Tag: DC

  • ಕಲಬುರಗಿಯಲ್ಲಿ ಇಂದು ಒಂದೇ ದಿನ 8 ಜನರಿಗೆ ಕೊರೊನಾ ಸೋಂಕು

    ಕಲಬುರಗಿಯಲ್ಲಿ ಇಂದು ಒಂದೇ ದಿನ 8 ಜನರಿಗೆ ಕೊರೊನಾ ಸೋಂಕು

    ಕಲಬುರಗಿ: ಕಲಬುರಗಿಯ ಮೋಮಿನಪುರ ಪ್ರದೇಶದ 8 ಜನರಿಗೆ ಬುಧವಾರ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

    ನಗರದ ರೋಗಿ ಸಂಖ್ಯೆ-395ರ ಸಂಪರ್ಕಕ್ಕೆ ಬಂದ 4 ವರ್ಷದ ಹೆಣ್ಣು ಮಗು, ರೋಗಿ ಸಂಖ್ಯೆ-515ರ ಸಂಪರ್ಕಕ್ಕೆ ಬಂದ 28 ವರ್ಷದ ಯುವಕ, ಮೃತ ರೋಗಿ ಸಂಖ್ಯೆ-205ರ ಸಂಪರ್ಕಕ್ಕೆ ಬಂದ 20 ಮತ್ತು 22 ವರ್ಷದ ಯುವಕರು ಹಾಗೂ ರೋಗಿ ಸಂಖ್ಯೆ-425 ಸಂಪರ್ಕಕ್ಕೆ ಬಂದ 12, 14 ಮತ್ತು 17 ವರ್ಷದ ಬಾಲಕಿ ಮತ್ತು 40 ವರ್ಷದ ಯುವತಿಗೆ ಇಂದು ಕೊರೊನಾ ಸೋಂಕು ತಗುಲಿದೆ.

    ಸೋಂಕು ಪೀಡಿತ ಮತ್ತು ಶಂಕಿತರಿಗೆ ಜಿಲ್ಲೆಯ ನಿಗದಿತ ಅಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ ಕೊರೊನಾ ಪಾಸಿಟಿವ್ ಪತ್ತೆಯಾದ 52 ಜನರಲ್ಲಿ ಒಟ್ಟು 7 ಜನ ರೋಗಿಗಳು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ 5 ಜನ ನಿಧನ ಹೊಂದಿದ್ದು, 40 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿ.ಸಿ. ಶರತ್ ಬಿ. ಮಾಹಿತಿ ನೀಡಿದ್ದಾರೆ.

  • ರಾಯಚೂರಿನಲ್ಲಿ ನಾಳೆಯಿಂದ ವ್ಯಾಪಾರ ವಹಿವಾಟು ಆರಂಭ – ಮಾಸ್ಕ್ ಧರಿಸದಿದ್ರೆ ದಂಡ

    ರಾಯಚೂರಿನಲ್ಲಿ ನಾಳೆಯಿಂದ ವ್ಯಾಪಾರ ವಹಿವಾಟು ಆರಂಭ – ಮಾಸ್ಕ್ ಧರಿಸದಿದ್ರೆ ದಂಡ

    – ಹೇರ್ ಕಟಿಂಗ್, ಪಾರ್ಲರ್ ಶಾಪ್ ಓಪನ್ ಇಲ್ಲ

    ರಾಯಚೂರು: ಗ್ರೀನ್ ಝೋನ್‍ನಲ್ಲಿರುವ ರಾಯಚೂರು ಜಿಲ್ಲೆಯಲ್ಲಿ ನಾಳೆಯಿಂದ ವ್ಯಾಪಾರ ವಹಿವಾಟುಗಳು ಆರಂಭವಾಗಲಿವೆ. ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯಾಪಾರ ಮಾಡಬಹುದು ಅಂತ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ.

    ಜಿಲ್ಲೆ ಗ್ರೀನ್ ಝೋನ್ ಪಟ್ಟಿಯಲ್ಲಿ ಇರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಮತ್ತಷ್ಟು ಸಡಿಲಿಕೆಯಾಗಿದ್ದು, ಬುಧವಾರದಿಂದ ಜಿಲ್ಲೆಯಾದ್ಯಂತ ವ್ಯಾಪಾರ- ವಹಿವಾಟು ಶುರುವಾಗಲಿದೆ. ಗ್ರಾಮೀಣ ಪ್ರದೇಶದಲ್ಲಿರುವ ಕಂಪನಿ, ಕೈಗಾರಿಕೆಗಳನ್ನ ಆರಂಭಿಸಲು ಜಿಲ್ಲಾಡಳಿತ ಅನುಮತಿ ನೀಡಿದೆ. ಆದರೆ ಸಾಮಾಜಿಕ ಅಂತರ ಕಾಪಾಡಿಕೊಂಡು ಕಂಪನಿ ಆರಂಭಿಸಲು ಸೂಚಿಸಲಾಗಿದೆ. ಜೊತೆಗೆ ಬೇರೆ ಕಡೆಗಳಿಂದ ಸಿಬ್ಬಂದಿ ಬರಬಾರದು ಅಂತ ಕಂಪನಿಯಿಂದ ಮುಚ್ಚಳಿಕೆ ಬರೆಸಿಕೊಂಡು ಆರಂಭಿಸಲು ಅನುಮತಿ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

    ಹೋಟೆಲ್ ಗಳಲ್ಲಿ ಪಾರ್ಸೆಲ್‍ಗೆ ಮಾತ್ರ ಅವಕಾಶ ನೀಡಲಾಗಿದ್ದು, ಹೇರ್ ಕಟಿಂಗ್ ಶಾಪ್‍ಗಳು, ಪಾರ್ಲರ್ ಶಾಪ್‍ಗಳು ತೆರೆಯುವಂತಿಲ್ಲ. ಬಟ್ಟೆ ಅಂಗಡಿ, ಕಿರಾಣಿ ಅಂಗಡಿ ಇತರೆ ಅತ್ಯವಶ್ಯಕ ವಸ್ತುಗಳ ಅಂಗಡಿಗಳು ಓಪನ್ ಮಾಡಲು ಅವಕಾಶ ನೀಡಲಾಗಿದೆ. ಮನೆಯಿಂದ ಅವಶ್ಯಕತೆ ಇದ್ದವರು ಮಾತ್ರ ಹೊರಬರಬೇಕು. ಮಾಸ್ಕ್ ಧರಿಸಿಕೊಂಡೇ ಹೊರಬರಬೇಕು. ನಿಯಮ ಉಲ್ಲಂಘಿಸಿದವರ ವಿರುದ್ಧ ಕೇಸ್ ಹಾಕಲಾಗುವುದು ಎಂದು ಆರ್.ವೆಂಕಟೇಶ್ ಕುಮಾರ್ ಹೇಳಿದ್ದಾರೆ.

  • ಕಲಬುರಗಿ ಜಿಲ್ಲಾಧಿಕಾರಿ ಎತ್ತಂಗಡಿ- ನೂತನ ಡಿಸಿಯಾಗಿ ವಿಕಾಸ್ ಕಿಶೋರ್ ನೇಮಕ

    ಕಲಬುರಗಿ ಜಿಲ್ಲಾಧಿಕಾರಿ ಎತ್ತಂಗಡಿ- ನೂತನ ಡಿಸಿಯಾಗಿ ವಿಕಾಸ್ ಕಿಶೋರ್ ನೇಮಕ

    ಬೆಂಗಳೂರು: ಕಲಬುರಗಿಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ರೆಡ್ ಝೋನ್‍ನಲ್ಲಿದೆ. ಈ ಸಮಯದಲ್ಲಿ ಜಿಲ್ಲಾಧಿಕಾರಿಯನ್ನೇ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದ್ದು, ಇವರ ಜಾಗಕ್ಕೆ ಸುರಾಲ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಲಾಗಿದೆ. ಬಿ.ಶರತ್ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಬೆಂಗಳೂರಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

    ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 44 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಇದರಲ್ಲಿ 30ಕ್ಕೂ ಹೆಚ್ಚು ಜನರಿಗೆ ತಬ್ಲಿಘಿಗಳಿಂದಲೇ ಕೊರೊನಾ ಸೋಂಕು ಬಂದಿದೆ. ಇನ್ನುಳಿದ ಪ್ರಕರಣಗಳು ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕದಿಂದ ಪತ್ತೆಯಾಗಿವೆ. ಬಹುತೇಕ ಜನ ತಬ್ಲಿಘಿಗಳ ಸಂಪರ್ಕದಿಂದಲೇ ಕ್ವಾರಂಟೈನ್ ಆಗಿದ್ದಾರೆ. ಇಂದು ಒಟ್ಟು ಆರು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

  • ಕೂಲಿಗೆ ಹೋಗಿಲ್ಲ, ಆಹಾರ ಕಿಟ್ ಸಿಕ್ಕಿಲ್ಲ- ಹಕ್ಕಿಪಿಕ್ಕಿ ಜನಾಂಗದವರ ಅಳಲು

    ಕೂಲಿಗೆ ಹೋಗಿಲ್ಲ, ಆಹಾರ ಕಿಟ್ ಸಿಕ್ಕಿಲ್ಲ- ಹಕ್ಕಿಪಿಕ್ಕಿ ಜನಾಂಗದವರ ಅಳಲು

    ಚಿಕ್ಕಮಗಳೂರು: ದೇಶದಲ್ಲಿ ಲಾಕ್‍ಡೌನ್ ಆದಾಗಿನಿಂದ ನಗರದ ಇಂದಿರಾಗಾಂಧಿ ಬಡಾವಣೆಯ ಹಕ್ಕಿಪಿಕ್ಕಿ ಕಾಲೋನಿಯ ಮಹಿಳೆಯರು ಕೂಲಿ ಕೆಲಸಕ್ಕೆ ಹೋಗುತ್ತಿಲ್ಲ. ನಮಗೆ ಆಹಾರ ಸಾಮಾಗ್ರಿಗಳ ಕಿಟ್ ಕೂಡ ಸಿಕ್ಕಿಲ್ಲ, ಆಹಾರ ಧಾನ್ಯಗಳೇ ಇಲ್ಲದಂತಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

    ತಕ್ಷಣವೇ ಸ್ಪಂದಿಸಿದ ಜಿಲ್ಲಾಧಿಕಾರಿ ಈ ಕುರಿತು ಅಧಿಕಾರಿಗಳಿಗೆ ಸೂಚಿಸಿದ್ದು, ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕರು ಹಕ್ಕಿಪಿಕ್ಕಿ ಜನಾಂಗಕ್ಕೆ ಸಮರ್ಪಕವಾದ ಆಹಾರ ಸಾಮಾಗ್ರಿಗಳನ್ನು ವಿತರಿಸಿದ್ದಾರೆ. ತಹಶೀಲ್ದಾರ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಹಾಗೂ ನಗರ ಸಭೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಸ್ಥಳದಲ್ಲಿ 28 ಹಕ್ಕಿಪಿಕ್ಕಿ ಅಲೆಮಾರಿ ಜನಾಂಗದವರು ವಾಸವಿರುವುದು ಕಂಡುಬಂದಿದ್ದು, 25 ಕುಟುಂಬಗಳಿಗೆ ಪಡಿತರ ಚೀಡಿ ಇದ್ದು ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿಯಂತೆ ಕಲ್ದೊಡ್ಡಿ ಸೊಸೈಟಿಯಲ್ಲಿ ಪಡಿತರ ವಿತರಿಸಲಾಗಿದೆ.

