Tag: Dantewada

  • ಛತ್ತೀಸ್‌ಗಢದ ದಂತೇವಾಡ-ಬಿಜಾಪುರ ಗಡಿಯಲ್ಲಿ ಎನ್‌ಕೌಂಟರ್: ಮೂವರು ನಕ್ಸಲರು ಹತ್ಯೆ

    ಛತ್ತೀಸ್‌ಗಢದ ದಂತೇವಾಡ-ಬಿಜಾಪುರ ಗಡಿಯಲ್ಲಿ ಎನ್‌ಕೌಂಟರ್: ಮೂವರು ನಕ್ಸಲರು ಹತ್ಯೆ

    ಜಗದಲ್‌ಪುರ: ಛತ್ತೀಸ್‌ಗಢದ (Chhattisgarh) ದಂತೇವಾಡ (Dantewada) ಮತ್ತು ಬಿಜಾಪುರ (Bijapura) ಜಿಲ್ಲೆಗಳ ಗಡಿಭಾಗದ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ತೀವ್ರ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ.

    ಮಂಗಳವಾರ ಬೆಳಗ್ಗೆ ನಡೆದ ಈ ಎನ್‌ಕೌಂಟರ್, ನಕ್ಸಲೀಯರ ವಿರುದ್ಧ ಭದ್ರತಾ ಪಡೆಗಳು ನಡೆಸುತ್ತಿರುವ ಶೋಧ ಕಾರ್ಯಾಚರಣೆಯ ಭಾಗವಾಗಿ ಸಂಭವಿಸಿದೆ ಎಂದು ರಾಜ್ಯ ಪೊಲೀಸ್ ಇಲಾಖೆ ತಿಳಿಸಿದೆ. ಗುಪ್ತಚರ ಮಾಹಿತಿಗಳ ಪ್ರಕಾರ, ಈ ಪ್ರದೇಶದಲ್ಲಿ ನಕ್ಸಲರು ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ನಿಖರ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ ಛತ್ತೀಸ್‌ಗಢ ರಾಜ್ಯ ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿಯ ಜಂಟಿ ತಂಡ ಸೋಮವಾರ ರಾತ್ರಿಯಿಂದಲೇ ಶೋಧ ಕಾರ್ಯಾಚರಣೆಗೆ ತೆರಳಿತ್ತು. ಇದನ್ನೂ ಓದಿ: ಮೇಕೆದಾಟು ಯೋಜನೆಗೆ ಡಿಕೆಶಿಯವರು ಸ್ಟಾಲಿನ್‌ರನ್ನು ಒಪ್ಪಿಸಲಿ: ನಿಖಿಲ್ ಸವಾಲ್

    ಮಂಗಳವಾರ ಈ ತಂಡವು ಕಾಡಿನ ಒಳಗೆ ಮುನ್ನಡೆಯುತ್ತಿದ್ದಾಗ, ಅಡಗಿದ್ದ ನಕ್ಸಲರು ಏಕಾಏಕಿ ಗುಂಡಿನ ದಾಳಿ ಆರಂಭಿಸಿದರು. ಈ ದಾಳಿಗೆ ತಕ್ಷಣವೇ ಪ್ರತಿಕ್ರಿಯಿಸಿದ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದವು. ಸುಮಾರು ಒಂದು ಗಂಟೆಗೂ ಅಧಿಕ ಕಾಲ ನಡೆದ ಈ ಗುಂಡಿನ ಕಾಳಗದಲ್ಲಿ ಐವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಮೂವರು ನಕ್ಸಲರ ಮೃತದೇಹ ಸಿಕ್ಕಿದೆ. ಇದನ್ನೂ ಓದಿ: ರೀಲ್ಸ್ ತಂದ ಸಂಕಷ್ಟ: ವಿಚಾರಣೆಗೆ ಜೊತೆಯಾಗಿ ಹಾಜರಾದ ವಿನಯ್, ರಜತ್

    ಮೃತರ ಗುರುತು ಇನ್ನೂ ಖಚಿತವಾಗಿಲ್ಲವಾದರೂ, ಇವರು ಸ್ಥಳೀಯ ಮಾವೋವಾದಿ ಗುಂಪಿನ ಸದಸ್ಯರಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಎನ್‌ಕೌಂಟರ್ ಸ್ಥಳದಿಂದ ಒಂದು ಎಕೆ-47 ರೈಫಲ್, ಎರಡು ಸ್ಥಳೀಯವಾಗಿ ತಯಾರಿಸಿದ ಬಂದೂಕುಗಳು, ಸ್ಫೋಟಕ ವಸ್ತುಗಳು ಮತ್ತು ಗುಂಡುಗಳನ್ನು ಒಳಗೊಂಡ ಶಸ್ತ್ರಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ, ನಕ್ಸಲರ ಬಳಕೆಯ ದಿನಚರಿ ವಸ್ತುಗಳು, ಕೆಲವು ದಾಖಲೆಗಳು ಮತ್ತು ಸಂಪರ್ಕ ಸಾಧನಗಳು ಸಹ ದೊರೆತಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಸಂವಿಧಾನ ಬದಲಾವಣೆ ಮಾಡ್ತೀನಿ ಅಂದರೆ ಜನರೇ ಡಿಕೆಶಿ ನೆಟ್ಟು-ಬೋಲ್ಟ್‌ ಟೈಟ್ ಮಾಡ್ತಾರೆ: ನಿಖಿಲ್ ಕುಮಾರಸ್ವಾಮಿ

    ಈ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳಿಗೆ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ದೃಢಪಡಿಸಲಾಗಿದೆ. ಆದಾಗ್ಯೂ, ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ತಪಾಸಣೆ ಮತ್ತು ಪರಿಶೀಲನೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಒಂದೇ ದಿನ ಎರಡು ಕಡೆ 80 ಕ್ಕೂ ಹೆಚ್ಚು ಹಂದಿಗಳ ಕಳ್ಳತನ – ಕಳ್ಳರ ಕಾಟಕ್ಕೆ ಹೈರಾಣಾದ ಸಾಕಾಣಿಕೆದಾರರು

    ಈ ಘಟನೆ ಕುರಿತು ಪ್ರತಿಕ್ರಿಯಿಸಿದ ದಂತೇವಾಡ ಜಿಲ್ಲೆಯ ಪೊಲೀಸ್ ಅಧೀಕ್ಷಕರು, ನಕ್ಸಲೀಯರ ವಿರುದ್ಧ ನಮ್ಮ ಕಾರ್ಯಾಚರಣೆಗಳು ಯಶಸ್ವಿಯಾಗಿ ಮುಂದುವರೆದಿವೆ. ಈ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತರಾಗಿದ್ದು, ಪ್ರದೇಶದಲ್ಲಿ ಶಾಂತಿ ಸ್ಥಾಪನೆಗೆ ನಾವು ಬದ್ಧರಾಗಿದ್ದೇವೆ. ಶೋಧ ಕಾರ್ಯ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ಶೀಘ್ರದಲ್ಲಿ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಣ್ಣ ದೂರು ಕೊಡಬೇಕಲ್ಲವಾ? ನೀವು ಎಷ್ಟು ಬಾರಿ ತಿರುಗಿಸಿ ಮುರುಗಿಸಿ ಕೇಳಿದ್ರು ಅಷ್ಟೇ: ಪರಮೇಶ್ವರ್

