ವಿಜಯಪುರ: ಕರ್ತವ್ಯ ನಿರ್ಲಕ್ಷ್ಯ (Neglect of Duty) ಆರೋಪ ಹಿನ್ನೆಲೆ ವಿಜಯಪುರ (Vijayapura) ಡಿಡಿಪಿಐ (DDPI) ಹಾಗೂ ವಿಜಯಪುರ ಡಯಟ್ನ ಹಿರಿಯ ಉಪನ್ಯಾಸಕರಿಬ್ಬರನ್ನು ಅಮಾನತು (Suspend) ಮಾಡಲಾಗಿದೆ.
ಐಇಡಿಎಸ್ಎಸ್ ಯೋಜನೆ ಅನುಷ್ಠಾನ ಮಾಡುವಲ್ಲಿ ಗಂಭೀರ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಅಮಾನತು ಮಾಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತು ಆದೇಶ ಹೊಡಿಸಲಾಗಿದೆ. ವಿಜಯಪುರ ಡಿಡಿಪಿಐ ಎನ್ಹೆಚ್ ನಾಗೂರ, ವಿಜಯಪುರ ಡಯಟ್ ಹಿರಿಯ ಉಪನ್ಯಾಸಕರಾದ ಎಸ್ಎ ಮುಜಾವರ, ಎಎಸ್ ಹತ್ತಳ್ಳಿ ಅಮಾನತು ಆದ ಅಧಿಕಾರಿಗಳು. ಇದನ್ನೂ ಓದಿ: ಹನುಮಧ್ವಜ ಇಳಿಸಿದಂತೆಯೇ ನಿಮ್ಮನ್ನು ಹಿಂದೂಗಳು ಕುರ್ಚಿಯಿಂದ ಇಳಿಸುವ ದಿನ ದೂರವಿಲ್ಲ: ಸಿಎಂಗೆ ಆರ್.ಅಶೋಕ್ ಠಕ್ಕರ್
ನಿಯಮ ಬಾಹಿರವಾಗಿ ಅಸ್ತಿತ್ವದಲ್ಲಿ ಇರದ ಎನ್ಜಿಓಗಳಿಗೆ ಹಣ ಬಿಡುಗಡೆ ಮಾಡಿರೋ ಆರೋಪ ಇದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಅವರಿಂದ ಅಮಾನತು ಆದೇಶ ಮಾಡಲಾಗಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪರಿಂದ ಅಮಾನತು ಆದೇಶ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಪಿಜಿಗಳಿಗೆ ಪೊಲೀಸ್ ಇಲಾಖೆಯಿಂದ ಹೊಸ ಮಾರ್ಗಸೂಚಿ – ಐಡಿ ಕಾರ್ಡ್ ವಿತರಣೆಗೆ ಚಿಂತನೆ
ಬೆಂಗಳೂರು: ಮಕ್ಕಳಿಗೆ ಸಾವಿನ ಬಗ್ಗೆ ಓದಿಸೋ ಅವಶ್ಯಕತೆ ಇತ್ತಾ? ಸೆಕ್ಸ್ ಬಗ್ಗೆ ಚಿಕ್ಕ ಮಕ್ಕಳಿಗೆ ಹೇಳ್ಬೇಕಿತ್ತಾ? ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಶ್ನಿಸಿದ್ದಾರೆ.
