Tag: Dasara 2019

  • ಸಿದ್ದರಾಮಯ್ಯರನ್ನು ಕಾಂಗ್ರೆಸ್ ಬಿಟ್ಟರೂ ನಾವು ಕೈ ಬಿಡುವುದಿಲ್ಲ: ಸಿಟಿ ರವಿ

    ಸಿದ್ದರಾಮಯ್ಯರನ್ನು ಕಾಂಗ್ರೆಸ್ ಬಿಟ್ಟರೂ ನಾವು ಕೈ ಬಿಡುವುದಿಲ್ಲ: ಸಿಟಿ ರವಿ

    ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯರನ್ನ ಕಾಂಗ್ರೆಸ್ ಕೈಬಿಟ್ಟರೂ ನಾವು ಕೈ ಬಿಡಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರು ಕಾಲೆಳೆದಿದ್ದಾರೆ.

    ಮೈಸೂರಿನ ಅರಮನೆಯಲ್ಲಿ ಮಾಧ್ಯಮಗಳ ಬಿಜೆಪಿ ನಾಯಕರು ಮಾತನಾಡುತ್ತಿದ್ದರು. ಈ ವೇಳೆ ಸಿದ್ದರಾಮಯ್ಯರನ್ನ ದಸರಾ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದೀರಾ ಎಂದು ಪ್ರಶ್ನಿಸಿದ್ದಕ್ಕೆ ವಿ. ಸೋಮಣ್ಣ, ಸಿದ್ದರಾಮಯ್ಯರನ್ನು ಸೇರಿಸಿಕೊಂಡೆ ದಸರಾ ಮಾಡುತ್ತೇವೆ. ಸಿದ್ದರಾಮಯ್ಯ ದಿನನಿತ್ಯ ನನ್ನ ಸಂಪರ್ಕದಲ್ಲಿ ಇದ್ದಾರೆ. ಆಹ್ವಾನ ಪತ್ರಿಕೆ ಇನ್ನು ಮುದ್ರಣಕ್ಕೆ ಹೋಗಿಲ್ಲ. ಅವರನ್ನು ಆಹ್ವಾನಿಸಿಯೇ ದಸರಾ ಮಾಡುತ್ತೇವೆ. ನೀವು ಬನ್ನಿ ನಿಮ್ಮ ಜೊತೆ ಸಿದ್ದರಾಮಯ್ಯರ ಮನೆಗೆ ಹೋಗುತ್ತೇನೆ ಎಂದು ಹೇಳಿದರು. ಅವರ ಮಾತಿನ ಮಧ್ಯೆ ಮಾತನಾಡಿ ಸಿದ್ದರಾಮಯ್ಯ ಅವರು ಮೈಸೂರಿನವರು ಅವರೇ ಅತಿಥಿ. ಕಾಂಗ್ರೆಸ್ ಅವರನ್ನು ಕೈ ಬಿಟ್ಟರು ನಾವು ಬಿಡಲ್ಲ ಎಂದು ಸಿಟಿ ರವಿ ಅವರು ಟಾಂಗ್ ಕೊಟ್ಟರು.

    ಈ ಮುಂಚೆ ಮಾಧ್ಯಮಗಳ ಜೊತೆ ಸಿಟಿ ರವಿ ಅವರು ಮಾತನಾಡಿ, ಭ್ರಷ್ಟಾಚಾರ ನಡೆಸದಿದ್ದರೆ ಯಾಕೆ ಹೆದರಬೇಕು. ಯಾರು ಭ್ರಷ್ಟಾಚಾರ ಮಾಡಿರುತ್ತಾರೋ ಅವರಿಗೆ ಭಯ ಇರುತ್ತೆ. ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡೋದೆ ತಪ್ಪಾ? ತನಿಖೆ ನಡೆಸುವುದೇ ಇಲಿ ಹಿಡಿಯುವುದು ಎಂದು ಸಿದ್ದರಾಮಯ್ಯ ಹೇಳಿದರೆ ಅದಕ್ಕೆ ಏನ್ ಹೇಳಬೇಕು ಹೇಳಿ ಎಂದು ಪ್ರಶ್ನಿಸಿ ಮಾಜಿ ಸಿಎಂಗೆ ತಿರುಗೇಟು ಕೊಟ್ಟಿರು.

    ನಾನು ಒಕ್ಕಲಿಗ ಸಮುದಾಯದವನು. ನನ್ನ ಸಮುದಾಯದ ನಾಯಕರಿಗೆ ಹೇಳುತ್ತೇನೆ. ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ಭಾವನಾತ್ಮಕವಾಗಿ ಯೋಚನೆ ಮಾಡಬೇಡಿ ಪ್ರಾಕ್ಟಿಕಲ್ ಆಗಿ ಯೋಚನೆ ಮಾಡಿ. ವಾಸ್ತವಿಕವಾಗಿ ಯೋಚನೆ ಮಾಡಿ. ಬಂಧನ ಸಮುದಾಯದ ವಿರುದ್ಧ ಎಂದು ಯಾಕೆ ಹೇಳುತ್ತೀರಾ? ನನ್ನ ಮನೆಯಲ್ಲಿ 10 ಕೋಟಿ ದುಡ್ಡು ಸಿಕ್ಕರೆ ನಾನು ಪ್ರಾಮಾಣಿಕ ಎಂದು ಹೇಗೆ ಹೇಳಿಕೊಳ್ಳಲು ಆಗುತ್ತದೆ? ನನ್ನ ಆಸ್ತಿ 18 ಎಕರೆ ಇದೆ. ಅದು 180 ಎಕರೆ ಆದರೆ ಉತ್ತರ ಕೊಡಬೇಕು. ಅದು 1880 ಎಕರೆ ಆದರೂ ಜನರಿಗೆ ಉತ್ತರ ಕೊಡಬಾರದು ಅಂದರೆ ಹೇಗೆ ಎಂದು ಕಿಡಿಕಾರಿದರು.

    ಕೆಆರ್‍ಎಸ್ ನಲ್ಲಿ ಡಿಸ್ನಿಲ್ಯಾಂಡ್ ನಿರ್ಮಾಣದ ಬಗ್ಗೆ ಪ್ರತಿಕ್ರಿಯಿಸಿ, ಈ ಯೋಜನೆಗೆ ನಮ್ಮ ವಿರೋಧ ಇಲ್ಲ. ಪ್ರವಾಸೋದ್ಯಮಕ್ಕೆ ಪೂರಕವಾಗುವ ಯೋಜನೆಗೆ ನಾವು ವಿರೋಧ ಮಾಡಲ್ಲ. ಡಿಸ್ನಿಲ್ಯಾಂಡ್ ಯೋಜನೆ ಬ್ಲೂ ಪ್ರಿಂಟ್‍ನಲ್ಲೇ ಇದೆ. ಇದು ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಯೋಜನೆ ಅಲ್ಲ. ಅದರೆ, ಯೋಜನೆ ಪ್ರವಾಸೋದ್ಯಮಕ್ಕೆ ಪೂರಕವಾಗಿದೆ. ನನ್ನ ಖಾತೆಯ ಬಜೆಟ್ ಎಷ್ಟಿದೆ ಎಂದು ನಾನು ಬಹಿರಂಗವಾಗಿ ಹೇಳುವುದಿಲ್ಲ ಎಂದು ತಿಳಿಸಿದರು.

    ಇಲಾಖೆ ಮಂತ್ರಿ ಆಕ್ಟೀವ್ ಆಗಿದ್ದರೆ ಇಲಾಖೆಯೂ ಆಕ್ಟೀವ್ ಆಗಿರುತ್ತದೆ. ಮಂತ್ರಿ ಸೋಮಾರಿಯಾದರೆ ಇಲಾಖೆಯ ಅಧಿಕಾರಿಗಳು ಸೋಮಾರಿಗಳಾಗುತ್ತಾರೆ. ಹೀಗಾಗಿ ಪ್ರವಾಸೋದ್ಯಮ ಇಲಾಖೆಯನ್ನು ವರ್ಷ ಪೂರ್ತಿ ಆಕ್ಟೀವ್ ಆಗಿ ಇಡುತ್ತೇನೆ ಎಂದು ಸಿಟಿ ರವಿ ಹೇಳಿದರು.

  • ಕ್ಯಾಪ್ಟನ್ ಅರ್ಜುನನ ನೇತೃತ್ವದಲ್ಲಿ ಗಜಪಡೆಯಿಂದ ತಾಲೀಮು ಆರಂಭ

    ಕ್ಯಾಪ್ಟನ್ ಅರ್ಜುನನ ನೇತೃತ್ವದಲ್ಲಿ ಗಜಪಡೆಯಿಂದ ತಾಲೀಮು ಆರಂಭ

    ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವ 2019ಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತದೆ. ಇಂದು ಬೆಳ್ಳಂಬೆಳಗ್ಗೆಯೇ ಕ್ಯಾಪ್ಟನ್ ಅರ್ಜುನ ನೇತೃತ್ವದಲ್ಲಿ ಗಜಪಡೆ ತಾಲೀಮು ಆರಂಭಿಸಿದೆ.

