Tag: Defense Force

  • ರಾಷ್ಟ್ರೀಯ ಭದ್ರತಾ ಸಮೂಹಕ್ಕೆ `ಡ್ರೋನ್ ಸಮೂಹ’ ಸೇರ್ಪಡೆ – ಏನಿದರ ವಿಶೇಷತೆ?

    ರಾಷ್ಟ್ರೀಯ ಭದ್ರತಾ ಸಮೂಹಕ್ಕೆ `ಡ್ರೋನ್ ಸಮೂಹ’ ಸೇರ್ಪಡೆ – ಏನಿದರ ವಿಶೇಷತೆ?

    ನವದೆಹಲಿ: ಕೃತಕ ಬುದ್ಧಿಮತ್ತೆ (AI) ತಂತ್ರಾಂಶವೂ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ `ಡ್ರೋನ್‌ಗಳ ಸಮೂಹ’ ವನ್ನು ಸಶಸ್ತ್ರ ಪಡೆಗಳಿಗೆ ಸೇರಿಸಲಾಗುತ್ತಿದೆ.

    ನಿರ್ದಿಷ್ಟ ಗುರಿಯನ್ನು ನಿಖರವಾಗಿ ಗುರುತಿಸಿ, ಧ್ವಂಸ ಮಾಡಲು ಈ ಡ್ರೋನ್‌ಗಳಲ್ಲಿನ ಕೃತಕ ಬುದ್ಧಿಮತ್ತೆ ತಂತ್ರಾಂಶ ನೆರವಾಗಲಿದೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ನಿಶ್ಚಿತಾರ್ಥ ವರನಿಗೆ ಯುವತಿಯ ಅಶ್ಲೀಲ ಫೋಟೋ ಕಳುಹಿಸಿದ ನೆರೆಮನೆಯವ – ವಧು ಆತ್ಮಹತ್ಯೆ

    ಹೆಸರೇ ಹೇಳುವಂತೆ `ಡ್ರೋನ್‌ಗಳ ಸಮೂಹ’ವು ನಿರ್ದಿಷ್ಟ ಸಂಖ್ಯೆಯ ಡ್ರೋನ್‌ಗಳನ್ನು ಒಳಗೊಂಡಿರುತ್ತದೆ. ಈ `ಡ್ರೋನ್ ಸಮೂಹ’ವನ್ನು ಒಂದೇ ಕೇಂದ್ರದಿಂದ ನಿಯಂತ್ರಿಸಲಾಗುತ್ತದೆ. ಯಾವುದೇ ಕಾರ್ಯಾಚರಣೆ ಕೈಗೊಂಡ ಸಂದರ್ಭದಲ್ಲಿ ವಿವಿಧ ಕಾರಣಗಳಿಂದಾಗಿ ಕೆಲವು ಡ್ರೋನ್‌ಗಳು ಕಾರ್ಯ ನಿಲ್ಲಿಸಿದರೂ, `ಸಮೂಹ’ವು ತನ್ನ ಕಾರ್ಯವನ್ನು ಪೂರ್ಣಗೊಳಿಸಿ ಹಿಂದಿರುಗುತ್ತದೆ’ ಎಂದು ಸೇನೆಯ ಸಾರ್ವಜನಿಕ ಮಾಹಿತಿ ವಿಭಾಗದ ಹೆಚ್ಚುವರಿ ಮಹಾನಿರ್ದೇಶನಾಲಯ ಇಂದು ಟ್ವೀಟ್ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ಸಿಡಿಎಸ್ ಹುದ್ದೆಗೆ ಕಾರ್ಯನಿರತ, ನಿವೃತ್ತ ಎರಡೂ ಅಧಿಕಾರಿಗಳ ಪರಿಗಣನೆ

    ಸಿಡಿಎಸ್ ಹುದ್ದೆಗೆ ಕಾರ್ಯನಿರತ, ನಿವೃತ್ತ ಎರಡೂ ಅಧಿಕಾರಿಗಳ ಪರಿಗಣನೆ

    ನವದೆಹಲಿ: ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಹುದ್ದೆಗೆ ಸೇವೆ ಸಲ್ಲಿರುತ್ತಿರುವ ಹಾಗೂ ನಿವೃತ್ತ ಎರಡೂ ವರ್ಗದ ಅಧಿಕಾರಿಗಳನ್ನು ಪರಿಗಣಿಸಬಹುದು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

