Tag: Deepika Padukone

  • ‘ಫೈಟರ್’ ಚಿತ್ರದಲ್ಲಿ ನಟಿಸಲು ಹೃತಿಕ್- ದೀಪಿಕಾ ಪಡುಕೋಣೆ ಪಡೆದ ಸಂಭಾವನೆ ಎಷ್ಟು?

    ‘ಫೈಟರ್’ ಚಿತ್ರದಲ್ಲಿ ನಟಿಸಲು ಹೃತಿಕ್- ದೀಪಿಕಾ ಪಡುಕೋಣೆ ಪಡೆದ ಸಂಭಾವನೆ ಎಷ್ಟು?

    ‘ಪಠಾಣ್’ (Pathaan) ಸೂಪರ್ ಸಕ್ಸಸ್ ನಂತರ ದೀಪಿಕಾ ಪಡುಕೋಣೆ ‘ಫೈಟರ್’ (Fighter) ಸಿನಿಮಾದಲ್ಲಿ ಹೃತಿಕ್ ಜೊತೆ ತೆರೆಹಂಚಿಕೊಳ್ತಿದ್ದಾರೆ. ಹೀಗಿರುವಾಗ ಚಿತ್ರತಂಡ ಬಗ್ಗೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಕಲಾವಿದರ ಸಂಭಾವನೆಯಿಂದ ಚಿತ್ರದ ಬಜೆಟ್ ಮಿತಿ ಮಿರುತ್ತಿದೆ ಎಂದು ಸಿನಿಮಾ ವಿಶ್ಲೇಷಕ ಕಮಾಲ್ ಆರ್. ಖಾನ್ ಟ್ವೀಟ್ ಮಾಡಿದ್ದಾರೆ.

    ಬಾಲಿವುಡ್‌ನ ಬಹುನಿರೀಕ್ಷಿತ ಚಿತ್ರ ‘ಪಠಾಣ್’ಗೆ ಸಿದ್ಧಾರ್ಥ್ ಆನಂದ್ ನಿರ್ದೇಶನ ಮಾಡ್ತಿದ್ದಾರೆ. ಹೃತಿಕ್-ದೀಪಿಕಾ ಮೊದಲ ಬಾರಿಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಹಾಗಾಗಿ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಸ್ಟಾರ್ ಕಲಾವಿದರ ದುಬಾರಿ ಸಂಭಾವನೆ ವಿಷ್ಯವಾಗಿ ಫೈಟರ್ ಸುದ್ದಿಯಲ್ಲಿದೆ. ಇದನ್ನೂ ಓದಿ:ಬಜರಂಗದಳ ನಿಷೇಧ: ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ ನಟಿ ರಮ್ಯಾ

    ಹೃತಿಕ್ ರೋಷನ್ (Hrithik Roshan) ನಟನೆಯ ‘ಫೈಟರ್’ ಸಿನಿಮಾದ ಬಜೆಟ್ 350 ಕೋಟಿ ರೂಪಾಯಿ ತಲುಪಿದೆ. ಇದನ್ನು ಮರಳಿ ಪಡೆಯುವುದು ಬಹುತೇಕ ಅಸಾಧ್ಯ. ನಿರ್ದೇಶಕ ಸಿದ್ದಾರ್ಥ್ ಆನಂದ್ ಅವರು 40 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ. ಹೃತಿಕ್ ರೋಷನ್ ಸಂಭಾವನೆ 85 ಕೋಟಿ ರೂಪಾಯಿ, ದೀಪಿಕಾ ಪಡುಕೋಣೆ ಸಂಭಾವನೆ 20 ಕೋಟಿ ರೂಪಾಯಿ. ಇನ್ನುಳಿದ ಕಲಾವಿದರಿಗೆ 15 ಕೋಟಿ ರೂಪಾಯಿ ನೀಡಲಾಗುತ್ತಿದೆ. ಅಂದರೆ, ಸಂಭಾವನೆ ಮೊತ್ತವೇ 160 ಕೋಟಿ ರೂಪಾಯಿ ತಲುಪಲಿದೆ’ ಎಂದು ಕಮಾಲ್ ಆರ್.ಖಾನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಈ ಚಿತ್ರದ ಬಜೆಜ್ ಕೈ ಮೀರಿ ಹೋಗಿದೆ ಎಂದಿದ್ದಾರೆ. ಈ ಸಂಭಾವನೆ ವಿಚಾರ ಅದೆಷ್ಟರ ಮಟ್ಟಿಗೆ ನಿಜಾ ಎಂಬುದನ್ನ ಚಿತ್ರತಂಡವೇ ಸ್ಪಷ್ಟಪಡಿಸಬೇಕಿದೆ.

    ಗಲ್ಲಾಪೆಟ್ಟಿಗೆಯಲ್ಲಿ ಪಠಾಣ್ ಕೋಟಿ ಕೋಟಿ ಲೂಟಿ ಮಾಡಿರೋದ್ರಿಂದ ಸಹಜವಾಗಿ ಸಿದ್ಧಾರ್ಥ್ ಆನಂದ್ ನಿರ್ದೇಶನದ ಫೈಟರ್ ಮೇಲೆ ನಿರೀಕ್ಷೆ ಡಬಲ್ ಆಗಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಕಲಾವಿದರ ಸಂಭಾವನೆ ಮೀರಿ ಕಲೆಕ್ಷನ್ ಮಾಡುವ ‘ಫೈಟರ್’ ದಾಖಲೆ ಬರೆಯುತ್ತಾ ಎಂದು ಕಾದುನೋಡಬೇಕಿದೆ.

  • ರಿಲೀಸ್ ಗೂ ಮುನ್ನವೇ ಜವಾನ ದೃಶ್ಯ ಲೀಕ್ : ಹೈಕೋರ್ಟ್ ಮೆಟ್ಟಿಲೇರಿದ ಶಾರುಖ್ ಖಾನ್

    ರಿಲೀಸ್ ಗೂ ಮುನ್ನವೇ ಜವಾನ ದೃಶ್ಯ ಲೀಕ್ : ಹೈಕೋರ್ಟ್ ಮೆಟ್ಟಿಲೇರಿದ ಶಾರುಖ್ ಖಾನ್

    ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ (Shahrukh Khan) ನಟನೆಯ ‘ಜವಾನ’ (Jawan) ಸಿನಿಮಾ ಜೂನ್ ನಲ್ಲಿ ರಿಲೀಸ್ ಆಗಲಿದೆ. ಅದಕ್ಕೂ ಮುನ್ನ ಈ ಚಿತ್ರದ ಮಹತ್ವದ ದೃಶ್ಯಗಳು ಮತ್ತು ಫೋಟೋಗಳು ಲೀಕ್ (Leake) ಆಗಿವೆ. ಈ ಕುರಿತು ಸ್ವತಃ ಶಾರುಖ್ ಖಾನ್ ಗರಂ ಆಗಿದ್ದಾರೆ. ಸಿನಿಮಾದ ಪ್ರಚಾರಕ್ಕೆ ಬಳಸಿಕೊಳ್ಳಬೇಕಾದ ದೃಶ್ಯ ಮತ್ತು ಫೋಟೋಗಳು ಲೀಕ್ ಆಗುತ್ತಿರುವುದಕ್ಕೆ ಮತ್ತು ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡುತ್ತಿರುವವರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

