Tag: Darling Krishna

  • ‘ಕೌಸಲ್ಯ ಸುಪ್ರಜಾ ರಾಮ’  ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

    ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

    ಶಾಂಕ್ (Shashank) ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ‘ಕೌಸಲ್ಯ ಸುಪ್ರಜಾ ರಾಮ’ (Kausalya Supraja Rama) ಚಿತ್ರದ ಟ್ರೈಲರ್ (Trailer) ಇತ್ತೀಚೆಗೆ ಬಿಡುಗಡೆಯಾಯಿತು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್  (Sudeep) ಟ್ರೈಲರ್ ಅನಾವರಣ ಮಾಡಿದರು.  ‌

    ಈ ಟ್ರೈಲರ್ ನಲ್ಲಿ ಬಹಳ ಒಳ್ಳೆಯ ಕಥೆಯನ್ನು ಕಂಡೆ ಎಂದು ಮಾತು ಪ್ರಾರಂಭಿಸಿದ ಕಿಚ್ಚ ಸುದೀಪ್,ಇಲ್ಲಿ ನಂಬಿಕೆ ಮತ್ತು ಸಂಬಂಧಗಳ ಸಂಘರ್ಷ ಇದೆ. ಶಶಾಂಕ್ ಅವರು ಎಮೋಷನ್ ಗಳನ್ನು ಹಿಡಿದಿಡುವ ರೀತಿ ನನಗೆ ಇಷ್ಟ. ಚಿತ್ರದ ಹಾಡುಗಳು ಚೆನ್ನಾಗಿವೆ. ಈ ಚಿತ್ರ ಸಹ ಚೆನ್ನಾಗಿ ಮೂಡಿಬಂದಿರುತ್ತದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

    ನಾನು ಇದುವರೆಗೂ ಮಾಡಿರುವ ಸಿನಿಮಾಗಳಲ್ಲಿ ಬೆಸ್ಟ್ ಸಿನಿಮಾ ಇದು. ಕಾರಣ ಈ ಚಿತ್ರದ ಕಥೆ. ಈ ಕಥೆಗೆ ಯಾವುದೋ ಒಂದು ಆಯಾಮವಿಲ್ಲ, ಹಲವು ಆಯಾಮಗಳಿವೆ. ಸಿನಿಮಾ ನೋಡುವ ಪ್ರತಿಯೊಬ್ಬರಿಗೂ ರಿಲೇಟ್ ಆಗುವ ಕಥೆ ಇದು. ಪ್ರತಿಯೊಬ್ಬರೂ ಚಿತ್ರದಲ್ಲಿನ ಯಾವುದಾದರೊಂದು ಪಾತ್ರದ ಜೊತೆಗೆ ರಿಲೇಟ್ ಮಾಡಿಕೊಳ್ಳಬಹುದು. ಈ ತರಹದ ಕಥೆ ಸಿಗೋದು ಕಷ್ಟ. ಇದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಬಹುದು ಎಂಬ ನಿರೀಕ್ಷೆ ಇದೆ. ಕೃಷ್ಣ ಅವರನ್ನು ಬೇರೆ ತರಹ ತೋರಿಸುವ ಪ್ರಯತ್ನ ಮಾಡಿದ್ದೇನೆ.   ಮಿಲನಾ ಅವರನ್ನು ಚಿತ್ರಕ್ಕೆ ಆಯ್ಕೆ ಮಾಡಿದ್ದು ಬೇರೆ ಕಾರಣಕ್ಕಲ್ಲ, ಅವರ ಪ್ರತಿಭೆಗಾಗಿ. ಆ ಪಾತ್ರ ನಿಭಾಯಿಸುವುದು ಬಹಳ ಕಷ್ಟ. ಬಹಳ ನೈಜವಾಗಿ ಮತ್ತು ಸೆನ್ಸಿಬಲ್ ಆಗಿ ನಟಿಸಬೇಕಿತ್ತು. ನಿರೀಕ್ಷೆಗೂ ಮೀರಿ ಅವರು ನಟಿಸಿದ್ದಾರೆ. ಬೃಂದಾ ಅವರ ಅಭಿನಯ ಕೂಡ ಅದ್ಭುತವಾಗಿದೆ. ಜುಲೈ 28ಕ್ಕೆ ಚಿತ್ರ ಬಿಡುಗಡೆಯಾಗುತ್ತಿದೆ. ಇಷ್ಟವಾಗಬಹುದೆಂಬ ನಂಬಿಕೆ ಇದೆ ಎಂದು ನರ್ದೇಶಕ ಶಶಾಂಕ್ ತಿಳಿಸಿದರು. ಇದನ್ನೂ ಓದಿ:ನಟನೆ ಜೊತೆಗೆ ನಿರ್ದೇಶನಕ್ಕಿಳಿದ ʼಗರುಡ’ ಖ್ಯಾತಿಯ ಸಿದ್ದಾರ್ಥ್ ಮಹೇಶ್

    ನಾನು ಇಷ್ಟು ವರ್ಷಗಳಲ್ಲಿ ಕೇಳಿರುವ ದಿ ಬೆಸ್ಟ್ ಕಥೆ ಇದು ಎಂದ ನಾಯಕ ಡಾರ್ಲಿಂಗ್ ಕೃಷ್ಣ (Darling Krishna),  ಈ ಚಿತ್ರದಲ್ಲಿ ಸಾಕಷ್ಟು ವಿಷಯಗಳನ್ನು ಮನರಂಜನಾತ್ಮಕವಾಗಿ ಹೇಳಿದ್ದಾರೆ. ಶಶಾಂಕ್ ಅವರು ಬಂದಾಗ, ಕಥೆ ಇರಲಿಲ್ಲ. ನಿಮಗೆ ಯಾವ ತರಹದ ಸಿನಿಮಾ ಬೇಕು ಎಂದು ಕೇಳಿದರು. ನೀವು ನಿಮ್ಮ ಸ್ಟೈಲ್ ನಲ್ಲೇ ಮಾಡಿ ಎಂದು ಹೇಳಿದೆ. ಒಂದು ತಿಂಗಳ ನಂತರ ಈ ಕಥೆ ತಂದರು. ಬಹಳ ಸುಲಭವಾಗಿ ಮುಗಿದ ಚಿತ್ರ ಇದು. ನಟನೆ ಮಾಡಿದ್ದೇ ಗೊತ್ತಾಗಲಿಲ್ಲ. ಈ ಸಿನಿಮಾ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ ಎಂದು ತಿಳಿಸಿದರು.

