Tag: Deal

  • ಅಫ್ಘಾನಿಸ್ತಾನದ ವಿಮಾನ ಕಾರ್ಯಾಚರಣೆಗೆ ಯುಎಇ ಜೊತೆ ತಾಲಿಬಾನ್ ಒಪ್ಪಂದ

    ಅಫ್ಘಾನಿಸ್ತಾನದ ವಿಮಾನ ಕಾರ್ಯಾಚರಣೆಗೆ ಯುಎಇ ಜೊತೆ ತಾಲಿಬಾನ್ ಒಪ್ಪಂದ

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ವಿಮಾನ ಕಾರ್ಯಾಚರಣೆ ಹಾಗೂ ವಿಮಾನ ನಿಲ್ದಾಣ ನಿರ್ವಹಣೆ ಕುರಿತು ತಾಲಿಬಾನ್, ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

    ತಾಲಿಬಾನ್ ಯುಎಇ, ಟರ್ಕಿ ಹಾಗೂ ಕತಾರ್‌ನೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದ್ದು, ಮಂಗಳವಾರ ಒಪ್ಪಂದಕ್ಕೆ ಸಹಿ ಹಾಕಿದೆ.

    ತಾಲಿಬಾನ್‌ನ ಸಾರಿಗೆ ಮತ್ತು ನಾಗರಿಕ ವಿಮಾನಯಾನದ ಉಪ ಮಂತ್ರಿ ಗುಲಾಮ್ ಜೈಲಾನಿ ವಫಾ ಅವರು ಮೊದಲ ಉಪ ಪ್ರಧಾನಮಂತ್ರಿ ಮುಲ್ಲಾ ಅಬ್ದುಲ್ ಘನಿ ಬರಾದರ್ ಅವರ ಸಮ್ಮುಖದಲ್ಲಿ ಮಂಗಳವಾರ ಜಿಎಎಸಿ ನಿಗಮದ ಪ್ರತಿನಿಧಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದರು. ಇದನ್ನೂ ಓದಿ: ಹೆಚ್‍ಡಿಕೆ ಮನೆಯಲ್ಲಿನ ದೇವಸ್ಥಾನ ಪುಡಿ ಮಾಡಿದ್ರೆ ಸುಮ್ಮನಿರುತ್ತಿದ್ದರಾ?- ಈಶ್ವರಪ್ಪ

    ಒಪ್ಪಂದಕ್ಕೆ ಸಹಿ ಹಾಕುವ ವೇಳೆ ಮಾತನಾಡಿದ ಮುಲ್ಲಾ ಬರದಾರ್, ದೇಶದ ಭದ್ರತೆ ಬಲವಾಗಿದೆ ಹಾಗೂ ಇಸ್ಲಾಮಿಕ್ ಎಮಿರೇಟ್ಸ್, ವಿದೇಶಿ ಹೂಡಿಕೆದಾರರೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ. ಎಲ್ಲಾ ವಿದೇಶೀ ವಿಮಾನಯಾನ ಸಂಸ್ಥೆಗಳು ಅಫ್ಘಾನಿಸ್ತಾನಕ್ಕೆ ಸುರಕ್ಷಿತವಾಗಿ ಹಾಗೂ ವಿಶ್ವಾಸಾರ್ಹವಾಗಿ ಹಾರಾಟ ಪ್ರಾರಂಭಿಸಬಹುದು ಎಂದು ಭರವಸೆ ನಿಡಿದರು. ಇದನ್ನೂ ಓದಿ: ಮಹಾರಾಷ್ಟ್ರ ಸಚಿವ ಅನಿಲ್ ಪರಬ್ ಮನೆ, ಕಚೇರಿ ಮೇಲೆ ಇಡಿ ದಾಳಿ

    ಆಗಸ್ಟ್ 2021ರಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡಿತು ಹಾಗೂ ಹಿಂದಿನ ಸರ್ಕಾರ ಪತನವಾಯಿತು. 2021ರ ಡಿಸೆಂಬರ್‌ನಲ್ಲಿ ಟರ್ಕಿಶ್ ಹಾಗೂ ಕತಾರಿ ಕಂಪನಿಗಳು ಕಾಬೂಲ್ ವಿಮಾನ ನಿಲ್ದಾಣವನ್ನು ನಿರ್ವಹಿಸಲು ಜ್ಞಾಪಕ ಪತ್ರಕ್ಕೆ ಸಹಿ ಹಾಕಿದವು. ಅಫ್ಘಾನಿಸ್ತಾನದಲ್ಲಿ ತೀವ್ರ ಆರ್ಥಿಕ ಪರಿಸ್ಥಿತಿ ಇರುವುದರಿಂದ ಈಗಲೂ ಬಾಲ್ಖ್, ಹೆರಾತ್, ಕಂದಹಾರ್ ಹಾಗೂ ಖೋಸ್ಟ್ ನಗರಗಳ ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸಲು ಹೆಣಗಾಡುತ್ತಿವೆ.

  • ದುಬಾರಿ ಡೀಲ್‌ – ಕ್ರೀಡಾ ವೀಕ್ಷಕ ವಿವರಣೆಗಾರನಿಗೆ ಸಾವಿರ ಕೋಟಿ ಸಂಬಳ

    ದುಬಾರಿ ಡೀಲ್‌ – ಕ್ರೀಡಾ ವೀಕ್ಷಕ ವಿವರಣೆಗಾರನಿಗೆ ಸಾವಿರ ಕೋಟಿ ಸಂಬಳ

    ನ್ಯೂಯಾರ್ಕ್‌: ಅಮೆರಿಕದ ನ್ಯಾಷನಲ್‌ ಫುಟ್‌ಬಾಲ್‌ ಲೀಗ್‌ ವೀಕ್ಷಕ ವಿವರಣೆಗಾರರಿಗೆ ವಾಹಿನಿಯೊಂದು ಮಿಲಿಯನ್‌ ಡಾಲರ್‌ ಆಫರ್‌ ನೀಡಿ ಸುದ್ದಿಯಾಗಿದೆ.

    7 ಬಾರಿ ಸೂಪರ್‌ ಬೌಲ್‌ ಚಾಂಪಿಯನ್‌ ಆಟಗಾರ ಟಾಮ್‌ ಬ್ರಾಡಿ ಅವರಿಗೆ ಫಾಕ್ಸ್‌ ಸ್ಫೋರ್ಟ್ಸ್‌ 10 ವರ್ಷದ ಅವಧಿಗೆ 375 ದಶಲಕ್ಷ ಡಾಲರ್‌(ಅಂದಾಜು 2,900 ಕೋಟಿ ರೂ.) ಪ್ಯಾಕೇಜ್‌ ನೀಡಿದೆ.