    ಈ ಸಿನಿಮಾವನ್ನು ತಮ್ಮದೇ ರೆಡ್ ಚಿಲ್ಲೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿರುವ ಶಾರುಖ್ ಖಾನ್, ದೃಶ್ಯಗಳು ಸೋರಿಕೆಯಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟವುಂಟಾಗಲಿದೆ. ಹೀಗಾಗಿ ಲೀಕ್ ಮಾಡುವ ಕಿಡಿಗೇಡಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇದನ್ನೂ ಓದಿ:ಸಂಪತ್ ಪತ್ನಿ 5 ತಿಂಗಳ ಗರ್ಭಿಣಿ- ಸಹನಟನ ನೆನೆದು ಕಣ್ಣೀರಿಟ್ಟ ವೈಷ್ಣವಿ

    ಶಾರುಖ್ ಖಾನ್ ಮನವಿಯನ್ನು ಪುರಸ್ಕರಿಸಿರುವ ದೆಹಲಿ ಹೈಕೋರ್ಟ್ (High Court) , ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿರುವ ದೃಶ್ಯಗಳನ್ನು ಕೂಡಲೇ ಡಿಲಿಟ್ ಮಾಡಬೇಕು ಎಂದು ಆದೇಶ ನೀಡಿದೆ. ಯುಟ್ಯೂಬ್, ವೆಬ್ ಸೈಟ್ ಸೇರಿದಂತೆ ಜವಾನ ದೃಶ್ಯಗಳನ್ನು ಅಪ್ ಲೋಡ್ ಮಾಡಿದವರು ಕೂಡಲೇ ಡಿಲಿಟ್ ಮಾಡಬೇಕು ಎಂದು ಹೈಕೋರ್ಟ್ ಆದೇಶ ಮಾಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

    ಜವಾನ ಬಹುತಾರಾಗಣ ಹೊಂದಿರುವ ಸಿನಿಮಾ. ಶಾರುಖ್ ಜೊತೆ ದೀಪಿಕಾ ಪಡುಕೋಣೆ (Deepika Padukone) ಹಾಗೂ ನಯನತಾರಾ ನಟಿಸಿದ್ದಾರೆ. ಈ ಮೂವರ ಸಂಗಮದ ಮೊದಲ ಸಿನಿಮಾ ಇದಾಗಿದೆ. ಇವರ ಜೊತೆ ಖ್ಯಾತ ತಮಿಳು ನಟ ವಿಜಯ್ ಸೇತುಪತಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾನಾ ಕಾರಣಗಳಿಂದಾಗಿ ಈ ಸಿನಿಮಾ ಕುತೂಹಲ ಮೂಡಿಸಿದೆ.

  • ಹುಲ್ಲು ಹಸಿರಾಗಿತ್ತು, ನೀರು ನೀಲಿಯಾಗಿತ್ತು ಅದಕ್ಕೆ ಕೇಸರಿ ಬಿಕಿನಿ ಹಾಕಿಸಿದೆ : ಸಿದ್ಧಾರ್ಥ್

    ಹುಲ್ಲು ಹಸಿರಾಗಿತ್ತು, ನೀರು ನೀಲಿಯಾಗಿತ್ತು ಅದಕ್ಕೆ ಕೇಸರಿ ಬಿಕಿನಿ ಹಾಕಿಸಿದೆ : ಸಿದ್ಧಾರ್ಥ್

    ಶಾರುಖ್ ಖಾನ್ (Shahrukh Khan) ಮತ್ತು ದೀಪಿಕಾ ಪಡುಕೋಣೆ (Deepika Padukone) ಕಾಂಬಿನೇಷನ್ ನ ‘ಪಠಾಣ್’ (Pathan) ಸಿನಿಮಾದ ಕೇಸರಿ ಬಿಕಿನಿ (Kesari Bikini) ವಿವಾದದ ಬಗ್ಗೆ ಈಗ ನಿರ್ದೇಶಕ ಸಿದ್ದಾರ್ಥ್ ಆನಂದ್ (Siddharth Anand) ಮೌನ ಮುರಿದಿದ್ದಾರೆ. ಆ ಹಾಡಿನಲ್ಲಿ ದೀಪಿಕಾ ಪಡುಕೋಣೆಗೆ ಯಾಕೆ ಕೇಸರಿ ಬಿಕಿನಿ ಹಾಕಿಸಿದೆ ಎನ್ನುವ ಕುರಿತು ಅವರು ಮಾತನಾಡಿದ್ದಾರೆ. ಅದಕ್ಕೆ ಬಲವಾದ ಕಾರಣವನ್ನೂ ಕೊಟ್ಟಿದ್ದಾರೆ.

    ಈ ಹಾಡಿನ ಶೂಟಿಂಗ್ ನಡೆದದ್ದು ಸ್ಪೇನ್ ನಲ್ಲಿ. ಆಗ ಅಲ್ಲಿನ ವಾತಾವರಣಕ್ಕೆ ಹೊಂದುವಂತಹ ಬಣ್ಣ ಆಯ್ಕೆ ಮಾಡಿಕೊಳ್ಳಬೇಕಿತ್ತು. ಬಿಸಿಲಿತ್ತು. ಹುಲ್ಲು ಹಸಿರಾಗಿತ್ತು. ನೀರು ನೀಲಿಯಾಗಿತ್ತು. ಕೇಸರಿ ಬಣ್ಣ ಎದ್ದು ಕಾಣುತ್ತದೆ ಎನ್ನುವ ಕಾರಣಕ್ಕಾಗಿ ಕೇಸರಿ ಬಣ್ಣವನ್ನು ಆಯ್ಕೆ ಮಾಡಿಕೊಂಡರಂತೆ. ಅದರ ಹೊರತಾಗಿ ಬೇರೆ ಯಾವ ಆಲೋಚನೆಯೂ ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: 2ನೇ ಮದುವೆ ಸುದ್ದಿಗೆ ಸ್ಪಷ್ಟನೆ ನೀಡಿದ ಕಿರುತೆರೆ ನಟಿ ಸ್ವಾತಿ

