Tag: DCM Parameshwar

  • ಪರಪ್ಪನ ಅಗ್ರಹಾರ ಮಹಿಳಾ ಕೈದಿಗಳಿಂದ ಡಿಸಿಎಂಗೆ ಘೇರಾವ್!

    ಪರಪ್ಪನ ಅಗ್ರಹಾರ ಮಹಿಳಾ ಕೈದಿಗಳಿಂದ ಡಿಸಿಎಂಗೆ ಘೇರಾವ್!

    ಬೆಂಗಳೂರು: ಮಹಿಳಾ ಕೈದಿಗಳು ಡಿಸಿಎಂ ಪರಮೇಶ್ವರ್ ಅವರಿಗೆ ಘೇರಾವ್ ಹಾಕಿರುವ ಘಟನೆ ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ.

    ಸನ್ನಡತೆಯ ಆಧಾರದಲ್ಲಿ ಕೆಲ ಕೈದಿಗಳ ಅವಧಿ ಪೂರ್ವ ಬಿಡುಗಡೆ ಕಾರ್ಯಕ್ರಮ ಇಂದು ಏರ್ಪಡಿಸಲಾಗಿತ್ತು. ಈ ವೇಳೆ ಪರಮೇಶ್ವರ್ ಅವರ ವಿರುದ್ಧ ಮಹಿಳಾ ಕೈದಿಗಳು ಆಕ್ರೋಶ ಹೊರ ಹಾಕಿದ್ದಾರೆ. ಈ ಬಾರಿ ಬಿಡುಗಡೆ ಮಾಡಲಾಗುತ್ತಿರುವ ಕೈದಿಗಳ ಪಟ್ಟಿಯಲ್ಲಿ ಯಾವುದೇ ಮಹಿಳೆಯರು ಇಲ್ಲದೇ ಇರುವುದು ಕೈದಿಗಳು ಘೇರಾವ್ ಹಾಕಲು ಕಾರಣ ಎನ್ನಲಾಗಿದೆ. ಮಹಿಳಾ ಕೈದಿಗಳು ಘೇರಾವ್ ಹಾಕುತ್ತಿದಂತೆ ಎಚ್ಚೆತ್ತ ಜೈಲಿನ ಸಿಬ್ಬಂದಿ ಮಾಧ್ಯಮಗಳನ್ನು ಹೊರಕ್ಕೆ ಕಳುಹಿಸಿದ್ದಾರೆ.

    ಇಂದು ನಡೆದ ಕಾರ್ಯಕ್ರಮದಲ್ಲಿ ಪರಮೇಶ್ವರ್ ಅವರು 79 ಮಂದಿ ಕೈದಿಗಳಿಗೆ ಬಿಡುಗಡೆ ಪತ್ರ ನೀಡಿದರು. ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಮಹಿಳಾ ಕೈದಿಗಳು ಘೇರಾವ್ ಹಾಕಿದಂತಹ ಯಾವುದೇ ಘಟನೆ ನಡೆದಿಲ್ಲ. ಜೈಲಿನ ಭದ್ರತೆ ಹೆಚ್ಚಿಸುವ ಕ್ರಮ ಕೈಗೊಳ್ಳಲಾಗಿದೆ ಎಂದರು. ಇನ್ನು ಕಾರ್ಯಕ್ರಮದಲ್ಲಿ ಕಾರಾಗೃಹ ಎಡಿಜಿಪಿ ಮೇಘರಿಕ್ ಡಿಸಿಎಂಗೆ ಸಾಥ್ ನೀಡಿದರು.

    ಈ ವೇಳೆ ಮಾತನಾಡಿದ ಎಡಿಜಿಪಿ, ಇಂದು 79 ಮಂದಿಗೆ ಬಿಡುಗಡೆ ಮಾಡಲಾಗಿದೆ. 14 ವರ್ಷ ಶಿಕ್ಷೆ ಅನುಭವಿಸಿದ ಕೈದಿ ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಇದೇ ವೇಳೆ ಮಹಿಳಾ ಕೈದಿಗಳ ಪಟ್ಟಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಂವಿಧಾನದ 161 ವಿಧಿ ಅನ್ವಯ ರಾಜ್ಯಪಾಲರು ಹಾಗೂ 171 ವಿಧಿ ಅನ್ವಯ ರಾಷ್ಟ್ರಪತಿಗಳು ಅನುಮತಿ ನೀಡಿದರೆ ಮಾತ್ರ ಬಿಡುಗಡೆ ಮಾಡಲು ಅವಕಾಶವಿದೆ. ಆದರೆ ಈ ಪಟ್ಟಿಯಲ್ಲಿ ಸರ್ಕಾರ ಮಟ್ಟದಲ್ಲಿ ಹಾಗೂ ಪೊಲೀಸ್ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆಸಿ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. ಅದ್ದರಿಂದ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲಾಗಿದ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೈಸಾಲ ಕೊಟ್ಟವರಿಗೆ ಕೈಮುಗಿದು, ಎಲ್ಲಾ ಆಗೋಯ್ತು ಇನ್ನೇನೂ ಕೇಳ್ಬೇಡಿ ಅಂದುಬಿಡಿ: ಡಿಸಿಎಂ ಪರಮೇಶ್ವರ್

    ಕೈಸಾಲ ಕೊಟ್ಟವರಿಗೆ ಕೈಮುಗಿದು, ಎಲ್ಲಾ ಆಗೋಯ್ತು ಇನ್ನೇನೂ ಕೇಳ್ಬೇಡಿ ಅಂದುಬಿಡಿ: ಡಿಸಿಎಂ ಪರಮೇಶ್ವರ್