    ಭಾರತದ ಮೊದಲ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ಮರಣದ 4 ತಿಂಗಳ ಬಳಿಕ ಸರ್ಕಾರ ಸೇವೆಯಲ್ಲಿರುವ ಹಾಗೂ ನಿವೃತ್ತ ಮಿಲಿಟರಿ ಅಧಿಕಾರಿಗಳನ್ನು ಈ ಹುದ್ದೆಗೆ ಪರಿಗಣಿಸಬಹುದು ಎಂದಿದೆ. ಇದನ್ನೂ ಓದಿ: 5 ಲಕ್ಷ ಅಲ್ಲ, 40 ಲಕ್ಷ ಭಾರತೀಯರು ಕೋವಿಡ್‌ನಿಂದ ಸಾವು: ಕೇಂದ್ರಕ್ಕೆ ರಾಹುಲ್‌ ತರಾಟೆ

    ಈ ವಾರ ಮುಂದಿನ ಸೇನಾ ಮುಖ್ಯಸ್ಥರ ಕುರಿತು ಸರ್ಕಾರ ಘೋಷಣೆ ಮಾಡಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಹುದ್ದೆಗೆ ನೇಮಕಗೊಳ್ಳಲು ಸೇವೆ ಸಲ್ಲಿಸುತ್ತಿರುವ ಮತ್ತು ನಿವೃತ್ತ ಅಧಿಕಾರಿಗಳನ್ನು ಪರಿಗಣಿಸಬಹುದು. ನೇಮಕಗೊಳ್ಳುವ ಅಧಿಕಾರಿಗಳು ಲೆಫ್ಟಿನೆಂಟ್ ಜನರಲ್ ಅಥವಾ ಸೇವಾ ಮುಖ್ಯಸ್ಥರ ಸಮಾನ ಶ್ರೇಣಿಯವರು ಇರಬಹುದು ಎಂದು ಮೂಲಗಳು ಮಾಹಿತಿ ನೀಡಿದೆ. ಇದನ್ನೂ ಓದಿ: ದೆಹಲಿಯಲ್ಲಿ ಹನುಮ ಜಯಂತಿ ವೇಳೆ ಹಿಂಸಾಚಾರ – ಯುಪಿಯಲ್ಲಿ ಕಟ್ಟೆಚ್ಚರ

    ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಕಚೇರಿ ಮಿಲಿಟರಿ ರಚನೆ ಸುಧಾರಣೆಯಲ್ಲಿ ಅತಿ ದೊಡ್ಡ ಪಾತ್ರ ವಹಿಸುತ್ತದೆ. ಇದು ಸರ್ಕಾರ ಹಾಗೂ ರಕ್ಷಣಾ ಪಡೆಗಳ ನಡುವೆ ಸಮನ್ವಯದಿಂದ ಕೆಲಸ ಮಾಡಲು ಅನುಕೂಲವಾಗಿಸುತ್ತದೆ.

  • ಹುಟ್ಟುಹಬ್ಬ ಆಚರಿಸಲು ದೇವಸ್ಥಾನಕ್ಕೆ ಹೋಗಿದ್ದ ಒಂದೇ ಕುಟುಂಬದ ಮೂವರು ಸಾವು

    ಹುಟ್ಟುಹಬ್ಬ ಆಚರಿಸಲು ದೇವಸ್ಥಾನಕ್ಕೆ ಹೋಗಿದ್ದ ಒಂದೇ ಕುಟುಂಬದ ಮೂವರು ಸಾವು

    – ಕಾಲುವೆಯಲ್ಲಿ ಮುಳುಗಲು ಹೋದ ಬರ್ತ್ ಡೇ ಹುಡುಗಿ

    ಚೆನ್ನೈ: ಒಂದೇ ಕುಟುಂಬದ ಮೂವರು ಕಾಲುವೆಯಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ತಿರುಪ್ಪೂರು ಜಿಲ್ಲೆಯ ಪಲ್ಲಡಂ ಬಳಿ ನಡೆದಿದೆ. ಈ ಕಾಲುವೆಯೂ ಪರಂಬಿಕುಲಂ-ಅಲಿಯಾರ್ ಯೋಜನೆ (ಪಿಎಪಿ) ಅಡಿಯಲ್ಲಿ ನಿರ್ಮಿಸಲಾಗಿದೆ.

