Tag: Dattanna
-

ನನ್ನ ಜೀವನದಲ್ಲಿ ಇದೊಂದು ಸಿನಿಮಾ ಕಪ್ಪು ಚುಕ್ಕೆ: ಹಿರಿಯ ನಟ ದತ್ತಣ್ಣ
ಕಿರುತೆರೆಯ ಜನಪ್ರಿಯ Weekend With Ramesh ಶೋನಲ್ಲಿ ಹಿರಿಯ ನಟ ದತ್ತಣ್ಣ ಅತಿಥಿಯಾಗಿ ಆಗಮಿಸಿದ್ದಾರೆ. ಬಾಲ್ಯ, ಶಿಕ್ಷಣ, ಸೇನೆಯಲ್ಲಿ ಸೇವೆ, ರಂಗಭೂಮಿ, ಸಿನಿಮಾ ಜರ್ನಿ ಹೀಗೆ ಸಾಕಷ್ಟು ವಿಚಾರಗಳನ್ನ ನಿರೂಪಕ-ನಟ ರಮೇಶ್ ಅರವಿಂದ್ ಜೊತೆ ಹಂಚಿಕೊಂಡಿದ್ದಾರೆ. ನನ್ನ ಸಿನಿಮಾ ಕೆರಿಯರ್ನಲ್ಲಿ ಈ ಚಿತ್ರವೊಂದು ಕಪ್ಪು ಚುಕ್ಕೆ ಎಂದು ನಿರ್ದೇಶಕರೊಬ್ಬರನ್ನು ಬಾಯಿ ಬಂದಂತೆ ಬೈದಿದರಂತೆ. ಈ ಬಗ್ಗೆ ಕಾರ್ಯಕ್ರಮದಲ್ಲಿ ದತ್ತಣ್ಣ ಮುಕ್ತವಾಗಿ ಮಾತನಾಡಿದ್ದಾರೆ. ಇದನ್ನೂ ಓದಿ:ಪತ್ನಿ, ಪುತ್ರನ ಜೊತೆ ವಿನೋದ್ ರಾಜ್? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನಿರ್ದೇಶಕ
ಹಿರಿಯ ನಟ ದತ್ತಣ್ಣ ಅವರು ಕನ್ನಡ, ಹಿಂದಿ, ತೆಲುಗು, ಮತ್ತು ಮಲಯಾಳಂ ಸೇರಿದಂತೆ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬಗೆ ಬಗೆಯ ಪಾತ್ರಗಳ ಮೂಲಕ ರಂಜಿಸಿದ್ದಾರೆ. ಇದೀಗ ವೀಕೆಂಡ್ ಟೆಂಟ್ನಲ್ಲಿ ‘ನೀರ್ದೋಸೆ’ (Neerdose Film) ಚಿತ್ರದ ಬಗ್ಗೆ ದತ್ತಣ್ಣ ಮೌನ ಮುರಿದಿದ್ದಾರೆ. ನೀರ್ದೋಸೆಯಲ್ಲಿ ದತ್ತಾತ್ರೆಯ ಹೆಸರಿನ ಪೋಲಿ ತಾತನ ಪಾತ್ರದಲ್ಲಿ ನಟಿಸಿದ್ದಾರೆ. ನಿರ್ದೇಶಕ ವಿಜಯ ಪ್ರಸಾದ್, ಆ ಕತೆಯನ್ನು ಹೇಳಿದಾಗ ಕತೆ ಚೆನ್ನಾಗಿದೆ ಆದರೆ ಸಂಭಾಷಣೆ ಚೆನ್ನಾಗಿಲ್ಲ, ಜಾಸ್ತಿ ಪೋಲಿ ಸಂಭಾಷಣೆಗಳಾದವು ಬೇಡ ಎಂದಿದ್ದರಂತೆ. ಈವರೆಗೆ ಬಹಳ ಗಂಭೀರ ಪಾತ್ರಗಳನ್ನು ಮಾಡಿದ್ದೀರಿ ಈಗ ಈ ಪಾತ್ರ ಮಾಡಿಬಿಡಿ ಎಂದು ವಿಜಯ ಪ್ರಸಾದ್ (Vijay Prasad) ಮನವಿ ಮಾಡಿದ್ದರು. ಅವರ ಪ್ರೀತಿಗೆ ಕಟ್ಟುಬಿದ್ದು ಸಿನಿಮಾದಲ್ಲಿ ದತ್ತಣ್ಣ ನಟಿಸಿದರು.
