Tag: death

  • ಮಂಡ್ಯದಲ್ಲಿ ಉಳುಮೆ ಮಾಡುತ್ತಲೇ ಸಾವನ್ನಪ್ಪಿದ ಅನ್ನದಾತ

    ಮಂಡ್ಯದಲ್ಲಿ ಉಳುಮೆ ಮಾಡುತ್ತಲೇ ಸಾವನ್ನಪ್ಪಿದ ಅನ್ನದಾತ

    ಮಂಡ್ಯ: ಜಮೀನಿನಲ್ಲಿ ಉಳುಮೆ ಮಾಡುವಾಗ ರೈತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

    58 ವರ್ಷದ ಬೋರೆಗೌಡ ಎಂಬವರೇ ಹೃದಯಾಘಾತದಿಂದ ಸಾವನ್ನಪ್ಪಿದ ಕರ್ಮಯೋಗಿ. ಕಳೆದ ಎರಡು ದಿನಗಳಿಂದ ಗ್ರಾಮದಲ್ಲಿ ಮಳೆಯಾಗಿತ್ತು. ಹೀಗಾಗಿ ಬೋರೆಗೌಡ ಅವರು ಶುಕ್ರವಾರ ಮಧ್ಯಾಹ್ನ ತಮ್ಮ ಮಗನಿಗೆ ಬಿತ್ತನೆ ಬೀಜ ತರಲು ಹೇಳಿ, ಜಮೀನಲ್ಲಿ ಉಳುಮೆ ಮಾಡಲು ಹೋಗಿದ್ದಾರೆ. ಈ ಸಂದರ್ಭದಲ್ಲಿ ಉಳುಮೆ ಮಾಡುತ್ತಿರುವಾಗಲೇ ಹೃದಯಾಘಾತವಾಗಿ ಕುಸಿದು ಬಿದಿದ್ದಾರೆ.

    ಈ ವೇಳೆ ಅಕ್ಕಪಕ್ಕದ ಜಮೀನಲ್ಲಿ ಕೆಲಸ ಮಾಡ್ತಿದ್ದ ರೈತರು ಬರುವಷ್ಟರಲ್ಲಿ ರೈತ ಬೋರೇಗೌಡ ಸಾವನ್ನಪ್ಪಿದ್ದಾರೆ. ಒಂದು ಕಡೆ ಉಳುಮೆಗೆಂದು ಕಟ್ಟಿದ್ದ ಎತ್ತುಗಳು, ಮತ್ತೊಂದು ಕಡೆ ಹೃದಯಾಘಾತದಿಂದ ಜಮೀನಲ್ಲೇ ಮೃತಪಟ್ಟ ರೈತನ ದೃಶ್ಯ ಎಂತಹವರ ಕಣ್ಣಲ್ಲೂ ಕಣ್ಣೀರು ತರಿಸುವಂತಿತ್ತು.

  • ಬದುಕಿನ ಬಂಡಿಗೆ ಕೂಲಿ ಅರಸಿ ಬಂದು ಸಾವಿನ ಮನೆ ಸೇರಿದ ಮಹಿಳೆ!

    ಬದುಕಿನ ಬಂಡಿಗೆ ಕೂಲಿ ಅರಸಿ ಬಂದು ಸಾವಿನ ಮನೆ ಸೇರಿದ ಮಹಿಳೆ!

    – ಚಲಿಸುತ್ತಿದ್ದ ಬೋಲೆರೋ ವಾಹನದಿಂದ ಬಿದ್ದು ಮಹಿಳೆ ಸಾವು

    ಚಿಕ್ಕಬಳ್ಳಾಪುರ: ಬದುಕಿನ ಬಂಡಿ ಸಾಗಿಸಲು ಕೆಲಸ ಅರಸಿ ಬಂದ ಕೂಲಿಕಾರ ಮಹಿಳೆಯೊರ್ವಳು ಚಲಿಸುತ್ತಿದ್ದ ಬೊಲೆರೋ ಟೆಂಪೋದಿಂದ ಉರುಳಿಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲೂಕು ಸಬ್ಬೇನಹಳ್ಳಿ ಬಳಿ ನಡೆದಿದೆ.

