Tag: dam

  • 1 ವರ್ಷದಲ್ಲಿ 3 ಬಾರಿ ಭರ್ತಿ – ದಾಖಲೆ ಬರೆದ ಕೆಆರ್‌ಎಸ್ ಡ್ಯಾಂ

    1 ವರ್ಷದಲ್ಲಿ 3 ಬಾರಿ ಭರ್ತಿ – ದಾಖಲೆ ಬರೆದ ಕೆಆರ್‌ಎಸ್ ಡ್ಯಾಂ

    ಮಂಡ್ಯ: 1 ವರ್ಷದ ಅವಧಿಯಲ್ಲಿ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯ (KRS Dam) 3 ಬಾರಿ ಭರ್ತಿಯಾಗುವ ಮೂಲಕ ದಾಖಲೆ ಬರೆದಿದೆ.

    ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಕಾರಣ ಕೆಆರ್‌ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣ ಕಳೆದ 4-5 ದಿನಗಳಿಂದ ಹೆಚ್ಚಳವಾಗಿದೆ. ಹೀಗಾಗಿ ಕೆಆರ್‌ಎಸ್ ಜಲಾಶಯ ಈ ವರ್ಷ 3ನೇ ಬಾರಿಗೆ ಭರ್ತಿಯಾಗಿದೆ.

    ಈ ವರ್ಷ ಜುಲೈ, ಸೆಪ್ಟೆಂಬರ್ ಹಾಗೂ ಇದೀಗ ಅಕ್ಟೋಬರ್ ತಿಂಗಳಿನಲ್ಲಿ ಕೆಆರ್‌ಎಸ್ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ. ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿರುವುದು ಹಳೆ ಮೈಸೂರು ಭಾಗದ ಜನರಲ್ಲಿ ಹಾಗೂ ಮಂಡ್ಯದ ರೈತರಲ್ಲಿ ಮಂದಹಾಸ ಮೂಡಿಸಿದೆ. ಇದನ್ನೂ ಓದಿ: ಉಗ್ರರನ್ನು ಮಟ್ಟ ಹಾಕಲು ಉತ್ತರ ಭಾರತದ ಹಲವೆಡೆ NIA ರೇಡ್

    krs dam

    124.80 ಗರಿಷ್ಠ ಅಡಿಗಳಿರುವ ಕೆಆರ್‌ಎಸ್ ಡ್ಯಾಂ ಅಷ್ಟೇ ಅಡಿಗಳಷ್ಟು ತುಂಬಿ ಭರ್ತಿಯಾಗಿದೆ. ಒಳಹರಿವಿನ ಪ್ರಮಾ 36,733 ಕ್ಯೂಸೆಕ್ ಇದ್ದು, ಹೊರ ಹರಿವಿನ ಪ್ರಮಾಣ 33,633 ಕ್ಯೂಸೆಕ್ ಇದೆ. ಕೆಆರ್‌ಎಸ್ ಡ್ಯಾಂ 49.452 ಟಿಎಂಸಿ ಗರಿಷ್ಠ ಸಂಗ್ರಹದ ಸಾಮರ್ಥ್ಯವಿದ್ದು, ಸಂಪೂರ್ಣವಾಗಿ 49.452 ಟಿಎಂಸಿ ನೀರು ಭರ್ತಿಯಾಗಿದೆ. ಇದನ್ನೂ ಓದಿ: ಸರ್ಕಾರಿ ನೌಕರನಿಗೆ ಕಪಾಳಮೋಕ್ಷ ಮಾಡಿದ ಹಾಸನ ಎಸಿ

    Live Tv
    [brid partner=56869869 player=32851 video=960834 autoplay=true]

  • 3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್ – ಪ್ರವಾಹದ ಭೀತಿ

    3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್ – ಪ್ರವಾಹದ ಭೀತಿ

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂಗೆ ಅಪಾರ ಪ್ರಮಾಣದಲ್ಲಿ ನೀರು ಬರುತ್ತಿದೆ. ಈ ಹಿನ್ನೆಲೆ 3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಇದರಿಂದ ಪ್ರವಾಹದ ಭೀತಿ ಎದುರಾಗಿದೆ.

    ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಬಿಟ್ಟಿರುವ ಕಾರಣ ಕಾವೇರಿ ಕೊಳ್ಳದ ಜನರು ಪ್ರವಾಹದ ಭೀತಿಯನ್ನು ಎದುರಿಸುವ ಸ್ಥಿತಿ ಬಂದೊದಗಿದೆ. ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ, ಕಾರೇಕುರ, ಮಜ್ಜಿಗೆ ಪುರ, ಬಲಮುರಿ, ಹೊಂಗಹಳ್ಳಿ, ಪಾಲಹಳ್ಳಿ, ಶ್ರೀರಂಗಪಟ್ಟಣ, ಎಣ್ಣೆಹೊಳೆ ಕೊಪ್ಪಲು, ರಾಮಪುರ, ಮೇಳಾಪುರ, ಚಂದಗಾಲು, ಹಂಗರಹಳ್ಳಿ, ಮರಳಗಾಲ, ದೊಡ್ಡಪಾಳ್ಯ, ಚಿಕ್ಕಪಾಳ್ಯ, ಮಹದೇವಪುರ ಸೇರಿದಂತೆ 40ಕ್ಕೂ ಅಧಿಕ ಗ್ರಾಮಗಳ ಜಮೀನುಗಳು ಜಲಾವೃತವಾಗಿವೆ. ಇದನ್ನೂ ಓದಿ: ಪಾಕಿಸ್ತಾನಿ ಸಹೋದರಿಯಿಂದ ಮೋದಿಗೆ ಬಂತು ರಕ್ಷಾ ಬಂಧನ – 2024ರ ಚುನಾವಣೆಗೆ ಹಾರೈಕೆ

    ರಂಗನತಿಟ್ಟು ಪಕ್ಷಿಧಾಮ, ಪಶ್ಚಿಮ ವಾಹಿನಿ, ಗೋಸಾಯ್ ಘಾಟ್, ಬಿಜಿ ಹೊಳೆ ಸಮೀಪದ ದೇವಸ್ಥಾನಗಳು, ನಿಮಿಷಾಂಭ ದೇವಸ್ಥಾನದ ಸ್ನಾನಘಟ್ಟಗಳು ಜಲಾವೃತವಾಗಿವೆ. ಇದಲ್ಲದೇ ಶ್ರೀರಂಗಪಟ್ಟಣದ ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಮುಳುಗಡೆಯ ಅಂಚಿಗೆ ಬಂದಿದೆ. 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಬರುತ್ತಿರುವ ಕಾರಣ 200 ವರ್ಷಗಳ ಇತಿಹಾಸವಿರುವ ವೆಲ್ಲೆಸ್ಲಿ ಸೇತುವೆ ಅಪಾಯದ ಅಂಚಿನಲ್ಲಿದೆ. ಹೀಗಾಗಿ ವೆಲ್ಲೆಸ್ಲಿ ಸೇತುವೆ ಮೇಲೆ ಸಂಚಾರ ಬಂದ್ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಇಂದು 1,837 ಮಂದಿಗೆ ಕೊರೊನಾ ಸೋಂಕು – 4 ಸಾವು

    ಕಾವೇರಿ ನದಿ ಪಾತ್ರದ ಎಲ್ಲಾ ಪ್ರವಾಸಿ ಸ್ಥಳಗಳು ಬಂದ್ ಆಗಿದ್ದು, ನದಿಯಿಂದ 1 ಕಿ.ಮೀ ವ್ಯಾಪ್ತಿಯ ವರೆಗೆ ನಿಷೇಧ ಹೇರಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಫಸ್ಟ್‌ ಟೈಂ ಬಯಲುಸೀಮೆ ಕೋಲಾರದ ಏಕೈಕ ಜಲಾಶಯ ಯರಗೋಳ್ ಡ್ಯಾಂ ಭರ್ತಿ

    ಫಸ್ಟ್‌ ಟೈಂ ಬಯಲುಸೀಮೆ ಕೋಲಾರದ ಏಕೈಕ ಜಲಾಶಯ ಯರಗೋಳ್ ಡ್ಯಾಂ ಭರ್ತಿ

    ಕೋಲಾರ: ಕಳೆದ ಐದು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಇದೇ ಮೊದಲ ಬಾರಿಗೆ ಯರಗೋಳ ಡ್ಯಾಂ ಭರ್ತಿಯಾಗಿದೆ.

    ಬಂಗಾರಪೇಟೆ ತಾಲೂಕಿನ ಯರಗೋಳ ಡ್ಯಾಂ, ಸುಮಾರು 100 ಅಡಿ ಎತ್ತರವಿದ್ದು ಈಗ ಸಂಪೂರ್ಣ ಭರ್ತಿಯಾಗಿದೆ. ಬಯಲುಸೀಮೆ ಏಕೈಕ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಡ್ಯಾಂ ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಸ್ಥರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.

    ಕೋಲಾರ, ಬಂಗಾರಪೇಟೆ, ಮಾಲೂರು ಪಟ್ಟಣ ಸೇರಿ 45 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಈ ಯರಗೋಳ್ ಯೋಜನೆ ಸಹಕಾರಿಯಾಗಲಿದೆ. ಇದನ್ನೂ ಓದಿ: ರಸ್ತೆಬದಿ ಕಟ್ಟಡ ಅಂಕುಶಕ್ಕೆ ನಿಯಮ: ಸಚಿವ ಸಿ.ಸಿ.ಪಾಟೀಲ್

    ಇತ್ತೀಚೆಗೆ ಬಂದ ಮಳೆಗೆ ಕಳೆದ 14 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಜಲಾಶಯ ಇಂದು ತುಂಬಿರುವುದು ಜಿಲ್ಲೆಯ ಜನರಲ್ಲಿ ಖುಷಿ ತಂದುಕೊಟ್ಟಿದೆ. ಸುಮಾರು 315 ಕೋಟಿ ರೂ. ವೆಚ್ಚದಲ್ಲಿ ಡ್ಯಾಂ ನಿರ್ಮಾಣ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಆಲಮಟ್ಟಿ ಡ್ಯಾಂ ಆವರಣಕ್ಕೆ ನುಗ್ಗಿದ ಬುರ್ಖಾಧಾರಿ – ಅವಳಲ್ಲ ಅವನು

    ಆಲಮಟ್ಟಿ ಡ್ಯಾಂ ಆವರಣಕ್ಕೆ ನುಗ್ಗಿದ ಬುರ್ಖಾಧಾರಿ – ಅವಳಲ್ಲ ಅವನು

    ವಿಜಯಪುರ: ಡ್ಯಾಂ ಪ್ರವೇಶ ದ್ವಾರದಲ್ಲಿ ಬುರ್ಖಾಧಾರಿ ಆತಂಕ ಮೂಡಿಸಿದ ಸುದ್ದಿ ವಿಜಯಪುರದ ನಿಡಗುಂದಿ ತಾಲೂಕಿನ ಆಲಮಟ್ಟಿ ಡ್ಯಾಂ ಆವರಣದಲ್ಲಿ ನಡೆದಿದೆ.

    ಬೆಳಗ್ಗೆ ನಸುಕಿನ ಜಾವದಲ್ಲೇ ಬುರ್ಖಾ ಧರಿಸಿ ಡ್ಯಾಂ ಆವರಣಕ್ಕೆ ಹೋಗುತ್ತಿದ್ದ ವ್ಯಕ್ತಿ ಕಂಡು ಸ್ಥಳದಲ್ಲಿದ್ದ ಪೊಲೀಸರು ಸೇರಿದಂತೆ ಹಲವರು ದಂಗಾಗಿದ್ದಾರೆ.  ಇಷ್ಟು ಬೇಗ ಡ್ಯಾಂ ಒಳಗೆ ಪ್ರವೇಶ ನೀಡಲ್ಲ ಎಂದು ಪ್ರವೇಶ ದ್ವಾರದ ಬಳಿ ತಪಾಸಣೆ ವೇಳೆ ಪೊಲೀಸರು ಹೇಳಿದ್ದಾರೆ.

    ಈ ವೇಳೆ ಬುರ್ಖಾ ಧರಿಸಿದ್ದ ಮಹಿಳೆಯಲ್ಲ, ಪುರುಷ ಎಂದು ಪೊಲೀಸರಿಗೆ ಸಂಶಯ ವ್ಯಕ್ತವಾಗಿದೆ. ಬುರ್ಖಾಧಾರಿಯ ಧ್ವನಿಯಿಂದ ಉಂಟಾಗಿದ್ದ ಸಂಶಯದ ಹಿನ್ನೆಲೆ ಪೊಲೀಸರು ಬುರ್ಖಾಧಾರಿ ಮೇಲೆ ನಿಗಾ ವಹಿಸಿದ್ದಾರೆ. ಕೆಲ ಸಮಯದ ಬಳಿಕ ಬುರ್ಖಾಧಾರಿ ಮುಳ್ಳು ಕಂಟಿಗಳಾಚೆ ಹೋಗಿ ಬುರ್ಖಾ ತೆಗೆದು ಆಚೆ ಬಂದಿದ್ದಾರೆ. ಇದನ್ನೂ ಓದಿ: ಗಾಂಜಾ ಸಾಗಾಟ ಎಂದು ತನಿಖೆ ಮಾಡಿದ ಪೊಲೀಸರಿಗೆ ತಿಳಿಯಿತು ಕೊಲೆ ರಹಸ್ಯ 

    ಆಗ ಬುರ್ಖಾಧಾರಿ ಮಹಿಳೆಯಲ್ಲಾ ಪುರುಷ ಎಂಬುದು ಪೊಲೀಸರಿಗೆ ಬಹಿರಂಗವಾಗಿದೆ. ಆಗ ಬುರ್ಖಾಧರಿಸಿದ್ದು ಯುವಕ ಎಂಬುದನ್ನು ಕಂಡುಹಿಡಿದ ಪೊಲೀಸರು ಕೂಡಲೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

    ವಿಚಾರಣೆಯಲ್ಲಿ ತಿಳಿದಿದ್ದೇನು?
    ಆಲಮಟ್ಟಿ ಪೊಲೀಸರ ವಿಚಾರಣೆಯಲ್ಲಿ ತಾನು ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಎಂದು ಯುವಕ ಹೇಳಿಕೊಂಡಿದ್ದಾನೆ. ನನ್ನ ಹೆಸರು ಕಿಶೋರ್ ಮಲ್ಲಿಕಾರ್ಜುನ್ ಸ್ವಾಮಿ. ನನ್ನಲ್ಲಿ ಹೆಣ್ತನ ಬೆಳೆಯುತ್ತಿದೆ. ಹೀಗಾಗಿ ತೃತೀಯ ಲಿಂಗಿಯಾಗಿ ಪರಿವರ್ತನೆ ಹೊಂದುತ್ತಿದ್ದೇನೆ.

