Tag: Darjeeling

  • Darjeeling Flood | ರಣಭೀಕರ ಮಳೆಗೆ ಭೂಕುಸಿತ – ಸಾವಿನ ಸಂಖ್ಯೆ 23ಕ್ಕೆ ಏರಿಕೆ

    Darjeeling Flood | ರಣಭೀಕರ ಮಳೆಗೆ ಭೂಕುಸಿತ – ಸಾವಿನ ಸಂಖ್ಯೆ 23ಕ್ಕೆ ಏರಿಕೆ

    – ಇಂದು ಡಾರ್ಜಿಲಿಂಗ್‌ಗೆ ಸಿಎಂ ಮಮತಾ ಬ್ಯಾನರ್ಜಿ ಭೇಟಿ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಡಾರ್ಜಿಲಿಂಗ್‌ನಲ್ಲಿ (Darjeeling) ಸುರಿಯುತ್ತಿರುವ ರಣಭೀಕರ ಮಳೆಗೆ ಹಲವೆಡೆ ಭೂಕುಸಿತ “(Landslide) ಉಂಟಾಗಿದ್ದು, ಸಾವಿನ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.

    ಭಾನುವಾರ (ಸೆ.6) ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. 23 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಸರ್ಸಾಲಿ, ಜಸ್ಬೀರ್‌ಗಾಂವ್, ನಾಗರಕಟಾ, ಮಿರಿಕ್ ಬಸ್ತಿ, ಧಾರ್‌ಗಾವ್ (ಮೆಚಿ), ಮತ್ತು ಮಿರಿಕ್ ಲೇಕ್ ಪ್ರದೇಶ ಸೇರಿದಂತೆ ಹಲವೆಡೆ ಜನ ಪ್ರಾಣಕಳೆದುಕೊಂಡಿದ್ದಾರೆ.ಇದನ್ನೂ ಓದಿ: Darjeeling Flood | 24/7 ಕಂಟ್ರೋಲ್‌ ರೂಮ್‌ ಓಪನ್‌ – ನಾಳೆ ಡಾರ್ಜಿಲಿಂಗ್‌ಗೆ ದೀದಿ ಭೇಟಿ

    ಕೇವಲ 12 ಗಂಟೆಯಲ್ಲಿ 300 ಮಿ.ಮೀ ಮಳೆಯಾಗಿದ್ದರಿಂದ ಪ್ರವಾಹ, ಭೂಕುಸಿತ ಉಂಟಾಗಿದೆ ಎನ್ನಲಾಗಿದೆ. ಸದ್ಯ ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಚರಣೆ ನಡೆಸುತ್ತಿವೆ. ನಾಗರಕಟಾದ ಧಾರ್‌ಗಾವ್‌ನಲ್ಲಿ ಭೂಕುಸಿತದಿಂದಾಗಿ ನೆಲಸಮವಾದ ಮನೆಗಳ ಅವಶೇಷಗಳಡಿಯಿಂದ ಕನಿಷ್ಠ 40 ಜನರನ್ನು ರಕ್ಷಿಸಲಾಗಿದೆ.

    ಇನ್ನೂ ಬಂಗಾಳ-ಸಿಕ್ಕಿಂ ಡಾರ್ಜಿಲಿಂಗ್-ಸಿಲಿಗುರಿ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಭೂಕುಸಿತಸಂಭವಿಸಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ, ಗೂರ್ಖಾಲ್ಯಾಂಡ್ ಪ್ರಾದೇಶಿಕ ಆಡಳಿತವು ಡಾರ್ಜಿಲಿಂಗ್‌ನ ಟೈಗರ್‌ಹಿಲ್ ಮತ್ತು ರಾಕ್ ಗಾರ್ಡನ್ ಸೇರಿದಂತೆ ಪ್ರವಾಸಿ ತಾಣಗಳನ್ನು ಮುಚ್ಚಲು ನಿರ್ಧರಿಸಿದೆ. ಜೊತೆಗೆ ರೈಲು ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಸೋಮವಾರದವರೆಗೂ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಸ್ಥಳೀಯರು ಮತ್ತು ಪ್ರವಾಸಿಗರಿಗಾಗಿ 9147889078 ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗಿದೆ.

    ಸಾರ್ವಜನಿಕರ ಸಹಾಯಕ್ಕಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ 24/7 ಕಂಟ್ರೋಲ್ ರೂಮ್ ತೆರೆದಿದ್ದಾರೆ. ಈಗಾಗಲೇ ಪರಿಸ್ಥಿತಿಯನ್ನು ಕಂಟ್ರೋಲ್ ರೂಮ್ ಮೂಲಕ ಮೇಲ್ವಿಚಾರಣೆ ಮಾಡುತ್ತಿದ್ದು, ಇಂದು (ಅ.6) ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.

