Tag: DCM

  • ರಾಷ್ಟ್ರೀಯ ಹೆದ್ದಾರಿಯಲ್ಲೂ ಡಿಸಿಎಂ ಪರಮೇಶ್ವರ್‌ಗೆ ಝೀರೋ ಟ್ರಾಫಿಕ್ ವ್ಯವಸ್ಥೆ

    ರಾಷ್ಟ್ರೀಯ ಹೆದ್ದಾರಿಯಲ್ಲೂ ಡಿಸಿಎಂ ಪರಮೇಶ್ವರ್‌ಗೆ ಝೀರೋ ಟ್ರಾಫಿಕ್ ವ್ಯವಸ್ಥೆ

    ದಾವಣಗೆರೆ: ಝೀರೋ ಟ್ರಾಫಿಕ್‍ನಿಂದ ಭಾರೀ ಚರ್ಚೆಯಾಗಿದ್ದ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಮತ್ತೆ ಅದೇ ಕಾರಣಕ್ಕೆ ದಾವಣಗೆರೆ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

    ಪರಮೇಶ್ವರ್ ಅವರು ರಾಷ್ಟ್ರೀಯ ಹೆದ್ದಾರಿ ಮೂಲಕ ಬೆಂಗಳೂರಿನಿಂದ ದಾವಣಗೆಯಲ್ಲಿ ನಡೆದ ಜಿಲ್ಲಾ ಛಲವಾದಿ ಮಹಾಸಭಾ ಕಾರ್ಯಕ್ರಮಕ್ಕೆ ಬೆಳಗ್ಗೆ 9 ಗಂಟೆಗೆ ಆಗಮಿಸಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಕಾರ್ಯಕ್ರಮ ಮುಗಿಸಿಕೊಂಡು ರಾಮನಗರಕ್ಕೆ ಹೊರಡುವಾಗಲೂ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದರು.

    ಝೀರೋ ಟ್ರಾಫಿಕ್‍ಗಾಗಿ ದಾವಣಗೆರೆ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ಮಧ್ಯೆ 100ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ಇದರಿಂದಾಗಿ ಬೆಳಗ್ಗೆ ಅರ್ಧಗಂಟೆಗೂ ಅಧಿಕ ಕಾಲ ಸಂಚಾರ ಸ್ಥಗಿತಗೊಂಡಿದ್ದರಿಂದ ದಾವಣಗೆರೆ ಸಮೀಪದ ಹೆಬ್ಬಾಳ ಟೋಲ್ ಮುಂಭಾಗದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಂಚಾರ ಸ್ಥಗಿತಗೊಂಡಿದ್ದರಿಂದ ಕಾದು, ಕಾದು ಬೇಸತ್ತ ಜನರು ಡಿಸಿಎಂ ವಿರುದ್ಧ ಆಕ್ರೋಶ ಹೊರ ಹಾಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಡಿಸಿಎಂ ಡಾ.ಜಿ.ಪರಮೇಶ್ವರ್ ಗೆ ಇದ್ಯಾ ಪ್ರಾಣ ಬೆದರಿಕೆ….?

    ಡಿಸಿಎಂ ಡಾ.ಜಿ.ಪರಮೇಶ್ವರ್ ಗೆ ಇದ್ಯಾ ಪ್ರಾಣ ಬೆದರಿಕೆ….?

    -ಜೀವ ಭಯನಾ..? ಝೆಡ್ ಪ್ಲಸ್ ಸೆಕ್ಯೂರಿಟಿ ವ್ಯಾಮೋಹನಾ..?

    ಬೆಂಗಳೂರು/ದಾವಣಗೆರೆ: ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರಿಗೆ ಜೀವ ಬೆದರಿಕೆ ಇದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊ0ಡಿದೆ. ಡಿಸಿಎಂ ವಿಶೇಷ ಕರ್ತವ್ಯಾಧಿಕಾರಿ ಪೊಲೀಸ್ ಇಲಾಖೆಗೆ ಪರಮೇಶ್ವರ್ ಅವರಿಗೆ ಝೆಡ್+ಸೆಕ್ಯೂರಿಟಿ ನೀಡುವಂತೆ ಸೂಚನೆ ನೀಡಿದ್ದಾರೆ.

    ಹಾಲಿ, ಮಾಜಿ ಪ್ರಧಾನಿ, ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರಿಗೆ ನೀಡುವ ಝೆಡ್+ ಸೆಕ್ಯೂರಿಟಿ ನೀಡಲಾಗುತ್ತದೆ. ಇಂದು ದಾವಣಗೆರೆ ನಗರಕ್ಕೆ ಛಲವಾದಿ ಮಹಾಸಭಾ ಅಯೋಜಿಸಿರುವ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಲು ಆಗಮಿಸುತ್ತಿರುವ ಪರಮೇಶ್ವರ್ ಅವರಿಗೆ ಝೆಡ್+ ಸೆಕ್ಯೂರಿಟಿ ನೀಡಲಾಗಿದೆ. ಬೆಂಗಳೂರಿನಿಂದ ದಾವಣಗೆರೆಗೆ ರಸ್ತೆ ಮೂಲಕ ಪರಮೇಶ್ವರ್ ತೆರಳುತ್ತಿದ್ದು, ಹೆದ್ದಾರಿಯಲ್ಲಿಯೂ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

    ಡಿಸಿಎಂ ಆಗಮನದ ಹಿನ್ನೆಲೆಯಲ್ಲಿ ದಾವಣಗೆರೆ ನಗರದ ಹದಡಿ ರಸ್ತೆಯಲ್ಲಿ ಬೆಳಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೂ ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ. ಹೀಗಾಗಿ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಪೊಲೀಸ್ ಇಲಾಖೆಯ ಆದೇಶ ಹೊರಡಿಸಿದೆ. ಡಿಸಿಎಂ ಪಾಲ್ಗೊಳ್ಳುವ ಖಾಸಗಿ ಕಾರ್ಯಕ್ರಮಕ್ಕೆ ನಗರ ಸಂಚಾರವನ್ನೇ ಸ್ಥಗಿತಗೊಳಿಸಲು ಹೊರಟ ಪೊಲೀಸ್ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