    ಮಂಗಳವಾರ ಈ ಘಟನೆ ನಡೆದಿದ್ದು, ಮೃತರನ್ನು ದೇವಿ (18), ಈಕೆಯ ಪತಿ ಸೇತುಪತಿ (23) ಮತ್ತು ದೇವಿಯ ಸಹೋದರಿ ಶರಣ್ಯಾ (12) ಎಂದು ಗುರುತಿಸಲಾಗಿದೆ. ಮಂಗಳವಾರ ದೇವಿ ಸಹೋದರಿ ಶರಣ್ಯಾಳ ಹುಟ್ಟುಹಬ್ಬವಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ದೇವಾಲಯವು ಪಿಎಪಿ ಕಾಲುವೆಯ ಬಳಿ ಇದ್ದುದರಿಂದ ಶರಣ್ಯಾ ಕಾಲುವೆಯಲ್ಲಿ ನೀರು ಮುಳುಗಲು ಇಷ್ಟಪಟ್ಟಿದ್ದಳು.

    ಅದರಂತೆಯೇ ಕುಟುಂಬದವರನ್ನು ದಡದಲ್ಲಿ ಕಾಯುವಂತೆ ಹೇಳಿ ಕಾಲುವೆಗೆ ಹೋಗಿದ್ದಾಳೆ. ಆದರೆ ಶರಣ್ಯಾ ಆಕಸ್ಮಿಕವಾಗಿ ಕಾಲು ಜಾರಿಗೆ ಕಾಲುವೆಗೆ ಬಿದ್ದಿದ್ದು, ತಕ್ಷಣ ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ. ಇದನ್ನು ನೋಡಿದ ದೇವಿ ಮತ್ತು ಸೇತುಪತಿ ಕೂಡ ನೀರಿಗೆ ಹಾರಿದ್ದಾರೆ. ಆದರೆ ಅವರು ಕೂಡ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ದಡದಲ್ಲಿದ್ದ ದೇವಿ ತಾಯಿ ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಫೋನ್ ಮಾಡಿದ್ದಾರೆ.

    ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ, ರಕ್ಷಣಾ ಪಡೆ ಮತ್ತು ಪೊಲೀಸರು ಮಂಗಳವಾರ ಸಂಜೆ ಬಂದಿದ್ದು, ಮೂವರಿಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಕತ್ತಲಾಗಿದ್ದರಿಂದ ಅಂದೂ ಯಾರ ಮೃತದೇಹವೂ ಪತ್ತೆಯಾಗಿರಲಿಲ್ಲ.

    ಏಳು ಜನರ ರಕ್ಷಣಾ ತಂಡವು ಕಾಲುವೆಯಿಂದ ಮೂರು ಶವಗಳನ್ನು ಹೊರತೆಗೆದಿದ್ದಾರೆ. ದೇವಿಯ ಮೃತದೇಹ ಬುಧವಾರ ಪತ್ತೆಯಾಗಿತ್ತು. ಸೇತುಪತಿ ಮತ್ತು ಶರಣ್ಯಾಳ ಮೃತದೇಹ ಗುರುವಾರ ಪತ್ತೆಯಾಗಿವೆ. ಸದ್ಯಕ್ಕೆ ಮೂವರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತಿರುಪ್ಪೂರು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.ಸಿ.ರಾಮಚಂದ್ರನ್ ತಿಳಿಸಿದ್ದಾರೆ.

    ಈ ಘಟನೆ ಕುರಿತು ಕಾಮನೈಕನ್‍ಪಾಲಯಂ ಪೊಲೀಸರು ಅಸ್ವಾಭಾವಿಕ ಸಾವು ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ. ಫೆಬ್ರವರಿಯಲ್ಲಿ ಕೊಯಮತ್ತೂರು ಜಿಲ್ಲೆಯ ಅಲಿಯಾರ್ ಬಳಿ 8 ವರ್ಷದ ಬಾಲಕ ರೋಹಿತ್ ಪಿಎಪಿ ಕಾಲುವೆಯಲ್ಲಿ ಮುಳುಗಿ ಮೃತಪಟ್ಟಿದ್ದನು.

