Tag: DC

  • ಐದು ದಿನಗಳ ಕಾಲ ಹಾವೇರಿ ಜಿಲ್ಲೆ ಸಂಪೂರ್ಣ ಲಾಕ್- ಜಿಲ್ಲಾಧಿಕಾರಿ ಆದೇಶ

    ಐದು ದಿನಗಳ ಕಾಲ ಹಾವೇರಿ ಜಿಲ್ಲೆ ಸಂಪೂರ್ಣ ಲಾಕ್- ಜಿಲ್ಲಾಧಿಕಾರಿ ಆದೇಶ

    ಹಾವೇರಿ: ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಕೆಲವು ಜಿಲ್ಲೆಗಳು ಸ್ವಯಂ ಲಾಕ್‍ಡೌನ್ ಘೋಷಣೆ ಮಾಡಿ ಕಠಿಣ ರೂಲ್ಸ್ ಜಾರಿಗೆ ಮುಂದಾಗಿವೆ. ಅದೇ ರೀತಿ ಜಿಲ್ಲೆಯಲ್ಲಿ ಸಹ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಂಜಯ್ ಶೆಟ್ಟೆಣ್ಣವರ್ ಐದು ದಿನಗಳ ಕಾಲ ಮತ್ತಷ್ಟು ಟಫ್ ರೂಲ್ಸ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

    ಮೇ 21ರ ಬೆಳಗ್ಗೆ 6 ಗಂಟೆಯಿಂದ ಮೇ 25ರ ಬೆಳಗ್ಗೆ 6 ಗಂಟೆಯವರೆಗೆ ಟಫ್ ರೂಲ್ಸ್ ಜಾರಿಯಲ್ಲಿರುತ್ತದೆ. ಹಾಲು, ಔಷಧಿ, ಆಸ್ಪತ್ರೆ, ಅಂಬುಲೆನ್ಸ್, ಪೆಟ್ರೋಲ್ ಪಂಪ್, ಅಗ್ನಿಶಾಮಕ, ಆಕ್ಸಿಜನ್ ಉತ್ಪಾದನಾ ಘಟಕ ಮತ್ತು ಎಟಿಎಂ ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳಿಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಮೇ 23ರಂದು ಮಾತ್ರ ಬೆಳಗ್ಗೆ ಆರು ಗಂಟೆಯಿಂದ ಹತ್ತು ಗಂಟೆಯವರೆಗೆ ತರಕಾರಿ ಮತ್ತು ದಿನಸಿ ಅಂಗಡಿಗಳಿಗೆ ಅವಕಾಶ ನೀಡಿದ್ದು, ಐದು ದಿನಗಳ ಕಾಲ ಹಾವೇರಿ ಜಿಲ್ಲೆಯಲ್ಲಿ ಟಫ್ ರೂಲ್ಸ್ ಮಾಡಿ ಆದೇಶ ನೀಡಿದ್ದಾರೆ.

    ಜಿಲ್ಲೆಯಲ್ಲಿ ಇಂದು 170ಕ್ಕೂ ಅಧಿಕ ಜನರಲ್ಲಿ ಸೋಂಕು ದೃಢಪಟ್ಟಿದ್ದು, 11 ಜನ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 363 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ಒಟ್ಟು 17,044 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇನ್ನೂ 1,543 ಸಕ್ರಿಯ ಪ್ರಕರಣಗಳಿವೆ. ಹೀಗಾಗಿ ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ಜಾರಿಗೆ ಮಾಡಿದ್ದು, ಐದು ದಿನಗಳ ಕಾಲ ಸಂಪೂರ್ಣ ಲಾಕ್‍ಡೌನ್ ಘೋಷಣೆ ಮಾಡಿದೆ.

  • ನಾಲ್ಕು ದಿನ ಚಿಕ್ಕಮಗಳೂರು ಸಂಪೂರ್ಣ ಸ್ತಬ್ಧ- ಜಿಲ್ಲಾಧಿಕಾರಿ ಆದೇಶ

    ನಾಲ್ಕು ದಿನ ಚಿಕ್ಕಮಗಳೂರು ಸಂಪೂರ್ಣ ಸ್ತಬ್ಧ- ಜಿಲ್ಲಾಧಿಕಾರಿ ಆದೇಶ

    ಚಿಕ್ಕಮಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಪ್ರತಿದಿನ ಸರಾಸರಿ 600 ಪ್ರಕರಣಗಳು ಪತ್ತೆಯಾಗುತ್ತಿದ್ದು, ಜಿಲ್ಲಾಡಳಿತ ಮತ್ತಷ್ಟು ಟಫ್ ರೂಲ್ಸ್ ಜಾರಿಗೆ ತರುವ ಮೂಲಕ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಮುಂದಾಗಿದೆ. ಐದು ದಿನಗಳ ಕಾಲ ಇಡೀ ಚಿಕ್ಕಮಗಳೂರು ಜಿಲ್ಲೆಯನ್ನ ಸ್ತಬ್ಧವಾಗಿಸುವಂತೆ ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ.

    ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಎಸ್‍ಪಿ, ಡಿಸಿ ಹಾಗೂ ಸಿಇಒ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಮೇ 20ರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆಯವರೆಗೆ ಇಡೀ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿರಲಿದೆ. ಜನ ಸರ್ಕಾರದ ಜೊತೆ ಸಹಕಾರ ನೀಡಬೇಕು ಎಂದು ಜಿಲ್ಲಾಡಳಿತ ಸಾರ್ವಜನಿಕರಿಗೆ ಮನವಿ ಮಾಡಿದೆ.

    ಜಿಲ್ಲೆಯಲ್ಲಿ ಹಾಲು, ಮೆಡಿಕಲ್ ಸ್ಟೋರ್ ಬಿಟ್ಟು ಉಳಿದೆಲ್ಲ ಅಂಗಡಿ-ಮುಂಗಟ್ಟುಗಳನ್ನು ಐದು ದಿನಗಳ ಕಾಲ ಸಂಪೂರ್ಣ ಬಂದ್ ಮಾಡಿ ಆದೇಶಿಸಲಾಗಿದೆ. ಹಾಲು, ಮೆಡಿಕಲ್ ಸ್ಟೋರ್ ಗಳಿಗೆ ಬೈಕ್ ಅಥವಾ ಕಾರಿನಲ್ಲಿ ಬರುವಂತಿಲ್ಲ ನಡೆದೇ ಬರಬೇಕು. ಒಂದು ವೇಳೆ ಬಂದರೆ ಗಾಡಿಯನ್ನು ಸೀಜ್ ಮಾಡುವುದಾಗಿ ಎಚ್ಚರಿಸಿದ್ದಾರೆ. ಈಗಾಗಲೇ ಜಿಲ್ಲಾದ್ಯಂತ ಮೇ 20 ರಿಂದ 24ರ ಅವಧಿಗೆ ಸುಮಾರು 200 ವಿವಾಹಗಳಿಗೆ ಅನುಮತಿ ನೀಡಿದ್ದು, ಮೇ 24ರ ನಂತರ ಮೇ 31ರವರೆಗೆ ಯಾವುದೇ ವಿವಾಹಗಳಿಗೆ ಅನುಮತಿ ನೀಡುವುದಿಲ್ಲ. ಮದುವೆಯನ್ನು ಮುಂದೂಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದು, ಅನುಮತಿ ಪಡೆದಿರೋ ಮದುವೆಗಳಿಗೂ ಕೂಡ ಕೇವಲ 10 ಜನರಷ್ಟೆ ಇರುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

