Tag: Deepika Padukone

  • ದೀಪಿಕಾ ಮುಂದೆಯೇ ರಣ್‌ವೀರ್‌ನನ್ನ ತಬ್ಬಿಕೊಂಡ ರಶ್ಮಿಕಾ ಮಂದಣ್ಣ

    ದೀಪಿಕಾ ಮುಂದೆಯೇ ರಣ್‌ವೀರ್‌ನನ್ನ ತಬ್ಬಿಕೊಂಡ ರಶ್ಮಿಕಾ ಮಂದಣ್ಣ

    ಕೂರ್ಗ್ ಬ್ಯೂಟಿ ರಶ್ಮಿಕಾ ಮಂದಣ್ಣಗೆ (Rashmika Mandanna) ಸಿನಿಮಾರಂಗದಲ್ಲಿ ಹೆಚ್ಚಿನ ಬೇಡಿಕೆಯಿದೆ. ಸೌತ್, ಬಾಲಿವುಡ್‌ನಿಂದ ಬಂಪರ್ ಸಿನಿಮಾ ಆಫರ್ಸ್‌ ಅರಸಿ ಬರುತ್ತಿವೆ. ಇದೀಗ ಉದ್ಯಮಿ ಮುಕೇಶ್ ಅಂಬಾನಿ (Mukesh Ambani) ಮನೆಯಲ್ಲಿ ಗಣೇಶ ಚತುರ್ಥಿ ಹಬ್ಬಕ್ಕೆ ರಶ್ಮಿಕಾಗೂ ಆಹ್ವಾನ ನೀಡಿದ್ದು, ಪುಷ್ಪ ನಟಿ ಹಾಜರಿ ಹಾಕಿದ್ದಾರೆ. ಈ ವೇಳೆ ದೀಪಿಕಾ ಪಡುಕೋಣೆ (Deepika Padukone) ಮುಂದೆಯೇ ರಣ್‌ವೀರ್‌ನನ್ನ ತಬ್ಬಿಕೊಂಡಿದ್ದಾರೆ. ನಟನ ಕೆನ್ನೆಗೆ ಪುಷ್ಪ ನಟಿ ಕೆನ್ನೆ ತಾಗಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

    ಲೈಟ್ ಬಣ್ಣದ ಸೀರೆಯುಟ್ಟು ಕಾರ್ಯಕ್ರಮಕ್ಕೆ ರಶ್ಮಿಕಾ ಭಾಗವಹಿಸಿದ್ದಾರೆ. ಈ ವೇಳೆ ರಶ್ಮಿಕಾ ಮುಂದೆಯೇ ದೀಪಿಕಾ- ರಣ್‌ವೀರ್ ದಂಪತಿ ಎದುರಾಗಿದ್ದು, ಆತ್ಮೀಯವಾಗಿ ಮಾತನಾಡಿಸಿದ್ದಾರೆ. ಬಳಿಕ ದೀಪಿಕಾ ಮುಂದೆಯೇ ರಣ್‌ವೀರ್‌ನನ್ನ(Ranveer Singh) ತಬ್ಬಿ, ಕೆನ್ನೆಗೆ ಕೆನ್ನೆ ತಾಗಿಸಿ ನಟಿ ಮಾತನಾಡಿಸಿದ್ದಾರೆ. ಬೈ ಹೇಳಿ ಮುಂದಕ್ಕೆ ಹೋಗಿದ್ದಾರೆ. ಇದನ್ನೂ ಓದಿ:ವೈಟ್‌ ಡ್ರೆಸ್‌ನಲ್ಲಿ ಅಪ್ಸರೆಯಂತೆ ಮಿಂಚಿದ ‘ಕಾಂತಾರ’ ಬ್ಯೂಟಿ

    ಕೆಲವರು ಈ ವಿಡಿಯೋ ನೋಡಿ, ಬಾಲಿವುಡ್‌ನಲ್ಲಿ ಇದೆಲ್ಲಾ ಕಾಮನ್ ಅಂದ್ರೆ, ಇನ್ನೂ ಕೆಲವರು ಪತ್ನಿ ದೀಪಿಕಾ ಮುಂದೆಯೇ ರಣ್‌ವೀರ್‌ಗೆ ರಶ್ಮಿಕಾ ಕೆನ್ನೆಗೆ ಕೆನ್ನೆ ತಾಗಿಸಿದ್ದು ಸರಿನಾ? ಎಂದಿದ್ದಾರೆ.

    ಮುಕೇಶ್ ಅಂಬಾನಿ ಮನೆಯ ಗಣೇಶ ಚತುರ್ಥಿ ಸಮಾರಂಭದಲ್ಲಿ ಆಲಿಯಾ ಭಟ್, ವರುಣ್ ಧವನ್, ಶಾರುಖ್ ಖಾನ್ ಫ್ಯಾಮಿಲಿ, ನಯನತಾರಾ ದಂಪತಿ, ರೇಖಾ, ಐಶ್ವರ್ಯ ರೈ, ಸಾರಾ ಅಲಿ ಖಾನ್, ಅನನ್ಯಾ ಪಾಂಡೆ, ಕೆ.ಎಲ್ ರಾಹುಲ್- ಅಥಿಯಾ ಶೆಟ್ಟಿ, ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಾರುಖ್‌ಗೆ ಡಬಲ್ ಧಮಾಕಾ- ಗೆಲುವಿನ ಟ್ರ್ಯಾಕ್‌ಗೆ ಮರಳಿದ ಬಾದ್‌ಶಾ

    ಶಾರುಖ್‌ಗೆ ಡಬಲ್ ಧಮಾಕಾ- ಗೆಲುವಿನ ಟ್ರ್ಯಾಕ್‌ಗೆ ಮರಳಿದ ಬಾದ್‌ಶಾ

    ಶಾರುಖ್ ಖಾನ್ (Sharukh Khan) ಖುಷಿಗೆ ಮಿತಿಯೇ ಇಲ್ಲ. ವರ್ಷದೊಳಗೆ ಎರಡೆರಡು ಬ್ಲಾಕ್‌ಬಸ್ಟರ್ ಹಿಟ್. 7 ವರ್ಷಗಳಿಂದ ಚಪ್ಪಾಳೆಯ ಸದ್ದನ್ನೇ ಕೇಳಿರದ ಕಿಂಗ್ ಖಾನ್ ಆ ದಿನಗಳಲ್ಲಿ ಅನುಭವಿಸಿದ್ದ ಯಾತನೆ ಬಿಚ್ಚಿಟ್ಟಿದ್ದಾರೆ. ಜವಾನ್ ಸಕ್ಸಸ್‌ಮೀಟ್‌ನಲ್ಲಿ ಕಿಂಗ್ ಖಾನ್ ಭಾವುಕ ನುಡಿ. ಇದನ್ನೂ ಓದಿ:‘ಫುಲ್ ಮೀಲ್ಸ್’ ಚಿತ್ರತಂಡದಿಂದ ನಾಯಕಿಗೆ ವಿಶೇಷ ಉಡುಗೊರೆ