  • ಫೇಸ್ ರೆಕಗ್ನಿಷನ್ ಕ್ಯಾಮೆರಾ, ಸ್ನೈಪರ್ಸ್, ಡ್ರೋನ್ ಕಣ್ಗಾವಲು: ಗಣರಾಜ್ಯೋತ್ಸವಕ್ಕೆ ಬಿಗಿ ಭದ್ರತೆ

    ಫೇಸ್ ರೆಕಗ್ನಿಷನ್ ಕ್ಯಾಮೆರಾ, ಸ್ನೈಪರ್ಸ್, ಡ್ರೋನ್ ಕಣ್ಗಾವಲು: ಗಣರಾಜ್ಯೋತ್ಸವಕ್ಕೆ ಬಿಗಿ ಭದ್ರತೆ

    ನವದೆಹಲಿ: ಗಣರಾಜ್ಯೋತ್ಸವದ ವೇಳೆ ವಿಧ್ವಂಸಕ ಕೃತ್ಯ ನಡೆಸಲು ಉಗ್ರಗಾಮಿ ಸಂಘಟನೆಗಳು ಪ್ಲಾನ್ ಮಾಡಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ದೆಹಲಿಯಲ್ಲಿ ಮತ್ತಷ್ಟು ಭದ್ರತೆಯನ್ನು ಹೆಚ್ಚಿಸಲಾಗಿದೆ.

    ಜೈಶ್ ಈ ಮೊಹಮ್ಮದ್ ಸಂಘಟನೆಗೆ ಸೇರಿದ್ದಾರೆ ಎನ್ನಲಾದ ಇಬ್ಬರು ಶಂಕಿತರನ್ನು ಭದ್ರತಾ ಪಡೆ ಬಂಧಿಸಿದೆ. ಗಣರಾಜ್ಯೋತ್ಸವ ದಿನ ಇಬ್ಬರು ವಿಧ್ವಂಸಕ ಕೃತ್ಯ ನಡೆಸಲು ಪ್ಲಾನ್ ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಟೈಟ್ ಸೆಕ್ಯೂರಿಟಿಯನ್ನು ಹಾಕಲಾಗಿದೆ.

    ಬಂಧನಕ್ಕೆ ಒಳಗಾದವರ ವಿಚಾರಣೆ ವೇಳೆ ಲಜ್‍ಪತ್ ನಗರ್ ಮಾರುಕಟ್ಟೆ, ಹಜ್ ಮಂದಿರ, ತುರ್ಕ್‍ಮನ್ ಗೇಟ್, ಇಂಡಿಯಾ ಗೇಟ್, ಐಜಿಎಲ್ ಗ್ಯಾಸ್ ಪೈಪ್ ಲೈನ್ ಬಳಿ ಕೃತ್ಯ ಎಸಗಲು ಪ್ಲಾನ್ ಮಾಡಿದ್ದರು ಎಂದು ವರದಿಯಾಗಿದೆ.  ಇದನ್ನು ಓದಿ: ದೇಶದ ಹಬ್ಬಕ್ಕೆ ಕ್ಷಣಗಣನೆ : ಸಿಂಗಾರಗೊಂಡಿದೆ ರಾಜಪಥ್: ಈ ಬಾರಿಯ ಪರೇಡ್ ವಿಶೇಷತೆ ಏನು?

    ಹೇಗಿದೆ ಭದ್ರತೆ?
    ಟ್ರಾಫಿಕ್ ಸಿಬ್ಬಂದಿ ಸೇರಿದಂತೆ ಒಟ್ಟು 25 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಸಿ ಕ್ಯಾಮೆರಾದ ಜೊತೆ ಫೇಸ್ ರೆಕಗ್ನಿಷನ್ ಕ್ಯಾಮೆರಾ, ವಿರೋಧಿ ವಿಮಾನಗಳನ್ನು ಹೊಡೆಯಬಲ್ಲ ಗನ್ ತಂಡ, ಸ್ನೈಪರ್ಸ್ ತಂಡವನ್ನು ಬಳಸಲಾಗುತ್ತಿದೆ. ಪರೇಡ್ ನಡೆಯುವ 8 ಕಿಮೀ ಸುತ್ತ ಬಿಗಿಭದ್ರತೆಯನ್ನು ಏರ್ಪಡಿಸಲಾಗಿದೆ. ಇದನ್ನು ಓದಿ: ಫಸ್ಟ್ ಟೈಂ ಆರ್‌ಡಿಯಲ್ಲಿ ಪುರುಷ ದಳವನ್ನು ಮುನ್ನಡೆಸಲಿದ್ದಾರೆ ಮಹಿಳಾ ಅಧಿಕಾರಿ