    ಶಶಾಂಕ್ ಅವರು ಬಂದು ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ನಮ್ಮ ಕೌರವ ಪ್ರೊಡಕ್ಷನ್ ಹೌಸ್ ಹಾಗೂ ಶಶಾಂಕ್ ಸಿನಿಮಾಸ್ ಜೊತೆ ಸೇರಿ ಈ ಚಿತ್ರ‌ ನಿರ್ಮಾಣ ಮಾಡಿದ್ದೇವೆ.‌ ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಹಾಡುಗಳು ಈಗಾಗಲೇ ಹಿಟ್ ಆಗಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಸುದೀಪ್ ಅವರಿಗೆ ಧನ್ಯವಾದ ಎಂದು ಬಿ.ಸಿ.ಪಾಟೀಲ್ (BC Patil). ಚಿತ್ರದಲ್ಲಿ ನಟಿಸಿರುವ ಮಿಲನ ನಾಗರಾಜ್, ಬೃಂದಾ ಆಚಾರ್ಯ, ನಾಗಭೂಷಣ್ ಸೇರಿದಂತೆ ಅನೇಕ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲವ್ ಮೀ ಆರ್ ಹೇಟ್ ಮೀ ಚಿತ್ರಕ್ಕೆ ಚಿತ್ರೀಕರಣ ಮುಕ್ತಾಯ

    ಲವ್ ಮೀ ಆರ್ ಹೇಟ್ ಮೀ ಚಿತ್ರಕ್ಕೆ ಚಿತ್ರೀಕರಣ ಮುಕ್ತಾಯ

    ನಾಯಕ ಡಾರ್ಲಿಂಗ್ ಕೃಷ್ಣ (Darling Krishna) ಅವರ ಹುಟ್ಟುಹಬ್ಬ ಇತ್ತೀಚಿಗೆ ನಡೆದಿದೆ. ಈ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸಿರುವ ‘ಲವ್ ಮೀ ಆರ್ ಹೇಟ್ ಮೀ’ (Love Me Or Hate Me) ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಬಹ ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 29 ರಂದು ಬಿಡುಗಡೆಯಾಗಲಿದೆ.

    ದೀಪಕ್ ಗಂಗಾಧರ್ (Deepak Gangadhar) ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ದೀಪಕ್ ಗಂಗಾಧರ್ ಮೂವೀಸ್ ಲಾಂಛನದಲ್ಲಿ ದೀಪಕ ಗಂಗಾಧರ್ ಅವರ ಜೊತೆಗೆ ಸುನೀಲ್ ಬಿ.ಎನ್, ಮದನ್ ಗಂಗಾಧರ್, ಚಂದನ್ ಜೆ ಹಾಗೂ ನಾಗರಾಜ್ ಗೌಡ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ:ಮೆಗಾಸ್ಟಾರ್ ಕುಟುಂಬಕ್ಕೆ ಸೊಸೆಯಾಗಿ ಬರುತ್ತಿರುವ ಲಾವಣ್ಯ ಜಾತಿ ಬಗ್ಗೆ ತಲೆಕೆಡಿಸಿಕೊಂಡ ಫ್ಯಾನ್ಸ್

    ಲವ್ ಸ್ಟೋರಿ ಜಾನರ್ ನ ಈ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಐದು ಹಾಡುಗಳಿರುವ ಈ ಚಿತ್ರಕ್ಕೆ ಶ್ರೀನಿಧರ್ ಸಂಭ್ರಮ್ – ನಕುಲ್ ಅಭಯಂಕರ್ ಸಂಗೀತ ನೀಡಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ಈಶ್ವರಿ ಕುಮಾರ್ ಕಲಾ ನಿರ್ದೇಶನ, ಮುರಳಿ ಹಾಗೂ ಮೋಹನ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ಯೋಗಾನಂದ್ ಮುದ್ದಾನ್, ರಘು ನಡವಳ್ಳಿ ಹಾಗೂ ರಘು ಸಂಭಾಷಣೆ ಬರೆದಿದ್ದಾರೆ.

    ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ರಚಿತಾರಾಮ್ (Rachita Ram) ನಟಿಸುತ್ತಿದ್ದಾರೆ. ರೂಪೇಶ್ ಶೆಟ್ಟಿ, ನಂದಿನಿ, ರಾಕೇಶ್ ಪೂಜಾರಿ, ದೀಪಿಕಾ, ಪ್ರವೀಣ್, ಸುಂದರ್ ವೀಣಾ, ರಮೇಶ್ ಭಟ್ ಮುಂತಾದವರು “ಲವ್ ಮೀ ಆರ್ ಹೇಟ್ ಮೀ” ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಸಸಿ ನೆಡುವ ಮೂಲಕ ಹುಟ್ಟು ಹಬ್ಬ ಆಚರಿಸಿದ ಡಾರ್ಲಿಂಗ್ ಕೃಷ್ಣ

    ಸಸಿ ನೆಡುವ ಮೂಲಕ ಹುಟ್ಟು ಹಬ್ಬ ಆಚರಿಸಿದ ಡಾರ್ಲಿಂಗ್ ಕೃಷ್ಣ

    ಸ್ಯಾಂಡಲ್ ವುಡ್ ಹೆಸರಾಂತ ನಟ, ನಿರ್ದೇಶಕ ಡಾರ್ಲಿಂಗ್ ಕೃಷ್ಣ ನಿನ್ನೆ ತಮ್ಮ ಹುಟ್ಟು ಹಬ್ಬವನ್ನು (Birthday) ನೆಲಮಂಗಲದ ಬಸವೇಶ್ವರ  ಕಾಲೇಜಿನಲ್ಲಿ ಆಚರಿಸಿಕೊಂಡರು.  ಸಾವಿರಾರು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಕಾಲೇಜಿನ ಆವರಣದಲ್ಲಿ ಸಸಿ ನೆಡುವ ಅರ್ಥಪೂರ್ಣ ಕಾರ್ಯಕ್ರಮದ ಮೂಲಕ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ‘ಕೌಸಲ್ಯಾ ಸುಪ್ರಜಾ ರಾಮ’ ಚಿತ್ರತಂಡದ  ನಿರ್ದೇಶಕ ಶಶಾಂಕ್ (Shashank), ನಾಯಕಿ ಬೃಂದಾ ಆಚಾರ್ಯ, ಮಿಲನ ನಾಗರಾಜ್ (Milana Nagaraj) ಮತ್ತು ಪವಾಡ ಬಸವಣ್ಣ ದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಭಾಗವಹಿಸಿದ್ದರು.