    44 ವರ್ಷದ ಟಾಮ್‌ ಬ್ರಾಡಿ 19 ವರ್ಷಗಳ ಕಾಲ ನ್ಯೂ ಇಂಗ್ಲೆಂಡ್‌ ಪ್ಯಾಟ್ರಿಯಟ್ಸ್‌ ತಂಡದ ಪರ ಆಡಿದ್ದರು. 2019ರಿಂದ ಟ್ಯಾಂಪಾ ಬೇ ಬುಕಾನಿಯರ್ಸ್ ಪರ ಆಡಿದ್ದರು. ಈಗ ತಮ್ಮ ಕ್ರೀಡಾ ಜೀವನಕ್ಕೆ ಗುಡ್‌ಬೈ ಹೇಳಿ ವೀಕ್ಷಕ ವಿವರಣೆಗಾರರಾಗಲು ಹೊರಟಿದ್ದಾರೆ.

    ಅಮೆರಿಕದ ಕ್ರೀಡಾ ಇತಿಹಾಸದಲ್ಲಿ ಈ ಪ್ಯಾಕೇಜ್‌ ಮೊತ್ತ ಬಹಳ ದುಬಾರಿ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಹಿಂದೆ ಸಿಬಿಎಸ್‌ ಸ್ಫೋರ್ಟ್ಸ್‌ ವಾಹಿನಿ ರೊಮೊ ಅವರ ಜೊತೆ 18 ದಶಲಕ್ಷ ಡಾಲರ್‌ ಒಪ್ಪಂದ ಮಾಡಿಕೊಂಡಿತ್ತು.

    ವೀಕ್ಷಕ ವಿವರಣೆಗಾರದಿಂದಾಗಿ ಪಂದ್ಯದ ವೀಕ್ಷಣೆ ಹೆಚ್ಚಾಗುವುದರಿಂದ ಕ್ರೀಡಾ ವಾಹಿನಿಗಳು ದುಬಾರಿ ಮೊತ್ತದ ಪ್ಯಾಕೇಜ್‌ ನೀಡುತ್ತಿವೆ.

    20 ವರ್ಷಗಳ ಕಾಲ ಆಡಿರುವುದರಿಂದ ಬ್ರಾಡ್‌ ಅವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ. ಅನುಭವದ ಜೊತೆ ವಿವರಣೆ ಹೇಳುವುದರಿಂದ ವೀಕ್ಷಕರಿಗೆ ಪಂದ್ಯ ಇಷ್ಟವಾಗಲಿದೆ ಎಂದು ಫಾಕ್ಸ್‌ ಸ್ಫೋರ್ಟ್ಸ್‌ ಈ ಡೀಲ್‌ ಬಗ್ಗೆ ಪ್ರತಿಕ್ರಿಯಿಸಿದೆ.

    ಟ್ವಿಟ್ಟರ್‌ನಲ್ಲಿ ಬ್ರಾಡಿ ಅವರನ್ನು 27 ಲಕ್ಷ ಮಂದಿ ಫಾಲೋ ಮಾಡುತ್ತಿದ್ದರೆ ಫೇಸ್‌ಬುಕ್‌ನಲ್ಲಿ 50 ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ 1.2 ಕೋಟಿ ಮಂದಿ ಫಾಲೋ ಮಾಡುತ್ತಿದ್ದಾರೆ.

  • ಭಾರತ – ಶ್ರೀಲಂಕಾ ಹೊಸ ಇಂಧನ ಒಪ್ಪಂದ

    ಭಾರತ – ಶ್ರೀಲಂಕಾ ಹೊಸ ಇಂಧನ ಒಪ್ಪಂದ

    ನವದೆಹಲಿ: ಭಾರತ ಹಾಗೂ ಶ್ರೀಲಂಕಾ ಜಂಟಿಯಾಗಿ ಅಭಿವೃದ್ಧಿಯೊಂದನ್ನು ಕಾರ್ಯಗತಗೊಳಿಸುವ ಒಪ್ಪಂದ ನಡೆಸಿದೆ. ಟ್ರಿಂಕೋಮಲಿ ತೈಲ ಟ್ಯಾಂಕ್ ಫಾರ್ಮ್ ಅನ್ನು ಜಂಟಿಯಾಗಿ ಅಭಿವೃದ್ಧಿ ಪಡಿಸಲು ಗುರುವಾರ ಭಾರತ ಹಾಗೂ ಶ್ರೀಲಂಕಾ ಮಾತುಕತೆ ನಡೆಸಿದೆ.

    ಶ್ರೀಲಂಕಾ ಕ್ಯಾಬಿನೆಟ್ ಟ್ರಿಂಕೋಮಲಿ ಟ್ಯಾಂಕ್ ಫಾರ್ಮ್‌ಗಳ ಅಭಿವೃದ್ಧಿಗೆ ಒಪ್ಪಿಗೆ ನೀಡಿದೆ. ಇಂಧನ ಭದ್ರತೆಗೆ ಶ್ರೀಲಂಕಾದೊಂದಿಗಿನ ನಮ್ಮ ದ್ವಿಪಕ್ಷೀಯ ಸಹಕಾರ ಮುಖ್ಯವಾಗಿದೆ. ಟ್ರಿಂಕೋಮಲಿ ಟ್ಯಾಂಕ್ ಫಾರ್ಮ್‌ನ ಆಧುನೀಕರಣಕ್ಕೆ ಶ್ರೀಲಂಕಾ ಸರ್ಕಾರದೊಂದಿಗೆ ನಾವು ಮಾತುಕತೆ ನಡೆಸುತ್ತಿದ್ದೇವೆ. ಇದು ಇಂಧನ ಸಂಗ್ರಹಣೆಯೊಂದಿಗೆ ದ್ವಿಪಕ್ಷೀಯ ಭದ್ರತೆ ಹೆಚ್ಚಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದರು. ಇದನ್ನೂ ಓದಿ: ನನ್ನ ಹೆಸರು Kovid, ಆದ್ರೆ ನಾನು ವೈರಸ್ ಅಲ್ಲ: ಬೆಂಗಳೂರು ಉದ್ಯಮಿ

    ಸೋಮವಾರ ನಡೆದ ವರ್ಷದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಭಾರತ ಹಾಗೂ ಶ್ರೀಲಂಕಾ ಜಂಟಿಯಾಗಿ ಅಭಿವೃದ್ಧಿ ಯೋಜನೆಯನ್ನು ಜಾರಿಗೆ ತರಲು ಒಪ್ಪಂದ ನಡೆಸಿದೆ ಎಂದು ಸರ್ಕಾರಿ ಮಾಹಿತಿ ಇಲಾಖೆ ಹೊರಡಿಸಿದ ಮಾಹಿತಿಯಲ್ಲಿ ತಿಳಿಸಿದೆ.