    ಕ್ಯಾಪ್ಟನ್ ಅರ್ಜುನ ನೇತೃತ್ವದಲ್ಲಿ ಅಭಿಮನ್ಯು, ಧನಂಜಯ, ಈಶ್ವರ, ವಿಜಯಾ, ವರಲಕ್ಷ್ಮಿ ಸೇರಿ ಎಲ್ಲ ಆರು ಆನೆಗಳೂ ತಾಲೀಮಿನಲ್ಲಿ ಭಾಗಿಯಾಗಿವೆ. ಸದ್ಯ ಆನೆಗಳು ಬರಿ ಮೈ ನಡಿಗೆ ತಾಲೀಮು ಆರಂಭಿಸಿದ್ದು, ಜಂಬೂ ಸವಾರಿಗಾಗಿ ಗಜಪಡೆಗೆ ತರಬೇತಿ ನೀಡಲಾಗುತ್ತಿದೆ. ಮೈಸೂರು ಅರಮನೆಯಿಂದ ಗಜಪಡೆ ತಾಲೀಮು ಆರಂಭಿಸಿದ್ದು, ಆಲ್ಬರ್ಟ್ ವಿಕ್ಟರ್ ರಸ್ತೆ, ನ್ಯೂ ಸಯ್ಯಾಜಿರಾವ್ ರಸ್ತೆಗಳಲ್ಲಿ ಸಾಗಿ ಬಳಿಕ ಅರಮನೆ ಸೇರಲಿದೆ.

    ಮಂಗಳವಾರ ನಗರದ ದೇವರಾಜ ಮೊಹಲ್ಲಾದ ಸಾಯಿರಾಮ್ & ಕೊ ಎಲೆಕ್ಟ್ರಾನಿಕ್ ತೂಕ ಮಾಪನ ಕೇಂದ್ರದಲ್ಲಿ ಗಜಪಡೆಯ ತೂಕ ಪರಿಶೀಲನೆ ನಡೆದಿದೆ. ಗಜಪಡೆಯ ಕ್ಯಾಪ್ಟನ್ ಅರ್ಜುನ- 5,800 ಕೆ.ಜಿ ಇದ್ದರೆ, ವರಲಕ್ಷ್ಮಿ- 3,510 ಕೆ.ಜಿ, ಈಶ್ವರ- 3,995 ಕೆ.ಜಿ, ಧನಂಜಯ- 4,460 ಕೆ.ಜಿ, ವಿಜಯ- 2,825 ಕೆ.ಜಿ ಹಾಗೂ ಅಭಿಮನ್ಯು- 5,145 ಕೆ.ಜಿ ಇದೆ.

    ಸೋಮವಾರ ಮೈಸೂರು ಅರಮನೆಗೆ ಮೊದಲ ತಂಡದ ಆರು ಆನೆಗಳು ಆಗಮಿಸಿದ್ದವು. ಜಿಲ್ಲಾಡಳಿತ ಸಾಂಪ್ರದಾಯಿಕವಾಗಿ ಆನೆಗಳನ್ನು ಬರ ಮಾಡಿಕೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ಗಜಪಡೆಗೆ ಪೂಜೆ ನಡೆದಿತ್ತು. ಇನ್ನೂ ಒಂದೂವರೆ ತಿಂಗಳ ಕಾಲ ಆನೆಗಳು ಅರಮನೆಯಲ್ಲೇ ಉಳಿಯಲಿದೆ.

  • ಗಜಪಯಣ ಮುಗಿಸಿ ಅರಮನೆ ನಗರಿಗೆ ಎಂಟ್ರಿ ಕೊಟ್ಟ ಗಜಪಡೆ

    ಗಜಪಯಣ ಮುಗಿಸಿ ಅರಮನೆ ನಗರಿಗೆ ಎಂಟ್ರಿ ಕೊಟ್ಟ ಗಜಪಡೆ

    ಮೈಸೂರು: ದಸರಾ ಮಹೋತ್ಸವ 2019ರ ಗಜಪಯಣಕ್ಕೆ ಗುರುವಾರ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಚಾಲನೆ ನೀಡಲಾಗಿದ್ದು, ಈಗ ಗಜಪಯಣ ಮುಗಿಸಿ ಗಜಪಡೆ ಅರಮನೆ ನಗರಿಗೆ ಎಂಟ್ರಿ ಕೊಟ್ಟಿದೆ.

    ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿದ ಅರ್ಜುನ ಪಡೆ, ಜಿಲ್ಲೆಯ ಅರಣ್ಯ ಭವನದಲ್ಲಿ ಬೀಡು ಬಿಟ್ಟಿದೆ. ಮೈಸೂರಿಗೆ ಲಾರಿಗಳಲ್ಲಿ ಅರ್ಜುನ, ಅಭಿಮನ್ಯು, ಧನಂಜಯ, ಈಶ್ವರ, ವಿಜಯ ಹಾಗೂ ವರಲಕ್ಷ್ಮಿ ಆನೆಗಳನ್ನು ಕರೆತರೆಲಾಯಿತು. ಒಟ್ಟು 6 ಆನೆಗಳು ಗಜಪಯಣ ಮುಗಿಸಿ ಅರಣ್ಯ ಭವನದಲ್ಲಿ ವಿಶ್ರಾಂತಿ ಪಡೆಯುತ್ತಿವೆ.

    ಆಗಸ್ಟ್ 26ರಂದು ಅರಮನೆ ಗಜಪಡೆ ಪ್ರವೇಶಿಸಲಿದೆ. ಅಲ್ಲದೆ ಇದೇ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಈಶ್ವರ ಆನೆ ಭಾಗವಹಿಸುತ್ತಿದೆ. ದುಬಾರೆ ಕ್ಯಾಂಪ್‍ನಿಂದ ಈಶ್ವರ ಆನೆಯನ್ನು ಕರೆತರಲಾಗಿದೆ. ವಿಶೇಷವೆಂದರೆ ಈ ಬಾರಿ ಕೂಡ ಗಜಪಡೆ ನಾಯಕ ಅರ್ಜುನ ಅಂಬಾರಿ ಹೊತ್ತು ಎಲ್ಲರ ಗಮನ ಸೆಳೆಯಲಿದ್ದು, ಸತತ 8ನೇ ಬಾರಿಗೆ ಅಂಬಾರಿಯನ್ನ ಹೊತ್ತ ಕೀರ್ತಿಗೆ ಅರ್ಜುನ ಪಾತ್ರವಾಗಲಿದ್ದಾನೆ.

    ಸಾಂಪ್ರದಾಯಿಕವಾಗಿ ಪ್ರತಿ ವರ್ಷ ಜಿಲ್ಲಾ ಉಸ್ತುವಾರಿ ಸಚಿವರು ಪೂಜೆ ಸಲ್ಲಿಸಿ, ಗಜಪಯಣಕ್ಕೆ ಚಾಲನೆ ನೀಡುತ್ತಿದ್ದರು. ಆದರೆ ಈ ಬಾರಿ ದಸರಾ ಗಜಪಯಣಕ್ಕೆ ಚಾಲನೆ ನೀಡುವ ವಿಚಾರಕ್ಕೆ ಗೊಂದಲ ಶುರುವಾಗಿತ್ತು. ಯಾಕೆಂದರೆ ಈ ಬಾರಿ ಜಿಲ್ಲೆಯಿಂದ ಯಾವ ನಾಯಕರು ಸಚಿವರಾಗಿಲ್ಲ. ಅಲ್ಲದೆ ಸ್ಥಳೀಯ ಶಾಸಕರ ಬಳಿ ಚಾಲನೆ ಕೊಡಿಸೋಣ ಎಂದರೆ ಶಾಸಕರು ಕೂಡ ಅನರ್ಹರಾಗಿದ್ದಾರೆ. ಹೀಗಾಗಿ ಗಜಪಯಣಕ್ಕೆ ಚಾಲನೆ ನೀಡುವವರು ಯಾರು ಎಂಬ ಗೊಂದಲ ಎದುರಾಗಿತ್ತು. ಆದರೆ ಶಾಸಕ ರಾಮದಾಸ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ್ದರು.

