Tag: DarkNet

  • ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ಆರೋಪ – ಸಿಬಿಐನಿಂದ ಎಫ್‍ಐಆರ್

    ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ಆರೋಪ – ಸಿಬಿಐನಿಂದ ಎಫ್‍ಐಆರ್

    ನವದೆಹಲಿ: ಡಾರ್ಕ್‍ನೆಟ್‍ನಲ್ಲಿ (Darknet) ಯುಜಿಸಿ-ನೆಟ್ (UGC-NET)  ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (CBI) ಎಫ್‍ಐಆರ್ ದಾಖಲಿಸಿದೆ.

    ಯುಜಿಸಿ-ನೆಟ್ ರದ್ದುಗೊಳಿಸಿ ಕೇಂದ್ರ ಶಿಕ್ಷಣ ಸಚಿವಾಲಯ ಆದೇಶಿಸಿದ ಒಂದು ದಿನದ ನಂತರ, ಸಿಬಿಐ ಗುರುವಾರ ಈ ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸಿದೆ. ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬರುತ್ತಿದ್ದಂತೆ ಕೇಂದ್ರವು ಪರೀಕ್ಷೆಯನ್ನು ರದ್ದುಗೊಳಿಸಿತ್ತು. ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮಗಳ ಬಗ್ಗೆ ತೀವ್ರ ಗೊಂದಲದ ನಡುವೆ ಈ ಬೆಳವಣಿಗೆಯಾಗಿದೆ.

    ನೀಟ್ ಹಗರಣ ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಪರೀಕ್ಷೆ ರದ್ದು ಮಾಡಿ ಮರುಪರೀಕ್ಷೆ ನಡೆಸಬೇಕೆಂಬ ಆಗ್ರಹ ಸಹ ಕೇಳಿಬರುತ್ತಿದೆ. ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಅರೆಸ್ಟ್ ಆಗಿರುವ ಸಮಷ್ಟಿಪುರದ ವಿದ್ಯಾರ್ಥಿ ಅನುರಾಗ್ ಯಾದವ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ. ಇದೇ ಹೊತ್ತಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಕಿಂಗ್‍ಪಿನ್ ಪಾಟ್ನಾದ ಅಮಿತ್ ಆನಂದ್ ಕೂಡ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ. ಇವರೆಡು ಈಗ ಈಗ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಬಿಹಾರ ಸರ್ಕಾರ ಎಸ್‍ಐಟಿ ರಚನೆ ಮಾಡಿತ್ತು. ತನಿಖಾ ತಂಡ ಈವರೆಗೂ 14 ಮಂದಿಯನ್ನು ಬಂಧಿಸಿದೆ. ಇದನ್ನೂ ಓದಿ: NEET Exam Row: ಉನ್ನತ ಮಟ್ಟದ ಸಮಿತಿ ರಚನೆ, ಯಾರನ್ನೂ ಬಿಡಲ್ಲ: ಧರ್ಮೇಂದ್ರ ಪ್ರಧಾನ್‌

  • ಡಾರ್ಕ್‌ನೆಟ್‌ ಬಳಸಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ- ರಣಾಂಗಣವಾದ ವಿವಿ ಕ್ಯಾಂಪಸ್

    ಡಾರ್ಕ್‌ನೆಟ್‌ ಬಳಸಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ- ರಣಾಂಗಣವಾದ ವಿವಿ ಕ್ಯಾಂಪಸ್

    ನವದೆಹಲಿ/ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಕುರಿತ ಬಿಬಿಸಿಯ ಸಾಕ್ಷ್ಯಚಿತ್ರ (BBC Documentary) ದೇಶದಲ್ಲೇ ಹೊಸ ವಿವಾದ ಹುಟ್ಟುಹಾಕಿದೆ. ಇಷ್ಟು ದಿನ ರಾಜಕೀಯ ಕೇಸರೆರಚಾಟಕ್ಕೆ ಸೀಮಿತವಾಗಿದ್ದ ಸಾಕ್ಷ್ಯಚಿತ್ರ ಈಗ ದೇಶದ ವಿಶ್ವವಿದ್ಯಾಲಯಗಳಲ್ಲಿ ಹೊಸ ಸಂಘರ್ಷ ಸೃಷ್ಟಿಸಿದೆ. ಸಿಎಎ (CAA), ಎನ್‌ಆರ್‌ಸಿ (NRC) ಬಳಿಕ ಕ್ಯಾಂಪಸ್ ಗಳಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನ ಮುಂದಿಟ್ಟುಕೊಂಡು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ಮಾಡಲಾರಂಭಿಸಿದ್ದಾರೆ.