    ಶ್ರೀಲಂಕಾ ಕ್ಯಾಬಿನೆಟ್ ಇತರ ಎರಡು ಪ್ರಸ್ತಾಪಗಳನ್ನು ಅಂಗೀಕರಿಸಿದೆ. ಅಶೋಕ್ ಲೇಲ್ಯಾಡ್ ಶ್ರೀಲಂಕಾಗೆ 500 ಹೊಸ ಬಸ್‌ಗಳನ್ನು ಒದಗಿಸುವ ಬಿಡ್ ಅನ್ನು ಗೆದ್ದಿದೆ ಹಾಗೂ ಶ್ರೀಲಂಕಾ ಪೊಲೀಸ್ ಪಡೆ ಮಹೀಂದ್ರಾ ಕಂಪನಿಯಿಂದ 750 ಜೀಪ್‌ಗಳನ್ನು ಖರೀದಿಸಲಿದೆ ಎಂದು ಶ್ರೀಲಂಕಾ ಇಲಾಖೆಯ ಅಧಿಕೃತ ಮಾಹಿತಿಯಲ್ಲಿ ತಿಳಿಸಿದೆ. ಇದನ್ನೂ ಓದಿ: ಇಂದು ರಾತ್ರಿ 8 ಗಂಟೆಯಿಂದ್ಲೇ ಸಿಗಲ್ಲ ಮದ್ಯ – ಎಣ್ಣೆ ಪಾರ್ಸೆಲ್‍ಗೂ ನೋ ಪರ್ಮಿಷನ್

  • ಪರ್ಸಂಟೇಜ್ ಆರೋಪ – ನನಗೂ, ಪಕ್ಷಕ್ಕೂ ಸಂಬಂಧವಿಲ್ಲದ ವಿಚಾರ ಅಂದ್ರು ಡಿಕೆಶಿ

    ಪರ್ಸಂಟೇಜ್ ಆರೋಪ – ನನಗೂ, ಪಕ್ಷಕ್ಕೂ ಸಂಬಂಧವಿಲ್ಲದ ವಿಚಾರ ಅಂದ್ರು ಡಿಕೆಶಿ

    ಬೆಂಗಳೂರು: ನನಗೂ, ಕೈ ನಾಯಕರ ಆರೋಪಕ್ಕೂ ಸಂಬಂಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸ್ಪಷ್ಟವಾಗಿ ಹೇಳಿದ್ದಾರೆ.

    ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ವಿರುದ್ಧದ ಪರ್ಸಂಟೇಜ್ ಆರೋಪ ಸಂಬಂಧ ಮಾತನಾಡಿದ ಡಿಕೆಶಿ, ಬೆಳಗ್ಗೆಯಿಂದ ಕೆಲವು ವಿಚಾರಗಳ ಬಗ್ಗೆ ಭಾರೀ ಚರ್ಚೆಯಾಗ್ತಿದೆ. ಮಾಧ್ಯಮಗೋಷ್ಠಿಯ ಸಂದರ್ಭದಲ್ಲಿ ಕೆಲವು ಆಂತರಿಕವಾದ ಸಂಭಾಷಣೆಗಳು ನಡೆದವು ಎಂಬುದನ್ನು ತೋರಿಸಿದ್ದೀರಿ ಎಂದು ಆರಂಭಿಸಿದರು.

    ಪಕ್ಷ ಶಿಸ್ತನ್ನು ಬಹಳ ಗಮನದಲ್ಲಿಟ್ಟುಕೊಂಡು ಶಿಸ್ತು ಪಾಲನಾ ಕಮಿಟಿ ಏನು  ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತದೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಕೈ ನಾಯಕರು ಹೇಳಿರುವ ವಿಚಾರದ ಕುರಿತು ನನಗೂ, ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲದೇ ಇರುವಂತಹ ವಿಚಾರವಾಗಿದೆ. ಈಗಾಗಲೇ ಉಗ್ರಪ್ಪನವರು ಪ್ರೆಸ್ ಮೀಟ್ ಏನು ಹೇಳಬೇಕೋ ಹೇಳಿದ್ದಾರೆ. ಅವರೇ ನಿಮಗೆ ಉತ್ತರ ಕೊಟ್ಟಿದ್ದಾರೆ ಎಂಬುದನ್ನು ಭಾವಿಸಿದ್ದೇನೆ ಎಂದರು. ಇದನ್ನೂ ಓದಿ: ಡಿಕೆಶಿಯನ್ನು 4 ದಶಕಗಳಿಂದ ಬಲ್ಲೆ, ಒಬ್ಬ ಒಳ್ಳೆಯ ಆಡಳಿತಗಾರ: ಉಗ್ರಪ್ಪ

    ಇದೇ ವೇಳೆ ಮಾಧ್ಯಮದ ಮೇಲೆ ಗೂಬೆ ಕೂರಿಸಿದ ಉಗ್ರಪ್ಪ ಅವರ ಬಗ್ಗೆ ಪ್ರಶ್ನೆ ಮಾಡಿದಾಗ, ನಾನು ಮೀಡಿಯಾ ತಪ್ಪು ಅಂತ ಯಾಕೆ ಹೇಳಿ. ನಾವು ಮಾತಾಡಿದ್ದನ್ನು ನೀವು ತೋರಿಸಿದ್ದೀರಿ. ಈ ಹಿಂದೆ ಯಡಿಯೂರಪ್ಪ ಹಾಗೂ ಅನಂತ್ ಕುಮಾರ್ ಮಾತಾಡಿದ್ರು, ತೋರಿಸಿದ್ದೀರಿ. ಇದೀಗ ಇವರು ಮಾತಾಡಿದ್ದಾರೆ ನೀವು ತೋರಿಸಿದ್ದೀರಿ. ಆದರೆ ನನಗೂ ಇದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಭ್ರಷ್ಟಾಚಾರ ಮುಕ್ತವಾಗಲಿ ಅನ್ನೋ ಕಾಳಜಿ ಇದ್ರೆ ಉಗ್ರಪ್ಪ ದೂರು ನೀಡಲಿ: ಆರಗ ಜ್ಞಾನೇಂದ್ರ

