Tag: death threat

  • ಕೊಲೆ ಬೆದರಿಕೆ ಸಂದೇಶ – ಡಿಜಿಐಜಿಪಿಗೆ ರಜತ್ ದೂರು

    ಕೊಲೆ ಬೆದರಿಕೆ ಸಂದೇಶ – ಡಿಜಿಐಜಿಪಿಗೆ ರಜತ್ ದೂರು

    ಬಿಗ್ ಬಾಸ್ ಸ್ಪರ್ಧಿ ರಜತ್ ಕಿಶನ್ (Rajath Kishan) ಅನ್ನು ಕೊಲೆ ಮಾಡುವುದಾಗಿ ಪತ್ನಿ ಅಕ್ಷಿತಾಗೆ ಕೊಲೆ ಬೆದರಿಕೆ ಸಂದೇಶ ಬಂದ ಹಿನ್ನೆಲೆ ರಜತ್ ಡಿಜಿಐಜಿಪಿಗೆ (DGIGP) ದೂರು ನೀಡಿದ್ದಾರೆ.

    ಧರ್ಮಸ್ಥಳದಲ್ಲಿ (Dharmasthala) ಯೂಟ್ಯೂಬರ್ಸ್ ಮೇಲೆ ಹಲ್ಲೆ ನಡೆದ ವೇಳೆ ರಜತ್ ಕಿಶನ್ ಸ್ಥಳದಲ್ಲಿದ್ದರು. ಈ ಹಿನ್ನೆಲೆ ರಜತ್ ಪತ್ನಿ ಅಕ್ಷಿತಾಗೆ ಕೆಲವು ಕಿಡಿಗೇಡಿಗಳು ಕೊಲೆ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಜತ್, ನನ್ನ ಪತ್ನಿ ಅಕ್ಷಿತಾಗೆ, ಕೊಲೆ ಮಾಡ್ತೀವಿ ಅಂಥ ಬೆದರಿಕೆ ಸಂದೇಶ ಬಂದಿತ್ತು. ಇದು ಬಹಳ ಕೆಟ್ಟದ್ದು. ನಾವು ಯಾವುದೇ ಜಾತಿ, ಧರ್ಮ ಜಾಗ ದೇವಸ್ಥಾನ ಬಗ್ಗೆ ಮಾತಾಡಿಲ್ಲ. ನಾವು ಹೋಗಿದ್ದು ಸೌಜನ್ಯ ಪರ ನ್ಯಾಯಕ್ಕಾಗಿ. ಕತ್ತರಿಸ್ತೀನಿ ಅಂದ್ರೆ ಹೇಗೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ವರಮಹಾಲಕ್ಷ್ಮೀ ಹಬ್ಬಕ್ಕೆ ತಾವರೆ ಹೂ ಕೀಳಲು ಹೋಗಿ ಸಾವು

    ಹಾಡಹಗಲೇ ನಮ್ಮ ಕಣ್ಣಮುಂದೆನೇ ಎಲ್ಲ ನಡೆದಿದ್ದು. ಹಲ್ಲೆ ಮಾಡಿದವರ ಮೇಲೆ ದೂರು ಕೊಟ್ಟಿದ್ದೇನೆ. ನನ್ನ ಪತ್ನಿಗೆ ಬೆದರಿಕೆ ಸಂದೇಶ ಹಾಕಿದವರ ವಿರುದ್ಧವೂ ದೂರು ಕೊಟ್ಟಿದ್ದೇವೆ. ನಾವು ಕೊಟ್ಟ ದೂರು ಸೈಬರ್ ಠಾಣೆಗೆ ವರ್ಗಾವಣೆ ಆಗಿದೆ. ಕರಾವಳಿ, ಮಂಡ್ಯ ಅಂತೆಲ್ಲ ಹೇಳುತ್ತಿದ್ದಾರೆ. ನಾವು ಮಂಡ್ಯದವರನ್ನ ಕರ್ಕೊಂಡು ಬರುತ್ತೇವೆ ಎಂದು ಹೇಳಿಲ್ಲ. ಬೆದರಿಕೆಗಳಿಗೆ ನಾವು ಹೆದರಲ್ಲ ಎಂದರು. ಇದನ್ನೂ ಓದಿ: ಸರ್ವಜ್ಞ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ ಬಂದಿದೆ, ಅಲ್ಲೂ ಪರಿಶೀಲನೆ ಮಾಡಲಿ: ಪಿ.ಸಿ ಮೋಹನ್

    ಬಳಿಕ ಮಾತನಾಡಿದ ರಜತ್ ಪತ್ನಿ ಅಕ್ಷಿತಾ, ಸೋಷಿಯಲ್ ಮೀಡಿಯಾ ಸ್ಟೇಟಸ್‌ನಲ್ಲಿ ಮೆಸೇಜ್ ಹಾಕಿದ್ದಾರೆ. ನಿನ್ನ ಗಂಡನನ್ನ ವಾಪಸ್ ಕರೆಸಿಕೋ. ಕರಾವಳಿ ಬೇರೆ ಥರ, ಮಂಡ್ಯ ಅಲ್ಲ ಅಂತೆಲ್ಲ ಹಾಕಿದ್ದಾರೆ. ನಾವು ಹುಟ್ಟಿ ಬೆಳೆದಿದ್ದು ಮಂಡ್ಯ. ನಾವು ದೂರು ಕೊಟ್ಟಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಉದ್ವಿಗ್ನತೆ – 150ಕ್ಕೂ ಹೆಚ್ಚು ಜನರ ವಿರುದ್ಧ ಪ್ರತ್ಯೇಕ FIR ದಾಖಲು

  • ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ – ದೂರು ದಾಖಲು

    ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ – ದೂರು ದಾಖಲು

    ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೂ ( Bihar Assembly Elections) ಮುನ್ನ ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ (Chirag Paswan) ಅವರಿಗೆ  ಜೀವ ಬೆದರಿಕೆ (Death Threat) ಹಾಕಲಾಗಿದೆ ಎಂದು ಪಕ್ಷದ ವಕ್ತಾರ ರಾಜೇಶ್ ಭಟ್ ತಿಳಿಸಿದ್ದಾರೆ.

    ಜೀವ ಬೆದರಿಕೆ ಹಿನ್ನೆಲೆ ರಾಜೇಶ್ ಭಟ್ ಪಾಟ್ನಾದ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ‘ಟೈಗರ್ ಮೆರಾಜ್ ಇಡಿಸಿ’ ಎಂಬ ಹೆಸರಿನ ಇನ್ಸ್ಟಾಗ್ರಾಂ ಖಾತೆಯಿಂದ ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ ಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಮಹಿಳೆಯರು ಸ್ನಾನ ಮಾಡೋದನ್ನ ಕದ್ದು ಮುಚ್ಚಿ ವಿಡಿಯೋ ಮಾಡ್ತಿದ್ದ ವಿಕೃತ ಕಾಮಿ ಅರೆಸ್ಟ್‌

    ಪಾಸ್ವಾನ್ ಅವರ ಜನಪ್ರಿಯತೆ ಹೆಚ್ಚುತ್ತಿರುವ ಕಾರಣ ಈ ಬೆದರಿಕೆ ಹಾಕಲಾಗಿದೆ. ಈ ಕೃತ್ಯ ಕ್ರಿಮಿನಲ್ ಉದ್ದೇಶ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ. ವಿಷಯದ ಗಂಭೀರತೆಯನ್ನು ತಕ್ಷಣವೇ ಅರಿತುಕೊಂಡು ತ್ವರಿತ ಕ್ರಮ ಕೈಗೊಳ್ಳಬೇಕು. ತಕ್ಷಣವೇ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ ಎಂದು ರಾಜೇಶ್ ಭಟ್ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Davanagere | ಗೋಲ್ಡ್ ಲೋನ್ ರಿನಿವಲ್ ಮಾಡಲು ಬಂದಿದ್ದ ಮಹಿಳೆಯ 3.5 ಲಕ್ಷ ಹಣ ಎಗರಿಸಿದ ಕಳ್ಳಿಯರು

    ಈ ಕುರಿತು ಮಾತನಾಡಿದ ಸೈಬರ್ ಡಿಸಿಪಿ ನಿತೀಶ್ ಚಂದ್ರ ಧರಿಯಾ, ಜುಲೈ 11ರ ರಾತ್ರಿ 9 ಗಂಟೆ ಸುಮಾರಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಪಾಟ್ನಾ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ವಿದೇಶಗಳಲ್ಲಿ ಆಸ್ತಿ ಮಾಡಿದ್ರೆ ಸರ್ಕಾರಕ್ಕೆ ಬರೆದುಕೊಡುವೆ – ಇಡಿ ದಾಳಿಗೊಳಗಾಗಿದ್ದ ಶಾಸಕ ಸುಬ್ಬಾರೆಡ್ಡಿ ಸವಾಲ್‌

  • ‌ಕಪಿಲ್‌ ಶರ್ಮಾ ಸೇರಿ ನಾಲ್ವರು ಬಾಲಿವುಡ್‌ ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ

    ‌ಕಪಿಲ್‌ ಶರ್ಮಾ ಸೇರಿ ನಾಲ್ವರು ಬಾಲಿವುಡ್‌ ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ

    – ಬೆದರಿಕೆ ಇಮೇಲ್‌ ವಿಳಾಸ ಪಾಕಿಸ್ತಾನದಲ್ಲಿ ಪತ್ತೆ; ಕೇಸ್‌ ದಾಖಲು

    ಮುಂಬೈ: ನಟ ಸೈಫ್‌ ಅಲಿ ಖಾನ್‌ಗೆ ಚಾಕು ಇರಿತ ಪ್ರಕರಣದ ಬೆನ್ನಲ್ಲೇ ಬಾಲಿವುಡ್‌ ತಾರೆಯರಿಗೆ ಸರಣಿ ಜೀವ ಬೆದರಿಕೆ ಬಂದಿದೆ. ಹಾಸ್ಯನಟ ಕಪಿಲ್ ಶರ್ಮಾ (Kapil Sharma), ನಟ ರಾಜ್‌ಪಾಲ್ ಯಾದವ್, ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಮತ್ತು ಗಾಯಕಿ – ಹಾಸ್ಯ ನಟಿ ಸುಗಂಧ ಮಿಶ್ರಾ (Sugandha Mishr) ಪಾಕಿಸ್ತಾನ ಮೂಲದ ಇ-ಮೇಲ್‌ನಿಂದ ಜೀವ ಬೆದರಿಕೆ ಬಂದಿರುವುದಾಗಿ ಮುಂಬೈ ಪೊಲೀಸರು ತಿಳಿಸಿದ್ದಾರೆ.

