Tag: DCM DKShivakumar

  • ಸರ್ಕಾರ ಉರುಳಿಸುವ ದುರಾಲೋಚನೆ ಬರದಿರಲಿ: ದಸರಾ ಉದ್ಘಾಟಿಸಿ ಹಂಪ ನಾಗರಾಜಯ್ಯ

    ಸರ್ಕಾರ ಉರುಳಿಸುವ ದುರಾಲೋಚನೆ ಬರದಿರಲಿ: ದಸರಾ ಉದ್ಘಾಟಿಸಿ ಹಂಪ ನಾಗರಾಜಯ್ಯ

    – ಮತ ಧರ್ಮಗಳ ತಾರತಮ್ಯವಿಲ್ಲದ ಸರ್ವ ಜನಾಂಗದ ಹಬ್ಬ

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದ್ದು, ನಾಡೋಜ, ಸಾಹಿತಿ ಹಂಪ ನಾಗರಾಜಯ್ಯ (Hamapa Nagarajaiah) ಉದ್ಘಾಟಿಸಿದರು.

    ನಾಡದೇವತೆ ಚಾಮುಂಡೇಶ್ವರಿ (Chamundeshwari) ಸನ್ನಿಧಾನದಲ್ಲಿ ಬೆಳಗ್ಗೆ 9.29ಕ್ಕೆ ಶುಭ ಲಗ್ನದಲ್ಲಿ ನಾಡೋಜ, ಸಾಹಿತಿ ಹಂಪ ನಾಗರಾಜಯ್ಯ ಉದ್ಘಾಟಿಸಿದ್ದು, ತಾಯಿ ಚಾಮುಂಡೇಶ್ವರಿಗೆ ಪುಷ್ಪರ್ಚಾನೆ ಮಾಡುವ ಮೂಲಕ ಚಾಲನೆ ನೀಡಿದರು.ಇದನ್ನೂ ಓದಿ: ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಶೂಟಿಂಗ್‌ಗೆ ತಾತ್ಕಾಲಿಕ ಬ್ರೇಕ್‌

    ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದಸರಾ ಮತ ಧರ್ಮಗಳ ತಾರತಮ್ಯ ಇಲ್ಲದ ಸರ್ವ ಜನಾಂಗದ ಹಬ್ಬ. ಆಸ್ತಿಕತೆ ನಾಸ್ತಿಕತೆ ಎಂಬುದು ದಸರಾದಲ್ಲಿ ಅಪ್ರಸ್ತುತವಾಗಿದೆ. ಇದು ಅರಮನೆ ಹಬ್ಬವಲ್ಲ. ಜನರ ಆರಿಸಿದ ಸರ್ಕಾರ ನಡೆಸುವ ಜನರ ಹಬ್ಬವೆಂದರೆ ಅದು ದಸರಾ ಎಂದರು.

    ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಶಿವಕುಮಾರ್ (DCM Shivakumar) ಎಷ್ಟೆ ಅಡ್ಡಿ ಆತಂಕ ಎದುರಾಗುತ್ತಿದ್ದರೂ ಎದೆಗುಂದದೆ ಸಡ್ಡು ಹೊಡೆದು ಗಟ್ಟಿಯಾಗಿ ನಿಂತಿದ್ದಾರೆ. ಜೀವನವೇ ದೊಡ್ಡ ಅಖಾಡ. ಅದರಲ್ಲಿ ಧೃತಿಗೆಡದೆ ತೊಡೆತಟ್ಟಿ ನಿಲ್ಲಲೇಬೇಕು. ಸಜ್ಜನಿಕೆ ಸೌಮ್ಯತೆ ದೌರ್ಬಲ್ಯವಲ್ಲ. ಪ್ರತಿಕೂಲ ಪ್ರವಾಹವನ್ನು ಎದುರಿಸುವ ಧೀಶಕ್ತಿ ಪ್ರತಿಯೊಬ್ಬರಲ್ಲೂ ಇರಬೇಕು ಎಂದು ಚಾಮುಂಡಿ ತಾಯಿಗೆ ಪಾರ್ಥನೆ ಸಲ್ಲಿಸಿದರು.