    ರಾಜಕಾರಣದಲ್ಲಿ ಚಪ್ಪಾಳೆ ಹೊಡೆಯುವವರು, ಜೈಕಾರ, ಮೊಟ್ಟೆ ಎಸೆಯುವವರು ಹೀಗೆ ಹಲವು ರೀತಿಯ ಜನ ಇದ್ದಾರೆ. ಯಾವ ಜಗಳನೂ ಇಲ್ಲ. ನಿಮ್ಮ ಆಪ್ತ ಸಲೀಂ ಹೇಳಿರುವುದು ಎಷ್ಟು ಸರಿ. ಇಂಟರ್ನಲ್ ಚರ್ಚೆಯಾಗಿದೆ ಹೊರತು ಬಹಿರಂಗ ಹೇಳಿಕೆ ನೀಡಿಲ್ಲ. ಪರ್ಸೆಂಟೇಜ್ ವಿಚಾರದಲ್ಲಿ ಭಾಗಿಯಾಗಿಲ್ಲ. ಅದರ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಗೃಹ ಸಚಿವರು ದೂರು ನೀಡಲು ಹೇಳಿದ್ದಾರೆ ಅಂತೆ. ಅವರೇ ಸುಮೊಟೋ ಕೇಸ್ ದಾಖಲಿಸಿಕೊಂಡರೆ ಒಳ್ಳೆಯದು ಎಂದು ತಿಳಿಸಿದರು. ಇದನ್ನೂ ಓದಿ: ಕೈ ನಾಯಕರಿಂದ್ಲೇ ಡೀಲ್ ರಹಸ್ಯ ಬಯಲು – ಡಿಕೆಶಿಗೆ ಬಿಜೆಪಿ ತಿರುಗೇಟು

  • ನಾಮಪತ್ರ ವಾಪಸ್ ಪಡೆಯಲು 3.5 ಕೋಟಿ ರೂ. ಪಡೆದ್ರಾ ಮುದ್ದಹನುಮೇಗೌಡ?

    ನಾಮಪತ್ರ ವಾಪಸ್ ಪಡೆಯಲು 3.5 ಕೋಟಿ ರೂ. ಪಡೆದ್ರಾ ಮುದ್ದಹನುಮೇಗೌಡ?

    ತುಮಕೂರು: ಮೈತ್ರಿ ಅಭ್ಯರ್ಥಿ ವಿರುದ್ಧ ಬಂಡಾಯ ಎದ್ದಿದ್ದ ಸಂಸದ ಮುದ್ದಹನುಮೇಗೌಡ ಹಾಗೂ ಮಾಜಿ ಶಾಸಕ ರಾಜಣ್ಣ ನಾಮಪತ್ರ ವಾಪಸ್ ಪಡೆಯಲು ತಲಾ 3.5 ಕೋಟಿ ಹಣ ಪಡೆದಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ಈ ಬಗ್ಗೆ ಮಾತುಕತೆ ನಡೆಸಿರುವ ಆಡಿಯೋವೊಂದು ಇದೀಗ ವೈರಲ್ ಆಗಿದೆ.

    ಹೌದು. ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಬೆಂಬಲಿಗ ದರ್ಶನ್, ಕಾಂಗ್ರೆಸ್ ಕಾರ್ಯಕರ್ತನೊಂದಿಗೆ ಸಂಭಾಷಣೆ ನಡೆಸಿದ ಆಡಿಯೋ ಈಗ ಲೀಕ್ ಆಗಿದೆ. ಈ ಸಂಭಾಷಣೆಯಲ್ಲಿ ರಾಜಣ್ಣ ಮತ್ತು ಮುದ್ದಹನುಮೇಗೌಡ ತಲಾ 3.5 ಕೋಟಿ ರೂ. ಪಡೆದಿದ್ದಾರೆ. ಆದರೂ ಪ್ರಚಾರಕ್ಕೆ ಬಾರದೆ ಮೋಸ ಮಾಡಿದ್ದಾರೆ ಎಂದು ಆಡಿಯೋದಲ್ಲಿ ಹೇಳಿದ್ದಾರೆ.

    ದೇವೇಗೌಡರು ಗೆದ್ದರೆ ಡಿಸಿಎಂ ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಆಗುತ್ತಾರೆ. ಸಚಿವ ರೇವಣ್ಣ ಡಿಸಿಎಂ ಆಗುತ್ತಾರೆ. ಸಿಎಂ ಕುಮಾರಸ್ವಾಮಿ ಅವರು ಆರೋಗ್ಯ ಸಮಸ್ಯೆಯಿಂದ ವಿಶ್ರಾಂತಿಯಲ್ಲಿ ಇರಲಿದ್ದಾರೆ ಎಂದೆಲ್ಲ ದರ್ಶನ್ ಮಾತನಾಡಿದ್ದಾರೆ. ಜೊತೆಗೆ ದೇವೇಗೌಡರು ಸೋತರೆ ರಾಜಣ್ಣ ಮತ್ತು ಮುದ್ದಹನುಮೇಗೌಡರು ಪಕ್ಷದಿಂದ ಅಮಾನತು ಆಗ್ತಾರೆ ಎಂದು ಸಂಭಾಷಣೆ ನಡೆಸಿದ್ದಾರೆ.

    ಈ ಸಂಭಾಷಣೆಯ ಆಡಿಯೋ ಈಗ ಬಹಿರಂಗವಾಗಿದ್ದು, ಮತ್ತೊಂದು ವಿವಾದಕ್ಕೆ ದರ್ಶನ್ ಸಿಲುಕಿಕೊಂಡಿದ್ದಾರೆ. ಇವರು ಗುರುವಾರವಷ್ಟೆ ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿ ಜಾರಕಿಹೊಳಿ ಬೆಂಬಲಿಗರಿಂದ ಥಳಿಸಿಕೊಂಡಿದ್ದು, ಇದೀಗ ಇನ್ನೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

    ಸಂಭಾಷಣೆಯ ಆಡಿಯೋ ಇಲ್ಲಿದೆ:

  • ಯುಪಿಎ ಸರ್ಕಾರದ ಹೆಲಿಕಾಪ್ಟರ್ ಹಗರಣದ ಮಧ್ಯವರ್ತಿ ಬಂಧನ: ಏನಿದು ಹಗರಣ?

