Tag: Dead Bodies

  • ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಬೀದರ್‌ನ 7 ಜನ ಮಣ್ಣಲ್ಲಿ ಮಣ್ಣು

    ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಬೀದರ್‌ನ 7 ಜನ ಮಣ್ಣಲ್ಲಿ ಮಣ್ಣು

    ಬೀದರ್: ಉತ್ತರ ಪ್ರದೇಶದ ಖೇರಿ ಹೈವೆಯಲ್ಲಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ಮೂಲದ 7 ಜನ ಹಾಗೂ ಕಲಬುರಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರು.

    ಇಂದು ಅವರ ಮೃತದೇಹಗಳು ಲಕ್ನೋದಿಂದ ಏರ್-ಲಿಫ್ಟ್ ಮಾಡಿ ಹೈದರಾಬಾದ್‍ಗೆ ತಂದು ಅಲ್ಲಿಂದ ರಸ್ತೆ ಮೂಲಕ 7 ಅಂಬುಲೆನ್ಸ್‌ಗಳಲ್ಲಿ 4 ಗಂಟೆಗೆ ಬೀದರ್‌ಗೆ ತರಲಾಯಿತು. ಓರ್ವ ವ್ಯಕ್ತಿಯ ಮೃತದೇಹವನ್ನು ಕಲಬುರಗಿಗೆ ರವಾನೆ ಮಾಡಲಾಯಿತು.  ಇದನ್ನೂ ಓದಿ: ಯುಪಿಯಲ್ಲಿ ಬೀದರ್ ಪ್ರವಾಸಿಗರಿಗೆ ಅಪಘಾತ – ಸಂತ್ರಸ್ತರ ನೆರವಿಗೆ ಯೋಗಿ ಜೊತೆ ಬೊಮ್ಮಾಯಿ ಮಾತುಕತೆ

    ಮೃತದೇಹಗಳು ಬೀದರ್‌ಗೆ ಬರುತ್ತಿದ್ದಂತೆ ಗುಂಪಾ ಬಳಿಯ ಅವರ ನಿವಾಸದಲ್ಲಿ ಕುಟುಂಬಸ್ಥರ ಹಾಗೂ ಸ್ಥಳೀಯರು ಆಕ್ರಂದನ ಮುಗಿಲು ಮುಟ್ಟಿತು. ಬಳಿಕ ಬೀದರ್ ತಾಲೂಕಿನ ಸುಲ್ತಾನಪುರ್‌ದಲ್ಲಿ 6 ಜನರನ್ನು ಲಿಂಗಾಯತ ಸಂಪ್ರದಾಯದಂತೆ ಸುರಿಯುವ ಮಳೆಯ ನಡುವೆ ಅಂತ್ಯಕ್ರಿಯೆ ಮಾಡಿದರು. ಇದನ್ನೂ ಓದಿ: ಯುಪಿಯಲ್ಲಿ ಬೀದರ್‌ ಟಿಟಿ ಅಪಘಾತ – ಯುವತಿ ಸಾವು, ಸಾವಿನ ಸಂಖ್ಯೆ 8ಕ್ಕೆ ಏರಿಕೆ

    ಬೀದರ್ ತಾಲೂಕಿನ ಅಷ್ಟೂರಿನಲ್ಲಿ ಓರ್ವ ವ್ಯಕ್ತಿಯನ್ನು ಅಂತ್ಯಕ್ರಿಯೆ ಮಾಡಲಾಗಿದೆ. ಅಂತ್ಯಕ್ರಿಯೆ ಮಾಡುವ ಸ್ಥಳದಲ್ಲೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಕೇದಾರನಾಥ್, ಭದ್ರಿನಾಥ್, ಅಯೋಧ್ಯೆ ಸೇರಿದಂತೆ ತೀರ್ಥಯಾತ್ರೆಗೆ ಹೋಗಿದ್ದ ಬೀದರ್ ಮೂಲದ 16 ಜನರಲ್ಲಿ 7 ಜನ ಮಸಣ ಸೇರಿದ್ದು ಮಾತ್ರ ದುರಂತವೇ ಸರಿ.