    ನನಗೆ ಮದುವೆ ಬೇಡ ಎಂದರೂ ಮನೆಯಲ್ಲಿ ಒತ್ತಡ ಹೇರುತ್ತಿದ್ದಾರೆ. ಆದ್ದರಿಂದ ಮನೆ ಬಿಟ್ಟು ಬಂದಿದ್ದಾಗಿ ವಿಚಾರಣೆಯಲ್ಲಿ ಕೆಲ ವಿಚಾರಗಳನ್ನ ಕಿಶೋರ್ ಹೇಳಿದ್ದಾನೆ. ಬೆಂಗಳೂರಿನ ಬೇಕರಿ ಒಂದರಲ್ಲಿ ಕೆಲಸ ನಿರ್ವಹಿಸುತ್ತಿರುವುದಾಗಿ ತಿಳಿಸಿದ್ದಾನೆ. ಇದನ್ನೂ ಓದಿ: ಗಾಂಜಾ ಗ್ಯಾಂಗ್ ಹಿಡಿಯಲು ಹೋಗಿ ಭೀಕರ ಅಪಘಾತ: ಸ್ವಗ್ರಾಮಕ್ಕೆ ಆಗಮಿಸಿದ ಪಿಎಸ್‍ಐ ಮೃತದೇಹ 

    ಸದ್ಯ ಪೊಲೀಸರ ವಿಚಾರಣೆ ಮುಂದುವರಿದಿದ್ದು, ಆಲಮಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಚಾಮರಾಜನಗರದ ಅವಳಿ ಜಲಾಶಯ ಭರ್ತಿ – ಅಚ್ಚುಕಟ್ಟು ಪ್ರದೇಶಕ್ಕೆ ನೀರು ಬಿಡಲು ಒತ್ತಾಯ

    ಚಾಮರಾಜನಗರದ ಅವಳಿ ಜಲಾಶಯ ಭರ್ತಿ – ಅಚ್ಚುಕಟ್ಟು ಪ್ರದೇಶಕ್ಕೆ ನೀರು ಬಿಡಲು ಒತ್ತಾಯ

    ಚಾಮರಾಜನಗರ: ಜಿಲ್ಲೆಯಲ್ಲಿರುವ ಜಲಾಶಯಗಳು ಭರ್ತಿಯಾಗೋದೆ ತಮಿಳುನಾಡಿನಲ್ಲಿ ಉತ್ತಮ ಮಳೆಯಾದ್ರೆ. ಅಸನಿ ಚಂಡಮಾರುತದ ಎಫೆಕ್ಟ್‌ನಿಂದಾಗಿ ತಮಿಳುನಾಡಿನ ದಿಂಬಂ, ತಾಳವಾಡಿಯಲ್ಲಿ ಉತ್ತಮ ಮಳೆ ಬಿದ್ದಿದೆ. ಈ ಹಿನ್ನೆಲೆ ಹಲವು ದಶಕದ ಬಳಿಕ ಅಕ್ಟೋಬರ್, ನವೆಂಬರ್‌ನಲ್ಲಿ ಭರ್ತಿಯಾಗ್ತಿದ್ದ ಅವಳಿ ಜಲಾಶಯಗಳು ಮೇ ನಲ್ಲೇ ಭರ್ತಿಯಾಗಿದೆ.

    ಚಾಮರಾಜನಗರದ ಸುವರ್ಣಾವತಿ, ಚಿಕ್ಕಹೊಳೆ ಜಲಾಶಯ ಹಿಂದೆಲ್ಲಾ ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಡ್ಯಾಂಗಳು ಭರ್ತಿಯಾಗುತ್ತಿದ್ದವು. ಆದರೆ ಈ ವರ್ಷ ಮೇ ತಿಂಗಳಲ್ಲೇ ಡ್ಯಾಂ ಭರ್ತಿಯಾಗಿದ್ದು ಜಲ ವೈಭವ ವೀಕ್ಷಣೆಗೆ ಸಾರ್ವಜನಿಕರು ಬರುತ್ತಿದ್ದಾರೆ. ಕರ್ನಾಟಕಕ್ಕೆ ಸೇರಿರುವ ಬೇಡಗುಳಿ, ತಮಿಳುನಾಡಿನ ದಿಂಬಂ, ಹಾಸನೂರು ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಜಲಾಶಯಗಳಿಗೆ ಜೀವಕಳೆ ತಂದಿದೆ. ಸುವರ್ಣಾವತಿ ಜಲಾಶಯದ ನೀರು ಸಂಗ್ರಹಣದ ಗರಿಷ್ಠ ಮಟ್ಟ 2,455 ಅಡಿ. ಎರಡು ಅಡಿ ಬಾಕಿಯಿದ್ದು, ಬಹುತೇಕ ಭರ್ತಿ ಹಂತದಲ್ಲಿದೆ. ಅದೇ ರೀತಿ ಚಿಕ್ಕಹೊಳೆ 2,449 ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು ಭರ್ತಿಯಾಗಿದೆ. ಸುವರ್ಣಾವತಿ ಜಲಾಶಯ 6,400 ಎಕರೆ ಹಾಗೂ ಚಿಕ್ಕಹೊಳೆ 4,000 ಎಕರೆ ಅಚ್ಚುಕಟ್ಟು ಪ್ರದೇಶ ಹೊಂದಿದೆ. ಅಸನಿ ಚಂಡಮಾರುತದಿಂದ ಹವಾಮಾನದಲ್ಲಿ ಉಂಟಾದ ಬದಲಾವಣೆಯಿಂದ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಮಳೆ ಸುರಿದಿದ್ದು, ಜಲಾಶಯಗಳು ನಳನಳಿಸುತ್ತಿವೆ. ಇದನ್ನೂ ಓದಿ: ಜಪಾನ್‌ ಯುವಕರು ಒಮ್ಮೆಯಾದರೂ ಭಾರತಕ್ಕೆ ಭೇಟಿ ನೀಡಬೇಕು: ಮೋದಿ ಆಹ್ವಾನ

    ಈ ಜೋಡಿ ಜಲಾಶಯ ತುಂಬಿರುವುದರಿಂದ ಕೂಡಲೇ ರೈತರಿಗೆ ನೀರು ಹರಿಸುವಂತೆ ಒತ್ತಾಯ ಮಾಡ್ತಿದ್ದಾರೆ. ಅಲ್ಲದೇ ಕೇರಳ, ತಮಿಳುನಾಡು ಸೇರಿದಂತೆ ಎಲ್ಲೆಡೆಯಿಂದ ಪ್ರವಾಸಿಗರು ಬರುವುದರಿಂದ ಪ್ರವಾಸೋದ್ಯಮಕ್ಕೂ ಉತ್ತೇಜನ ಕೊಟ್ರೆ ಆದಾಯ ಬರುತ್ತೆ. ಬರದನಾಡು ಚಾಮರಾಜನಗರದ ಅವಳಿ ಜಲಾಶಯಗಳು ಅವಧಿಗೂ ಮುಂಚೆಯೇ ತುಂಬಿದ್ರಿಂದ ರೈತರು ಕೂಡ ಖುಷಿಯಲ್ಲಿದ್ದಾರೆ. ಇದನ್ನೂ ಓದಿ: ಪಠ್ಯ ಪುಸ್ತಕ ಪರಿಷ್ಕರಣೆಯ ಗೊಂದಲಗಳಿಗೆ ಸಚಿವ ಬಿ.ಸಿ.ನಾಗೇಶ್ ತೆರೆ – ಏನಿರುತ್ತೆ, ಏನಿರಲ್ಲ?