    ಯುಪಿಎ ಸರ್ಕಾರದ ಹೆಲಿಕಾಪ್ಟರ್ ಹಗರಣದ ಮಧ್ಯವರ್ತಿ ಬಂಧನ: ಏನಿದು ಹಗರಣ?

    -ರಾತ್ರೋರಾತ್ರಿ ದುಬೈನಿಂದ ದೆಹಲಿಗೆ ಕರೆತಂದ ಸಿಬಿಐ ಅಧಿಕಾರಿಗಳು

    ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣದ ಶಂಕಿತ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್‍ನನ್ನು ಸಿಬಿಐ ಮಂಗಳವಾರ ತಡರಾತ್ರಿ ಭಾರತಕ್ಕೆ ಕರೆದುತಂದಿದ್ದು, ವಿಚಾರಣೆ ಆರಂಭಿಸಿದೆ.

    ಬ್ರಿಟನ್ ಪ್ರಜೆ ಕ್ರಿಶ್ಚಿಯನ್ ಮೈಕಲ್‍ ಜೇಮ್ಸ್ ನನ್ನು ಯುಎಇ ಗಡಿಪಾರು ಮಾಡಿದ್ದು, ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಯ ಸಿಬಿಐ ಮುಖ್ಯಕಚೇರಿಗೆ ಕರೆತರಲಾಗಿದೆ.

    ಗಡೀಪಾರು ಮಾಡಿದ್ದು ಯಾಕೆ?
    ಬಿಟ್ರನ್ ಬಿಟ್ಟು ದುಬೈನಲ್ಲಿ ಮೈಕಲ್ ನೆಲೆಸಿದ್ದ. ಈತನನ್ನು ಗಡಿಪಾರು ಮಾಡುವಂತೆ ಭಾರತ ಸರ್ಕಾರ ಯುಎಇಗೆ ಮನವಿ ಸಲ್ಲಿಸಿತ್ತು. ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್ ಸಹ ಜಾರಿ ಮಾಡಿತ್ತು. ಇದನ್ನು ವಿರೋಧಿಸಿ ಮೈಕಲ್ ದುಬೈ ಕೋರ್ಟ್ ಮೊರೆ ಹೋಗಿದ್ದ. ಆದರೆ ಕೋರ್ಟ್ ಆತನ ಕೋರಿಕೆಯನ್ನು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಯುಎಇ ಸರ್ಕಾರ ಮೈಕಲ್ ನನ್ನು ಗಡಿಪಾರು ಮಾಡಿತ್ತು.

    ಏನಿದು ಪ್ರಕರಣ?
    ವಿವಿಐಪಿ ವ್ಯಕ್ತಿಗಳ ಪ್ರಯಾಣಕ್ಕೆ ಇಟಲಿಯ ಫಿನ್‍ಮೆಕ್ಯಾನಿಕಾ ಕಂಪೆನಿಯ ಅಂಗಸಂಸ್ಥೆಯಾದ ಅಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿಯ ಜೊತೆ 2010ರಲ್ಲಿ 12 ಹೆಲಿಕಾಪ್ಟರ್ ಖರೀದಿಸಲು ಯುಪಿಎ ಸರ್ಕಾರ 3,600 ಕೋಟಿ ರೂ. ಒಪ್ಪಂದ ಮಾಡಿಕೊಂಡಿತ್ತು. 2013ರಲ್ಲಿ ಈ ಲಂಚದ ಆರೋಪ ಕೇಳಿ ಬಂದ ಕಾರಣ ಸರ್ಕಾರ 2014ರಲ್ಲಿ ಒಪ್ಪಂದವನ್ನು ರದ್ದು ಮಾಡಿತ್ತು. ಹಗರಣ ಬಯಲಿಗೆ ಬಂದ ಬಳಿಕ 1818 ಕೋಟಿ ರೂ. ಭಾರತ ಮರು ವಶಪಡಿಸಿಕೊಂಡಿದೆ. ಈ ಮೂಲಕ ಒಟ್ಟು 2,068 ಕೋಟಿ ರೂ. ವಾಪಸ್ ಪಡೆದುಕೊಳ್ಳುವಲ್ಲಿ ಭಾರತ ಯಶಸ್ವಿಯಾಗಿತ್ತು. ಈ ನಿಟ್ಟಿನಲ್ಲಿ ಒಪ್ಪಂದ ಕುದುರಿಸುವ ಉದ್ದೇಶದಿಂದ ಆಗಸ್ಟಾ ವೆಸ್ಟ್‍ಲ್ಯಾಂಡ್‍ನಿಂದ 225 ಕೋಟಿ ರೂ. ಹಣವನ್ನು ಮೈಕಲ್ ಪಡೆದಿದ್ದ ಎನ್ನುವ ಆರೋಪ ಕೇಳಿಬಂದಿದೆ. ಆದರೆ ಆ ಹಣವನ್ನು ಮೈಕಲ್ ಭಾರತದ ಕೆಲವು ರಾಜಕಾರಣಿಗಳು ಮತ್ತು ಅಧಿಕಾರಿಗಳಿಗೆ ಲಂಚ ನೀಡುವ ಉದ್ದೇಶದಿಂದ ಪಡೆದಿದ್ದ ಎನ್ನಲಾಗಿದೆ.

    ಮೈಕಲ್ ಡೈರಿಯಲ್ಲಿ ಗಣ್ಯರ ಹೆಸರು:
    ಈ ಖರೀದಿಯಲ್ಲಿ ಅವ್ಯವಹಾರ ವಾಸನೆ ಹೊಡೆದು ಭಾರೀ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಯುಪಿಎ ಸರ್ಕಾರ 2014ರ ಜನವರಿಯಲ್ಲಿ ಒಪ್ಪಂದವನ್ನು ರದ್ದು ಮಾಡಿಕೊಂಡಿತ್ತು. ಇತ್ತ ಮೈಕಲ್ ಡೈರಿಯಲ್ಲಿ ಕಾಂಗ್ರೆಸ್ಸಿನ ಪ್ರಭಾವಿ ನಾಯಕರ ಹೆಸರು ಸಿಕ್ಕಿದೆ. ಅಷ್ಟೇ ಅಲ್ಲದೆ ಹಲವರಿಗೆ ಹಣ ನೀಡಿದ್ದರ ವಿವರವೂ ಅದರಲ್ಲಿದ್ದು, ಯಾರಿಗೆ ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.