    ತುಮಕೂರು: ಕೈಸಾಲ ಕೊಟ್ಟಿರುವವರಿಗೆ ಕೈಮುಗಿದು, ಎಲ್ಲಾ ಆಗಿ ಹೋಯಿತು, ಇನ್ನೇನೂ ನಮ್ಮ ಹತ್ತಿರ ಕೇಳ ಬೇಡಿ ಅಂಥ ಹೇಳಿಬಿಡಿ ಎಂದು ರೈತರಿಗೆ ಉಪಮುಖ್ಯಮಂತ್ರಿ ಪರಮೇಶ್ವರ್ ಖಾಸಗಿ ಸಾಲಮನ್ನಾ ಕುರಿತು ಹೇಳಿಕೆ ನೀಡಿದ್ದಾರೆ.

    ಕೊರಟಗೆರೆಯ ಕ್ಯಾಮೇನಹಳ್ಳಿಯಲ್ಲಿ ಆಯೋಜಿಸಿದ್ದ ಹಾಲು ಒಕ್ಕೂಟದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ರೈತರ ಪರವಾಗಿ ನಿಲ್ಲಬೇಕೆಂದು 49 ಸಾವಿರ ಕೋಟಿ ರೂಪಾಯಿ ಸಾಲಮನ್ನಾ ಮಾಡಿದೆ. ಮನ್ನಾ ಮಾಡಿದ್ದರೂ ಸಹ ಬಹಳ ದೊಡ್ಡ ದೊಡ್ಡ ಟೀಕೆಗಳನ್ನು ಮಾಡಿದ್ದಾರೆ. ಅವುಗಳಿಗೆ ಉತ್ತರಿಸುವ ಅವಶ್ಯಕತೆಯೂ ಇಲ್ಲ. ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಪ್ರಶ್ನೆಯೂ ಅಲ್ಲ. ಕೇವಲ ರೈತರ ಕಷ್ಟಕ್ಕೆ ನೆರವಾಗಿದ್ದೇವೆ ಎನ್ನುವುದು ಮುಖ್ಯವೆಂದು ತಿಳಿಸಿದ್ದಾರೆ.

    ರೈತರಿಗಾಗಿ ನಮ್ಮ ಅನವಶ್ಯಕತ ಖರ್ಚುಗಳನ್ನು ನಿಲ್ಲಿಸಿದ್ದೇವೆ. ಇಂದಿನಿಂದ ಸಾಲಮನ್ನಾ ಪ್ರಕ್ರಿಯೆ ಆರಂಭಗೊಳ್ಳಲಿದೆ. ಇದರ ಜೊತೆಗೆ ಬ್ಯಾಂಕ್ ಸಾಲ ಹಾಗೂ ಕೈಸಾಲ ಮನ್ನಾಗೂ ಕಾಯ್ದೆ ರೂಪಿಸಿದ್ದೇವೆ. ಈಗಾಗಲೇ ಕ್ಯಾಬಿನೆಟ್‍ನಲ್ಲಿಯೂ ಋಣಮುಕ್ತ ಕಾಯ್ದೆಯನ್ನು ಮಂಜೂರು ಮಾಡಲಾಗಿದೆ. ಕೈಸಾಲ ಪಡೆದ ರೈತರು ಸಾಲ ಕೊಟ್ಟಿರುವವರಿಗೆ ಕೈ ಮುಗಿದು, ಸ್ವಾಮಿ ಎಲ್ಲಾ ಆಗಿ ಹೋಯಿತು. ಇನ್ನೇನೂ ನಮ್ಮ ಹತ್ರ ಕೇಳಬೇಡಿ ಅಂತ ಹೇಳಿಬಿಡಿ ಎಂದು ರೈತರ ಪರವಾಗಿ ಮಾತನಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಂಗ್ರೆಸ್-ಜೆಡಿಎಸ್ ನಡುವೆ ಶುರುವಾಯ್ತು ರಿಯಲ್ ಫೈಟ್!

    ಕಾಂಗ್ರೆಸ್-ಜೆಡಿಎಸ್ ನಡುವೆ ಶುರುವಾಯ್ತು ರಿಯಲ್ ಫೈಟ್!

    ತುಮಕೂರು: ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ದೋಸ್ತಿ ಸರ್ಕಾರದ ನಡುವೆ ರಿಯಲ್ ಜಗಳ ಶುರುವಾಗಿದೆ.

    ಸ್ಥಳೀಯ ಸಂಸ್ಥೆಗಳ ಗದ್ದುಗೆ ಹಿಡಿಯಲು ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಸೆಣಸಾಟ ಜೋರಾಗಿದೆ. ಗುಬ್ಬಿ ಪಟ್ಟಣ ಪಂಚಾಯತ್ ಕಾಂಗ್ರೆಸ್ ಹಿಡಿತದಲ್ಲೇ ಇರಬೇಕು ಎಂದು ಕಾರ್ಯಕರ್ತರನ್ನು ಹುರಿದುಂಬಿಸುವ ಮೂಲಕ ಡಿಸಿಎಂ ಪರಮೇಶ್ವರ್ ಅವರು ಸಣ್ಣ ಕೈಗಾರಿಕಾ ಸಚಿವ ಎಸ್ ಆರ್ ಶ್ರೀನಿವಾಸ್ ಗೆ ಟಾಂಗ್ ಕೊಟ್ಟಿದ್ದಾರೆ.

