Tag: DC

  • ಕಲಬುರಗಿಗೆ ಬರುವಾಗ ಚೈತ್ರಾ ವಶಕ್ಕೆ – ಯಾದಗಿರಿ ಗಡಿ ದಾಟಿಸಿ ಬಿಟ್ಟ ಪೊಲೀಸರು

    ಕಲಬುರಗಿಗೆ ಬರುವಾಗ ಚೈತ್ರಾ ವಶಕ್ಕೆ – ಯಾದಗಿರಿ ಗಡಿ ದಾಟಿಸಿ ಬಿಟ್ಟ ಪೊಲೀಸರು

    ಕಲಬುರಗಿ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಜಿಲ್ಲೆಯ ಶಹಬಾದ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಚೈತ್ರಾ ಮಂಗಳವಾರ ನಡೆಯಲಿರುವ ಆಳಂದ ಚಲೋ ಕಾರ್ಯಕ್ರಮದ ಹಿನ್ನಲೆಯಲ್ಲಿ ಕಲಬುರಗಿಗೆ ಆಗಮಿಸುತ್ತಿದ್ದರು. ಈ ವೇಳೆ ಯಾದಗಿರಿ ಮಾರ್ಗವಾಗಿ ಕಲಬುರಗಿಗೆ ಆಗಮಿಸುವಾಗ ಪೊಲೀಸರು ವಶಕ್ಕೆ ಪಡೆದು ಯಾದಗಿರಿ ಜಿಲ್ಲೆಯ ಗಡಿ ದಾಟಿಸಿ ಬಿಟ್ಟಿದ್ದಾರೆ.

    ಚೈತ್ರಾ ಮತ್ತು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ನಗರದ ಜಿಲ್ಲಾಡಳಿತವು ನಿರ್ಬಂಧ ಹೇರಿದೆ. ಇದನ್ನೂ ಓದಿ: ಪ್ರಮೋದ್ ಮುತಾಲಿಕ್, ಚೈತ್ರಾ ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಿದ ಡಿಸಿ

    ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ.27 ರಿಂದ ಮಾ.3ರ ವರೆಗೆ ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ ಅವರಿಗೆ ಜಿಲ್ಲೆಯನ್ನು ಪ್ರವೇಶಿಸದಂತೆ ನಿರ್ಬಂಧಗಳನ್ನು  ಡಿಸಿ ಹೇರಿದ್ದರು.

    ಸಿಆರ್‍ಪಿಸಿ ಕಾಯ್ದೆ-1973ರ ಕಲಂ-132, 143, 144 ಹಾಗೂ 144ಎ ಅನ್ವಯ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಭಾನುವಾರ ಆದೇಶ ಹೊರಡಿಸಿದ್ದರು. ಇದಲ್ಲದೆ ಜೇವರ್ಗಿ ತಾಲೂಕಿನ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಸಹ ಫೆ.27 ರಿಂದ ಮಾ.3ರ ವರೆಗೆ ಆಳಂದ ತಾಲೂಕು ಪ್ರವೇಶಿಸದಂತೆ ನಿಬರ್ಂಧ ವಿಧಿಸಲಾಗಿತ್ತು.

  • ರೈತನಿಗೆ ಪರಿಹಾರ ನೀಡಲು ವಿಳಂಬ – ಜಿಲ್ಲಾಧಿಕಾರಿ ಕಾರು ಜಪ್ತಿಗೆ ನ್ಯಾಯಾಲಯ ಆದೇಶ

    ರೈತನಿಗೆ ಪರಿಹಾರ ನೀಡಲು ವಿಳಂಬ – ಜಿಲ್ಲಾಧಿಕಾರಿ ಕಾರು ಜಪ್ತಿಗೆ ನ್ಯಾಯಾಲಯ ಆದೇಶ

    ಕಲಬುರಗಿ: ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ರೈತ ಕಲ್ಲಪ್ಪ ಮೇತ್ರೆಯವರಿಗೆ ಪರಿಹಾರ ನೀಡುವಲ್ಲಿ ವಿಳಂಬವಾದ ಕಾರಣಕ್ಕೆ ಜಿಲ್ಲಾಧಿಕಾರಿ ಯಶವಂತ್ ಗುರುಕರ್‌ರವರ ಸರ್ಕಾರಿ ಕಾರು ಜಪ್ತಿಗೆ ಕಲಬುರಗಿಯ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆದೇಶಸಿದೆ.

    2008ರಲ್ಲಿ ರೈತ ಕಲ್ಲಪ್ಪ ಮೇತ್ರೆಯ 33 ಗುಂಟೆ ಜಮೀನು ಭೀಮಾ ಏತ ನಿರಾವರಿ ಯೋಜನೆಯಲ್ಲಿ ಮುಳುಗಡೆಯಾಗಿತ್ತು. ಮುಳುಗಡೆಯಾದ ಜಮೀನಿಗೆ 7.39.632 ಪರಿಹಾರ ನೀಡವಂತೆ ಕೋರ್ಟ್ ಆದೇಶ ಮಾಡಿತ್ತು. ಕೋರ್ಟ್ ಆದೇಶ ಆದರೂ ಪರಿಹಾರ ನೀಡದ ಹಿನ್ನೆಲೆಯಲ್ಲಿ ಕಾರು ಜಪ್ತಿಗೆ ಇದೀಗ ಕೋರ್ಟ್ ಆದೇಶ ಮಾಡಿದೆ. ಕೋರ್ಟ್ ಆದೇಶದ ಹಿನ್ನೆಲೆ ಕಾರು ಜಪ್ತಿಗೆ ಕೋರ್ಟ್ ಸಿಬ್ಬಂದಿ ಮತ್ತು ವಕೀಲರು ಆಗಮಿಸಿದ್ದಾರೆ. ಇದನ್ನೂ ಓದಿ: ಹೋಟೆಲ್‍ನಲ್ಲಿ ಊಟ, ತಿಂಡಿ ಸಪ್ಲೈಗೆ ಬಂತು ರೋಬೋ – ಮೈಸೂರಿನ ಜನತೆಯ ಮನಗೆದ್ದ ಸಪ್ಲೇಯರ್ ಲೇಡಿ

    ಕೂಡಲೇ ಎಚ್ಚೆತ್ತ ಭೂಸ್ವಾಧೀನ ಇಲಾಖೆ ಅಧಿಕಾರಿಗಳು ವಕೀಲರೊಂದಿಗೆ ಮತ್ತು ಕಲ್ಲಪ್ಪ ಜೊತೆ ಸಂಧಾನ ನಡೆಸಿ ಚೆಕ್ ಕೋರ್ಟ್‌ ನೀಡುವುದಾಗಿ ಹೇಳಿದ್ದಾರೆ. ಬಳಿಕ ಕಲ್ಲಪ್ಪ ಅಧಿಕಾರಿಗಳಿಗೆ ಹಣ ಪಾವತಿಸುವಂತೆ ಕಾಲಾವಕಾಶ ನೀಡಿದ್ದಾರೆ. ಇದನ್ನೂ ಓದಿ: ಕೋರ್ಟ್ ತೀರ್ಪು ಬರುವವರೆಗೂ ಮಗಳು ಮನೆಯಲ್ಲೇ ಇರಲಿ: ಮಂಡ್ಯ ಪೋಷಕರು

  • ಮಂಡ್ಯದಲ್ಲಿ ಜ.31ರ ವರೆಗೆ ಟಫ್ ರೂಲ್ಸ್ ಜಾರಿ

    ಮಂಡ್ಯದಲ್ಲಿ ಜ.31ರ ವರೆಗೆ ಟಫ್ ರೂಲ್ಸ್ ಜಾರಿ

    ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಜಿಲ್ಲಾಡಳಿತ ಜನವರಿ 31ರ ವರೆಗೆ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಸ್ತರಣೆ ಮಾಡಿದ್ದು, ಮತ್ತಷ್ಟು ಟಫ್ ರೂಲ್ಸ್ ಗಳನ್ನು ಜಾರಿಗೆ ತಂದಿದೆ.

    ದಿನೇ ದಿನೇ ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲಾದ್ಯಂತ 144 ಸೆಕ್ಷನ್ ವಿಸ್ತರಣೆಯಾಗಿದರ. ಹೀಗಾಗಿ ಜನವರಿ ಅಂತ್ಯದವರೆಗೂ ನಿಷೇಧಾಜ್ಞೆ ವಿಸ್ತರಿಸಿರುವುದಾಗಿ ಹಾಗೂ ವಿಕೇಂಡ್, ನೈಟ್ ಕರ್ಫ್ಯೂವನ್ನು ಮುಂದುವರಿಸುವುದಾಗಿ ಜಿಲ್ಲಾಧಿಕಾರಿ ಎಸ್.ಅಶ್ವಥಿ ಆದೇಶ ಹೊರಡಿಸಿದ್ದಾರೆ.

    ಈಗಾಗಲೇ ಈ ಟಫ್ ರೂಲ್ಸ್ ಕುರಿತು ಜಿಲ್ಲೆಯ ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೀಗ ಜನರ ವಿರೋಧದ ನಡುವೆಯೂ ಕೊರೊನಾ ಹತೋಟಿಗೆ ತರಬೇಕೆಂಬ ಅನಿವಾರ್ಯತೆಯಿಂದ ಜನವರಿ 31ರ ವರೆಗೆ ಟಫ್ ರೂಲ್ಸ್ ನ್ನು ಮುಂದುವರಿಕೆ ಮಾಡಲಾಗಿದೆ. ಜಿಲ್ಲೆಯಲ್ಲಿ ಜರುಗುವ ಮದುವೆ, ನಿಶ್ಚಿತಾರ್ಥ, ಬೀಗರ ಔತಣಕ್ಕೆ 100 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದರೆ, ಅಂತ್ಯಸಂಸ್ಕಾರ ಹಾಗೂ ತಿಥಿ ಕಾರ್ಯಕ್ಕೆ ಕೇವಲ 30 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ಬಿಜೆಪಿಯವರಿಂದಲೇ ಹೆಚ್ಚು ಕೊರೊನಾ ನಿಯಮ ಉಲ್ಲಂಘನೆ : ಸಿದ್ದು

    ದೇವರ ದರ್ಶನಕ್ಕೆ ಒಂದು ಸಮಯಕ್ಕೆ 50 ಜನರಿಗೆ ಅವಕಾಶವಿದ್ದು, ವಿಶೇಷ ದಿನ, ಸಾರ್ವತ್ರಿಕ ರಜಾ ದಿನಗಳಲ್ಲಿ ದೇವಾಲಯ, ಧಾರ್ಮಿಕ ಕೇಂದ್ರಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದಲ್ಲದೇ ಜಾತ್ರೆ, ದನದ ಜಾತ್ರೆ, ಗ್ರಾಮ ದೇವತೆ ಹಬ್ಬ, ಕೊಂಡೊತ್ಸವ, ಹಾಗೂ ಸಾಮೂಹಿಕ ಪ್ರಾರ್ಥನೆಗೂ ಅವಕಾಶ ಇಲ್ಲ. ಬೃಹತ್ ರ‍್ಯಾಲಿ, ಧರಣಿ, ಪ್ರತಿಭಟನೆಗಳನ್ನು ನಿಷೇಧ ಮಾಡಲಾಗಿದೆ. ಪಬ್, ಬಾರ್ & ರೆಸ್ಟೋರೆಂಟ್, ಹೋಟೆಲ್, ಚಿತ್ರಮಂದಿರ, ಸಭಾಂಗಣ, ರಂಗಮಂದಿರ, ಈಜುಕೊಳ ಹಾಗೂ ಜಿಮ್ ಕೇಂದ್ರಕ್ಕೆ 50% ಹಾಗೂ ಸ್ಪೋರ್ಟ್ಸ್, ಕ್ರೀಡಾಂಗಣ ಹಾಗೂ ಕಾಂಪ್ಲೆಕ್ಸ್ ಗೆ 50% ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಮಸೀದಿಯನ್ನು ಒಡೆದು ಹಾಕಿ ಎಂದ ಕಾಳಿ ಸ್ವಾಮೀಜಿಗೆ ಷರತ್ತು ಬದ್ಧ ಜಾಮೀನು

    ನೈಟ್ ಕರ್ಫ್ಯೂ ವೇಳೆ ರಾತ್ರಿ 10 ರಿಂದ ಬೆಳಗ್ಗೆ 5ರ ವರೆಗೆ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಗ್ಗೆ 5 ರ ವರಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ವೀಕೆಂಡ್ ಕರ್ಫ್ಯೂ ವೇಳೆ ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲಾ ಸೇವೆಗೆ ನಿರ್ಬಂಧವಿದ್ದು ಪ್ರವಾಸಿತಾಣಕ್ಕೆ ಪ್ರವಾಸಿಗರ ನಿಷೇಧ ವಿಧಿಸಲಾಗಿದೆ. ಅಂದು ಕೇವಲ ಆಹಾರ, ದಿನಸಿ ಅಂಗಡಿ, ಹಣ್ಣು ಮತ್ತು ತರಕಾರಿ ಅಂಗಡಿ, ಮೀನು ಮಾಂಸದ ಅಂಗಡಿ, ಹಾಲಿನ ಬೂತ್, ಬೀದಿ ಬೀದಿ ವ್ಯಾಪಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

    ಹೋಟೆಲ್- ರೆಸ್ಟೋರೆಂಟ್ ಗಳಲ್ಲಿ ಪಾರ್ಸಲ್ ಗೆ ಮಾತ್ರ ಅವಕಾಶ ನೀಡಲಾಗಿದೆ. ಉಳಿದಂತೆ ಎಲ್ಲಾ ಸೇವೆಗಳಿಗೆ ನಿರ್ಬಂಧವಿದ್ದು, ಕೊರೊನಾ ನಿಯಮದ ಆದೇಶ ಉಲ್ಲಂಘಿಸಿದ್ರೆ ಕಾನೂನು ಕ್ರಮದ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಸ್.ಅಶ್ವಥಿ ಅವರು ಆದೇಶ ಹೊರಡಿಸಿದ್ದಾರೆ.

  • ಡೆಲ್ಲಿ ಮನೆಗೆ ಕೋಲ್ಕತ್ತಾ ಫೈನಲ್‍ಗೆ

    ಡೆಲ್ಲಿ ಮನೆಗೆ ಕೋಲ್ಕತ್ತಾ ಫೈನಲ್‍ಗೆ

    ದುಬೈ: ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಡೆಲ್ಲಿ ವಿರುದ್ಧ ಉತ್ತಮ ಪ್ರದರ್ಶನ ತೋರಿದ ಕೋಲ್ಕತ್ತಾ ತಂಡ ಜಯದೊಂದಿಗೆ 14ನೇ ಅವೃತ್ತಿ ಐಪಿಎಲ್‍ನ ಫೈನಲ್ ತಲುಪಿದೆ. ಈ ಮೂಲಕ ಕೋಲ್ಕತ್ತಾ ತಂಡ ಮೂರನೇ ಬಾರಿಗೆ ಐಪಿಎಲ್ ಫೈನಲ್ ಪ್ರವೇಶಿಸಿದಂತಾಗಿದೆ.

    ಗೆಲ್ಲಲು 136 ರನ್ ಟಾರ್ಗೆಟ್ ಪಡೆದ ಕೋಲ್ಕತ್ತಾ ತಂಡಕ್ಕೆ ಆರಂಭಿಕ ಜೋಡಿ 96 ರನ್ (74 ಎಸೆತ) ಜೊತೆಯಾಟದ ಮೂಲಕ ಆರಂಭದಿಂದಲೇ ಪಂದ್ಯದ ಮೇಲೆ ಹಿಡಿತ ಸಾಧಿಸಲು ನೆರವಾದರು. ಅಂತಿಮವಾಗಿ ಕೋಲ್ಕತ್ತಾ ತಂಡ 19. 5 ಓವರ್‍ ಗಳಲ್ಲಿ 136 ರನ್ ಸಿಡಿಸಿ ಜಯ ಗಳಿಸಿತು. ಇದನ್ನೂ ಓದಿ: T20 ವಿಶ್ವಕಪ್‍ಗೆ ಟೀಂ ಇಂಡಿಯಾ ಹೊಸ ಜೆರ್ಸಿ ಅನಾವರಣ

