Tag: Dasun Shanaka

  • ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಬೆಂಕಿ ಚೆಂಡು – ಜೈಹೋ ಟೀಂ ಇಂಡಿಯಾ ಎಂದ ಡಿಕೆಶಿ

    ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಬೆಂಕಿ ಚೆಂಡು – ಜೈಹೋ ಟೀಂ ಇಂಡಿಯಾ ಎಂದ ಡಿಕೆಶಿ

    ಬೆಂಗಳೂರು/ಕೊಲಂಬೊ: ಟೀಂ ಇಂಡಿಯಾದ (Team India) ಸ್ಟಾರ್‌ ವೇಗಿ ಮೊಹಮ್ಮದ್ ಸಿರಾಜ್‌‌ (Mohammed Siraj) 2023ರ ಏಷ್ಯಾಕಪ್‌ ಫೈನಲ್‌ ಪಂದ್ಯದಲ್ಲಿ ಪ್ರಚಂಡ ಬೌಲಿಂಗ್‌ ಪ್ರದರ್ಶನ ತೋರಿದ್ದಾರೆ. ಶ್ರೀಲಂಕಾ ವಿರುದ್ಧ 7 ಓವರ್‌ಗಳಲ್ಲಿ 21 ರನ್‌ ಬಿಟ್ಟುಕೊಟ್ಟು 6 ವಿಕೆಟ್‌ ಪಡೆಯುವ ಮೂಲಕ ಹಲವು ದಾಖಲೆಗಳನ್ನ ನಿರ್ಮಿಸಿದರು. ಈ ಮೂಲಕ ಭಾರತ 10 ವಿಕೆಟ್‌ಗಳ ಜಯ ಸಾಧಿಸಲು ನೆರವಾದರು.

    ಈ ಕುರಿತು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ (DK Shivakumar) ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿದ್ದು, ಮೊಹಮ್ಮದ್‌ ಸಿರಾಜ್‌ ಹಾಗೂ ಟೀಂ ಇಂಡಿಯಾವನ್ನ ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ಸಿರಾಜ್‌ ಬೆಂಕಿ ಬೌಲಿಂಗ್‌, 50 ರನ್‌ಗಳಿಗೆ ಆಲೌಟ್‌ – 39 ವರ್ಷಗಳ ಬಳಿಕ ಕೆಟ್ಟ ದಾಖಲೆ ಬರೆದ ಲಂಕಾ

    ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಬೆಂಕಿ ಚೆಂಡು… ಏಷ್ಯಾಕಪ್ ಫೈನಲ್ಸ್‌ನಲ್ಲಿ (Asia Cup Finals) ಶ್ರೀಲಂಕಾ ಪಡೆ ವಿರುದ್ಧ ಪ್ರಚಂಡ ಗೆಲುವು ದಾಖಲಿಸಿದ ಟೀಂ ಇಂಡಿಯಾಗೆ ಹೃದಯಪೂರ್ವಕ ಶುಭಾಶಯಗಳು. 6 ವಿಕೆಟ್ ಗಳಿಸಿದ ಮೊಹಮ್ಮದ್ ಸಿರಾಜ್ ಅವರ ಬೌಲಿಂಗ್ ದಾಳಿ ಕಂಡು ಬೆರಗಾದೆ. ಟೀಂ ಇಂಡಿಯಾ ಕಲಿಗಳ‌ ಗೆಲುವಿನ ನಾಗಾಲೋಟ ಹೀಗೇ ಮುಂದುವರಿಯಲಿ. ಜೈಹೋ ಟೀಂ ಇಂಡಿಯಾ ಎಂದು ಶುಭಕೋರಿದ್ದಾರೆ.

    ನಿನ್ನೆ ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್‌ ಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ತಂಡದ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ 8ನೇ ಬಾರಿಗೆ ಏಷ್ಯಾಕಪ್ ಕಿರೀಟವನ್ನ ಮುಡಿಗೇರಿಸಿಕೊಂಡಿತು. 1984, 1988, 1991, 1995, 2010, 2016, 2018ರಲ್ಲಿ ಏಷ್ಯಾಕಪ್ ಚಾಂಪಿಯನ್ ಆಗಿದ್ದ ಭಾರತ 8ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು. ಇದನ್ನೂ ಓದಿ: Asia Cup 2023 Final: ಲಂಕಾ ದಹನ – ಭಾರತಕ್ಕೆ 8ನೇ ಬಾರಿಗೆ ಚಾಂಪಿಯನ್‌ ಕಿರೀಟ

    ಜೊತೆಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆದ್ದ 2ನೇ ಏಕದಿನ ಏಷ್ಯಾಕಪ್ ಚಾಂಪಿಯನ್ ಪಟ್ಟವೂ ಇದಾಗಿದೆ. ಇನ್ನೂ 6 ಬಾರಿ ಚಾಂಪಿಯನ್ ಹಾಗೂ 6 ಬಾರಿ ರನ್ನರ್ ಅಪ್ ಪ್ರಶಸ್ತಿ ಗೆದ್ದುಕೊಂಡಿದ್ದ ಶ್ರೀಲಂಕಾ 7ನೇ ಬಾರಿಗೆ ರನ್ನರ್ ಅಪ್ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

    ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ ಅಗ್ರಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ 15.2 ಓವರ್‌ಗಳಲ್ಲಿ ಕೇವಲ 50 ರನ್‌ಗಳಿಗೆ ಆಲೌಟ್ ಆಯಿತು. 51 ರನ್‌ಗಳ ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಭಾರತ ಕೇವಲ 6.1 ಓವರ್‌ಗಳಲ್ಲೇ 51 ರನ್ ಚಚ್ಚಿ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಇದನ್ನೂ ಓದಿ: ಸಿರಾಜ್‌ ಬೆಂಕಿ ಬೌಲಿಂಗ್‌, 50 ರನ್‌ಗಳಿಗೆ ಆಲೌಟ್‌ – 39 ವರ್ಷಗಳ ಬಳಿಕ ಕೆಟ್ಟ ದಾಖಲೆ ಬರೆದ ಲಂಕಾ

    ಲಂಕಾ ವಿರುದ್ಧ ಮಾರಕ ಬೌಲಿಂಗ್ ದಾಳಿ ನಡೆಸಿದ ಮೊಹಮ್ಮದ್ ಸಿರಾಜ್, 7 ಓವರ್‌ಗಳಲ್ಲಿ 21 ರನ್ ಬಿಟ್ಟುಕೊಟ್ಟು 6 ವಿಕೆಟ್ ಕಿತ್ತರೆ, ಹಾರ್ದಿಕ್ ಪಾಂಡ್ಯ 2.2 ಓವರ್‌ಗಳಲ್ಲಿ 3 ರನ್ ನೀಡಿ 3 ವಿಕೆಟ್ ಕಿತ್ತರು. ಜಸ್ಪ್ರೀತ್ ಬುಮ್ರಾ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Asia Cup 2023: ಮಳೆಯಲ್ಲೂ ಶ್ರಮಿಸಿದ ಕ್ರೀಡಾಂಗಣ ಸಿಬ್ಬಂದಿಗೆ 42 ಲಕ್ಷ ರೂ. ಬಹುಮಾನ ಘೋಷಿಸಿದ ಜಯ್‌ ಶಾ

    Asia Cup 2023: ಮಳೆಯಲ್ಲೂ ಶ್ರಮಿಸಿದ ಕ್ರೀಡಾಂಗಣ ಸಿಬ್ಬಂದಿಗೆ 42 ಲಕ್ಷ ರೂ. ಬಹುಮಾನ ಘೋಷಿಸಿದ ಜಯ್‌ ಶಾ

    – ಕ್ರಿಕೆಟ್ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ

    ಕೊಲಂಬೊ: 2023ರ ಏಷ್ಯಾ ಕಪ್‌ (Asia Cup 2023) ಟೂರ್ನಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಟೀಂ ಇಂಡಿಯಾ (Team India) 8ನೇ ಬಾರಿಗೆ ಚಾಂಪಿಯನ್‌ ಪಟ್ಟಕ್ಕೇರಿದೆ. ಈ ನಡುವೆ ಮಾನವೀಯತೆ ಮೆರೆದಿರುವ ಬಿಸಿಸಿಐ ಕಾರ್ಯದರ್ಶಿ ಹಾಗೂ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ಅಧ್ಯಕ್ಷ ಜಯ್‌ ಶಾ (Jay Shah) ಟೂರ್ನಿಯ ಯಶಸ್ಸಿಗೆ ಕಾರಣಾದ ಕ್ರೀಡಾಂಗಣ ಸಿಬ್ಬಂದಿಗೆ 42 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.