    ಒಂದೇ ವರ್ಷ 2 ಬ್ಲಾಕ್‌ಬಸ್ಟರ್ ಹಿಟ್ ಸಿನಿಮಾ. ಬಾದ್‌ಶಾ ಶಾರುಖ್ ಖಾನ್ ಮತ್ತೆ ಹಳೇ ಚಾರ್ಮ್‌ಗೆ ಮರಳಿದ್ದಾರೆ. ಜವಾನ್ (Jawan Film) ಭರ್ತಿ 700 ಕೋಟಿ ಕಲೆಕ್ಷನ್ ಮಾಡಿದೆ. ಇದೇ ಖುಷಿಯಲ್ಲಿ ಕಿಂಗ್ ಖಾನ್ ಸಕ್ಸಸ್ ಪಾರ್ಟಿ ಮಾಡಿ ಕುಣಿದು ಕುಪ್ಪಳಿಸಿದ್ದಾರೆ. ಯಾವ ಪೀಕ್‌ಲ್ಲಿ ಅಂದ್ರೆ ಪಾರ್ಟಿಯಲ್ಲಿ ನೆಲದ ಮೇಲೆ ಮಲಗಿ ಕ್ಯಾಮೆರಾಗೆ ಪೋಸ್ ಕೊಡುವಷ್ಟು! ಯಾಕಂದ್ರೆ ಸತತ ಸೋಲಿನಿಂದ ಕಂಗೆಟ್ಟಿದ್ದ ಶಾರುಖ್ 3 ವರ್ಷ ಸಿನಿ ಅಜ್ಞಾತವಾಸ ಅನುಭವಿಸಿದ್ದರು. ಆ ಪರಿಸ್ಥಿತಿಯಿಂದ ಹೇಗೆ ಹೊರಬಂದ್ರು. ಸಂಕಟ ಕಮ್ಮಿ ಮಾಡಲು ಸಹಕರಿಸಿದ್ದು ಯರ‍್ಯಾರು ಎಲ್ಲವನ್ನೂ ಜವಾನ್ ಸಕ್ಸಸ್ ಪಾರ್ಟಿಯಲ್ಲಿ ಶಾರುಖ್ ಮನಬಿಚ್ಚಿದ್ದಾರೆ.

    ಮುಂಬೈನಲ್ಲಿ ಅದ್ದೂರಿಯಾಗಿ ‘ಜವಾನ್’ ಸಕ್ಸಸ್ ಪಾರ್ಟಿ ನಡೆದಿದೆ. ದೀಪಿಕಾ (Deepika Padukone) ಸಮೇತವಾಗಿ ಪ್ರತಿಯೊಬ್ಬರೂ ಭಾಗಿಯಾಗಿದ್ರು. ನಯನತಾರಾ (Nayanatara) ಮಾತ್ರಾ ಮಿಸ್ಸಿಂಗ್ ಅನ್ನೋದನ್ನ ಬಿಟ್ರೆ ಶಾರುಖ್ ಎಲ್ಲರನ್ನೂ ವೇದಿಕೆಗೆ ಕರೆಸಿದ್ರು. ಈ ಸೆಲ್ಫ್ ಮೇಡ್ ಶಹಜಾದಾ ಪಠಾಣ್ (Pathaan) ಸಿನಿಮಾದ ಬಳಿಕ ಮತ್ತೊಂದು ಹಿಟ್ ಕೊಟ್ಟಿದ್ದಾರೆ.

    ಇಂಥಹ ಎಷ್ಟೋ ದಾಖಲೆಗಳನ್ನ ಶಾರುಖ್ (Sharukh Khan) ಉಡೀಸ್ ಮಾಡಿರುವ ಹಿನ್ನೆಲೆ ಇದ್ದರೂ ಕೂಡ ಶಾರುಖ್ ಚೆನೈ ಎಕ್ಸ್‌ಪ್ರೈಸ್ (Chennai Express) ಬಳಿಕ ಸೋಲಿನ ರಾಶಿಯಲ್ಲಿ ಮುಳುಗಿ ಸುಸ್ತಾಗಿದ್ರು. ಕೊನೆಗೂ ಒಂದರಮೇಲೊಂದು ಚಿತ್ರ ಯಶಸ್ಸಿನ ಹಾದಿ ಹಿಡಿಯುತ್ತಿರೋದ್ರಿಂದ ಶಾರುಖ್ ಮತ್ತೆ ಬಾದ್‌ಶಾ ಗದ್ದುಗೆಗೆ ಮರಳಿದ್ದಾರೆ. ಇದೇ ಖುಷಿಯಲ್ಲೇ ಜವಾನ್ ಸಕ್ಸಸ್‌ಮೀಟ್‌ನಲ್ಲಿ ಶಾರುಖ್ ಫ್ಲ್ಯಾಶ್‌ ಬ್ಯಾಕ್ ಕಥೆಯನ್ನೇ ಹೆಚ್ಚಾಗಿ ಹಂಚಿಕೊಂಡಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಾರುಖ್ ಖಾನ್ ಗೆ ಮುತ್ತಿಟ್ಟು ವೈರಲ್ ಆದ ದೀಪಿಕಾ ಪಡುಕೋಣೆ

    ಶಾರುಖ್ ಖಾನ್ ಗೆ ಮುತ್ತಿಟ್ಟು ವೈರಲ್ ಆದ ದೀಪಿಕಾ ಪಡುಕೋಣೆ

    ಬಾಲಿವುಡ್ ಖ್ಯಾತ ನಟಿ ದೀಪಿಕಾ ಪಡುಕೋಣೆಗೆ ಈ ಹಿಂದೆ ಶಾರುಖ್ ಖಾನ್ (Shah Rukh Khan) ಮುತ್ತಿಟ್ಟು  (Kiss)ಸಖತ್ ಸುದ್ದಿಯಾಗಿದ್ದರು. ಇದೀಗ ಉಲ್ಟಾ ಆಗಿದೆ. ಸ್ವತಃ ದೀಪಿಕಾ ಪಡುಕೋಣೆ ಅವರೇ ಶಾರುಖ್ ಖಾನ್ ಗೆ ಕಿಸ್ ಮಾಡಿ ವೈರಲ್ ಆಗಿದ್ದಾರೆ. ಮುತ್ತಿಡುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಹಂಚಿಕೆಯಾಗಿದ್ದು, ದೀಪಿಕಾಗೆ ಹಲವರು ಗಂಡನನ್ನು ನೆನಪಿಸಿದ್ದಾರೆ.

    ಶಾರುಖ್ ಖಾನ್ ಜೊತೆ ಪಠಾಣ್, ಜವಾನ್ ಸೇರಿದಂತೆ ಒಂದರ ಮೇಲೊಂದು ಚಿತ್ರಗಳನ್ನು ಮಾಡುತ್ತಿದ್ದಾರೆ ದೀಪಿಕಾ ಪಡುಕೋಣೆ. ಅದರಲ್ಲೂ ಪಠಾಣ್ ಸಿನಿಮಾದ ಕೇಸರಿ ಹಾಡಿಗಾಗಿ ಈ ಜೋಡಿ ವಿವಾದಕ್ಕೆ ಕಾರಣವಾಗಿತ್ತು. ಕೇಸರಿ ಬಣ್ಣದ ಬಿಕಿನಿ ಹಾಕಿದ್ದಾರೆ ಎನ್ನುವ ಕಾರಣಕ್ಕಾಗಿ ದೀಪಿಕಾ ಮೇಲೆ ಹಿಂದೂಪರ ಹೋರಾಟಗಾರರು ಮುಗಿಬಿದ್ದಿದ್ದರು. ಇದೀಗ ಮುತ್ತಿನ ಫೋಟೋ ಇಟ್ಟುಕೊಂಡು ಮತ್ತೊಮ್ಮೆ ಟ್ರೋಲ್ ಮಾಡಲಾಗುತ್ತಿದೆ.ಇದನ್ನೂ ಓದಿ:ಮಲ್ಲಿಕಾ ಸಿಂಗ್ ಪಾತ್ರ ಪರಿಚಯಿಸಿದ ನಿರ್ದೇಶಕ ಸಿಂಪಲ್ ಸುನಿ