    ಪ್ರಕರಣದ ಬೆನ್ನು ಬಿದ್ದಿದ್ದ ಸಿಬಿಐ ಹಾಗೂ ಜಾರಿನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಕ್ರಿಶ್ಚಿಯನ್ ಮೈಕಲ್‍ಗಾಗಿ ಬಲೆ ಬೀಸಿದ್ದರು. ದುಬೈನಲ್ಲಿ ಮೈಕಲ್ ಇದ್ದಾನೆ ಎನ್ನುವ ಮಾಹಿತಿ ಲಭ್ಯವಾಗುತ್ತಿದ್ದಂತೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಯುಎಇ ಅಬ್ದಿಲ್ಲಾ ಬಿನ್ ಜಾಯೆದ್ ಅವರ ಜೊತೆಗೆ ಮಾತುಕತೆ ನಡೆಸಿದ್ದರು. ಇದು ಯಶಸ್ವಿಯಾಗಿದ್ದು, ಬುಧವಾರ ರಾತ್ರಿಯೇ ದುಬೈನಿಂದ ಆರೋಪಿಯನ್ನು ಕರೆತರಲಾಗಿದೆ.

    ಎಸ್‍ಪಿ ತ್ಯಾಗಿ ಬಂಧನವಾಗಿತ್ತು:
    ಈ ಖರೀದಿ ಅಕ್ರಮದಲ್ಲಿ ಎಸ್‍ಪಿ ತ್ಯಾಗಿ ಶಾಮೀಲಾಗಿರುವುದಕ್ಕೆ ಸಾಕ್ಷ್ಯಗಳಿವೆ ಎಂದು ಇಟಲಿಯ ಮಿಲಾನ್ ಕೋರ್ಟ್ 2016ರ ಏಪ್ರಿಲ್ 8ರಂದು ತೀರ್ಪು ನೀಡಿತ್ತು. ಈ ತೀರ್ಪು ಬಂದ ಬಳಿಕ ನಿವೃತ್ತ ವಾಯುಸೇನಾ ಮುಖ್ಯಸ್ಥ ಎಸ್‍ಪಿ ತ್ಯಾಗಿ ಅವರನ್ನು ಸಿಬಿಐ ಬಂಧಿಸಿತ್ತು. ಖರೀದಿ ಒಪ್ಪಂದದಲ್ಲಿ ಕಿಕ್ ಬ್ಯಾಕ್ ಪಡೆದುಕೊಂಡು ಹಗರಣದಲ್ಲಿ ಶಾಮೀಲಾಗಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ತ್ಯಾಗಿ ಅವರನ್ನು ಬಂಧಿಸಿತ್ತು. ತ್ಯಾಗಿ ಜೊತೆ ದೆಹಲಿ ಮೂಲದ ವಕೀಲ ಗೌತಮ್ ಖಟಿಯನ್, ಎಸ್‍ಪಿ ತ್ಯಾಗಿ ಅವರ ಸಂಬಂಧಿ ಸಂಜೀವ್ ತ್ಯಾಗಿ ಅವರನ್ನು ಬಂಧಿಸಲಾಗಿತ್ತು.

    ತ್ಯಾಗಿ ಮೇಲಿದ್ದ ಆರೋಪ ಏನು?
    ವಿವಿಐಪಿ ಹೆಲಿಕಾಪ್ಟರ್ ಖರೀದಿ ಸಂಬಂಧ ಸರ್ಕಾರ ಕರೆದ ಹರಾಜು ಪ್ರಕ್ರಿಯೆಯಲ್ಲಿ ಹೆಲಿಕಾಪ್ಟರ್ ಹಾರಾಟದ ಎತ್ತರದ ಮಿತಿಯನ್ನು 6 ಸಾವಿರ ಮೀಟರ್ ನಿಂದ 4,500 ಮೀಟರ್ ಗೆ(15,000 ಅಡಿಗಳಿಗೆ) ವಾಯುಸೇನೆ ಇಳಿಸಿತ್ತು. ಆಗಸ್ಟಾ ಕಂಪನಿ ನೆರವಾಗುವ ಉದ್ದೇಶದಿಂದಲೇ ಎಸ್‍ಪಿ ತ್ಯಾಗಿ ಅವರು ಎತ್ತರದ ಮಿತಿಯನ್ನು ಇಳಿಸಿದ್ದಾರೆ. ಅಷ್ಟೇ ಅಲ್ಲದೇ ಈ ಒಪ್ಪಂದಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿ ಜೊತೆ ಎಸ್‍ಪಿ ತ್ಯಾಗಿ ಮಾತುಕತೆ ನಡೆಸಿ ಕಿಕ್‍ಬ್ಯಾಕ್ ಪಡೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರೆಡ್ಡಿ ಬಂಧನ ತಪ್ಪಿಸಿದ್ದು ಸಚಿವ ರಮೇಶ್ ಜಾರಕಿಹೊಳಿ..?

    ರೆಡ್ಡಿ ಬಂಧನ ತಪ್ಪಿಸಿದ್ದು ಸಚಿವ ರಮೇಶ್ ಜಾರಕಿಹೊಳಿ..?

    ಬೆಂಗಳೂರು: ಅಂಬಿಡೆಂಟ್ ಕಂಪೆನಿ ಜೊತೆ 20 ಕೋಟಿ ಡೀಲ್ ಕೇಸಲ್ಲಿ ಜೈಲಿಗೆ ಹೋಗಿದ್ದ ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿಯಿಂದ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾಗುತ್ತಾ ಅನ್ನೋ ಪ್ರಶ್ನೆಯೊಂದು ಇದೀಗ ರಾಜಕೀಯ ವಲಯದಲ್ಲಿ ಎದ್ದಿದೆ.

    ಜನಾರ್ದನ ರೆಡ್ಡಿ ಬಂಧನ ತಪ್ಪಿಸಲು ಕಾಂಗ್ರೆಸ್‍ ನ ಪ್ರಭಾವಿ ಸಚಿವ ರಮೇಶ್ ಜಾರಕಿಹೊಳಿ ಯತ್ನಿಸಿದ್ದಾರೆ ಅನ್ನೋ ಮಾಹಿತಿಯೊಂದು ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ.

