Tag: Daryl Mitchell

  • ಇನ್ನು ಮುಂದೆ ನಾನು ಪಾಕ್‌ಗೆ ಹೋಗಲ್ಲ: ಡೇರಿಲ್ ಮಿಚೆಲ್

    ಇನ್ನು ಮುಂದೆ ನಾನು ಪಾಕ್‌ಗೆ ಹೋಗಲ್ಲ: ಡೇರಿಲ್ ಮಿಚೆಲ್

    – ಪಾಕ್‌ ಕೆಟ್ಟ ಪರಿಸ್ಥಿತಿಯನ್ನು ಬಿಚ್ಚಿಟ್ಟ ಬಾಂಗ್ಲಾ ಆಟಗಾರ

    ದುಬೈ: ಇನ್ನು ಮುಂದೆ ನಾನು ಪಾಕಿಸ್ತಾನಕ್ಕೆ (Pakistan) ಹೋಗುವುದೇ ಇಲ್ಲ ಎಂದು ನ್ಯೂಜಿಲೆಂಡ್‌ ಆಟಗಾರ ‌ ಡೇರಿಲ್‌ ಮಿಚೆಲ್ (Daryl Mitchell) ಹೇಳಿದ್ದಾರೆ.

    ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಸಂಘರ್ಷ ತೀವ್ರಗೊಂಡ ಬೆನ್ನಲ್ಲೇ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂಡಿಯನ್ ಪ್ರೀಮಿಯರ್ ಲೀಗ್ 2025 ಸೀಸನ್ (IPL) ಅನ್ನು ಒಂದು ವಾರ ಸ್ಥಗಿತಗೊಳಿಸಿದ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಪಿಎಸ್‌ಎಲ್‌ ಅನ್ನು ಮುಂದೂಡುವುದಾಗಿ ಘೋಷಿಸಿತ್ತು.

    ಪಿಸಿಬಿ ಉಳಿದ ಪಿಎಸ್‌ಎಲ್‌ ಪಂದ್ಯಗಳನ್ನು ಕರಾಚಿಯಲ್ಲಿ ನಡೆಸಲು ಬಯಸಿತ್ತು. ಆದರೆ ಆಟಗಾರರು ಆತಂಕ ವ್ಯಕ್ತಪಡಿಸಿದ ನಂತರ ಆಟಗಾರರನ್ನು ದುಬೈಗೆ ಕಳುಹಿಸಿಕೊಟ್ಟಿತ್ತು. ದುಬೈಗೆ ಬಂದ ನಂತರ ಬಾಂಗ್ಲಾದೇಶ ಲೆಗ್ ಸ್ಪಿನ್ನರ್ ರಿಷಾದ್ ಹೊಸೈನ್ ಪಾಕಿಸ್ತಾನದ ಕೆಟ್ಟ ಅನುಭವದ ಬಗ್ಗೆ ಮಾಧ್ಯಮದ ಜೊತೆ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬ್ರಹ್ಮೋಸ್‌ ದಾಳಿಗೆ ಬೆಚ್ಚಿ ಗೋಗರೆದು ಕದನ ವಿರಾಮ ಮಾಡಿಸಿದ್ದ ಪಾಕ್‌!

    ಸ್ಯಾಮ್ ಬಿಲ್ಲಿಂಗ್ಸ್, ಡೇರಿಲ್ ಮಿಚೆಲ್, ಕುಶಾಲ್ ಪೆರೆರಾ, ಡೇವಿಡ್ ವೈಸ್, ಟಾಮ್ ಕರ್ರನ್‌ ತುಂಬಾ ಭಯಗೊಂಡಿದ್ದರು. ದುಬೈಗೆ ಬಂದ ಬಳಿಕ ಮಿಚೆಲ್ ಇನ್ನು ಮುಂದೆ ಎಂದಿಗೂ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಹೇಳಿದರು. ಆಟಗಾರರು ಬಹಳ ಆತಂಕದಲ್ಲಿದ್ದರು ರಿಷದ್ ತಿಳಿಸಿದರು. ಇದನ್ನೂ ಓದಿ: ದಾಳಿ ವೇಳೆ ಕುತಂತ್ರ ಮಾಡಿದ್ರೂ ಭಾರತದ ಉತ್ತರಕ್ಕೆ ಪಾಕ್‌ ತತ್ತರ!

    ನಾವು ಹೊರಟ 20 ನಿಮಿಷಗಳ ಬಳಿಕ ವಿಮಾನ ನಿಲ್ದಾಣದ ಬಳಿಯೇ ಕ್ಷಿಪಣಿ ಅಪ್ಪಳಿಸಿದ ವಿಷಯ ದುಬೈಗೆ ಇಳಿದ ನಂತರ ತಿಳಿಯಿತು. ನಮ್ಮ ಕುಟುಂಬ ನಿದ್ದೆಯಿಲ್ಲದೇ ಹಲವು ರಾತ್ರಿಗಳನ್ನು ಕಳೆದಿದೆ ಎಂದು ಹೇಳಿದರು.

     

    ಇಂಗ್ಲೆಂಡ್‌ ಆಟಗಾರ ಟಾಮ್‌ ಕರ್ರನ್‌ ಬಗ್ಗೆ ಮಾತನಾಡಿದ ರಿಷಾದ್, ಅವರು ವಿಮಾನ ನಿಲ್ದಾಣಕ್ಕೆ ಹೋದಾಗ ನಿಲ್ದಾಣ ಮುಚ್ಚಲ್ಪಟ್ಟಿದೆ ಎಂದು ತಿಳಿಸಲಾಯಿತು. ವಿಮಾನ ಮುಚ್ಚಿದ ವಿಚಾರ ತಿಳಿದು ಅವರು ಚಿಕ್ಕ ಮಗುವಿನಂತೆ ಅಳಲು ಪ್ರಾರಂಭಿಸಿದರು. ಅವರನ್ನು ಮೂವರಿಂದ ಸಮಾಧಾನ ಮಾಡಲಾಯಿತು ಎಂದು ತಿಳಿಸಿದರು.

    ಉಳಿದ ಪಂದ್ಯಗಳನ್ನು ಕರಾಚಿಯಲ್ಲಿ ಆಡಲು ಪಿಸಿಬಿ ಮುಂದಾಗಿತ್ತು. ಈ ನಿಟ್ಟಿನಲ್ಲಿ ವಿದೇಶಿ ಆಟಗಾರರನ್ನು ಮನವೊಲಿಸುವ ಕೆಲಸ ನಡೆಸುತ್ತಿತ್ತು. ಆದರೆ ಹಿಂದಿನ ದಿನ ಇಲ್ಲಿ ಎರಡು ಡ್ರೋನ್‌ ದಾಳಿ ನಡೆದಿರುವ ವಿಚಾರವನ್ನು ಮರೆ ಮಾಡಿದ್ದರು. ಮರು ದಿನ ಡ್ರೋನ್‌ ದಾಳಿ ನಡೆದ ವಿಚಾರ ಗೊತ್ತಾಯಿತು ಎಂದು ರಿಷದ್‌ ನುಡಿದರು.

  • ಬಿದ್ದು ಎದ್ದು ಗೆದ್ದ ರಾಹುಲ್‌ – ಟೀಕೆಗಳಿಗೆ ಬ್ಯಾಟ್‌ ಮೂಲಕವೇ ಉತ್ತರ ಕೊಟ್ಟ ಕನ್ನಡಿಗ

    ಬಿದ್ದು ಎದ್ದು ಗೆದ್ದ ರಾಹುಲ್‌ – ಟೀಕೆಗಳಿಗೆ ಬ್ಯಾಟ್‌ ಮೂಲಕವೇ ಉತ್ತರ ಕೊಟ್ಟ ಕನ್ನಡಿಗ

    ದುಬೈ: ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾ 12 ವರ್ಷಗಳ ಬಳಿಕ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಈ ಟೂರ್ನಿಯ ಸೆಮಿಸ್‌ ಹಾಗೂ ಫೈನಲ್‌ ಪಂದ್ಯದಲ್ಲಿ ಎಚ್ಚರಿಕೆಯ ಆಟವಾಡಿದ ಕೆ.ಎಲ್‌ ರಾಹುಲ್‌ ತಮ್ಮ ವಿರುದ್ಧದ ಟೀಕೆಗಳಿಗೆ ಬ್ಯಾಟ್‌ ಮೂಲಕವೇ ಉತ್ತರ ಕೊಟ್ಟಿದ್ದಾರೆ.

    ಭಾರತದ ಆತಿಥ್ಯದಲ್ಲಿ ನಡೆದ 2023ರ ಏಕದಿನ ವಿಶ್ವಕಪ್‌ ಟೂರ್ನಿ ಬಳಿಕ ಕೆ.ಎಲ್‌ ರಾಹುಲ್‌ ಫಾರ್ಮ್‌ ಕಳೆದುಕೊಂಡು ಮೂಲೆಗುಂಪಾಗಿದ್ದರು. ಗಾಯದ ಸಮಸ್ಯೆ, ಫಾರ್ಮ್‌ ಕಂಡುಕೊಳ್ಳದೇ ಇದ್ದ ಕಾರಣ 2024ರ ಟಿ20 ವಿಶ್ವಕಪ್‌ ತಂಡಕ್ಕೂ ಆಯ್ಕೆಯಾಗದೇ ಉಳಿದಿದ್ದರು. ಇದನ್ನೂ ಓದಿ: ಬ್ಯೂಟಿ ಜೊತೆ ಚಹಲ್‌ ಫೈನಲ್‌ ಪಂದ್ಯ ವೀಕ್ಷಣೆ – ಯಾರಿದು ಯುವತಿ?

    ಆ ಬಳಿಕ ರಣಜಿ ಟ್ರೋಫಿಯಲ್ಲಿ ಹಾಗೂ ಚಾಂಪಿಯನ್ಸ್‌ ಟ್ರೋಫಿಗೂ ಮುನ್ನ ಇಂಗ್ಲೆಂಡ್‌ ವಿರುದ್ಧ ನಡೆದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಫಾರ್ಮ್‌ ಸಾಬೀತು ಮಾಡುವಲ್ಲಿ ರಾಹುಲ್‌ ವಿಫಲವಾಗಿದ್ದರು. ಇದರಿಂದ ಭಾರೀ ಟೀಕೆಗಳು ಕೇಳಿ ಬಂದಿದ್ದವು. ಇದನ್ನೂ ಓದಿ: ಐಸಿಸಿಯ 24 ಟೂರ್ನಿಗಳಲ್ಲಿ 23 ರಲ್ಲಿ ಗೆಲುವು – ಇದು ರೋ’ಹಿಟ್‌’ ಕ್ಯಾಪ್ಟನ್ಸಿ ಟ್ರ್ಯಾಕ್‌ ರೆಕಾರ್ಡ್‌

    ಲೀಗ್‌ ಸುತ್ತಿನ ಪಂದ್ಯಗಳಲ್ಲಿ ಬಾಂಗ್ಲಾ ವಿರುದ್ಧ 41 ರನ್‌, ನ್ಯೂಜಿಲೆಂಡ್‌ ವಿರುದ್ಧ 23 ರನ್‌ ಗಳಿಸಿದ್ದರು. ಆದ್ರೆ ಆಸೀಸ್‌ ವಿರುದ್ಧ ನಡೆದ ಸೆಮಿ ಫೈನಲ್‌ನಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆ.ಎಲ್‌ ರಾಹುಲ್‌ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. 34 ಎಸೆತಗಳಲ್ಲಿ 42 ರನ್‌ ಗಳಿದ್ರೂ ಟೀಂ ಇಂಡಿಯಾ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಇದೀಗ ಫೈನಲ್‌ ಪಂದ್ಯದಲ್ಲೂ 34 ರನ್‌ ಗಳಿಸುವ ಮೂಲಕ ಭಾರತ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಕಾರಣರಾಗಿದ್ದಾರೆ.