  • ಸಿಐಡಿಗೆ ಪ್ರಕರಣ ದಾಖಲಾಗ್ತಿದ್ದಂತೆ ಡ್ಯಾಂಗೆ ಮೊಬೈಲ್ ಎಸೆದ ಆರೋಪಿ

    ಸಿಐಡಿಗೆ ಪ್ರಕರಣ ದಾಖಲಾಗ್ತಿದ್ದಂತೆ ಡ್ಯಾಂಗೆ ಮೊಬೈಲ್ ಎಸೆದ ಆರೋಪಿ

    ಕಲಬುರಗಿ: ಪಿಎಸ್‍ಐ(PSI) ಅಕ್ರಮ ನೇಮಕಾತಿ ಪ್ರಕರಣ ಸಿಐಡಿಗೆ ದಾಖಲಾಗುತ್ತಿದ್ದಂತೆಯೇ ಕಿಂಗ್ ಪಿನ್ ಮಂಜುನಾಥ್ ಮೇಳಕುಂದಿ ತನ್ನ ಮೊಬೈಲ್ (Mobile) ಅನ್ನು ಜಲಾಶಯಕ್ಕೆ ಬಿಸಾಕಿರುವ ಪ್ರಸಂಗ ನಡೆದಿದೆ.

    ಕಲಬುರಗಿ ಜಿಲ್ಲೆ ಆಳಂದ ತಾಲೂಕಿನಲ್ಲಿರುವ ಅಮರ್ಜಾ ಡ್ಯಾಂ (Amarja Dam)ಗೆ ಮೊಬೈಲ್ ಬಿಸಾಕುವ ಮೂಲಕ ಮಂಜುನಾಥ್ ಅಕ್ರಮದ ಸಾಕ್ಷ್ಯ ನಾಶ ಮಾಡಲು ಯತ್ನಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಸಿಐಡಿ (CID) ಅಧಿಕಾರಿಗಳು ನದಿಯಲ್ಲಿರುವ ಮೊಬೈಲ್‍ಗಾಗಿ ಹುಡುಕಾಟ ಆರಂಭಿಸಿದ್ದಾರೆ. ಡಿವೈಎಸ್ ಪಿ ಪ್ರಕಾಶ್ ರಾಠೋಡ ನೇತೃತ್ವದಲ್ಲಿ ಐದು ಜನ ಸ್ವಿಮ್ಮಿಂಗ್ ಮುಳುಗುತಜ್ಞರು ಹುಡುಕಾಟ ನಡೆಯುತ್ತಿದೆ. ಇದನ್ನೂ ಓದಿ: PSI ನೇಮಕಾತಿಯಲ್ಲಿ ಅಕ್ರಮ ಪ್ರಕರಣ- ಆರೋಪಿ ಪತಿಯನ್ನೇ ಜೈಲಿಗಟ್ಟಿದ ಜೈಲರ್ ಪತ್ನಿ!

    ಇತ್ತ ಪಿಎಸ್‍ಐ ಪರೀಕ್ಷೆ ಅಕ್ರಮ ಪ್ರಕರಣ ಬಗೆದಷ್ಟು ಬಯಲಾಗ್ತಿದೆ. ಇಡೀ ಪ್ರಕರಣದ ಕಿಂಗ್ ಪಿನ್ ಕಾಶಿನಾಥ ಚಿಲ್ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೇರಿ ಕ್ರಿಮಿನಲ್ ಬುದ್ಧಿ ಉಪಯೋಗಿಸಿ ಮುಖ್ಯೋಪಾಧ್ಯಾಯನಾದ. ಶಾಲೆಯ ಉಸ್ತುವಾರಿ ವಹಿಸಿಕೊಂಡು ಲಕ್ಷ ಲಕ್ಷ ಲೂಟಿ ಮಾಡಿದ. ಈ ನಡುವೆ ದಿವ್ಯಾ ಹಾಗರಗಿ ಮತ್ತು ರಾಜೇಶ್ ಹಾಗರಗಿ ವಿಶ್ವಾಸ ಗಳಿಸಿದ. ಈ ಹಿನ್ನೆಲೆಯಲ್ಲಿ ಕಾಶಿನಾಥ್‍ನನ್ನು ನಂಬಿ ದಿವ್ಯಾ ಹಾಗರಗಿ ಸಂಪೂರ್ಣ ಶಾಲೆಯ ಜವಾಬ್ದಾರಿ ಕೊಟ್ಟಿದ್ದಳು.

    Divya hagaragi (2)

    ತಾನು ಹೆಡ್ ಮಾಸ್ಟರ್ ಆದ ಬಳಿಕ ಅದೆ ಶಾಲೆಯಲ್ಲಿ ತನ್ನ ಪತ್ನಿಗೆ ನೌಕರಿಗೆ ಸೇರಿಸಿದ. ಪರೀಕ್ಷೆಯಲ್ಲಿ ಬೇರೆ ಶಿಕ್ಷಕರನ್ನ ಅಕ್ರಮಕ್ಕೆ ಬಳಸಿಕೊಂಡಿದ್ದ. ತನ್ನ ಪತ್ನಿಗೆ ಪರೀಕ್ಷಾ ಅಕ್ರಮದಿಂದ ದೂರ ಇಟ್ಟಿದ್ದ. ತುತ್ತು ಅನ್ನಕ್ಕೆ ಪರದಾಡ್ತಿದ್ದ ಕಾಶಿನಾಥ ಕಡಿಮೆ ಸಮಯದಲ್ಲಿ ಕೊಟ್ಯಾಧೀಶ ನಾಗಿದ್ದ. ಕಳೆದ ಕೆಲ ವರ್ಷಗಳ ಹಿಂದೆ 50 ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿ ಮನೆ ಕಟ್ಟಿದ್ದ ಕಾಶಿನಾಥ ಕಳೆದ ವರ್ಷ ಕಾರು ಖರೀದಿಸಿದ್ದ.

  • ಅಧಿಕಾರಿಗಳು, ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಕೂಲಿಕಾರ್ಮಿಕ ಬಲಿ

    ಅಧಿಕಾರಿಗಳು, ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಕೂಲಿಕಾರ್ಮಿಕ ಬಲಿ

    ಹಾಸನ: ಕೂಲಿಕಾರ್ಮಿಕರೊಬ್ಬರು ನಿರ್ಮಾಣ ಹಂತದ ಅಣೆಕಟ್ಟು ಮೇಲಿಂದ ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಟ್ಟೆಬೆಳಗುಲಿ ಗ್ರಾಮದ ಬಳಿ ನಡೆದಿದೆ.

