Tag: DC

  • ಹೆರಿಗೆ ವೇಳೆ ಸಾವನ್ನಪ್ಪಿದ ಪತ್ನಿಯನ್ನು ನೆನೆದು ವೇದಿಕೆಯಲ್ಲೇ ಅಪರ ಜಿಲ್ಲಾಧಿಕಾರಿ ಕಣ್ಣೀರು

    ಹೆರಿಗೆ ವೇಳೆ ಸಾವನ್ನಪ್ಪಿದ ಪತ್ನಿಯನ್ನು ನೆನೆದು ವೇದಿಕೆಯಲ್ಲೇ ಅಪರ ಜಿಲ್ಲಾಧಿಕಾರಿ ಕಣ್ಣೀರು

    ಯಾದಗಿರಿ: ಹೆರಿಗೆ ಸಮಯದಲ್ಲಿ ಸಾವನ್ನಪ್ಪಿದ ತನ್ನ ಪತ್ನಿಯನ್ನು ನೆನಪಿಸಿಕೊಂಡು ಯಾದಗಿರಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ ವೇದಿಕೆ ಮೇಲೆ ಕಣ್ಣೀರು ಹಾಕಿದ್ದಾರೆ.

    ಯಾದಗಿರಿಯಿಂದ ಕಲಬುರಗಿ ಮಹಾನಗರ ಪಾಲಿಕೆ ಉಪ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ. ಹೀಗಾಗಿ ಜಿಲ್ಲಾಡಳಿತ ಭವನದಲ್ಲಿ ಪ್ರಕಾಶ್ ರಜಪೂತ ಅವರಿಗೆ ಬಿಳ್ಕೋಡಿಗೆ ಸಮಾರಂಭ ಏರ್ಪಡಿಸಲಾಗಿತ್ತು. ವಿವಿಧ ಇಲಾಖೆಯ ಸಿಬ್ಬಂದಿ ಸನ್ಮಾನ ಸ್ವೀಕರಿಸಿ ಬಳಿಕ ಮಾತನಾಡಿದ ಅವರು, ಕಳೆದ ಮೂರು ವರ್ಷದಿಂದ ಯಾದಗಿರಿ ಅಪರ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಇದೇ ಅವಧಿಯಲ್ಲಿ ತಮ್ಮ ನೆಚ್ಚಿನ ಮಡದಿಯನ್ನು ಕಳೆದುಕೊಂಡಿದ್ದರು. ಹೀಗಿದ್ದರೂ ಸಹ ಯಾವುದೇ ರಜೆ ಪಡೆಯದೆ, ಕೊರೊನಾ ಮೊದಲ ಅಲೆ ಮತ್ತು ಕೃಷ್ಣ ಮತ್ತು ಭೀಮಾ ನದಿ ಪ್ರವಾಹ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದ್ದರು. ತಮ್ಮ ಭಾಷಣದಲ್ಲಿ ಇದನ್ನು ನೆನಪು ಮಾಡಿಕೊಂಡ ಅವರು ತಮ್ಮ ಮಡದಿ ತ್ಯಾಗ ನೆನೆದು ಕಣ್ಣೀರು ಹಾಕಿದರು.

    ಯಾದಗಿರಿ ಸಹಾಯಕ ಆಯುಕ್ತರಾಗಿದ್ದ ಶಂಕರಗೌಡ ಸೋಮನಾಳ ಯಾದಗಿರಿ ಅಪರ ಜಿಲ್ಲಾಧಿಕಾರಿ ಭಡ್ತಿ ಹೊಂದಿದ್ದು, ಅವರನ್ನು ಮತ್ತು ಅವರ ಜಾಗಕ್ಕೆ ನೇಮಕವಾದ ಪ್ರಕಾಶ್ ಹನಗಂಡಿ ಸನ್ಮಾನಿಸಿದ ಜಿಲ್ಲಾಧಿಕಾರಿ ಡಾ.ರಾಗಪ್ರಿಯ ಇಬ್ಬರನ್ನೂ ಸ್ವಾಗತಿಸಿದರು.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಯಾದಗಿರಿಯಲ್ಲಿ ಮದುವೆಗಳಿಗೆ ಜಿಲ್ಲಾಡಳಿತ ಶಾಕ್

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಯಾದಗಿರಿಯಲ್ಲಿ ಮದುವೆಗಳಿಗೆ ಜಿಲ್ಲಾಡಳಿತ ಶಾಕ್

    ಯಾದಗಿರಿ: ಜಿಲ್ಲೆಯಲ್ಲಿ ಮುಂದಿನ ಐದು ದಿನಗಳಲ್ಲಿ ಮದುವೆ ಮಾಡಿಕೊಳ್ಳುವವರಿಗೆ ಜಿಲ್ಲಾಡಳಿತ ಶಾಕ್ ನೀಡಿದೆ. ಪಬ್ಲಿಕ್ ಟಿವಿ ವರದಿ ಬಳಿಕ ಮದುವೆ ನೆನಪಿನಲ್ಲಿ ಕಳ್ಳಾಟ ನಡೆಸಿದ್ದ ಕ್ರೂಸರ್ ವಾಹನಗಳಿಗೆ ಮತ್ತು ಜನರಿಗೆ ಜಿಲ್ಲಾಧಿಕಾರಿ ಬಿಸಿ ಮುಟ್ಟಿಸಿದ್ದಾರೆ.

