Tag: deepak rao

  • ಸಚಿವ ಖಾದರ್ ಜೊತೆ ಕಾಣಿಸಿಕೊಂಡಿದ್ದ ಇಲಿಯಾಸ್ ನ ಬರ್ಬರ ಹತ್ಯೆ

    ಸಚಿವ ಖಾದರ್ ಜೊತೆ ಕಾಣಿಸಿಕೊಂಡಿದ್ದ ಇಲಿಯಾಸ್ ನ ಬರ್ಬರ ಹತ್ಯೆ

    ಮಂಗಳೂರು: ದೀಪಕ್ ರಾವ್ ಮತ್ತು ಬಶೀರ್ ಸಾವಿನ ಬಳಿಕ ಶಾಂತವಾಗಿದ್ದ ಕರಾವಳಿಯಲ್ಲಿ ಇದೀಗ ಮತ್ತೊಂದು ಹೆಣ ಬಿದ್ದಿದೆ. ಮಂಗಳೂರಿನ ಜಪ್ಪಿನಮೊಗರಿನ ಕುದ್ಪಾಡಿಯಲ್ಲಿ ಟಾರ್ಗೆಟ್ ಗ್ರೂಪಿನ ಇಲಿಯಾಸ್ (31) ನನ್ನು ಇಂದು ಬೆಳಗ್ಗೆ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ.

    ಉಳ್ಳಾಲದ ಟಾರ್ಗೆಟ್ ಗ್ರೂಪ್ ರೂವಾರಿ ಹಾಗೂ ಕಾಂಗ್ರೆಸ್ ಕಾರ್ಯಕರ್ತನಾಗಿದ್ದ ಇಲಿಯಾಸ್, ಮಂಗಳೂರಿನ ಇಲ್ಯಾಸ್ ಫ್ಲಾಟ್‍ನಲ್ಲಿ ಮಲಗಿದ್ದ ಸಮಯದಲ್ಲಿ ಮುಂಜಾನೆ ಇಬ್ಬರು ಆಗಂತುಕರು ಮನೆಗೆ ನುಗ್ಗಿ ಕೊಚ್ಚಿ ಕೊಲೆಗೈದಿದ್ದಾರೆ.

    ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಒಂದೂವರೆ ತಿಂಗಳ ಹಿಂದೆಯಷ್ಟೆ ಜೈಲು ಸೇರಿದ್ದ ಇಲಿಯಾಸ್, 2 ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿ ಮನೆಗೆ ಬಂದಿದ್ದ. ಹೀಗಾಗಿ ಆತ ಮನೆಯಲ್ಲಿ ಒಬ್ಬನೇ ಇರುವುದರ ಮಾಹಿತಿ ಪಡೆದು ಆಗಂತುಕರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

    ಟಾರ್ಗೆಟ್ ಗ್ರೂಪ್ ಸದಸ್ಯರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    ಆಹಾರ ಸಚಿವ ಯು.ಟಿ ಖಾದರ್ ಜೊತೆ ಇಲಿಯಾಸ್ ಕಾಣಿಸಿಕೊಂಡಿದ್ದ ಫೋಟೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಇದನ್ನೂ ಓದಿ: ಯುಟಿ ಖಾದರ್ ಜೊತೆ ದೀಪಕ್ ಹತ್ಯೆಯ ಆರೋಪಿ ಕುಳಿತಿರುವ ಫೋಟೋ ವೈರಲ್

    ಯಾರು ಈ ಇಲಿಯಾಸ್?
    ಮಂಗಳೂರು ರೌಡಿ ನಿಗ್ರಹ ದಳದ ಪೊಲೀಸರು ಉಳ್ಳಾಲದ ನಟೋರಿಯಸ್ ಟಾರ್ಗೆಟ್ ಗ್ಯಾಂಗ್ ನಾಯಕ ಇಲಿಯಾಸ್ ನನ್ನು 2017ರ ನವೆಂಬರ್ ನಲ್ಲಿ ಬಂಧಿಸಿದ್ದರು. ಈತನ ಮೇಲೆ ರಾಜ್ಯದ ನಾನಾ ಭಾಗಗಳಲ್ಲಿ ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ.

    ಇಲ್ಯಾಸ್ ಈ ಹಿಂದೆ ಉಳ್ಳಾಲ ಯುವ ಕಾಂಗ್ರೆಸ್ ಉಪಾಧ್ಯಕ್ಷನಾಗಿದ್ದ. ಗಂಭೀರ ಆರೋಪಗಳಿದ್ದರೂ ಇಲಿಯಾಸ್ ನನ್ನು ಯು.ಟಿ. ಖಾದರ್ ಉಳ್ಳಾಲ ಬ್ಲಾಕ್ ನ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಸ್ಥಾನ ಕೊಟ್ಟಿದ್ದು ಹೇಗೆ ಎಂದು ಜನ ಈಗ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ. ಅಕ್ಟೋಬರ್ ನಲ್ಲಿ ಮುಕ್ಕಚ್ಚೇರಿಯಲ್ಲಿ ನಡೆದ ಝುಬೈರ್ ಎಂಬವರ ಕೊಲೆಯಲ್ಲೂ ಟಾರ್ಗೆಟ್ ಹೆಸರು ತಳುಕು ಹಾಕಿದಾಗ ಇಲಿಯಾಸ್ ನನ್ನು ಯುವ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಲಾಗಿತ್ತು.  ಇದನ್ನೂ ಓದಿ: ದೀಪಕ್ ಬರ್ಬರ ಹತ್ಯೆಗೈದ ನಾಲ್ವರು ಅರೆಸ್ಟ್: ಪೊಲೀಸರ ಮೇಲೆ ತಲ್ವಾರ್ ಬೀಸಿದ್ದ ಆರೋಪಿಗಳು

    ಯುವತಿಯರ ಮೂಲಕ ಶ್ರೀಮಂತರನ್ನು ಖೆಡ್ಡಾಕ್ಕೆ ಬೀಳಿಸಿ, ಬ್ಲಾಕ್ ಮೇಲ್ ಮಾಡಿ ಲಕ್ಷಾಂತರ ರುಪಾಯಿಯನ್ನು ದೋಚುವ ಕೆಲಸವನ್ನು ಈ ಟಾರ್ಗೆಟ್ ಗ್ರೂಪ್ ಮಾಡಿದೆ ಎನ್ನುವ ಆರೋಪವಿದೆ. ಅಷ್ಟೇ ಅಲ್ಲದೇ ಈ ಗ್ರೂಪಿನ ಸದಸ್ಯರು ಉಳ್ಳಾಲ ಬೀಚ್ ಗೆ ಬಂದವರನ್ನು ದೋಚಿ ಹಲ್ಲೆ ನಡೆಸುತ್ತಿದ್ದರು. ಒಂದು ವೇಳೆ ದೂರು ನೀಡಿದ್ರೆ ಖಾದರ್ ಅವರ ಜನ ಎಂದು ಪೊಲೀಸರೂ ಸಮ್ಮನಾಗುತ್ತಿದ್ದರು ಎನ್ನುವ ಆರೋಪವನ್ನು ಜನ ಮಾಡುತ್ತಿದ್ದಾರೆ. ಇತ್ತೀಚೆಗೆ ಕಾಟಿಪಳ್ಳದ ಸಫ್ವಾನ್ ಎಂಬ ಯುವಕನನ್ನು ಇದೇ ಟಾರ್ಗೆಟ್ ತಂಡ ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟು ಕೊನೆಗೆ ಕೊಲೆ ಮಾಡಿ ಚಾರ್ಮಾಡಿ ಘಾಟಿ ಯಿಂದ ಕೆಳಗೆ ಎಸೆದಿತ್ತು.