    ಮಾರ್ಚ್ 20 ರಂದು ಸೈನಿಕರು ಛತ್ತೀಸ್‌ಗಢದ ಬಿಜಾಪುರ ಮತ್ತು ಕಾಂಕೇರ್ ಜಿಲ್ಲೆಗಳಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಪ್ರತ್ಯೇಕ ಎನ್‌ಕೌಂಟರ್‌ಗಳು ನಡೆದವು. ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 26 ನಕ್ಸಲರು ಹತರಾದರು ಮತ್ತು ಬಿಜಾಪುರ ಜಿಲ್ಲಾ ಮೀಸಲು ಪಡೆಯ (ಡಿಆರ್‌ಜಿ) ಒಬ್ಬ ಜವಾನ ಹುತಾತ್ಮರಾದರು. ಇದೇ ಸಮಯದಲ್ಲಿ, ಕಾಂಕೇರ್‌ನಲ್ಲಿ ನಾಲ್ವರು ನಕ್ಸಲರು ಕೊಲ್ಲಲ್ಪಟ್ಟಿದ್ದಾರೆ. ಎಲ್ಲಾ 30 ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಬ್ಲಡ್‌ ಕ್ಯಾನ್ಸರ್‌ನಿಂದ ತಮಿಳು ನಟ ಶಿಹಾನ್‌ ಹುಸೈನಿ ನಿಧನ

  • ಛತ್ತೀಸ್‌ಗಢ – ಪ್ರತ್ಯೇಕ ಪ್ರಕರಣದಲ್ಲಿ 22 ನಕ್ಸಲರ ಎನ್‌ಕೌಂಟರ್

    ಛತ್ತೀಸ್‌ಗಢ – ಪ್ರತ್ಯೇಕ ಪ್ರಕರಣದಲ್ಲಿ 22 ನಕ್ಸಲರ ಎನ್‌ಕೌಂಟರ್

    ರಾಯ್‌ಪುರ: ಛತ್ತೀಸ್‌ಗಢದ (Chhattisgarh) ಬಿಜಾಪುರ ಮತ್ತು ಕಂಕೇರ್ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ನಕ್ಸಲ್ ನಿಗ್ರಹ ಪಡೆಯ ಕಾರ್ಯಾಚರಣೆಯಲ್ಲಿ 22 ನಕ್ಸಲರು ಹತರಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಬಿಜಾಪುರದಲ್ಲಿ (Bijapur) ದಾಂತೇವಾಡ (Dantewada) ಜಿಲ್ಲೆಯ ಗಡಿಯಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಗಂಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭದ್ರತಾ ಸಿಬ್ಬಂದಿ 2 ತಂಡಗಳಾಗಿ ಕಾರ್ಯಾಚರಣೆ ಮಾಡಿದಾಗ ಗುಂಡಿನ ಚಕಮಕಿ ನಡೆದಿದೆ. ಇದನ್ನೂ ಓದಿ: ನನ್ನ ಮೇಲೆ ಹನಿಟ್ರ್ಯಾಪ್‌ಗೆ ಯತ್ನ ಆಗಿದೆ – ಸದನದಲ್ಲೇ ಸಚಿವ ಕೆ.ಎನ್‌ ರಾಜಣ್ಣ ಬಾಂಬ್‌

    18 ನಕ್ಸಲರ ಶವಗಳು, ಬಂದೂಕುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಂಕೇರ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮಾ.30ರಂದು ರಿಲೀಸ್‌ ಆಗಲಿದೆ ಸಲ್ಮಾನ್‌ ಖಾನ್‌ ನಟನೆಯ ‘ಸಿಕಂದರ್‌’ ಸಿನಿಮಾ

    ರಾಜ್ಯ ಕಾರ್ಯಪಡೆ ಮತ್ತು ಜಿಲ್ಲಾ ಮೀಸಲು ಪಡೆ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ವಿಶೇಷ ಪಡೆಗಳ ಕಾರ್ಯಾಚರಣೆ ಎರಡೂ ಸ್ಥಳಗಳಲ್ಲಿ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ದಂತೇವಾಡದಲ್ಲಿ ನಕ್ಸಲರ ಬೃಹತ್ ಸುರಂಗ ಪತ್ತೆ – ಭದ್ರತಾ ಪಡೆಗಳಿಂದ ತೀವ್ರ ಶೋಧ

    ದಂತೇವಾಡದಲ್ಲಿ ನಕ್ಸಲರ ಬೃಹತ್ ಸುರಂಗ ಪತ್ತೆ – ಭದ್ರತಾ ಪಡೆಗಳಿಂದ ತೀವ್ರ ಶೋಧ

    ರಾಯ್‍ಪುರ: ಚತ್ತೀಸ್‍ಗಢದ (Chhattisgarh) ನಕ್ಸಲ್ ಪೀಡಿತ ಜಿಲ್ಲೆಯಾದ ದಂತೇವಾಡದಲ್ಲಿ (Dantewada) ನಕ್ಸಲರು ನಿರ್ಮಾಣ ಮಾಡಿಕೊಂಡ 10 ಅಡಿ ಆಳದ ಸುಮಾರು 130 ಅಡಿ ಉದ್ದದ ಸುರಂಗ ಪತ್ತೆಯಾಗಿದೆ.

    ಮಾವೋವಾದಿಗಳೊಂದಿಗೆ ಗುಂಡಿನ ಚಕಮಕಿ ನಡೆಸಿ ಭದ್ರತಾ ಪಡೆಗಳು ಹಿಂತಿರುಗುತ್ತಿದ್ದಾಗ ಈ ಅಡಗುತಾಣ ಪತ್ತೆಯಾಗಿದೆ. 10 ಅಡಿ ಆಳದ ಸುರಂಗವನ್ನು ಮೊದಲು ಸ್ಥಳೀಯ ಬುಡಕಟ್ಟು ಯುವಕರನ್ನು ಒಳಗೊಂಡಿರುವ ಜಿಲ್ಲಾ ಮೀಸಲು ಗಾರ್ಡ್ ಜವಾನರು ಪತ್ತೆ ಹಚ್ಚಿದ್ದಾರೆ. ಇದುವರೆಗೂ ಪತ್ತೆಯಾದ ನಕ್ಸಲರ ಅಡುಗು ತಾಣಗಳಲ್ಲಿ ಇದು ಭಾರೀ ದೊಡ್ಡದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇದು ಜನರ ಸಂಚಾರ ಇಲ್ಲದ ಪ್ರದೇಶದಲ್ಲಿದ್ದು, ಯಾರ ಗಮನಕ್ಕೂ ಬಂದಿರಲಿಲ್ಲ. ಜಿಲ್ಲಾ ಮೀಸಲು ಗಾರ್ಡ್‍ನ ನಮ್ಮ ಜವಾನರೊಬ್ಬರು ಅದನ್ನು ಪತ್ತೆಹಚ್ಚಿದ್ದಾರೆ. ಇದು ಹೊಂಚು ಹಾಕಿ ದಾಳಿ ನಡೆಸಲು ನಿರ್ಮಾಣ ಮಾಡಿರಬಹುದು ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ಕ್ಲಬ್‌ನಲ್ಲಿ ಕೆಲಸ ಮಾಡಿದ್ದಕ್ಕೆ ಮಾಜಿ ಪ್ರೇಯಸಿಯ ಮೂಗನ್ನೇ ಕಚ್ಚಿದ ಭೂಪ!