    ಏಷ್ಯಾ ಕಪ್ ಪ್ರಶಸ್ತಿಯನ್ನು ಗೆದ್ದಿದ್ದು ಭಾರತವೇ ಆದರೂ ಹೃದಯ ಗೆದ್ದದ್ದು ಮಾತ್ರ ಕೊಲೊಂಬೊ ಪ್ರೇಮದಾಸ ಕ್ರೀಡಾಂಗಣದ ಸಿಬ್ಬಂದಿ. ಅನಿರೀಕ್ಷಿತ ಮಳೆ, ಗುಡುಗು-ಸಿಡಿಲಿನ ಆರ್ಭಟದ ನಡುವೆಯೂ ಮೈದಾನ ಮತ್ತು ಪಿಚ್‌ ಅನ್ನು ನೆನೆಯದಂತೆ ನೋಡಿಕೊಂಡು, ಮೈದಾನಕ್ಕೆ ನೀರು ಬಂದರೂ ಅದನ್ನು ಹರಸಾಹಸದಿಂದ ಒಣಗಿಸಿ, ಆಟಕ್ಕೆ ಅಣಿಗೊಳಿಸಿದ ಅವರು, ಟೂರ್ನಿ ಯಶಸ್ವಿಯಾಗಲು ಪ್ರಮುಖ ಕಾರಣರಾಗಿದ್ದಾರೆ. ಕೋಟ್ಯಂತರ ಕ್ರಿಕೆಟ್‌ ಅಭಿಮಾನಿಗಳು ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

    ಮಳೆಯ (Rain) ಹನಿ ನೆಲಕ್ಕೆ ಬೀಳುತ್ತಿದ್ದಂತೆಯೇ ಚುರುಕುತನದಿಂದ ಕೆಲಸ ಮಾಡುತ್ತಾ ಇಡೀ ಮೈದಾನವನ್ನ ಟಾರ್ಪಾಲ್‌ಗಳಿಂದ ಮುಚ್ಚುತ್ತಿದ್ದರು. ಇದೀಗ ಅವರಿಗೆ ಬಹುಮಾನ ಘೋಷಣೆ ಮಾಡಲಾಗಿದೆ. ಏಷ್ಯಾಕಪ್​ ಟೂರ್ನಿಯ ಪಂದ್ಯಗಳು ನಡೆದ ಮೈದಾನದ ಪಿಚ್​ ಕ್ಯುರೇಟರ್​ ಮತ್ತು ಸಿಬ್ಬಂದಿಗೆ 50 ಸಾವಿರ ಡಾಲರ್​​ (42 ಲಕ್ಷ ರೂ.) ಬಹುಮಾನವನ್ನು ಘೋಷಿಸಲಾಗಿದೆ. ಇದನ್ನೂ ಓದಿ: Asia Cup 2023 Final: ಲಂಕಾ ದಹನ – ಭಾರತಕ್ಕೆ 8ನೇ ಬಾರಿಗೆ ಚಾಂಪಿಯನ್‌ ಕಿರೀಟ

    ಈ ಬಾರಿ ಏಷ್ಯಾಕಪ್ ಟೂರ್ನಿಯಲ್ಲಿ ನಡೆದ ಬಹುತೇಕ ಎಲ್ಲಾ ಪಂದ್ಯಗಳಿಗೂ ಮಳೆ ಅಡಚಣೆ ಉಂಟು ಮಾಡಿತ್ತು. ಅದರಲ್ಲೂ ಭಾರತ ಮತ್ತು ಪಾಕಿಸ್ತಾನ ನಡುವಿನ ಗ್ರೂಪ್‌ ಹಂತದ ಪಂದ್ಯ ಹಾಗೂ ಸೂಪರ್‌ ಫೋರ್‌ ಪಂದ್ಯದ ವೇಳೆ ಮೈದಾನ ಒಣಗಿಸಲು ಹರಸಾಹಸ ಪಟ್ಟಿದ್ದರು. ಈ ಕಾರ್ಯವನ್ನ ಮೆಚ್ಚಿಕೊಂಡಿರುವ ಬಿಸಿಸಿಐ ಹಾಗೂ ಎಸಿಸಿ ಸಿಬ್ಬಂದಿಗೆ ಬಹುಮಾನ ಘೋಷಣೆ ಮಾಡಿದೆ. ಇದನ್ನೂ ಓದಿ:  Asia Cup 2023: ಒಂದೇ ಒಂದು ಕ್ಯಾಚ್‌ ಹಿಡಿದ ಜಡೇಜಾ, 6 ವಿಕೆಟ್‌ ಕಿತ್ತ ಸಿರಾಜ್‌ಗೆ ಲಕ್ಷ ಲಕ್ಷ ಬಹುಮಾನ

    ಈ ಕುರಿತು ಎಕ್ಸ್‌ (ಟ್ವಿಟ್ಟರ್‌) ಖಾತೆಯಲ್ಲಿ ಟ್ವೀಟ್‌ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ, ಕ್ರಿಕೆಟ್​​ನ ಎಲೆ ಮರೆಯ ತಾರೆಗಳಿಗೆ ಅಭಿನಂದನೆಗಳು. ಟೂರ್ನಿಯನ್ನು ಅತ್ಯಂತ ಯಶಸ್ವಿಯಾಗಿಸಲು ಸಾಧ್ಯವಾಗಿಸಿದ ಅವರಿಗೆ 42 ಲಕ್ಷ ರೂಪಾಯಿ ಬಹುಮಾನ ಘೋಷಿಸಲು ಹರ್ಷವಾಗುತ್ತಿದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿ ಜೊತೆ ಈ ಕಾರ್ಯ ಮಾಡುತ್ತಿದ್ದೇವೆ ಬರೆದುಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Asia Cup 2023: ಒಂದೇ ಒಂದು ಕ್ಯಾಚ್‌ ಹಿಡಿದ ಜಡೇಜಾ, 6 ವಿಕೆಟ್‌ ಕಿತ್ತ ಸಿರಾಜ್‌ಗೆ ಲಕ್ಷ ಲಕ್ಷ ಬಹುಮಾನ

    Asia Cup 2023: ಒಂದೇ ಒಂದು ಕ್ಯಾಚ್‌ ಹಿಡಿದ ಜಡೇಜಾ, 6 ವಿಕೆಟ್‌ ಕಿತ್ತ ಸಿರಾಜ್‌ಗೆ ಲಕ್ಷ ಲಕ್ಷ ಬಹುಮಾನ

    – ಚಾಂಪಿಯನ್‌ ಟೀಂ ಇಂಡಿಯಾಕ್ಕೆ ಸಿಕ್ಕ ಬಹುಮಾನ ಎಷ್ಟು ಗೊತ್ತಾ?

    ಕೊಲಂಬೊ: 2023ರ ಏಷ್ಯಾಕಪ್‌ (Asia Cup 2023) ಟೂರ್ನಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಟೀಂ ಇಂಡಿಯಾ (Team India) 8ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಈ ಆವೃತ್ತಿಯಲ್ಲಿ ಟೀಂ ಇಂಡಿಯಾ ಸೇರಿದಂತೆ ಇತರೇ ಆಟಗಾರರು ಹಲವು ದಾಖಲೆಗಳನ್ನ ನಿರ್ಮಿಸಿದ್ದಾರೆ. ಇದರೊಂದಿಗೆ ಉತ್ತಮ ಪ್ರದರ್ಶನ ತೋರಿದ ತಂಡಗಳು ಹಾಗೂ ಆಟಗಾರರು ಲಕ್ಷ ಲಕ್ಷ ಹಣವನ್ನೂ ಬಾಚಿಕೊಂಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ. ಇದನ್ನೂ ಓದಿ: Asia Cup 2023 Final: ಲಂಕಾ ದಹನ – ಭಾರತಕ್ಕೆ 8ನೇ ಬಾರಿಗೆ ಚಾಂಪಿಯನ್‌ ಕಿರೀಟ

    ಏಷ್ಯಾ ಕಪ್ 2023 ರಲ್ಲಿ ಪ್ರಶಸ್ತಿ ವಿಜೇತರ ಪಟ್ಟಿ:
    ವಿಜೇತರು – ಭಾರತ (ಬಹುಮಾನ – 1.24 ಕೋಟಿ ರೂ.)
    ರನ್ನರ್ ಅಪ್ – ಶ್ರೀಲಂಕಾ (SriLanka) (ಬಹುಮಾನ – 62.31 ಲಕ್ಷ ರೂ.)
    ಪ್ಲೇಯರ್‌ ಆಫ್‌ ದಿ ಟೂರ್ನಮೆಂಟ್‌ – ಕುಲದೀಪ್ ಯಾದವ್ (9 ವಿಕೆಟ್) (ಬಹುಮಾನ – 12.46 ಲಕ್ಷ ರೂ.)
    ಪಂದ್ಯ ಶ್ರೇಷ್ಠ – ಮೊಹಮ್ಮದ್ ಸಿರಾಜ್ (6 ವಿಕೆಟ್) (ಬಹುಮಾನ – 4.15 ಲಕ್ಷ ರೂ.)
    ಅತಿಹೆಚ್ಚು ರನ್‌ ಗಳಿಸಿದ ಆಟಗಾರ – ಶುಭಮನ್ ಗಿಲ್, ಟೀಂ ಇಂಡಿಯಾ (302 ರನ್)
    ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಆಟಗಾರ – ಮಥೀಶ ಪತಿರಣ, ಶ್ರೀಲಂಕಾ (11 ವಿಕೆಟ್‌ಗಳು)
    ಫೈನಲ್‌ ಪಂದ್ಯದ ಕ್ಯಾಚ್‌ ಆಫ್‌ ದಿ ಮ್ಯಾಚ್‌ – ರವೀಂದ್ರ ಜಡೇಜಾ (ಬಹುಮಾನ – 4.15 ಲಕ್ಷ ರೂ.)

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Asia Cup 2023 Final: 6 ವಿಕೆಟ್‌ ಕಿತ್ತು ಹಲವು ದಾಖಲೆ ಬರೆದ ಮೊಹಮ್ಮದ್ ಸಿರಾಜ್‌‌

    Asia Cup 2023 Final: 6 ವಿಕೆಟ್‌ ಕಿತ್ತು ಹಲವು ದಾಖಲೆ ಬರೆದ ಮೊಹಮ್ಮದ್ ಸಿರಾಜ್‌‌

    ಕೊಲಂಬೊ: ಟೀಂ ಇಂಡಿಯಾದ ಸ್ಟಾರ್‌ ವೇಗಿ ಮೊಹಮ್ಮದ್ ಸಿರಾಜ್‌‌ (Mohammed Siraj) 2023ರ ಏಷ್ಯಾಕಪ್‌ ಫೈನಲ್‌ (Asia Cup 2023 Final) ಪಂದ್ಯದಲ್ಲಿ ಪ್ರಚಂಡ ಬೌಲಿಂಗ್‌ ಪ್ರದರ್ಶನ ತೋರಿದ್ದಾರೆ. ಶ್ರೀಲಂಕಾ ವಿರುದ್ಧ 7 ಓವರ್‌ಗಳಲ್ಲಿ 21 ರನ್‌ ಬಿಟ್ಟುಕೊಟ್ಟು ಒಟ್ಟು 6 ವಿಕೆಟ್‌ ಪಡೆಯುವ ಮೂಲಕ ಹಲವು ದಾಖಲೆಗಳನ್ನ ನಿರ್ಮಿಸಿದ್ದಾರೆ.

