Tag: deepak gangadhar

  • ಲವ್ ಮೀ ಆರ್ ಹೇಟ್ ಮೀ ಚಿತ್ರಕ್ಕೆ ಚಿತ್ರೀಕರಣ ಮುಕ್ತಾಯ

    ಲವ್ ಮೀ ಆರ್ ಹೇಟ್ ಮೀ ಚಿತ್ರಕ್ಕೆ ಚಿತ್ರೀಕರಣ ಮುಕ್ತಾಯ

    ನಾಯಕ ಡಾರ್ಲಿಂಗ್ ಕೃಷ್ಣ (Darling Krishna) ಅವರ ಹುಟ್ಟುಹಬ್ಬ ಇತ್ತೀಚಿಗೆ ನಡೆದಿದೆ. ಈ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸಿರುವ ‘ಲವ್ ಮೀ ಆರ್ ಹೇಟ್ ಮೀ’ (Love Me Or Hate Me) ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಬಹ ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 29 ರಂದು ಬಿಡುಗಡೆಯಾಗಲಿದೆ.

    ದೀಪಕ್ ಗಂಗಾಧರ್ (Deepak Gangadhar) ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ದೀಪಕ್ ಗಂಗಾಧರ್ ಮೂವೀಸ್ ಲಾಂಛನದಲ್ಲಿ ದೀಪಕ ಗಂಗಾಧರ್ ಅವರ ಜೊತೆಗೆ ಸುನೀಲ್ ಬಿ.ಎನ್, ಮದನ್ ಗಂಗಾಧರ್, ಚಂದನ್ ಜೆ ಹಾಗೂ ನಾಗರಾಜ್ ಗೌಡ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ:ಮೆಗಾಸ್ಟಾರ್ ಕುಟುಂಬಕ್ಕೆ ಸೊಸೆಯಾಗಿ ಬರುತ್ತಿರುವ ಲಾವಣ್ಯ ಜಾತಿ ಬಗ್ಗೆ ತಲೆಕೆಡಿಸಿಕೊಂಡ ಫ್ಯಾನ್ಸ್

    ಲವ್ ಸ್ಟೋರಿ ಜಾನರ್ ನ ಈ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಐದು ಹಾಡುಗಳಿರುವ ಈ ಚಿತ್ರಕ್ಕೆ ಶ್ರೀನಿಧರ್ ಸಂಭ್ರಮ್ – ನಕುಲ್ ಅಭಯಂಕರ್ ಸಂಗೀತ ನೀಡಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ಈಶ್ವರಿ ಕುಮಾರ್ ಕಲಾ ನಿರ್ದೇಶನ, ಮುರಳಿ ಹಾಗೂ ಮೋಹನ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ಯೋಗಾನಂದ್ ಮುದ್ದಾನ್, ರಘು ನಡವಳ್ಳಿ ಹಾಗೂ ರಘು ಸಂಭಾಷಣೆ ಬರೆದಿದ್ದಾರೆ.

    ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ರಚಿತಾರಾಮ್ (Rachita Ram) ನಟಿಸುತ್ತಿದ್ದಾರೆ. ರೂಪೇಶ್ ಶೆಟ್ಟಿ, ನಂದಿನಿ, ರಾಕೇಶ್ ಪೂಜಾರಿ, ದೀಪಿಕಾ, ಪ್ರವೀಣ್, ಸುಂದರ್ ವೀಣಾ, ರಮೇಶ್ ಭಟ್ ಮುಂತಾದವರು “ಲವ್ ಮೀ ಆರ್ ಹೇಟ್ ಮೀ” ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಸಿನಿಮಾ ವಿತರಕ ದೀಪಕ್ ಗಂಗಾಧರ್ ಈಗ ನಿರ್ದೇಶಕ

