Tag: death sentence

  • ಪಾಕಿಸ್ತಾನ ಸತ್ಯದ ಸಮಾಧಿ ಮಾಡ್ತಿದೆ: ಅಂತಾರಾಷ್ಟ್ರೀಯ ಕೋರ್ಟ್ ನಲ್ಲಿ ಭಾರತದ ವಾದ ಹೇಗಿತ್ತು? ವಿಡಿಯೋ ನೋಡಿ

    ಪಾಕಿಸ್ತಾನ ಸತ್ಯದ ಸಮಾಧಿ ಮಾಡ್ತಿದೆ: ಅಂತಾರಾಷ್ಟ್ರೀಯ ಕೋರ್ಟ್ ನಲ್ಲಿ ಭಾರತದ ವಾದ ಹೇಗಿತ್ತು? ವಿಡಿಯೋ ನೋಡಿ

    ಹೇಗ್: 18 ವರ್ಷಗಳ ಬಳಿಕ ನೆದರ್‍ಲೆಂಡ್‍ನ ಹೇಗ್‍ನಲ್ಲಿರು ಅಂತಾರಾಷ್ಟ್ರೀಯ ಕೋರ್ಟ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿವೆ. ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರೋ ಕುಲಭೂಷಣ್ ಜಾಧವ್ ವಿಚಾರದಲ್ಲಿ ಭಾರತ ಹಾಗೂ ಪಾಕಿಸ್ತಾನ ವಾದ ಪ್ರತಿವಾದ ಮಂಡಿಸಿವೆ.

    ಭಾರತದ ಪರ ಹಿರಿಯ ವಕೀಲ ದೀಪಕ್ ಮಿತ್ತಲ್ ಹಾಗೂ ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ ವಾದ ಮಂಡಿಸಿದ್ರು. ಕೋರ್ಟ್ ವಿಚಾರಣೆಗೆ ಮುನ್ನವೇ ಜಾಧವ್ ಅವರನ್ನು ಗಲ್ಲಿಗೇರಿಸಲು ಪಾಕ್ ಪ್ರಯತ್ನಿಸ್ತಿದೆ ಅಂತಾ ಸಾಳ್ವೆ ವಾದ ಮಂಡಿಸಿದರು.

    ಮೂಲಭೂತ ಹಕ್ಕಿಗಾಗಿ ನಾವು ಹೋರಾಡುತ್ತಿದ್ದೇವೆ. ಜಾಧವ್ ಅವರನ್ನು ಬಿಡುಗಡೆ ಮಾಡಬೇಕು ಅಂತ ವಾದ ಮಂಡಿಸಿದ್ರು. ಆದರೆ ಪಾಕಿಸ್ತಾನ ಭಾರತದ ವಾದವನ್ನು ಒಪ್ಪದೇ ಮೊಂಡಾಟ ಮಾಡ್ತು. ಭಾರತ ಅಂತಾರಾಷ್ಟ್ರೀಯ ಕೋರ್ಟನ್ನ ರಾಜಕೀಯ ಥಿಯೇಟರ್ ಥರ ಬಳಸ್ತಿದೆ ಅಂತಾ ವಾದ ಮಂಡಿಸಿತು.

    ಭಾರತದ ವಾದ ಏನಿತ್ತು?
    – ಜಾಧವ್ ವಿಚಾರಣೆ ವೇಳೆ ಪಕ್ಷಪಾತ ನಡೆದಿದ್ದು, ಪಾಕಿಸ್ತಾನ ಜಾಧವ್‍ಗೆ ರಾಜತಾಂತ್ರಿಕ ನೆರವು ನೀಡಲು ನಿರಾಕರಿಸಿದೆ.
    – ಅಕ್ರಮವಾಗಿ ಜಾಧವ್ ಬಂಧಿಸಿ ವಿಯೆನ್ನಾ ಒಪ್ಪಂದ ಮುರಿದಿದೆ.
    – ಪಾಕಿಸ್ತಾನದಿಂದ ಸತ್ಯದ ಸಮಾಧಿ ಮಾಡೋ ಪ್ರಯತ್ನ ಮಾಡುತ್ತಿದೆ.
    – ಕೋರ್ಟ್ ವಿಚಾರಣೆಗೆ ಮುನ್ನವೇ ಜಾಧವ್ ಗಲ್ಲಿಗೇರಿಸಲು ಪಾಕ್ ಪ್ರಯತ್ನಿಸ್ತಿದೆ
    – ಮೂಲಭೂತ ಹಕ್ಕಿಗಾಗಿ ನಾವು ಹೋರಾಡ್ತಿದ್ದೇವೆ, ಜಾಧವ್ ಬಿಡುಗಡೆ ಮಾಡಿ

    ಪಾಕಿಸ್ತಾನದ ವಾದ ಏನು?
    – ಜಾಧವ್ ನಮ್ಮ ಬಳಿ ತಪ್ಪೊಪ್ಪಿಕೊಂಡಿದ್ದಾರೆ
    – ಜಾಧವ್ ಗಲ್ಲಿಗೇರಿಸಲು ನಮಗೆ ಆತುರ ಇಲ್ಲ
    – ಭಾರತದ ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ
    – ಭಾರತ ನ್ಯಾಯಾಲಯವನ್ನು ರಾಜಕೀಯ ನ್ಯಾಯಾಲಯವನ್ನಾಗಿ ಬಳಕೆ ಮಾಡ್ತಿದೆ
    – ರಾಜತಾಂತ್ರಿಕ ನೆರವಿಗೆ ಜಾಧವ್ ಅರ್ಹನಲ್ಲ
    – ಪಾಸ್‍ಪೋರ್ಟ್‍ನಲ್ಲಿ ಜಾಧವ್ ಅಂತಾ ಹೆಸರಿಲ್ಲ, ಮುಸ್ಲಿಂ ವ್ಯಕ್ತಿಯ ಹೆಸರು ಇದೆ

    ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಪಾಕಿಸ್ತಾನ ವಿಯೆನ್ನಾ ಒಪ್ಪಂದವನ್ನು ಮುರಿದಿದ್ದು, ನೌಕಾಪಡೆಯಿಂದ ನಿವೃತ್ತರಾದ ಬಳಿಕ ಜಾಧವ್ ಅವರು ಇರಾನ್‍ನಲ್ಲಿ ಉದ್ಯಮ ನಡೆಸುತ್ತಿದ್ದರು. ಈ ವೇಳೆ ಪಾಕಿಸ್ತಾನ ಅಪಹರಿಸಿತ್ತು. ಆದರೆ, 2016ರ ಮಾರ್ಚ್ 3ರಂದು ಅವರನ್ನು ಬಲೂಚಿಸ್ತಾನದಲ್ಲಿ ಬಂಧಿಸಿದ್ದಾಗಿ ಪಾಕಿಸ್ತಾನ ಹೇಳಿದೆ ಎಂದು ಹಿರಿಯ ವಕೀಲ ಹರೀಶ್ ಸಾಳ್ವೆ ನೇತೃತ್ವದ ವಕೀಲರ ತಂಡವು ಮೇ 8ರಂದು ಅಂತರರಾಷ್ಟ್ರೀಯ ನ್ಯಾಯಾಲಯಕ್ಕೆ ಭಾರತದ ಪರವಾಗಿ ಅರ್ಜಿ ಸಲ್ಲಿಸಿತ್ತು.

  • ನಿರ್ಭಯಾ ಗ್ಯಾಂಗ್‍ರೇಪ್: ಅಪರಾಧಿಗಳಿಗೆ ಗಲ್ಲು ಕಾಯಂ

    ನಿರ್ಭಯಾ ಗ್ಯಾಂಗ್‍ರೇಪ್: ಅಪರಾಧಿಗಳಿಗೆ ಗಲ್ಲು ಕಾಯಂ

    ನವದೆಹಲಿ: ದೇಶದೆಲ್ಲೆಡೆ ತೀವ್ರ ಚರ್ಚೆ ಮತ್ತು ಭಾರೀ ಪ್ರತಿಭಟನೆಗೆ ಕಾರಣವಾಗಿದ್ದ ದೆಹಲಿಯ ನಿರ್ಭಯಾ ಗ್ಯಾಂಗ್‍ರೇಪ್ ಮತ್ತು ಕೊಲೆ ಪ್ರಕರಣದ ನಾಲ್ಕು ಮಂದಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಕಾಯಂ ಆಗಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

    2013ರಲ್ಲಿ ದೆಹಲಿಯ ವಿಚಾರಣಾಧೀನ ನ್ಯಾಯಾಲಯ ಗಲ್ಲುಶಿಕ್ಷೆ ನೀಡಿ ಆದೇಶ ನೀಡಿತ್ತು. 2014ರಲ್ಲಿ ದೆಹಲಿ ಹೈಕೋರ್ಟ್ ಕೇಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಆದರೆ ಆರೋಪಿಗಳಾದ ಅಕ್ಷಯ್ ಠಾಕೂರ್, ವಿನಯ್ ಶರ್ಮಾ, ಪವನ್ ಗುಪ್ತಾ ಹಾಗೂ ಮುಕೇಶ್ ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

    ಇಂದು ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಅಶೋಕ್ ಭೂಷಣ್ ಹಾಗೂ ಆರ್ ಭಾನುಮತಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಗಲ್ಲು ಕಾಯಂಗೊಳಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ.

    ಏನಿದು ಪ್ರಕರಣ?
    2012ರ ಡಿಸೆಂಬರ್ 16ರಂದು ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ತನ್ನ ಸ್ನೇಹಿತನ ಜೊತೆ ಸಿನಿಮಾ ನೋಡಿ ಬರುತ್ತಿದ್ದಾಗ ಡ್ರಾಪ್ ನೆಪದಲ್ಲಿ ಕಾಮುಕರು ಬಸ್ ನಲ್ಲಿ ಹತ್ತಿಸಿದ್ದರು. ಬಳಿಕ ಬಸ್‍ನಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಿ, ಗುಪ್ತಾಂಗಕ್ಕೆ ರಾಡ್‍ನಿಂದ ಚುಚ್ಚಿದ್ದರು. ತೀವ್ರ ಅಸ್ವಸ್ಥಗೊಂಡ ಯುವತಿಯನ್ನು ಬಸ್‍ನಿಂದ ಕೆಳಗೆ ಎಸೆದಿದ್ದರು. ಆಕೆಯ ಜೊತೆಗಿದ್ದ ಸ್ನೇಹಿತನನ್ನೂ ಬಸ್‍ನಿಂದ ಕೆಳಗೆ ಎಸೆದು ಆರೋಪಿಗಳು ಪರಾರಿಯಾಗಿದ್ದರು. ದೆಹಲಿಯ ಆಸ್ಪತ್ರೆಯ ಬಳಿಕ ಹೆಚ್ಚಿನ ಚಿಕಿತ್ಸೆಗೆ ನಿರ್ಭಯಾಳನ್ನು ಸಿಂಗಾಪುರಕ್ಕೆ ಕಳುಹಿಸಿಕೊಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಡಿಸೆಂಬರ್ 29 ರಂದು ನಿರ್ಭಯಾ ಸಾವನ್ನಪ್ಪಿದ್ದಳು.

    ಅತ್ಯಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ರಾಮ್ ಸಿಂಗ್ 2013ರಲ್ಲಿ ತಿಹಾರ್ ಜೈಲಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, ವಿನಯ್ ಶರ್ಮಾ 2016ರ ಆಗಸ್ಟ್ ನಲ್ಲಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ. ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನ ಇನ್ನೊಬ್ಬ ಮೂರು ವರ್ಷಗಳ ಕಾಲ ಬಾಲಮಂದಿರದಲ್ಲಿ ಕಳೆದ ನಂತರ ಡಿಸೆಂಬರ್ 2015ರಲ್ಲಿ ಬಿಡುಗಡೆಯಾಗಿದ್ದ.

    ಈ ಪ್ರಕರಣದ ಬಳಿಕ ಕೇಂದ್ರ ಸರ್ಕಾರ ಬಾಲಾಪರಾಧ ಕಾಯ್ದೆಗೆ ತಿದ್ದುಪಡಿ ತಂದಿದ್ದು ಹದಿನಾರರಿಂದ ಹದಿನೆಂಟು ವರ್ಷದ ಮಧ್ಯೆ ಇರುವವರು ಕ್ರೂರ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡರೆ ಅವರನ್ನು ವಯಸ್ಕರು ಎಂದೇ ಪರಿಗಣಿಸಲಾಗುತ್ತದೆ.