Tag: defence ministry

  • ಅಮೆರಿಕದ ಶಸ್ತ್ರಾಸ್ತ್ರ, ವಿಮಾನ ಖರೀದಿಸುವ ಯೋಜನೆ ಸ್ಥಗಿತಗೊಳಿಸಿಲ್ಲ: ಭಾರತದ ರಕ್ಷಣಾ ಸಚಿವಾಲಯ ಸ್ಪಷ್ಟನೆ

    ಅಮೆರಿಕದ ಶಸ್ತ್ರಾಸ್ತ್ರ, ವಿಮಾನ ಖರೀದಿಸುವ ಯೋಜನೆ ಸ್ಥಗಿತಗೊಳಿಸಿಲ್ಲ: ಭಾರತದ ರಕ್ಷಣಾ ಸಚಿವಾಲಯ ಸ್ಪಷ್ಟನೆ

    – ಸುಳ್ಳು ಸುದ್ದಿ ಹರಡದಂತೆ ಮನವಿ

    ನವದೆಹಲಿ: ಟ್ರಂಪ್‌ ಸುಂಕ (Tariff) ಸಮರಕ್ಕೆ ತಿರುಗೇಟು ನೀಡುವ ನಿಟ್ಟಿನಲ್ಲಿ ಅಮೆರಿಕದ ಶಸ್ತ್ರಾಸ್ತ್ರ, ವಿಮಾನ ಖರೀದಿಸುವ ಯೋಜನೆಯನ್ನು ಭಾರತ ಸ್ಥಗಿತಗೊಳಿಸಿದೆ ಎಂಬ ಸುದ್ದಿ ಸುಳ್ಳು ಎಂದು ರಕ್ಷಣಾ ಸಚಿವಾಲಯ (Defence Ministry) ಸ್ಪಷ್ಟಪಡಿಸಿದೆ.

    ಡೊನಾಲ್ಡ್ ಟ್ರಂಪ್ (Donald Trump) ಭಾರತೀಯ ಸರಕುಗಳ ಮೇಲೆ ಹೆಚ್ಚುವರಿಯಾಗಿ 25% ರಷ್ಟು ಸುಂಕ ವಿಧಿಸುವುದಾಗಿ ಘೋಷಿಸಿದ ನಂತರ ಭಾರತ ಅಮೆರಿಕದಿಂದ ರಕ್ಷಣಾ ಖರೀದಿಯನ್ನು ಸ್ಥಗಿತಗೊಳಿಸಿದೆ ಎಂಬ ಮಾಧ್ಯಮ ವರದಿಗಳನ್ನು ಸಚಿವಾಲಯ ನಿರಾಕರಿಸಿದೆ. ಇದನ್ನೂ ಓದಿ: ಟ್ರಂಪ್‌ ಸುಂಕ ಶಾಕ್‌ ಬೆನ್ನಲ್ಲೇ ಈ ವರ್ಷ ಭಾರತಕ್ಕೆ ಪುಟಿನ್‌ ಭೇಟಿ

    ಅಮೆರಿಕದ ಹೊಸ ಶಸ್ತ್ರಾಸ್ತ್ರಗಳು ಮತ್ತು ವಿಮಾನಗಳನ್ನು ಖರೀದಿಸುವ ಯೋಜನೆಯನ್ನು ಭಾರತ ಸ್ಥಗಿತಗೊಳಿಸಿದೆ ಎಂಬ ಸುದ್ದಿಗಳು ಹರಡಿದ್ದವು. ಈ ವರದಿಗಳೆಲ್ಲ ಸುಳ್ಳು. ಖರೀದಿಯು ಕಾರ್ಯವಿಧಾನಗಳ ಪ್ರಕಾರವೇ ಮುಂದುವರಿಯಲಿದೆ ಎಂದು ರಕ್ಷಣಾ ಸಚಿವಾಲಯದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

    ಕೆಲವು ಖರೀದಿಗಳ ಕುರಿತು ಘೋಷಣೆಗಾಗಿ ಮುಂಬರುವ ವಾರಗಳಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಅಮೆರಿಕಗೆ ಕಳುಹಿಸುವ ಭಾರತದ ಯೋಜನೆಗಳನ್ನು ಸಹ ರದ್ದುಗೊಳಿಸಲಾಗಿದೆ ಎಂದು ಕೂಡ ವರದಿಗಳು ಪ್ರಕಟವಾಗಿದ್ದವು. ಇದನ್ನೂ ಓದಿ: ಭಾರತಕ್ಕೆ ಮತ್ತೊಂದು ಶಾಕ್ – ಆಮದುಗಳ ಮೇಲೆ 50% ಸುಂಕ ವಿಧಿಸಿದ ಟ್ರಂಪ್

    ರಷ್ಯಾದಿಂದ ತೈಲ ಖರೀದಿಸಿದ್ದಕ್ಕಾಗಿ ಭಾರತದ ವಿರುದ್ಧ ಟ್ರಂಪ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಷ್ಯಾ ಜೊತೆಗಿನ ತೈಲ ಖರೀದಿಯನ್ನು ನಿಲ್ಲಿಸದಿದ್ದರೆ ಭಾರಿ ದಂಡ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ಅದರಂತೆ ಆ.1ರಿಂದಲೇ ಜಾರಿಗೆ ಬರುವಂತೆ ಭಾರತದ ಮೇಲೆ 25% ಟ್ಯಾರಿಫ್‌ ವಿಧಿಸಿಸಿರುವುದಾಗಿ ಘೋಷಿದ್ದರು. ಬಳಿಕ ಮತ್ತೆ 25% ಹೆಚ್ಚುವರಿ ಟ್ಯಾರಿಫ್‌ ಘೋಷಿಸಿದ್ದರು.

    ಅಮೆರಿಕ, ಭಾರತೀಯ ರಫ್ತಿನ ಮೇಲಿನ ಒಟ್ಟು ಸುಂಕವನ್ನು ಶೇ.50 ಕ್ಕೆ ಏರಿಸಿತು. ಇದು ಯಾವುದೇ ಯುಎಸ್ ವ್ಯಾಪಾರ ಪಾಲುದಾರರಲ್ಲಿ ಅತ್ಯಧಿಕವಾಗಿದೆ.

  • 1.44 ಲಕ್ಷ ಕೋಟಿ ಮೌಲ್ಯದ ಯುದ್ಧ ಸಾಮಾಗ್ರಿಗಳ ಖರೀದಿಗೆ ಕೇಂದ್ರದ ಒಪ್ಪಿಗೆ -ಸೇನೆಗೆ ನೂತನವಾಗಿ ಏನೆಲ್ಲ ಸೇರಲಿದೆ?

    1.44 ಲಕ್ಷ ಕೋಟಿ ಮೌಲ್ಯದ ಯುದ್ಧ ಸಾಮಾಗ್ರಿಗಳ ಖರೀದಿಗೆ ಕೇಂದ್ರದ ಒಪ್ಪಿಗೆ -ಸೇನೆಗೆ ನೂತನವಾಗಿ ಏನೆಲ್ಲ ಸೇರಲಿದೆ?

    ರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ದೇಶದ ಭದ್ರತಾ ವ್ಯವಸ್ಥೆಗೆ ವಿಶೇಷ ಒತ್ತನ್ನು ನೀಡಲಾಗುತ್ತಿದೆ. ಚೀನಾ ಹಾಗೂ ಪಾಕಿಸ್ತಾನದ ಉಪಟಳವನ್ನು ನಿಯಂತ್ರಿಸಲು, ಉಗ್ರರನ್ನು ಸಮರ್ಥವಾಗಿ ಎದುರಿಸಲು ಭಾರತ ಸದೃಢವಾಗಿದೆ. ಇದಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. 

    ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ರಕ್ಷಣಾ ಸ್ವಾಧೀನ ಮಂಡಳಿ (ಡಿಎಸಿ), ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಹೆಚ್ಚಿಸುವ ಉದ್ದೇಶದಿಂದ 1.45 ಲಕ್ಷ ಕೋಟಿ ರೂ. ಮೌಲ್ಯದ 10 ನಿರ್ಣಾಯಕ ಪ್ರಸ್ತಾವನೆಗಳನ್ನು ಅನುಮೋದಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

    1,44,716 ಕೋಟಿ ರೂ. ಮೊತ್ತದ 10 ಪ್ರಸ್ತಾವನೆಗಳಿಗೆ ಡಿಎಸಿ ಒಪ್ಪಿಗೆ ನೀಡಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಒಟ್ಟು ವೆಚ್ಚದಲ್ಲಿ, 99%  ಭಾರತೀಯ ಕಂಪನಿಗಳಿಂದ ಮತ್ತು ಸ್ಥಳೀಯವಾಗಿ ವಿನ್ಯಾಸಗೊಳಿಸಿದ ಸಾಮಾಗ್ರಿಗಳನ್ನು ಖರೀದಿಗೆ ಸಮ್ಮತಿಸಲಾಗಿದೆ. ಇಷ್ಟೇ ಅಲ್ಲದೇ ನೌಕಾಪಡೆಯ ಸಾಮರ್ಥ್ಯವನ್ನು ಹೆಚ್ಚಿಸಲು 75,000 ಕೋಟಿ ರೂ. ವೆಚ್ಚದಲ್ಲಿ ಇನ್ನೂ ಏಳು ಪ್ರಾಜೆಕ್ಟ್-17 ಬಿ ಸ್ಟೆಲ್ತ್ ಫ್ರಿಗೇಟ್‌ಗಳ ನಿರ್ಮಾಣಕ್ಕೂ ಡಿಎಸಿ ಅನುಮತಿ ನೀಡಿದೆ. 

