Tag: Deepak Chahar

  • ಗೆಳತಿಗೆ ಸ್ಟೇಡಿಯಂನಲ್ಲೇ ಪ್ರಪೋಸ್‌ ಮಾಡಿದ ದೀಪಕ್‌ ಚಹರ್‌

    ಗೆಳತಿಗೆ ಸ್ಟೇಡಿಯಂನಲ್ಲೇ ಪ್ರಪೋಸ್‌ ಮಾಡಿದ ದೀಪಕ್‌ ಚಹರ್‌

    ದುಬೈ: ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ದೀಪಕ್ ಚಹರ್ ಗುರುವಾರ ಗೆಳತಿ ಜಯಾ ಭಾರದ್ವಾಜ್‌ ಅವರಿಗೆ ಸ್ಟೇಡಿಯಂನಲ್ಲೇ ಪ್ರೇಮ ನಿವೇದನೆ ಮಾಡಿದ್ದಾರೆ.

    ಪಂಜಾಬ್‌ ಕಿಂಗ್ಸ್‌ ಪಂದ್ಯದ ಬಳಿಕ ಚಹರ್‌ ಎಲ್ಲರೆದುರೇ ಪ್ರಪೋಸ್‌ ಮಾಡಿದ್ದಾರೆ. ದೀಪಕ್‌ ಪ್ರಪೋಸ್‌ ಮಾಡಲು ಮುಂದಾಗುತ್ತಿದ್ದಂತೆ ಜಯಾ ಒಮ್ಮೆ ಶಾಕ್‌ ಆಗಿದ್ದಾರೆ.

     

    View this post on Instagram

     

    A post shared by Deepak Chahar (@deepak_chahar9)


    ನಟ ಮತ್ತು ಬಿಗ್‌ಬಾಸ್‌ 13ರ ವಿಜೇತ ಸಿದ್ಧಾರ್ಥ್ ಭಾರದ್ವಾಜ್ ಅವರ ಸಹೋದರಿಯಾಗಿರುವ ದೆಹಲಿಯ ಜಯಾ ಕಾರ್ಪೊರೇಟ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.

    ಇಬ್ಬರೂ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದು, ದೀಪಕ್ ಚಹರ್‌ ಗೆಳತಿ ಜಯಾ ಅವರನ್ನು ಟೀಂ ಇಂಡಿಯಾದ ಆಟಗಾರರಿಗೆ ಪರಿಚಯಿಸಿದ್ದಾರೆ ಎಂದು ವರದಿಯಾಗಿದೆ.

    ಬಾಲಿವುಡ್ ಮಾಡೆಲ್ ಮತ್ತು ನಟಿ ಮಾಲ್ತಿ ಚಹರ್‌ ಅವರ ತಮ್ಮನಾಗಿರುವ ದೀಪಕ್‌ ಚಹರ್‌ ಅವರು ಕ್ರಿಕೆಟಿಗ ರಾಹುಲ್‌ ಚಹರ್‌ ಅವರ ಅಣ್ಣನಾಗಿದ್ದಾರೆ. ಐಪಿಎಲ್‌ ಎರಡನೇ ಆವೃತ್ತಿ ಸಮಯದಲ್ಲಿ ದೀಪಕ್‌ ಜೊತೆ ಜಯಾ ಸಹ ಯುಎಇಗೆ ತೆರಳಿದ್ದರು. ದೀಪಕ್‌ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಅಪ್ಲೋಡ್‌ ಮಾಡಿ ʼSpecial momentʼ ಎಂದು ಬರೆದು ಹೃದಯದ ಎಮೋಜಿ ಹಾಕಿದ್ದಾರೆ.

  • 8ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ದಾಖಲೆ ನಿರ್ಮಿಸಿದ ದೀಪಕ್ ಚಹರ್

    8ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ದಾಖಲೆ ನಿರ್ಮಿಸಿದ ದೀಪಕ್ ಚಹರ್

    ಕೊಲಂಬೋ: ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತಕ್ಕೆ ಗೆಲುವನ್ನು ತಂದುಕೊಟ್ಟ ಹೀರೋ ದೀಪಕ್ ಚಹರ್ ಭಾರತದ ಪರ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

    ಭಾರತ ವಿರುದ್ಧ ಶ್ರೀಲಂಕಾ ಗೆದ್ದೆಬಿಟ್ಟಿತು ಎನ್ನುವಷ್ಟರಲ್ಲಿ ಫಲಿತಾಂಶ ತಲೆಕೆಳಗಾಗಿತ್ತು. ವೇಗದ ಬೌಲರ್ ಆಗಿ ತಂಡದಲ್ಲಿ ಸ್ಥಾನ ಪಡೆದಿದ್ದ ದೀಪಕ್ ಚಹರ್ ಬೌಲಿಂಗ್‍ನಲ್ಲಿ ಕಮಾಲ್ ಮಾಡುವುದರೊಂದಿಗೆ ಬ್ಯಾಟಿಂಗ್‍ನಲ್ಲೂ ತಮ್ಮ ಸಾಹಸ ಮೆರೆದು ಭಾರತಕ್ಕೆ ಗೆಲುವುತಂದುಕೊಟ್ಟಿದ್ದರು. ಈ ಪಂದ್ಯದಲ್ಲಿ ಚಹರ್ 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‍ಗಿಳಿದು ಔಟಾಗದೇ 69 ರನ್(82 ಎಸೆತ, 7ಬೌಂಡರಿ, 1 ಸಿಕ್ಸರ್) ಸಿಡಿಸಿದ್ದರು. ಇದು ಭಾರತೀಯ ಆಟಗಾರನೊಬ್ಬ 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‍ಗಿಳಿದು ಅತೀ ಹೆಚ್ಚು ರನ್ ಸಿಡಿಸಿ ಭಾರತವನ್ನು ಗೆಲ್ಲಿಸಿಕೊಟ್ಟ ಮೊದಲ ಆಟಗಾರ ಎಂಬ ದಾಖಲೆಗೆ ಪಾತ್ರವಾಗಿದೆ. ಈ ಮೂಲಕ ಭಾರತ ತಂಡ ಅಮೋಘ 3 ವಿಕೆಟ್‍ಗಳ ಜಯದೊಂದಿಗೆ ಸರಣಿಯನ್ನು ವಶಪಡಿಸಿಕೊಂಡಿದೆ.

    ಚಹರ್ ತನ್ನ ಚೊಚ್ಚಲ ಏಕದಿನ ಅರ್ಧಶತಕದೊಂದಿಗೆ 8ನೇ ಕ್ರಮಾಂಕದಲ್ಲಿ ಅತೀ ಹೆಚ್ಚು ರನ್ ಸಿಡಿಸಿದ ಖ್ಯಾತಿಗೆ ಪಾತ್ರರಾಗಿದ್ದಾರೆ. ಈ ಮೊದಲು 2017ರಲ್ಲಿ ಶ್ರೀಲಂಕಾ ವಿರುದ್ಧ 9ನೇ ಕ್ರಮಾಂಕದಲ್ಲಿ ಭುವನೇಶ್ವರ್ ಕುಮಾರ್ 53 ರನ್ ಸಿಡಿಸಿ ಮಿಂಚಿದ್ದರು.

    ದೀಪಕ್ ಚಹರ್ ಮತ್ತು ಭುವನೇಶ್ವರ್ ಕುಮಾರ್ 84 ಎಸೆತಗಳಲ್ಲಿ 84ರನ್ ಜೊತೆಯಾಟವಾಡಿ ಏಕದಿನ ಕ್ರಿಕೆಟ್‍ನಲ್ಲಿ ಭಾರತ ಪರ ಗರಿಷ್ಠ ರನ್‍ಗಳ ಜೊತೆಯಾಟವಾಡಿದ ಜೋಡಿಗಳ ಪೈಕಿ ಜಂಟಿ 2ನೇ ಸ್ಥಾನ ಹಂಚಿಕೊಂಡಿದೆ. ಈ ಮೊದಲು ಹರ್ಭಜನ್ ಸಿಂಗ್ ಮತ್ತು ಪ್ರವೀಣ್ ಕುಮಾರ್ 2009ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಎಂಟನೇ ವಿಕೆಟ್‍ಗೆ 84 ರನ್‍ಗಳ ಜೊತೆಯಾಟವಾಡಿತ್ತು. ಎಂಟನೇ ವಿಕೆಟ್‍ಗಳ ಜೊತೆಯಾಟದಲ್ಲಿ ಮೊದಲ ಸ್ಥಾನದಲ್ಲಿ ಮಾಜಿ ನಾಯಕ ಎಂ.ಎಸ್ ಧೋನಿ ಮತ್ತು ಭುವನೇಶ್ವರ್ ಕುಮಾರ್ ಇದ್ದು, 2017ರಲ್ಲಿ ಶ್ರೀಲಂಕಾ ವಿರುದ್ಧ 100ರನ್‍ಗಳ ಜೊತೆಯಾಟವಾಡಿ ದಾಖಲೆ ನಿರ್ಮಿಸಿದ್ದಾರೆ. ಇದನ್ನೂ ಓದಿ: 8ನೇ ವಿಕೆಟಿಗೆ 84 ರನ್ ಜೊತೆಯಾಟ – ರೋಚಕ ಜಯ, ಭಾರತಕ್ಕೆ ಸರಣಿ

    ಚಹರ್ ಇದಲ್ಲದೆ ಒಂದೇ ಪಂದ್ಯದಲ್ಲಿ 2 ವಿಕೆಟ್ ಮತ್ತು 84ರನ್ ಸಿಡಿಸಿದ ಮೊದಲ ಆಟಗಾರರಾಗಿದ್ದಾರೆ. ಈ ಮೊದಲು 2009ರಲ್ಲಿ ಯುವರಾಜ್ ಸಿಂಗ್ ಶ್ರಿಲಂಕಾ ವಿರುದ್ಧ 2ವಿಕೆಟ್ ಮತ್ತು 73 ರನ್ ಸಿಡಿಸಿದ್ದರು.

  • ಐಪಿಎಲ್ ದ್ವಿತೀಯಾರ್ಧದಲ್ಲಿ ಧೋನಿ ಬ್ಯಾಟ್‍ನಿಂದ ರನ್ ಮಳೆ ಸುರಿಯಲಿದೆ: ದೀಪಕ್ ಚಹರ್

    ಐಪಿಎಲ್ ದ್ವಿತೀಯಾರ್ಧದಲ್ಲಿ ಧೋನಿ ಬ್ಯಾಟ್‍ನಿಂದ ರನ್ ಮಳೆ ಸುರಿಯಲಿದೆ: ದೀಪಕ್ ಚಹರ್

    ಚೆನ್ನೈ: 2021ರ ಐಪಿಎಲ್‍ನ ಮೊದಲಾರ್ಧದ ಏಳು ಪಂದ್ಯಗಳಲ್ಲಿ ಸೈಲೆಂಟ್ ಆಗಿದ್ದ ಧೋನಿಯ ಬ್ಯಾಟ್‍ನಿಂದ ಮುಂದಿನ ದ್ವಿತೀಯಾರ್ಧದಲ್ಲಿ ರನ್ ಮಳೆ ಸುರಿಯಲಿದೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗಿ ದೀಪಕ್ ಚಹರ್ ಭವಿಷ್ಯ ನುಡಿದಿದ್ದಾರೆ.

    ಈ ಕುರಿತು ಸ್ಥಳೀಯ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ದೀಪಕ್ ಚಹರ್, ಯಾವುದೇ ಬ್ಯಾಟ್ಸ್‌ಮ್ಯಾನ್ 15 ರಿಂದ 20 ವರ್ಷಗಳ ಕಾಲ ಒಂದೇ ರೀತಿ ಬ್ಯಾಟ್ ಬೀಸಲು ಸಾಧ್ಯವಿಲ್ಲ. ಯಾವುದೇ ಆಟಗಾರ ಸ್ಪರ್ಧಾತ್ಮಕ ಕ್ರಿಕೆಟ್‍ನಿಂದ ದೂರ ಸರಿದ ಬಳಿಕ ಮತ್ತೆ ಸ್ಪರ್ಧೆಗಿಳಿದರೆ ಫಾರ್ಮ್ ಕಂಡುಕೊಳ್ಳಲು ಕೆಲ ಸಮಯ ತೆಗೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ.

    ಧೋನಿ ಯಾವತ್ತು ಕೂಡ ಫಿನಿಷರ್ ರೋಲ್‍ನ್ನು ನಿಭಾಯಿಸುತ್ತಾರೆ. ಈ ಹಿಂದೆ ಅವರೊಂದಿಗೆ ಆಡಿದಾಗಲೂ ಅವರು ನಿಧಾನವಾಗಿ ಫಾರ್ಮ್ ಕಂಡುಕೊಂಡು ತಂಡಕ್ಕೆ ಜಯ ತಂದುಕೊಟ್ಟಿರುವುದನ್ನು ನೋಡಿದ್ದೇನೆ. ಹಾಗಾಗಿ ಇದೀಗ ಕೊರೊನಾದಿಂದಾಗಿ ಮುಂದೂಡಲ್ಪಟ್ಟಿರುವ ಐಪಿಎಲ್‍ನ ಮುಂದಿನ ಭಾಗದಲ್ಲಿ ಧೋನಿಯ ಬ್ಯಾಟಿಂಗ್‍ನಿಂದ ರನ್ ಮಳೆ ಸುರಿಯಲಿದ್ದು ಬೆಸ್ಟ್ ಪ್ರದರ್ಶನ ನೀಡಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    14ನೇ ಆವೃತ್ತಿಯ ಐಪಿಎಲ್‍ನ ಮೊದಲಾರ್ಧವು ತಂಡದ ಆಟಗಾರರಲ್ಲಿ ಕಾಣಿಸಿಕೊಂಡ ಕೊರೊನಾ ಸೋಂಕಿನಿಂದ ಮುಂದೂಡಲ್ಪಟ್ಟಿತ್ತು. ಇದೀಗ ಸೆಪ್ಟಂಬರ್‍ನಲ್ಲಿ ದುಬೈನಲ್ಲಿ ದ್ವಿತೀಯಾರ್ಧ ನಡೆಸುವ ಬಗ್ಗೆ ಸುದ್ದಿ ಹರಿದಾಡುತ್ತಿದೆ. ಧೋನಿ 14ನೇ ಆವೃತ್ತಿಯ ಐಪಿಎಲ್‍ನಲ್ಲಿ ಚೆನ್ನೈ ಪರ ಏಳು ಪಂದ್ಯಗಳನ್ನು ಆಡಿ ಕೇವಲ 37 ರನ್ ಬಾರಿಸಿದ್ದಾರೆ.

  • ನಾವು ಕುಟುಂಬದ ಜೊತೆ ಇದ್ದಾಗ ಮಾಸ್ಕ್ ಹಾಕಲ್ಲ- ಚಹರ್ ಕಮೆಂಟ್ ವೈರಲ್

    ನಾವು ಕುಟುಂಬದ ಜೊತೆ ಇದ್ದಾಗ ಮಾಸ್ಕ್ ಹಾಕಲ್ಲ- ಚಹರ್ ಕಮೆಂಟ್ ವೈರಲ್

    ನವದೆಹಲಿ: ನಾವು ಕುಟುಂಬದ ಜೊತೆ ಇದ್ದಾಗ ಮಾಸ್ಕ್ ಹಾಕಲ್ಲ ಎಂದು ಸಿಎಸ್‍ಕೆ ತಂಡದ ವೇಗಿ ದೀಪಕ್ ಚಹರ್ ಈ ಹಿಂದೆ ಮಾಡಿದ್ದ ಕಮೆಂಟ್ ವೈರಲ್ ಆಗಿದೆ.

    ಶುಕ್ರವಾರವಷ್ಟೇ ಯುಎಇಯಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗಿ ದೀಪಕ್ ಚಹರ್ ಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇವರ ಜೊತೆ ತಂಡದ 10 ಸಹಾಯಕ ಸಿಬ್ಬಂದಿಗೂ ಕೊರೊನಾ ವೈರಸ್ ತಗುಲಿದ್ದು, ಮಾಸ್ಕ್ ಬಗ್ಗೆ ಚಹರ್ ಈ ಹಿಂದೆ ಮಾಡಿದ್ದ ಇನ್‍ಸ್ಟಾ ಕಮೆಂಟ್ ಈಗ ವೈರಲ್ ಆಗಿದೆ.

    ಯುಎಇಗೆ ಹೊರಡುವ ಮುನ್ನಾ ದೀಪಕ್ ಚಹರ್ ಅವರು, ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದೇ ಸಿಎಸ್‍ಕೆ ಇತರ ಆಟಗಾರರ ಜೊತೆ ಸೆಲ್ಫಿ ತೆಗೆದುಕೊಂಡಿದ್ದರು. ಈ ಫೋಟೋವನ್ನು ಚಹರ್ ಅವರು, ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಾಕಿಕೊಂಡಿದ್ದರು. ಇದಕ್ಕೆ ಸ್ವತಃ ಅವರ ಸಹೋದರ ರಾಹುಲ್ ಚಹರ್ ಅವರು, ನಿಮ್ಮ ಮಾಸ್ಕ್ ಎಲ್ಲಿ ಸಹೋದರ, ಸಾಮಾಜಿಕ ಅಂತರ ಎಲ್ಲಿ ಎಂದು ಕಮೆಂಟ್ ಮಾಡಿದ್ದರು.

    ಸಹೋದರನ ಕಮೆಂಟ್‍ಗೆ ಪ್ರತಿಕ್ರಿಯೆ ಕೊಟ್ಟಿದ್ದ ಚಹರ್, ನಾನು ಎರಡು ಸಲ ಕೊರೊನಾ ಟೆಸ್ಟ್ ಮಾಡಿಸಿದ್ದೇನೆ ಅದರಲ್ಲಿ ನೆಗೆಟಿವ್ ಬಂದಿದೆ ಸಹೋದರ. ನಾವು ಕುಟುಂಬದ ಜೊತೆ ಇದ್ದಾಗ ಮಾಸ್ಕ್ ಹಾಕಿಕೊಳ್ಳಲ್ಲ ಎಂದಿದ್ದರು. ಈಗ ಅವರಿಗೇ ಯುಎಇಗೆ ತೆರಳಿದ ನಂತರ ಕೊರೊನಾ ಪಾಸಿಟಿವ್ ಬಂದಿದ್ದು, ಈಗ ಈ ಕಮೆಂಟ್ ವೈರಲ್ ಆಗಿದೆ. ಇದನ್ನೇ ಇಟ್ಟುಕೊಂಡು ನೆಟ್ಟಿಗರು ಚಹರ್ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.

    ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗಸ್ಟ್ 21ರಂದೇ ಯುಎಇಗೆ ತೆರಳಿತ್ತು. ಎಂದಿನಂತೆ ಎಲ್ಲ ಆಟಗಾರರಿಗೆ ಭಾರತದಲ್ಲೂ ಕೂಡ ಒಂದು ಬಾರಿ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಅಂತೆಯೇ ಯುಎಇಗೆ ತೆರಳಿದ ತಂಡ ಅಲ್ಲಿ ಆರು ದಿನಗಳ ಕಾಲ ಕ್ವಾರಂಟೈನ್‍ಗೆ ಒಳಗಾಗಿತ್ತು. ಶುಕ್ರವಾರಕ್ಕೆ ಆ ಅವಧಿ ಮುಗಿಯಲಿದ್ದು, ಚೆನ್ನೈ ತಂಡ ಅಭ್ಯಾಸ ನಡೆಸಬೇಕಿತ್ತು. ಆದರೆ ಕೊರೊನಾ ಟೆಸ್ಟ್ ನಲ್ಲಿ ತಂಡದ ಸದಸ್ಯರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಹೀಗಾಗಿ ತಂಡ ಸೆಪ್ಟೆಂಬರ್ 1ರಿಂದ ಅಭ್ಯಾಸ ಆರಂಭಿಸಲಿದೆ.

  • ಸಿಎಸ್‍ಕೆ ದೀಪಕ್ ಚಹರ್‌ಗೆ ಕೊರೊನಾ – ಮುಂದಕ್ಕೆ ಹೋಗುತ್ತಾ ಐಪಿಎಲ್?

    ಸಿಎಸ್‍ಕೆ ದೀಪಕ್ ಚಹರ್‌ಗೆ ಕೊರೊನಾ – ಮುಂದಕ್ಕೆ ಹೋಗುತ್ತಾ ಐಪಿಎಲ್?

    – ಬಿಸಿಸಿಐ ಲೆಕ್ಕಾಚಾರವೇನು?

    ಅಬುಧಾಬಿ: ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಓರ್ವ ವೇಗದ ಬೌಲರ್ ಮತ್ತು ಕೆಲ ಸಹಾಯಕ ಸಿಬ್ಬಂದಿಗೆ ಕೊರೊನಾ ಪಾಸಿಟವ್ ಬಂದಿದೆ ಎಂಬ ಸುದ್ದಿ ಹೊರಬಿದ್ದಿತ್ತು.

    ಆದರೆ ಸಿಎಸ್‍ಕೆ ತಂಡದಲ್ಲಿ ಯಾವ ವೇಗಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ತಿಳಿದಿರಲಿಲ್ಲ. ಈಗ ಆ ಮಾಹಿತಿ ಹೊರಬಂದಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ವೇಗಿ ದೀಪಕ್ ಚಹರ್‌ಗೆ ಕೊರೊನಾ ಪಾಸಿಟಿವ್ ಬಂದಿದೆ ಎಂಬ ಮಾಹಿತಿ ಲಭಿಸಿದೆ. ದೀಪಕ್ ಚಹರ್ ಜೊತೆಗೆ ತಂಡದ 10 ಸಹಾಯಕ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಬಂದಿದೆ.

    ಐಪಿಎಲ್ ಆರಂಭವಾಗಲು ಕೇವಲ ಇನ್ನು 20 ದಿನ ಮಾತ್ರ ಬಾಕಿ ಉಳಿದಿದೆ. ಇದರ ಮಧ್ಯೆ ಮುಂದಿನ ವಾರದಲ್ಲಿ ಬಿಸಿಸಿಐ ಐಪಿಎಲ್ ಪಂದ್ಯಗಳ ಔಪಚಾರಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವ ಯೋಜನೆಯನ್ನು ಹೊಂದಿತ್ತು. ಆದರೆ ಈಗ ಪರಿಸ್ಥಿತಿ ಸ್ವಲ್ಪ ಬಿಗುಡಯಾಸಿದ್ದು, ಸದ್ಯಕ್ಕೆ ಪರಿಸ್ಥಿತಿ ಹಿಡಿತಕ್ಕೆ ಬರುವವರೆಗೂ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವುದು ಬೇಡ ಎಂದು ಬಿಸಿಸಿಐ ತೀರ್ಮಾನಿಸಿದೆ. ಹೀಗಾಗಿ ಐಪಿಎಲ್ ಮತ್ತೆ ಮುಂದಕ್ಕೆ ಹೋಗುತ್ತಾ ಎಂಬ ಅನುಮಾನ ಮೂಡಿದೆ.

    ಸದ್ಯ ಪರಿಸ್ಥಿತಿಯನ್ನು ನಿಭಾಯಿಸಲು ಸಾಕಷ್ಟು ಕ್ರಮಗಳನ್ನು ನಾವು ಕೈಗೊಂಡಿದ್ದೇವೆ. ಈಗ ಪಂದ್ಯಾವಳಿಗಳನ್ನು ತಕ್ಷಣದ ಆರಂಭ ಮಾಡಬೇಕು ಎಂಬ ಯಾವುದೇ ತುರ್ತು ಪರಿಸ್ಥಿತಿಯಿಲ್ಲ. ಈಗ ಆಗಿರುವ ಬೆಳವಣಿಗೆಯಿಂದಾಗಿ ಪಂದ್ಯಗಳ ಘೋಷಣೆ ವಿಳಂಬವಾಗಿದೆ. ಪರಿಸ್ಥಿತಿ ನಮ್ಮ ಹಿಡಿತಕ್ಕೆ ಬಂದ ನಂತರ ನಾವು ವೇಳಾಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ ಎಂದು ಬಿಸಿಸಿಐನ ಉನ್ನತ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.

    ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗಸ್ಟ್ 21ರಂದೇ ಯುಎಇಗೆ ತೆರಳಿತ್ತು. ಎಂದಿನಂತೆ ಎಲ್ಲ ಆಟಗಾರರಿಗೆ ಭಾರತದಲ್ಲೂ ಕೂಡ ಒಂದು ಬಾರಿ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಅಂತೆಯೇ ಯುಎಇಗೆ ತೆರಳಿದ ತಂಡ ಅಲ್ಲಿ ಆರು ದಿನಗಳ ಕಾಲ ಕ್ವಾರಂಟೈನ್‍ಗೆ ಒಳಗಾಗಿತ್ತು. ಶುಕ್ರವಾರಕ್ಕೆ ಆ ಅವಧಿ ಮುಗಿಯಲಿದ್ದು, ಚೆನ್ನೈ ತಂಡ ಅಭ್ಯಾಸ ನಡೆಸಬೇಕಿತ್ತು. ಆದರೆ ಕೊರೊನಾ ಟೆಸ್ಟ್ ನಲ್ಲಿ ತಂಡದ ಸದಸ್ಯರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಹೀಗಾಗಿ ತಂಡ ಸೆಪ್ಟೆಂಬರ್ 1ರಿಂದ ಅಭ್ಯಾಸ ಆರಂಭಿಸಲಿದೆ.

    ಕೊರೊನಾ ವೈರಸ್ ಕಾರಣದಿಂದಲೇ ಕಳೆದ ಮಾರ್ಚ್‍ನಲ್ಲೇ ನಡೆಯಬೇಕಿದ್ದ, ಐಪಿಎಲ್-2020 ಮುಂದಕ್ಕೆ ಹೋಗಿತ್ತು. ಭಾರತದಲ್ಲಿ ಕೊರೊನಾ ಹಿಡಿತಕ್ಕೆ ಸಿಗದ ಹಿನ್ನೆಲೆ ಸೋಂಕಿನ ಪ್ರಮಾಣ ಕಮ್ಮಿ ಇರುವ ಯುಎಇಯಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ತೀರ್ಮಾನ ಮಾಡಿದೆ. ಅಂತೆಯೇ ಸೆಪ್ಟೆಂಬರ್ 19ರಿಂದ ಐಪಿಎಲ್ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನವೇ ಐಪಿಎಲ್ ಮೇಲೆ ಕೊರೊನಾ ಕರಿನೆರಳು ಬಿದ್ದಿದೆ.

  • ಧೋನಿ ರೀ ಎಂಟ್ರಿ ಸಾಧ್ಯ ಎಂದ ಟೀಂ ಇಂಡಿಯಾ ವೇಗಿ

    ಧೋನಿ ರೀ ಎಂಟ್ರಿ ಸಾಧ್ಯ ಎಂದ ಟೀಂ ಇಂಡಿಯಾ ವೇಗಿ

    ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಬಹು ಸಮಯದಿಂದ ತಂಡದಿಂದ ದೂರ ಉಳಿದಿದ್ದಾರೆ. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಆಡದಿರುವ ಧೋನಿ ರೀ ಎಂಟ್ರಿ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಹಿರಿಯ ಕ್ರಿಕೆಟ್ ಆಟಗಾರರು ಸೇರಿದಂತೆ ಕ್ರಿಕೆಟ್ ವಿಶ್ಲೇಷಕರು ಧೋನಿ ಕಮ್‍ಬ್ಯಾಕ್ ಕುರಿತು ತಮ್ಮದೇ ಅಭಿಪ್ರಾಯ ತಿಳಿಸಿದ್ದಾರೆ. ಸದ್ಯ ಟೀ ಇಂಡಿಯಾ ಯುವ ವೇಗಿ ದೀಪಕ್ ಚಹಾರ್ ಕೂಡ ಧೋನಿ ರೀ ಎಂಟ್ರಿ ಕುರಿತು ಕುತೂಹಲದ ಹೇಳಿಕೆಯನ್ನು ನೀಡಿದ್ದಾರೆ.

    ಲಾಕ್‍ಡೌನ್ ಕಾರಣದಿಂದ ಮನೆಯಲ್ಲಿ ಉಳಿದಿರುವ ಚಹರ್ ಇನ್‍ಸ್ಟಾದಲ್ಲಿ ಅಭಿಮಾನಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. 2020ರ ಐಪಿಎಲ್ ಟೂರ್ನಿ ನಡೆದು, ಅದರಲ್ಲಿ ಧೋನಿ ಉತ್ತಮ ಪ್ರದರ್ಶನ ನೀಡುವುದರೊಂದಿಗೆ ತಂಡಕ್ಕೆ ಕಮ್‍ಬ್ಯಾಕ್ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಕಳೆದ ಎರಡು ವರ್ಷಗಳ ಹಿಂದೆ ಧೋನಿ ನಾಯಕತ್ವದ ಏಷ್ಯಾಕಪ್ ಟೂರ್ನಿಯಲ್ಲಿ ಚಹಾರ್ ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದರು. ಆದಾಗಲೇ ಧೋನಿ ನಿವೃತ್ತಿ ಘೋಷಿಸಿದ್ದರು ಆ ವೇಳೆ ನಡೆದ ಬೆಳೆವಣಿಗೆಗಳ ಕಾರಣದಿಂದ ತಂಡದ ನಾಯಕತ್ವವನ್ನು ಮತ್ತೆ ವಹಿಸಿಕೊಂಡಿದ್ದರು. ವಿಶೇಷ ಎಂಬಂತೆ ಆ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ್ದು ನನ್ನ ಅದೃಷ್ಠ ಎಂದು ಚಹಾರ್ ಹೇಳಿದ್ದಾರೆ. ಅಲ್ಲದೇ ಧೋನಿ ಟೀಂ ಇಂಡಿಯಾ ಪರ ಆಡುವ ಅಂತಿಮ ಪಂದ್ಯದ ತಂಡದಲ್ಲಿ ನಾನು ಇರಬೇಕು ಎಂದು ಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.

    ಧೋನಿ ಅವರ ಫಿಟ್ನೆಸ್ ಲೆವೆಲ್ ಸಹ ಅತ್ಯುತ್ತಮವಾಗಿದೆ. ಈಗಲೂ ಅವರು ತಂಡದ ಪರ ಆಡುವ ಸಾಮಥ್ರ್ಯವನ್ನು ಹೊಂದಿದ್ದಾರೆ ಎಂದು ಚಹರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂದಹಾಗೇ ಚಹರ್ ಐಪಿಎಲ್‍ನಲ್ಲಿ ಚೆನ್ನೈ ಪರ ವೇಗದ ಬೌಲರ್ ಆಗಿ ಆಗಮನ ಸೆಳೆದಿದ್ದರು. ಧೋನಿ ನಾಯಕತ್ವದ ಸಿಎಸ್‍ಕೆ ತಂಡದ ಪ್ರಮುಖ ಆಟಗಾರ ಸ್ಥಾನವನ್ನು ಚಹರ್ ಪಡೆದಿದ್ದಾರೆ.

  • ಬಹುಕಾಲದ ಗೆಳತಿಯೊಂದಿಗೆ ಯುವ ಕ್ರಿಕೆಟಿಗ ಚಹರ್ ನಿಶ್ಚಿತಾರ್ಥ

    ಬಹುಕಾಲದ ಗೆಳತಿಯೊಂದಿಗೆ ಯುವ ಕ್ರಿಕೆಟಿಗ ಚಹರ್ ನಿಶ್ಚಿತಾರ್ಥ

    ಮುಂಬೈ: ಟೀಂ ಇಂಡಿಯಾ ಯುವ ಲೆಗ್ ಸ್ಪಿನ್ನರ್ 20 ವರ್ಷದ ರಾಹುಲ್ ಚಹರ್ ತಮ್ಮ ಬಹುಕಾಲದ ಗೆಳತಿ ಐಶಾನಿರೊಂದಿಗೆ ನಿಶ್ವಿತಾರ್ಥ ಮಾಡಿಕೊಂಡಿದ್ದು, ಮುಂದಿನ ವರ್ಷ ಮದುವೆಯಾಗಲು ತಯಾರಿ ನಡೆಸಿದ್ದಾರೆ.

    ರಾಜಸ್ಥಾನ ಮೂಲದ ರಾಹುಲ್ ಚಹರ್ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಡಿ.12ರ ಗುರುವಾರ ಕುಟುಂಬ ಸದಸ್ಯರ ಸಮ್ಮುಖದಲ್ಲಿ ನಡೆಯಿತು. ನವಜೋಡಿಗೆ ಶುಭಕೋರಿರುವ ಸಹೋದರ ದೀಪಕ್ ಚಹರ್ ಇಬ್ಬರೊಂದಿಗಿರುವ ಫೋಟೋವನ್ನು ತಮ್ಮ ಇನ್‍ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.

    ಅಂದಹಾಗೇ ಇದೇ ವರ್ಷ ಆಗಸ್ಟ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದಿದ್ದ ಸರಣಿಯಲ್ಲಿ ರಾಹುಲ್ ಚಹರ್ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದ್ದರು. ಅಲ್ಲದೇ ಟೀಂ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವಾಡಿದ 4ನೇ ಸಹೋದರರ ಜೋಡಿ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದರು. ಈ ಹಿಂದೆ ಮೊಹಿಂದರ್ ಅಮರನಾಥ್-ಸುರಿಂದರ್ ಅಮರನಾಥ್, ಇರ್ಫಾನ್ ಪಠಾಣ್-ಯೂಸುಫ್ ಪಠಾಣ್, ಹಾರ್ದಿಕ್ ಪಾಂಡ್ಯ-ಕೃಣಾಲ್ ಪಾಂಡ್ಯ ಸಹೋದರರು ಟೀಂ ಇಂಡಿಯಾ ಪರ ಆಡಿದ್ದರು.

    ಟೀಂ ಇಂಡಿಯಾ ಎ ತಂಡ ಹಾಗೂ ಐಪಿಎಲ್‍ನಲ್ಲಿ ತೋರಿದ ಉತ್ತಮ ಪ್ರದರ್ಶನದ ಹಿನ್ನೆಲೆಯಲ್ಲಿ ರಾಹುಲ್ ಚಹರ್ ಟೀಂ ಇಂಡಿಯಾದಲ್ಲಿ ಅವಕಾಶ ಪಡೆದರು. ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿದ್ದ ರಾಹುಲ್, ಕಳೆದ ವರ್ಷ 6.55 ಎಕಾನಮಿಯೊಂದಿಗೆ 13 ವಿಕೆಟ್ ಪಡೆದಿದ್ದರು. ದೀಪಕ್ ಚಹರ್ ಟೀಂ ಇಂಡಿಯಾದಲ್ಲಿ ಸತತವಾಗಿ ಅವಕಾಶ ಪಡೆಯುತ್ತಿದ್ದು, ಇತ್ತೀಚೆಗೆ ಮುಕ್ತಾಯವಾದ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿಯಲ್ಲೂ ಉತ್ತಮ ಪ್ರದರ್ಶನ ನೀಡಿದ್ದರು. ಅಲ್ಲದೇ ಕಳೆದ ತಿಂಗಳು ಬಾಂಗ್ಲಾದೇಶದ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ 3.2 ಓವರ್ ಗಳಲ್ಲಿ ಕೇವಲ 7 ರನ್ ನೀಡಿ 6 ವಿಕೆಟ್ ಪಡೆಯುವ ಮೂಲಕ ವಿಶ್ವದಾಖಲೆಯನ್ನು ಬರೆದರು. ಇದೇ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಚಹರ್ ಟಿ20 ಮಾದರಿಯಲ್ಲಿ ಈ ಸಾಧನೆ ಮಾಡಿದ ಮೊದಲ  ಭಾರತೀಯ ಎಂಬ ಹೆಗ್ಗಳಿಕೆಯನ್ನು ಪಡೆದರು.

    https://www.instagram.com/p/B5-ouWYpIDA/

  • ಹ್ಯಾಟ್ರಿಕ್ ಸಾಧನೆ ಬಳಿಕ 88 ಸ್ಥಾನ ಜಿಗಿದ ದೀಪಕ್ ಚಹರ್

    ಹ್ಯಾಟ್ರಿಕ್ ಸಾಧನೆ ಬಳಿಕ 88 ಸ್ಥಾನ ಜಿಗಿದ ದೀಪಕ್ ಚಹರ್

    ನವದೆಹಲಿ: ಭಾನುವಾರ ಬಾಂಗ್ಲಾದೇಶದ ವಿರುದ್ಧ ಟಿ-20 ಪಂದ್ಯದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ ಭಾರತದ ಯುವ ವೇಗಿ ದೀಪಕ್ ಚಹರ್ ಐಸಿಸಿ ಬೌಲಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ 88 ಸ್ಥಾನ ಏರಿಕೆಯಾಗಿ 42 ಸ್ಥಾನ ಪಡೆದಿದ್ದಾರೆ.

    ಭಾನುವಾರ ಬಾಂಗ್ಲಾದೇಶದ ವಿರುದ್ಧ ನಡೆದ ಮೂರನೇ ಟಿ-20 ಪಂದ್ಯದಲ್ಲಿ ಭಾರತ 30 ರನ್‍ಗಳ ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ ಬೌಲರ್ ದೀಪಕ್ ಚಹರ್, ಈ ಪಂದ್ಯಕ್ಕೂ ಮುಂಚೆ ಐಸಿಸಿ ರ‍್ಯಾಂಕಿಂಗ್ ನಲ್ಲಿ 130 ಸ್ಥಾನದಲ್ಲಿದ್ದರು. ಆದರೆ ಈ ಪಂದ್ಯದಲ್ಲಿ 6 ವಿಕೆಟ್ ಪಡೆದು ಮಿಂಚಿದ ನಂತರ ಐಸಿಸಿ ರ‍್ಯಾಂಕಿಂಗ್ ಪಟ್ಟಿಯಲ್ಲಿ 88 ಸ್ಥಾನ ಜಿಗಿತಗೊಂಡು 42 ಸ್ಥಾನಕ್ಕೆ ಬಂದಿದ್ದಾರೆ.

    ಸೋಮವಾರ ಐಸಿಸಿ ತನ್ನ ನೂತನ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಭಾನುವಾರ ಬಾಂಗ್ಲಾ ವಿರುದ್ಧ ಮಾರಕ ಬೌಲಿಂಗ್ ದಾಳಿ ಮಾಡಿ ಭಾರತ ಗೆಲುವಿಗೆ ನೆರವಾದ ದೀಪಕ್ ಚಹರ್ 517 ಅಂಕಗಳೊಂದಿಗೆ 42 ಸ್ಥಾನದಲ್ಲಿ ಇದ್ದಾರೆ. ಇವರನ್ನು ಬಿಟ್ಟರೆ 519 ಅಂಕಗಳಿಂದ ಜಸ್ಪ್ರಿತ್ ಬುರ್ಮಾ ಅವರು 40 ಸ್ಥಾನದಲ್ಲಿ ಇದ್ದರೆ, 29 ಸ್ಥಾನದಲ್ಲಿ ಭುವನೇಶ್ವರ್ ಕುಮಾರ್, 27 ಸ್ಥಾನದಲ್ಲಿ ವಾಷಿಂಗ್ಟನ್ ಸುಂದರ್, 25 ಸ್ಥಾನದಲ್ಲಿ ಚಹಲ್, 18 ಸ್ಥಾನದಲ್ಲಿ ಕೃನಲ್ ಪಾಂಡ್ಯ, 14 ಸ್ಥಾನದಲ್ಲಿ ಕುಲದೀಪ್ ಯಾದವ್ ಅವರು ಇದ್ದಾರೆ.

    ದೀಪಕ್ ಚಹರ್ ಅವರ ಅದ್ಭುತ ಬೌಲಿಂಗ್ ದಾಳಿಯ ಸಹಾಯದಿಂದ ಗೆದ್ದ ಭಾರತ ಐಸಿಸಿ ಟಿ-20 ರ‍್ಯಾಂಕಿಂಗ್ ನಲ್ಲಿ ಐದನೇ ಸ್ಥಾನದಲ್ಲಿ ಇದ್ದು, ಪಾಕಿಸ್ತಾನ ಮೊದಲ ಸ್ಥಾನದಲ್ಲಿ ಇದೆ. ಬಾಂಗ್ಲಾ ವಿರುದ್ಧ ಪಂದ್ಯದ ನಂತರ ರೋಹಿತ್ ಶರ್ಮಾ ಅವರು ಐಸಿಸಿ ಟಿ-20 ರ‍್ಯಾಂಕಿಂಗ್ ಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದ್ದು, ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ ಕೆ.ಎಲ್ ರಾಹುಲ್ ಒಂದು ಸ್ಥಾನ ಏರಿಕೆಯಾಗಿ ಎಂಟನೇ ಸ್ಥಾನದಲ್ಲಿ ಇದ್ದಾರೆ.

    ದೀಪಕ್ ಲೋಕೇಂದ್ರಸಿಂಗ್ ಚಹರ್ ಅವರು ಬಲಗೈ ಮಧ್ಯಮ-ವೇಗದ ಬೌಲರ್ ಮತ್ತು ಕೆಳ ಕ್ರಮಾಂಕದ ಬ್ಯಾಟ್ಸ್‍ಮನ್ ಆಗಿದ್ದು, ದೇಶೀಯ ಕ್ರಿಕೆಟ್‍ನಲ್ಲಿ ರಾಜಸ್ಥಾನ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಾರೆ. ಭಾನುವಾರದ ಪಂದ್ಯದಲ್ಲಿ ಹ್ಯಾಟ್ರಿಕ್ ಮೂಲಕ 7 ರನ್ ನೀಡಿ 6 ವಿಕೆಟ್ ಕಬಳಿಸದ ಅವರು, ಟ್ವೆಂಟಿ -20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಹ್ಯಾಟ್ರಿಕ್ ಪಡೆದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಈ ಪಂದ್ಯದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡುವ ಮೂಲಕ ಭಾರತದ ಪರ ಟಿ-20ಯಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ ಮೊದಲ ಬೌಲರ್ ಎಂಬ ದಾಖಲೆ ಬರೆದರು. ಈ ಪಂದ್ಯದಲ್ಲಿ ದೀಪಕ್ ಚಹರ್ ಎಸೆದದ್ದು 20 ಎಸೆತ (3.2 ಓವರ್), ನೀಡಿದ್ದು 7 ರನ್, ಯಾವುದೇ ಇತರೆ ರನ್ ಇಲ್ಲ. ಆದರೆ ಪಡೆದದ್ದು 6 ವಿಕೆಟ್. ಇದರಲ್ಲೂ 14 ಎಸೆತಗಳಿಗೆ ಯಾವುದೇ ರನ್ ಬಂದಿರಲಿಲ್ಲ.

    ಈ ಪಂದ್ಯದಲ್ಲಿ 6 ವಿಕೆಟ್ ಪಡೆಯುವ ಮೂಲಕ ಟಿ20ಯಲ್ಲಿ ಚಹರ್ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಮೊದಲು ಶ್ರೀಲಂಕಾದ ಅಜಂತ ಮೆಂಡೀಸ್ 8 ರನ್ ನೀಡಿ 6 ವಿಕೆಟ್ ಪಡೆದಿದ್ದರು. ಈಗ 7 ರನ್ ನೀಡಿ 6 ವಿಕೆಟ್ ಪಡೆಯುವುದರೊಂದಿಗೆ ಈ ದಾಖಲೆಯನ್ನು ಚಹರ್ ಈಗ ಮುರಿದಿದ್ದಾರೆ.

  • 20 ಎಸೆತ 7ರನ್ 6 ವಿಕೆಟ್- ಚಹರ್ ಹ್ಯಾಟ್ರಿಕ್ ಸಾಧನೆ, ಭಾರತಕ್ಕೆ ಸರಣಿ

    20 ಎಸೆತ 7ರನ್ 6 ವಿಕೆಟ್- ಚಹರ್ ಹ್ಯಾಟ್ರಿಕ್ ಸಾಧನೆ, ಭಾರತಕ್ಕೆ ಸರಣಿ

    – ಶ್ರೇಯಸ್ ಅಯ್ಯರ್ ಹ್ಯಾಟ್ರಿಕ್ ಸಿಕ್ಸ್
    – 2-1 ಅಂತರದಿಂದ ಸರಣಿ ಗೆದ್ದ ಟೀಂ ಇಂಡಿಯಾ

    ನಾಗ್ಪುರ: ದೀಪಕ್ ಚಹರ್ ಹ್ಯಾಟ್ರಿಕ್ ವಿಕೆಟ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಅರ್ಧಶತಕದ ಸಾಧನೆಯಿಂದ ಭಾರತ ಬಾಂಗ್ಲಾದೇಶ ವಿರುದ್ಧ 30 ರನ್ ಗಳಿಂದ ಮೂರನೇ ಟಿ-20 ಪಂದ್ಯವನ್ನು ಗೆದ್ದುಕೊಂಡಿದೆ.

    ಗೆಲ್ಲಲು 175 ರನ್ ಗಳ ಕಠಿಣ ಸವಾಲನ್ನು ಪಡೆದ ಬಾಂಗ್ಲಾ 19.2 ಓವರ್ ಗಳಲ್ಲಿ 144 ರನ್ ಗಳಿಗೆ ಆಲೌಟ್ ಆಯ್ತು. ಈ ಮೂಲಕ ಪೇಟಿಎಂ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ.

    ಈ ಪಂದ್ಯದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡುವ ಮೂಲಕ ಭಾರತದ ಪರ ಟಿ-20ಯಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ ಮೊದಲ ಬೌಲರ್ ಎಂಬ ದಾಖಲೆ ಬರೆದರು. ಈ ಪಂದ್ಯದಲ್ಲಿ ದೀಪಕ್ ಚಹರ್ ಎಸೆದದ್ದು 20 ಎಸೆತ (3.2‌ ಓವರ್), ನೀಡಿದ್ದು 7 ರನ್, ಯಾವುದೇ ಇತರೆ ರನ್ ಇಲ್ಲ. ಆದರೆ ಪಡೆದದ್ದು 6 ವಿಕೆಟ್. ಇದರಲ್ಲೂ 14 ಎಸೆತಗಳಿಗೆ ಯಾವುದೇ ರನ್ ಬಂದಿಲ್ಲ.

    ಈ ಪಂದ್ಯದಲ್ಲಿ 6 ವಿಕೆಟ್ ಪಡೆಯುವ ಮೂಲಕ ಟಿ20ಯಲ್ಲಿ ಚಹರ್ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಮೊದಲು ಶ್ರೀಲಂಕಾದ ಅಜಂತ ಮೆಂಡೀಸ್ 8 ರನ್ ನೀಡಿ 6 ವಿಕೆಟ್ ಪಡೆದಿದ್ದರು. ಈಗ 7 ರನ್ ನೀಡಿ 6 ವಿಕೆಟ್ ಪಡೆಯುವುದರೊಂದಿಗೆ ಈ ದಾಖಲೆಯನ್ನು ಚಹರ್ ಈಗ ಮುರಿದಿದ್ದಾರೆ.

    ಇನ್ನಿಂಗ್ಸ್ ನ ಮೊದಲ ಓವರ್ ನಲ್ಲಿಯೇ ಬಾಂಗ್ಲಾ ಬ್ಯಾಟ್ಸ್‌ಮನ್‌ ಗಳು ಸ್ಫೋಟಕ ಬ್ಯಾಟಿಂಗ್ ಆರಂಭಿಸಿದರು. ಹೀಗಾಗಿ ಟೀಂ ಇಂಡಿಯಾ ಬೌಲರ್ ಖಲೀಲ್ ಅಹ್ಮದ್ 8ರನ್ ನೀಡಿದರು. ನಂತರ ಬೌಲಿಂಗ್ ಮಾಡಿದ ವಾಷಿಂಗ್ಟನ್ ಸುಂದರ್ ಬಾಂಗ್ಲಾ ಬ್ಯಾಟ್ಸ್‌ಮನ್ ಗಳನ್ನು ಕಟ್ಟಿಹಾಕಿ ಕೇವಲ 3 ರನ್ ನೀಡಿದರು. ಇನ್ನಿಂಗ್ಸ್ ನ ಮೂರನೇ ಓವರ್ ನ 4 ಹಾಗೂ 5ನೇ ಎಸೆತದಲ್ಲಿ ದೀಪಕ್ ಚಹರ್ ಪ್ರಮುಖ ಎರಡು ವಿಕೆಟ್ ಉರುಳಿಸಿದರು. ಬಾಂಗ್ಲಾ ಆರಂಭಿಕ ಬ್ಯಾಟ್ಸ್‌ಮನ್‌ ಲಿಟನ್ ದಾಸ್ (8 ರನ್) ಹಾಗೂ ಸೌಮ್ಯ ಸರ್ಕಾರ್ (0 ರನ್) ಪೆವಿಲಿಯನ್‍ಗೆ ತೆರಳಿದರು. ಹೀಗಾಗಿ ಇನ್ನಿಂಗ್ಸ್ ನ 4 ಓವರ್ ಅಂತ್ಯಕ್ಕೆ ಬಾಂಗ್ಲಾ ಕೇವಲ 18 ರನ್ ಗಳಿಸಲು ಶಕ್ತವಾಗಿತ್ತು.

    ಆರಂಭಿಕ ಬ್ಯಾಟ್ಸ್‌ಮನ್‌ ಮೊಹಮ್ಮದ್ ನೈಮ್‍ಗೆ ಸಾಥ್ ನೀಡಿದ ಮೊಹಮ್ಮದ್ ಮಿಥುನ್ ವಿಕೆಟ್ ಕಾಯ್ದುಕೊಂಡು, ಆಟ ಮುಂದುವರಿಸಿದರು. ಈ ಜೋಡಿಯು ತಂಡದ ಮೊತ್ತವನ್ನು ಇನ್ನಿಂಗ್ಸ್ ನ 8 ಓವರ್ ಅಂತ್ಯಕ್ಕೆ 53 ರನ್‍ಗಳಿಗೆ ಏರಿಸಿತು.

    ದುಬಾರಿಯಾದ ಚಹಲ್, ದುಬೆ:
    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಹಲ್ ಹಾಗೂ ಆಲ್‌ ರೌಂಡರ್ ಶಿವಂ ದುಬೇ ಬಾಂಗ್ಲಾ ದೇಶದ ಬ್ಯಾಟ್ಸ್‌ಮನ್ ಗಳನ್ನು ಕಟ್ಟಿಹಾಕುವಲ್ಲಿ ವಿಫಲರಾದರು. ಎರಡು ಓವರ್ ಬೌಲಿಂಗ್ ಮಾಡಿದ ಚಹಲ್ 23 ರನ್ ನೀಡಿದರೆ, ದುಬೇ ಕೂಡ ಎರಡು ಓವರ್ ಬೌಲಿಂಗ್ ಮಾಡಿ 23 ರನ್ ಹೊಡೆಸಿಕೊಂಡರು. ಇತ್ತ ಇನ್ನಿಂಗ್ಸ್ ನ 12ನೇ ಓವರ್ ನ ಮೊದಲ ಎಸೆತದಲ್ಲಿ ರನ್ ಔಟ್ ಮಾಡಲು ಅವಕಾಶ ಸಿಕ್ಕರೂ ಚಹಲ್ ಮಿಸ್ ಮಾಡಿದರು. ಪರಿಣಾಮ ಮೊಹಮ್ಮದ್ ನೈಮ್ ಹಾಗೂ ಮಿಥುನ್ ಜೋಡಿಯು 12ನೇ ಓವರ್ ಅಂತ್ಯಕ್ಕೆ ತಂಡದ ಮೊತ್ತವನ್ನು 106 ರನ್‍ಗೆ ಪೇರಿಸಿತು.

    98 ರನ್ ಜೊತೆಯಾಟ:
    ಮೊಹಮ್ಮದ್ ನೈಮ್ ಹಾಗೂ ಮೊಹಮ್ಮದ್ ಮಿಥುನ್ ತಮ್ಮ ಸ್ಫೋಟಕ ಬ್ಯಾಟಿಂಗ್‍ನಿಂದ ಭಾರತದ ಬೌಲರ್ ಗಳನ್ನು ಕಾಡಿದರು. ಇನ್ನಿಂಗ್ಸ್ ನ 13ನೇ ಓವರ್ ನಲ್ಲಿ ದೀಪಕ್ ಚಹರ್, ಮೊಹಮ್ಮದ್ ಮಿಥುನ್ ವಿಕೆಟ್ ಉರುಳಿಸಿ ತಂಡಕ್ಕೆ ಆಸರೆಯಾದರು. ಈ ಮೂಲಕ ನೈಮ್ ಹಾಗೂ ಮಿಥುನ್ ಅವರ 98 ರನ್‍ಗಳ ಜೊತೆಯಾಟವನ್ನು ಚಹರ್ ಮುರಿದರು. 29 ಎಸೆತಗಳಲ್ಲಿ ಮಿಥುನ್ ಸಿಕ್ಸ್, 2 ಬೌಂಡರಿ ಸೇರಿ 27 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

    ಈ ಬೆನ್ನಲ್ಲೇ ಶಿವಂ ದುಬೈ ಬೌಲಿಂಗ್‍ಗೆ ಮುಷ್ಫಿಕರ್ ರಹೀಂ (0 ರನ್‍ಗೆ) ವಿಕೆಟ್ ಒಪ್ಪಿಸಿದರು. ಅಷ್ಟೇ ಅಲ್ಲದೆ ಇನ್ನಿಂಗ್ಸ್ ನ 16ನೇ ಓವರ್ ನಲ್ಲಿ ಶಿವಂ ದುಬೈ ಸ್ಫೋಟಕ ಬ್ಯಾಟ್ಸ್‌ಮನ್‌ ಮೊಹಮ್ಮದ್ ನೈಮ್ ಹಾಗೂ ಆಫಿಫ್ ಹುಸೇನ್ ವಿಕೆಟ್ ಉರುಳಿಸಿದರು. ಮೊಹಮ್ಮದ್ ನೈಮ್ 48 ಎಸೆತಗಳಲ್ಲಿ 2 ಸಿಕ್ಸರ್, 10 ಬೌಂಡರಿ ಸೇರಿ 81 ರನ್ ಗಳಿಸಿ ಔಟಾದರೆ, ಆಫಿಫ್ ಹುಸೇನ್ ರನ್ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಪೆವಿಲಿಯನ್‍ಗೆ ತೆರಳಿದರು.

    ಚಹಲ್ ಸರಣಿ ದಾಖಲೆ:
    ಬಾಂಗ್ಲಾ ತಂಡದ ನಾಯಕ ಮಹ್ಮದುಲ್ಲಾ ವಿಕೆಟ್ ಉರುಳಿಸುವ ಮೂಲಕ ಚಹಲ್ ಅಂತರಾಷ್ಟ್ರೀಯ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಟೀಂ ಇಂಡಿಯಾ ಪರ ಆರ್.ಅಶ್ವಿನ್ ಟಿ-20 ಮಾದರಿಯಲ್ಲಿ 52 ವಿಕೆಟ್‍ಗಳೊಂದಿಗೆ ಮೊದಲ ಹಾಗೂ ಜಸ್ಪ್ರೀತ್ ಬುಮ್ರಾ 51 ವಿಕೆಟ್ ಗಳಿಂದ 2ನೇ ಸ್ಥಾನದಲ್ಲಿದ್ದರು. 53 ವಿಕೆಟ್ ಪಡೆದ ಚಹಲ್ ನಂ.1 ಸ್ಥಾನಕ್ಕೆ ಏರಿದ್ದಾರೆ.

    ಇದಕ್ಕೂ ಮುನ್ನ ಟಾಸ್ ಗೆದ್ದ ಬಾಂಗ್ಲಾದೇಶವು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಇನ್ನಿಂಗ್ಸ್ ನ ಆರಂಭದಲ್ಲಿಯೇ ಬಾಂಗ್ಲಾ ಬೌಲರ್ ಶಫಿಯುಲ್ ಇಸ್ಲಾಮ್ ಟೀಂ ಇಂಡಿಯಾಗೆ ಆಘಾತ ನೀಡಿದರು. ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್‍ಮನ್ ರೋಹಿತ್ ಶರ್ಮಾ 6 ಎಸೆಗಳನ್ನು ಎದುರಿಸಿ ಕೇವಲ 2 ರನ್‍ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್‍ಗೆ ತೆರಳಿದ್ದರು.

    ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್‍ಗೆ ಸಾಥ್ ನೀಡಿದ ಕನ್ನಡಿಗ ಕೆ.ಎಲ್.ರಾಹುಲ್ ಸ್ಫೋಟಕ ಬ್ಯಾಟಿಂಗ್ ಆರಂಭಿಸಿ, ತಂಡದ ಮೊತ್ತವನ್ನು ಏರಿಸಿದರು. ಆದರೆ ಸಿಕ್ಸ್ ಸಿಡಿಸಲು ಯತ್ನಿಸಿದ್ದ ಶಿಖರ್ ಧವನ್ ಕ್ಯಾಚ್ ಒಪ್ಪಿದರು. 16 ಎಸೆತಗಳನ್ನು ಎದುರಿಸಿದ ಧವನ್ 4 ಬೌಂಡರಿ ಸೇರಿ 19 ರನ್ ಗಳಿಸಿದ್ದರು.

    ಕೆ.ಎಲ್.ರಾಹುಲ್‍ಗೆ ಸಾಥ್ ನೀಡಿದ ಶ್ರೇಯಸ್ ಅಯ್ಯರ್ ಕೂಡ ಭರ್ಜರಿ ಬ್ಯಾಟಿಂಗ್ ಆರಂಭಿಸಿದರು. ಈ ಜೋಡಿಯು 59 ರನ್ ಕಲೆ ಹಾಕಿತು. ಅರ್ಧ ಶತಕ ಪೂರೈಸಿದ್ದ ಕನ್ನಡಿಗ ಕೆ.ಎಲ್.ರಾಹುಲ್ ಬಾಲ್ ಅನ್ನು ಬೌಂಡರಿಗೆ ಅಟ್ಟಲು ಹೋಗಿ ವಿಕೆಟ್ ಒಪ್ಪಿಸಿದರು. 35 ಎಸೆತಗಳನ್ನು ಎದುರಿಸಿದ ರಾಹುಲ್ 7 ಬೌಂಡರಿ ಸಿಡಿಸಿ 52 ರನ್ ಗಳಿಸಿ ಔಟಾಗಿದ್ದರು.

    ಹ್ಯಾಟ್ರಿಕ್ ಸಿಕ್ಸ್:
    ಇನ್ನಿಂಗ್ಸ್ ನ 15ನೇ ಓವರ್ ಎಸೆದ ಅಫಿಫ್ ಹುಸೇನ್ ಎಸೆದ ಮೊದಲ ಮೂರು ಎಸೆತಗಳನ್ನು ಶ್ರೇಯಸ್ ಅಯ್ಯರ್ ಸಿಕ್ಸ್ ಸಿಡಿಸಿದರು. ಈ ಮೂಲಕ ಈ ಪಂದ್ಯದಲ್ಲಿ ಅಯ್ಯರ್ 5 ಸಿಕ್ಸರ್ ಸಿಡಿಸಿದ್ದಾರೆ. ಆದರೆ ಇನ್ನಿಂಗ್ಸ್ ನ 16ನೇ ಓವರ್ ನ ಮೊದಲ ಎಸೆತದಲ್ಲಿಯೇ ರಿಷಭ್ ಪಂತ್ ವಿಕೆಟ್ ಒಪ್ಪಿಸಿದರು. 9 ಎಸೆತಗಳನ್ನು ಎದುರಿಸಿದ ಪಂತ್ ಕೇವಲ 6 ರನ್ ಗಳಿಸಲು ಶಕ್ತರಾದರು. ಇದೇ ಓವರ್ ನ 5ನೇ ಎಸೆತದಲ್ಲಿ ಅಯ್ಯರ್ ವಿಕೆಟ್ ಒಪ್ಪಿಸಿದರು. 33 ಎಸೆತಗಳಲ್ಲಿ 5 ಸಿಕ್ಸರ್, 3 ಬೌಂಡರಿ ಸೇರಿ 62 ರನ್ ಸಿಡಿಸಿ ಔಟಾಗಿದ್ದರು. ಮನೀಷ್ ಪಾಂಡೆ ಔಟಾಗದೆ 13 ಎಸೆತಗಳಲ್ಲಿ 3 ಬೌಂಡರಿ ಸೇರಿ 22 ರನ್ ಹಾಗೂ ಶಿವಂ ದುಬೇ ಔಟಾಗದೆ 8 ಎಸೆತಗಳಲ್ಲಿ 9 ರನ್ ಗಳಿಸಿದರು. ಈ ಮೂಲಕ ಟೀಂ ಇಂಡಿಯಾ 174 ರನ್ ಪೇರಿಸಿತ್ತು.

    ಈ ಪಂದ್ಯದಲ್ಲಿ 7 ವಿಕೆಟ್ ಪಡೆಯುದರೊಂದಿಗೆ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಕ್ಕೆ ಪಂದ್ಯಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಗೌರವವಕ್ಕೆ ದೀಪಕ್ ಚಹರ್ ಪಾತ್ರರಾದರು.

  • 10 ವರ್ಷದ ಹಿಂದಿನ ದಾಖಲೆ ಮುರಿದ ದೀಪಕ್ ಚಹಾರ್

    10 ವರ್ಷದ ಹಿಂದಿನ ದಾಖಲೆ ಮುರಿದ ದೀಪಕ್ ಚಹಾರ್

    – 24 ಎಸೆತಗಳಲ್ಲಿ 20 ಡಾಟ್ ಬಾಲ್

    ಚೆನ್ನೈ: ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ದಾಳಿ ನಡೆಸಿದ ಚೆನ್ನೈ ಬೌಲರ್ ಗಳು ಪಂದ್ಯ ಗೆಲುವಿಗೆ ಕಾರಣರಾದರೆ, ತಂಡದ ಯುವ ಬೌಲರ್ ದೀಪಕ್ ಚಹಾರ್ ಅದ್ಭುತವಾಗಿ ತಮ್ಮ ಸ್ಪೆಲ್ ಪೂರ್ಣಗೊಳಿಸಿ ದಾಖಲೆ ಬರೆದಿದ್ದಾರೆ.

    ಪಂದ್ಯದಲ್ಲಿ 24 ಎಸೆತ ಅಂದರೆ 4 ಓವರ್ ಬೌಲ್ ಮಾಡಿದ ಚಹಾರ್ ಅದರಲ್ಲಿ 20 ಎಸೆತಗಳನ್ನು ಡಾಟ್ ಮಾಡಿ ದಾಖಲೆ ಬರೆದಿದ್ದಾರೆ. ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಅತೀ ಹೆಚ್ಚು ಡಾಟ್ ಬಾಲ್ ಎಸೆದಿದ್ದ ನೆಹ್ರಾ, ಮುನಾಫ್ ಪಟೇಲ್, ಎಡ್ವರ್ಡ್ ಅವರ ದಾಖಲೆಯನ್ನ ಮುರಿದಿದ್ದಾರೆ. 2009 ಟೂರ್ನಿಯಲ್ಲಿ ಈ ಮೂವರು ಆಟಗಾರರು ಪಂದ್ಯವೊಂದರಲ್ಲಿ 19 ಡಾಟ್ ಬಾಲ್ ಎಸೆದು ಜಂಟಿಯಾಗಿ ದಾಖಲೆ ಬರೆದಿದ್ದರು.

    ಪಂದ್ಯದಲ್ಲಿ ತಮ್ಮ ಸ್ಪೆಲ್‍ನಲ್ಲಿ 20 ರನ್ ನೀಡಿ 3 ವಿಕೆಟ್‍ಗಳನ್ನು ಪಡೆಯುವ ಚಹಾರ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದರು. ಕೋಲ್ಕತ್ತಾ ವಿರುದ್ಧದ ಪಂದ್ಯವನ್ನು ಗೆಲ್ಲವು ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಕ್ರಿಕೆಟ್ ತಂಡ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಮುಂದುವರಿದಿದೆ.

    ಕೋಲ್ಕತ್ತಾ ಪಂದ್ಯಕ್ಕೂ ಮುನ್ನದ ಮ್ಯಾಚ್‍ನಲ್ಲಿ ಚಹಾರ್ ವಿರುದ್ಧ ಕೂಲ್ ಕ್ಯಾಪ್ಟನ್ ಗರಂ ಆಗಿದ್ದರು. ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯದಲ್ಲಿ ಧೋನಿ ಚಹಾರ್ ಮೇಲೆ ಕೋಪಗೊಂಡಿದ್ದರು. ಪಂಜಾಬ್ ಬ್ಯಾಟಿಂಗ್ ವೇಳೆ 19ನೇ ಓವರ್ ಎಸೆದ ಚಹಾರ್, ಸತತ 2 ನೋ ಬಾಲ್ ಎಸೆದಿದ್ದರು. ಇದರಿಂದ ಅಸಮಾಧಾನಗೊಂಡ ಧೋನಿ ಗರಂ ಆಗಿ ಚಹಾರ್ ಬಳಿ ಬಂದು ಕೆಲ ಸಲಹೆಗಳನ್ನ ನೀಡಿದರು. ಪರಿಣಾಮ ಮರು ಎಸೆತದಲ್ಲೇ ಡೇವಿಡ್ ಮಿಲ್ಲರ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದ ಚಹಾರ್ ಮೆಚ್ಚುಗೆ ಪಡೆದಿದ್ದರು.