Tag: DC r. Latha

  • ಗ್ರಾಮದಲ್ಲಿ ಕೊರೊನಾ ಸ್ಫೋಟ- ಗ್ರಾಮಸ್ಥರಿಗೆ ಧೈರ್ಯ ತುಂಬಿದ ಡಿಸಿ ಆರ್.ಲತಾ

    ಗ್ರಾಮದಲ್ಲಿ ಕೊರೊನಾ ಸ್ಫೋಟ- ಗ್ರಾಮಸ್ಥರಿಗೆ ಧೈರ್ಯ ತುಂಬಿದ ಡಿಸಿ ಆರ್.ಲತಾ

    – ಮಂಚನಬಲೆ ಗ್ರಾಮದಲ್ಲಿ ಕೊರೊನಾ ಸ್ಫೋಟ

    ಚಿಕ್ಕಬಳ್ಳಾಪುರ: ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ಕೊರೊನಾ ಸ್ಫೋಟವಾಗಿದೆ. ಗ್ರಾಮಕ್ಕೆ ಜಿಲ್ಲಾಧಿಕಾರಿ ಆರ್ ಲತಾ ಭೇಟಿ ಮಾಡಿ ಆತಂಕಕ್ಕೊಳಗಾಗಿದ್ದ ಗ್ರಾಮಸ್ಥರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.

    ಮಂಚನಬಲೆ ಗ್ರಾಮ ಪಂಚಾಯತಿ ಅತಿ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿವೆ. ಸದ್ಯ 28 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 14 ಮಂದಿ ಮಂಚನಬಲೆ ಗ್ರಾಮದವರಾಗಿದ್ದಾರೆ. ಈ ಕೊರೊನಾದಿಂದ 3 ಮಂದಿ ಸಹ ಮೃತಪಟ್ಟಿದ್ದಾರೆ. ಆದರೆ ಜನ ಹೇಳುವ ಪ್ರಕಾರ ಕಳೆದ 10 ದಿನಗಳಲ್ಲಿ 10 ಮಂದಿ ಕೋರೋನಾ ಸೇರಿ ವಿವಿಧ ಶ್ವಾಸಕೋಶದ ಸಮಸ್ಯೆಗಳಿಂದ ಮೃತಪಟ್ಟಿದ್ದಾರೆ. ಇದರಿಂದ ಗ್ರಾಮದ ಜನ ಸಾಕಷ್ಟು ಆತಂಕಗೊಂಡಿದ್ದರು.

    ಈ ಮಧ್ಯೆ ಹೋಂ ಐಸೋಲೇಷನ್ ನಲ್ಲಿದ್ದ ಕೊರೊನಾ ಸೋಂಕಿತನೊರ್ವ ಮನೆಯಲ್ಲಿರದೆ ಒಡಾಡುತ್ತಿದ್ದನು. ಮತ್ತೊಂದೆಡೆ ವ್ಯಾಕ್ಸಿನೇಷನ್ ಪಡೆಯಲು ಗ್ರಾಮದ ಕೆಲ ಜನ ಹಿಂಜರಿತಿದ್ರು. ಈ ಎಲ್ಲಾ ಸಮಸ್ಯೆಗಳನ್ನ ತಿಳಿದ ನಿಮ್ಮ ಪಬ್ಲಿಕ್ ಟಿವಿ ವರದಿ ಸಹ ಬಿತ್ತರ ಮಾಡಿತ್ತು. ಇದಾದ ಬೆನ್ನಲ್ಲೇ ಡಿಸಿ ಆರ್.ಲತಾ ಹಾಗೂ ಡಿಎಚ್‍ಓ ಇಂದಿರಾ ಕಬಾಡೆ, ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಟಾಸ್ಕ್ ಪೋರ್ಸ್ ಸಭೆ ನಡೆಸಿದರು.

    ಕೋವಿಡ್ ಸಂಬಂಧ ತೆಗೆದುಕೊಂಡ ಕ್ರಮಗಳ ಬಗ್ಗೆ ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಬಳಿ ಮಾಹಿತಿ ಪಡೆದುಕೊಂಡರು. ಗ್ರಾಮಸ್ಥರಿಗೆ ಅಭಯ ತುಂಬಿದ ಡಿ ಸಿ ಆರ್ ಲತಾ, ಕಡ್ಡಾಯವಾಗಿ ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಯ್ದುಕೊಂಡು ಕೊರೊನಾ ಕಡಿವಾಣಕ್ಕೆ ಜನ ಸಹಕಾರ ನೀಡುವಂತೆ ತಿಳಿಸಿದರು.

  • ಚಿಕ್ಕಬಳ್ಳಾಪುರದಲ್ಲಿ ಸೋಂಕಿತರ ಸಂಪರ್ಕದಲ್ಲಿದ್ದ 50 ಮಂದಿಗಿಲ್ಲ ಕೊರೊನಾ

    ಚಿಕ್ಕಬಳ್ಳಾಪುರದಲ್ಲಿ ಸೋಂಕಿತರ ಸಂಪರ್ಕದಲ್ಲಿದ್ದ 50 ಮಂದಿಗಿಲ್ಲ ಕೊರೊನಾ

    ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ತಗುಲಿರುವ ಶಂಕೆಯ ಮೇರೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದ 50 ಮಂದಿಯ ವರದಿಯೂ ಕೊರೊನಾ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ಅವರು ತಿಳಿಸಿದ್ದಾರೆ.