    ಭಾರತ ಕೊನೆಯ ಬಾರಿಗೆ 2013ರಲ್ಲಿ ಎಂ.ಎಸ್‌ ಧೋನಿ ನಾಯಕತ್ವದಲ್ಲಿ ಚಾಂಪಿಯನ್ಸ್‌ ಟ್ರೋಫಿ ತನ್ನದಾಗಿಸಿಕೊಂಡಿತ್ತು. ಇದನ್ನೂ ಓದಿ:  140 ಕೋಟಿ ಭಾರತೀಯರ ಕನಸು ನನಸು – ಚಾಂಪಿಯ‌ನ್ಸ್‌ಗಳಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ! 

  • 140 ಕೋಟಿ ಭಾರತೀಯರ ಕನಸು ನನಸು – ಚಾಂಪಿಯ‌ನ್ಸ್‌ಗಳಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ!

    140 ಕೋಟಿ ಭಾರತೀಯರ ಕನಸು ನನಸು – ಚಾಂಪಿಯ‌ನ್ಸ್‌ಗಳಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ!

    – 25 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಭಾರತ

    ದುಬೈ: ಕೊನೆಗೂ 140 ಕೋಟಿ ಭಾರತೀಯರ ಕನಸು ನನಸಾಗಿದೆ. ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ (Champions Trophy) ಕಿರೀಟ ಮುಡಿಗೇರಿಸಿಕೊಂಡಿದೆ. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದ ಭಾರತಕ್ಕಿದು ಸತತ 2ನೇ ಐಸಿಸಿ ಟ್ರೋಫಿ ಆಗಿರುವುದು ವಿಶೇಷ.

    ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಭಾರತ (Team India) 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿತು. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶನದೊಂದಿಗೆ 2000 ಇಸವಿಯಲ್ಲಿ ಕಿವೀಸ್ ವಿರುದ್ಧ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿತು.

    1998-99ರ ಚೊಚ್ಚಲ ಆವೃತ್ತಿಯಲ್ಲೇ ಚೋಕರ್ಸ್ ದಕ್ಷಿಣ ಆಫ್ರಿಕಾ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2000-01ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ಟ್ರೋಫಿ ಗೆದ್ದುಕೊಂಡಿತ್ತು. ಆದ್ರೆ 2002-03ರ ಆವೃತ್ತಿಯಲ್ಲಿ 2 ದಿನ ಫೈನಲ್ ನಡೆದರೂ ಮಳೆಗೆ ಪಂದ್ಯ ಬಲಿಯಾಯ್ತು. ಆದ್ದರಿಂದ ಭಾರತ ಮತ್ತು ಶ್ರೀಲಂಕಾವನ್ನ ಜಂಟಿಯಾಗಿ ಚಾಂಪಿಯನ್ಸ್ ಎಂದು ಘೋಷಿಸಲಾಯಿತು. ಇನ್ನೂ 2004ರಲ್ಲಿ ವೆಸ್ಟ್ ಇಂಡೀಸ್, 2006-07, 2009-10ರಲ್ಲಿ ಆಸ್ಟ್ರೇಲಿಯಾ, 2013ರಲ್ಲಿ ಭಾರತ, 2017ರಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. 2000, 2017ರಲ್ಲಿ ಭಾರತ ಫೈನಲ್ ತಲುಪಿದ್ರೂ ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. 2000 ಇಸವಿಯಲ್ಲಿ ಕಿವೀಸ್ ವಿರುದ್ಧ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಸದ್ಯ 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ.

    ದಾಖಲೆಯ ಶತಕದ ಜೊತೆಯಾಟ:
    ಚೇಸಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ (Rohit Sharma), ಶುಭಮನ್ ಗಿಲ್ ಸ್ಫೋಟಕ ಇನ್ನಿಂಗ್ಸ್ ಕಟ್ಟುವಲ್ಲಿ ಯಶಸ್ವಿಯಾದರು. 112 ಎಸೆತಗಳಲ್ಲಿ ಈ ಜೋಡಿ 105 ರನ್‌ಗಳ ಜೊತೆಯಾಟ ನೀಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ಫೈನಲ್ ಪಂದ್ಯದಲ್ಲಿ ಶತಕದ ಜೊತೆಯಾಟ ಎಂಬ ದಾಖಲೆಗೂ ರೋಹಿತ್ ಗಿಲ್ ಪಾತ್ರರಾದರು. ಗಿಲ್ 50 ಎಸೆತಗಳಲ್ಲಿ 31 ರನ್ ಗಳಿಸಿ ಔಟಾದರು. ಈ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೇವಲ 1 ರನ್ ಗಳಿಸಿ ಎಲ್‌ಬಿಡಬ್ಲ್ಯೂಗೆ ತುತ್ತಾದರು. ಆ ಬಳಿಕವೂ ಕಿವೀಸ್ ಬೌಲರ್‌ಗಳನ್ನು ಬೆಂಡೆತ್ತಿದ ರೋಹಿತ್ 76 ರನ್ (83 ಎಸೆತ, 3 ಸಿಕ್ಸರ್, 7 ಬೌಂಡರಿ) ಗಳಿಸಿ ಪೆವಿಲಿಯನ್‌ಗೆ ಮರಳಿದರು.

    ಇನ್ನಿಂಗ್ಸ್‌ ಕಟ್ಟಿದ ಶ್ರೇಯಸ್‌:
    26.1 ಓವರ್‌ಗಳಲ್ಲಿ 122 ರನ್‌ಗಳಿಗೆ ಭಾರತ 3 ವಿಕೆಟ್‌ ಕಳೆದುಕೊಂಡಿದ್ದಾಗ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಇನ್ನಿಂಗ್ಸ್‌ ಕಟ್ಟುವಲ್ಲಿ ಶ್ರೇಯಸ್‌ ಅಯ್ಯರ್‌ ಯಶಸ್ವಿಯಾದರು. 62 ಎಸೆತಗಳಲ್ಲಿ 48 ರನ್‌ (2 ಸಿಕ್ಸರ್‌, 2 ಬೌಂಡರಿ) ಬಾರಿಸಿದ್ರು. ಇದೇ ವೇಳೆ ಶ್ರೇಯಸ್‌ಗೆ ಜೊತೆಯಾಗಿ ಎಚ್ಚರಿಕೆಯ ಆಟವಾಡಿದ ಅಕ್ಷರ್‌ ಪಟೇಲ್‌ 40 ಎಸೆತಗಳಲ್ಲಿ 29 ರನ್‌ (1 ಸಿಕ್ಸರ್‌, 1 ಬೌಂಡರಿ) ಕೊಡುಗೆ ನೀಡಿದರು.

    ರಾಹುಲ್‌ ಎಚ್ಚರಿಕೆಯ ಆಟ:
    ಇನ್ನೂ ಲೀಗ್‌ ಸುತ್ತಿನ ಪಂದ್ಯಗಳಲ್ಲಿ ಕಳಪೆ ಪ್ರದರ್ಶನದಿಂದ ಭಾರೀ ಟೀಕೆಗೆ ಗುರಿಯಾಗಿದ್ದ ಕನ್ನಡಿಗ ಕೆ.ಎಲ್‌ ರಾಹುಲ್‌ ಸೆಮಿಫೈನಲ್‌ನಂತೆ ಫೈನಲ್‌ ಪಂದ್ಯದಲ್ಲೂ ಎಚ್ಚರಿಕೆಯ ಆಟವಾಡಿದರು. 33 ಎಸೆತಗಳಲ್ಲಿ 1 ಸಿಕ್ಸರ್‌, 1 ಬೌಂಡರಿ ಸಹಿತ 34 ರನ್‌ ಗಳಿಸಿ ಟೀಂ ಇಂಡಿಯಾ ಗೆಲುವಿಗೆ ನೆರವಾದರು. ಇದರೊಂದಿಗೆ ಪಾಂಡ್ಯ ಜವಾಬ್ದಾರಿಯುತ 18 ರನ್‌, ರವೀಂದ್ರ ಜಡೇಜಾ 3 ರನ್‌ಗಳ ಕೊಡುಗೆ ನೀಡಿದರು. ಹೆಚ್ಚುವರಿಯಾಗಿ 8 ರನ್‌ ತಂಡಕ್ಕೆ ಸೇರ್ಪಡೆಯಾಯ್ತು.

    ನ್ಯೂಜಿಲೆಂಡ್‌ ಪರ ಮಿಚೆಲ್‌ ಸ್ಯಾಂಟ್ನರ್‌, ಮೈಕಲ್‌ ಬ್ರೇಸ್‌ವೆಲ್‌ ತಲಾ 2 ವಿಕೆಟ್‌ ಕಿತ್ತರೆ, ಕೈಲ್‌ ಜೇಮಿಸನ್‌, ರಚಿನ್‌ ರವೀಂದ್ರ ತಲಾ ಒಂದು ವಿಕೆಟ್‌ ಪಡೆದರು.

    ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಮಿಚೆಲ್ ಸ್ಯಾಂಟ್ನರ್ ನಾಯಕತ್ವದ ಕಿವೀಸ್, ಫೀಲ್ಡಿಂಗ್ ಮಾಡುವ ಅವಕಾಶವನ್ನು ಭಾರತಕ್ಕೆ ಬಿಟ್ಟುಕೊಟ್ಟಿತು. ಆರಂಭಿಕರಾಗಿ ಕಣಕ್ಕಿಳಿದ ರಚಿನ್ ರವೀಂದ್ರ ಹಾಗೂ ವಿಲ್ ಯಂಗ್ ಜೋಡಿ ಸ್ಪೋಟಕ ಇನ್ನಿಂಗ್ಸ್ ಕಟ್ಟುವ ಪ್ರಯತ್ನಕ್ಕೆ ಮುಂದಾದರು. ಅಂತೆಯೇ ಮೊದಲ ವಿಕೆಟ್‌ಗೆ 47 ಎಸೆತಗಳಲ್ಲಿ 57 ರನ್‌ಗಳ ಜೊತೆಯಾಟ ನೀಡಿತ್ತು. ಆದ್ರೆ ವಿಲ್ ಯಂಗ್ ವಿಕೆಟ್ ಬೀಳುತ್ತಿದ್ದಂತೆ ಅಗ್ರ ಕ್ರಮಾಂಕದ ಆಟಗಾರರು ಪೆವಿಲಿಯನ್ ಪರೇಡ್ ನಡೆಸಿದರು. ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಒಪ್ಪಿಸಿದ್ರು.

    ಜೀವ ತುಂಬಿದ ಮಿಚೆಲ್, ಫಿಲಿಪ್ಸ್ ಜೊತೆಯಾಟ:
    ಇನ್ನೂ 23.2 ಓವರ್‌ಗಳಲ್ಲಿ 108 ರನ್‌ಗಳಿಗೆ ಪ್ರಮುಖ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಕಿವೀಸ್‌ಗೆ ಗ್ಲೇನ್ ಫಿಲಿಪ್ಸ್ ಹಾಗೂ ಡೇರಿಲ್ ಮಿಚೆಲ್ ಅವರ ಜೊತೆಯಾಟ ಜೀವ ತುಂಬಿತು. ಟೀಂ ಇಂಡಿಯಾ ಸ್ಪಿನ್ನರ್‌ಗಳ ಎದುರು ರನ್ ಕದಿಯಲು ತಿಣುಕಾಡಿದ ಈ ಜೋಡಿ 87 ಎಸೆತಗಳಲ್ಲಿ 57 ರನ್ ಗಳಿಸಿತು. ಇದರೊಂದಿಗೆ ಮಧ್ಯಮ ಕ್ರಮಾಂಕದಲ್ಲಿ ಟಾಮ್ ಲಾಥಮ್, ಮಿಚೆಲ್ ಜೋಡಿಯಿಂದ 33 ರನ್ ಹಾಗೂ ಮೈಕಲ್ ಬ್ರೇಸ್‌ವೆಲ್ ಜೊಡಿಯಿಂದ 46 ರನ್‌ಗಳ ಸಣ್ಣ ಪ್ರಮಾಣದ ಜೊತೆಯಾಟ ಕಿವೀಸ್ ತಂಡ 200 ರನ್‌ಗಳ ಗಡಿದಾಟಲು ನೆರವಾಯಿತು.