    ಹೌದು. ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ಸಿದ್ಧಪಡಿಸಿರುವ ಸಾಕ್ಷ್ಯಚಿತ್ರ ದೇಶದಲ್ಲಿ ವಿಶ್ವವಿದ್ಯಾಲಯಗಳಲ್ಲಿ ಹೊಸ ಸಂಘರ್ಷಕ್ಕೆ ಕಾರಣವಾಗಿದೆ. ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ಪ್ರಸಾರ ಮಾಡಲು ಕೇಂದ್ರ ಸರ್ಕಾರ ನಿರ್ಬಂಧ ಹೇರಿದ ಬೆನ್ನಲ್ಲೇ ವಿಶ್ವವಿದ್ಯಾಲಯಗಳಲ್ಲಿ ಅದನ್ನು ಪ್ರಸಾರ ಮಾಡಲು ವಿದ್ಯಾರ್ಥಿಗಳೇ ಪಟ್ಟು ಹಿಡಿದಿದ್ದಾರೆ. ತಾವೇ ಗುಂಪು ಕಟ್ಟಿಕೊಂಡು ಡಾರ್ಕ್ ನೆಟ್ (DarkNet) ಮೂಲಕ ಚಿತ್ರವನ್ನು ಕ್ಯಾಂಪಸ್ ನಲ್ಲಿ ಪ್ರಸಾರ ಮಾಡುವ ಪ್ರಯತ್ನ ಆರಂಭಿಸಿದ್ದಾರೆ.

    ಇತ್ತೀಚೆಗಷ್ಟೇ ದೆಹಲಿಯ ಜೆಎನ್‌ಯು (JNU) ಹಾಗೂ ಹೈದರಾಬಾದ್‌ನ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಚಿತ್ರ ಪ್ರದರ್ಶನ ಮಾಡುವ ಪ್ರಯತ್ನ ನಡೆದಿತ್ತು. ಈ ವೇಳೆ ಇದು ಸಂಘರ್ಷಕ್ಕೆ ಕಾರಣವಾಗಿತ್ತು. ಸೆಂಟ್ರಲ್ ವಿವಿಗಳಲ್ಲಿ ಗಲಭೆ ಸೃಷ್ಟಿಯಾದ್ರೆ, ಜೆಎನ್‌ಯು ಕ್ಯಾಂಪಸ್ ನಲ್ಲಿ ಕಲ್ಲು ತೂರಾಟಕ್ಕೆ ಕಾರಣವಾಗಿತ್ತು. ಈ ಎರಡು ವಿವಿಗಳಿಗೆ ಸಂಘರ್ಷ ಸೀಮಿತವಾಗಿದೆ ಎಂದು ಕೊಳ್ಳುತ್ತಿರುವಾಗಲೇ ದೇಶದ ಹಲವು ವಿವಿಗಳಲ್ಲಿ ಇಂತಹದೇ ಘಟನೆಗಳು ವರದಿಯಾಗುತ್ತಿವೆ.

    ಮೋದಿ ಸಾಕ್ಷ್ಯಚಿತ್ರ ಸಂಘರ್ಷ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಕ್ಯಾಂಪಸ್ ನಲ್ಲಿ ತಾರಕಕ್ಕೇರಿತ್ತು. ಚಿತ್ರವನ್ನು ಸಂಜೆ 6 ಗಂಟೆಗೆ ಕ್ಯಾಂಪಸ್ ನಲ್ಲಿ ಪ್ರದರ್ಶನ ಮಾಡುವುದಾಗಿ ವಿದ್ಯಾರ್ಥಿಗಳು ಘೋಷಣೆ ಮಾಡಿದರು. ಇದಕ್ಕೆ ವಿವಿ ಕುಲಪತಿಗಳು ವಿರೋಧ ವ್ಯಕ್ತಪಡಿಸಿದರು. ಅದಕ್ಕೆ ಜಗ್ಗದ ವಿದ್ಯಾರ್ಥಿಗಳು ಪ್ರದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದರು. ವಿದ್ಯಾರ್ಥಿಗಳ ವರ್ತನೆ ಕಂಡು ಕುಲಪತಿಗಳು ಪೊಲೀಸರಿಗೆ ದೂರು ನೀಡಿದರು. ಈ ಹಿನ್ನಲೆ ಕ್ಯಾಂಪಸ್ ಗೆ ಬಂದ ಪೊಲೀಸರು ಚಿತ್ರ ಪ್ರದರ್ಶನಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದ 14 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಪೊಲೀಸರು ವಿದ್ಯಾರ್ಥಿಗಳನ್ನು ಬಂಧಿಸುತ್ತಿದ್ದಂತೆ ಪ್ರತಿಭಟನೆ ಭುಗಿಲೆದ್ದಿತು.

    ಇತ್ತ ಪಂಜಾಬ್ ವಿಶ್ವವಿದ್ಯಾಲಯಕ್ಕೂ ಸಾಕ್ಷ್ಯಚಿತ್ರದ ಬಿಸಿ ತಟ್ಟಿದೆ. ಕ್ಯಾಂಪಸ್ ನಲ್ಲಿ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುತ್ತಿತ್ತು. ಮಧ್ಯಪ್ರವೇಶ ಮಾಡಿದ ಪೊಲೀಸರೂ ಪ್ರದರ್ಶನವನ್ನು ತಡೆದು ಕೆಲವರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಕೇರಳದ ತಿರುವನಂತಪುರಂ ವಿವಿ, ಪಾಂಡಿಚೇರಿ ವಿವಿಯಲ್ಲೂ ಸಾಕ್ಷ್ಯಚಿತ್ರ ಪ್ರದರ್ಶನದ ವಿಫಲ ಪ್ರಯತ್ನಗಳು ನಡೆದಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k