    ಗುಬ್ಬಿ ಸಚಿವ ಶ್ರೀನಿವಾಸರ ಸ್ವಕ್ಷೇತ್ರವಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಪಟ್ಟಣ ಪಂಚಾಯತ್ ತಮ್ಮ ಸುಪರ್ದಿಗೆ ತರಲು ಪ್ಲಾನ್ ಮಾಡಿದ್ದಾರೆ. ಅಲ್ಲದೆ ದೋಸ್ತಿಯಿಂದಾಗಿ ತಮ್ಮ ಪಕ್ಷಕ್ಕೆ ತುಂಬಾ ಲಾಭವಾಗಿದೆ. ಯಾಕಂದ್ರೆ ನಾವು ಯಾರನ್ನ ವಿರೋಧ ಮಾಡಿದ್ದೇವೆಯೋ ಅವರ ಜೊತೆ ಈಗ ಸೇರಿಕೊಂಡಿದ್ದೇವೆ. ಹಾಗಾಗಿ ಈಗ ನಮಗೆ ಯಾವ ವಿರೋಧಿಗಳೇ ಇಲ್ಲ ಎಂದು ಡಿಸಿಎಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಗುಬ್ಬಿ ಪಟ್ಟಣ ಪಂಚಾಯತ್ ಕಾಂಗ್ರೆಸ್ ಹಿಡಿತದಲ್ಲಿ ಇರಲೇಬೇಕು ಆ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮ ಹಾಕಬೇಕು ಎಂದು ಕರೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಪರಮೇಶ್ವರ್ ಗೆ ಶುಭಕೋರಿ ಬ್ಯಾನರ್- ಬೆಂಬಲಿಗರ ವಿರುದ್ಧ ಎಫ್‍ಐಆರ್

    ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಪರಮೇಶ್ವರ್ ಗೆ ಶುಭಕೋರಿ ಬ್ಯಾನರ್- ಬೆಂಬಲಿಗರ ವಿರುದ್ಧ ಎಫ್‍ಐಆರ್

    ಬೆಂಗಳೂರು: ಉಪಮುಖ್ಯಮಂತ್ರಿ ಪರಮೇಶ್ವರ್ ಬೆಂಬಲಿಗರಿಂದ ಫ್ಲೆಕ್ಸ್ ಅಳವಡಿಕೆ ವಿಚಾರವಾಗಿ ಇಂದು ಪಬ್ಲಿಕ್ ಟಿವಿ ವರದಿ ಬಿತ್ತರಿಸಿತ್ತು. ಈ ವರದಿ ಬಳಿಕ ಎಚ್ಚೆತ್ತ ಪರಮೇಶ್ವರ್, ಫ್ಲೆಕ್ಸ್ ಹಾಕಿದ ಬೆಂಬಲಿಗರ ಮೇಲೆ ಎಫ್‍ಐಆರ್ ಹಾಕುವಂತೆ ಸೂಚಿಸಿದ್ದಾರೆ.

    ಪರಮೇಶ್ವರ್ ಹುಟ್ಟುಹಬ್ಬದ ಹಿನ್ನೆಲೆ ಬೆಂಬಲಿಗರು ಶುಭಕೋರಿ ಸಿಎಂ ಗೃಹಕಚೇರಿ ಕೃಷ್ಣಾದ ಎದುರೇ ಬ್ಯಾನರ್, ಫ್ಲೆಕ್ಸ್ ಹಾಕಿದ್ದರು. ಈ ಕುರಿತು ಪಬ್ಲಿಕ್ ಟಿವಿಯಲ್ಲಿ ವರದಿ ಮಾಡಿತ್ತು. ಇದರ ಬೆನ್ನಲ್ಲೇ ಪರಮೇಶ್ವರ್, ನನ್ನ ಬೆಂಬಲಿಗರ ಮೇಲೆ ಎಫ್‍ಐಆರ್ ಹಾಕಿ ಅಂತಾ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

    ಬಿಬಿಎಂಪಿ ಸಿಎಂ ಗೃಹಕಚೇರಿ ಕೃಷ್ಣಾ ಎದುರು ರಾರಾಜಿಸುತ್ತಿದ್ದ ಫ್ಲೆಕ್ಸ್ ಗಳನ್ನು ತೆರವುಗೊಳಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಡಿಸಿಎಂ ಪರಮೇಶ್ವರ್ ಗೆ ಹುಟ್ಟುಹಬ್ಬದ ಶುಭ ಕೋರಿ ಫ್ಲೆಕ್ಸ್ ಗಳನ್ನು ಅಳವಡಿಸಿದ್ದರು. ಫ್ಲೆಕ್ಸ್ ಅಳವಡಿಸಿದ್ದ ಸರ್ಕಾರಿ ನೌಕರರ ಸಂಘದವರ ಮೇಲೆ ದೂರು ದಾಖಲಿಸಲು ನಿರ್ಧರಿಸಲಾಗಿದೆ.