    ಕೇಸರಿ ಬಿಕಿನಿ ಆರಿಸುವ ಧಾರ್ಮಿಕ ಭಾವನೆ, ಬೇರೆಯವರಿಗೆ ನೋವಾಗತ್ತೆ ಏನೂ ಯೋಚಿಸಲಿಲ್ಲ. ಒಬ್ಬ ನಿರ್ದೇಶಕನಾಗಿ ಯಾವ ಬಣ್ಣ ಹೈಲೈಟ್ ಆಗತ್ತೆ ಅಂತ ಮಾತ್ರ ಯೋಚನೆ ಮಾಡಿದೆ. ಆದರೆ, ಕೇಸರಿ ಬಿಕಿನಿ ಈ ರೀತಿಯಲ್ಲಿ ವಿವಾದ ಎಬ್ಬಿಸುತ್ತೆ ಎನ್ನುವ ಸಣ್ಣ ಅಂದಾಜು ಕೂಡ ನನಗೆ ಇರಲಿಲ್ಲ. ಸಿನಿಮಾದಲ್ಲಿ ಯಾರ ಭಾವನೆಯನ್ನೂ ಕೆರಳಿಸುವ ಕಥೆಯೂ ಇಲ್ಲ. ಆದರೂ, ವಿವಾದ ಮಾಡಲಾಯಿತು.

    ಸಿನಿಮಾ ಚೆನ್ನಾಗಿದ್ದರೆ, ಯಾರ ಮನಸ್ಸಿಗೂ ನೋವು ಮಾಡದೇ ಇದ್ದರೆ ಸಿನಿಮಾವನ್ನು ಪ್ರೇಕ್ಷಕರು ಗೆಲ್ಲಿಸುತ್ತಾರೆ ಎನ್ನುವುದಕ್ಕೆ ಪಠಾಣ್ ಸಿನಿಮಾ ಸಾಕ್ಷಿ. ಸಿನಿಮಾ ಬಗ್ಗೆ ನನಗೆ ನಂಬಿಕೆಯಿತ್ತು. ಬಾಯ್ಕಾಟ್ ನಡೆಯಲ್ಲ ಅನ್ನುವ ವಿಶ್ವಾಸವಿತ್ತು. ಕೊನೆಗೂ ಪ್ರೇಕ್ಷಕ ಗೆಲ್ಲಿಸಿದ ಎಂದು ಅವರು ಮಾತನಾಡಿದ್ದಾರೆ.

  • ಆಸ್ಕರ್‌ನಲ್ಲಿ ದೀಪಿಕಾ ಧರಿಸಿದ್ದ ಈ ಬಟ್ಟೆಯ ಬೆಲೆ ಕೇಳಿದ್ರೆ ಶಾಕ್ ಆಗುತ್ತೀರಾ

    ಆಸ್ಕರ್‌ನಲ್ಲಿ ದೀಪಿಕಾ ಧರಿಸಿದ್ದ ಈ ಬಟ್ಟೆಯ ಬೆಲೆ ಕೇಳಿದ್ರೆ ಶಾಕ್ ಆಗುತ್ತೀರಾ

    ನ್ನಡತಿ ದೀಪಿಕಾ ಪಡುಕೋಣೆ (Deepika Padukone) ಸದಾ ಒಂದಲ್ಲಾ ಒಂದು ಸುದ್ದಿಯ ಮೂಲಕ ಸೌಂಡ್ ಮಾಡ್ತಿದ್ದಾರೆ. ಇತ್ತೀಚಿಗೆ ಆಸ್ಕರ್ ವೇದಿಕೆಯಲ್ಲಿ ದೀಪಿಕಾ ನಿರೂಪಣೆ ಮಾಡಿದ ಮೇಲೆ ದೇಶದ ಎಲ್ಲೆಡೆ ಅವರು ಗಮನ ಸೆಳೆದಿದ್ದಾರೆ. ಈಗ ಆಸ್ಕರ್ (Oscars 2023) ಪಾರ್ಟಿಯಲ್ಲಿ ನಟಿ ಧರಿಸಿದ್ದ ಬಟ್ಟೆ ಬಗ್ಗೆ ಸಖತ್ ಚರ್ಚೆಯಾಗುತ್ತಿದೆ. ಬಟ್ಟೆಯ ಅಸಲಿ ಬೆಲೆ ಕೇಳಿದ್ರೆ ನೀವು ಶಾಕ್ ಆಗುತ್ತೀರಾ.

    ಬಾಲಿವುಡ್ (Bollywood) ನಟಿ ದೀಪಿಕಾ ಪಡುಕೋಣೆ ನಟನೆ, ಡ್ಯಾನ್ಸ್, ಫಿಟ್‌ನೆಸ್‌ಗಷ್ಟೇ ಅಲ್ಲ, ಫ್ಯಾಷನ್‌ಗೂ ಹೆಚ್ಚಿನ ಪ್ರಾಮುಖ್ಯತೆ ಕೊಡುತ್ತಾರೆ. ಇತ್ತೀಚಿನ ಆಸ್ಕರ್ ಇವೆಂಟ್‌ನಲ್ಲಿ ಚೆಂದದ ಡ್ರೆಸ್ ತೊಟ್ಟು ನಿರೂಪಣೆ ಮಾಡಿದ್ದ ನಟಿಗೆ ಇಡೀ ದೇಶವೇ ಹಾಡಿ ಹೊಗಳುತ್ತಿದೆ. ಇದನ್ನೂ ಓದಿ: ‘ಟ್ವಿಂಕಲ್’ ಹಾಡು ಹೇಳುತ್ತಾ ಬಂದ ಶಿವಾಜಿ ಸುರತ್ಕಲ್ 2

    ಈ ಕಾರ್ಯಕ್ರಮದ ಬಳಿಕ ಪಿಂಕ್ ಡ್ರೆಸ್‌ನಲ್ಲಿ (Pink Dress) ನಟಿ ಕಂಗೊಳಿಸಿದ್ದಾರೆ. ಇವೆಂಟ್‌ನಲ್ಲಿ ದೀಪಿಕಾ ಧರಿಸಿದ್ದ ದುಬಾರಿ ಡ್ರೆಸ್ ಬೆಲೆ ಕೇಳಿದ್ರೆ ನಿಜಕ್ಕೂ ಅಚ್ಚರಿ ಮೂಡಿಸುತ್ತದೆ. ಈ ಡ್ರೆಸ್ ನ್ಯೂಯಾರ್ಕ್ ಸಿಟಿ ಮೂಲದ ವಿನ್ಯಾಸಗಾರ ನಯೀಮ್ ಖಾನ್ ಅವರ ಕಲೆಕ್ಷನ್‌ನಲ್ಲಿದೆ. ಈ ಡ್ರೆಸ್ ನಯೀಮ್ ಖಾನ್ ಅವರ 2022ರ ಕಲೆಕ್ಷನ್‌ಗೆ ಸೇರಿದ್ದು, ಇದರ ಬೆಲೆ 819,775  ರೂ. ಮೊತ್ತದಾಗಿದೆ.