    ಹೈದರಾಬಾದ್ ಮೂಲದ 29 ವರ್ಷದ ಬಲಗೈ ವೇಗಿ ಸಿರಾಜ್‌, ಏಷ್ಯಾ ಕಪ್ 2023 ಟೂರ್ನಿಯಲ್ಲಿ ತಮ್ಮ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನ ವೃತ್ತಿಬದುಕಿನ ಶ್ರೇಷ್ಠ ಬೌಲಿಂಗ್‌ ಪ್ರದರ್ಶನ ನೀಡಿದ್ದಾರೆ. 7 ಓವರ್‌ಗಳಲ್ಲಿ ಒಂದು ಮೇಡಿನ್‌ ಒಳಗೊಂಡಂತೆ 21 ರನ್‌ ಬಿಟ್ಟುಕೊಟ್ಟು 6 ವಿಕೆಟ್‌ ಪಡೆದು ಅಬ್ಬರಿಸಿದ್ದಾರೆ. ಪರಿಣಾಮ ಶ್ರೀಲಂಕಾ (Sri Lanka) ತಂಡ 50 ರನ್‌ಗಳ ಅಲ್ಪ ಮೊತ್ತಕ್ಕೆ ಆಲ್‌ಔಟ್‌ ಆಯಿತು. ಇದನ್ನೂ ಓದಿ: Asia Cup 2023 Final: ಲಂಕಾ ದಹನ – ಭಾರತಕ್ಕೆ 8ನೇ ಬಾರಿಗೆ ಚಾಂಪಿಯನ್‌ ಕಿರೀಟ

    ಇದೇ ಟೂರ್ನಿಯಲ್ಲಿ ಸಿರಾಜ್‌ ಭಾರತದ ಪರ ಅತಿ ವೇಗವಾಗಿ 5 ವಿಕೆಟ್‌ ಪಡೆದ ಸಾಧನೆ ಮಾಡಿದ್ದಾರೆ. ಇದು ಸಿರಾಜ್ ಏಕದಿನ ಕ್ರಿಕೆಟ್‌ ವೃತ್ತಿಬದುಕಿನ ಮೊದಲ ಸಾಧನೆಯೂ ಆಗಿದೆ. 1993ರ ಸಿಎಬಿ ಜುಬ್ಲೀ ಟೂರ್ನಿಯ ಫೈನಲ್‌ನಲ್ಲಿ ವೆಸ್ಟ್‌ ಇಂಡೀಸ್‌ ಎದುರು ಅನಿಲ್ ಕುಂಬ್ಳೆ (Anil Kumble) ವೇಗವಾಗಿ 6 ವಿಕೆಟ್‌ ಪಡೆದಿದ್ದು, ಈ ಹಿಂದಿನ ಸಾಧನೆ ಆಗಿತ್ತು. ಇದರೊಂದಿಗೆ ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ಅತ್ಯಂತ ಕಡಿಮೆ ಪಂದ್ಯಗಳಲ್ಲಿ ಭಾರತದ ಪರ 50 ವಿಕೆಟ್‌ ಪಡೆದ 4ನೇ ಬೌಲರ್‌ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ.

    ಅಷ್ಟೇ ಅಲ್ಲದೇ ಭಾರತದ ಪರ ಮೊದಲ 10 ಓವರ್‌ಗಳಲ್ಲಿ ಅತಿಹೆಚ್ಚು ವಿಕೆಟ್‌ ಪಡೆದ ವಿಶೇಷ ಸಾಧನೆ ಮಾಡಿದ್ದಾರೆ. ಜೊತೆಗೆ 2003ರ ವಿಶ್ವಕಪ್‌ ಟೂರ್ನಿಯಲ್ಲಿ ಬಾಂಗ್ಲಾದೇಶದ ವಿರುದ್ಧ 16 ಎಸೆತಗಳಲ್ಲಿ 5 ವಿಕೆಟ್‌ ಕಿತ್ತು ವಿಶ್ವದಾಖಲೆ ನಿರ್ಮಿಸಿದ್ದ ಶ್ರೀಲಂಕಾದ ಮಾಜಿ ವೇಗಿ ಚಮಿಂದಾ ವಾಸ್‌ ಅವರ ದಾಖಲೆಯನ್ನೂ ಸಿರಾಜ್‌ ಸರಿಗಟ್ಟಿದ್ದಾರೆ. ಇದನ್ನೂ ಓದಿ: ಸಿರಾಜ್‌ ಬೆಂಕಿ ಬೌಲಿಂಗ್‌, 50 ರನ್‌ಗಳಿಗೆ ಆಲೌಟ್‌ – 39 ವರ್ಷಗಳ ಬಳಿಕ ಕೆಟ್ಟ ದಾಖಲೆ ಬರೆದ ಲಂಕಾ

    ಸಿರಾಜ್‌ ಬೌಲಿಂಗ್‌ ಮಾಡಿದ 2ನೇ ಓವರ್‌ನಲ್ಲೇ ಹ್ಯಾಟ್ರಿಕ್‌ ವಿಕೆಟ್‌ ಸಾಧನೆ ಅವಕಾಶ ಕೈತಪ್ಪಿದರು ಸಹ ಆ ಓವರ್‌ನಲ್ಲಿ 4 ವಿಕೆಟ್‌ ಕಿತ್ತು ಮಿಂಚಿದರು. ಪಂದ್ಯದ ಮೊದಲ ಓವರ್‌ನಲ್ಲೇ ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ದಾಳಿಗೆ ಓಪನರ್‌ ಕುಶಲ್‌ ಪೆರೆರಾ ಶೂನ್ಯಕ್ಕೆ ಔಟಾದರು. ಈ ಬೆನ್ನಲ್ಲೇ ಶ್ರೀಲಂಕಾ ತಂಡದ ಪೆವಿಲಿಯನ್ ಪರೇಡ್‌ ಶುರುವಾಗಿತ್ತು. ಬುಮ್ರಾ ಮತ್ತು ಸಿರಾಜ್‌ ಬಳಿಕ ದಾಳಿಗಿಳಿದ ಹಾರ್ದಿಕ್‌ ಪಾಂಡ್ಯ ಕೂಡ ಕೇವಲ 3 ರನ್‌ಗಳಿಗೆ 3 ವಿಕೆಟ್‌ ಪಡೆದು ಶ್ರೀಲಂಕಾ ತಂಡವನ್ನು 50 ರನ್‌ಗಳಿಗೆ ಆಲ್‌ಔಟ್‌ ಮಾಡುವಲ್ಲಿ ಯಶಸ್ವಿಯಾದರು. ಇದು 39 ವರ್ಷಗಳ ಬಳಿಕ ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ಶ್ರೀಲಂಕಾ ತಂಡ ಭಾರತದ ಎದುರು ಗಳಿಸಿದ ಅತ್ಯಂತ ಕಡಿಮೆ ಮೊತ್ತವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Asia Cup 2023 Final: ಲಂಕಾ ದಹನ – ಭಾರತಕ್ಕೆ 8ನೇ ಬಾರಿಗೆ ಚಾಂಪಿಯನ್‌ ಕಿರೀಟ

    Asia Cup 2023 Final: ಲಂಕಾ ದಹನ – ಭಾರತಕ್ಕೆ 8ನೇ ಬಾರಿಗೆ ಚಾಂಪಿಯನ್‌ ಕಿರೀಟ

    – ಮೊಹಮದ್‌ ಸಿರಾಜ್‌ ಮಾರಕ ಬೌಲಿಂಗ್‌ ದಾಳಿಗೆ 6 ವಿಕೆಟ್‌ ಉಡೀಸ್‌

    ಕೊಲಂಬೊ: ಲಂಕಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ (Team India) 8ನೇ ಬಾರಿಗೆ ಏಷ್ಯಾಕಪ್‌ (Asia Cup 2023) ಕಿರೀಟವನ್ನ ಮುಡಿಗೇರಿಸಿಕೊಂಡಿದೆ. 1984, 1988, 1991, 1995, 2010, 2016, 2018ರಲ್ಲಿ ಏಷ್ಯಾಕಪ್‌ ಚಾಂಪಿಯನ್‌ ಆಗಿದ್ದ ಭಾರತ 8ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

    ಜೊತೆಗೆ ರೋಹಿತ್‌ ಶರ್ಮಾ (Rohit Sharma) ನಾಯಕತ್ವದಲ್ಲಿ ಟೀಂ ಇಂಡಿಯಾ ಗೆದ್ದ 2ನೇ ಏಕದಿನ ಏಷ್ಯಾಕಪ್‌ ಚಾಂಪಿಯನ್‌ ಪಟ್ಟವೂ ಇದಾಗಿದೆ. ಇನ್ನೂ 6 ಬಾರಿ ಚಾಂಪಿಯನ್‌ ಹಾಗೂ 6 ಬಾರಿ ರನ್ನರ್‌ ಅಪ್‌ ಪ್ರಶಸ್ತಿ ಗೆದ್ದುಕೊಂಡಿದ್ದ ಶ್ರೀಲಂಕಾ 7ನೇ ಬಾರಿಗೆ ರನ್ನರ್‌ ಅಪ್‌ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