    ಶಾರುಖ್ ಖಾನ್ ನಟನೆಯ ‘ಜವಾನ್’ ಚಿತ್ರಕ್ಕೆ ನಟಿ ದೀಪಿಕಾ ಪಡುಕೋಣೆ (Deepika Padukone) ಬರೋಬ್ಬರಿ 15 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗಿತ್ತು. ಅತಿಥಿ ಪಾತ್ರಕ್ಕೆ ಅಷ್ಟೊಂದು ಹಣ ಕೊಟ್ಟಿದ್ದಾರಾ ಎಂದು ಅಚ್ಚರಿಯನ್ನೂ ಹಲವರು ವ್ಯಕ್ತ ಪಡಿಸಿದ್ದರು. ಆ ಪ್ರಮಾಣದಲ್ಲಿ ಸಂಭಾವನೆ (Remuneration) ಪಡೆದ ವಿಚಾರ ವೈರಲ್ ಕೂಡ ಆಗಿತ್ತು. ಈ ವಿಷಯ ದೀಪಿಕಾ ಪಡುಕೋಣೆಗೂ ತಲುಪಿದೆ.

     

    ಜವಾನ್ ಸಿನಿಮಾಗಾಗಿ ದೀಪಿಕಾ ಪಡುಕೋಣೆ 15 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆಯೇ ದೀಪಿಕಾ ಆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಜವಾನ್ ಚಿತ್ರಕ್ಕಾಗಿ ತಾವು ಒಂದು ಪೈಸೆಯನ್ನೂ ಸಂಭಾವನೆ ಪಡೆದಿಲ್ಲ ಎಂದು ಹೇಳಿಕೊಂಡಿದ್ದಾರೆ. ಶಾರುಖ್ ಖಾನ್ ಅವರಿಗಾಗಿ ನಾನು ಉಚಿತವಾಗಿ ನಟಿಸಿದ್ದೇನೆ ಎಂದಿದ್ದಾರೆ. ಈ ಹಿಂದೆಯೂ ತಾವು ಹಲವು ಸಿನಿಮಾಗಳಲ್ಲಿ ಈ ರೀತಿ ಉಚಿತವಾಗಿ ನಟಿಸಿದ್ದನ್ನು ಸ್ಮರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಜವಾನ್’ ಚಿತ್ರಕ್ಕೆ 15 ಕೋಟಿ ಅಲ್ಲ,  1 ರೂಪಾಯಿನೂ ಪಡೆದಿಲ್ಲ : ದೀಪಿಕಾ ಪಡುಕೋಣೆ

    ‘ಜವಾನ್’ ಚಿತ್ರಕ್ಕೆ 15 ಕೋಟಿ ಅಲ್ಲ, 1 ರೂಪಾಯಿನೂ ಪಡೆದಿಲ್ಲ : ದೀಪಿಕಾ ಪಡುಕೋಣೆ

    ಶಾರುಖ್ ಖಾನ್ ನಟನೆಯ ‘ಜವಾನ್’ ಚಿತ್ರಕ್ಕೆ ನಟಿ ದೀಪಿಕಾ ಪಡುಕೋಣೆ (Deepika Padukone) ಬರೋಬ್ಬರಿ 15 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗಿತ್ತು. ಅತಿಥಿ ಪಾತ್ರಕ್ಕೆ ಅಷ್ಟೊಂದು ಹಣ ಕೊಟ್ಟಿದ್ದಾರಾ ಎಂದು ಅಚ್ಚರಿಯನ್ನೂ ಹಲವರು ವ್ಯಕ್ತ ಪಡಿಸಿದ್ದರು. ಆ ಪ್ರಮಾಣದಲ್ಲಿ ಸಂಭಾವನೆ (Remuneration) ಪಡೆದ ವಿಚಾರ ವೈರಲ್ ಕೂಡ ಆಗಿತ್ತು. ಈ ವಿಷಯ ದೀಪಿಕಾ ಪಡುಕೋಣೆಗೂ ತಲುಪಿದೆ.

    ಜವಾನ್ ಸಿನಿಮಾಗಾಗಿ ದೀಪಿಕಾ ಪಡುಕೋಣೆ 15 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆಯೇ ದೀಪಿಕಾ ಆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಜವಾನ್ ಚಿತ್ರಕ್ಕಾಗಿ ತಾವು ಒಂದು ಪೈಸೆಯನ್ನೂ ಸಂಭಾವನೆ ಪಡೆದಿಲ್ಲ ಎಂದು ಹೇಳಿಕೊಂಡಿದ್ದಾರೆ. ಶಾರುಖ್ ಖಾನ್ ಅವರಿಗಾಗಿ ನಾನು ಉಚಿತವಾಗಿ ನಟಿಸಿದ್ದೇನೆ ಎಂದಿದ್ದಾರೆ. ಈ ಹಿಂದೆಯೂ ತಾವು ಹಲವು ಸಿನಿಮಾಗಳಲ್ಲಿ ಈ ರೀತಿ ಉಚಿತವಾಗಿ ನಟಿಸಿದ್ದನ್ನು ಸ್ಮರಿಸಿದ್ದಾರೆ.

    ಒಂದು ಕಡೆ ಜವಾನ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಭಾರೀ ಕಮಾಲ್ ಮಾಡುತ್ತಿದ್ದರೆ, ಮತ್ತೊಂದು ಕಡೆ ಈ ಚಿತ್ರಕ್ಕೆ ಪೈರಸಿ (Piracy) ಕಾಟ ಶುರುವಾಗಿದೆ. ಬಿಡುಗಡೆಯಾದ ಕೆಲವೇ ದಿನಗಳಲ್ಲೇ ಥಿಯೇಟರ್ ನಲ್ಲಿ ಶೂಟ್ ಮಾಡಲಾದ ಜವಾನ್ ಸಿನಿಮಾವನ್ನು ದುರುಳರು ರಿಲೀಸ್ ಮಾಡಿದ್ದು, ಅದು ಸೋಷಿಯಲ್ ಮೀಡಿಯಾದಲ್ಲೂ ಶೇರ್ ಆಗಿದೆ. ಈ ಲಿಂಕ್ ಅನ್ನು ಹಂಚಿಕೊಳ್ಳುವವರ ವಿರುದ್ಧ ಸಮರಕ್ಕೆ ಮುಂದಾಗಿದ್ದಾರೆ ಶಾರುಖ್ ಖಾನ್.