    ಇತ್ತ ದಿನದಿಂದ ದಿನಕ್ಕೆ ತವರು ಜಿಲ್ಲೆ ತುಮಕೂರಿನಲ್ಲಿ ಡಿಸಿಎಂ ಸರಳತೆ ಮೆರೆಯುತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಸ್ವಕ್ಷೇತ್ರ ಕೊರಟಗೆರೆ ಪಟ್ಟಣದ ಬೀದಿ ಬದಿಯ ಅಂಗಡಿಯಲ್ಲಿ ಚಹಾ ಹೀರಿ ಸರಳತೆ ಮೆರೆದಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದ ಬಳಿ ಇರುವ ಲಕ್ಷ್ಮಿ ಟೀ ಸ್ಟಾಲ್ ನಲ್ಲಿ ಟೀ ಕುಡಿದಿದ್ದಾರೆ. ನೂರಾರು ಜನ ಬೆಂಬಲಿಗರ ಮಧ್ಯೆ ನಿಂತುಕೊಂಡೇ ಚಹಾ ಕುಡಿದಿದ್ದಾರೆ. ವೈಟ್ ಕಾಲರ್ ರಾಜಕಾರಣಿ ಎಂಬ ಹಣೆಪಟ್ಟಿಯಿಂದ ಮುಕ್ತರಾಗುವ ನಿಟ್ಟಿನಲ್ಲಿ ಜಿ.ಪರಮೇಶ್ವರ್ ಇತ್ತೀಚೆಗೆ ಆದಷ್ಟು ಸಿಂಪಲ್ ಆಗುತ್ತಿರುವುದು ಗಮನಾರ್ಹವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಎಸ್‍ವೈ ನಿವೃತ್ತಿಗೆ ಡಿಸಿಎಂ ಆಗ್ರಹ- ಇತ್ತ ಆತ್ಮಸಾಕ್ಷಿಗೆ ಡಿಕೆಶಿ ಅಭಿನಂದನೆ

    ಬಿಎಸ್‍ವೈ ನಿವೃತ್ತಿಗೆ ಡಿಸಿಎಂ ಆಗ್ರಹ- ಇತ್ತ ಆತ್ಮಸಾಕ್ಷಿಗೆ ಡಿಕೆಶಿ ಅಭಿನಂದನೆ

    ತುಮಕೂರು/ಬೆಂಗಳೂರು: ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ರಾಜಕೀಯ ನಿವೃತ್ತಿಗೆ ಪಡೆದುಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಆಗ್ರಹಿಸಿದ್ದಾರೆ. ಇತ್ತ ತನ್ನ ತಪ್ಪೊಪ್ಪಿಕೊಂಡ ಬಿಎಸ್‍ವೈ ಅವರನ್ನು ಸಚಿವ ಡಿಕೆ ಶಿವಕುಮಾರ್ ಅಭಿನಂದಿಸಿದ್ದಾರೆ.

    ತುಮಕೂರಿನಲ್ಲಿ ಮಾತನಾಡಿದ ಡಿಸಿಎಂ, ಆಡಿಯೋ ಸಾಬೀತಾದ್ರೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸೋದಾಗಿ ಹೇಳಿದ್ದರು. ಈಗ ಅವರೇ ತಪ್ಪೊಪ್ಪಿಕೊಂಡಿದ್ದಾರೆ. ಹೀಗಾಗಿ ಬಿಎಸ್‍ವೈ ಕೂಡಲೇ ನಿವೃತ್ತಿಯಾಗಲಿ. ಅವರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರೆ ಸ್ಪೀಕರ್ ಅವರು ಕೂಡ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯ ಮಾಡೋದಾಗಿ ಅವರು ಹೇಳಿದ್ರು.  

    ಈ ಬಗ್ಗೆ ಬೆಂಗಳೂರಿನಲ್ಲಿ ಸಚಿವ ಡಿ.ಕೆ ಶಿವಕುಮಾರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರು ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಮಾಧ್ಯಮದ ಮೂಲಕ ತಿಳಿಯಿತು. ಆದ್ರೆ ಅವರು ಏನ್ ಹೇಳಿಕೆ ನೀಡಿದ್ದರು ಎಂದು ನನಗೆ ಗೊತ್ತಿಲ್ಲ. ತಾವು ಮಾಡಿದ ತಪ್ಪು ಒಪ್ಪಿಕೊಂಡಿದ್ದಾರೆ ಅಂದ್ರೆ ಅಲ್ಲಿ ಮಿಮಿಕ್ರಿ ಪ್ರಶ್ನೆ ಬರೋದಿಲ್ಲ ಅಂದ್ರು. ಇದನ್ನೂ ಓದಿ: ನಾನು ಹಿಟ್ಲರ್ ಅಲ್ಲ, ಆಪರೇಷನ್ ಕಮಲದ ಬಗ್ಗೆ ಗೊತ್ತಿಲ್ಲ: ರಮೇಶ್‍ಕುಮಾರ್

    ರಾಜಕೀಯದಲ್ಲಿ ಯಾವುದನ್ನೂ ಮುಚ್ಚಿಡಲು ಸಾಧ್ಯವಿಲ್ಲ ಎಂದು ಹೇಳಿದ ಡಿಕೆಶಿ ತಪ್ಪೊಪ್ಪಿಕೊಂಡಿರುವ ಬಿಎಸ್‍ವೈ ಅವರ ಆತ್ಮಸಾಕ್ಷಿಗೆ ಇದೇ ವೇಳೆ ಅಭಿನಂದನೆ ಸಲ್ಲಿಸಿದ್ರು. ಈ ಮೂಲಕ ವಿಪಕ್ಷಗಳ ಟೀಕೆಗೆ ಸಚಿವರು ತಿರುಗೇಟು ನೀಡಿದ್ರು. ಆತ್ಮಸಾಕ್ಷಿಯಿಂದಲೇ ನಾನು ನಡೆಯಬೇಕು. ಉಳಿದ ವಿಚಾರವನ್ನು ಸ್ಪೀಕರ್ ಗೆ ಬಿಡೋಣ. ನಾಳೆ ಅವರು ಏನ್ ಹೇಳ್ತಾರೋ, ಪ್ರಕರಣ ಯಾವ ದೃಷ್ಟಿಯಲ್ಲಿ ಹೋಗುತ್ತದೆ ಎಂಬುದನ್ನು ಕಾದುನೋಡೋಣ ಎಂದು ಅವರು ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತುರ್ತು ಕಾಮಗಾರಿ ನಿಯಮದಡಿ ಪರಂಗಾಗಿ ರೇವಣ್ಣ ಲಕ್ಷ ಲಕ್ಷ ಖರ್ಚು..!