    sಸ್ನೈಪರ್ಸ್ ಗಳನ್ನು ಅತಿ ಎತ್ತರದ ಕಟ್ಟಡಗಳ ಮೇಲೆ ನಿಯೋಜಿಸಲಾಗಿದ್ದು, ನೂರಾರು ಸಿಸಿಟಿವಿಗಳು ಪರೇಡ್ ನಡೆಯುವ ಪ್ರದೇಶವನ್ನು ಸೆರೆ ಹಿಡಿಯಲಿದೆ. ಒಂದೊಮ್ಮೆ ದಾಳಿ ನಡೆದರೂ ವಿರೋಧಿಗಳ ವಿರುದ್ಧ ಪ್ರತಿ ದಾಳಿ ನಡೆಸಲು ಕೌಂಟರ್ ಡ್ರೋಣ್ ತಂತ್ರಜ್ಞಾನವನ್ನು ಅಳಡಿಸಲಾಗಿದೆ. ಯಾವುದೇ ಅನುಮಾನಾಸ್ಪದ ವಸ್ತು, ವ್ಯಕ್ತಿ ಕಂಡು ಬಂದರೂ ಕ್ಷಣ ಮಾತ್ರದಲ್ಲಿ ಮಾಹಿತಿ ಲಭಿಸಲಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಓದಿ: ಮೋದಿ ಜೊತೆ ಗಣರಾಜ್ಯೋತ್ಸವ ವೀಕ್ಷಿಸಲು ಬೆಂಗ್ಳೂರು ವಿದ್ಯಾರ್ಥಿನಿಗೆ ಬಂತು ಆಹ್ವಾನ

    ದೆಹಲಿಯ ಹೆಚ್ಚು ಜನಸಂದಣಿ ಹೊಂದಿರುವ ಮಾರುಕಟ್ಟೆ, ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ಮೆಟ್ರೋ ಮತ್ತು ಗುರುತಿಸಿದ ಇತರೇ ಸ್ಥಳಗಳಲ್ಲಿ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ. ಅಲ್ಲದೇ ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಬದಲಾವಣೆಯಾದ ಮಾರ್ಗಗಳನ್ನು ನಿರ್ವಹಣೆ ಮಾಡುತ್ತಾರೆ. ಸಾರ್ವಜನಿಕರ ಸಂಚಾರಿ ಸ್ಥಳಗಳಲ್ಲಿ ತಪಾಸಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.  ಇದನ್ನು ಓದಿ: ರಾಜಪಥ್ ರಸ್ತೆಯಲ್ಲಿ ಮೊದಲ ಬಾರಿ ಪ್ರತಿಧ್ವನಿಸಲಿದೆ ಕನ್ನಡದ ಹಾಡು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸೇತುವೆಯಿಂದ ನದಿಗೆ ಉರುಳಿದ ಬಸ್-26 ಮಂದಿ ಸಾವು

    ಸೇತುವೆಯಿಂದ ನದಿಗೆ ಉರುಳಿದ ಬಸ್-26 ಮಂದಿ ಸಾವು

    ಜೈಪುರ: ಸೇತುವೆಯಿಂದ ನದಿಗೆ ಬಸ್ ಉರುಳಿದ ಪರಿಣಾಮ 26 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

    ಈ ಅಪಘಾತ ಇಂದು ಮುಂಜಾನೆ ಸವಾಯಿ ಮಂಧೋಪುರ ಜಿಲ್ಲೆಯ ದುಬಿಯಲ್ಲಿ ಸಂಭವಿಸಿದೆ. ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ತಡೆಗೋಡೆ ಮುರಿದು ನದಿಗೆ ಬಿದ್ದಿದೆ ಎಂದು ಪೊಲೀಸರು ಹೇಳಿದ್ದಾರೆ. ಈವರೆಗೆ 26 ಮಂದಿಯ ಶವಗಳನ್ನ ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಸರ್ಕಲ್ ಆಫೀಸರ್ ಸುಭಾಷ್ ಮಿಶ್ರಾ ತಿಳಿಸಿದ್ದಾರೆ.

    ಅಪಘಾತದಲ್ಲಿ ಗಾಯಗೊಂಡವರನ್ನ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ಅಪಘಾತ ನಡೆದ ಸ್ಥಳಕ್ಕೆ ಪೊಲೀಸರು ಮತ್ತು ರಕ್ಷಣಾ ಪಡೆ ಧಾವಿಸಿದ್ದು, ಬಸ್ ಮೇಲುತ್ತುವ ಕಾರ್ಯವನ್ನು ಮಾಡುತ್ತಿದ್ದಾರೆ. ಬಸ್‍ನಲ್ಲಿದ್ದ ಬಹುತೇಕ ಪ್ರಯಾಣಿಕರು ಉತ್ತರಪ್ರದೇಶಕ್ಕೆ ಹೋಗುತ್ತಿದ್ದರು ಎಂದು ವರದಿಯಾಗಿದೆ.