    ಈ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಾಮರ್ಥ್ಯ ಹೊಂದಿರುವ ಭಾರತದ ಐದು ಪ್ರಮುಖ ಕಂಪನಿಗಳನ್ನು ಗುರುತಿಸಲಾಗಿದೆ. ಅವುಗಳೆಂದರೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL), ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL), ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ (MDL), ಮತ್ತು ಗಾರ್ಡನ್ ರೀಚ್ ಶಿಪ್ ಬಿಲ್ಡರ್ಸ್ & ಇಂಜಿನಿಯರ್ಸ್ ಲಿಮಿಟೆಡ್ (GRSE) ಕಂಪನಿಗಳಿಂದ ಯುದ್ಧ ಸಾಮಾಗ್ರಿಗಳನ್ನು ಖರೀದಿಸಲು ತೀರ್ಮಾನಿಸಲಾಗಿದೆ.

    FRCV ಯುದ್ಧ ಟ್ಯಾಂಕರ್

    ಭಾರತೀಯ ಸೇನೆಯ ಟ್ಯಾಂಕ್ ಫ್ಲೀಟ್ ಆಧುನೀಕರಣಕ್ಕಾಗಿ, ಭವಿಷ್ಯದ ಸಿದ್ಧ ಯುದ್ಧ ವಾಹನಗಳ (ಎಫ್‌ಆರ್‌ಸಿವಿ) ಖರೀದಿಗೆ ಒಪ್ಪಿಗೆ ಸಿಕ್ಕಿದೆ. FRCV ಗಳು ಉತ್ತಮ ಚಲನಶೀಲತೆ, ಎಲ್ಲಾ ಭೂಪ್ರದೇಶ ಸಾಮರ್ಥ್ಯ, ಬಹು-ಪದರದ ರಕ್ಷಣೆಗಳು, ನಿಖರತೆ ಮತ್ತು ನೈಜ-ಸಮಯದಲ್ಲಿ ದಾಳಿ ನಡೆಸಲು, ಮುಂದಿನ ಪೀಳಿಗೆಯ ಯುದ್ಧ ಟ್ಯಾಂಕರ್‌ ಇದಾಗಿರಲಿದೆ. ಇದರ ಮುಖ್ಯ ಉದ್ದೇಶ ಎಲ್ಲಾ ಹವಾಮಾನ ಪರಿಸ್ಥಿತಿಗಳಲ್ಲಿ ಹಗಲು ಮತ್ತು ರಾತ್ರಿಯ ಸಮಯದಲ್ಲೂ ರಕ್ಷಣೆ ಒದಗಿಸಲಿದೆ. 

    ಈ ಟ್ಯಾಂಕರ್‌ನಲ್ಲಿ ಕಮಾಂಡರ್ ಕ್ಯಾಬಿನ್‌ನ್ನು ಒಂದೇ ಹೈ ಮೊಬಿಲಿಟಿ ವೆಹಿಕಲ್ ಮೇಲೆ ಜೋಡಿಸಲಾಗಿದ್ದು, ಈ ವ್ಯವಸ್ಥೆಯು ಎರಡು ಗನ್‌ಗಳನ್ನು ಏಕಕಾಲದಲ್ಲಿ ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಮೂಲಕ ಪಾರುಗಾಣಿಕಾ ಮತ್ತು ವಿಪತ್ತು ಪರಿಹಾರ ಕಾರ್ಯಾಚರಣೆಗಳನ್ನು ನಡೆಸಲು ICG ಯ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.

    ಭಾರತೀಯ ಸೇನೆಯು 1,700 ಕ್ಕೂ ಹೆಚ್ಚು ಫ್ಯೂಚರ್ ರೆಡಿ ಕಾಂಬ್ಯಾಟ್ ವೆಹಿಕಲ್‌ಗಳನ್ನು (ಎಫ್‌ಆರ್‌ಸಿವಿ) ಹಂತಹಂತವಾಗಿ ಖರೀದಿಸಲು ಸಜ್ಜಾಗಿದೆ.

    ಏರ್ ಡಿಫೆನ್ಸ್ ಫೈರ್ ಕಂಟ್ರೋಲ್ ರಾಡಾರ್‌

    ಇದು ವೈಮಾನಿಕ ಗುರಿಯನ್ನು ಪತ್ತೆಹಚ್ಚುತ್ತದೆ ಮತ್ತು ಟ್ರ್ಯಾಕ್ ಮಾಡುತ್ತದೆ. ಈ ಮೂಲಕ ಇದು ಶತೃಗಳ ದಾಳಿಗೆ ಸೂಕ್ತ ಪ್ರತ್ತ್ಯುತ್ತರ ನೀಡಲು ಸಹಕಾರಿಯಾಗಲಿದೆ. ಈ ಉಪಕರಣವನ್ನು ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ವಿನ್ಯಾಸಗೊಳಿಸಿದೆ ಮತ್ತು ಅಭಿವೃದ್ಧಿಪಡಿಸಿದೆ. 

    ಡಾರ್ನಿಯರ್-228 ವಿಮಾನ

    ಭಾರತೀಯ ಕೋಸ್ಟ್ ಗಾರ್ಡ್ (ICG) ಸಾಮರ್ಥ್ಯಗಳನ್ನು ಹೆಚ್ಚಿಸಲು ಡಾರ್ನಿಯರ್-228 ವಿಮಾನಗಳ ಖರೀದಿಗೆ ಸಮ್ಮತಿಸಲಾಗಿದೆ. ಕೆಟ್ಟ ಹವಾಮಾನ ಪರಿಸ್ಥಿತಿಗಳಲ್ಲಿ ಹೆಚ್ಚಿನ ಕಾರ್ಯಾಚರಣೆಯ ವೈಶಿಷ್ಟ್ಯಗಳನ್ನು ಹೊಂದಿರುವ ಸುಧಾರಿತ ತಂತ್ರಜ್ಞಾನ ಸಾಮರ್ಥ್ಯವನ್ನು ಹೊಂದಿದೆ. ಹುಡುಕಾಟ ಮತ್ತು ಪಾರುಗಾಣಿಕಾ ಮತ್ತು ವಿಪತ್ತು ಪರಿಹಾರ ಕಾರ್ಯಾಚರಣೆಗೆ ಇದು ಅನುಕೂಲವಾಗಲಿದೆ. 

    ಡಾರ್ನಿಯರ್ 228 ಸಾಮಾನ್ಯವಾಗಿ ಶಾರ್ಟ್ ಟೇಕ್‌ಆಫ್ ಮತ್ತು ಲ್ಯಾಂಡಿಂಗ್ ಸಾಮರ್ಥ್ಯದ ವಿಮಾನವಾಗಿದೆ. ಇದು ಒರಟಾದ ರನ್‌ ವೇನಲ್ಲಿ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ ಅತ್ಯಾಧಿನಿಕ ಹಡಗುಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ.

    ಕಾರ್ಯಾಚರಣೆಗಳ ಸಮಯದಲ್ಲಿ ಸ್ಥಳದಲ್ಲೇ ದುರಸ್ತಿ ಮಾಡಲು ಅನುಕೂಲವಾಗುವಂತೆ ಯುದ್ ಧವಾಹನಗಳಿಗೆ ಟ್ರ್ಯಾಕ್ಡ್‌ ವ್ಯವಸ್ಥೆಗೆ ಪ್ರಸ್ತಾವನೆಯನ್ನು ಅನುಮೋದಿಸಲಾಗಿದೆ. ಈ ಉಪಕರಣವನ್ನು ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದೆ ಮತ್ತು ಯಾಂತ್ರಿಕೃತ ಪದಾತಿಸೈನ್ಯದ ಬೆಟಾಲಿಯನ್ ಮತ್ತು ಆರ್ಮರ್ಡ್ ರೆಜಿಮೆಂಟ್ ಎರಡಕ್ಕೂ ಇದರ ಬಳಕೆಗೆ ಒಪ್ಪಿಗೆ ಸಿಕ್ಕಿದೆ.

  • 156 ʻಪ್ರಚಂಡʼ ಚಾಪರ್‌ ಖರೀದಿಗೆ ಪ್ರಸ್ತಾವನೆ – HALಗೆ 45,000 ಕೋಟಿ ರೂ. ಟೆಂಡರ್‌!