    ತುರ್ತು ಕಾಮಗಾರಿ ನಿಯಮದಡಿ ಪರಂಗಾಗಿ ರೇವಣ್ಣ ಲಕ್ಷ ಲಕ್ಷ ಖರ್ಚು..!

    ಬೆಂಗಳೂರು: ರಾಜ್ಯದಲ್ಲಿ ಬರಗಾಲವಿದ್ರೂ ಸಮ್ಮಿಶ್ರ ಸರ್ಕಾರದಲ್ಲಿ ಖರ್ಚಿಗೆ ಕಮ್ಮಿಯೇನಿಲ್ಲ. ವಿಧಾನಸೌಧದಲ್ಲಿರುವ ಉಪ ಮುಖ್ಯಮಂತ್ರಿ ಪರಮೇಶ್ವರ್ ಕೊಠಡಿಯ ನವೀಕರಣಕ್ಕೆ 70 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ.

    ಪರಮೇಶ್ವರ್‍ಗೆ ಗೃಹ ಖಾತೆ ಹೋದಾಗ ದಲಿತರಿಗೆ ಅನ್ಯಾಯ ಎಂದು ರೇವಣ್ಣ ಹೇಳಿದ್ದರು. ಈಗ ಪರಮೇಶ್ವರ್ ಮೇಲಿನ ಪ್ರೀತಿಗೆ ರೇವಣ್ಣ ಅವರು ಇಲಾಖೆ ನಿಯಮವೇ ಬ್ರೇಕ್ ಮಾಡಿದ್ದಾರೆ. ಕಾಂಗ್ರೆಸ್‍ನಲ್ಲಿ ಯಾರ ಕೆಲಸ ಆಗಿಲ್ಲ ಅಂದರೂ ಪರಮೇಶ್ವರ್ ಅವರ ಕೆಲಸ ಮಾತ್ರ ಮಿಸ್ ಆಗಲ್ಲ. ಹೀಗಾಗಿ ಪರಮೇಶ್ವರ್ ಕೊಠಡಿ ನವೀಕರಣಕ್ಕೆ ಸೂಪರ್ ಸಿಎಂ ಕೇಳಿದ್ದಷ್ಟು ಹಣ ಕೊಟ್ಟಿದ್ದಾರೆ.

    ಹೌದು. ಬರಗಾಲದಲ್ಲೂ ಕೊಠಡಿ ನವೀಕರಣಕ್ಕೆ ಲಕ್ಷ ಲಕ್ಷ ಖರ್ಚು ಮಾಡಲಾಗಿದೆ. 70 ಜನ ರೈತರ ಸಾಲಮನ್ನಾ ಮಾಡಬಹುದಾದ ಹಣದಲ್ಲಿ ಒಂದೇ ರೂಂ ನವೀಕರಣ ಮಾಡಲಾಗಿದೆ. ಟೆಂಡರ್ ಕರೆಯದೇ ಬರೋಬ್ಬರಿ 70 ಲಕ್ಷದಲ್ಲಿ ಡಿಸಿಎಂ ಪರಮೇಶ್ವರ್ ಕೊಠಡಿಯನ್ನು ನವೀಕರಿಸಲಾಗಿದೆ. 4ಜಿ ಅಡಿಯಲ್ಲಿ ಲೋಕೋಪಯೋಗಿ ಇಲಾಖೆ ಈ ಕಾಮಗಾರಿ ನಡೆಸಿದೆ.

    4 ಜಿ ಕಾಯಿದೆಯ ಮೂಲಕ ಯಾವುದೇ ಟೆಂಡರ್ ಕರೆಯದೆ ಕೆಲಸ ಮಾಡಬಹುದು. 1, 2 ಲಕ್ಷ ಅಥವಾ 1 ಕೋಟಿಯದ್ದೇ ಆಗಿರಬಹುದು. ಒಟ್ಟಿನಲ್ಲಿ ತುರ್ತು ಸಮಯದಲ್ಲಿ ಮಾತ್ರ 4ಜಿ ಅನ್ವಯ ಕೆಲಸ ಮಾಡಬಹುದು. ಆದ್ರೆ ಇಲ್ಲಿ ಯಾವುದೇ ತುರ್ತು ಇಲ್ಲದೆ ಹೋದ್ರೂ 70 ಲಕ್ಷದಲ್ಲಿ ಡಿಸಿಎಂ ರೂಂ ನವೀಕರಣ ಮಾಡಲಾಗಿದೆ. ಇದೀಗ ನಿಯಮ ಬ್ರೇಕ್ ಮಾಡಿ ಕೆಲಸ ಮಾಡಿದ ದಾಖಲೆ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಒಟ್ಟಿನಲ್ಲಿ ಇಲ್ಲಿ ಕೇವಲ ಇವರ ರಾಜಕೀಯ ಹಿತಾಸಕ್ತಿಗಳನ್ನು ತುಂಬಿಸಿಕೊಳ್ಳಲು ಈ ಕೆಲಸ ಆಗಿದೆ. ಆದ್ರೆ ಇಲ್ಲಿ ಒಂದೊಂದು ಲಕ್ಷ ಅಂದ್ರೂ ಸುಮಾರು 70 ಮಂದಿ ರೈತರ ಸಾಲಮನ್ನಾ ಮಾಡಬಹುದಾಗಿತ್ತು. ಪರಮೇಶ್ವರ್ ಬಂದ ಬಳಿಕ ಅದಕ್ಕೆ 70 ಲಕ್ಷ ರೂ ಖರ್ಚಿ ಮಾಡಿ ನವೀಕರಣ ಮಾಡಲಾಗಿದೆ. ಸೂಪರ್ ಸಿಎಂ ಎಂದೇ ಬಿಂಬಿತರಾಗಿರೋ ಎಚ್ ಡಿ ರೇವಣ್ಣ ಅವರು ಇಂತಹ ಸಂದರ್ಭಗಳಲ್ಲಿ ತಮಗೆ ಬೇಕಾದಂತೆ ನಿಯಮಗಳನ್ನು ಅವರು ಪರಮೇಶ್ವರ್ ಅವರ ಪ್ರೀತಿಗೆ ಈ ದುಂದುವೆಚ್ಚ ಮಾಡಿದ್ದಾರೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗೃಹಖಾತೆ ತಪ್ಪಿಸಿದ್ದ ಮಾಜಿ ಸಿಎಂ ವಿರುದ್ಧ ಸೇಡು ತೀರಿಸಿಕೊಂಡ್ರು ಪರಮೇಶ್ವರ್..!

    ಗೃಹಖಾತೆ ತಪ್ಪಿಸಿದ್ದ ಮಾಜಿ ಸಿಎಂ ವಿರುದ್ಧ ಸೇಡು ತೀರಿಸಿಕೊಂಡ್ರು ಪರಮೇಶ್ವರ್..!

    ಬೆಂಗಳೂರು: ಗೃಹ ಖಾತೆ ತಪ್ಪಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಕೊನೆಗೂ ಸೇಡು ತೀರಿಸಿಕೊಂಡಿದ್ದಾರೆ ಎಂಬುದಾಗಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯೇ ಅನುಮೋದಿಸಿದ್ದ ಪಟ್ಟಿಯಲ್ಲಿ ಬದಲಾವಣೆ ಮಾಡಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶಾಕ್ ಕೊಟ್ಟಿದ್ದಾರೆ. ಈ ಮೂಲಕ ಡಿಸಿಎಂ ಅವರು ಮಾಜಿ ಸಿಎಂ ವಿರುದ್ಧದ ಸಿಟ್ಟಿಗೆ ಸೇಡು ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ನಿಗಮ ಮಂಡಳಿಯಲ್ಲಿಯೂ ಶಾಸಕ ಸುಧಾಕರ್‌ಗೆ ಕೊಕ್

    ಕೈ ತಪ್ಪಿದ ನಿಗಮ ಮಂಡಳಿಯಿಂದ ಕೆಂಡಾಮಂಡಲರಾದ ಶಾಸಕರು ಸಿದ್ದರಾಮಯ್ಯಗೆ ದೂರು ನೀಡಿದ್ದರು. ಇದು 80+38 ಶಾಸಕರನ್ನು ಹೊಂದಿರೋ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಕೂಟದಲ್ಲಿ ನಡೆಯುತ್ತಿರುವ ಕುರ್ಚಿ ಕಿತ್ತಾಟದ ಸಾರಾಂಶವಾಗಿದೆ. ಸಂಪುಟ ವಿಸ್ತರಣೆ ವೇಳೆಯೇ 19 ಮಂದಿ ಶಾಸಕರಿಗೆ ನಿಗಮ ಮಂಡಳಿ, ಸಂಸದೀಯ ಕಾರ್ಯದರ್ಶಿ ಮತ್ತು ಇತರೆ ಪ್ರಮುಖ ಹುದ್ದೆಗಳನ್ನ ಹಂಚಿ ಕಾಂಗ್ರೆಸ್ ಹೈಕಮಾಂಡ್ ಅಂಕಿತ ಹಾಕಿತ್ತು. ಆದ್ರೆ ಸರ್ಕಾರದ ಕಡೆಯಿಂದ ಅಧಿಕೃತ ಆದೇಶ ಹೊರಡಿಸಬೇಕಿದ್ದ ಕುಮಾರಸ್ವಾಮಿ 14 ಹುದ್ದೆಗಳ ಹಂಚಿಕೆಗಷ್ಟೇ ಸಹಿ ಹಾಕಿದ್ದಾರೆ. ಅಷ್ಟೇ ಅಲ್ಲ ಪಟ್ಟಿಯಲ್ಲೇ ಕೆಲ ಬದಲಾವಣೆಯನ್ನೂ ಮಾಡಿ ದೋಸ್ತಿಗೆ ಶಾಕ್ ಕೊಟ್ಟಿದ್ದಾರೆ. ಇದನ್ನೂ ಓದಿ: ನಿಮ್ಮಿಂದ ಸಾಧ್ಯವಾಗದೇ ಇದ್ರೆ ನಮ್ಮ ಪಾಡಿಗೆ ನಮ್ಮನ್ನು ಬಿಟ್ಟುಬಿಡಿ- ಸಿದ್ದು, ಜಾರಕಿಹೊಳಿ ಸಭೆಯ ಇನ್‍ಸೈಡ್ ಸ್ಟೋರಿ

    ಇತ್ತ ಸಿದ್ದರಾಮಯ್ಯ ಆಪ್ತ ಶಾಸಕರಾದ ಸುಧಾಕರ್, ಹ್ಯಾರಿಸ್, ಎಸ್‍ಟಿ ಸೋಮಶೇಖರ್‍ಗೆ ನಿಗಮ ಮಂಡಳಿ ಸ್ಥಾನ ತಪ್ಪಿಸಿ ಪರಮೇಶ್ವರ್ ಸೇಡು ತೀರಿಸಿಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ನಿಗಮ ಮಂಡಳಿ ನೇಮಕಕ್ಕೆ ಸಿಎಂ ಕುಮಾರಸ್ವಾಮಿ ಅಂಕಿತ, ಯಾರಿಗೆ ಯಾವ ಮಂಡಳಿ?

    ಇದನ್ನೂ ಓದಿ: ಈ ಸರ್ಕಾರ ಇದ್ದರೆಷ್ಟು, ಬಿದ್ದರೆಷ್ಟು- ಮಾಜಿ ಸಿಎಂ ಬಳಿ ಕಾಂಗ್ರೆಸ್ ಶಾಸಕರ ಆಕ್ರೋಶ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಧಾನಸೌಧದ ಬಾಗಿಲು ಒಡೆದು ಒಳಗೆ ಕುಳಿತುಕೊಳ್ಳಲಿ – ಬಿಎಸ್‍ವೈಗೆ ಡಿಕೆಶಿ ಟಾಂಗ್

    ವಿಧಾನಸೌಧದ ಬಾಗಿಲು ಒಡೆದು ಒಳಗೆ ಕುಳಿತುಕೊಳ್ಳಲಿ – ಬಿಎಸ್‍ವೈಗೆ ಡಿಕೆಶಿ ಟಾಂಗ್

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಸಿಎಂ ಆಗಲು ತುದಿಗಾಲಲ್ಲಿ ನಿಂತಿದ್ದಾರೆ. ವಿಧಾನಸೌಧ ಬಾಗಿಲು ಒಡೆದು ಹೋಗಿ ಬೇಕಾದ್ರೆ ಅವರು ಒಳಗೆ ಕುಳಿತುಕೊಳ್ಳಲಿ ಎಂದು ಜಲಸಂಪನ್ಮೂಲ ಖಾತೆ ಸಚಿವ ಡಿ ಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

    ನಾವು ಸನ್ಯಾಸಿಗಳಲ್ಲ ಎಂಬ ಯಡಿಯೂರಪ್ಪ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ದೆಹಲಿಯಲ್ಲಿ ಏನ್ ಮಾಡಿದ್ರು, ಮುಂಬೈಯಲ್ಲಿ ಏನ್ ಮಾಡಿದ್ರು ಅಂತ ನಮಗೆ ಗೊತ್ತಿಲ್ವೇ? ಪಾಪ ಅವರು ಮಾಡೋದು ಮಾಡಲಿ. ರಾಜಕೀಯದಲ್ಲಿ ಯಾರೂ ಗೂಟ ಹೊಡ್ಕೊಂಡು ಒಂದೇ ಕಡೆ ಕೂರಕ್ಕಾಗಲ್ಲ ಎಂದು ಬಿಜೆಪಿಗೆ ಡಿಕೆಶಿ ತಿರುಗೇಟು ಕೊಟ್ಟರು.

    ಇದೇ ವೇಳೆ ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ ಎನ್ನುವ ಪ್ರಶ್ನೆಗೆ ನನಗೆ ಗೊತ್ತಿಲ್ಲ ಎಂದ ಡಿಕೆಶಿ ಆ ವಿಚಾರ ಯಡಿಯೂರಪ್ಪನವರಿಗೆ ಗೊತ್ತಿರಬಹುದೆಂದು ಎಂದು ಹೇಳಿ ಮತ್ತೊಮ್ಮೆ ಕೆಣಕಿದರು.

    ಇದೇ ಸಂದರ್ಭದಲ್ಲಿ ಮಾತಾಡಿದ ಡಿಸಿಎಂ ಜಿ.ಪರಮೇಶ್ವರ್, ಈ ಹಿಂದೆ ಬಿಜೆಪಿಯವರು ಕುದುರೆ ವ್ಯಾಪಾರ ಮಾಡಿ ಸಕ್ಸಸ್ ಆಗಿದ್ದರು. ಅದರಲ್ಲಿ ಅವರು ನಿಸ್ಸೀಮರು. ಈಗ ಮತ್ತೆ ಶುರುವಿಟ್ಟುಕೊಂಡಿದ್ದಾರೆ. ಆದರೆ ಇದ್ರಲ್ಲಿ ಬಿಜೆಪಿಯವರು ಸಫಲವಾಗಲ್ಲ ಎಂದು ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv  

  • ಡಿಸಿಎಂ ಆಗಿದ್ರೂ ಪರಮೇಶ್ವರ್, ಎಚ್‍ಡಿಕೆ ಕೈಗೊಂಬೆ- ದೋಸ್ತಿ ಸರ್ಕಾರದಲ್ಲಿ `ಕೈ’ ಹಿತ ಕಾಯಲು ಅಸಮರ್ಥ

    ಡಿಸಿಎಂ ಆಗಿದ್ರೂ ಪರಮೇಶ್ವರ್, ಎಚ್‍ಡಿಕೆ ಕೈಗೊಂಬೆ- ದೋಸ್ತಿ ಸರ್ಕಾರದಲ್ಲಿ `ಕೈ’ ಹಿತ ಕಾಯಲು ಅಸಮರ್ಥ

    ಬೆಂಗಳೂರು: ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಅವರ ಬಳಿ ಇರುವ ಗೃಹ ಇಲಾಖೆಯನ್ನು ಕಾಂಗ್ರೆಸ್ ಹೈಕಮಾಂಡ್ ಕಿತ್ತುಕೊಂಡಿದೆ.

    8 ವರ್ಷ ಪಕ್ಷ ಮುನ್ನಡೆಸಿದ್ದೇನೆ, ನನ್ನ ನೇತೃತ್ವದಲ್ಲಿ 2 ಬಾರಿ ಪಕ್ಷ ಅಧಿಕಾರಕ್ಕೆ ಬಂದಿದೆ. ದೆಹಲಿಯಲ್ಲಿ ತಮ್ಮೆಲ್ಲಾ ಪ್ರಭಾವ ಬಳಸಿ `ಗೃಹ’ ಉಳಿಸಿಕೊಳ್ಳಲು ಪರಮೇಶ್ವರ್ ಕಸರತ್ತು ನಡೆಸಿದ್ದರು. ಆದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ `ಗೃಹ’ಖಾತೆಯಲ್ಲೇ ಪರಮೇಶ್ವರ್ ಉಳಿಸಿಕೊಂಡರೇ ಆ ಗುರಿ ಮುಟ್ಟೋದು ಅಸಾಧ್ಯ’ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿ. ಪರಮೇಶ್ವರ್ ಅವರಿಗೆ ಗೃಹ ಖಾತೆ ಕೈ ತಪ್ಪಿದೆ. ಈ ಮೂಲಕ ಪರಮೇಶ್ವರ್ ನೆಪಮಾತ್ರಕ್ಕಷ್ಟೇ ಗೃಹ ಮಂತ್ರಿ, `ಅಣ್ತಮ್ಮ’ ಆಡಿದ್ದೇ ಆಟ ಎನ್ನುವಂತಾಗಿತ್ತು.

    ಇನ್ಸ್ ಪೆಕ್ಟರ್ ವರ್ಗಾವಣೆಗೂ ಕುಮಾರಸ್ವಾಮಿ, ರೇವಣ್ಣ ಮಾತೇ ಫೈನಲ್ ಆಗಿತ್ತು. ಪರಮೇಶ್ವರ್, ಕುಮಾರಸ್ವಾಮಿ, ರೇವಣ್ಣ ಕೈಗೊಂಬೆ ಆಗಿದ್ರಿಂದ ಕಾಂಗ್ರೆಸ್‍ಗೆ ಹಾನಿ ಜಾಸ್ತಿಯಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಭಾವಿ ಖಾತೆಗೆ ಸಮರ್ಥರನ್ನೇ ನೇಮಕ ಮಾಡಬೇಕೆಂಬ ಒತ್ತಡ ಹೇರಲಾಗಿತ್ತು. ಹೀಗಾಗಿ ಪರಮೇಶ್ವರ್‍ಗೆ `ಗೃಹ’ ಬಿಟ್ಟುಕೊಡುವಂತೆ ಹುಕುಂ, ಎಂ.ಬಿ ಪಾಟೀಲ್‍ಗೆ ಕಾಂಗ್ರೆಸ್ ಲಗಾಮು ಹಾಕಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