ಪಠ್ಯಪುಸ್ತಕ ವಿವಾದಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ಅವರು, ಮಕ್ಕಳಿಗೆ ಸಾವಿನ ಬಗ್ಗೆ ಓದಿಸೋ ಅವಶ್ಯಕತೆ ಇತ್ತಾ? ಸೆಕ್ಸ್ ಬಗ್ಗೆ ಚಿಕ್ಕ ಮಕ್ಕಳಿಗೆ ಹೇಳಬೇಕಿತ್ತಾ? ಇದೆಲ್ಲವನ್ನು ಬರಗೂರು ರಾಮಚಂದ್ರಪ್ಪ ಸಮಿತಿ ಮಾಡಿತ್ತು. ಒಡೆಯರ್ ಬಗ್ಗೆ ಯಾಕೆ ಪಠ್ಯ ಬಿಟ್ಟಿದ್ದರು? ಬೆಂಗಳೂರಿನಲ್ಲಿ ದೇವಸ್ಥಾನ ಇರಲಿಲ್ಲವಾ? ಯಾಕೆ ದೇವಾಲಯದ ಫೋಟೋ ಹಾಕಿಲ್ಲ? ಈಗ ಇದನ್ನ ಸರಿ ಮಾಡುವ ಕೆಲಸ ಮಾಡುತ್ತಿದ್ದೇವೆ. ಅದನ್ನೂ ವಿವಾದಕ್ಕೆ ಎಳೆಯುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರೋಹಿತ್ ಚಕ್ರತೀರ್ಥ ವಜಾ? – ಸಚಿವರ ವರದಿ ಆಧರಿಸಿ ಕ್ರಮ ಕೈಗೊಳ್ತೇನೆಂದ ಸಿಎಂ
ಗೊಂದಲವಿದ್ದರೆ ನಾನೇ ಪರಿಹಾರ ಮಾಡ್ತೇನೆ: ಮೊದಲು ಟಿಪ್ಪು ಅಂದ್ರು, ಅಮೇಲೆ ಭಗತ್ ಸಿಂಗ್ ಬಗ್ಗೆ ವಿವಾದ ಮಾಡಿದ್ರು, ನಂತರ ಕುವೆಂಪು ಅಂದವರೇ ಈಗ ಬಸವಣ್ಣ ಎನ್ನುತ್ತಿದ್ದಾರೆ. ಸತ್ಯ ಹೊರಗಡೆ ಬಂದಹಾಗೇ ಅವರ ನಿಲುವು ಬದಲಾವಣೆ ಮಾಡ್ತಿದ್ದಾರೆ. ಬೇಕು ಅಂತ ವಿವಾದ ಸೃಷ್ಟಿ ಮಾಡ್ತಿದ್ದಾರೆ. ಪಠ್ಯಪುಸ್ತಕದ ಬಗ್ಗೆ ಯಾರಿಗೇ ಗೊಂದಲ ಇರಲಿ. ಸ್ವಾಮೀಜಿಗಳಿಗೆ ಗೊಂದಲ ಇದ್ದರೂ ನಾನೇ ಭೇಟಿ ಮಾಡಿ ಪರಿಹಾರ ಮಾಡ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್ನಲ್ಲಿ ಬಹಳ ಜನ ಸ್ನೇಹಿತರಿದ್ದಾರೆ- ರಾಜಕೀಯ ದಾಳ ಉರುಳಿಸಿದ ಸಿಎಂ
ಪರಿಷ್ಕರಣೆ ಕೆಲಸ ಈಗ ಮುಕ್ತಾಯ ಆಗಿದೆ. ಪದೇ ಪದೇ ಪರಿಷ್ಕರಣೆ ಮಾಡಲು ಆಗೋದಿಲ್ಲ. ಈಗಾಗಲೇ ಶೇ.75 ಪಠ್ಯಪುಸ್ತಕ ಮುದ್ರಣದ ಕಾರ್ಯ ಮುಗಿದಿದೆ. ಶೇ.66 ರಷ್ಟು BEO ಕಚೇರಿಗಳಿಗೆ ತಲುಪಿದೆ. ಕಲಿಕಾ ಚೇತರಿಕೆ ಮುಗಿಯೋ ಒಳಗೆ ಪಠ್ಯ ಪುಸ್ತಕ ತಲುಪಿಸುವ ಪ್ರಯತ್ನ ಮಾಡ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಳೆಯೂ ಮಂಗಳೂರು ಕೋರ್ಟ್ನಲ್ಲಿ ಮಳಲಿ ವಿಚಾರಣೆ
ಇದರಲ್ಲಿ ಬಸವಣ್ಣನವರ ಪಠ್ಯ ತೆಗೆದಿಲ್ಲ. ಆದರೆ ಬರಗೂರು ಸಮಿತಿಯಲ್ಲಿ ಏನಿತ್ತು? ಈಗ ಏನು ಸೇರ್ಪಡೆಯಾಗಿದೆ ಎಂಬುದನ್ನು ಚೆಕ್ ಮಾಡ್ತೀವಿ ಎಂದು ಸ್ಪಷ್ಟಪಡಿಸಿದ್ದಾರೆ.