    ರೆಡ್ಡಿ ಬಂಧನಕ್ಕೆ ಬಲೆ ಬೀಸುತ್ತಲೇ ರಮೇಶ್ ಜಾರಕಿಹೊಳಿ ಮೂಲಕ ಸಿಎಂ ಮೇಲೆ ರಾಮುಲು ಒತ್ತಡ ಹೇರಿದ್ದಾರಂತೆ. ಸಿಎಂ ಕುಮಾರಸ್ವಾಮಿ ಜೊತೆ ಆತ್ಮಿಯ ಒಡನಾಟ ಹೊಂದಿರುವ ರಮೇಶ್ ಜಾರಕಿಹೊಳಿಯಿಂದ ಈ ಒತ್ತಡ ತಂತ್ರ ಹೂಡಲಾಗಿದೆ. ಆದರೆ ರೆಡ್ಡಿ ಪ್ರಕರಣಕ್ಕೂ ಸರ್ಕಾರಕ್ಕೂ ಸಂಬಂಧ ಇಲ್ಲ. ನೀವು ಸುಮ್ಮನಿರಿ ಅಂತ ಕುಮಾರಸ್ವಾಮಿ ಹೇಳಿದ್ದು, ಕೊನೆಗೆ ಡಿಸಿಎಂ ಪರಮೇಶ್ವರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮೂಲಕ ಒತ್ತಡ ಹೇರಲು ಪ್ರಯತ್ನ ಮಾಡಲಾಗಿದೆ ಅಂತ ಹೇಳಲಾಗುತ್ತಿದೆ.

    ರೆಡ್ಡಿ ಅರೆಸ್ಟ್ ಆದ್ರೆ ರಾಮುಲು ಅವರ ವಾಲ್ಮೀಕಿ ಸಮುದಾಯ ಮುನಿಸಿಕೊಳ್ಳಬಹುದು ಎಂದು ಪರೋಕ್ಷ ಬೆದರಿಕೆ ಹಾಕಲಾಗಿತ್ತು. ನಮಗೂ ಕಷ್ಟ ಆಗುತ್ತೆ. ಮುಂದಿನ ದಿನಗಳಲ್ಲಿ ಇದು ಬೇರೆ ಬೆಳವಣಿಗೆಗಳಿಗೂ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಆದರೆ ಇದ್ಯಾವುದಕ್ಕೂ ಮುಖ್ಯಮಂತ್ರಿಯವರು ಸೊಪ್ಪು ಹಾಕಿಲ್ಲ. ಹೀಗಾಗಿ ರಮೇಶ್ ಜಾರಕಿಹೊಳಿ ಪ್ರಯತ್ನಕ್ಕೂ ಯಶಸ್ಸು ಸಿಕ್ಕಿಲ್ಲ. ಈ ಬೆಳವಣಿಗೆಯಿಂದ ಮುಂದಿನ ದಿನಗಳಲ್ಲಿ ದೊಸ್ತಿ ಸರ್ಕಾರಕ್ಕೆ ಕಂಟಕ ಎದುರಾಗುತ್ತಾ ಅನ್ನೋ ಚರ್ಚೆಗಳು ಆರಂಭವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನವಭಾರತದ ದೇವಾಲಯ ಎಚ್‍ಎಎಲ್‍ಗೆ ಕೇಂದ್ರದಿಂದ ಅವಮಾನ: ರಾಹುಲ್ ಗಾಂಧಿ

    ನವಭಾರತದ ದೇವಾಲಯ ಎಚ್‍ಎಎಲ್‍ಗೆ ಕೇಂದ್ರದಿಂದ ಅವಮಾನ: ರಾಹುಲ್ ಗಾಂಧಿ

    ಬೆಂಗಳೂರು: ರಫೇಲ್ ಯುದ್ಧ ವಿಮಾನದ ಒಪ್ಪಂದವನ್ನು ಬೇರೆ ಸಂಸ್ಥೆಗೆ ನೀಡುವ ಮೂಲಕ ದೇಶದ ರಕ್ಷಣಾ ವ್ಯವಸ್ಥೆಗೆ ಮಹತ್ವದ ಕೊಡುಗೆಗಳನ್ನು ನೀಡಿದ್ದ ಎಚ್‍ಎಎಲ್ ಸಂಸ್ಥೆಗೆ ಮೋದಿ ಸರ್ಕಾರ ಅವಮಾನ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

    ನಿವೃತ್ತ ಎಚ್‍ಎಎಲ್ ನೌಕಕರೊಂದಿಗಿನ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಚ್‍ಎಎಲ್ ಸಂಸ್ಥೆ ಸುಮಾರು 78 ವರ್ಷಗಳ ಹಳೆಯ ಸಂಸ್ಥೆಯಾಗಿದ್ದು, ಹಲವು ಮಾದರಿಯ ವಿಮಾನಗಳು, ಹೆಲಿಕಾಪ್ಟರ್ ಗಳನ್ನು ತಯಾರಿಸುತ್ತಿದೆ. ಅಲ್ಲದೇ ದೇಶದ ವೈಮಾನಿಕ ರಂಗಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿದೆ. ದೇಶದ ಬೆನ್ನೆಲುಬು ನಮ್ಮ ರಕ್ಷಣಾ ಕ್ಷೇತ್ರ. ಆದರೆ ಕೇಂದ್ರ ಸರ್ಕಾರ ರಫೇಲ್ ಯುದ್ಧ ವಿಮಾನದ ಒಪ್ಪಂದವನ್ನು ಬೇರೆ ಸಂಸ್ಥೆಗೆ ನೀಡಿದೆ. ಝೀರೋ ಪರ್ಸೆಂಟ್ ಅನುಭವವಿಲ್ಲದವರಿಗೆ ಟೆಂಡರ್ ನೀಡುವ ಮೂಲಕ ಎಚ್‍ಎಎಲ್ ಸಂಸ್ಥೆಗೆ ಕೇಂದ್ರ ಅವಮಾನ ಮಾಡಿದೆ ಎಂದು ದೂರಿದರು.