    ಜಿಲ್ಲಾ ಪೊಲೀಸರು ಹಂಚಿಕೊಂಡಿರುವ ಸುರಂಗದ ವೀಡಿಯೊದಲ್ಲಿ ಸುರಂಗದ ಪ್ರವೇಶದ ಸ್ಥಳಗಳನ್ನು ಮಣ್ಣು ಮತ್ತು ಕೋಲುಗಳಿಂದ ಮುಚ್ಚಲಾಗಿದೆ. ಕಿರಿದಾದ ಸುರಂಗವು ಪ್ರತಿ ಆರು ಮೀಟರ್ ತೆರೆದುಕೊಂಡಿದೆ. ತಜ್ಞರ ಪ್ರಕಾರ ಇಂತಹ ಅಡಗುತಾಣಗಳು ಅಬುಜ್ಮದ್ ಪ್ರದೇಶದಲ್ಲಿ ಈ ಹಿಂದೆ ಕಂಡುಬಂದಿದ್ದವು. ಅವುಗಳನ್ನು ಮುಖ್ಯವಾಗಿ ಹಿರಿಯ ಮಾವೋವಾದಿ ನಾಯಕರ ಅಡಗುತಾಣಗಳಾಗಿ ಬಳಸಲಾಗುತ್ತಿತ್ತು. ಇವು ಸಹ ಹಿರಿಯ ನಕ್ಸಲ್ ಮುಖಂಡರ ಅಡುಗುತಾಣಗಳಾಗಿ ನಿರ್ಮಿಸಿರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

    ಅಡಗುತಾಣ ಪತ್ತೆಯಾದ ಬೆನ್ನಲ್ಲೇ ಭದ್ರತಾ ಪಡೆಗಳು ಸುತ್ತಮುತ್ತಲಿನ ಅರಣ್ಯ ಪ್ರದೇಶ ಹಾಗೂ ಇನ್ನಿತರ ಸ್ಥಳಗಳಲ್ಲಿ ನಕ್ಸಲರಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. ಈ ಬಗ್ಗೆ ಇದುವರೆಗೂ ಮಾವೋವಾದಿಗಳ ಸುಳಿವು ಪತ್ತೆಯಾದ ಬಗ್ಗೆ ವರದಿಯಾಗಿಲ್ಲ.

    2012ರಲ್ಲಿ ಬಿಜಾಪುರದಲ್ಲಿ ಹಿರಿಯ ಮಾವೋವಾದಿ ನಾಯಕ ಗಣಪತಿ ಬಳಸುತ್ತಿದ್ದ 80 ಮೀಟರ್ ಉದ್ದದ ಸುರಂಗ ಪತ್ತೆಯಾಗಿತ್ತು. ನಂತರ, ಬಿಜಾಪುರದ ಕೆರ್ಪರ್ ಪ್ರದೇಶದಲ್ಲಿ, ನಾವು ಕಂಪ್ಯೂಟರ್ ಮತ್ತು ಇತರ ಉಪಕರಣಗಳನ್ನು ಸಂಗ್ರಹಿಸಲು ಬಳಸುತ್ತಿದ್ದ ಸುರಂಗವನ್ನು ಪತ್ತೆಹಚ್ಚಿದ್ದೆವು ಎಂದು ಅಧಿಕಾರಿಯೊಬ್ಬರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ ಕೇಸ್‌ – ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

  • ದಾಂತೇವಾಡ ಸ್ಫೋಟ ಪ್ರಕರಣ- ಅಪ್ರಾಪ್ತರು ಸೇರಿ ನಾಲ್ವರು ಮಾವೋವಾದಿಗಳು ಅರೆಸ್ಟ್

    ದಾಂತೇವಾಡ ಸ್ಫೋಟ ಪ್ರಕರಣ- ಅಪ್ರಾಪ್ತರು ಸೇರಿ ನಾಲ್ವರು ಮಾವೋವಾದಿಗಳು ಅರೆಸ್ಟ್

    ರೈಪುರ್: ದಾಂತೇವಾಡ (Dantewada) ಸ್ಫೋಟ ಪ್ರಕರಣದಲ್ಲಿ ಪಾಲ್ಗೊಂಡ ಆರೋಪದ ಮೇಲೆ ಮೂವರು ಅಪ್ರಾಪ್ತರು ಸೇರಿ ನಾಲ್ವರು ಮಾವೋವಾದಿಗಳನ್ನು (Maoists) ಛತ್ತೀಸ್‍ಗಢದ (Chhattisgarh) ಪೊಲೀಸರು ಬಂಧಿಸಿದ್ದಾರೆ.

    ನಾಲ್ವರು ಮಾವೋವಾದಿಗಳನ್ನು ಬುಧ್ರಾ ಮದ್ವಿ, ಜಿತೇಂದ್ರ ಮುಚಕಿ, ಹಿದ್ಮಾ ಮಡ್ಕಮ್ ಮತ್ತು ಹಿದ್ಮಾ ಮದ್ವಿ ಎಂದು ಗುರುತಿಸಲಾಗಿದೆ. ಇವರೆಲ್ಲ ನಿಷೇಧಿತ ಸಿಪಿಐನ ದರ್ಭಾ ವಿಭಾಗದ (Darbha Division) ಸದಸ್ಯರಾಗಿದ್ದಾರೆ. ಅಪ್ರಾಪ್ತರು 15 ರಿಂದ 17 ವರ್ಷದವರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನಕ್ಸಲರ ಅಟ್ಟಹಾಸ- IED ಬ್ಲಾಸ್ಟ್‌ಗೆ 11 ಯೋಧರು ಹುತಾತ್ಮ

    ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಓರ್ವನನ್ನು ಜೈಲಿನಲ್ಲಿರಿಸಲಾಗಿದೆ. ಅಪ್ರಾಪ್ತರನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಏ. 26 ರಂದು ದಾಂತೇವಾಡದಲ್ಲಿ ಮಾವೋವಾದಿಗಳು, ಜವಾನರನ್ನು ಸಾಗಿಸುತ್ತಿದ್ದ ವಾಹನವನ್ನು ಐಇಡಿ ಬಳಸಿ ಸ್ಫೋಟಿಸಿದ್ದರು (IED Blast). ಸ್ಪೋಟದಲ್ಲಿ ಹತ್ತು ಜಿಲ್ಲಾ ಶಸ್ತ್ರಾಸ್ತ್ರ ಪಡೆಯ ಯೋಧರು (DRG) ಮತ್ತು ಓರ್ವ ಸ್ಥಳೀಯ ಚಾಲಕ ಸಾವನ್ನಪ್ಪಿದ್ದರು. ಇದನ್ನೂ ಓದಿ: ಬಾಡಿಗೆ ವಾಹನದಲ್ಲಿ ಬರುತ್ತಿದ್ದ ಯೋಧರು – ದಾಳಿಗೆ ನಕ್ಸಲರಿಂದ 50 ಕೆಜಿ ಸುಧಾರಿತ IED ಬಳಕೆ