    ಈ ಫೋಟೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಜೊತೆ ಅಶ್ರಫ್ ಕೊಲೆ ಕೇಸ್ ಆರೋಪಿ ಭರತ್ ಕುಂಡೆಲ್ ಕುಳಿತಿರುವ ಫೋಟೋ ವೈರಲ್ ಆಗಿದೆ. ಬಿಸಿ ರೋಡ್‍ನಲ್ಲಿ ಟಿಪ್ಪು ಜಯಂತಿಯಂದು ಅಶ್ರಫ್ ಕೊಲೆ ನಡೆದಿತ್ತು.

  • ಬಶೀರ್ ಹತ್ಯೆಯಲ್ಲಿ ನಳಿನ್ ಕೈವಾಡ ಇದೆಯೇ? ಹೀಗೆಂದು ನಾನು ಹೇಳಿಕೆ ನೀಡಲ್ಲ:  ರಮಾನಾಥ ರೈ

    ಬಶೀರ್ ಹತ್ಯೆಯಲ್ಲಿ ನಳಿನ್ ಕೈವಾಡ ಇದೆಯೇ? ಹೀಗೆಂದು ನಾನು ಹೇಳಿಕೆ ನೀಡಲ್ಲ: ರಮಾನಾಥ ರೈ

    ಮಂಗಳೂರು: ಸುರತ್ಕಲ್ ಸಮೀಪದ ಕಾಟಿಪಳ್ಳದ ದೀಪಕ್ ರಾವ್ ಹತ್ಯೆ ವಿಚಾರದಲ್ಲಿ ತನ್ನ ಪಾತ್ರವಿದೆಯೆಂದು ಸಂಸದ ನಳಿನ್ ಕುಮಾರ್ ಹೇಳಿದ್ದರು. ಹಾಗಾದ್ರೆ ಬಶೀರ್ ಹತ್ಯೆಯಲ್ಲಿ ನಳಿನ್ ಕುಮಾರ್ ಪಾತ್ರ ಇದೆಯೇ ಅಂತಾ ನಾನು ಕೇಳಬಹುದೇ ಎಂದು ಸಚಿವ ರಮಾನಾಥ ರೈ ಹೇಳಿದ್ದಾರೆ.

    ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಚಿವ ರಮಾನಾಥ ರೈ, ದೀಪಕ್ ಹತ್ಯೆಯಾದಾಗ ದೆಹಲಿಯಲ್ಲಿದ್ದ ನಳಿನ್, ಹತ್ಯೆ ಪ್ರಕರಣದಲ್ಲಿ ನನ್ನ ಹೆಸರನ್ನು ಹೇಳಿದ್ದರು. ಹಾಗಾದ್ರೆ ಬಶೀರ್ ಹತ್ಯೆಯಲ್ಲಿ ನಳಿನ್ ಕೈವಾಡ ಇದೆಯೇ? ಹೀಗಂತ ಕೆಟ್ಟ ಹೇಳಿಕೆ ನಾನು ನೀಡುವುದಿಲ್ಲ. ಇವರ ಮೇಲೆ ಆರೋಪ ಬಂದಾಗ ನೋವಾಗುತ್ತಂತೆ. ಹಾಗಾದ್ರೆ ಇಲ್ಲಿನ ಎಲ್ಲಾ ಕೊಲೆಗಳಿಗೂ ನಾನೇ ಕಾರಣನಾ? ಎಂದು ಪ್ರಶ್ನಿಸಿದ ಅವರು, ನನಗೆ, ನನ್ನ ಕುಟುಂಬದವರಿಗೆ ನೋವಾಗುವುದಿಲ್ಲವೇ ಅಂತ ಪ್ರಶ್ನಿಸಿದ್ರು.  ಇದನ್ನೂ ಓದಿ:  ಕರಾವಳಿಯಲ್ಲಿ ಹಿಂದೂಗಳು ಹತ್ಯೆ ಮಾಡ್ತಿದ್ದಾರೆ- ಸಿಎಂ ಎದುರೇ ರೈ ವಿವಾದಾತ್ಮಕ ಹೇಳಿಕೆ

    ಕುಮಾರಸ್ವಾಮಿಯವರು ದೀಪಕ್ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಕಾರ್ಪೋ ರೇಟರ್ ಕೈವಾಡ ಇದೆಯೆಂದು ಹೇಳಿದಾಗಲೂ ಇವರಿಗೆ ನೋವಾಗಿದ್ಯಂತೆ. ಇದಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗಾದ್ರೆ ಇಲ್ಲಿ ನಡೆದ ಎಲ್ಲ ಕೊಲೆಗಳಿಗೆ ನನ್ನ ಹೆಸರನ್ನು ಹೇಳ್ತಾ ಬಂದಿದ್ದಾರೆ. ಇದರಿಂದ ನನಗೆ ನೋವಾಗುವುದಿಲ್ಲವೇ? ನಾನು ಕೂಡ, ದೇವರಲ್ಲಿ ಬೇಡಿಕೊಂಡಿದ್ದೇನೆ. ನನ್ನ ವಿರುದ್ಧ ಅಪಪ್ರಚಾರ ಮಾಡಿದವರಿಗೆ ಬುದ್ಧಿ ಕಲಿಸೆಂದು ಪ್ರಾರ್ಥಿಸಿದ್ದೇನೆ ಅಂತಾ ಹೇಳಿದರು. ಇದನ್ನೂ ಓದಿ: ದೀಪಕ್ ಹತ್ಯೆ ನಡೆದ ರಾತ್ರಿ ಮಂಗ್ಳೂರಿನಲ್ಲಿ ವ್ಯಾಪಾರಿಯ ಮೇಲೆ ಮಾರಣಾಂತಿಕ ಹಲ್ಲೆ: ಸಿಸಿಟಿವಿಯಲ್ಲಿ ಸೆರೆ

    ಇದನ್ನೂ ಓದಿ: ದೀಪಕ್ ರಾವ್, ಬಶೀರ್ ಮನೆಗೆ ಸಿಎಂ ಭೇಟಿ- ದೀಪಕ್ ರಾವ್ ತಮ್ಮನಿಗೆ ಎಂಆರ್ ಪಿಎಲ್ ನಲ್ಲಿ ಕೆಲಸ ನೀಡುವಂತೆ ಸೂಚನೆ

  • ಕಾರ್ಪೋರೇಟರ್ ಮೇಲೆ ದೀಪಕ್ ಹತ್ಯೆ ಆರೋಪ- ದೈವದ ಮೊರೆ ಹೋದ ತಿಲಕ್ ರಾಜ್, ಕೃಷ್ಣಾಪುರ ಗ್ರಾಮಸ್ಥರು

    ಕಾರ್ಪೋರೇಟರ್ ಮೇಲೆ ದೀಪಕ್ ಹತ್ಯೆ ಆರೋಪ- ದೈವದ ಮೊರೆ ಹೋದ ತಿಲಕ್ ರಾಜ್, ಕೃಷ್ಣಾಪುರ ಗ್ರಾಮಸ್ಥರು

    ಮಂಗಳೂರು: ಕಾಟಿಪಳ್ಳದ ದೀಪಕ್ ಹತ್ಯೆ ವಿಚಾರದಲ್ಲಿ ಕಾರ್ಪೋರೇಟರ್ ತಿಲಕ್ ರಾಜ್ ಬಗ್ಗೆ ಅಪಪ್ರಚಾರಗೈದವರಿಗೆ ತಕ್ಕ ಶಾಸ್ತಿಯಾಗಬೇಕೆಂದು ಮಂಗಳೂರಿನ ಕಾಟಿಪಳ್ಳ ಬಳಿಯ ಕೃಷ್ಣಾಪುರದ ಗ್ರಾಮಸ್ಥರು ತುಳುನಾಡಿನ ಕಾರಣಿಕ ದೈವದ ಮೊರೆ ಹೋಗಿದ್ದಾರೆ.