    ಕೋಲ್ಕತ್ತಾ ಪರ ವೆಂಕಟೇಶ್ ಅಯ್ಯರ್ 55 ರನ್ (41 ಎಸೆತ, 4 ಬೌಂಡರಿ, 3 ಸಿಕ್ಸ್) ಸಿಡಿಸಿ ಕಗಿಸೋ ರಬಾಡಗೆ ವಿಕೆಟ್ ಒಪ್ಪಿಸಿದರು. ಆದರೆ ಶುಭಮನ್ ಗಿಲ್ ಕಡೆಯವರೆಗೆ ಹೋರಾಡಿ 46 ರನ್ (46 ಎಸೆತ, 1 ಬೌಂಡರಿ 1 ಸಿಕ್ಸ್) ಸಿಡಿಸಿ ಅವೇಶ್ ಖಾನ್‍ಗೆ ವಿಕೆಟ್ ಒಪ್ಪಿಸಿದರು. ಅಂತಿಮ ಓವರ್‍ ನಲ್ಲಿ 6 ಬಾಲ್‍ಗೆ 7 ರನ್ ಬೇಕಾಗಿತ್ತು. ಅಶ್ವಿನ್ ಎಸೆದ ಓವರ್‍ ನ ಮೊದಲ ಎಸೆತ ತ್ರಿಪಾಠಿ ಒಂದು ರನ್ ತೆಗೆದರೆ, 2 ಬಾಲ್ ಡಾಟ್, 3ನೇ ಬಾಲ್ ಶಕೀಬ್ ಔಟ್ ಆದರೆ, 4 ನೇ ಎಸೆತದಲ್ಲಿ ನರೈನ್ ಔಟ್. ಕಡೆಯ 2 ಎಸೆತದಲ್ಲಿ 6 ರನ್ ಬೇಕಾಗಿತ್ತು. ಈ ವೇಳೆ ರಾಹುಲ್ ತ್ರಿಪಾಠಿ 5ನೇ ಎಸತವನ್ನು ಸಿಕ್ಸರ್ ಸಿಡಿಸಿ ರೋಚಕ ಜಯ ತಂದು ಕೊಟ್ಟರು.

    ಈ ಮೊದಲು ಟಾಸ್ ಗೆದ್ದ ಕೋಲ್ಕತ್ತಾ ತಂಡ ಡೆಲ್ಲಿ ತಂಡವನ್ನು ಬ್ಯಾಟಿಂಗ್‍ಗೆ ಆಹ್ವಾನಿಸಿತು. ಡೆಲ್ಲಿ ಪರ ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ 18 ರನ್ (12 ಎಸೆತ, 2 ಬೌಂಡರಿ, 1 ಸಿಕ್ಸ್ ಮತ್ತು ಶಿಖರ್ ಧವನ್ 36 ರನ್ (39 ಎಸೆತ, 1 ಬೌಂಡರಿ, 2 ಸಿಕ್ಸ್) ಸಡಿಸಿ ಪೆವಿಲಿಯನ್ ಸೇರಿಕೊಂಡರು. ನಂತರ ಜೊತೆಯಾದ ಮಾರ್ಕಸ್ ಸ್ಟೋಯ್ನಿಸ್ ಮತ್ತು ಶ್ರೇಯಸ್ ಅಯ್ಯರ್ ಸ್ಪಲ್ಪ ಮಟ್ಟಿನ ಚೇತರಿಕೆ ನೀಡಿದರು ಹೆಚ್ಚು ಹೊತ್ತು ಕ್ರೀಸ್ ಆಕ್ರಮಿಸಲು ಕೋಲ್ಕತ್ತಾ ಬೌಲರ್‍ ಗಳು ಬಿಡಲಿಲ್ಲ. ಸ್ಟೋಯ್ನಿಸ್ 18 ರನ್ (23 ಎಸೆತ, 1 ಬೌಂಡರಿ) ಸಿಡಿಸಿ ಔಟ್ ಆದರು. ಇದನ್ನೂ ಓದಿ: ಟಿ20 ವಿಶ್ವಕಪ್‍ಗಾಗಿ ಟೀಂ ಇಂಡಿಯಾ ಸೇರ್ಪಡೆಗೊಂಡ ಐಪಿಎಲ್ ಸ್ಟಾರ್ಸ್

    ಅಲ್ಪ ಮೊತ್ತ ಕಲೆ ಹಾಕಿದ ಡೆಲ್ಲಿ:
    ಶ್ರೇಯಸ್ ಅಯ್ಯರ್ ಅಜೇಯ 30 ರನ್ 27 ಎಸೆತ, 1 ಬೌಂಡರಿ, 1 ಸಿಕ್ಸ್) ಮತ್ತು ಶಿಮ್ರಾನ್ ಹೆಟ್ಮಾಯೆರ್ 17 ರನ್ (10 ಎಸೆತ, 2 ಸಿಕ್ಸ್) ನೆರವಿನಿಂದ ತಂಡದ ಮೊತ್ತ 130 ಗಡಿದಾಟಿತು ಅಂತಿಮವಾಗಿ 20 ಓವರ್ ಅಂತ್ಯಕ್ಕೆ ಡೆಲ್ಲಿ ತಂಡ 135 ರನ್ ಕಲೆ ಹಾಕಿತು.

    ಕೋಲ್ಕತ್ತಾ ಪರ ವರುಣ್ ಚಕ್ರವರ್ತಿ 2 ವಿಕೆಟ್ ಕಿತ್ತು ಮಿಂಚಿದರು. ಲೂಕಿ ಫಗ್ರ್ಯೂಸನ್ ಮತ್ತು ಶಿವಂ ಮಾವಿ ತಲಾ 1 ವಿಕೆಟ್ ಪಡೆದರು.

  • ಐಪಿಎಲ್ ಫೈನಲ್‍ಗೆ ಚೆನ್ನೈ – ಸಿಕ್ಸರ್, ಬೌಂಡರಿ ಸಿಡಿಸಿ ದಡ ಸೇರಿಸಿದ ಧೋನಿ

    ಐಪಿಎಲ್ ಫೈನಲ್‍ಗೆ ಚೆನ್ನೈ – ಸಿಕ್ಸರ್, ಬೌಂಡರಿ ಸಿಡಿಸಿ ದಡ ಸೇರಿಸಿದ ಧೋನಿ

    ದುಬೈ: ಡೆಲ್ಲಿ ವಿರುದ್ಧ 4 ವಿಕೆಟ್‍ಗಳಿಂದ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಫೈನಲ್ ಪ್ರವೇಶಿಸಿದೆ. ಈ ಮೂಲಕ 9 ಬಾರಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದಂತಾಗಿದೆ.

    ಡೆಲ್ಲಿ ತಂಡ ನೀಡಿದ 173 ರನ್‍ಗಳ ಗುರಿ ಪಡೆದ ಚೆನ್ನೈ ರಾಬಿನ್ ಉತ್ತಪ್ಪ ಮತ್ತು ಗಾಯಕ್ವಾಡ್ ಬ್ಯಾಟಿಂಗ್ ನೆರವಿನಿಂದ 19.4 ಓವರ್‍ಗಳಲ್ಲಿ 173 ರನ್ ಸಿಡಿಸಿ ರೋಚಕ ಜಯ ದಾಖಲಿಸಿದೆ. ಈ ಮೂಲಕ ಕಳೆದ ಬಾರಿ ಲೀಗ್ ಹಂತದಲ್ಲೇ ಹೊರ ಬಿದ್ದಿದ್ದ ಚೆನ್ನೈ ಈ ಬಾರಿ ಫೈನಲ್ ಪ್ರವೇಶಿಸಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ.

    ಉತ್ತಪ್ಪ, ಗಾಯಕ್ವಾಡ್ ಬೊಂಬಾಟ್ ಬ್ಯಾಟಿಂಗ್:
    173ರನ್‍ಗಳ ಗುರಿ ಬೆನ್ನಟ್ಟಿದ ಚೆನ್ನೈ ತಂಡ ಆರಂಭದಲ್ಲಿ ಫಾಫ್ ಡು ಪ್ಲೆಸಿಸ್ 1ರನ್ ಸಿಡಿಸಿ ಔಟ್ ಆದರು ಬಳಿಕ ಒಂದಾದ ಉತ್ತಪ್ಪ ಮತ್ತು ಗಾಯಕ್ವಾಡ್ 2ನೇ ವಿಕೆಟ್‍ಗೆ 110 ರನ್ (77 ಎಸೆತ) ಜೊತೆಯಾಟವಾಡಿದರು. ಉತ್ತಮವಾಗಿ ಆಡುತ್ತಿದ್ದ ಉತ್ತಪ್ಪ 63 ರನ್ (44 ಎಸೆತ, 7 ಬೌಂಡರಿ, 2 ಸಿಕ್ಸ್) ಬಾರಿಸಿ ದೊಡ್ಡ ಹೊಡೆತಕ್ಕೆ ಕೈ ಹಾಕಿ ಶ್ರೇಯಸ್ ಅಯ್ಯರ್ ಹಿಡಿದ ಉತ್ತಮವಾದ ಕ್ಯಾಚ್‍ಗೆ ಬಳಿಯಾದರು. ಇದನ್ನೂ ಓದಿ: ಟಿ20 ವಿಶ್ವಕಪ್ ಗೆದ್ದರೆ ಸಿಗುವ ನಗದು ಬಹುಮಾನವೆಷ್ಟು ಗೊತ್ತಾ?

    ಕೊನೆಯಲ್ಲಿ ಧೋನಿ ಔಟಾಗದೇ 18 ರನ್(6 ಎಸೆತ, 3 ಬೌಂಡರಿ, 1 ಸಿಕ್ಸರ್), ಮೊಯಿನ್ ಆಲಿ 16 ರನ್(12 ಎಸೆತ, 2 ಬೌಂಡರಿ) ಹೊಡೆದು ತಂಡಕ್ಕೆ ಜಯವನ್ನು ತಂದುಕೊಟ್ಟರು.

    ಈ ಮೊದಲು ಕ್ವಾಲಿಫೈಯರ್ ಪಂದ್ಯದ ಟಾಸ್ ಗೆದ್ದ ಚೆನ್ನೈ ತಂಡ ಬೌಲಿಂಗ್ ಆಯ್ದು ಕೊಂಡಿತು. ಬ್ಯಾಟಿಂಗ್ ಆರಂಭಿಸಿದ ಡೆಲ್ಲಿ ತಂಡ ಚೆನ್ನೈ ಲೆಕ್ಕಾಚಾರದಂತೆ ಆರಂಭದಲ್ಲಿ ಶಿಖರ್ ಧವನ್ 7 ರನ್ (7 ಎಸೆತ, 1 ಬೌಂಡರಿ) ಸಿಡಿಸಿ ಜೋಶ್ ಹೇಜಲ್‍ವುಡ್‍ಗೆ ವಿಕೆಟ್ ಒಪ್ಪಿಸಿ ಹೊರ ನಡೆದರು. ನಂತರ ಬಂದ ಶ್ರೇಯಸ್ ಅಯ್ಯರ್ ಬಂದಷ್ಟೇ ವೇಗವಾಗಿ 1ರನ್ ಸಿಡಿಸಿ ಪೆವಿಲಿಯನ್ ಸೇರಿಕೊಂಡರು. ಈ ಮೂಲಕ ಆರಂಭದಲ್ಲಿ ಚೆನ್ನೈ ಮೇಲುಗೈ ಪಡೆದುಕೊಂಡಿತು. ಇದನ್ನೂ ಓದಿ: ಇನ್ಮುಂದೆ ಚೆನ್ನೈ ಪರ ಆಡುತ್ತೀನಾ ಇಲ್ಲವೋ ಗೊತ್ತಿಲ್ಲ: ಧೋನಿ ಅಚ್ಚರಿಯ ಹೇಳಿಕೆ

    ನಂತರ ಬಂದ ಅಕ್ಷರ್ ಪಟೇಲ್ ಕೂಡ ಹೆಚ್ಚು ಹೊತ್ತು ಕ್ರೀಸ್‍ನಲ್ಲಿ ನಿಲ್ಲಲಿಲ್ಲ 10 ರನ್ (11 ಎಸೆತ, 1 ಬೌಂಡರಿ) ಸಿಡಿಸಿ ಔಟ್ ಆದರು. ಆ ಬಳಿಕ ಬಂದ ರಿಷಬ್ ಪಂತ್, ಒಂದು ಕಡೆಯಲ್ಲಿ ಆರಂಭಿಕನಾಗಿ ಬಂದು ಅಬ್ಬರಿಸುತ್ತಿದ್ದ ಪೃಥ್ವಿ ಶಾ ಜೊತೆಗೂಡಿ ಇನ್ನಷ್ಟು ರನ್ ಹೆಚ್ಚಿಸಲು ಆರಂಭಿಸುತ್ತಿದ್ದಂತೆ, ಪೃಥ್ವಿ ಶಾ 60 ರನ್ (34 ಎಸೆತ 7 ಬೌಂಡರಿ, 3 ಸಿಕ್ಸ್) ಚಚ್ಚಿ ವಿಕೆಟ್ ಒಪ್ಪಿಸಿದರು. ನಂತರ ಬಂದ ಶಿಮ್ರಾನ್ ಹೆಟ್ಮಾಯೆರ್ ಜೊತೆಗೂಡಿದ ಪಂತ್ ಅಬ್ಬರಿಸಲು ಆರಂಭಿಸಿದರು. ಈ ಜೊಡಿ 5ನೇ ವಿಕೆಟ್‍ಗೆ 83 ರನ್ (50 ಎಸೆತ) ಜೊತೆಯಾಟವಾಡಿ ತಂಡಕ್ಕೆ ಚೇತರಿಕೆ ನೀಡಿತು. ಹೆಟ್ಮಾಯೆರ್ 37 ರನ್ (24 ಎಸೆತ, 3 ಬೌಂಡರಿ, 1 ಸಿಕ್ಸ್) ಸಿಡಿಸಿ ಔಟ್ ಆದರು. ಕೊನೆಯವರೆಗೆ ಬ್ಯಾಟ್‍ಬೀಸಿದ ಪಂತ್ 51 ರನ್ ( 35 ಎಸೆತ, 3 ಬೌಂಡರಿ, 2 ಸಿಕ್ಸ್) ಸಿಡಿಸಿ ಅಜೇಯರಾಗಿ ಉಳಿದರು ಜೊತೆಗೆ ತಂಡದ ಮೊತ್ತವನ್ನು 170ರ ಗಡಿದಾಟಿಸಿದರು. ಅಂತಿಮವಾಗಿ ಡೆಲ್ಲಿ 20 ಓವರ್‍ ಗಳಲ್ಲಿ 5 ವಿಕೆಟ್ ಕಳೆದುಕೊಂಡು 172 ರನ್ ಮಾಡಿತು.

    ಚೆನ್ನೈ ಪರ ಜೋಶ್ ಹೇಜಲ್‍ವುಡ್ 2 ವಿಕೆಟ್ ಪಡೆದರೆ, ರವೀಂದ್ರ ಜಡೇಜಾ, ಮೊಯಿನ್ ಆಲಿ ಮತ್ತು ಬ್ರಾವೋ ತಲಾ ಒಂದುವಿಕೆಟ್ ಪಡೆದರು.

  • ಅನಧಿಕೃತ ರೆಸಾರ್ಟ್ ತೆರವುಗೊಳಿಸದಿದ್ದರೆ ನೀವೇ ಹೊಣೆ- 4 ಅಧಿಕಾರಿಗಳಿಗೆ ಕೊಪ್ಪಳ ಡಿಸಿ ನೋಟಿಸ್

    ಅನಧಿಕೃತ ರೆಸಾರ್ಟ್ ತೆರವುಗೊಳಿಸದಿದ್ದರೆ ನೀವೇ ಹೊಣೆ- 4 ಅಧಿಕಾರಿಗಳಿಗೆ ಕೊಪ್ಪಳ ಡಿಸಿ ನೋಟಿಸ್

    ಕೊಪ್ಪಳ: ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಂಪಿ ಪಕ್ಕದ ವಿರೂಪಾಪೂರ ಗಡ್ಡಿಯ ಅಕ್ರಮ ರೆಸಾರ್ಟ್ ಗಳನ್ನು ಕೊಪ್ಪಳ ಜಿಲ್ಲಾಡಳಿತ ನೆಲಸಮ ಮಾಡಿತ್ತು. ಈ ಬೆನ್ನಲ್ಲೇ ರೆಸಾರ್ಟ್ ಮಾಲೀಕರು ಪಟ್ಟಾ ಭೂಮಿಯಲ್ಲಿ ಅನಧಿಕೃತವಾಗಿ ರೆಸಾರ್ಟ್ ನಿರ್ಮಾಣ ಮಾಡಿರುವ ಆರೋಪ ಈಗ ಮತ್ತೆ ಕೇಳಿ ಬಂದಿದೆ. ಇದಕ್ಕೂ ಕೊಪ್ಪಳ ಜಿಲ್ಲಾಡಳಿತ ಬ್ರೇಕ್ ಹಾಕಲು ಮುಂದಾಗಿದೆ.

    ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯ ಹಂಪಿ ಪ್ರದೇಶ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ತಲೆ ಎತ್ತಿರುವ ರೆಸಾರ್ಟ್ ಗಳನ್ನು ತೆರವು ಮಾಡಿ. ಇಲ್ಲವೇ ಅದಕ್ಕೆ ನೀವೇ ಹೊಣೆಗಾರರಾಗಿ ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಅವರು ನೋಟಿಸ್ ನೀಡಿದ್ದಾರೆ. ಹಂಪಿ ಪರಂಪರೆ ಪ್ರದೇಶ ವ್ಯಾಪ್ತಿಗೆ ಒಳಪಡುವ ಕೊಪ್ಪಳದ ಗಂಗಾವತಿ ತಾಲೂಕಿನ ವಿರೂಪಾಪೂರ ಗಡ್ಡಿಯಲ್ಲಿದ್ದ ಅಕ್ರಮ ರೆಸಾರ್ಟ್ ಗಳು ಕಳೆದ 2 ವರ್ಷದ ಹಿಂದೆ ನೆಲಸಮ ಆಗಿದ್ದವು. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ಇಲ್ಲಿನ ರೆಸಾರ್ಟ್ ಗಳನ್ನು ತೆರವು ಮಾಡಿತ್ತು. ಇದನ್ನೂ ಓದಿ: ಪಡಿತರ ಅಕ್ಕಿ ಅಕ್ರಮವಾಗಿ ಗುಜರಾತ್‍ಗೆ ಸಾಗಣೆ- 8.10 ಲಕ್ಷದ ಅಕ್ಕಿ ವಶಕ್ಕೆ

    ವಿರೂಪಾಪೂರ ಗಡ್ಡಿಯಲ್ಲಿನ ರೆಸಾರ್ಟ್ ನೆಲಸಮ ಆದ ನಂತರ ಗಂಗಾವತಿ ತಾಲೂಕಿನ ಆನೇಗೊಂದಿ, ಹನುಮನಹಳ್ಳಿ, ಜಂಗ್ಲಿ, ಸಣಾಪೂರ, ರಂಗಾಪೂರ, ಗಡ್ಡಿ, ಪಂಪಾ ಸರೋವರ ಸುತ್ತಮುತ್ತ ಪಟ್ಟಾ ಭೂಮಿಯಲ್ಲಿ ಮತ್ತೆ ಅಕ್ರಮವಾಗಿ ರೆಸಾರ್ಟ್ ಗಳು ತಲೆ ಎತ್ತುತ್ತಿವೆ. ಈ ಕಾರಣಕ್ಕೆ ಕೊಪ್ಪಳ ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಅವರು ಹೊಸಪೇಟೆಯ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ಕೊಪ್ಪಳ ಉಪ ವಿಭಾಗಾಧಿಕಾರಿ, ಗಂಗಾವತಿಯ ತಹಸೀಲ್ದಾರ್ ಮತ್ತು ತಾಲೂಕು ಪಂಚಾಯತ್ ಇಒಗೆ ನೊಟೀಸ್ ನೀಡಿದ್ದಾರೆ.

    ಕೋರ್ಟ್ ನಿರ್ದೇಶನದಂತೆ ಹಂಪಿ ಪ್ರದೇಶ ವ್ಯಾಪ್ತಿಗೆ ಒಳಪಡುವ 15 ಗ್ರಾಮಗಳಲ್ಲಿ ಮಾಸ್ಟರ್ ಪ್ಲ್ಯಾನ್ ರೆಡಿ ಆಗುತ್ತಿದೆ. ಯಾವ ಜಾಗದಲ್ಲಿ, ಎಂಥ ಕಟ್ಟಡ ನಿರ್ಮಿಸಬಹುದು ಎಂಬುದರ ಬಗ್ಗೆ ಸ್ಪಷ್ಟಪಡುಸುವುದೇ ಈ ಮಾಸ್ಟರ್ ಪ್ಲಾನ್. ಆದರೆ ಕೆಲ ಪ್ರಭಾವಿಗಳು ಈಗಾಗಲೇ ಪಟ್ಟಾ ಭೂಮಿಯಲ್ಲಿ ಅನಧಿಕೃತವಾಗಿ ರೆಸಾರ್ಟ್ ನಿರ್ಮಿಸಿದ್ದಾರೆ. ಭೂಮಿ ಎನ್ ಎ ಮಾಡಿಲ್ಲ. ಜೊತೆಗೆ ಸ್ಥಳೀಯ ಸಂಸ್ಥೆಗಳ ಪರವಾನಗಿ ಇಲ್ಲದೇ ರೆಸಾರ್ಟ್ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ: ನನ್ನ ಮಗಳ ಸಾವಿಗೆ ತೆಲುಗು ನಟ ಕಾರಣ- ಸೌಜನ್ಯ ತಂದೆ ದೂರು

    ವಿರೂಪಾಪುರ ಗಡ್ಡಿಯಲ್ಲಿದ್ದ ರೆಸಾರ್ಟ್ ತೆರವಿನ ನಂತರ ಎಲ್ಲಂದರಲ್ಲಿ ರೆಸಾರ್ಟ್ ತಲೆ ಎತ್ತುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂಬ ದೂರು ಕೇಳಿ ಬಂದಿದೆ. ಹೀಗಾಗಿ ಕೊಪ್ಪಳ ಡಿಸಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನೆರೆ ರಾಜ್ಯ ಮತ್ತು ವಿದೇಶಿ ಪ್ರವಾಸಿಗರಿಗಾಗಿಯೇ ತಲೆ ಎತ್ತುವ ರೆಸಾರ್ಟ್ ಗಳು ಅಕ್ರಮ ಚಟುವಟಿಕೆ ತಾಣವಾಗಿವೆ ಎಂಬ ಆರೋಪ ಕೂಡ ಮೊದಲಿಂದಲೂ ಕೇಳಿ ಬಂದಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ.

  • ನಂಜನಗೂಡು ದೇವಸ್ಥಾನ ತೆರವಿಗೆ ಆದೇಶ ನೀಡಿದ್ದೇ ಡಿಸಿ: ಶಾಸಕ ಹರ್ಷವರ್ಧನ್

    ನಂಜನಗೂಡು ದೇವಸ್ಥಾನ ತೆರವಿಗೆ ಆದೇಶ ನೀಡಿದ್ದೇ ಡಿಸಿ: ಶಾಸಕ ಹರ್ಷವರ್ಧನ್

    ಮೈಸೂರು: ಜಿಲ್ಲೆಯ ನಂಜನಗೂಡಿನ ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಶಾಸಕ ಹರ್ಷವರ್ಧನ್ ಮಹತ್ವದ ಹೇಳಿಕೆ ನೀಡಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ದೇವಾಲಯ ತೆರವು ಮಾಡಲು ಜಿಲ್ಲಾಧಿಕಾರಿಯಿಂದಲೇ ಆದೇಶ ನೀಡಲಾಗಿತ್ತು ಎಂದು ಹೇಳುವ ಮೂಲಕ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಕೊಟ್ಟಿದ್ದಾರೆ. ದೇವಸ್ಥಾನ ಉಳಿಸಲು ಡಿಸಿಗೆ ತಹಶೀಲ್ದಾರ್ ಪಾಸಿಟಿವ್ ರಿಪೋರ್ಟ್ ಕೊಟ್ಟಿದ್ದರು. ತಹಶೀಲ್ದಾರ್ ಡಿಸಿಗೆ ವರದಿ ಕೊಟ್ಟಾಗ, ಯಾವ ಆಧಾರದ ಮೇಲೆ ದೇವಸ್ಥಾನ ಉಳಿಸುತ್ತೀರಾ ಎಂದು ಡಿಸಿ ಪ್ರಶ್ನಿಸಿದ್ದಾರೆ. ಆಗ ತಹಶೀಲ್ದಾರ್ ಬಳಿ ಉತ್ತರ ಇರಲಿಲ್ಲ. ಎಲ್ಲ ಕಡೆ ದೇವಸ್ಥಾನ ತೆರವು ಮಾಡಿದ್ದೇವೆ. ಮಹದೇವಮ್ಮ ದೇವಸ್ಥಾನಕ್ಕೂ ಸಂಬಂಧಿಸಿದ ಯಾವುದೇ ದಾಖಲಾತಿ ಇಲ್ಲ. ಆದ್ದರಿಂದ ದೇವಸ್ಥಾನ ತೆರವು ಮಾಡಬೇಕು ಎಂದು ಡಿಸಿ ಆದೇಶ ನೀಡಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ: ತಾಲಿಬಾನಿ, ಐಎಸ್‍ಐ ಉಗ್ರರನ್ನು ಬಿಟ್ಟು ಭಾರತದಲ್ಲಿ ದಾಳಿಯಾಗುವಂತೆ ಮಾಡಿದ್ದು ಯಾರು – ಸಿಟಿ ರವಿ ಪ್ರಶ್ನೆ

    ಠಾಣಾ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 13 ದೇವಸ್ಥಾನಗಳನ್ನು ಉಳಿಸಲಾಯಿತು. ಮಹದೇವಮ್ಮ ದೇವಸ್ಥಾನವನ್ನು ಉಳಿಸುವಂತೆ ತಹಶೀಲ್ದಾರ್ ಗೆ ರಿಪೋರ್ಟ್ ಕಳುಹಿಸಿದ್ದೆ. ಅದರಂತೆ ತಹಶೀಲ್ದಾರ್ ಅವರು ಡಿಸಿಗೆ ಪಾಸಿಟಿವ್ ರಿಪೋರ್ಟ್ ಕೊಟ್ಟಿದ್ದಾರೆ. ಆದರೆ ಯಾವುದೇ ದಾಖಲಾತಿ ಇಲ್ಲದೇ ದೇವಸ್ಥಾನ ಹೇಗೆ ಉಳಿಸುತ್ತೀರಾ? ಎಂದು ಪ್ರಶ್ನಿಸಿ ದೇವಾಲಯ ತೆರವಿಗೆ ಡಿಸಿ ಆದೇಶ ನೀಡಿದ್ದಾರೆ. ತಹಶೀಲ್ದಾರ್ ಮೋಹನ್ ಕುಮಾರಿ ವರ್ಗಾವಣೆ ಮಾಡಿರುವುದಕ್ಕೆ ನನಗೂ ಬೇಸರವಿದೆ. ಈ ಸಂಬಂಧ ಸಿಎಂ ಜೊತೆ ಮಾತನಾಡುತ್ತೇನೆ ಎಂದು ಶಾಸಕರು ಹೇಳಿದ್ದಾರೆ.

  • ವಾರಾಂತ್ಯ ರಸ್ತೆ ಬದಿ ಉತ್ಸವಕ್ಕೆ ದ.ಕ. ಜಿಲ್ಲಾಡಳಿತ ಯೋಜನೆ

    ವಾರಾಂತ್ಯ ರಸ್ತೆ ಬದಿ ಉತ್ಸವಕ್ಕೆ ದ.ಕ. ಜಿಲ್ಲಾಡಳಿತ ಯೋಜನೆ

    – ಸ್ಥಳೀಯ ಕಲಾವಿದರು, ವ್ಯಾಪಾರಿಗಳಿಗೆ ವೇದಿಕೆ
    – ಪ್ರವಾಸೋದ್ಯಮ, ಬೀಚ್ ಮೂಲ ಸೌಕರ್ಯ ಅಭಿವೃದ್ಧಿಗೆ ಕ್ರಮ
    – ಪ್ರವಾಸಿಗರನ್ನು ಸೆಳೆಯಲು ವಿವಿಧ ರೀತಿಯ ಯೋಜನೆ

    ಮಂಗಳೂರು: ಕೊರೊನಾ 2ನೇ ಅಲೆ ತಗ್ಗುತ್ತಿರುವಂತೆಯೇ ಜಿಲ್ಲೆಯಲ್ಲಿ ಸ್ಥಳೀಯ ಕಲಾವಿದರು ಹಾಗೂ ವ್ಯಾಪಾರಿಗಳಿಗೆ ವೇದಿಕೆಯ ಜೊತೆಗೆ ಜಿಲ್ಲೆಯ ಜನರಿಗೆ ವೀಕೆಂಡ್ ಮನರಂಜನೆಗೆ ಜಿಲ್ಲಾಡಳಿತ ಯೋಜನೆ ರೂಪಿಸಿದೆ.

    ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಇಂದು ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಆಯೋಜಿಸಲಾದ ಜಿಲ್ಲಾಧಿಕಾರಿ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ, ನಗರದ ಪ್ರಮುಖ ರಸ್ತೆಗಳಾದ ಕದ್ರಿ ಪಾರ್ಕ್ ಎದುರು ಹಾಗೂ ಕ್ಲಾಕ್‍ಟವರ್ ನಿಂದ ಎ.ಬಿ.ಶೆಟ್ಟಿ ಸರ್ಕಲ್ ರಸ್ತೆಯಲ್ಲಿ ವಾರಾಂತ್ಯ ರಸ್ತೆ ಬದಿ ಉತ್ಸವ (Weekend Street Festival Mangaluru) ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

    ವಾರಾಂತ್ಯದ ದಿನಗಳಲ್ಲಿ (ಶನಿವಾರ, ಭಾನುವಾರ) ನಿಗದಿತ ರಸ್ತೆಯುದ್ದಕ್ಕೂ ಸ್ಥಳೀಯ ಆಹಾರ, ಕರಕುಶಲ ವಸ್ತುಗಳು ಸೇರಿದಂತೆ ತಾತ್ಕಾಲಿಕ ವ್ಯಾಪಾರ ಮಳಿಗೆಗಳು ಹಾಗೂ ಸ್ಥಳೀಯ ಕಲಾವಿದರಿಂದ ಮನರಂಜನಾ ಕಾರ್ಯಕ್ರಮಗಳ ಮೂಲಕ ಜನರಿಗೆ ಮನರಂಜನೆಯ ಜೊತೆಗೆ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಈ ಉತ್ಸವ ವರ್ಷಪೂರ್ತಿ ವಾರಾಂತ್ಯದಲ್ಲಿ ನಿರಂತರ ನಡೆಸಲು ಚಿಂತನೆ ಮಾಡಲಾಗಿದೆ. ಕೊರೊನಾ ಪಾಸಿಟಿವಿಟಿ ದರ ಇನ್ನಷ್ಟು ಕಡಿಮೆಯಾಗುವ ಜೊತೆಗೆ ಮೂರನೇ ಅಲೆಯ ಆತಂಕವಿಲ್ಲದಿದ್ದರೆ ಇದನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಅವರು ಹೇಳಿದರು. ಇದನ್ನೂ ಓದಿ: ಅ. 1ರಿಂದ ಥಿಯೇಟರ್‌ಗಳು ಹೌಸ್‍ಫುಲ್- ಕಂಡೀಷನ್ಸ್ ಅಪ್ಲೈ

    ಬೀಚ್‍ಗಳ ಅಭಿವೃದ್ಧಿಗೆ ಕ್ರಮ: ತಣ್ಣೀರುಬಾವಿ, ಪಣಂಬೂರು ಸೇರಿದಂತೆ ದ.ಕ. ಜಿಲ್ಲೆಯ ಬೀಚ್‍ಗಳಲ್ಲಿ ಮೂಲಭೂತ ಸೌಕರ್ಯದೊಂದಿಗೆ ಪ್ರವಾಸಿಗರನ್ನು ಸೆಳೆಯಲು ವಿಭಿನ್ನ ರೀತಿಯ ಕ್ರಮಗಳನ್ನು ರೂಪಿಸಲಾಗಿದೆ. ಪ್ರವಾಸಿಗರಿಗೆ ಮಂಗಳೂರಿನ ಒಳಗಡೆ ಇರುವ ಬೀಚ್‍ಗಳನ್ನು ಸಂಪರ್ಕಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಬಗ್ಗೆ ಸೆ.27ರಂದು ಪ್ರವಾಸೋದ್ಯಮ ದಿನದ ಅಂಗವಾಗಿ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು. ಬೀಚ್‍ಗಳಿಗೆ ಆಗಮಿಸುವವರಿಗೆ ಶೌಚಾಲಯ, ವಿಶ್ರಾಂತಿ ಕೊಠಡಿ ಜೊತೆಗೆ ಹೋಟೆಲ್ ಮಾದರಿಯ ಊಟೋಪಾಚರ ವ್ಯವಸ್ಥೆಗೆ ಕ್ರಮ ವಹಿಸಲಾಗುವುದು ಎಂದರು.