    ಭಾನುವಾರ ಇಲ್ಲಿನ ಪ್ರೇಮದಾಸ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ತಂಡ (Sri Lanka) ಅಗ್ರಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ 15.2 ಓವರ್‌ಗಳಲ್ಲಿ ಕೇವಲ 50 ರನ್‌ಗಳಿಗೆ ಆಲೌಟ್‌ ಆಯಿತು. 51 ರನ್‌ಗಳ ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಭಾರತ ಕೇವಲ 6.1 ಓವರ್‌ಗಳಲ್ಲೇ 51 ರನ್‌ ಚಚ್ಚಿ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

    ಕಡಿಮೆ ರನ್‌ ಗುರಿ ಪಡೆದ ಹಿನ್ನೆಲೆಯಲ್ಲಿ ಬ್ಯಾಟಿಂಗ್‌ನಲ್ಲಿ ಬದಲಾವಣೆ ಮಾಡಿಕೊಂಡಿತು. ನಾಯಕ ರೋಹಿತ್‌ ಶರ್ಮಾ, ಶುಭಮನ್‌ ಗಿಲ್‌ (Shubman Gill) ಜೊತೆಯಾಗಿ ಇಶಾನ್‌ ಕಿಶನ್‌ (Ishan Kishan) ಅವರನ್ನ ಆರಂಭಿಕರಾಗಿ ಕಣಕ್ಕಿಳಿಸಿದರು. ಆರಂಭದಿಂದಲೇ ಲಂಕಾ ಬೌಲರ್‌ಗಳ ಬೆಂಡೆತ್ತಿದ್ದ ಕಿಶನ್‌ ಹಾಗೂ ಗಿಲ್‌ ಜೋಡಿ ಕೇವಲ 6.1 ಓವರ್‌ನಲ್ಲೇ 51 ರನ್‌ ಸಿಡಿಸಿ ಮ್ಯಾಚ್‌ ಮುಗಿಸಿತು. ಇಶಾನ್‌ ಕಿಶನ್‌ 18 ಎಸೆತಗಳಲ್ಲಿ 23 ರನ್‌, ಶುಭಮನ್‌ ಗಿಲ್‌ 19 ಎಸೆತಗಳಲ್ಲಿ 27 ರನ್‌ ಗಳಿಸಿ ಮಿಂಚಿದರು.

    ಇದಕ್ಕೂ ಮುನ್ನ ಟಾಸ್‌ ಗೆದ್ದು ಟೀಂ ಇಂಡಿಯಾಕ್ಕೆ ಪ್ರಬಲ ಪೈಪೋಟಿ ನೀಡಲು‌ ಕಣಕ್ಕಿಳಿದಿದ್ದ ಶ್ರೀಲಂಕಾ ತಂಡ ತವರಿನಲ್ಲಿ ತೀವ್ರ ಮುಖಭಂಗ ಅನುಭವಿಸಿತು. 15.2 ಓವರ್‌ಗಳಲ್ಲಿ 50 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ 39 ವರ್ಷಗಳ ನಂತರ ಏಷ್ಯಾಕಪ್‌ ಕ್ರಿಕೆಟ್‌ ಇತಿಹಾಸದಲ್ಲೇ ಅತಿ ಕಡಿಮೆ ರನ್‌ ದಾಖಲಿಸಿದ ಕೆಟ್ಟ ದಾಖಲೆಯನ್ನೂ ಹೆಗಲಿಗೇರಿಸಿಕೊಂಡಿತು. 1984ರ ಏಷ್ಯಾಕಪ್‌ ಉದ್ಘಾಟನಾ ಆವೃತ್ತಿಯಲ್ಲಿ ಭಾರತದ ವಿರುದ್ಧ 41 ಓವರ್‌ಗಳಲ್ಲಿ ಕೇವಲ 96 ರನ್‌ಗಳಿಗೆ ಆಲೌಟ್‌ ಆಗಿತ್ತು. ಆದರೂ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಆ ನಂತರ 1986 ರಲ್ಲಿ ಪಾಕಿಸ್ತಾನದ ವಿರುದ್ಧ 33.5 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್‌ ಆಗಿತ್ತು.

    ಆರಂಭಿಕರಾಗಿ ಕಣಕ್ಕಿಳಿದ ಕುಶಲ್‌ ಪೆರೇರ ಮೊದಲ ಓವರ್‌ನಲ್ಲೇ ಜಸ್ಪ್ರೀತ್‌ ಬುಮ್ರಾಗೆ ವಿಕೆಟ್‌ ಒಪ್ಪಿಸಿದರು. ಈ ಬೆನ್ನಲ್ಲೇ ಮಾರಕ ದಾಳಿ ನಡೆಸಿದ ಮೊಹಮ್ಮದ್‌ ಸಿರಾಜ್‌ 4ನೇ ಓವರ್‌ನಲ್ಲಿ ಕೇವಲ ನಾಲ್ಕು ರನ್‌ ಬಿಟ್ಟುಕೊಟ್ಟು 4 ವಿಕೆಟ್‌ ಉರುಳಿಸಿದರು. ಆ ನಂತರವೂ ದಾಳಿ ಮುಂದುವರಿಸಿದ ಸಿರಾಜ್‌ 6ನೇ ಮತ್ತು 12ನೇ ಓವರ್‌ನಲ್ಲಿ ಒಂದೊಂದು ವಿಕೆಟ್‌ ಪಡೆದರು. ಇದರಿಂದ ಲಂಕಾ ಮಕಾಡೆ ಮಲಗಿತು.

    ಉತ್ತಮ ಆರಂಭ ಪಡೆಯುವ ನಿರೀಕ್ಷೆಯಲ್ಲಿದ್ದ ಲಂಕಾ ಕೇವಲ 6 ಓವರ್‌ಗಳಲ್ಲಿ 13 ರನ್‌ಗಳಿಗೆ ಪ್ರಮುಖ 6 ವಿಕೆಟ್‌ ಗಳನ್ನ ಕಳೆದುಕೊಂಡಿತ್ತು. ಅಗ್ರ ಕ್ರಮಾಂಕದ ಬ್ಯಾಟರ್‌ಗಳಾದ ಪತುಮ್ ನಿಸ್ಸಂಕ (2 ರನ್‌), ಕುಶಲ್‌ ಮೆಂಡಿಸ್‌ (17 ರನ್), ಧನಂಜಯ ಡಿ ಸಿಲ್ವಾ (4 ರನ್‌), ದುನಿತ್ ವೆಲ್ಲಾಳ (8 ರನ್‌) ಗಳಿಸಿದ್ರೆ ಕುಶಲ್ ಪೆರೇರ, ಸಾದೀರ ಸಮರವಿಕ್ರಮ, ಚರಿತ್ ಅಸಲಂಕ, ನಾಯಕ ದಸುನ್‌ ಶನಾಕ (Dasun Shanaka) ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿಕೊಂಡರು. ಕೊನೆಯಲ್ಲಿ ಪ್ರಮೋದ್‌ ಮಧೂಶನ್‌ 1 ರನ್‌ ಗಳಿಸಿದ್ರೆ, ಮತೀಶ ಪಥಿರಣ ಶೂನ್ಯಕ್ಕೆ ಔಟಾದರು. ದುಶನ್ ಹೇಮಂತ 13 ರನ್‌ಗಳಿಸಿ ಕ್ರೀ‌ಸ್‌ನಲ್ಲಿ ಉಳಿದರು.

    ಲಂಕಾ ವಿರುದ್ಧ ಮಾರಕ ಬೌಲಿಂಗ್‌ ದಾಳಿ ನಡೆಸಿದ ಮೊಹಮ್ಮದ್‌ ಸಿರಾಜ್‌, 7 ಓವರ್‌ಗಳಲ್ಲಿ 21 ರನ್‌ ಬಿಟ್ಟುಕೊಟ್ಟು 6 ವಿಕೆಟ್‌ ಕಿತ್ತರೆ, ಹಾರ್ದಿಕ್‌ ಪಾಂಡ್ಯ 2.2 ಓವರ್‌ಗಳಲ್ಲಿ 3 ರನ್‌ ನೀಡಿ 3 ವಿಕೆಟ್‌ ಕಿತ್ತರು. ಜಸ್ಪ್ರೀತ್‌ ಬುಮ್ರಾ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿರಾಜ್‌ ಬೆಂಕಿ ಬೌಲಿಂಗ್‌, 50 ರನ್‌ಗಳಿಗೆ ಆಲೌಟ್‌ – 39 ವರ್ಷಗಳ ಬಳಿಕ ಕೆಟ್ಟ ದಾಖಲೆ ಬರೆದ ಲಂಕಾ

    ಸಿರಾಜ್‌ ಬೆಂಕಿ ಬೌಲಿಂಗ್‌, 50 ರನ್‌ಗಳಿಗೆ ಆಲೌಟ್‌ – 39 ವರ್ಷಗಳ ಬಳಿಕ ಕೆಟ್ಟ ದಾಖಲೆ ಬರೆದ ಲಂಕಾ

    ಕೊಲಂಬೊ: ಸೂಪರ್‌-4ನಲ್ಲಿ ಬಲಿಷ್ಠ ಪಾಕಿಸ್ತಾನ ತಂಡವನ್ನ ಬಗ್ಗುಬಡಿದಿದ್ದ ಶ್ರೀಲಂಕಾ (Sri Lanka) ತಂಡ ಮಹತ್ವದ ಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಬೌಲರ್‌ಗಳ ದಾಳಿಗೆ ಮಕಾಡೆ ಮಲಗಿದೆ. ಕೇವಲ 15.2 ಓವರ್‌ಗಳಲ್ಲಿ 50 ರನ್‌ಗಳಿಗೆ ಸರ್ವಪತನ ಕಂಡಿದ್ದು, ಭಾರತಕ್ಕೆ 51 ರನ್‌ಗಳ ಗುರಿ ನೀಡಿದೆ.

    ಈ ಮೂಲಕ 39 ವರ್ಷಗಳ ನಂತರ ಅತೀ ಕಡಿಮೆ ಮೊತ್ತಕ್ಕೆ ಲಂಕಾ ಆಲೌಟ್‌ ಆದ ಅಪಖ್ಯಾತಿ ಪಡೆದಿದೆ. 1984ರ ಏಷ್ಯಾಕಪ್‌ ಉದ್ಘಾಟನಾ ಆವೃತ್ತಿಯಲ್ಲಿ ಭಾರತದ ವಿರುದ್ಧ 41 ಓವರ್‌ಗಳಲ್ಲಿ ಕೇವಲ 96 ರನ್‌ಗಳಿಗೆ ಆಲೌಟ್‌ ಆಗಿತ್ತು. ಆ ನಂತರ 1986 ರಲ್ಲಿ ಪಾಕಿಸ್ತಾನದ ವಿರುದ್ಧ 33.5 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್‌ ಆಗಿತ್ತು. ಇದೀಗ ಭಾರತದ ವಿರುದ್ಧ 50 ರನ್‌ಗಳಿಗೆ ಆಲೌಟ್‌ ಆಗಿದ್ದು, ಏಷ್ಯಾಕಪ್‌ ಇತಿಹಾಸದಲ್ಲೇ (Asia Cup History) ಅತಿ ಕಡಿಮೆ ರನ್‌ ದಾಖಲಿಸಿ ಬೇಡದ ದಾಖಲೆಯೊಂದನ್ನ ಹೆಗಲಿಗೇರಿಸಿಕೊಂಡಿದೆ.

    ಟಾಸ್‌ ಗೆದ್ದು ಟೀಂ ಇಂಡಿಯಾಕ್ಕೆ ಪ್ರಬಲ ಪೈಪೋಟಿ ನೀಡಲು‌ ಕಣಕ್ಕಿಳಿದಿದ್ದ ಲಂಕಾ ತವರಿನಲ್ಲಿ ತೀವ್ರ ಮುಖಭಂಗ ಅನುಭವಿಸಿದೆ. ಆರಂಭಿಕರಾಗಿ ಕಣಕ್ಕಿಳಿದ ಕುಶಲ್‌ ಪೆರೇರ ಮೊದಲ ಓವರ್‌ನಲ್ಲೇ ಜಸ್ಪ್ರೀತ್‌ ಬುಮ್ರಾಗೆ (Jasprit Bumrah) ವಿಕೆಟ್‌ ಒಪ್ಪಿಸಿದರು. ಈ ಬೆನ್ನಲ್ಲೇ ಮಾರಕ ದಾಳಿ ನಡೆಸಿದ ಮೊಹಮ್ಮದ್‌ ಸಿರಾಜ್‌ (Mohammed Siraj) 4ನೇ ಓವರ್‌ನಲ್ಲಿ ಕೇವಲ ನಾಲ್ಕು ರನ್‌ ಬಿಟ್ಟುಕೊಟ್ಟು 4 ವಿಕೆಟ್‌ ಉರುಳಿಸಿದರು. ಆ ನಂತರವೂ ದಾಳಿ ಮುಂದುವರಿಸಿದ ಸಿರಾಜ್‌ 6ನೇ ಮತ್ತು 12ನೇ ಓವರ್‌ನಲ್ಲಿ ಒಂದೊಂದು ವಿಕೆಟ್‌ ಪಡೆದರು. ಇದರಿಂದ ಲಂಕಾ ಮಕಾಡೆ ಮಲಗಿತು.

    ಉತ್ತಮ ಆರಂಭ ಪಡೆಯುವ ನಿರೀಕ್ಷೆಯಲ್ಲಿದ್ದ ಲಂಕಾ ಕೇವಲ 6 ಓವರ್‌ಗಳಲ್ಲಿ 13 ರನ್‌ಗಳಿಗೆ ಪ್ರಮುಖ 6 ವಿಕೆಟ್‌ ಗಳನ್ನ ಕಳೆದುಕೊಂಡಿತ್ತು. ಅಗ್ರ ಕ್ರಮಾಂಕದ ಬ್ಯಾಟರ್‌ಗಳಾದ ಪತುಮ್ ನಿಸ್ಸಂಕ (2 ರನ್‌), ಕುಶಲ್‌ ಮೆಂಡಿಸ್‌ (17 ರನ್), ಧನಂಜಯ ಡಿ ಸಿಲ್ವಾ (4 ರನ್‌), ದುನಿತ್ ವೆಲ್ಲಾಳ (8 ರನ್‌) ಗಳಿಸಿದ್ರೆ ಕುಶಲ್ ಪೆರೇರ, ಸಾದೀರ ಸಮರವಿಕ್ರಮ, ಚರಿತ್ ಅಸಲಂಕ, ನಾಯಕ ದಸುನ್‌ ಶನಾಕ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿಕೊಂಡರು. ಕೊನೆಯಲ್ಲಿ ಪ್ರಮೋದ್‌ ಮಧೂಶನ್‌ 1 ರನ್‌ ಗಳಿಸಿದ್ರೆ, ಮತೀಶ ಪಥಿರಣ ಶೂನ್ಯಕ್ಕೆ ಔಟಾದರು. ದುಶನ್ ಹೇಮಂತ 13 ರನ್‌ಗಳಿಸಿ ಕ್ರೀ‌ಸ್‌ನಲ್ಲಿ ಉಳಿದರು.

    ಲಂಕಾ ವಿರುದ್ಧ ಮಾರಕ ಬೌಲಿಂಗ್‌ ದಾಳಿ ನಡೆಸಿದ ಮೊಹಮ್ಮದ್‌ ಸಿರಾಜ್‌, 7 ಓವರ್‌ಗಳಲ್ಲಿ 21 ರನ್‌ ಬಿಟ್ಟುಕೊಟ್ಟು 6 ವಿಕೆಟ್‌ ಕಿತ್ತರೆ, ಹಾರ್ದಿಕ್‌ ಪಾಂಡ್ಯ (Hardik Pandya) 2.2 ಓವರ್‌ಗಳಲ್ಲಿ 3 ರನ್‌ ನೀಡಿ 3 ವಿಕೆಟ್‌ ಕಿತ್ತರು. ಜಸ್ಪ್ರೀತ್‌ ಬುಮ್ರಾ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Asia Cup 2023ː ಬಿಗಿ ಬೌಲಿಂಗ್‌ ಹಿಡಿತಕ್ಕೆ ಲಂಕಾ ಭಸ್ಮ – ಭಾರತಕ್ಕೆ 41 ರನ್‌ಗಳ ಭರ್ಜರಿ ಜಯ

    Asia Cup 2023ː ಬಿಗಿ ಬೌಲಿಂಗ್‌ ಹಿಡಿತಕ್ಕೆ ಲಂಕಾ ಭಸ್ಮ – ಭಾರತಕ್ಕೆ 41 ರನ್‌ಗಳ ಭರ್ಜರಿ ಜಯ

    ಕೊಲಂಬೊ: ಇಲ್ಲಿನ ಆರ್‌ ಪ್ರೇಮದಾಸ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯವು ಬೌಲರ್‌ಗಳ ಆಟಕ್ಕೆ ಸೀಮಿತವಾಗಿತ್ತು. ಇತ್ತಂಡಗಳಿಂದಲೂ ಸ್ಪಿನ್‌ ಬೌಲರ್‌ಗಳ ಕೈಚಳಕ ಜೋರಾಗಿತ್ತು. ಆದ್ರೆ ಚೇಸಿಂಗ್‌ನಲ್ಲಿ ಲಂಕಾ ವಿರುದ್ಧ ಬಿಗಿ ಹಿಡಿತ ಸಾಧಿಸಿದ ರೋಹಿತ್‌ ಪಡೆ 41 ರನ್‌ಗಳ ಜಯ ಸಾಧಿಸುವಲ್ಲಿ ಯಶಸ್ವಿಯಾಯಿತು.

    ರೋಹಿತ್‌ ಶರ್ಮಾ ಅರ್ಧಶತಕ ಬ್ಯಾಟಿಂಗ್‌ ನೆರವು ಹಾಗೂ ಕುಲ್ದೀಪ್‌ ಯಾದವ್‌ ಸ್ಪಿನ್‌ ಬೌಲಿಂಗ್‌ ದಾಳಿ ನೆರವಿನಿಂದ ಭಾರತ, ಶ್ರೀಲಂಕಾ ವಿರುದ್ಧ 41 ರನ್‌ಗಳ ಜಯ ಸಾಧಿಸಿದ್ದು, ಫೈನಲ್‌ ಕನಸು ಜೀವಂತವಾಗಿಸಿಕೊಂಡಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 49.1 ಓವರ್‌ಗಳಲ್ಲಿ 213 ರನ್‌ಗಳಿಗೆ ಆಲೌಟ್‌ ಆಯಿತು. 214 ರನ್‌ಗಳ ಸಾಧಾರಣ ಮೊತ್ತದ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ ಟೀಂ ಇಂಡಿಯಾ ಸ್ಪಿನರ್‌ಗಳ ದಾಳಿಗೆ ನಲುಗಿತು. 41.3 ಓವರ್‌ಗಳಲ್ಲಿ 172 ರನ್‌ಗಳಗೆ ಸರ್ವಪತನ ಕಂಡಿತು.

    ಚೇಸಿಂಗ್‌ ಆರಂಭಿಸಿದ ಲಂಕಾ ತಂಡ ಟೀಂ ಇಂಡಿಯಾ ಸ್ಪಿನ್‌ ಬೌಲಿಂಗ್‌ ದಾಳಿಗೆ ನಲುಗಿಹೋಗಿತ್ತು. 7 ಓವರ್‌ಗಳಲ್ಲಿ 26 ರನ್‌ಗಳಿಸಿ ಪ್ರಮುಖ 3 ವಿಕೆಟ್‌ಗಳನ್ನ ಕಳೆದುಕೊಂಡಿತ್ತು. 26 ಓವರ್‌ಗಳಲ್ಲಿ 104 ರನ್‌ಗಳಿಗೆ 6 ವಿಕೆಟ್‌ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ಪಾತುಮ್ ನಿಸ್ಸಾಂಕ 6 ರನ್‌, ದಿಮುತ್ ಕರುಣಾರತ್ನೆ 2 ರನ್‌, ಕುಸಲ್ ಮೆಂಡಿಸ್ 15 ರನ್‌, ಸದೀರ ಸಮರವಿಕ್ರಮ 17 ರನ್‌, ಚರಿತ್ ಅಸಲಂಕಾ 22 ರನ್‌ ಹಾಗೂ ದಸುನ್‌ ಶನಾಕ 9 ರನ್‌ಗಳಿಸಿ ವಿಕೆಟ್‌ ಕೈಚೆಲ್ಲಿದರು. ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಧನಂಜಯ ಡಿ ಸಿಲ್ವಾ ಹಾಗೂ ದುನಿತ್ ವೆಲ್ಲಲಾಗೆ ತಂಡಕ್ಕೆ ನೆರವಾದರು.

    ಧನಂಜಯ ಹಾಗೂ ದುನಿತ್‌ ಜೋಡಿ 7ನೇ ವಿಕೆಟ್‌ಗೆ 75 ಎಸೆತಗಳಲ್ಲಿ 63 ರನ್‌ಗಳ ಜೊತೆಯಾಟ ನೀಡಿತ್ತು. ಕೊನೆಯ ಹಂತ ತಲುಪುತ್ತಿದ್ದಂತೆ ಸ್ಪೋಟಕ ಆಟಕ್ಕೆ ಪ್ರಯತ್ನಿಸಿತ್ತು. ಅಷ್ಟರಲ್ಲೇ ಜಡೇಜಾ ಧನಂಜಯ್‌ ಸೆಲ್ವಾ ಆಟಕ್ಕೆ ಬ್ರೇಕ್‌ ಹಾಕಿದರು. ಸಿಲ್ವಾ 66 ಎಸೆತಗಳಲ್ಲಿ 5 ಬೌಂಡರಿಗಳೊಂದಿಗೆ 41 ರನ್‌ ಗಳಿಸಿ ಔಟಾಗುತ್ತಿದ್ದಂತೆ ಮಹೀಶ್‌ ತೀಕ್ಷಣ, ಕಸುನ್‌ ರಜಿತ ಹಾಗೂ ಮಹೇಶ್‌ ಪಥಿರಣ ವಿಕೆಟ್‌ ಒಪ್ಪಿಸಿದ್ರು. ಕೊನೆಯವರೆಗೂ ಹೋರಾಟ ನಡೆಸಿದ ದುನಿತ್‌ 46 ಎಸೆತಗಳಲ್ಲಿ 42 ರನ್‌ ಗಳಿಸಿ ಅಜೇಯರಾಗುಳಿದರು. ಅಂತಿಮವಾಗಿ ಶ್ರೀಲಂಕಾ 41.3 ಓವರ್‌ಗಳಲ್ಲಿ 172 ರನ್‌ಗಳಿಗೆ ಸರ್ವಪತನ ಕಂಡಿತು.

    ಟೀಂ ಇಂಡಿಯಾ ವಿರುದ್ಧ ಕುಲ್ದೀಪ್‌ ನಾಲ್ಕು ವಿಕೆಟ್‌ ಕಿತ್ತರೆ, ಜಸ್ಪ್ರೀತ್‌ ಬುಮ್ರಾ ಹಾಗೂ ರವೀಂದ್ರ ಜಡೇಜಾ ತಲಾ 2 ವಿಕೆಟ್‌ ಹಾಗೂ ಮೊಹಮ್ಮದ್‌ ಸಿರಾಜ್‌, ಹಾರ್ದಿಕ್‌ ಪಾಂಡ್ಯ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಆರಂಭಿಕರಾದ ರೋಹಿತ್‌ ಶರ್ಮಾ ಹಾಗೂ ಶುಭಮನ್‌ ಗಿಲ್‌ ಜೋಡಿ 15.1 ಓವರ್‌ಗಳಲ್ಲಿ 91 ರನ್‌ಗಳ ಜೊತೆಯಾಟ ನೀಡಿತು. ಶುಭಮನ್‌ ಗಿಲ್‌ 19‌ ರನ್‌ ಗಳಿಸಿ ಔಟಾದರು. ಈ ಬೆನ್ನಲ್ಲೇ ಪಾಕ್‌ ವಿರುದ್ಧ ಶತಕ ಸಿಡಿಸಿ ಮೆರೆದಾಡಿದ್ದ ಕೊಹ್ಲಿ ಕೇವಲ 3 ರನ್‌ಗಳಿಗೆ ಔಟಾದರು. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್‌ ಕಿಶನ್‌ 61 ಎಸೆತಗಳಲ್ಲಿ 33 ರನ್ ಹಾಗೂ ಕೆ.ಎಲ್‌ ರಾಹುಲ್‌ 44 ಎಸೆತಗಳಲ್ಲಿ 39 ರನ್‌ ಬಾರಿಸುವ ಮೂಲಕ ಛೇರಿಕೆ ನೀಡಿದ್ದರು. ಇವರಿಬ್ಬರ ವಿಕೆಟ್‌ ಕಳೆದುಕೊಳ್ಳುತ್ತಿದ್ದಂತೆ ಟೀಂ ಇಂಡಿಯಾ ಒಂದೊಂದೇ ವಿಕೆಟ್‌ ಕಳೆದುಕೊಂಡಿತು. ಕೊನೆಯಲ್ಲಿ ಅಕ್ಷರ್‌ ಪಟೇಲ್‌ 26 ರನ್‌ಗಳ ನೆರವಿನಿಂದ ಟೀಂ ಇಂಡಿಯಾ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಮೊದಲ 15 ಓವರ್‌ಗಳಲ್ಲಿ 91 ರನ್‌ ಗಳಿಸಿದ್ದ ಭಾರತ 25 ಓವರ್‌ಗಳಲ್ಲಿ 128 ರನ್‌ ಗಳಿಸಿತ್ತು. ಬಳಿಕ ನಿಧಾನ ಗತಿ ಬ್ಯಾಟಿಂಗ್‌ ಆರಂಭಿಸಿದ ಟೀಂ ಇಂಡಿಯಾ 43 ಓವರ್‌ಗಳಲ್ಲಿ 186 ರನ್‌ಗಳಿಗೆ 9 ವಿಕೆಟ್‌ ಕಳೆದುಕೊಂಡಿತ್ತು. ಇದರಿಂದ 200 ರನ್‌ ಗಳಿಸುವುದೂ ಕಷ್ಟವಾಗಿತ್ತು. ಈ ವೇಳೆ ಅಕ್ಷರ್‌ ಪಟೇಲ್‌ ಜವಾಬ್ದಾರಿಯುತ ಆಟದಿಂದ 200ರ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಶ್ರೀಲಂಕಾ ಪರ ದುನಿತ್ ವೆಲ್ಲಲಾಗೆ 10 ಓವರ್‌ಗಳಲ್ಲಿ 40 ರನ್‌ ಬಿಟ್ಟುಕೊಟ್ಟು 5 ವಿಕೆಟ್‌ ಕಿತ್ತರೆ, ಚರಿತ್‌ ಹಸಲಂಕಾ 9 ಓವರ್‌ಗಳಲ್ಲಿ ಕೇವಲ 18 ರನ್‌ ಬಿಟ್ಟುಕೊಟ್ಟು 4 ವಿಕೆಟ್‌ ಉರುಳಿಸಿದರು. ಮಹೀಶ್‌ ತೀಕ್ಷಣ ಒಂದು ವಿಕೆಟ್‌ ಪಡೆದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • AsiaCup 2023: ಬಾಂಗ್ಲಾಕ್ಕೆ ಲಗಾಮು ಹಾಕಿದ ಲಂಕಾ – 5 ವಿಕೆಟ್‌ಗಳ ಜಯದೊಂದಿಗೆ ಶುಭಾರಂಭ

    AsiaCup 2023: ಬಾಂಗ್ಲಾಕ್ಕೆ ಲಗಾಮು ಹಾಕಿದ ಲಂಕಾ – 5 ವಿಕೆಟ್‌ಗಳ ಜಯದೊಂದಿಗೆ ಶುಭಾರಂಭ

    ಕೊಲಂಬೊ: ಬೌಲಿಂಗ್‌ನಲ್ಲಿ ಉತ್ತಮ ಹಿಡಿತ ಸಾಧಿಸಿದ್ದ ಶ್ರೀಲಂಕಾ (Sri Lanka) ತಂಡ ಮಂದಗತಿಯ ಬ್ಯಾಟಿಂಗ್‌ ಹೊರತಾಗಿಯೂ ಬಾಂಗ್ಲಾದೇಶದ (Bangladesh) ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ಏಕದಿನ ಏಷ್ಯಾಕಪ್‌ (AsiaCup) ಟೂರ್ನಿಯಲ್ಲಿ ಶುಭಾರಂಭ ಕಂಡಿದೆ.

    ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ತಂಡ 42.4 ಓವರ್‌ಗಳಲ್ಲಿ 164 ರನ್‌ಗಳಿಗೆ ಸರ್ವಪತನ ಕಂಡಿತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಲಂಕಾ 39 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 165 ರನ್‌ ಗಳಿಸಿ ಗೆಲುವು ಸಾಧಿಸಿತು. ಇದನ್ನೂ ಓದಿ: 5,966 ಕೋಟಿ ರೂ.ಗೆ BBCI ಮಾಧ್ಯಮ ಹಕ್ಕು ಪಡೆದ Viacom18

    ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಲಂಕಾ ತಂಡಕ್ಕೂ ಆರಂಭಿಕ ಆಘಾತ ಎದುರಾಗಿತ್ತು. ಆರಂಭಿಕರಾಗಿ ಕಣಕ್ಕಿಳಿದ ಪಾತುಂ ನಿಸ್ಸಾಂಕ (14 ರನ್‌) ಹಾಗೂ ದಿಮುತ್ ಕರುಣಾರತ್ನೆ (1 ರನ್‌) ಜೋಡಿ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಈ ಬೆನ್ನಲ್ಲೇ ಕುಸಲ್‌ ಮೆಂಡೀಸ್‌ ಸಹ 5 ರನ್‌ಗಳಿಗೆ ವಿಕೆಟ್‌ ಕೈಚೆಲ್ಲಿ ಪೆವಿಲಿಯನ್‌ ಸೇರಿಕೊಂಡರು. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಜೊತೆಗೂಡಿದ ಸದೀರ ಸಮರವಿಕ್ರಮ, ಚರಿತ್ ಅಸಲಂಕ ಶತಕದ ಜೊತೆಯಾಟದಿಂದ ಗೆಲುವಿನ ಹಾದಿಯತ್ತ ಸಾಗಿತು.

    4ನೇ ವಿಕೆಟ್‌ಗೆ ಈ ಜೋಡಿ 119 ರನ್‌ಗಳ ಜೊತೆಯಾಟ ನೀಡಿತು. ಸಮರವಿಕ್ರಮ 77 ಎಸೆತಗಳಲ್ಲಿ 56 ರನ್‌ ಗಳಿಸಿದ್ರೆ, ಅಸಲಂಕ 92 ಎಸೆತಗಳಲ್ಲಿ ಅಜೇಯ 62 ರನ್‌ (5 ಬೌಂಡರಿ, 1 ಸಿಕ್ಸರ್‌) ಸಿಡಿಸಿ ಮಿಂಚಿದರು. ಕೊನೆಯಲ್ಲಿ ನಾಯಕ ದಸುನ್‌ ಶನಾಕ (Dasun Shanaka) 21 ಎಸೆತಗಳಲ್ಲಿ 14 ರನ್‌ ಗಳಿಸಿ ಜಯದ ದಡ ಮುಟ್ಟಿಸಿದರು.

    ಬಾಂಗ್ಲಾ ಪರ ನಾಯಕ ಶಕೀಬ್ ಅಲ್ ಹಸನ್ 2 ವಿಕೆಟ್‌ ಕಿತ್ತರೆ, ತಸ್ಕಿನ್‌ ಅಹ್ಮದ್‌, ಶೋರಿಫುಲ್ ಇಸ್ಲಾಂ ಹಾಗೂ ಮೆಹದಿ ಹಸನ್‌ (Shakib Al Hasan) ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: ಭಾರತೀಯರು ಎಲ್ಲಿ ಬೇಕಾದ್ರೂ ಜಯಿಸ್ತಾರೆ ಅನ್ನೋದಕ್ಕೆ ನೀವು ಮಾದರಿ – ಪ್ರಜ್ಞಾನಂದ ಕುಟುಂಬ ಭೇಟಿ ಮಾಡಿದ ಮೋದಿ

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ತಂಡ ಲಂಕಾ ಬೌಲರ್‌ಗಳ ದಾಳಿಗೆ ತತ್ತರಿಸಿತು. 3ನೇ ಕ್ರಮಾಂಕದಲ್ಲಿ ಬಂದ ನಜ್ಮುಲ್ ಹೊಸೈನ್ ಶಾಂತೋ 122 ಎಸೆತಗಳಲ್ಲಿ 89 ರನ್‌ (7 ಬೌಂಡರಿ), ತೌಹಿದ್ ಹೃದಯೊಯ್ 20 ರನ್‌ ಗಳಿಸಿದರು. ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಕೈಚೆಲ್ಲಿದ ಪರಿಣಾಮ ತಂಡಕ್ಕೆ ಸೋಲಾಯಿತು.

    ತೀಕ್ಷ್ಣ ಬೌಲಿಂಗ್‌ ಬಾಂಗ್ಲಾ ತತ್ತರ: ಮೊದಲು ಫೀಲ್ಟಿಂಗ್‌ ಮಾಡುವ ಅವಕಾಶ ಪಡೆದ ಲಂಕಾ ಪರ ಬೌಲರ್‌ಗಳು ಉತ್ತಮ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದರು. ಮಾರಕ ಬೌಲಿಂಗ್‌ ದಾಳಿ ನಡೆಸಿದ ಮಥೀಶ ಪತಿರಣ 7.4 ಓವರ್‌ಗಳಲ್ಲಿ 32 ರನ್‌ ಬಿಟ್ಟುಕೊಟ್ಟು 4 ವಿಕೆಟ್‌ ಕಿತ್ತರೆ, ಮಹೀಶ್‌ ತೀಕ್ಷಣ 2 ವಿಕೆಟ್‌, ಧನಂಜಯ ಡಿ ಸಿಲ್ವಾ, ದುನಿತ್‌ ಹಾಗೂ ದಸುನ್‌ ಶನಾಕ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂಕಡ್ ರನೌಟ್ ಮಾಡಿದ ಶಮಿ – ಮನವಿ ವಾಪಸ್ ಪಡೆದ ರೋಹಿತ್ ನಡೆಗೆ ಭಾರೀ ಮೆಚ್ಚುಗೆ

    ಮಂಕಡ್ ರನೌಟ್ ಮಾಡಿದ ಶಮಿ – ಮನವಿ ವಾಪಸ್ ಪಡೆದ ರೋಹಿತ್ ನಡೆಗೆ ಭಾರೀ ಮೆಚ್ಚುಗೆ

    ಗುವಾಹಟಿ: ಭಾರತ (India) ಹಾಗೂ ಶ್ರೀಲಂಕಾ (Sri Lanka) ನಡುವಿನ ಮೊದಲ ಏಕದಿನ ಪಂದ್ಯದಲ್ಲಿ (ODI) 98 ರನ್ ಗಳಿಸಿದ್ದ ಶ್ರೀಲಂಕಾ ನಾಯಕ ದಾಸುನ್ ಶನಕ (Dasun Shanaka) ಅವರನ್ನು ಮಂಕಡ್ ರನೌಟ್ ಮೂಲಕ ವೇಗಿ ಮೊಹಮ್ಮದ್ ಶಮಿ (Mohammed Shami) ಔಟ್ ಮಾಡಿದರು. ಆ ಬಳಿಕ ನಾಯಕ ರೋಹಿತ್ ಶರ್ಮಾ (Rohit Sharma), ಶಮಿ ಬಳಿ ಚರ್ಚಿಸಿ ಮೂರನೇ ಅಂಪೈರ್ ಮನವಿಯನ್ನು ವಾಪಸ್ ಪಡೆದು ಕ್ರೀಡಾ ಸ್ಫೂರ್ತಿ ಮರೆದಿದ್ದು, ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.

    ಭಾರತ ನೀಡದ 374 ರನ್‍ಗಳ ಬೃಹತ್ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡದ ಪರ ನಾಯಕ ದಾಸುನ್ ಶನಕ ಕೆಚ್ಚೆದೆಯ ಹೋರಾಟ ನಡೆಸಿದರು. ಭರ್ಜರಿ ಬ್ಯಾಟಿಂಗ್ ಮೂಲಕ ಲಂಕಾಗೆ ಗೆಲುವಿನ ಆಸೆ ಮೂಡಿಸಿದ ಶನಕ ಕೊನೆಯ ಓವರ್‌ನಲ್ಲಿ ರನೌಟ್‍ನಿಂದ ಬಚಾವ್ ಆಗಿ ಶತಕ ಪೂರೈಸುವಂತಹ ಘಟನೆಯೊಂದು ಮೊದಲ ಏಕದಿನ ಪಂದ್ಯದ ಕೊನೆಯ ಕ್ಷಣದಲ್ಲಿ ಕಾಣಸಿಕ್ಕಿತು.