    ಪರಮೇಶ್ವರ್ ಗೆ `ಗೃಹ’ಭಂಗವಾಗಿದ್ದು ಹೇಗೆ..?
    ಆರೋಪ 1 – ಉಪಮುಖ್ಯಮಂತ್ರಿಯಾದ್ರೂ ಪರಮೇಶ್ವರ್ ಕುಮಾರಸ್ವಾಮಿ ಕೈಗೊಂಬೆ..!
    ಆರೋಪ 2– ಡಿಸಿಎಂ ಹುದ್ದೆ ಸಿಕ್ಕರೂ ಸಮ್ಮಿಶ್ರ ಸರ್ಕಾರದಲ್ಲಿ `ಕೈ’ ಹಿತ ಕಾಯಲು ಅಸಮರ್ಥ
    ಆರೋಪ 3– ಗೃಹ ಇಲಾಖೆ ಇದ್ರೂ ಸ್ವತಂತ್ರ ನಿರ್ಧಾರ ಕೈಗೊಳ್ಳದ ಪರಮೇಶ್ವರ್
    ಆರೋಪ 4– ಸಣ್ಣದೊಂದು ನಿರ್ಧಾರಕ್ಕೂ ಕುಮಾರಸ್ವಾಮಿಯನ್ನೇ ಕೇಳ್ತಿದ್ದ ಡಿಸಿಎಂ..!


    ಆರೋಪ 5– ಪರಮೇಶ್ವರ್ ಗೃಹಸಚಿವರಾದ್ರೂ ಪೊಲೀಸ್ ಇಲಾಖೆಯಲ್ಲಿ ರೇವಣ್ಣದ್ದೇ ಆಟ..!
    ಆರೋಪ 6– ಕಾಂಗ್ರೆಸ್ ಕಾರ್ಯಕರ್ತರ ಬೇಡಿಕೆಗಳಿಗೂ ಪರಮೇಶ್ವರ್ ಅಸಡ್ಡೆ
    ಆರೋಪ 7– ಪರಿಸ್ಥಿತಿ ಹೀಗೆ ಮುಂದುವರೆದ್ರೆ ಸರ್ಕಾರದಲ್ಲಿ `ಕೈ’ ಹಿಡಿತ ತಪ್ಪುತ್ತೆ

    ಈ ಎಲ್ಲಾ ಆರೋಪಗಳಿಂದಾಗಿ ಪರಮೇಶ್ವರ್ ಅವರಿಗೆ ಗೃಹ ಇಲಾಖೆ ತಪ್ಪಿದೆ ಎನ್ನಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪರಮೇಶ್ವರ್ ಜೊತೆ ಡಿಶುಂ ಡಿಶುಂ ಸುಳ್ಳು – ಖಾತೆ ಇಲ್ಲದ ಅಸಮಾಧಾನವಿದೆ ಅಂದ್ರು ಸಿದ್ದರಾಮಯ್ಯ

    ಪರಮೇಶ್ವರ್ ಜೊತೆ ಡಿಶುಂ ಡಿಶುಂ ಸುಳ್ಳು – ಖಾತೆ ಇಲ್ಲದ ಅಸಮಾಧಾನವಿದೆ ಅಂದ್ರು ಸಿದ್ದರಾಮಯ್ಯ

    ಬೆಂಗಳೂರು: ಗೃಹ ಖಾತೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಜೊತೆ ಭಿನ್ನಾಭಿಪ್ರಾಯ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.

    ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಿನ್ನೆಯ ಸಭೆಯಲ್ಲಿ ಆ ರೀತಿಯ ಯಾವುದೇ ಚರ್ಚೆ-ವಾಗ್ವಾದ ನಡೆದಿಲ್ಲ. ಮಾಧ್ಯಮಗಳಲ್ಲಿ ಬಂದಂತೆ ಜಗಳವಾಡಲು ನಮ್ಮಲ್ಲಿ ಯಾರೂ ಮಕ್ಕಳಿಲ್ಲ. ನನ್ನ ಹಾಗೂ ಪರಮೇಶ್ವರ್ ಜೊತೆ ಯಾವುದೇ ಅಸಮಾಧಾನವಿಲ್ಲ. ಸಮಾನವಾಗಿ ಖಾತೆ ಹಂಚಿಕೆ ಮಾಡಲಾಗಿದೆ ಅಂತ ಸ್ಪಷ್ಟ ಪಡಿಸಿದ್ದಾರೆ.

    ಇದೇ ವೇಳೆ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಡಲ್ಲ. ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಜಾರಕಿಹೊಳಿಗೆ ಬೇಸರವಿದೆ. ನನಗೂ ಖಾತೆ ಇಲ್ಲ ಅಂತ ಬೇಸರವಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಖಾತೆ ಹಂಚಿಕೆ ಸಭೆಯಲ್ಲಿ ಸಿದ್ದರಾಮಯ್ಯ, ಪರಮೇಶ್ವರ್ ಕಿತ್ತಾಟ!

    ಟ್ವೀಟ್ ನಲ್ಲೇನಿದೆ..?
    ಡಾ.ಜಿ.ಪರಮೇಶ್ವರ್, ನನ್ನ ನಡುವೆ ಭಿನ್ನಾಭಿಪ್ರಾಯವೇ ಇಲ್ಲ. ನಿನ್ನೆಯ ಸಭೆಯಲ್ಲಿ ಆ ರೀತಿಯ ಯಾವುದೇ ಚರ್ಚೆ-ವಾಗ್ವಾದ ನಡೆದಿಲ್ಲ. ಇದನ್ನು ಹೇಳಿದವರು ಯಾರು? ವಿರೋಧ ಪಕ್ಷಗಳ ಕೆಲವು ನಾಯಕರು ಹತಾಶರಾಗಿದ್ದಾರೆ.

    ಸಚಿವ ಖಾತೆ ಮರುಹಂಚಿಕೆ ಬಗ್ಗೆ ನಿನ್ನೆಯ ಸಭೆಯಲ್ಲಿ ಚರ್ಚೆ ಸೌಹಾರ್ದತಯುತವಾಗಿಯೇ ನಡೆದಿದೆ. ಸಭೆಯಲ್ಲಿದ್ದ ನಾಯಕರೆಲ್ಲ ಹಿರಿಯರು, ಅನುಭವಿಗಳು, ಈ ರೀತಿ ಜಗಳವಾಡಲು ನಮ್ಮಲ್ಲಿ ಯಾರೂ ಮಕ್ಕಳಿಲ್ಲ. ಕಪೋಲ ಕಲ್ಪಿತ ಸುದ್ದಿಗಳನ್ನು ನಂಬಬೇಡಿ, ಹರಡಬೇಡಿ ಅಂತ ತಿಳಿಸಿದ್ದಾರೆ.