    ಕಾರ್ಡ್ ಹೊಂದಿರುವವರ ಪೈಕಿ 4 ಕುಟುಂಬಗಳಲ್ಲಿ ಕೆಲ ಸದಸ್ಯರ ಹೆಸರು ಸೇರ್ಪಡೆಯಾಗಿಲ್ಲ. 2 ಕುಟುಂಬ ಕಾರ್ಡ್ ಪಡೆಯದ ಹಿನ್ನೆಲೆ ರದ್ದಾಗಿದ್ದು, 1 ಕುಟುಂಬಕ್ಕೆ ಪಡಿತರ ಚೀಟಿ ಸಿಕ್ಕಿಲ್ಲ. ಕಡುಬಡತನ ಕುಟುಂಬಗಳಿಗೆ ಸ್ವಯಂ ಸೇವಾ ಸಂಘ-ಸಂಸ್ಥೆಗಳ ನೆರವಿನೊಂದಿಗೆ ತಾಲೂಕು ಆಡಳಿತದ ವತಿಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಲಾಗಿದೆ. ಸದ್ಯಕ್ಕೆ ಇಲ್ಲಿನ ಕುಟುಂಬಗಳಿಗೆ ಆಹಾರದ ಕೊರತೆ ಇಲ್ಲ. ಮುಂದಿನ ದಿನಗಳಲ್ಲೂ ಯಾವುದೇ ರೀತಿಯ ಆಹಾರ ಪದಾರ್ಥಗಳ ಕೊರತೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

  • ಸಿರಪ್ ಬಾಟಲ್ ಹಿಡಿದು ಜಾಲಿ ರೈಡ್- ಯುವಕನ ಬೈಕ್ ಸೀಜ್ ಮಾಡಿದ ಡಿ.ಸಿ

    ಸಿರಪ್ ಬಾಟಲ್ ಹಿಡಿದು ಜಾಲಿ ರೈಡ್- ಯುವಕನ ಬೈಕ್ ಸೀಜ್ ಮಾಡಿದ ಡಿ.ಸಿ

    ಉಡುಪಿ: ದೇಶಾದ್ಯಂತ ಕೊರೊನಾ ಲಾಕ್ ಡೌನ್ ಘೋಷಣೆಯಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ. ಆದರೂ ಜನ ಸುತ್ತಾಡುತ್ತಿದ್ದು, ಹೀಗಾಗಿ ಸುತ್ತಾಡುವವರ ವಾಹನ ಸೀಜ್ ಮಾಡಿ ಜಿಲ್ಲಾಧಿಕಾರಿ ಕೇಸ್ ದಾಖಲು ಮಾಡಿದ್ದಾರೆ.

    ಬೆಳಗ್ಗೆ 7 ಗಂಟೆಯಿಂದ 11 ಗಂಟೆ ತನಕ ಅಗತ್ಯ ವಸ್ತುಗಳ ಖರೀದಿಗೆ ಜಿಲ್ಲಾಡಳಿತ ವಿನಾಯಿತಿ ಕೊಟ್ಟಿದೆ. ಆದರೂ ಆ ಸಂದರ್ಭ ಮತ್ತು ಆ ಬಳಿಕ ಅನಗತ್ಯವಾಗಿ ನಗರದಾದ್ಯಂತ ಜನ ಓಡಾಡುತ್ತಿದ್ದಾರೆ. ಈ ಬಗ್ಗೆ ಎಸ್ಪಿ ಮತ್ತು ಡಿಸಿಗೆ ಸಾಕಷ್ಟು ದೂರುಗಳು ಬಂದಿತ್ತು. ಈ ಹಿನ್ನೆಲೆಯಲ್ಲಿ ಉಡುಪಿ ಡಿಸಿ ಜಿ ಜಗದೀಶ್ ಮತ್ತು ಎಸ್ಪಿ ವಿಷ್ಣುವರ್ಧನ್ ಬೀದಿಗಿಳಿದರು.

    ಉಡುಪಿ ನಗರದ ಕಲ್ಸಂಕ ಜಂಕ್ಷನ್ ನಲ್ಲಿ ಚೆಕ್ ಪೋಸ್ಟ್ ನಲ್ಲಿ ವಾಹನಗಳನ್ನು ತಡೆ ಹಿಡಿದು ವಿಚಾರಿಸಿದರು. ಸುಮ್ಮನೆ ಸಬೂಬು ಹೇಳಿಕೊಂಡು ತಿರುಗಾಡುತ್ತಿದ್ದ ಕಾರು, ಆಟೋ, ಬೈಕ್ ಗಳನ್ನು ಸೀಜ್ ಮಾಡಲಾಯಿತು. ಕಫದ ಸಿರಪ್ ಗಾಗಿ ನಗರದ ಮೆಡಿಕಲ್ ಗಳ ಬಳಿ ಬರುವವರನ್ನು ಜಿಲ್ಲಾಧಿಕಾರಿಗಳು ತರಾಟೆಗೆ ತೆಗೆದುಕೊಂಡರು. ದ್ವಿಚಕ್ರ ವಾಹನದಲ್ಲಿ ಡಬಲ್ ರೈಡ್ ಇದ್ದರೆ ಒಬ್ಬರನ್ನು ಕಳುಹಿಸಿದ್ದಾರೆ. ಕಾರುಗಳಲ್ಲಿ ಇಬ್ಬರಿಗೆ ಮಾತ್ರ ಅವಕಾಶ ಎಂಬುದು ಸರ್ಕಾರದ ಕಾನೂನು. ಕಾನೂನು ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಡಿಸಿ ಆದೇಶ ನೀಡಿದ್ದಾರೆ.