    ಕೃಷ್ಣಾಪುರದ ಕೋಡ್ದಬ್ಬು ದೈವಸ್ಥಾನದಲ್ಲಿ ಗ್ರಾಮಸ್ಥರು ಸೇರಿ ಈ ಪ್ರಾರ್ಥನೆ ಮಾಡಿದ್ರು. ಕಾರ್ಪೊರೇಟರ್ ತಿಲಕ್ ರಾಜ್, ಊರಿನ ಹಿರಿಯರು, ಅರ್ಚಕರು ಜೊತೆಯಾಗಿ ಭಕ್ತಿಪೂರ್ವಕ ಪ್ರಾರ್ಥನೆ ಸಲ್ಲಿಸಿ ಅಪಪ್ರಚಾರ ಮಾಡಿದವರಿಗೆ ಬುದ್ಧಿ ಕಲಿಸುವಂತೆ ಕೇಳಿಕೊಂಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸ್ಥಳೀಯ ಶಾಸಕ ಮೊಯ್ದೀನ್ ಬಾವಾ ವಿರುದ್ಧ ದೈವದ ಮೊರೆ ಹೋದಂತಾಗಿದೆ.

    ಮಾಜಿ ಸಿಎಂ ಕುಮಾರಸ್ವಾಮಿ, ದೀಪಕ್ ಹತ್ಯೆಯಲ್ಲಿ ಬಿಜೆಪಿ ಕಾರ್ಪೋರೇಟರ್ ಕೈವಾಡ ಇತ್ತೆಂದು ಬಹಿರಂಗ ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿತ್ತು. ಕುಮಾರಸ್ವಾಮಿ ಹೇಳಿಕೆ ನೀಡಲು ಶಾಸಕ ಮೊಯ್ದೀನ್ ಬಾವಾ ಪಿತೂರಿಯೇ ಕಾರಣ ಅನ್ನೋದು ಬಿಜೆಪಿಯವರ ಮಾತಾಗಿತ್ತು.

    https://www.youtube.com/watch?v=AI_z5wUiDhM

    https://www.youtube.com/watch?v=45DpmlmPyps

    https://www.youtube.com/watch?v=p4Mfa77sfvE

    https://www.youtube.com/watch?v=Wh-Y-8UCcgQ

    https://www.youtube.com/watch?v=0vDJV9oPKaI

    https://www.youtube.com/watch?v=cWNV3kO7l5E

    https://www.youtube.com/watch?v=QZrnrHcPWig

  • ದೀಪಕ್ ರಾವ್ ಕೊಲೆಗೆ 50 ಲಕ್ಷ ರೂ.ಸುಪಾರಿ: ಆರ್ ಅಶೋಕ್

    ದೀಪಕ್ ರಾವ್ ಕೊಲೆಗೆ 50 ಲಕ್ಷ ರೂ.ಸುಪಾರಿ: ಆರ್ ಅಶೋಕ್

    ಬೆಂಗಳೂರು: ಮಂಗಳೂರಿನಲ್ಲಿ ನಡೆದ ದೀಪಕ್ ರಾವ್ ಕೊಲೆಗೆ 50 ಲಕ್ಷ ರೂ. ಸುಪಾರಿ ನೀಡಲಾಗಿದೆ ಎಂದು ಮಾಜಿ ಗೃಹ ಸಚಿವ, ಮಾಜಿ ಡಿಸಿಎಂ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.

    ಮೌರ್ಯ ಸರ್ಕಲ್‍ನ ಬಳಿ ದೀಪಕ್ ಹತ್ಯೆ ಖಂಡಿಸಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಆರ್.ಅಶೋಕ್ ದೀಪಕ್ ಹತ್ಯೆಗೆ 50 ಲಕ್ಷ ಸುಪಾರಿ ನೀಡಿದ್ದಾರೆ. ಮಾಧ್ಯಮಗಳಲ್ಲಿ, ಪೊಲೀಸ್ ತನಿಖೆಯಲ್ಲಿ ಇದು ಗೊತ್ತಾಗಿದೆ. ಹಾಗಾದರೆ ಸುಪಾರಿ ಕೊಟ್ಟವರು ಯಾರು ಗೊತ್ತಾಗಬೇಕು. ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಯವರ ಕೇಸ್‍ಗಳು ನಡೆಸಲು ಎಲ್ಲಿಂದ ಹಣ ಬರುತ್ತೆ. ಈ ಬಗ್ಗೆಯೂ ತನಿಖೆ ಆಗಬೇಕು ಅಂತ ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅಪರಾಧದಲ್ಲಿ ಎರಡನೇ ಸ್ಥಾನದಲ್ಲಿದೆ. ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಪರೇಶ್ ಮೆಸ್ತಾ ಸಾವು ಇನ್ನು ನಿಗೂಢವಾಗಿದೆ. ಪ್ರಕರಣ ಮುಚ್ಚಿ ಹಾಕುವ ಕೆಲಸ ಸರ್ಕಾರ ಮಾಡುತ್ತಿದೆ. ಮಂಗಳೂರಿನಲ್ಲಿ ದೀಪಕ್, ಬಶೀರ್ ಹತ್ಯೆಯಾಗಿದೆ. ಪೊಲೀಸ್ ಇಲಾಖೆಯನ್ನ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಸಲಹೆಗಾರ ಕೆಂಪಯ್ಯ ಗೃಹ ಇಲಾಖೆಯನ್ನು ಹಾಳು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕೂಡಾ ವಾಗ್ದಾಳಿ ನಡೆಸಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಮಲಿಂಗಾರೆಡ್ಡಿ ಗೃಹ ಸಚಿವರಾಗಿ ವಿಫಲರಾಗಿದ್ದಾರೆ. 4 ವರ್ಷಗಳಲ್ಲಿ 6525 ಕೊಲೆಗಳು ನಡೆದಿವೆ. ಸಾವಿರಾರು ಮಹಿಳೆಯರ ಕೊಲೆ, ಅಪಹರಣ, ಮಕ್ಕಳ ಅತ್ಯಾಚಾರ ನಡೆದಿದೆ. ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಇದೇ ವೇಳೆ ದೀಪಕ್ ರಾವ್ ಹತ್ಯೆ ಹಿಂದೆ ಬಿಜೆಪಿ ಕಾರ್ಪೋರೇಟರ್ ಕೈವಾಡ ಇದೆ ಎನ್ನುವ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕುಮಾರಸ್ವಾಮಿ ಹೇಳಿಕೆ ಬೇಜಾವಾಬ್ದಾರಿಯಿಂದ ಕೂಡಿದೆ. ಎಚ್‍ಡಿಕೆ ಹೇಳಿಕೆಯನ್ನ ನಾನು ಖಂಡಿಸುತ್ತೇನೆ. ತನಿಖೆ ನಡೆಯುತ್ತಿದೆ ತನಿಖೆ ದಾರಿ ತಪ್ಪಿಸುವ ಕೆಲಸ ಕುಮಾರಸ್ವಾಮಿ ಮಾಡಬಾರದು. ತನಿಖೆಯಲ್ಲಿ ಸತ್ಯಾಸತ್ಯತೆ ಹೊರ ಬರುತ್ತೆ ಎಂದು ಎಚ್‍ಡಿಕೆ ವಿರುದ್ದ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ದೀಪಕ್‍ ರಾವ್ ಹತ್ಯೆ ಹಿಂದೆ ಬಿಜೆಪಿ ಕಾರ್ಪೋರೇಟರ್ ಕೈವಾಡವಿದೆ: ಹೆಚ್‍ಡಿಕೆ