    ಜಿಲ್ಲೆಯ ಗೌರಿಬಿದನೂರಿನಲ್ಲಿ 10 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಅವರಲ್ಲಿ ಒರ್ವ 70 ವರ್ಷದ ವೃದ್ಧೆ ಮೃತಪಟ್ಟಿದ್ದರು. ಹೀಗಾಗಿ 10 ಮಂದಿ ಸೊಂಕಿತರಿಂದ ಪ್ರಥಮ ಸಂಪರ್ಕಕ್ಕೆ ಗುರಿಯಾಗಿದ್ದ ಅವರ ಕುಟುಂಬದ ಸದಸ್ಯರಲ್ಲಿ 38 ಮಂದಿಯನ್ನ ಹೈ ರಿಸ್ಕ್ ಕ್ವಾರಂಟೈನ್ ಎಂದು ಗುರುತಿಸಿ ಪರೀಕ್ಷಗೆ ಒಳಪಡಿಸಲಾಗಿತ್ತು. ತದನಂತರ ಈ 28 ಮಂದಿ ಜೊತೆ ಸಂಪರ್ಕಕ್ಕೆ ಒಳಗಾಗಿದ್ದ 12 ಮಂದಿಯನ್ನ ಸಹ ಹಾಸ್ಪಿಟಲ್ ಕ್ವಾರಂಟೈನ್ ಮಾಡಲಾಗಿತ್ತು.

    ಪ್ರಥಮ ಸಂಪರ್ಕಿತರ 38 ಮಂದಿಯ ರಕ್ತ ಮಾದರಿ ಹಾಗೂ ಗಂಟಲು ದ್ರವ ಪರೀಕ್ಷಗೆ ಕಳುಹಿಸಲಾಗಿತ್ತು. ಇಂದು ಈ 38 ಮಂದಿಯ ಕೊರೊನಾ ಪರೀಕ್ಷಾ ವರದಿ ಜಿಲ್ಲಾಢಳಿತದ ಕೈ ಸೇರಿದ್ದು, ಎಲ್ಲರ ವರದಿಯೂ ನೆಗಟಿವ್ ಬಂದಿದೆ. 38 ಮಂದಿಯ ವರದಿ ನೆಗಟಿವ್ ಬಂದಿರೋದ್ರಿಂದ ಅವರ ಸಂಪರ್ಕಕ್ಕೆ ಒಳಗಾಗಿರೋ 12 ಮಂದಿ ಸಹ ಸೇಫ್ ಆಗಿದ್ದಾರೆ. ಹೀಗಾಗಿ ಸದ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10ರಲ್ಲೇ ಇದೆ. ಅದು ಎರಡು ಕುಟುಂಬಗಳ ಸದಸ್ಯರಲ್ಲೇ ಇದ್ದು ಸಮುದಾಯದ ಹಂತಕ್ಕೆ ಹರಡಿಲ್ಲ ಅನ್ನೋದು ಸ್ಪಷ್ಟವಾಗಿದೆ.

    ಈಗಾಗಲೇ ವಿದೇಶಗಳಿಂದ ಆಗಮಿಸಿದ್ದ 200 ಮಂದಿಯ ಪೈಕಿ ಬಹುತೇಕರ 14 ದಿನಗಳ ಕ್ವಾರಂಟೈನ್ ಅವಧಿ ಸಹ ಪೂರ್ಣಗೊಂಡಿದೆ. ಹೀಗಾಗಿ ಜಿಲ್ಲೆ ರೆಡ್‍ಝೋನ್‍ನಲ್ಲಿದ್ದರೂ ಕೊರೊನಾ ಸೋಂಕಿತ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ. ಕೊರೊನಾ ವೈರಸ್ ಹರುಡವಿಕೆಯನ್ನ ತಡೆಯುವಲ್ಲಿ ಜಿಲ್ಲಾಢಳಿತ ಯಶಸ್ವಿಯಾಗಿದ್ದು, ಜಿಲ್ಲೆಯ ಜನತೆ ಆತಂಕಕ್ಕೆ ಒಳಗಾಗದಂತೆ ಡಿಸಿ ಆರ್. ಲತಾ ಮನವಿ ಮಾಡಿಕೊಂಡಿದ್ದಾರೆ. ಹಾಗೆಯೇ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ ಅಂತ ಜನ ದಯವಿಟ್ಟು ಬೀದಿಗೆ ಬರಬೇಡಿ ಇನ್ನೂ ಲಾಕ್‍ಡೌನ್ ಅವಧಿ ಪೂರ್ಣಗೊಳ್ಳುವವರೆಗೂ ಮನೆಯಲ್ಲಿದ್ದು ಸಹಕರಿಸಿ ಎಂದು ಡಿಸಿ ಕೇಳಿಕೊಂಡಿದ್ದಾರೆ.