ಬಳಿಕ ಚಿತ್ರದ ಟ್ರೈಲರ್ ನೋಡಿ ಉರಿದು ಹೋದ ನಟ ದತ್ತಣ್ಣ, ನಿರ್ದೇಶಕ ವಿಜಯಪ್ರಸಾದ್ ಅವರಿಗೆ ಫೋನ್ ಮಾಡಿ ಬಾಯಿಗೆ ಬಂದಂತೆ ಬೈದಿದರಂತೆ. ನನ್ನ ಜೀವನದಲ್ಲಿ ಇದೊಂದು ಸಿನಿಮಾ ಕಪ್ಪು ಚುಕ್ಕೆ ಎಂದು ಬಿಟ್ಟರಂತೆ. ವಿಜಯ ಪ್ರಸಾದ್ ಜೊತೆ ಮಾತು ನಿಲ್ಲಿಸಿಬಿಟ್ಟಿದ್ದರಂತೆ. ಮುಂದೆ ಚಿತ್ರ ರಿಲೀಸ್ ವೇಳೆಗೆ ವಿಜಯ್ ಪ್ರಸಾದ್ ಮನವಿಯ ಮೇರೆಗೆ Neerdose ಸಿನಿಮಾವನ್ನ ದತ್ತಣ್ಣ ನೋಡಿದ ಬಳಿಕ ಅವರ ಕೋಪ ಇಳಿಯಿತಂತೆ.
ಕಾರ್ಯಕ್ರಮಕ್ಕೆ ಆಗಮಿಸಿದ್ದ ನಿರ್ದೇಶಕ ವಿಜಯ ಪ್ರಸಾದ್, ದತ್ತಣ್ಣ ಬಗ್ಗೆ ಮಾತನಾಡುತ್ತಾ, ಎಲ್ಲರೊಟ್ಟಿಗೂ ಬೆರೆಯುವ ದತ್ತಣ್ಣ ಅವರು, ಶೂಟಿಂಗ್ ಮುಗಿದ ಮೇಲೆ ನಮ್ಮೊಟ್ಟಿಗೆ ಕೂತು ಗುಂಡು ಹಾಕುತ್ತಾ ನಮ್ಮೊಡನೆ ಬೆರೆತುಬಿಡುತ್ತಾರೆ. ದತ್ತಣ್ಣ ಬ್ಯಾಗ್ ಇಲ್ಲದೆ ಎಲ್ಲಿಗೂ ಬರೊಲ್ಲ ಗುಂಡಿನ ವ್ಯವಸ್ಥೆ ಇಲ್ಲದೆ ಎಲ್ಲಿಯೂ ಉಳಿಯುವುದಿಲ್ಲ ಎಂದು ಜೋಕ್ (Joke) ಮಾಡಿದರು.
-

ತೋತಾಪುರಿಗೆ 100 ಡೇಸ್ ಶೂಟಿಂಗ್!
ಬೆಂಗಳೂರು: ಕೆ.ಎ.ಸುರೇಶ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬಹು ನಿರೀಕ್ಷಿತ ಸಿನಿಮಾ `ತೋತಾಪುರಿ’. ನೀರ್ ದೋಸೆ ಚಿತ್ರದ ಯಶಸ್ವೀ ತಂಡ ಮತ್ತೊಮ್ಮೆ `ತೋತಾಪುರಿ’ಯ ಮೂಲಕ ಒಂದಾಗಿರೋದು ವಿಶೇಷ. ನಿರ್ದೇಶಕ ವಿಜಯಪ್ರಸಾದ್ ಅವರ ಈ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್, ದತ್ತಣ್ಣ, ಸುಮನ್ ರಂಗನಾಥ್ ಮತ್ತೆ ಒಂದಾಗಿದ್ದಾರೆ. ಇದಲ್ಲದೆ ಉದ್ಯಮಿಯ ಪಾತ್ರದಲ್ಲಿ ಡಾಲಿ ಧನಂಜಯ ಮತ್ತು ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸುತಿದ್ದಾರೆ.