    ಸಂಸದೆ ಶೋಭಾ ಕರಂದ್ಲಾಜೆ ಅವರು ಎಚ್‍ಡಿಕೆ ಹೇಳಿಯನ್ನು ಖಂಡಿಸಿದರು. ಕುಮಾರಸ್ವಾಮಿ ಹೇಳಿಕೆ ಅತ್ಯಂತ ಬೇಜಾವಾಬ್ದಾರಿ, ಕ್ಷುಲ್ಲಕ ಸುಳ್ಳು ಆರೋಪ ಮಾಡುತ್ತಿದ್ದಾರೆ. ಜಿಹಾದಿಗಳ ಮತಕ್ಕಾಗಿ ಒಂದು ಜನಾಂಗ ಎತ್ತಿಕಟ್ಟುವ ಕೆಲಸಕ್ಕೆ ಮುಂದಾಗಿದ್ದಾರೆ. ಕುಮಾರಸ್ವಾಮಿ ಅವರು ನಮ್ಮ ಜೊತೆ ಸರ್ಕಾರ ಮಾಡಿದವರು. ರಾಜ್ಯದಲ್ಲಿ ನಾಯಕರಾಗಿ ಬೆಳೆಯಬೇಕು ಎನ್ನುವ ಅವರು ತನಿಖೆ ದಾರಿ ತಪ್ಪಿಸುವ ಕೆಲಸ ಮಾಡಬಾರದರು ಎಂದು ಮನವಿ ಮಾಡಿದರು.

    https://www.youtube.com/watch?v=0vDJV9oPKaI

  • ಬಶೀರ್ ಮನೆಗೆ ಹೋಗ್ಬೇಕು ಅನ್ನೋ ಕಾರಣಕ್ಕೆ ದೀಪಕ್ ಮನೆಗೂ ಭೇಟಿ ನೀಡಿದ್ರು- ಸಿಎಂ ವಿರುದ್ಧ ಈಶ್ವರಪ್ಪ ಟೀಕೆ

    ಬಶೀರ್ ಮನೆಗೆ ಹೋಗ್ಬೇಕು ಅನ್ನೋ ಕಾರಣಕ್ಕೆ ದೀಪಕ್ ಮನೆಗೂ ಭೇಟಿ ನೀಡಿದ್ರು- ಸಿಎಂ ವಿರುದ್ಧ ಈಶ್ವರಪ್ಪ ಟೀಕೆ

    ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪರಿಷತ್ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಭಾರೀ ಟೀಕೆ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಕೊಲೆಗಡುಕರ ಸ್ವರ್ಗ. ಯಾರನ್ನ ಬೇಕಾದರೂ ಕೊಲೆ ಮಾಡಿ. ಸರ್ಕಾರ ಅವರನ್ನು ರಕ್ಷಿಸುತ್ತದೆ. ಮಂಗಳೂರಿನಲ್ಲಿ ಬಶೀರ್ ಮನೆಗೆ ಹೋಗಬೇಕು ಎಂಬ ಕಾರಣಕ್ಕೆ ದೀಪಕ್ ಮನೆಗೂ ಭೇಟಿ ನೀಡಿದ್ರು. ಇದೂವರೆಗೂ ಹತ್ಯೆ ಆದ ಯಾರೊಬ್ಬರ ಮನೆಗೂ ಹೋಗಿಲ್ಲ ಅಂದ್ರು.

    ಸಾಧನಾ ಸಮಾವೇಶ ಸರ್ಕಾರಿ ವೆಚ್ಚದಲ್ಲಿ ಮಾಡಬೇಡಿ. ಯಾರದ್ದೊ ದುಡ್ಡು- ಸಿದ್ದಪ್ಪನ ಜಾತ್ರೆ. ಮಂಗನ ಕೈಲಿ ಮಾಣಿಕ್ಯ ಕೊಟ್ಟಂತೆ ಇವರಿಗೆ ಅಧಿಕಾರ ಕೊಟ್ಟಂತಾಗಿದೆ. ಹುಚ್ಚನ ಕೈಲಿ ಅಧಿಕಾರ ಕೊಟ್ಟಿದಿವಿ. ಇದಕ್ಕಾಗಿ ಇವನ್ನೆಲ್ಲಾ ನೋಡಬೇಕಾಗಿದೆ ಅಂತ ಕಿಡಿಕಾರಿದ್ರು.

    ಜಿಲ್ಲಾಧಿಕಾರಿ ಇನ್ನಿತರ ಅಧಿಕಾರಿಗಳನ್ನು ವೇದಿಕೆ ಮೇಲೆ ಕೂರಿಸಿಕೊಂಡು ರಾಜಕೀಯ ಭಾಷಣ ಮಾಡುತ್ತಿದ್ದಾರೆ. ಸರ್ಕಾರದ ಸಾಧನೆಗಳನ್ನು ಹೇಳುವುದನ್ನು ಬಿಟ್ಟು ವಿಪಕ್ಷಗಳನ್ನು ಟೀಕೆ ಮಾಡಲು ಸಾರ್ವಜನಿಕರ ಹಣ ಬಳಸುತ್ತಿದ್ದಾರೆ. ಒಬ್ಬ ಮುಖ್ಯಮಂತ್ರಿ ತನ್ನ ನೈತಿಕತೆ ತೋರಿಸಬೇಕು. ಕಾಂಗ್ರೆಸ್ ಸಮಾವೇಶ ಮಾಡಲಿ. ಸರ್ಕಾರಿ ವೆಚ್ಚದಲ್ಲಿ ಮಾಡೋದು ಬೇಡ. ಜ್ಞಾನ ಇಲ್ಲದ ಮುಖ್ಯಮಂತ್ರಿಯನ್ನು ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ನೋಡುತ್ತಿದ್ದೇವೆ. ವಿರೋಧ ಪಕ್ಷದವರನ್ನು ಬೈಯ್ಯುವ ಸಮಾವೇಶ ಇದು ಅಂದ್ರು.