    ಬೆಂಗ್ರೆ ಬೀಚ್‍ನಲ್ಲಿ ಗಾಲ್ಫ್ ಕಾರ್ಸ್ ಗಾಗಿ 2007-08ನೇ ಸಾಲಿನಲ್ಲಿ ಓಪಸ್ ಲಗೂನಾ ಸಂಸ್ಥೆ ಟೆಂಡರ್ ವಹಿಸಿದ್ದು, ಸಂಸ್ಥೆಗೆ ಇದೀಗ ಸಿಆರ್ ಝಡ್ ಅನುಮತಿ ದೊರಕಿದೆ. ಇಲ್ಲಿ ಜಮೀನು ಒತ್ತುವರಿ ಸಮಸ್ಯೆ ಇರುವುದರಿಂದ ಸೂಕ್ತ ಕ್ರಮಗಳೊಂದಿಗೆ ರೆಸಾರ್ಟ್ ಮಾದರಿಯಲ್ಲಿ ಅಭಿವೃದ್ಧಿಪಡಿಸಿದರೆ ಸ್ಥಳೀಯ ಸುಮಾರು 800 ಮಂದಿಗೆ ಉದ್ಯೋಗವೂ ದೊರಕಲಿದೆ. ಈ ಕುರಿತಂತೆ ಕಳೆದ ಎರಡು ತಿಂಗಳ ಅವಧಿಯಲ್ಲಿ 6 ಸಭೆಗಳನ್ನು ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಇದನ್ನೂ ಓದಿ: ಎರಡು ತಿಂಗಳು ಕೊಡಗಿನಲ್ಲಿ ಪ್ರವಾಸೋದ್ಯಮ ಸಂಪೂರ್ಣ ಸ್ಥಗಿತಗೊಳಿಸಿ- ಸ್ಥಳೀಯರ ಆಗ್ರಹ

    ಸಸಿಹಿತ್ಲು ಹಾಗೂ ತಣ್ಣೀರುಬಾವಿ ಬೀಚ್‍ನಲ್ಲಿ ಸರ್ಕಾರಿ ಸರ್ಫಿಂಗ್ ಸ್ಕೂಲ್ ಆರಂಭಿಸುವ ಪ್ರಸ್ತಾವನೆ ಇದೆ. ಸಸಿಹಿತ್ಲು ಬೀಚ್ ಅಭಿವೃದ್ಧಿಗೆ ಈಗಾಗಲೇ 5 ಕೋಟಿ ರೂ. ಬಿಡುಗಡೆಯಾಗಿದೆ. ಆದರೆ ಅಲ್ಲಿ ಯಾವುದೇ ರೀತಿಯ ತಾತ್ಕಾಲಿಕ ಮೂಲಭೂತ ಸೌಕರ್ಯಗಳನ್ನು ಮಾಡಿದರೂ ಕಡಲ್ಕೊರೆತದಿಂದ ಸಮಸ್ಯೆಯಾಗುವ ಕಾರಣ, ಅದನ್ನು ತಡೆಯುವ ನಿಟ್ಟಿನಲ್ಲಿ ಕ್ರಮಕ್ಕೆ ಚಿಂತನೆ ನಡೆಸಲಾಗಿದೆ ಎಂದರು.

    ಜಂಗಲ್ ಲಾಡ್ಜ್ ಮಾದರಿಯಲ್ಲಿ ತಾತ್ಕಾಲಿಕ ಸಾಂಪ್ರದಾಯಿಕ ಗುಡಿಸಲುಗಳ ನಿರ್ಮಾಣ, ಮೇಲ್ಛಾವಣಿ ರಹಿತ ರೆಸ್ಟೋರೆಂಟ್‍ಗಳ ನಿರ್ಮಾಣ ಮಾಡುವ ಯೋಜನೆಯೂ ಇದೆ. ಪಿಲಿಕುಳ ಜೈವಿಕ ಉದ್ಯಾನವನವಾಗಿದ್ದು, ನೈಸರ್ಗಿಕ ರೀತಿಯಲ್ಲಿ ಇಲ್ಲಿ ಪ್ರಾಣಿ, ಪಕ್ಷಿಗಳ ವಾಸಕ್ಕೆ ಅವಕಾಶವಿದೆ. ಈಗಿರುವ ವನ್ಯಜೀವಿಗಳಿಗೆ ವಿಶೇಷ ಆಕರ್ಷಣೆಯಾಗಿ ಜಿರಾಫೆ, ಝೀಬ್ರಾ ಹಾಗೂ ಆನೆಗಳನ್ನು ಸೇರ್ಪಡೆಗೊಳಿಸಲು ಚಿಂತಿಸಲಾಗಿದೆ. ಇದೇ ವೇಳೆ ಜಿಲ್ಲೆಯ ಪ್ರಮುಖ ಆಕರ್ಷಣೆಯಾದ ಕಂಬಳವನ್ನು ಪಿಲಿಕುಳದಲ್ಲಿ ಮತ್ತೆ ನಡೆಸುವುದು, ನದಿ ಉತ್ಸವವನ್ನು ಆರಂಭಿಸುವ ಬಗ್ಗೆಯೂ ಆಲೋಚನೆ ಇದೆ ಎಂದು ವಿವರಿಸಿದರು. ಸಂವಾದದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಹರೀಶ್ ಮೋಟುಕಾನ ಇದ್ದರು.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- ರಾಂಪುರ ಗ್ರಾಮಕ್ಕೆ ತೆರಳಿ ರಸ್ತೆ ಪರಿಶೀಲಿಸಿದ ದಾವಣಗೆರೆ ಡಿಸಿ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- ರಾಂಪುರ ಗ್ರಾಮಕ್ಕೆ ತೆರಳಿ ರಸ್ತೆ ಪರಿಶೀಲಿಸಿದ ದಾವಣಗೆರೆ ಡಿಸಿ

    – 2 ತಿಂಗಳೊಳಗೆ ರಸ್ತೆ, ಕೆಲವೇ ದಿನದಲ್ಲಿ ಬಸ್ ವ್ಯವಸ್ಥೆ
    – ನಿನ್ನ ಮದುವೆಯನ್ನೂ ಮಾಡಿಸ್ತೇನೆಂದು ಬಿಂದುಗೆ ಭರವಸೆ

    ದಾವಣಗೆರೆ: ಜಿಲ್ಲೆಯ ಮಾಯಕೊಂಡ ಕ್ಷೇತ್ರದ ಹೆಚ್ ರಾಂಪುರ ಗ್ರಾಮದ ಸಮಸ್ಯೆಯನ್ನು ಕಂಡು ಬೇಸತ್ತು ಪ್ರಧಾನಿ, ಮುಖ್ಯಮಂತ್ರಿಗೆ ಪತ್ರ ಬರೆದು ನಮ್ಮ ಊರಿನ ರಸ್ತೆ ಆಗುವವರೆಗೆ ಮದುವೆ ಆಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದ ಬಿಂದು ಕುರಿತು ಪಬ್ಲಿಕ್‍ಟಿವಿ ವರದಿ ಬಳಿಕ ದಾವಣಗೆರೆ ಡಿಸಿ ಮಹಾಂತೇಶ್ ಬೀಳಗಿ ತೆರಳಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಬಳಿಕ ಬಿಂದುಗೆ ಕರೆ ಮಾಡಿ 2 ತಿಂಗಳೊಳಗೆ ರಸ್ತೆ, ಕೆಲವೇ ದಿನದಲ್ಲಿ ಬಸ್ ವ್ಯವಸ್ಥೆಯೂ ಆಗಲಿದೆ. ಜೊತೆಗೆ ನಿನ್ನ ಮದುವೆಯನ್ನೂ ನಾನೇ ಮಾಡಿಸುತ್ತೇನೆ ಎಂದು ಭರವಸೆ ಕೊಟ್ಟಿದ್ದಾರೆ.