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. ಎಲ್ಲ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರು ಶುಭ ಹಾರೈಸಿದ್ದಾರೆ.
2 ವರ್ಷಗಳ ಬಳಿಕ ನಡೆದ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಸ್ನೇಹಿ ನಿರ್ಧಾರ ಕೈಗೊಳ್ಳಲು ಇಲಾಖೆ ನಿರ್ಧಾರ ಮಾಡಿದೆ. ಫೇಲ್ ಆಗುವ ವಿದ್ಯಾರ್ಥಿಗಳಿಗೂ ಸಂಜೀವಿನಿ ನೀಡಲು ಮುಂದಾಗಿದೆ. ಒಂದೆರಡು ಅಂಕಗಳಿಂದ ಫೇಲ್ ಆಗಬಹುದಾದ ವಿದ್ಯಾರ್ಥಿಗಳಿಗೂ ಪಾಸ್ ಅಂಕ ನೀಡಿ ಉತ್ತೀರ್ಣಗೊಳಿಸಲು ನಿರ್ಧರಿಸಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಆಸ್ಪತ್ರೆಯಲ್ಲಿ ರೋಗಿಯ ಕಣ್ಣಿಗೆ ಕಚ್ಚಿದ ಇಲಿ
ಸಾಂದರ್ಭಿಕ ಚಿತ್ರ
ಒಂದೆರಡು ವಿಷಯಗಳಲ್ಲಿ 1 ಅಥವಾ 2 ಅಂಕಗಳಿಂದ ಫೇಲ್ ಆಗುವ ಹಂತದಲ್ಲಿದ್ದರೆ ಅಂತಹವರಿಗೆ ಗ್ರೇಸ್ ಅಂಕ ನೀಡಿ ಪಾಸ್ ಮಾಡಲು ಮುಂದಾಗಿದೆ. ಅದಕ್ಕೂ ಮುನ್ನ ಶಿಕ್ಷಣ ಇಲಾಖೆಯ ಮಾನದಂಡಗಳನ್ನು ಅನ್ವಯಿಸಬೇಕಾಗುತ್ತದೆ.
ಮಾರ್ಚ್ 28 ರಿಂದ ಏಪ್ರಿಲ್ 11ರ ವರಗೆ 2022ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಸಾಂದರ್ಭಿಕ ಚಿತ್ರ
ಮಾನದಂಡಗಳೇನು? * ಎಲ್ಲ ವಿದ್ಯಾರ್ಥಿಗಳಿಗೂ ಗ್ರೇಸ್ ಅಂಕ ನೀಡುವ ನಿಯಮ ಅನ್ವಯ ಆಗುವುದಿಲ್ಲ.
* ವಿದ್ಯಾರ್ಥಿಯು 175 ಅಂಕಗಳಿಗಿಂತ ಹೆಚ್ಚು ಅಂಕ ಪಡೆದಿರಬೇಕು.
* ಭಾಷಾ ವಿಷಯಗಳಲ್ಲಿ ಕಡ್ಡಾಯವಾಗಿ ಶೇ.35 ಮತ್ತು ಕೋರ್ ಸಬ್ಜೆಕ್ಟ್ ನಲ್ಲಿ ಶೇ.30 ಅಂಕ ಕಡ್ಡಾಯವಾಗಿ ಪಡೆದಿರಬೇಕು.
* 6 ವಿಷಯಗಳ ಪೈಕಿ 5 ವಿಷಯಗಳಲ್ಲಿ ಉತ್ತಮ ಅಂಕ ಪಡೆದಿರಬೇಕು. ಒಂದು ವಿಷಯದಲ್ಲಿ ಮಾತ್ರ ಕಡಿಮೆ ಅಂಕ ಇರಬೇಕು.