    ಸಿಕ್ಕಿಂ ಸಂಪರ್ಕ ಕಡಿತ:
    ಡಾರ್ಜಿಲಿಂಗ್‌ನಲ್ಲಿ ಸಂಭವಿಸಿದ ಈ ವಿಪತ್ತು ಹಿಮಾಲಯ ರಾಜ್ಯವಾದ ಸಿಕ್ಕಿಂ ಜೊತೆಗಿನ ಸಂಪರ್ಕ ಕಡಿತಗೊಳಿಸಿದೆ. ಮಿರಿಕ್ ಮತ್ತು ಸುಖಿಯಾ ಪೋಖಾರಿಯಂತಹ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿದ್ದು, ಪೊಲೀಸರು ಮತ್ತು ಸ್ಥಳೀಯ ಆಡಳಿತವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ಬಂಗಾಳ ಮತ್ತು ಸಿಕ್ಕಿಂ ಅನ್ನು ಸಂಪರ್ಕಿಸುವ ರಸ್ತೆ, ಡಾರ್ಜಿಲಿಂಗ್ ಮತ್ತು ಸಿಲಿಗುರಿಯನ್ನು ಸಂಪರ್ಕಿಸುವ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಭೂಕುಸಿತಗಳು ರಸ್ತೆ ತಡೆಗಳಿಗೆ ಕಾರಣವಾಗಿವೆ. ದುರ್ಗಾ ಪೂಜೆಯ ನಂತರ ಕೋಲ್ಕತ್ತಾ ಮತ್ತು ಬಂಗಾಳದ ಇತರ ಭಾಗಗಳಿಂದ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಡಾರ್ಜಿಲಿಂಗ್‌ಗೆ ಪ್ರಯಾಣಿಸುತ್ತಾರೆ. ಈ ವಿಪತ್ತಿನಲ್ಲಿ ಅನೇಕ ಪ್ರವಾಸಿಗರು ಸಿಲುಕಿಕೊಳ್ಳುವ ಸಾಧ್ಯತೆಯಿದೆ.ಇದನ್ನೂ ಓದಿ: ಜೈಪುರ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಅವಘಡ – 6 ರೋಗಿಗಳು ಸಜೀವ ದಹನ

     

  • ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಗೆ ಭೂಕುಸಿತ; 14 ಮಂದಿ ಸಾವು – ಸಿಕ್ಕಿಂ ಸಂಪರ್ಕ ಕಡಿತ

    ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಗೆ ಭೂಕುಸಿತ; 14 ಮಂದಿ ಸಾವು – ಸಿಕ್ಕಿಂ ಸಂಪರ್ಕ ಕಡಿತ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ (Darjeeling) ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ, ಹದಿನಾಲ್ಕು ಜನರು ಸಾವನ್ನಪ್ಪಿದ್ದಾರೆ.

    ಪ್ರಮುಖ ಮಾರ್ಗಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡ ಪರಿಣಾಮ ಜನ ಮೃತಪಟ್ಟಿದ್ದಾರೆ. ಈ ವಿಪತ್ತು ಹಿಮಾಲಯ ರಾಜ್ಯವಾದ ಸಿಕ್ಕಿಂ ಜೊತೆಗಿನ ಸಂಪರ್ಕ ಕಡಿತಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಉತ್ತರ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದ್ದು, ಮಿರಿಕ್ ಮತ್ತು ಸುಖಿಯಾ ಪೋಖಾರಿಯಂತಹ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿದೆ. ಪೊಲೀಸರು ಮತ್ತು ಸ್ಥಳೀಯ ಆಡಳಿತವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ಬಂಗಾಳ ಮತ್ತು ಸಿಕ್ಕಿಂ ಅನ್ನು ಸಂಪರ್ಕಿಸುವ ರಸ್ತೆ, ಡಾರ್ಜಿಲಿಂಗ್ ಮತ್ತು ಸಿಲಿಗುರಿಯನ್ನು ಸಂಪರ್ಕಿಸುವ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಭೂಕುಸಿತಗಳು ರಸ್ತೆ ತಡೆಗಳಿಗೆ ಕಾರಣವಾಗಿವೆ.

    ದುರ್ಗಾ ಪೂಜೆಯ ನಂತರ ಕೋಲ್ಕತ್ತಾ ಮತ್ತು ಬಂಗಾಳದ ಇತರ ಭಾಗಗಳಿಂದ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಡಾರ್ಜಿಲಿಂಗ್‌ಗೆ ಪ್ರಯಾಣಿಸುತ್ತಾರೆ. ಈ ವಿಪತ್ತಿನಲ್ಲಿ ಅನೇಕ ಪ್ರವಾಸಿಗರು ಸಿಲುಕಿಕೊಳ್ಳುವ ಸಾಧ್ಯತೆಯಿದೆ.

    ಯಾವುದೇ ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ, ಗೂರ್ಖಾಲ್ಯಾಂಡ್ ಪ್ರಾದೇಶಿಕ ಆಡಳಿತವು ಡಾರ್ಜಿಲಿಂಗ್‌ನ ಟೈಗರ್ ಹಿಲ್ ಮತ್ತು ರಾಕ್ ಗಾರ್ಡನ್ ಸೇರಿದಂತೆ ಪ್ರವಾಸಿ ತಾಣಗಳನ್ನು ಮುಚ್ಚಲು ನಿರ್ಧರಿಸಿದೆ. ಆಟಿಕೆ ರೈಲು ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ.

  • ಪ್ರಯಾಣಿಕರ ಮೂಲ ಸೌಕರ್ಯ ಕಡೆಗಣಿಸಿ, ವಂದೇ ಭಾರತ್‌ ಮಾತ್ರ ಪಬ್ಲಿಸಿಟಿ ಮಾಡ್ತಿದ್ದಾರೆ: ದೀದಿ ಕೆಂಡಾಮಂಡಲ

    ಪ್ರಯಾಣಿಕರ ಮೂಲ ಸೌಕರ್ಯ ಕಡೆಗಣಿಸಿ, ವಂದೇ ಭಾರತ್‌ ಮಾತ್ರ ಪಬ್ಲಿಸಿಟಿ ಮಾಡ್ತಿದ್ದಾರೆ: ದೀದಿ ಕೆಂಡಾಮಂಡಲ

    ಕೋಲ್ಕತ್ತಾ: ಕೇಂದ್ರ ಸರ್ಕಾರ ರೈಲ್ವೆ ಇಲಾಖೆ ಹಾಗೂ ರೈಲುಗಳಲ್ಲಿ ಮೂಲ ಸೌಕರ್ಯಗಳನ್ನು ಕಡೆಗಣಿಸಿ, ವಂದೇ ಭಾರತ್‌ ರೈಲುಗಳ ಬಗ್ಗೆ ಮಾತ್ರ ಪಬ್ಲಿಸಿಟಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಕಿಡಿ ಕಾರಿದ್ದಾರೆ.

    ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ನಡೆದ ರೈಲು ದುರಂತದ ಕುರಿತು ಮಾತನಾಡಿದ ಸಿಎಂ, ರೈಲ್ವೆ ಸುರಕ್ಷತೆಗಾಗಿ ನಾನು ಅನೇಕ ಕೆಲಸಗಳನ್ನು ಪ್ರಾರಂಭಿಸಿದ್ದೇನೆ. ಆದ್ರೆ ಬಿಜೆಪಿಯವರು ವಂದೇ ಭಾರತ್‌ (Vande Bharat) ಬಗ್ಗೆ ಪಬ್ಲಿಸಿಟಿ ಮಾಡ್ತಿದ್ದಾರೆ. ರಾಜಧಾನಿ ಎಕ್ಸ್‌ಪ್ರೆಸ್ ನಂತರ ದುರೊಂತೊ ಎಕ್ಸ್‌ಪ್ರೆಸ್‌ (Duronto Express) ಅತ್ಯಂತ ವೇಗದ ರೈಲು, ಈಗ ಅದು ಎಲ್ಲಿದೆ? ಇದೆಲ್ಲವು ರೈಲ್ವೆ ಇಲಾಖೆಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ. ಇದನ್ನೂ ಓದಿ: ರಾಜಧಾನಿಗೆ ಅಮರಾವತಿಯನ್ನೇ ಚಂದ್ರಬಾಬು ನಾಯ್ಡು ಆಯ್ದುಕೊಂಡಿದ್ದು ಏಕೆ..?

    ಕೇಂದ್ರ ಸರ್ಕಾರ ಬಣ್ಣ ಬಣ್ಣದ ಮಾತುಗಳನ್ನಾಡುತ್ತಾ ಪ್ರಯಾಣಿಕರ ಮೂಲ ಸೌಕರ್ಯಗಳನ್ನು ನಿರ್ಲಕ್ಷಿಸುತ್ತಿದೆ. ಸ್ಲೀಪರ್‌ ಕೋಚ್‌ಗಳಲ್ಲಿ ರಾತ್ರಿ ಪ್ರಯಾಣಿಸುವವರಿಗೆ ಕಳಪೆ ಹಾಸಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೇ ಕೋಚ್‌ಗಳಲ್ಲಿ ಶೌಚಾಲಯಗಳಲ್ಲಿ ಶುಚಿತ್ವವೂ ಇರುವುದಿಲ್ಲ. ಕೇಂದ್ರ ಸರ್ಕಾರ ರೈಲ್ವೆ ಇಲಾಖೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಯೋಜನೆಗಳನ್ನು ಉದ್ಘಾಸಿಟುವ ವೇಳೆ ಮಾತ್ರ ಆ ಇಲಾಖೆಗಳನ್ನು ನೋಡುವಂತಾಗಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಕಳೆದ 3 ದಶಕಗಳಲ್ಲಿ ದೇಶ ಕಂಡ ಡೆಡ್ಲಿ ರೈಲು ದುರಂತಗಳ ಬಗ್ಗೆ ನಿಮಗೆ ಗೊತ್ತಾ?

    ರೈಲ್ವೆ ಇಲಾಖೆ (Railway Department) ಈಗ ಹೆಸರಿಗೆ ಮಾತ್ರ ಅಸ್ತಿತ್ವದಲ್ಲಿದೆ. ಬಜೆಟ್‌ ಕೊರತೆಯಿಂದ ಪೋಷಣೆ ಮಾಡುವವರೇ ಇಲ್ಲದಂತಾಗಿದೆ. ನಾನೂ ಈ ಹಿಂದೆ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಿರುವುದರಿಂದ ಅಲ್ಲಿನ ಸಮಸ್ಯೆಗಳ ಬಗ್ಗೆ ನನಗೆ ಅರಿವಿದೆ. ಈಗಿನ ಸರ್ಕಾರ ರೈಲ್ವೆ ಅಧಿಕಾರಿಗಳು, ಎಂಜಿನಿಯರ್‌ಗಳು, ತಾಂತ್ರಿಕ ಸಿಬ್ಬಂದಿ, ಸುರಕ್ಷತಾ ಅಧಿಕಾರಿಗಳು ಮತ್ತು ಕಾರ್ಮಿಕರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ರೈಲ್ವೆ ಸಿಬ್ಬಂದಿಗೆ ನೀಡಲಾಗಿದ್ದ ಹಳೆಯ ಪಿಂಚಣಿ ವ್ಯವಸ್ಥೆಯನ್ನೂ ಹಿಂಪಡೆಯಲಾಗಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಅಲ್ಲದೇ ಈ ಹಿಂದೆ ರೈಲುಗಳ ಸುರಕ್ಷತೆಗಾಗಿ ನಮ್ಮ ಸರ್ಕಾರ ವ್ಯವಸ್ಥೆಗೊಳಿಸಿದ್ದ ಆಂಟಿ-ಕೊಲ್ಯೂಷನ್ ಸಾಧನವನ್ನು ಬಿಜೆಪಿ ʻಕವಚʼ ಎಂದು ಮರುನಾಮಕರಣ ಮಾಡಿದೆ. ಈ ವ್ಯವಸ್ಥೆಯು ಚಾಲಕ ನಿದ್ರಿಸುತ್ತಿದ್ದರೆ ಅಲಾರಂ ನಿಂದ ಎಚ್ಚರಿಸುತ್ತದೆ. ಎರಡೂ ರೈಲುಗಳು ಒಂದೇ ಟ್ರ್ಯಾಕ್‌ನಲ್ಲಿ ಬಂದರೆ ನಿಲ್ಲುತ್ತದೆ. ಬಿಜೆಪಿ ಇದನ್ನು ಮರುನಾಮಕರಣ ಮಾಡಿದರೂ ಪರವಾಗಿಲ್ಲ, ಆದ್ರೆ ಜನರಿಗೆ ಅದು ರಕ್ಷಾಕವಚವಾಗಿರುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    ಕಾಂಜನಜುಂಗಾ ಎಕ್ಸ್‌ರೈಲು (Kanchanjunga Express Train) ಅಪಘಾತ ನಡೆದ ಸ್ಥಳಕ್ಕೆ ಸದ್ಯ ವೈದ್ಯಕೀಯ ತಂಡಗಳು ಹಾಗೂ ವಿಪತ್ತು ನಿರ್ವಹಣಾ ತಂಡಗಳನ್ನು ಕಳುಹಿಸಲಾಗಿದೆ. ಅಪಘಾತದಲ್ಲಿ ಸಂತ್ರಸ್ತರನ್ನ ರಕ್ಷಣೆ ಮಾಡಲಾಗಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಹಿಂದಿನಿಂದ ಎಕ್ಸ್‌ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು – ಐವರು ದುರ್ಮರಣ, 25 ಮಂದಿಗೆ ಗಾಯ