    ಸಚಿವ ಖಾತೆ ಮರುಹಂಚಿಕೆ ಬಗ್ಗೆ ನಿನ್ನೆ ನಡೆದ ಸಭೆಯಲ್ಲಿ ಎಲ್ಲ ನಾಯಕರಿಂದ ವ್ಯಕ್ತವಾದ ಅಭಿಪ್ರಾಯಗಳನ್ನು ಕೆ.ಸಿ.ವೇಣುಗೋಪಾಲ್ ಅವರು ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತರುತ್ತಾರೆ. ಅಂತಿಮ ತೀರ್ಮಾನವನ್ನು ರಾಹುಲ್ ಗಾಂಧಿ ಕೈಗೊಳ್ಳುತ್ತಾರೆ ಅಂದಿದ್ದಾರೆ.

    ನಾನು ಮುಖ್ಯಮಂತ್ರಿಯಾಗಿದ್ದ 5 ವರ್ಷಗಳ ಕಾಲ ನನ್ನ ಮತ್ತು ಡಾ.ಪರಮೇಶ್ವರ್ ಸಂಬಂಧ ಕೆಡಿಸುವ ಪ್ರಯತ್ನವನ್ನು ವಿರೋಧ ಪಕ್ಷಗಳ ನಾಯಕರು ಮಾಡುತ್ತಲೇ ಇದ್ದರು. ಅದು ಈಗಲೂ ಮುಂದುವರಿದಿದೆ. ಅಂತಹ ಯಾವ ಪ್ರಯತ್ನವೂ ಯಶಸ್ವಿಯಾಗುವುದಿಲ್ಲ. ಇಂತಹ ಸುದ್ದಿಗಳನ್ನು ಕೇಳಿ ನಾವಿಬ್ಬರೂ ನಕ್ಕು ಸುಮ್ಮನಾಗುತ್ತೇವೆ ಅಂದಿದ್ದಾರೆ.

    ರಮೇಶ್ ಜಾರಕಿಹೊಳಿ ಮಾತ್ರವಲ್ಲ ಅವರ ಇಡೀ ಕುಟುಂಬ ಹಲವಾರು ವರ್ಷಗಳಿಂದ ನನಗೆ ಗೊತ್ತು. ರಮೇಶ್ ಅಪ್ಪಟ ಕಾಂಗ್ರೆಸಿಗ, ಅವರು ಪಕ್ಷ ಬಿಟ್ಟುಹೋಗುವುದಿಲ್ಲ. ಬಿಜೆಪಿ ಪ್ರಯತ್ನ ಯಶಸ್ಸಾಗುವುದಿಲ್ಲ ಅಂತ ಕಿಡಿಕಾರಿದ್ದಾರೆ.

    ಉಮೇಶ್ ಕತ್ತಿ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಶಾಸಕ ಉಮೇಶ್ ಕತ್ತಿಯವರ ಹೇಳಿಕೆಯನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿಲ್ಲ. ಅವರ ಅಧ್ಯಕ್ಷರಾದ ಯಡಿಯೂರಪ್ಪನವರೇ ಕತ್ತಿಯವರಿಗೆ ಬುದ್ದಿ ಹೇಳಿದ್ದಾರೆ. ಸರ್ಕಾರ ಪತನದ ಕನಸು ಕೈ ಬಿಟ್ಟು, ಮೊದಲು ಅವರೊಳಗಿನ ಭಿನ್ನಾಭಿಪ್ರಾಯವನ್ನು ಸರಿಮಾಡಿಕೊಳ್ಳಲಿ ಅಂತ ಶಾಸಕರ ವಿರುದ್ಧ ಗರಂ ಆಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಸಾದದಲ್ಲಿ ವಿಷ: ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ನಂತರ ಕ್ರಮ – ಡಿಸಿಎಂ ಪರಂ

    ಪ್ರಸಾದದಲ್ಲಿ ವಿಷ: ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ನಂತರ ಕ್ರಮ – ಡಿಸಿಎಂ ಪರಂ

    ತುಮಕೂರು: ಸುಲ್ವಾಡಿ ಮಾರಮ್ಮ ದೇವಿ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರೆತಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದ್ದು, ವಿಧಿವಿಜ್ಞಾನದ ಪ್ರಯೋಗದ ವರದಿ ನಂತರ ಕ್ರಮ ಕೈಗೊಳ್ಳಲಾಗುತ್ತದೆಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ.

    ನಗರದಲ್ಲಿಂದು ಸ್ಮಾರ್ಟ್ ಸಿಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಚಾಮರಾಜನಗರ ಜಿಲ್ಲೆ ಸುಲ್ವಾಡಿ ಗ್ರಾಮದ ಮಾರಮ್ಮ ದೇವಿ ದೇವಸ್ಥಾನದ ಪ್ರಸಾದದಲ್ಲಿ ವಿಷಕಾರಿ ಅಂಶ ಬೆರೆತಿದೆ ಎಂಬ ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ. ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಪ್ರಸಾದದ ಮಾದರಿಯನ್ನು ಕಳುಹಿಸಲಾಗಿದೆ. ವಿಷಕಾರಿ ಅಂಶ ಪ್ರಸಾದದಲ್ಲಿ ಇದೆ ಅನ್ನೋದು ಮೇಲ್ನೋಟಕ್ಕೆ ಗೊತ್ತಾಗಿದೆ. ಪ್ರಯೋಗಾಲಯದಿಂದ ವರದಿ ಬಂದ ಬಳಿಕ ವಿಚಾರ ಗೊತ್ತಾಗಲಿದೆ ಎಂದು ಹೇಳಿದರು.

    ದೇವಾಲಯಗಳಲ್ಲಿ ಅನ್ನ ಸಂತರ್ಪಣೆಯನ್ನು ನಿಯಂತ್ರಿಸುವುದು ಕಷ್ಟ. ಈ ಕುರಿತು ಕಾನೂನು ತರುವುದು ತುಂಬಾ ಕಷ್ಟ. ನಿಯಂತ್ರಣ ಮಾಡುವುದಕ್ಕೆ ಹೋದರೆ, ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಆದರೂ ಈ ಕುರಿತು ಮುಂದಿನ ದಿನದಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

    ಇದೇ ವೇಳೆ ರಫೇಲ್ ಡೀಲ್ ಪ್ರಕರಣಕ್ಕೆ ಪ್ರತಿಕ್ರಿಯಿಸಿ, ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಕಾಂಗ್ರೆಸ್ಸಿಗೆ ಹಿನ್ನಡೆ ಆಗಿಲ್ಲ. ಜಂಟಿ ಸಂಸದೀಯ ಸಮಿತಿ(ಜೆಪಿಸಿ) ಹಾಕಲು ಒತ್ತಾಯ ಹೆಚ್ಚಾಗಿದೆ. ಈಗಾಗಲೇ ಹೋರಾಟ ಮುಂದುವರಿಸುವುದಾಗಿ ಕಾಂಗ್ರೆಸ್ ಪ್ರಕಟಣೆ ಮಾಡಿದೆ. ಸುಪ್ರೀಂ ಯಾವ ಕಾರಣಕ್ಕಾಗಿ ಈ ರೀತಿ ಆದೇಶ ಕೊಟ್ಟಿದ್ದಾರೆ ಅನ್ನುವುದು ಗೊತ್ತಿಲ್ಲ. ಬಹುಶಃ ಸಾಕ್ಷಾಧಾರ ಸರಿಯಿಲ್ಲ ಎಂಬ ಕಾರಣನೋ ಅಥವಾ ಬೇರೆ ಕಾರಣಕ್ಕೋ ಈ ರೀತಿ ತೀರ್ಪು ಕೊಟ್ಟಿರಬಹುದು ಎಂದರು. ಇದನ್ನೂ ಓದಿ : ಪ್ರಧಾನಿ ಮೋದಿಗೆ ಅತಿ ದೊಡ್ಡ ಗೆಲುವು: ಸುಪ್ರೀಂ ತೀರ್ಪಿನಲ್ಲಿರುವ ಪ್ರಮುಖ ಅಂಶಗಳು ಏನು?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com

  • ಕುಂದಾನಗರಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ- ಮೊದಲ ದಿನವೇ ಎಚ್‍ಡಿಕೆ ಏಕಾಂಗಿ

    ಕುಂದಾನಗರಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ- ಮೊದಲ ದಿನವೇ ಎಚ್‍ಡಿಕೆ ಏಕಾಂಗಿ

    ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದೇಶಕ್ಕೆ ತೆರಳಿ ಗೈರಾಗಿದ್ದಾರೆ. ಇತ್ತ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಅವರು ಕೂಡ ಜ್ಚರದಿಂದಾಗಿ ಅಧಿವೇಶನದಲ್ಲಿ ಪಾಲ್ಗೊಳಲ್ಲ. ಹೀಗಾಗಿ ಇಂದು ಆರಂಭವಾದ ಅಧಿವೇಶನದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಏಕಾಂಗಿಯಾಗಿದ್ದಾರೆ.

    ಡಿಸಿಎಂ ಪರಮೇಶ್ವರ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಇಂದು ಬೆಳಗ್ಗೆಯೆ ಬೆಳಗಾವಿಗೆ ಆಗಮಿಸಬೇಕಿದ್ದ ಉಪ ಮುಖ್ಯಮಂತ್ರಿ ತೀವ್ರ ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಬೆಳಗಾವಿಗೆ ಬರಲು ತೀರ್ಮಾನಿಸಿದ್ದಾರೆ.

    ಪೂರ್ವ ನಿಗದಿತ ಕಾರ್ಯಕ್ರಮದ ಹಿನ್ನೆಲೆ ಸಿದ್ದರಾಮಯ್ಯ ಅವರು ಪುತ್ರ ಯತೀಂದ್ರ ಜೊತೆಗೆ ಇದೇ ಮಂಗಳವಾರ ವಿದೇಶಿ ಪ್ರವಾಸ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಡಿಸೆಂಬರ್ 10ರಿಂದ ಆರಂಭವಾಗುವ ಚಳಿಗಾಲ ಅಧಿವೇಶನದ ಮೊದಲ ವಾರು ಗೈರು ಆಗಲಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರು ಎರಡನೇ ವಾರದ ಅಧಿವೇಶನಕ್ಕೆ ಹಾಜರಾಗಲಿದ್ದಾರೆ. ಡಿಸೆಂಬರ್ 12 ಅಥವಾ 13ರಂದು ನಡೆಯಬೇಕಿದ್ದ ಶಾಸಕಾಂಗ ಸಭೆಯನ್ನು ಮುಂದೂಡುವ ಸಾಧ್ಯತೆಗಳಿವೆ. ಮಾಜಿ ಸಿಎಂ ಆಗಮಿಸಿದ ಬಳಿಕ ಅಂದರೆ ಡಿಸೆಂಬರ್ 18ರಂದು ಸಭೆ ನಡೆಯುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿದ್ದವು.

    ಬಿಗಿ ಪೊಲೀಸ್ ಭದ್ರತೆ:
    ಬೆಳಗಾವಿ ಅಧಿವೇಶನಕ್ಕೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸುವರ್ಣಸೌಧದ ಸುತ್ತ ಮುತ್ತ 250 ಕ್ಕೂ ಹೆಚ್ಚು ಪೊಲೀಸರು ನಿಯೋಜನೆ ಮಾಡಲಾಗಿದೆ. ಸುವರ್ಣಸೌಧದ ಪ್ರವೇಶ ದ್ವಾರದ 80 ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ. ಪಾಸ್ ಇದ್ದವರಿಗೆ ಮಾತ್ರ ಸುವರ್ಣಸೌಧದ ಒಳ ಬಿಡಲಾಗುತ್ತಿದೆ. ಬಿಗಿ ಪರಿಶೀಲನೆ ಮಾಡಿದ ಬಳಿಕ ಪ್ರವೇಶಕ್ಕೆ ಅವಕಾಶ ಮಾಡಲಾಗುತ್ತಿದೆ.

    ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು ಸೂಚನೆಯಂತೆ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಬಾರಿ ಹೆಚ್ಚು ಪ್ರತಿಭಟನೆಗಳಾಗುವ ಹಿನ್ನೆಲೆಯಲ್ಲಿ ನೀಲಮಣಿ ರಾಜು ಅವರು ಈಗಾಗಲೇ ಖುದ್ದು ಮುಖ್ಯಪ್ರದೇಶಗಳಲ್ಲಿ ಬಂದೋಬಸ್ತ್ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಸಿಎಂ ಕೂಡ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡುವಂತೆ ಸೂಚನೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv