Tag: DCM G. Parameshwara

  • ಪ್ರತಿಷ್ಠಿತ ವ್ಯಕ್ತಿಗಳ ಮದ್ವೆಗೆ ಹೋಗ್ತಾರೆ, ಶ್ರೀಗಳ ನೋಡಲು ಮೋದಿಗೆ ಬರಲು ಸಮಯವಿಲ್ಲ- ಪರಮೇಶ್ವರ್

    ಪ್ರತಿಷ್ಠಿತ ವ್ಯಕ್ತಿಗಳ ಮದ್ವೆಗೆ ಹೋಗ್ತಾರೆ, ಶ್ರೀಗಳ ನೋಡಲು ಮೋದಿಗೆ ಬರಲು ಸಮಯವಿಲ್ಲ- ಪರಮೇಶ್ವರ್

    – ಡಿಸಿಎಂಗೆ ತಿರುಗೇಟು ಕೊಟ್ಟ ಪ್ರತಾಪ್ ಸಿಂಹ
    – ಕೋಟ್ಲರ್ ಪ್ರಶಸ್ತಿಗೆ ಪ್ರಧಾನಿ ಮೋದಿ ಅರ್ಹರೇ?

    ಬೆಂಗಳೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನ ಹಾಗೂ ಕ್ರಿಯಾ ವಿಧಿವಿಧಾನಕ್ಕೆ ಬಾರದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟ್ ಮೂಲಕ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ವ್ಯಂಗ್ಯವಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?:
    ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸಿದ್ಧ ವ್ಯಕ್ತಿಗಳ ಮದುವೆ ಸಮಾರಂಭ, ಸಿನಿಮಾ ಸಭೆಗಳಲ್ಲಿ ಭಾಗಿ ಆಗುತ್ತಾರೆ. ಆದರೆ ಅವರಿಗೆ ನಡೆದಾಡುವ ದೇವರು, ಬಡವರಿಗೆ ಶ್ರಮಿಸಿದ ಶ್ರೀ ಸಿದ್ದಗಂಗಾ ಸ್ವಾಮೀಜಿಗಳ ಕ್ರಿಯಾ ವಿಧಿವಿಧಾನಕ್ಕೆ ಬರಲು ಆಗಲಿಲ್ಲ. ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಪ್ರಧಾನಿಗಳ ಬಳಿ ಕೇಳಿಕೊಳ್ಳುವುದು ವ್ಯರ್ಥ ಎಂದು ವ್ಯಂಗ್ಯವಾಡಿದ್ದಾರೆ.

    ಕೋಟ್ಲರ್ ಪ್ರಶಸ್ತಿಗೆ ನಿಜವಾದ ಅರ್ಹತೆ ಹೊಂದಿದವರು ಪ್ರಧಾನಿ ನರೇಂದ್ರ ಮೋದಿ ಅವರಾ ಎಂದು ಪರಮೇಶ್ವರ್ ಪ್ರಶ್ನಿಸಿ ಆಕ್ರೋಶ ಹೊರಹಾಕಿದ್ದಾರೆ.

    ಡಿಸಿಎಂ ಜಿ.ಪರಮೇಶ್ವರ್ ಅವರ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿದ ಸಂಸದ ಪ್ರತಾಪ್ ಸಿಂಹ ಅವರು, ನಿಮ್ಮ ಪಕ್ಷದ ನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎಲ್ಲಿ ಹೋಗಿದ್ದರು? ದಯವಿಟ್ಟು ನನ್ನ ಪಶ್ನೆಗೆ ಉತ್ತರ ಕೊಡಿ ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಂ.ಬಿ.ಪಾಟೀಲ್ ಕೈ ಕುಲುಕಿ ವಿಜಯದ ನಗೆ ಬೀರಿದ್ರಾ ಸಿದ್ದರಾಮಯ್ಯ!

    ಎಂ.ಬಿ.ಪಾಟೀಲ್ ಕೈ ಕುಲುಕಿ ವಿಜಯದ ನಗೆ ಬೀರಿದ್ರಾ ಸಿದ್ದರಾಮಯ್ಯ!

    ಬೆಂಗಳೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯರ ನಿವಾಸಕ್ಕೆ ತೆರಳಿದ ನೂತನ ಗೃಹ ಸಚಿವ ಎಂ.ಬಿ.ಪಾಟೀಲ್ ತಮ್ಮ ನಾಯಕನಿಗೆ ಧನ್ಯವಾದ ಸಲ್ಲಿಸಿದ್ದಾರೆ. ನಿವಾಸಕ್ಕೆ ಬಂದ ಪಾಟೀಲರನ್ನು ಬರಮಾಡಿಕೊಂಡ ಮಾಜಿ ಸಿಎಂ ಕೈ ಕುಲುಕಿ ಗೃಹ ಸಚಿವರಿಗೆ ಶುಭಕೋರಿದರು.

    ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಬಳಿಯಿದ್ದ ಗೃಹ ಖಾತೆಯನ್ನು ತಪ್ಪಿಸಿ ತಮ್ಮ ಬಣದ ಸದಸ್ಯ ಎಂ.ಬಿ.ಪಾಟೀಲ್ ಅವರಿಗೆ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರು ಪಕ್ಷದಲ್ಲಿ ಮತ್ತೆ ಬಲ ಪ್ರದರ್ಶನ ಮಾಡಿ, ಮೂಲ ಕಾಂಗ್ರೆಸ್ಸಿಗರಿಗೆ ಟಾಂಗ್ ಕೊಟ್ಟಿದ್ದಾರೆ. ವಿಧಾನ ಪರಿಷತ್ ಸಭಾಪತಿ ಆಯ್ಕೆಯ ರಿವೇಂಜ್ ಅನ್ನು ತೀರಿಸಿಕೊಂಡಿದ್ದಾರೆ ಎಂಬ ಮಾತುಗಳು ಪಕ್ಷದಲ್ಲಿ ಕೇಳಿಬರುತ್ತಿವೆ.

    ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಎಸ್.ಆರ್.ಪಾಟೀಲ್ ಅವರ ಹೆಸರನ್ನು ಸಿದ್ದರಾಮಯ್ಯ ಪ್ರಸ್ತಾಪಿಸಿ ಮಲೇಷಿಯಾ ಪ್ರವಾಸಕ್ಕೆ ತೆರಳಿದ್ದರು. ಆದರೆ ಮೂಲ ಕಾಂಗ್ರೆಸ್ಸಿಗರಾದ ಸಚಿವ ಡಿ.ಕೆ.ಶಿವಕುಮಾರ್ ಬಣವು ಪ್ರತಾಪ್ ಚಂದ್ರಶೆಟ್ಟಿ ಅವರನ್ನು ಆಯ್ಕೆ ಮಾಡಿತ್ತು. ಇದರಿಂದಾಗಿ ಸಿದ್ದರಾಮಯ್ಯ ಅವರು ಮಲೇಷಿಯಾ ಪ್ರವಾಸವನ್ನು ಮೊಟಕುಗೊಳಿಸಿ ಬೆಂಗಳೂರಿಗೆ ವಾಪಾಸ್ ಆಗಿದ್ದರು. ಬಳಿಕ ನಡೆದ ಸಚಿವ ಸಂಪುಟದಲ್ಲಿ ಪ್ಲಾನ್ ಮಾಡಿ ಗೃಹ ಖಾತೆಯನ್ನು ಪರಮೇಶ್ವರ್ ಅವರ ಕೈತಪ್ಪಿಸಿದ್ದಾರೆ ಎಂದು ಹೇಳಲಾಗುತ್ತಿದೆ.

    ಇತ್ತ ಗೃಹ ಖಾತೆ ಅಧಿಕಾರ ಸ್ವೀಕರಿಸಿದ ಎಂ.ಬಿ.ಪಾಟೀಲ್ ಅವರು, ಝೀರೋ ಟ್ರಾಫಿಕ್ ಸೌಲಭ್ಯ ಬೇಡ. ಸಿಗ್ನಲ್ ಫ್ರೀ ಕೊಟ್ಟರೆ ಸಾಕು ಎಂದು ಹೇಳುವ ಮೂಲಕ ಜಿ.ಪರಮೇಶ್ವರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಬಣ ಮತ್ತಷ್ಟು ಬಲಿಷ್ಠವಾಗುತ್ತಿದೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv