Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k

Join our Whatsapp group by clicking the below link
https://chat.whatsapp.com/E6YVEDajTzH06LOh77r25k

ಮಂಗಳೂರು: ಹಾವು ಹಿಡಿದು ರಕ್ಷಣೆ ಮಾಡುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ನಿವಾಸಿ ಸ್ನೇಕ್ ಮುಸ್ತ ಹಾವು ಹಿಡಿಯುವ ವೇಳೆ ಹಾವು ಕಡಿತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಎಂ.ಆರ್. ಮುಸ್ತಾಫ ಸಾವನ್ನಪಿರುವ ವ್ಯಕ್ತಿಯಾಗಿದ್ದಾರೆ. ಇವರು ಉಪ್ಪಿನಂಗಡಿಯ 34 ನೆಕ್ಕಿಲಾಡಿ ಗ್ರಾಮದ ಬೊಳಂತಿಲ ಹೊಸ ಕಾಲನಿ ನಿವಾಸಿಯಾಗಿದ್ದಾರೆ. ಎಂ.ಆರ್. ಮುಸ್ತಾಫ ವೃತ್ತಿಯಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದು, ವಿಷಕಾರಿ ಹಾವುಗಳನ್ನು ಹಿಡಿದು ರಕ್ಷಿಸಿ ಕಾಡಿಗೆ ಬಿಡುವುದನ್ನು ಹವ್ಯಾಸವನ್ನಾಗಿ ಮಾಡಿಕೊಂಡಿದ್ದರು.
ಸ್ಥಳೀಯವಾಗಿ ಸ್ನೇಕ್ ಮುಸ್ತಾ ಎಂದೇ ಖ್ಯಾತಿಯಾಗಿದ್ದ ಮುಸ್ತಾಫರವರಿಗೆ ಬೆಳ್ತಂಗಡಿ ತಾಲೂಕಿನ ನೇಜಿಕಾರಿನಲ್ಲಿ ಮನೆಯೊಂದಕ್ಕೆ ನಾಗರಹಾವು ಬಂತೆಂದು ಕರೆ ಬಂದಿತ್ತು. ಅದನ್ನು ಹಿಡಿದು ರಕ್ಷಿಸಲು ಅಲ್ಲಿಗೆ ತೆರಳಿದ್ದರು. ಹಾವು ಹಿಡಿಯುತ್ತಿದ್ದ ಸಂದರ್ಭ ಇವರ ಕೈಗೆ ಹಾವು ಕಚ್ಚಿದ್ದು, ತೀವ್ರ ಅಸ್ವಸ್ಥಗೊಂಡ ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿಗೆ ಕರೆದೊಯ್ಯುವ ವೇಳೆ ಹಾದಿ ಮಧ್ಯೆ ಇವರು ಮೃತಪಟ್ಟಿದ್ದಾರೆ.

ಹಾವು ಹಿಡಿಯುವುದರಲ್ಲಿ ನಿಪುಣತೆಯನ್ನು ಹೊಂದಿದ್ದ ಇವರು ಸುಮಾರು ಸಾವಿರಕ್ಕೂ ಅಧಿಕ ಹಾವುಗಳನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದು, ಇದಕ್ಕಾಗಿ ಹಲವು ಸಂಘ- ಸಂಸ್ಥೆಗಳು ಇವರನ್ನು ಗುರುತಿಸಿ ಗೌರವಿಸಿವೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮುಸ್ತಾಫ ಸಾವನ್ನಪ್ಪುವ ಕೆಲವೇ ಗಂಟೆಗಳ ಮೊದಲು ತನ್ನ ವಾಟ್ಸಪ್ ಸ್ಟೇಟಸ್ನಲ್ಲಿ ಮೃತದೇಹದ ಫೋಟೋcವೊಂದನ್ನು ಹಾಕಿ ಖಂಡಿತವಾಗಿಯೂ ತಾವು ಮರಣ ಹೊಂದುವಿರಿ ಮತ್ತು ಅವರೂ ಮರಣ ಹೊಂದುವರು ಎಂದು ಫೋಸ್ಟ್ ಮಾಡಿದ್ದು ಇದೀಗ ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಸ್ಥಳದಲ್ಲಿದ್ದ ಭಜರಂಗದಳ ಕಾರ್ಯಕರ್ತರು ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಾಗುಂಡಿ ಬಳಿ ನಡೆದಿದೆ.
ಎನ್.ಆರ್.ಪುರ ತಾಲೂಕಿನ ಮಾಗುಂಡಿ ಗ್ರಾಮದ ನಿವಾಸಿ ಸಲಾಂ ಅವರ ಕಾರು ಚಾಲಕನ ನಿಯಂತ್ರಣ ತಪ್ಪಿ ಸುಬ್ಬೇಗೌಡ ಎಂಬವರ ಮನೆಯ ಬಳಿ ಮಗುಚಿ ಬಿದ್ದಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಗಂಡ-ಹೆಂಡತಿ ಹಾಗೂ ಇಬ್ಬರು ಮಕ್ಕಳು ಇದ್ದರು ಎಂದು ತಿಳಿದು ಬಂದಿದೆ. ಕಾರು ಮಗುಚಿ ಬೀಳುತ್ತಿದ್ದಂತೆ ಕಾರಿನಲ್ಲಿದ್ದವರು ಕೂಗಾಡಿದ್ದಾರೆ. ಸ್ಥಳದಲ್ಲಿದ್ದ ಭಜರಂಗದಳ ಯುವಕರು ಕಾರನ್ನ ಎತ್ತಿ ನಿಲ್ಲಿಸಿ ಗಾಯಳುಗಳನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಭಜರಂಗದಳದ ಜಿಲ್ಲಾ ಸಂಚಾಲಕ ಶಶಾಂಕ್ ಹೇರೂರು ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಮ್ಮ ಮೊದಲ ಆದ್ಯತೆ ಮಾನವೀಯತೆ. ಏಕೆಂದರೆ ನಮ್ಮ ಧರ್ಮ ನಮಗೆ ಶಾಂತಿ ಹಾಗೂ ಮಾನವೀಯ ಮೌಲ್ಯಗಳನ್ನ ಕಲಿಸಿಕೊಟ್ಟಿದೆ ಎಂದು ಸಂಘಟನೆಯ ಕಾರ್ಯಕರ್ತರೊಬ್ಬರು ಹೇಳಿದರು.

ತಿರುವನಂತಪುರಂ: ಕೇರಳ ವಿಮಾನ ದುರಂತದ ವೇಳೆ ರಕ್ಷಣಾ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದ 22 ಅಧಿಕಾರಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಮಲಪ್ಪುರಂ ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಕೊರೊನಾ ನಡುವೆಯೂ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಭಾರತಕ್ಕೆ ಕರೆತರುತ್ತಿತ್ತು. ಕೇಂದ್ರ ಸರ್ಕಾರದ ವಂದೇ ಭಾರತ್ ಮಿಷನ್ ಅಡಿಯಲ್ಲಿ ದುಬೈನಿಂದ 184 ಪ್ರಯಾಣಿಕರನ್ನು ಕೇರಳಗೆ ಬಂದಿದ್ದರು. ಆದರೆ ಪ್ರತಿಕೂಲ ಹವಾಮಾನದ ಸಮಸ್ಯೆಯಿಂದ ವಿಮಾನ 35 ಅಡಿ ಕಂದಕಕ್ಕೆ ಜಾರಿ ಬಿದ್ದಿತ್ತು. ಪರಿಣಾಮ ಇಬ್ಬರು ಪೈಲಟ್ಗಳು ಸೇರಿ 18 ಜನರು ಸಾವನ್ನಪ್ಪಿದ್ದರು.

ಕಂದಕಕ್ಕೆ ಬಿದ್ದಿದ್ದ ವಿಮಾನದಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರು ಮತ್ತು ಸ್ಥಳದಲ್ಲಿದ್ದ ಹಲವು ಅಧಿಕಾರಿಗಳು ಬಂದು ರಕ್ಷಣೆ ಮಾಡಿದ್ದರು. ಇದಾದ ನಂತರ ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದ್ದ ಎಲ್ಲ ಅಧಿಕಾರಿಗಳನ್ನು ಕ್ವಾರಂಟೈನ್ ಮಾಡಲಾಗಿತ್ತು. ಈಗ ಇವರ ಪೈಕಿ 22 ಮಂದಿ ಅಧಿಕಾರಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ಈ ಎಲ್ಲ ಅಧಿಕಾರಿಗಳು 4 ಗಂಟೆಗಳ ಕಾಲ ರಕ್ಷಣಾ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

ಅಗಸ್ಟ್ 7ರಂದು ಸಂಜೆ 7.45ರ ಸುಮಾರಿಗೆ ದುಬೈನಿಂದ ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೋಯಿಕ್ಕೋಡ್ನ ಕರಿಪುರದಲ್ಲಿ ಲ್ಯಾಂಡಿಗೆ ವೇಳೆ ರನ್ ವೇಯಲ್ಲಿ ಜಾರಿ ದುರಂತಕ್ಕೀಡಾಗಿತ್ತು. ಲ್ಯಾಂಡಿಂಗ್ ವೇಳೆ ಬೆಂಕಿ ಹೊತ್ತಿಕೊಂಡಿಲ್ಲ. ವಿಮಾನದಲ್ಲಿ 184 ಮಂದಿ ಪ್ರಯಾಣಿಕರಿದ್ದರು. 10 ಮಂದಿ ಮಕ್ಕಳು, ಇಬ್ಬರು ಪೈಲಟ್ಗಳು ಹಾಗೂ ಐವರು ಕ್ಯಾಬಿನ್ ಸಿಬ್ಬಂದಿ ಇದ್ದರು.

ದುಬೈಯಿಂದ 184 ಪ್ರಯಾಣಿಕರನ್ನು ಕರೆತರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ಪೈಲಟ್ ದೀಪಕ್ ವಸಂತ ಸಾಠೆ ಎರಡು ಬಾರಿ ವಿಮಾನ ನಿಲ್ದಾಣಕ್ಕೆ ಸುತ್ತು ಹೊಡೆಸಿದ್ದರು. ಆದರೆ ಪ್ರತಿಕೂಲ ಹವಾಮಾನದ ಸಮಸ್ಯೆಯ ಮಧ್ಯೆಯೂ ವಿಮಾನವನ್ನು ಟೇಬಲ್ ಟಾಪ್ ರನ್ವೇಯಲ್ಲಿ ಇಳಿಸಿದರೂ ಅದು 35 ಅಡಿ ಕಂದಕಕ್ಕೆ ಜಾರಿ ಬಿದ್ದು ಗೋಡೆಗೆ ಡಿಕ್ಕಿ ಹೊಡೆದು ಇಬ್ಭಾಗವಾಗಿತ್ತು. ಘಟನೆಯಲ್ಲಿ ಇಬ್ಬರು ಪೈಲಟ್ ಗಳು ಸೇರಿ 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದರು. ಜೊತೆಗೆ 150ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು.

ನವದೆಹಲಿ: ಆತ್ಮ ರಕ್ಷಣೆಗಾಗಿ ಸಿಡಿಎಸ್(ಚೀಫ್ ಡಿಫೆನ್ಸ್ ಸ್ಟಾಫ್) ಬಿಪಿನ್ ರಾವತ್ ಮತ್ತು ಮೂರು ಸೇನೆಯ ಮುಖ್ಯಸ್ಥರು ಆತ್ಮರಕ್ಷಣೆಗಾಗಿ ಚೀನಾ ಗಡಿಯಲ್ಲಿ ಗುಂಡು ಹಾರಿಸಲು ಅನುಮತಿ ನೀಡಿದ್ದಾರೆ.
ಕಳೆದ ಸೋಮವಾರ ರಾತ್ರಿ ಚೀನಿ ಸೈನಿಕರು ಮೊಳೆಗಳನ್ನು ವೆಲ್ಡ್ ಮಾಡಿದ ಬೇಸ್ ಬಾಲ್ ಬ್ಯಾಟ್ನಂತಿರುವ ಕಬ್ಬಿಣದ ರಾಡ್ಗಳಿಂದ ಭಾರತೀಯ ಸೇನೆಯ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಸೈನಿಕರಿಗೆ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಿದೆ.

ಈ ಸಂಬಂಧ ನಿವೃತ್ತ ಮೇಜರ್ ಜನರಲ್ (ಡಾ.) ಜಿಡಿ ಬಕ್ಷಿ ಎಸ್ ಎಂ ಟ್ವೀಟ್ ಮಾಡಿ ಧನ್ಯವಾದ ಹೇಳಿದ್ದಾರೆ. ಓ ದೇವರೇ ಧನ್ಯವಾದ. ಸೇನಾ ಪಡೆಗಳ ಮುಖ್ಯಸ್ಥರಾದ ಸಿಡಿಎಸ್ ಮತ್ತು ಸೇನೆಯ ಮೂರೂ ವಿಭಾಗಗಳ ಮುಖ್ಯಸ್ಥರು ಆತ್ಮ ರಕ್ಷಣೆಯ ಸಮಯದಲ್ಲಿ ನಮ್ಮ ಯೋಧರು ಗುಂಡು ಹಾರಿಸಬಹುದು ಎಂದು ಅಧಿಕಾರ ನೀಡಿದ್ದಾರೆ. ಗಡಿಯಲ್ಲಿ ಗುಂಡು ಹಾರಿಸಕೂಡದು ಎಂಬ 1996ರ ಒಪ್ಪಂದವನ್ನು ಚೀನಾ ಸೇನೆಯು ಉಲ್ಲಂಘಿಸಿ ಚೂಪಾದ ಆಯುಧಗಳನ್ನು ಬಳಸಿದೆ. ನಾವು ಶಿಲಾಯುಗಕ್ಕೆ ಹೋಗುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
Thank God the CDS, and three service chiefs have decided that our boys will now be authorised to open fire in self defense. The Chinese Have destroyed the 1996 accord of no firing on border by using lethal weapons like clubs knives etc. We cant go back to the stone age
— Maj Gen (Dr)GD Bakshi SM,VSM(retd) (@GeneralBakshi) June 22, 2020
ನಾವು ಹೆದರಲ್ಲ: ಭಾರತೀಯ ಸೇನೆಗೆ ಸರ್ಕಾರ ಪೂರ್ಣ ಸ್ವಾತಂತ್ರ್ಯ ನೀಡಿದ ಬೆನ್ನಲ್ಲೇ ಚೀನಾ ಸರ್ಕಾರದ ಮುಖವಾಣಿ ಗ್ಲೋಬಲ್ ಟೈಮ್ಸ್ ಇದಕ್ಕೆ ನಾವು ಹೆದರುವುದಿಲ್ಲ ಎಂದು ತಿಳಿಸಿದೆ. ಸೇನೆಗೆ ಗುಂಡು ಹಾರಿಸಲು ಅಧಿಕಾರ ನೀಡಲಾಗಿದೆ. ಭಾರತ ಚೀನಾ ಜೊತೆ ಯುದ್ಧ ಮಾಡಲು ನಿರ್ಧರಿಸಿದ್ಯಾ? ಭಾರತ ಗುಂಡಿನ ದಾಳಿ ನಡೆಸಲು ಆರಂಭಿಸಿದರೆ ನಾವು ಗುಂಡಿನ ದಾಳಿ ನಡೆಸುತ್ತೇವೆ. ನಾವು ಯಾವುದಕ್ಕೂ ಹೆದರುವುದಿಲ್ಲ ಎಂದು ಟ್ವೀಟ್ ಮಾಡಿದೆ.
Allowing its army to use firearms, is India determined for a war with China? If the Indian side really opens fire, Chinese side will have no hesitation, and the result possibly is that the China-India border will have another 30 years of peace: Chinese expert pic.twitter.com/zjQeixQxIv
— GT Opinion (@GtOpinion) June 22, 2020
ಒಪ್ಪಂದ ಮಾಡಿಕೊಂಡಿದ್ದು ಯಾಕೆ?
ಭಾರತ ಮತ್ತು ಚೀನಾ ನಡುವೆ ಅಂತಾರಾಷ್ಟ್ರೀಯ ಗಡಿ ರೇಖೆ ಇಲ್ಲದ ಕಾರಣ ಗಡಿಯಲ್ಲಿ ಈ ರೀತಿ ಕಿತ್ತಾಟಗಳು ನಡೆಯುತಿತ್ತು. ಎರಡು ದೇಶಗಳ ಗಡಿಯನ್ನು ವಾಸ್ತವ ಗಡಿ ರೇಖೆಯಿಂದ(ಎಲ್ಎಸಿ – ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ಗುರುತಿಸಲಾಗಿದೆ. ಆದರೆ ಹಲವು ಭಾಗಗಳಲ್ಲಿ ಭಾರತ ಮತ್ತು ಚೀನಾದ ನಡುವಿನ ಗಡಿಗಳು ನಿರ್ಧಾರವಾಗಿಲ್ಲ. ಹೀಗಾಗಿ ಹಲವು ಬಾರಿ ಎರಡು ಕಡೆಯ ಸೈನಿಕರು ಗಡಿಯಲ್ಲಿ ಪಹರೆ ಕಾಯುತ್ತಿದ್ದಾಗ ಕಿತ್ತಾಟಗಳು ನಡೆಯುತ್ತಿದ್ದವು. ಎರಡು ಕಡೆಯಿಂದಲೂ ಪ್ರತಿರೋಧಗಳು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ 1993, 1996ರಲ್ಲಿ ಭಾರತ ಮತ್ತು ಚೀನಾ ನಡುವೆ ಒಪ್ಪಂದ ನಡೆಯಿತು.

1993ರ ಒಪ್ಪಂದದ ಪ್ರಕಾರ ಎಲ್ಎಸಿ ದಾಟಿ ಯಾರೇ ಒಳಬಂದರೂ ಅವರಿಗೆ ಎಚ್ಚರಿಕೆ ನೀಡಿ ಕಳುಹಿಸಬೇಕು. 1996ರ ಪ್ರಕಾರ ಎಲ್ಎಸಿಯ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಎರಡು ದೇಶಗಳು ಯಾವುದೇ ಸ್ಫೋಟ ನಡೆಸಬಾರದು. ಗುಂಡಿನ ದಾಳಿ ನಡೆಸಕೂಡದು ಎಂಬ ಒಪ್ಪಂದಕ್ಕೆ ಬರಲಾಗಿದೆ. ಹೀಗಾಗಿ ಭಾರತ ಚೀನಾ ಗಡಿಯಲ್ಲಿ ಸೈನಿಕರು ಈ ಒಪ್ಪಂದಕ್ಕೆ ಬದ್ಧವಾಗಿದ್ದಾರೆ. ಆದರೆ ಕಳೆದ ವಾರ ನಡೆದ ಘರ್ಷಣೆಯ ಬಳಿಕ ಭಾರತ ಗಡಿ ಒಪ್ಪಂದ ರದ್ದು ಮಾಡಿದ್ದು ಸರ್ಕಾರ ಭಾರತೀಯ ಸೇನೆಗೆ ಪೂರ್ಣ ಅಧಿಕಾರವನ್ನು ನೀಡಿದೆ.

ಶ್ರೀನಗರ: ಜಮ್ಮುವಿನ ತಾವಿ ನದಿಗೆ ಏಕಾಏಕಿ ನೀರು ಹರಿಸಿದ ಪರಿಣಾಮ ಇಲ್ಲಿನ ಸೇತುವೆ ಬಳಿ ಕುಳಿತಿದ್ದ ನಾಲ್ಕು ಮಂದಿ ಮೀನುಗಾರರು ಅಪಾಯಕ್ಕೆ ಸಿಲುಕಿದ್ದರು. ಈ ಬಗ್ಗೆ ಭಾರತೀಯ ವಾಯು ಸೇನೆಗೆ ಮಾಹಿತಿ ತಿಳಿದು ಸಂತ್ರಸ್ತರನ್ನು ಯೋಧರು ಕೂಡಲೇ ಏರ್ ಲಿಫ್ಟ್ ಮಾಡುವ ಮೂಲಕ ರಕ್ಷಣೆ ಮಾಡಿದ್ದಾರೆ.
ವಾಯು ಸೇನೆಯ ಈ ಸಾಹಸದ ವಿಡಿಯೋ ಇದೀಗ ವೈರಲ್ ಆಗಿದ್ದು, ಯೋಧರ ಕಾರ್ಯವನ್ನು ಎಲ್ಲರು ಹಾಡಿ ಹೊಗಳಿದ್ದಾರೆ. ಉತ್ತರ ಭಾರತದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಮ್ಮುವಿನ ತಾವಿ ನದಿಗೆ ಏಕಾಏಕಿ ನೀರು ಹರಿದು ಬಂದಿದೆ. ಈ ಹಿನ್ನೆಲೆ ತಾವಿ ನದಿಯ ಸೇತುವೆ ಬಳಿ ಕುಳಿತಿದ್ದ ಹಲವರು ಅಪಾಯಕ್ಕೆ ಸಿಲುಕಿದ್ದರು. ಆಗ ಅಲ್ಲಿ ಕರ್ತವ್ಯನಿರತರಾಗಿದ್ದ ಭಾರತೀಯ ಸೇನೆಯ ಯೋಧರು ಕೂಡಲೇ ವಿಚಾರವನ್ನು ನಿಯಂತ್ರಣ ಕೊಠಡಿಗೆ ತಿಳಿಸಿದ್ದಾರೆ. ಈ ಬಗ್ಗೆ ತಿಳಿಯುತ್ತಿದ್ದಂತೆಯೇ ವಾಯು ಸೇನೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಹೆಲಿಕಾಪ್ಟರ್ ರವಾನಿಸಿ ಸಂತ್ರಸ್ತರ ರಕ್ಷಿಸಿದ್ದಾರೆ.
Jammu & Kashmir: People stuck near an under-construction bridge in JAMMU after a sudden increase in water-level of Tawi river. Rescue operation underway. pic.twitter.com/oi4774ffMS
— ANI (@ANI) August 19, 2019
ಸ್ಥಳಕ್ಕೆ ಆಗಮಿಸಿದ ತಂಡ ಹೆಲಿಕಾಪ್ಟರ್ನಲ್ಲಿದ್ದ ಹಗ್ಗದ ಮೂಲಕ ಓರ್ವ ಯೋಧ ಕೆಳಗಡೆ ಇಳಿದು ಅಪಾಯಕ್ಕೆ ಸಿಲುಕಿದ್ದವರಿಗೆ ಹಗ್ಗ ಕಟ್ಟಿ ಅದರ ಮೂಲಕ ಮೇಲಕ್ಕೆ ಕರೆದುಕೊಂಡಿದ್ದಾರೆ.
ಹೀಗೆ ಸೇತುವೆ ಬಳಿ ಇದ್ದ ಎಲ್ಲರನ್ನೂ ಏರ್ ಲಿಫ್ಟ್ ಮೂಲಕ ರಕ್ಷಣೆ ಮಾಡಲಾಗಿದೆ. ಈ ವೇಳೆ ಸೇನೆಯ ಸಾಹಸವನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದ್ದು, ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಜನರನ್ನು ರಕ್ಷಿಸುವ ಸೇನೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
#UPDATE Jammu & Kashmir: Two more persons have been rescued after they got stuck near a bridge in JAMMU following a sudden increase in the water level of Tawi river. pic.twitter.com/JI6oWRtR5B
— ANI (@ANI) August 19, 2019

ಚಿಕ್ಕಬಳ್ಳಾಪುರ: ಮೊದಲ ಮಹಡಿಯ ಮನೆಗೆ ನಾಗರಹಾವಿನ ಮರಿವೊಂದು ಬಂದು ಹೆಡೆಯೆತ್ತಿರುವ ಘಟನೆ ನಡೆದಿದೆ.
ನಗರದ ಟ್ಯಾಂಕ್ ಬಂಡ್ ರಸ್ತೆಯ ಆನಂದ್ ಎಂಬವರ ಮನೆಯ ಮೊದಲ ಮಹಡಿಗೆ ನಾಗರಹಾವೊಂದು ಬಂದಿತ್ತು. ನಂತರ ನಾಗರಹಾವು ಮೆಟ್ಟಿಲುಗಳ ಮುಖಾಂತರ ಎರಡನೇ ಮಹಡಿಯತ್ತ ಹೋಗಿದೆ.
ಮೆಟ್ಟಿಲುಗಳ ಮೇಲಿದ್ದ ಮರಿನಾಗರವನ್ನು ನೋಡಿದ ಮನೆಯವರು ಭಯಗೊಂಡು ಕೂಡಲೇ ಉರಗ ರಕ್ಷಕ ಪ್ರಥ್ವಿರಾಜ್ಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ. ಉರಗರಕ್ಷಕ ಮನೆಗೆ ಬರುವಷ್ಟರಲ್ಲಿ ಮನೆಯ ಮುಂಭಾಗ ಇದ್ದ ಚಪ್ಪಲಿ ಬಾಕ್ಸ್ ಕೆಳಗೆ ನಾಗರಹಾವು ಕುಳಿತಿತ್ತು.
ಮಾಹಿತಿ ತಿಳಿದು ತಕ್ಷಣ ಮನೆಗೆ ಬಂದ ಪ್ರಥ್ವಿರಾಜ್ ನಾಗರಹಾವನ್ನು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ.

ನವದೆಹಲಿ: ದೊಡ್ಡ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಯನ್ನು ಬಲವಂತವಾಗಿ ದೆಹಲಿಯ ರೆಡ್ ಲೈಟ್ ಏರಿಯಾ ಜಿಬಿ ರಸ್ತೆಯಲ್ಲಿರುವ ವೇಶ್ಯಾವಾಟಿಕೆಗೆ ಮಾರಾಟ ಮಾಡಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ.
ರೆಡ್ ಲೈಟ್ ಏರಿಯಾಗೆ ಬಂದ ಗ್ರಾಹಕನೊಬ್ಬನ ಸಹಾಯದಿಂದ ಮಹಿಳೆಯನ್ನು ಅಲ್ಲಿಂದ ರಕ್ಷಣೆ ಮಾಡಲಾಗಿದೆ. ಪ್ರತಿ ದಿನ 15-20 ಮಂದಿ ನನ್ನ ಮೇಲೆ ಬಲವಂತವಾಗಿ ಅತ್ಯಾಚಾರ ನಡೆಸುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ಏನಿದು ಪ್ರಕರಣ?
ಮಹಿಳೆ ಮೂಲತಃ ಪಶ್ಚಿಮ ಬಂಗಾಳದವಳಾಗಿದ್ದು, ಆಕೆ ಕೋಲ್ಕತ್ತಾದಲ್ಲಿ ದೊಡ್ಡ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಆದರೆ ವ್ಯಕ್ತಿಯೊಬ್ಬ ಒಳ್ಳೆಯ ಕೆಲಸ ಕೊಡಿಸುವುದಾಗಿ ಹೇಳಿ ಆಕೆಯನ್ನು ದೆಹಲಿಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಜಿಬಿ ರಸ್ತೆಯಲ್ಲಿ ಆಕೆಯನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಿದ್ದಾನೆ. ನಂತರ ಮಹಿಳೆಯನ್ನು ವೇಶ್ಯಾವಾಟಿಕೆಯಲ್ಲಿದ್ದ ವ್ಯಕ್ತಿಯೊಬ್ಬ ಮಾರಾಟ ಮಾಡಿದ್ದಾನೆ ಎಂದು ವರದಿಯಾಗಿದೆ.
ಒಂದು ದಿನ ಬಂಗಾಲಿ ವ್ಯಕ್ತಿಯೊಬ್ಬ ಗ್ರಾಹಕನಾಗಿ ಮಹಿಳೆ ಬಳಿಗೆ ಬಂದಿದ್ದಾನೆ. ಆಗ ಮಹಿಳೆ ಆತನ ಬಳಿ ಸಹಾಯ ಕೇಳಿದ್ದು, ಗ್ರಾಹಕ ಮಹಿಳೆಗೆ ಸಹಾಯ ಮಾಡಲು ಒಪ್ಪಿಕೊಂಡಿದ್ದಾನೆ. ನಂತರ ಮಹಿಳೆ ತನ್ನ ಸಹೋದರನ ಫೋನ್ ನಂಬರ್ ಆತನಿಗೆ ಕೊಟ್ಟಿದ್ದಾಳೆ. ಗ್ರಾಹಕ ಸಹೋದರನಿಗೆ ಫೋನ್ ಮಾಡಿ ನಡೆದಿರುವ ಘಟನೆಯ ಬಗ್ಗೆ ವಿವರಿಸಿದ್ದಾನೆ. ತಕ್ಷಣ ಸಹೋದರ ಪಶ್ಚಿಮ ಬಂಗಾಳದಿಂದ ದೆಹಲಿಗೆ ಬಂದು ಆತನೂ ಗ್ರಾಹಕನಾಗಿ ವೇಶ್ಯಾಗೃಹಕ್ಕೆ ಹೋಗಿ ಸಹೋದರಿಯನ್ನು ಭೇಟಿ ಮಾಡಿದ್ದಾನೆ.

ಸಹೋದರಿಯ ಜೊತೆ ಮಾತನಾಡಿ ನಂತರ ಮಹಿಳಾ ಆಯೋಗದಲ್ಲಿ ದೂರು ನೀಡಿದ್ದಾರೆ. ದೆಹಲಿ ಮಹಿಳಾ ಆಯೋಗ ಸ್ಥಳೀಯ ಪೊಲೀಸರ ಸಹಾಯದಿಂದ ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಥಳಕ್ಕೆ ಹೋಗಿ ಮಹಿಳೆಯನ್ನು ರಕ್ಷಿಸಿದ್ದಾರೆ. ಸದ್ಯಕ್ಕೆ ದೆಹಲಿ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಮಹಿಳೆಯನ್ನು ರಕ್ಷಣೆ ಮಾಡಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮ್ಯಾನೇಜರ್ನನ್ನು ಬಂಧಿಸಿದ್ದಾರೆ.
ಮಹಿಳೆಯನ್ನು ದೆಹಲಿಯ ಜಬಿ ರಸ್ತೆಯಲ್ಲಿ ಮಾರಾಟ ಮಾಡಿದ್ದರು. ಹೀಗಾಗಿ ಆಕೆ ಕುಟುಂಬದವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಇತ್ತ ಆಕೆಯ ಸಹೋದರ ಕೂಡ ಕೋಲ್ಕತ್ತಾದಲ್ಲಿ ನಾಪತ್ತೆ ದೂರನ್ನು ದಾಖಲಿಸಿದ್ದರು. ಜೂನ್ 8ರಂದು ಮಹಿಳೆಯನ್ನು ದೆಹಲಿಗೆ ಕರೆತರಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ: ಮಹಾಮಳೆಗೆ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ. ಬಿಡದೆ ಸುರಿಯುತ್ತಿರುವ ಮಳೆಯಿಂದ ರಕ್ಷಣೆ ಪಡೆಯಲು ಜನರು ನಿಂತಿರುವ ಲಾರಿ ಕೆಳಗೆ ಕಳಿತುಕೊಳ್ಳುವ ಪರಿಸ್ಥಿತಿ ಬಂದಿದೆ.
ಬೆಳಗಾವಿ ಜಿಲ್ಲೆಯ ಸದಲಗಾ ಗ್ರಾಮ ಸಂಪೂರ್ಣ ಜಲಾವೃತವಾಗಿದ್ದು, ಎನ್.ಡಿ.ಆರ್.ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ) ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ನಡುವೆಯೂ 10ಕ್ಕೂ ಹೆಚ್ಚು ಜನರ ರಕ್ಷಣೆ ಮಾಡಿದ್ದಾರೆ. ಇದರಲ್ಲಿ ಪುಟ್ಟ ಕಂದಮ್ಮಗಳು ಇದ್ದು, ಮಕ್ಕಳ ಜೊತೆ ದಡ ಸೇರಿದ ತಾಯಂದಿರು ಕಣ್ಣೀರು ಹಾಕಿದ್ದಾರೆ.

ಕೃಷ್ಣೆಯ ಆರ್ಭಟಕ್ಕೆ ಕೇವಲ ಮನುಷ್ಯ ಸಂಕುಲ ಮಾತ್ರ ನಲುಗಿ ಹೋಗಿಲ್ಲ. ಸಾಕಷ್ಟು ಮೂಕ ಪ್ರಾಣಿಗಳು ಕೂಡ ನೆರೆಯಲ್ಲಿ ತಮ್ಮ ನೆಲೆ ಕಂಡುಕೊಳ್ಳಲು ಹರಸಾಹಸ ಪಡುತ್ತಿವೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ಪ್ರವಾಹದಲ್ಲಿ ಸಿಲುಕಿ ಕಂಗಾಲಾಗಿ ಪ್ರಾಣ ಕಳೆದುಕೊಳ್ಳುವ ಭಯದಲ್ಲಿದ್ದ ಮೊಲವೊಂದನ್ನು ಯುವಕರು ರಕ್ಷಿಸಿ ಅಭಯ ನೀಡಿದ್ದಾರೆ.

ಉತ್ತರ ಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಚಾರಿ ರಸ್ತೆಗಳು ಸಾವಿಗೆ ಆಹ್ವಾನ ನೀಡುತ್ತಿವೆ. ಕಳೆದ 15 ದಿನಗಳಿಂದ ಸುರಿಯುತ್ತಿರುವ ಆಶ್ಲೇಷ ಮಳೆಯ ಹೊಡೆತಕ್ಕೆ, ರಸ್ತೆಗಳ ಅವಷೇಶಗಳು ಮಾತ್ರ ಉಳಿದುಕೊಂಡಿವೆ. ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಂಚರಿಸುವಾಗ ರಸ್ತೆಗಳ ಸ್ಥಿತಿ-ಗತಿ ಬಗ್ಗೆ ಮಾಹಿತಿ ಪಡೆಯದೆ ಮುಂದೆ ಸಾಗಬೇಡಿ ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಬಳ್ಳಾರಿ: ಇಂಧನ ಖಾಲಿಯಾಗಿ ತುರ್ತು ಲ್ಯಾಂಡಿಂಗ್ ಆದ ಹೆಲಿಕಾಪ್ಟರ್ ಅನ್ನು ಸ್ಥಳೀಯರು ಬಸ್ ತಳ್ಳಿದಂತೆ ತಳ್ಳಿರುವ ಘಟನೆ ಸಂಡೂರು ತಾಲೂಕಿನ ಎಸ್.ಆರ್. ಪುರದಲ್ಲಿ ನಡೆದಿದೆ.
ನೆರೆ ಸಂತ್ರಸ್ತರ ರಕ್ಷಣೆಗೆ ನೆರವಾಗಲೆಂದು ಬೆಂಗಳೂರಿನಿಂದ ಬೆಳಗಾವಿ ಕಡೆ ವಾಯುಸೇನೆಯ ಹೆಲಿಕಾಪ್ಟರ್ ಹೊರಟಿತ್ತು. ಮಾರ್ಗ ಮಧ್ಯೆ ಇಂಧನ ಕಡಿಮೆ ಇದೆ ಎನ್ನುವುದು ಪೈಲಟ್ಗೆ ಗೊತ್ತಾಗಿದೆ. ಕೂಡಲೇ ಪೈಲಟ್ ಸುರಕ್ಷಿತವಾಗಿ ಖಾಲಿ ಭೂಮಿಯಲ್ಲಿ ತುರ್ತು ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡಿದ್ದಾರೆ.

ಹೆಲಿಕಾಪ್ಟರ್ ಲ್ಯಾಂಡ್ ಆದ ವಿಚಾರ ತಿಳಿದು ಗ್ರಾಮಸ್ಥರು ತಂಡೋಪತಂಡವಾಗಿ ಸ್ಥಳಕ್ಕೆ ಆಗಮಿಸಿದ್ದಾರೆ. ಈ ವಿಚಾರ ಗೊತ್ತಾಗಿ ಕುಡುತಿನಿ ಪಿಎಸ್ಐ ಮೊಹಮ್ಮದ್ ರಫಿ ನೇತೃತ್ವದಲ್ಲಿ ಪೊಲೀಸರು ಜಿಂದಾಲ್ ಫ್ಯಾಕ್ಟರಿಗೆ ತೆರಳಿ ವೈಮಾನಿಕ ಇಂಧನವನ್ನು ತಂದು ಹೆಲಿಕಾಪ್ಟರಿಗೆ ತುಂಬಿಸಿದ್ದಾರೆ.
ಇಂಧನ ತುಂಬಿಸಿದ್ದರೂ ಹೆಲಿಕಾಪ್ಟರ್ ಮಣ್ಣಿನಲ್ಲಿ ಸ್ವಲ್ಪ ಹೂತು ಹೋಗಿತ್ತು. ಹೀಗಾಗಿ ಗ್ರಾಮಸ್ಥರು ಹೆಲಿಕಾಪ್ಟರ್ ಅನ್ನು ಬಸ್ಸು ತಳ್ಳಿದಂತೆ ದೂಡಿದ್ದಾರೆ. ಬಳಿಕ ಹೆಲಿಕಾಪ್ಟರ್ ಬೆಳಗಾವಿ ಕಡೆ ಪ್ರಯಾಣ ಬೆಳೆಸಿತು. ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಕ್ಕೆ ಹೋಗುವ ಭರದಲ್ಲಿ ಸಿಬ್ಬಂದಿ ಇಂಧನ ಎಷ್ಟಿದೆ ಎನ್ನುವುದನ್ನು ಪರಿಶೀಲನೆ ಮಾಡದ ಪರಿಣಾಮ ಭೂ ಸ್ಪರ್ಶ ಮಾಡಿತ್ತು.