ನಿರ್ಮಾಪಕ ಕೆ ಎ ಸುರೇಶ್ ಅವರ ಹಿಂದಿನ ಸಿನಿಮಾಗಳಿಗಿಂತ ಹೆಚ್ಚಿನ ಭರವಸೆ ಈ ಚಿತ್ರ ಮೂಡಿಸಿದೆ. ಮಾರುಕಟ್ಟೆಯಲ್ಲಿ ಈ ತಂಡದ ಬಗ್ಗೆಯೇ ದೊಡ್ಡ ನಿರೀಕ್ಷೆ ಉದ್ಭವವಾಗಿದೆ. ಕನ್ನಡ ಚಿತ್ರ ರಂಗದಲ್ಲಿ ಯಶಸ್ಸನ್ನು ಬೆನ್ನಿಗೆ ಕಟ್ಟಿಕೊಂಡಿರುವ ನಿರ್ಮಾಪಕ ಕೆ ಎ ಸುರೇಶ್ `ತೋತಾಪುರಿ’. ಚಿತ್ರದಲ್ಲಿ ಮೊದಲ ಬಾರಿಗೆ ಡಾಲಿ ಧನಂಜಯ್ ಜಗ್ಗೇಶ್ ಜೊತೆಯಾಗಿದ್ದಾರೆ. ನಾಯಕಿ ಅದಿತಿ ಪ್ರಭುದೇವ ಮುಸ್ಲಿಂ ಹುಡುಗಿ, ಸುಮನ್ ರಂಗನಾಥ್ ಕ್ರಿಶ್ಚಿಯನ್ ಹೆಣ್ಣುಮಗಳಾಗಿ ಅಭಿನಯಿಸಿದ್ದಾರೆ.

ನವರಸ ನಾಯಕ ಜಗ್ಗೇಶ್ ಅವರ ಚಿತ್ರಜೀವನದಲ್ಲಿ ಇದೇ ಮೊದಲ ಬಾರಿಗೆ 100 ದಿವಸಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ನಿರ್ಮಾಪಕ ಕೆ ಎ ಸುರೇಶ್ `ರಾಜು ಕನ್ನಡ ಮೀಡಿಯಂ’ ಚಿತ್ರದ ಯಶಸ್ಸಿನ ನಂತರ ಒಂದು ಭರವಸೆ ಮೂಡಿಸುವ ತಂಡದ ಜೊತೆ ಹಣ ಹೂಡುತ್ತಿದ್ದಾರೆ. ವಿಜಯಪ್ರಸಾದ್ `ಸಿದ್ಲಿಂಗು’ ಸಿನಿಮಾದಲ್ಲಿ ಟೀಚರ್ ಆಗಿದ್ದ ಸುಮನ್ ರಂಗನಾಥ್ ಈ ಚಿತ್ರದಲ್ಲೂ ಪ್ರಮುಖ ಪಾತ್ರ ಗಿಟ್ಟಿಸಿಕೊಂಡಿದ್ದಾರೆ. ಅನೂಪ್ ಸೀಳಿನ್ ಸಂಗೀತ, ನಂಜೇಶ್ ಬಾಬು ಛಾಯಾಗ್ರಹಣ ಮಾಡಿದ್ದಾರೆ. ಮೈಸೂರು, ಶ್ರೀರಂಗಪಟ್ಟಣ, ಕೊಡಗಿನಲ್ಲಿ ಚಿತ್ರೀಕರಣ ಮಾಡಲಾಗಿದೆ.
39degree ಸುಡುತ್ತಿದೆ ನಮ್ಮ ಚಿತ್ರಿಕರಣದ ಜಾಗ!ಜೊತೆಗೆ ಧೂಳು!
ನಮ್ಮ #ತೋತಾಪುರಿ ಡೈರೆಕ್ಟರ್ ವಿಜಯಪ್ರಸಾದ್ ಊರ್ಬಾಗ್ಲು ಮಾಡ್ತಾ ಇದ್ದಾರೆ ಬಿಸಿಲಲ್ಲಿ!
ಪರದೆಮೇಲೆ ನಿಮಗೆ ನಮ್ಮ ಪರದೆಹಿಂದಿನ ಕಷ್ಟಅರಿಯದು!ನಿಮ್ಮ ನಗುವಿಗಾಗಿ ನಮ್ಮ ಬದುಕು ಮೀಸಲು..
ಶುಭಮಧ್ಯಾಹ್ನ.. pic.twitter.com/uLG9wzs7TJ— ನವರಸನಾಯಕ ಜಗ್ಗೇಶ್ (@Jaggesh2) March 11, 2019
`ಎರಡನೇ ಮದುವೆ’, `ಗೋವಿಂದಾಯ ನಮಃ’, ಶ್ರಾವಣಿ ಸುಬ್ರಮಣಿ, ಆರ್ ಎಕ್ಸ್ ಸೂರಿ, ಶಿವಲಿಂಗ ಮತ್ತು ರಾಜು ಕನ್ನಡ ಮೀಡಿಯಂ ನಂತರ ಈ `ತೋತಾಪುರಿ’ಯನ್ನು ನಿರ್ಮಿಸಿರುವ ನಿರ್ಮಾಪಕ ಸುರೇಶ್ ಈ ಚಿತ್ರವನ್ನು ಮಾವಿನ ಹಣ್ಣಿನ ಸೀಸನ್ನಿನಲ್ಲೇ ಬಿಡುಗಡೆ ಮಾಡುವ ಇರಾದೆ ಇಟ್ಟುಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv
-

ಇದೇ ಶುಕ್ರವಾರ ತೆರೆಗೆ ಬರಲಿದೆ `ಏಪ್ರಿಲ್ ನ ಹಿಮಬಿಂದು’
ಬೆಂಗಳೂರು : ತನ್ನ ಹಾಡುಗಳ ಮೂಲಕವೇ ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಮೂಡಿಸಿದ್ದ ‘ಏಪ್ರಿಲ್ ನ ಹಿಮಬಿಂದು’ ಚಿತ್ರ ಇದೇ ಶುಕ್ರವಾರ ರಾಜ್ಯಾದ್ಯಂತ ತೆರೆಕಾಣಲಿದೆ.
ಹೌದು, ಪಕ್ಕಾ ಎಂಟರ್ ಟೈನ್ಮೆಂಟ್ ಮೂವಿ, ಕಂಪ್ಲೀಟ್ ಫ್ಯಾಮಿಲಿ ಮೂವಿ ಅದರಲ್ಲೂ ವಿಶೇಷವಾಗಿ ಹೊಸದಾಗಿ ಮದುವೆಯಾದವರು ನೋಡಲೇಬೇಕಾದ ಮೂವಿ ಎಂದು ಕನ್ನಡದ ದಿಗ್ಗಜ ಹಿರಿಯನಟ ದತ್ತಣ್ಣ ಅವರು ಹೇಳಿದ್ದ ‘ಏಪ್ರಿಲ್ ನ ಹಿಮಬಿಂದು’ ಚಿತ್ರ ಅಕ್ಟೋಬರ್ 6 ರಿಂದ ಕನ್ನಡ ಚಿತ್ರರಂಗದಲ್ಲಿ ತನ್ನ ಛಾಪು ಮೂಡಿಸಲಿದೆ.