    ಡಾರ್ಜಿಲಿಂಗ್‌ ಘಟನೆ ಏನು?
    ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಗೂಡ್ಸ್ ರೈಲೊಂದು ಹಿಂಬದಿಯಿಂದ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಸಾವಿನ ಸಂಖ್ಯೆ 9ಕ್ಕೆ ಏರಿದ್ದು, ಸುಮಾರು 60 ಮಂದಿ ಗಾಯಗೊಂಡಿದ್ದಾರೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

  • ಕಳೆದ 3 ದಶಕಗಳಲ್ಲಿ ದೇಶ ಕಂಡ ಡೆಡ್ಲಿ ರೈಲು ದುರಂತಗಳ ಬಗ್ಗೆ ನಿಮಗೆ ಗೊತ್ತಾ?

    ಕಳೆದ 3 ದಶಕಗಳಲ್ಲಿ ದೇಶ ಕಂಡ ಡೆಡ್ಲಿ ರೈಲು ದುರಂತಗಳ ಬಗ್ಗೆ ನಿಮಗೆ ಗೊತ್ತಾ?

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ (West Bengal Train Accident) ಮೃತಪಟ್ಟವರ ಸಂಖ್ಯೆ 9ಕ್ಕೆ ಹಾಗೂ ಗಾಯಾಳುಗಳ ಸಂಖ್ಯೆ 60ಕ್ಕೆ ಏರಿಕೆಯಾಗಿದೆ. ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ (PM Modi), ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.

    ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ರೂ. ನೆರವು ನೀಡುವುದಾಗಿ ಪ್ರಧಾನಿ ಕಾರ್ಯಾಲಯ ಘೋಷಿಸಿದೆ. ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ (Darjeeling) ನಡೆದ ರೈಲು ದುರಂತವು ಕಳೆದ ವರ್ಷ ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ದುರಂತವನ್ನೇ ನೆನಪಿಸಿದೆ. ಈ ಹೊತ್ತಿನಲ್ಲಿ ಕಳೆದ ಮೂರು ದಶಕಗಳಲ್ಲಿ ದೇಶದಲ್ಲಿ ಸಂಭವಿಸಿದ ಭೀಕರ ರೈಲು ದುರಂತಗಳ ಬಗ್ಗೆ ತಿಳಿಯುವುದು ಮುಖ್ಯವಾಗಿದೆ. ಇದನ್ನೂ ಓದಿ: ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರ ದಾಳಿ ಪ್ರಕರಣ – ತನಿಖೆ ಎನ್‍ಐಎ ಹೆಗಲಿಗೆ

    ಡೆಡ್ಲಿ ರೈಲು ದುರಂತಗಳು:
    2023: ಒಡಿಶಾದ ಬಾಲಸೋರ್‌ನಲ್ಲಿ ಟ್ರಿಪಲ್ ರೈಲು ಅಪಘಾತದಲ್ಲಿ ಸುಮಾರು 300 ಜನ ಸಾವನ್ನಪ್ಪಿದರು ಮತ್ತು 1,000ಕ್ಕೂ ಹೆಚ್ಚು ಜನರು ಗಾಯಗೊಂಡರು.

    2016: ಉತ್ತರ ಪ್ರದೇಶದ ಕಾನ್ಪುರ ಬಳಿ ಇಂದೋರ್-ಪಾಟ್ನಾ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿ ಕನಿಷ್ಠ 150 ಪ್ರಯಾಣಿಕರು ಸಾವನ್ನಪ್ಪಿದರು.

    2010: ಪಶ್ಚಿಮ ಬಂಗಾಳದಲ್ಲಿ ಜ್ಞಾನೇಶ್ವರಿ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು 146 ಜನರು ಸಾವನ್ನಪ್ಪಿದರು.

    2002: ಕೋಲ್ಕತ್ತಾ-ನವದೆಹಲಿ ರಾಜಧಾನಿ ಧಬಿ ನದಿಯಲ್ಲಿ ಮುಳುಗಿ ಕನಿಷ್ಠ 120 ಜನರು ಸಾವನ್ನಪ್ಪಿದರು.

    1999: ಪಶ್ಚಿಮ ಬಂಗಾಳದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 285 ಜನರು ಸಾವನ್ನಪ್ಪಿದರು.

    1998: ಪಂಜಾಬ್‌ನಲ್ಲಿ ಹಳಿ ತಪ್ಪಿದ ರೈಲಿಗೆ ಸೀಲ್ದಾ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು ಕನಿಷ್ಠ 210 ಜನರು ಸಾವನ್ನಪ್ಪಿದರು.

    1995: ಆಗ್ರಾ ಬಳಿಯ ಫಿರೋಜಾಬಾದ್‌ನಲ್ಲಿ ಪುರುಷೋತ್ತಮ್ ಎಕ್ಸ್‌ಪ್ರೆಸ್‌ಗೆ ಕಾಳಿಂದಿ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.

    ಡಾರ್ಜಿಲಿಂಗ್‌ ಘಟನೆ ಏನು?
    ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಗೂಡ್ಸ್ ರೈಲೊಂದು ಹಿಂಬದಿಯಿಂದ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಸಾವಿನ ಸಂಖ್ಯೆ 9ಕ್ಕೆ ಏರಿದ್ದು, ಸುಮಾರು 60 ಮಂದಿ ಗಾಯಗೊಂಡಿದ್ದಾರೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಹಿಂದಿನಿಂದ ಎಕ್ಸ್‌ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು – ಐವರು ದುರ್ಮರಣ, 25 ಮಂದಿಗೆ ಗಾಯ

    ಇಲ್ಲಿಯವರೆಗೆ ದೊರೆತ ಮಾಹಿತಿಯ ಪ್ರಕಾರ, ಗೂಡ್ಸ್ ರೈಲು ಸಿಗ್ನಲ್ ಅನ್ನು ಮೀರಿದ ಪರಿಣಾಮ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತಂಡಗಳು ಮತ್ತು ಅಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೋಡಗಿಕೊಂಡಿವೆ. ಜನರು ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ರೈಲ್ವೆ ಇಲಾಖೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳ ರೈಲು ದುರಂತ – ವಿಷಾದ ವ್ಯಕ್ತಪಡಿಸಿದ ಪ್ರಧಾನಿ ಮೋದಿ

  • ಪಶ್ಚಿಮ ಬಂಗಾಳ ರೈಲು ದುರಂತ – ವಿಷಾದ ವ್ಯಕ್ತಪಡಿಸಿದ ಪ್ರಧಾನಿ ಮೋದಿ

    ಪಶ್ಚಿಮ ಬಂಗಾಳ ರೈಲು ದುರಂತ – ವಿಷಾದ ವ್ಯಕ್ತಪಡಿಸಿದ ಪ್ರಧಾನಿ ಮೋದಿ

    – ಮೃತರ ಕುಟುಂಬಕ್ಕೆ ತಲಾ 2 ಲಕ್ಷ, ಗಾಯಳುಗಳಿಗೆ 50,000 ರೂ. ಪರಿಹಾರ ಘೋಷಣೆ

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ (West Bengal Train Accident) ಸಂಭವಿಸಿದ ಭೀಕರ ರೈಲು ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ವಿಷಾದ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತ ದುಃಖಕರವಾಗಿದೆ. ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

    ಘಟನೆಯ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಸಂತ್ರಸ್ತರ ನೆರವಿಗಾಗಿ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅಪಘಾತ ನಡೆದ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿಸಿದರು.

    ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ರೂ. ನೆರವು ನೀಡುವುದಾಗಿ ಪ್ರಧಾನಿ ಕಾರ್ಯಾಲಯ ಘೋಷಿಸಿದೆ. ಇನ್ನು ಈ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಕೂಡ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

    ಘಟನೆ ಏನು?
    ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಗೂಡ್ಸ್ ರೈಲೊಂದು ಹಿಂಬದಿಯಿಂದ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ (Kanchanjunga Express) ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಸಾವಿನ ಸಂಖ್ಯೆ 8ಕ್ಕೆ ಏರಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

    ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

    ಇಲ್ಲಿಯವರೆಗೆ ದೊರೆತ ಮಾಹಿತಿಯ ಪ್ರಕಾರ, ಗೂಡ್ಸ್ ರೈಲು ಸಿಗ್ನಲ್ ಅನ್ನು ಮೀರಿದ ಪರಿಣಾಮ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತಂಡಗಳು ಮತ್ತು ಅಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ ಎಂದು ವರದಿಗಳು ತಿಳಿಸಿವೆ. ಜನರು ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ರೈಲ್ವೆ ಇಲಾಖೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.

  • ಸಾರ್ವಜನಿಕರಿಗೆ ಪಾನಿಪುರಿ ಬಡಿಸಿದ ಮಮತಾ

    ಸಾರ್ವಜನಿಕರಿಗೆ ಪಾನಿಪುರಿ ಬಡಿಸಿದ ಮಮತಾ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ವಿರೋಧ ಪಕ್ಷಗಳ ನಾಯಕರುಗಳನ್ನು ತರಾಟೆಗೆ ತೆಗೆದುಕೊಳ್ಳುವುದರಿಂದ ಹಿಡಿದು, ಸ್ಫೋಟಕ ಹೇಳಿಕೆ ನೀಡುವವರೆಗೆ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ಆದರೆ ಮಮತಾ ಇಂದು ವಿಶೇಷ ಕಾರಣಕ್ಕೆ ಸುದ್ದಿಯಾಗಿದ್ದಾರೆ.

    ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ 3 ದಿನಗಳ ಭೇಟಿಯಲ್ಲಿರುವ ಮಮತಾ ಬ್ಯಾನರ್ಜಿ, ರುಚಿಕರವಾದ ಫುಚ್ಕಾ(ಪಾನಿಪುರಿ)ಯನ್ನು ಜನರಿಗೆ ಉಣಬಡಿಸಿದ್ದಾರೆ. ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೂ ಸ್ವತಃ ಬ್ಯಾನರ್ಜಿ ಪಾನಿಪುರಿಯನ್ನು ಬಡಿಸಿದ್ದಾರೆ. ಮಮತಾ ಕೈಯಾರೇ ಬಡಿಸಿದ ಪಾನಿಪುರಿಯನ್ನು ಸವಿಯಲು ಜನರು ಸ್ಥಳದಲ್ಲಿ ಮುಗಿಬಿದ್ದಿದ್ದಾರೆ. ಇದನ್ನೂ ಓದಿ: 24 ದಿನಗಳಲ್ಲಿ 9ನೇ ಕೇಸ್ – ಮಂಗಳೂರಿನಿಂದ ದುಬೈಗೆ ತೆರಳಿದ್ದ ಸ್ಪೈಸ್‌ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷ

    ಗೂರ್ಖಾಲ್ಯಾಂಡ್ ಪ್ರಾದೇಶಿಕ ಆಡಳಿತದ(ಜಿಟಿಎ) ಹೊಸದಾಗಿ ಚುನಾಯಿತರಾದ 45 ಸದಸ್ಯರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಮಮತಾ ಬ್ಯಾನರ್ಜಿ 3 ದಿನಗಳ ಡಾರ್ಜಿಲಿಂಗ್ ಭೇಟಿಯಲ್ಲಿದ್ದಾರೆ. ಅವರ ಪ್ರವಾಸ ಸೋಮವಾರ ಪ್ರಾರಂಭವಾಗಿದ್ದು, ಗುರುವಾರ ಕೋಲ್ಕತ್ತಾಗೆ ಮರಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಟೋಲ್‌ ಸಿಬ್ಬಂದಿ ಜೊತೆ WWE ಖ್ಯಾತಿಯ ಗ್ರೇಟ್‌ ಖಲಿ ಗಲಾಟೆ – ವೀಡಿಯೋ ವೈರಲ್‌

    ಮಮತಾ ಇಂದು ಡಾರ್ಜಿಲಿಂಗ್ ಚೌರಸ್ತಾದಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಪ್ರವಾಸಿಗರಿಗೆ ಸಿಹಿ ಸುದ್ದಿ- ಡಾರ್ಜಿಲಿಂಗ್‍ನ ಟಾಯ್ ರೈಲಿನ ದರ ಇಳಿಕೆ

    ಪ್ರವಾಸಿಗರಿಗೆ ಸಿಹಿ ಸುದ್ದಿ- ಡಾರ್ಜಿಲಿಂಗ್‍ನ ಟಾಯ್ ರೈಲಿನ ದರ ಇಳಿಕೆ

    ನವದೆಹಲಿ: ಡಾರ್ಜಿಲಿಂಗ್ ಹಿಮಾಲಯನ್ ರೈಲ್ವೇ (ಡಿಹೆಚ್‍ಆರ್) ವಿಶ್ವಪ್ರಸಿದ್ಧ ‘ಟಾಯ್ ರೈಲ್ವೇ’ ಸೇವೆಯ ದರವನ್ನು ಕಡಿಮೆ ಮಾಡಲಾಗಿದೆ. ಆ ಮೂಲಕ ಪ್ರವಾಸಿಗರಿಗೆ ಸಿಹಿ ಸುದ್ದಿ ನೀಡಲಾಗಿದೆ.

    ಡಿಹೆಚ್‍ಆರ್ ಅಧಿಕಾರಿಗಳು ಕ್ವೀನ್ ಆಫ್ ಹಿಲ್ಸ್ ಡಾರ್ಜಿಲಿಂಗ್‍ನ ರೈಲು ಸೇವೆಯ ದರವನ್ನು 200 ರೂ. ವರೆಗೆ ಕಡಿಮೆ ಮಾಡಿದ್ದಾರೆ. ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಅಧಿಕಾರಿಗಳು ಈ ಉಪಕ್ರಮವನ್ನು ತೆಗೆದುಕೊಂಡಿದ್ದಾರೆ. ಇದನ್ನೂ ಓದಿ:  ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!

    ಡಾರ್ಜಿಲಿಂಗ್ ಹಿಮಾಲಯನ್ ರೈಲ್ವೆಯು ಯುನೆಸ್ಕೋದ ವಿಶ್ವ ಪರಂಪರೆಯ ತಾಣವಾಗಿದೆ. ದರ ಇಳಿಕೆಯ ಬಗ್ಗೆ ಈಶಾನ್ಯ ಗಡಿ ರೈಲ್ವೆಯ ಕತಿಹಾರ್ ವಿಭಾಗದ ಎಡಿಆರ್‍ಎಂ ಸಂಜಯ್ ಚಿಲ್ವರ್ವಾರ್ ಮಾತನಾಡಿ, ಟಾಯ್ ರೈಲಿನ ಎಲ್ಲಾ ದರಗಳನ್ನು ತೀವ್ರವಾಗಿ ಕಡಿಮೆ ಮಾಡಲಾಗಿದೆ. ನ್ಯೂ ಜಲ್ಪೈಗುರಿಯಿಂದ ಡಾರ್ಜಿಲಿಂಗ್‍ಗೆ ಹೋಗುವ ರೈಲಿನಲ್ಲಿ ಚೇರ್ ಕಾರ್ ದರ ಈ ಹಿಂದೆ 1,600 ರೂ. ಗಳಷ್ಟಿತ್ತು. ಆದರೆ ಈಗ ಅದನ್ನು 1,400 ರೂ. ಗೆ ಇಳಿಸಲಾಗಿದೆ.

    ಎಸಿ ಕೋಚ್ ದರವು ಈ ಹಿಂದೆ 1,720 ರೂ. ಗಳಿಷ್ಟಿತ್ತು. ಈಗ ಅದನ್ನು 1,500 ರೂ.ಗೆ ಇಳಿಸಲಾಗಿದೆ. ಅದೇ ರೀತಿ ಡಾರ್ಜಿಲಿಂಗ್-ಘೂಮ್-ಡಾರ್ಜಿಲಿಂಗ್ ನಡುವೆ ಸಂಚರಿಸುವ ಟಾಯ್ ರೈಲಿನ ಜಾಯ್ ರೈಡ್ ಸೇವೆಗಳಿಗೂ ದರ ಕಡಿತಗೊಳಿಸಲಾಗಿದೆ.

    ಜಾಯ್ ರೈಡ್ ಸ್ಟೀಮ್ ಇಂಜಿನ್‍ನೊಂದಿಗೆ ಟಾಯ್ ರೈಲ್ವೇ ಜೊತೆಗೆ ವಿಸ್ಟಾಡೋಮ್ ಕೋಚ್‍ನ ದರವು ಈ ಹಿಂದೆ 1,600 ರೂ. ಇತ್ತು. ಈಗ 1,500 ರೂ.ಗೆ ಇಳಿಸಲಾಗಿದೆ. ಹೊಸದಾಗಿ ಇಳಿಕೆಯಾದ ಪರಿಷ್ಕೃತ ದರವನ್ನು ಮಾರ್ಚ್ 1 ರಿಂದ ಜಾರಿಗೆ ತರಲಾಗುವುದು ಎಂದು ಡಿಎಚ್‍ಆರ್ ಆಡಳಿತ ತಿಳಿಸಿದೆ.

    ಟಾಯ್ ರೈಲಿನ ಜನಪ್ರಿಯತೆಯನ್ನು ಇನ್ನಷ್ಟು ಹೆಚ್ಚಿಸುವ ಸಲುವಾಗಿ ಡಿಎಚ್‍ಆರ್ ಮಾರ್ಚ್ 1 ರಿಂದ ಮಾರ್ಚ್ 31 ರವರೆಗೆ ಬೇಸಿಗೆ ಉತ್ಸವವನ್ನು ಡಾರ್ಜಿಲಿಂಗ್ ಹಿಲ್ಸ್ ಪ್ರದೇಶಗಳಾದ ಸಿಲಿಗುರಿ ಜಂಕ್ಷನ್, ಕುರ್ಸಿಯಾಂಗ್ ಮತ್ತು ಡಾರ್ಜಿಲಿಂಗ್ (ಡಿಹೆಚ್‍ಆರ್) ನಿಲ್ದಾಣಗಳಲ್ಲಿ ಆಯೋಜಿಸಲಿದೆ ಎಂದು ಚಿಲ್ವರ್ವಾರ್ ಹೇಳಿದರು. ಇದನ್ನೂ ಓದಿ:  ಉಕ್ರೇನ್‍ನಲ್ಲಿ ಸಿಲುಕಿದ್ದಾರೆ 10 ಮಂದಿ ಕರ್ನಾಟಕ ವಿದ್ಯಾರ್ಥಿಗಳು!

    ಈ ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಡಿಹೆಚ್‍ಆರ್ ಅಧಿಕಾರಿಗಳು ನ್ಯೂ ಜಲ್ಪೈಗುರಿಯಿಂದ ಡಾರ್ಜಿಲಿಂಗ್‍ಗೆ ಸಂಚರಿಸುವ ರೈಲಿನಲ್ಲಿ ಒಂದು ಎಸಿ ವಿಸ್ಟಾಡಮ್ ಕೋಚ್ ಅನ್ನು ಸೇರಿಸಲಿದ್ದಾರೆ. ಡಾರ್ಜಿಲಿಂಗ್‍ನಿಂದ ಘೂಮ್ ವಿಭಾಗದಲ್ಲಿ, ಎಲ್ಲಾ ಕೋಚ್‍ಗಳನ್ನು ಸಾಮಾನ್ಯ ಕೋಚ್‍ಗಳ ಬದಲಿಗೆ ವಿಸ್ಟಾಡಮ್ ಕೋಚ್‍ಗಳೊಂದಿಗೆ ಬದಲಾಯಿಸಲಾಗುತ್ತದೆ.

  • ಬೆಟ್ಟದ ರಸ್ತೆಯಲ್ಲಿ ಸೀರೆಯಲ್ಲೇ 10 ಕಿ.ಮೀ ಓಡಿದ ದೀದಿ: ವಿಡಿಯೋ

    ಬೆಟ್ಟದ ರಸ್ತೆಯಲ್ಲಿ ಸೀರೆಯಲ್ಲೇ 10 ಕಿ.ಮೀ ಓಡಿದ ದೀದಿ: ವಿಡಿಯೋ

    ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಡಾರ್ಜಿಲಿಂಗ್ ಬೆಟ್ಟದ ರಸ್ತೆಯಲ್ಲಿ ಜಾಗಿಂಗ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಅಂತಾರಾಷ್ಟ್ರೀಯ ಹವಾಮಾನ ಕ್ರಿಯಾ ದಿನವಾದ ಅಕ್ಟೋಬರ್ 24ರಂದು ಡಾರ್ಜಿಲಿಂಗ್ ಬೆಟ್ಟದಲ್ಲಿ ಅಭಿಯಾನ ಕೈಗೊಳ್ಳಲಾಗಿತ್ತು. ಮಮತಾ ಬ್ಯಾನರ್ಜಿ ಅವರು ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಳ್ಳದೇ ಅಭಿಯಾನದಲ್ಲಿ ಭಾಗಿಯಾಗಿ, ಜಾಗಿಂಗ್ ಮಾಡಿದ್ದಾರೆ.

    64 ವರ್ಷದ ಮಮತಾ ಬ್ಯಾನರ್ಜಿ ಅವರು ಅಧಿಕಾರಿಗಳು ಮತ್ತು ಪತ್ರಕರ್ತರೊಂದಿಗೆ ಸುಮಾರು 10 ಕಿ.ಮೀ ಜಾಗಿಂಗ್ ಮಾಡಿದ್ದಾರೆ. ಕುರ್ಸೆಯೊಂಗ್ ಮತ್ತು ಮಹಾನದಿ ನಡುವಿನ 5 ಕಿ.ಮೀ ಅಂತರದ ಬೆಟ್ಟದ ರಸ್ತೆಯಲ್ಲಿ ಕ್ರಮಿಸಿ, ಮತ್ತೆ ಅಲ್ಲಿಂದ ಮರಳಿದರು. ಮಾರ್ಗ ಮಧ್ಯ ಸ್ಥಳೀಯರು ಹಾಗೂ ಮಕ್ಕಳ ಜೊತೆಗೆ ಮಾತುಕತೆ ನಡೆಸಿ, ಪರಿಸರ ಸಂರಕ್ಷಣಾ ಜಾಗೃತಿ ಮೂಡಿಸಿದ್ದಾರೆ.

    ಇದಕ್ಕೂ ಮುನ್ನ ಅಂತಾರಾಷ್ಟ್ರೀಯ ಹವಾಮಾನ ಕ್ರಿಯಾ ದಿನದ ಕುರಿತು ಟ್ವೀಟ್ ಮಾಡಿದ್ದ ಮಮತಾ ಬ್ಯಾನರ್ಜಿ ಅವರು, ಪರಿಸರ ಸಂರಕ್ಷಣೆಯ ಮೂಲಕ ಭೂಮಿಯನ್ನು ರಕ್ಷಿಸೋಣ. ನಾವೆಲ್ಲರೂ ಒಂದಾಗಿ ಪರಿಸರ ಸಂರಕ್ಷಣೆಗೆ ಸಂಕಲ್ಪ ಮಾಡೋಣ. ಗಿಡ, ಮರ ಬೆಳೆಸಿ, ಪರಿಸರವನ್ನು ಸ್ವಚ್ಛವಾಗಿಡೋಣ ಎಂದು ಈ ನಾವೆಲ್ಲರೂ ಒಟ್ಟಾಗಿ ಪ್ರತಿಜ್ಞೆ ಮಾಡೋಣ ಎಂದು ಹೇಳಿದ್ದರು.

  • ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಡಾರ್ಜಿಲಿಂಗ್‍ನಲ್ಲಿ ಬಿಜಿಎಂ ಸಂಘಟನೆಯಿಂದ ಘರ್ಷಣೆ

    ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಡಾರ್ಜಿಲಿಂಗ್‍ನಲ್ಲಿ ಬಿಜಿಎಂ ಸಂಘಟನೆಯಿಂದ ಘರ್ಷಣೆ

    ಡಾರ್ಜಿಲಿಂಗ್: ಗೂರ್ಖಾ ಜನಮುಕ್ತಿ ಮೋರ್ಚಾ ಪ್ರತಿಭಟನಾಕಾರರು ಪ್ರತ್ಯೇಕ ಗೂರ್ಖಾ ಲ್ಯಾಂಡ್ ರಾಜ್ಯಕ್ಕಾಗಿ ಡಾರ್ಜಿಲಿಂಗ್‍ನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಶನಿವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಭಾರತೀಯ ಮೀಸಲು ಬಟಾಲಿಯನ್(ಐಆರ್‍ಬಿ) ಸಹಾಯಕ ಕಮಾಂಡೆಂಟ್ ಅವರನ್ನು ಹತ್ಯೆ ಮಾಡಲಾಗಿದೆ.

    ಪ್ರತ್ಯೇಕ ರಾಜ್ಯಕ್ಕೆ ಒತ್ತಾಯಿಸಿ ನಡೆಸುತ್ತಿರುವ ಅನಿರ್ಧಿಷ್ಠಾವಧಿ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆಯನ್ನು ಹತ್ತಿಕ್ಕುವ ಯತ್ನ ಮುಂದುವರಿದಿದ್ದು, ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಿದ್ದರಿಂದ ಘರ್ಷಣೆ ತೀವ್ರ ಸ್ವರೂಪ ಪಡೆದುಕೊಂಡಿದೆ.

    ಭದ್ರತಾ ಸಿಬ್ಬಂದಿ ಮತ್ತು ಗೂರ್ಖಾ ಜನ ಮುಕ್ತಿ ಮೋರ್ಚಾ(ಜಿಜೆಎಂ)ದೊಂದಿಗೆ ನಡೆದ ಘರ್ಷಣೆಯಲ್ಲಿ ಐಆರ್‍ಬಿ ಸಹಾಯಕ ಕಮಾಂಡೆಂಟ್ ಕಿರಣ್ ತಮಂಗ್ ಅವರು ಗಂಭೀವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

    ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಬಿಜೆಎಂ ಇಬ್ಬರು ಕಾರ್ಯಕರ್ತರು ಮೃತಪಟ್ಟಿದ್ದಾರೆ ಎಂದು ಗೂರ್ಖಾ ಜನ ಮುಕ್ತಿ ಮೋರ್ಚಾದ ಸಹಾಯಕ ಪ್ರಧಾನ ಕಾರ್ಯದರ್ಶಿ ಬಿನಯ್ ತಮಂಗ್ ಹೇಳಿದ್ದಾರೆ.

    ಪ್ರಸ್ತುತ ಡಾರ್ಜಿಲಿಂಗ್‍ನಲ್ಲಿ ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದ್ದು, ಜಿಜೆಎಂ ಕಾರ್ಯಕರ್ತರು ಪೊಲೀಸರ ಮೇಲೆ ಪೆಟ್ರೋಲ್ ಬಾಂಬ್ ಹಾಗೂ ಕಲ್ಲುಗಳನ್ನು ಎಸೆಯುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಟೀಯರ್ ಗ್ಯಾಸ್ ಹಾಗೂ ಲಾಠಿ ಚಾರ್ಜ್ ನಡೆಸುತ್ತಿದ್ದಾರೆ.

    ಜಿಜೆಎಂ ಕಾರ್ಯಕರ್ತರು ಹಾಗೂ ಪೊಲೀಸರ ನಡುವಿನ ಘರ್ಷಣೆಯಲ್ಲಿ ಹಲವರು ಗಾಯಗೊಂಡಿದ್ದು, ಸಿಂಗ್ಮರಿ ಪ್ರದೇಶದಲ್ಲಿ ಸೇನೆ ನಿಯೋಜಿಸಲಾಗಿದೆ.