    ಮೃತರ ಅಂತ್ಯಸಂಸ್ಕಾರಕ್ಕೆ ಐದು ಜನ ಮಾತ್ರ ಇರಬೇಕೆಂದು ಸೂಚಿಸಿದ್ದಾರೆ. ಹೊರ ಜಿಲ್ಲೆಯಿಂದ ಬಂದವರು ಜಿಲ್ಲಾ ಗಡಿಯ ಚೆಕ್‍ಪೋಸ್ಟ್ ನಲ್ಲಿ ಸಂಪೂರ್ಣ ಮಾಹಿತಿ ನೀಡಿ, ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್ ಇರಬೇಕು. ಇಲ್ಲವಾದರೆ ಕೇಸ್ ದಾಖಲಿಸಲಾಗುವುದು. ಆಸ್ಪತ್ರೆಗಳಿಗೆ ಹೋಗುವವರು ಆಸ್ಪತ್ರೆಯ ದಾಖಲೆಗಳನ್ನ ತೋರಿಸಿ ಹೋಗಬೇಕು. ಕೊರೊನಾ ನಿಯಂತ್ರಣಕ್ಕಾಗಿ ಮೇ 20ರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆಯವರೆಗೆ ಕಾಫಿನಾಡು ಸಂಪೂರ್ಣ ಸ್ತಬ್ಧವಾಗಿರಲಿದೆ ಎಂದರು.

    ಈಗಾಗಲೇ ಜಿಲ್ಲೆಯ ಹಳ್ಳಿಗಳಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಜಿಲ್ಲೆಯ ಸುಮಾರು 10ಕ್ಕೂ ಹೆಚ್ಚು ಹಳ್ಳಿಗಳಲ್ಲಿ 50ಕ್ಕೂ ಹೆಚ್ಚು ಕೇಸ್ ಪತ್ತೆಯಾಗಿವೆ. ಒಂದೊಂದು ಹಳ್ಳಿಗಳಲ್ಲಿ 75, 91, 123 ಕೇಸ್‍ಗಳು ಬಂದಿದ್ದು, ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಕೊರೊನಾ ಅಬ್ಬರ ಜೋರಾಗಿದೆ. ಆದ್ದರಿಂದ ಜಿಲ್ಲಾಡಳಿತ ಹಾಲಿ ಇದ್ದ ಟಫ್ ರೂಲ್ಸ್ ಜೊತೆ ಮತ್ತಷ್ಟು ಕಠಿಣ ಕಾನೂನುಗಳ ಮೂಲಕ ಕೊರೊನಾ ಕಟ್ಟಿಹಾಕಲು ಮುಂದಾಗಿದೆ.

  • ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ, ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಕೊಡಗು ಡಿಸಿ ಸೂಚನೆ

    ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ, ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಕೊಡಗು ಡಿಸಿ ಸೂಚನೆ

    ಮಡಿಕೇರಿ: ಜೂನ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಯಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚಿಸಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಗಾರು ಸಂಬಂಧ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಬಳಿಕ ಮಾತನಾಡಿದ ಅವರು, ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಹಾನಿ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ತಾಲೂಕುವಾರು ಪ್ರತ್ಯೇಕವಾಗಿ ಸಭೆ ನಡೆಸಿರು.

    ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಮಳೆ ಹಾನಿ ತಡೆಯುವ ನಿಟ್ಟಿನಲ್ಲಿ ಮುಂಚಿತವಾಗಿ, ಲಿಖಿತವಾಗಿ ಕುಟುಂಬಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಕಂದಾಯ, ಪೊಲೀಸ್, ಪಂಚಾಯತ್ ರಾಜ್, ಅರಣ್ಯ, ಸೆಸ್ಕ್, ಲೋಕೋಪಯೋಗಿ ಹೀಗೆ ಹಲವು ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಮಳೆ ಹಾನಿ ಬಗ್ಗೆ ಕಾಲಕಾಲಕ್ಕೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಸೂಚಿಸಿದರು.

    ಸೂಕ್ಷ್ಮ ಪ್ರದೇಶಗಳಲ್ಲಿನ ಕುಟುಂಬಗಳನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸುವುದು. ಸ್ಥಳೀಯ ಮಟ್ಟದಲ್ಲಿ ಟಾಸ್ಕ್‍ಪೊರ್ಸ್ ಸಮಿತಿ ಸಭೆ ನಡೆಸಿ, ಸೂಕ್ಷ್ಮ ಪ್ರದೇಶಗಳಿಗೆ ಎನ್‍ಡಿಆರೆಫ್ ತಂಡ ಭೇಟಿ ನೀಡುವುದು, ಪರಿಹಾರ ಕೇಂದ್ರ ಅಗತ್ಯವಿದ್ದಲ್ಲಿ ತೆರೆಯುವುದು. ಹೀಗೆ ಹಲವು ಕ್ರಮಗಳನ್ನು ಕೈಗೊಳ್ಳಬೇಕಿದೆ. ರಸ್ತೆ, ಸೇತುವೆ, ಮನೆ ಹಾನಿ ಬಗ್ಗೆ ಫೋಟೋ ಸಹಿತ ತಕ್ಷಣವೇ ಮಾಹಿತಿ ನೀಡುವುದು. ಭೂ ಕುಸಿತ ಉಂಟಾದಲ್ಲಿ ಹಾಗೂ ರಸ್ತೆ ಅಥವಾ ವಿದ್ಯತ್ ತಂತಿ ಮೇಲೆ ಮರ ಬಿದ್ದಲ್ಲಿ ತಕ್ಷಣವೇ ತೆರವುಗೊಳಿಸುವ ಕಾರ್ಯ ಮಾಡಬೇಕು ಎಂದರು.

    ತಹಶೀಲ್ದಾರ್ ಗೋವಿಂದರಾಜು ಮಾಹಿತಿ ನೀಡಿ, ಮುಂಗಾರು ಸಂಬಂಧ ಸೋಮವಾರಪೇಟೆ ತಾಲೂಕಿನಲ್ಲಿ ಅಗತ್ಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸೂಕ್ಷ್ಮ ಪ್ರದೇಶಗಳ 775 ಕುಟುಂಬಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಕುಶಾಲನಗರ ನೆಲ್ಯಹುದಿಕೇರಿ, ಮಾದಾಪುರ, ಗರ್ವಾಲೆ, ಸೂರ್ಲಬಿ ಮತ್ತಿತ್ತರ ಕಡೆಯಲ್ಲಿ ಪ್ರವಾಹ ಉಂಟಾಗಲಿದ್ದು, ಈ ಪ್ರದೇಶದಲ್ಲಿನ ಜನರಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. ಪರಿಹಾರ ಕೇಂದ್ರ ತೆರೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಭಾರೀ ಮಳೆಯಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇರುವುದರಿಂದ ಸೀಮೆಎಣ್ಣೆ ಪೂರೈಸಬೇಕಿದೆ ಎಂದು ತಹಶೀಲ್ದಾರ್ ಗೋವಿಂದರಾಜು ತಿಳಿಸಿದರು.

  • ಜಿಲ್ಲೆಯಲ್ಲಿ ಕಮಾಂಡರ್‌ನಂತೆ ಕೆಲಸ ಮಾಡಿ – ಡಿಸಿಗಳಿಗೆ ಸೂಚನೆ

    ಜಿಲ್ಲೆಯಲ್ಲಿ ಕಮಾಂಡರ್‌ನಂತೆ ಕೆಲಸ ಮಾಡಿ – ಡಿಸಿಗಳಿಗೆ ಸೂಚನೆ

    ಉಡುಪಿ: ಕೊರೊನಾ ಎರಡನೇ ಅಲೆ ಕಂಟ್ರೋಲ್ ಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯದ 17 ಡಿಸಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮಾಡಿದ್ದಾರೆ. ಮೋದಿ ಡಿಸಿಗಳಿಗೆ ಕೊರೊನಾ ಹತೋಟಿಗೆ ತರುವ ಕುರಿತಾಗಿ ಕಿವಿಮಾತುಗಳನ್ನು ಹೇಳಿದ್ದಾರೆ.

    ಜಿಲ್ಲಾಧಿಕಾರಿ ಕಮಾಂಡರ್ ತರ ಕೆಲಸ ಮಾಡಬೇಕು. ಜನಪ್ರರಿನಿಧಿಗಳ ಜೊತೆ ಸಮನ್ವಯ ಮಾಡಿಕೊಳ್ಳಿ. ಎಲ್ಲಾ ಮೇಲ್ವಿಚಾರಣೆ ಡಿಸಿಗಳ ಜವಾಬ್ದಾರಿ. ನಿರ್ಧಾರಗಳು ಅವಶ್ಯಕತೆ ಗಳ ಬಗ್ಗೆ ಸರ್ಕಾರದ ಗಮನಕ್ಕೆ ತನ್ನಿ. ಜನಪ್ರತಿನಿಧಿಗಳ ಕಮಿಟಿ ಮಾಡಿ. ಗ್ರಾಮ ಮಟ್ಟದಿಂದ ಟಾಸ್ಕ್ ಫೋರ್ಸ್ ಮಾಡಿ. ಕೊರೊನಾ ಜಾಗೃತಿ, ವ್ಯಾಕ್ಸಿನೇಶನ್ ಸೇರಿದಂತೆ ಸಮಗ್ರ ಮಾಹಿತಿ ಜನರಿಗೆ ತಲುಪಬೇಕು. ಗಾಳಿಸುದ್ದಿಗೆ ಕಿವಿಗೊಡದೆ ಜನರ ಆರೋಗ್ಯದ ಕಡೆ ಗಮನ ಕೊಡಿ. ಅಗತ್ಯ ಬಿದ್ದಲ್ಲಿ ಕಾರ್ ಅಂಬುಲೆನ್ಸ್ ಸಿದ್ಧಪಡಿಸಿಟ್ಟುಕೊಳ್ಳಿ. ಅಂಬುಲೆನ್ಸ್ ಕೊರತೆ ಆಗದಂತೆ ನೋಡಿಕೊಳ್ಳಿ.

    ಖಾಸಗಿ ಆಂಬುಲೆನ್ಸ್ ಕಾಯ್ದಿರಿಸಿ. ಕೊರೊನಾ ಮುಕ್ತ ಗ್ರಾಮ ನಿಮ್ಮ ಮೊದಲ ಆದ್ಯತೆಯಾಗಲಿ. ಪಂಚಾಯತ್ ಸದಸ್ಯನಿಂದ ಸಂಸದರ ತನಕ ಕೊರೊನಾ ವಿರುದ್ಧ ಹೋರಾಟಕ್ಕೆ ಶ್ರಮಿಸಬೇಕು. ಜವಾಬ್ದಾರಿ ಹಂಚುವ, ಪ್ರಗತಿ ಪರಿಶೀಲನೆ ಮಾಡುವ ಜವಾಬ್ದಾರಿ ನಿಮ್ಮದು. ಕಂಟೈನ್ಮೆಂಟ್ ಝೋನ್ ಹೆಚ್ಚು ಹೆಚ್ವು ಮಾಡಿ. ಅಲ್ಲಲ್ಲೇ ಕೊರೊನಾ ಹತ್ತಿಕ್ಕಬೇಕು. ವ್ಯಾಪಿಸದಂತೆ ತಡೆಯಬೇಕು. ಹೆಚ್ಚು ಹೆಚ್ಚು ಟೆಸ್ಟ್ ಮಾಡಿ, ಕೊರೊನಾ ಚೈನ್ ಕಟ್ ಮಾಡಿ. ಪ್ರಾಥಮಿಕ ಸಂಪರ್ಕ ಜೊತೆ ರಾಪಿಡ್ ಟೆಸ್ಟ್ ಗೂ ನ ಕೊಡಿ. ಜನರಲ್ಲಿ ಜಾಗೃತಿ ಮೂಡಿಸಿ. ಫ್ರಂಟ್ ಲೈನ್ ವಾರಿಯರ್ ಗಳಾದ ಡಾಕ್ಟರ್, ಪೋಲೀಸ್ ಮಾಧ್ಯಮ ಜೊತೆ ಚೆನ್ನಾಗಿ ಸಮನ್ವಯ ಮಾಡಿ. ಅವರು ಯಾವುದೇ ಕಾರಣಕ್ಕೆ ಧೈರ್ಯ ಕುಂದದಂತೆ ನೋಡಿಕೊಳ್ಳಿ.