    156 ʻಪ್ರಚಂಡʼ ಚಾಪರ್‌ ಖರೀದಿಗೆ ಪ್ರಸ್ತಾವನೆ – HALಗೆ 45,000 ಕೋಟಿ ರೂ. ಟೆಂಡರ್‌!

    ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಡೆಟ್‌ (HAL) 45,000 ಕೋಟಿ ರೂ. ಟೆಂಡರ್‌ ಪಡೆದುಕೊಂಡಿದೆ. ರಕ್ಷಣಾ ಸಚಿವಾಲಯವು ಭಾರತೀಯ ವಾಯು ಸೇನೆಗೆ 156 ಪ್ರಚಂಡ ಮಾದರಿಯ ಲಘು ಯುದ್ಧ ಹೆಲಿಕಾಪ್ಟರ್‌ಗಳ (Light Combat Helicopter) ಖರೀದಿಗೆ ಪ್ರಸ್ತಾವನೆ ಸಲ್ಲಿದೆ. ಈ ಮೂಲಕ ರಕ್ಷಣಾ ವಲಯದಲ್ಲಿ ಸ್ವದೇಶಿ ಉತ್ಪನ್ನಗಳಿಗೆ ಉತ್ತೇಜನ ನೀಡಿದೆ.

    2015ರ ನಿಯಮಾವಳಿ 30ರ ಪ್ರಕಾರ, 156 ಲಘು ಯುದ್ಧ ಹೆಲಿಕಾಪ್ಟರ್‌ಗಳ ಖರೀದಿಗಾಗಿ ರಕ್ಷಣಾ ಸಚಿವಾಲಯವು ಪ್ರಸ್ತಾವನೆಗಾಗಿ ವಿನಂತಿ (RFP) ನೀಡಿದೆ. ಈ ಪೈಕಿ ಭಾರತೀಯ ಸೇನೆಗೆ 90 ಮತ್ತು ಭಾರತೀಯ ವಾಯು ಸೇನೆ 66 ಲಘು‌ ಯುದ್ಧ ವಿಮಾನಗಳನ್ನು ಸ್ವಾಧೀನಪಡಿಸಿಕೊಳ್ಳಲಿದೆ. ಇದರ ವೆಚ್ಚ 45,000 ಕೋಟಿ ರೂ.ಗಳಷ್ಟಾಗಲಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಸ್ವದೇಶಿ ಆಯುಧ ನಿರ್ಮಾಣ ತಂತ್ರಜ್ಞಾನದಲ್ಲಿ ಭಾರತದ ಸಾಧನೆ; ಶತ್ರುಗಳ ನಿದ್ದೆಗೆಡಿಸಲಿದೆ ಧ್ರುವಾಸ್ತ್ರ

    ಪ್ರಸ್ತುತ ಈ ಎರಡೂ ಸೇನೆಗಳು 15 ಹೆಲಿಕಾಪ್ಟರ್‌ಗಳನ್ನು ಹೊಂದಿವೆ. ಈ 156 ಲಘು ಯುದ್ಧ ವಿಮಾನಗಳನ್ನು ಚೀನಾ ಮತ್ತು ಪಾಕಿಸ್ತಾನದ ಗಡಿಯಲ್ಲಿ ನಿಯೋಜಿಸಲಾಗುತ್ತದೆ. ಇದು ಭಯೋತ್ಪಾದಕರು ಮತ್ತು ನುಸುಳುಕೋರರನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ. ಪ್ರಚಂಡ ಹೆಲಿಕಾಪ್ಟರ್‌ಗಳು ರಕ್ಷಣಾ ಕಾರ್ಯಾಚರಣೆಯನ್ನು ಸುಗಮಗೊಳಿಸುತ್ತವೆ. ಶತ್ರುಗಳನ್ನು ಹುಡುಕಿ ಕೊಲ್ಲುವ ಜೊತೆಗೆ ಬಂಕರ್‌ಗಳ ಬಸ್ಟಿಂಗ್‌ ಕಾರ್ಯಾಚರಣೆಗೂ ಸಹಾಯಕವಾಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಚಿತ್ರದುರ್ಗದಿಂದ ಹಾರಿದ ಸ್ವದೇಶಿ ತಪಸ್ ಯುಎವಿ ಕಾರವಾರದ ಅರಬ್ಬಿ ಸಮುದ್ರದಲ್ಲಿ ಯಶಸ್ವಿ ಲ್ಯಾಂಡಿಂಗ್

    ʻಪ್ರಚಂಡ್‌ʼ ಹೇಲಿಕಾಪ್ಟರ್‌ 5,000 ಮೀಟರ್ (16,400 ಅಡಿ) ಎತ್ತರದಲ್ಲಿ ಲ್ಯಾಂಡಿಂಗ್‌ ಮತ್ತು ಟೇಕಾಫ್‌ ಮಾಡುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸಿಯಾಚಿನ್ ಹಿಮನದಿ ಮತ್ತು ಪೂರ್ವ ಲಡಾಖ್‌ ನಂತಹ ಎತ್ತರದ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಸೂಕ್ತವಾಗಿದೆ. ಪ್ರತಿಕೂಲ ವಾತಾವರಣದಲ್ಲಿಯೂ ಕ್ಷಿಪಣಿಗಳನ್ನು ಹಾರಿಸುವ ಮೂಲಕ ಶತ್ರುಗಳ ವಾಯು ರಕ್ಷಣಾ ಕಾರ್ಯಾಚರಣೆಯನ್ನು ನಾಶಪಡಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ.

    ಪ್ರಸಕ್ತ ವರ್ಷದ ಏಪ್ರಿಲ್‌ನಲ್ಲಿ ರಕ್ಷಣಾ ಸಚಿವಾಲಯವು ಹೆಚ್‌ಎಎಲ್‌ಗೆ 65,000 ಕೋಟಿ ರೂ. ಮೌಲ್ಯದ 97 LCA ಮಾರ್ಕ್ 1A ಫೈಟರ್ ಜೆಟ್‌ಗಳನ್ನು ಖರೀದಿಸಲು ಟೆಂಡರ್ ನೀಡಿದೆ.

  • ಲೈಟ್ ಚಾಪರ್‌ಗಾಗಿ ಹೆಚ್‍ಎಎಲ್‍ನೊಂದಿಗೆ 8073.17 ಕೋಟಿ ರೂ. ಒಪ್ಪಂದ ಮಾಡಿಕೊಂಡ ರಕ್ಷಣಾ ಸಚಿವಾಲಯ

    ಲೈಟ್ ಚಾಪರ್‌ಗಾಗಿ ಹೆಚ್‍ಎಎಲ್‍ನೊಂದಿಗೆ 8073.17 ಕೋಟಿ ರೂ. ಒಪ್ಪಂದ ಮಾಡಿಕೊಂಡ ರಕ್ಷಣಾ ಸಚಿವಾಲಯ

    ನವದೆಹಲಿ: ಭಾರತೀಯ ಸೇನೆ (Indian Army) ಮತ್ತು ಕೋಸ್ಟ್ ಗಾರ್ಡ್‍ಗಾಗಿ 34 ಸುಧಾರಿತ ಲಘು ಹೆಲಿಕಾಪ್ಟರ್‌  ಮತ್ತು ಅದಕ್ಕೆ ಸಂಬಂಧಿಸಿದ ಸಲಕರಣೆಗಳಿಗಾಗಿ ರಕ್ಷಣಾ ಸಚಿವಾಲಯವು ಬೆಂಗಳೂರಿನ (Bengaluru) ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ನೊಂದಿಗೆ 8073.17 ಕೋಟಿ ರೂ. ಮೌಲ್ಯದ ಎರಡು ಒಪ್ಪಂದಗಳಿಗೆ ಸಹಿ ಹಾಕಿದೆ.

    34 ಧ್ರುವ ಎಮ್‍ಕೆ ಹೆಲಿಕಾಪ್ಟರ್‌ಗಳಲ್ಲಿ ಸೇನೆಯು 25 ಮತ್ತು ಕೋಸ್ಟ್ ಗಾರ್ಡ್ 9ನ್ನು ಪಡೆಯಲಿದೆ ಎಂದು ಸಚಿವಾಲಯ ತಿಳಿಸಿದೆ. ಭದ್ರತಾ ಕ್ಯಾಬಿನೆಟ್ ಸಮಿತಿ (ಸಿಸಿಎಸ್) ಕಳೆದ ವಾರ ಎರಡು ಖರೀದಿ ಯೋಜನೆಗಳಿಗೆ ಅನುಮತಿ ನೀಡಿತ್ತು.