    ಮದುವೆ ಕಾರ್ಯಕ್ರಮಗಳಿಗೆ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೆಚ್ಚಿನ ಜನ ಪ್ರಯಾಣ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೊರೊನಾ ಪ್ರಕರಣದಲ್ಲಿ ಹೆಚ್ಚಳವಾಗುತ್ತಿತ್ತು. ಮದುವೆಗೆ ಅನುಮತಿ ಪಡೆದು ಕಾನೂನು ಬಾಹಿರವಾಗಿ ಅನುಮತಿ ಪತ್ರಗಳನ್ನು, ಕ್ರೂಸರ್ ಮಾಲೀಕರು ದುರ್ಬಳಕೆ ಮಾಡಿಕೊಳ್ಳುತ್ತಿದ್ದರು. ಈ ಬಗ್ಗೆ ಇಂದು ಬೆಳಗ್ಗೆ 6.45ಗೆ ಈ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ಸುದ್ದಿ ಪ್ರಸಾರವಾಗಿತ್ತು. ಇದನ್ನೂ ಓದಿ: ಕಠಿಣ ಲಾಕ್‍ಡೌನ್ – ನಗರ ಪ್ರದಕ್ಷಿಣೆಗೆ ಸೈಕಲ್ ಏರಿದ ಎಸ್‍ಪಿ

    ಸುದ್ದಿಯಿಂದ ಸಮಸ್ಯೆ ಮನವರಿಕೆ ಮಾಡಿಕೊಂಡ ಜಿಲ್ಲಾಡಳಿತ, ಮುಂದಿನ ಐದು ದಿನಗಳಲ್ಲಿ ಮದುವೆ ಸಮಾರಂಭಗಳಿಗೆ ಬ್ರೇಕ್ ಹಾಕಿದೆ. ಜೂನ್ 7 ರ ಬೆಳಗ್ಗೆ 6 ಗಂಟೆ ವರಗೆ ಮದುವೆ ಸಮಾರಂಭಗಳಿಗೆ ನಿಷೇಧ ಮಾಡಿ ಜಿಲ್ಲಾಧಿಕಾರಿ ಡಾ.ರಾಗಾಪ್ರಿಯಾ, ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಫ್ರೆಂಡ್ಸ್ ಜೊತೆಗೆ ಊರು ಸುತ್ತೋಕೆ ಬಂದು ಪೊಲೀಸರ ಕೈಗೆ ತಗ್ಲಾಕೊಂಡ ನವದಂಪತಿ

  • ಸಾವು, ಬದುಕಿನ ಮಧ್ಯೆ ಹೋರಾಡುತ್ತಿದ್ದವರ ಜೀವ ಉಳಿಸಿ ಮಾನವೀಯತೆ ಮೆರೆದ ಚಿತ್ರದುರ್ಗದ ಡಿಸಿ

    ಸಾವು, ಬದುಕಿನ ಮಧ್ಯೆ ಹೋರಾಡುತ್ತಿದ್ದವರ ಜೀವ ಉಳಿಸಿ ಮಾನವೀಯತೆ ಮೆರೆದ ಚಿತ್ರದುರ್ಗದ ಡಿಸಿ

    ಚಿತ್ರದುರ್ಗ: ಬ್ರೇಕ್ ಫೇಲ್ ಆಗಿ, ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ಲಾರಿಯಡಿ ಸಿಲುಕಿದ್ದ ಇಬ್ಬರು ಅಮಾಯಕರ ಜೀವವನ್ನು ಉಳಿಸುವ ಮೂಲಕ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಮಾನವೀಯತೆ ಮೆರೆದಿದ್ದಾರೆ.

    ಜಿಲ್ಲೆಯ ಹಿರಿಯೂರು ತಾಲೂಕಿನ ಉಡುವಳ್ಳಿ ರಾಜ್ಯ ಹೆದ್ದಾರಿಯಲ್ಲಿ ಸರಕು ತುಂಬಿಕೊಂಡು ಹೋಗುತ್ತಿದ್ದ 10 ಚಕ್ರದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಲಾರಿ ಕ್ಲೀನರ್ ಹಾಗೂ ಅವರ ಸಂಬಂಧಿಯೊಬ್ಬರು ಲಾರಿಯಡಿ ಸಿಲುಕಿ ನರಳಾಡುತ್ತಿದ್ದರು. ಅದೇ ಮಾರ್ಗವಾಗಿ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕೊರೊನಾ ಜಾಗೃತಿ ಮೂಡಿಸಿ ವಾಪಸಾಗುತ್ತಿದ್ದ ಜಿಲ್ಲಾಧಿಕಾರಿ ಕವಿತಾ ಮನ್ನಿಕೆರಿ, ಅಪಘಾತವಾಗಿರುವುದು ಕಂಡ ತಕ್ಷಣ ಕಾರು ನಿಲ್ಲಿಸಿ ಅಪಘಾತದಲ್ಲಿ ಸಿಲುಕಿಕೊಂಡಿದ್ದವರ ನೆರವಿಗೆ ಧಾವಿಸಿದ್ದಾರೆ. ಅಲ್ಲದೆ ತಮ್ಮ ಜೊತೆಯಲ್ಲಿದ್ದ ಇನ್ನಿತರ ಅಧಿಕಾರಿಗಳು ಕೂಡಲೇ ಅಂಬುಲೆನ್ಸ್ ಗೆ ಕರೆ ಮಾಡಿ, ಲಾರಿ ಅಡಿ ಸಿಲುಕಿದ್ದ ಇಬ್ಬರನ್ನೂ ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳ ತಂಡ ಕೇವಲ 5 ನಿಮಿಷದಲ್ಲಿ ಹೊರಗೆ ಕರೆತಂದು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ವಿಶೇಷ ಚೇತನ ಮಕ್ಕಳ ಶಾಲೆಯ ನೆರವಿಗೆ ನಿಂತ ನಟ ಸುದೀಪ್

    ಹಿರಿಯೂರಿನಿಂದ ಶ್ರೀರಂಗಪಟ್ಟಣ ಮಾರ್ಗವಾಗಿ ತೆರಳುತ್ತಿದ್ದ ಲಾರಿ, ಬ್ರೇಕ್ ಫೇಲ್ ಆಗಿ ಚಾಲಕನಿಂದ ನಿಯಂತ್ರಣ ತಪ್ಪಿ ಪಲ್ಟಿಯಾಯಿತು. ಕ್ಲೀನರ್ ಹಾಗೂ ಆತನ ಸಂಬಂಧಿ ಇಬ್ಬರು ಲಾರಿಯಡಿ ಸಿಲುಕಿದ್ದನ್ನು ಕಂಡ ಚಾಲಕ ಅಲ್ಲಿಂದ ಎಸ್ಕೇಪ್ ಆಗಿದ್ದ. ಆದರೆ ಇದೇ ವೇಳೆ ಸ್ಥಳಕ್ಕೆ ಧಾವಿಸಿದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿಯವರ ಸಮಯಪ್ರಜ್ಞೆಯಿಂದ. ಅಮಾಯಕರ ಜೀವ ಉಳಿದಿದೆ. ಇದನ್ನೂ ಓದಿ: ಒಂದೇ ದಿನ 210 ಮಂದಿಗೆ ಕೊರೊನಾ- ಬೆಳ್ತಂಗಡಿಯ ಕ್ರೈಸ್ತ ಆಶ್ರಮಕ್ಕೆ ವಿಎಚ್‍ಪಿ ನೆರವು