    ಸಿನಿಮಾ ವಿತರಕ ದೀಪಕ್ ಗಂಗಾಧರ್ ಈಗ ನಿರ್ದೇಶಕ

    ಣ್ಣದ ಲೋಕದ ಸೆಳೆತಕ್ಕೆ ಒಮ್ಮೆ ಒಳಗಾದರೆ ಅದು ನಮ್ಮನ್ನು ಮತ್ತೆ ಮತ್ತೆ ಕೈ ಬೀಸಿ ಕರೆಯುತ್ತಲೇ ಇರುತ್ತೆ. ಅದರಲ್ಲೂ ಚಿತ್ರರಂಗದಲ್ಲೇ ಒಂದಲ್ಲ ಒಂದು ರೀತಿಯಲ್ಲಿ ಸಕ್ರಿಯರಾದವರಿಗೆ ಇನ್ನೇನಾದರೂ ಮಾಡಬೇಕೆಂಬ ತುಡಿತ ಸದಾ ಇದ್ದೇ ಇರುತ್ತೆ. ಈ ತುಡಿತವೇ ಚಂದನವನದಲ್ಲಿ ಇಷ್ಟು ದಿನ ತೆರೆ ಹಿಂದೆಯಿದ್ದ ಪ್ರತಿಭೆಯನ್ನು ಮುನ್ನೆಲೆಗೆ ತರಲು ಹೊರಟಿದೆ. ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಿನಿಮಾ ವಿತರಕನಾಗಿ ಗುರುತಿಸಿಕೊಂಡಿದ್ದ ದೀಪಕ್ ಗಂಗಾಧರ್ ನಿರ್ದೇಶನಾಗಬೇಕೆಂಬ ಕನಸ್ಸನ್ನು ನನಸು ಮಾಡಲು ಹೊರಟಿದ್ದು, ಸ್ವತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ.

    ದೀಪಕ್ ಗಂಗಾಧರ್ ಸ್ಯಾಂಡಲ್‍ವುಡ್‍ನಲ್ಲಿ ಸಿನಿಮಾ ವಿತರಕರಾಗಿ ಗುರುತಿಸಿಕೊಂಡಿದ್ದಾರೆ. ತಮ್ಮದೇ ಆದ ದೀಪಕ್ ಗಂಗಾಧರ್ ಮೂವೀಸ್ ಸಂಸ್ಥೆಯನ್ನು ಹೊಂದಿರೋ ಇವರು ನನ್ನ ಪ್ರಕಾರ, ಕಾಳಿದಾಸ ಕನ್ನಡ ಮೇಸ್ಟ್ರು, ಅಮರ್, ಯಜಮಾನ, ಸೈರಾ ನರಸಿಂಹ ರೆಡ್ಡಿ ಸೇರಿದಂತೆ ಹಲವು ಸಿನಿಮಾಗಳ ವಿತರಕರಾಗಿ ಖ್ಯಾತಿ ಗಳಿಸಿದ್ದಾರೆ. ಅಷ್ಟೇ ಅಲ್ಲದೆ ಸಿನಿಮಾ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ.

    ಮೂಲತಃ ಶಿರಸಿಯವರಾದ ದೀಪಕ್ ಗಂಗಾಧರ್ ಎಂಬಿಎ ಪದವೀಧರರಾಗಿದ್ದಾರೆ. ಸಿನಿಮಾರಂಗದ ಮೇಲಿನ ಸೆಳೆತ, ನಿರ್ದೇಶಕನಾಗಬೇಕೆಂಬ ಕನಸಿನಿಂದ ಪದವಿ ಮುಗಿದ ನಂತರ ತೂಗುದೀಪ ಪ್ರೊಡಕ್ಷನ್ ಗರಡಿಯಲ್ಲಿ ತರಬೇತಿಯನ್ನು ಪಡೆದುಕೊಂಡಿದ್ದಾರೆ. ಚಂದನವನಕ್ಕೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಎಂಟ್ರಿ ಕೊಟ್ಟ ದೀಪಕ್ ಗಂಗಾಧರ್ ಎಂ.ಡಿ.ಶ್ರೀಧರ್, ಕವಿರಾಜ್ ಸೇರಿದಂತೆ ಹಲವು ನಿರ್ದೇಶಕರ ಜೊತೆ ಸಹ ನಿರ್ದೇಶಕನಾಗಿ ಕೆಲಸ ಮಾಡಿ ನಿರ್ದೇಶನದ ಪಟ್ಟುಗಳನ್ನು ಕರಗತ ಮಾಡಿಕೊಂಡಿದ್ದಾರೆ. ಎಂಟು ವರ್ಷಗಳ ಕಾಲ ಚಿತ್ರರಂಗದ ಬೇರೆ ಬೇರೆ ರಂಗದಲ್ಲಿ ಕೆಲಸ ನಿರ್ವಹಿಸಿರೋ ಇವರು ಆ ಎಲ್ಲಾ ಅನುಭವಗಳನ್ನು ತಮ್ಮ ಮೊದಲ ಸಿನಿಮಾಗೆ ಧಾರೆ ಎರೆಯಲು ಹೊರಟಿದ್ದಾರೆ.

    ಈಗಾಗಲೇ ತಮ್ಮ ಚೊಚ್ಚಲ ಚಿತ್ರಕ್ಕೆ ನಾಯಕನನ್ನು ಆಯ್ಕೆ ಮಾಡಿದ್ದು, ಡಾರ್ಲಿಂಗ್ ಕೃಷ್ಣ ದೀಪಕ್ ಗಂಗಾಧರ್ ಚಿತ್ರದಲ್ಲಿ ನಾಯಕ ನಟರಾಗಿ ಅಭಿನಯಿಸುತ್ತಿದ್ದಾರೆ. ಸ್ವತಃ ತಾವೇ ಕಥೆ ಬರೆದು ನಿರ್ದೇಶನ ಮಾಡಲು ಸಿದ್ದರಾಗಿರೋ ದೀಪಕ್ ಗಂಗಾಧರ್ ನೈಜ ಘಟನೆಯಿಂದ ಸ್ಪೂರ್ತಿ ಪಡೆದು ಕಥೆ ಹೆಣೆದಿದ್ದಾರೆ. ಇದೊಂದು ರೊಮ್ಯಾಂಟಿಕ್ ಕಾಮಿಡಿ ಸಿನಿಮಾವಾಗಿದ್ದು, ಶೀಘ್ರದಲ್ಲೇ ಸೆಟ್ಟೇರಲಿರೋ ಚಿತ್ರಕ್ಕೆ ಟೈಟಲ್ ಫೈನಲ್ ಆಗಬೇಕಿದೆ.

    ಶ್ರೀಧರ್ ವಿ ಸಂಭ್ರಮ್ ಸಂಗೀತ ನಿರ್ದೇಶನದಲ್ಲಿ ಚಿತ್ರದ ಹಾಡುಗಳು ಮೂಡಿ ಬರಲಿದ್ದು, ತಾರಾಬಳಗದ ಹುಡುಕಾಟದಲ್ಲಿರೋ ಚಿತ್ರತಂಡ ಸ್ಯಾಂಡಲ್‍ವುಡ್ ಸ್ಟಾರ್ ನಟಿಯನ್ನು ಕರೆತರುವ ಆಲೋಚನೆಯಲ್ಲಿದೆ. ದೀಮಾ ಎಂಟಟೈನ್ಮೆಂಟ್ ಮತ್ತು ಎಲ್‍ಎನ್‍ಆರ್ ಪ್ರೊಡಕ್ಷನ್ಸ್ ಬ್ಯಾನರ್ ಸಹಯೋಗದೊಂದಿಗೆ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಮದನ್ ಕುಮಾರ್, ಲಕ್ಷ್ಮೀ ನಾರಾಯಣ ರಾಜು ಅರಸು ಬಂಡವಾಳ ಹೂಡುತ್ತಿದ್ದಾರೆ. ಒಟ್ಟಿನಲ್ಲಿ ನಿರ್ದೇಶಕನಾಗಿ ಚಂದನವನದಲ್ಲಿ ಹೆಸರು ಮಾಡಬೇಕೆಂಬ ತಮ್ಮ ಕನಸು ಹಲವು ವರ್ಷಗಳ ನಂತರ ನನಸಾಗುತ್ತಿರುವ ಸಂತಸದಲ್ಲಿದ್ದಾರೆ ದೀಪಕ್ ಗಂಗಾಧರ್.