    ಡಾರ್ಲಿಂಗ್ ಕೃಷ್ಣ (Darling Krishna)  ಅವರ ಹುಟ್ಟು ಹಬ್ಬಕ್ಕಾಗಿ ಅವರ ಮತ್ತೊಂದು ನಟನೆಯ ಸಿನಿಮಾ ‘ಶುಗರ್ ಫ್ಯಾಕ್ಟರಿ’ (Sugar Factory) ಚಿತ್ರತಂಡ ವಿಶೇಷ ಪೋಸ್ಟರ್ ಒಂದನ್ನು ರಿಲೀಸ್ ಮಾಡಿದೆ. ಈ ಮೂಲಕ ತನ್ನ ಚಿತ್ರದ ನಾಯಕನಿಗೆ ಚಿತ್ರತಂಡ ಶುಭಾಶಯ ತಿಳಿಸಿದೆ. ಇದನ್ನೂ ಓದಿ:ಬಾಲಿವುಡ್‌ ಚಿತ್ರಗಳ ಫ್ಲಾಪ್‌ ಬಳಿಕ ರಶ್ಮಿಕಾ ನಟನೆ 3ನೇ ಚಿತ್ರದ ಟೀಸರ್‌ ರಿಲೀಸ್

    ದೀಪಕ್ ಅರಸ್ (Deepak) ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ನಟಿ ಅಮೂಲ್ಯ ಸಹೋದರರಾಗಿರುವ ದೀಪಕ್ ಅರಸ್ ಈ ಹಿಂದೆ ಅಮೂಲ್ಯ, ರಾಕೇಶ್ ಅಡಿಗ ಜೋಡಿಯ ಮನಸಾಲಜಿ ಚಿತ್ರ ನಿರ್ದೇಶಿಸಿದ್ದರು, ಇದೀಗ ಎರಡನೇ ಸಿನಿಮಾವಾಗಿ ಶುಗರ್ ಫ್ಯಾಕ್ಟರಿ ಚಿತ್ರ ನಿರ್ದೇಶನ ಮಾಡುತ್ತಿದ್ದು, ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನ ದೀಪಕ್ ಅರಸ್ ಅವರೇ ಬರೆದಿದ್ದಾರೆ.

     

    ಫನ್ ರೋಮ್ಯಾಂಟಿಕ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಚಿತ್ರದಲ್ಲಿ ಮೂವರು ನಾಯಕಿಯರಿದ್ದು, ಅದ್ವಿತಿ ಶೆಟ್ಟಿ, ಸೊನಾಲ್ ಮೊಂಥೆರೋ, ಶಿಲ್ಪಾ ಶೆಟ್ಟಿ ಶುಗರ್ ಫ್ಯಾಕ್ಟರಿ ನಟಿಮಣಿಯರಾಗಿ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಚೇತನ್ ಕುಮಾರ್, ಅರಸು ಅಂತಾರೆ, ಚಂದನ್ ಶೆಟ್ಟಿ ಸಾಹಿತ್ಯ ಬರೆಯುತ್ತಿದ್ದಾರೆ. ಕಬೀರ್ ರಫಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣದಲ್ಲಿ ಶುಗರ್ ಫ್ಯಾಕ್ಟರಿ ಚಿತ್ರ ಸೆರೆಯಾಗಿದೆ.

  • ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ‘ಶುಗರ್ ಫ್ಯಾಕ್ಟರಿ’ ಪೋಸ್ಟರ್

    ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ‘ಶುಗರ್ ಫ್ಯಾಕ್ಟರಿ’ ಪೋಸ್ಟರ್

    ಸ್ಯಾಂಡಲ್ ವುಡ್ ಹೆಸರಾಂತ ನಟ ಡಾರ್ಲಿಂಗ್ ಕೃಷ್ಣ (Darling Krishna)  ಇಂದು ಹುಟ್ಟು ಹಬ್ಬವನ್ನು (Birthday) ಆಚರಿಸಿಕೊಳ್ಳುತ್ತಿದ್ದಾರೆ. ಅವರ ಹುಟ್ಟು ಹಬ್ಬಕ್ಕಾಗಿ ‘ಶುಗರ್ ಫ್ಯಾಕ್ಟರಿ’ (Sugar Factory) ಚಿತ್ರತಂಡ ವಿಶೇಷ ಪೋಸ್ಟರ್ ಒಂದನ್ನು ರಿಲೀಸ್ ಮಾಡಿದೆ. ಈ ಮೂಲಕ ತನ್ನ ಚಿತ್ರದ ನಾಯಕನಿಗೆ ಚಿತ್ರತಂಡ ಶುಭಾಶಯ ತಿಳಿಸಿದೆ.