  • ದಾಂತೇವಾಡ ಸ್ಫೋಟ ಪ್ರಕರಣ- ಮಾಸ್ಟರ್‌ಮೈಂಡ್‌ ಫೋಟೋ ರಿಲೀಸ್

    ದಾಂತೇವಾಡ ಸ್ಫೋಟ ಪ್ರಕರಣ- ಮಾಸ್ಟರ್‌ಮೈಂಡ್‌ ಫೋಟೋ ರಿಲೀಸ್

    – ಸಹಚರರ ಮಾಹಿತಿ ಕೊಟ್ಟವ್ರಿಗೆ ನಗದು ಬಹುಮಾನ ಘೋಷಣೆ

    ರೈಪುರ್: ದಾಂತೇವಾಡ (Dantewada) ಸ್ಫೋಟದ ತನಿಖೆ ಕೈಗೊಂಡಿರುವ ಬಸ್ತಾರ್ ಪೊಲೀಸರು ಕೃತ್ಯದ ಮಾಸ್ಟರ್‌ಮೈಂಡ್‌ ( Mastermind) ಫೋಟೋ ಬಿಡುಗಡೆ ಮಾಡಿದ್ದಾರೆ. ಅಲ್ಲದೆ ಆತನ ಹಾಗೂ ಸಹಚರರ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ಪೊಲೀಸ್ ಇಲಾಖೆ ಘೋಷಿಸಿದೆ.

    ಸ್ಫೋಟದ ಮಾಸ್ಟರ್ ಮೈಂಡ್‍ನನ್ನು ಜಗದೀಶ್ ಎಂದು ಗುರುತಿಸಲಾಗಿದೆ. ಜಗದೀಶ್‍ನ ಪತ್ನಿ ಸುಕ್ಮಾ ಜಿಲ್ಲೆಯ ಹೇಮ್ಲಾ ಕೂಡ ನಕ್ಸಲ್ ಸಂಘಟನೆಯ ದರ್ಭಾ ವಿಭಾಗದಲ್ಲಿ ಕಮಾಂಡರ್ ಆಗಿದ್ದಾಳೆ. ಅಲ್ಲದೇ ಜಗದೀಶ್‍ನ ಮಾವ ವಿನೋದ್ ಹೇಮ್ಲಾ, ಕಾಂಗೇರ್ ಘಾಟಿ ಪ್ರದೇಶದ ನಕ್ಸಲ್ ಸಮಿತಿಯ ಉಸ್ತುವಾರಿಯಾಗಿ ಸಕ್ರಿಯರಾಗಿದ್ದಾನೆ. ಗುಪ್ತಚರ ಮಾಹಿತಿಯ ಪ್ರಕಾರ ದರ್ಭಾ (Darbha) ವಿಭಾಗದ ಸಿಪಿಐ (CPI Maoist) ಸ್ಫೋಟದಲ್ಲಿ ಭಾಗಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಲ್‍ಖೈದಾ ಜೊತೆ ನಂಟು ಶಂಕೆ – ಶಂಕಿತ ಭಯೋತ್ಪಾದಕನ ಸೆರೆ

    10 ಡಿಎಫ್‍ಜಿ (District Reserve Guard) ಸಿಬ್ಬಂದಿ ಮತ್ತು ಚಾಲಕನ ಜೀವವನ್ನು ಬಲಿ ಪಡೆದ ಸುಧಾರಿತ ಸ್ಫೋಟಕವನ್ನು (IED) ಎರಡು ತಿಂಗಳ ಹಿಂದೆಯೇ ಭೂಮಿಯಲ್ಲಿ ಹುದುಗಿಸಿಟ್ಟಿರುವ ಕುರುಹುಗಳಿವೆ. ಫಾಕ್ಸ್‌ಹೋಲ್‌ ತಂತ್ರಜ್ಞಾನವನ್ನು (Foxhole Mechanism) ಬಳಸಿ ಸುರಂಗ ತೆಗೆದು ಇರಿಸಿದ್ದರು. ಇದರಿಂದ ಅದು ಪತ್ತೆಯಾಗಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಗುಪ್ತಚರ ಮಾಹಿತಿಯ ಆಧಾರದ ಮೇಲೆ ಚೈತು, ದೇವಾ, ಮಂಗ್ಟು, ರಾನ್ಸಾಯಿ, ಜೈಲಾಲ್, ಬಮನ್, ಸೋಮ, ರಾಕೇಶ್, ಭೀಮಾ ಮತ್ತು ಇತರ ಮಾವೋವಾದಿಗಳ ವಿರುದ್ಧ ಸೆಕ್ಷನ್ 147 ಗಲಭೆ, 149 ಕಾನೂನು ಬಾಹಿರ ಚಟುವಟಿಕೆ, 307 ಕೊಲೆ ಯತ್ನ, 302 ಕೊಲೆ ಅಲ್ಲದೆ ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಯುಎಪಿಎ ಕಾಯ್ದೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    ಛತ್ತೀಸ್‍ಗಢದ (Chhattisgarh) ದಾಂತೇವಾಡದಲ್ಲಿ ಜಿಲ್ಲಾ ಮೀಸಲು ಪಡೆ ಸಿಬ್ಬಂದಿಯ ಮೇಲೆ ಮಾವೋವಾದಿಗಳ ದಾಳಿಯ ನಂತರದ ಕ್ಷಣಗಳನ್ನು ತೋರಿಸುವ ವೀಡಿಯೋವೊಂದು ಪತ್ತೆಯಾಗಿದೆ. ಇದರಲ್ಲಿ ಮಾವೋವಾದಿಯೊಬ್ಬ ಪೊಲೀಸರ ಮೇಲೆ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಏ.26 ರಂದು ಛತ್ತೀಸ್‍ಗಢದ ದಾಂತೇವಾಡದಲ್ಲಿ ಮಾವೋವಾದಿಗಳು ನಡೆಸಿದ್ದ ಐಇಡಿ ಸ್ಫೋಟದಲ್ಲಿ 10 ಜಿಲ್ಲಾ ಮೀಸಲು ಪಡೆಯ ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಸಾವನ್ನಪ್ಪಿದ್ದರು. ಇದನ್ನೂ ಓದಿ: ನಕ್ಸಲರ ಅಟ್ಟಹಾಸ- IED ಬ್ಲಾಸ್ಟ್‌ಗೆ 11 ಯೋಧರು ಹುತಾತ್ಮ

  • ದಾಂತೇವಾಡ ನಕ್ಸಲ್ ದಾಳಿ- ಮೃತ ಯೋಧನ ಶವಕ್ಕೆ ಹೆಗಲು ಕೊಟ್ಟ ಭೂಪೇಶ್ ಬಘೇಲ್

    ದಾಂತೇವಾಡ ನಕ್ಸಲ್ ದಾಳಿ- ಮೃತ ಯೋಧನ ಶವಕ್ಕೆ ಹೆಗಲು ಕೊಟ್ಟ ಭೂಪೇಶ್ ಬಘೇಲ್

    ರೈಪುರ್: ದಾಂತೇವಾಡದ (Dantewada) ಐಇಡಿ ದಾಳಿಯಲ್ಲಿ  (IED attack) ಪ್ರಾಣ ಕಳೆದುಕೊಂಡ ಜಿಲ್ಲಾ ಮೀಸಲು ಪಡೆ ಸಿಬ್ಬಂದಿಯ ಪಾರ್ಥೀವ ಶರೀರವನ್ನು ಸಾಗಿಸುವಾಗ ಛತ್ತೀಸ್‍ಗಢ ಸಿಎಂ ಭೂಪೇಶ್ ಬಘೇಲ್ (Bhupesh Baghel) ಹೆಗಲು ನೀಡಿದ್ದಾರೆ.