* ಒಂದು ವಿಷಯದಲ್ಲೂ ಹೆಚ್ಚು ಅಂಕ ಕೊಡಲು ಅವಕಾಶ ಇಲ್ಲ. ಪಾಸ್ ಮಾಡೋಕೆ 2 ರಿಂದ 5 ಅಂಕದ ಒಳಗೆ ಇದ್ದರೆ ಮಾತ್ರ ಈ ಅಂಕ ನೀಡಲು ಸಾಧ್ಯ.
* ಗರಿಷ್ಠ 3 ವಿಷಯಗಳಿಗೆ ಹೀಗೆ ಅಂಕ ನೀಡಲು ಅವಕಾಶ ಇದೆ.
* ವಿದ್ಯಾರ್ಥಿಗಳು ಇತರೇ ವಿಷಯಗಳ ಅಂಕ ನೋಡಿ, ಹೆಚ್ಚುವರಿ ಅಂಕಗಳನ್ನು ನೀಡಲಾಗುತ್ತದೆ.
ಉಡುಪಿ: ತುಂಬಿ ಹರಿಯುತ್ತಿರುವ ಸೌಪರ್ಣಿಕಾ ನದಿಯನ್ನು ದಾಟಿ ಇಬ್ಬರು ವಿದ್ಯಾರ್ಥಿನಿಯರು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾರೆ. ಸ್ವತಃ ಉಡುಪಿ ಡಿಡಿಪಿಐ ನದಿ ದಾಟಿಸಿ ಕುದ್ರು ಪ್ರದೇಶದ ಮಕ್ಕಳಿಗೆ ಬೆಂಬಲವಾಗಿ ನಿಂತಿದ್ದಾರೆ.
ಜಿಲ್ಲೆಯ ಬೈಂದೂರು ತಾಲೂಕಿನ ಕುರು ದ್ವೀಪದ ಇಬ್ಬರು ವಿದ್ಯಾರ್ಥಿನಿಯನ್ನು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ದೋಣಿಯ ಮೂಲಕ ನದಿಯನ್ನು ದಾಟಿಸಿ ಡಿಡಿಪಿಐ ಹಾಗೂ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿಯವರು ಪರೀಕ್ಷಾ ಕೇಂದ್ರಕ್ಕೆ ಕರೆ ತಂದಿದ್ದಾರೆ.
ಬೈಂದೂರು ವಲಯದ ಮರವಂತೆ ಸರ್ಕಾರಿ ಪ್ರೌಢ ಶಾಲೆಯ ಶಿಲ್ಪಾ ಹಾಗೂ ಸಂಜನಾ ಅವರ ಮನೆ ಕುರು ದ್ವೀಪದಲ್ಲಿದ್ದರು. ಊರಿಂದಾಚೆಗೆ ಬರಬೇಕೆಂದರೆ ಮರವಂತೆ, ಇಲ್ಲವಾದರೆ ನಾಡಾ ಮೂಲಕ ಸಾಗಿ ಬರಬೇಕಾಗುತ್ತದೆ. ದೋಣಿ ಮೂಲಕ ಸಾಗಿ ಬಂದರೂ ಇಲ್ಲಿನ ವಿದ್ಯಾರ್ಥಿಗಳು ಬಯಲು ದಾರಿಯಲ್ಲಿ ಮತ್ತೆ ಅರ್ಧ ಕಿ.ಮೀ ಗೂ ಹೆಚ್ಚು ನಡೆದುಕೊಂಡೇ ಕ್ರಮಿಸಿಬೇಕು. ನಿರಂತರ ಸುರಿದ ಭಾರೀ ಮಳೆಯಿಂದಾಗಿ ಪರೀಕ್ಷೆ ಬರೆಯಲು ಈ ವಿದ್ಯಾರ್ಥಿನಿಯರಿಗೆ ತುಂಬಾ ಸಮಸ್ಯೆಯಾಗಿತ್ತು. ಇದು ಪರೀಕ್ಷೆಯ ನೋಡಲ್ ಅಧಿಕಾರಿ ಕರುಣಾಕರ ಶೆಟ್ಟಿ ಅವರ ಗಮನಕ್ಕೆ ಬಂದಿದೆ. ಬಳಿಕ ಶಿಕ್ಷಣ ಇಲಾಖೆ ಮಕ್ಕಳನ್ನು ಕರೆತರಲು ಎಲ್ಲ ವ್ಯವಸ್ಥೆಗಳನ್ನು ಮಾಡಿದೆ.
ಇಬ್ಬರು ಶಿಕ್ಷಕರನ್ನು ನಿಯೋಜಿಸಿ ಮಕ್ಕಳನ್ನು ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗಿದೆ. ವಿಶೇಷ ಕಾಳಜಿಯೊಂದಿಗೆ ಖುದ್ದು ಡಿಡಿಪಿಐ ಎಚ್.ಎನ್.ನಾಗೂರ ಹಾಗೂ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಸ್ವತಃ ದೋಣಿ ಮೇಲೇರಿ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದಾರೆ. ಡಿಡಿಪಿಐ ಹಾಗೂ ಬೈಂದೂರು ತಹಸೀಲ್ದಾರ್ ಮರವಂತೆ ರಾ.ಹೆದ್ದಾರಿಯಿಂದ ಅರ್ಧ ಕಿ.ಮೀ ಬಯಲು ದಾರಿಯಲ್ಲಿ ನಡೆದು ಆ ಬಳಿಕ ದೋಣಿ ಮೂಲಕ ಕುರುವಿಗೆ ಪ್ರಯಾಣ ಬೆಳೆಸಿ ಮತ್ತೆ ಅದೇ ದೋಣಿಯಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ಪರೀಕ್ಷಾ ಕೇಂದ್ರಕ್ಕೆ ಸುರಕ್ಷಿತವಾಗಿ ಬಿಟ್ಟು ಗಮನ ಸೆಳೆದಿದ್ದಾರೆ. ಮಕ್ಕಳ ಬಗೆಗಿನ ಶಿಕ್ಷಣ ಇಲಾಖೆಯ ಈ ಕಾಳಜಿಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.
ನದಿ ದಾಟಿಸಿ ಗ್ರಾಮಸ್ಥರೇ ಮಕ್ಕಳನ್ನು ಪರೀಕ್ಷೆ ಬರೆಸುವ ವ್ಯವಸ್ಥೆ ಮಾಡಬಹುದಿತ್ತು. ಗ್ರಾಮೀಣ ಭಾಗಕ್ಕೂ ಶಿಕ್ಷಣದ ಒತ್ತುಕೊಡುವ ಹಿನ್ನೆಲೆಯಲ್ಲಿ ಶಿಕ್ಷಕರ ಜೊತೆಗೆ ಸ್ವತಃ ನಾನೇ ಹೋಗಿದ್ದೇನೆ ಎಂದು ಡಿಡಿಪಿಐ ತಿಳಿಸಿದ್ದಾರೆ.
ಧಾರವಾಡ: ವಿಶೇಷ ಚೇತನ ಮಕ್ಕಳಲ್ಲಿ ವಿಶೇಷ ಸಾಮರ್ಥ್ಯವಿದ್ದು, ಅದನ್ನು ಪ್ರಬುದ್ಧ ಮಟ್ಟಕ್ಕೆ ಬೆಳೆಸಲು ಪಾಲಕರು ಪ್ರಯತ್ನಿಸುವದರೊಂದಿಗೆ ಜೀವನ ಕೌಶಲ್ಯಗಳನ್ನು ರೂಢಿ ಮಾಡಿಸಬೇಕು. ಅವರೊಂದಿಗೆ ಸದಾ ಶಿಕ್ಷಣ ಇಲಾಖೆ ಇದೆ ಎಂದು ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ್ಕುಮಾರ್ ಹಂಚಾಟೆಯವರು ಭರವಸೆ ನೀಡಿದ್ದಾರೆ.
ಧಾರವಾಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಫೋರ್ಥ್ ವೇವ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಇಂದು ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ವಲಯದ ಶಾಲಾ ಸಿದ್ಧತಾ ಕೇಂದ್ರದ 50 ವಿಶೇಷ ಚೇತನ ಮಕ್ಕಳಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು. ಇದನ್ನೂ ಓದಿ: ಕಣ್ಣು ಬಿಟ್ಟಿದ್ದ ದೇವರ ಕಣ್ಣನ್ನು ಪೂಜಾರಿ ಕೈಯಿಂದಲೇ ತೆಗೆಸಿದ ತಹಶೀಲ್ದಾರ್
ಕಿಟ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಂಚಾಟೆ ಅವರು, ವಿಶೇಷ ಚೇತನ ಮಕ್ಕಳಲ್ಲಿ ವಿಶೇಷಸಾಮರ್ಥ್ಯವಿರುತ್ತದೆ, ಅದನ್ನು ಪಾಲಕರು ಗುರುತಿಸಿ ಪ್ರೋತ್ಸಾಹಿಸಬೇಕು. ಮಕ್ಕಳಿಗೆ ಪೌಷ್ಟಿಕಾಂಶದ ಕೊರತೆಯಾಗದಂತೆ ಎಚ್ಚರವಹಿಸಬೇಕು. ವಿಶೇಷ ಚೇತನ ಮಕ್ಕಳು ಆರೋಗ್ಯವಾಗಿರಲು ಪಾಲಕರೆಲ್ಲ ತಪ್ಪದೇ ಲಸಿಕೆಯನ್ನು ಹಾಕಿಸಿಕೊಳ್ಳಿ. ಫೋರ್ಥ್ ವೇವ್ ಫೌಂಡೇಶನ್ನವರು ನಮ್ಮ ಜಿಲ್ಲೆಯ 200 ಮಕ್ಕಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದ್ದು, ಅವರ ಕೆಲಸ ಶ್ಲಾಘನೀಯವಾದುದು ಎಂದು ಅಭಿಪ್ರಾಯಪಟ್ಟರು.
ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಡಿಡಿಪಿಐಗೆಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
ಪರೀಕ್ಷೆ ದಿನಾಂಕ ಘೋಷಣೆ ಹಿನ್ನೆಲೆ ಸಚಿವ ಸುರೇಶ್ ಕುಮಾರ್ ಅವರು ಡಿಡಿಪಿಐಗಳಿಗೆ ಪತ್ರ ಬರೆದಿದ್ದು, ಈ ಬಾರಿ ಪರೀಕ್ಷೆಯಲ್ಲಿ ಅಧಿಕಾರಿಗಳ ಜವಾಬ್ದಾರಿ ಹೆಚ್ಚಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆರೋಗ್ಯ ಪಾಲನೆಯ ಕ್ರಮಕೈಗೊಳ್ಳಬೇಕು. ವಿದ್ಯಾರ್ಥಿಗಳ ಕಲಿಕೆಯ ಹಿತಕ್ಕಾಗಿ ಪುನರ್ಮನನ ತರಗತಿಗಳನ್ನ ಪ್ರಾರಂಭ ಮಾಡಲಾಗಿದೆ. ಪರೀಕ್ಷೆಗೆ ಇಲಾಖೆ ತೆಗೆದುಕೊಂಡ ಮುಂಜಾಗ್ರತಗೆ ಅಗತ್ಯ ಕ್ರಮವಹಿಸಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಊರಿಗೆ ತೆರಳಿರೋ ಸಿಇಟಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ಅಷ್ಟೇ ಅಲ್ಲದೆ ಸ್ವತಃ ಸಚಿವರೇ ವಿದ್ಯಾರ್ಥಿಗಳ ಮನಸ್ಥಿತಿ ಅರಿಯಲು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಪರೀಕ್ಷೆಗೆ ಸಜ್ಜಾಗಿರುವ ಕುರಿತಂತೆ ವಿಚಾರಿಸಿದ್ದಾರೆ. ತಮ್ಮ ಕಚೇರಿಯಿಂದ ಶಿವಮೊಗ್ಗ, ಹೊಸಕೋಟೆ, ಬೆಂಗಳೂರು, ಬಾಗಲಕೋಟೆ, ಇಳ್ಕಲ್, ಹಾನಗಲ್, ಸವಣೂರು, ಗದಗ, ಹುಬ್ಬಳ್ಳಿ ಮತ್ತಿತರ ಭಾಗದ 40ಕ್ಕೂ ಹೆಚ್ಚು ವಿದ್ಯಾರ್ಥಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದ ಸಚಿವರು, ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆ ಈ ಬಾರಿ ಸ್ವಲ್ಪ ತಡವಾಗಿ ಆರಂಭವಾಗುತ್ತಿರುವುದಕ್ಕೆ ಬೇಜಾರು ಮಾಡಿಕೊಳ್ಳದೇ ಚೆನ್ನಾಗಿ ಓದಬೇಕು ಎಂದು ಸಲಹೆ ನೀಡಿದರು.
ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡುವುದು ಸೇರಿದಂತೆ ದೂರದರ್ಶನ ಚಂದನ ವಾಹಿನಿಯಲ್ಲಿ ಪುನರ್ಮನನ ತರಗತಿಗಳನ್ನು ನೋಡುತ್ತಿದ್ದೀರಾ ಎಂದು ಪ್ರಶ್ನಿಸಿದರು. ಸಚಿವರ ಕಚೇರಿಯಿಂದ ಫೋನ್ ಕರೆ ಬಂದ ಸಂದರ್ಭದಲ್ಲಿ ಇಳಕಲ್ನ ವಿದ್ಯಾರ್ಥಿನಿಯೊಬ್ಬಳು ಚಂದನ ವಾಹಿನಿಯಲ್ಲಿ ಪುನರ್ಮನನ ತರಗತಿಗಳನ್ನು ವೀಕ್ಷಿಸುತ್ತಿದ್ದಳು. ಪುನರ್ಮನನ ತರಗತಿಗಳು ಚೆನ್ನಾಗಿ ಮೂಡಿಬರುತ್ತಿದ್ದು, ಈಗ ಶಾಲಾ ತರಗತಿಗಳು ನಡೆಯುತ್ತಿಲ್ಲವಾದ್ದರಿಂದ ಇದರಿಂದ ಸಾಕಷ್ಟು ಉಪಯೋಗವಾಗುತ್ತಿದೆ ಎಂದು ತಿಳಿಸಿದ್ದು ಗಮನಾರ್ಹವಾಗಿತ್ತು.
ಶಿವಮೊಗ್ಗದ ಆದಿಚುಂಚನಗಿರಿ ಶಾಲೆಯ ವಿದ್ಯಾರ್ಥಿನಿ ಎನ್.ಎಸ್.ಶ್ರದ್ಧಾ ಒಡೆಯರಪುರ ವಿದ್ಯಾರ್ಥಿನಿ ತಮ್ಮ ಮನೆಯಲ್ಲಿ ಟಿ.ವಿ. ಇಲ್ಲವಾದ್ದರಿಂದ ಚಂದನ ವಾಹಿನಿ ನೋಡಲು ಆಗುತ್ತಿಲ್ಲ ಎಂದು ಹೇಳಿದ ತಕ್ಷಣವೇ ಶಿವಮೊಗ್ಗದ ಬಿಇಒಗೆ ಫೋನ್ ಮಾಡಿದ ಸಚಿವರು, ವಿದ್ಯಾರ್ಥಿನಿಯ ಫೋನ್ ನಂಬರ್ ನೀಡಿದ್ದಲ್ಲದೇ ಆಕೆಗೆ ಚಂದನ ವಾಹಿನಿಯ ಪುನರ್ಮನನ ತರಗತಿ ವೀಕ್ಷಿಸಲು ಸೂಕ್ತ ವ್ಯವಸ್ಥೆ ಮಾಡಿಕೊಡಲು ಸೂಚಿಸಿದರು.
ಸಚಿವರೊಂದಿಗೆ ಮಾತನಾಡಿದ ಎಲ್ಲ ವಿದ್ಯಾರ್ಥಿಗಳು ಕೊನೆಗೂ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ್ದರಿಂದ ಖುಷಿಯಾಗಿದ್ದು, ನಿನ್ನೆಯಿಂದಲೇ ಪರೀಕ್ಷೆಗೆ ಗಂಭೀರವಾಗಿ ಓದುತ್ತಿರುವುದಾಗಿ ಹೇಳಿಕೊಂಡರು. ಪರೀಕ್ಷೆಯೆಂದರೆ ಭೂತವಲ್ಲ, ಅದೊಂದು ಕ್ರೀಡೆ ಇದ್ದಂತೆ ಎಂದು ತಿಳಿದು ಸಂತೋಷದಿಂದ ಪರೀಕ್ಷಾ ಕೊಠಡಿಗೆ ತೆರಳುವಂತೆ ಸಚಿವರು ತಿಳಿಸಿದರು. ಹಾಗೆಯೇ ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆಗೆ ಕೈಗೊಂಡ ಸಿದ್ಧತೆಗಳನ್ನು ವಿವರಿಸಿದರಲ್ಲದೇ ತಾವು ಕಷ್ಟಪಟ್ಟು ಓದಿ ಪರೀಕ್ಷೆಯನ್ನು ಖುಷಿಯಿಂದ ಬರೆಯುವುದಷ್ಟೇ ನಿಮ್ಮ ಕೆಲಸ ಎಂದು ಸಲಹೆ ಮಾಡಿದರು.
ಹಾಗೆಯೇ ನಿಮ್ಮ ಸ್ನೇಹಿತರಾರಾದರೂ ತಮ್ಮ ಶಾಲೆಯಿಂದ ದೂರದ ಊರಿನಲ್ಲಿದ್ದರೆ, ಅವರಿಗೆ ಹತ್ತಿರದ ಪರೀಕ್ಷಾ ಕೇಂದ್ರಕ್ಕೆ ಬದಲಾಯಿಸಿಕೊಂಡು ಅವರು ಇರುವ ಊರಿನ ಸಮೀಪದಲ್ಲೇ ಪರೀಕ್ಷೆ ಬರೆಯಲು ಅವಕಾಶ ಇರುವ ಕುರಿತು ತಿಳಿಸಬೇಕೆಂದೂ ಸುರೇಶ್ ಕುಮಾರ್ ಸಲಹೆ ನೀಡಿದರು.
ರಾಯಚೂರು: ತಾಲೂಕಿನ ಗಂಜಳ್ಳಿ ಗ್ರಾಮದಲ್ಲಿ ಪ್ರೌಢಶಾಲೆ ತೆರೆಯಲು ಒತ್ತಾಯಿಸಿ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಮುಂದೆ ಹೋರಾಟ ನಡೆಸಿದ್ದಾರೆ.
ಗ್ರಾಮದಲ್ಲಿ 8ನೇ ತರಗತಿವರೆಗೆ ಮಾತ್ರ ಶಾಲೆ ಇದ್ದು, ಪ್ರೌಢಶಾಲೆಗಾಗಿ ದೂರದ ಊರುಗಳಿಗೆ ಹೋಗಬೇಕಾದ ಅನಿರ್ವಾಯತೆಯಿದೆ. ಹೀಗಾಗಿ ಶಾಲೆಯಿಲ್ಲದ ಕಾರಣ ಹೆಣ್ಣುಮಕ್ಕಳಿಗೆ ಬೇಗನೇ ಮದುವೆ ಮಾಡುವುದು, ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿ ಹೆಚ್ಚಾಗುತ್ತಿದೆ ಅಂತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮದಲ್ಲಿ ಎಂಟನೇ ತರಗತಿ ಮುಗಿಸಿರುವ ವಿದ್ಯಾರ್ಥಿಗಳೆಲ್ಲಾ ಒಟ್ಟಾಗಿ ಪ್ರೌಢಶಾಲೆ ತೆರೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಹೊತ್ತಿರುವ ತನ್ವೀರ್ ಸೇಠ್ ಸ್ವತಃ ಶಿಕ್ಷಣ ಸಚಿವರಾಗಿರುವುದರಿಂದ ಕೂಡಲೇ ಸಮಸ್ಯೆಗೆ ಸ್ಪಂದಿಸಬೇಕು ಅಂತ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.