ ಗೊತ್ತಾಯಿತು. ನಾನು ಶೂಟಿಂಗ್ ನಲ್ಲಿ ಇದ್ದೇನೆ. ರಾಜಕೀಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಕಲಾವಿದನಾಗಿ ಜನರು, ಅಭಿಮಾನಿಗಳು ನನ್ನನ್ನು ಸ್ವೀಕರಿಸಿದ್ದಾರೆ. ಅಭಿಮಾನಿ ದೇವರುಗಳನ್ನು ರಂಜಿಸುವುದಷ್ಟೇ ನನ್ನ ಕೆಲಸ. ರಾಜಕೀಯಕ್ಕೆ ಸೇರುತ್ತೇನೆ ಎನ್ನುವುದು ಸುಳ್ಳು ಸುದ್ದಿ’ ಎಂದಿದ್ದಾರೆ ಡಾಲಿ. ಇದನ್ನೂ ಓದಿ :  ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನ ವಿರುದ್ಧ ಕಿಡಿಕಾರಿದ ಸಿಖ್ ಸಂಘ

    ಈ ಕುರಿತು ಅವರು ಫೇಸ್ ಬುಕ್ ನಲ್ಲೂ ಬರೆದುಕೊಂಡಿದ್ದು, ‘ಸುಮ್ನೆ ಏನೇನೊ ಸುದ್ದಿ ಬರೆಯೋದು, ತೋರಿಸೋದು, ಕೇಳೋದು, ನೋಡೋದು, ನಂಬೋದು ಎಲ್ಲ ಬಿಟ್ಟು ನಡೀರಿ ಏನಾರ ಒಂದಿಷ್ಟು ಒಳ್ಳೆಯ ಕೆಲಸ ಮಾಡೋಣ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ : ನಟಿ ಮಂದನಾ ಕರೀಮಿಗೆ ಮೋಸ ಮಾಡಿದ್ರಾ ನಿರ್ದೇಶಕ ಅನುರಾಗ್ ಕಶ್ಯಪ್?

    ಮೊನ್ನೆಯಷ್ಟೇ ಜಮಾಲಿಗುಡ್ಡ ಸಿನಿಮಾದ ಶೂಟಿಂಗ್ ಮುಗಿಸಿರುವ ಡಾಲಿ, ಇದೀಗ ಹೊಯ್ಸಳ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೇ, ಇನ್ನೂ ಹಲವು ಚಿತ್ರಗಳಿಗೆ ಸಹಿ ಮಾಡಿದ್ದಾರೆ. ಹೀಗಾಗಿ ರಾಜಕೀಯ ಸೇರುವುದು ಕನಸಿನಲ್ಲೂ ಸಾಧ್ಯವಿಲ್ಲ ಎಂದಿದ್ದಾರೆ ಡಾಲಿ .