    ಇಸ್ರೇಲ್ – ಪ್ಯಾಲೆಸ್ಟೈನ್, ರಷಿಯಾ – ಉಕ್ರೈನ್ ಯುದ್ದ ನಿಲ್ಲಲಿ. ಹೆಣ್ಣು ಭ್ರೂಣ ಹತ್ಯೆ ನಿಲ್ಲಲಿ. ಶಾಸನಸಭೆಯಲ್ಲಿ ಸ್ತೀಯರಿಗೆ ಸೂಕ್ತ ಪ್ರಾತಿನಿಧ್ಯ ಸಿಗಲಿ. ಸರ್ಕಾರ ಉರುಳಿಸುವ ದುರಾಲೋಚನೆ ಬರದಂತೆ ತಡೆದು ಚುನಾಯಿತ ಸರ್ಕಾರಗಳು ಉಳಿಯುವ ಚಿಂತನೆ ಮೂಡಲಿ ಎಂದು ಸಿಎಂಗೆ ಧೈರ್ಯ ತುಂಬಿದರು.ಇದನ್ನೂ ಓದಿ: ಇಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಪೀಣ್ಯ – ನಾಗಸಂದ್ರ ನಡುವೆ ಮೆಟ್ರೋ ಸಂಚಾರ ಸ್ಥಗಿತ

    ಕೆಡವುದು ಸುಲಭ, ಕಟ್ಟುವುದು ಕಷ್ಟ. ಮತ್ತೆ ಮತ್ತೆ ಚುನಾವಣೆ ಬರುವುದು ಬೇಡ. ಯಾವ ಪಕ್ಷವೂ ಶಾಶ್ವತವಾಗಿ ಅಧಿಕಾರದಲ್ಲಿ ಇರುವುದು ಅಸಾಧ್ಯ. ಸೋತ ಪಕ್ಷವೂ ಮತ್ತೆ ಅಧಿಕಾರಕ್ಕೆ ಬರಲು ಐದು ವರ್ಷಗಳಲ್ಲಿ ಸಜ್ಜಾಗಬಹುದು. ದೋಷಾರೋಪಣೆ, ಅವಾಚ್ಯ ಶಬ್ಧ ಬಳಕೆಯೇ ಯುವಕರಿಗೆ ಮಾದರಿ ಆದರೆ ಏನೂ ಗತಿ ಎಂದು ಪ್ರಶ್ನಿಸಿದರು.

    ಉದ್ಘಾಟಕರಾದ ಸಾಹಿತಿ ಡಾ.ಹಂಪ ನಾಗರಾಜಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಎಲ್ಲ ಗಣ್ಯರು ಒಂದೇ ಬಸ್‌ನಲ್ಲಿ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದರು. ಉದ್ಘಾಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಡಿಸಿಎಂ ಹಾಗೂ ಹಲವರು ಶಾಸಕರು ಭಾಗಿಯಾಗಿದ್ದರು. ದಸರಾ ಚಾಲನೆ ನೀಡುವ ಜೊತೆಗೆ ಫಲಪುಷ್ಪ ಪ್ರದರ್ಶನ, ಚಲನಚಿತ್ರೋತ್ಸವ, ರೈತ ದಸರಾ, ಕುಸ್ತಿ ದಸರಾ, ಯೋಗ ದಸರಾ, ವಸ್ತು ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮೈಸೂರು ಅರಮನೆ, ಪ್ರಮುಖ ವೃತ್ತಗಳ ವಿದ್ಯುತ್ ದೀಪಾಲಂಕಾರಕ್ಕೂ ಚಾಲನೆ ನೀಡಿದರು.

    ನಂದಿಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ಪೂಜೆ ಮಾಡಿ, ಸೇರಿದ ಗಣ್ಯರ ಜೊತೆ ಪುಷ್ಪಾರ್ಚನೆ ಮಾಡಿದರು. ಬಳಿಕ ಚಾಮುಂಡೇಶ್ವರಿ ದೇವಾಲಯದ ಬಳಿ ಆಗಮಿಸಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಗಂಗಾರತಿ ಮಾದರಿಯಲ್ಲಿ ಇಂದು ಸಂಜೆ ಶ್ರೀರಂಗಪಟ್ಟಣದಲ್ಲಿ 5 ದಿನಗಳ ಕಾಲ ಕಾವೇರಿ ಆರತಿ ನಡೆಯಲಿದೆ.ಇದನ್ನೂ ಓದಿ: Delhi | ಚಿಕಿತ್ಸೆಗೆ ಬಂದು ವೈದ್ಯನ ಗುಂಡಿಕ್ಕಿ ಹತ್ಯೆಗೈದ ಅಪ್ರಾಪ್ತರು

  • PUBLiC TV Impact | ಡೆಡ್‌ಲೈನ್ ಟೆನ್ಶನ್‌ನಲ್ಲಿ ಪಾಲಿಕೆ ಯಡವಟ್ಟು – ಬಿಬಿಎಂಪಿಯಿಂದ ಗುಂಡಿ ಮುಚ್ಚುವ ಕಾರ್ಯ ಶುರು!

    PUBLiC TV Impact | ಡೆಡ್‌ಲೈನ್ ಟೆನ್ಶನ್‌ನಲ್ಲಿ ಪಾಲಿಕೆ ಯಡವಟ್ಟು – ಬಿಬಿಎಂಪಿಯಿಂದ ಗುಂಡಿ ಮುಚ್ಚುವ ಕಾರ್ಯ ಶುರು!

    ಬೆಂಗಳೂರು: ಟಾರ್ಗೆಟ್ ರೀಚ್ ಆಗುವ ಭರದಲ್ಲಿ ತರಾತುರಿಯಲ್ಲಿ ಗುಂಡಿ ಮುಚ್ಚುವ ಕೆಲಸ ಮಾಡಿದ್ದ ಬಿಬಿಎಂಪಿ, ಪಬ್ಲಿಕ್ ಟಿವಿ (PUBLiC TV) ವರದಿ ಬಳಿಕ ಎಚ್ಚೆತ್ತುಕೊಂಡಿದೆ.

    ಹೌದು. ಆಗಸ್ಟ್ 12ರಂದು ಜಾಲಹಳ್ಳಿ (Jalahalli) ರಸ್ತೆ ಗುಂಡಿ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ವರದಿ ಪರಿಣಾಮ ಎಚ್ಚೆತ್ತ ಬಿಬಿಎಂಪಿ (BBMP) ಇದೀಗ ಗುಂಡಿ ಮುಚ್ಚುವ ಕೆಲಸ ಮಾಡಿಸಿದೆ. ಬಸವೇಶ್ವರ ನಗರದ (Basaveshwar Nagar) ವಾಟರ್ ಟ್ಯಾಂಕ್ ರಸ್ತೆಯಲ್ಲಿ ಬರೆ ಜೆಲ್ಲಿ ಕಲ್ಲು ಸುರಿದ ಬಿಬಿಎಂಪಿ ದುರಸ್ತಿ ಮಾಡಿತ್ತು. ಟಾರ್ಗೆಟ್ ರೀಚ್ ಆಗುವ ಬರದಲ್ಲಿ ತರಾತುರಿಯ ಕೆಲಸ ಮುಗಿಸಿತ್ತು. ಪ್ರಮುಖ ರಸ್ತೆ ದುರಸ್ತಿಗಾಗಿ 600 ಕೋಟಿಗೂ ಅಧಿಕ ಹಣವನ್ನು ಮೀಸಲಿಡಲಾಗುತ್ತು. ಆದರೆ ನೋಡಿದರೆ ಕೇವಲ ಜಲ್ಲಿ ಕಲ್ಲು ಹಾಗೂ ಸೀಮೆಂಟ್ ದುರಸ್ತಿ ಕೆಲಸ ಮಾಡಲಾಗಿತ್ತು.ಇದನ್ನೂ ಓದಿ: ಬಿಜೆಪಿ ಶಾಸಕ ಮುನಿರತ್ನ ಬಂಧನಕ್ಕೆ ಕೇಸರಿ ಕಲಿಗಳು ಕೆಂಡ – ಸರ್ಕಾರದ ವಿರುದ್ಧ ಅಶ್ವಥ್‌ ನಾರಾಯಣ್‌ ತೀವ್ರ ವಾಗ್ದಾಳಿ

    ರಸ್ತೆಯ ಅರ್ಧಭಾಗ ಆವರಿಸಿರುವ ಗುಂಡಿಗೆ ಕೇವಲ ಜೆಲ್ಲಿಯನ್ನು ಸುರಿಯಲಾಗಿತ್ತು. ಇದರಿಂದ ಇನ್ನಷ್ಟು ಅಪಘಾತಗಳು ಹೆಚ್ಚಾಗುತ್ತವೆ ಎಂದು ವಾಹನ ಸವಾರರು ಕಿಡಿಕಾರಿದ್ದರು. ದಯವಿಟ್ಟು ಕೈ ಮುಗಿದು ಬೇಡಿಕೊಳ್ಳುತ್ತೇವೆ ರಸ್ತೆ ಗುಂಡಿ ಮುಚ್ಚಿ ಅಂತ ಸಾರ್ವಜನಿಕರು ಬೇಡಿಕೊಂಡಿದ್ದರು. ಈ ಕುರಿತಂತೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ವರದಿಯ ಪರಿಣಾಮ ಇದೀಗ ಗುಂಡಿ ಮುಚ್ಚುವ ಆರಂಭವಾಗಿದೆ. ಜೊತೆಗೆ ಬೆಂಗಳೂರು ಗುಂಡಿ ಮುಕ್ತ ಮಾಡಲು ಡಿಸಿಎಂ ಸೆ.15ರ ವರೆಗೆ ಕೊನೆಯ ದಿನ ಎಂದು ಕೊಟ್ಟಿರುವ ಡೆಡ್‌ಲೈನ್ ಹಿನ್ನೆಲೆ ಕೆಲಸ ಜೋರಾಗಿ ನಡೆಯುತ್ತಿದೆ.

    ಇದೀಗ ಗುಂಡಿ ಮುಚ್ಚುವ ಕಾರ್ಯ ಆರಂಭವಾಗಿದ್ದು, ಜಾಲಹಳ್ಳಿ ಮುಖ್ಯ ರಸ್ತೆ, ದಾಸರಹಳ್ಳಿ (Dasarhalli) ವಲಯ ರಸ್ತೆಯನ್ನು ಆಯುಕ್ತರ ನೇತೃತ್ವದಲ್ಲಿ ಮುಚ್ಚಲಾಗುತ್ತಿದೆ. ಪಬ್ಲಿಕ್ ಟಿವಿ ವರದಿ ನಂತರ ಅಯ್ಯಪ್ಪ ದೇವಾಲಯದ ಮುಂದೆ ಬಿಬಿಎಂಪಿ ಗುಂಡಿ ಮುಚ್ಚುತ್ತಿದೆ. ಇಂದು ಕಡೆ ದಿನವಾದ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು ಭಾನುವಾರದಂದು ರಸ್ತೆ ಗುಂಡಿ ಮುಚ್ಚುವುದರಲ್ಲಿ ತೊಡಗಿದ್ದಾರೆ.ಇದನ್ನೂ ಓದಿ: ದೇಶದ ಮೊದಲ ವಂದೇ ಮೆಟ್ರೋ, 6 ವಂದೇ ಭಾರತ್‌ ರೈಲು ಸೇವೆಗೆ ಮೋದಿ ಚಾಲನೆ – ಏನಿದರ ವಿಶೇಷ!