    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ನಂಘದ ಅಧ್ಯಕ್ಷ ಎಚ್.ಕೆ ರಾಮು, ಹಿರಿಯ ಉಪಾಧ್ಯಕ್ಷ ಕೆಜಿ ಆಂಜಿನಪ್ಪ, ರಾಜ್ಯ ಪರಿಷತ್ ಸದಸ್ಯ ಮಂಜುನಾಥ್ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದೂರು ದಾಖಲಿಸಲಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಎಇಇ ಜಯಸಿಂಹ ಮಾಹಿತಿ ನೀಡಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿದ ಡಾ. ಜಿ. ಪರಮೇಶ್ವರ್, “ಯಾವುದೇ ಕಾರಣಕ್ಕೂ ಯಾವುದೇ ಸಮಾರಂಭಕ್ಕೂ ಫ್ಲೆಕ್ಸ್ ಗಳನ್ನು ಅಳವಡಿಸಿ ನಗರವನ್ನು ಹಾಳು ಮಾಡುವಂತಿಲ್ಲ. ಖಂಡಿತವಾಗಿಯೂ ಇದು ನನ್ನ ಹುಟ್ಟುಹಬ್ಬವಲ್ಲ. ನನ್ನ ಹುಟ್ಟುಹಬ್ಬ ಆಚರಿಸದಂತೆ ನಾನು ನನ್ನ ಹಿತೈಷಿಗಳ ಹತ್ತಿರ ಕೇಳಿಕೊಂಡಿದ್ದೇನೆ. ಎಲ್ಲರು ಫ್ಲೆಕ್ಸ್ ಗಳನ್ನು ಅಳವಡಿಸುವುದನ್ನು ನಿಲ್ಲಿಸಬೇಕು ಎಂದು ನಾನು ಮನವಿ ಮಾಡಿಕೊಳ್ಳುತ್ತೇನೆ. ನಮ್ಮ ನಗರವನ್ನು ಸ್ವಚ್ಛವಾಗಿ ಹಾಗೂ ಸುಂದರವಾಗಿ ಇಡೋಣ” ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಒಂದೆಡೆ ಫ್ಲೆಕ್ಸ್ ತೆರವು, ಮತ್ತೊಂದೆಡೆ ಅಳವಡಿಕೆ- ಸಚಿವರ ಬೆಂಬಲಿಗರಿಗಿಲ್ಲ ಯಾವುದೇ ರೂಲ್ಸ್

    ಒಂದೆಡೆ ಫ್ಲೆಕ್ಸ್ ತೆರವು, ಮತ್ತೊಂದೆಡೆ ಅಳವಡಿಕೆ- ಸಚಿವರ ಬೆಂಬಲಿಗರಿಗಿಲ್ಲ ಯಾವುದೇ ರೂಲ್ಸ್

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದೂ ಫ್ಲೆಕ್ಸ್ ಇರಕೂಡದು ಅಂತ ಕೋರ್ಟ್ ಖಡಕ್ ಎಚ್ಚರಿಕೆ ಕೊಟ್ಟ ಬೆನ್ನಲ್ಲೇ ಇದೀಗ ಡಿಸಿಎಂ ಪರಮೇಶ್ವರ್ ಅವರ ಹುಟ್ಟುಹಬ್ಬಕ್ಕೆ ಶುಭಕೋರಿರುವ ಫ್ಲೆಕ್ಸ್ ಗಳು ಬೆಂಗಳೂರಿನಲ್ಲಿ ರಾರಾಜಿಸುತ್ತಿವೆ.

    ಬೆಂಗಳೂರನ್ನು ಫ್ಲೆಕ್ಸ್ ಫ್ರೀ ಮಾಡಬೇಕೆಂದು ಸಿಎಂ ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ. ಹೈಕೋರ್ಟ್ ಆದೇಶವನ್ನು ಪರಿಣಾಮಕಾರಿಯಾಗಿ ಫಾಲೋ ಮಾಡಬೇಕು ಅಂತ ಡಿಸಿಎಂ ಹೇಳಿದ್ದಾರೆ. ಆದರೆ ವಿಚಿತ್ರ ಅಂದ್ರೆ ಡಿಸಿಎಂ ಪರಮೇಶ್ವರ್ ಅವರದ್ದೇ ಫ್ಲೆಕ್ಸ್ ಗಳು ರಾರಾಜಿಸ್ತಿವೆ.

    ನಗರಾಭಿವೃದ್ಧಿ ಸಚಿವ, ಉಪಮುಖ್ಯಮಂತ್ರಿ ಅವರ ಬೆಂಬಲಿಗರಿಂದಲೇ ರೂಲ್ಸ್ ಬ್ರೇಕ್ ಆಗಿದ್ದು, ಡಾ. ಜಿ ಪರಮೇಶ್ವರ್ ಫಾಲೋವರ್ಸ್‍ನಿಂದ ಹೈಕೋರ್ಟ್ ಆದೇಶಕ್ಕೆ ಬೆಲೆಯೇ ಇಲ್ಲದಂತಾಗಿದೆ. ಇಂದು ಡಿಸಿಎಂ ಪರಮೇಶ್ವರ್ ಅವರ ಹುಟ್ಟುಹಬ್ಬವಾಗಿದ್ದು, ರೇಸ್ ಕೋರ್ಸ್ ರಸ್ತೆಯಲ್ಲಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಫ್ಲೆಕ್ಸ್ ಗಳನ್ನು ಆಳವಡಿಸಿದ್ದಾರೆ. ಇದನ್ನೂ ಓದಿ: ಫ್ಲೆಕ್ಸ್ ತೆರವು ವೇಳೆ ಹಲ್ಲೆಗೈದ ನಾಲ್ವರ ಬಂಧನ

    ಕೆಪಿಸಿಸಿ ಕಾರ್ಯದರ್ಶಿ ಪದ್ಮನಾಭ್ ಶುಭಕೋರಿ ಫ್ಲೆಕ್ಸ್ ಗಳನ್ನು ಹಾಕಿದ್ದಾರೆ. ಒಂದೆಡೆ ಪಾಲಿಕೆಯಿಂದ ಫ್ಲೆಕ್ಸ್ ತೆರವು ಕಾರ್ಯಾಚರಣೆ ಮುಂದುವರೆದರೆ, ಮತ್ತೊಂದೆಡೆ ಪರಮೇಶ್ವರ್ ಬೆಂಬಲಿಗರಿಂದ ಫ್ಲೆಕ್ಸ್ ಆಳವಡಿಕೆ ಮಾಡಲಾಗುತ್ತಿದೆ. ಸಿಎಂ ಗೃಹಕಚೇರಿ ಕೃಷ್ಣಾ ಎದುರು ಫ್ಲೆಕ್ಸ್ ಗಳು ರಾರಾಜಿಸುತ್ತಿದೆ. ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಸರ್ಕಾರಿ ನೌಕರರ ಸಂಘದಿಂದ ಫ್ಲೆಕ್ಸ್ ಗಳನ್ನು ಆಳವಡಿಸಿಲಾಗಿದೆ. ಸಿಎಂ ಹಾಗೂ ಪರಮೇಶ್ವರ್ ಫೋಟೋ ಹಾಕಿ ಫ್ಲೆಕ್ಸ್ ಅಳವಡಿಸಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಈ ಬಗ್ಗೆ ವರದಿ ಮಾಡಿದ್ದು, ಈ ಬೆನ್ನಲ್ಲೇ ರೇಸ್ ಕೋರ್ಸ್ ರಸ್ತೆಯಲ್ಲಿದ್ದ ಪರಮೇಶ್ವರ್ ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದ ಫ್ಲೆಕ್ಸ್ ಗಳನ್ನು ತೆರವುಗೊಳಿಸಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಖರ್ಗೆಗೆ ಸಿಎಂ ಸ್ಥಾನ ಸಿಗದೆ ಇರೋದು ನಿರಾಸೆ ತಂದಿದೆ – ಪರಮೇಶ್ವರ್

    ಖರ್ಗೆಗೆ ಸಿಎಂ ಸ್ಥಾನ ಸಿಗದೆ ಇರೋದು ನಿರಾಸೆ ತಂದಿದೆ – ಪರಮೇಶ್ವರ್

    ಬೆಂಗಳೂರು: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ನನ್ನ ಮಾರ್ಗದರ್ಶಕರು ಹಾಗು ನಮ್ಮ ನಾಯಕರು. ಅವರಿಗೆ ಸಿಎಂ ಸ್ಥಾನ ಸಿಗದೆ ಇರುವುದು ನಮಗೆ ನಿರಾಸೆ ಮೂಡಿಸಿದೆ ಎಂದು ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.

    ನಗರದ ಪ್ರೆಸ್ ಕ್ಲಬ್ ಏರ್ಪಡಿಸಲಾಗಿದ್ದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನನ್ನ ಬೆಳವಣಿಗೆಗೆ ಮಲ್ಲಿಕಾರ್ಜುನ ಖರ್ಗೆ ಅವರು ಸಹಕಾರಿಯಾದರು. ನಮ್ಮ ತಂದೆ ತೀರಿಕೊಂಡ ಬಳಿಕ 15 ವರ್ಷಗಳ ಕಾಲ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿ ನಿರ್ವಹಿಸಿದರು. ನಾವು ಒಂದೇ ಕುಟುಂಬದ ಸದಸ್ಯರಂತೆ ಬೆಳೆದು ಬಂದವರು. ತಾವು ನಂಬಿದ ತತ್ವ ಸಿದ್ದಾಂತದ ರಾಜೀಯಾದವರಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೊಂಡಾಡಿದರು.

    ಇದೇ ವೇಳೆ ಖರ್ಗೆ ಅವರಿಗೆ ಸಿಎಂ ಸ್ಥಾನ ಸಿಗದೆ ಇರುವುದು ನಮಗೆ ನಿರಾಸೆ ತಂದಿದೆ. ಬೇರೆ ಬೇರೆ ಕಾರಣಗಳಿಂದ ಖರ್ಗೆ ಅವರು ಸಿಎಂ ಆಗಲಿಲ್ಲ. ಇದಕ್ಕೆ ಅವರದೇ ಆದ ಕಾರಣಗಳು ಇರಬಹುದು. ಸಾಮಾಜಿಕ ನ್ಯಾಯದ ಮೇಲೆ ನಂಬಿಕೆ ಇಟ್ಟುಕೊಂಡಿರುವ ದೂರದೃಷ್ಟಿತ್ವ ಹೊಂದಿದ ನಾಯಕರೊಬ್ಬರಿಗೆ ಸಿಎಂ ಸ್ಥಾನ ಸಿಗದಿರುವುದು ರಾಜ್ಯಕ್ಕೆ ಆದ ನಷ್ಟ. ದೆಹಲಿ ರಾಜಕಾರಣದಲ್ಲೂ ಸಹ ತಮ್ಮದೇ ಆದ ವರ್ಚಸ್ಸು ಬೆಳೆಸಿಕೊಂಡಿದ್ದಾರೆ ಎಂದರು.

    ಲೋಕಸಭಾ ಸಂಸದೀಯ ನಾಯಕರಾದ ಸಂದರ್ಭವನ್ನು ನೆನಪಿಸಿಕೊಂಡ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದಾಗ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ದಕ್ಷಿಣ ಭಾರತದಿಂದ ಬಂದವರಿಗೆ ಹಿಂದಿ ಬರಲ್ಲ ಎಂದು ಹೇಳಿದ್ದರು. ಆದರೆ ಲೋಕಸಭೆಯಲ್ಲಿ ಅವರ ಕಾರ್ಯವೈಖರಿ ಬಗ್ಗೆ ಸೋನಿಯಾಗಾಂಧಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಕುರಿತು ನನ್ನ ಬಳಿ ಸ್ವತಃ ಸೋನಿಯಾಗಾಂಧಿ ಹೇಳಿದ್ದರು ಎಂದರು.