    ರಾಂಪುರ ದಾವಣಗೆರೆ ಜಿಲ್ಲಾ ಕೇಂದ್ರದಿಂದ ಕೇವಲ 30 ಕಿಲೋ ಮೀಟರ್ ದೂರವಿದ್ದರೆ, ಮಾಯಕೊಂಡ ವಿಧಾನಸಭಾ ಕ್ಷೇತ್ರದಿಂದ 6 ಕಿಲೋ ಮೀಟರ್ ದೂರವಷ್ಟೇ ಇದೆ. ಆದರೂ ಈ ಊರು ಇಂದಿಗೂ ಮೂಲಭೂತ ಸೌಕರ್ಯದಿಂದ ವಂಚಿತಗೊಂಡಿದೆ. ಈ ಊರಲ್ಲಿ ಯುವತಿಯರು ಶಾಲಾ-ಕಾಲೇಜ್‍ಗೆ ಹೋಗಬೇಕೆಂದರೆ ನಡೆದುಕೊಂಡೆ ಹೋಗಬೇಕು. ಮಳೆಗಾಲದಲ್ಲಿ ಮಣ್ಣಿನ ರಸ್ತೆಯಲ್ಲಿ ನಡೆದು ಶಾಲಾ-ಕಾಲೇಜಿಗೆ ತೆರಳಬೇಕಾದ ಪರಿಸ್ಥಿತಿ ಇದೆ. ಸ್ವಾತಂತ್ರ್ಯ ಬಂದು 7 ದಶಕಗಳಾದರೂ ಈ ಗ್ರಾಮಕ್ಕೆ ಇನ್ನೂ ಸರ್ಕಾರಿ ಸಾರಿಗೆ ವ್ಯವಸ್ಥೆ ಇಲ್ಲ. ಬಸ್ ಇಲ್ಲದ ಕಾರಣ ಗ್ರಾಮದಲ್ಲಿ ಎಷ್ಟೋ ಯುವತಿಯರು ವಿದ್ಯಾಭ್ಯಾಸವನ್ನೇ ಮೊಟುಕುಗೊಳಿಸಿದ್ದಾರೆ. ಇದರಿಂದ ಬಾಲ್ಯ ವಿವಾಹ ಕೂಡ ಹೆಚ್ಚಾಗುತ್ತಿವೆ. ವಿಪರ್ಯಾಸವೆಂದರೆ ಓದುವ ಆಸೆಯಿದ್ದರೂ ಸರಿಯಾದ ಬಸ್ ವ್ಯವಸ್ಥೆ ಇಲ್ಲ ಎಂಬ ಕಾರಣ ಮಹಿಳೆಯರು ಮನೆಯಲ್ಲೇ ಕೂರುವಂತಾಗಿದೆ. ಇದರಿಂದ ಈ ಊರಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ವಿದ್ಯಾಭ್ಯಾಸ ಮಾಡಿಲ್ಲ ಎಂದು ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಂಬುದರ ಕುರಿತು ಪಬ್ಲಿಕ್ ಟಿವಿ ವಿಸ್ತೃತ ವರದಿ ಬಿತ್ತರಿಸಿತು. ಇದನ್ನೂ ಓದಿ: ಊರಿನ ರಸ್ತೆ ಆಗುವರೆಗೂ ಮದುವೆಯಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ ಯುವತಿ

    ಪಬ್ಲಿಕ್ ಟಿವಿ ವರದಿ ನೋಡಿ ರಾಮನಗರ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಗ್ರಾಮದ ಹೊರವಲರದಲ್ಲಿ ಕಾರು ನಿಲ್ಲಿಸಿ, ನಡೆದುಕೊಂಡು ಬಂದು ರಸ್ತೆ ಪರಿಶೀಲನೆ ನಡೆಸಿದರು. ಇದೇ ವೇಳೆ ದಾವಣಗೆರೆ ಜಿಲ್ಲೆಯ ಮಾಯಕೊಂಡ ಹೋಬಳಿಯ ರಾಮಪುರ ಗ್ರಾಮಕ್ಕೆ ಆಗಮಿಸಿ ರಸ್ತೆ ಆಗುವವರೆಗೆ ಮದುವೆ ಆಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದ ಯುವತಿ ಬಿಂದುಗೆ ಕರೆ ಮಾಡಿದ ಮಹಾಂತೇಶ್ ಬೀಳಗಿ, ಕೆಲವೇ ದಿನಗಳಲ್ಲಿ ಬಸ್ ವ್ಯವಸ್ಥೆ ಮಾಡಲಾಗುವುದು. ಎರಡು ತಿಂಗಳೊಳಗೆ ರಸ್ತೆ ಕೂಡ ಆಗುತ್ತದೆ. ಜೊತೆಗೆ ನಾನೇ ಮುಂದೆ ನಿಂತು ನಿನ್ನ ಮದುವೆಯನ್ನು ಕೂಡ ಮಾಡಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನು ಕೇಳಿಸಿಕೊಂಡು ಖುಷಿಪಟ್ಟ ಯುವತಿ ಬಿಂದು, ಪಬ್ಲಿಕ್ ಟಿವಿಗೆ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ಮೂರೂವರೆ ತಿಂಗಳ ಬಳಿಕ ಕೊರೊನಾ ಗೆದ್ದ ವೈದ್ಯ- ಡಾಕ್ಟರ್ ಕಣ್ಣೀರ ಕಥೆ ಓದಿ

  • ಭೀಮಾ ನದಿ ಪ್ರವಾಹ ಆತಂಕ – ನದಿ ತೀರಕ್ಕೆ ತೆರಳದಂತೆ ಡಿಸಿ ರಾಗಪ್ರಿಯಾ ಸೂಚನೆ

    ಭೀಮಾ ನದಿ ಪ್ರವಾಹ ಆತಂಕ – ನದಿ ತೀರಕ್ಕೆ ತೆರಳದಂತೆ ಡಿಸಿ ರಾಗಪ್ರಿಯಾ ಸೂಚನೆ

    ಯಾದಗಿರಿ: ಮುಂದಿನ ವಾರದಿಂದ ಅಕ್ಟೋಬರ್ ಎರಡನೇ ವಾರದ ವರೆಗೆ ಭೀಮಾ ನದಿಯ ನೀರಿನ ಪ್ರಮಾಣ ಜಾಸ್ತಿಯಾಗುವ ಸಂಭವಿದ್ದು, ಮತ್ತೆ ಭೀಮಾ ನದಿ ಪ್ರವಾಹ ಆತಂಕ ಶುರುವಾಗಿದೆ. ನದಿ ತೀರಕ್ಕೆ ಸಾರ್ವಜನಿಕರು ತೆರಳದಂತೆ ಮತ್ತು ಮೀನುಗಾರಿಕೆ ಮಾಡದಂತೆ ಯಾದಗಿರಿ ಡಿಸಿ ರಾಗಪ್ರಿಯಾ ಸೂಚನೆ ನೀಡಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿಯ ಮುಖಾಂತರ ಜಿಲ್ಲೆಯ ಜನತೆ ಡಿಸಿ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಭೀಮಾ ನದಿಗೆ ಸದ್ಯ ಒಂದು ಲಕ್ಷ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ, 3 ರಿಂದ 4 ಲಕ್ಷ ನೀರು ಬಂದರೆ ತೊಂದರೆಯಾಗುತ್ತದೆ. ಈಗಾಗಲೇ ಸಂಬಂಧಪಟ್ಟ ತಹಶೀಲ್ದಾರರ ಸಭೆ ನಡೆಸಲಾಗಿದೆ. ನದಿ ತೀರದ ಗ್ರಾಮಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಭೀಮಾ ನದಿ ತೀರದ ಜನರು ಜಿಲ್ಲಾಡಳಿತಕ್ಕೆ ಸಹಕಾರ ನೀಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಕೊಚ್ಚಿಹೋದ ಸೇತುವೆಗೆ ಡಿಸಿ, ಎಸ್ಪಿ ಭೇಟಿ, ಶೀಘ್ರ ದುರಸ್ತಿಗೆ ಆದೇಶ

    ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದೆ, ನಾಯ್ಕಲ್ ಸೇರಿದಂತೆ ಹಲವಾರು ಗ್ರಾಮದ ಮನೆಗಳಿಗೆ ಹಾನಿಯಾಗಿದೆ, ಯಡ್ಡಳ್ಳಿ ಸೇತುವೆ ಕೊಚ್ಚಿ ಹೋಗಿದೆ, ಈ ಬಗ್ಗೆ ಶೀಘ್ರ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ಕಾಳಜೀ ಕೇಂದ್ರಗಳನ್ನು ಓಪನ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹಿಂದೂ ದೇವಸ್ಥಾನ ಟಾರ್ಗೆಟ್ ಮಾಡಿ ಧ್ವಂಸ ಮಾಡಲಾಗುತ್ತಿದೆ: ಪ್ರತಾಪ್ ಸಿಂಹ