    ನಿಮ್ಮ ಜಿಲ್ಲೆಯ ಪ್ರತಿ ಜೀವ ಮುಖ್ಯ. ಎಲ್ಲಾ ವಿಭಾಗದಲ್ಲೂ ಯಾವುದೇ ವಿಫಲವಾದಂತೆ ಕಾರ್ಯನಿರ್ವಹಿಸಬೇಕು. ಅದರ ಜವಾಬ್ದಾರಿ ನಿಮ್ಮ ಮೇಲಿದೆ. ಆಕ್ಸಿಜನ್ ಬಳಕೆ ಸರಿಯಾಗಿ ಮಾಡಿ. ಅವಶ್ಯಕತೆಗೆ ಸರಿಯಾಗಿ ಆಮ್ಲಜನಕ ಮ್ಯಾನೇಜ್ ಮಾಡಿಕೊಳ್ಳಿ. ಸುತ್ತಮುತ್ತಲಿನ ಜಿಲ್ಲೆ, ರಾಜ್ಯದ ಜೊತೆ ಸಂಪರ್ಕದಲ್ಲಿರಿ. ಜಿಲ್ಲೆಯನ್ನು ಕೊರೊನಾ ಮುಕ್ತ ಮಾಡೋದು ನಿಮ್ಮ ಜವಾಬ್ದಾರಿ. ಜವಾಬ್ದಾರಿ ವಹಿಸಿಕೊಂಡಿದ್ದನ್ನು ಸಾಧಿಸಿ ತೋರಿಸಿ. ಕೊರೊನಾ ಹತೋಟಿಗೆ ಬರುವವರೆಗೆ ವಿಶ್ರಾಂತಿ ಮಾಡಬೇಡಿ. ಕೊರೊನಾ ಜೊತೆ ಯುದ್ಧ ಘೋಷಣೆಯಾಗಿದೆ. ಇದು ವಿಶ್ರಾಂತಿ ಕಾಲ ಅಲ್ಲ. ಜನರ ಆರೋಗ್ಯ ಮುಖ್ಯ. ಕಾಳಜಿಯಿಂದ ಕೆಲಸ ಮಾಡಿ. ವಿರಮಿಸದೆ ಜವಾಬ್ದಾರಿ ನಿರ್ವಹಿಸಿ ಎಂದು ಪ್ರಧಾನಿ ಮೋದಿ ಸಲಹೆ ನೀಡಿ ಹೆಚ್ವುವರಿ ಜವಾಬ್ದಾರಿ ನೀಡಿದ್ದಾರೆ.

  • ಲಾಕ್‍ಡೌನ್ ಬಗ್ಗೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ: ಮೋದಿ

    ಲಾಕ್‍ಡೌನ್ ಬಗ್ಗೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ: ಮೋದಿ

    ನವದೆಹಲಿ: ಜಿಲ್ಲೆಗೆ ಅನುಗುಣವಾಗುವಂತೆ ಕ್ರಮ ಕೈಗೊಳ್ಳಿ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಲಾಕ್ ಡೌನ್ ಸಂಬಂಧ ಸಂಪೂರ್ಣ ಅಧಿಕಾರವನ್ನು ಡಿಸಿಗಳ ಹೆಗಲಿಗೆ ಹಾಕಿದ್ದಾರೆ.

    ಕರ್ನಾಟಕದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆ ಬಳಿಕ ಮಾತನಾಡಿದ ಪ್ರಧಾನಿ, ಲಾಕ್ ಡೌನ್ ನಿರ್ಧಾರವನ್ನು ಜಿಲ್ಲಾಡಳಿತದ ಹೆಗಲಿಗೆ ವಹಿಸಿದ್ದಾರೆ. ಜಿಲ್ಲೆಯ ಸ್ಥಿತಿಗೆ ತಕ್ಕಂತೆ ನಿರ್ಧಾರ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ.

    ಜಿಲ್ಲಾಡಳಿತಕ್ಕೆ ಜಿಲ್ಲೆಯ ಪರಿಸ್ಥಿತಿ ಚೆನ್ನಾಗಿ ಗೊತ್ತಿರುತ್ತೆ. ಹೀಗಾಗಿ ಜಿಲ್ಲೆಗೆ ಅನುಗುಣವಾಗಿ ನೀವೇ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ಮೋದಿ ತಿಳಿಸಿದ್ದಾರೆ.  ಇದನ್ನು ಓದಿ: ಜಿಲ್ಲೆಯಲ್ಲಿ ಕಮಾಂಡರ್‌ನಂತೆ ಕೆಲಸ ಮಾಡಿ – ಡಿಸಿಗಳಿಗೆ ಸೂಚನೆ

    ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದರೆ ಇಡೀ ದೇಶ ಗೆದ್ದಂತೆ. ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ. ಈಗಾಗಲೇ ಹಲವು ಅಧಿಕಾರಿಗಳು ತಮ್ಮ ಆಪ್ತರನ್ನು ಕಳೆದುಕೊಂಡಿದ್ದಾರೆ ಎಂದರು.

    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಮೈಸೂರು, ಕೋಲಾರ, ಮಂಡ್ಯ, ತುಮಕೂರು, ಕೊಡಗು, ಉತ್ತರ ಕನ್ನಡ, ಹಾಸನ, ಬಳ್ಳಾರಿ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಧಾರವಾಡ, ದಕ್ಷಿಣ ಕನ್ನಡ, ರಾಯಚೂರು, ಕಲಬುರಗಿ ಮೊದಲಾದ ಜಿಲ್ಲೆಗಳ ಡಿಸಿಗಳ ಜೊತೆ ಪಿಎಂ ಇಂದು ಸಂವಾದ ನಡೆಸಿದರು.

  • ರಾಜ್ಯದಲ್ಲಿ ಮತ್ತೆ ಜನತಾ ಲಾಕ್‍ಡೌನ್ ವಿಸ್ತರಣೆ ಫಿಕ್ಸ್ – ಮೇ 24ರ ಬಳಿಕವೂ ಲಾಕ್ ಲಾಕ್..!

    ರಾಜ್ಯದಲ್ಲಿ ಮತ್ತೆ ಜನತಾ ಲಾಕ್‍ಡೌನ್ ವಿಸ್ತರಣೆ ಫಿಕ್ಸ್ – ಮೇ 24ರ ಬಳಿಕವೂ ಲಾಕ್ ಲಾಕ್..!

    – ಸ್ಪೆಷಲ್ ಪ್ಯಾಕೇಜ್ ಘೋಷಿಸಲು ಸರ್ಕಾರ ಒಲವು

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕಂಟ್ರೋಲ್‍ಗೆ ಬಂದಿಲ್ಲ. ಕೇವಲ ಟೆಸ್ಟಿಂಗ್ ಕಡಿಮೆ ಮಾಡಿರೋ ಕಾರಣ ಕಡಿಮೆ ಸಂಖ್ಯೆ ಬರ್ತಿದೆ. ಆದರೆ ಸಕ್ರಿಯ ಕೇಸ್‍ಗಳ ಸಾಲಿನಲ್ಲಿ ಇಡೀ ದೇಶದಲ್ಲಿ ಕರ್ನಾಟಕವೇ ನಂಬರ್ 1. ಕರ್ನಾಟಕದಲ್ಲಿ ಭರ್ತಿ 6 ಲಕ್ಷ ಸಕ್ರಿಯ ಕೇಸ್‍ಗಳಿವೆ. ಪಾಸಿಟಿವಿಟಿ ರೇಟ್ 25ಕ್ಕಿಂತಲೂ ಹೆಚ್ಚಿದೆ. ಈ ನಿಟ್ಟಿನಲ್ಲಿ ಲಾಕ್‍ಡೌನ್‍ಗೆ ಸರ್ಕಾರದ ಸಚಿವರು, ತಜ್ಞರು ಕೂಡ ಒತ್ತಡ ಮುಂದುವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಇನ್ನೊಂದು ವಾರ ಅಂದರೆ ಮೇ 24ರ ಜೊತೆಗೆ ಮೇ 30ರವರೆಗೂ ಲಾಕ್‍ಡೌನ್ ವಿಸ್ತರಿಸೋದಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ ಅಂತ ತಿಳಿದು ಬಂದಿದೆ.