    ಕಿವೀಸ್ ಪರ ಡೇರಿಲ್ ಮಿಚೆಲ್ 63 ರನ್ (101 ಎಸೆತ, 3 ಬೌಂಡರಿ), ಮೈಕಲ್ ಬ್ರೇಸ್‌ವೆಲ್ ಅಜೇಯ 53 ರನ್ (40 ಎಸೆತ, 2 ಸಿಕ್ಸರ್, 3 ಬೌಂಡರಿ), ರಚಿನ್ ರವೀಂದ್ರ 37 ರನ್, ಗ್ಲೆನ್ ಫಿಲಿಪ್ಸ್ 34 ರನ್, ವಿಲ್ ಯಂಗ್ 15 ರನ್, ಕೇನ್ ವಿಲಿಯಮ್ಸನ್ 11 ರನ್, ಟಾಮ್ ಲಾಥಮ್ 14 ರನ್, ಮಿಚೆಲ್ ಸ್ಯಾಂಟ್ನರ್ 8 ರನ್, ಕೊಡುಗೆ ನೀಡಿದರು.

    ಟೀಂ ಇಂಡಿಯಾ ಪರ ವರುಣ್ ಚಕ್ರವರ್ತಿ, ಕುಲ್‌ದೀಪ್ ಯಾದವ್ ತಲಾ 2 ವಿಕೆಟ್ ಕಿತ್ತರೆ, ಮೊಹಮ್ಮದ್ ಶಮಿ, ರವೀಂದ್ರ ಜಡೇಜಾ ತಲಾ ಒಂದೊAದು ವಿಕೆಟ್ ಪಡೆದು ಮಿಂಚಿದರು.

  • Champions Trophy | ಕೊನೆಯಲ್ಲಿ ಬ್ರೇಸ್‌ವೆಲ್‌ ಸ್ಫೋಟಕ ಫಿಫ್ಟಿ – ಭಾರತದ ಗೆಲುವಿಗೆ 252 ರನ್‌ ಗುರಿ

    Champions Trophy | ಕೊನೆಯಲ್ಲಿ ಬ್ರೇಸ್‌ವೆಲ್‌ ಸ್ಫೋಟಕ ಫಿಫ್ಟಿ – ಭಾರತದ ಗೆಲುವಿಗೆ 252 ರನ್‌ ಗುರಿ

    ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ (Champions Trophy Final) ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್‌ ತಂಡ 7 ವಿಕೆಟ್‌ ನಷ್ಟಕ್ಕೆ 251 ರನ್‌ ಗಳಿಸಿದೆ. ಈ ಮೂಲಕ ಭಾರತಕ್ಕೆ (Team India) 252 ರನ್‌ಗಳ ಗುರಿ ನೀಡಿದೆ.

    ಟೀಂ ಇಂಡಿಯಾ ಸ್ಪಿನ್‌ ಬೌಲರ್‌ಗಳ ಘಾತುಕ ದಾಳಿಯ ಹೊರತಾಗಿಯೂ ಮೈಕಲ್‌ ಬ್ರೇಸ್‌ವೆಲ್‌ (Michael Bracewell) ಹಾಗೂ ಡೇರಿಲ್‌ ಮಿಚೆಲ್‌ (Daryl Mitchell) ಅವರ ಅಮೋಘ ಅರ್ಧಶತಕಗಳ ನೆರವಿನಿಂದ 250 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಗಿದೆ.

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಮಿಚೆಲ್‌ ಸ್ಯಾಂಟ್ನರ್‌ ನಾಯಕತ್ವದ ಕಿವೀಸ್‌, ಫೀಲ್ಡಿಂಗ್‌ ಮಾಡುವ ಅವಕಾಶವನ್ನು ಭಾರತಕ್ಕೆ ಬಿಟ್ಟುಕೊಟ್ಟಿತು. ಆರಂಭಿಕರಾಗಿ ಕಣಕ್ಕಿಳಿದ ರಚಿನ್‌ ರವೀಂದ್ರ (Rachin Ravindra) ಹಾಗೂ ವಿಲ್‌ ಯಂಗ್‌ ಜೋಡಿ ಸ್ಪೋಟಕ ಇನ್ನಿಂಗ್ಸ್‌ ಕಟ್ಟುವ ಪ್ರಯತ್ನಕ್ಕೆ ಮುಂದಾದರು. ಅಂತೆಯೇ ಮೊದಲ ವಿಕೆಟ್‌ಗೆ 47 ಎಸೆತಗಳಲ್ಲಿ 57 ರನ್‌ಗಳ ಜೊತೆಯಾಟ ನೀಡಿತ್ತು. ಆದ್ರೆ ವಿಲ್‌ ಯಂಗ್‌ ವಿಕೆಟ್‌ ಬೀಳುತ್ತಿದ್ದಂತೆ ಅಗ್ರ ಕ್ರಮಾಂಕದ ಆಟಗಾರರು ಪೆವಿಲಿಯನ್‌ ಪರೇಡ್‌ ನಡೆಸಿದರು. ರಚಿನ್‌ ರವೀಂದ್ರ, ಕೇನ್‌ ವಿಲಿಯಮ್ಸನ್‌ ಬ್ಯಾಕ್‌ ಟು ಬ್ಯಾಕ್‌ ವಿಕೆಟ್‌ ಒಪ್ಪಿಸಿದ್ರು.

    ಜೀವ ತುಂಬಿದ ಮಿಚೆಲ್‌, ಫಿಲಿಪ್ಸ್‌ ಜೊತೆಯಾಟ:
    ಇನ್ನೂ 23.2 ಓವರ್‌ಗಳಲ್ಲಿ 108 ರನ್‌ಗಳಿಗೆ ಪ್ರಮುಖ ನಾಲ್ಕು ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ಕಿವೀಸ್‌ಗೆ ಗ್ಲೇನ್‌ ಫಿಲಿಪ್ಸ್‌ ಹಾಗೂ ಡೇರಿಲ್‌ ಮಿಚೆಲ್‌ ಅವರ ಜೊತೆಯಾಟ ಜೀವ ತುಂಬಿತು. ಟೀಂ ಇಂಡಿಯಾ ಸ್ಪಿನ್ನರ್‌ಗಳ ಎದುರು ರನ್‌ ಕದಿಯಲು ತಿಣುಕಾಡಿದ ಈ ಜೋಡಿ 87 ಎಸೆತಗಳಲ್ಲಿ 57 ರನ್‌ ಗಳಿಸಿತು. ಇದರೊಂದಿಗೆ ಮಧ್ಯಮ ಕ್ರಮಾಂಕದಲ್ಲಿ ಟಾಮ್‌ ಲಾಥಮ್‌, ಮಿಚೆಲ್‌ ಜೋಡಿಯಿಂದ 33 ರನ್‌ ಹಾಗೂ ಮೈಕಲ್‌ ಬ್ರೇಸ್‌ವೆಲ್‌ ಜೊಡಿಯಿಂದ 46 ರನ್‌ಗಳ ಸಣ್ಣ ಪ್ರಮಾಣದ ಜೊತೆಯಾಟ ಕಿವೀಸ್‌ ತಂಡ 200 ರನ್‌ಗಳ ಗಡಿದಾಟಲು ನೆರವಾಯಿತು.

    ಕಿವೀಸ್‌ ಪರ ಡೇರಿಲ್‌ ಮಿಚೆಲ್‌ 63 ರನ್‌ (101 ಎಸೆತ, 3 ಬೌಂಡರಿ), ಮೈಕಲ್‌ ಬ್ರೇಸ್‌ವೆಲ್‌ ಅಜೇಯ 53 ರನ್‌ (40 ಎಸೆತ, 2 ಸಿಕ್ಸರ್‌, 3 ಬೌಂಡರಿ), ರಚಿನ್‌ ರವೀಂದ್ರ 37 ರನ್‌, ಗ್ಲೆನ್‌ ಫಿಲಿಪ್ಸ್‌ 34 ರನ್‌, ವಿಲ್‌ ಯಂಗ್‌ 15 ರನ್‌, ಕೇನ್‌ ವಿಲಿಯಮ್ಸನ್‌ 11 ರನ್‌, ಟಾಮ್‌ ಲಾಥಮ್‌ 14 ರನ್‌, ಮಿಚೆಲ್‌ ಸ್ಯಾಂಟ್ನರ್‌ 8 ರನ್‌, ಕೊಡುಗೆ ನೀಡಿದರು.

    ಟೀಂ ಇಂಡಿಯಾ ಪರ ವರುಣ್‌ ಚಕ್ರವರ್ತಿ, ಕುಲ್‌ದೀಪ್‌ ಯಾದವ್‌ ತಲಾ 2 ವಿಕೆಟ್‌ ಕಿತ್ತರೆ, ಮೊಹಮ್ಮದ್‌ ಶಮಿ, ರವೀಂದ್ರ ಜಡೇಜಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • ಕೊನೆಯಲ್ಲಿ ಕ್ರೀಸ್‌ ಬಿಟ್ಟುಕೊಡದ ಮಹಿ – ಡೇರಿಲ್‌ ಮಿಚೆಲ್‌ಗೆ ದೊಡ್ಡ ಅವಮಾನ ಎಂದು ಫ್ಯಾನ್ಸ್‌ ಗರಂ!

    ಕೊನೆಯಲ್ಲಿ ಕ್ರೀಸ್‌ ಬಿಟ್ಟುಕೊಡದ ಮಹಿ – ಡೇರಿಲ್‌ ಮಿಚೆಲ್‌ಗೆ ದೊಡ್ಡ ಅವಮಾನ ಎಂದು ಫ್ಯಾನ್ಸ್‌ ಗರಂ!

    – ಅಂದು‌ ಮಹಿ ಯಡವಟ್ಟಿನಿಂದಲೇ ಇಂಗ್ಲೆಂಡ್‌ ವಿರುದ್ಧ ಸೋತಿದ್ದ ಭಾರತ

    ಚೆನ್ನೈ: ತವರಿನಲ್ಲಿ ಪಂಜಾಬ್‌ ಕಿಂಗ್ಸ್ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್ ನಡುವಣ ಪಂದ್ಯದಲ್ಲಿ ಮಾಜಿ ನಾಯಕ ಮಹಿ (MS Dhoni) ನಡೆದುಕೊಂಡ ರೀತಿ ಅಭಿಮಾನಿಗಳಿಂದ ಭಾರೀ ಟೀಕೆಗೆ ಕಾರಣವಾಗಿದೆ.

    ಚೆನ್ನೈ ಸೂಪರ್‌ಕಿಂಗ್ಸ್‌ ತಂಡದ ನಾಡಿ, ಕ್ರಿಕೆಟ್‌ ಅಭಿಮಾನಿಗಳ ಆರಾಧ್ಯ ದೈವ ಎನಿಸಿಕೊಂಡಿರುವ ಲೆಜೆಂಡ್‌ ಎಂ.ಎಸ್‌ ಧೋನಿ ಬ್ಯಾಟಿಂಗ್‌ ಸರದಿಯ ಕೊನೇ ಓವರ್‌ನಲ್ಲಿ ತೋರಿದ ವರ್ತನೆ ಅಭಿಮಾನಿಗಳ ಅಸಮಾಧಾನ ಸ್ಫೋಟಕ್ಕೆ ಕಾರಣವಾಗಿದೆ.

    ಹೌದು. ಚೆನ್ನೈನ ಎಂ.ಎ ಚಿದಂಬರಂ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ತನ್ನ ಪಾಲಿನ 20 ಓವರ್‌ಗಳಿಗೆ 7 ವಿಕೆಟ್‌ಗಳ ನಷ್ಟಕ್ಕೆ 162 ರನ್‌ಗಳನ್ನು ಕಲೆ ಹಾಕಿ ಪಂಜಾಬ್‌ ಕಿಂಗ್ಸ್‌ಗೆ 163 ರನ್‌ಗಳ ಗುರಿ ನೀಡಿತ್ತು.