    ಅಧಿಕಾರಿಗಳು ಕರೆ ಮಾಡಿದ ಐದೇ ನಿಮಿಷಕ್ಕೆ ಅಂಬುಲೆನ್ಸ್ ಸ್ಥಳಕ್ಕೆ ಧಾವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಕ್ಲೀನರ್ ಹಾಗೂ ಮತ್ತೋರ್ವನನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು. ಈ ಮೂಲಕ ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳ ಕಾರ್ಯಾಚರಣೆ ಯಶಸ್ವಿಯಾಯಿತು. ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಸಹಾಯ ಮಾಡಿದ್ದಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಮೇ 29ರಿಂದ ಜೂ.7ರವರೆಗೆ ಮೈಸೂರಲ್ಲಿ ಸಂಪೂರ್ಣ ಲಾಕ್‍ಡೌನ್

    ಮೇ 29ರಿಂದ ಜೂ.7ರವರೆಗೆ ಮೈಸೂರಲ್ಲಿ ಸಂಪೂರ್ಣ ಲಾಕ್‍ಡೌನ್

    – ಸೋಮವಾರ, ಗುರುವಾರ ಮಾತ್ರ ಅಗತ್ಯ ವಸ್ತುಗಳ ಖರೀದಿ

    ಮೈಸೂರು: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮೇ 29ರಿಂದ ಜೂನ್ 7ರ ವರೆಗೆ ಸಂಪೂರ್ಣ ಲಾಕ್‍ಡೌನ್ ಜಾರಿಯಾಗಲಿದೆ. ಎರಡು ದಿನ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ.

    ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಈ ಬಗ್ಗೆ ಆದೇಶ ಮಾಡಿದ್ದಾರೆ. ಸೋಮವಾರ ಮತ್ತು ಗುರುವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ. ಉಳಿದ ದಿನಗಳಲ್ಲಿ ಸಂಪೂರ್ಣ ಲಾಕ್‍ಡೌನ್ ಜಾರಿಯಲ್ಲಿರುತ್ತದೆ. ಮೇ 29ರಿಂದ ಜೂನ್ 7ರ ಬೆಳಗ್ಗೆ 6 ಗಂಟೆಯವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಸೋಮವಾರ ಮತ್ತು ಗುರುವಾರ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತರಕಾರಿ, ದಿನಸಿ ಖರೀದಿಗೆ ಅವಕಾಶವಿದೆ.

    ಬ್ಯಾಂಕ್ ಹಾಗೂ ಭಾರತೀಯ ವಿಮಾ ಯೋಜನೆಯ ವ್ಯವಹಾರಗಳಿಗೂ ಸಮಯ ನಿಗದಿಯಾಗಿದ್ದು, ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ತೆರೆದಿರುತ್ತವೆ. ಹಾಲಿನ ಬೂತ್, ವೈದ್ಯಕೀಯ ಸೇವೆ, ಹಾಪ್ ಕಾಮ್ಸ್ ಅಡಿಯಲ್ಲಿ ಬರುವ ತರಕಾರಿ ಮತ್ತು ಹಣ್ಣಿನ ಅಂಗಡಿಗಳು, ನ್ಯಾಯ ಬೆಲೆ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ಚಟುವಟಿಕೆಗಳಿಗೆ ಸಂಪೂರ್ಣವಾಗಿ ನಿರ್ಬಂಧವಿದೆ.

    ನಿಷೇಧಾಜ್ಞೆ ಅವಧಿಯಲ್ಲಿ ಸರಕು ಸಾಗಣೆ ವಾಹನಗಳಿಗೆ ಮಾತ್ರ ಅವಕಾಶವಿದ್ದು, ಬೇರೆ ಎಲ್ಲಾ ವಾಹನ ಸಂಚಾರ, ಜನರ ಓಡಾಟಕ್ಕೆ ನಿರ್ಬಂಧವಿದೆ. ನಿಯಮ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ-2005ರ ಉಪಬಂಧಗಳು, ಭಾರತೀಯ ದಂಡ ಸಂಹಿತೆಯ ಅನುಚ್ಛೇದ 188ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶದಲ್ಲಿ ತಿಳಿಸಿದ್ದಾರೆ.

  • ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ರಕ್ಷಣಾ ಸಾಮಗ್ರಿ ನೀಡದ್ದಕ್ಕೆ ಡಿಸಿಗೆ ಬಿ.ಸಿ.ಪಾಟೀಲ್ ಕ್ಲಾಸ್

    ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ರಕ್ಷಣಾ ಸಾಮಗ್ರಿ ನೀಡದ್ದಕ್ಕೆ ಡಿಸಿಗೆ ಬಿ.ಸಿ.ಪಾಟೀಲ್ ಕ್ಲಾಸ್

    ಹಾವೇರಿ: ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಸೂಕ್ತ ರಕ್ಷಣಾ ಸಾಮಗ್ರಿ ನೀಡದ್ದಕ್ಕೆ ಜಿಲ್ಲಾಧಿಕಾರಿ ವಿರುದ್ಧ ಕೃಷಿ ಸಚಿವ ಬಿ.ಸಿ.ಪಾಟೀಲ್ ಗರಂ ಆಗಿ ಫೋನ್ ನಲ್ಲಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ.