    ಕೊರೊನಾ ಸೋಂಕು, ಸಾವುಗಳು ನಿರೀಕ್ಷಿತ ಪ್ರಮಾಣದಲ್ಲಿ ಇಳಿಕೆಯಾಗದ ಕಾರಣ ಈ ತಿಂಗಳಾಂತ್ಯದವರೆಗೂ ಜನತಾ ಲಾಕ್‍ಡೌನ್ ಮುಂದುವರಿಸಲು ಚಿಂತಿಸಿದೆ. ಇದರ ಜೊತೆಗೆ ನೆರೆಯ ಕೇರಳ, ಮಹಾರಾಷ್ಟ್ರ, ದೆಹಲಿ ಸೇರಿ ಹಲವು ರಾಜ್ಯಗಳು ಶ್ರಮಿಕ ಮತ್ತು ಬಡ ವರ್ಗಕ್ಕೆ ಲಾಕ್‍ಡೌನ್ ವಿಶೇಷ ಪ್ಯಾಕೇಜ್ ಘೋಷಿಸಿರೋದು ಬಿಎಸ್‍ವೈ ಸರ್ಕಾರದ ಮೇಲೆ ಪರೋಕ್ಷ ಒತ್ತಡ ಉಂಟು ಮಾಡಿದೆ. ಅಲ್ಲದೆ ವಿಪಕ್ಷಗಳು, ಜನಸಾಮಾನ್ಯರು ವಿಶೇಷ ಪ್ಯಾಕೇಜ್‍ಗೆ ಒತ್ತಾಯಿಸಿ, ಬೀದಿಗೆ ಇಳಿಯುತ್ತಿದ್ದಾರೆ. ಹೀಗಾಗಿ ಕೆಲಸವಿಲ್ಲದೇ ಕಂಗೆಟ್ಟು ಕುಳಿತಿರುವ ಬಡ ಮತ್ತು ಶ್ರಮಿಕ ವರ್ಗಕ್ಕೆ ಸ್ಪೆಷಲ್ ಪ್ಯಾಕೇಜ್ ನೀಡಲು ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಕೊನೆಗೂ ಮನಸ್ಸು ಮಾಡಿದೆ ಎಂದು ತಿಳಿದುಬಂದಿದೆ.

    ಈಗಾಗಲೇ ಹಣಕಾಸು ಸಚಿವಾಲಯದ ಅಧಿಕಾರಿಗಳ ಜೊತೆ ಮಂಥನ ನಡೆಸಿದ್ದಾರೆ. ಇನ್ನು ಮೂರು ದಿನಗಳಲ್ಲಿ ಲಾಕ್‍ಡೌನ್ ಪ್ಯಾಕೇಜ್ ಅನ್ನು ಸಿಎಂ ಅಂತಿಮಗೊಳಿಸಲಿದ್ದಾರೆ. ಗುರುವಾರ ಅಥವಾ ಶುಕ್ರವಾರ ಲಾಕ್‍ಡೌನ್ ವಿಸ್ತರಣೆ ಮತ್ತು ಲಾಕ್‍ಡೌನ್ ಪ್ಯಾಕೇಜ್ ಬಗ್ಗೆ ಸಿಎಂ ಯಡಿಯೂರಪ್ಪ ಅಧಿಕೃತ ಘೋಷಣೆ ಹೊರಡಿಸುವ ಸಂಭವ ಇದೆ. ಆದರೆ ಈ ಆರ್ಥಿಕ ಮುಗ್ಗಟ್ಟಿನ ಈ ಸಂದರ್ಭದಲ್ಲಿ ಯಾರಿಗೆ ಯಾವ ರೀತಿಯಲ್ಲಿ ಪ್ಯಾಕೇಜ್ ಘೋಷಣೆ ಮಾಡಬಹುದು ಎಂಬ ವಿಚಾರ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

    ಲಾಕ್ ಪ್ಯಾಕೇಜ್ ನಿರೀಕ್ಷೆ..!
    * ಕರೆಂಟ್, ವಾಟರ್ ಬಿಲ್ ಆಧಾರದಲ್ಲಿ ಬಡವರ ಖಾತೆಗೆ ಹಣ..?
    * ವಾಟರ್, ಕರೆಂಟ್ ಬಿಲ್ ಪಾವತಿಗೆ 1 ತಿಂಗಳು ಹೆಚ್ಚಿನ ಕಾಲಾವಕಾಶ..?
    * ಮನೆ ತೆರಿಗೆ ಪಾವತಿಗೆ ರಿಯಾಯಿತಿ, ಸಮಯಾವಕಾಶ ಸಾಧ್ಯತೆ
    * ಮನೆ ಬಾಡಿಗೆ ಪಾವತಿಗೆ ಮಾಲೀಕರು ಒತ್ತಡ ಹಾಕುವಂತಿಲ್ಲ (ಒತ್ತಡ ಹೇರಿದ್ರೆ ಪೊಲೀಸ್ ಠಾಣೆಗೆ ಹೋಗಬಹುದು)
    * ಇಂದಿರಾ ಕ್ಯಾಂಟೀನ್‍ನಲ್ಲಿ ಈಗಾಗಲೇ ಉಚಿತ ಊಟದ ವ್ಯವಸ್ಥೆ ಆಗಿದೆ
    * ಬಿಪಿಎಲ್ ಕಾರ್ಡ್ ಆಧಾರದಲ್ಲಿ ರೇಷನ್ ಕಿಟ್ ಕೊಡಬಹುದು
    * 5 ಕೆಜಿ ಅಕ್ಕಿ ಸೇರಿದಂತೆ ಎಲ್ಲಾ ರೇಷನ್ ಒಳಗೊಂಡ ಫುಡ್ ಕಿಟ್..?