    ದೀಪಕ್ ಅರಸ್ (Deepak) ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ನಟಿ ಅಮೂಲ್ಯ ಸಹೋದರರಾಗಿರುವ ದೀಪಕ್ ಅರಸ್ ಈ ಹಿಂದೆ ಅಮೂಲ್ಯ, ರಾಕೇಶ್ ಅಡಿಗ ಜೋಡಿಯ ಮನಸಾಲಜಿ ಚಿತ್ರ ನಿರ್ದೇಶಿಸಿದ್ದರು, ಇದೀಗ ಎರಡನೇ ಸಿನಿಮಾವಾಗಿ ಶುಗರ್ ಫ್ಯಾಕ್ಟರಿ ಚಿತ್ರ ನಿರ್ದೇಶನ ಮಾಡುತ್ತಿದ್ದು, ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನ ದೀಪಕ್ ಅರಸ್ ಅವರೇ ಬರೆದಿದ್ದಾರೆ. ಇದನ್ನೂ ಓದಿ:ಶರ್ವಾನಂದ್ ರಿಸೆಪ್ಷನ್ ಸಂಭ್ರಮದಲ್ಲಿ ಸಿನಿ ತಾರೆಯರ ದಂಡು

    ಫನ್ ರೋಮ್ಯಾಂಟಿಕ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಚಿತ್ರದಲ್ಲಿ ಮೂವರು ನಾಯಕಿಯರಿದ್ದು, ಅದ್ವಿತಿ ಶೆಟ್ಟಿ, ಸೊನಾಲ್ ಮೊಂಥೆರೋ, ಶಿಲ್ಪಾ ಶೆಟ್ಟಿ ಶುಗರ್ ಫ್ಯಾಕ್ಟರಿ ನಟಿಮಣಿಯರಾಗಿ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಚೇತನ್ ಕುಮಾರ್, ಅರಸು ಅಂತಾರೆ, ಚಂದನ್ ಶೆಟ್ಟಿ ಸಾಹಿತ್ಯ ಬರೆಯುತ್ತಿದ್ದಾರೆ. ಕಬೀರ್ ರಫಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣದಲ್ಲಿ ಶುಗರ್ ಫ್ಯಾಕ್ಟರಿ ಚಿತ್ರ ಸೆರೆಯಾಗಿದೆ.

    ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್.ಗಿರೀಶ್ ಶುಗರ್ ಫ್ಯಾಕ್ಟರಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಮೈಸೂರು, ಗೋವಾ ಹಾಗೂ ವಿದೇಶಗಳಲ್ಲೂ ಸಿನಿಮಾ ಸೆರೆ ಹಿಡಿಯಲಾಗಿದೆ. ರಂಗಾಯಣ ರಘು, ಗೋವಿಂದೇ ಗೌಡ, ಸೂರಜ್ ಕುಮಾರ್, ಮಹಂತೇಶ್, ಪವನ್ ಎಸ್ ನಾರಾಯಣ್, ರಾಯಲ್ ರವಿ, ಅವೀಕ್ಷ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಬಳಗದಲ್ಲಿದ್ದಾರೆ.

    ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರ  ಆರಂಭದ ದಿನದಿಂದಲೂ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇತ್ತೀಚಿಗೆ ಈ ಚಿತ್ರದ ಟೈಟಲ್ ಟ್ರ್ಯಾಕ್  ಮಂತ್ರಿಮಾಲ್ ನಲ್ಲಿ ಬಿಡುಗಡೆಯಾಯಿತು. ಅಲ್ಲಿ ನೆರದಿದ್ದ ಅಪಾರ ಜನಸ್ತೋಮ ಶೀರ್ಷಿಕೆ ಹಾಡು ಬಿಡುಗಡೆಗೆ ಸಾಕ್ಷಿಯಾದರು. ಅಲ್ಲಿದ್ದ ಆರು ಜನ ಸಿನಿಪ್ರೇಕ್ಷಕರೆ, ಈ ಹಾಡನ್ನು ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು.

     

    ಚಿತ್ರದಲ್ಲಿ ನಾಯಕ ಹಾಗೂ ನಾಯಕಿ ಪಾರ್ಟಿಯಲ್ಲಿ ಹಾಡಿ, ಕುಣಿಯುವ ಈ ಹಾಡು,‌ ಪಾರ್ಟಿ ಪ್ರಿಯರಿಗೆ ಸರ್ವಕಾಲಕ್ಕೂ ಮೆಚ್ಚುಗೆಯ ಗೀತೆಯಾಗಲಿದೆ. ತಮ್ಮ ವಿಶಿಷ್ಟ ಕಂಠದ ಮೂಲಕ ಜನಪ್ರಿಯರಾಗಿರುವ ಚಂದನ್ ಶೆಟ್ಟಿ, ಈ ಹಾಡನ್ನು ಬರೆದು ಹಾಡಿದ್ದಾರೆ. ರುಚಿರ ವೈದ್ಯ English rap ಗೆ ಧ್ವನಿಯಾಗಿದ್ದಾರೆ.  ಕಬೀರ್ ರಫಿ ಸಂಗೀತ ನೀಡಿದ್ದಾರೆ.

  • ಪ್ಯಾರಿಸ್‌ಗೆ ಹಾರಿದ Love ಬರ್ಡ್ಸ್ ಡಾರ್ಲಿಂಗ್‌ ಕೃಷ್ಣ- ಮಿಲನಾ

    ಪ್ಯಾರಿಸ್‌ಗೆ ಹಾರಿದ Love ಬರ್ಡ್ಸ್ ಡಾರ್ಲಿಂಗ್‌ ಕೃಷ್ಣ- ಮಿಲನಾ

    ಡಾರ್ಲಿಂಗ್ ಕೃಷ್ಣ- ಮಿಲನಾ ನಾಗರಾಜ್ (Milana Nagaraj) ಅವರು ಸದ್ಯ ವೆಕೇಷನ್ ಮೂಡ್‌ನಲ್ಲಿದ್ದಾರೆ. ದಂಪತಿಗಳಿಬ್ಬರು ಪ್ಯಾರಿಸ್‌ಗೆ ಹಾರಿದ್ದಾರೆ. ಈ ಕುರಿತ ಫೋಟೋವನ್ನ ಕೃಷ್ಣ ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

    ಸ್ಯಾಂಡಲ್‌ವುಡ್ (Sandalwood) ಸ್ಟಾರ್ ಜೋಡಿಗಳಲ್ಲಿ ಮಿಲನಾ ನಾಗರಾಜ್- ಡಾರ್ಲಿಂಗ್ ಕೃಷ್ಣ ಕೂಡ ಒಬ್ಬರು. ಸಾಕಷ್ಟು ವರ್ಷಗಳ ಪ್ರೀತಿಗೆ ಮದುವೆಯೆಂಬ ಮುದ್ರೆ ಒತ್ತಿ ಸತಿ-ಪತಿಗಳಾಗಿ ಅಭಿಮಾನಿಗಳಿಗೆ ಆದರ್ಶವಾಗಿ ಬದುಕುತ್ತಿದ್ದಾರೆ. ಲವ್‌ ಮಾಕ್ಟೈಲ್ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಿರ್ದೇಶಕನಾಗಿ ಸೈ ಎನಿಸಿಕೊಂಡರೆ, ಪತಿಯ ಸಿನಿಮಾ ಮಿಲನಾ ಸಾಥ್ ನೀಡಿದ್ದರು.

     

    View this post on Instagram

     

    A post shared by Milana Nagaraj (@milananagaraj)

    ಸಿನಿಮಾ ಕೆಲಸಕ್ಕೆ ಬ್ರೇಕ್ ಹಾಕಿ, ಪ್ಯಾರಿಸ್‌ಗೆ (Paris) ಡಾರ್ಲಿಂಗ್ ಕೃಷ್ಣ ದಂಪತಿ ಹಾರಿದ್ದಾರೆ. ಏಪ್ರಿಲ್‌ನಲ್ಲಿ ಮಿಲನಾ ಹುಟ್ಟುಹಬ್ಬಕ್ಕೆ ಥೈಲ್ಯಾಂಡ್‌ಗೆ ಹೋಗಿದ್ದರು. ಇದೀಗ ಪ್ಯಾರಿಸ್‌ನ ಸುಂದರ ತಾಣಗಳಿಗೆ ಭೇಟಿ ನೀಡುತ್ತಾ ಕೃಷ್ಣ- ಮಿಲನಾ ಎಂಜಾಯ್ ಮಾಡ್ತಿದ್ದಾರೆ. ಇದನ್ನೂ ಓದಿ:ಬಾಯ್‌ಫ್ರೆಂಡ್ ಪರಿಚಯಿಸಿದ ಕೀರ್ತಿ ಸುರೇಶ್- ಹುಡುಗ ಯಾರು?

     

    View this post on Instagram

     

    A post shared by Darling Krishna (@darling_krishnaa)

    ಡಾರ್ಲಿಂಗ್ ಕೃಷ್ಣ (Darling Krishna)ಅವರ ಲಿಸ್ಟ್‌ನಲ್ಲಿ ಲವ್ ಮಾಕ್ಟೈಲ್‌ 3, ಕೌಸಲ್ಯಾ ಸುಪ್ರಜಾ ರಾಮ, ಲವ್ ಮಿ  ಹೇಟ್ ಮಿ ಸೇರಿದಂತೆ ಹಲವು ಚಿತ್ರಗಳಿವೆ. ಲವ್ ಮಾಕ್ಟೈಲ್‌ 3, ಆರಾಮ ಅರವಿಂದ್‌ ಸ್ವಾಮಿ ಸೇರಿದಂತೆ ಹಲವು ಸಿನಿಮಾಗಳು ಮಿಲನಾ ನಾಗರಾಜ್ ಅವರ ಕೈಯಲ್ಲಿದೆ.

  • ಲವ್ ಮಿ OR ಹೇಟ್ ಮಿ ಅಂತಿದ್ದಾರೆ ಬಿಗ್‌ ಬಾಸ್‌ ರೂಪೇಶ್ ಶೆಟ್ಟಿ

    ಲವ್ ಮಿ OR ಹೇಟ್ ಮಿ ಅಂತಿದ್ದಾರೆ ಬಿಗ್‌ ಬಾಸ್‌ ರೂಪೇಶ್ ಶೆಟ್ಟಿ

    ಬಿಗ್ ಬಾಸ್ ವಿನ್ನರ್ (Bigg Boss Kannada) ರೂಪೇಶ್ ಅವರು ಸದ್ಯ ‘ಸರ್ಕಸ್’ ಸಿನಿಮಾದ ರಿಲೀಸ್‌ಗೆ ಎದುರು ನೋಡ್ತಿದ್ದಾರೆ. ಇದರ ನಡುವೆ ಹೊಸ ಸಿನಿಮಾದ ಅಪ್‌ಡೇಟ್‌ವೊಂದು ಸಿಕ್ಕಿದೆ. ಡಾರ್ಲಿಂಗ್ ಕೃಷ್ಣ, ರಚಿತಾ ರಾಮ್ ನಟನೆಯ ಲವ್ ಮಿ OR ಹೇಟ್ ಮಿ ಸಿನಿಮಾದಲ್ಲಿ ರೂಪೇಶ್ ಶೆಟ್ಟಿ (Roopesh Shetty) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

    ನಿರೂಪಕ, ನಟ, ನಿರ್ದೇಶಕನಾಗಿ ಸೈ ಎನಿಸಿಕೊಂಡಿರುವ ರೂಪೇಶ್ ಶೆಟ್ಟಿ ಅವರು ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿ ಕರ್ನಾಟಕ ಜನತೆಯ ಮನಗೆದ್ದಿದ್ದರು. ಕರಾವಳಿ ಕುವರನ ಆಟಕ್ಕೆ, ಪ್ರತಿಭೆಗೆ ಫ್ಯಾನ್ಸ್ ಫಿದಾ ಆಗಿದ್ದರು. ಇದೀಗ ತಮ್ಮ ಸಿನಿಮಾಗಳ ಮೂಲಕ ಅಭಿಮಾನಿಗಳ ಮನ ಗೆಲ್ಲಲು ಬರುತ್ತಿದ್ದಾರೆ.

    ಡಾರ್ಲಿಂಗ್ ಕೃಷ್ಣ- ರಚಿತಾ ರಾಮ್ (Rachitha Ram) ಅಭಿನಯದ ದೀಪಕ್ ಗಂಗಾಧರ್ ಅವರ ಚೊಚ್ಚಲ ನಿರ್ದೇಶನದ ಲವ್ ಮಿ OR ಹೇಟ್ ಮಿ ಸುಮಾರು ಶೇ.90ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಕೊನೆಯ ಹಂತದ ಚಿತ್ರೀಕರಣದಲ್ಲಿದೆ. ಜೂನ್‌ನಲ್ಲಿ ಒಂದೆರಡು ಹಾಡುಗಳ ಚಿತ್ರೀಕರಣ ನಡೆಯಲಿದೆ. ‘ಲವ್ ಮಿ ಔಖ ಹೇಟ್ ಮಿ’ ಸಿನಿಮಾ ಮೂಲಕ ಕೃಷ್ಣ ಮತ್ತು ರಚಿತಾ ಇದೇ ಮೊದಲ ಬಾರಿಗೆ ತೆರೆಹಂಚಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ನಟ ರೂಪೇಶ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ಚಿತ್ರತಂಡಕ್ಕೆ ನಟ ಸಾಥ್ ನೀಡುತ್ತಿದ್ದಾರೆ. ಇದನ್ನೂ ಓದಿ:ಕಾನ್‌ ಫೆಸ್ಟಿವಲ್‌ನಲ್ಲಿ ಕಂಗೊಳಿಸಿದ ಊರ್ವಶಿ ರೌಟೇಲಾ

    ಈ ಸಿನಿಮಾವೊಂದು ನವಿರಾದ ಪ್ರೇಮಕಥೆಯಾಗಿದ್ದು, ಕೃಷ್ಣ- ರಚಿತಾ ಜೋಡಿ ಮೋಡಿ ಮಾಡಲಿದೆ. ಚಿತ್ರದಲ್ಲಿ ರೂಪೇಶ್‌ ಶೆಟ್ಟಿ ಪಾತ್ರಕ್ಕೆ ಪ್ರಾಮುಖ್ಯತೆಯಿದ್ದು, ಅದೆಷ್ಟರ ಮಟ್ಟಿಗೆ ಕಮಾಲ್‌ ಮಾಡಲಿದೆ ಎಂದು ಕಾದುನೋಡಬೇಕಿದೆ. ಇದೇ ಸೆಪ್ಟೆಂಬರ್‌ಗೆ ಸಿನಿಮಾ ತೆರೆಗೆ ಬರಲಿದೆ.

  • `ಲವ್ ಮಾಕ್ಟೈಲ್‌ 3′ ಬಗ್ಗೆ ಅಪ್‌ಡೇಟ್ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

    `ಲವ್ ಮಾಕ್ಟೈಲ್‌ 3′ ಬಗ್ಗೆ ಅಪ್‌ಡೇಟ್ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

    ಸ್ಯಾಂಡಲ್‌ವುಡ್ (Sandalwood) ಸೆಲೆಬ್ರಿಟಿಗಳ ಮನೆಯಲ್ಲಿ ಯುಗಾದಿ ಸಂಭ್ರಮ ಕಳೆಗಟ್ಟಿದೆ. ಈ ಶುಭದಿನದಂದು ತಮ್ಮ ಮುಂದಿನ ಕೆಲಸ ಬಗ್ಗೆ  ಡಾರ್ಲಿಂಗ್ ಕೃಷ್ಣ ದಂಪತಿ ಕೂಡ ʻಲವ್ ಮಾಕ್ಟೈಲ್ʼ (Love Moctail) ಸೀಕ್ವೇಲ್ ಬಗ್ಗೆ ಸಿಹಿಸುದ್ದಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಯುಗಾದಿ ಹಬ್ಬದಂದು ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ ರಾಗಿಣಿ

    ‌ʻಲವ್ ಮಾಕ್ಟೈಲ್ʼ ಪಾರ್ಟ್ 1 ಮತ್ತು ಪಾರ್ಟ್ 2ನಲ್ಲಿ ಆದಿ-ನಿಧಿಮಾ ಸ್ಟೋರಿ ಪ್ರೇಕ್ಷಕರಿಗೆ ಮೋಡಿ ಮಾಡಿತ್ತು. ಚೆಂದದ ಲವ್ ಸ್ಟೋರಿ ಜೊತೆ ಎಮೋಷನಲಿ ಸಿನಿಮಾ ಪ್ರೇಕ್ಷಕರಿಗೆ ಕನೆಕ್ಟ್ ಆಗಿತ್ತು. ಮತ್ತೆ ಇದರ ಮುಂದುವರೆದ ಭಾಗ ಬರುತ್ತೋ ಇಲ್ವೋ ಅಂತಾ ಎಂಬ ಸ್ಪಷ್ಟತೆ ಇರಲಿಲ್ಲ. ಅದಕ್ಕೀಗ ಉತ್ತರ ಸಿಕ್ಕಿದೆ.

     

    View this post on Instagram

     

    A post shared by Darling Krishna (@darling_krishnaa)

    ಡಾರ್ಲಿಂಗ್ ಕೃಷ್ಣ (Darling Krishna) ಮತ್ತು ಮಿಲನಾ ನಾಗರಾಜ್ (Milana Nagaraj) ಅವರಿಗೆ ಪಾರ್ಟ್ 3 ಮಾಡುವ ಉದ್ದೇಶ ಅವರಿಗೆ ಇತ್ತು. ಆದರೆ ಒಳ್ಳೆಯ ಕಥೆ ಸಿಕ್ಕರೆ ಮಾತ್ರ ಮಾಡುತ್ತೇವೆ ಎಂದು ಅವರು ಹೇಳಿದ್ದರು. ಈಗ ಸೂಕ್ತವಾದ ಕಥೆ ಸಿಕ್ಕಿದೆ. ಹಾಗಾಗಿ ಅಧಿಕೃತವಾಗಿ `ಲವ್ ಮಾಕ್ಟೇಲ್ 3′ (Love Mocktail 3) ಬಗ್ಗೆ ಅನೌನ್ಸ್ ಮಾಡಲಾಗಿದೆ.

     

    View this post on Instagram

     

    A post shared by Darling Krishna (@darling_krishnaa)

    ಮತ್ತೆ ಆದಿ- ನಿಧಿಮಾ ಕಥೆ ಹೇಳಲು ʻಕ್ರಿಸ್‌ಮೀʼ ಜೋಡಿ ರೆಡಿಯಾಗಿದ್ದಾರೆ. `ಲವ್ ಮಾಕ್ಟೈಲ್ 3’ಗಾಗಿ ತಯಾರಿ ನಡೆಯುತ್ತಿದೆ. ಸದ್ಯದಲ್ಲೇ ಮತ್ತಷ್ಟು ಅಪ್‌ಡೇಟ್ ಅನ್ನ ಈ ಜೋಡಿ ಕೊಡಲಿದ್ದಾರೆ.

  • ಶಶಾಂಕ್ ನಿರ್ದೇಶನದ ಚಿತ್ರಕ್ಕೆ ಬೃಂದಾ ನಾಯಕಿಯಾಗಿ ಆಯ್ಕೆ

    ಶಶಾಂಕ್ ನಿರ್ದೇಶನದ ಚಿತ್ರಕ್ಕೆ ಬೃಂದಾ ನಾಯಕಿಯಾಗಿ ಆಯ್ಕೆ

    ಡಾರ್ಲಿಂಗ್ ಕೃಷ್ಣ (Darling Krishna) ಹಾಗೂ ಶಶಾಂಕ್ (Shashank) ಕಾಂಬಿನೇಷನ್ ನ ಹೊಸ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದೆ. ಯುಗಾದಿ ದಿನದಂದು ತಮ್ಮ ಸಿನಿಮಾದ ನಾಯಕಿಯ  ಪೋಸ್ಟರ್ ಹಂಚಿಕೊಂಡಿದ್ದಾರೆ ಶಶಾಂಕ್. ‘ಕೌಸಲ್ಯ ಸುಪ್ರಜಾ ರಾಮ’ (Kausalya Supraja Rama) ಹೆಸರಿನಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾಗೆ ಬೃಂದಾ ಆಚಾರ್ಯ (Brinda Acharya) ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

    ಪ್ರೇಮಂ ಪೂಜ್ಯಂ ಸಿನಿಮಾದ ಮೂಲಕ ಕನ್ನಡದ ಸಿನಿಮಾ ರಸಿಕರಿಗೆ ಪರಿಚಯವಾಗಿದ್ದ ಬೃಂದಾ, ಆನಂತರ ಕೆಲ ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಇದೀಗ ಡಾರ್ಲಿಂಗ್ ಕೃಷ್ಣ ಜೊತೆ ತೆರೆ ಹಂಚಿಕೊಳ್ಳಲು ರೆಡಿಯಾಗಿದ್ದಾರೆ. ಈಗಾಗಲೇ ಸಿನಿಮಾದ ಶೂಟಿಂಗ್ ಶುರುವಾಗಿದ್ದು, ಚಿತ್ರೀಕರಣದಲ್ಲೂ ಅವರು ಭಾಗಿಯಾಗಿದ್ದಾರೆ.  ಇದನ್ನೂ ಓದಿ:`ಸಾಮಿ ಸಾಮಿ’ ಹಾಡಿಗೆ ಸ್ಟೆಪ್ ಹಾಕಿ ಎಂದ ಅಭಿಮಾನಿಗೆ ನೋ ಎಂದ ರಶ್ಮಿಕಾ ಮಂದಣ್ಣ

    ಕನ್ನಡದಲ್ಲಿ ಹೊಸ ಬಗೆಯ ಚಿತ್ರಗಳನ್ನು ಕೊಟ್ಟ ಹೆಗ್ಗಳಿಕೆ ಶಶಾಂಕ್ ಅವರದ್ದು. ಅವರ ಸಿನಿಮಾದಲ್ಲಿ ನಾಯಕನಷ್ಟೇ ನಾಯಕಿಗೂ ಪ್ರಾಧಾನ್ಯತೆ ನೀಡಲಾಗುತ್ತದೆ. ಅವರ ಬಹುತೇಕ ಸಿನಿಮಾಗಳಲ್ಲಿ ನಾಯಕಿಯೇ ಹೈಲೈಟ್ ಕೂಡ ಆಗಿದ್ದಾರೆ. ಹಾಗಾಗಿ ಬೃಂದಾ ಅವರಿಗೆ ವಿಶೇಷ ಪಾತ್ರ ಸಿಕ್ಕಿರಬಹುದು ಎಂದು ಅಂದಾಜಿಸಲಾಗಿದೆ.

    ಇವತ್ತು ತಮ್ಮ ಸಿನಿಮಾದ ನಾಯಕಿಯ ಪೋಸ್ಟರ್ ಅನ್ನು ರಿಲೀಸ್ ಮಾಡಿರುವ ಶಶಾಂಕ್ ಅಭಿಮಾನಿಗಳಿಗೆ ಯುಗಾದಿ ಸಂದೇಶವನ್ನೂ ಹೇಳಿದ್ದಾರೆ. ಅಲ್ಲದೇ, ಒಂದು ಹಂತದ ಚಿತ್ರೀಕರಣವನ್ನೂ ಅವರು ಮುಗಿಸಿದ್ದಾರೆ. ಡಾರ್ಲಿಂಗ್ ಕೃಷ್ಣ ಮತ್ತು ಶಶಾಂಕ್ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದೆ.

  • ‘ಲವ್ ಬರ್ಡ್ಸ್’ ಹಾಡು ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

    ‘ಲವ್ ಬರ್ಡ್ಸ್’ ಹಾಡು ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

    ಡ್ಡಿಪುಡಿ ಚಂದ್ರು ನಿರ್ಮಿಸಿರುವ ‘ಲವ್ ಬರ್ಡ್ಸ್’ ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ ‘ನೀನೇ ದೊರೆತ ಮೇಲೆ’  ಎಂಬ ಹಾಡು ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಇತ್ತೀಚೆಗೆ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು. ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ಮಾಸ್ತಿ ಮುಂತಾದವರು ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

    ಕೌಟುಂಬಿಕ ಚಿತ್ರಗಳು ಇತ್ತೀಚೆಗೆ ಬರುತ್ತಿರುವುದು ಸ್ವಲ್ಪ ಕಡಿಮೆ. ಆ ಸಮಯದಲ್ಲಿ ನನಗೆ ಉತ್ತಮ ಕೌಟುಂಬಿಕ ಚಿತ್ರವೊಂದನ್ನು ನಿರ್ದೇಶಿಸಬೇಕೆಂದು ಆಸೆಯಾಯಿತು. ನಿರ್ಮಾಪಕ ಕಡ್ಡಿಪುಡಿ ಚಂದ್ರು ಕಥೆ ಮೆಚ್ಚಿ ನಿರ್ಮಾಣಕ್ಕೆ ಮುಂದಾದರು. ಪ್ರತಿಯೊಬ್ಬರ ಜೀವನದಲ್ಲೂ ಮದುವೆ ಮಹತ್ತರವಾದ ಘಟ್ಟ. ಎಲ್ಲರಿಗೂ ಮದುವೆ ಬಗ್ಗೆ ಸಾಕಷ್ಟು ಕನಸುಗಳಿರುತ್ತದೆ. ಆ ಪ್ರಸಂಗಕ್ಕೆ ತಕ್ಕದಾದ ಹಾಡೊಂದನ್ನು ಕವಿರಾಜ್ ಅದ್ಭುತವಾಗಿ ಬರೆದಿದ್ದಾರೆ. ಅರ್ಜುನ್ ಜನ್ಯ ಅಷ್ಟೇ ಚೆನ್ನಾಗಿ ಸಂಗೀತ ನೀಡಿದ್ದಾರೆ. ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಚೆನ್ನಾಗಿ ನಟಿಸಿದ್ದಾರೆ ಎಂದು ನಿರ್ದೇಶಕ ಪಿ.ಸಿ.ಶೇಖರ್ ಹಾಡಿನ ಬಗ್ಗೆ ಮಾಹಿತಿ ನೀಡಿದರು. ಇದನ್ನೂ ಓದಿ: ತೆಲುಗು ಯುವನಟ ಸುಧೀರ್ ಆತ್ಮಹತ್ಯೆ: ಚಿತ್ರೋದ್ಯಮಕ್ಕೆ ಮತ್ತೊಂದು ಆಘಾತ

    ನಮ್ಮ ‘ಲವ್ ಮಾಕ್ಟೇಲ್’ ಚಿತ್ರದ ಮೊದಲ ಹಾಡನ್ನು ಪುನೀತ್ ಸರ್ ಹಾಗೂ ಆಶ್ವಿನಿ ಅವರಿಗೆ ತೋರಿಸಿದ್ದೆವು. ಇಬ್ಬರು ನೋಡಿ ಮನಸಾರೆ ಹರಸಿದ್ದರು. ಈ ಚಿತ್ರದ ಹಾಡನ್ನು ಅಶ್ವಿನಿ ಪುನೀತ್ ರಾಜಕುಮಾರ್ ಅವರು ಬಿಡುಗಡೆ ಮಾಡಿರುವುದು ಸಂತೋಷವಾಗಿದೆ ಎಂದರು ಮಿಲನ ನಾಗರಾಜ್. ಮದುವೆಗೆ ಸಂಬಂಧಿಸಿದ  ಈ ಹಾಡು ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ ಎಂದು ಸಾಹಿತಿ ಕವಿರಾಜ್ ತಿಳಿಸಿದರು.

    ಹಾಡು ಬಿಡುಗಡೆ ಮಾಡಿದ್ದ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಹಾಗು ಆಗಮಿಸಿದ್ದ ಗಣ್ಯರಿಗೆ ನಿರ್ಮಾಪಕ ಕಡ್ಡಿಪುಡಿ ಚಂದ್ರು ಧನ್ಯವಾದ ತಿಳಿಸಿದರು. ಡಾರ್ಲಿಂಗ್ ಕೃಷ್ಣ, ಮಿಲನ ನಾಗರಾಜ್, ಸಂಯುಕ್ತ ಹೊರನಾಡು, ಸಾಧುಕೋಕಿಲ, ರಂಗಾಯಣ ರಘು,  ಅವಿನಾಶ್, ವೀಣಾ ಸುಂದರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಲವ್ ಬರ್ಡ್ಸ್’ ಗಾಗಿ ಲಾಯರ್ ಆದ ಸಂಯುಕ್ತ ಹೊರನಾಡು

    ‘ಲವ್ ಬರ್ಡ್ಸ್’ ಗಾಗಿ ಲಾಯರ್ ಆದ ಸಂಯುಕ್ತ ಹೊರನಾಡು

    ತಾರಾ ಜೋಡಿ ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ನಾಯಕ-ನಾಯಕಿಯಾಗಿ ನಟಿಸಿರುವ “ಲವ್ ಬರ್ಡ್ಸ್” ಚಿತ್ರದಲ್ಲಿ ನಟಿ ಸಂಯುಕ್ತ ಹೊರನಾಡು ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯಾರಿಗೂ ಅಂಜದ ದಿಟ್ಟ ಹುಡುಗಿಯಾಗಿ, ತೆಗೆದುಕೊಂಡ ಎಲ್ಲಾ ಕೇಸ್ ಗಳಲ್ಲೂ ಯಶಸ್ಸು ಗಳಿಸುವ ಯಶಸ್ವಿ ಲಾಯರ್ ಆಗಿ ಅಭಿನಯಿಸಿರುವ ಸಂಯುಕ್ತ ಹೊರನಾಡು ಪಾತ್ರದ ಹೆಸರು ಮಾಯಾ. ಈಕೆ  ನಾಯಕ ಹಾಗೂ ನಾಯಕಿ ದೀಪಕ್ – ಪೂಜಾ ಇಬ್ಬರಿಗೂ ಗೆಳತಿ ಕೂಡ.

    ಯಂಗ್ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಂಯುಕ್ತ ಹೊರನಾಡು ಅವರ ಪಾತ್ರಕ್ಕೆ ಸರಿಹೊಂದುವ ಕಾಸ್ಟ್ಯೂಮ್ಸ್ ಗಳನ್ನು ಬಳಸಿಕೊಳ್ಳಲಾಗಿದೆ ಹಾಗೂ ಮೊದಲ ಬಾರಿಗೆ ಸಂಯುಕ್ತ ಹೊರನಾಡು ಅವರ ಪಾತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ ಎಂದು ನಿರ್ದೇಶಕ ಪಿ.ಸಿ.ಶೇಖರ್ ತಿಳಿಸಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಬೀಚ್ ಫೋಟೋ: ದೇವರಕೊಂಡ ಕ್ಲಿಕ್ಕಿಸಿದ್ದಾ ಎಂದ ನೆಟ್ಟಿಗರು

    ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಮೊದಲ ಹಾಡು ಜನವರಿ 22 ರಂದು ಬಿಡುಗಡೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k