    ಮಂಜೇಗೌಡ (45) ಮೃತ ಕೂಲಿಕಾರ್ಮಿಕ. ಕಟ್ಟೆಬೆಳಗುಲಿ ಗ್ರಾಮದ ಸಮೀಪ ಹರಿಯುತ್ತಿರುವ ಹೇಮಾವತಿ ನದಿಗೆ ಅಣೆಕಟ್ಟು ಕಟ್ಟುವ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೆ ಸುಮಾರು 20 ಅಡಿ ಎತ್ತರಕ್ಕೆ ಕೂಲಿ ಕಾರ್ಮಿಕನನ್ನು ಕಬ್ಬಿಣದ ಕಂಬಿಗಳನ್ನು ಹಿಡಿದು ಮೇಲಕ್ಕೆ ಹತ್ತಿಸಿದ್ದರು. ಈ ವೇಳೆ ತಲೆಗೆ ಅವರಿಗೆ ಹೆಲ್ಮೆಟ್ ನೀಡಿರಲಿಲ್ಲ. ಸುರಕ್ಷತಾ ಬಲೆಯನ್ನು ಕೂಡಾ ಅಳವಡಿಸಿರಲಿಲ್ಲ. ಇದನ್ನೂ ಓದಿ: ಚಂದನವನದಲ್ಲಿ ಲವ್ಲಿ ವ್ಯಾಲೆಂಟೈನ್ಸ್ ಡೇ – ಅಭಿಮಾನಿಗಳೊಂದಿಗೆ ಹಂಚಿಕೊಂಡ್ರು ಸ್ಪೆಷಲ್ ಫೋಟೋ!

    ಮಂಜೇಗೌಡರವರು ಕೆಲಸ ಮಾಡುವ ವೇಳೆ ಆಯತಪ್ಪಿ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ಕೂಲಿಕಾರ್ಮಿಕನ ಸಾವಿಗೆ ಅಧಿಕಾರಿಗಳು, ಗುತ್ತಿಗೆದಾರರ ನಿರ್ಲಕ್ಷ್ಯವೇ ಕಾರಣವಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸಂಬಂಧಿಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಯುವಕರಿಗೆ ಉದ್ಯೋಗ, ಬಡವರಿಗೆ 1 ಕೆಜಿ ಉಚಿತ ತುಪ್ಪ: ಅಖಿಲೇಶ್ ಯಾದವ್ ಭರವಸೆ

    ಘಟನೆಯು ಹೊಳೆನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ತಿರುಪತಿಯಲ್ಲಿ ಆಣೆಕಟ್ಟು ಬಿರುಕು – ಜನರಲ್ಲಿ ಹೆಚ್ಚಿದ ಆತಂಕ

    ತಿರುಪತಿಯಲ್ಲಿ ಆಣೆಕಟ್ಟು ಬಿರುಕು – ಜನರಲ್ಲಿ ಹೆಚ್ಚಿದ ಆತಂಕ

    ತಿರುಪತಿ: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಜಿಲ್ಲೆಯ ಅತಿದೊಡ್ಡ ಆಣೆಕಟ್ಟು ರಾಯಲ ಚೇವೂರು ಬಿರುಕು ಬಿಟ್ಟಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ.

    ಭಾರೀ ಮಳೆಯಿಂದಾಗಿ ಆಣೆಕಟ್ಟಿಗೆ ನೀರಿನ ಹರಿವು ಹೆಚ್ಚಾಗಿದೆ. ಈಗ ಮಳೆ ನಿಂತಿದ್ದರೂ ಬಿರುಕುಗಳಿಂದ ನೀರು ಸೋರಿಕೆಯಾಗುತ್ತಿರುವುದು ಈಗ ಭಯಕ್ಕೆ ಕಾರಣವಾಗಿದೆ.

    ಜಿಲ್ಲಾಧಿಕಾರಿ ಹರಿ ನಾರಾಯಣನ್, ಜಿಲ್ಲಾ ಪೊಲೀಸ್, ಕಂದಾಯ ಅಧಿಕಾರಿಗಳು ಹಾಗೂ ನೀರಾವರಿ ತಂಡದ ಅಧಿಕಾರಿಗಳು ತಂಡವನ್ನು ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲಿನ ಹಳ್ಳಿಗಳ ಜನರನ್ನು ಸ್ಥಳಾಂತರಿಸುವಂತೆ ಸೂಚಿಸಿದ್ದಾರೆ.

    ಆಣೆಕಟ್ಟಿನಲ್ಲಿ ಬಿರುಕು ಮೂಡಿದ್ದರಿಂದ ಎಲ್ಲ ಅಮೂಲ್ಯ ಕಾಗದ ಪತ್ರಗಳು ಹಾಗೂ ಅಗತ್ಯ ವಸ್ತುಗಳೊಂದಿಗೆ ಎತ್ತರದ ಪ್ರದೇಶಕ್ಕೆ ತೆರಳಲು ಸುತ್ತಮುತ್ತಲಿನ ಗ್ರಾಮಸ್ಥರಿಗೆ ಸೂಚಿಸಲಾಗಿದೆ.

    ಜಿಲ್ಲೆಯಲ್ಲಿ ಅತಿ ದೊಡ್ಡದಾದ ಹಾಗೂ ಪುರಾತನ ಆಣೆಕಟ್ಟು ಇದಾಗಿದೆ. ಇದರಿಂದಾಗಿ ಯಾವುದೇ ಅವಕಾಶವನ್ನು ತೆಗೆದುಕೊಳ್ಳಲು ಬಯಸುವುದಿಲ್ಲ. ಆದ್ದರಿಂದ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹರಿನಾರಾಯಣ್ ಹೇಳಿದರು. ಇದನ್ನೂ ಓದಿ: ರಾಜ್ಯಕ್ಕೆ ತಪ್ಪದ ಮಳೆ ಕಾಟ – ರಾಜ್ಯಕ್ಕೆ ವಕ್ಕರಿಸಲಿದೆ ಮತ್ತೊಂದು ಸೈಕ್ಲೋನ್

    ಜಲಾಶಯದಲ್ಲಿ 0.9 ಟಿಎಂಸಿ ನೀರು ಸಂಗ್ರಹವಾಗಿದೆ. ಆದರೆ ಆಣೆಕಟ್ಟು ನೀರನ್ನು ಸಂಗ್ರಹಿಸುವಷ್ಟು ಶಕ್ತಿಯನ್ನು ಹೊಂದಿಲ್ಲ. ಹೀಗಾಗಿ ಕೆಳಭಾಗದ ಗ್ರಾಮಗಳನ್ನು ಸ್ಥಳಾಂತರಿಸುವಂತೆ ತಿಳಿಸಲಾಗಿದೆ. ಜೊತೆಗೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಬಿರುಕು ತಡೆಗೆ ಕ್ರಮ ಕೈಗೊಳ್ಳಲು ಮಾತುಕತೆ ನಡೆಸಲಾಗಿದೆ.

    ಚಿತ್ತೂರು ಜಿಲ್ಲೆಯ ಮೇಲ್ದಂಡೆಗಳಿಂದ ಹಾಗೂ ತಿರುಮಲ ಬೆಟ್ಟಗಳಿಂದ ಅಧಿಕ ಪ್ರಮಾಣದ ನೀರು ಹರಿಯುತ್ತಿರುವುದರಿಂದ ಸ್ವರ್ಣಮುಖಿ ನದಿಯು ಉಕ್ಕಿ ಹರಿಯುತ್ತಿದೆ. ಈ ನದಿಯಿಂದಲೇ ರಾಯಲ ಚೇವೂರು ಆಣೆಕಟ್ಟಿಗೆ ನೀರು ಸಂಗ್ರಹವಾಗುತ್ತದೆ.

    ಪ್ರವಾಹದಿಂದಾಗಿ ಹಲವಾರು ಹಳ್ಳಿಗಳ ಸಂಪರ್ಕ ಕಡಿತವಾಗಿದ್ದು, ಹೆದ್ದಾರಿ ಹಾಗೂ ಇತರ ರಸ್ತೆಗಳು ಜಲಾವೃತಗೊಂಡಿದೆ. ರೇಣಿಗುಂಟಾ ವಿಮಾನ ನಿಲ್ದಾಣದಲ್ಲಿ ಜನರ ರಕ್ಷಣೆಗೆ ಎನ್‍ಡಿಆರ್‍ಆಫ್ ಪಡೆ ಹಾಗೂ ವಾಯುಪಡೆಯ ಮೂರು ಹೆಲಿಕಾಪ್ಟರ್‍ಗಳು ಬಂದಿವೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅನಾಹುತ – ರಾಜಕಾಲುವೆ ಒಡೆದು ರಸ್ತೆ, ಮನೆಗಳಿಗೆ ನುಗ್ಗಿದ ನೀರು

    ಭಾರೀ ಮಳೆ ಹಿನ್ನೆಲೆಯಲ್ಲಿ 2 ದಿನದ ಹಿಂದಷ್ಟೇ ಯಾತ್ರಾರ್ಥಿಗಳ ಸುರಕ್ಷತೆಗಾಗಿ ಶಬರಿಮಲೆಯನ್ನು ಮುಚ್ಚುವುದಾಗಿ ಅಲ್ಲಿನ ಜಿಲ್ಲಾಡಳಿತ ಹೇಳಿತ್ತು.

  • ಜಕ್ಕಲಮಡುಗು ಜಲಾಶಯ ಭರ್ತಿ – ಹತ್ತಾರು ಗ್ರಾಮಗಳ ಜನರ ಸಂಚಾರಕ್ಕೆ ಸಂಚಕಾರ

    ಜಕ್ಕಲಮಡುಗು ಜಲಾಶಯ ಭರ್ತಿ – ಹತ್ತಾರು ಗ್ರಾಮಗಳ ಜನರ ಸಂಚಾರಕ್ಕೆ ಸಂಚಕಾರ

    – ನೀಗಿತು ಚಿಕ್ಕಬಳ್ಳಾಪುರ-ದೊಡ್ಡಬಳ್ಳಾಪುರ ನಗರಗಳ ನೀರಿನ ದಾಹ

    ಚಿಕ್ಕಬಳ್ಳಾಪುರ: ಮೊನ್ನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ವಿಶ್ವವಿಖ್ಯಾತ ನಂದಿಬೆಟ್ಟ ಮಾರ್ಗದ ಬ್ರಹ್ಮಗಿರಿ ಬೆಟ್ಟದಲ್ಲಿ ಭೂಕುಸಿತ ಉಂಟಾಗಿ ನಂದಿಬೆಟ್ಟದ ರಸ್ತೆಯೇ ಕೊಚ್ಚಿ ಹೋಗಿತ್ತು. ಆದರೆ ಇದೇ ದಿನ ಈ ನಂದಿಬೆಟ್ಟದ ಸುತ್ತಮುತ್ತಲಿನ ಪಂಚಗಿರಿಗಳ ಸಾಲಲ್ಲಿ ಸುರಿದ ಭಾರೀ ಮಳೆಗೆ ಚಿಕ್ಕಬಳ್ಳಾಪುರ-ದೊಡ್ಡಬಳ್ಳಾಪುರ ನಗರಗಳ ಜನರ ಕುಡಿಯುವ ನೀರಿನ ದಾಹವನ್ನ ತೀರಿಸುವ ಜಕ್ಕಲಮಡುಗು ಜಲಾಶಯ ತುಂಬಿ ತುಳುಕಿದೆ. ಆದರೆ ಜಲಾಶಯದ ಹಿನ್ನೀರಿನಲ್ಲಿ ಸೇತುವೆಯೊಂದು ಮುಳುಗಿ ಹೋಗಿದ್ದು, ಇದರಿಂದ ಸ್ಥಳೀಯ ಹತ್ತಾರು ಗ್ರಾಮಗಳ ಜನರಿಗೆ ಸಂಚಾರಕ್ಕೆ ಸಂಕಷ್ಟವನ್ನೇ ತಂದೊಡ್ಡಿದೆ.

    ಏನು ಸಂಕಷ್ಟ..?: ಜಕ್ಕಲಮಡುಗು ತುಂಬಿ ತುಳುಕಿ ಕೋಡಿ ಹರಿದ ಹಿನ್ನೆಲೆಯಲ್ಲಿ ಜಲಾಶಯದ ಹಿನ್ನೀರಿನ ಸೇತುವೆ ಮೇಲೆ ಐದಾರು ಅಡಿ ನೀರು ನಿಂತಿದೆ. ಬೆಟ್ಟದ ಸಾಲುಗಳಿಂದ ಇದೇ ಸೇತುವೆ ಮೂಲಕ ಜಲಾಶಯಕ್ಕೆ ನೀರು ಹರಿದು ಬರ್ತಿದೆ. ಹೌದು ಮೊನ್ನೆ ರಾತ್ರಿ ಸುರಿದ ಒಂದೇ ಮಳೆಗೆ ಜಕ್ಕಲಮಡುಗು ಜಲಾಶಯ ತುಂಬಿ ತುಳುಕಿದ್ದು ಕೋಡಿ ಹರಿದಿದೆ. ಹೀಗಾಗಿ ಜಲಾಶಯದ ಹಿನ್ನೀರಿನಲ್ಲಿ ಚಿಕ್ಕಬಳ್ಳಾಪುರ-ದೊಡ್ಡಬಳ್ಳಾಪುರ ಮಾರ್ಗದ ಸಂಪರ್ಕ ಸೇತುವೆಯಾಗಿದ್ದ ಸೇತುವೆ ಮುಳುಗಿದೆ. ಆದರೆ ಇದೇ ಮುಳುಗಿದ ಸೇತುವೆ ಮೇಲೆ ಜನ ಈಗ ಹರಸಾಹಸ ಪಟ್ಟು ಸಂಚಾರ ಮಾಡ್ತಿದ್ದಾರೆ. ಸೇತುವೆ ಮೇಲೆ ಹರಿವ ನೀರಿನ ಜೊತೆಯೇ ವಾಹನಗಳ ಸಂಚಾರ ಜನರ ಓಡಾಟ ಆಗ್ತಿದೆ. ಹರಿವ ನೀರಿನಲ್ಲೇ ಕಾರು ಹಾಗೂ ಬೈಕ್ ಗಳು ರಭಸವಾಗಿ ಮುನ್ನುಗ್ತುತ್ತಿವೆ. ಸೇತುವೆ ಮೇಲೆ ನಿಂತ ನೀರನ್ನ ಬೇಧಿಸಿಕೊಂಡು ಹರಸಾಹಸ ಪಟ್ಟು ಕಾರು ಬೈಕ್ ಚಲಾಯಿಸ್ತಿದ್ದು. ಸೇತುವೆ ದಾಟಲು ಹೋಗಿ ಸೇತುವೆ ಮಧ್ಯ ಭಾಗದಲ್ಲಿ ಬೈಕ್ ಗಳು ಕೆಟ್ಟು ಹೋಗ್ತಿವೆ. ಬೈಕ್ ಒಂದು ಕೆಟ್ಟು ನಿಂತ ಪರಿಣಾಮ ಮಗು ಸಮೇತ ಸೇತುವೆಯ ಅರ್ಧದಲ್ಲೇ ಮಹಿಳೆ ಇಳಿದು ನೀರಿನಲ್ಲೇ ನಡೆದುಕೊಂಡು ಹೋಗಿ ಸೇತುವೆ ದಾಟಿದ್ದಾಳೆ.