  • ಕುಮಾರಸ್ವಾಮಿಗೆ ಕಾಂಗ್ರೆಸ್ ವಿಷ ಕೊಟ್ಟಿಲ್ಲ, ಅಮೃತವನ್ನೇ ಕೊಟ್ಟಿದೆ: ಕೈ ಶಾಸಕ

    ಕುಮಾರಸ್ವಾಮಿಗೆ ಕಾಂಗ್ರೆಸ್ ವಿಷ ಕೊಟ್ಟಿಲ್ಲ, ಅಮೃತವನ್ನೇ ಕೊಟ್ಟಿದೆ: ಕೈ ಶಾಸಕ

    ಬೆಂಗಳೂರು: ವಿಷಕಂಠನಂತೆ ವಿಷ ನುಂಗಿಕೊಂಡು ಸರ್ಕಾರ ನಡೆಸುತ್ತಿದ್ದೇನೆ ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿ ಬೇಸರದ ಮಾತಿಗೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ಕೆ. ಸುಧಾಕರ್ ತಿರುಗೇಟು ನೀಡಿದ್ದಾರೆ.

    ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ವಿಷ ಕೊಟ್ಟಿಲ್ಲ. ಅಮೃತವನ್ನೇ ಕೊಟ್ಟಿದೆ. ನಾವು 80 ಮಂದಿ ಶಾಸಕರು. ನಮ್ಮ ಪಕ್ಷದ ಕಾರ್ಯಕ್ರಮ ಇಲ್ಲದೇ ಇದ್ದರೂ 37 ಶಾಸಕರಿರುವ ಜೆಡಿಎಸ್‍ಗೆ ಸಹಕಾರ ನೀಡಿದ್ದೇವೆ. ಸಿಎಂ ಆಗಿರುವ ನೀವು ಆರೂವರೆ ಕೋಟಿ ಜನರ ಕಣ್ಣೀರು ಒರೆಸಬೇಕು. ನೀವು ಅಳೋದು ಬೇಡ. ನೀವೇ ಅತ್ತರೆ ನಿಮ್ಮ ಕಣ್ಣೀರು ಒರೆಸೋರು ಯಾರು ಅಂತ ಸುಧಾಕರ್ ಪ್ರಶ್ನಿಸಿದ್ದಾರೆ.

    ಇದೇ ವೇಳೆ ಕಾಂಗ್ರೆಸ್ ಪಕ್ಷ ಸಿಎಂ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುತ್ತದೆ ಎಂದು ತಿಳಿಸಿದ ಅವರು, ನಾವು ನಿಮ್ಮ ಹಿಂದೆ ಇದ್ದೇವೆ. ಕಷ್ಟ ಸುಖ ಇಬ್ಬರೂ ಹಂಚಿಕೊಳ್ಳೋಣ. ನಮ್ಮ ಕಾರ್ಯಕ್ರಮ ನಿಮಗೂ ಕೀರ್ತಿ ತರುತ್ತೆ. ರೈತರ ಸಾಲಮನ್ನಾ ಮಾಡಿರುವುದು ಎರಡು ಪಕ್ಷಗಳಿಗೆ ಕೀರ್ತಿ ತರಲಿದೆ ಎಂದರು.

    ನಾನು ಸನ್ಯಾಸಿ ಅಲ್ಲ: ಸಮ್ಮಿಶ್ರ ಸರ್ಕಾರದಲ್ಲಿ ಪ್ರಮುಖ ಸಚಿವ ಸ್ಥಾನ ಸಿಗದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಅಧಿಕಾರ ಕೊಡಿ ಎಂದು ಕೇಳುವುದಕ್ಕೆ ಹೋಗಿಲ್ಲ. ಆದಾಗೆ ಬಂದರೆ ನಾನೇನು ಸನ್ಯಾಸಿ ಅಲ್ಲ. ಪಕ್ಷ ಕೊಟ್ಟ ಕೆಲಸ ಸಮರ್ಥವಾಗಿ ನಿಭಾಯಿಸುತ್ತೇನೆ. ಕೊಡದಿದ್ದರೂ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದರು.

  • ಸಿದ್ದು ಹೇಳಿಕೆಯನ್ನು ಪ್ರಶ್ನಿಸಿದ್ದಕ್ಕೆ ಮಾಧ್ಯಮಗಳ ಮೇಲೆ ಸಿಎಂ, ಡಿಸಿಎಂ, ಸಚಿವ ಗರಂ

    ಸಿದ್ದು ಹೇಳಿಕೆಯನ್ನು ಪ್ರಶ್ನಿಸಿದ್ದಕ್ಕೆ ಮಾಧ್ಯಮಗಳ ಮೇಲೆ ಸಿಎಂ, ಡಿಸಿಎಂ, ಸಚಿವ ಗರಂ

    ಚಿಕ್ಕಬಳ್ಳಾಪುರ: ಯಾವುದೇ ಸರ್ಕಾರ ಇದ್ದರೂ ಟೀಕಿಸುವ ಮೂಲಕ ಎಚ್ಚರಿಸುವ ಕೆಲಸವನ್ನು ಮಾಧ್ಯಮಗಳ ಮಾಡುತ್ತವೆ. ಆದರೆ ಇಂದು ಸಮ್ಮಿಶ್ರ ಸರ್ಕಾರವೇ ಮಾಧ್ಯಮಗಳ ಮೇಲೆ ಗೂಬೆ ಕೂರಿಸುತ್ತಿದೆ.

    ಚಿಕ್ಕಬಳ್ಳಾಪುರದಲ್ಲಿ ಸಚಿವ ಶಿವಶಂಕರ್ ರೆಡ್ಡಿ, ಬೆಂಗಳೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಕೊಪ್ಪಳದಲ್ಲಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಮಾಧ್ಯಗಳ ವಿರುದ್ಧವೇ ವಾಗ್ದಾಳಿ ನಡೆಸಿ, ಮಾಧ್ಯಗಳು ತಪ್ಪು ಮಾಡುತ್ತಿವೆ ಎನ್ನುವಂತೆ ಬಿಂಬಿಸಿದರು.

    ಶಾಂತಿವನದಲ್ಲಿ ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ ಹೇಳಿಕೆಯಲ್ಲಿ ಯಾವುದೇ ವಿವಾದ ಇಲ್ಲ. ಆದರೆ ಮಾಧ್ಯಮಗಳು ಇದಕ್ಕೆ ಉಪ್ಪು-ಹುಳಿ ಹಾಕುವ ಕೆಲಸ ಮಾಡುತ್ತೀವೆ ಎಂದು ಕೃಷಿ ಸಚಿವ ಶಿವಶಂಕರ್ ರೆಡ್ಡಿ ಹೇಳಿದ್ದಾರೆ.

     

    ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆಯೋಜಿಸಿದ್ದ ಕೆಂಪೇಗೌಡ ಜಯಂತಿಯಲ್ಲಿ ಸಿದ್ದರಾಮಯ್ಯ ಹಾಗೂ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಮರ್ಥಿಸಿಕೊಂಡು ಮಾತನಾಡಿದ ಅವರು, ಬಜೆಟ್ ನಲ್ಲಿ ಕಾಂಗ್ರೆಸ್ಸಿನ ಕಾರ್ಯಕ್ರಮಗಳನ್ನು ತೆಗೆದು ಹಾಕುವುದಾಗಿ ಎಲ್ಲಿಯೂ ಕುಮಾರಸ್ವಾಮಿ ಅವರು ಹೇಳಿಲ್ಲ. ಎರಡೂ ಪಕ್ಷಗಳ ಪ್ರಣಾಳಿಕೆಗಳಲ್ಲಿನ ಪ್ರಮುಖ ಯೋಜನೆಗಳನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ. ಸಮ್ಮಿಶ್ರ ಸರ್ಕಾರ ಬಜೆಟ್ ಮೂಲಕ ಎರಡು ಪಕ್ಷಗಳ ಹಿತಾಸಕ್ತಿಯನ್ನು ರಕ್ಷಿಸಲಿದೆ. ಇನ್ನೂ ಈ ಬಾರಿಯ ಬಜೆಟ್ ನಲ್ಲಿ ಶೇ 100 ಕ್ಕೆ 100 ರಷ್ಟು ಸಿಹಿ ಸುದ್ದಿ ಸಿಗಲಿದ್ದು, ರೈತರ ಸಾಲಮನ್ನಾ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಬೆಂಗಳೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಉತ್ತರ ಕರ್ನಾಟಕ ಅಭಿವೃದ್ಧಿಯನ್ನು ಸರ್ಕಾರ ಮರೆತಿದೆ ಅಂತಾ ಮಾಧ್ಯಮಗಳು ಸುದ್ದಿ ಮಾಡುತ್ತಿವೆ. ಆದರೆ ನಾವು ಎಲ್ಲ ಭಾಗಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಇನ್ನು ಕೊಪ್ಪಳದ ಕಾರ್ಯಕ್ರಮದಲ್ಲಿ ಖರ್ಗೆ-ಸಿದ್ದರಾಮಯ್ಯ ಭೇಟಿ ಬಗ್ಗೆ ಕೇಳಿದ್ದಕ್ಕೆ ಮಾಧ್ಯಮಗಳಿಗೆ ಏನಾಗಿದೆ ಅಂತಾ ಡಿಸಿಎಂ ಜಿ.ಪರಮೇಶ್ವರ್ ಅವರು ಗರಂ ಆದರು.

  • ಸಿದ್ದರಾಮಯ್ಯ ಹೇಳಿಕೆಯಿಂದ ಸರ್ಕಾರದ ಮೇಲೆ ಪರಿಣಾಮವಿಲ್ಲ – ಮಾಜಿ ಸಿಎಂಗೆ ಡಿಕೆಶಿ ನೇರ ಟಾಂಗ್

    ಸಿದ್ದರಾಮಯ್ಯ ಹೇಳಿಕೆಯಿಂದ ಸರ್ಕಾರದ ಮೇಲೆ ಪರಿಣಾಮವಿಲ್ಲ – ಮಾಜಿ ಸಿಎಂಗೆ ಡಿಕೆಶಿ ನೇರ ಟಾಂಗ್

    ಬೆಂಗಳೂರು: ದೋಸ್ತಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಡಿಸಿಎಂ ಪರಮೇಶ್ವರ್ ಟಾಂಗ್ ಕೊಟ್ಟ ಬೆನ್ನಲ್ಲೇ, ವೈದ್ಯಕೀಯ ಶಿಕ್ಷಣ, ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸರ್ಕಾರದ ಕುರಿತ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ನೇರವಾಗಿಯೇ ಟಾಂಗ್ ನೀಡಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹೇಳಿಕೆಯಿಂದ ಸರ್ಕಾರದ ಮೇಲೆ ಯಾವುದೇ ಪರಿಣಾಮವಿಲ್ಲ. ಇಲ್ಲಿ ಪಕ್ಷ ಮುಖ್ಯವೇ ಹೊರತು ವ್ಯಕ್ತಿ ಅಲ್ಲ. ಸಿದ್ದರಾಮಯ್ಯ ಹೇಳಿಕೆ ಅಧಿಕೃತವೂ ಅಲ್ಲ. ಅವರ ಹೇಳಿಕೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಅಗತ್ಯವಿಲ್ಲ. ಈ ಸರ್ಕಾರ ಐದು ವರ್ಷ ಇದ್ದೇ ಇರುತ್ತೆ. ಈ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ವೇಣುಗೋಪಾಲ್ ಅವರ ಸಮ್ಮುಖದಲ್ಲಿ ಸಹಿ ಮಾಡಿ ದಾಖಲೆ ಮಾಡಿದ್ದೇವೆ. ಅದ್ದರಿಂದ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಲಾಗಿದೆ. ಪಕ್ಷ ವಿರೋಧಿ ಹೇಳಿಕೆಗಳನ್ನ ಯಾರೇ ನೀಡಬಾರದು ಎಂದು ಹೇಳಿದರು.

    ಸಿದ್ದರಾಮಯ್ಯ ಅವರು ಲೋಕಾಭಿರಾಮವಾಗಿ ಹೇಳಿದ ಮಾತನ್ನು ಕಿಡಿಗೇಡಿಗಳು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಜೆಡಿಎಸ್ ಜತೆ ಕಾಂಗ್ರೆಸ್ ನಾಯಕರು ಅಶೋಕ ಹೊಟೇಲ್ ನಲ್ಲಿ ಮಾಡಿಕೊಂಡ ಒಪ್ಪಂದವೇ ಅಧಿಕೃತ. ಯಾರೂ ಕೂಡ ಪಕ್ಷದ ಬಗ್ಗೆಯಾಗಲಿ ಮೈತ್ರಿಯ ಬಗ್ಗೆಯಾಗಲಿ ಹೇಳಿಕೆ ನೀಡುವಂತಿಲ್ಲ. ಈ ಕುರಿತು ಯಾವುದೇ ಗೊಂದಲ ಸೃಷ್ಠಿ ಮಾಡಬೇಡಿ ಎಂದು ಮನವಿ ಮಾಡಿದರು.

    ಇದೇ ವೇಳೆ ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿ, ಮೈತ್ರಿ ಬೆಂಗಳೂರಿಗೆ ಸೀಮಿತ ಮಂಡ್ಯಕ್ಕಲ್ಲ ಎಂದು ಹೇಳಿಕೆ ನೀಡಿದ್ದೂ ಸರಿಯಲ್ಲ. ಚುನಾವಣಾ ಹೊಂದಾಣಿಕೆಗಳು ಕಾಲಕ್ಕೆ ತಕ್ಕಂತೆ ಬದಲಾಗುತ್ತಿರುತ್ತವೆ ಎಂದರು.

    ಅಧಿವೇಶನಕ್ಕೆ ಗೈರು ಅಪಾರ್ಥ ಬೇಡ: ಜುಲೈ 5 ರಂದು ನೊಣವಿನಕೆರೆ ಗುರುಗಳ ಆಶ್ರಮದಲ್ಲಿ ದೊಡ್ಡ ಕಾರ್ಯಕ್ರಮ ಆಯೋಜಿಸಲಾಗಿದೆ. ಚುನಾವಣೆಗೆ ಮುನ್ನವೇ ಕಾರ್ಯಕ್ರಮ ನಿಗದಿಯಾಗಿತ್ತು. ರಾಜ್ಯಪಾಲರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಹಾಗಾಗಿ ಅಂದು ಬಜೆಟ್ ಮಂಡನೆ ಇದ್ದರೂ ಒಂದು ದಿನದ ಮಟ್ಟಿಗೆ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ರಾಜ್ಯಪಾಲರ ಜತೆಗೆ ಅಥವಾ ಹೆಲಿಕ್ಯಾಪ್ಟರ್ ನಲ್ಲಿ ಬಂದು ಹೋಗುವ ಪ್ರಯತ್ನ ಮಾಡುತ್ತೇನೆ. ಇದಕ್ಕೆ ಯಾವುದೇ ಅಪಾರ್ಥ ಕಲ್ಪಿಸುವುದು ಬೇಡ ಎಂದು ಮನವಿ ಮಾಡಿದರು.

    ತಿಪಟೂರು ತಾಲೂಕಿನ ನೊಣವಿನಕೆರೆಯ ಕಾಡುಸಿದ್ದೇಶ್ವರ ಸಚಿವ ಡಿಕೆಶಿ ಅವರ ಆರಾಧ್ಯ ದೈವವಾಗಿದೆ. ಯಾವುದೇ ಶುಭ ಕಾರ್ಯವನ್ನು ಕೈಗೊಳ್ಳುವ ಮೊದಲು ಅವರು ಕಾಡುಸಿದ್ದೇಶ್ವರ ಮಠದ ಶಿವಯೋಗಿ ಸ್ವಾಮೀಜಿಯವರ ಆಶೀರ್ವಾದ ಪಡೆಯುತ್ತಾರೆ.

    https://www.youtube.com/watch?v=NHZJagDSyjk