    ಹುಚ್ಚ ಏನೇನೋ ಮಾತಾಡಿದ್ರೆ ನಾ ಉತ್ತರ ಕೊಡೋಕೆ ಆಗುತ್ತಾ ಎಂದು ಪ್ರಶ್ನಿಸಿದ ಈಶ್ವರಪ್ಪ, ನನ್ ಮನೇಲಿ ನೋಟು ಎಣಿಸುವ ಮಷಿನ್ ಇರೋದು, ಪ್ರಿಂಟಿಂಗ್ ಮಷಿನ್ ಅಲ್ಲ. ನನ್ನ ವ್ಯಾಪಾರದ ಹಣ ಎಣಿಸಲು ಇಂದಿಗೂ ನೋಟ್ ಕೌಂಟಿಂಗ್ ಮಿಷಿನ್ ಬಳಸುತ್ತೇನೆ. ಇದನ್ನ ವಿಧಾನಪರಿಷತ್ ನಲ್ಲೇ ಹೇಳಿದ್ದೇನೆ ಅಂತ ತಿಳಿಸಿದ್ರು.

    ಇನ್ನೂ ಮೂರು ತಿಂಗಳು ಮಾತ್ರ ಈ ಸರ್ಕಾರ ಇರುತ್ತೆ. ಮುಂದೆ ನಿಮ್ಮ ವಿರುದ್ಧವೂ ಕ್ರಮ ಕೈಗೊಳ್ಳಬೇಕಾಗುತ್ತೆ ಅಂತ ಇದೇ ವೇಳೆ ಈಶ್ವರಪ್ಪ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

     

  • ದೀಪಕ್ ರಾವ್, ಬಶೀರ್ ಮನೆಗೆ ಸಿಎಂ ಭೇಟಿ- ದೀಪಕ್ ರಾವ್ ತಮ್ಮನಿಗೆ ಎಂಆರ್ ಪಿಎಲ್ ನಲ್ಲಿ ಕೆಲಸ ನೀಡುವಂತೆ ಸೂಚನೆ

    ದೀಪಕ್ ರಾವ್, ಬಶೀರ್ ಮನೆಗೆ ಸಿಎಂ ಭೇಟಿ- ದೀಪಕ್ ರಾವ್ ತಮ್ಮನಿಗೆ ಎಂಆರ್ ಪಿಎಲ್ ನಲ್ಲಿ ಕೆಲಸ ನೀಡುವಂತೆ ಸೂಚನೆ

    ಮಂಗಳೂರು: ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದ ದೀಪಕ್ ರಾವ್ ಮತ್ತು ಬಶೀರ್ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಲೂಕಿನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ತೆರಳಿದ್ದ ಸಿಎಂ, ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮೃತರ ಕುಟುಂಬಗಳಿಗೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ದೀಪಕ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಪ್ರಥಮ್

    ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ಹಾಡಹಗಲೇ ದುಷ್ಕರ್ಮಿಗಳ ಮಾರಣಾಂತಿಕ ದಾಳಿಯಿಂದ ಮೃತಪಟ್ಟಿದ್ದ ದೀಪಕ್ ರಾವ್ ಮನೆಗೆ ಭೇಟಿಯಿತ್ತ ಸಿಎಂ ಸಿದ್ದರಾಮಯ್ಯ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶ ನೀಡುತ್ತೇವೆ ಎಂದು ಹೇಳಿದ್ರು. ದೀಪಕ್ ತಮ್ಮನಿಗೆ ಎಂಆರ್ ಪಿಎಲ್ ನಲ್ಲಿ ಕೆಲಸ ನೀಡುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ರು. ಇದನ್ನೂ ಓದಿ: ಬಿಜೆಪಿ ನಾಯಕ ಕೃಷ್ಣ ಪಾಲೇಮಾರ್ ವಿರುದ್ಧ ಬಶೀರ್ ಕುಟುಂಬಸ್ಥರ ಆಕ್ರೋಶ

    ದೀಪಕ್ ರಾವ್ ಮನೆಯಿಂದ ತೆರಳಿದ ಸಿದ್ದರಾಮಯ್ಯ, ಮಂಗಳೂರಿನ ಆಕಾಶಭವನದಲ್ಲಿರುವ ಬಶೀರ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ರು. ಈ ವೇಳೆ ಸಿಎಂ ಗೆ ಸಚಿವರಾದ ರಮನಾಥ್ ರೈ, ಯು.ಟಿ ಖಾದರ್, ಮೊಯ್ದೀನ್ ಬಾವ, ಮೇಯರ್ ಕವಿತಾ ಸನಿಲ್ ಸಾಥ್ ನೀಡಿದ್ರು. ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಆದೇಶಿಸಿದ್ರು. ಇದನ್ನೂ ಒದಿ: ಕರಾವಳಿಯಲ್ಲಿ ಹಿಂದೂಗಳು ಹತ್ಯೆ ಮಾಡ್ತಿದ್ದಾರೆ- ಸಿಎಂ ಎದುರೇ ರೈ ವಿವಾದಾತ್ಮಕ ಹೇಳಿಕೆ

    ಜ.3ರಂದು ಮಧ್ಯಾಹ್ನ 1.30ರ ಸುಮಾರಿಗೆ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಯದ್ವಾತದ್ವಾ ದೀಪಕ್ ರಾವ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿತ್ತು. ಕೂಡಲೇ ಮಾಹಿತಿ ಪಡೆದ ಪೊಲೀಸರು ಸಿನಿಮೀಯ ರೀತಿಯಲ್ಲಿ ಆರೋಪಿಗಳನ್ನು ಬೆನ್ನಟ್ಟಿ ಬಂಧಿಸಿದ್ದರು. ಸದ್ಯ ಅವರನ್ನು ಅಜ್ಞಾತ ಸ್ಥಳದಲ್ಲಿರಿಸಿ ವಿಚಾರಣೆ ಮುಂದುವರೆಸಿದ್ದಾರೆ. ಇದನ್ನೂ ಓದಿ: ಅಬ್ದುಲ್ ಬಶೀರ್ ಕೊಲೆ ಯತ್ನ- ನಾಲ್ವರು ಆರೋಪಿಗಳ ಬಂಧನ

    ಇತ್ತ ಅದೇ ದಿನ ರಾತ್ರಿ ನಗರದ ಕೊಟ್ಟಾರ ಚೌಕಿಯಲ್ಲಿ ಫಾಸ್ಟ್ ಫುಡ್ ಅಂಗಡಿಯಲ್ಲಿ ಕೆಲಸ ಮುಗಿಸಿ ರಾತ್ರಿ ಮನೆಗೆ ಹಿಂದುರುಗುತ್ತಿದ್ದ ಸಂದರ್ಭದಲ್ಲಿ ಆಕಾಶಭವನ ನಿವಾಸಿ ಬಶೀರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಹಲ್ಲೆಯಿಂದ ತಲೆ, ಎದೆ ಹಾಗೂ ಗಂಟಲು ಭಾಗಕ್ಕೆ ಗಂಭೀರ ಗಾಯವಾಗಿದ್ದ ಅವರನ್ನು ಕೂಡಲೇ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ನಾಲ್ಕು ದಿನಗಳ ಕಾಲ ಸಾವು-ಬದುಕಿನ ಮಧ್ಯೆ ಹೋರಾಡಿದ ಬಶೀರ್ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದರು.

     

     

  • ದೀಪಕ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಪ್ರಥಮ್

    ದೀಪಕ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಪ್ರಥಮ್

    ಮಂಗಳೂರು: ದುಷ್ಕರ್ಮಿಗಳ ದಾಳಿಗೆ ತುತ್ತಾಗಿ ಸಾವನ್ನಪ್ಪಿದ ಮಂಗಳೂರಿನ ದೀಪಕ್ ರಾವ್ ನಿವಾಸಕ್ಕೆ ಇಂದು ಬಿಗ್ ಬಾಸ್ ಸೀಸನ್ 4 ವಿಜೇತ ಪ್ರಥಮ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

    ಮೃತ ದೀಪಕ್ ರಾವ್ ಕುಟುಂಬದ ಸಂಕಷ್ಟಕ್ಕೆ ಪ್ರಥಮ್ ಸ್ಪಂದಿಸಿದ್ದು, ಕುಟುಂಬದವರು ಇನ್ನೂ ಶಾಕ್ ನಿಂದ ಹೊರಗೆ ಬಂದಿಲ್ಲ. ಎಲ್ಲರೂ ಸಾಮರಸ್ಯದಿಂದ ಇರಬೇಕು. ಪ್ರಾಣ ತೆಗೆಯುವ ಹಕ್ಕು ಯಾರಿಗೂ ಇಲ್ಲ ಎಂದಿದ್ದಾರೆ. ಅಷ್ಟೇ ಅಲ್ಲದೇ ಪರಿಹಾರವಾಗಿ ಐವತ್ತು ಸಾವಿರ ರೂಪಾಯಿಯನ್ನ ನೀಡಿದ್ದಾರೆ.

    ಸದ್ಯ ಎಂ.ಎಲ್.ಎ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಪ್ರಥಮ್ ಡಬ್ಬಿಂಗ್ ಕೆಲಸದಲ್ಲಿ ಬ್ಯುಸಿಯಾಗಿದ್ದರು. ಆದರೂ ನೇರವಾಗಿ ಮಂಗಳೂರಿಗೆ ಹೋಗಿ ಮೃತ ದೀಪಕ್ ರಾವ್ ಕುಟುಂಬಕ್ಕೆ ಸಾಂತ್ವನ ಹೇಳಿ ಬಂದಿದ್ದಾರೆ.

    ಇಂದು ಮೃತ ಪಟ್ಟಿರುವ ಬಶೀರ್ ಸಾವಿಗೂ ಸಾಂತಾಪ ತಿಳಿಸಿದ್ದಾರೆ. “ಕ್ಷುಲ್ಲಕ ಕಾರಣಕ್ಕೆ ಹತ್ಯೆಯಾದ ಬಶೀರ್ ರ ಆತ್ಮಕ್ಕೆ ಶಾಂತಿ ಸಿಗಲಿ. ಯಾರೇ ಆಗಲಿ ಕೊಲ್ಲುವುದು ತಪ್ಪು. ಈ ಹತ್ಯೆಮಾಡಿದ ಅಯೋಗ್ಯರಿಗೆ ಉಗ್ರ ಶಿಕ್ಷೆಯಾಗಲಿ. ಸುಂದರ ಸಮಾಜ ನಿರ್ಮಾಣವಾಗಬೇಕೆಂದರೆ ಇಂತಹ ಮುಗ್ಧರ ಹತ್ಯೆ ನಿಲ್ಲಬೇಕು” ಎಂದು ತಮ್ಮ ಫೇಸ್‍ಬುಕ್‍ನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ.

    ಕಳೆದ ಮೂರು ದಿನಗಳ ಹಿಂದೆ ದೀಪಕ್ ಗೆಳೆಯರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರು ಮಾಡಿದ್ದು, ಬಹಳ ಪರಿಣಾಮಕಾರಿಯಾಗಿದೆ. ಈವರೆಗೆ ದೀಪಕ್ ತಾಯಿ ಪ್ರೇಮ ಅಕೌಂಟ್ ಗೆ ಬಿದ್ದಿರುವುದು 32 ಲಕ್ಷ ರುಪಾಯಿಗಳು. ಶುಕ್ರವಾರ ರಾತ್ರಿಯಷ್ಟೊತ್ತಿಗೆ 17 ಲಕ್ಷ ರೂಪಾಯಿ ಸಂಗ್ರಹವಾಗಿತ್ತು. ಶನಿವಾರ ರಾತ್ರಿಯವರೆಗೆ 32 ಲಕ್ಷ ರೂಪಾಯಿ ಹಣ ಜಮೆಯಾಗಿದೆ.

    ದೀಪಕ್ ಹತ್ಯೆಯಾಗುವ ಮೊದಲು ತಾಯಿ ಪ್ರೇಮ ಅವರ ಖಾತೆಯಲ್ಲಿ ಎರಡೂವರೆ ಸಾವಿರ ರೂಪಾಯಿ ಹಣ ಇತ್ತು. ಸಾರ್ವಜನಿಕರ ಸಹಾಯ ಧನದ ಜೊತೆಗೆ ರಾಜ್ಯ ಸರ್ಕಾರ 5 ಲಕ್ಷ, ಜಿಲ್ಲಾಧಿಕಾರಿ ಪರಿಹಾರ ನಿಧಿಯಿಂದ 5 ಲಕ್ಷ ರುಪಾಯಿ ಕುಟುಂಬಕ್ಕೆ ಹಸ್ತಾಂತರವಾಗಿದೆ. ಚೆಕ್ಕನ್ನು ಇನ್ನೂ ಅಕೌಂಟಿಗೆ ಹಾಕಿಲ್ಲ. ಇದನ್ನು ಹೊರತುಪಡಿಸಿ ಬಿಜೆಪಿ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಒಟ್ಟು 52 ಲಕ್ಷ ರೂಪಾಯಿಯ ಆರ್ಥಿಕ ಸ್ಥೈರ್ಯ, ಧೈರ್ಯ ನೊಂದ ಕುಟುಂಬಕ್ಕೆ ಸಿಕ್ಕಿದೆ. ದೀಪಕ್‍ನ ನೂಂದ ಕುಟುಂಬಕ್ಕೆ ಎಲ್ಲಾ ಧರ್ಮದವರು ಸಹಾಯ ಹಸ್ತ ಚಾಚಿದ್ದಾರೆ. ಇಂದಿನವರೆಗೂ ಸಂದಾಯದ ಹಣ ಒಂದೂ ಕೋಟಿರೂಪಾಯಿಗೆ ತಲುಪಬಹುದು.

    ಸುರತ್ಕಲ್ ಸಮೀಪದ ಕಾಟಿಪಳ್ಳ 2 ನೇ ಬ್ಲಾಕ್ ನ ಕೈಕಂಬದಲ್ಲಿ ಜನವರಿ 3 ಬುಧವಾರ ಮಧ್ಯಾಹ್ನ ಸುಮಾರು 1.30ರ ವೇಳೆಗೆ ದೀಪಕ್ ರಾವ್ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಇದನ್ನು ಓದಿ: ಮೃತ ದೀಪಕ್ ರಾವ್ ಕುಟುಂಬಕ್ಕೆ ಕಾಣದ ಕೈಗಳ ಸಹಾಯಹಸ್ತ

  • ಬಶೀರ್ ಸಾವಿನ ಕುರಿತು ಸಂಸದ ಪ್ರತಾಪ್ ಸಿಂಹ ಹೀಗಂದ್ರು

    ಬಶೀರ್ ಸಾವಿನ ಕುರಿತು ಸಂಸದ ಪ್ರತಾಪ್ ಸಿಂಹ ಹೀಗಂದ್ರು

    ಮೈಸೂರು: ನಗರದ ಸುರತ್ಕಲ್ ಸಮೀಪದ ಕಾಟಿಪಳ್ಳ ಎಂಬಲ್ಲಿ ನಡೆದ ದೀಪಕ್ ರಾವ್ ಹತ್ಯೆಯಂದೇ ದುಷ್ಕರ್ಮಿಗಳ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಶೀರ್ ಇಂದು ಮೃತಪಟ್ಟಿದ್ದು, ಇದೀಗ ಬಶೀರ್ ಸಾವನ್ನು ಸಂಸದ ಪ್ರತಾಪ್ ಸಿಂಹ ಖಂಡಿಸಿದ್ದಾರೆ.

    ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿದ ಅವರು, `ಕಣ್ಣಿಗೆ ಕಣ್ಣು ಎಂದರೆ ಇಡೀ ಪ್ರಪಂಚವೇ ಅಂಧಕಾರದಲ್ಲಿ ಮುಳುಗಲಿದೆ’. ಬಶೀರ್ ಕೊಲೆ ದೀಪಕ್ ರಾವ್ ಕಗ್ಗೊಲೆಗೆ ಉತ್ತರವಲ್ಲ. ಹಿಂದೂ-ಮುಸ್ಲಿಂ ಶಾಂತಿ ಸಭೆ ನಡೆಸುವ ಸಮಯ ಈಗ ಬಂದಿದೆ. ಅದ್ಯಾಕೋ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಶಾಂತಿ ನೆಲೆಸುವ ಬಗ್ಗೆ ಲಕ್ಷ್ಯವಹಿಸಿಲ್ಲ ಅಂತ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಬಶೀರ್ ಸಾವು

    ಜ.3ರಂದು ಮಧ್ಯಾಹ್ನ 1.30ರ ವೇಳೆಗೆ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ದೀಪಕ್ ರಾವ್ ಅವರನ್ನು ಅಡ್ಡಗಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ದೀಪಕ್ ಸ್ಥಳದಲ್ಲೇ ಮೃತಪಟ್ಟಿದ್ದರು. ಅಂದೇ ರಾತ್ರಿ 11.30ರ ಸುಮಾರಿಗೆ ಫಾಸ್ಟ್ ಫುಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಬಶೀರ್(47) ತನ್ನ ಮನೆಯತ್ತ ತೆರಳುತ್ತಿದ್ದರು. ಈ ವೇಳೆ 3 ಬೈಕ್‍ನಲ್ಲಿ ಬಂದ 7 ಜನರ ತಂಡ ಏಕಾಏಕಿ ಬಶೀರ್ ಮೇಲೆ ತಲ್ವಾರ್ ದಾಳಿ ನಡೆಸಿ ಪರಾರಿಯಾಗಿದ್ದರು. ಈ ದಾಳಿ ಭಯಾನಕವಾಗಿದ್ದು ಅಂಬುಲೆನ್ಸ್ ಚಾಲಕ ಶೇಖರ್ ಎಂಬವರು ಬಶೀರ್ ಅವರನ್ನು ರಕ್ಷಣೆ ಮಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಇದನ್ನೂ ಒದಿ: ದುಷ್ಕರ್ಮಿಗಳ ದಾಳಿಗೆ ತುತ್ತಾಗಿದ್ದ ಬಶೀರ್ ಸ್ಥಿತಿ ಚಿಂತಾಜನಕ- ಆಸ್ಪತ್ರೆಗೆ ಸಚಿವ ಯುಟಿ ಖಾದರ್ ಭೇಟಿ

    ಈ ವಿಚಾರದ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಶೇಖರ್, ರಾತ್ರಿ ನಾನು ಕೆಲಸ ಮುಗಿಸಿ ಮನೆಗೆ ಬರುತ್ತಿದ್ದೆ. ಈ ವೇಳೆ ದಾರಿ ಮಧ್ಯೆ ವ್ಯಕ್ತಿ ಒಬ್ಬರು ಬಿದ್ದಿದ್ದರು. ಅಪಘಾತವಾಗಿ ರಸ್ತೆಗೆ ಬಿದ್ದಿರಬಹುದು ಎಂದು ಭಾವಿಸಿ ಅವರನ್ನು ಅಂಬುಲೆನ್ಸ್ ಹಾಕಿ ಆಸ್ಪತ್ರೆಗೆ ದಾಖಲಿಸಿದೆ. 5, 10 ನಿಮಿಷ ತಡವಾಗಿದ್ದರೂ ಅವರು ಬದುಕಿ ಉಳಿಯುವುದು ಕಷ್ಟವಾಗಿತ್ತು. ನಾನು ನನ್ನ ಕರ್ತವ್ಯ ಮಾಡಿದ್ದೇನೆ ಎಂದು ತಿಳಿಸಿದ್ದರು. ಇದನ್ನೂ ಓದಿ: ದೀಪಕ್ ಹತ್ಯೆ ನಡೆದ ರಾತ್ರಿ ಮಂಗ್ಳೂರಿನಲ್ಲಿ ವ್ಯಾಪಾರಿಯ ಮೇಲೆ ಮಾರಣಾಂತಿಕ ಹಲ್ಲೆ: ಸಿಸಿಟಿವಿಯಲ್ಲಿ ಸೆರೆ

    ಗಂಭಿರ ಗಾಯಗೊಂಡು ನಗರದ ಎಜೆ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಬಶೀರ್ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

  • ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಬಶೀರ್ ಸಾವು

    ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಬಶೀರ್ ಸಾವು

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ದುಷ್ಕರ್ಮಿಗಳ ಮಾರಣಾಂತಿಕ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಶೀರ್ ಮೃತಪಟ್ಟಿದ್ದಾರೆ.

    ಜನವರಿ 3 ರಂದು ಹಲ್ಲೆಗೊಳಗಾಗಿದ್ದ ಬಶೀರ್ ನಗರದ ಎಜೆ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 8.10 ಕ್ಕೆ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.

    ಸುರತ್ಕಲ್ ನ ಕಾಟಿಪಳ್ಳ ಎಂಬಲ್ಲಿ ಜನವರಿ 3ರಂದು ಮಧ್ಯಾಹ್ನ ಸುಮಾರು 1.30ಕ್ಕೆ ದುಷ್ಕರ್ಮಿಗಳ ತಂಡವೊಂದು ದೀಪಕ್ ರಾವ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿತ್ತು. ಪರಿಣಾಮ ಗಂಭೀರ ಗಾಯಗೊಂಡ ದೀಪಕ್ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಅಂದೇ ರಾತ್ರಿ ಕೊಟ್ಟಾರ ಚೌಕಿಯಲ್ಲಿ ಫಾಸ್ಟ್ ಫುಡ್ ಅಂಗಡಿಯಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಬಶೀರ್ ಮೇಲೆ 7 ಜನರ ತಂಡವೊಂದು ತಲ್ವಾರ್ ದಾಳಿ ನಡೆಸಿತ್ತು. ಪರಿಣಾಮ ಗಂಟಲು, ತಲೆ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯಗೊಂಡಿದ್ದ ಬಶೀರ್ ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಬಶೀರ್ ಆರೋಗ್ಯ ವಿಚಾರಿಸಲು ಶನಿವಾರ ಸಚಿವ ಯುಟಿ ಖಾದರ್ ಭೇಟಿ ನೀಡಿ ಆಸ್ಪತ್ರೆಯ ವೆಚ್ಚ ಭರಿಸುವ ಭರವಸೆ ನಿಡಿದ್ದರು. ಅಲ್ಲದೇ ಬಶೀರ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಬಶೀರ್ ಕೊನೆಯುಸಿರೆಳೆದಿದ್ದಾರೆ.

    https://www.youtube.com/watch?v=prf8LAzRcus

    https://www.youtube.com/watch?v=nqZ3ZShX1q0

    https://www.youtube.com/watch?v=82lslIp7u0w

    https://www.youtube.com/watch?v=XIln_78eJlQ

  • ಮೃತ ದೀಪಕ್ ರಾವ್ ಕುಟುಂಬಕ್ಕೆ ಕಾಣದ ಕೈಗಳ ಸಹಾಯಹಸ್ತ

    ಮೃತ ದೀಪಕ್ ರಾವ್ ಕುಟುಂಬಕ್ಕೆ ಕಾಣದ ಕೈಗಳ ಸಹಾಯಹಸ್ತ

    ಮಂಗಳೂರು: ದುಷ್ಕರ್ಮಿಗಳ ದಾಳಿಗೆ ತುತ್ತಾಗಿ ಸಾವನ್ನಪ್ಪಿದ ಮಂಗಳೂರಿನ ಸುರಕ್ತಲ್ ಸಮೀಪದ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳ ದಾಳಿಗೆ ತುತ್ತಾದ ದೀಪಕ್ ರಾವ್ ಕುಟುಂಬಕ್ಕೆ ಜನ ದೇಣಿಗೆಯನ್ನು ನೀಡುತ್ತಿದ್ದಾರೆ.

    ರಾಜ್ಯ, ದೇಶ ವಿದೇಶದಿಂದ ನೆರವಿನ ಹಸ್ತ ಹರಿದುಬರುತ್ತಿದೆ. ವಿವಿಧ ಸಂಘಟನೆಗಳು, ವೈಯಕ್ತಿಕ ದೇಣಿಗೆ, ಆ್ಯಪ್ ಗಳ ಮೂಲಕ ಜನ ಧನ ಸಹಾಯ ಮಾಡುತ್ತಿದ್ದಾರೆ. ಇದನ್ನೂ ಓದಿ: ಒಂದೇ ದಿನದಲ್ಲಿ ದೀಪಕ್ ರಾವ್ ಕುಟುಂಬಕ್ಕೆ ಹರಿದುಬಂತು 17,43,859 ರೂ.!

    ಕಳೆದ ಮೂರು ದಿನಗಳ ಹಿಂದೆ ದೀಪಕ್ ಗೆಳೆಯರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರು ಮಾಡಿದ್ದು ಬಹಳ ಪರಿಣಾಮಕಾರಿಯಾಗಿದೆ. ಈವರೆಗೆ ದೀಪಕ್ ತಾಯಿ ಪ್ರೇಮ ಅಕೌಂಟ್ ಗೆ ಬಿದ್ದಿರುವುದು 32 ಲಕ್ಷ ರುಪಾಯಿಗಳು. ಶುಕ್ರವಾರ ರಾತ್ರಿಯಷ್ಟೊತ್ತಿಗೆ 17 ಲಕ್ಷ ರೂಪಾಯಿ ಸಂಗ್ರಹವಾಗಿತ್ತು. ಶನಿವಾರ ರಾತ್ರಿಯವರೆಗೆ 32 ಲಕ್ಷ ರೂಪಾಯಿ ಸಂಗ್ರಹವಾಗಿದೆ.

    ಘಟನೆ ಆಗುವ ಮೊದಲು ಎರಡೂವರೆ ಸಾವಿರ ರೂಪಾಯಿ ಪ್ರೇಮ ಅವರ ಖಾತೆಯಲ್ಲಿದ್ದ ಮೊತ್ತ. ಇದರ ಜೊತೆಗೆ ರಾಜ್ಯ ಸರ್ಕಾರ 5 ಲಕ್ಷ,ಜಿಲ್ಲಾಧಿಕಾರಿ ಪರಿಹಾರ ನಿಧಿಯಿಂದ 5 ಲಕ್ಷರುಪಾಯಿ ಕುಟುಂಬಕ್ಕೆ ಹಸ್ತಾಂತರವಾಗಿದೆ. ಚೆಕ್ಕನ್ನು ಇನ್ನೂ ಅಕೌಂಟಿಗೆ ಹಾಕಿಲ್ಲ. ಇದನ್ನು ಹೊರತುಪಡಿಸಿ ಬಿಜೆಪಿ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಒಟ್ಟು 52 ಲಕ್ಷ ರೂಪಾಯಿಯ ಆರ್ಥಿಕ ಸ್ಥೈರ್ಯ , ಧೈರ್ಯ ನೊಂದ ಕುಟುಂಬಕ್ಕೆ ಸಿಕ್ಕಿದೆ. ದೀಪಕ್‍ನ ನೂಂದ ಕುಟುಂಬಕ್ಕೆ ಎಲ್ಲಾ ಧರ್ಮದವರು ಸಹಾಯ ಹಸ್ತ ಚಾಚಿದ್ದಾರೆ. ಇಂದಿನವರೆಗೂ ಸಂದಾಯದ ಹಣ ಒಂದೂ ಕೋಟಿರೂಪಾಯಿಗೆ ತಲುಪಬಹುದು. ಇದನ್ನೂ ಓದಿ: ಇವತ್ಯಾಕೆ ಬಂದೆ..ನೀನ್ ಹೋಗು ಮೊದ್ಲು, ಚೆಕ್ ಬೇಡ ಏನು ಬೇಡ – ಶಾಸಕ ಬಾವಾಗೆ ದೀಪಕ್ ಕುಟುಂಬಸ್ಥರ ಬೈಯ್ಗುಳ

    ಪ್ರೇಮ
    ಸಿಂಡಿಕೇಟ್ ಬ್ಯಾಂಕ್ ಕಾಟಿಪಳ್ಳ- ಕೈಕಂಬ ಶಾಖೆ
    ದ.ಕ ಜಿಲೆ
    ಖಾತೆ ಸಂಖ್ಯೆ
    01672030000810

    ಕ್ಕೆ ಸಹಾಯಹಸ್ತ ನೀಡಬಹುದು. ಮನೆಯ ಸಾಲ, ಮೂಗ- ಕಿವುಡ ಸಹೋದರನ ಆರೋಗ್ಯದ ವೆಚ್ಚ, ತಾಯಿಯ ಜೀವನೋಪಾಯಕ್ಕೆ, ಈ ಮೊತ್ತ ವ್ಯಯಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

    https://www.youtube.com/watch?v=h2ySxt7VrtE

    https://www.youtube.com/watch?v=0iJpHrCbDbc