    ALH Mk III MR ಹೆಲಿಕಾಪ್ಟರ್‌ನ್ನು ಸೈನಿಕರನ್ನು ಕರೆದೊಯ್ಯಲು, ಹುಡುಕಾಟ ಮತ್ತು ಅಪಘಾತದ ವೇಳೆ ರಕ್ಷಣಾ ಕಾರ್ಯಾಚರಣೆಗಾಗಿ ವಿನ್ಯಾಸಗೊಳಿಸಲಾಗಿದೆ.

    ಈ ಹೆಲಿಕಾಪ್ಟರ್, ಸಿಯಾಚಿನ್ ಗ್ಲೇಸಿಯರ್ ಮತ್ತು ಲಡಾಖ್‍ನಂತಹ ಎತ್ತರದ ಪ್ರದೇಶಗಳಲ್ಲಿ ತನ್ನ ಕಾರ್ಯಕ್ಷಮತೆಯನ್ನು ಸಾಬೀತುಪಡಿಸಿದೆ. ಸಮುದ್ರ ಮತ್ತು ಭೂಮಿಯ ಮೇಲಿನ ಪ್ರತಿಕೂಲ ವಾತಾವರಣದ ಪರಿಸ್ಥಿತಿಗಳಲ್ಲಿಯೂ ಇದು ತನ್ನ ಸಾಮಥ್ರ್ಯವನ್ನು ಸಾಬೀತುಪಡಿಸಿದೆ.

  • Rafale Deal: 90,000 ಕೋಟಿ ವೆಚ್ಚ, 26 ರಫೇಲ್‌ ಖರೀದಿಸಲು ಭಾರತ ಸರ್ಕಾರ ಮೆಗಾ ಪ್ಲ್ಯಾನ್‌!

    Rafale Deal: 90,000 ಕೋಟಿ ವೆಚ್ಚ, 26 ರಫೇಲ್‌ ಖರೀದಿಸಲು ಭಾರತ ಸರ್ಕಾರ ಮೆಗಾ ಪ್ಲ್ಯಾನ್‌!

    ನವದೆಹಲಿ/ಪ್ಯಾರಿಸ್‌: ಈ ಹಿಂದೆ ಫ್ರಾನ್ಸ್‌ನಿಂದ (France) 36 ರಫೇಲ್‌ ಯುದ್ಧ ವಿಮಾನಗಳನ್ನ (Rafale Fighter Jet) ಖರೀದಿ ಮಾಡಿದ್ದ ಭಾರತ ಸರ್ಕಾರ ಇದೀಗ, ಇನ್ನೂ 26 ಯುದ್ಧ ವಿಮಾನಗಳನ್ನು ಖರೀದಿಸಲು ಚಿಂತನೆ ನಡೆಸಿದೆ.

    ಭಾರತೀಯ ರಕ್ಷಣಾ ಪಡೆಗಳು ಸಚಿವಾಲಯದ ಮುಂದೆ ರಫೇಲ್‌ ಖರೀದಿಸುವ ಪ್ರಸ್ತಾವನೆಯನ್ನಿಟ್ಟಿವೆ. ಈ ವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಫ್ರಾನ್ಸ್‌ಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಭಾರತ ಸರ್ಕಾರವು 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಸಂಬಂಧಿಸಿದಂತೆ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಫೇಲ್‌ ಡೀಲ್‌ – ಆಫ್‌ಸೆಟ್‌ ನಿಯಮವನ್ನೇ ಕೈಬಿಟ್ಟ ಸರ್ಕಾರ

    ರಫೇಲ್ ಯುದ್ಧ ವಿಮಾನಗಳ ಜೊತೆಗೆ ಭಾರತವು ಫ್ರಾನ್ಸ್‌ನಿಂದ 3 ಸ್ಕಾರ್ಪೀನ್ ವರ್ಗದ ಸಾಂಪ್ರದಾಯಿಕ ಜಲಾಂತರ್ಗಾಮಿ (Submarines) ನೌಕೆಗಳನ್ನೂ ಖರೀದಿಸಲಿದೆ. 26 ರಫೇಲ್ ಮತ್ತು ಸ್ಕಾರ್ಪೀನ್ ವರ್ಗದ 3 ಸಬ್‌ಮರೀನ್‌ಗಳ ಖರೀದಿಗೆ ಭಾರತವು ಸುಮಾರು 90 ಸಾವಿರ ಕೋಟಿ ರೂ. ವೆಚ್ಚ ಮಾಡಲಿದೆ ಎಂದು ಹೇಳಲಾಗುತ್ತಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ರಫೆಲ್ ಯುದ್ಧ ವಿಮಾನ ಖರೀದಿ – ಸುಸೇನ್ ಗುಪ್ತಾ ಮೇಲೆ ಲಂಚ ಸ್ವೀಕಾರ ಆರೋಪ

    ಮೂಲಗಳ ಪ್ರಕಾರ, ಭಾರತೀಯ ನೌಕಾ ಪಡೆಯು ನಾಲ್ಕು ಟ್ರೈನರ್ ಏರ್‌ಕ್ರಾಫ್ಟ್‌ಗಳ ಸಹಿತ 22 ಸಿಂಗಲ್ ಸೀಟೆಡ್ (ಏಕ ಆಸನಗಳನ್ನು ಒಳಗೊಂಡ) ರಫೇಲ್ ಯುದ್ಧ ವಿಮಾನಗಳನ್ನು ಹೊಂದಲಿದೆ. ದೇಶಾದ್ಯಂತ ಭದ್ರತಾ ಸವಾಲುಗಳ ದೃಷ್ಟಿಯಿಂದ ಭಾರತೀಯ ನೌಕಾಪಡೆಯು ಕೊರತೆ ಎದುರಿಸುತ್ತಿರುವ ಕಾರಣ ಈ ಯುದ್ಧ ವಿಮಾನಗಳು ಮತ್ತು ಜಲಾಂತರ್ಗಾಮಿ ನೌಕೆಗಳ ಖರೀದಿಗೆ ಸರ್ಕಾರದ ಮೇಲೆ ರಕ್ಷಣಾಪಡೆಗಳು ಒತ್ತಡ ಹೇರುತ್ತಿದೆ ಎಂದು ತಿಳಿದುಬಂದಿದೆ.

    ವಿಮಾನಗಳನ್ನು ಹೊತ್ತೊಯ್ಯುವ ಐಎನ್‌ಎಸ್ ವಿಕ್ರಮಾದಿತ್ಯ ಮತ್ತು ವಿಕ್ರಾಂತ್ (INS Vikrant), ಮಿಗ್-19 ಫೈಟರ್‌ಜೆಟ್‌ಗಳನ್ನು ನಿರ್ವಹಣೆ ಮಾಡುತ್ತಿದೆ. ಈ ಎರಡೂ ಯುದ್ಧ ಹಡಗುಗಗಳಿಗೆ ರಫೇಲ್ ಯುದ್ಧವಿಮಾನಗಳ ಅಗತ್ಯವಿದೆ. ಈ ಮಧ್ಯೆ, ಸ್ಕಾರ್ಪೀನ್ ಕ್ಲಾಸ್ ಸಬ್‌ಮರೀನ್‌ಗಳನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ. ಪ್ರಾಜೆಕ್ಟ್-75ರ ಭಾಗವಾಗಿ ನೌಕಾಪಡೆಯು ಈ ಜಲಾಂತರ್ಗಾಮಿಗಳನ್ನ ಮುಂಬೈನ ಮಜಗಾಂವ್ ಡಾಕ್‌ಯಾರ್ಡ್‌ನಲ್ಲಿ ನಿರ್ಮಾಣಗೊಳ್ಳಲಿವೆ.

    26 ರಫೇಲ್ ಮತ್ತು ಸ್ಕಾರ್ಪೀನ್ ವರ್ಗದ 3 ಸಬ್‌ಮರೀನ್‌ಗಳ ಖರೀದಿಗೆ ಭಾರತವು ಸುಮಾರು 90 ಸಾವಿರ ಕೋಟಿ ರೂ. ವೆಚ್ಚ ಮಾಡಲಿದೆ ಎಂದು ಹೇಳಲಾಗುತ್ತಿದೆ. ಆದ್ರೆ ಪೂರ್ಣ ಮಾತುಕತೆ ಒಪ್ಪಂದ ಮುಕ್ತಾಯಗೊಂಡ ನಂತರ ಅಂತಿಮ ವೆಚ್ಚ ಸ್ಪಷ್ಟವಾಗಲಿದೆ. ಈ ನಡುವೆ ಭಾರತವು ಈ ಒಪ್ಪಂದಲ್ಲಿ ರಿಯಾಯಿತಿ ಪಡೆದುಕೊಳ್ಳುವ ಸಾಧ್ಯತೆಗಳಿವೆ ಎಂದೂ ಹೇಳಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಗ್ನಿಪಥ್ ಯೋಜನೆ ವಾಪಸ್ ಇಲ್ಲ – ಗಲಭೆಕೋರರಿಗೆ ಸೇವೆ ಸೇರಲು ಅವಕಾಶವಿಲ್ಲ: ಲೆ.ಜ ಅನಿಲ್‌ಪುರಿ ವಾರ್ನಿಂಗ್