    ಜಿಲ್ಲೆಯಲ್ಲಿ ಹೊಸ ಪಾಸಿಟಿವ್ ಕೇಸ್ ಇಲ್ಲ ಎಂದು ಪರಿಸ್ಥಿತಿಯ ಲಾಭ ಪಡೆದುಕೊಳ್ಳುವ ಅಗತ್ಯ ಇಲ್ಲ. ಸ್ವಲ್ಪ ಎಚ್ಚರ ತಪ್ಪಿದರೂ ಮುಂದೆ ದೊಡ್ಡ ಅನಾಹುತವಾಗಬಹುದು ಜಿಲ್ಲಾಡಳಿತದ ಜೊತೆ ಆರಂಭದ ದಿನದಿಂದಲೂ ಉಡುಪಿಯ ಸಾರ್ವಜನಿಕರು ಬೆಂಬಲವಾಗಿ ನಿಂತಿದ್ದಾರೆ. ಇದನ್ನು ಮುಂದುವರಿಸಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾನವಿ ಮಾಡಿದರು.

    ಉಡುಪಿ ಎಸ್ಪಿ ವಿಷ್ಣುವರ್ಧನ್ ಮಾತನಾಡಿ, ಜಿಲ್ಲಾದ್ಯಂತ 600 ವಾಹನಗಳನ್ನು ಸೀಜ್ ಮಾಡಿದ್ದೇವೆ. ಯಾವುದೇ ಕಾರಣಕ್ಕೂ ಲಾಕ್ ಡೌನ್ ಮುಗಿಯುವ ತನಕ ವಾಹನಗಳನ್ನು ವಾಪಸ್ ಮಾಡುವುದಿಲ್ಲ. ದಂಡವನ್ನು ಕೂಡ ಹಾಕುತ್ತೇವೆ ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದರು.

  • ಅಧಿಕಾರಿ ವರ್ಗದ ಶ್ರಮಕ್ಕೆ ಯಾದಗಿರಿ ಜನತೆಯ ಮೆಚ್ಚುಗೆ

    ಅಧಿಕಾರಿ ವರ್ಗದ ಶ್ರಮಕ್ಕೆ ಯಾದಗಿರಿ ಜನತೆಯ ಮೆಚ್ಚುಗೆ

    ಯಾದಗಿರಿ: ಇಡೀ ದೇಶದಲ್ಲಿಯೆ ಪಾಪಿ ಕೊರೊನಾ ತನ್ನ ರೌದ್ರ ನರ್ತನ ಮಾಡುತ್ತಿದ್ದೆ. ಆದರೆ ಯಾದಗಿರಿಯಲ್ಲಿ ಮಾತ್ರ ಕೊರೊನಾ ಇನ್ನೂ ಎಂಟ್ರಿಯಾಗಿಲ್ಲ. ಇದಕ್ಕೆ ಕಾರಣ ಅಧಿಕಾರಿಗಳ ಪರಿಶ್ರಮ, ಹೌದು ಕೊರೊನಾ ವೈರಸ್ ಹರಡದಂತೆ ಅಧಿಕಾರಿಗಳ ವರ್ಗ ಜಿಲ್ಲೆಯಲ್ಲಿ ಹಗಲಿರುಳು ಕೆಲಸ ಮಾಡುತ್ತಿದೆ.

    ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪುತ್ ಅವರು ಹೆಂಡತಿ ಕಳೆದ 6 ತಿಂಗಳ ಹಿಂದೆ ಹೆರಿಗೆ ಸಮಯದಲ್ಲಿ ಮಗುವಿಗೆ ಜನ್ಮ ನೀಡಿ ಪ್ರಾಣ ಬಿಟ್ಟಿದ್ದರು. ಪ್ರಕಾಶ್ ಗೆ ತಮ್ಮ ಹೆಂಡತಿ ಕಳೆದುಕೊಂಡ ದುಃಖ ಒಂದು ಕಡೆಯಾದರೆ, ಹಸುಗೂಸನ್ನು ನೋಡಿಕೊಳ್ಳುವ ಜವಾಬ್ದಾರಿ ಹೆಗಲಿಗಿಲಿದೆ. ಹೀಗಿದ್ದರೂ ಪ್ರಕಾಶ್ ಜಿಲ್ಲೆಯ ಜನರ ಹಿತಕ್ಕಾಗಿ ಹಗಲು-ರಾತ್ರಿ ಶ್ರಮಿಸುತ್ತಿದ್ದಾರೆ.

    ಸದ್ಯ ಪ್ರಕಾಶ್ ಅವರಿಗೆ ಮೂವರು ಮಕ್ಕಳಿದ್ದಾರೆ. ಕೊರೊನಾ ಮುಂಜಾಗ್ರತೆಯ ಕ್ರಮವಾಗಿ ಮಕ್ಕಳಿಂದ ದೂರ ಇರುವ ಅವರು ಮನೆಯಲ್ಲಿ ಪ್ರತ್ಯೇಕವಾದ ಕೊಣೆಯಲ್ಲಿ ವಾಸವಾಗಿದ್ದಾರೆ. ಮನೆಯಲ್ಲಿ ಮಕ್ಕಳಿದ್ದರು ಮಕ್ಕಳೊಂದಿಗೆ ಖುಷಿಪಡಲು ಆಗುತ್ತಿಲ್ಲ. ಮನೆಯಲ್ಲಿ ಹಾಗೂ ಕಚೇರಿಯಲ್ಲಿ ಕೂಡ ಸಾಮಾಜಿಕ ಅಂತರ ಕಾಪಾಡಿಕೊಂಡು ಜನರ ಒಳಿತಿಗಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ.

    ಯಾದಗಿರಿ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ಅವರು ಕೂಡ ಕೊರೊನಾ ವಿರುದ್ಧ ಹಗಲಿರುಳು ಹೋರಾಟ ಮಾಡುತ್ತಿದ್ದಾರೆ. ಶಂಕರಗೌಡ ಅವರ ಪ್ರೀತಿಯ ಅಜ್ಜ ಮೃತಪಟ್ಟಿದ್ದರು ಅಜ್ಜನ ಅಂತ್ಯಕ್ರಿಯೆಯಲ್ಲಿ ಭಾಗವಹಿಸದೆ ಯಾದಗಿರಿಯಲ್ಲಿದ್ದುಕೊಂಡು ಕೊರೊನಾ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಅಜ್ಜನ ಸಾವಿನ ನೋವಿಗಿಂತ ಜನರ ನೋವು ನನಗೆ ಮುಖ್ಯ ಎನ್ನುವ ಶಂಕರಗೌಡ ಅವರು, ತಮಗೆ ವೈಯಕ್ತಿಕವಾಗಿ ಆರೋಗ್ಯ ಸಮಸ್ಯೆಯಿದ್ದರೂ ಅದನ್ನು ಲೆಕ್ಕಿಸದೇ ಕೂಲಿ ಕಾರ್ಮಿಕರು, ರೈತರು, ಜನಸಾಮಾನ್ಯರ ಬಳಿಗೆ ತೆರಳಿ ಅವರ ಸಮಸ್ಯೆ ಆಲಿಸುತ್ತಿದ್ದಾರೆ. ಈ ಇಬ್ಬರ ಕರ್ತವ್ಯ ನಿಷ್ಠೆಗೆ ಜಿಲ್ಲೆಯ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

  • ವಿಜಯಪುರದಲ್ಲಿ 686 ಜನರ ಮೇಲೆ ನಿಗಾ, 335ಕ್ಕೂ ಹೆಚ್ಚು ಜನ ಐಸೋಲೇಷನ್‍ಗೆ ಶಿಫ್ಟ್

    ವಿಜಯಪುರದಲ್ಲಿ 686 ಜನರ ಮೇಲೆ ನಿಗಾ, 335ಕ್ಕೂ ಹೆಚ್ಚು ಜನ ಐಸೋಲೇಷನ್‍ಗೆ ಶಿಫ್ಟ್

    – 256 ಸ್ಯಾಂಪಲ್ ನೆಗೆಟಿವ್, 10 ಪಾಸಿಟಿವ್

    ವಿಜಯಪುರ: ಜಿಲ್ಲೆಯಲ್ಲಿ ಇಲ್ಲಿಯವರೆಗೆ 686 ಜನರ ಮೇಲೆ ನಿಗಾ ವಹಿಸಲಾಗಿದ್ದು, 335ಕ್ಕೂ ಹೆಚ್ಚು ಜನರನ್ನು ಐಸೋಲೇಷನ್‍ ನಲ್ಲಿ ಇಡಲಾಗಿದೆ. ಒಟ್ಟು 362 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ 256 ಸ್ಯಾಂಪಲ್ ನೆಗೆಟಿವ್ ಬಂದಿವೆ, 10 ಪಾಸಿಟಿವ್ ಬಂದಿವೆ. ಅಲ್ಲದೆ ಇನ್ನೂ 96 ಪ್ರಕರಣಗಳ ಕುರಿತು ಫಲಿತಾಂಶ ಬರಬೇಕಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

    ಇಂದು ಮತ್ತೆ 60 ಸ್ಯಾಂಪಲ್ ಕಲೆಕ್ಟ್ ಮಾಡಿ ಪರೀಕ್ಷೆಗೆ ಕಳುಹಿಸಲಾಗುವದು. ಇಂದಿನ ಮೂರು ಪಾಸಿಟಿವ್ ವರದಿಗಳ ಪ್ರಕಾರ ಮೊದಲಿನ ಎರಡು ಪ್ರಕರಣಗಳು ರೋಗಿ ನಂ.221 ಗೆ ಸಂಬಂಧಿಸಿದ್ದು. ಸಂಜೆ ಬಂದ 228 ಜನರ ವರದಿಗೆ ಸಂಬಂಧಿಸಿದಂತೆ ಒಂದು ಪಾಜಿಟಿವ್ ಬಂದಿದೆ ಎಂದರು.

    ಪುಣೆಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಂಪರ್ಕದಿಂದಾಗಿ 228ನೇ ರೋಗಿಗೆ ಸೋಂಕು ತಗುಲಿದೆ. ಇವರ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಇಲ್ಲಿಯ ವರೆಗೆ ಈ ಎರಡು ಕುಟುಂಬಗಳಲ್ಲಿ ಮಾತ್ರ ಪಾಸಿಟಿವ್ ಬರುತ್ತಿದೆ. ಅವರೊಂದಿಗಿದ್ದವರಿಗೆ ಬಂದಿಲ್ಲ ಎಂಬುದು ಸಂತೋಷದ ವಿಚಾರ ಎಂದರು.

  • ಹೊರಗೆ ಬಿಡುವಂತೆ ಮುಗಿಬಿದ್ದ ಕಂಟೈನ್ಮೆಂಟ್ ಪ್ರದೇಶದ ಜನರು

    ಹೊರಗೆ ಬಿಡುವಂತೆ ಮುಗಿಬಿದ್ದ ಕಂಟೈನ್ಮೆಂಟ್ ಪ್ರದೇಶದ ಜನರು

    ಗದಗ: ಕೊರೊನಾ ವೈರಸ್‍ಗೆ ನಗರದಲ್ಲಿ ರೋಗಿ ನಂಬರ್ 166ರ 80 ವರ್ಷದ ವೃದ್ಧ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ನಗರದ ರಂಗನವಾಡಿ ಗಲ್ಲಿಯನ್ನ ಕಂಟೈನ್ಮೆಂಟ್ ಪ್ರದೇಶವೆಂದು ಘೋಷಣೆ ಮಾಡಲಾಗಿದೆ.

    ಕಳೆದ ಮೂರು ದಿನಗಳಿಂದ ಇಲ್ಲಿನ ಜನರನ್ನ ಹೊರ ಬರದಂತೆ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಲಾಗಿದ್ದು, ಬಿಗಿ ಬಂದೋಬಸ್ತ್‌ನಿಂದ ಜನರು ಹೊರಬರದಂತೆ ಹಾಗೂ ಒಳಹೋಗದಂತೆ ಮಾಡಲಾಗುತ್ತಿದೆ. ಇದರಿಂದ ರಂಗನವಾಡಿ ಕಂಟೈನ್ಮೆಂಟ್ ಪ್ರದೇಶ ಜನರು ನಮ್ಮನ್ನ ಹೊರಬಿಡುವಂತೆ ಗಲಾಟೆಗೆ ಮಾಡಿದ್ದಾರೆ.

    ನಮಗೆ ಇಲ್ಲಿ ಯಾವುದೇ ಮೂಲಭೂತ ಸೌಲಭ್ಯಗಳು ಸಿಗುತ್ತಿಲ್ಲ. ಆಹಾರ ಪದಾರ್ಥ, ಹಾಲು, ತರಕಾರಿ, ಮೆಡಿಷನ್ ಇದ್ಯಾವುದು ಸಿಗುತ್ತಿಲ್ಲ. ಅಗತ್ಯ ವಸ್ತುಗಳನ್ನು ತರಲು ಹೋಗಲು ಪೊಲೀಸರು ಬಿಡುತ್ತಿಲ್ಲ. ಜೊತೆಗೆ ಈ ಏರಿಯಾದಲ್ಲಿ ಶೌಚಾಲಯಗಳಿಲ್ಲ. ಇದರಿಂದ ನಮಗೆ ಸಾಕಷ್ಟು ತೊಂದರೆಯಾಗುತ್ತಿದೆ. ನಮ್ಮನ್ನ ಹೊರಬಿಡಿ ಅಂತ ಮಹಿಳೆಯರು, ಮಕ್ಕಳು, ಯುವಕರು ಗಲಾಟೆ ಮಾಡಿದ್ದಾರೆ.

    ಮಾಹಿತಿ ತಿಳಿದು ಸ್ಥಳಕ್ಕೆ ಗದಗ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಭೇಟಿ ನೀಡಿ, ಅವರ ಸಮಸ್ಯೆಗಳನ್ನು ಆಲಿಸಿದ್ದಾರೆ. ನಂತರ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ನಿಷೇಧಿತ ಪ್ರದೇಶದ ಜನರನ್ನು ಯಾವುದೇ ಕಾರಣಕ್ಕೂ ಹೊರಬಿಡಲ್ಲ. ಶೌಚಾಲಯ ಸಮಸ್ಯೆ ಆದರೆ ನಗರಸಭೆಯಿಂದ ಮೊಬೈಲ್ ಟಾಯ್ಲೆಟ್ ಮಾಡುತ್ತೀವಿ. ಹಾಲು, ಆಹಾರ, ದಿನಸಿ ಹಾಗೂ ಕಿರಾಣಿ ಸಾಮಗ್ರಿ ಮನೆಗೆ ತಲುಪಿಸುತ್ತೇವೆ. ಲಾಕ್‍ಡೌನ್ ಮುಗಿಯುವವರೆಗೆ ನಿಷೇಧಿತ ಪ್ರದೇಶದ ಜನರನ್ನು ಹೊರಬಿಡುವುದಿಲ್ಲ ಎಂದು ಹೇಳಿದರು.

    ಕಂಟೈನ್ಮೆಂಟ್ ಪ್ರದೇಶದ ಜನರ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಾಗಿ ಡಿಸಿ ಭರವಸೆ ನೀಡಿದ್ದಾರೆ. ಈ ವೇಳೆ ಗದಗ ಜಿಲ್ಲಾಧಿಕಾರಿ, ಡಿವೈಎಸ್‍ಪಿ ಪ್ರಹ್ಲಾದ್ ಸೇರಿದಂತೆ ಎಲ್ಲ ಅಧಿಕಾರಿಗಳು ಸ್ಥಳೀಯರ ಮನವೊಲಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಲಾಕ್‍ಡೌನ್ ಮುಗಿಯುವವರೆಗೆ ಹೊರಬರಬೇಡಿ. ನಿಮಗೆ ಬೇಕಾಗುವ ಸೌಲಭ್ಯಗಳನ್ನ ಕಲ್ಪಿಸುತ್ತೇವೆ ಎಂದು ಭರವಸೆ ನೀಡಿದರು.

  • 400 ಬುಡಕಟ್ಟು ಕುಟುಂಬಗಳಿಗೆ ಪಡಿತರ ಕೊಡದೆ ವಂಚನೆ – ಡಿಸಿಯಿಂದ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ರದ್ದು

    400 ಬುಡಕಟ್ಟು ಕುಟುಂಬಗಳಿಗೆ ಪಡಿತರ ಕೊಡದೆ ವಂಚನೆ – ಡಿಸಿಯಿಂದ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ರದ್ದು

    – ಕಡೆಗೂ ಸೋಲಿಗರಿಗೆ ತಲುಪಿದ ಪಡಿತರ

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಹಿರಿಯಂಬಲ ಹಾಗೂ ಕತ್ತೆಕಾಲು ಪೋಡಿನ 400 ಬುಡಕಟ್ಟು ಸೋಲಿಗರ ಕುಟುಂಬಗಳಿಗೆ ಪಡಿತರ ಧಾನ್ಯ ವಿತರಣೆ ಮಾಡದೆ ಅನ್ಯಾಯ ಮಾಡಲಾಗುತ್ತಿದೆ ಎಂದು ವರದಿ ಮಾಡಲಾಗಿತ್ತು. ಈ ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ ಕೊನೆಗೂ ವಿತರಣೆಯಲ್ಲಿ ವಂಚನೆ ಮಾಡಿದ್ದ ನ್ಯಾಯಬೆಲೆ ಅಂಗಡಿಯ ಲೈಸೆನ್ಸ್ ಅನ್ನು ಅಮಾನತು ಮಾಡಿ ಆದೇಶಿಸಿದೆ.

    ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ ಸ್ಥಳಕ್ಕೆ ಅಧಿಕಾರಿಗಳನ್ನು ಕಳುಹಿಸಿ ವರದಿ ತರಿಸಿಕೊಂಡು ಹಿರಿಯಂಬಲ ಬ್ರಹ್ಮೇಶ್ವರ ನ್ಯಾಯಬೆಲೆ ಅಂಗಡಿಯ ಲೈಸೆನ್ಸ್ ರದ್ದುಪಡಿಸಿದೆ. ಜಿಲ್ಲಾಧಿಕಾರಿ ಎಂ.ಆರ್.ರವಿ ಅವರ ನಿರ್ದೇಶನದ ಮೇರೆಗೆ ಆಹಾರ ಇಲಾಖೆ ಉಪನಿರ್ದೇಶಕ ರಾಚಪ್ಪ ನ್ಯಾಯಬೆಲೆ ಅಂಗಡಿಯ ಲೈಸೆನ್ಸ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಸರ್ಕಾರ ನಿಗದಿ ಮಾಡಿರುವ ಪ್ರಮಾಣದಲ್ಲಿ ಪ್ರತಿಯೊಂದು ಸೋಲಿಗ ಕುಟುಂಬಕ್ಕೂ ಪಡಿತರ ವಿತರಿಸಲು ಕ್ರಮಕೈಗೊಂಡಿದೆ.

    ಪಡಿತರ ವಿತರಣೆ ಜವಾಬ್ದಾರಿಯನ್ನು ಬೂದಿಪಡಗದಲ್ಲಿರುವ ನ್ಯಾಯಬೆಲೆ ಅಂಗಡಿಗೆ ವಹಿಸಲಾಗಿದ್ದು, ಇಂದಿನಿಂದ ನ್ಯಾಯಯುತವಾಗಿ ಪಡಿತರ ವಿತರಣೆಯಾಗುತ್ತಿದೆ. ಕೂಲಿ ನಂಬಿ ಜೀವನ ಮಾಡುವ ಬುಡಕಟ್ಟು ಸೋಲಿಗರಿಗೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕೂಲಿ, ಆಹಾರ ಧಾನ್ಯವೂ ಇಲ್ಲದೆ ಪರಿತಪಿಸುವಂತಾಗಿತ್ತು. ನ್ಯಾಯಬೆಲೆ ಅಂಗಡಿ ಮಾಲೀಕ ಸರ್ಕಾರದ ಸೂಚನೆಯನ್ನು ದಿಕ್ಕರಿಸಿ ಬಯೋಮೆಟ್ರಿಕ್ ಗುರುತುಪಡೆದು ಪಡಿತರ ವಿತರಣೆ ಮಾಡಿರಲಿಲ್ಲ. ಜೊತೆಗೆ ಪಕ್ಕದ ಹೊಸಪೋಡು ಹಾಗೂ ಗುಂಡಿಮಾಳ ಗ್ರಾಮದಲ್ಲಿ ನಿಗದಿಗಿಂತ ಕಡಿಮೆ ಪ್ರಮಾಣದಲ್ಲಿ ಪಡಿತರ ವಿತರಿಸಿ ಸೋಲಿಗರನ್ನು ವಂಚಿಸುತ್ತಿದ್ದ. ಪ್ರತಿ ಕಾರ್ಡ ದಾರರಿಗೆ ಎರಡು ತಿಂಗಳ ಪಡಿತರ 70 ಕೆ.ಜಿ. ಅಕ್ಕಿ ನೀಡಬೇಕಿತ್ತು. ಆದರೆ ಈತ ಕೇವಲ 50 ಕೆ.ಜಿ. ನೀಡಿ ವಂಚಿಸಲಾಗಿತ್ತು.

    ಇಷ್ಟೇ ಅಲ್ಲದೆ ಈ ನ್ಯಾಯಬೆಲೆ ಅಂಗಡಿಯಲ್ಲಿ 80 ರೂಪಾಯಿ ನೀಡಿ ಖಾಸಗಿ ಕಂಪನಿಯೊಂದರ ವಾಷಿಂಗ್ ಸೋಪ್, ವಾಷಿಂಗ್ ಪೌಡರ್ ಖರೀದಿಸಿದವರಿಗೆ ಮಾತ್ರ ಪಡಿತರ ವಿತರಿಸಲಾಗುತ್ತಿತ್ತು. ಈ ಎಲ್ಲಾ ಅಕ್ರಮಗಳ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದೀಗ ಈ ಅಕ್ರಮಗಳಿಗೆ ಕಡಿವಾಣ ಬಿದ್ದಿದೆ. ಸೋಲಿಗ ಕುಟುಂಬಗಳಿಗೂ ಸರ್ಕಾರ ನಿಗದಿಮಾಡಿರುವ ಪ್ರಮಾಣದಲ್ಲಿ ಉಚಿತವಾಗಿ ಪಡಿತರ ವಿತರಣೆ ಆರಂಭಿಸಲಾಗಿದ್ದು, ಬಡ ಸೋಲಿಗರಿಗೆ ಕೊನೆಗೂ ನ್ಯಾಯದೊರೆತಂತಾಗಿದೆ.

  • ನಿರ್ಗತಿಕರಿಗೆ ಆಹಾರ ನೀಡುವಾಗ ಸೆಲ್ಫಿ, ಫೋಟೋ ತೆಗೆದರೆ ಎಫ್‍ಐಆರ್

    ನಿರ್ಗತಿಕರಿಗೆ ಆಹಾರ ನೀಡುವಾಗ ಸೆಲ್ಫಿ, ಫೋಟೋ ತೆಗೆದರೆ ಎಫ್‍ಐಆರ್

    ಜೈಪುರ: ನಿರ್ಗತಿಕರಿಗೆ ಆಹಾರ ನೀಡುವಾಗ ಸೆಲ್ಫಿ ತೆಗೆಯುವುದು ವಿಡಿಯೋ ಮಾಡುವುದು ಮಾಡಿದರೆ ಅಂತವರ ಮೇಲೆ ಕಠಿಣ ಕ್ರಮ ಕೈಗೊಂಡು ಎಫ್‍ಐಆರ್ ದಾಖಲಿಸಲಾಗುವುದು ಎಂದು ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ಡಿಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಕೊರೊನಾ ವೈರಸ್ ಭೀತಿಗೆ ದೇಶ ಲಾಕ್‍ಡೌನ್ ಆಗಿ 15ಕ್ಕೂ ಹೆಚ್ಚಿನ ದಿನಗಳಾಗಿವೆ. ಈ ನಡುವೆ ಕೆಲವರಿಗೆ ಊಟ ನೀರು ಸಿಗದೆ ಪರಾದಾಡುತ್ತಿದ್ದಾರೆ. ಈ ರೀತಿಯ ನಿರ್ಗತಿಕರಿಗೆ ಕೆಲವರು ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ. ಆದರೆ ಈ ವೇಳೆ ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಬಾರದು ಎಂದು ಅಜ್ಮೀರ್ ಜಿಲ್ಲೆಯ ಡಿಸಿ ವಿಶ್ವ ಮೋಹನ್ ಶರ್ಮಾ ಆದೇಶ ಮಾಡಿದ್ದಾರೆ.

    ಈ ವಿಚಾರವಾಗಿ ಮಾತನಾಡಿರುವ ಡಿಸಿ ವಿಶ್ವ ಮೋಹನ್ ಶರ್ಮಾ, ಲಾಕ್‍ಡೌನ್ ಸಮಯದಲ್ಲಿ ನಿರ್ಗತಿಕರಿಗೆ ಬಡವರಿಗೆ ಆಹಾರ ನೀಡುವುದು ಒಳ್ಳೆಯ ಕೆಲಸ. ದೇಶ ಈ ರೀತಿಯ ಸಂಕಷ್ಟಕ್ಕೆ ಸಿಲುಕಿದ ಪರಿಸ್ಥಿತಿಯಲ್ಲಿ ಸಹಾಯ ಮಾಡುವ ಜನರಿಗೆ ನಾವು ಪ್ರೋತ್ಸಾಹ ನೀಡುತ್ತೇವೆ. ಆದರೆ ಇದನ್ನೇ ಮುಂದೆ ಇಟ್ಟುಕೊಂಡು ಬಡವರಿಗೆ ಸಹಾಯ ಮಾಡಿ ಅದರ ಫೋಟೋ ತಗೆದುಕೊಳ್ಳುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.

    ಊಟವಿಲ್ಲದವರಿಗೆ ಆಹಾರ ನೀಡಿ ಈ ವೇಳೆ ಅವರ ಜೊತೆ ಸೆಲ್ಫಿ ತೆಗೆದುಕೊಂಡು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಬಾರದು. ಇದರಿಂದ ಅವರಿಗೇ ಅವಮಾನ ಮಾಡಿದ ರೀತಿಯಲ್ಲಿ ಆಗುತ್ತದೆ. ಆದ್ದರಿಂದ ಈ ರೀತಿಯ ಪ್ರಕರಣಗಳು ನಮ್ಮ ಜಿಲ್ಲೆಯಲ್ಲಿ ಕಂಡುಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ತೆಗದುಕೊಳ್ಳಲಾಗುವುದು ಜೊತೆಗೆ ಎಫ್‍ಐಆರ್ ಕೂಡ ಹಾಕಲಾಗುವುದು ಎಂದು ಡಿಸಿ ವಾರ್ನಿಂಗ್ ನೀಡಿದ್ದಾರೆ.

    ಕಳೆದ 16 ದಿನಗಳಿಂದ ದೇಶದಲ್ಲಿ ಹಲವಾರು ಜನರು ಸಂಸ್ಥೆಗಳು ಸೆಲೆಬ್ರಿಟಿಗಳು ಹಸಿದವರಿಗೆ ಆಹಾರ ನೀಡುವ ಕೆಲಸ ಮಾಡುತ್ತಿವೆ. ಆದರೆ ಇದರ ಜೊತೆ ಕೆಲ ಜನರು ಮಾಡಿರುವ ಸಹಾಯವನ್ನು ಫೋಟೋದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುತ್ತಿದ್ದಾರೆ. ಇತ್ತೀಚೆಗೆ ಅಜ್ಮೀರ್ ಜಿಲ್ಲೆಯಲ್ಲಿ ಆಹಾರವಿಲ್ಲದವರಿಗೆ ಎರಡು ಬಾಳೆಹಣ್ಣು ನೀಡಿ ಫೋಟೋ ತೆಗದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಈ ಕಾರಣದಿಂದ ಡಿಸಿ ಈ ಆದೇಶ ಹೊರಡಿಸಿದ್ದಾರೆ.