    ಅಡ್ಡಗಲ್ ಗ್ರಾಮದ 35 ವರ್ಷದ ಗಾಯತ್ರಿ ಮೃತ ಮಹಿಳೆ. ದ್ರಾಕ್ಷಿ ಕಟಾವಿಗೆ ಬಂದಿದ್ದ ಗಾಯತ್ರಿ ಸೇರಿ 6 ಮಂದಿ ಮಹಿಳೆಯರು ಬೊಲೆರೋ ವಾಹನದ ಹಿಂಬದಿ ಕುಳಿತಿದ್ದರು. ಆದ್ರೆ ಸಬ್ಬೇನಹಳ್ಳಿ ಗ್ರಾಮದ ಬಳಿ ರಸ್ತೆ ಮಧ್ಯದ ಉಬ್ಬಿನ ಮೇಲೆ ಚಾಲಕನ ಅಜಾಗೂರಕತೆಯಿಂದ ಬೊಲೆರೋ ವಾಹನ ಜಿಗಿದು ಬಿದ್ದಿದ್ದು, ಈ ವೇಳೆ ಹಿಂಬದಿ ಕೂತಿದ್ದ ಗಾಯತ್ರಿ ಬೊಲೆರೋದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

    ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಚಿಕ್ಕಬಳ್ಳಾಪುರದಲ್ಲಿ ಗುಡುಗು ಸಿಡಿಲಿನ ಮಳೆಗೆ ಎರಡು ಬಲಿ: ಹೊತ್ತಿ ಉರಿಯಿತು ತೆಂಗಿನ ಮರ

    ಚಿಕ್ಕಬಳ್ಳಾಪುರದಲ್ಲಿ ಗುಡುಗು ಸಿಡಿಲಿನ ಮಳೆಗೆ ಎರಡು ಬಲಿ: ಹೊತ್ತಿ ಉರಿಯಿತು ತೆಂಗಿನ ಮರ

    ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ ರಾತ್ರಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಅಕಾಲಿಕ ಮಳೆಗೆ ರೈತರ ತೋಟಗಾರಿಕೆ ಬೆಳೆ ಹನಿಯಾಗಿದೆ.

    ಗುಡಿಬಂಡೆ ತಾಲೂಕಿನ ಕಂಬಾಲಹಳ್ಳಿ ಗ್ರಾಮದಲ್ಲಿ 15 ವರ್ಷದ ಬಾಲಕ ನಾಗರಾಜು ಮತ್ತು ಗೌರಿಬಿದನೂರು ತಾಲೂಕಿನ ಭಾದಮಳ್ಳೂರು ಗ್ರಾಮದಲ್ಲಿ ಕುರಿಗಾಹಿ ಭೀಮಪ್ಪ (55) ಎಂಬವರು ಸಿಡಿಲ ಬಡಿತಕ್ಕೆ ಸಾವನ್ನಪ್ಪಿದ್ದಾರೆ.

    ನಾಗರಾಜು ತೋಟದಿಂದ ಮನೆಗೆ ಬರುವ ವೇಳೆ ರಸ್ತೆಯಲ್ಲಿ ಸಿಡಿಲು ಬಡಿತಕ್ಕೆ ತಗುಲಿ ಸಾವನ್ನಪ್ಪಿದ್ದಾನೆ. ನಿನ್ನೆ ಕುರಿ ಕಾಯಲು ಹೋಗಿದ್ದ ಭೀಮಪ್ಪ ಅವರು ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇಂದು ಬೆಳಗ್ಗೆ ಗ್ರಾಮಸ್ಥರು ಹುಡುಕಾಟ ನಡೆಸಿದಾಗ ಜಾಲಮರದ ಕೆಳಗೆ ಭೀಮಪ್ಪರ ಮೃತ ದೇಹ ಪತ್ತೆಯಾಗಿದೆ.

    ಅಕಾಲಿಕ ಮಳೆಯಿಂದಾಗಿ ಗೌರಿಬಿದನೂರು ತಾಲೂಕಿನ ವಿಳಪಿ ಗ್ರಾಮದ ನಾಗರಾಜು ಎಂಬುವವರ ಬಾಳೆತೋಟ ಸಂಪೂರ್ಣ ನೆಲಕಚ್ಚಿದೆ. ಹಲವೆಡೆ ತೋಟಗಾರಿಕಾ ಬೆಳೆಗಳಾದ ಮಾವು, ದ್ರಾಕ್ಷಿ ಬೆಳೆಗಳು ಸಹ ಹಾನಿಯಾಗಿ ಒಳಪಟ್ಟಿವೆ. ಇನ್ನು ಶಿಡ್ಲಘಟ್ಟ ತಾಲೂಕಿನ ಅಂಗತಟ್ಟಿ ಗ್ರಾಮದ ಬಳಿ ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದ್ದು ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಬಿಸಿಲ ಬೇಗೆಯಿಂದ ತತ್ತರಿಸಿದ ಜಿಲ್ಲೆಯ ಜನತೆಗೆ ಮಳೆರಾಯ ತಂಪು ಎರೆದಿದ್ದು, ಕೆಲವು ಕಡೆ ಬೆಳೆ ಹಾನಿ ಕೂಡ ಸಂಭವಿಸಿದೆ.

    .

     

    https://youtu.be/Edfpkczu9zs

  • ಹಾವೇರಿ: ಕಾರು ಪಲ್ಟಿ ಹೊಡೆದು ಇಬ್ಬರ ಸಾವು

    ಹಾವೇರಿ: ಕಾರು ಪಲ್ಟಿ ಹೊಡೆದು ಇಬ್ಬರ ಸಾವು

    ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕಾಮನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರು ಮೂಲದ ರವೀಂದ್ರನ್ (35) ಮತ್ತು ಲಕ್ಷ್ಮೀ (30) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಶಿಗ್ಗಾವಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಹುಬ್ಬಳ್ಳಿ ನಗರದಿಂದ ಬೆಂಗಳೂರಿಗೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ.

    ಸ್ಥಳಕ್ಕೆ ಶಿಗ್ಗಾವಿ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

  • ಸೇತುವೆಗೆ ಡಿಕ್ಕಿ ಹೊಡೆದ ಬೈಕ್: ಇಬ್ಬರ ಸಾವು, ಓರ್ವ ಗಂಭೀರ

    ಸೇತುವೆಗೆ ಡಿಕ್ಕಿ ಹೊಡೆದ ಬೈಕ್: ಇಬ್ಬರ ಸಾವು, ಓರ್ವ ಗಂಭೀರ

    ರಾಯಚೂರು:ಮಾನ್ವಿ ತಾಲೂಕಿನ ನಂದಿಹಾಳ ಗ್ರಾಮದ ಬಳಿ ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಇನ್ನೋರ್ವನಿಗೆ ಗಂಭೀರ ಗಾಯಗಳಾಗಿವೆ.

    ನರೇಂದ್ರ (28) ಮತ್ತು ರವಿ (25) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿ ಯುವಕರು. ಇನ್ನೋರ್ವ ಸವಾರ ಸಹದೇವ್‍ಗೆ ಗಂಭೀರ ಗಾಯಗಳಾಗಿದ್ದು, ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅತಿ ವೇಗದಲ್ಲಿ ಬಂದ ಬೈಕ್ ರಸ್ತೆ ತಿರುವಿನ ವೇಳೆ ನಿಯಂತ್ರಣಕ್ಕೆ ಬರದೇ ಸೇತುವೆಗೆ ಡಿಕ್ಕಿ ಹೊಡೆದಿದೆ. ಯುವಕರು ಸಿಂಧನೂರು ಪಟ್ಟಣದಿಂದ ಮಾನ್ವಿಗೆ ಬರುತ್ತಿದ್ದರು. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಮದುವೆಯಾಗಲು ನಿರಾಕರಿಸಿ ಪ್ರೇಯಸಿಯ ಕೊಲೆ ಮಾಡಿ ಶವ ಹೂತಿಟ್ಟ ಪ್ರಿಯಕರ

    ಮದುವೆಯಾಗಲು ನಿರಾಕರಿಸಿ ಪ್ರೇಯಸಿಯ ಕೊಲೆ ಮಾಡಿ ಶವ ಹೂತಿಟ್ಟ ಪ್ರಿಯಕರ

    – 4 ವರ್ಷದ ನಂತರ ಬಯಲಾಯ್ತು ಪ್ರಿಯತಮನ ನೀಚ ಕೃತ್ಯ

    ಯಾದಗಿರಿ: ಮೂರು ವರ್ಷದಿಂದ ಪ್ರೀತಿ ಮಾಡಿ, ಮದುವೆ ಮಾಡಿಕೊಳ್ಳುತ್ತೆನೆಂದು ಪ್ರೇಯಸಿಯನ್ನು ನಂಬಿಸಿ ಗರ್ಭಿಣಿ ಮಾಡಿ ನಂತರ ಪ್ರಿಯತಮ ಮೋಸ ಮಾಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಮದುವೆ ಮಾಡಿಕೋ ಅಂದ್ರೆ ಪ್ರೇಯಸಿಯನ್ನೇ ಕೊಲೆ ಮಾಡಿ ಶವವನ್ನು ಹೂತಿಟ್ಟಿದ್ದ ಪ್ರಿಯತಮನ ನೀಚ ಕೃತ್ಯ ನಾಲ್ಕು ವರ್ಷದ ನಂತರ ಬೆಳಕಿಗೆ ಬಂದಿದ್ದು, ಅವನ ಎದರೇ ಪ್ರೇಯಸಿಯ ಮೃತದೇಹದ ಅವಶೇಷಗಳನ್ನು ಹೊರತೆಗೆಯಲಾಗಿದೆ.

    ಜಿಲ್ಲೆಯ ಸುರಪುರ ತಾಲೂಕಿನ ಹಾಲಗೇರಾ ಗ್ರಾಮದ ನಿವಾಸಿ ಭೀಮನಗೌಡ ಎಂಬಾತನೇ ಪ್ರೇಯಸಿಯನ್ನು ಕೊಲೆಗೈದ ವ್ಯಕ್ತಿ. ಭೀಮನಗೌಡ ಅದೇ ಗ್ರಾಮದ ಕುಸುಮಾ ಎಂಬ ಯುವತಿಯನ್ನು ಪ್ರೀತಿ ಮಾಡುತ್ತಿದ್ದ. ಕುಸಮಾರ ತಾಯಿ ಅರೇಮ್ಮಾ ಭೀಮನಗೌಡನ ಮನೆಯಲ್ಲಿ ಕೆಲಸ ಮಾಡುಕೊಂಡಿದ್ದರು. ಅರೇಮ್ಮಾ ದೇವದಾಸಿಯಾಗಿದ್ದು, ಇದನ್ನೇ ಬಂಡವಾಳ ಮಾಡಿಕೊಂಡ ಭೀಮನಗೌಡ ಅರೇಮ್ಮಾರ ಮಗಳನ್ನು ಪ್ರೀತಿ ಮಾಡುವ ನಾಟಕ ಮಾಡಿದ್ದ.

    ನೀನು ದೇವದಾಸಿಯ ಮಗಳು, ನಾನು ನಿನ್ನನ್ನು ಮದುವೆ ಆಗ್ತೀನಿ ಎಂದು ನಂಬಿಸಿ ಭೀಮನಗೌಡ ಕುಸುಮಾ ಜೊತೆ ದೈಹಿಕ ಸಂಪರ್ಕ ಬೆಳಸಿದ್ದ. ನಂತರ ಕುಸುಮಾ ಗರ್ಭಿಣಿಯಾದಾಗ ಭೀಮನಗೌಡನಿಗೆ ಮದುವೆ ಮಾಡಿಕೋ ಎಂದು ಕೇಳಿಕೊಂಡಿದ್ದರು. ಆದ್ರೆ ಭೀಮನಗೌಡ ಮದುವೆಯಾಗಲು ನಿರಾಕರಿಸಿದ್ದು, ನಿಮ್ಮ ತಾಯಿ ದೇವದಾಸಿ. ನೀನು ಕೂಡ ದೇವದಾಸಿಯಾಗಿ ನೆಮ್ಮದಿಯಾಗಿ ಜೀವನ ಸಾಗಿಸು ಎಂದು ಹೇಳಿದ್ದಾನೆ.

    ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದಾಗ, 2013 ರಲ್ಲಿ ಭೀಮನಗೌಡ ಇತರೆ 5 ಜನರ ಸಹಾಯದಿಂದ ಕುಸಮಾರನ್ನು ಅಪಹರಿಸಿ ಗ್ರಾಮದ ಹಳ್ಳದಲ್ಲಿ ಕೊಲೆ ಮಾಡಿ ಶವವನ್ನು ಹೂತಿಟ್ಟಿದ್ದ.

    2013ರಲ್ಲಿ ಕುಸುಮಾ ಅಪಹರಣದ ಬಗ್ಗೆ ಅರೇಮ್ಮಾ ಸುರಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಮುಂದಾದಾಗ ಪೊಲೀಸರು ಕೇಸ್ ದಾಖಲಿಸಿಕೊಂಡಿರಲಿಲ್ಲ. ಕೊನೆಗೆ 2016ರ ಅಕ್ಟೋಬರ್‍ನಲ್ಲಿ ಅರೇಮ್ಮಾ ಎಸ್‍ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದಾಗ ಪ್ರಕರಣವನ್ನು ದಾಖಲಿಸಿಕೊಂಡಿದ್ದರು.

    ಪ್ರಕರಣದ ವಿಚಾರಣೆ ಆರಂಭಿಸಿದ ಪೊಲೀಸರು, ಆರೋಪಿ ಭೀಮನಗೌಡ ಮತ್ತು ಆತನ ಸಹಚರರನ್ನು ಬಂಧಿಸಿದ್ದಾರೆ. ನಿನ್ನೆ (ಸೋಮವಾರ) ಸಹಾಯಕ ಆಯುಕ್ತ ಡಾ.ಜಗದೀಶ್ ಹಾಗೂ ಸುರಪುರ ಠಾಣಾ ಪೊಲೀಸರ ನೇತೃತ್ವದಲ್ಲಿ ಕುಸುಮಾರ ಶವದ ಅವಶೇಷಗಳನ್ನು ಹೊರ ತೆಗಯಲಾಗಿದೆ. ತನ್ನ ಮಗಳು ಸುರಕ್ಷಿತವಾಗಿ ಪತ್ತೆಯಾಗಿ ನನ್ನ ಮಡಿಲಿಗೆ ಸೇರುತ್ತಾಳೆಂದು ಕಳೆದ ನಾಲ್ಕು ವರ್ಷದಿಂದ ಹಂಬಲಿಸುತ್ತಿದ್ದ ತಾಯಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

     

  • ಸೌದಿಯಲ್ಲಿ ಮೈಸೂರು ಮೂಲದ ವ್ಯಕ್ತಿ ಸಾವು- ಪ್ರತಾಪ್ ಸಿಂಹ ಟ್ವೀಟ್‍ಗೆ ಸ್ಪಂದಿಸಿದ ಸಚಿವೆ ಸುಷ್ಮಾ ಸ್ವರಾಜ್

    ಸೌದಿಯಲ್ಲಿ ಮೈಸೂರು ಮೂಲದ ವ್ಯಕ್ತಿ ಸಾವು- ಪ್ರತಾಪ್ ಸಿಂಹ ಟ್ವೀಟ್‍ಗೆ ಸ್ಪಂದಿಸಿದ ಸಚಿವೆ ಸುಷ್ಮಾ ಸ್ವರಾಜ್

    ಮೈಸೂರು: ಸೌದಿಯಲ್ಲಿ ಮೈಸೂರು ಮೂಲದ ವ್ಯಕ್ತಿ ಅನುಮಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಮಾಡಿದ ಟ್ವೀಟ್‍ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪ್ರತಿಕ್ರಿಯಿಸಿದ್ದಾರೆ.

    ಮಾರ್ಚ್ 25 ರಂದು ಶಬ್ಬಿರ್ (24) ಎಂಬವರು ಸೌದಿಯಲ್ಲಿ ಮೃತರಾಗಿದ್ದರು. 9 ತಿಂಗಳ ಹಿಂದೆ ಡ್ರೈವರ್ ಕೆಲಸಕ್ಕಾಗಿ ಶಬ್ಬಿರ್ ಸೌದಿಗೆ ತೆರಳಿದ್ದರು. ಮೂರು ದಿನಗಳ ಹಿಂದೆ ನೇಣುಬಿಗಿದ ಸ್ಥಿತಿಯಲ್ಲಿ ಶಬ್ಬೀರ್ ಶವ ಪತ್ತೆಯಾಗಿತ್ತು. ಶವದ ಸ್ಥಿತಿ ನೋಡಿದ ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪ ಮಾಡಿದ್ದರು.

    ಶಬ್ಬಿರ್ ಮೃತದೇಹವನ್ನು ಭಾರತಕ್ಕೆ ಕಳುಹಿಸಲು ಅಲ್ಲಿನ ಕಂಪೆನಿ ಮಾಲೀಕರು 3 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಶಬ್ಬಿರ್ ಮೃತದೇಹ ತರಿಸಿಕೊಡುವಂತೆ ಸಂಸದ ಪ್ರತಾಪ್ ಸಿಂಹಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಪ್ರತಾಪ್ ಸಿಂಹ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಪತ್ರ ಬರೆದು ಟ್ವೀಟ್ ಕೂಡ ಮಾಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸುಷ್ಮಾ ಸ್ವರಾಜ್ ಭಾರತೀಯ ರಾಯಭಾರಿ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

  • ಮದುವೆ ಆಮಂತ್ರಣ ಕೊಡಲು ಹೋಗ್ತಿದ್ದ ಕಾರು ಪಲ್ಟಿಯಾಗಿ ನಾಲ್ವರ ಸಾವು

    ಮದುವೆ ಆಮಂತ್ರಣ ಕೊಡಲು ಹೋಗ್ತಿದ್ದ ಕಾರು ಪಲ್ಟಿಯಾಗಿ ನಾಲ್ವರ ಸಾವು

    ಮೈಸೂರು: ಮದುವೆ ಆಹ್ವಾನ ಪತ್ರಿಕೆ ನೀಡಲು ಹೋಗುತ್ತಿದ್ದ ಕಾರೊಂದು ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿರುವ ಭೀಕರ ಅಪಘಾತ ಹುಣಸೂರಿನ ಹೆಚ್.ಡಿ.ಕೋಟೆ ರಸ್ತೆಯಲ್ಲಿ ಸಂಭವಿಸಿದೆ.

    ಹುಣಸೂರಿನ ನಲ್ಲೂರು ಪಾಲಾ ಗ್ರಾಮದ ಬಳಿ ಟವೇರಾ ಕಾರು ಪಲ್ಟಿಯಾಗಿ ಈ ಘಟನೆ ಸಂಭವಿಸಿದ್ದು, ಮೃತರೆಲ್ಲರೂ ಬೆಂಗಳೂರಿನವರೆಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಅತಿಯಾದ ವೇಗದ ಚಾಲನೆಯಿಂದಲೇ ಈ ದುರಂತ ಸಂಭವಿಸಿದೆ ಎನ್ನಲಾಗಿದ್ದು ಹುಣಸೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಮೃತರ ವಿವರ: ಘಟನೆಯಲ್ಲಿ ಮೃತಪಟ್ಟವರನ್ನು ಘೋರ್ಪಡೆ (49), ರಾಜನ್ ಸೋಲಂಕಿ (25), ಕೌಶಿಕ್ ಚೌಹಾಣ್ (32) ಹಾಗೂ ಕಿಶೋರ್ ಯಾದವ್ ಎಂದು ಗುರುತಿಸಲಾಗಿದೆ.

    ಅಪಘಾತದಲ್ಲಿ ಮೂವರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಂದ್ರಶೇಖರ್, ಯಶ್ವಂ

    ತ್ ರಾವ್ ಘೋರ್ಪಡೆ, ವಿಜಯ್ ಘೋರ್ಪಡೆ ಗಾಯಾಳುಗಳಾಗಿದ್ದು ಇವರಿಗೆ ಚಿಕಿತ್ಸೆ ಮುಂದುವರೆದಿದೆ. ಗಾಯಾಳು ಚಂದ್ರಶೇಖರ್ ಎಂಬವರ ಕುಟುಂಬದವರಿಗೆ ಮದುವೆಗೆ ಆಹ್ವಾನಿಸಲು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

     

     

  • ಮಂಗಳೂರು: ಬೆಕ್ಕು ಕಚ್ಚಿ ರೇಬೀಸ್‍ಗೆ ತುತ್ತಾಗಿ ಉಪನ್ಯಾಸಕಿ ಸಾವು

    ಮಂಗಳೂರು: ಬೆಕ್ಕು ಕಚ್ಚಿ ರೇಬೀಸ್‍ಗೆ ತುತ್ತಾಗಿ ಉಪನ್ಯಾಸಕಿ ಸಾವು

    ಮಂಗಳೂರು: ಬೆಕ್ಕು ಕಚ್ಚಿ ರೇಬಿಸ್‍ಗೆ ತುತ್ತಾಗಿ ಉಪನ್ಯಾಸಕಿಯೊಬ್ಬರು ಮೃತಪಟ್ಟಿರೋ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದಲ್ಲಿ ನಡೆದಿದೆ.

    ಕೇಂದ್ರ ಸಚಿವ ಡಿವಿ ಸದಾನಂದ ಗೌಡರ ಸಂಬಂಧಿ 56 ವರ್ಷದ ಪುಷ್ಪಾವತಿ ರೇಬಿಸ್‍ನಿಂದಾಗಿ ಮೃತಪಟ್ಟ ಮಹಿಳೆ. ಪುಷ್ಪಾವತಿ ಅವರಿಗೆ ನಾಲ್ಕು ತಿಂಗಳ ಹಿಂದೆ ಮನೆಯಲ್ಲಿ ಬೆಕ್ಕು ಕಚ್ಚಿತ್ತು. ಈ ಬಗ್ಗೆ ಆರಂಭದಲ್ಲಿ ಪುಷ್ಪಾವತಿ ನಿರ್ಲಕ್ಷ್ಯ ವಹಿಸಿದ್ದರು. ಆದರೆ ಕೆಲ ದಿನಗಳ ಹಿಂದೆ ಬೆನ್ನು ನೋವಿಗೆ ಒಳಗಾಗಿ ಆಸ್ಪತ್ರೆ ಸೇರಿದ ಪುಷ್ಪಾವತಿ ಅವರಲ್ಲಿ ರೇಬಿಸ್ ಲಕ್ಷಣಗಳು ಪತ್ತೆಯಾಗಿತ್ತು ಮತ್ತು ವರ್ತನೆಯಲ್ಲೂ ಅಸಹಜತೆ ಕಾಣಿಸಿಕೊಂಡಿತ್ತು.

    ತಕ್ಷಣ ಮನೆಯವರು ಪುಷ್ಪಾವತಿ ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಮತ್ತು ಅಪೋಲೊ ಆಸ್ಪತ್ರೆಗೆ ಸೇರಿಸಿದ್ದರೂ, ಚಿಕಿತ್ಸೆ ಫಲಿಸದೆ ಪುಷ್ಪಾವತಿ ಮೃತಪಟ್ಟಿದ್ದಾರೆ. ಕಳೆದ 25 ವರ್ಷಗಳಿಂದ ಉಪ್ಪಿನಂಗಡಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಪುಷ್ಪಾವತಿ ಅಪಾರ ಶಿಷ್ಯ ವರ್ಗವನ್ನೂ ಹೊಂದಿದ್ದರು.

     

  • ಕೊಡಗು: ವಿದ್ಯಾರ್ಥಿನಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಕಿ ಬಲಿ ತೆಗೆದುಕೊಂಡ ಕಾಡಾನೆ!

    ಕೊಡಗು: ವಿದ್ಯಾರ್ಥಿನಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಕಿ ಬಲಿ ತೆಗೆದುಕೊಂಡ ಕಾಡಾನೆ!

    – ಘಟನೆಯಿಂದ ಸಹೋದರ ಪಾರು
    – ದಾಳಿಯ ರಭಸಕ್ಕೆ ಆನೆ ದಂತವೇ ಕಟ್

    ಮಡಿಕೇರಿ: ಸ್ಕೂಟಿಯಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿ ಮತ್ತು ಅಕೆಯ ಸಹೋದರನ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಲ್ಲಿಕಾಡು ಬಳಿ ನಡೆದಿದೆ.

    ಮೃತ ದುರ್ಧೈವಿ ವಿದ್ಯಾರ್ಥಿನಿಯನ್ನು 20 ವರ್ಷದ ಸಫಾನಾ ಎಂದು ಗುರುತಿಸಲಾಗಿದೆ.

    ಘಟನೆ ವಿವರ: ಇಂದು ಬೆಳಗ್ಗೆ ಸಫಾನಾ ತನ್ನ ಸಹೋದರನ ಜೊತೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಕಾಡಾನೆ ಅಡ್ಡಗಟ್ಟಿ ದಾಳಿ ಮಾಡಿದೆ. ಸ್ಕೂಟಿಗೆ ಗುದ್ದಿದ ರಭಸಕ್ಕೆ ಆನೆಯ ದಂತವೇ ಮುರಿದು ಬಿದ್ದಿದೆ. ಈ ವೇಳೆ ಬೈಕ್ ಸವಾರ ಸಫಾನಾ ಸಹೋದರ ಓಡಿ ಹೋಗಿದ್ದು, ಅಪಾಯದಿಂದ ಪಾರಾಗಿದ್ದಾನೆ. ಆದ್ರೆ ಹಿಂಬದಿಯಲ್ಲಿ ಕುಳಿತಿದ್ದ ಸಫಾನಾಳನ್ನು ಮಾತ್ರ ತನ್ನ ಸೊಂಡಿಲಿನಿಂದ ಎತ್ತಿ ಬಿಸಾಡಿದ್ದು ಸಫನಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

    ವಿಷಯ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಅರಣ್ಯ ಇಲಾಖೆ ವಿರುದ್ಧ ತೀವ್ರವಾಗಿ ಪ್ರತಿಭಟನೆ ನಡೆಸಿದ್ದಾರೆ. ಕೊಡಗಿನಲ್ಲಿ ದಿನದಿಂದ ದಿನಕ್ಕೆ ಕಾಡಾನೆ ಹಾವಳಿ ಮಿತಿಮೀರಿದ್ದು ಅರಣ್ಯ ಇಲಾಖೆ ಮಾತ್ರ ಏನೂ ಗೊತ್ತಿಲ್ಲದಂತೆ ವರ್ತಿಸುತ್ತಿದೆ. ಇದರಿಂದ ಇಲ್ಲಿನ ಜನ ಭಯದಿಂದಲೇ ಜೀವನ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಇಲ್ಲಿನ ವಿದ್ಯಾರ್ಥಿಗಳು ಗೋಣಿಕೊಪ್ಪ ಕಾಲೇಜಿಗೆ ಈ ಮಾರ್ಗವಾಗಿಯೇ ತೆರಳಬೇಕಾಗುತ್ತದೆ. ಹೀಗಾಗಿ ದಿನನಿತ್ಯ ಆತಂಕದಲ್ಲಿ ಹೋಗಿಬರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೆ ತಿತಿಮತಿ ಮತ್ತು ಪಾಲಿಬೆಟ್ಟ ರಸ್ತೆಯನ್ನು ಕೆಲ ಕಾಲ ಬಂದ್ ಮಾಡುವಂತೆ ಅಕ್ರೋಶ ವ್ಯಕ್ತಪಡಿಸಿದರು.

    ಮೃತಪಟ್ಟ ವಿದ್ಯಾರ್ಥಿನಿ ಕುಟುಂಬಕ್ಕೆ ಸ್ಥಳದಲ್ಲೇ ಪರಿಹಾರ ನೀಡುವವರೆಗೂ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗುವುದಿಲ್ಲ ಅಂತಾ ಗ್ರಾಮಸ್ಥರು ಪಟ್ಟುಹಿಡಿದಿದ್ದರು.