Tag: Darbhang

  • ಮೈಸೂರಿನಿಂದ ಹೊರಟಿದ್ದ ರೈಲು ಅಪಘಾತ; ದಕ್ಷಿಣ ರೈಲ್ವೆಯಿಂದ ಸಹಾಯವಾಣಿ ನಂಬರ್ ಬಿಡುಗಡೆ

    ಮೈಸೂರಿನಿಂದ ಹೊರಟಿದ್ದ ರೈಲು ಅಪಘಾತ; ದಕ್ಷಿಣ ರೈಲ್ವೆಯಿಂದ ಸಹಾಯವಾಣಿ ನಂಬರ್ ಬಿಡುಗಡೆ

    – ಮೈಸೂರಿನಿಂದ 180 ಮಂದಿ ಪ್ರಯಾಣ
    – ಬೆಂಗಳೂರು ನಿಲ್ದಾಣದಿಂದ 600 ಜನ ಬೋರ್ಡಿಂಗ್ ಆಗಿರೋ ಮಾಹಿತಿ

    ಚೆನ್ನೈ: ಮೈಸೂರುನಿಂದ ದರ್ಭಾಂಗ್‌ಗೆ ಹೊರಟಿದ್ದ ಭಾಗಮತಿ ಎಕ್ಸ್‌ಪ್ರೆಸ್‌ ರೈಲು ಚೆನ್ನೈ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದ್ದು, ಬೋಗಿಗಳು ಹೊತ್ತು ಉರಿದಿವೆ. ಈ ಹಿನ್ನೆಲೆಯಲ್ಲಿ ದಕ್ಷಿಣ ರೈಲ್ವೆಯ ಚೆನ್ನೈ ವಿಭಾಗವು ಸಹಾಯವಾಣಿ ನಂಬರ್ ಪ್ರಕಟಿಸಿದೆ.

    ಚೆನ್ನೈ ವಿಭಾಗ: 04425354151, 0442435499
    ಬೆಂಗಳೂರು ವಿಭಾಗ: 8861309815
    ಮೈಸೂರು ವಿಭಾಗ: 9731143981

    ಅಪಘಾತದಲ್ಲಿ 10 ಮಂದಿಗೆ ಗಾಯವಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರು ಅಪಾಯಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ಈ ವೇಳೆ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲಿನ ಕಿಟಕಿಗಳ ಮೂಲಕ ಕೆಲ ಪ್ರಯಾಣಿಕರು ಹೊರಬಂದಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ರೈಲಿನಲ್ಲಿ 900 ಪ್ರಯಾಣಿಕರು ಇರುವುದಾಗಿ ಅಂದಾಜಿಸಲಾಗಿದ್ದು, ಮೈಸೂರಿನ 180 ಜನ ಪ್ರಯಾಣಿಕರಿದ್ದರು ಎಂದು ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

    ನಾಲ್ಕು ಎಸಿ ಕೋಚ್‌ಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಎನ್‌ಡಿಆರ್‌ಎಫ್ ತಂಡ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

    ರೈಲ್ವೆ ದುರಂತ ಪ್ರಕರಣ ಬೋರ್ಡಿಂಗ್ ಆದ ಪ್ರಯಾಣಿಕರ ಮಾಹಿತಿ

    ಬೆಂಗಳೂರು – 600 ಜನ ಬೋರ್ಡಿಂಗ್

    ಕೆಂಗೇರಿ – 200 ಜನ ಬೋರ್ಡಿಂಗ್

    ಮಂಡ್ಯ – 30 ಜನ ಬೋರ್ಡಿಂಗ್ ಇದನ್ನೂ ಓದಿ: ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್, ಗೂಡ್ಸ್ ರೈಲಿಗೆ ಡಿಕ್ಕಿ – ಹೊತ್ತಿ ಉರಿದ ಬೋಗಿಗಳು

  • ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್, ಗೂಡ್ಸ್ ರೈಲಿಗೆ ಡಿಕ್ಕಿ – ಹೊತ್ತಿ ಉರಿದ ಬೋಗಿಗಳು

    ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್, ಗೂಡ್ಸ್ ರೈಲಿಗೆ ಡಿಕ್ಕಿ – ಹೊತ್ತಿ ಉರಿದ ಬೋಗಿಗಳು

    ಚೆನ್ನೈ: ಮೈಸೂರಿನಿಂದ ದರ್ಭಾಂಗ್‌ಗೆ (Mysuru-Darbhang) ತೆರಳುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್ (Bagamathi Express) ರೈಲು, ಚೆನ್ನೈ (Chennai) ಸಮೀಪದ ಕವರೈಪೆಟ್ಟೈ (Kavaraipettai) ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದ್ದು, ಎರಡು ಬೋಗಿಗಳು ಹೊತ್ತಿ ಉರಿದಿವೆ.

    ಶುಕ್ರವಾರ ಮೈಸೂರಿನಿಂದ ದರ್ಭಾಂಗ್‌ಗೆ ಭಾಗಮತಿ ಎಕ್ಸ್‌ಪ್ರೆಸ್ ರೈಲು ಪ್ರಯಾಣಿಸುತ್ತಿತ್ತು. ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಭಾಗಮತಿ ಎಕ್ಸ್‌ಪ್ರೆಸ್ರೈಲಿನ ಆರು ಬೋಗಿಗಳು ಹಳಿತಪ್ಪಿದ್ದು, 2 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಇದನ್ನೂ ಓದಿ:ನಾನು ಸುಮ್ಮನೆ ಬಂದರೆ ಅತಿಥಿ ಹುಡುಕೊಂಡು ಬಂದರೆ ತಿಥಿ: ಡೈಲಾಗ್ ಹೊಡೆದ ಶಿವಣ್ಣ

    ಅಪಘಾತಕ್ಕೆ ಸಂಬಂಧಿಸಿದಂತೆ ತಿರುವಳ್ಳೂರು (Tiruvallur) ಜಿಲ್ಲಾಧಿಕಾರಿ ಟಿ.ಪ್ರಭುಶಂಕರ್ ಮಾತನಾಡಿ, ರಕ್ಷಣಾ ಕಾರ್ಯಚಾರಣೆ ನಡೆಯುತ್ತಿದ್ದು, ಸಾವು-ನೋವಿನ ಬಗ್ಗೆ ಯಾವುದೇ ರೀತಿಯ ಮಾಹಿತಿ ಲಭಿಸಿಲ್ಲ ಎಂದು ತಿಳಿಸಿದ್ದಾರೆ.

    ರೈಲು ಹಳಿ ತಪ್ಪಿರುವುದು ಈ ಅವಘಡಕ್ಕೆ ಕಾರಣವಾಗಿರಬಹುದು. ಲೂಪ್ ಲೈನ್ ಪ್ರವೇಶಿಸಿ ಬಳಿಕ ರೈಲಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದನ್ನೂ ಓದಿ:ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ಎಡಿಜಿಪಿ ಚಂದ್ರಶೇಖರ್‌ ದೂರು – ಎನ್‌ಸಿಆರ್‌ ದಾಖಲು