    ಜಲಾಶಯ ತುಂಬಿ ತುಳುಕುತ್ತಿರುವ ಪರಿಣಾಮ, ಜಲಾಶಯದ ಹಿನ್ನೀರಿನಲ್ಲಿ ಸೇತುವೆ ಮುಳುಗಿದೆ. ಹೀಗಾಗಿ ಚಿಕ್ಕಬಳ್ಳಾಪುರದಿಂದ ದೊಡ್ಡಬಳ್ಳಾಪುರದ ಕಡೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಗುಂಗೀರ್ಲಹಳ್ಳಿ, ಜಕ್ಕಲಮಡುಗು ಸೇರಿದಂತೆ ಮುಂದೆ ಹತ್ತಾರು ಗ್ರಾಮಗಳಿದ್ದು ಈ ಸೇತುವೆಯೂ ಮೂಲಕವೇ ಹಾದು ಹೋಗಬೇಕಿದೆ. ಆದರೆ ಈಗ ಸೇತುವೆ ಮೇಲೆ ನೀರು ತುಂಬಿಕೊಂಡಿರುವ ಕಾರಣ ವಾಹನಸವಾರರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನ-ಜಾನುವಾರುಳು ಸಹ ಜಮೀನು, ಹೊಲ, ತೋಟಗಳಿಗೆ ಇದೇ ಸೇತುವೆಯನ್ನೇ ಅವಲಂಬಿಸಿದ್ದಾರೆ. ಇನ್ನೂ ಶಾಲೆ ಕಾಲೇಜುಗಳಿಗೆ ಚಿಕ್ಕಬಳ್ಳಾಪುರಕ್ಕೆ ಬರುವ ವಿದ್ಯಾರ್ಥಿಗಳು ಸಹ ಇದೇ ರಸ್ತೆಯನ್ನೇ ಆಶ್ರಯಿಸಿದ್ದು, ಸಾಕಷ್ಟು ಸಮಸ್ಯೆಗಳನ್ನ ಅನುಭವಿಸುವಂತಾಗಿದೆ. ಇದನ್ನೂ ಓದಿ: ಹಾರ್ದಿಕ್ ಪಾಂಡ್ಯ ಧರಿಸಿದ ವಾಚ್ ಬೆಲೆ ಕೇಳಿ ದಂಗಾದ ಅಭಿಮಾನಿಗಳು

    ಮೇಲ್ಸೇತುವೆಗೆ ಆಗ್ರಹ: ಈ ಹಿಂದೆ ಇದ್ದ ಹಳೆಯ ಜಲಾಶಯದ ಎತ್ತರವನ್ನ ಕಳೆದ 10 ವರ್ಷಗಳ ಹಿಂದೆ ಹೆಚ್ಚಳ ಮಾಡಿ ಜಲಾಶಯದಲ್ಲಿ ಹೆಚ್ಚಿನ ನೀರು ಸಂಗ್ರಹವಾಗುವಂತೆ ಮಾಡಲಾಗಿದೆ. ಜಲಾಶಯದ ಎತ್ತರವನ್ನ ಹೆಚ್ಚಳ ಮಾಡಿದ ನಂತರ ಮೂರ್ನಾಲ್ಕು ವರ್ಷಗಳ ಹಿಂದೆ ಸಹ ಜಕ್ಕಲಮಡುಗು ಜಲಾಶಯ ಭರ್ತಿಯಾದಾಗ ಇದೇ ಸಮಸ್ಯೆ ಆಗಿತ್ತು. ಮತ್ತೆ ಈಗ ಜಲಾಶಯ ತುಂಬಿದಾಗಲೂ ಮತ್ತೆ ಅದೇ ಸಮಸ್ಯೆ. ಹೀಗಾಗಿ ಈ ಸಮಸ್ಯೆಗೆ ಮೇಲ್ಸುತುವೆ ನಿರ್ಮಾಣ ಮಾಡಿ ಶಾಶ್ವತ ಪರಿಹಾರ ಮಾಡಿಕೊಡಿ ಅನ್ನೋದು ಇಲ್ಲಿನ ಹತ್ತಾರು ಗ್ರಾಮಗಳ ಜನರ ಆಗ್ರಹವಾಗಿದೆ. ಹೀಗಾಗಿ ಜಿಲ್ಲಾಢಳಿತ ಜನಪ್ರತಿನಿಧಿಗಳು ಇತ್ತ ಗಮನಹರಿಸಬೇಕಿದೆ.

    ಚಿಕ್ಕಬಳ್ಳಾಪುರ-ದೊಡ್ಡಬಳ್ಳಾಪುರ ನಗರಗಳಿಗೆ ನೀರಿನ ದಾಹ ಮಾಯ:
    ಈ ಜಲಾಶಯದಿಂದಲೇ ಚಿಕ್ಕಬಳ್ಳಾಪುರ ಹಾಗೂ ದೊಡ್ಡಬಳ್ಳಾಪುರ ನಗರಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ. ಜಲಾಶಯ ಭರ್ತಿಯಾದ ಹಿನ್ನಲೆ ಇನ್ನೂ ಒಂದು ಒಂದೂವರೆ ವರ್ಷ ಈ ಎರಡು ನಗರಗಳ ಜನರಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇರಲ್ಲ. ಚಿಕ್ಕಬಳ್ಳಾಪುರ ದೊಡ್ಡಬಳ್ಳಾಪುರ ನಗರಗಳ ಜನರ ಪಾಲಿಗೆ ಇದು ಕಾವೇರಿ ಅಂತಲೇ ಫೇಮಸ್. ಇದನ್ನೂ ಓದಿ: ಅಫ್ಘಾನ್ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ಕಲ್ಪಿಸಬಾರದು: ಪ್ರವೀಣ್ ತೊಗಾಡಿಯಾ

  • ಭಾರೀ ಮಳೆ-ಕೆರೆ, ಡ್ಯಾಮ್ ಭರ್ತಿ

    ಭಾರೀ ಮಳೆ-ಕೆರೆ, ಡ್ಯಾಮ್ ಭರ್ತಿ

    ದಾವಣಗೆರೆ: ಬೆಣ್ಣೆ ನಗರಿಯಲ್ಲಿ ಉತ್ತಮ ಮಳೆಯಾಗಿದ್ದು, ಕೆರೆ ಡ್ಯಾಮ್‍ಗಳು ಭರ್ತಿಯಾಗಿ ದಾವಣಗೆರೆಯ ಕೆಲವು ಕಡೆ ಅವಾಂತರ ಸೃಷ್ಟಿಯಾಗಿದೆ.

    ಬೆಣ್ಣೆ ನಗರಿ ದಾವಣಗೆರೆಯಲ್ಲಿ ರಾತ್ರಿ ಸುರಿದ ಮಳೆಗೆ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದೆ. ದಾವಣಗೆರೆಯ ಪಕ್ಕದಲ್ಲಿರುವ ನಾಗರಕಟ್ಟೆ, ಕಾಡಜ್ಜಿ ಗ್ರಾಮಗಳಲ್ಲಿ ಜಮೀನುಗಳು ಮುಳಗಡೆಯಾಗಿದ್ದು, ಭತ್ತದ ಗದ್ದೆ, ಹಾಗೂ ಅಡಿಗೆ ತೋಟಗಳು ಸಂಪೂರ್ಣವಾಗಿ ಜಲಾವೃತವಾಗಿದೆ. ಕೆಇಬಿ ಸಬ್ ಸ್ಟೇಷನ್, ಕೃಷಿ ಕೇಂದ್ರಗಳು ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಕೆಇಬಿ ಸಬ್ ಸ್ಟೇಷನ್ ನಲ್ಲಿ ಸಿಲುಕಿದ್ದ ಇಬ್ಬರು ಸಿಬ್ಬಂದಿಯನ್ನು ತಡರಾತ್ರಿ ಅಗ್ನಿ ಶಾಮಕ ಸಿಬ್ಬಂದಿಗಳು ಅಗ್ನಿಶಾಸಕ ಅಧಿಕಾರಿ ಬಸವಶರ್ಮ ನೇತೃತ್ವದಲ್ಲಿ ರಕ್ಷಣೆ ಮಾಡಲಾಗಿದೆ. ಇದನ್ನೂ ಓದಿ:  ಬಕ್ರೀದ್ ಹಬ್ಬ -ಸಮುದಾಯದ ಮುಖಂಡರ ಜೊತೆಗೆ ಪೊಲೀಸರ ಶಾಂತಿ ಸಭೆ

    ರಾತ್ರಿಯಿಡಿ ಸುರಿದ ಮಳೆಗೆ ಬಹುತೇಕ ಜಮೀನುಗಳು ಜಲಾವೃತವಾಗಿದ್ದು, ರೈತರು ಬೆಳೆದ ಮೆಕ್ಕೆಜೋಳ ಸೇರಿದಂತೆ ಹಲವು ಬೆಳೆ ಕೊಳೆಯುವ ಹಂತಕ್ಕೆ ತಲುಪಿದೆ. ಸರ್ಕಾರಿ ಕಟ್ಟಡಗಳ ಅವೈಜ್ಞಾನಿಕ ಕಾಮಗಾರಿಯಿಂದ ಸರಿಯಾಗಿ ಚರಂಡಿ ವ್ಯವಸ್ಥೆ ಮಾಡದೆ ಸರಾಗವಾಗಿ ನೀರು ಹೋಗದೆ ಜಮೀನುಗಳೇಲ್ಲ ಕೆರೆಯಂತಾಗಿವೆ. ದಾವಣಗೆರೆಯ ಕಾಡಜ್ಜಿ ಗ್ರಾಮದಲ್ಲಿ ನೂರಾರು ಎಕರೆ ಮೆಕ್ಕೆಜೋಳ ಸೇರಿದಂತೆ ಹಲವು ಬೆಳೆಗಳು ಜಲಾವೃತವಾಗಿದ್ದು, ಕೊಳೆಯುವ ಹಂತಕ್ಕೆ ತಲುಪಿದೆ. ಅಲ್ಲದೆ ಕೃಷಿ ತರಬೇತಿ ಕೇಂದ್ರ ಕೂಡ ಜಲಾವೃತವಾಗಿದ್ದು, ಕಚೇರಿಗಳಿಗೆ ನೀರು ನುಗ್ಗಿ ದಾಖಲೆಗಳು ಕೂಡ ಮಳೆ ನೀರಿನಿಂದ ಹಾನಿಯಾಗಿದೆ. ತಗ್ಗು ಪ್ರದೇಶಗಳಲ್ಲಿ ಕೃಷಿ ತರಬೇತಿ ಕೇಂದ್ರ ಹಾಗೂ ಕೆಇಬಿ ಸಬ್ ಸ್ಟೇಷನ್ ನಿರ್ಮಾಣ ಮಾಡಿರುವುದೇ ಈ ಎಲ್ಲಾ ಅವಾಂತರಕ್ಕೆ ಕಾರಣ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಇದನ್ನೂ ಓದಿ: ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ ಖ್ಯಾತ ನಟನ ಪುತ್ರಿ 

    ಬಹುತೇಕ ಕೆರೆ ಡ್ಯಾಮ್‍ಗಳು ಭರ್ತಿಯಾಗಿದ್ದು, ಜಗಳೂರಿನ ತುಪ್ಪದಹಳ್ಳಿ ಕೆರೆ, ಕಾಡಜ್ಜಿ ಕೆರೆ, ಹರಪ್ಪಹಳ್ಳಿಯ ಕಲ್ಲಹಳ್ಳಿ, ಕುರೇಮಾಗನಹಳ್ಳಿ, ಕೆಂಚಾಪುರ, ಸೇರಿದಂತೆ ಹಲವು ಕೆರೆ ಡ್ಯಾಮ್‍ಗಳು ಭರ್ತಿಯಾಗಿವೆ. ಒಂದೇ ದಿನದ ಮಳೆಗೆ ಹರಪ್ಪಹಳ್ಳಿಯ ಚಟ್ನಹಳ್ಳಿ ಕೆರೆ ಕೋಡಿ ಬಿದ್ದಿದೆ. ಅಲೂರು ಗ್ರಾಮದ ಬಳಿ ನೂರಾರು ಎಕರೆ ಮೆಕ್ಕೆಜೋಳ ಕೂಡ ಜಲಾವೃತವಾಗಿದ್ದು, ಬೆಳೆ ನಾಶವಾಗಿವ ಭೀತಿಯಲ್ಲಿ ರೈತರಿದ್ದಾರೆ. ಹರಪ್ಪನಹಳ್ಳಿಯ ಪಣಿಯಾಪುರ ಗ್ರಾಮದ ಕೆಂಚಪ್ಪ ರೈತನಿಗೆ ಸೇರಿದ ಮೇಕೆಗಳ ಶಡ್ ನಲ್ಲಿ ನೀರು ನುಗ್ಗಿ 9 ಮೇಕೆಗಳು ಸಾವನ್ನಪ್ಪಿದ್ದು, ಬಡ ರೈತ ಕಣ್ಣೀರು ಹಾಕುವಂತಾಗಿದೆ.