ಹಿರಿಯ ನಟರಾದ ದತ್ತಣ್ಣರವರು ತನ್ನ ಅಣ್ಣನಾದ ವಿ.ಸೋಮಶೇಖರ್ ರಾವ್ ರೊಡನೆ ತೆರೆಯ ಮೇಲೆ ಬರುತ್ತಿರುವ ಮೂರನೇ ಚಿತ್ರ ಇದಾಗಿದ್ದು, ಈ ಹಿಂದಿನ ಎರಡು ಚಿತ್ರಗಳೂ ಭಾರೀ ಯಶಸ್ಸು ಗಳಿಸಿತ್ತು. ಇದೀಗ ಮತ್ತೊಮ್ಮೆ ಜೊತೆಗೂಡಿರುವ ಹಿರಿಯ ದಿಗ್ಗಜರು ಸೀನಿಯರ್ ಸಿಟಿ ಜನಗಳಿಗೆ ಕೂಡಾ ಇಷ್ಟವಾಗುವ ಅದ್ಭುತ ಕಥಾಹಂದರವಿರುವ ಚಿತ್ರವನ್ನು ಹೊರ ತಂದಿದ್ದಾರೆ.

ಸಾಮಾನ್ಯವಾಗಿ ಎಲ್ಲರೂ ನಮಗೆಟುಕದ್ದನ್ನು ಪಡೆಯುವ ಕಾತರದಲ್ಲೇ ಇರುತ್ತಾರೆ. ಕೆಲವರಿಗೆ ಅದೃಷ್ಟವಶಾತ್ ಅದು ಸಿಗಬಹುದು. ಆದರೆ ಮುಕ್ಕಾಲು ಭಾಗ ಜನರಿಗೆ ಭ್ರಮನಿರಸನವಾಗುವುದು ಖಚಿತ. ಹಾಗಾಗಿ ಏಪ್ರಿಲ್ ನ ಹಿಮಬಿಂದು ಚಿತ್ರದ ಟೈಟಲ್ ಹೇಳುವಂತೆ ಏಪ್ರಿಲ್ ನಲ್ಲಿರದ ಹಿಮಬಿಂದುವನ್ನು ಹಾರೈಸುವ ಮನಸುಗಳಿಗೆ ಹೊಸ ಹೊಳಪು ಕೊಡುವ ಸಿನಿಮಾ ಇದಾಗಿರಲಿದೆ ಎಂದು ದತ್ತಣ್ಣ ಹೇಳಿದ್ದಾರೆ.

ಬಾಬು ಹಿರಣ್ಣಯ್ಯ, ಚಿದಾನಂದ್, ಟಿ.ವಿ ಗುರುಮೂರ್ತಿ, ಸಿದ್ಲಿಂಗು ಶ್ರೀಧರ್ ಮುಂತಾದ ಖ್ಯಾತನಾಮರ ದಂಡೇ ಈ ಚಿತ್ರದಲ್ಲಿದ್ದು ಶಿವ-ಜಗನ್ ರವರು ಹಾಗೂ ಅನೂಪ್ ಟಿ.ಆನಂದ್, ಸಂದೀಪ್ ಡಿ.ಎಸ್ ಚಿತ್ರ ನಿರ್ಮಾಣ ಮಾಡುವಲ್ಲಿ ನಿರ್ಮಾಪಕರ ಕಾರ್ಯನಿರ್ವಹಿಸಿದ್ದಾರೆ.
ಒಟ್ಟಿನಲ್ಲಿ ನಾಗೇಂದ್ರ ಪ್ರಸಾದ್, ಯೋಗರಾಜ್ ಭಟ್, ಹೆಚ್.ಎಸ್.ವೆಂಕಟೇಶಮೂರ್ತಿಯವರುಗಳ ಶ್ರೇಷ್ಟ ಸಾಹಿತ್ಯವಿರುವ ಚಿತ್ರದ ಹಾಡುಗಳೂ ಸಾಕಷ್ಟು ಪಾಪ್ಯುಲರ್ ಆಗಿದ್ದು ಚಿತ್ರದ ನಿರೀಕ್ಷೆ ಕೂಡಾ ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡಿದೆ.