    ಮಿಚೆಲ್‌ಗೆ ಅವಮಾನ ಮಾಡಿದ್ರಾ ಮಹಿ?
    ಚೆನ್ನೈ ಸೂಪರ್‌ ಕಿಂಗ್ಸ್ ಇನಿಂಗ್ಸ್‌ನ ಕೊನೇ ಓವರ್‌ನ ಮೊದಲ ಎಸೆತದಲ್ಲಿ ಎಂ.ಎಸ್‌ ಧೋನಿ, ಅರ್ಷದೀಪ್‌ ಸಿಂಗ್‌ಗೆ ಬೌಂಡರಿ ಬಾರಿಸಿದ್ದರು. ನಂತರ ಮುಂದಿನ 2 ಎಸೆತಗಳನ್ನು ಡಾಟ್‌ ಮಾಡಿದ್ದರು. 3ನೇ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಕೈಹಾಕಿದ್ದ ಧೋನಿ, ಬೌಂಡರಿ ಅಥವಾ ಸಿಕ್ಸರ್‌ ಬಾರಿಸುವಲ್ಲಿ ವಿಫಲವಾಗಿದ್ದರು. ಆದ್ರೆ ಈ ವೇಳೆ ಸುಲಭವಾಗಿ ಒಂದು ರನ್‌ ಕದಿಯಬಹುದಿತ್ತು. ಆದರೆ, ಧೋನಿ ನಿರಾಕರಿಸಿದರು.

    ನಾನ್‌ಸ್ಟ್ರೈಕ್‌ ತುದಿಯಲ್ಲಿದ್ದ ಡೇರಿಲ್‌ ಮಿಚೆಲ್‌ (Daryl Mitchell) ರನ್‌ ಪಡೆಯಲು ಸ್ಟ್ರೈಕರ್‌ ತುದಿಗೆ ಓಡಿ ಬಂದರು. ಆದರೆ, ಧೋನಿ ನಿಂತಲ್ಲಿಯೇ ಡೇರಿಲ್‌ ಮಿಚೆಲ್‌ಗೆ ವಾಪಸ್‌ ಹೋಗುವಂತೆ ಹೇಳಿದರು. ಪುನಃ ಮಿಚೆಲ್‌ ನಾನ್‌ಸ್ಟ್ರೈಕ್‌ ತುದಿಗೆ ಓಡಿಬಂದರು ಈ ವೇಳೆ ಕೂದಲೆಳೆ ಅಂತರದಲ್ಲಿ ರನ್‌ಔಟ್‌ ಆಗುವುದನ್ನು ತಪ್ಪಿಸಿಕೊಂಡಿದ್ದರು. ನಂತರ 4ನೇ ಎಸತವನ್ನೂ ಡಾಟ್‌ ಮಾಡಿಕೊಂಡ ಧೋನಿ, 5ನೇ ಎಸೆತದಲ್ಲಿ ಸಿಕ್ಸರ್‌ ಬಾರಿಸಿದರು. ಕೊನೆಯ ಎಸೆತದಲ್ಲಿ 2ನೇ ರನ್‌ ಓಡುವ ವೇಳೆ ಧೋನಿ ತಾನೇ ರನ್‌ಔಟ್‌ ಆದರು.

    ಅಂದು ಇದೇ ತಪ್ಪಿನಿಂದ ಭಾರತಕ್ಕೆ ಸೋಲಾಗಿತ್ತು:
    2014ರ ಸೆಪ್ಟಂಬರ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆದ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಮಹಿ ಇದೇ ತಪ್ಪು ಮಾಡಿದ್ದರು. ಅಂದು 181ರನ್‌ಗಳ ಗುರಿ ಬೆನ್ನತ್ತಿದ್ದ ಭಾರತ 177 ರನ್‌ಗಳಿಸಿ, ಕೇವಲ 3 ರನ್‌ಗಳ ಅಂತರದಲ್ಲಿ ಸೋಲು ಕಂಡಿತ್ತು. ಕೊನೇ ಓವರ್‌ನಲ್ಲಿ ಭಾರತದ ಗೆಲುವಿಗೆ 16 ರನ್‌ ಬೇಕಿತ್ತು. ಮೊದಲ 2 ಎಸೆತಗಳಲ್ಲೇ 8 ರನ್‌ ಬಾರಿಸಿದ ಮಹಿ, 3ನೇ ಎಸೆತವನ್ನು ಡಾಟ್‌ ಮಾಡಿಕೊಂಡಿದ್ದರು. 4ನೇ ಎಸೆತದಲ್ಲಿ ಬೌಂಡರಿ ಸಿಡಿಸಿದ್ದರು. ಇನ್ನೆರಡು ಎಸೆತಗಳಲ್ಲಿ 5 ರನ್‌ ಬೇಕಿತ್ತು. 4ನೇ ಎಸೆತದಲ್ಲಿ ಮಹಿ ಹೊಡೆದರು, ಆದ್ರೆ ಸಿಂಗಲ್‌ ತೆಗೆದುಕೊಳ್ಳಲು ನಿರಾಕರಿಸಿದ್ದರು. ಅಲ್ಲದೇ ಇದು ನಾನ್‌ಸ್ಟ್ರೈಕ್‌ನಲ್ಲಿದ್ದ ಅಂಬಟಿ ರಾಯುಡು ಅವರನ್ನೂ ಟೀಕೆಗೆ ಗುರಿಯಾಗುವಂತೆ ಮಾಡಿತ್ತು. ಆದ್ರೆ ಕೊನೆ ಎಸೆತದಲ್ಲಿ ಬೌಂಡರಿ ಸಿಡಿಸುವಲ್ಲಿ ವಿಫಲರಾದ ಮಹಿ ಒಂದು ರನ್‌ ಮಾತ್ರವೇ ಗಳಿಸಿದ್ದರು. ಇದರಿಂದ ಭಾರತ ತಂಡ ವಿರೋಚಿತ ಸೋಲಿಗೆ ತುತ್ತಾಗಿತ್ತು. ಇದೀಗ ಧೋನಿ ಮತ್ತೆ ಅಂತಹದ್ದೇ ತಪ್ಪು ಮಾಡಿದ್ದಾರೆ.

    ಧೋನಿ ವಿರುದ್ಧ ಫ್ಯಾನ್ಸ್ ಗರಂ:
    ಡ್ಯಾರಿಲ್ ಮಿಚೆಲ್‌ ಬಗ್ಗೆ ನನಗೆ ನೋವಾಗಿದೆ, ಅವರು ಬ್ಯಾಟಿಂಗ್‌ ಗೊತ್ತಿಲ್ಲದ ಆಟಗಾರನೇನು ಅಲ್ಲ. ಅವರಿಗೆ ಸಿಂಗಲ್‌ ರನ್‌ ನಿರಾಕರಿಸಿರುವುದನ್ನು ಸ್ವೀಕರಿಸಲು ಸಾಧ್ಯವಿಲ್ಲ. ಮಿಚೆಲ್‌ ಅವರೇ 2 ರನ್‌ ಓಡಿದ್ದಾರೆ. ಧೋನಿ ಜಾಗದಲ್ಲಿ ಬೇರೆ ಯಾವುದೇ ಆಟಗಾರನಿದ್ದಿದ್ದರೇ ಅವರ ಜನ್ಮವನ್ನು ಜಾಲಾಡಲಾಗುತ್ತಿತ್ತು ಎಂದು ಅಭಿಮಾನಿಯೊಬ್ಬರು ಟ್ವೀಟ್‌ ಮಾಡಿ ಎಂಎಸ್‌ ಧೋನಿ ವಿರುದ್ಧ ಕಿಡಿಕಾರಿದ್ದಾರೆ. ಇನ್ನೂ ಕೆಲವರು ಧೋನಿ ಅಂತಹ ಆಟಗಾರರಿಂದ ಇಂತಹ ವರ್ತನೆಯನ್ನು ನಿರೀಕ್ಷೆ ಮಾಡಿರಲಿಲ್ಲ. ಇದು ಆಟಗಾರನೊಬ್ಬನಿಗೆ ಮಾಡಿದ ಅವಮಾನ ಎಂದು ಕಿಡಿ ಕಾರಿದ್ದಾರೆ.

  • ರೈಸ್‌ ಆಗಿದ್ದ ಸನ್‌ ತಾಪ ಇಳಿಸಿದ ಚೆನ್ನೈ; ಸಿಎಸ್‌ಕೆಗೆ 78 ರನ್‌ಗಳ ಭರ್ಜರಿ ಜಯ – 3ನೇ ಸ್ಥಾನಕ್ಕೆ ಜಿಗಿದ ಹಾಲಿ ಚಾಂಪಿಯನ್ಸ್‌!

    ರೈಸ್‌ ಆಗಿದ್ದ ಸನ್‌ ತಾಪ ಇಳಿಸಿದ ಚೆನ್ನೈ; ಸಿಎಸ್‌ಕೆಗೆ 78 ರನ್‌ಗಳ ಭರ್ಜರಿ ಜಯ – 3ನೇ ಸ್ಥಾನಕ್ಕೆ ಜಿಗಿದ ಹಾಲಿ ಚಾಂಪಿಯನ್ಸ್‌!

    ಚೆನ್ನೈ: ನಾಯಕ ರುತುರಾಜ್‌ ಗಾಯಕ್ವಾಡ್‌ (Ruturaj Gaikwad), ಡೇರಿಲ್‌ ಮಿಚೆಲ್‌ ಅವರ ಸ್ಫೋಟಕ ಬ್ಯಾಟಿಂಗ್‌, ಸಂಘಟಿತ ಬೌಲಿಂಗ್‌ ಪ್ರದರ್ಶನದಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಸನ್‌ ರೈಸರ್ಸ್‌ ಹೈದರಾಬಾದ್‌ (CSK vs SRH) ವಿರುದ್ಧ 78 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ 9 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಜಿಗಿದಿದೆ.

    ಇಲ್ಲಿನ ಚೆಪಾಕ್‌ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್‌ಕೆ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 212 ರನ್‌ ಬಾರಿಸಿತ್ತು. ಈ ಗುರಿ ಬೆನ್ನತ್ತಿದ ಸನ್‌ ರೈಸರ್ಸ್‌ ಹೈದರಾಬಾದ್‌ (SRH) ತಂಡ 18.5 ಓವರ್‌ಗಳಲ್ಲೇ 134 ರನ್‌ಗಳಿಗೆ ಆಲೌಟ್‌ ಆಗಿ ಸೋಲೊಪ್ಪಿಕೊಂಡಿತು. ಇದನ್ನೂ ಓದಿ: T20 ವಿಶ್ವಕಪ್‌ಗೆ ಶೀಘ್ರದಲ್ಲೇ ಭಾರತ ತಂಡ ಪ್ರಕಟ; ರೋಹಿತ್‌ ಜೊತೆಗೆ ಆರಂಭಿಕ ಯಾರಾಗ್ತಾರೆ ಅನ್ನೋದೇ ಸಸ್ಪೆನ್ಸ್‌!

    ಚೇಸಿಂಗ್‌ ಆರಂಭಿಸಿದ ಸನ್‌ ರೈಸರ್ಸ್‌ ತಂಡ ಆರಂಭದಿಂದಲೇ ವಿಕೆಟ್‌ ಕಳೆದುಕೊಂಡಿತು. ಸಿಕ್ಸರ್‌-ಬೌಂಡರಿ ಸಿಡಿಸುತ್ತಿದ್ದ ಅಗ್ರ ಕ್ರಮಾಂಕದ ಟಾಪ್‌ ಬ್ಯಾಟರ್ಸ್‌ಗಳು ಅಲ್ಪ ಮೊತ್ತಕ್ಕೆ ನೆಲ ಕಚ್ಚಿದರು. ಇದು ಚೆನ್ನೈ ತಂಡಕ್ಕೆ ಲಾಭವಾಯಿತು. ಟ್ರಾವಿಸ್‌ ಹೆಡ್‌, ಅಭಿಷೇಕ್‌ ಶರ್ಮಾ, ಏಡನ್‌ ಮಾರ್ಕ್ರಮ್‌ ಬ್ಯಾಕ್‌ ಟು ಬ್ಯಾಕ್‌ ಪೆವಿಲಿಯನ್‌ ಪರೇಡ್‌ ನಡೆಸಿದರು. ಹಾಗಾಗಿ ಸಹಜವಾಗಿಯೇ ಗೆಲುವು ಚೆನ್ನೈ ತಂಡದ ಪಾಲಾಯಿತು.