    ಈ ಕುರಿತು ಸೆಲೆಬ್ರಿಟಿಗಳು ನೀಡಿದ ದೂರಿನ ಮೇರೆಗೆ ಮುಂಬೈನ ಅಂಬೋಲಿ ಮತ್ತು ಓಶಿವಾರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಸಂಬಂಧ ತನಿಖೆ ಕೈಗೊಂಡಿದ್ದರೆ. ಇದನ್ನೂ ಓದಿ: ನಿವೃತ್ತಿ ಬಗ್ಗೆ ಮಾತನಾಡಿದ ರಶ್ಮಿಕಾ ಮಂದಣ್ಣ- ಶ್ರೀವಲ್ಲಿ ಅಭಿಮಾನಿಗಳು ಶಾಕ್

    ಇ-ಮೇಲ್‌ ಬೇದರಿಕೆ ಸಂದೇಶ ಏನಿದೆ?
    ನಾವು ನಿಮ್ಮ ಇತ್ತೀಚಿನ ಎಲ್ಲಾ ಚಟುವಟಿಕೆಗಳನ್ನು ಗಮನಿಸುತ್ತಿದ್ದೇವೆ. ಇದು ಪ್ರಚಾರದ ಸ್ಟಂಟ್‌ ಅಲ್ಲ, ನಿಮಗೆ ಕಿರುಕುಳ ನೀಡುವ ಪ್ರಯತ್ನವೂ ಅಲ್ಲ. ಈ ಸಂದೇಶವನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ. ನಾವು ಹೇಳಿದಂತೆ ಕೇಳದಿದ್ದರೆ, ನಿಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಮೇಲೂ ತೀವ್ರ ಪರಿಣಾಮ ಬೀರಬಹುದು. 8 ಗಂಟೆಗಳ ಒಳಗೆ ಈ ಸಂದೇಶಕ್ಕೆ ಪ್ರತಿಕ್ರಿಯಿಸಿ ಅಂತ ಇ-ಮೇಲ್‌ನಲ್ಲಿ ಬೆದರಿಕೆ (E-Mail Threats) ಬಂದಿದೆ. ಇದನ್ನೂ ಓದಿ: ವಿಟ್ಲ ಪಂಚಲಿಂಗೇಶ್ವರ ಜಾತ್ರೆಯಲ್ಲಿ ದೇವರ ಪ್ರಭಾವಳಿಗೆ ಬಡಿದ ಡ್ರೋಣ್‌

    ಬೆದರಿಕೆ ಬಂದ ಇಮೇಲ್‌ ವಿಳಾಸ ಪಾಕಿಸ್ತಾನದಲ್ಲಿ ಪತ್ತೆಯಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿರುವುದಾಗಿ ಮುಂಬೈ ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸೈಫ್‌ ಅಲಿ ಖಾನ್‌ಗೆ ಇರಿದದ್ದು ನಿಜವೇ ಅಥವಾ ನಟಿಸ್ತಿದ್ದಾರೆಯೇ? – ಬಿಜೆಪಿ ಸಚಿವ ರಾಣೆ ಲೇವಡಿ

  • ಆಂಧ್ರದ ಡಿಸಿಎಂ ಪವನ್‌ ಕಲ್ಯಾಣ್‌ಗೆ ಜೀವ ಬೆದರಿಕೆ!

    ಆಂಧ್ರದ ಡಿಸಿಎಂ ಪವನ್‌ ಕಲ್ಯಾಣ್‌ಗೆ ಜೀವ ಬೆದರಿಕೆ!

    ಅಮರಾವತಿ: ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್‌ ಕಲ್ಯಾಣ್‌ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ವರದಿಯಾಗಿದೆ.

    ಅರಪಚಿತ ವ್ಯಕ್ತಿಯೊಬ್ಬರು ಪವನ್‌ ಕಲ್ಯಾಣ್‌ ಇಲ್ಲದಿದ್ದಾಗ, ಅವರ ಕಚೇರಿಗೆ ದೂರವಾಣಿ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ. ಉಪಮುಖ್ಯಮಂತ್ರಿಗಳನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಪದಗಳನ್ನ ಬಳಸಿ, ಬೆದರಿಕೆ ಸಂದೇಶಗಳನ್ನು ಕಳುಸಹಿಲಾಗಿದೆ. ನಾವು ಅವರ ಪಕ್ಕದಲ್ಲೇ ಇದ್ದೇಕೆ, ಅವರನ್ನು ಕೊಲ್ಲುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾನೆ. ಇದರಿಂದ ಆತಂಕಗೊಂಡ ಸಿಬ್ಬಂದಿ ತಕ್ಷಣ ಇದನ್ನು ಹಿರಿಯ ಪೊಲೀಸ್‌ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಈ ಸಂಬಂಧ ತನಿಖೆ ಕೈಗೊಂಡಿದ್ದಾರೆ.