  • ಸ್ಥಳೀಯ ಶಾಸಕರು ಅನರ್ಹ, ಸಚಿವರಿಲ್ಲ – ದಸರಾ ಗಜಪಯಣ ಚಾಲನೆಗೆ ಶುರುವಾಯ್ತು ಗೊಂದಲ

    ಸ್ಥಳೀಯ ಶಾಸಕರು ಅನರ್ಹ, ಸಚಿವರಿಲ್ಲ – ದಸರಾ ಗಜಪಯಣ ಚಾಲನೆಗೆ ಶುರುವಾಯ್ತು ಗೊಂದಲ

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2019ರ ದಸರಾ ಗಜಪಯಣಕ್ಕೆ ನಾಳೆಯಿಂದ ಚಾಲನೆ ನೀಡಬೇಕಿದೆ. ಆದರೆ ಒಂದೆಡೆ ಜಿಲ್ಲೆಯ ಸ್ಥಳೀಯ ಶಾಸಕರು ಅನರ್ಹಗೊಂಡಿದ್ದಾರೆ, ಇನ್ನೊಂದು ಕಡೆ ಈ ಭಾಗದಲ್ಲಿ ಯಾವ ಸಚಿವರು ಇಲ್ಲ. ಹೀಗಾಗಿ ದಸರಾ ಗಜಪಯಣಕ್ಕೆ ಸ್ವಾಗತ, ಚಾಲನೆ ನೀಡುವವರು ಯಾರು ಎಂಬ ಪ್ರಶ್ನೆ ಹುಟ್ಟುಕೊಂಡಿದೆ.

    ಸಾಂಪ್ರದಾಯಿಕವಾಗಿ ಪ್ರತಿ ವರ್ಷ ಜಿಲ್ಲಾ ಉಸ್ತುವಾರಿ ಸಚಿವರು ಪೂಜೆ ಸಲ್ಲಿಸಿ, ಗಜಪಯಣಕ್ಕೆ ಚಾಲನೆ ನೀಡುತ್ತಿದ್ದರು. ಆದರೆ ಈ ಬಾರಿ ದಸರಾ ಗಜಪಯಣಕ್ಕೆ ಚಾಲನೆ ನೀಡುವ ವಿಚಾರಕ್ಕೆ ಗೊಂದಲ ಶುರುವಾಗಿದೆ. ಪ್ರತಿ ವರ್ಷದಂತೆ ಈ ವರ್ಷ ದಸರಾ ನಡೆಸಲು ಸಾಧ್ಯವಾಗುವುದಿಲ್ಲ ಎಂಬ ಅನುಮಾನ ಹುಟ್ಟುಕೊಂಡಿದೆ. ಯಾಕೆಂದರೆ ಪ್ರತಿ ಬಾರಿ ದಸರಾ ಗಜಪಯಣಕ್ಕೆ ಉಸ್ತವಾರಿ ಸಚಿವರು ಚಾಲನೆ ನೀಡುತ್ತಿದ್ದರು. ಆದರೆ ಈ ಬಾರಿ ಜಿಲ್ಲೆಯಿಂದ ಯಾವ ನಾಯಕರು ಸಚಿವರಾಗಿಲ್ಲ. ಅಲ್ಲದೆ ಸ್ಥಳೀಯ ಶಾಸಕರ ಬಳಿ ಚಾಲನೆ ಕೊಡಿಸೋಣ ಎಂದರೆ ಶಾಸಕರು ಕೂಡ ಅನರ್ಹರಾಗಿದ್ದಾರೆ. ಹೀಗಾಗಿ ಗಜಪಯಣಕ್ಕೆ ಚಾಲನೆ ನೀಡುವವರು ಯಾರು ಎಂಬ ಗೊಂದಲ ಎದುರಾಗಿದೆ.

    ಪದ್ಧತಿ ಪ್ರಕಾರ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಳ್ಳಿ ಗೇಟ್ ಬಳಿ ಗಜಪಯಣಕ್ಕೆ ಚಾಲನೆ ನೀಡಲಾಗುತ್ತದೆ. ಶಾಸಕರು, ಸಚಿವರು ಇಲ್ಲದ ಕಾರಣಕ್ಕೆ ಈ ಬಾರಿ ಹೇಗೆ ಗಜಪಯಣಕ್ಕೆ ಚಾಲನೆ ನೀಡಬೇಕು? ಸರ್ಕಾರ ಇದ್ದರೂ ಅಧಿಕಾರಿಗಳೇ ಚಾಲನೆ ಕೊಡಬೇಕೇ? ಅಥವಾ ಬೇರೆ ಯಾವ ವ್ಯವಸ್ಥೆ ಮಾಡಬೇಕು ಎಂಬ ಚರ್ಚೆ ಆರಂಭವಾಗಿದೆ.