    ಸನ್‌ ರೈಸರ್ಸ್‌ ತಂಡದ ಪರ ಟ್ರಾವಿಸ್‌ ಹೆಡ್‌ (Travis Head) 13 ರನ್‌, ಅಭಿಷೇಕ್‌ ಶರ್ಮಾ 15 ರನ್‌, ಏಡನ್‌ ಮಾರ್ಕ್ರಮ್‌ 32 ರನ್‌, ನಿತೀಶ್‌ ಕುಮಾರ್‌ ರೆಡ್ಡಿ 15 ರನ್‌, ಹೆನ್ರಿಕ್‌ ಕ್ಲಾಸೆನ್‌ 20 ರನ್‌, ಅಬ್ದುಲ್‌ ಸಮದ್‌ 19 ರನ್‌, ಪ್ಯಾಟ್‌ ಕಮ್ಮಿನ್ಸ್‌ 5 ರನ್‌, ಶಹಬಾಜ್‌ 7 ರನ್‌, ಜಯದೇವ್‌ ಉನದ್ಕಟ್‌ 1 ರನ್‌ ಗಳಿಸಿದ್ರೆ, ಭುವನೇಶ್ವರ್‌ ಕುಮಾರ್‌ 4 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಸಿಎಸ್‌ಕೆ ಮತ್ತೊಬ್ಬೆ ಬೌಲಿಂಗ್‌ ಪಿಚ್‌ನಲ್ಲಿ ರನ್‌ ಹೊಳೆ ಹರಿಸಿತ್ತು. 20 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ ನಷ್ಟಕ್ಕೆ 212 ರನ್‌ ಗಳಿಸಿತ್ತು. ಆರಂಭಿಕ ಅಜಿಂಕ್ಯಾ ರಹಾನೆ 9 ರನ್‌ಗಳಿಗೆ ವಿಕೆಟ್‌ ಕೈ ಚೆಲ್ಲಿದರೂ ಇತರ ಅಗ್ರ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ಸಹಾಯದಿಂದ ಬೃಹತ್‌ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಯಿತು. ಇದನ್ನೂ ಓದಿ: 10 ಸಿಕ್ಸರ್‌ನೊಂದಿಗೆ ಸ್ಫೋಟಕ ಶತಕ – ಆರ್‌ಸಿಬಿಗೆ ವಿಲ್‌ ಪವರ್‌; ಟೈಟಾನ್ಸ್‌ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ

    ಕೊನೇ ಓವರ್‌ನಲ್ಲಿ ಕೈತಪ್ಪಿದ ಶತಕ:
    ಆರಂಭಿಕನಾಗಿ ಕಣಕ್ಕಿಳಿದಿದ್ದ ರುತುರಾಜ್‌ ಗಾಯಕ್ವಾಡ್‌ 54 ಎಸೆತಗಳಲ್ಲಿ 98 ರನ್‌ ಗಳಿಸಿದ್ದರು. ಇಂದು ತಮ್ಮ 2ನೇ ಐಪಿಎಲ್‌ ಶತಕ ದಾಖಲಿಸುವ ಉತ್ಸಾಹದಲ್ಲಿದ್ದರು. ಆದ್ರೆ 20ನೇ ಓವರ್‌ನ 2ನೇ ಎಸೆತದಲ್ಲೇ ಸಿಕ್ಸರ್‌ ಸಿಡಿಸಲು ಯತ್ನಿಸಿ ಬೌಂಡರಿ ಲೈನ್‌ ಬಳಿಕ ಕ್ಯಾಚ್‌ಗೆ ತುತ್ತಾದರು.

    ಸಿಎಸ್‌ಕೆ ಪರ ರುತುರಾಜ್‌ ಗಾಯಕ್ವಾಡ್‌ 54 ಎಸೆತಗಳಲ್ಲಿ 98 ರನ್‌ (3 ಸಿಕ್ಸರ್‌, 10 ಬೌಂಡರಿ), ಡೇರಿಲ್‌ ಮಿಚೆಲ್‌ 52 ರನ್‌ (32 ಎಸೆತ, 7 ಬೌಂಡರಿ, 1 ಸಿಕ್ಸರ್‌), ಶಿವಂ ದುಬೆ 39 ರನ್‌ (20 ಎಸೆತ, 4 ಸಿಕ್ಸರ್‌, 1 ಬೌಂಡರಿ), ಅಜಿಂಕ್ಯಾ ರಹಾನೆ 9 ರನ್‌, ಎಂ.ಎಸ್‌ ಧೋನಿ 5 ರನ್‌ ಗಳಿಸಿದರು.

    ಸನ್‌ ರೈಸರ್ಸ್‌ ಹೈದರಾಬಾದ್‌ ಪರ ಭುವನೇಶ್ವರ್‌ ಕುಮಾರ್‌, ಟಿ ನಟರಾಜನ್‌ ಹಾಗೂ ಜಯದೇವ್‌ ಉನಾದ್ಕಟ್‌ ತಲಾ ಒಂದೊಂದು ವಿಕೆಟ್‌ ಕಿತ್ತರು.

  • ‌World Cup Semifinal: 48 ವರ್ಷಗಳ ವಿಶ್ವಕಪ್‌ ಇತಿಹಾಸದಲ್ಲಿ ಹೊಸ ಮೈಲುಗಲ್ಲು‌ ಸ್ಥಾಪಿಸಿದ ಶಮಿ.!

    ‌World Cup Semifinal: 48 ವರ್ಷಗಳ ವಿಶ್ವಕಪ್‌ ಇತಿಹಾಸದಲ್ಲಿ ಹೊಸ ಮೈಲುಗಲ್ಲು‌ ಸ್ಥಾಪಿಸಿದ ಶಮಿ.!

    ಮುಂಬೈ: ಏಕದಿನ ವಿಶ್ವಕಪ್‌ ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಮೊಹಮ್ಮದ್‌ ಶಮಿ (Mohammed Shami) 50 ವಿಕೆಟ್‌ ಪಡೆದ ಭಾರತದ ಮೊದಲ ಬೌಲರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಶಮಿ 32.2 ಓವರ್‌ನಲ್ಲಿ ಕೇನ್‌ ವಿಲಿಯಮ್ಸನ್‌ (Kane Williamson) ಅವರನ್ನು ಔಟ್‌ ಮಾಡುವ ಮೂಲಕ ಈ ಮಹತ್ವದ ಮೈಲುಗಲ್ಲು ಸ್ಥಾಪಿಸಿದರು.

    ಕೇವಲ 17 ಇನ್ನಿಂಗ್ಸ್‌ಗಳಲ್ಲೇ ಶಮಿ ಈ ಸಾಧನೆ ಮಾಡಿರುವುದು ವಿಶೇಷ. ಆಸ್ಟ್ರೇಲಿಯಾದ ಮೆಚೆಲ್‌ ಸ್ಟಾರ್ಕ್‌ 19 ಇನ್ನಿಂಗ್ಸ್‌ಗಲ್ಲಿ 50 ವಿಕೆಟ್‌ ಪಡೆದ ಸಾಧನೆ ಮಾಡಿದ್ದರು.

    ಅದಕ್ಕಿಂತಲೂ ಮುಖ್ಯವಾಗಿ 48 ವರ್ಷಗಳ ವಿಶ್ವಕಪ್ ಇತಿಹಾಸದಲ್ಲಿ (World Cup History) ಅತಿಹೆಚ್ಚು ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾದ ಮಿಚೆಲ್‌ ಸ್ಟಾರ್ಕ್‌ 3 ಬಾರಿ ಈ ಸಾಧನೆ ಮಾಡಿ 2ನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಶಮಿ 18 ರನ್‌ ಬಿಟ್ಟುಕೊಟ್ಟು 5 ವಿಕೆಟ್‌ ಪಡೆದಿದ್ದರು.

    ಇದಕ್ಕೂ ಮುನ್ನ ಧರ್ಮಶಾಲಾ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್‌ (New Zealand) ವಿರುದ್ಧದ ಪಂದ್ಯದಲ್ಲಿ 54 ರನ್‌ ಕೊಟ್ಟು 5 ವಿಕೆಟ್‌ ಕಿತ್ತಿದ್ದರು. ಇಂದು ಕಿವೀಸ್‌ ವಿರುದ್ಧ 5 ವಿಕೆಟ್‌ ಕಿತ್ತು ಮತ್ತೊಂದು ವಿಶೇಷ ಸಾಧನೆ ಮಾಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ರವೀಂದ್ರ ಜಡೇಜಾ 33 ರನ್‌ ಬಿಟ್ಟುಕೊಟ್ಟು, ಶಾಹೀನ್‌ ಶಾ ಅಫ್ರಿದಿ ಆಸ್ಟ್ರೇಲಿಯಾ ವಿರುದ್ಧ 54 ರನ್‌ ಬಿಟ್ಟುಕೊಟ್ಟು 5 ವಿಕೆಟ್‌ ಪಡೆದಿದ್ದು ಇದೇ ಟೂರ್ನಿಯಲ್ಲಿ ಎಂಬಿದನ್ನು ಮರೆಯುವಂತಿಲ್ಲ. ಇದನ್ನೂ ಓದಿ: ಸೆಮಿಸ್‌ನಲ್ಲೂ ಶಮಿ ಮಿಂಚು; ಕಿವೀಸ್‌ ವಿರುದ್ಧ 70 ರನ್‌ಗಳ ಭರ್ಜರಿ ಜಯ – 4ನೇ ಬಾರಿಗೆ ವಿಶ್ವಕಪ್‌ ಫೈನಲ್‌ಗೆ ಭಾರತ ಎಂಟ್ರಿ

    ಈ ಸಾಧನೆಯೊಂದಿಗೆ ಮೊಹಮ್ಮದ್‌ ಶಮಿ ವಿಶ್ವಕಪ್ ಪಂದ್ಯಾವಳಿಗಳಲ್ಲಿ 50 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಬೌಲರ್ಸ್‌ಗಳ ಎಲೈಟ್‌ ಪಟ್ಟಿ ಸೇರಿದ್ದು, ಟಾಪ್‌-10 ಪಟ್ಟಿಯಲ್ಲಿ 6ನೇ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಗ್ಲೇನ್‌ ಮೆಕ್‌ಗ್ರಾತ್‌ 71 ವಿಕೆಟ್, ಮುತ್ತಯ್ಯ ಮುರಳೀಧರನ್ 68 ವಿಕೆಟ್, ಮಿಚೆಲ್ ಸ್ಟಾರ್ಕ್ 59 ವಿಕೆಟ್, ಲಸಿತ್ ಮಾಲಿಂಗ 56 ವಿಕೆಟ್, ವಾಸಿಂ ಅಕ್ರಮ್ 55 ವಿಕೆಟ್ ಪಡೆದಿದು ಕ್ರಮವಾಗಿ ಮೊದಲ 5 ಸ್ಥಾನಗಳಲ್ಲಿದ್ದರೆ 54 ವಿಕೆಟ್‌ ಪಡೆದ ಶಮಿ ವಿಶ್ವದ ಟಾಪ್‌ ಬೌಲರ್‌ಗಳ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದ್ದಾರೆ. ಕೇವಲ 17 ಪಂದ್ಯ 17 ಇನ್ನಿಂಗ್ಸ್‌ಗಳಲ್ಲೇ ಶಮಿ ಈ ಸಾಧನೆ ಮಾಡಿರುವುದು ವಿಶೇಷ. ಇದನ್ನೂ ಓದಿ: ವಿಶ್ವದಾಖಲೆಯ ಶತಕ ಸಿಡಿಸಿದ ಕೊಹ್ಲಿಗೆ ಪಾಕ್‌ ಕ್ರಿಕೆಟಿಗನಿಂದ ʻಚಕ್ರವರ್ತಿʼ ಬಿರುದು – ಅಭಿನಂದನೆಗಳ ಮಹಾಪೂರ

  • ಸೆಮಿಸ್‌ನಲ್ಲೂ ಶಮಿ ಮಿಂಚು; ಕಿವೀಸ್‌ ವಿರುದ್ಧ 70 ರನ್‌ಗಳ ಭರ್ಜರಿ ಜಯ – 4ನೇ ಬಾರಿಗೆ ವಿಶ್ವಕಪ್‌ ಫೈನಲ್‌ಗೆ ಭಾರತ ಎಂಟ್ರಿ

    ಸೆಮಿಸ್‌ನಲ್ಲೂ ಶಮಿ ಮಿಂಚು; ಕಿವೀಸ್‌ ವಿರುದ್ಧ 70 ರನ್‌ಗಳ ಭರ್ಜರಿ ಜಯ – 4ನೇ ಬಾರಿಗೆ ವಿಶ್ವಕಪ್‌ ಫೈನಲ್‌ಗೆ ಭಾರತ ಎಂಟ್ರಿ

    ಮುಂಬೈ: ಮೊಹಮ್ಮದ್‌ ಶಮಿ (Mohammed Shami) ಬೆಂಕಿ ಬೌಲಿಂಗ್‌ ದಾಳಿ ಹಾಗೂ ಸಂಘಟಿತ ಬ್ಯಾಟಿಂಗ್‌ ನೆರವಿನಿಂದ ಟೀಂ ಇಂಡಿಯಾ (Team India) ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ 70 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ 4ನೇ ಬಾರಿಗೆ ಫೈನಲ್‌ (World Cup Final) ಪ್ರವೇಶಿಸಿದೆ. ಅಷ್ಟೇ ಅಲ್ಲದೇ 2019ರ ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ ಅನುಭವಿಸಿದ್ದ ಸೋಲಿಗೆ ಸೇಡು ತೀರಿಸಿಕೊಂಡಿದೆ.

    ವಿಶ್ವಕಪ್‌ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 4 ವಿಕೆಟ್‌ ನಷ್ಟಕ್ಕೆ 50 ಓವರ್‌ಗಳಲ್ಲಿ 397 ರನ್‌ ಕಲೆಹಾಕಿತ್ತು. 398 ರನ್‌ಗಳ ಗುರಿ ಬೆನ್ನತ್ತಿದ್ದ ಕಿವೀಸ್‌ 48.5 ಓವರ್‌ಗಳಲ್ಲೇ 327 ರನ್‌ ಗಳಿಗೆ ಸರ್ವಪತನ ಕಂಡಿತು. ಇದರಿಂದ ಟೀಂ ಇಂಡಿಯಾ ಸತತ 10ನೇ ಜಯದೊಂದಿಗೆ ಫೈನಲ್‌ ಪ್ರವೇಶಿಸಿತು. ಇದನ್ನೂ ಓದಿ: ವಿಶ್ವದಾಖಲೆಯ ಶತಕ ಸಿಡಿಸಿದ ಕೊಹ್ಲಿಗೆ ಪಾಕ್‌ ಕ್ರಿಕೆಟಿಗನಿಂದ ʻಚಕ್ರವರ್ತಿʼ ಬಿರುದು – ಅಭಿನಂದನೆಗಳ ಮಹಾಪೂರ

    ಕಿವೀಸ್‌ ಗೆಲುವಿಗೆ ಕೊನೆಯ 10 ಓವರ್‌ಗಳಲ್ಲಿ 132 ರನ್‌ಗಳ ಅಗತ್ಯವಿತ್ತು. ಈ ವೇಳೆ ಬೌಲಿಂಗ್‌ಗೆ ಬಂದ ಮೊಹಮ್ಮದ್‌ ಸಿರಾಜ್‌ 41ನೇ ಓವರ್‌ನಲ್ಲಿ 20 ರನ್‌ ಬಿಟ್ಟುಕೊಟ್ಟರು. ಆದ್ರೆ 42ನೇ ಓವರ್‌ನಲ್ಲಿ ಕುಲ್ದೀಪ್‌ ಯಾದವ್‌ ಕೇವಲ 2 ರನ್‌ ನೀಡಿ ನಿಯಂತ್ರಣಕ್ಕೆ ತಂದರು. 43ನೇ ಓವರ್‌ನಲ್ಲಿ 7 ರನ್‌ ಬಿಟ್ಟುಕೊಟ್ಟರೂ ಗ್ಲೇನ್‌ ಫಿಲಿಪ್ಸ್‌ ಅವರ ಪ್ರಮುಖ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದರು. 44ನೇ ಓವರ್‌ನಲ್ಲಿ ತನ್ನ ಕೊನೆಯ ಓವರ್‌ ಎಸೆದ ಕುಲ್ದೀಪ್‌ ಒಂದು ವಿಕೆಟ್‌ ಕಬಳಿಸುವ ಜೊತೆಗೆ 4 ರನ್‌ ಬಿಟ್ಟುಕೊಟ್ಟರು. 45ನೇ ಓವರ್‌ನಲ್ಲಿ ಮತ್ತೆ ಬುಮ್ರಾ 7 ರನ್‌ ಬಿಟ್ಟುಕೊಟ್ಟರು. ಇನ್ನೂ 5 ಓವರ್‌ಗಳಲ್ಲಿ 92 ರನ್‌ ಬೇಕಿತ್ತು. ಅಷ್ಟರಲ್ಲೇ ಸಿಕ್ಸರ್‌ ಸಿಡಿಸುವ ಪ್ರಯತ್ನಕ್ಕೆ ಮುಂದಾದ ಮಿಚೆಲ್‌ ಶಮಿ ಬೌಲಿಂಗ್‌ನಲ್ಲಿ ಬೌಂಡರಿ ಲೈನ್‌ನಲ್ಲಿ ಕ್ಯಾಚ್‌ ನೀಡಿ ಔಟಾದರು. ಇದರೊಂದಿಗೆ ಕಿವೀಸ್‌ ಗೆಲುವಿನ ಕನಸು ಸಹ ಭಗ್ನಗೊಂಡಿತು. ಇನ್ನುಳಿದಂತೆ ಕೊನೆಯ ಕೊನೆಯ 4 ಓವರ್‌ಗಳಲ್ಲಿ ಕ್ರಮವಾಗಿ 2, 5,7,7 ಸೇರ್ಪಡೆಯಾಯಿತು.

    398 ರನ್‌ಗಳ ಗುರಿ ಬೆನ್ನತ್ತಿದ್ದ ಕಿವೀಸ್‌ ಪಡೆ ಸ್ಫೋಟಕ ಇನ್ನಿಂಗ್ಸ್‌ಗೆ ಮುಂದಾಗಿತ್ತು. ಆದ್ರೆ 30 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡ ಕಿವೀಸ್‌, ಮುಂದಿನ 9 ರನ್‌ಗಳ ಅಂತರದಲ್ಲೇ ಮತ್ತೊಂದು ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಬಳಿಕ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಕೇನ್‌ ವಿಲಿಯಮ್ಸನ್‌ ಮತ್ತು ಡೇರಿಲ್‌ ಮಿಚೆಲ್‌ ಜೋಡಿ ಭರ್ಜರಿ ಜೊತೆಯಾಟ ನೀಡಿತ್ತು. 3ನೇ ವಿಕೆಟ್‌ಗೆ ಈ ಜೋಡಿ 149 ಎಸೆತಗಳಲ್ಲಿ 181 ರನ್‌ಗಳ ಜೊತೆಯಾಟ ನೀಡಿತ್ತು. ಇದರಿಂದ ಕೊನೆಯ 18.2 ಓವರ್‌ಗಳಲ್ಲಿ 184 ರನ್‌ಗಳ ಅಗತ್ಯವಿತ್ತು. ಅಷ್ಟರಲ್ಲಿ ತಮ್ಮ ಮಾರಕ ದಾಳಿ ಪ್ರದರ್ಶಿಸಿದ ಮೊಹಮ್ಮದ್‌ ಶಮಿ ವಿಲಿಯಮ್ಸನ್‌ ಆಟಕ್ಕೆ ಬ್ರೇಕ್‌ ಹಾಕಿದರು. ವಿಲಿಮ್ಸನ್‌ ಔಟಾದ ಬೆನ್ನಲ್ಲೇ ಟಾಮ್‌ ಲಾಥಮ್‌ 2 ಎಸೆತಗಳಲ್ಲೇ ಡಗೌಟ್‌ ಆದರು.

    ಕೊನೆಯವರೆಗೂ ಏಕಾಂಗಿಯಾಗಿ ಹೋರಾಡಿದ ಡೇರಿಲ್‌ ಮಿಚೆಲ್‌ 119 ಎಸೆತಗಳಲ್ಲಿ 134 ರನ್‌ (7 ಸಿಕ್ಸರ್‌, 9 ಬೌಂಡರಿ) ಚಚ್ಚಿ ಔಟಾದರು. ಡೆವೋನ್‌ ಕಾನ್ವೆ 13 ರನ್‌, ರಚಿನ್‌ ರವೀಂದ್ರ 13 ರನ್‌, ಕೇನ್‌ ವಿಲಿಯಮ್ಸನ್‌ 69 ರನ್‌ (73 ಎಸೆತ, 8 ಬೌಂಡರಿ, 1 ಸಿಕ್ಸರ್)‌, ಗ್ಲೇನ್‌ ಫಿಲಿಪ್ಸ್‌ 33 ಎಸೆತಗಳಲ್ಲಿ 41 ರನ್‌ (2 ಸಿಕ್ಸರ್‌, 4 ಬೌಂಡರಿ), ಮಾರ್ಕ್‌ ಚಾಪ್ಮನ್‌ 2 ರನ್‌, ಮಿಚೆಲ್‌ ಸ್ಯಾಂಟ್ನರ್‌ 8 ರನ್‌, ಟಿಮ್‌ ಸೌಥಿ 9 ರನ್‌, ಟ್ರೆಂಟ್‌ ಬೌಲ್ಟ್‌ 2 ರನ್‌, ಲಾಕಿ ಫರ್ಗೂಸನ್‌ 6 ರನ್‌ ಗಳಿಸಿದರು. ಇದನ್ನೂ ಓದಿ: ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನಕ್ಕೆ ತಲೆದಂಡ – ಪಾಕ್‌ ತಂಡದ ನಾಯಕತ್ವಕ್ಕೆ ಬಾಬರ್‌ ಆಜಂ ಗುಡ್‌ಬೈ

    ಶಮಿ ಶೈನ್:‌ ಟೀಂ ಇಂಡಿಯಾ ಪರ ಸಾಮರ್ಥ್ಯ ಪ್ರದರ್ಶಿಸಿದ ಮೊಹಮ್ಮದ್‌ ಶಮಿ 9.5 ಓವರ್‌ಗಳಲ್ಲಿ 57 ರನ್‌ ಬಿಟ್ಟು ಕೊಟ್ಟು 7 ವಿಕೆಟ್‌ ಪಡೆದರು. ಈ ಮೂಲಕ 48 ವರ್ಷಗಳ ವಿಶ್ವಕಪ್‌ ಇತಿಹಾಸದಲ್ಲೇ ಕಡಿಮೆ ಇನ್ನಿಂಗ್ಸ್‌ಗಳಲ್ಲಿ ಅತಿಹೆಚ್ಚು ವಿಕೆಟ್‌ ಪಡೆದ ಮೊದಲ ಬೌಲರ್‌ ಎಂಬ ಖ್ಯಾತಿಗೂ ಪಾತ್ರರಾದರು. ಇನ್ನುಳಿದಂತೆ ಬುಮ್ರಾ, ಸಿರಾಜ್‌, ಕುಲ್ದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: ಅಂದು ನಕ್ಕಿದ್ದೆ, ನೀವಿಂದು ನನ್ನ ಹೃದಯ ಮುಟ್ಟಿದ್ದೀರಿ – ತನ್ನ ದಾಖಲೆ ಮುರಿದ ಕೊಹ್ಲಿ ಅಭಿನಂದಿಸಿದ ಕ್ರಿಕೆಟ್‌ ದೇವರು

    ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ, ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡಿತು. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್‌ ಶರ್ಮಾ ಮತ್ತು ಶುಭಮನ್‌ ಗಿಲ್‌ ಜೋಡಿ ಮೊದಲ ವಿಕೆಟ್‌ಗೆ 50 ಎಸೆತಗಳಲ್ಲಿ 71 ರನ್‌ಗಳ ಜೊತೆಯಾಟ ನೀಡಿತು. ರೋಹಿತ್‌ ಶರ್ಮಾ ಔಟಾಗುತ್ತಿದ್ದಂತೆ 2ನೇ ವಿಕೆಟ್‌ಗೆ 93 ರನ್‌ಗಳ ಜೊತೆಯಾಟ ನೀಡಿದ್ದರು. ಆದ್ರೆ ಕಾಲುನೋವಿನಿಂದಾಗಿ ಶುಭಮನ್‌ ಗಿನ್‌ ಅರ್ಧಕ್ಕೆ ಕ್ರೀಸ್‌ನಿಂದ ಹೊರನಡೆದರು. ಈ ನಡುವೆ ಕಿವೀಸ್‌ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ದಂಡಿಸಿದ ವಿರಾಟ್‌ ಕೊಹ್ಲಿ ಮತ್ತು ಶ್ರೇಯಸ್‌ ಅಯ್ಯರ್‌ ಜೋಡಿ 128 ಎಸೆತಗಳಲ್ಲಿ 163 ರನ್‌ ಕಲೆಹಾಕಿತು. ಕೊಹ್ಲಿ ಶತಕ ಸಿಡಿಸಿ ಔಟಾದ ಬಳಿಕ ಕ್ರೀಸ್‌ಗಿಳಿಯುತ್ತಿದ್ದಂತೆ ಸ್ಫೋಟಕ ಬ್ಯಾಟಿಂಗ್‌ಗೆ ಮುಂದಾದ ಕೆ.ಎಲ್‌ ರಾಹುಲ್‌, ಶ್ರೇಯಸ್‌ ಅಯ್ಯರ್‌ ಜೊತೆಗೂಡಿ 29 ಎಸೆತಗಳಲ್ಲೇ 54 ರನ್‌ಗಳ ಜೊತೆಯಾಟ ನೀಡಿದರು. ಇದರಿಂದಾಗಿ ತಂಡದ ಮೊತ್ತ 400 ರನ್‌ಗಳ ಗಡಿ ಸಮೀಪಿಸುವಲ್ಲಿ ಯಶಸ್ವಿಯಾಯಿತು.

    ರೋಹಿತ್‌ ಶರ್ಮಾ 47 ರನ್‌ (40 ಎಸೆತ, 4 ಸಿಕ್ಸರ್‌, 4 ಬೌಂಡರಿ), ಶುಭಮನ್‌ ಗಿಲ್‌ 80 ರನ್‌ (66 ಎಸೆತ, 3 ಸಿಕ್ಸರ್‌, 8 ಬೌಂಡರಿ), ವಿರಾಟ್‌ ಕೊಹ್ಲಿ 117 ರನ್‌ (113 ಎಸೆತ, 9 ಬೌಂಡರಿ, 2 ಸಿಕ್ಸರ್)‌, ಶ್ರೇಯಸ್‌ ಅಯ್ಯರ್‌ 105 ರನ್‌ (70 ಎಸೆತ, 8 ಸಿಕ್ಸರ್‌, 4 ಬೌಂಡರಿ), ಕೆ.ಎಲ್‌ ರಾಹುಲ್‌ 39 ರನ್‌ (20 ಎಸೆತ, 5 ಬೌಂಡರಿ, 2 ಸಿಕ್ಸರ್)‌, ಸೂರ್ಯಕುಮಾರ್‌ ಯಾದವ್‌ 1 ರನ್‌ ಗಳಿಸಿದರು.

    ಕಿವೀಸ್‌ ಪರ ಟಿಮ್‌ ಸೌಥಿ 10 ಓವರ್‌ಗಳಲ್ಲಿ 100 ರನ್‌ ಚಚ್ಚಿಸಿಕೊಂಡು 3 ವಿಕೆಟ್‌ ಕಿತ್ತರೆ, ಟ್ರೆಂಟ್‌ ಬೌಲ್ಟ್‌ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

  • World Cup 2023: ನಾನು 100% ಕಿವೀಸ್‌ ಎಂದ ಬೆಂಗಳೂರು ಯುವಕ ರಚಿನ್‌ ರವೀಂದ್ರ

    World Cup 2023: ನಾನು 100% ಕಿವೀಸ್‌ ಎಂದ ಬೆಂಗಳೂರು ಯುವಕ ರಚಿನ್‌ ರವೀಂದ್ರ

    ಧರ್ಮಶಾಲಾ: ಆಸ್ಟ್ರೇಲಿಯಾ (Australia) ವಿರುದ್ಧ ಇಲ್ಲಿನ HPCA ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆಸೀಸ್‌ ಬೌಲರ್‌ಗಳನ್ನ ಬೆಂಡೆತ್ತಿದ್ದ ಕಿವೀಸ್ ಆಟಗಾರ ರಚಿನ್ ರವೀಂದ್ರ (Rachin Ravindra) 77 ಎಸೆತಗಳಲ್ಲೇ 5 ಸಿಕ್ಸರ್, 7 ಬೌಂಡರಿಗಳ ನೆರವಿನೊಂದಿಗೆ ಶತಕ ಸಿಡಿಸಿ ಮಿಂಚಿದರು. ಒಟ್ಟು 89 ಎಸೆತಗಳನ್ನು ಎದುರಿಸಿದ ರವೀಂದ್ರ 116 ರನ್ (9 ಬೌಂಡರಿ, 5 ಸಿಕ್ಸರ್) ಬಾರಿಸುವ ಮೂಲಕ ಸ್ಫೋಟಕ ಪ್ರದರ್ಶನ ನೀಡಿ ಗಮನ ಸೆಳೆದರು.

    ಈ ಶತಕದೊಂದಿಗೆ 23ನೇ ವಯಸ್ಸಿಗೆ ವಿಶ್ವಕಪ್‌ (World Cup) ಇತಿಹಾಸದಲ್ಲಿ 2 ಶತಕ ಸಿಡಿಸುವ ಮೂಲಕ ಭಾರತದ ಲೆಜೆಂಡ್ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ವಿಶೇಷ ದಾಖಲೆಯನ್ನೂ ಸರಿಗಟ್ಟಿದರು. ಪಂದ್ಯ ಮುಗಿದ ಬಳಿಕ ಪೋಸ್ಟ್‌ ಪ್ರೆಸೆಂಟೇಷನ್‌ನಲ್ಲಿ, ಭಾರತೀಯ ಮೂಲದವನಾಗಿ ಭಾರತದಲ್ಲಿ ಪ್ರದರ್ಶನ ನೀಡುತ್ತಿರುವ ಒತ್ತಡದ ಬಗ್ಗೆ ಕೇಳಲಾಯಿತು. ಇದನ್ನೂ ಓದಿ: 23ನೇ ವಯಸ್ಸಿಗೆ ಸಚಿನ್‌ ದಾಖಲೆ ಸರಿಗಟ್ಟಿದ ಬೆಂಗಳೂರು ಯುವಕ ರಚಿನ್‌

    ಇದಕ್ಕೆ ಪ್ರತಿಕ್ರಿಯಿಸಿದ ರಚಿನ್‌, ನನಗೆ ಈ ಬಗ್ಗೆ ಸಾಕಷ್ಟುಬಾರಿ ಕೇಳಿದ್ದಾರೆ. ನಾನು 100% ಕಿವೀಸ್‌ ಅಟಗಾರನೇ ಎಂದು ಭಾವಿಸುತ್ತೇನೆ. ಆದ್ರೆ ನನ್ನ ಭಾರತೀಯ ಪರಂಪರೆ ಬಗ್ಗೆ ತುಂಬಾ ಹೆಮ್ಮೆಪಡುತ್ತೇನೆ. ನನ್ನ ಹೆತ್ತವರು ಹುಟ್ಟಿಬೆಳೆದ ದೇಶ ಇದು, ನನ್ನ ಕುಟುಂಬದ ಬಹಳಷ್ಟು ಮಂದಿ ಇಲ್ಲಿದ್ದಾರೆ. ಇಲ್ಲಿನ ಪರಿಸ್ಥಿತಿ ಬ್ಯಾಟಿಂಗ್‌ಗೆ ಉತ್ತಮವಾಗಿದೆ. ಮುಂದಿನ ದಿನಗಳಲ್ಲಿ ಭಾರತದ ಪ್ರವಾಸಕ್ಕೆ ಬರಲು ಇದೆಲ್ಲವೂ ನೆರವಾಗುತ್ತದೆ. ನನ್ನ ಆಟ ಪರ್ಫೆಕ್ಟ್‌ ಆಗಿ ಇರಬೇಕು ಎಂದು ನಾನು ಬಯಸುವುದಿಲ್ಲ, ಆದ್ರೆ ಉತ್ತಮ ಪ್ರದರ್ಶನ ನೀಡಬೇಕೆಂದು ಪ್ರಯತ್ನಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

    ನಂತರ ಧರ್ಮಶಾಲಾ ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಂದ ಸಿಕ್ಕ ಬೆಂಬಲದ ಬಗ್ಗೆ ಮಾತನಾಡಿದ ರಚಿನ್‌, ಖಂಡಿತವಾಗಿಯೂ ಪ್ರೇಕ್ಷಕರಿಂದ ಉತ್ತಮ ಬೆಂಬಲ ಸಿಕ್ಕಿದೆ. ಭಾರತದಲ್ಲಿ ಆಡಿದ ಪಂದ್ಯಗಳ ಪೈಕಿ ಹೆಚ್ಚಿನ ಜನ ಪ್ರೇಕ್ಷಕರನ್ನು ಒಳಗೊಂಡ ಪಂದ್ಯಗಳಲ್ಲಿ ಇದೂ ಒಂದಾಗಿದೆ. ಅಭಿಮಾನಿಗಳು ಸ್ಪಂದಿಸುತ್ತಿದ್ದ ರೀತಿ ತುಂಬಾ ಖುಷಿ ಕೊಟ್ಟಿದೆ. ಚಿಕ್ಕಮಕ್ಕಳಾಗಿದ್ದಾಗ ಸಾವಿರಾರು ಜನ ನಮ್ಮ ಹೆಸರು ಹೇಳಬೇಕೆಂದು ಬಯಸುತ್ತೇವೆ. ಆ ಕನಸು ಈಗ ನನಸಾಗಿದೆ. ಆ ಕ್ಷಣವನ್ನು ಕಣ್ತುಂಬಿಕೊಳ್ಳುವುದು ಆನಂದವಾಗಿತ್ತು, ಅದನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಧರ್ಮಶಾಲಾ ಅಂಗಳದಲ್ಲಿ ವಂದೇ ಮಾತರಂ ಝೇಂಕಾರ – ಅದ್ಭುತ ವೀಡಿಯೋ ನೀವೇ ನೋಡಿ

    ಕೊಹ್ಲಿ ಹಿಂದಿಕ್ಕಿದ ರವೀಂದ್ರ: ಪ್ರಸ್ತುತ ವಿಶ್ವಕಪ್ ಕ್ರಿಕೆಟ್‌ನಲ್ಲಿ 354 ರನ್ ಗಳಿಸಿದ್ದ ಕಿಂಗ್ ಕೊಹ್ಲಿ ಅತಿಹೆಚ್ಚು ರನ್ ಗಳಿಸಿದ 4ನೇ ಬ್ಯಾಟರ್ ಎನಿಸಿಕೊಂಡಿದ್ದರು. ಆದ್ರೆ ಆಸೀಸ್ ವಿರುದ್ಧ ಸ್ಫೋಟಕ ಶತಕ ಸಿಡಿಸುವ ಮೂಲಕ 6 ಪಂದ್ಯಗಳಲ್ಲಿ 2 ಶತಕ ಸೇರಿ 406 ರನ್ ಗಳಿಸಿರುವ ರಚಿನ್ ರವೀಂದ್ರ ಕೊಹ್ಲಿಯನ್ನು ಹಿಂದಿಕ್ಕಿ 3ನೇ ಸ್ಥಾನಕ್ಕೆ ಜಿಗಿದಿದ್ದಾರೆ. 431 ರನ್ ಗಳಿಸಿರುವ ಕ್ವಿಂಟನ್ ಡಿಕಾಕ್ ಮೊದಲ ಸ್ಥಾನದಲ್ಲಿ, 413 ರನ್ ಗಳಿಸಿರುವ ಡೇವಿಡ್ ವಾರ್ನರ್ 2ನೇ ಸ್ಥಾನ, 356 ರನ್ ಗಳಿಸಿರುವ ಏಡನ್ ಮಾರ್ಕ್ರಮ್ 4ನೇ ಸ್ಥಾನದಲ್ಲಿದ್ದಾರೆ. ಭಾನುವಾರ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲೂ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದು, 6 ಪಂದ್ಯಗಳಿಂದ 354 ರನ್‌ ಗಳಿಸಿ 5ನೇ ಸ್ಥಾನದಲ್ಲೇ ಮುಂದುವರಿದಿದ್ದಾರೆ. ಇದನ್ನೂ ಓದಿ: World Cup 2023: ಸಿಕ್ಸರ್‌, ಬೌಂಡರಿಗಳ ಸುರಿಮಳೆ – ಭಾರತದ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಆಸೀಸ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 23ನೇ ವಯಸ್ಸಿಗೆ ಸಚಿನ್‌ ದಾಖಲೆ ಸರಿಗಟ್ಟಿದ ಬೆಂಗಳೂರು ಯುವಕ ರಚಿನ್‌

    23ನೇ ವಯಸ್ಸಿಗೆ ಸಚಿನ್‌ ದಾಖಲೆ ಸರಿಗಟ್ಟಿದ ಬೆಂಗಳೂರು ಯುವಕ ರಚಿನ್‌

    – ಕಿಂಗ್‌ ಕೊಹ್ಲಿಯನ್ನೇ ಹಿಂದಿಕ್ಕಿದ ರಚಿನ್‌ ರವೀಂದ್ರ

    ಧರ್ಮಶಾಲಾ: ಸದ್ಯ ಟೀಂ ಇಂಡಿಯಾ ಸ್ಟಾರ್‌ ಪ್ಲೇಯರ್‌ ವಿರಾಟ್‌ ಕೊಹ್ಲಿ (Virat Kohli), ಕ್ರಿಕೆಟ್‌ ದಂತಕಥೆ ಸಚಿನ್‌ ತೆಂಡೂಲ್ಕರ್‌ (Sachin Tendulkar) ಅವರ ಶತಕ ದಾಖಲೆಯನ್ನು ಸರಿಗಟ್ಟುತ್ತಾರೆ ಎಂಬುದು ಚರ್ಚೆಯಲ್ಲಿರುವ ವಿಷಯ. ಈ ನಡುವೆ ಕಿವೀಸ್‌ ತಂಡದಲ್ಲಿ ಆಡುತ್ತಿರುವ ಬೆಂಗಳೂರು ಮೂಲದ ಯುವಕ ತಾನು ಪ್ರವೇಶಿಸಿದ ಚೊಚ್ಚಲ ವಿಶ್ವಕಪ್‌ ಆವೃತ್ತಿಯಲ್ಲೇ ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆಯನ್ನ ಸರಿಗಟ್ಟಿದ್ದಾರೆ.

    ಶನಿವಾರ (ಅ.28) ಧರ್ಮಶಾಲಾದ HPCA ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾದ ತಂಡವು 49.2 ಓವರ್‌ಗಳಿಗೆ 388 ರನ್‌ಗಳಿಗೆ ಆಲೌಟ್‌ ಆಯಿತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ನ್ಯೂಜಿಲೆಂಡ್‌ (New Zealand) 50 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 383 ರನ್‌ ಗಳಿಸಿ ವಿರೋಚಿತ ಸೋಲಿಗೆ ತುತ್ತಾಯಿತು. ಇದನ್ನೂ ಓದಿ: World Cup 2023: ಸಿಕ್ಸರ್‌, ಬೌಂಡರಿಗಳ ಸುರಿಮಳೆ – ಭಾರತದ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಆಸೀಸ್‌

    ಈ ಪಂದ್ಯದಲ್ಲಿ ಆಸೀಸ್‌ ಬೌಲರ್‌ಗಳನ್ನ ಬೆಂಡೆತ್ತಿದ್ದ ಕಿವೀಸ್‌ ಆಟಗಾರ ರಚಿನ್‌ ರವೀಂದ್ರ 77 ಎಸೆತಗಳಲ್ಲೇ 5 ಸಿಕ್ಸರ್‌, 7 ಬೌಂಡರಿಗಳ ನೆರವಿನೊಂದಿಗೆ ಶತಕ ಸಿಡಿಸಿ ಮಿಂಚಿದರು. ಒಟ್ಟು 89 ಎಸೆತಗಳನ್ನು ಎದುರಿಸಿದ ರವೀಂದ್ರ (Rachin Ravindra) 116 ರನ್‌ (9 ಬೌಂಡರಿ, 5 ಸಿಕ್ಸರ್‌) ಬಾರಿಸುವ ಮೂಲಕ ಸ್ಪೋಟಕ ಪ್ರದರ್ಶನ ನೀಡಿ ಗಮನ ಸೆಳೆದರು. ಈ ಶತಕದೊಂದಿಗೆ ಭಾರತದ ಲೆಜೆಂಡ್ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ವಿಶೇಷ ದಾಖಲೆಯೊಂದನ್ನೂ ಸರಿಗಟ್ಟಿದರು.

    24 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಏಕದಿನ ವಿಶ್ವಕಪ್‌ ಇತಿಹಾಸದಲ್ಲಿ 2 ಶತಕಗಳನ್ನು ಗಳಿಸಿದವರಲ್ಲಿ ಸಚಿನ್‌ ತೆಂಡೂಲ್ಕರ್‌ ಮೊದಲಿಗರಾಗಿದ್ದರು. ಸಚಿನ್‌ 23 ವರ್ಷದವರಾಗಿದ್ದಾಗ 1996ರ ವಿಶ್ವಕಪ್‌ನಲ್ಲಿ (World Cup) 2 ಶತಕ ಸಿಡಿಸಿದ್ದರು. ಇದೀಗ 23 ವರ್ಷ ವಯಸ್ಸಿನ ರಚಿನ್‌ ರವೀಂದ್ರ 2023ರ ವಿಶ್ವಕಪ್‌ ಟೂರ್ನಿಯಲ್ಲಿ 2 ಶತಕ ಸಿಡಿಸಿ ಸಚಿನ್‌ ದಾಖಲೆಯನ್ನ ಸರಿಗಟ್ಟಿದ್ದಾರೆ. ಇದನ್ನೂ ಓದಿ: World Cup 2023: ರೋಚಕ ಪಂದ್ಯದಲ್ಲಿ ಆಸೀಸ್‌ಗೆ 5 ರನ್‌ಗಳ ಜಯ – ಹೋರಾಡಿ ಸೋತ ಕಿವೀಸ್‌  

    ರಚಿನ್‌ ರವೀಂದ್ರ ಅವರು ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ ಜನಿಸಿದ್ದರೂ ಅವರ ಅಪ್ಪ-ಅಮ್ಮ ಮೂಲತಃ ಬೆಂಗಳೂರಿನವರು. ತಂದೆ ರವಿ ಕೃಷ್ಣಮೂರ್ತಿ ಹಾಗೂ ತಾಯಿ ದೀಪಾ ಕೃಷ್ಣಮೂರ್ತಿ ಅವರು ಸಾಫ್ಟ್‌ವೇರ್‌ ಎಂಜಿನಿಯರ್‌ಗಳಾಗಿದ್ದು, ಉದ್ಯೋಗ ಅರಸಿ 1990ರ ದಶಕದಲ್ಲಿ ಬೆಂಗಳೂರಿನಿಂದ ನ್ಯೂಜಿಲೆಂಡ್‌ಗೆ ತೆರಳಿದ್ದರು. ರಚಿನ್‌ ರವೀಂದ್ರ ಅವರ ತಂದೆ, ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದರೂ ಅಪ್ಪಟ ಕ್ರಿಕೆಟ್‌ ಅಭಿಮಾನಿ. ಅದರಲ್ಲೂ ರವಿ ಕೃಷ್ಣಮೂರ್ತಿ ಅವರು ಭಾರತೀಯ ಕ್ರಿಕೆಟ್‌ ದಿಗ್ಗಜರಾದ ಸಚಿನ್‌ ತೆಂಡೂಲ್ಕರ್‌ ಹಾಗೂ ರಾಹುಲ್‌ ದ್ರಾವಿಡ್‌ ಅವರ ಪಕ್ಕಾ ಫ್ಯಾನ್‌. ಈ ಕಾರಣದಿಂದಾಗಿ ರಾಹುಲ್‌ ದ್ರಾವಿಡ್‌ (Rahul Dravid) ಹೆಸರಿನಿಂದ ʻರʼ ಮತ್ತು ಸಚಿನ್‌ ತೆಂಡೂಲ್ಕರ್‌ (Sachin Tendulkar) ಹೆಸರಿನಿಂದ ʻಚಿನ್‌ʼ ಅಕ್ಷರಗಳನ್ನು ತೆಗೆದುಕೊಂಡು ತಮ್ಮ ಪುತ್ರನಿಗೆ ರಚಿನ್‌ ಎಂದು ಹೆಸರಿಟ್ಟಿದ್ದರು ಎಂಬುದು ವಿಶೇಷ. ಇದನ್ನೂ ಓದಿ: IND vs ENG: 2019 ರ ವಿಶ್ವಕಪ್ ಪಂದ್ಯದಲ್ಲಿ ಭಾರತ ಕೊನೆ ಬಾರಿಗೆ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿದಾಗ ಏನಾಗಿತ್ತು?

    ಕೊಹ್ಲಿ ಹಿಂದಿಕ್ಕಿದ ರವೀಂದ್ರ: ಪ್ರಸ್ತುತ ವಿಶ್ವಕಪ್‌ ಕ್ರಿಕೆಟ್‌ನಲ್ಲಿ 354 ರನ್‌ ಗಳಿಸಿದ್ದ ಕಿಂಗ್‌ ಕೊಹ್ಲಿ ಅತಿಹೆಚ್ಚು ರನ್‌ ಗಳಿಸಿದ 4ನೇ ಬ್ಯಾಟರ್‌ ಎನಿಸಿಕೊಂಡಿದ್ದರು. ಆದ್ರೆ ಆಸೀಸ್‌ ವಿರುದ್ಧ ಸ್ಫೋಟಕ ಶತಕ ಸಿಡಿಸುವ ಮೂಲಕ 6 ಪಂದ್ಯಗಳಲ್ಲಿ 2 ಶತಕ ಸೇರಿ 406 ರನ್‌ ಗಳಿಸಿರುವ ರಚಿನ್‌ ರವೀಂದ್ರ ಕೊಹ್ಲಿಯನ್ನು ಹಿಂದಿಕ್ಕಿ 3ನೇ ಸ್ಥಾನಕ್ಕೆ ಜಿಗಿದಿದ್ದಾರೆ. 431 ರನ್‌ ಗಳಿಸಿರುವ ಕ್ವಿಂಟನ್‌ ಡಿಕಾಕ್‌ ಮೊದಲ ಸ್ಥಾನದಲ್ಲಿ, 413 ರನ್‌ ಗಳಿಸಿರುವ ಡೇವಿಡ್‌ ವಾರ್ನರ್‌ 2ನೇ ಸ್ಥಾನದಲ್ಲಿ ಹಾಗೂ 356 ರನ್‌ ಗಳಿಸಿರುವ ಏಡನ್‌ ಮಾರ್ಕ್ರಮ್‌ 4ನೇ ಸ್ಥಾನದಲ್ಲಿದ್ದರೆ, 354 ರನ್‌ ಗಳಿಸಿರುವ ಕೊಹ್ಲಿ 5ನೇ ಸ್ಥಾನಕ್ಕೆ ಕುಸಿದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]