    ನೆಟ್ಟಿಗರು ಮಾತ್ರ ಆ ಡ್ರೆಸ್ ಬೆಲೆಗೆ ಸುಂದವಾದ ಒಂದು ಕಾರು ಖರೀದಿಸ್ಬೋದಿತ್ತಲ್ಲ ಅಂತಿದ್ದಾರೆ. ದೀಪಿಕಾ ಅವರ ದುಬಾರಿ ಬಟ್ಟೆ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ.

  • ದೀಪಿಕಾ ಪಡುಕೋಣೆ ನಮ್ಮ ಭಾರತದ ಹೆಮ್ಮೆ ಎಂದು ಹಾಡಿ ಹೊಗಳಿದ ಕಂಗನಾ

    ದೀಪಿಕಾ ಪಡುಕೋಣೆ ನಮ್ಮ ಭಾರತದ ಹೆಮ್ಮೆ ಎಂದು ಹಾಡಿ ಹೊಗಳಿದ ಕಂಗನಾ

    `ಪಠಾಣ್’ (Pathaan) ಹೀರೋಯಿನ್ ದೀಪಿಕಾ ಪಡುಕೋಣೆ (Deepika Padukone) ಇದೀಗ ಸಖತ್ ಸುದ್ದಿಯಲ್ಲಿದ್ದಾರೆ. ಈ ವರ್ಷ ಆಸ್ಕರ್ (Oscar) ವೇದಿಕೆಯಲ್ಲಿ ನಿರೂಪಣೆ (Anchoring) ಮಾಡುವ ಮೂಲಕ ನಟಿ ಗಮನ ಸೆಳೆದಿದ್ದಾರೆ. ಇದೀಗ ಮೊದಲ ಬಾರಿಗೆ ನಟಿ ದೀಪಿಕಾರನ್ನ ಕಂಗನಾ ರಣಾವತ್ ಹಾಡಿ ಹೊಗಳಿದ್ದಾರೆ. ದೀಪಿಕಾ ನಮ್ಮ ಭಾರತದ ಹೆಮ್ಮೆ ಎಂದಿದ್ದಾರೆ.

    ಕನ್ನಡತಿ ದೀಪಿಕಾ ಪಡುಕೋಣೆ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆಸ್ಕರ್ ವೇದಿಕೆಯಲ್ಲಿ ನಿರೂಪಣೆ ಮಾಡುವ ಅವಕಾಶ ಗಿಟ್ಟಿಸಿಕೊಂಡಿದ್ದರು. ಸಿಕ್ಕ ಅವಕಾಶವನ್ನ ಸರಿಯಾಗಿ ಸದುಪಯೋಗ ಪಡಿಸಿಕೊಂಡು ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು’ ಹಾಡಿನ ವಿಶೇಷತೆ ಬಗ್ಗೆ ಅದ್ಭುತವಾಗಿ ಮಾತನಾಡಿ ನಟಿ ಗಮನ ಸೆಳೆದರು. ಇದನ್ನೂ ಓದಿ: ಧನಂಜಯ ನಟನೆಯ 25ನೇ ಸಿನಿಮಾ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

    ದೀಪಿಕಾ ಆಸ್ಕರ್ ಸಮಾರಂಭದಲ್ಲಿ ಕಪ್ಪು ಡ್ರೆಸ್ ತೊಟ್ಟು ಕಂಗೊಳಿಸಿದ್ದಾರೆ. `ಆರ್‌ಆರ್‌ಆರ್’ (RRR) ಚಿತ್ರದ ನಾಟು ನಾಟು ಹಾಡಿನ ಬಗ್ಗೆ ಮಸ್ತ್ ಆಗಿ ನಿರೂಪಣೆ ಮಾಡಿದ್ದಾರೆ. ಅವರ ಡ್ರೆಸ್ ಸೆನ್ಸ್‌ಗೆ ಮತ್ತು ನಿರೂಪಣೆ ಶೈಲಿಗೆ ಹಲವರು ಫಿದಾ ಆಗಿದ್ದಾರೆ. ಈಗ ದೀಪಿಕಾ ಬಗ್ಗೆ ಕಂಗನಾ ರಣಾವತ್ (Kangana Ranaut) ಪ್ರತಿಕ್ರಿಯೆ ನೀಡಿದ್ದಾರೆ.

    ದೀಪಿಕಾ ಪಡುಕೋಣೆ ಎಷ್ಟು ಸುಂದರ (Beautiful). ಭಾರತ (India) ಪ್ರತಿನಿಧಿಸಿ ಆಸ್ಕರ್ ವೇದಿಕೆ ಮೇಲೆ ನಿಲ್ಲುವುದು ಅಷ್ಟು ಸುಲಭವಲ್ಲ. ಈ ಕಾರ್ಯಕ್ರಮದಲ್ಲಿ ಆತ್ಮವಿಶ್ವಾಸದಿಂದ ಮಾತನಾಡುತ್ತಾ ಭಾರತದ ಘನತೆಯನ್ನು ಕಾಪಾಡಿದ್ದು ಮಾತ್ರ ಅವಿಸ್ಮರಣೀಯ. ಇದು ಭಾರತದ ಮಹಿಳೆ ಸಾಮರ್ಥ್ಯ ಹೇಗಿರುತ್ತದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ ಎಂದು ದೀಪಿಕಾರನ್ನ ಮನಸಾರೆ ಕಂಗನಾ ಹಾಡಿ ಹೊಗಳಿದ್ದಾರೆ.

    ಸದಾ ಒಂದಲ್ಲಾ ಒಂದು ವಿವಾದಾತ್ಮಕ ಮಾತುಗಳಿಂದ ಸುದ್ದಿಯಲ್ಲಿರುತ್ತಿದ್ದ ನಟಿ ಕಂಗನಾ ನಡೆಗೆ ಈಗ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನೂ ಆಸ್ಕರ್ ವೇದಿಕೆಯಲ್ಲಿ ದೀಪಿಕಾ ನಿರೂಪಣೆ ಮಾಡಿರುವ ವೀಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

  • 50 ದಿನ ಪೂರೈಸಿದ ಪಠಾಣ್: 20 ದೇಶ, 135 ಚಿತ್ರಮಂದಿರ, 800 ಸ್ಕ್ರೀನ್ ಏನಿದು ಲೆಕ್ಕಾಚಾರ

    50 ದಿನ ಪೂರೈಸಿದ ಪಠಾಣ್: 20 ದೇಶ, 135 ಚಿತ್ರಮಂದಿರ, 800 ಸ್ಕ್ರೀನ್ ಏನಿದು ಲೆಕ್ಕಾಚಾರ

    ಶಾರುಖ್ ಖಾನ್ (Shahrukh Khan) ಮತ್ತು ದೀಪಿಕಾ ಪಡುಕೋಣೆ (Deepika Padukone) ಕಾಂಬಿನೇಷನ್ ನ ಪಠಾಣ್ (Pathan) ಸಿನಿಮಾ ಇಂದಿಗೆ ಐವತ್ತು ದಿನಗಳನ್ನು ಪೂರೈಸಿದೆ. ಬೈಕಾಟ್, ವಿರೋಧ, ಹೋರಾಟ, ಕಾನೂನು ಸಮರ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸಿಕೊಂಡು ಎಲ್ಲ ವಿರೋಧಗಳ ಮಧ್ಯಯೇ ಭರ್ಜರಿ ಯಶಸ್ಸು ಸಾಧಿಸಿದೆ. ಅಲ್ಲದೇ ಇನ್ನೂ ಅನೇಕ ಚಿತ್ರಮಂದಿರಗಳಲ್ಲಿ ತುಂಬಿದ ಪ್ರದರ್ಶನ ಕಾಣುತ್ತಿದೆ.

    50 ದಿನಗಳನ್ನೂ ಪಠಾಣ್ ಸಿನಿಮಾ ಪೂರೈಸಿದ್ದರೂ, ಇನ್ನೂ 20 ದೇಶಗಳಲ್ಲಿ ಈ ಸಿನಿಮಾ ತನ್ನ ಪ್ರದರ್ಶನವನ್ನು ಮುಂದುವರೆಸಿದೆ. ಭಾರತದಲ್ಲೇ 135 ಚಿತ್ರಮಂದಿರಗಳಲ್ಲಿ 800 ಸ್ಕ್ರೀನ್ ಗಳಲ್ಲಿ ಚಿತ್ರ ಪ್ರದರ್ಶನ ಕಾಣುತ್ತಿದೆ. ಎರಡ್ಮೂರು ವರ್ಷಗಳಲ್ಲಿ ಈ ಪ್ರಮಾಣದಲ್ಲಿ ಗೆದ್ದ ಮೊದಲ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಠಾಣ್ ಪಾತ್ರವಾಗಿದೆ. ಐಸಿಯುವಿನಲ್ಲಿದ್ದ ಬಾಲಿವುಡ್ ಗೆ ಈ ಸಿನಿಮಾದಿಂದ ಮರುಜೀವ ಬಂದಿದೆ. ಇದನ್ನೂ ಓದಿ:  ಕ್ರಿಕೆಟರ್ ಶುಭಮನ್ ಗಿಲ್ ಬಗ್ಗೆ ಕೇಳಿದ್ದಕ್ಕೆ ನಾಚಿ ನೀರಾದ ರಶ್ಮಿಕಾ ಮಂದಣ್ಣ

    ಬಾಕ್ಸ್ ಆಫೀಸಿನ ಅನೇಕ ದಾಖಲೆಗಳನ್ನು ಪಠಾಣ್ ಮುರಿದಿದೆ. ಅತೀ ಕಡಿಮೆ ಸಮಯದಲ್ಲೇ ಸಾವಿರ ಕೋಟಿ ಸಂಪಾದನೆ ಮಾಡಿದ ಬಾಲಿವುಡ್ ಸಿನಿಮಾ ಎನ್ನುವ ಖ್ಯಾತಿಯೂ ಅದು ಪಾತ್ರವಾಗಿದೆ. ಅಲ್ಲದೇ, ಸಾವಿರಾರು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗುವ ಮೂಲಕ ಏಕಕಾಲದಲ್ಲಿ ದೇಶ ವಿದೇಶಗಳಲ್ಲಿ ಚಿತ್ರ ಬಿಡುಗಡೆಯಾಗಿದೆ. ಬಿಡುಗಡೆಯಾದ ಅಷ್ಟೂ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನವನ್ನು ಚಿತ್ರಕಂಡಿದೆ.

    ಸಿನಿಮಾ ಬಿಡುಗಡೆಗೂ ಮುನ್ನ ಭಾರೀ ಟೀಕೆಗೆ ಪಠಾಣ್ ಗುರಿ ಆಯಿತು. ಹಾಡೊಂದರಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದರು ಎನ್ನುವ ಕಾರಣಕ್ಕಾಗಿ ಪ್ರತಿಭಟನೆ ಕೂಡ ನಡೆಯಿತು. ಉತ್ತರ ಪ್ರದೇಶ ಸೇರಿದಂತೆ ಹಲವು ಕಡೆ ಸಿನಿಮಾವನ್ನು ಬ್ಯಾನ್ ಮಾಡುವ ವಿಚಾರ ಮುನ್ನೆಲೆಗೆ ಬಂತು. ಈ ಸಿನಿಮಾದ ಬಗ್ಗೆ ಏನೂ ಮಾತನಾಡಬಾರದು ಎಂದು ಸ್ವತಃ ಪ್ರಧಾನಿ ಮೋದಿ ಅವರೇ ಕರೆಕೊಟ್ಟಿದ್ದರು. ಆದರೂ, ಪ್ರತಿಭಟನೆ ನಿಲ್ಲಲಿಲ್ಲ. ಸಿನಿಮಾ ಗೆಲ್ಲುವುದು ಮಾತ್ರ ಬಿಡಲಿಲ್ಲ.

  • ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಕಂಗೊಳಿಸಿದ ದೀಪಿಕಾ ಪಡುಕೋಣೆ

    ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಕಂಗೊಳಿಸಿದ ದೀಪಿಕಾ ಪಡುಕೋಣೆ

    ಬಾಲಿವುಡ್ (Bollywood) ಬ್ಯೂಟಿ ದೀಪಿಕಾ ಪಡುಕೋಣೆ (Deepika Padukone) ಅವರು ಭಾರತೀಯ ಚಿತ್ರರಂಗವನ್ನು (India) ಪ್ರತಿನಿಧಿಸಿ ಆಸ್ಕರ್ ಅವಾರ್ಡ್‌ನಲ್ಲಿ ನಿರೂಪಣೆ ಮಾಡಿದ್ದರು. ʻನಾಟು ನಾಟುʼ ಹಾಡಿನ ಬಗ್ಗೆ ಮೆಚ್ಚುಗೆ ಸೂಚಿಸಿ, ಹಾಡಿನ ವಿಶೇಷತೆಯನ್ನು ವಿವರಿಸಿದರು. ಇದೀಗ ಆಸ್ಕರ್ ಸಮಾರಂಭದಲ್ಲಿ ನಟಿ ಬೋಲ್ಡ್ ಲುಕ್‌ನಿಂದ ಕಂಗೊಳಿಸಿದ್ದಾರೆ. ಈ ಫೋಟೋಶೂಟ್ ಸದ್ಯ ಸದ್ದು ಮಾಡ್ತಿದೆ. ಇದನ್ನೂ ಓದಿ: Oscar-ಆಸ್ಕರ್ ಪ್ರಶಸ್ತಿ ಪಡೆದ ನಾಟು ನಾಟು ‘ಲಹರಿ’ಯ ಹಾಡು ನೀವಿನ್ನೂ ನೋಡಿಲ್ವಾ?

    ಹಿಂದಿ ಚಿತ್ರರಂಗದಲ್ಲಿ ಸ್ಟಾರ್ ನಟಿಯರಲ್ಲಿ ಒಬ್ಬರಾಗಿರುವ ದೀಪಿಕಾ ಪಡುಕೋಣೆ ಆಸ್ಕರ್ ಅಂಗಳದಲ್ಲಿ ಸದ್ದು ಮಾಡ್ತಿದ್ದಾರೆ. ಒಂದ್ ಕಡೆ ನಿರೂಪಣೆಯ ವಿಚಾರವಾಗಿ ಗಮನ ಸೆಳೆದಿದ್ದರೆ, ಇನ್ನೊಂದ್ ಕಡೆ ತನ್ನ ಭಿನ್ನ ಡ್ರೆಸ್ ಸೆನ್ಸ್‌ನಿಂದ ನಟಿ ಹೈಲೈಟ್ ಆಗಿದ್ದಾರೆ.

    ಕ್ಲಾಸಿ ಕಪ್ಪು ಬಣ್ಣದ ಗೌನ್‌ನಲ್ಲಿ ದೀಪಿಕಾ ಪಡ್ಡೆಹುಡುಗರ ನಿದ್ದೆ ಕದ್ದಿದ್ದಾರೆ. ಕಪ್ಪು ಬಣ್ಣದ ಗೌನ್‌ನಲ್ಲಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ. ಅದಷ್ಟೇ ಅಲ್ಲದೇ, ಪಿಂಕ್ ಬಣ್ಣದ ಮಾಡ್ರನ್ ಡ್ರೆಸ್‌ನಲ್ಲಿ ಕೂಡ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಆಸ್ಕರ್ ಅವಾರ್ಡ್ ಕಾರ್ಯಕ್ರಮ ಮುಗಿದ ಮೇಲೆ ಪಾರ್ಟಿ ಅರೆಂಜ್ ಮಾಡಲಾಗಿತ್ತು. ಈ ಪಾರ್ಟಿಯಲ್ಲಿ ಪಿಂಕ್ ಬಣ್ಣದ ಧಿರಿಸಿನಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

     

    View this post on Instagram

     

    A post shared by Deepika Padukone (@deepikapadukone)

    ಇನ್ನೂ ಆಸ್ಕರ್ ವೇದಿಕೆಯಲ್ಲಿ ಭಾರತವು ಎರಡು ಪ್ರಶಸ್ತಿಯನ್ನ ತನ್ನದಾಗಿಸಿಕೊಂಡಿದೆ. ಬೆಸ್ಟ್ ಕಿರುಚಿತ್ರ ವಿಭಾಗದಲ್ಲಿ `ದಿ ಎಲಿಫೆಂಟ್ ವಿಸ್ಪರರ್ಸ್’ ಮತ್ತು ಅತ್ಯುತ್ತಮ ಒರಿಜಿನಲ್ ಸಾಂಗ್ ವಿಭಾಗದಲ್ಲಿ `ಆರ್‌ಆರ್‌ಆರ್’ ಚಿತ್ರದ ನಾಟು ನಾಟು ಸಾಂಗ್ ಪ್ರಶಸ್ತಿ ಬಾಚಿಕೊಂಡಿದೆ. ʻನಾಟು ನಾಟುʼ ಹಾಡಿಗೆ ಚಿತ್ರತಂಡ ಪ್ರಶಸ್ತಿ ಪಡೆಯುವಾಗ ದೀಪಿಕಾ ಭಾವುಕರಾಗಿದ್ದಾರೆ.

  • `ನಾಟು ನಾಟು’ ಆಸ್ಕರ್‌ ಗೆದ್ದಿದ್ದಕ್ಕೆ ಕಣ್ಣೀರಿಟ್ಟ ದೀಪಿಕಾ ಪಡುಕೋಣೆ

    `ನಾಟು ನಾಟು’ ಆಸ್ಕರ್‌ ಗೆದ್ದಿದ್ದಕ್ಕೆ ಕಣ್ಣೀರಿಟ್ಟ ದೀಪಿಕಾ ಪಡುಕೋಣೆ

    ಡೀ ವಿಶ್ವವೇ ಕಾಯುತ್ತಿದ್ದ ಆಸ್ಕರ್ 2023 ಸಮಾರಂಭಕ್ಕೆ ತೆರೆಬಿದ್ದಿದೆ. ಭಾರತವು 2 ಪ್ರಶಸ್ತಿಯನ್ನ ಬಾಚಿಕೊಂಡಿದೆ. ಪ್ರತಿಷ್ಠಿತ ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು’ (Naatu Naatu) ಹಾಡು ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಆಸ್ಕರ್ ತನ್ನದಾಗಿಸಿಕೊಂಡಿದೆ. ಈ ವೇಳೆ ನಟಿ ದೀಪಿಕಾ ಪಡುಕೋಣೆ ಭಾವುಕರಾಗಿದ್ದಾರೆ. ಎಂ.ಎಂ ಕೀರವಾಣಿ ಅವರು ಪ್ರಶಸ್ತಿ ಪಡೆಯುವಾಗ ದೀಪಿಕಾ ಗಳಗಳನೆ ಅತ್ತಿದ್ದಾರೆ. ಇದನ್ನೂ ಓದಿ: Oscar-ಆಸ್ಕರ್ ಪ್ರಶಸ್ತಿ ಪಡೆದ ನಾಟು ನಾಟು ‘ಲಹರಿ’ಯ ಹಾಡು ನೀವಿನ್ನೂ ನೋಡಿಲ್ವಾ?

    ರಾಜಮೌಳಿ ನಿರ್ದೇಶನದ `ಆರ್‌ಆರ್‌ಆರ್’ ಚಿತ್ರದ ನಾಟು ನಾಟು ಹಾಡಿಗೆ ಎಂ.ಎಂ ಕೀರವಾಣಿ ಸಂಗೀತ ಸಂಯೋಜನೆ ಮಾಡಿದ್ದರು. ವಿಶ್ವದೆಲ್ಲೆಡೆ ಈ ಸಾಂಗ್ ಟ್ರೆಂಡ್ ಸೃಷ್ಟಿಸಿತ್ತು. ಈಗ ಆಸ್ಕರ್ ವೇದಿಕೆಯಲ್ಲೂ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಗೆಲ್ಲುವ ಮೂಲಕ ಭಾರತಕ್ಕೆ ಕೀರ್ತಿ ತಂದು ಕೊಟ್ಟಿದೆ.

    ಈ ವರ್ಷದ ಆಸ್ಕರ್ (Oscars 2023) ವೇದಿಕೆಯಲ್ಲಿ ದೀಪಿಕಾ ಪಡುಕೋಣೆ (Deepika Padukone) ನಿರೂಪಣೆ (Anchoring) ಮಾಡಿರೋದು ಮತ್ತೊಂದು ಹೆಮ್ಮೆಯ ಸಂಗತಿ. ವೇದಿಕೆಯಲ್ಲಿ ನಾಟು ನಾಟು ಸಾಂಗ್‌ನ ವಿಶೇಷತೆ ಬಗ್ಗೆ ನಟಿ ಹೇಳಿದರು. ಚಿತ್ರದ ಬಗ್ಗೆ ದೀಪಿಕಾ ಮೆಚ್ಚುಗೆ ಸೂಚಿದರು. ವಿನ್ನರ್ ಅನೌನ್ಸ್‌ಮೆಂಟ್ ಬಳಿಕ `ಆರ್‌ಆರ್‌ಆರ್’ (RRR) ಟೀಂ ವೇದಿಕೆ ಮೇಲೆ ಏರುತ್ತಿದ್ದಂತೆ ಕೆಳಗೆ ಕುಳಿತಿದ್ದ ದೀಪಿಕಾ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಇಂಡಿಯಾ ಸಿನಿಮಾಗೆ ಸಂದ ಗೌರವಕ್ಕೆ ನಟಿ ಹೆಮ್ಮೆ ಪಟ್ಟಿದ್ದಾರೆ.

    `ಆರ್‌ಆರ್‌ಆರ್’ ತಂಡದಿಂದ ನಟಿ ದೂರ ಕುಳಿತಿದ್ದರು ಕೂಡ. ತಂಡಕ್ಕೆ ದೀಪಿಕಾ ಬೆಂಬಲ ಸೂಚಿಸಿದ್ದಾರೆ. ಭಾರತಕ್ಕೆ ಎರಡು ಪ್ರಶಸ್ತಿ ಸಿಕ್ಕ ಸಂಭ್ರಮದಲ್ಲಿ ನಟಿ ಭಾವುಕರಾಗಿದ್ದಾರೆ. ಈ ಕುರಿತ ಫೋಟೋ, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

  • Oscar- ಆಸ್ಕರ್ ಪ್ರಶಸ್ತಿ: ರೆಡ್ ಕಾರ್ಪೆಟ್ ಮೇಲೆ ಮನಮೋಹಕ ನೋಟ, ಬಳುಕಿದ ಹೆಜ್ಜೆ

    Oscar- ಆಸ್ಕರ್ ಪ್ರಶಸ್ತಿ: ರೆಡ್ ಕಾರ್ಪೆಟ್ ಮೇಲೆ ಮನಮೋಹಕ ನೋಟ, ಬಳುಕಿದ ಹೆಜ್ಜೆ

    ವಿಶ್ವದ ಪ್ರತಿಷ್ಠಿತ ಆಸ್ಕರ್ (Oscar) ಪ್ರಶಸ್ತಿ (award) ಪ್ರದಾನ ಸಮಾರಂಭ ಮುಕ್ತಾಯವಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ಮುನ್ನ ರೆಡ್ ಕಾರ್ಪೆಟ್ (red carpet) ಮೇಲೆ ವಿಶ್ವದ ಅನೇಕ ತಾರೆಯರು ಹೆಜ್ಜೆ ಹಾಕಿದ್ದಾರೆ. ಅದರಲ್ಲೂ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಕಪ್ಪು ಬಣ್ಣದ ಶೋಲ್ಡರ್ ವೆಲ್ವೆಟ್ ಗೌನ್ ಧರಿಸಿ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.

    ಈ ವರ್ಷದ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಬಂದಿದ್ದ ಡ್ವೇನ್ ಜಾನ್ಸನ್, ಜೊನಾಥನ್ ಮೇಜರ್ಸ್, ಮೆಲಿಸ್ಸಾ ಮೆಕಾರ್ಥಿ, ಎಮಿಲಿ ಬ್ಲಂಟ್, ಜೆನ್ನಿಫರ್ ಕೊನ್ನೆಲ್ಲಿ ಸೇರಿದಂತೆ ಹಾಲಿವುಡ್ ತಾರೆಯರು ಕೂಡ ಹೆಜ್ಜೆ ಹಾಕುವ ಮೂಲಕ ಕ್ಯಾಮೆರಾ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ಭಾರತದ ದಿ ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಿದ್ದಾರೆ. ಅಲ್ಲದೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ.

    ಈ ಬಾರಿ ಭಾರತದ ಎರಡು ಚಿತ್ರಗಳಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಸಂದಿದೆ. ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡು ಅತ್ಯುತ್ತಮ ಓರಿಜನ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿದ್ದರೆ, ಡಾಕ್ಯುಮೆಂಟರಿ ವಿಭಾಗದಲ್ಲಿ ಕಾರ್ತಿಕಿ ನಿರ್ದೇಶನದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಕಿರುಚಿತ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಎರಡೂ ತಂಡಕ್ಕೂ ಪ್ರಧಾನಿ ನರೇಂದ್ರ ಮೋದಿ ಶುಭಾಶಯಗಳನ್ನು ಕೋರಿದ್ದಾರೆ. ಇದೊಂದು ಐತಿಹಾಸಿ ಕ್ಷಣ ಎಂದು ಬಣ್ಣಿಸಿದ್ದಾರೆ.

    ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇಡೀ ಭಾರತ ಕುತೂಹಲದಿಂದ ವೀಕ್ಷಿಸುತ್ತಿತ್ತು. ಈ ಬಾರಿ ಭಾರತದ ಮೂರು ಸಿನಿಮಾಗಳು ನಾಮಿನೇಟ್ ಆಗಿ ಹಲವು ವಿಭಾಗಗಳ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದವು. ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡು ಬೆಸ್ಟ್ ಓರಿಜನಲ್ ಸಾಂಗ್ ವಿಭಾಗದಲ್ಲಿ ಸ್ಪರ್ಧಿಸಿದ್ದರೆ, ಬೆಸ್ಟ್ ಡಾಕ್ಯುಮೆಂಟರಿ ವಿಭಾಗದಲ್ಲಿ ‘ಆಲ್ ದೆಟ್ ಬ್ರೆತ್ಸ್’ ಮತ್ತು ಬೆಸ್ಟ್ ಶಾರ್ಟ್ ಫಿಲ್ಮ್ ವಿಭಾಗದಲ್ಲಿ ‘ದಿ ಎಲಿಫೆಂಟ್ ವಿಸ್ಪರರ್ಸ್’ ಇತ್ತು.

    ಆಸ್ಕರ್ ಪ್ರಶಸ್ತಿಯ ಟ್ರೋಫಿ ಜೊತೆ ನಗದು ಬಹುಮಾನ ಕೊಡದೇ ಇದ್ದರೂ, ಉಡುಗೊರೆಯ ರೂಪದಲ್ಲಿ ಅನೇಕ ವಸ್ತುಗಳು, ಪ್ರವಾಸ ಪ್ಯಾಕೇಜ್ ಗಳು ವಿಜೇತರಿಗೆ ಸಿಗುತ್ತವೆ. ಕೇವಲ ಪ್ರಶಸ್ತಿ ಗೆದ್ದವರಿಗೆ ಮಾತ್ರವಲ್ಲ, ನಾಮ ನಿರ್ದೇಶನಗೊಂಡವರಿಗೆ ಉಡುಗೊರೆ ಇರಲಿದೆ. ಈ ಬಾರಿ ಗಿಫ್ಟ್ ಬಾಕ್ಸ್ ನಲ್ಲಿ 1 ಲಕ್ಷ ಡಾಲರ್ ಮೌಲ್ಯದ ಉಡುಗೊರೆಗಳು ಇವೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಪೀಸೆಸ್ ಆಫ್ ಆಸ್ಟ್ರೇಲಿಯಾ ಹೆಸರಿನ ಕಂಪೆನಿಯೊಂದು ನಾಮ ನಿರ್ದೇಶನಗೊಂಡವರಿಗೆ ಆಸ್ಟ್ರೇಲಿಯಾದಲ್ಲಿ ಒಂದು ಚದರ ಮೀಟರ್ ಭೂಮಿ ಕೊಡಲು ಮುಂದಾಗಿದೆಯಂತೆ.

  • ಆಸ್ಕರ್ ಪ್ರಶಸ್ತಿ ಪ್ರದಾನಕ್ಕೆ ಕ್ಷಣಗಣನೆ : ಭಾರತದ ಯಾವ ಚಿತ್ರಕ್ಕೆ ಸಿಗತ್ತೆ ಆಸ್ಕರ್?

    ಆಸ್ಕರ್ ಪ್ರಶಸ್ತಿ ಪ್ರದಾನಕ್ಕೆ ಕ್ಷಣಗಣನೆ : ಭಾರತದ ಯಾವ ಚಿತ್ರಕ್ಕೆ ಸಿಗತ್ತೆ ಆಸ್ಕರ್?

    ಪ್ರತಿಷ್ಠಿತ ಆಸ್ಕರ್ (Oscars) ಪ್ರಶಸ್ತಿ ಪ್ರದಾನ ಸಮಾರಂಭ ಕ್ಷಣಗಣನೆ ಶುರುವಾಗಿದೆ. ಅಮೆರಿಕಾದ ಕಾಲಮಾನ ಪ್ರಕಾರ ಇಂದು ರಾತ್ರಿಯಿಂದಲೇ ಕಾರ್ಯಕ್ರಮ ಶುರುವಾಗಲಿದೆ. (ಭಾರತೀಯ ಕಾಲಮಾನ ಪ್ರಕಾರ ನಾಳೆ ಬೆಳಗ್ಗೆ 6.30) ಅಮೆರಿಕಾದ ಲಾಸ್ ಏಂಜಲೀಸ್‍ ( Los Angeles)  ಡಾಲ್ಬಿ ಥಿಯೇಟರ್ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮವನ್ನು ನೋಡುವುದಕ್ಕಾಗಿಯೇ ಜಗತ್ತಿನ ಮೂಲೆ ಮೂಲೆಗಳಿಂದ ಸಿನಿಮಾ ಪ್ರೇಮಿಗಳು ಆಗಮಿಸುತ್ತಾರೆ.

    ಈ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತೀಯರು ಹೆಮ್ಮೆ ಪಡುವಂತಹ ಅನೇಕ ಸಂಗತಿಗಳು ನಡೆಯಲಿವೆ. ಇದೇ ಮೊದಲ ಬಾರಿಗೆ ಪ್ರತಿಷ್ಠಿತ ಈ ವೇದಿಕೆಯಲ್ಲಿ ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡಿಗೆ ಜ್ಯೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ಹೆಜ್ಜೆ ಹಾಕಲಿದ್ದಾರೆ. ಈಗಾಗಲೇ ಇಬ್ಬರೂ ಕಲಾವಿದರು ಅಮೆರಿಕಾದಲ್ಲೇ ಬೀಡು ಬಿಟ್ಟಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ರಾಮ್ ಚರಣ್ (Ram Charan) ಬಂದಿದ್ದು, ಅಭಿಮಾನಿಗಳು ಮುಗಿಬಿದ್ದು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಇದೀಗ ಓದಿ: ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ `ಕಾಂತಾರ’ ಶಿವನ ಹುಡುಗಿ

    ಅಲ್ಲದೇ, ಆರ್.ಆರ್.ಆರ್ ಸಿನಿಮಾದ ನಾಟು ನಾಟು ಗೀತೆಯೂ ಕೂಡ ಆಸ್ಕರ್ ರೇಸ್ ನಲ್ಲಿದೆ. ಹೀಗಾಗಿ ನಿರ್ದೇಶಕ ರಾಜಮೌಳಿ ಸೇರಿದಂತೆ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದೆ. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಈ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ.

    ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ಮುನ್ನ ರಾಮ್ ಚರಣ್ ಅಭಿಮಾನಿಗಳ ಜೊತೆ ಬೆರೆಯುವುದಾಗಿ ಮಾತುಕೊಟ್ಟಿದ್ದರು. ಅದರಂತೆ ಅಭಿಮಾನಿಗಳ ಜೊತೆ ಒಂದಷ್ಟು ಹೊತ್ತು ಕಳೆದಿದ್ದಾರೆ. ನೆಚ್ಚಿನ ನಟನನ್ನು ಭೇಟಿ ಮಾಡಲು ಸಾವಿರಾರು ಅಭಿಮಾನಿಗಳು ನೆರೆದಿದ್ದು ವಿಶೇಷ. ಎಲ್ಲರೊಂದಿಗೂ ಖುಷಿಯಿಂದಲೇ ಫೋಟೋಗೂ ಪೋಸ್ ನೀಡಿದ್ದಾರೆ ರಾಮ್ ಚರಣ್. ಆ ಫೋಟೋಗಳು ಕೂಡ ವೈರಲ್ ಆಗಿವೆ.