    ಸ್ವತಃ ಶಾರುಖ್ ಖಾನ್ (Shah Rukh Khan) ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಇವರ ಪತ್ನಿ ಗೌರಿ ಖಾನ್ ಇದರ ನಿರ್ಮಾಪಕರು. ಹಾಗಾಗಿ ಪೈರಸಿ ಮಾಡುವವರ ವಿರುದ‍್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಈ ಕುರಿತಾಗಿ ಈಗಾಗಲೇ ಅವರು ಮುಂಬೈನ ಸಾಂತಾಕ್ರೂಜ್ ವೆಸ್ಟ್ ಪೊಲೀಸ್ ಠಾಣೆಗೆ ದೂರು (Police Complaint) ನೀಡಿದ್ದಾರೆ. ಜೊತೆಗೆ ಪೈರಸಿ ಪತ್ತೆ ಹಚ್ಚುವಂತಹ ಏಜೆನ್ಸಿಗಳನ್ನೂ ಅವರು ನೇಮಿಸಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭೀಮಾ ಕೋರೇಗಾಂವ ಚಿತ್ರದಲ್ಲಿ ದೀಪಿಕಾ ಪಡುಕೋಣೆ: ನಿರ್ದೇಶಕರು ಹೇಳಿದ್ದೇನು?

    ಭೀಮಾ ಕೋರೇಗಾಂವ ಚಿತ್ರದಲ್ಲಿ ದೀಪಿಕಾ ಪಡುಕೋಣೆ: ನಿರ್ದೇಶಕರು ಹೇಳಿದ್ದೇನು?

    ತ್ತೀಚೆಗಷ್ಟೆ ‘ಸಂಜು ವೆಡ್ಸ್ ಗೀತಾ-2’ ಚಿತ್ರಕ್ಕೆ ಚಾಲನೆ ನೀಡಿದ್ದ ನಿರ್ದೇಶಕ ನಾಗಶೇಖರ್ (Nagasekhar),  ಅದರ ಬೆನ್ನಲ್ಲೇ ಮತ್ತೊಂದು  ಬಿಗ್ ಪ್ರಾಜೆಕ್ಟ್   ಚಿತ್ರಕ್ಕೆ ಕೈ  ಹಾಕಿದ್ದಾರೆ. ರೆವಲ್ಯೂಷನರಿ ಸಬ್ಜೆಕ್ಟ್ ಇಟ್ಟುಕೊಂಡು ನೈಜ ಘಟನೆಯನ್ನು ತೆರೆಯ ಮೇಲೆ ಹೇಳಹೊರಟಿದ್ದಾರೆ. ಅದಕ್ಕೆ ಕೊಟ್ಟಿರುವ ಹೆಸರು ಭೀಮಾ ಕೋರೇಗಾಂವ (Bhima Koregaon). ನಾಗಶೇಖರ್ ಮೂವೀಸ್ ಹಾಗೂ ಪವಿತ್ರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿ ಛಲವಾದಿ ಕುಮಾರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬಹು ಸೂಕ್ಷ್ಮ ವಿಚಾರ ಇಟ್ಟುಕೊಂಡು  ಮಾಡುತ್ತಿರುವ ಚಲನಚಿತ್ರ ಇದಾಗಿದ್ದು,  ಬೆಂಗಳೂರಿನ ಅಶೋಕಾ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತ್ರದ ಶೀರ್ಷಿಕೆಯನ್ನು  ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿಗಳು  ಬಿಡುಗಡೆ ಮಾಡಿದರು.

    ನಿರ್ಮಾಪಕ ಛಲವಾದಿ ಕುಮಾರ್ ಮಾತನಾಡುತ್ತ ‘ಸಂಜು ವೆಡ್ಸ್ ಗೀತಾ’  ಚಿತ್ರದ ಬಗ್ಗೆ ಚರ್ಚೆ ನಡೆಸುವಾಗ ಈ ವಿಷಯ ಪ್ರಸ್ತಾಪಕ್ಕೆ ಬಂತು. ಇತಿಹಾಸದ ಪುಟಗಳಲ್ಲಿ ದಾಖಲಾಗಿರುವ ಈ ಘಟನೆಯನ್ನು ನಮ್ಮ ಜನರಿಗೆ ತಿಳಿಸಬೇಕು ಎಂದು ನಿರ್ಧರಿಸಿ ನಿರ್ಮಾಣಕ್ಕೆ ಮುಂದಾಗಿದ್ದೇನೆ ಎಂದರು. ನಂತರ ನಾಗಶೇಖರ್ ಮಾತನಾಡಿ ‘1818ರ ಜ.1 ರಂದು ನಡೆದ ರೆವಲ್ಯೂಷನರಿ ಸಬ್ಜೆಕ್ಟ್. ಶೋಷಿತರ  ಬದುಕಿಗೆ ಬೆಳಕು ಹಚ್ಚುವ ಕೆಲಸಕ್ಕೆ ದೀಪ ಹಚ್ಚುವ ಮೂಲಕ ಟೈಟಲ್ ಲಾಂಚ್ ಮಾಡುತ್ತಿದ್ದೇವೆ. ಇದು ಬಹಳ ದೊಡ್ಡ ವಿಚಾರವಾಗಿದೆ ಎಂದರು.

    ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡುತ್ತಾ, ‘ಪೂನಾ ನದಿಯ ದಡದಲ್ಲಿ ಡಿ.31ರಿಂದ ಜ.1ರವರೆಗೆ ಸ್ವಾಭಿಮಾನಿ ಬದುಕಿಗೋಸ್ಕರ. ನಡೆದ ಘನಘೋರ ಯುದ್ಧ . 2ನೇ ಬಾಜೀರಾಯನ ಘೋರ ಕೃತ್ಯಗಳನ್ನು ವಿರೋಧಿಸಿ ಮೆಹರ್ ಸೈನಿಕರು ನಡೆಸಿದ ಯುದ್ದ, ಭಾರತದ ನೆಲದಲ್ಲಿ ಬಾಜೀರಾಯ ಅಸ್ಪೃಶ್ಯರನ್ನು ಹೇಗೆ ನಡೆಸಿಕೊಂಡಿದ್ದ, ಯಾವ ರೀತಿ ನೋಡಿಕೊಂಡಿದ್ದ, ಯಾವ ಉದ್ದೇಶಕ್ಕೆ ಈ ಯುದ್ಧ ನಡೆಯಿತು ಅನ್ನುವುದನ್ನು ಈ ಸಿನಿಮಾದಲ್ಲಿ ದಾಖಲು ಮಾಡಲಾಗುತ್ತೆ’ ಎಂದರು.

    ಮುಖ್ಯ ಅತಿಥಿಯಾಗಿದ್ದ ಚಿಂತಕ ಗೋಪಾಲ್ ಮಾತನಾಡುತ್ತಾ, ‘ಅಸಮಾನತೆಯ ವಿರುದ್ಧ ನಡೆದ ಹೋರಾಟವಿದು. 500 ಜನ ಸೈನಿಕರು, 30  ಸಾವಿರ ಪೇಶ್ವೆ ಬಾಜೀರಾಯನ ಸೈನಿಕರನ್ನು 12 ಗಂಟೆಗಳಲ್ಲಿ ಧ್ವಂಸ ಮಾಡಿದ ಘಟನೆ. ಮೆಹರ್ಸ್ ಅಂದರೆ ಗುಲಾಮರು. ಬಾಜೀರಾಯ  ಅಸ್ಪೃಶ್ಯರ ವಿರುದ್ಧ  ಕಠಿಣ  ಕಾನೂನುಗಳನ್ನು ಜಾರಿಗೆ ತಂದಿದ್ದ. ಇದನ್ನು ವಿರೋಧಿಸಿ ನಡೆದ ಯುದ್ದವಿದು. ಹಾಲಿವುಡ್ ಶೈಲಿಯ ಸಿನಿಮಾ ಆಗಲಿದೆ‌’ ಎಂದರು. ಉಳಿದಂತೆ ನೆಹರು ಓಲೇಕಾರ್, ಚಕ್ರವರ್ತಿ ಚಂದ್ರಚೂಡ್, ಈ ಘಟನೆಯ ಬಗ್ಗೆ ಒಂದಷ್ಟು ಮಾಹಿತಿ‌ ನೀಡಿದರು.

     

    ಕೊನೆಯಲ್ಲಿ ಮಾತು ಮುಂದುವರೆಸಿದ ನಾಗಶೇಖರ್, ‘ಈ ಸಿನಿಮಾ ಮಾಡುವಂತೆ ನನಗೆ ಪ್ರೇರೇಪಿಸಿದ್ದು ರೈಟರ್ ಚಂದ್ರಚೂಡ್ (Chakravarty Chandrachud),  ಜಾಸ್ತಿ ಬಂಡವಾಳ ಕೇಳುತ್ತೆ. ಚಿತ್ರದ ಬಜೆಟ್ 120 ಕೋಟಿ ಆಗಬಹುದು. ನಿರ್ಮಾಪಕ ಕುಮಾರ್ ಎಷ್ಟೇ ಆದರೂ ಖರ್ಚು ಮಾಡಲು ರೆಡಿ ಇದ್ದಾರೆ. ಕನ್ನಡದ ಸೂಪರ್ ಸ್ಟಾರ್ ಒಬ್ಬರು ಚಿತ್ರದಲ್ಲಿ ಅಭಿನಯಿಸಲು ಒಪ್ಪಿದ್ದಾರೆ. ನಟಿ ದೀಪಿಕಾ ಪಡುಕೋಣೆ (Deepika Padukone)ಅವರನ್ನು ನಾಯಕಿ ಪಾತ್ರಕ್ಕೆ ಕರೆತರುವ ಉದ್ದೇಶವಿದೆ. 54 ಕೋಟಿ ಶೋಷಿತರಿಗೆ ಬೆಳಕಾಗುವ ಕಥಾನಕವಿದು. ಚಂದ್ರಚೂಡ್ ನೇತೃತ್ವದಲ್ಲಿ ಬರಹಗಾರರ ತಂಡ ಕಟ್ಟಿ ಭಾಗ-1,  ಭಾಗ-2 ಮಾಡುವ ಯೋಚನೆಯಿದೆ. ಪ್ರೀ ಪ್ರೊಡಕ್ಷನ್ ಗೆ  365 ದಿನ ತೆಗೆದುಕೊಂಡಿದ್ದೇನೆ. ಈ ಕಥೆಯನ್ನು ಕಣ್ಣಿಗೆ ಕಟ್ಟುವ ಹಾಗೆ ಮನಸಿಗೆ ಮುಟ್ಟುವ ಹಾಗೆ ಕಟ್ಟಿಕೊಡುವ ಜವಾಬ್ದಾರಿ ನನ್ನ ಮೇಲಿದೆ’ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Singham 3: ಅಜಯ್ ದೇವಗನ್ ಸಹೋದರಿಯಾಗಿ ನಟಿಸಲಿದ್ದಾರೆ ದೀಪಿಕಾ ಪಡುಕೋಣೆ

    Singham 3: ಅಜಯ್ ದೇವಗನ್ ಸಹೋದರಿಯಾಗಿ ನಟಿಸಲಿದ್ದಾರೆ ದೀಪಿಕಾ ಪಡುಕೋಣೆ

    ‘ಪಠಾಣ್’ (Pathaan) ಬ್ಯೂಟಿ ದೀಪಿಕಾ ಪಡುಕೋಣೆ (Deepika Padukone) ಇದೀಗ ಸಿನಿಮಾ ಬಗ್ಗೆ ಸಿಹಿಸುದ್ದಿ ಸಿಕ್ಕಿದೆ. ಸಿಂಗಮ್ 3ನಲ್ಲಿ (Singham 3) ಅಜಯ್ ದೇವಗನ್‌ಗೆ (Ajay Devgn) ಸಹೋದರಿಯಾಗಿ ನಟಿಸಲು ದೀಪಿಕಾ ಸಜ್ಜಾಗಿದ್ದಾರೆ. ಖಡಕ್ ಪೊಲೀಸ್ ಅಧಿಕಾರಿಯಾಗಿ ನಟಿ ಕಾಣಿಸಿಕೊಳ್ತಿದ್ದಾರೆ.

    ಶಾರುಖ್ ಜೊತೆ ‘ಪಠಾಣ್’ (Pathaan) ಸಿನಿಮಾದಲ್ಲಿ ನಟಿಸಿ ಗೆದ್ದು ಬೀಗಿದ ಮೇಲೆ ಕನ್ನಡದ ಬ್ಯೂಟಿ ದೀಪಿಕಾಗೆ ಸಾಲು ಸಾಲು ಸಿನಿಮಾ ಅವಕಾಶಗಳು ಬರುತ್ತಿದೆ. ನಂಬರ್ ಒನ್ ನಾಯಕಿಯಾಗಿ ಕರಾವಳಿ ಕ್ವೀನ್ ಮಿಂಚ್ತಿದ್ದಾರೆ. ಹೀಗಿರುವಾಗ ನಿರ್ಮಾಪಕ ರೋಹಿತ್ ಶೆಟ್ಟಿ ನಿರ್ಮಾಣದ ‘ಸಿಂಗಮ್ 3’ನಲ್ಲಿ ನಟಿಸಲು ದೀಪಿಕಾ ಪಡುಕೋಣೆಗೆ ಬುಲಾವ್ ಬಂದಿದೆ.

    ಸಿಂಗಮ್ 3ನಲ್ಲಿ ದೀಪಿಕಾ ಲೇಡಿ ಸಿಂಗಮ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಕಥೆ ಕೇಳಿ ಥ್ರಿಲ್ ಆಗಿ, ಅಜಯ್ ದೇವಗನ್‌ಗೆ ಸಹೋದರಿಯಾಗಿ ಜೀವ ತುಂಬಲು ಓಕೆ ಎಂದಿದ್ದಾರೆ. 50 ದಿನಗಳ ಕಾಲ್‌ಶೀಟ್ ಕೂಡ ನೀಡಿದ್ದಾರೆ. ದೀಪಿಕಾ- ಅಜಯ್ ಇಬ್ಬರ ಪಾತ್ರಕ್ಕೂ ಬಹಳಷ್ಟು ಪ್ರಾಮುಖ್ಯತೆಯಿದ್ದು, ಭಿನ್ನ ಕಥೆಯನ್ನ ತೆರೆಯ ಮೇಲೆ ಹೇಳೋದಕ್ಕೆ ಚಿತ್ರತಂಡ ಸಜ್ಜಾಗಿದೆ. ಸದ್ಯದಲ್ಲೇ ಈ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ.

    ಸದ್ಯ ಶಾರುಖ್ ಖಾನ್ (Sharukh Khan) ಜೊತೆ ಜವಾನ್, ಹೃತಿಕ್ ರೋಷನ್ ಜೊತೆ ಫೈಟರ್, ಪ್ರಭಾಸ್ ಜೊತೆ ಹೊಸ ಸಿನಿಮಾ ಸೇರಿದಂತೆ ಹಲವು ಚಿತ್ರಗಳು ದೀಪಿಕಾ ಪಡುಕೋಣೆ ಕೈಯಲ್ಲಿವೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಲಿನ ಶಸ್ತ್ರಚಿಕಿತ್ಸೆಯ ನಂತರ ಮತ್ತೆ ಶೂಟಿಂಗ್ ಮರಳಿದ ಪ್ರಭಾಸ್

    ಕಾಲಿನ ಶಸ್ತ್ರಚಿಕಿತ್ಸೆಯ ನಂತರ ಮತ್ತೆ ಶೂಟಿಂಗ್ ಮರಳಿದ ಪ್ರಭಾಸ್

    ಬಾಹುಬಲಿ ಪ್ರಭಾಸ್ (Prabhas) ಅವರ ನಟನೆಯ ‘ಆದಿಪುರುಷ್’ (Adipurush) ರಿಲೀಸ್ ವೇಳೆಯೇ ಅಮೆರಿಕಾಗೆ ಹಾರಿದ್ದರು. ಕಾಲಿನ ಶಸ್ತ್ರಚಿಕಿತ್ಸೆಗಾಗಿ 50 ದಿನಗಳ ಕಾಲ ಚಿಕಿತ್ಸೆ ಪಡೆದು ಈಗ ಭಾರತಕ್ಕೆ ಬಂದಿದ್ದಾರೆ. ಹಾಗಾಗಿ ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 AD’ ಸಿನಿಮಾದ ಶೂಟಿಂಗ್‌ಗೆ ಪ್ರಭಾಸ್ ಭಾಗಿಯಾಗಿದ್ದಾರೆ.

    ಪಠಾಣ್ ಬೆಡಗಿ ದೀಪಿಕಾ ಪಡುಕೋಣೆ (Deepika Padukone) ಜೊತೆ ‘ಪ್ರಾಜೆಕ್ಟ್ ಕೆ’ ಸಿನಿಮಾಗೆ ಪ್ರಭಾಸ್ ಕೈಜೋಡಿಸಿದ್ದಾರೆ. ‘ಪ್ರಾಜೆಕ್ಟ್ ಕೆ’ ಹೆಸರಿನಲ್ಲಿ ಲಾಂಚ್ ಆಗಿದ್ದ ಈ ಚಿತ್ರ ಈಗ ‘ಕಲ್ಕಿ 2898 AD’ ಎಂದು ಟೈಟಲ್ ಬದಲಾಗಿಸಲಾಗಿದೆ. ಪ್ರಭಾಸ್ ಅನಾರೋಗ್ಯದ ನಿಮಿತ್ತ ಶೂಟಿಂಗ್‌ಗೆ ಬ್ರೇಕ್ ಬಿದ್ದಿತ್ತು. ಈಗ ಹೈದರಾಬಾದ್‌ನ ರಾಮೋಜಿ ಫಿಲ್ಮ್ಂ ಸಿಟಿಯಲ್ಲಿ ಶೂಟಿಂಗ್ ಶುರುವಾಗಿದೆ. ಆಗಸ್ಟ್ 28ರವರೆಗೆ ಶೂಟಿಂಗ್ ನಡೆಯಲಿದೆ.

    ಕಲ್ಕಿಯಾಗಿ ಪ್ರಭಾಸ್ ಮಿಂಚಿದ್ರೆ, ದೀಪಿಕಾ ಪಡುಕೋಣೆ (Deepika Padukone) ನಾಯಕಿಯಾಗಿ ನಟಿಸಿದ್ದಾರೆ. ಕಮಲ್ ಹಾಸನ್ (Kamal Haasan) ವಿಲನ್ ಆಗಿ ಅಬ್ಬರಿಸಿದ್ದಾರೆ. ಬಿಗ್ ಬಿ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ:ಸುಂದರ ಸಂಸಾರವನ್ನು ದೇವರು ಹಾಳು ಮಾಡಿಬಿಟ್ಟ: ಗಿರಿಜಾ ಲೋಕೇಶ್

    ಪ್ರಭಾಸ್ ಕಲ್ಕಿಯ ಕಥೆ ಭಿನ್ನವಾಗಿ ಇರಲಿದೆ ಎನ್ನಲಾಗುತ್ತಿದೆ. ಕಲ್ಕಿ ಜನಿಸಿದ ಬಳಿಕ ಕಲಿಯುಗ ಅಂತ್ಯವಾಗಿ ಸತ್ಯಯುಗ ಆರಂಭ ಆಗುತ್ತದೆ ಎನ್ನುವ ನಂಬಿಕೆ ಅನೇಕರದ್ದು. ಹೀಗಾಗಿ ಸಿನಿಮಾದ ಕಥೆ ಕಲಿಯುಗದ ಅಂತ್ಯವನ್ನು ತೋರಿಸುವ ರೀತಿಯಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ. ಚಿತ್ರದ ಮೊದಲ ತುಣುಕು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನುಷ್ಕಾ ಅಲ್ಲ, ದೀಪಿಕಾ ಪಡುಕೋಣೆ ಅಂದರೆ ಇಷ್ಟ ಅಂತಾ ವರಸೆ ಬದಲಿಸಿದ ಪ್ರಭಾಸ್

    ಅನುಷ್ಕಾ ಅಲ್ಲ, ದೀಪಿಕಾ ಪಡುಕೋಣೆ ಅಂದರೆ ಇಷ್ಟ ಅಂತಾ ವರಸೆ ಬದಲಿಸಿದ ಪ್ರಭಾಸ್

    ‘ಬಾಹುಬಲಿ’ (Bahubali) ಪ್ರಭಾಸ್ (Prabhas) ಅವರು ಪಠಾಣ್ ಬ್ಯೂಟಿ ದೀಪಿಕಾ ಪಡುಕೋಣೆ (Deepika Padukone) ಬಗ್ಗೆ ಅಚ್ಚರಿ ಹೇಳಿಕೆಯೊಂದನ್ನ ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ನಟ ಪ್ರಭಾಸ್ ಅವರು ಅನುಷ್ಕಾ ಅಲ್ಲ, ದೀಪಿಕಾ ಪಡುಕೋಣೆ ಅಂದರೆ ಇಷ್ಟ ಅಂತಾ ವರಸೆ ಬದಲಿಸಿದ್ದಾರೆ. ಸಲಾರ್ ನಟನ ಮಾತು ಈಗ ಭಾರೀ ಸದ್ದು ಮಾಡ್ತಿದೆ.

    ‘ಕಲ್ಕಿ 2898 AD’ ಸಿನಿಮಾದಲ್ಲಿ ಪ್ರಭಾಸ್-ದೀಪಿಕಾ ಜೋಡಿಯಾಗಿ ನಟಿಸಿದ್ದಾರೆ. ನಾಗ್ ಅಶ್ವೀನ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಬಿಗ್ ಬಿ, ಕಮಲ್ ಹಾಸನ್ ಸೇರಿದಂತೆ ಹಲವು ಸ್ಟಾರ್ ಕಲಾವಿದರು ಈ ಚಿತ್ರದಲ್ಲಿದೆ. ಚಿತ್ರ ಶುರುವಾದ ದಿನದಿಂದ ಒಂದಲ್ಲಾ ಒಂದು ವಿಚಾರಕ್ಕೆ ಸದ್ದು ಮಾಡುತ್ತಲೇ ಇದೆ. ಇದನ್ನೂ ಓದಿ:‘ಸಂಜೆ ಮೇಲೆ ಸುಮ್ನೆ ಹಂಗೆ’ ಅಂತಿದ್ದಾರೆ ನೀನಾಸಂ ಸತೀಶ್: ಮ್ಯಾಟ್ನಿ ಹಾಡು ವೈರಲ್

    ಇದೀಗ ಸಮಾರಂಭವೊಂದರಲ್ಲಿ ದೀಪಿಕಾ ಪಡುಕೋಣೆ ಬಗ್ಗೆ ಮನಬಿಚ್ಚಿ ಪ್ರಭಾಸ್ ಮಾತನಾಡಿದ್ದಾರೆ. ದೀಪಿಕಾ ಸೆಟ್‌ಗಳಲ್ಲಿ ತುಂಬಾ ಸಕ್ರಿಯರಾಗಿರುತ್ತಾರೆ. ಅವರು ಸೆಟ್‌ಗೆ ಬಂದಾಗ ಎಲ್ಲರೂ ಸಂತೋಷವಾಗಿರುತ್ತಾರೆ. ಹಾಗಾಗಿ ನಟಿ ದೀಪಿಕಾ ಎಂದರೆ ನನಗೆ ತುಂಬಾ ಇಷ್ಟ ನಾನು ಯಾವಾಗಲೂ ಅವಳನ್ನ ಇಷ್ಟ ಪಡ್ತೀನಿ ಅಂತ ಪ್ರಭಾಸ್ ಹೇಳಿದರು. ದೀಪಿಕಾ ಬಗ್ಗೆ ಆಡಿದ ಪ್ರಭಾಸ್ ಮಾತುಗಳು ವೈರಲ್ ಆಗುತ್ತಿವೆ. ಪ್ರಭಾಸ್ ಅವರ ಹೆಸರು ಅನುಷ್ಕಾ ಶೆಟ್ಟಿ(Anushka Shetty), ಕೃತಿ ಸನೋನ್ (Kriti Sanon) ಜೊತೆ ತಳುಕು ಹಾಕಿಕೊಂಡಿತ್ತು. ಹಾಗಾಗಿ ದೀಪಿಕಾ ಬಗ್ಗೆ ಪ್ರಭಾಸ್ ಹೇಳಿದ ಮಾತು ನೆಟ್ಟಿಗರಿಗೆ ಅಚ್ಚರಿ ಮೂಡಿಸಿದೆ.

    ನಿರ್ದೇಶಕ ನಾಗ್ ಅಶ್ವಿನ್ ‘ಕಲ್ಕಿ 2898 AD’ ಸಿನಿಮಾವನ್ನು ವೈಜಯಂತಿ ಮೂವೀಸ್ ಬ್ಯಾನರ್ ಅಡಿಯಲ್ಲಿ ಅಶ್ವನಿ ದತ್ ಸುಮಾರು 600 ಕೋಟಿ ಬಜೆಟ್‌ನಲ್ಲಿ ನಿರ್ಮಿಸುತ್ತಿದ್ದಾರೆ. ಈ ಸಿನಿಮಾದಿಂದ ಬಿಡುಗಡೆಯಾಗಿರುವ ಗ್ಲಿಂಪ್ಸಸ್ ವಿಡಿಯೋ ಈಗಾಗಲೇ ದಾಖಲೆಗಳನ್ನು ಸೃಷ್ಟಿಸಿದೆ.

    ಸಾಲು ಸಾಲು ಸಿನಿಮಾ ಸೋಲಿನಿಂದ ಕೆಂಗೆಟ್ಟಿರುವ ಪ್ರಭಾಸ್‌ಗೆ ಈಗ ಗೆಲುವಿನ ರುಚಿ ಬೇಕಾಗಿದೆ. ಪ್ರಭಾಸ್ ಜೊತೆ ಪಠಾಣ್ ಸೂಪರ್ ಸ್ಟಾರ್ ದೀಪಿಕಾ ಇರೋದ್ರಿಂದ ಚಿತ್ರದ ನಿರೀಕ್ಷೆ ಹೆಚ್ಚಿದೆ. ಇಬ್ಬರ ಕೆಮಿಸ್ಟ್ರಿ ಸಿನಿಮಾದಲ್ಲಿ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಪ್ಪು ಬಿಳಿ ಬಣ್ಣದ ಬಿಕಿನಿ ಧರಿಸಿ ವಿಚಿತ್ರ ಕ್ಯಾಪ್ಷನ್ ಕೊಟ್ಟ ದೀಪಿಕಾ

    ಕಪ್ಪು ಬಿಳಿ ಬಣ್ಣದ ಬಿಕಿನಿ ಧರಿಸಿ ವಿಚಿತ್ರ ಕ್ಯಾಪ್ಷನ್ ಕೊಟ್ಟ ದೀಪಿಕಾ

    ಬಾಲಿವುಡ್ (Bollywood) ನಟಿ, ಕನ್ನಡತಿ ದೀಪಿಕಾ ಪಡುಕೋಣೆ (Deepika Padukone) ಕಪ್ಪು ಬಿಳಿ ಬಣ್ಣದ ಬಿಕಿನಿ ಧರಿಸಿದ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಆ ಫೋಟೋದ ಜೊತೆಗೆ ವಿಚಿತ್ರವಾಗಿರುವಂತಹ ಕ್ಯಾಪ್ಷನ್ ಬೇರೆ ಕೊಟ್ಟಿದ್ದಾರೆ. ಆ ಫೋಟೋ ಮತ್ತು ಬಿಕಿನಿ (Bikini) ಕಂಡ ನೆಟ್ಟಿಗರು ದೀಪಿಕಾ ಪತಿ ರಣವೀರ್ ಸಿಂಗ್ ನ ಕಾಲೆಳೆದಿದ್ದಾರೆ.

    ಬಿಕಿನಿ ಫೋಟೋದ ಜೊತೆಗೆ ‘ಒಂದಾನೊಂದು ಕಾಲದಲ್ಲಿ, ತುಂಬಾ ಹಿಂದೇನೂ ಅಲ್ಲ’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋ ಮತ್ತು ಬರಹ ಕಂಡು ಸ್ವತಃ ರಣವೀರ್ ಸಿಂಗ್ (Ranveer Singh) ಕಾಮೆಂಟ್ ಮಾಡಿದ್ದಾರೆ. ಸಣ್ಣದೊಂದು ಎಚ್ಚರಿಕೆ ಕೊಡಬಹುದಿತ್ತು ಎಂದು ಅವರು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:‘ಜೈಲರ್’ಗೆ ಸೆನ್ಸಾರ್ ಕಟ್, ರಜನಿ-ಶಿವಣ್ಣ ಸೀನ್‌ಗೆ ಬಿತ್ತಾ ಕತ್ತರಿ?

    ದೀಪಿಕಾ ಪಡುಕೋಣೆ ಈ ಹಿಂದೆ ಶಾರುಖ್ ಖಾನ್ ನಟನೆಯ ಸಿನಿಮಾದಲ್ಲೂ ಕೇಸರಿ ಬಿಕಿನಿ ಧರಿಸಿದ್ದರು. ಆ ಸಿನಿಮಾದ ಹಾಡು ವಿವಾದಕ್ಕೆ ಕಾರಣವಾಗಿತ್ತು. ಬಿಕಿನಿ ಬಗ್ಗೆ ಕೆಟ್ಟದ್ದಾಗಿ ಕಾಮೆಂಟ್ ಕೂಡ ಮಾಡಲಾಯಿತ್ತು. ಆನಂತರ ಮತ್ತೆ ಇದೀಗ ಬಿಕಿನಿ ಧರಿಸಿದ ಫೋಟೋವನ್ನು ಶೇರ್ ಮಾಡಿದ್ದಾರೆ.

     

    ಬೆತ್ತಲೆಯ ಫೋಟೋಶೂಟ್ ಮಾಡಿಸಿಕೊಂಡು ಈ ಹಿಂದೆ ದೀಪಿಕಾ ಪತಿ ರಣವೀರ್ ಸಿಂಗ್  ಕೂಡ ವಿವಾದಕ್ಕೆ ಕಾರಣವಾಗಿದ್ದರು. ಅವರ ಮೇಲೆ ಕೇಸ್ ಕೂಡ ದಾಖಲಾಗಿತ್ತು. ಆ ಫೋಟೋಗಳ ಬಗ್ಗೆ ಪರ ವಿರೋಧದ ಮಾತು ಕೂಡ ಕೇಳಿ ಬಂದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಳಿ ಬಣ್ಣದ ಸೀರೆಯಲ್ಲಿ ಕಂಗೊಳಿಸಿದ ‘ಪಠಾಣ್’ ಬೆಡಗಿ

    ಬಿಳಿ ಬಣ್ಣದ ಸೀರೆಯಲ್ಲಿ ಕಂಗೊಳಿಸಿದ ‘ಪಠಾಣ್’ ಬೆಡಗಿ

    ‘ಪಠಾಣ್’ (Pathaan) ಸುಂದರಿ ದೀಪಿಕಾ ಪಡುಕೋಣೆ (Deepika Padukone) ಸದ್ಯ ಬಾಲಿವುಡ್‌ನ (Bollywood) ನಂಬರ್ ಒನ್ ನಾಯಕಿಯಾಗಿ ಮಿಂಚ್ತಿದ್ದಾರೆ. ‘ಪಠಾಣ್’ ಸೂಪರ್ ಸಕ್ಸಸ್ ನಂತರ ಮತ್ತೆ ಬಿಗ್ ಬಜೆಟ್ ಸಿನಿಮಾಗಳಲ್ಲಿ ಕಾಣಿಸಿಕೊಳ್ತಿದ್ದಾರೆ. ಈ ನಡುವೆ, ಫ್ಯಾಷನ್ ಶೋವೊಂದರಲ್ಲಿ ನಟಿ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ದೀಪು ನಯಾ ಫೋಟೋಸ್ ಸಾಮಾಜಿಕ ಜಾಲತಾಣದಲ್ಲಿ ಸಜ್ಜಾಗುತ್ತಿದೆ. ಇದನ್ನೂ ಓದಿ:ಸಿನಿಮಾಗೆ ಗುಡ್ ಬೈ, ರಾಜಕೀಯಕ್ಕೆ ಅಭಿಷೇಕ್ ಬಚ್ಚನ್ ಎಂಟ್ರಿ?

    ಬೆಂಗಳೂರಿನ ಬೆಡಗಿ ದೀಪಿಕಾ ಪಡುಕೋಣೆ ಮಾಡೆಲ್ ಆಗಿ ಗುರುತಿಸಿಕೊಂಡಿದ್ದರು. ಬಳಿಕ ಕನ್ನಡದ ‘ಐಶ್ವರ್ಯ’ (Aishwarya) ಸಿನಿಮಾ ಮೂಲಕ ಉಪ್ಪಿಗೆ ನಾಯಕಿಯಾಗಿ ಬಣ್ಣದ ಬದುಕಿಗೆ ಎಂಟ್ರಿ ಕೊಟ್ಟರು. ನಂತರ ಶಾರುಖ್ ಖಾನ್ ನಟನೆಯ ‘ಓಂ ಶಾಂತಿ ಓಂ'(Om Shanti Om) ಸಿನಿಮಾದಲ್ಲಿ ಹೀರೋಯಿನ್ ಆಗಿ ಚಾನ್ಸ್ ಗಿಟ್ಟಿಸಿಕೊಂಡರು. ಅಲ್ಲಿಂದ ಶುರುವಾಯ್ತು ನೋಡಿ ದೀಪಿಕಾ ರೇಸ್, ಸಾಲು ಸಾಲು ಹಿಂದಿ ಸಿನಿಮಾಗಳಲ್ಲಿ ನಾಯಕಿಯಾಗುವ ಮೂಲಕ ಸಾಕಷ್ಟು ಹಿಟ್ ಸಿನಿಮಾಗಳನ್ನ ನೀಡಿದ್ದರು.

    ಕೊರೋನಾ ನಂತರ ಬಾಲಿವುಡ್‌ನಲ್ಲಿ ಹಿಂದಿ ಸಿನಿಮಾಗಳು ಸಕ್ಸಸ್ ಕಾಣದೇ ಇರುವ ಸಂದರ್ಭದಲ್ಲಿ ಶಾರುಖ್ ಖಾನ್ ಜೊತೆ ಪಠಾಣ್‌ಗೆ ಸಾಥ್ ನೀಡಿದ್ದರು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡ್ತು. ಈಗ ಕನ್ನಡದ ಬ್ಯೂಟಿ ಬಾಲಿವುಡ್ ರಂಗವನ್ನೇ ಆಳುತ್ತಿದ್ದಾರೆ. ರಣ್‌ವೀರ್ ಸಿಂಗ್ (Ranveer Singh) ಮುದ್ದಿನ ಮಡದಿಯಾಗಿ, ನಾಯಕಿಯಾಗಿ ಸೈ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ:ಸಿನಿಮಾಗೆ ಗುಡ್ ಬೈ, ರಾಜಕೀಯಕ್ಕೆ ಅಭಿಷೇಕ್ ಬಚ್ಚನ್ ಎಂಟ್ರಿ?

    ಈ ನಡುವೆ ಫ್ಯಾಷನ್ ಶೋವೊಂದರಲ್ಲಿ ದೀಪಿಕಾ ಪಡುಕೋಣೆ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ಬಿಳಿ ಬಣ್ಣದ ಡಿಸೈನರ್ ಸೀರೆಯುಟ್ಟು ಮಿರ ಮಿರ ಅಂತಾ ಬೆಂಗಳೂರಿನ ಬೆಡಗಿ ಮಿಂಚಿದ್ದಾರೆ. ಕ್ಯಾಮೆರಾ ಕಣ್ಣಿಗೆ ಮುದ್ದಾಗಿ ಪೋಸ್ ನೀಡಿದ್ದಾರೆ.

    ‘ಪಠಾಣ್’ ಸಕ್ಸಸ್ ನಂತರ ಪ್ರಭಾಸ್ ಜೊತೆ ಪ್ರಾಜೆಕ್ಟ್ ಕೆ, ಹೃತಿಕ್ ರೋಷನ್‌ಗೆ ಮೊದಲ ಬಾರಿ ಹೀರೋಯಿನ್ ಆಗಿ ‘ಫೈಟರ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಜವಾನ್ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ದೀಪಿಕಾ ನಟಿಸಿದ್ದಾರೆ. ಪಠಾಣ್ ಸಕ್ಸಸ್ ನಂತರ ದುಬಾರಿ ಸಂಭಾವನೆಯನ್ನೇ ಪಡೆದಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]