    ಜೊತೆಗೆ ಲಾಕ್‍ಡೌನ್‍ನಿಂದ ಸಾಕಷ್ಟು ತೊಂದರೆ ಅನುಭವಿಸಿರುವ ತಳಸಮುದಾಯಗಳಿಗೆ ಕಳೆದ ಬಾರಿಯಂತೆಯೇ ಹಣ ಹಾಕ್ತಾರಾ ಅನ್ನೋ ನಿರೀಕ್ಷೆ ಕೂಡ ಇದೆ.
    * ಆಟೋ/ಕ್ಯಾಬ್ ಚಾಲಕರ ಖಾತೆಗೆ ಹಣ..? (ಕಳೆದ ವರ್ಷ 5 ಸಾವಿರ ನೆರವು)
    * ಬೀದಿಬದಿ ವ್ಯಾಪಾರಿಗಳಿಗೆ ಹಣದ ನೆರವು?
    * ಮಡಿವಾಳ, ಸವಿತಾ ಸಮುದಾಯಕ್ಕೆ ನೆರವು? (ಕಳೆದ ವರ್ಷ 5 ಸಾವಿರ ನೆರವು)
    * ಕಟ್ಟಡ ಕಾರ್ಮಿಕರಿಗೆ ಮನಿ ಪ್ಯಾಕೇಜ್..?
    * ಹೋಟೆಲ್ ಕಾರ್ಮಿಕರಿಗೆ ಹಣದ ಪ್ಯಾಕೇಜ್..?
    * ಹೂ, ತರಕಾರಿ ಬೆಳೆಗಾರರಿಗೆ ಹಣದ ನೆರವು?
    * ಆಶಾ ಕಾರ್ಯಕರ್ತೆಯರಿಗೆ ಸಹಾಯ ಧನ?

    ಇನ್ನೆರಡು ವಾರ ಲಾಕ್‍ಡೌನ್‍ಗೆ ತಜ್ಞರ ಸಲಹೆ..!
    ಲೋಕಲ್ ಲಾಕ್‍ಡೌನ್ ಅಥವಾ ಜೂನ್ ತಿಂಗಳ ಮೊದಲ ಎರಡು ವಾರದವರೆಗೂ ಜನತಾ ಲಾಕ್‍ಡೌನ್ ವಿಸ್ತರಣೆ ಆಗಬಹುದು. ಯಾವುದಕ್ಕೂ ರೆಡಿ ಇರಿ ಎಂಬ ಸಂದೇಶವನ್ನು ಜಿಲ್ಲಾಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ತಲುಪಿಸಲಿದ್ದಾರೆ ಎಂದು ತಿಳಿದುಬಂದಿದೆ.

    ತಜ್ಞರ ವರದಿಯಲ್ಲಿ ಏನಿದೆ..?
    * ರಾಜ್ಯದಲ್ಲಿ ಮೇ ಅಂತ್ಯದವರೆಗೂ ಲಾಕ್‍ಡೌನ್ ವಿಸ್ತರಣೆ ಮಾಡಿ
    * ಸೋಂಕು ತಗ್ಗದಿದ್ದರೆ ಜೂನ್‍ನ ಮೊದಲ 15 ದಿನ ಕಂಪ್ಲೀಟ್ ಲಾಕ್ ಮಾಡಿ
    * ವಾರದಲ್ಲಿ 2 ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಸಮಯ ನೀಡಿ (ನಿತ್ಯ ಬೇಡ)
    * ಮದ್ಯದಂಗಡಿಗಳಲ್ಲಿ ಪಾರ್ಸೆಲ್‍ಗೂ ಬ್ರೇಕ್ ಹಾಕಿ, ಬಂದ್ ಮಾಡಿ
    * ಖಾಸಗಿ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಿ
    * ಟ್ರೇಸಿಂಗ್, ಟ್ರೀಟ್ಮೆಂಟ್, ಟೆಸ್ಟಿಂಗ್ ಹೆಚ್ಚಳ ಮಾಡಿ
    * ಹಳ್ಳಿಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕ್ರಮ ವಹಿಸಿ
    * ರಾಜ್ಯದಲ್ಲಿ ವ್ಯಾಕ್ಸಿನ್ ಕೊರತೆ ಆಗದಂತೆ ನೋಡಿಕೊಳ್ಳಿ

    ನಾಳೆ ಎಲ್ಲಾ ಡಿಸಿಗಳ ಜೊತೆ ಸಿಎಂ ಸಭೆ..!
    ಮಂಗಳವಾರ ಪ್ರಧಾನಿ ಮೋದಿ, ಸೋಂಕು ಹೆಚ್ಚಿರುವ ರಾಜ್ಯದ 17 ಜಿಲ್ಲೆಗಳ ಡಿಸಿಗಳ ಜೊತೆ ವರ್ಚೂವಲ್ ಸಭೆ ನಡೆಸಲಿದ್ದಾರೆ. ಇದಕ್ಕೂ ಒಂದು ದಿನ ಮೊದಲೇ ಅಂದ್ರೆ ನಾಳೆ ಸಿಎಂ ಯಡಿಯೂರಪ್ಪ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಲಾಕ್ ವಿಸ್ತರಣೆ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಜೊತೆಗೆ ನಾಳೆಯೇ ಕೊರೋನಾ ಉಸ್ತುವಾರಿಗಳ ಸಚಿವರ ಜೊತೆಗೂ ಸಿಎಂ ಸಮಾಲೋಚನೆ ಮಾಡಲಿದ್ದಾರೆ.

  • ರೆಮ್‍ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡಿದ್ರೆ ಕಠಿಣ ಕ್ರಮ: ಡಿಸಿ ಕೆ.ಬಿ.ಶಿವಕುಮಾರ್

    ರೆಮ್‍ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡಿದ್ರೆ ಕಠಿಣ ಕ್ರಮ: ಡಿಸಿ ಕೆ.ಬಿ.ಶಿವಕುಮಾರ್

    ಶಿವಮೊಗ್ಗ: ರೆಮ್‍ಡಿಸಿವಿರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ಎಸ್‍ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ಅಂತಹ ಪ್ರಕರಣಗಳು ಕಂಡುಬಂದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸ್ತುತ ಸರ್ಕಾರಿ ಆಸ್ಪತ್ರೆಯಲ್ಲಿ 172 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 306 ರೆಮ್‍ಡಿಸಿವಿರ್ ಇಂಜೆಕ್ಷನ್ ಲಭ್ಯವಿದೆ. ಕಾಳಸಂತೆಯಲ್ಲಿ ಮಾರಾಟವಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಇಂತಹ ಪ್ರಕರಣ ಪತ್ತೆ ಹಚ್ಚಲು ಸ್ಟಿಂಗ್ ಆಪರೇಷನ್ ಸಹ ನಡೆಸಲಾಗುತ್ತಿದೆ ಎಂದರು.

    ಜಿಲ್ಲೆಯಲ್ಲಿ ಆಕ್ಸಿಜನ್ ಬೇಡಿಕೆ ಪೂರೈಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ಮೆಗ್ಗಾನ್‍ನಲ್ಲಿ 20 ಕೆಎಲ್ ಸೇರಿದಂತೆ ಒಟ್ಟು 51ಕೆಎಲ್ ಆಕ್ಸಿಜನ್ ಸಂಗ್ರಹಣಾ ಸಾಮಥ್ರ್ಯವಿದೆ. ಭದ್ರಾವತಿಯ ವಿಐಎಸ್‍ಎಲ್‍ನಲ್ಲಿ ಗರಿಷ್ಟ ಸಾಮಥ್ರ್ಯದೊಂದಿಗೆ ಆಕ್ಸಿಜನ್ ಉತ್ಪಾದಿಸಲಾಗುತ್ತಿದ್ದು, ನೆರೆಯ ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ಸಹ ಇಲ್ಲಿಂದ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ಒಟ್ಟು 104 ವೆಂಟಿಲೇಟರ್ ಲಭ್ಯವಿದೆ. ತಾಲೂಕು ಆಸ್ಪತ್ರೆಗಳಲ್ಲಿರುವ ಕೆಲವು ವೆಂಟಿಲೇಟರ್ ಗಳನ್ನು ಅವಶ್ಯಕತೆಗಳಿಗೆ ಅನುಗುಣವಾಗಿ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ. ಶಿರಾಳಕೊಪ್ಪ ಮತ್ತು ಸೊರಬದಲ್ಲಿ ಒಂದೆರಡು ದಿನಗಳಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಸಿದ್ಧತೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಜಿಲ್ಲೆಯಲ್ಲಿ 10,760 ಕೋವಿಶೀಲ್ಡ್ ಮತ್ತು 320 ಡೋಸ್ ಕೋವ್ಯಾಕ್ಸಿನ್ ಲಭ್ಯವಿದೆ. ಕಳೆದ ನಾಲ್ಕು ದಿನಗಳಿಂದ ಕೊರೊನಾ ಪಾಸಿಟಿವ್ ರೇಟ್ ಕಡಿಮೆಯಾಗಿದೆ. ಶೇ.45 ಕ್ಕಿಂತ ಹೆಚ್ಚು ತಲುಪಿದ್ದ ಪಾಸಿಟಿವ್ ರೇಟ್ ಇದೀಗ ಶೇ.40ರ ಆಸು ಪಾಸಿಗೆ ಬಂದಿದೆ. ಸಾರ್ವಜನಿಕರ ಸಹಕಾರದಿಂದ ಇದನ್ನು ಇನ್ನಷ್ಟು ಕಡಿಮೆ ಮಾಡಲು ಸಾಧ್ಯವಿದೆ ಎಂದರು.

  • ಜ್ವರ, ಶೀತ, ಮೈಕೈ ನೋವನ್ನು ಅಸಡ್ಡೆ ಮಾಡ್ಬೇಡಿ: ಉಡುಪಿ ಡಿಸಿ

    ಜ್ವರ, ಶೀತ, ಮೈಕೈ ನೋವನ್ನು ಅಸಡ್ಡೆ ಮಾಡ್ಬೇಡಿ: ಉಡುಪಿ ಡಿಸಿ

    – ಜಿಲ್ಲೆಯ ಪರಿಸ್ಥಿತಿ ಕೈಮೀರುತ್ತಿದೆ

    ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪರಿಸ್ಥಿತಿ ಕೈಮೀರುತ್ತಿದೆ. ಸೋಂಕಿನ ಲಕ್ಷಣ ಕಂಡುಬಂದ ಕೂಡಲೇ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಉಡುಪಿ ಡಿಸಿಸಿ ಜಗದೀಶ್ ಮನವಿ ಮಾಡಿದ್ದಾರೆ.

    ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಐಸಿಯು ಭರ್ತಿಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜನರಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ತುರ್ತು ಮನವಿಯೊಂದನ್ನು ಮಾಡಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ ಪರಿಸ್ಥಿತಿ ಕೈಮೀರುವ ಹಂತದಲ್ಲಿದೆ. ದಿನೇದಿನೇ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಸೋಂಕಿನ ಲಕ್ಷಣ ಇರುವವರು ನಿರ್ಲಕ್ಷ್ಯ ಮಾಡಬಾರದು. ಲಕ್ಷಣ ಇದ್ದರೂ ಹತ್ತು ಹದಿನೈದು ದಿನ ಮನೆಯಲ್ಲೇ ಇರುವುದು ಸರಿಯಲ್ಲ ಎಂದಿದ್ದಾರೆ.

    ಕೊರೊನಾ ಉಲ್ಬಣಿಸಿದ ಬಳಿಕ ನೇರ ಐಸಿಯೂಗೆ ಬರುವವರ ಸಂಖ್ಯೆ ಹೆಚ್ಚುತ್ತಲೆ ಇದೆ, ಹೀಗೆ ಮಾಡಬೇಡಿ. ತಕ್ಷಣ ಬಂದು ಟೆಸ್ಟ್ ಮಾಡಿಸಿ. ಸರಳ ಚಿಕಿತ್ಸೆ ಮಾಡದೆ ಆರೋಗ್ಯ ಸ್ಥಿತಿ ಗಂಭೀರವಾದ ಮೇಲೆ ಆಸ್ಪತ್ರೆಗೆ ಬರುವುದು ಬಹಳ ಅಪಾಯಕಾರಿ. ವೈದ್ಯರಿಗೂ ಜೀವರಕ್ಷಣೆ ಮಾಡುವ ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ.

    ಸಂಬಂಧಿಕರು ಮತ್ತು ಬಂಧುಗಳೇ ಮನೆಗೆ ಬಂದರೂ ಸಾಮಾಜಿಕ ಅಂತರ ಪಾಲಿಸಬೇಕು. ಈ ಸಮಯದಲ್ಲಿ ಸಂಬಂಧಿಕರು ಮನೆಯಲ್ಲಿದ್ದರೂ ಐಸೊಲೇಷನ್‍ನಲ್ಲಿರಲಿ. ಮನೆಯ ಒಬ್ಬರಿಗೆ ಬಂದರೆ ಎಲ್ಲರಿಗೂ ಸೋಂಕು ಹರಡುತ್ತದೆ. ಇದರಿಂದ ಸಮಸ್ಯೆ ಬಿಗಡಾಯಿಸುತ್ತದೆ. ಜ್ವರ, ಶೀತ ಮೈಕೈ ನೋವು ಕಫ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕ ಮಾಡಿ ಎಂದಿದ್ದಾರೆ.

  • ಜಿಲ್ಲಾಡಳಿತದ ಒತ್ತಡದಿಂದ 24 ಜನ ಮೃತಪಟ್ಟಿದ್ದಾರೆ- ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಾರಾ ಮಹೇಶ್ ಗಂಭೀರ ಆರೋಪ

    ಜಿಲ್ಲಾಡಳಿತದ ಒತ್ತಡದಿಂದ 24 ಜನ ಮೃತಪಟ್ಟಿದ್ದಾರೆ- ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಾರಾ ಮಹೇಶ್ ಗಂಭೀರ ಆರೋಪ

    ಮೈಸೂರು: ಚಾಮರಾಜನಗರ ಆಮ್ಲಜನಕ ದುರಂತದಿಂದ 24 ಜನ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾರಾ ಮಹೇಶ್ ಗಂಭೀರ ಆರೋಪ ಮಾಡಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರ ಒತ್ತಡಕ್ಕೆ ಈ ಜಿಲ್ಲಾಧಿಕಾರಿಯನ್ನು ಇಟ್ಟುಕೊಂಡಿದ್ದೀರೋ ಗೊತ್ತಿಲ್ಲ. ಚಾಮರಾಜನಗರ- ಮೈಸೂರು ಜಿಲ್ಲಾಡಳಿತಗಳ ವ್ಯತ್ಯಾಸದಿಂದ ಈ ದುರ್ಘಟನೆ ನಡೆದಿದೆ. ಮೈಸೂರಿನಿಂದ ಸಕಾಲಕ್ಕೆ ಸಿಲಿಂಡರ್ ಪೂರೈಕೆ ಆಗಿಲ್ಲ. ಸದರನ್ ಗ್ಯಾಸ್‍ನಿಂದ 2.30ಕ್ಕೆ 90 ಸಿಲಿಂಡರ್ ಹೋಗಿದೆ. ಆದರೆ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿರುವಂತೆ 220 ಆಮ್ಲಜನಕ ಸಿಲಿಂಡರ್ ಪೂರೈಕೆ ಆಗಿಲ್ಲ ಎಂದಿದ್ದಾರೆ. ಕಾಂಟ್ರ್ಯಾಕ್ಟ್ ಇರುವುದು ಚಾಮರಾಜನಗರ ಜಿಲ್ಲಾಸ್ಪತ್ರೆ, ಸದರನ್ ಮತ್ತು ಪದಕಿ ಗ್ಯಾಸ್ ಏಜೆನ್ಸಿಗಳ ನಡುವೆ. ಕಳುಹಿಸಿಕೊಡಲು ನೀವು ಯಾರು? 220 ಕಳುಹಿಸಿದ್ದೇವೆ ಅಂದರೆ ನಿಮ್ಮ ಕಂಟ್ರೋಲ್ ಇರುವುದನ್ನು ಒಪ್ಪಿಕೊಂಡಂತಾಯಿತು ಎಂದು ಆರೋಪಿಸಿದರು.

    ಪ್ರತಿ ದಿನ 300-350 ಸಿಲಿಂಡರ್ ನೀಡುವಂತೆ ಆಕ್ಸಿಜನ್ ಸಿಲಿಂಡರ್ ಕಂಪನಿಗಳ ಜೊತೆ ಕಾಂಟ್ರ್ಯಾಕ್ಟ್ ಮಾಡಿಕೊಂಡಿರುತ್ತದೆ. ಆದರೆ ಈಗ ಒಂದು ವಾರದ ಹಿಂದೆ ಮೈಸೂರು ಜಿಲ್ಲಾಡಳಿತದಿಂದ ಸಭೆ ಮಾಡಿ, ಅಲ್ಲಿನ ಡ್ರಗ್ ಕಂಟ್ರೋಲರ್‍ಗೆ ಸೂಚಿಸಿ, ಚಾಮರಾಜನಗರಕ್ಕೆ 150, ಮಂಡ್ಯ 100 ಸಿಲಿಂಡರ್ ನೀಡುವಂತೆ ತಿಳಿಸುತ್ತಾರೆ. ಅಲ್ಲದೆ ಆಕ್ಸಿಜನ್‍ಗಾಗಿ ಚಾಮರಾಜನಗರದ ವಾಹನ ಬಂದು ನಿಂತರೂ ದಿನಕ್ಕೆ 20, 30, 40 ಹೀಗೆ ಮೂರ್ನಾಲ್ಕು ಬಾರಿ ಅವರು ಬರಬೇಕಿದೆ.

    ನಿಮ್ಮ ಭೂ ವ್ಯವಹಾರಗಳಿದ್ದರೆ ಮಾಡಿಸಿಕೊಳ್ಳಿ. ಆದರೆ ಮೈಸೂರಿನಂತಹ ಪ್ರಮುಖ ಜಿಲ್ಲೆಗೆ ಪ್ರಾಮಾಣಿಕ, ಹಿರಿಯ ಅಧಿಕಾರಿಯನ್ನು ನೇಮಿಸಿ. ನಿನ್ನೆ ಚಾಮರಾಜನಗರದಲ್ಲಿ ದುರಂತ ಉಂಟಾಗಿದೆ. ಮೈಸೂರಿನಲ್ಲೂ ಅದ್ವಾನಗಳು ಶುರು ಆಗಿವೆ. ದಯವಿಟ್ಟು ಕೋವಿಡ್ ನಿರ್ವಹಣೆವಾಗಿ ಬೇರೊಬ್ಬ ಅಧಿಕಾರಿಯನ್ನು ನೇಮಿಸಿ ಎಂದು ಮನವಿ ಮಾಡಿದ್ದಾರೆ.

  • ಕೋವಿಡ್ ಆಸ್ಪತ್ರೆಗೆ ಭೇಟಿ ವೇಳೆ ಚಿತ್ರದುರ್ಗ ಡಿಸಿಯಿಂದ ಎಡವಟ್ಟು

    ಕೋವಿಡ್ ಆಸ್ಪತ್ರೆಗೆ ಭೇಟಿ ವೇಳೆ ಚಿತ್ರದುರ್ಗ ಡಿಸಿಯಿಂದ ಎಡವಟ್ಟು

    ಚಿತ್ರದುರ್ಗ: ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಡವಟ್ಟು ಮಾಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

    ಡಿಸಿ ಕವಿತಾ ಮನ್ನಿಕೇರಿ ಅವರು ಚಿತ್ರದುರ್ಗ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಎಡವಟ್ಟೊಂದನ್ನು ಮಾಡಿದ್ದಾರೆ. ಅದೇನಂದರೆ ಆಸ್ಪತ್ರೆ ಭೇಟಿ ವೇಳೆ ಧರಿಸಿದ್ದ ಗೌನ್ ತೆಗೆದು ತನ್ನ ಗನ್ ಮ್ಯಾನ್ ಗೆ ನೀಡಿದ್ದಾರೆ.

    ಡಸ್ಟ್ ಬಿನ್ ಗೆ ಹಾಕುವ ಬದಲು ಕವಿತಾ, ಗನ್‍ಮ್ಯಾನ್ ಗೆ ನೀಡಿದ್ದಾರೆ. ಈ ವೇಳೆ ಗನ್ ಮ್ಯಾನ್ ಡಿಸಿ ಧರಿಸಿದ್ದ ಗೌನ್ ತನ್ನ ಕೈಯಿಂದ ಹಿಡಿದು ಡಸ್ಟ್ ಬಿನ್ ಗೆ ಹಾಕಿದ್ದಾರೆ.