    ಘಟನೆಯಲ್ಲಿ ಹುತಾತ್ಮರಾದ ಯೋಧನ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಸಿಎಂ ಭೂಪೇಶ್ ಬಘೇಲ್ ತೆರಳಿದ್ದರು. ಈ ವೇಳೆ ಯೋಧನ ಪಾರ್ಥಿವ ಶರಿರವನ್ನು ಸಾಗಿಸಲು ತಮ್ಮ ಹೆಗಲು ನೀಡಿ ಸಹಕರಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾಳಿಯ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಗುಂಡಿನ ದಾಳಿ ನಡೆದಿದ್ದು ಓರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೋರ್ವ ನಕ್ಸಲ್ ಸದಸ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾನೆ ಎಂದು ಅವರು ತಿಳಿಸಿದ್ದಾರೆ.

    ದುಃಖತಪ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ ಅವರು ಸೈನಿಕರ ತ್ಯಾಗ ವ್ಯರ್ಥವಾಗುವುದಿಲ್ಲ. ನಕ್ಸಲ್ ಬೆದರಿಕೆಯನ್ನು ಎದುರಿಸಲು ಸೇನೆ ಸದೃಢವಾಗಿದೆ. ಈ ಘಟನೆಯು ಸರ್ಕಾರ ಮತ್ತು ಸೈನಿಕರ ನೈತಿಕ ಸ್ಥೈರ್ಯವನ್ನು ಕೆಡಿಸುವುದಿಲ್ಲ. ಪ್ರತಿಯಾಗಿ ಹೋರಾಡಲು ಸೇನೆ ಸಜ್ಜಾಗಿದೆ ಎಂದಿದ್ದಾರೆ.

    ಬುಧವಾರ ದಾಂತೇವಾಡದಲ್ಲಿ ನಡೆದ ಐಇಡಿ ದಾಳಿಯಲ್ಲಿ 10 ಡಿಆರ್‍ಜಿ ಸಿಬ್ಬಂದಿ ಮತ್ತು ವಾಹನದ ಚಾಲಕನಾಗಿದ್ದ ಒಬ್ಬ ನಾಗರಿಕ ಮೃತಪಟ್ಟಿದ್ದರು.

    ದಾಳಿಯನ್ನು ಪ್ರಧಾನಿ ಮೋದಿ (Narendra Modi) ಖಂಡಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಅವರ ತ್ಯಾಗವನ್ನು ಸದಾ ಸ್ಮರಿಸಲಾಗುವುದು ಎಂದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಇದನ್ನು ಹೇಡಿಗಳ ಕೃತ್ಯ ಎಂದು ಕರೆದಿದ್ದು, ಛತ್ತೀಸ್‍ಗಢ ಸರ್ಕಾರಕ್ಕೆ ಅಗತ್ಯವಾದ ಬೆಂಬಲವನ್ನು ನೀಡುವುದಾಗಿ ಘೋಷಿಸಿದ್ದರು.

  • ಬಾಡಿಗೆ ವಾಹನದಲ್ಲಿ ಬರುತ್ತಿದ್ದ ಯೋಧರು – ದಾಳಿಗೆ ನಕ್ಸಲರಿಂದ 50 ಕೆಜಿ ಸುಧಾರಿತ IED ಬಳಕೆ

    ಬಾಡಿಗೆ ವಾಹನದಲ್ಲಿ ಬರುತ್ತಿದ್ದ ಯೋಧರು – ದಾಳಿಗೆ ನಕ್ಸಲರಿಂದ 50 ಕೆಜಿ ಸುಧಾರಿತ IED ಬಳಕೆ

    ರಾಯ್ಪುರ: ಛತ್ತೀಸ್‍ಗಢದ (Chhattisgarh) ದಾಂತೇವಾಡದಲ್ಲಿ (Dantewada) ಬುಧವಾರ ನಡೆದ ನಕ್ಸಲರ ದಾಳಿಯಲ್ಲಿ 11 ಯೋಧರು ಹುತಾತ್ಮರಾಗಿದ್ದಾರೆ. ಆದರೆ ಈ ದಾಳಿಯು ಪೂರ್ವನಿಯೋಜಿತವಾಗಿದ್ದು, ಯೋಧರ ವಾಹನವನ್ನು ಸ್ಫೋಟಿಸಲು ನಕ್ಸಲರು ಮೊದಲೇ 50 ಕೆಜಿ ಸುಧಾರಿತ ಸ್ಫೋಟಕ ಸಾಧನವನ್ನು (IED) ರಸ್ತೆಯಲ್ಲಿ ಇಟ್ಟಿದ್ದರು ಎಂಬ ವಿಷಯ ಇದೀಗ ಬೆಳಕಿಗೆ ಬಂದಿದೆ.

    ಛತ್ತೀಸ್‍ಗಢದ ಅರನ್‍ಪುರ ಏರಿಯಾದಲ್ಲಿ ಮಾವೋವಾದಿಗಳು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಛತ್ತೀಸ್‍ಗಢದ ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ (ಡಿಆರ್‌ಜಿ)ನ ಸೈನಿಕರು ಅಲ್ಲಿಗೆ ತೆರಳಿದ್ದರು. ಈ ವೇಳೆ ಆ ಯೋಧರೆಲ್ಲರೂ ಬಾಡಿಗೆಗೆ ಪಡೆದ ಮಿನಿ ವ್ಯಾನ್‍ನಲ್ಲಿ ಪ್ರಯಾಣಿಸುತ್ತಿದ್ದರು.

    ಇದನ್ನೇ ಲಾಭವಾಗಿಸಿಕೊಂಡ ಮಾವೋವಾದಿಗಳು ನಕ್ಸಲರು ಸೇನಾ ವಾಹನ ವಾಪಸ್ ಬರುವ ಮಾರ್ಗದಲ್ಲಿ ಐಇಡಿ ಅಳವಡಿಸಿ ಇಟ್ಟಿದ್ದರು. ಅಷ್ಟೇ ಅಲ್ಲದೇ ಮರಗಳನ್ನು ಕಿತ್ತುಹಾಕಿ ರಸ್ತೆಯಲ್ಲಿ 10 ಅಡಿ ಆಳ ಹಾಗೂ 20 ಅಡಿ ಅಗಲದ ದೊಡ್ಡ ಕುಳಿ ತೋಡಿ, ಐಇಡಿಯನ್ನು ಬಚ್ಚಿಟ್ಟಿದರು.

    ನಕ್ಸಲರ ಯೋಜನೆಯಂತೆ ಕಾರ್ಯಚರಣೆ ಮುಗಿಸಿ ವಾಪಸ್ ಬರುತ್ತಿದ್ದ ಡಿಆರ್‌ಜಿ ವಾಹನ ಆ ಐಇಡಿ ಇದ್ದ ಸ್ಥಳ ದಾಂತೇವಾಡಕ್ಕೆ ಬಂದಿದೆ. ಈ ವೇಳೆ ಐಇಡಿ ಸ್ಫೋಟಗೊಂಡಿದ್ದು, ಅದರ ರಭಸಕ್ಕೆ ವಾಹನ ಚೂರು ಚೂರಾಗಿದೆ. ಜೊತೆಗೆ ಸೈನಿಕರ ದೇಹವೂ ಛೀದ್ರಗೊಂಡಿದೆ. ವಾಹನದಲ್ಲಿ 10 ಪೊಲೀಸರು ಹಾಗೂ ಓರ್ವ ಚಾಲಕ ಬಲಿಯಾಗಿದ್ದಾರೆ.

    ಯೋಧರ ವಾಹನವು ಸ್ಫೋಟದ ಸ್ಥಳದಿಂದ ಕನಿಷ್ಠ 20 ಅಡಿಗಳಷ್ಟು ದೂರಕ್ಕೆ ಹಾರಿದೆ. ಜೊತೆಗೆ ಸ್ಫೋಟದ ಸ್ಥಳದಿಂದ 150 ಮೀ. ದೂರದಲ್ಲಿ ಚೂರಾದ ವಾಹನದ ಅವಶೇಷಗಳು ಬಿದ್ದಿವೆ. ಘಟನೆಗೆ ಸಂಬಂಧಿಸಿ ವಿಶೇಷ ಭದ್ರತಾ ಪಡೆಗಳು ಕಾಡಿನಲ್ಲಿ ಅಡಗಿರುವ ಮಾವೋವಾದಿಗಳನ್ನು ಹುಡುಕುತ್ತಿವೆ ಎಂದು ಮೂಲಗಳು ತಿಳಿಸಿವೆ. ಈ ಪ್ರದೇಶವು 3 ರಾಜ್ಯಗಳ ಮಧ್ಯ ಇದ್ದು, ತ್ರಿ-ಜಂಕ್ಷನ್ ಆಗಿದೆ.

    ಗುಪ್ತಚರ ಮಾಹಿತಿ ಸಂಗ್ರಹವಾಗಿರಲಿಲ್ಲ: ಇಂದು ಮೃತಪಟ್ಟಿದ್ದ ಯೋಧರು ಡಿಆರ್‍ಜಿಯ ವಿಶೇಷ ತಂಡದ ಸದಸ್ಯರಗಿದ್ದಾರೆ. ನಕ್ಸಲರ ವಿರುದ್ಧ ಹೋರಾಡಲು ವಿಶೇಷವಾಗಿ ತರಬೇತಿ ಪಡೆದ ಸ್ಥಳೀಯ ಬುಡಕಟ್ಟು ಸಮುದಾಯದ ಸೈನಿಕರೇ ಹೆಚ್ಚಿನ ಜನರು ಇದರಲ್ಲಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.

    ಶಿಷ್ಟಾಚಾರದ ಪ್ರಕಾರ ಭದ್ರತಾಪಡೆಗಳು ಗುಪ್ತಚರ ಮಾಹಿತಿ ತಲುಪಿದ ಬಳಿಕ ಹಾಗೂ ಸ್ಥಳ ಪರಿಶೀಲನೆಯ ಬಳಿಕವಷ್ಟೇ ಮುಂದೆ ಸಾಗಬೇಕು. ಆದರೆ ಮೂಲಗಳ ಪ್ರಕಾರ ಛತ್ತೀಸ್‍ಗಢ ಜಿಲ್ಲಾ ಮೀಸಲು ಪಡೆ ಹೋಗುವ ಮಾರ್ಗದಲ್ಲಿ ಮುಂಚಿತವಾಗಿ ಗುಪ್ತಚರ ಮಾಹಿತಿ ಸಂಗ್ರಹವಾಗಿರಲಿಲ್ಲ. ಸ್ಥಳ ಪರಿಶಿಲನೆಯೂ ನಡೆದಿರಲಿಲ್ಲ. ನಕ್ಸಲರು ಡಿಆರ್‍ಜಿ ವಾಹನದ ಮೇಲೆ ಮೊದಲನಿಂದಲೂ ಕಣ್ಣಿಟ್ಟಿದ್ದರು. ಅದರ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದರು. ಡಿಆರ್‌ಜಿ ಪಡೆ ಹೋಗುವಾಗ ದಾರಿಯನ್ನು ಬದಲಿಸದೇ ಇರುವುದು ಘಟನೆಗೆ ಕಾರಣವಾಗಿದೆ.

    2 ರಾಜ್ಯಗಳಲ್ಲಿ ಹೈಅಲರ್ಟ್: ನಕ್ಸಲ್ ದಾಳಿ ಬೆನ್ನಲ್ಲೇ ಒಡಿಶಾದ 3 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಘಟನೆಯ ನಂತರ ಛತ್ತೀಸ್‍ಗಢದ ಗಡಿಭಾಗದ ಜಿಲ್ಲೆಗಳಾದ ಮಲ್ಕಾನ್‍ಗಿರಿ, ಕೊರಾಪುಟ್, ಬರ್ಗಾರ್ಡ್, ನುವಾಪಾದ ಮತ್ತು ನಬರಂಗ್‍ಪುರವನ್ನು ಹೈ ಅಲರ್ಟ್ ಮಾಡಲಾಗಿದೆ ಎಂದು ಒಡಿಶಾ ಪೊಲೀಸ್‍ನ ಗುಪ್ತಚರ ನಿರ್ದೇಶಕ ಸಂಜೀಬ್ ಪಾಂಡಾ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಮಗೆ ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯವಿದೆ : ಕಟೀಲ್

    ಛತ್ತೀಸ್‍ಗಢ ಸಿಎಂ, ಕರ್ನಾಟಕದ ಪ್ರವಾಸ ರದ್ದು: ಛತ್ತೀಸ್‍ಗಢ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕ ಭುಪೇಶ್ ಬಘೇಲ್ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಬರಬೇಕಿತ್ತು. ಆದರೆ ಯೋಧರ ಮೇಲೆ ದಾಳಿ ನಡೆದ ಬೆನ್ನಲ್ಲೇ ಕರ್ನಾಟಕ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಜೊತೆಗೆ ಘಟನಾ ಸ್ಥಳ ದಾಂತೇವಾಡಕ್ಕೆ ಭೇಟಿ ನೀಡಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ ಜೊತೆಗೆ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಇದನ್ನೂ ಓದಿ: ಶೆಟ್ಟರ್ ಅರ್ಥ ಮಾಡಿಕೊಳ್ಳಲು ಆಗಲಿಲ್ಲ, ಫೇಲ್ ಆದೆ: ಜೋಶಿ

  • ನಕ್ಸಲರ ಅಟ್ಟಹಾಸ- IED ಬ್ಲಾಸ್ಟ್‌ಗೆ 11 ಯೋಧರು ಹುತಾತ್ಮ

    ನಕ್ಸಲರ ಅಟ್ಟಹಾಸ- IED ಬ್ಲಾಸ್ಟ್‌ಗೆ 11 ಯೋಧರು ಹುತಾತ್ಮ

    ರಾಯ್ಪುರ: ಛತ್ತೀಸ್‌ಗಢದಲ್ಲಿ (Chhatisgarh) ಮತ್ತೆ ನಕ್ಸಲರು (Naxals) ಅಟ್ಟಹಾಸ ಮೆರೆದಿದ್ದು, ಚಾಲಕ ಹಾಗೂ 10 ಪೊಲೀಸ್‌ ಸಿಬ್ಬಂದಿ ಸೇರಿ 11 ಯೋಧರು ಹುತಾತ್ಮರಾದ ಘಟನೆ ಗುರುವಾರದಲ್ಲಿ ದಾಂತೇವಾಡದಲ್ಲಿ (Dantewada) ನಡೆದಿದೆ.

    ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಗುಪ್ತಚರ ಮಾಹಿತಿಯ ಮೇರೆಗೆ ಪ್ರಾರಂಭವಾದ ನಕ್ಸಲ್‌ ವಿರೋಧಿ ಕಾರ್ಯಾಚರಣೆಯಿಂದ ಪೊಲೀಸರು ಹಿಂತಿರುಗುತ್ತಿದ್ದರು. ಈ ವೇಳೆ ಈ ಘಟನೆ ನಡೆದಿದೆ. ಯೋಧರು ಸಂಚರಿಸುತ್ತಿದ್ದ ವಾಹನವನ್ನು ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ)ಯಿಂದ ದಾಳಿ ನಡೆಸಿ ಸ್ಫೋಟಿಸಿದ್ದಾರೆ. ಇದರ ಪರಿಣಾಮವಾಗಿ 10 ಭದ್ರತಾ ಸಿಬ್ಬಂದಿ ಮತ್ತು ಚಾಲಕ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ಸ್ಥಳಕ್ಕೆ ನಕ್ಸಲ್‌ ನಿಗ್ರಹ ದಳ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

    ಘಟನೆ ಕುರಿತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಪ್ರತಿಕ್ರಿಯಿಸಿ, ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಿದ ಅವರು, ದಾಳಿಯಲ್ಲಿ ಭಾಗಿಯಾಗಿರುವ ನಕ್ಸಲರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಈ ಹೋರಾಟವು ಕೊನೆಯ ಹಂತದಲ್ಲಿದೆ. ನಕ್ಸಲರನ್ನು ಬಿಡಲಾಗುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬೆನ್ನಿಗೆ ಚೂರಿ ಹಾಕಿದ ಶೆಟ್ಟರ್, ಸವದಿ ಸೋಲಿಸುವ ಹೊಣೆ ನನ್ನದು- ಯಡಿಯೂರಪ್ಪ

    ನಕ್ಸಲರೆಂದು ಕರೆಯಲ್ಪಡುವ ಮಾವೋವಾದಿಗಳು ಕಳೆದ 6 ದಶಕಗಳಿಂದ ನೂರಾರು ಜನರನ್ನು ಹತ್ಯೆಗೈದು ಸರ್ಕಾರದ ವಿರುದ್ಧ ಸಶಸ್ತ್ರ ಬಂಡಾಯವನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲೂ `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಮಾಡ್ಬೇಕು – ನಿರ್ಮಲಾ ಸೀತಾರಾಮನ್ ಕರೆ

  • ಸಾರ್ವಜನಿಕರ ಬಸ್‌ಗೆ ಬೆಂಕಿ ಇಟ್ಟ ನಕ್ಸಲರು – 15 ಮಂದಿ ಸಾವು

    ಸಾರ್ವಜನಿಕರ ಬಸ್‌ಗೆ ಬೆಂಕಿ ಇಟ್ಟ ನಕ್ಸಲರು – 15 ಮಂದಿ ಸಾವು

    ರಾಯಪುರ: ನಕ್ಸಲರ ಗುಂಪೊಂದು (Naxals) ಪ್ರಯಾಣಿಕರ ಬಸ್‌ಗೆ (Bus) ಬೆಂಕಿ ಹಚ್ಚಿ 15 ಜನ ಸಾವನ್ನಪ್ಪಿದ ಘಟನೆ ಛತ್ತೀಸ್‌ಗಢದ (Chattisgarh) ದಾಂತೇವಾಡ (Dantewada) ಜಿಲ್ಲೆಯ ಮಾಲೆವಾಹಿ (Malewahi) ಪ್ರದೇಶದಲ್ಲಿ ನಡೆದಿದೆ.

    ಮಾರ್ಚ್ 31ರಂದು ಮಧ್ಯಾಹ್ನ ಬಸ್ ದಾಂತೇವಾಡದಿಂದ ಸುಕ್ಮಾಗೆ (Sukma) ತೆರಳುತ್ತಿದ್ದ ಸಂದರ್ಭ, ಮಾಲೆವಾಹಿ ಬಳಿ ನಕ್ಸಲರು ಬಸ್ ತಡೆದು ಬೆಂಕಿ ಹಚ್ಚಿದ್ದಾರೆ. ಈ ಘಟನೆಯಿಂದ 15 ಜನ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ನಕಲಿ ಅಂಕಪಟ್ಟಿ ನೀಡಿ ಪ್ರಾಚಾರ್ಯ ಹುದ್ದೆಗೇರಿದ್ದ ಪ್ರಾಂಶುಪಾಲ- ಪ್ರಕರಣ ದಾಖಲು 

    ಈ ಘಟನೆಯನ್ನು ರಾಜಕೀಯ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಸಂತ್ರಸ್ತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ (Bhupesh Baghel) ನಕ್ಸಲರ ದಾಳಿಯನ್ನು ಖಂಡಿಸಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಸಂತ್ರಸ್ತರ ಕುಟುಂಬಕ್ಕೆ ಪರಿಹಾರವನ್ನೂ ಘೋಷಿಸಿದ್ದಾರೆ. ಇದನ್ನೂ ಓದಿ: ಇಂಡಿಗೋ ವಿಮಾನ ಸಿಬ್ಬಂದಿಯ ಜೊತೆ ಅನುಚಿತ ವರ್ತನೆ- ಸ್ವೀಡಿಷ್ ಪ್ರಜೆಯ ಬಂಧನ

    ನಾಗರಿಕರ ಮೇಲೆ ದಾಳಿ ನಡೆಯುತ್ತಿರುವುದು ಛತ್ತೀಸ್‌ಗಢದಲ್ಲಿ ಇದೇ ಮೊದಲಲ್ಲ. ಈ ಪ್ರದೇಶವು ಹಲವು ವರ್ಷಗಳಿಂದ ನಕ್ಸಲ್ ಹಿಂಸಾಚಾರವನ್ನು ಎದುರಿಸುತ್ತಿದೆ. ಅಮಾಯಕ ನಾಗರಿಕರು ಆಗಾಗ ಅವರ ದಾಳಿಗೆ ಒಳಗಾಗುತ್ತಾರೆ. ಈ ಪ್ರದೇಶದಲ್ಲಿ ನಕ್ಸಲ್ ಬಂಡಾಯವನ್ನು ಎದುರಿಸಲು ಸರ್ಕಾರ ಹಲವು ವರ್ಷಗಳಿಂದ ಪ್ರಯತ್ನಿಸುತ್ತಿದೆ. ಆದರೆ ಅನಿಶ್ಚಿತ ಪರಿಸ್ಥಿತಿಗಳಿಂದಾಗಿ ನಕ್ಸಲರು ಸರಾಗವಾಗಿ ದಾಳಿ ನಡೆಸುತ್ತಿದ್ದು, ಇದನ್ನು ನಿಭಾಯಿಸಲು ಭದ್ರತಾ ಪಡೆಯವರು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆಗೈದ ಪತ್ನಿಗೆ ಜೀವಾವಧಿ ಶಿಕ್ಷೆ

  • ಕಲಿಯುಗದ ಶ್ರವಣಕುಮಾರ- ಸ್ಕೂಟರ್​ನಲ್ಲಿ ತಾಯಿಗೆ ತೀರ್ಥಯಾತ್ರೆ

    ಕಲಿಯುಗದ ಶ್ರವಣಕುಮಾರ- ಸ್ಕೂಟರ್​ನಲ್ಲಿ ತಾಯಿಗೆ ತೀರ್ಥಯಾತ್ರೆ

    ಬೆಂಗಳೂರು: ಪುತ್ರನೋರ್ವ ತನ್ನ ತಾಯಿಯನ್ನು ಹಳೆ ಸ್ಕೂಟರ್ ನಲ್ಲಿ ಕರೆದುಕೊಂಡು ತೀರ್ಥಯಾತ್ರೆಯನ್ನು ಮಾಡಿಸುತ್ತಿದ್ದಾರೆ. ಮೈಸೂರು ನಿವಾಸಿಯಾಗಿರುವ ಕೃಷ್ಣ ಕುಮಾರ್ ತಮ್ಮ ತಾಯಿ ರತ್ನಮ್ಮ ಜೊತೆ ತೀರ್ಥಯಾತ್ರೆ ಮಾಡುತ್ತಾ ಇದೀಗ ಛತ್ತೀಸ್ ಗಢದ ದಂತೇವಾಡ ತಲುಪಿದ್ದಾರೆ.

    ಕೃಷ್ಣ ಕುಮಾರ್ ಅವರ ತಂದೆ ನಾಲ್ಕು ವರ್ಷಗಳ ಹಿಂದೆ ನಿಧನರಾಗಿದ್ದಾರೆ. ಒಂದು ದಿನ ರತ್ಮಮ್ಮನವರು, ನಿಮ್ಮ ತಂದೆ ಕೊನೆಗೂ ನನಗೆ ವೆಲ್ಲೂರು ದೇವಸ್ಥಾನ ತೋರಿಸಲಿಲ್ಲ. ನನ್ನನ್ನು ಒಂಟಿಯಾಗಿ ಬಿಟ್ಟು ಹೋಗಿಬಿಟ್ಟರು ಎಂದು ನೋವು ತೋಡಿಕೊಂಡಿದ್ದರು. ಅಂದು ಕೃಷ್ಣ ಕುಮಾರ್, ಕೇವಲ ವೆಲ್ಲೂರು ಏಕೆ, ದೇಶದ ನಾಲ್ಕು ದಿಕ್ಕಿನಲ್ಲಿರುವ ಕ್ಷೇತ್ರಗಳ ದರ್ಶನ ಮಾಡಿಸುತ್ತೇನೆ ಎಂದು ಮಾತು ಕೊಟ್ಟಿದ್ದರು.

    ತಾಯಿಗೆ ನೀಡಿದ ಮಾತಿನಂತೆ ತಂದೆಯ ನಲವತ್ತು ವರ್ಷದ ಹಳೆಯ ಸ್ಕೂಟರ್ ಮೇಲೆ ಅಮ್ಮನ ಜೊತೆ ಕೃಷ್ಣ ಕುಮಾರ್ ತೀರ್ಥಯಾತ್ರೆ ಆರಂಭಿಸಿದ್ದಾರೆ. ತಮಿಳುನಾಡು, ಆಂಧ್ರಪ್ರದೇಶ, ಮಾಹಾರಾಷ್ಟ್ರ, ಗೋವಾ, ಪುದುಚೇರಿ ಬಳಿಕ ಇದೀಗ ದಂತೇವಾಡದ ತಲುಪಿದ್ದು, ದಂತೇಶ್ವರಿ ದೇವರ ದರ್ಶನ ಪಡೆಯಲಿದ್ದಾರೆ.

    ತಂದೆ-ತಾಯಿ ಸೇವೆಯಲ್ಲಿ ತೊಡಗಿಕೊಂಡಿರುವ ಕೃಷ್ಣಕುಮಾರ್ ಗೆ ಮದುವೆ ಆಗಿಲ್ಲ. ತಂದೆಯ ನಿಧನದ ಬಳಿಕ ತಾಯಿಯೇ ಕೃಷ್ಣ ಕುಮಾರ್ ಅವರ ದೊಡ್ಡ ಆಸ್ತಿಯಾಗಿದ್ದಾರೆ. ತೀರ್ಥಯಾತ್ರೆಯನ್ನ ಬಸ್ ಅಥವಾ ಬೇರೆ ವಾಹನದ ಮೂಲಕ ಕೈಗೊಳ್ಳಬಹುದಿತ್ತು ಎಂದು ಕೇಳಿದ್ರೆ, ಸ್ಕೂಟರ್ ನಮ್ಮ ಜೊತೆಯಲ್ಲಿದ್ದರೆ ತಂದೆಯೊಂದಿಗೆ ಪ್ರಯಾಣ ಮಾಡುತ್ತಿದ್ದೇವೆ ಅನ್ನಿಸುತ್ತದೆ ಎಂದು ಕೃಷ್ಣ ಕುಮಾರ್ ಹೇಳುತ್ತಾರೆ.

    ತಾಯಿಯ ಸೇವೆ ಮಾಡುವುದರಲ್ಲಿಯೇ ನನಗೆ ಖುಷಿ ಹಾಗೂ ತೃಪ್ತಿ ಸಿಗುತ್ತದೆ. ಸ್ಕೂಟರ್ ಜೊತೆ ತಂದೆಯ ನೆನಪುಗಳು ಬೆಸೆದುಕೊಂಡಿವೆ. ಒಂದು ಸ್ಟೆಪ್ನಿ ಜೊತೆ ಪ್ರಯಾಣ ಮಾಡುತ್ತಿದ್ದು, ಇದೂವರೆಗೂ ಎರಡು ಬಾರಿ ಮಾತ್ರ ಮಾರ್ಗ ಮಧ್ಯೆ ಸ್ಕೂಟರ್ ಪಂಚರ್ ಆಗಿದೆ. ಹೋದ ಸ್ಥಳಗಳಲ್ಲಿ ಒಳ್ಳೆಯ ಜನರು ಸಿಗುತ್ತಿದ್ದು, ನಮಗೆ ಸಹಾಯ ಮಾಡುತ್ತಿದ್ದಾರೆ ಎಂದು ಕೃಷ್ಣ ಕುಮಾರ್ ತಿಳಿಸಿದರು.

    ಮಗ ನನಗಾಗಿ ಮದುವೆ ಮಾಡಿಕೊಳ್ಳಲಿಲ್ಲ. ಕೃಷ್ಣ ಕುಮಾರನನೇ ನನಗೆ ಮಗ ಮತ್ತು ಮಗಳಾಗಿ ನೋಡಿಕೊಳ್ಳುತ್ತಿದ್ದಾನೆ. ಪ್ರಯಾಣದಲ್ಲಿ ಇದೂವರೆಗೂ ಯಾವುದೇ ತೊಂದರೆ ಆಗಿಲ್ಲ. ಇಂತಹ ಮಗನನ್ನು ಎಲ್ಲರಿಗೂ ದೇವರು ಕರುಣಿಸಲಿ ಎಂದು ತಾಯಿ ರತ್ನಮ್ಮ ಪುತ್ರನ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದರು.