ಬರ್ನ್: ಸ್ವಿಟ್ಜರ್ಲೆಂಡ್ನ ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ತೆರಳಿದ್ದಾರೆ. ಈ ವೇಳೆ ಬೊಮ್ಮಾಯಿ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಭೇಟಿ ಮಾಡಿದರು.
ಶೃಂಗಸಭೆಯಲ್ಲಿ ಸಿಎಂ ಬೊಮ್ಮಾಯಿ ನೀಲಿ ಬಣ್ಣದ ಸೂಟ್ ಧರಿಸಿ ಮಿಂಚಿದ್ದಾರೆ. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಇಲಾಖೆ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ಹಾಗೂ ಸಿಎಂ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಸಿಎಂಗೆ ಸಾತ್ ನೀಡಿದ್ದಾರೆ. ಇದನ್ನೂ ಓದಿ: ಕುವೆಂಪು, ನಾಡಗೀತೆಗೆ ಅವಮಾನ- ರೋಹಿತ್ ಚಕ್ರತೀರ್ಥರ ಮೇಲೆ ಮುಗಿಬಿದ್ದ ಕಾಂಗ್ರೆಸ್
ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾರತವನ್ನು ಬಸವರಾಜ ಬೊಮ್ಮಾಯಿ ಪ್ರತಿನಿಧಿಸುತ್ತಿದ್ದಾರೆ. ಸಿಎಂ ಜೊತೆ 8 ಜನರ ತಂಡ ದಾವೋಸ್ಗೆ ತೆರಳಿದ್ದು, ಸಿಎಂ ಆದ ಬಳಿಕ ಬೊಮ್ಮಾಯಿಯವರಿಗೆ ಇದು ಮೊದಲ ವಿದೇಶ ಪ್ರವಾಸವಾಗಿದೆ.
ಬೆಂಗಳೂರು: ಸ್ವಿಟ್ಜರ್ಲೆಂಡಿನ ದಾವೋಸ್ನಲ್ಲಿ ಇಂದಿನಿಂದ ಆರಂಭವಾಗಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ನೇತೃತ್ವದ ನಿಯೋಗ ಇಂದು ರಾಜ್ಯದಿಂದ ಹೊರಟಿದೆ.
ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾರತವನ್ನೂ ಪ್ರತಿನಿಧಿಸಲಿರುವ ಸಿಎಂ ಬೊಮ್ಮಾಯಿಗೆ ಐಟಿಬಿಟಿ ಸಚಿವ ಡಾ.ಅಶ್ವಥ್ ನಾರಾಯಣ ಮತ್ತು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಸಾತ್ ಕೊಟ್ಟಿದ್ದಾರೆ. ಬೊಮ್ಮಾಯಿಯವರಿಗೆ ಸಿಎಂ ಆದ ಬಳಿಕ ಮೊದಲ ವಿದೇಶ ಪ್ರವಾಸ ಇದಾಗಿದೆ. ಇಂದು ಬೆಳಗ್ಗೆ 8:30ಕ್ಕೆ ತಮ್ಮ ಆರ್.ಟಿ.ನಗರದ ನಿವಾಸದಿಂದ ಪ್ಯಾಂಟ್, ಶರ್ಟ್ ಧರಿಸಿ ಸಾಮಾನ್ಯ ಉಡುಪಿನಲ್ಲೇ ದಾವೋಸ್ಗೆ ತೆರಳಿದರು. ಸಿಎಂ ಜೊತೆಗೆ ಅದ್ಧೂರಿ ಸೂಟ್ ಧರಿಸಿದ ಮುರುಗೇಶ್ ನಿರಾಣಿ ಹೊರಟರು. ಇಂದು ಸಿಎಂ ಜೊತೆಗೆ ಒಟ್ಟು 8 ಜನರ ತಂಡ ದಾವೋಸ್ಗೆ ಪ್ರಯಾಣಿಸಿದೆ. ಸಿಎಂ ಅವರೊಂದಿಗೆ ಧರ್ಮಪತ್ನಿ ಚೆನ್ನಮ್ಮ, ಮುರುಗೇಶ್ ನಿರಾಣಿ ಮತ್ತು ನಿರಾಣಿಯವರ ಪತ್ನಿ, ನಿರಾಣಿ ಪಿಎ ಶರಣಬಸಪ್ಪ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತು ಅವರ ಪಿಎ, ಸಿಎಂ ಒಎಸ್ಡಿ ರೋಹನ್ ಬಿರಾದಾರ್ ದಾವೋಸ್ಗೆ ತೆರಳಿದರು. ಇದನ್ನೂ ಓದಿ: ರಾಜ್ಯದಲ್ಲೂ ಪೆಟ್ರೋಲ್, ಡೀಸೆಲ್ ದರ ಇಳಿಕೆಗೆ ಕ್ರಮವಹಿಸಿ: ಸಿಎಂಗೆ ಬಿಎಸ್ವೈ ಮನವಿ
ದಾವೋಸ್ಗೆ ಹೋಗುವ ಮುನ್ನ ಆರ್ಟಿ ನಗರದ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಕಳೆದ ನಾಲ್ಕು ತ್ರೈಮಾಸಿಕಕ್ಕೆ ಹೋಲಿಕೆ ಮಾಡಿದರೆ ದೇಶಕ್ಕೆ ವಿದೇಶಿ ನೇರ ಬಂಡವಾಳ ಅತಿ ಹೆಚ್ಚು ಬಂದಿದೆ. ಇದರಲ್ಲಿ ನಂಬರ್ ಒನ್ ಪಾಲು ಕರ್ನಾಟಕಕ್ಕೆ ಹರಿದು ಬಂದಿದೆ. ನಾಳೆ ಮತ್ತು ನಾಡಿದ್ದು ದಾವೋಸ್ ವಿಶ್ವ ಆರ್ಥಿಕ ಒಕ್ಕೂಟದ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದೇವೆ. ಸಮ್ಮೇಳನದಲ್ಲಿ ವಿಶ್ವದ ಹೆಸರಾಂತ ಪ್ರಮುಖರನ್ನು ಮತ್ತು ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಲಾಗುವುದು. ಹಲವಾರು ಜನ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ವಿಶೇಷವಾಗಿ ನವೆಂಬರ್ನಲ್ಲಿ ರಾಜ್ಯದಲ್ಲಿ ನಡೆಯಲಿರುವ ಗ್ಲೋಬಲ್ ಇನ್ವೆಸ್ಟ್ ಮೀಟ್ಗೆ ಬಹುದೊಡ್ಡ ಪ್ರತಿಕ್ರಿಯೆ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಬಸವರಾಜ ಬೊಮ್ಮಾಯಿಯವರು ಎರಡನೇ ಬಾರಿಗೆ ದಾವೋಸ್ ಶೃಂಗ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಹಿಂದೆ ಜಲಸಂಪನ್ಮೂಲ ಖಾತೆ ಸಚಿವರಾಗಿದ್ದಾಗ ದಾವೋಸ್ ಪ್ರವಾಸ ಕೈಗೊಂಡಿದ್ದರು. ಸಿಎಂ ಆದ ಬಳಿಕ ಈಗ ಎರಡನೇ ಬಾರಿಗೆ ದಾವೋಸ್ ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ.
ದಾವೋಸ್ ರೂಟ್ ಮ್ಯಾಪ್ ಹೀಗಿದೆ:
ಬೆಂಗಳೂರಿಂದ ಇಂದು ಬೆಳಗ್ಗೆ 10:35ರ ವಿಮಾನದ ಮೂಲಕ ದುಬೈಗೆ ಪ್ರಯಾಣ. ಇಂದು ಮಧ್ಯಾಹ್ನ 12:45 ಕ್ಕೆ ದುಬೈಗೆ ತಲುಪಲಿರುವ ಸಿಎಂ. ದುಬೈನಿಂದ ಮಧ್ಯಾಹ್ನ 3:35ಕ್ಕೆ ಸ್ವಿಟ್ಜರ್ಲೆಂಡ್ನ ಜ್ಯೂರಿಚ್ಗೆ ಪ್ರಯಾಣ. ರಾತ್ರಿ 8:20 ರಿಂದ ಜ್ಯೂರಿಚ್ನಿಂದ ದಾವೋಸ್ ರಸ್ತೆ ಮಾರ್ಗದ ಮೂಲಕ ಪ್ರಯಾಣ. ರಾತ್ರಿ 12ಕ್ಕೆ ದಾವೋಸ್ ತಲುಪಲಿರುವ ಸಿಎಂ ನೇತೃತ್ವದ ನಿಯೋಗ. ನಾಳೆಯಿಂದ ದಾವೋಸ್ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾಗಿ. ಎರಡು ದಿನಗಳ ಕಾಲ ದಾವೋಸ್ ಶೃಂಗ ಸಭೆಯಲ್ಲಿ ಭಾಗವಹಿಸಲಿರುವ ಸಿಎಂ. ಎರಡು ವೇದಿಕೆಗಳಲ್ಲಿ ಭಾರತ ಪ್ರತಿನಿಧಿಸಿ ಭಾಷಣ ಮಾಡಲಿರುವ ಸಿಎಂ. ಮೇ 25ರ ಬೆಳಗ್ಗೆ 11 ಗಂಟೆಗೆ ದಾವೋಸ್ನಿಂದ ತಾಯ್ನಾಡಿಗೆ ಪ್ರಯಾಣ. ಮೇ 26ರ ಬೆಳಗ್ಗೆ 9ಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಸಿಎಂ ನಿಯೋಗ.