    ಲಂಕಾ ಸೋಲಿನ ಹೊಸ್ತಿಲಲ್ಲಿತ್ತು. ಶನಕ ಇನ್ನೇನು ಶತಕ ಸಿಡಿಸಿ ಸೋಲಿನ ನಡುವೆಯೂ ಹೀರೋ ಆಗುವ ಎಲ್ಲಾ ಲಕ್ಷಣಗಳಿತ್ತು. ಆದರೆ ಕೊನೆಯ ಓವರ್‌ನ 4 ಎಸೆತದಲ್ಲಿ ಮೊಹಮ್ಮದ್ ಶಮಿ ನಾನ್‍ಸ್ಟ್ರೈಕ್‍ನಲ್ಲಿದ್ದ ಶನಕರನ್ನು ಮಂಕಡ್ ಮೂಲಕ ರನೌಟ್ ಬಲೆಗೆ ಬೀಳಿಸಿದರು. ಈ ತೀರ್ಪನ್ನು ಅಂಪೈರ್ ಮೂರನೇ ಅಂಪೈರ್‌ಗೆ ವರ್ಗಾಹಿಸಿದರು. ಇದು ಔಟ್ ಕೂಡ ಆಗಿತ್ತು. ಆದರೆ ಕೂಡಲೇ ರೋಹಿತ್ ಶರ್ಮಾ, ಶಮಿ ಬಳಿ ಬಂದು ಮೂರನೇ ಅಂಪೈರ್ ಮನವಿಯನ್ನು ವಾಪಸ್ ಪಡೆಯುವ ಕುರಿತು ಚರ್ಚಿಸಿ ವಾಪಸ್ ಪಡೆದರು. ಈ ಮೂಲಕ ಶತಕ ವಂಚಿತರಾಗುತ್ತಿದ್ದ ಶನಕಗೆ ಜೀವದಾನ ನೀಡಿ ಶತಕ ಪೂರೈಸಲು ಶಮಿ ಹಾಗೂ ರೋಹಿತ್ ಅವಕಾಶ ಮಾಡಿಕೊಟ್ಟರು. ಇದನ್ನೂ ಓದಿ: ಬೆಂಕಿ ಎಸೆತ ಎಸೆದ ಉಮ್ರಾನ್ ಮಲಿಕ್ – ಗಂಟೆಗೆ 156 ಕಿ.ಮೀ ವೇಗದಲ್ಲಿ ಬೌಲಿಂಗ್ ದಾಖಲೆ

    ಈ ನಡೆ ಕಂಡ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದರು. ಪಂದ್ಯದ ಬಳಿಕ ಈ ಕುರಿತು ಮಾತನಾಡಿದ ರೋಹಿತ್, ಶಮಿ ಈ ರೀತಿ ಔಟ್ ಮಾಡುತ್ತಾರೆ ಅಂತ ಅಂದುಕೊಂಡಿರಲಿಲ್ಲ. 98 ರನ್‍ಗಳಿಸಿದ್ದ ಶನಕರನ್ನು ಈ ರೀತಿ ಔಟ್ ಮಾಡಲು ನಾವು ಒಪ್ಪದೆ ಬ್ಯಾಟಿಂಗ್ ಮುಂದುವರಿಸಲು ಸೂಚಿಸಿದೆವು ಎಂದರು. ಇದನ್ನೂ ಓದಿ: ಅಗಲಿದ ಮುದ್ದು ನಾಯಿಗೆ 47ನೇ ಅರ್ಧಶತಕವನ್ನು ಅರ್ಪಿಸಿದ ರೋಹಿತ್ ಶರ್ಮಾ

    ಮಂಕಡ್‌ ಔಟ್:
    ನಾನ್‍ಸ್ಟ್ರೈಕ್‍ನಲ್ಲಿದ್ದ ಆಟಗಾರ ಬೌಲರ್ ಬಾಲ್ ಎಸೆಯುವ ಮುನ್ನ ಕ್ರಿಸ್‌ ಬಿಟ್ಟರೆ ಅವನನ್ನು ಔಟ್ ಮಾಡುವ ಅವಕಾಶವನ್ನು ನೀಡಲಾಗಿದೆ. ಮೊದಲು ಇದನ್ನು ಕ್ರೀಡಾ ಸ್ಫೂರ್ತಿಗೆ ವಿರುದ್ಧ ಎಂದು ಹೇಳಲಾಗುತ್ತಿತ್ತು. ಇದೀಗ ಇದನ್ನು ರನೌಟ್‌ ಎಂದೇ ಪರಿಗಣಿಸಲಾಗುವುದಾಗಿ ಐಸಿಸಿ ನಿಯಮ ಸ್ಪಷ್ಟಪಡಿಸಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಂದಿನಿಂದ ಹೈವೋಲ್ಟೇಜ್ ಏಕದಿನ ಸರಣಿ – ಟೀಂ ಇಂಡಿಯಾ ವಿಶ್ವಕಪ್ ಅಭಿಯಾನ ಶುರು

    ಇಂದಿನಿಂದ ಹೈವೋಲ್ಟೇಜ್ ಏಕದಿನ ಸರಣಿ – ಟೀಂ ಇಂಡಿಯಾ ವಿಶ್ವಕಪ್ ಅಭಿಯಾನ ಶುರು

    ದಿಸ್ಪುರ್: ಶ್ರೀಲಂಕಾ (SriLanka) ವಿರುದ್ಧದ ಟಿ20 ಸರಣಿಯನ್ನು (T20 Series) 2-1 ಅಂತರದಿಂದ ಗೆದ್ದು ಬೀಗಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿಗಾಗಿ ಸಜ್ಜಾಗಿದ್ದು, ಜನವರಿ 10 ರಿಂದ ಮೂರು ಪಂದ್ಯಗಳ ಈ ಸರಣಿ ಆರಂಭವಾಗಲಿದೆ.

    ಲಂಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದ ಭಾರತ ತಂಡದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ (Virat Kohli), ರೋಹಿತ್ ಶರ್ಮಾ (Rohit Sharma), ಕೆ.ಎಲ್ ರಾಹುಲ್ (KL Rahul) ಸರಣಿಯ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಆದರೆ ಗಾಯಾಳುವಾಗಿದ್ದ ಟೀಂ ಇಂಡಿಯಾ (Team India) ವೇಗಿ ಜಸ್ಪ್ರೀತ್‌ ಬುಮ್ರಾ ಅವರನ್ನು ಲಂಕಾ ಏಕದಿನ ಸರಣಿಯಿಂದಲೂ ಹೊರಗಿಡಲಾಗಿದೆ. ಅಲ್ಲದೇ ಮುಂದೆ ನಡೆಯುವ ಆಸ್ಟ್ರೇಲಿಯಾ ಸರಣಿಯಿಂದಲೂ ಔಟಾಗುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

    ಈ ಏಕದಿನ ಸರಣಿಯೊಂದಿಗೆ ಟೀಂ ಇಂಡಿಯಾದ ವಿಶ್ವಕಪ್ (ODI WorldCup) ಏಕದಿನದ ಅಭಿಯಾನ ಕೂಡ ಶುರುವಾಗಲಿದೆ. ಇದೇ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಪೂರ್ವಭಾವಿಯಾಗಿ ಭಾರತ ತಂಡವು ಒಟ್ಟು 35 ಪಂದ್ಯಗಳನ್ನು ಆಡಲಿದೆ. ಇದರ ಮೊದಲ ಭಾಗವಾಗಿ ಇದೀಗ ಲಂಕಾ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ. ಹೀಗಾಗಿಯೇ 2023ರ ಮೊದಲ ಏಕದಿನ ಸರಣಿಯು ಟೀಂ ಇಂಡಿಯಾ ಪಾಲಿಗೆ ಮಹತ್ವದೆನಿಸಿಕೊಂಡಿದೆ. ಇದನ್ನೂ ಓದಿ: 9 ಸಿಕ್ಸರ್‌, 7 ಬೌಂಡರಿ – 45 ಎಸೆತಗಳಲ್ಲೇ ಸ್ಫೋಟಕ ಶತಕ ಸಿಡಿಸಿದ ದಾಖಲೆ ವೀರ ಸೂರ್ಯ

    ರೋಹಿತ್ ಶರ್ಮಾ ಏಕದಿನ ಸರಣಿಯನ್ನು ಮುನ್ನಡೆಸಲಿದ್ದು, ಟಿ20 ಏಕದಿನ ನಾಯಕ ಹಾರ್ದಿಕ್ ಪಾಂಡ್ಯ ಉಪನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಇತ್ತ ಹಿರಿಯ ಆಟಗಾರರ ಕಂಬ್ಯಾಕ್ ಹಿನ್ನೆಲೆಯಲ್ಲಿ ಟಿ20 ತಂಡದಲ್ಲಿದ್ದ ಕೆಲ ಆಟಗಾರರು ಏಕದಿನ ಸರಣಿಗೆ ಆಯ್ಕೆಯಾಗಿಲ್ಲ. ಇದನ್ನೂ ಓದಿ: ಸೂರ್ಯನ ಸಿಡಿಲಬ್ಬರದ ಶತಕಕ್ಕೆ ಲಂಕಾ ಭಸ್ಮ – ಭಾರತಕ್ಕೆ ಟಿ20 ಸರಣಿ ಕಿರೀಟ

    ಈ ಬಳಗದಲ್ಲಿ ರೋಹಿತ್ ಶರ್ಮಾ, ಶುಭ್‌ಮನ್ ಗಿಲ್, ಕೆ.ಎಲ್ ರಾಹುಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ ಹಾಗೂ ಅರ್ಷ್‌ದೀಪ್ ಸಿಂಗ್ ಆಯ್ಕೆಯಾಗಿದ್ದಾರೆ. ಒಟ್ಟಿನಲ್ಲಿ ಈ ಏಕದಿನ ಸರಣಿ ಗೆಲವು ಕೂಡ ವಿಶ್ವಕಪ್ ಮೇಲೆ ಭಾರೀ ಪರಿಣಾಮ ಬೀರಲಿದ್ದು, ರೋಹಿತ್ ಪಡೆಗೆ ಕಠಿಣ ಪರೀಕ್ಷೆಯಾಗಿದೆ.

    ಏಕದಿನ ಸರಣಿ ವೇಳಾಪಟ್ಟಿ:

    • ಜನವರಿ 10: ಮೊದಲ ಏಕದಿನ ಪಂದ್ಯ (ಸ್ಥಳ- ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ)
    • ಜನವರಿ 12: 2ನೇ ಏಕದಿನ ಪಂದ್ಯ (ಸ್ಥಳ- ಈಡನ್ ಗಾರ್ಡನ್ಸ್, ಕೋಲ್ಕತ್ತಾ)
    • ಜನವರಿ 15: 3ನೇ ಏಕದಿನ ಪಂದ್ಯ (ಗ್ರೀನ್‌ಫೀಲ್ಡ್ ಸ್ಟೇಡಿಯಂ, ತಿರುವನಂತಪುರಂ)

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k