    ತಕ್ಷಣ ಪ್ರತಿಕ್ರಿಯಿಸಿರುವ ಉನ್ನತ ಪೊಲೀಸ್ ಅಧಿಕಾರಿಗಳು, ಪವನ್ ಕಲ್ಯಾಣ್ ಸಿಬ್ಬಂದಿಗೆ ಈ ಬೆದರಿಕೆ ಕರೆಗಳು ಮತ್ತು ಸಂದೇಶಗಳು ಎಲ್ಲಿಂದ ಬಂದವು ಎಂದು ವಿಚಾರಣೆ ನಡೆಸಲಾಗುತ್ತಿದೆ. ಪವನ್ ಹೊರತಾಗಿ ಬೇರೆ ಯಾವುದೇ ಸಚಿವರಿಗೆ ಇಂತಹ ಕರೆಗಳು ಬಂದಿವೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಜೈಲಲ್ಲಿ ನಿಲ್ಲದ ಕರ್ಮಕಾಂಡ – ಕಲಬುರಗಿ ಜೈಲು ಅಧೀಕ್ಷಕಿ ವಿರುದ್ಧ ವಿಡಿಯೋ ಮಸಲತ್ತು!

    ಪವನ್ ಸಿಬ್ಬಂದಿಗೆ ಈ ಕರೆಗಳು ಮತ್ತು ಸಂದೇಶಗಳು ಯಾವಾಗ ಬಂದವು ಎಂಬ ವಿವರಗಳ ಬಗ್ಗೆ ತನಿಖೆ ನಡೆಸಲಿದ್ದಾರೆ. ಹಿಂದೆಂದೂ ಇಲ್ಲದ ರೀತಿಯಲ್ಲಿ ಪವನ್ ಗೆ ಬೆದರಿಕೆ ಕರೆಗಳು ಬಂದಿದ್ದು, ಈ ಬಗ್ಗೆ ಎಲ್ಲೆಡೆ ಚರ್ಚೆ ನಡೆಯುತ್ತಿದೆ. ಇದನ್ನೂ ಓದಿ: ದುಬೈ; ಬ್ಯಾರೀಸ್ ಚೇಂಬರ್ ಯುಎಇ ವತಿಯಿಂದ ಫೆ.9ರಂದು ಅದ್ಧೂರಿ ಬ್ಯಾರಿ ಮೇಳ

  • 10 ದಿನಗಳಲ್ಲಿ ರಾಜೀನಾಮೆ ಕೊಡದಿದ್ರೆ ಸಿದ್ದಿಕಿಯಂತೆ ಹತ್ಯೆ – ಸಿಎಂ ಯೋಗಿಗೆ ಬೆದರಿಕೆ ಹಾಕಿದ್ದ ಮಹಿಳೆ ಅರೆಸ್ಟ್

    10 ದಿನಗಳಲ್ಲಿ ರಾಜೀನಾಮೆ ಕೊಡದಿದ್ರೆ ಸಿದ್ದಿಕಿಯಂತೆ ಹತ್ಯೆ – ಸಿಎಂ ಯೋಗಿಗೆ ಬೆದರಿಕೆ ಹಾಕಿದ್ದ ಮಹಿಳೆ ಅರೆಸ್ಟ್

    ಮುಂಬೈ: 10 ದಿನದೊಳಗಾಗಿ ಸಿಎಂ ಸ್ಥಾನದಿಂದ ಕೆಳಗಿಳಿಯದಿದ್ದರೆ ಉತ್ತರ ಪ್ರದೇಶದ (Uttar Pradesh) ಸಿಎಂ ಯೋಗಿ ಆದಿತ್ಯನಾಥ್‌ರನ್ನ (Yogi Adityanath) ಬಾಬಾ ಸಿದ್ದಿಕಿಯಂತೆ ಹತ್ಯೆ ಮಾಡುವುದಾಗಿ ಬೆದರಿಕೆಯ ಸಂದೇಶ ಕಳುಹಿಸಿದ್ದ ಮಹಿಳೆಯನ್ನು ಮುಂಬೈ ಪೊಲೀಸರು (Mumbai Police) ಬಂಧಿಸಿದ್ದಾರೆ.

    ಮುಂಬೈ ಟ್ರಾಫಿಕ್ ಪೊಲೀಸ್ ನಿಯಂತ್ರಣ ಕೊಠಡಿಯ ವಾಟ್ಸಪ್ ಸಹಾಯವಾಣಿ ಸಂಖ್ಯೆಗೆ ಶನಿವಾರ ಸಂಜೆ ಅಪರಿಚಿತ ನಂಬರ್‌ನಿಂದ ಜೀವ ಬೆದರಿಕೆ ಸಂದೇಶ ಬಂದಿದೆ. ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡದಿದ್ದರೆ ಬಾಬಾ ಸಿದ್ದಿಕಿಯಂತೆ ಹತ್ಯೆ ಮಾಡಲಾಗುವುದು ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: ಪ್ರವಾಸಿಗರಿಗೆ ಶಾಕ್‌ – ಲಾಲ್‌ಬಾಗ್‌ ಪ್ರವೇಶ ದರ ಭಾರೀ ಏರಿಕೆ

    ಈ ಬಗ್ಗೆ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದರು. ಯುಪಿ ಸಿಎಂ ಕೊಲೆ ಬೆದರಿಕೆ ಹಿಂದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆಯ ಸರಮಾಲೆಯ ನಡುವೆಯೇ ಉತ್ತರ ಪ್ರದೇಶ ಮುಖ್ಯಮಂತ್ರಿಗೂ ಬೆದರಿಕೆ ಬಂದಿದೆ. ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ ಅವರನ್ನು ಮುಂಬೈನ ಬಾಂದ್ರಾದಲ್ಲಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ಇದನ್ನೂ ಓದಿ: Mandya | ರೈತರ ಜಮೀನು, ಹಿಂದೂ ದೇಗುಲ ಮಾತ್ರವಲ್ಲ ಸರ್ಕಾರಿ ಶಾಲೆಯೂ ವಕ್ಫ್ ಆಸ್ತಿ!

  • ಕೊಲೆ ಬೆದರಿಕೆ: ನಟಿ ಶರಣ್ಯ ವಿರುದ್ಧ ದೂರು ದಾಖಲು

    ಕೊಲೆ ಬೆದರಿಕೆ: ನಟಿ ಶರಣ್ಯ ವಿರುದ್ಧ ದೂರು ದಾಖಲು

    ಮಿಳಿನ ಹೆಸರಾಂತ ನಟಿ, ದಕ್ಷಿಣದ ತಾರೆ ಶರಣ್ಯ (Saranya Ponvannan)  ವಿರುದ್ಧ ಚೆನ್ನೈನ ವಿರುಂಭಾಗಕಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಯಿ ಪಾತ್ರಗಳ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ಶರಣ್ಯ ಪೊನ್ವನನ್ ವಿರುದ್ಧ ದೂರು (Complaint) ದಾಖಲಾಗಿದ್ದಕ್ಕೆ ಅಭಿಮಾನಿಗಳಿಗೆ ಸಹಜವಾಗಿ ಆತಂಕವಾಗಿದೆ.

    ಶರಣ್ಯ ವಿರುದ್ಧ ದೂರು ದಾಖಲಿಸಿದವರು, ಅವರ ಪಕ್ಕದ ಮನೆಯ ಮಹಿಳೆ ಎನ್ನುವುದು ಅಚ್ಚರಿಯ ಸಂಗತಿ. ಪಾರ್ಕಿಂಗ್ ವಿಷಯವಾಗಿ ಪಕ್ಕದ ಮನೆಯವರೊಂದಿಗೆ ಶರಣ್ಯ ಗಲಾಟೆ ಮಾಡಿದ್ದಾರಂತೆ ಜೊತೆಗೆ ಮಹಿಳೆಗೆ ಕೊಲೆ ಬೆದರಿಕೆ (Death threat) ಹಾಕಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ.

     

    ಶ್ರೀದೇವಿ ಅನ್ನುವವರ ಜೊತೆ ಪದೇ ಪದೇ ಶರಣ್ಯ ಪಾರ್ಕಿಂಗ್ ವಿಚಾರವಾಗಿ ಗಲಾಟೆ ಮಾಡುತ್ತಿದ್ದರಂತೆ. ಈಗ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ. ಅದಕ್ಕೆ ಸಾಕ್ಷಿ ಎನ್ನುವಂತೆ ಸಿಸಿಟಿವಿ ದೃಶ್ಯಾವಳಿಗಳನ್ನೂ ನೀಡಿದ್ದಾರಂತೆ. ಸದ್ಯ ಪೊಲೀಸರು ಈ ಕುರಿತಂತೆ ವಿಚಾರಣೆ ನಡೆಸುತ್ತಿದ್ದಾರೆ.

  • 20 ಕೋಟಿ ಬಳಿಕ 200 ಕೋಟಿಗೆ ಬೇಡಿಕೆ- ಅಂಬಾನಿಗೆ ಬಂತು ಮತ್ತೊಂದು ಜೀವಬೆದರಿಕೆ ಇಮೇಲ್

    20 ಕೋಟಿ ಬಳಿಕ 200 ಕೋಟಿಗೆ ಬೇಡಿಕೆ- ಅಂಬಾನಿಗೆ ಬಂತು ಮತ್ತೊಂದು ಜೀವಬೆದರಿಕೆ ಇಮೇಲ್

    ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥಾಪಕ ಮುಕೇಶ್ ಅಂಬಾನಿಗೆ (Reliance Industries chairman Mukesh Ambani) ಇದೀಗ ಮತ್ತೊಂದು ಕೊಲೆ ಬೆದರಿಕೆಯ ಇಮೇಲ್ (E-mail) ಬಂದಿದೆ.

    ಅಂಬಾನಿಗೆ ಮೇಲಿಂದ ಮೇಲೆ ಕೊಲೆ ಬೆದರಿಕೆಯ ಇಮೇಲ್‍ಗಳು ಬರುತ್ತಿವೆ. ಒಂದೇ ವಾರದಲ್ಲಿ, ಒಂದೇ ಅಕೌಂಟ್‍ನಿಂದ ಎರಡು ಬಾರಿ ಬೆದರಿಕೆಯ ಇಮೇಲ್ ಬಂದಿದ್ದು, ಈ ಬಾರಿ 200 ಕೋಟಿ ರೂ.ಗೆ ಬೇಡಿಕೆ ಇಡಲಾಗಿದೆ.

    20 ಕೋಟಿ ರೂ. ಬೇಡಿಕೆ ಇಟ್ಟು ಕಳುಹಿಸಲಾಗಿದ್ದ ಇಮೇಲ್‍ಗೆ ಪ್ರತಿಕ್ರಿಯಿಸದಿದ್ದಕ್ಕೆ ಸೇಮ್ ಅಕೌಂಟ್‍ನಿಂದ ಮತ್ತೊಂದು ಜೀವಬೆದರಿಕೆಯ ಇಮೇಲ್ ಬಂದಿದೆ. ಎರಡನೇ ಬಾರಿ ಬಂದಿರುವ ಇಮೇಲ್‍ನಲ್ಲಿ, ನಾವು ಕಳುಹಿಸಿರುವ ಇಮೇಲ್‍ಗೆ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಇದೀಗ 20 ಕೋಟಿಯಿಂದ 200 ಕೋಟಿಗೆ ಏರಿಕೆ ಮಾಡಲಾಗಿದೆ. ಒಂದು ವೇಳೆ ಹಣ ನೀಡದೇ ಇದ್ದರೆ ಕೊಲೆ ಮಾಡುವುದಾಗಿ ತಿಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಹಿಂದೆ ಕಳಿಸಿದ್ದ ಬೆದರಿಕೆಯಲ್ಲಿ 20 ಕೋಟಿಗೆ ಬೇಡಿಕೆ ಇಡಲಾಗಿತ್ತು. ಕೇಳಿದಷ್ಟು ಹಣ ಕೊಡದಿದ್ದರೆ ಶೂಟ್ ಮಾಡುವುದಾಗಿ ಜೀವ ಬೆದರಿಕೆ ಹಾಕಲಾಗಿತ್ತು. ಅಲ್ಲದೆ ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್‍ಗಳನ್ನು ಹೊಂದಿದ್ದೇವೆ ಎಂದು ತಿಳಿಸಲಾಗಿತ್ತು. ಇದನ್ನೂ ಓದಿ: ಚಾಲಕನಿಗೆ ಹೃದಯ ಸ್ತಂಭನ- ಸಾಯೋ ಮೊದ್ಲು 48 ಪ್ರಯಾಣಿಕರ ರಕ್ಷಿಸಿದ ಬಸ್ ಚಾಲಕ

    ಸದ್ಯ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ದಕ್ಷಿಣ ಮುಂಬೈನ ಗಾಮ್‍ದೇವಿ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ (ಐಪಿಸಿ) 387 ಮತ್ತು 506 (2) ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶರದ್‌ ಪವಾರ್‌, ಸಂಜಯ್‌ ರಾವತ್‌ಗೆ ಕೊಲೆ ಬೆದರಿಕೆ

    ಶರದ್‌ ಪವಾರ್‌, ಸಂಜಯ್‌ ರಾವತ್‌ಗೆ ಕೊಲೆ ಬೆದರಿಕೆ

    ಮುಂಬೈ: ಎನ್‍ಸಿಪಿ ನೇತಾರ ಶರದ್ ಪವಾರ್ (Sharad Pawar) ಶಿವಸೇನೆ ಉದ್ಧವ್ ಬಣದ ಮುಖಂಡ ಸಂಜಯ್ ರಾವತ್‍ಗೆ (Sanjay Raut) ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ.

    ವಿಚಾರವಾದಿ ನರೇಂದ್ರ ದಾಬೋಲ್ಕರ್‌ಗೂ ಆದ ಗತಿಯೇ ನಿಮಗೂ ಆಗಲಿದೆ ಎಂದು ಶರದ್ ಪವಾರ್‌ಗೆ ಟ್ವಿಟ್ಟರ್ ಮೂಲಕ ಹತ್ಯೆ ವಾರ್ನಿಂಗ್ ನೀಡಿದ್ದಾರೆ. ಇದೇ ವೇಳೆ ಪವಾರ್ ಪುತ್ರಿ, ಎನ್‍ಸಿಪಿ ಸಂಸದೆ ಸುಪ್ರಿಯಾ ಸುಳೆ (Supriya Sule) ಅವರ ವಾಟ್ಸಪ್ ನಂಬರ್‌ಗೆ ಪವಾರ್ ಅವರನ್ನು ಹತ್ಯೆ ಮಾಡುವುದಾಗಿ ಸಂದೇಶಗಳು ಬಂದಿವೆ.

    ಈ ಬೆದರಿಕೆ ಸಂದೇಶಗಳ ಸಂಬಂಧ ತನಿಖೆ ನಡೆಸಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಸುಪ್ರಿಯಾ ಸುಳೆ ಒತ್ತಾಯಿಸಿದ್ದಾರೆ. ಸಂಜಯ್ ರಾವತ್‍ರನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ರಾವತ್ ಸಹೋದರ, ಶಾಸಕ ಸುನೀಲ್ ದೂರು ನೀಡಿದ್ದಾರೆ.


    ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನಾವೀಸ್ ಪ್ರತಿಕ್ರಿಯಿಸಿ, ಯಾವುದೇ ನಾಯಕರಿಗೆ ಬೆದರಿಕೆ ಹಾಕುವುದನ್ನು ಸಹಿಸುವುದಿಲ್ಲ. ಪೊಲೀಸರು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

  • ದಿ ಕೇರಳ ಸ್ಟೋರಿ: ಮುಸ್ಲಿಂ ಹುಡುಗಿಯ ಪಾತ್ರ ಮಾಡಿದ್ದ ನಟಿಗೆ ಕೊಲೆ ಬೆದರಿಕೆ

    ದಿ ಕೇರಳ ಸ್ಟೋರಿ: ಮುಸ್ಲಿಂ ಹುಡುಗಿಯ ಪಾತ್ರ ಮಾಡಿದ್ದ ನಟಿಗೆ ಕೊಲೆ ಬೆದರಿಕೆ

    ಳೆದ ಎರಡು ವಾರಗಳಿಂದ ದೇಶಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ದಿ ಕೇರಳ ಸ್ಟೋರಿ’ (The Kerala Story) ಚಿತ್ರದಲ್ಲಿ ಮುಸ್ಲಿಂ ಹುಡುಗಿಯಾಗಿ ನಟಿಸಿದ್ದ ನಟಿ ಸೋನಿಯಾ ಬಾಲಾನಿಗೆ ಕೊಲೆ ಬೆದರಿಕೆ  (Death Threat) ಹಾಕಿದ್ದಾರೆ ಎನ್ನವ ಮಾಹಿತಿ ಸಿಕ್ಕಿದೆ. ಈ ಹಿಂದೆ ಚಿತ್ರದ ನಾಯಕಿ ಅದಾ ಶರ್ಮಾಗೂ (Adah Sharma) ಕೊಲೆ ಬೆದರಿಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಪೊಲೀಸ್ ಭದ್ರತೆಯನ್ನೂ ನೀಡಲಾಗಿತ್ತು.

    ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಸೋನಿಯಾ (Sonia Balani) ಮುಸ್ಲಿಂ ಹುಡುಗಿಯಾಗಿ, ಹಿಂದೂ ಹುಡುಗಿಯರನ್ನು ಮತಾಂತರ ಮಾಡುವ ಪ್ರಕ್ರಿಯೆಯಲ್ಲಿ ಸಹಾಯ ಮಾಡುತ್ತಾರೆ. ನಟಿಯಾಗಿ ಅವರು ಪಾತ್ರಕ್ಕೆ ಜೀವ ತುಂಬಿದ್ದಾರೆ. ಈ ಪಾತ್ರ ಹಲವರ ಕೋಪಕ್ಕೆ ಕಾರಣವಾಗಿದೆ. ಹಾಗಾಗಿ ಕೊಲೆ ಬೆದರಿಕೆಯ ಸಂದೇಶಗಳು ಸೋನಿಯಾಗೆ ಬಂದಿವೆಯಂತೆ. ಹಾಗಾಗಿ ಆ ನಟಿಗೂ ಭದ್ರತೆಯನ್ನು ಒದಗಿಸಬೇಕು ಎಂದು ಚಿತ್ರತಂಡ ಮನವಿ ಮಾಡಿಕೊಂಡಿದೆ.  ಇದನ್ನೂ ಓದಿ:‘ಪುಷ್ಪʼ ಪಾರ್ಟ್‌ 2ನಲ್ಲಿ ಶ್ರೀವಲ್ಲಿ ಸಾವು- ರಶ್ಮಿಕಾ ಫೋಟೋ ವೈರಲ್

    ನಟಿಯರಿಗೆ ಒಂದು ಕಡೆ ಜೀವ ಬೆದರಿಕೆ ಮಸೇಜ್ ಗಳು ಬರುತ್ತಿದ್ದರೆ, ಮತ್ತೊಂದು ಕಡೆ ಬಾಕ್ಸ್ ಆಫೀಸಿನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ ಈ ಸಿನಿಮಾ. ವಿವಾದ, ನಿಷೇಧದ ನಡುವೆಯೂ ಇಂದು ಅದು 200 ಕೋಟಿ ರೂಪಾಯಿ ಕ್ಲಬ್ ಸೇರಲಿದೆ. ಶನಿವಾರಕ್ಕೆ 183 ಕೋಟಿ ರೂಪಾಯಿಗೂ ಅಧಿಕ ಬಾಕ್ಸ್ ಆಫೀಸ್ ಬಾಚಿದೆ. ಇನ್ನೂ ಸಾಕಷ್ಟು ಕಡೆ ತುಂಬಿದ ಪ್ರದರ್ಶನವನ್ನು ಚಿತ್ರ ಕಾಣುತ್ತಿದೆ.

  • ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ನಟಿ ರಾಖಿ ಸಾವಂತ್ ಹೆಲ್ಮೆಟ್ ಧರಿಸಿ ಓಡಾಟ

    ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ನಟಿ ರಾಖಿ ಸಾವಂತ್ ಹೆಲ್ಮೆಟ್ ಧರಿಸಿ ಓಡಾಟ

    ಟಿ ರಾಖಿ ಸಾವಂತ್ ಮುಂಬೈ ಬೀದಿಯಲ್ಲಿ ಹೆಲ್ಮೆಟ್ (Helmet) ಧರಿಸಿ ಓಡಾಡುತ್ತಿದ್ದಾರೆ. ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆಯೇ ರಾಖಿ ಹೆಲ್ಮೆಟ್ ಹಾಕಿಕೊಳ್ಳುತ್ತಾರೆ. ಕಾರಣ ಅವರಿಗೆ ಕೊಲೆ ಬೆದರಿಕೆ ಇದೆಯಂತೆ. ನಟ ಸಲ್ಮಾನ್ ಖಾನ್ ಪರವಾಗಿ ನಿಂತಿರುವ ಮತ್ತು ಸಲ್ಮಾನ್ ಕುರಿತಾಗಿ ಸಾಕಷ್ಟು ಮೆಚ್ಚುಗೆಯ ಮಾತುಗಳನ್ನು ಆಡುವ ರಾಖಿ ಸಾವಂತ್ (Rakhi Sawant) ಗೆ ಲಾರೆನ್ಸ್ ಬಿಷ್ಣೋಯ್ ಟೀಮ್ ನಿಂದ ಬೆದರಿಕೆ ಕರೆ ಬಂದಿದೆಯಂತೆ. ಸಲ್ಮಾನ್ ವಿಚಾರವಾಗಿ ಮೂಗು ತೂರಿದಂತೆ ರಾಖಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಎಚ್ಚರಿಕೆ ನೀಡಿದೆಯಂತೆ. ಹಾಗಾಗಿ ಅವರನ್ನು ಯಾರೂ ಗುರುತು ಹಿಡಿಯಬಾರದು ಎನ್ನುವ ಕಾರಣಕ್ಕಾಗಿ ಹೆಲ್ಮೆಟ್ ಧರಿಸಿಕೊಂಡು ಓಡಾಡುತ್ತಿದ್ದಾರೆ.

    ಈ ಹಿಂದೆ ಇದೇ ಗ್ಯಾಂಗ್ ನಿರಂತರವಾಗಿ ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಹಾಕುತ್ತಲೇ ಇದೆ. ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ  ಗ್ಯಾಲಕ್ಸಿ ಅಪಾರ್ಟ್ಮೆಂಟ್ ಗೆ ಮುಂಬೈ (Mumbai) ಪೊಲೀಸರು (Police) ಟೈಟ್ ಸೆಕ್ಯೂರಿಟಿ ನೀಡಿದ್ದಾರೆ. ಅಲ್ಲದೇ, ಸುಖಾಸುಮ್ಮನೆ ಅವರ ಮನೆ ಸುತ್ತ ಓಡಾಡುವಂತಿಲ್ಲ ಹಾಗೂ ಮನೆಯ ಮುಂದೆ ನಿಲ್ಲುವಂತಿಲ್ಲ ಎಂದು ಮುಂಬೈ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಇದನ್ನೂ ಓದಿ:ಜುಲೈನಲ್ಲಿ ಹೆರಿಗೆ : ಗುಟ್ಟು ಬಿಟ್ಟುಕೊಟ್ಟ ರಾಮ್ ಚರಣ್ ಪತ್ನಿ ಉಪಾಸನಾ

    ಈಗಾಗಲೇ ಮನೆ ಸುತ್ತಮುತ್ತ ತಪಾಸಣೆ ಕಾರ್ಯವನ್ನೂ ಪೊಲೀಸರು ಆರಂಭಿಸಿದ್ದು, ಯಾವುದೇ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ತಿಳಿಸಿದ್ದಾರೆ. ಸಲ್ಮಾನ್ ಖಾನ್ ಅವರನ್ನು ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೊಲ್ಲುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಪೊಲೀಸರು ಅಗತ್ಯ ಕ್ರಮಗಳನ್ನು ತಗೆದುಕೊಳ್ಳಲು ಮುಂದಾಗಿದ್ದಾರೆ.

    ಕೃಷ್ಣಮೃಗ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟರ್ (gangster) ಲಾರೆನ್ಸ್ ಬಿಷ್ಣೋಯ್ (Lawrence Bishnoi) ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ನಡುವಿನ ಕಾಳಗ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈಗಾಗಲೇ ಸಲ್ಮಾನ್ ಖಾನ್ ಕೊಲ್ಲಲು (Death Threats) ಬಿಷ್ಣೋಯ್ ಮತ್ತು ಟೀಮ್  ಹಲವು ರೀತಿಯಲ್ಲಿ ಪ್ರಯತ್ನ ಮಾಡಿ ವಿಫಲವಾಗಿದೆ. ಈ ಸಂಬಂಧವಾಗಿ ಅನೇಕರು ಬಂಧನ ಕೂಡ ಆಗಿದ್ದಾರೆ. ಸ್ವತಃ ಬಿಷ್ಣೋಯ್ ಜೈಲಿನಲ್ಲೇ ಇದ್ದಾನೆ. ಜೈಲಿನಿಂದಲೇ ಮತ್ತೆ ಸಲ್ಮಾನ್ ಬಗ್ಗೆ ಮಾತನಾಡಿದ್ದಾನೆ.

    ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಲಾರೆನ್ಸ್ ಬಿಷ್ಣೋಯ್ ‘ನನ್ನ ಜೀವನದ ಅಂತಿಮ ಗುರಿ ಅಂತಿದ್ದರೆ ಅದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ಆಗಿದೆ. ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ದ್ವೇಷ ಕೊನೆಗೊಳ್ಳುತ್ತದೆ’ ಎಂದು ಮಾತನಾಡಿದ್ದಾನೆ. ಅವನ ಈ ಮಾತು ಬಾಲಿವುಡ್ ನಲ್ಲಿ ಭಾರೀ ಆತಂಕ ಸೃಷ್ಟಿ ಮಾಡಿದೆ.