    ಜಿಲ್ಲೆಯ ಹಿರೆಕೇರೂರು ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಆಶಾ ಕಾರ್ಯಕರ್ತೆಯರು ಸಚಿವರ ಬಳಿ ತಮ್ಮ ಸಮಸ್ಯೆ ಹೇಳಿಕೊಂಡಿದ್ದು, ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಯಾವುದೇ ಸುರಕ್ಷತಾ ಸಾಮಗ್ರಿ ನೀಡಿಲ್ಲ. ಕಣ್ಣೀರು ಒರೆಸಿಕೊಳ್ಳುತ್ತ ಸಚಿವರೆದುರು ತಮ್ಮ ಅಳಲು ತೋಡಿಕೊಂಡರು. ಜಿಲ್ಲಾಧಿಕಾರಿ ಸಂಜಯ್ ಶೆಟ್ಟೆಣ್ಣವರ್ ವಿರುದ್ಧ ಗರಂ ಆಗಿ ದೂರವಾಣಿಯಲ್ಲಿ ಡಿಸಿಯನ್ನ ತರಾಟೆಗೆ ತೆಗೆದುಕೊಂಡು, ಆಶಾ ಕಾರ್ಯಕರ್ತೆಯರಿಗೆ ಒಂದು ಮಾಸ್ಕ್ ಕೊಟ್ಟಿಲ್ಲ, ಸ್ಯಾನಿಟೈಸರ್ ಇಲ್ಲ, ಏನು ಮಾಡುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

    ಜಿಲ್ಲೆಯಲ್ಲಿ ಏನ್ ವ್ಯವಸ್ಥೆ ನಡೆಯುತ್ತಿದೆ, ಇಲ್ಲದ ಕತೆಗಳನ್ನು ಹೇಳಬೇಡಿ, ನಾನು ಇದನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ಟಿಎಚ್‍ಓ ಕೇಳಿದರೆ ಕೊಟ್ಟಿಲ್ಲ ಅಂತಿದ್ದಾರೆ. ಎನ್‍ಡಿಆರ್ ಎಫ್, ಎಸ್ ಡಿಆರ್ ಎಫ್ ಫಂಡ್ ನಲ್ಲಿ ಮಾಸ್ಕ್ ಕೊಳ್ಳೋಕೆ ಏನಾಗಿದೆ ನಿಮಗೆ? ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ಡಿಸಿ ಸರ್ ವಿತರಣೆ ಆಗಿದೆ ಎಂದು ಫೋನ್ ನಲ್ಲಿ ಸಬೂಬು ನೀಡಿದರು.

    ಬಳಿಕ ಸಚಿವರು ಕೆಂಡಾಮಂಡಲರಾಗಿ ಮತ್ತೆ ಕ್ಲಾಸ್ ತೆಗೆದುಕೊಂಡರು. ಆಶಾ ಕಾರ್ಯಕರ್ತರ ಜೊತೆ ವೀಡಿಯೋ ಕಾಲ್ ನಲ್ಲಿ ಮಾತನಾಡುತ್ತೀರಾ? ಅವರನ್ನೆ ಕೇಳ್ತೀರಾ ಎಂದು ಗರಂ ಆದರು. ಮಾಸ್ಕ್, ಸ್ಯಾನಿಟೈಸರ್ ಇಲ್ಲದೆ ಆಶಾಗಳು ಹಳ್ಳಿಗಳಲ್ಲಿ ಹೇಗೆ ಕೆಲಸ ಮಾಡಬೇಕು. ನಿಮ್ಮ ಮತ್ತು ಅಧಿಕಾರಿಗಳ ನಡುವೆ ಸಮನ್ವಯದ ಕೊರತೆಯಿಂದ ಜನರು ಸಾಯುತ್ತಿದ್ದಾರೆ. ಇದು ಸಾಮಾನ್ಯ ವಿಚಾರವಲ್ಲ, ತುಂಬಾ ಗಂಭೀರವಾದ ವಿಚಾರ ಬೇಗ ಕೊಡುವ ವ್ಯವಸ್ಥೆ ಮಾಡಿ ಎಂದರು.

  • ಕೊರೊನಾವನ್ನೇ ಬಂಡವಾಳ ಮಾಡಿಕೊಂಡಿದ್ದ ನಕಲಿ ವೈದ್ಯ ಡಿಸಿ ಬಲೆಗೆ

    ಕೊರೊನಾವನ್ನೇ ಬಂಡವಾಳ ಮಾಡಿಕೊಂಡಿದ್ದ ನಕಲಿ ವೈದ್ಯ ಡಿಸಿ ಬಲೆಗೆ

    ದಾವಣಗೆರೆ: ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನ ಸಹ ಭಯಭೀತರಾಗಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ನಕಲಿ ವೈದ್ಯರು, ಜನರಿಗೆ ಇಲ್ಲಸಲ್ಲದ ಚಿಕಿತ್ಸೆ ನೀಡಿ ಹಣ ವಸೂಲಿ ಮಾಡುತ್ತಿದ್ದಾರೆ. ಅಂತಹ ನಕಲಿ ವೈದ್ಯರ ಮೇಲೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ದಾಳಿ ನಡೆಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

    ಜಿಲ್ಲೆಯ ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ನಕಲಿ ವೈದ್ಯರು ಕೊರೊನಾಗೆ ಔಷಧಿ ನೀಡುತ್ತಿದ್ದಾರೆ ಎಂದು ಗ್ರಾಮದ ಯುವಕರು ಜಿಲ್ಲಾಧಿಕಾರಿಗಳ ವಾಟ್ಸಾಪ್ ಗೆ ನೀಡಿದ ಮಾಹಿತಿ ಮೇರೆಗೆ ದಾಳಿ ಮಾಡಿ, ನಕಲಿ ವೈದ್ಯನನ್ನು ವಶಕ್ಕೆ ಪಡೆದಿದ್ದಾರೆ. ಈ ವೈದ್ಯ ಯಾವುದೇ ಪದವಿ ಪಡೆದಿಲ್ಲ. ಕೆಎಂಪಿಇಯಲ್ಲಿಯೂ ನೋಂದಣಿಯಾಗಿಲ್ಲ. ಆದರೂ ಕುಂಬಳೂರು ಗ್ರಾಮದ ಮನೆಯಲ್ಲಿ ಎಲ್ಲ ವೈದ್ಯಕೀಯ ಉಪಕರಣ ಇಟ್ಟುಕೊಂಡು ಚಿಕಿತ್ಸೆ ನೀಡುತ್ತಿದ್ದ. ಇದರಿಂದ ಕೊರೊನಾದಿಂದ ಬದುಕಬೇಕಾದ ಒಂದಿಬ್ಬರು ಸತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ಮಾಡಿ, ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪೊಲೀಸರು ಹೆಚ್ವಿನ ವಿಚಾರಣೆ ನಡೆಸುತ್ತಿದ್ದಾರೆ.

    ಜಿಲ್ಲೆಯಲ್ಲಿರುವ ನಕಲಿ ವೈದ್ಯರು ಕೊರೊನಾಗೆ ಚಿಕಿತ್ಸೆ ನೀಡುವುದಾಗಿ ವಂಚಿಸುತ್ತಿದ್ದು, ಇಂಥ ನಕಲಿ ವೈದ್ಯರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹತೇಶ್ ಬಿಳಗಿ ಎಚ್ಚರಿಕೆ ನೀಡಿದ್ದಾರೆ. ಗ್ರಾಮೀಣ ಭಾಗದ ಜನರು ನಕಲಿ ವೈದ್ಯರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಸರ್ಕಾರಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಬೇಕು. ಕೊರೊನಾ ಲಕ್ಷಣ ಬಂದ ತಕ್ಷಣ ಚಿಕಿತ್ಸೆ ಪಡೆಯಬೇಕು. ನಕಲಿ ವೈದ್ಯರ ಬಳಿ ತೆರಳಿ ಮೋಸ ಹೋಗಬೇಡಿ ಎಂದು ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ನಕಲಿ ವೈದ್ಯರ ಬಗ್ಗೆ ಪಟ್ಟಿ ತಯಾರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಂಥವರ ವಿರುದ್ಧ ಕೆಎಂಪಿಇ ಮತ್ತು ಕೊರೊನಾ ವಿಪತ್ತು ಕಾಯ್ದೆ ಅಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಕಲಿ ವೈದ್ಯರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

  • ಖಾಸಗಿ ವೈದ್ಯರು ಗ್ರಾಮ ದತ್ತು ಸ್ವೀಕರಿಸಿ, ಕೊರೊನಾ ನಿಯಂತ್ರಿಸಬಹುದು- ದಾವಣಗೆರೆ ಡಿಸಿ ಮನವಿ

    ಖಾಸಗಿ ವೈದ್ಯರು ಗ್ರಾಮ ದತ್ತು ಸ್ವೀಕರಿಸಿ, ಕೊರೊನಾ ನಿಯಂತ್ರಿಸಬಹುದು- ದಾವಣಗೆರೆ ಡಿಸಿ ಮನವಿ

    ದಾವಣಗೆರೆ: ಎರಡನೇ ಅಲೆಯಲ್ಲಿ ಕೊರೊನಾ ಸೋಂಕು ಗ್ರಾಮೀಣ ಭಾಗದಲ್ಲಿ ಅತಿ ವೇಗವಾಗಿ ಹರಡುತ್ತಿದ್ದು, ಇದನ್ನು ನಿಯಂತ್ರಿಸಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಖಾಸಗಿ ವೈದ್ಯರು ಗ್ರಾಮ ದತ್ತು ಪಡೆಯಬೇಕು. ಸತತ 10 ದಿನಗಳ ಕಾಲ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ, ರೋಗಪತ್ತೆ, ಚಿಕಿತ್ಸೆ ನೀಡಲು ಖಾಸಗಿ ವೈದ್ಯರು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮನವಿ ಮಾಡಿದರು.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕಿನ 2ನೇ ಅಲೆ ಅವಧಿಯಲ್ಲಿ ನಿರೀಕ್ಷೆಗಿಂತ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಅನೇಕರು ನಮ್ಮ ಕಣ್ಣಮುಂದೆಯೇ ಮರೆಯಾಗುತ್ತಿದ್ದಾರೆ. ಸದ್ದಿಲ್ಲದೆ ಸೋಂಕು, ಬಡವರು, ಶ್ರೀಮಂತರು, ನಿರ್ಗತಿಕರು ಎನ್ನದೆ ಬಹಳಷ್ಟು ಜನರನ್ನು ಬಲಿತೆಗೆದುಕೊಳ್ಳುತ್ತಿದೆ. ದಾವಣಗೆರೆಯ ಶೇ.70ರಷ್ಟು ಹಳ್ಳಿಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಅಲ್ಲಿನ ಜನರಿಗೆ ಸರಿಯಾದ ಮಾರ್ಗದರ್ಶನ, ಜಾಗೃತಿ ಹಾಗೂ ಚಿಕಿತ್ಸೆ ಸಿಗದೆ ಮತ್ತಷ್ಟು ಹೆಚ್ಚಾಗುತ್ತಿದೆ. ಹೀಗಾಗಿ ಖಾಸಗಿ ವೈದ್ಯರು ಒಂದೊಂದು ಗ್ರಾಮವನ್ನು ದತ್ತು ಪಡೆದು ಚಿಕಿತ್ಸೆ ನೀಡಬೇಕು ಎಂದರು.

    ಈ ಹಿಂದೆ ಸಂಭವಿಸಿದ ಲಾತೂರ್ ಭೂಕಂಪ, ಕಂಡು ಕೇಳರಿಯದ ಪ್ರವಾಹ, ಕೊಡಗಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಭೂಕುಸಿತ ಸಂದರ್ಭಗಳಲ್ಲಿ ಜಿಲ್ಲೆಯ ಖಾಸಗಿ ವೈದ್ಯರ ತಂಡ, ದುರಂತ ಸ್ಥಳಗಳಿಗೆ ತೆರಳಿ, ಜನರ ಪ್ರಾಣ ರಕ್ಷಣೆ ಮಾಡಿದ ನಿದರ್ಶನವಿದೆ. ಹೀಗಾಗಿ ಜಿಲ್ಲೆಯ ವೈದ್ಯರ ಬಗ್ಗೆ ನಮಗೆ ಹೆಮ್ಮೆ ಇದೆ. ಸದ್ಯ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಗ್ರಾಮಗಳಲ್ಲಿ ವೇಗವಾಗಿ ವ್ಯಾಪಿಸುತ್ತಿದೆ, ಜಿಲ್ಲೆ ಕಷ್ಟಕರ ಪರಿಸ್ಥಿತಿ ಎದುರಿಸುತ್ತಿದೆ ಎಂದು ತಿಳಿಸಿದರು.

    ಲಾಕ್‍ಡೌನ್ ಪರಿಣಾಮವಾಗಿ ನಗರ, ಪಟ್ಟಣಗಳಿಂದ ಗ್ರಾಮಗಳಿಗೆ ಹಿಂದಿರುಗಿದ ಜನರಿಂದ ಸೋಂಕು ವ್ಯಾಪಕವಾಗುತ್ತಿದೆ. ಗ್ರಾಮಗಳಲ್ಲಿ ರೋಗದ ಬಗ್ಗೆ ಜನರಿಗೆ ಸರಿಯಾದ ತಿಳುವಳಿಕೆ ಇಲ್ಲ. ಜನರು ತಪ್ಪು ಕಲ್ಪನೆ ಹಾಗೂ ಭೀತಿಯಿಂದ ರೋಗ ಲಕ್ಷಣಗಳಿದ್ದರೂ ಪರೀಕ್ಷೆ ಮಾಡಿಸಿಕೊಳ್ಳದೆ, ರೋಗ ಮುಚ್ಚಿಡುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹವರು ರೋಗವನ್ನು ಬೇರೆಯವರಿಗೆ ಹರಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಶೇ.70ರಷ್ಟು ಪ್ರಕರಣಗಳು ಗ್ರಾಮೀಣ ಪ್ರದೇಶಗಳಿಂದ ವರದಿಯಾಗುತ್ತಿವೆ. ಹೀಗಾಗಿ ಕೋವಿಡ್ ಸೋಂಕಿನ ಕುರಿತು ಗ್ರಾಮೀಣ ಜನರಲ್ಲಿ ಸರಿಯಾದ ತಿಳುವಳಿಕೆ, ಅರಿವು ಮೂಡಿಸಬೇಕಿದೆ, ಇದರ ಜೊತೆಗೆ ಅವರಲ್ಲಿನ ತಪ್ಪು ಕಲ್ಪನೆಗಳನ್ನು ತೊಡೆದುಹಾಕಿ, ಚಿಕಿತ್ಸೆಯ ಬಗ್ಗೆ ಹಾಗೂ ಸರ್ಕಾರ ನಿಮ್ಮೊಂದಿಗಿದೆ ಎನ್ನುವ ವಿಶ್ವಾಸವನ್ನು ಮೂಡಿಸಬೇಕಿದೆ ಎಂದು ತಿಳಿಸಿದರು.

    ಗ್ರಾಮಗಳು ಉಳಿದರೆ, ಇಡೀ ದೇಶ ಉಳಿದಂತೆ. ಯಾವುದೇ ಗ್ರಾಮದಲ್ಲಿ 15 ರಿಂದ 20 ಜನರಲ್ಲಿ ಸೋಂಕು ಇರುವುದು ದೃಢಪಟ್ಟಲ್ಲಿ ಆಯಾ ಗ್ರಾಮದ ಶಾಲೆ ಅಥವಾ ಸಮುದಾಯ ಭವನದಲ್ಲಿಯೇ ಕೋವಿಡ್ ಕೇರ್ ಸೆಂಟರ್ ತೆರೆದು, ಸೋಂಕಿತರಿಗೆ ಸೂಕ್ತ ವೈದ್ಯಕೀಯ ನೆರವು ನೀಡಲು ಜಿಲ್ಲಾಡಳಿತ ಸಿದ್ಧವಿದೆ. ಅದ್ದರಿಂದ ಖಾಸಗಿ ವೈದ್ಯರು ಕನಿಷ್ಟ 2 ತಿಂಗಳು ಗ್ರಾಮಗಳ ದತ್ತು ಸ್ವೀಕರಿಸಬೇಕು. ಖಾಸಗಿ ಹಾಗೂ ಸರ್ಕಾರಿ ವೈದ್ಯರನ್ನು ಒಳಗೊಂಡ ನಿಯೋಜಿತ ತಂಡಗಳು ದತ್ತು ಸ್ವೀಕೃತ ಗ್ರಾಮಗಳಿಗೆ ಭೇಟಿ ನೀಡಿ, ಅಲ್ಲಿನ ಜನರಲ್ಲಿ ವಿಶ್ವಾಸ ಮೂಡಿಸಬೇಕು ಎಂದು ಮನವಿ ಮಾಡಿದರು.

  • ನಿಮ್ಮ ಏರಿಯಾದಲ್ಲೇ ಖರೀದಿಸಿ, ಅನಗತ್ಯ ಆಟೋ ಓಡಾಡಿದರೆ ಸೀಜ್: ಉಡುಪಿ ಡಿಸಿ

    ನಿಮ್ಮ ಏರಿಯಾದಲ್ಲೇ ಖರೀದಿಸಿ, ಅನಗತ್ಯ ಆಟೋ ಓಡಾಡಿದರೆ ಸೀಜ್: ಉಡುಪಿ ಡಿಸಿ

    ಉಡುಪಿ: ಲಾಕ್‍ಡೌನ್ ಜೂನ್ 7 ರವರೆಗೆ ಮುಂದುವರಿದರೂ ಉಡುಪಿಯಲ್ಲಿ ಸದ್ಯ ನಿಯಮಾವಳಿಯಲ್ಲಿ ಬದಲಾವಣೆ ಇಲ್ಲ. ಸದ್ಯದ ಮಟ್ಟಿಗೆ ಇರುವ ನಿಯಮಾವಳಿಗಳನ್ನು ಮುಂದುವರಿಸುತ್ತೆವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರತಿಕ್ರಿಯೆ ನೀಡಿದ್ದಾರೆ.

    ಕೆಲವೊಂದು ಕಡೆಗಳಲ್ಲಿ ರಿಕ್ಷಾಗಳು ಅನಗತ್ಯ ಸಂಚಾರ ಮಾಡುವುದು ಕಂಡುಬರುತ್ತಿದೆ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ರಿಕ್ಷಾಗಳನ್ನು ಮುಟ್ಟುಗೋಲು ಹಾಕಲಾಗುತ್ತದೆ. ಕೇವಲ ಆಸ್ಪತ್ರೆಗೆ ಸಂಚರಿಸಲು ಮಾತ್ರ ರಿಕ್ಷಾ ಬಳಕೆ ಮಾಡಬಹುದು. ದಿನಸಿ ಖರೀದಿಗೆ ಸದ್ಯ ಇರುವ ಸಮಯ ಸೂಕ್ತ ಆಗಿದ್ದು, ಒಳ್ಳೆಯ ರೀತಿಯಲ್ಲಿ ಸುಗಮವಾಗಿ ವ್ಯವಹಾರ ನಡೆಯುತ್ತಾ ಇದೆ. ಎರಡು ಅಥವಾ ಮೂರು ದಿನ ಮಾತ್ರ ಖರೀದಿಗೆ ಅವಕಾಶ ನೀಡುವುದರಿಂದ ಮತ್ತೆ ಗೊಂದಲ ಉಂಟಾಗುತ್ತದೆ.

    ಇರುವ ನಿಯಮಾವಳಿಗಳನ್ನೇ ನಾವು ಮುಂದುವರಿಸುತ್ತೆವೆ. ಅದೇ ರೀತಿ ದಿನಸಿ ಮತ್ತು ಅಗತ್ಯ ಸಾಮಾಗ್ರಿಗಳನ್ನು ಮನೆಯ ಹತ್ತಿರದ ಅಂಗಡಿಯಿಂದ ಮಾತ್ರವೇ ಖರೀದಿಸುವುದು. ದಿನಸಿ ಖರೀದಿಯ ನೆಪದಲ್ಲಿ ನಗರಕ್ಕೆ ಬಂದರೆ ವಾಹನಗಳನ್ನು ಸೀಜ್ ಮಾಡಲಾಗುತ್ತದೆ. ನಗರಸಭಾ ವ್ಯಾಪ್ತಿಯಲ್ಲಿ ಕೂಡ ತಮ್ಮ ವಾರ್ಡ್ ಬಿಟ್ಟು ಮತ್ತೊಂದು ವಾರ್ಡ್ ನ ವ್ಯಾಪ್ತಿಯಲ್ಲಿ ದಿನಸಿ ಖರೀದಿ ನೆಪದಲ್ಲಿ ವಾಹನ ಸಂಚಾರ ಮಾಡಿಸಿದರೆ ಅಂತಹ ವಾಹನಗಳನ್ನು ಕೂಡ ಮುಟ್ಟುಗೋಲು ಹಾಕಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

  • ಸರಿಯಾಗಿ ಸಂಖ್ಯೆ ನೀಡದವರು ಕೊರೊನಾ ಹೇಗೆ ನಿಯಂತ್ರಿಸ್ತೀರಿ- ಡಿಸಿಗೆ ಬೊಮ್ಮಾಯಿ ಕ್ಲಾಸ್

    ಸರಿಯಾಗಿ ಸಂಖ್ಯೆ ನೀಡದವರು ಕೊರೊನಾ ಹೇಗೆ ನಿಯಂತ್ರಿಸ್ತೀರಿ- ಡಿಸಿಗೆ ಬೊಮ್ಮಾಯಿ ಕ್ಲಾಸ್

    ಹಾವೇರಿ: ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರಿಯಾದ ಮಾಹಿತಿ ನೀಡದ ಹಿನ್ನೆಲೆ ಜಿಲ್ಲಾಧಿಕಾರಿ ಸಂಜಯ್ ಶೆಟ್ಟೆಣ್ಣವರ್ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಫುಲ್ ಗರಂ ಆಗಿದ್ದು, ಕ್ಲಾಸ್ ತೆಗೆದುಕೊಂಡಿದ್ದಾರೆ.

    ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ನಡೆಯುತ್ತಿದ್ದ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯ ಆರಂಭದಲ್ಲಿ ಜಿಲ್ಲೆಯ ಕೋವಿಡ್ ಪ್ರಕರಣಗಳ ಕುರಿತು ಸರಿಯಾದ ಅಂಕಿ ಅಂಶಗಳನ್ನು ನೀಡದ್ದರಿಂದ ಸಚಿವ ಬಸವರಾಜ್ ಬೊಮ್ಮಾಯಿ ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

    ಸರಿಯಾದ ಅಂಕಿ, ಸಂಖ್ಯೆ ನೀಡಲು ಆಗದವರು ಕೊರೊನಾ ಹೇಗೆ ನಿಯಂತ್ರಣ ಮಾಡ್ತೀರಾ ಎಂದು ಕೆಂಡಾಮಂಡಲವಾದರು. ತಕ್ಷಣವೆ ಸಂಬಂಧಿಸಿದವರನ್ನು ಅಮಾನತ್ತು ಮಾಡುವಂತೆ ಸೂಚನೆ ನೀಡಿದರು. ಡಿಎಚ್‍ಓ ಡಾ.ರಾಘವೇಂದ್ರಸ್ವಾಮಿ ಅವರನ್ನು ಬದಲಿಸಿ ತಕ್ಷಣವೇ ಜಿಲ್ಲೆಗೆ ಆಕ್ಟಿವ್ ಆಗಿರೋ ಡಿಎಚ್‍ಓ ನೇಮಿಸುವಂತೆ ಆರೋಗ್ಯ ಸಚಿವರಲ್ಲಿ ಮನವಿ ಮಾಡಿದರು.

    ಜಿಲ್ಲೆಯಲ್ಲಿ ಪ್ರತಿದಿನ ಸಾವಿನ ಸಂಖ್ಯೆ ಹೆಚ್ಚುತ್ತಿದ್ದರೂ ಸಾವಿಗೆ ಸರಿಯಾದ ಕಾರಣ ನೀಡದ್ದಕ್ಕೆ ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ಪಿ.ಆರ್.ಹಾವನೂರ ಅವರನ್ನು ತರಾಟೆಗೆ ತೆಗೆದುಕೊಂಡರು. ದಿನ ಸಾಯುತ್ತಿದ್ದಾರೆ, ಜಿಲ್ಲೆಯಲ್ಲಿನ ಸಾವಿನ ಪ್ರಮಾಣ ನೋಡಿದರೆ ಎದೆ ಝಲ್ ಅನ್ನುತ್ತೆ. ನೀವು ಒಂದು ದಿನವಾದರೂ ಸಾವಿನ ಬಗ್ಗೆ ವರದಿ ನೀಡಿದ್ದೀರಾ, ಸಾಯುವವರನ್ನ ನೋಡಿದರೆ ನಿಮಗೇನೂ ಅನ್ನಿಸೋದಿಲ್ವಾ? ಕೊರೊನಾ ಎರಡನೇ ಅಲೆಯಲ್ಲಿ ಬಹಳಷ್ಟು ಜನರು ಸಾವನ್ನಪ್ಪುತ್ತಿದ್ದಾರೆ. ಸರಿಯಾಗಿ ಕೆಲಸ ಮಾಡಿ ಪುಣ್ಯ ಕಟ್ಟಿಕೊಳ್ಳಿ ಎಂದರು.

  • ಹಳ್ಳಿ ಹಳ್ಳಿಗೆ ಜಿಲ್ಲಾಧಿಕಾರಿ- ಗ್ರಾಮೀಣ ಜನರಲ್ಲಿ ಧೈರ್ಯ ತುಂಬಿದ ಉಡುಪಿ ಡಿಸಿ

    ಹಳ್ಳಿ ಹಳ್ಳಿಗೆ ಜಿಲ್ಲಾಧಿಕಾರಿ- ಗ್ರಾಮೀಣ ಜನರಲ್ಲಿ ಧೈರ್ಯ ತುಂಬಿದ ಉಡುಪಿ ಡಿಸಿ

    ಉಡುಪಿ: ಜಿಲ್ಲೆಯ ಹಳ್ಳಿಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಹಳ್ಳಿ ಜನರ ಕಡೆ ಗಮನ ಕೊಡಿ ಎಂದು ಕೇಂದ್ರ ಸರ್ಕಾರ ಜಿಲ್ಲಾಡಳಿತಕ್ಕೆ ಸೂಚನೆ ಕೊಟ್ಟ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಜಿ.ಹಗದೀಶ್ ವಿಲೇಜ್ ಟೂರ್ ಮಾಡಿದ್ದಾರೆ.

    ಜಿಲ್ಲೆಯ ಕೋವಿಡ್ ಪೀಡಿತ ಹಳ್ಳಿಗಳಿಗೆ ಭೇಟಿ ಕೊಟ್ಟು ವ್ಯವಸ್ಥೆಗಳ ಪರಿಶೀಲನೆ ಮಾಡಿದ್ದಾರೆ. ಕಾಪು ತಾಲೂಕಿನ ಕಟಪಾಡಿ, ಪಡುಬಿದ್ರೆಗೆ ತೆರಳಿ ಅಧಿಕಾರಿಗಳು, ಆರೋಗ್ಯ ಸಿಬ್ಬಂದಿಗಳ ಜೊತೆ ಸಮಾಲೋಚನೆ ಮಾಡಿದ್ದಾರೆ.

    ಜಡಿಮಳೆಯಲ್ಲೂ ಜಿಲ್ಲಾಧಿಕಾರಿ ಹಳ್ಳಿ ಸಂಚಾರ ಮಾಡಿ ಜನಜಾಗೃತಿ ಜೊತೆ ಸೋಂಕಿತರ ಮನೆಗೆ ತೆರಳಿ ಧೈರ್ಯ ತುಂಬುತ್ತಿದ್ದಾರೆ. ಅಗತ್ಯವಿದ್ದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವಂತೆ ಮನವರಿಕೆ ಮಾಡುತ್ತಿದ್ದಾರೆ. ಹೆಬ್ರಿ ತಾಲೂಕು ಮುದ್ರಾಡಿಗೆ ತೆರಳಿ ಪರಿಸ್ಥಿತಿ ಅವಲೋಕನ ಮಾಡಿದ್ದು, ಹಳ್ಳಿಗಳಿಂದ ತಾಲೂಕಿಗೆ ಚಿಕಿತ್ಸೆಗೆ ಬರುವವರಿಗೆ ವಾಹನ ವ್ಯವಸ್ಥೆಗೂ ಜಿಲ್ಲಾಡಳಿತ ಚಿಂತನೆ ಮಾಡಿದೆ. ಶಾಸಕರ ಅನುದಾನ ಬಳಸಿಕೊಂಡು 5 ಸಾವಿರ ಆಕ್ಸಿ ಮೀಟರ್ ಗಳನ್ನು ವಿತರಿಸುವ ಯೋಜನೆ ಹೊಂದಿದ್ದಾರೆ.

    ಈ ಕುರಿತು ಮಾತನಾಡಿದ ಉಡುಪಿ ಡಿಸಿ ಜಿ.ಜಗದೀಶ್, ಕೇಂದ್ರ ಸರ್ಕಾರದಿಂದ ಬಂದಿರುವ ಆದೇಶದ ಪ್ರಕಾರ ಹಳ್ಳಿಗಳನ್ನು ಕೊರೊನಾ ಮುಕ್ತ ಮಾಡಬೇಕು. ಗ್ರಾಮಾಂತರ ಪ್ರದೇಶದ ಜನರ ಜೊತೆ ಜಿಲ್ಲಾಡಳಿತ ಸದಾ ಇರುತ್ತದೆ. ಕೊರೊನಾದ ಯಾವುದೇ ಲಕ್ಷಣಗಳು ಕಂಡು ಬಂದರೆ ಕೇರ್ ಸೆಂಟರ್, ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾಸ್ಪತ್ರೆಗೆ ಬನ್ನಿ. ಸಾಂಕ್ರಾಮಿಕ ರೋಗ ಉಲ್ಬಣವಾದ ನಂತರ ಆಸ್ಪತ್ರೆಗೆ ಬರುವುದರಿಂದ ಚಿಕಿತ್ಸೆ ನೀಡಲು ಕಷ್ಟವಾಗುತ್ತದೆ ಎಂದರು.