    ಅಗ್ನಿಪಥ್ ಯೋಜನೆ ವಾಪಸ್ ಇಲ್ಲ – ಗಲಭೆಕೋರರಿಗೆ ಸೇವೆ ಸೇರಲು ಅವಕಾಶವಿಲ್ಲ: ಲೆ.ಜ ಅನಿಲ್‌ಪುರಿ ವಾರ್ನಿಂಗ್

    ನವದೆಹಲಿ: ದೇಶ ಸೇವೆಯ ವೇಳೆ ತಮ್ಮ ಜೀವ ಬಲಿದಾನ ಮಾಡಿದರೆ ಅಗ್ನಿವೀರರಿಗೆ 1 ಕೋಟಿ ರೂ. ಪರಿಹಾರ ಸಿಗಲಿದೆ. ಅಲ್ಲದೆ ಭವಿಷ್ಯದಲ್ಲಿ ಇದರ ಸಂಖ್ಯೆಯೂ 1.25 ಲಕ್ಷಕ್ಕೆ ಏರಿಕೆಯಾಗಲಿದೆ ಎಂದು ರಕ್ಷಣಾ ಸಚಿವಾಲಯದ ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ ತಿಳಿಸಿದ್ದಾರೆ.

    ARMY

    ಅಗ್ನಿಪಥ್ ಯೋಜನೆ ವಿರುದ್ಧ ಸೇನಾ ಆಕಾಂಕ್ಷಿಗಳು ನಡೆಸುತ್ತಿರುವ ಹಿಂಸಾತ್ಮಕ ಪ್ರತಿಭಟನೆ ಮಧ್ಯೆ, ಯೋಜನೆ ಕುರಿತು ಮನವರಿಕೆ ಮಾಡಿಕೊಡಲು ಕೇಂದ್ರ ಸರ್ಕಾರ ಪ್ರಯತ್ನಿಸಿದೆ. ಕೆಲವು ವಿನಾಯಿತಿ ಮತ್ತು ಸವಲತ್ತುಗಳನ್ನು ಘೋಷಿಸಿದ್ದ ಗೃಹ ಸಚಿವಾಲಯ, ಪ್ರತಿಭಟನಾಕಾರರ ಆಕ್ರೋಶವನ್ನು ತಣ್ಣಗಾಗಿಸಲು ಪ್ರಯತ್ನಿಸಿದೆ. ಆದರೆ ಪ್ರತಿಭಟನೆಯ ಕಿಚ್ಚು ಕಡಿಮೆಯಾಗಿಲ್ಲ ಈ ಹಿನ್ನೆಲೆಯಲ್ಲಿ ಯೋಜನೆಯಲ್ಲಿರುವ ವಿವಿಧ ಸೌಲಭ್ಯ ಹಾಗೂ ಮೀಸಲಾತಿ ಬಗೆಗೆ ರಕ್ಷಣಾ ಸಚಿವಾಲಯ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ಅಗ್ನಿಫಥ್‌ನಿಂದ ಹೆಚ್ಚಿದ ಕಿಚ್ಚು- ನಾಲ್ಕೇ ದಿನಗಳಲ್ಲಿ 200 ಕೋಟಿ ಆಸ್ತಿ ನಷ್ಟ

    ಈ ಕುರಿತು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೆಫ್ಟಿನೆಂಟ್ ಜನರಲ್ ಬನ್ಸಿ ಪೊನ್ನಪ್ಪ, ಜುಲೈ 24 ರಂದು ಪರೀಕ್ಷೆ ನಡೆಯಲಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ಅಗ್ನಿವೀರರ ಮೊದಲ ಬ್ಯಾಚ್ ನೇಮಕವಾಗಲಿದೆ. ಇದರಲ್ಲಿ 25,000 ಯುವಕರನ್ನು ಅಯ್ಕೆ ಮಾಡಲಾಗುವುದು. 2023ರ ಫೆಬ್ರವರಿಯಲ್ಲಿ 2ನೇ ಬ್ಯಾಚ್ ನೇಮಕವಾಗಲಿದ್ದು ಇದರಲ್ಲಿ 40,000 ಜನರನ್ನು ಆಯ್ಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

    ಇದಕ್ಕೂ ಮುನ್ನ ಮಾತನಾಡಿದ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ, ಅಗ್ನಿವೀರರಿಗೆ ಘೋಷಣೆ ಮಾಡುತ್ತಿರುವ ಮೀಸಲಾತಿಗಳನ್ನು ಈ ಮೊದಲೇ ಯೋಜಿಸಲಾಗಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ʼಅಗ್ನಿಪಥʼ ಹಿಂಸಾಚಾರ – ಪ್ರತಿಭಟನಾಕಾರರಿಗೆ ಆಸ್ಪತ್ರೆಯಿಂದಲೇ ಸೋನಿಯಾ ಗಾಂಧಿ ಮನವಿ

    ಇಂದು ಅತಿಹೆಚ್ಚು ಸೈನಿಕರು 30ರ ವಯೋಮಾನದಲ್ಲಿದ್ದಾರೆ. ಆದರೆ ಸೇನೆಯ ಮೂರೂ ವಿಭಾಗಗಳಿಂದ ಪ್ರತಿ ವರ್ಷವೂ ಸುಮಾರು 17,600 ಮಂದಿ ಅವಧಿಗೆ ಮುನ್ನವೇ ನಿವೃತ್ತಿ ಪಡೆಯುತ್ತಿದ್ದಾರೆ. ನಿವೃತ್ತಿ ಬಳಿಕ ಏನು ಮಾಡುತ್ತೀರಿ? ಎಂದು ಯಾರೂ ಕೂಡ ಅವರನ್ನು ಕೇಳಲು ಹೋಗಿಲ್ಲ. ಅಗ್ನಿವೀರರು ಕೂಡ ಹಾಲಿ ಸೇವೆಯಲ್ಲಿರುವ ಸಾಮಾನ್ಯ ಸೈನಿಕರಂತೆಯೇ ಸಿಯಾಚಿನ್ ಹಾಗೂ ಇತರೆ ಕೆಲವು ಪ್ರದೇಶಗಳಲ್ಲಿ ಅದೇ ಭತ್ಯೆ ಪಡೆಯಲಿದ್ದಾರೆ. ಸೇವಾ ಪರಿಸ್ಥಿತಿಗಳಲ್ಲಿ ಅವರ ನಡುವೆ ಯಾವುದೇ ತಾರತಮ್ಯ ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

    ನೇಮಕಾತಿ ಪ್ರಮಾಣದಲ್ಲಿ ಹೆಚ್ಚಳ: 4-5 ವರ್ಷಗಳಲ್ಲಿ ತಮ್ಮ ಸೈನಿಕರ ನೇಮಕಾತಿ 50 – 60,000 ಆಗಲಿದೆ. ಕ್ರಮೇಣ 90,000 ದಿಂದ 1 ಲಕ್ಷಕ್ಕೆ ಏರಿಕೆಯಾಗಲಿದೆ. ಯೋಜನೆಯನ್ನು ವಿಶ್ಲೇಷಣೆಗೆ ಒಳಪಡಿಸಲು ಸಣ್ಣ ಪ್ರಮಾಣದಲ್ಲಿ ಆರಂಭ ಮಾಡುತ್ತಿದೆ ಎಂದು ವಿವರಿಸಿದ್ದಾರೆ.

    Live Tv

  • ಕ್ಷಣಮಾತ್ರದಲ್ಲಿ ಎದುರಾಳಿಯನ್ನು ಹೊಡೆದುರಳಿಸಬಲ್ಲ ರಷ್ಯಾದ ಕ್ಷಿಪಣಿ – ಉಡಾವಣೆ ಯಶಸ್ವಿ

    ಕ್ಷಣಮಾತ್ರದಲ್ಲಿ ಎದುರಾಳಿಯನ್ನು ಹೊಡೆದುರಳಿಸಬಲ್ಲ ರಷ್ಯಾದ ಕ್ಷಿಪಣಿ – ಉಡಾವಣೆ ಯಶಸ್ವಿ

    ಮಾಸ್ಕೋ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮುಂದುವರಿದಿದೆ. ಈ ಮಧ್ಯೆ ಪಾಶ್ಚಿಮಾತ್ಯ ದೇಶಗಳು ರಷ್ಯಾ ವಿರುದ್ಧ ನಿರಂತರವಾಗಿ ನಿರ್ಬಂಧನೆಗಳನ್ನು ವಿಧಿಸುತ್ತಲೇ ಇವೆ. ಇಂತಹ ಪರಿಸ್ಥಿತಿಯಲ್ಲಿ ಮಿಂಚಿನ ವೇಗದ ಹೈಪರ್ಸಾನಿಕ್ ಪರಮಾಣು ಕ್ಷಿಪಣಿಯನ್ನು ರಷ್ಯಾ ಉಡಾಯಿಸಿದ್ದು, ದೃಶ್ಯಾವಳಿಗಳನ್ನು ರಷ್ಯಾ ಬಿಡುಗಡೆ ಮಾಡಿದೆ. ರಷ್ಯಾ ಹಂಚಿಕೊಂಡಿರುವ ಈ ಫೋಟೋ ಎದುರಾಳಿ ದೇಶಗಳ ಮೇಲೆ ಒಂದೇ ಹೊಡೆತದಲ್ಲಿ ದಾಳಿ ನಡೆಸಬಲ್ಲದು ಎಂಬುದನ್ನು ಪ್ರದರ್ಶಿಸಿದೆ.

    ಶ್ವೇತ ಸಮುದ್ರದಿಂದ ಯುದ್ಧನೌಕೆ ಉಡಾವಣೆ: ಮ್ಯಾಕ್ 9 `ಜಿರ್ಕಾನ್’ ಅಥವಾ `ಸಿರ್ಕಾನ್’ ಹೆಸರಿನ ಈ ಕ್ಷಿಪಣಿಯನ್ನು ಬಿಳಿ ಸಮುದ್ರದಲ್ಲಿ ಅಡ್ಮಿರಲ್ ಗೋರ್ಶ್ಕೋವ್ ಯುದ್ಧನೌಕೆಯಿಂದ ಉಡಾವಣೆ ಮಾಡಲಾಗಿದೆ. ಯುದ್ಧದ ನಡುವೆಯೇ ಈ ದೃಶ್ಯಾವಳಿಗಳನ್ನು ಬಿಡುಗಡೆ ಮಾಡುವ ಉದ್ದೇಶವೆಂದರೆ ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಒಂದು ವೇಳೆ ಯಾವುದೇ ದೇಶ ಹಸ್ತಕ್ಷೇಪ ಮಾಡಿದರೆ, ನಂತರ ಈ ಪರಮಾಣು ಕ್ಷಿಪಣಿಗಳನ್ನು ಬಳಸಲಾಗುವುದು ಎಂಬುದನ್ನು ರಷ್ಯಾ ತೋರಿಸಿದೆ. ಇದನ್ನೂ ಓದಿ: ಜುಲೈ – ಆಗಸ್ಟ್‌ನಲ್ಲೇ ಭಾರತಕ್ಕೆ ಎದುರಾಗಲಿದೆ ವಿದ್ಯುತ್ ಕೊರತೆ – CREA ವರದಿ ಹೇಳಿದ್ದೇನು?

    ಮಿಂಚಿನ ವೇಗ: ಇತ್ತೀಚೆಗಷ್ಟೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಈ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿ ಎಂದು ಘೋಷಿಸಿದ್ದರು. ಇದೇ ವರ್ಷ ಈ ಕ್ಷಿಪಣಿಯನ್ನು ಸೇನೆಗೆ ಸೇರ್ಪಡೆ ಮಾಡಲಾಗಿದೆ. ಪಾಶ್ಚಿಮಾತ್ಯ ದೇಶಗಳ ಬಳಿ ಈ ಕ್ಷಿಪಣಿಗಳಿಗೆ ಯಾವುದೇ ಉತ್ತರವಿಲ್ಲ ಎಂದು ರಷ್ಯಾ ತಜ್ಞರು ಹೇಳುತ್ತಾರೆ. ರಷ್ಯಾದ ಜಿರ್ಕಾನ್ ಹೈಪರ್ಸಾನಿಕ್ ಕ್ಷಿಪಣಿ ಪರೀಕ್ಷೆಯ ನಂತರ ಅದರ ರಹಸ್ಯ ವೈಶಿಷ್ಟ್ಯಗಳು ಬಹಿರಂಗಗೊಂಡಿವೆ ಎಂದು ರಷ್ಯಾ ಮಾಧ್ಯಮಗಳು ಮಾಹಿತಿ ಪ್ರಸಾರ ಮಾಡಿವೆ. ಇದನ್ನೂ ಓದಿ: 4 ಭಾರತೀಯರು ಸೇರಿ 22 ಪ್ರಯಾಣಿಕರಿದ್ದ ವಿಮಾನ ನಾಪತ್ತೆ

    ಹೀಗಿದೆ ವೇಗದ ಮಿತಿ: ಸಿರ್ಕಾನ್ ಹೈಪರ್ಸಾನಿಕ್ ಕ್ರೂಸ್ ಕ್ಷಿಪಣಿಯು ಶ್ವೇತ ಸಮುದ್ರದಲ್ಲಿ ಸುಮಾರು 1,000 ಕಿಮೀ ದೂರದಲ್ಲಿರುವ ನೌಕೆಯನ್ನು ಉಡಾಯಿಸುವ ಗುರಿ ಹೊಂದಿದೆ. ಕ್ಷಿಪಣಿಯು ಶಬ್ದದ ವೇಗಕ್ಕಿಂತ 9 ಪಟ್ಟು ವೇಗದಲ್ಲಿ ಹಾರುವ ಸಾಮರ್ಥ್ಯ ಹೊಂದಿದೆ ಎಂದು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.

  • ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವವರನ್ನು ಗುಂಡಿಕ್ಕಿ ಕೊಲ್ಲಿ: ಶ್ರೀಲಂಕಾ ರಕ್ಷಣಾ ಸಚಿವಾಲಯ ಆದೇಶ

    ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವವರನ್ನು ಗುಂಡಿಕ್ಕಿ ಕೊಲ್ಲಿ: ಶ್ರೀಲಂಕಾ ರಕ್ಷಣಾ ಸಚಿವಾಲಯ ಆದೇಶ

    ಕೊಲಂಬೊ: ಸಾರ್ವಜನಿಕ ಆಸ್ತಿಯನ್ನು ಲೂಟಿ ಮಾಡುವ ಅಥವಾ ಇತರರಿಗೆ ಹಾನಿ ಮಾಡುವವರ ಮೇಲೆ ಗುಂಡು ಹಾರಿಸಲು ಶ್ರೀಲಂಕಾ ರಕ್ಷಣಾ ಸಚಿವಾಲಯವು ಸೇನಾಪಡೆಗಳಿಗೆ ಆದೇಶಿಸಿದೆ ಎಂದು ಸೇನಾ ವಕ್ತಾರರು ಡೈಲಿ ಮಿರರ್‌ಗೆ ತಿಳಿಸಿದ್ದಾರೆ.

    ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಯನ್ನು ಹಾನಿಗೊಳಿಸುವುದು ಅಥವಾ ಇತರರಿಗೆ ಹಾನಿ ಮಾಡುವುದು ಕಂಡುಬಂದರೆ ಅಂತಹವರನ್ನು ಗುಂಡಿಕ್ಕಿ ಕೊಲ್ಲಲಾಗುವುದು ಎಂದು ರಕ್ಷಣಾ ಸಚಿವಾಲಯ ಎಚ್ಚರಿಕೆಯ ಸಂದೇಶ ರವಾನಿಸಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಪರಿಸ್ಥಿತಿ ಉದ್ವಿಗ್ನ – ಸರ್ಕಾರ ಬೆಂಬಲಿಗನನ್ನು ಬಸ್‌ನಿಂದ ಕೆಳಗಿಳಿಸಿ ಕಸದ ಗಾಡಿಗೆ ಎಸೆದ ಪ್ರತಿಭಟನಾಕಾರರು

    ಆಡಳಿತ ಪಕ್ಷದ ರಾಜಕಾರಣಿಗಳ ಒಡೆತನದ ಹಲವಾರು ಮನೆಗಳನ್ನು ಹಾನಿಗೊಳಿಸಲಾಗಿದೆ. ಬೆಂಕಿ ಹಚ್ಚಿ ನಾಶಗೊಳಿಸಲಾಗಿದೆ. ಸರ್ಕಾರದ ಬೆಂಬಲಿಗರ ಮೇಲೆ ಕಳೆದ ಎರಡು ದಿನಗಳಿಂದ ದಾಳಿ ಮಾಡಲಾಗಿದೆ.

    ಶ್ರೀಲಂಕಾದಲ್ಲಿನ ಜನರ ಕುಂದುಕೊರತೆಗಳನ್ನು ಪರಿಹರಿಸಲು ಸಂಯಮ ಮತ್ತು ಅರ್ಥಪೂರ್ಣ ಮಾತುಕತೆಗೆ ಮಾನವ ಹಕ್ಕುಗಳ ಯುಎನ್ ಹೈ ಕಮಿಷನರ್ ಮಿಚೆಲ್ ಬ್ಯಾಚೆಲೆಟ್ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ರೊಚ್ಚಿಗೆದ್ದ ಜನ – ಸಂಸದ, ಮಾಜಿ ಸಚಿವರ ಮನೆಗೆ ಬೆಂಕಿ

    ಆರ್ಥಿಕ ಬಿಕ್ಕಟ್ಟಿನ ಕಾರಣದಿಂದಾಗಿ ಶ್ರೀಲಂಕಾದಲ್ಲಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆಡಳಿತದ ವಿರುದ್ಧ ರೊಚ್ಚಿಗೆದ್ದಿರುವ ಪ್ರತಿಭಟನಾಕಾರರು ವಿಧ್ವಂಸಕ ಕೃತ್ಯಗಳನ್ನು ಎಸಗುತ್ತಿದ್ದಾರೆ. ಜನರು ರೋಷಾವೇಷಕ್ಕೆ ಬೆಚ್ಚಿದ ಮಹಿಂದಾ ರಾಜಪಕ್ಸ ಸೋಮವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದರು.

  • ರಫೇಲ್‌ ಡೀಲ್‌  – ಆಫ್‌ಸೆಟ್‌ ನಿಯಮವನ್ನೇ ಕೈಬಿಟ್ಟ ಸರ್ಕಾರ

    ರಫೇಲ್‌ ಡೀಲ್‌ – ಆಫ್‌ಸೆಟ್‌ ನಿಯಮವನ್ನೇ ಕೈಬಿಟ್ಟ ಸರ್ಕಾರ

    ನವದೆಹಲಿ: ರಕ್ಷಣಾ ವ್ಯವಹಾರದ ವೇಳೆ ಈಗ ಇದ್ದ ಆಫ್‌ಸೆಟ್‌ ನಿಯಮವನ್ನೇ ಕೈಬಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

    36 ರಫೇಲ್ ಯುದ್ಧ ವಿಮಾನ ಸಂಬಂಧ 59 ಸಾವಿರ ಕೋಟಿ ರೂ. ಒಪ್ಪಂದ ನಡೆದು 5 ವಿಮಾನ ಭಾರತಕ್ಕೆ ಬಂದರೂ ಡಸಾಲ್ಟ್ ಕಂಪನಿ ತನ್ನ ಆಫ್‍ಸೆಟ್ ನಿಯಮ ಪಾಲನೆ ಮಾಡಿಲ್ಲ ಎಂದು ಮಹಾಲೇಖಪಾಲರ(ಸಿಎಜಿ) ವರದಿ ಉಲ್ಲೇಖಿಸಿತ್ತು. ಸಂಸತ್ತಿನಲ್ಲಿ ಸಿಎಜಿ ವರದಿ ಮಂಡನೆಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈಗ ರಕ್ಷಣಾ ಖರೀದಿ ನಿಯಮಗಳಿಗೆ ಬದಲಾವಣೆ ಮಾಡಿದೆ.

    ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ವಿಶೇಷ ಕಾರ್ಯದರ್ಶಿ ಮತ್ತು ಮಹಾನಿರ್ದೇಶಕ (ಸ್ವಾಧೀನ) ಅಪೂರ್ವ ಚಂದ್ರ ಅವರು, ನಾವು ಆಫ್‌ಸೆಟ್ ಮಾರ್ಗಸೂಚಿಗಳಲ್ಲಿ ಬದಲಾವಣೆಗಳನ್ನು ಮಾಡಿದ್ದೇವೆ. ಈಗ ಸರ್ಕಾರದಿಂದ ಸರಕಾರದ ನಡುವೆ ಮತ್ತು ಒಂದೇ ಕಂಪನಿಯಿಂದ ರಕ್ಷಣಾ ಸಾಮಾಗ್ರಿ ಖರೀದಿ ವೇಳೆ ಆಫ್‌ಸೆಟ್‌ ನಿಯಮಗಳು ಇರುವುದಿಲ್ಲ ಎಂದು ಎಂದು ತಿಳಿಸಿದ್ದಾರೆ.

    ಈ ನಿಯಮಗಳು ಖರೀದಿಗೆ ಅಡ್ಡಿಯಾಗುತ್ತದೆ ಮತ್ತು ಯಾವುದೇ ಉದ್ದೇಶವನ್ನು ಸಾಧಿಸುತ್ತಿಲ್ಲ. ಹೀಗಾಗಿ ನಿಯಮವನ್ನು ಬದಲಾವಣೆ ಮಾಡಲಾಗಿ ಎಂದು ಸರ್ಕಾರ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಇದನ್ನೂ ಓದಿ: ರಫೇಲ್ ತೀರ್ಪಿನಲ್ಲಿ ಸಿಎಜಿ ಉಲ್ಲೇಖ: ತಿದ್ದುಪಡಿಗಾಗಿ ಕೇಂದ್ರದಿಂದ ಅಫಿಡವಿಟ್

    ರಕ್ಷಣಾ ಖರೀದಿ ವೇಳೆ ವಿದೇಶಿ ಕಂಪನಿಗಳೊಂದಿಗೆ ಆಫ್‌ಸೆಟ್‌ ನೀತಿಯನ್ನು 2005ರಲ್ಲಿ ಭಾರತ ಸರ್ಕಾರ ಜಾರಿಗೆ ತಂದಿದೆ. 300 ಕೋಟಿ ರೂ.ಗೂ ಅಧಿಕ ಮೊತ್ತದ ರಕ್ಷಣಾ ವಸ್ತುಗಳ ಖರೀದಿಯ ವೇಳೆ ವಿದೇಶಿ ಕಂಪನಿ ಕನಿಷ್ಟ ಶೇ.30 ರಷ್ಟು ಹೂಡಿಕೆಯನ್ನು ಭಾರತದಲ್ಲಿ ಮಾಡಬೇಕು ಮತ್ತು ತಂತ್ರಜ್ಞಾನವನ್ನು ವರ್ಗಾವಣೆ ಮಾಡಬೇಕು ಎಂಬ ನಿಯಮ ವಿಧಿಸಲಾಗಿತ್ತು.

    ದೇಶೀಯವಾಗಿ ರಕ್ಷಣಾ ಸಲಕರಣೆಗೆ ಉತ್ಪಾದನೆಗೆ ಉತ್ತೇಜನ ನೀಡಲು ಈ ನಿಯಮವನ್ನು ತರಲಾಗಿತ್ತು. ರಫೇಲ್‌ ಖರೀದಿಯಲ್ಲಿ ಆಫ್‌ಸೆಟ್‌ ನಿಯಮವನ್ನು ಶೇ.50ರಷ್ಟುಎಂದು ನಿಗದಿ ಮಾಡಲಾಗಿತ್ತು.

  • 114 ಯುದ್ಧ ವಿಮಾನಗಳ ಖರೀದಿಗೆ ಸಿದ್ಧತೆ-ವಿಶ್ವದಲ್ಲೇ ಬೃಹತ್ ಡೀಲ್‍ಗೆ ಮುಂದಾದ ಭಾರತ

    114 ಯುದ್ಧ ವಿಮಾನಗಳ ಖರೀದಿಗೆ ಸಿದ್ಧತೆ-ವಿಶ್ವದಲ್ಲೇ ಬೃಹತ್ ಡೀಲ್‍ಗೆ ಮುಂದಾದ ಭಾರತ

    ನವದೆಹಲಿ: ಯುದ್ಧ ವಿಮಾನ ಖರೀದಿಸುವ ನಿಟ್ಟಿನಲ್ಲಿ ಭಾರತ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, 114 ಯುದ್ಧ ವಿಮಾನಗಳ ಖರೀದಿಗೆ ಮುಂದಾಗಿದೆ. ಈ ಮೂಲಕ ವಿಶ್ವದಲ್ಲೇ ಅತಿ ದೊಡ್ಡ ಡೀಲ್‍ಗೆ ಭಾರತ ಮುಂದಾಗಿದೆ.

    114 ವಿಮಾನಗಳನ್ನು ಖರೀದಿಸುವ ಕುರಿತು ಈಗಾಗಲೇ ಬಿಡ್ಡಿಂಗ್ ಆಹ್ವಾನಿಸಲು ಸಿದ್ಧತೆ ಮಾಡಿಕೊಂಡಿದ್ದು, ಇದು ವಿಶ್ವದಲ್ಲೇ ಬೃಹತ್ ಡೀಲ್ ಆಗಿದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಹಳೆಯ ಯುದ್ಧ ವಿಮಾನಗಳನ್ನು ಬದಲಿಸುವುದು ಹಾಗೂ ಹೊಸದಾಗಿ ಹೆಚ್ಚು ವಿಮಾನಗಳನ್ನು ಖರೀದಿಸುವ ಮೂಲಕ ದೇಶದ ಸಶಸ್ತ್ರ ಪಡೆಗಳ ಸಾಮಥ್ರ್ಯವನ್ನು ಹೆಚ್ಚಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

    ಈ ಬೃಹತ್ ಡೀಲ್‍ನ ಬೆಲೆ ಸುಮಾರು 15 ಬಿಲಿಯನ್ ಯುಎಸ್ ಡಾಲರ್‍ಗಿಂತ ಹೆಚ್ಚಾಗಿದೆ. ಇದಕ್ಕಾಗಿ ಅಧಿಕಾರಿಗಳು ವಿವಿಧ ತಯಾರಿಸಿ ನಡೆಸಿದ್ದಾರೆ. ಬೋಯಿಂಗ್ ಕಂ., ಲಾಕ್‍ಹೀಡ್ ಮಾರ್ಟೀನ್ ಕಾರ್ಪೋರೇಷನ್ ಹಾಗೂ ಸ್ವೀಡನ್‍ನ ಸಾಬ್ ಎಬಿ ಸೇರಿದಂತೆ ವಿವಿಧ ಪ್ರಮುಖ ಯುದ್ಧ ನೌಕೆಗಳ ಉತ್ಪಾದಕರನ್ನು ರಕ್ಷಣಾ ಅಧಿಕಾರಿಗಳು ಸೆಳೆಯುತ್ತಿದ್ದಾರೆ. ಇವುಗಳಲ್ಲಿ ಶೇ.85ರಷ್ಟು ಉತ್ಪಾದನೆ ಭಾರತದಲ್ಲೇ ಆಗಬೇಕು ಎಂದು ಕಳೆದ ವರ್ಷವೇ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

    ದೇಶದ ರಕ್ಷಣಾ ಪಡೆಗಳನ್ನು ಅಧುನಿಕರಣಗೊಳಿಸುವುದು ಪ್ರಧಾನಿ ಮೋದಿ ಅವರಿಗೆ ಸವಾಲಾಗಿ ಪರಿಣಮಿಸಿದ್ದು, ನೆರೆಯ ಚೀನಾ ಹಾಗೂ ಪಾಕಿಸ್ತಾನಗಳಿಂದ ಬೆದರಿಕೆ ಎದುರಾದರೂ ಮೊದಲ ಅವಧಿಯಲ್ಲಿ ಯಾವುದೇ ಹೊಸ ಪ್ರಮುಖ ಶಸ್ತ್ರಾಸ್ತ್ರ ಒಪ್ಪಂದಗಳಿಗೆ ಸಹಿ ಹಾಕಲಿಲ್ಲ. ಇತ್ತೀಚೆಗೆ ಸೋವಿಯತ್ ನಿರ್ಮಿತ ಭಾರತ ಹಳೆಯ ಮಿಗ್-21 ಯುದ್ಧ ವಿಮಾನ ಪಾಕಿಸ್ತಾನದ ಅಧುನಿಕ ಎಫ್-16 ಯುದ್ಧ ವಿಮಾನವನ್ನೇ ಹೊಡೆದುರುಳಿಸಿತ್ತು.

    ಖರೀಸುವ ಪ್ರಕ್ರಿಯೆ ಪ್ರಾರಂಭ
    ವಿವಿಧ ಯುದ್ಧ ವಿಮಾನಗಳ ಉತ್ಪಾದಕರಿಂದ ಬಿಡ್ಡಿಂಗ್ ಆಹ್ವಾನಿಸಲು ಈಗಾಗಲೇ ಭಾರತೀಯ ವಾಯು ಸೇನೆಯ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಕಿರಿಯ ರಕ್ಷಣಾ ಸಚಿವ ಶ್ರೀಪಾದ್ ನಾಯಕ್ ಅವರು ಸಂಸತ್‍ನಲ್ಲಿ ಪ್ರಸ್ತಾಪಿಸಿದ್ದು, ಟ್ಯಾಂಕ್‍ಗಳು, ಶಸ್ತ್ರಸಜ್ಜಿತ ವಾಹನಗಳನ್ನು ಖರೀದಿಸಲು ದಾಖಲೆಗಳನ್ನು ಸಿದ್ಧಪಡಿಸುತ್ತಿದ್ದು, ವಿದೇಶಿ ಹಡಗು ನಿರ್ಮಾಣ ಮಾಡುವವರಿಂದ ಭಾರತದಲ್ಲಿ ಜಲಾಂತರ್ಗಾಮಿ ನೌಕೆಗಳನ್ನು ತಯಾರಿಸಲು ಕೇಳಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಹಿಂದೂ ಮಹಾಸಾಗರ ಪ್ರದೇಶದಲ್ಲಿ ಕಡಲ ಗಡಿಯ ಭದ್ರತೆ ಹೆಚ್ಚಿಸಿಕೊಳ್ಳುವ ದೃಷ್ಟಿಯಿಂದ ಭಾರತ ನೌಕಾಪಡೆ ಹಾಗೂ ಕರಾವಳಿ ಕಾವಲುಗಾರರಿಗೆ ಯುದ್ಧ ನೌಕೆಗಳು ಹಾಗೂ ಹಡಗುಗಳನ್ನು ಖರೀದಿಸಲು ಬಿಡ್ ಕರೆಯಲಾಗಿದೆ. 150(2.2ಬಿಲಿಯನ್ ಡಾಲರ್) ಬಿಲಿಯನ್ ಮೌಲ್ಯದ 6 ಕ್ಷಿಪಣಿ ಯುದ್ಧ ನೌಕೆಗಳು ಹಾಗೂ ಇತರ ಸಣ್ಣ ಹಡಗುಗಳ ನಿರ್ಮಾಣಕ್ಕೆ ಮುಂದಾಗಿದೆ. ಈ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಪ್ರಧಾನಿ ಮೋದಿ ಆಡಳಿತ ಸೋಮವಾರ 7 ಶಿಪ್‍ಯಾರ್ಡ್ ಗಳಿಗೆ ತಿಳಿಸಿದೆ ಎಂದು ನಾಯಕ್ ತಿಳಿದ್ದಾರೆ.

    ಭಾರತೀಯ ವಾಯು ಸೇನೆ ಹಾಗೂ ನೌಕಾಪಡೆಗೆ ಒಟ್ಟು 400 ಸಿಂಗಲ್ ಹಾಗೂ ಡಬಲ್ ಎಂಜಿನ್ ಯುದ್ಧ ವಿಮಾನಗಳ ಅಗತ್ಯವಿದೆ ಎಂದು ಸರ್ಕಾರ ತಿಳಿಸಿದೆ.

    ಬೋಯಿಂಗ್‍ಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಡೆಸುವ ಹಿಂದುಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್‍ಎಎಲ್) ಹಾಗೂ ಮಹೀಂದ್ರಾ ಡಿಫೆನ್ಸ್ ಸಿಸ್ಟಮ್ಸ್ ಲಿ., ಫೈಟರ್ ಜೆಟ್‍ಗಳ ಖರೀದಿಗೆ ಎಫ್/ಎ-18, ಲಾಕ್‍ಹೀಡ್ ತನ್ನ ಎಫ್-21 ಜೆಟ್‍ಗಳಿಗಾಗಿ ಟಾಟಾ ಗ್ರೂಪ್‍ನೊಂದಿಗೆ ಜಂಟಿಯಾಗಿ ಬಿಡ್ ಮಾಡಲಿದೆ. ಸಾಬ್ ತನ್ನ ಗ್ರಪೆನ್ ಜೆಟ್‍ಗಳನ್ನು ತಯಾರಿಸಲು ಗೌತಮ್ ಅದಾನಿಯೊಂದಿಗೆ ಕೈ ಜೋಡಿಸಲಿದೆ.

    2015ರಲ್ಲಿ 11 ಬಿಲಿಯನ್ ಯುಎಸ್ ಡಾಲರ್ ಮೌಲ್ಯದ 126 ರಫೇಲ್ ಯುದ್ಧ ವಿಮಾನಗಳನ್ನು ಡಸಾಲ್ಟ್ ಏವಿಯೇಷನ್‍ನೊಂದಿಗಿನ ಆದೇಶವನ್ನು ರದ್ದುಗೊಳಿಸಿದ ನಂತರ ಮತ್ತೆ ರಫೇಲ್ ಖರೀದಿಸಲು ಒಂದು ದಶಕವೇ ಬೇಕಾಯಿತು. ಕಳೆದ ಬಾರಿಯ ಮೋದಿ ಸರ್ಕಾರದ ಆಡಳಿತಾವಧಿಯಲ್ಲಿ 36 ಜೆಟ್‍ಗಳನ್ನು ಪ್ರತ್ಯೇಕವಾಗಿ ಖರೀದಿಸಲಾಯಿತು. ಆದರೆ, ಈ ಬಾರಿಯ ಟೆಂಡರ್‍ನಲ್ಲಿ ಆಯ್ಕೆಯಾದವರು ಒಪ್ಪಂದ ಮಾಡಿಕೊಂಡ ಮೂರು ವರ್ಷಗಳಲ್ಲಿ ಮೊದಲ ಜೆಟ್‍ನಲ್ಲಿ ಹಸ್ತಾಂತರಿಸಬೇಕು ಎಂಬ ನಿಯಮವನ್ನು ಜಾರಿಗೆ ತರಲಾಗಿದೆ.