    ನಾನು ನಿಮ್ಮೊಂದಿಗೆ ಯಾವುದೇ ರಾಜಕೀಯ ಭಾಷಣ ಮಾಡಲು ಬಂದಿಲ್ಲ. ಕೇವಲ ಕೇಂದ್ರ ಸರ್ಕಾರ ಭ್ರಷ್ಟಚಾರದ ಬಗ್ಗೆ ಮಾತನಾಡಲು ನನಗೆ ವೇದಿಕೆ ಸಿಕ್ಕಿದೆ. ಎಚ್‍ಎಎಲ್ ದೇಶಕ್ಕೆ ನೀಡಿದ್ದ ಕೊಡುಗೆಗಳ ಬಗ್ಗೆ ಮಾತನಾಡಲು ನಾನು ಬಂದಿದ್ದೇನೆ. ಇಲ್ಲಿ ಸೇರಿರುವ ನಿಮಗೆಲ್ಲ ಅಭಿನಂದನೆಗಳು. ಭಾರತದ ವೈಮಾನಿಕ ಕ್ಷೇತ್ರಕ್ಕೆ ತನ್ನದೆಯಾದ ಕೊಡುಗೆಯನ್ನು ನೀಡಿರುವ ಸಂಸ್ಥೆ ಹಾಗೂ 70 ವರ್ಷಗಳ ನೌಕರರ ಶ್ರಮಕ್ಕೆ ಕೇಂದ್ರ ಸರ್ಕಾರ ಅಪಮಾನ ಮಾಡಿದೆ. ಎಚ್‍ಎಎಲ್ ರಫೇಲ್ ಯುದ್ಧ ವಿಮಾನ ತಯಾರಿಸುವ ಸಾಕಷ್ಟು ಸಾಮರ್ಥ್ಯ ಹೊಂದಿದೆ. ಆದರೆ ಪ್ರಧಾನಿ ಮೋದಿಯವರು ಅನಿಲ್ ಅಂಬಾನಿಯವರಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಮತ್ತೊಮ್ಮೆ ಆರೋಪಿಸಿದರು.

    ಈ ಒಪ್ಪಂದದಲ್ಲಿ ಅನಿಲ್ ಅಂಬಾನಿಗೆ ಯಾವುದೇ ಅನುಭವವಿಲ್ಲ. ಎಚ್‍ಎಎಲ್ ಸಂಸ್ಥೆ ನಷ್ಟದಲ್ಲಿಲ್ಲ, ಆದರೆ ರಿಲಯನ್ಸ್ ನಷ್ಟದಲ್ಲಿದೆ. ಅನಿಲ್ ಅಂಬಾನಿಗಾಗಿ ಎಚ್‍ಎಎಲ್ ಸಂಸ್ಥೆಯನ್ನು ನಾಶ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಯವರು ಅನಿಲ್ ಅಂಬಾನಿ ಒಡೆತನದ ಸಂಸ್ಥೆಗೆ ರಫೇಲ್ ಒಪ್ಪಂದ ನೀಡುವ ಮೂಲಕ ದೇಶದ ಸಾವಿರಾರು ಜನರ ಉದ್ಯೋಗವನ್ನು ಕಿತ್ತುಕೊಂಡಿದ್ದಾರೆ. ಅಲ್ಲದೇ 35,000 ಕೋಟಿ ರೂಪಾಯಿ ಕೊಟ್ಟು ಒಪ್ಪಂದ ಮಾಡುವಲ್ಲಿ ಪ್ರಧಾನಿ ಉತ್ಸುಕರಾಗಿದ್ದಾರೆ. ಸತ್ಯ ಇವತ್ತು ಕೇಂದ್ರದವರಿಗೆ ಬೇಕಾಗಿಲ್ಲ. ಮಾಧ್ಯಮಗಳು ಕೂಡ ಸತ್ಯವನ್ನ ಮರೆಮಾಚುತ್ತಿವೆ ಎಂದು ಆರೋಪಿಸಿದರು.

    ಎಚ್‍ಎಎಲ್ ಅನ್ನು ದೇವಾಲಯಕ್ಕೆ ಹೋಲಿಸಿ ಮಾತನಾಡಿದ ಅವರು, ಇದು ನವಭಾರತದ ದೇವಾಲಯವಿದ್ದಂತೆ ಆದರೆ ಇದನ್ನು ಪ್ರೀತಿಸಲು ನಮ್ಮಿಂದ ಆಗುತ್ತಿಲ್ಲ. 70 ವರ್ಷಗಳ ಸಾಧನೆ ಮತ್ತು ಮಹತ್ವದ ಕೆಲಸವನ್ನು ಯಾರೂ ಗಮನಿಸುತ್ತಿಲ್ಲ. ಕೇಂದ್ರ ಸರ್ಕಾರದ ಹಿರಿಯರೊಬ್ಬರು ಎಚ್‍ಎಎಲ್ ಸಾಮರ್ಥ್ಯ ವಿಲ್ಲವೆಂದು ಹೇಳುತ್ತಿದ್ದಾರೆ. ನಾನು ಅವರನ್ನು ಕೇಳುತ್ತೇನೆ ನಿಮಗಿರುವ ಸಾಮಥ್ರ್ಯವಾದರೂ ಏನು? ನಾನು ಚಿಕ್ಕವನಿದ್ದಾಗಿನಿಂದಲೂ ಎಚ್‍ಎಎಲ್ ಸಾಧನೆಗಳ ಬಗ್ಗೆ ಕೇಳಿಕೊಂಡು ಬೆಳೆದಿದ್ದೇನೆ. ಇದನ್ನು ನೋಡುವ ದೃಷ್ಟಿಕೋನ ನಮ್ಮ ಸರ್ಕಾರಕ್ಕಿಲ್ಲ. ಸರ್ಕಾರ ನಿಮ್ಮ ಬಳಿ ಕ್ಷಮೆ ಕೇಳದಿದ್ದರೆ ನಾನು ನಿಮ್ಮನ್ನು ಕ್ಷಮೆ ಕೋರುತ್ತೇನೆ. ರಫೇಲ್ ಗುತ್ತಿಗೆ ನಿಮ್ಮ ಹಕ್ಕು, ಆ ಹಕ್ಕಿಗೆ ನಿಮ್ಮ ಜೊತೆ ನಾನು ಶ್ರಮಿಸುತ್ತೇನೆ. ದಿನದ 24 ಗಂಟೆಯೂ ಹೋರಾಟ ಮಾಡಲು ನಾನು ಸಿದ್ಧನಿದ್ದೇನೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv