Tag: DC Abhiram G. Shankar

  • ನಾಳೆಯಿಂದ 5 ದಿನ ಚಾಮುಂಡಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ

    ನಾಳೆಯಿಂದ 5 ದಿನ ಚಾಮುಂಡಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ

    ಮೈಸೂರು: ಕೊರೊನಾ ವೈರಸ್ ಭೀತಿ ದಿನೇ ದಿನೇ ಹೆಚ್ಚಾಗುತ್ತಿರುವ ಕಾರಣ ನಾಳೆಯಿಂದ ಐದು ದಿನ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

    ನಾಳೆ ಮೂರನೇ ಆಷಾಢ ಶುಕ್ರವಾರ ಹಾಗೂ ವಾರಾಂತ್ಯ ಶನಿವಾರ, ಭಾನುವಾರದಂದು ಚಾಮುಂಡಿ ಬೆಟ್ಟಕ್ಕೆ ಭಕ್ತಾದಿಗಳ ಪ್ರವೇಶಕ್ಕೆ ನಿರ್ಬಂಧವಿದೆ. ಇದರ ಜೊತೆಗೆ ಸೋಮವಾರ ಚಾಮುಂಡೇಶ್ವರಿ ದೇವಿಯ ಜನ್ಮೋತ್ಸವವಿರುವ ಕಾರಣ ಹಾಗೂ ಆಷಾಢ ಮಾಸದ ಕಡೆಯ ಮಂಗಳವಾರ ಸೇರಿ ಸತತ ಐದು ದಿನಗಳ ಕಾಲ ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಮಾಡಲಾಗಿದೆ.

    ಜುಲೈ 17ರಂದು ಕಡೆಯ ಆಷಾಢ ಶುಕ್ರವಾರ ಇರುವ ಕಾರಣ ಅಂದು ಕೂಡ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಉತ್ತನಹಳ್ಳಿ ದೇವಾಲಯಕ್ಕೂ ನಾಳೆಯಿಂದ ಸತತ ಐದು ದಿನಗಳ ಕಾಲ ಹಾಗೂ ಕೊನೆಯ ಆಷಾಢ ಶುಕ್ರವಾರ ಜುಲೈ 17ರಂದು ಭಕ್ತರ ಪ್ರವೇಶಕ್ಕೆ ನಿರ್ಬಂಧವಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಆದೇಶ ಮಾಡಿದ್ದಾರೆ.

  • ಮೈಸೂರಲ್ಲಿ ಕೊರೊನಾ ಸಂಪರ್ಕಿತರ ಸಂಖ್ಯೆ ನೂರೂ ಆಗ್ಬಹುದು, ಸಾವಿರನೂ ಆಗ್ಬಹುದು: ಡಿಸಿ

    ಮೈಸೂರಲ್ಲಿ ಕೊರೊನಾ ಸಂಪರ್ಕಿತರ ಸಂಖ್ಯೆ ನೂರೂ ಆಗ್ಬಹುದು, ಸಾವಿರನೂ ಆಗ್ಬಹುದು: ಡಿಸಿ

    – ಇನ್ನೂ 233 ಮಂದಿಯ ಪರೀಕ್ಷೆ ಬಾಕಿ

    ಮೈಸೂರು: ನಂಜನಗೂಡು ಜುಬಿಲೆಂಟ್ಸ್ ಕಾರ್ಖಾನೆ ಕೊರೊನಾ ಪ್ರಕರಣದ ವಿಚಾರವಾಗಿ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಆತಂಕಕಾರಿ ವಿಚಾರವನ್ನು ಬಿಚ್ಚಿಟ್ಟಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೋಂಕಿತರ ಜೊತೆ ಸಂಪರ್ಕ ಹೊಂದಿದ ವ್ಯಕ್ತಿಗಳ ಸ್ಯಾಂಪಲ್ ಪರೀಕ್ಷೆ ಮಾಡಲೇಬೇಕು. ಸದ್ಯ ಪ್ರೈಮರಿ ಸಂಪರ್ಕ ಹೊಂದಿದ 223 ಜನರ ಸ್ಯಾಂಪಲ್ ಪರೀಕ್ಷೆ ನಡೆಯಬೇಕಿದೆ. ಹೀಗಾಗಿ ಕೊರೊನಾ ಪೀಡಿತರ ಸಂಪರ್ಕ ಮಾಡಿದವರ ಸಂಖ್ಯೆ 100 ಆಗಬಹುದು, ಸಾವಿರವೂ ಆಗಬಹುದು ಎಂದು ಹೇಳುವ ಮೂಲಕ ಆತಂಕ ವ್ಯಕ್ತಪಡಿಸಿದ್ದಾರೆ.

    ನಂಜನಗೂಡಿನ ಕೊರೊನಾ ಸೋಂಕಿತ ವ್ಯಕ್ತಿಗಳ ಜೊತೆ ಪ್ರೈಮರಿ ಸಂಪರ್ಕ ಹೊಂದಿದ್ದ ವ್ಯಕ್ತಿಗಳ ಹುಡುಕಾಟ ಕೂಡ ಮುಂದುವರಿದಿದೆ. ಎಲ್ಲ ಸ್ಯಾಂಪಲ್ ಪರೀಕ್ಷೆಗೆ 12 ದಿನ ಕಳೆಯಬೇಕು. ಇಲ್ಲವಾದಲ್ಲಿ ಮತ್ತೊಮ್ಮೆ ಪರೀಕ್ಷೆ ಮಾಡಬೇಕಾಗುತ್ತದೆ. 12 ದಿನ ಕಳೆದ ಮೇಲೆಯೇ ಸೋಂಕಿನ ನಿಖರ ಮಾಹಿತಿ ತಿಳಿಯೋದು. ನಂಜನಗೂಡು ಪ್ರಕರಣದ ಇನ್ನು ನೂರಾರು ಸ್ಯಾಂಪಲ್ ಪರೀಕ್ಷೆ ಮಾಡಬೇಕಿದೆ. ಎಲ್ಲರ ವರದಿ ಬಂದ ನಂತರ ಮಾಹಿತಿ ನೀಡುತ್ತೇವೆ ಎಂದು ಡಿಸಿ ತಿಳಿಸಿದ್ದಾರೆ.

    ನಂಜನಗೂಡಿನ ಹತ್ತಿರ ಇರುವ ಜುಬಿಲೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಓರ್ವ ವ್ಯಕ್ತಿಗೆ ಕೊರೊನಾ ಸೋಂಕು ಕಂಡುಬಂದಿತ್ತು. ಆದರೆ ಇದಾದ ನಂತರ ಇದೇ ಕಾರ್ಖಾನೆಯ ಹಲವರಿಗೆ ಈ ಸೋಂಕು ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಗುರುವಾರ ತಾನೇ ನಂಜನಗೂಡಿನಿಂದ ಬಳ್ಳಾರಿಗೆ ಬಂದಿದ್ದ 14 ವರ್ಷದ ಬಾಲಕನಿಗೆ ಕೊರೊನಾ ಪಾಸಿಟಿವ್ ಬಂದಿತ್ತು.