  • ಶರಣಾದ ಪಾಕ್ – ಶ್ವೇತ ಬಾವುಟ ತೋರಿಸಿ ಮೃತದೇಹ ಹೊತ್ತೊಯ್ದ ಇಮ್ರಾನ್ ಸೇನೆ

    ಶರಣಾದ ಪಾಕ್ – ಶ್ವೇತ ಬಾವುಟ ತೋರಿಸಿ ಮೃತದೇಹ ಹೊತ್ತೊಯ್ದ ಇಮ್ರಾನ್ ಸೇನೆ

    ಶ್ರೀನಗರ: ಭಾರತೀಯ ಸೇನೆಯಿಂದ ಹತರಾದ ಪಾಕ್ ಸೈನಿಕರ ಮೃತದೇಹವನ್ನು ಪಾಕಿಸ್ತಾನ ಸೇನೆ ಶ್ವೇತ ಬಾವುಟ ತೋರಿಸಿ ಶರಣಾಗಿದ್ದೇವೆ ಎಂಬ ಸಂದೇಶವನ್ನು ರವಾನಿಸಿ ತೆಗೆದುಕೊಂಡು ಹೋಗಿದೆ.

    ಕದನ ವಿರಾಮ ಉಲ್ಲಂಘನೆ ಮಾಡಿದ ಪಾಕಿಸ್ತಾನಿ ಸೈನಿಕರನ್ನು ಸೆಪ್ಟೆಂಬರ್ 10, 11 ರಂದು ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಯ ಹಾಜಿಪುರ ಸೆಕ್ಟರ್‍ ನಲ್ಲಿ ಹೊಡೆದು ಹಾಕಿತ್ತು. ಈ ಗುಂಡಿನ ದಾಳಿಯಲ್ಲಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹವಾಲ್‍ನಗರ ಮೂಲದ ಸೈನಿಕ ಗುಲಾಮ್ ರಸೂಲ್‍ನನ್ನು ಭಾರತೀಯ ಸೇನೆ ಕೊಂದು ಹಾಕಿತ್ತು.

    ಈ ಗುಂಡಿನ ಚಕಮಕಿಯಲ್ಲಿ ಹತನಾದ ರಸೂಲ್ ಮೃತ ದೇಹವನ್ನು ತೆಗೆದುಕೊಂಡು ಹೋಗಲು ಪಾಕ್ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿ ಗುಂಡಿನ ದಾಳಿ ಮುಂದುವರಿಸಿತ್ತು. ಈ ದಾಳಿಗೆ ಭಾರತೀಯ ಸೇನೆ ಭಾರೀ ಪ್ರಮಾಣದಲ್ಲಿ ದಾಳಿ ನಡೆಸಿದ ಪರಿಣಾಮ ಪಾಕಿನ ಮತ್ತೊಬ್ಬ ಸೈನಿಕ ಸಹ ಹತ್ಯೆಯಾಗಿದ್ದ. ಈ ಎರಡು ಮೃತದೇಹಗಳನ್ನು ವಾಪಸ್ ಪಡೆಯಲು ಪಾಕಿಸ್ತಾನಿ ಸೇನೆ ಎರಡು ದಿನಗಳ ಕಾಲ ಬಹಳ ಪ್ರಯತ್ನ ಪಟ್ಟರೂ ಭಾರತೀಯ ಸೇನೆ ಬಿಟ್ಟುಕೊಟ್ಟಿರಲಿಲ್ಲ.

    ಎರಡು ದಿನ ಪ್ರಯತ್ನ ಪಟ್ಟು ಸೋತ ಪಾಕಿಸ್ತಾನಿ ಸೈನಿಕರು ಸೆಪ್ಟಂಬರ್ 13 ಶುಕ್ರವಾರ ಬಿಳಿ ಬಣ್ಣದ ಬಾವುಟವನ್ನು ತೋರಿಸಿ ನಾವು ಶರಣಾಗಿದ್ದೇವೆ ಎಂದು ಸಂದೇಶ ರವಾನೆ ಮಾಡುವ ಮೂಲಕ ಎರಡು ಮೃತ ದೇಹವನ್ನು ತೆಗೆದುಕೊಂಡು ಹೋಗಿದ್ದಾರೆ. ಇದನ್ನು ಓದಿ:ಶ್ವೇತ ಬಾವುಟ ತೋರಿಸಿ, ನಿಮ್ಮ ಶವಗಳನ್ನು ತೆಗೆದುಕೊಂಡು ಹೋಗಿ-ಪಾಕಿಸ್ತಾನಕ್ಕೆ ಭಾರತದ ಸಂದೇಶ

    ಶ್ವೇತ ಬಾವುಟ ತೋರಿಸಿ ಶರಣಾಗಿ ಬಂದ ಪಾಕ್ ಸೈನಿಕರನ್ನು ಕಂಡ ಭಾರತೀಯ ಸೈನಿಕರು ಮತ್ತೆ ಗುಂಡಿನ ದಾಳಿ ಮಾಡದೇ ಮೃತ ದೇಹಗಳನ್ನು ತೆಗೆದುಕೊಂಡು ಹೋಗಲು ಅನುಮತಿ ನೀಡಿದ್ದಾರೆ. ಈ ಮೂಲಕ ಸೋತು ಶರಣಾದವರಿಗೆ ನಾವು ಗೌರವ ನೀಡುತ್ತೇವೆ ಎಂಬ ಸಂದೇಶವನ್ನು ಭಾರತೀಯ ಸೇನೆ ನೀಡಿದೆ.

    ಈ ಹಿಂದೆ ಜುಲೈ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಕೇರನ್ ಸೆಕ್ಟರ್ ನಲ್ಲಿಯ ಫಾರ್ವರ್ಡ್ ಪೋಸ್ಟ್ ಬಳಿ ಪಾಕಿಸ್ತಾನದ ಸೇನೆಯ ಬ್ಯಾಟ್  (Border Action Team) ತಂಡ  ದಾಳಿಯನ್ನು ನಡೆಸಿತ್ತು. ಪಾಕಿಸ್ತಾನದ ದಾಳಿಯನ್ನು ವಿಫಲಗೊಳಿಸಿದ ಭಾರತೀಯ ಸೇನೆ ಪ್ರತಿದಾಳಿ ನಡೆಸಿತ್ತು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನದ 5 ರಿಂದ7 ಸೈನಿಕರು ಮತ್ತು ಕೆಲ ಉಗ್ರರು ಸಾವನ್ನಪ್ಪಿದ್ದರು.

    ಭಾರತೀಯ ಸೇನೆಯ ದಾಳಿಗೆ ಸಿಕ್ಕಿ ಮೃತ ಪಟ್ಟ ಪಾಕಿಸ್ತಾನ ಸೈನಿಕರ ಮೃತ ದೇಹಗಳು ಎಲ್‍ಓಸಿಯಲ್ಲಿ ಬಿದ್ದಿವೆ. ಈ ದೇಹಗಳನ್ನು ಶ್ವೇತ ಬಾವುಟ ತೋರಿಸಿ ತೆಗೆದುಕೊಂಡಿ ಹೋಗಿ ಅಂತ್ಯಕ್ರಿಯೇ ಮಾಡಬಹುದು ಎಂದು ಭಾರತೀಯ ಸೇನೆ ಪಾಕಿಸ್ತಾನ ಸೇನೆಗೆ ಹೇಳಿತ್ತು. ಇದನ್ನು ನಿರಾಕರಿಸಿದ್ದ ಪಾಕಿಸ್ತಾನ ಎಲ್‍ಓಸಿಯಲ್ಲಿ ಮೃತ ಪಟ್ಟ ಸೈನಿಕರು ನಮ್ಮ ಸೈನಿಕರಲ್ಲ ಎಂದು ಹೇಳಿತ್ತು.

  • ಭೂಕುಸಿತಕ್ಕೆ ಬಲಿಯಾದ ಗರ್ಭಿಣಿಯ ಮೃತದೇಹಕ್ಕಾಗಿ ಶೋಧ- ಪತ್ನಿಗಾಗಿ ಪತಿ ಕಣ್ಣೀರು

    ಭೂಕುಸಿತಕ್ಕೆ ಬಲಿಯಾದ ಗರ್ಭಿಣಿಯ ಮೃತದೇಹಕ್ಕಾಗಿ ಶೋಧ- ಪತ್ನಿಗಾಗಿ ಪತಿ ಕಣ್ಣೀರು

    ಮಡಿಕೇರಿ: ಭೂಕುಸಿತಕ್ಕೆ ಒಳಗಾಗಿರುವ ವಿರಾಜಪೇಟೆ ತಾಲೂಕಿನ ತೋರ ಗ್ರಾಮದಲ್ಲಿ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಭೂಕುಸಿತವಾದ ಪ್ರದೇಶದಲ್ಲಿ ಕೆಸರು ತುಂಬಿಕೊಂಡಿದ್ದು, ಕಾರ್ಯಾಚರಣೆಗೆ ಅಡ್ಡಿ ಆಗುತ್ತಿದೆ.

    ತೋರ ಗ್ರಾಮದ ನಿವಾಸಿ ಹರೀಶ್ ಅವರು ತಮ್ಮ 8 ತಿಂಗಳ ಗರ್ಭಿಣಿ ಪತ್ನಿ ವೀಣಾ ಸೇರಿದಂತೆ ಕುಟುಂಬಸ್ಥರಾದ ಅಮ್ಮು ಹಾಗೂ ಲೀಲಾ ಭೂಕುಸಿತದಿಂದ ಮೃತಪಟ್ಟಿದ್ದಾರೆ. ಆದರೆ ಇಷ್ಟು ದಿನವಾದರೂ ಅವರ ಮೃತ ದೇಹಗಳು ಸಿಕ್ಕಿಲ್ಲ. ಜಿಲ್ಲಾಡಳಿತ, ಪೊಲೀಸ್, ಗರುಡ ಟೀಂ, ಎನ್‍ಡಿಆರ್‍ಎಫ್ ಎಲ್ಲರೂ ತಮ್ಮ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಇದುವರೆಗೂ ಯಾವುದೇ ಕುರುಹುಗಳು ಸಿಕ್ಕಿಲ್ಲ ಎಂದು ಹರೀಶ್ ರೋಧಿಸುತ್ತಿದ್ದಾರೆ.

    1996ರಲ್ಲಿ ನಾನು ಚಿಕ್ಕವನಾಗಿದ್ದಾಗ ತೋರ ಗ್ರಾಮಕ್ಕೆ ಬಂದೆ. ಇಲ್ಲಿನ ನಿವಾಸಿ ಪೊನ್ನಪ್ಪ ಅವರ ಮನೆಯಲ್ಲಿ ಕೂಲಿ ಕೆಲಸ ಮಾಡಿಕೊಂಡು ಇದ್ದೆ. ಅವರ ಮನೆಯಲ್ಲೇ ವಾಸಿಸುತ್ತಿದ್ದೆ. ಇತ್ತೀಚೆಗಷ್ಟೇ ಮದುವೆ ಅಗಿದ್ದೆನು. ನಮ್ಮ ಮಾಲೀಕರ ಹಂದಿಗಳು, ಹಸುಗಳನ್ನು ನೋಡಿಕೊಂಡು, ಅವರು ಕೊಟ್ಟಿದ್ದ ಸ್ವಲ್ಪ ಜಾಗದಲ್ಲಿ ತೋಟ ಮಾಡಿಕೊಂಡು ಇದ್ದೆ. ಆದರೆ ಈಗ ಯಾವುದೂ ಇಲ್ಲ. ಎಲ್ಲವನ್ನು ಕಳೆದುಕೊಂಡಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ನನ್ನ ಪತ್ನಿ ಹಾಗೂ ಮನೆಯವರ ಮೃತದೇಹವೂ ಸಿಕ್ಕಲ್ಲ. ಎಲ್ಲರು ಹುಡುಕುತ್ತಿದ್ದಾರೆ. ಮುಂದೆ ಹೇಗೆ ಇರಬೇಕು ಎಂದು ಅಲೋಚನೆ ಮಾಡಿಲ್ಲ. ಇಷ್ಟರವರೆಗೆ ಸಂಪಾದನೆ ಮಾಡಿದ್ದನ್ನೆಲ್ಲ ಕಳೆದುಕೊಂಡಿದ್ದೇನೆ. ನನ್ನ ಹೆಂಡತಿ 8 ತಿಂಗಳ ಗರ್ಭಿಣಿ ಅವಳು ಸಿಕ್ಕಿಲ್ಲ. ನನಗಾಗಿ ಯಾವುದೂ ಇಲ್ಲ ಎಂದು ಕಣ್ಣೀರಿಟ್ಟಿದ್ದಾರೆ.

    ವಿರಾಜಪೇಟೆ ಮುಖ್ಯರಸ್ತೆಯಿಂದ ಸುಮಾರು 6 ಕಿ.ಮೀ. ದೂರದಲ್ಲಿ ಅಂದಾಜು 500ಕ್ಕೂ ಅಧಿಕ ಎಕರೆಗಳಷ್ಟು ಜಾಗದಲ್ಲಿ ಬೆಟ್ಟ ಕುಸಿದಿದ್ದು, ಕಾಲಿಟ್ಟಲೆಲ್ಲ ಹೂತುಕೊಳ್ಳುವ ರೀತಿಯಲ್ಲಿ ಕೆಸರಿನ ಸ್ಥಿತಿ ಇರುವುದರಿಂದ ಕಾರ್ಯಾಚರಣೆ ನಿಧಾನಗತಿಯಲ್ಲಿ ನಡೆಯುತ್ತಿದೆ. ಈ ಪ್ರದೇಶದಲ್ಲಿ ಮನೆ, ತೋಟಗಳು ಇತ್ತು ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಆದರೆ ದುರ್ಘಟನೆಯಿಂದಾಗಿ ಅವುಗಳ ಯಾವುದೇ ಕುರುಹು ಕಾಣದಂತಾಗಿದೆ.

  • ಚಿಕ್ಕಮಗಳೂರು ನದಿಯಲ್ಲಿ ತೇಲಿ ಬರುತ್ತಿವೆ ಶವಗಳು

    ಚಿಕ್ಕಮಗಳೂರು ನದಿಯಲ್ಲಿ ತೇಲಿ ಬರುತ್ತಿವೆ ಶವಗಳು

    ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯ ಅಬ್ಬರಕ್ಕೆ ಜನರ ಬದುಕು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಈಗ ನದಿಯಲ್ಲಿ ಶವಗಳು ತೇಲಿ ಬರುತ್ತಿವೆ.

    ಮಳೆಯಿಂದಾಗಿ ಮಲೆನಾಡಲ್ಲಿ ಊರೂರೇ ಕೊಚ್ಚಿ ಹೋಗುತ್ತಿದ್ದು, ನೂರಾರು ಜನ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಅಲ್ಲದೆ ಗ್ರಾಮಗಳು ನೀರಲ್ಲಿ ಮುಳುಗಿ ಜನ ಕಂಗಾಲಾಗಿದ್ದಾರೆ. ಈಗಾಗಲೇ ಜಿಲ್ಲಾಡಳಿತ ಒಂದು ಪರಿಹಾರ ಕೇಂದ್ರವನ್ನು ತೆರೆದಿದ್ದು, ಈಗ ಅಧಿಕಾರಿಗಳನ್ನು ಅಲರ್ಟ್ ಮಾಡಬೇಕಿದೆ. ಮಳೆಯಿಂದಾಗಿ ಹೇಮಾವತಿ, ತುಂಗಾ-ಭದ್ರಾ ನದಿ ಪಾತ್ರದ ಹಲವು ಗ್ರಾಮಗಳು ಮುಳುಗಡೆ ಆಗಿದೆ.

    ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಅನೇಕ ಗ್ರಾಮಗಳು ಹೊರ ಜಗತ್ತಿನ ಸಂಪರ್ಕ ಕಳೆದುಕೊಂಡಿದೆ. ಮುಗ್ರಹಳ್ಳಿ, ಕೋಳೂರು, ಬಕ್ಕಿ, ಬೆಟ್ಟಗೆರೆ, ಹಾಲೂರು, ಕಿತ್ತಲೆಗಂಡಿ ಸೇರಿದಂತೆ ಹತ್ತಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಸೇರಿದಂತೆ ರಸ್ತೆಗಳು ಸಂಪೂರ್ಣ ಮುಳುಗಡೆ ಆಗಿದ್ದು, ಸಾವಿರಾರು ಮಂದಿ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಕುಳಿತಿದ್ದಾರೆ. ಸದ್ಯ ಜನರು ಜಿಲ್ಲಾಡಳಿತದ ನೆರವನ್ನು ಎದುರು ನೋಡುತ್ತಿದ್ದಾರೆ.

    ಇತ್ತ ಮಹಾಮಳೆಯಿಂದಾಗಿ ಪ್ರವಾಹದ ಮಟ್ಟ ಮೀರಿ ಭದ್ರಾ ನದಿ ಹರಿಯಿತ್ತಿದೆ. ಭದ್ರಾ ನದಿ ಆರ್ಭಟಕ್ಕೆ ಖಾಂಡ್ಯ- ಬಾಳೆಗದ್ದೆ ತೂಗು ಸೇತುವೆ ನೀರಿನಲ್ಲಿ ಕೊಚ್ಚಿ ಹೋಗಿದೆ. ತೂಗು ಸೇತುವೆ ಕೊಚ್ಚಿ ಹೋದ ಪರಿಣಾಮ ಬಾಳೆಗದ್ದೆ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಭದ್ರಾ ನದಿ ದಾಟಲು ಈ ಗ್ರಾಮಕ್ಕೆ ಈ ತೂಗು ಸೇತುವೆಯೇ ಆಸರೆಯಾಗಿತ್ತು. ಆದರೆ ಈಗ ಸೇತುವೆ ಕೊಚ್ಚಿ ಹೋದ ಕಾರಣ 50ಕ್ಕೂ ಹೆಚ್ಚು ಕುಟುಂಬಗಳ ಸಂಪರ್ಕ ಬಂದ್ ಆಗಿದೆ.