Tag: Delhi Air Quality

  • ದಿಲ್ಲಿಯಲ್ಲಿ ಉಸಿರಿಗೆ ವಾಯು ಕಂಟಕ – ಅತ್ಯಂತ ಕಳಪೆಗಿಳಿದ ಗುಣಮಟ್ಟ

    ದಿಲ್ಲಿಯಲ್ಲಿ ಉಸಿರಿಗೆ ವಾಯು ಕಂಟಕ – ಅತ್ಯಂತ ಕಳಪೆಗಿಳಿದ ಗುಣಮಟ್ಟ

    ನವದೆಹಲಿ: ದೀಪಾವಳಿ ಹಬ್ಬದ ವೇಳೆ ದೆಹಲಿಯ ವಾಯು ಗುಣಮಟ್ಟ ಅತ್ಯಂತ ಕಳಪೆ ಸ್ಥಿತಿಗೆ ತಲುಪಿದೆ. ಇಂದು ಬೆಳಗ್ಗೆ 5:30ಕ್ಕೆ ದೆಹಲಿಯ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ 346 ದಾಖಲಾಗಿದೆ.

    ಹೆಚ್ಚಿನ ಪ್ರದೇಶಗಳು ಇಂದು ರೆಡ್‌ಝೋನ್‌ನಲ್ಲಿದೆ. ಸುಪ್ರೀಂ ಕೋರ್ಟ್ ನಿಷೇಧವನ್ನು ತೆರವುಗೊಳಿಸಿದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಹಸಿರು ಪಟಾಕಿಗಳೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಲಾಗಿತ್ತು. ಆದರೂ, ದೆಹಲಿಯ ವಾಯು ಗುಣಮಟ್ಟ ಅತ್ಯಂತ ಕಳಪೆ ವಿಭಾಗಕ್ಕೆ ಕುಸಿದಿದೆ.

    ನಿನ್ನೆ ರಾತ್ರಿ 10 ಗಂಟೆಗೆ, 38 ಮಾನಿಟರಿಂಗ್ ಕೇಂದ್ರಗಳ ಪೈಕಿ 36 ಕೇಂದ್ರಗಳಲ್ಲಿ ಮಾಲಿನ್ಯ ಮಟ್ಟವು ಕೆಂಪು ವಲಯದಲ್ಲಿ ದಾಖಲಾಗಿದೆ. ಇದು ದೆಹಲಿಯಾದ್ಯಂತ ಅತ್ಯಂತ ಕಳಪೆಯಿಂದ ಭಯಾನಕ ವಾಯು ಗುಣಮಟ್ಟವನ್ನು ಸೂಚಿಸುತ್ತದೆ.

  • ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಣೆ – GRAP-III ನಿರ್ಭಂಧ ತೆರವು

    ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಣೆ – GRAP-III ನಿರ್ಭಂಧ ತೆರವು

    ನವದೆಹಲಿ: ರಾಷ್ಟ್ರ ರಾಜಧಾನಿಯ ಗಾಳಿಯ ಗುಣಮಟ್ಟದಲ್ಲಿ (Delhi Air Quality) ಸುಧಾರಣೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಅಡಿಯಲ್ಲಿ ವಿಧಿಸಲಾಗಿದ್ದ 3ನೇ ಹಂತದ ನಿರ್ಬಂಧಗಳನ್ನು‌ ತೆರವುಗೊಳಿಸಲಾಗಿದೆ. ಜೊತೆಗೆ BS-III ಪೆಟ್ರೋಲ್ ಮತ್ತು BS-IV ಡೀಸೆಲ್ ವಾಹನಗಳ ಓಡಾಟದ ಮೇಲಿನ ನಿರ್ಬಂಧಗಳನ್ನೂ ಸಡಿಲಗೊಳಿಸಲಾಗಿದೆ.

    ಭಾನುವಾರ (ಇಂದು) ದೆಹಲಿ ವಾಯು ಗುಣಮಟ್ಟ ಸೂಚ್ಯಂಕದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ವರದಿಗಳು ತಿಳಿಸಿವೆ. ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯ (CPCB) ಅಂಕಿ – ಅಂಶಗಳ ಪ್ರಕಾರ, ಮಧ್ಯಾಹ್ನ 2 ಗಂಟೆ ವೇಳೆ ದೆಹಲಿಯ ಎಕ್ಯೂಐ 348 ಆಗಿತ್ತು, ಇದು ಮಧ್ಯಾಹ್ನ 3 ಗಂಟೆ ವೇಳೆಗೆ 343 ಹಾಗೂ ಸಂಜೆ 5 ಗಂಟೆ ಸುಮಾರಿಗೆ 335 ದಾಖಲಾಗಿದೆ. ಇದು ಸುಧಾರಣೆಯ ಸ್ಪಷ್ಟ ಸಂಕೇತ ಎಂದು ವರದಿ ಹೇಳಿದೆ.

    ಈ ಸಕಾರಾತ್ಮಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿಯ ಎನ್‌ಸಿಆರ್‌ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ವಿಧಿಸಲಾಗಿದ್ದ 3ನೇ ಹಂತದ ನಿರ್ಬಂಧಗಳನ್ನು ಸರ್ಕಾರ ತೆರವುಗೊಳಿಸಿದೆ. ಇದನ್ನೂ ಓದಿ: ಪುರಿಯ ಜಗನ್ನಾಥ ದೇವಸ್ಥಾನದ ಮೇಲೆ ಡ್ರೋನ್ ಹಾರಾಟ – ದೇವಾಲಯದ ಸುತ್ತ ಪೊಲೀಸ್ ಬಿಗಿಭದ್ರತೆ

    ಹಂತ-1, ಹಂತ – 2ರ ನಿರ್ಬಂಧಗಳು ಮುಂದುವರಿಯಲಿವೆ. ಇದರೊಂದಿಗೆ ಕೈಗಾರಿಕಾ ಘಟಕಗಳು ಹಾಗೂ ಕಟ್ಟಡ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ವಿಧಿಸಲಾದ ನಿರ್ಬಂಧಗಳು ಮುಂದಿನ ಆದೇಶದವರೆಗೆ ಮುಂದುವರಿಯಲಿವೆ ಎಂದು ಸರ್ಕಾರ ಹೇಳಿದೆ ಎನ್ನಲಾಗಿದೆ. ಇದನ್ನೂ ಓದಿ: ಚುನಾವಣೆಯಲ್ಲಿ ಗೆದ್ದರೆ ಪ್ರಿಯಾಂಕ ಕೆನ್ನೆಯಂತೆ ನಯವಾದ ರಸ್ತೆಗಳನ್ನು ನಿರ್ಮಿಸುತ್ತೇನೆ: ಬಿಜೆಪಿ ಅಭ್ಯರ್ಥಿ ವಿವಾದಾತ್ಮಕ ಹೇಳಿಕೆ

  • Delhi Air Pollution | ಮಾಲಿನ್ಯ ನಿಯಂತ್ರಣಕ್ಕೆ ಕೃತಕ ಮಳೆ ಸುರಿಸಲು ಪ್ಲ್ಯಾನ್‌

    Delhi Air Pollution | ಮಾಲಿನ್ಯ ನಿಯಂತ್ರಣಕ್ಕೆ ಕೃತಕ ಮಳೆ ಸುರಿಸಲು ಪ್ಲ್ಯಾನ್‌

    – ದೆಹಲಿ ದೇಶದ ರಾಜಧಾನಿಯಾಗಿ ಮುಂದುವರಿಯಬೇಕಾ?
    – ಚರ್ಚೆಗೆ ಗ್ರಾಸವಾಯ್ತು ಶಶಿ ತರೂರ್‌ ಟ್ವೀಟ್‌

    ನವದೆಹಲಿ: ದೆಹಲಿ ವಾಯುಮಾಲಿನ್ಯ (Delhi Air Pollution) ಸದ್ಯಕ್ಕೆ ನಿಯಂತ್ರಣಕ್ಕೆ ಬರುವಂತೆ ಕಾಣ್ತಿಲ್ಲ. ಕಳೆದ 24 ಗಂಟೆಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ 488 ತಲುಪಿದೆ. ಸತತ 7ನೇ ದಿನವೂ ದೆಹಲಿ ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲೇ ಇದೆ. ಬಾಂಗ್ಲಾದೇಶದ ಢಾಕಾ, ಪಾಕಿಸ್ತಾನದ (Pakistan) ಲಾಹೋರ್‌ ಕ್ರಮವಾಗಿ 2, 3ನೇ ಸ್ಥಾನಗಳಲ್ಲಿವೆ.

    ಇಂತಹ ಪರಿಸ್ಥಿತಿಯಲಿ ದೆಹಲಿ ಇನ್ನೂ ದೇಶದ ರಾಜಧಾನಿಯಾಗಿ ಮುಂದುವರೆಯಬೇಕಾ? ಎಂದು ಸಂಸದ ಶಶಿ ತರೂರ್ (Shashi Tharoor) ಪ್ರಶ್ನೆ ಮಾಡಿದ್ದಾರೆ. ನವೆಂಬರ್‌ನಿಂದ ಜನವರಿವರೆಗೂ ಈ ನಗರ ವಾಸಕ್ಕೆ ಯೋಗ್ಯವಲ್ಲ.. ಉಳಿದ ಅವಧಿಯಲ್ಲೂ ಉತ್ತಮ ಜೀವನ ಸಾಧಿಸಲು ಸಾಧ್ಯವಾಗಲ್ಲ. ಕೇಂದ್ರ ಸರ್ಕಾರ ಈ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ.. ಇಂತಹ ಸನ್ನಿವೇಶದಲ್ಲಿ ದೆಹಲಿ ರಾಜಧಾನಿಯಾಗಿ ಉಳೀಬೇಕಾ? ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದು ಚರ್ಚೆಗೆ ಗ್ರಾಸವಾಗಿದೆ.

    ಇತ್ತ ಮಾಲಿನ್ಯ ಹೆಚ್ಚಳದ ಬಗ್ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ವೇಳೆ ವರ್ಚುವಲ್‌ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಿಜೆಐ ಸಂಜೀವ್ ಖನ್ನಾ ಸೂಚಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್‌ ಬಿಲ್ ಬಾಕಿ, ದೆಹಲಿಯ ಹಿಮಾಚಲ ಭವನ ಮುಟ್ಟುಗೋಲು ಹಾಕಲು ಹೈಕೋರ್ಟ್ ಆದೇಶ

    ಇನ್ನೂ, ವಾಯು ಮಾಲಿನ್ಯ ನಿಯಂತ್ರಣಕ್ಕೆ ಕೃತಕ ಮಳೆ ಸುರಿಸೋದೊಂದೇ ಮಾರ್ಗ.. ಅದಕ್ಕೆ ಅನುಮತಿ ಕೊಡಿ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರಾಯ್ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ದೆಹಲಿ ಮಾತ್ರವಲ್ಲ.. ಉತ್ತರ ಭಾರತದಲ್ಲಿ ಮಂಜು ಆವರಿಸಿದೆ. ನೋಯ್ಡಾ ಬಳಿ ಸರಣಿ ಅಪಘಾತ ನಡೆದಿದೆ. ಹತ್ತಾರು ಕಾರು ಡಿಕ್ಕಿಯಾಗಿ, ಇಬ್ಬರು ಸಾವನ್ನಪ್ಪಿದ್ದಾರೆ. ಆಗ್ರಾದಲ್ಲಿ ತಾಜ್‌ಮಹಲ್ ಕೂಡ ಗೋಚರ ಆಗ್ತಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬುಧವಾರ ಮಹಾ ಚುನಾವಣೆ – ಎಂವಿಎ ವರ್ಸಸ್ ಮಹಾಯುತಿ ಭರ್ಜರಿ ಕದನ

  • ದೆಹಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ 3ನೇ ಹಂತದ ಕ್ರಮ – ಮಕ್ಕಳಿಗೆ ಶಾಲೆಯಿಂದ ವಿನಾಯಿತಿ

    ದೆಹಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ 3ನೇ ಹಂತದ ಕ್ರಮ – ಮಕ್ಕಳಿಗೆ ಶಾಲೆಯಿಂದ ವಿನಾಯಿತಿ

    – ಬಿಎಸ್‌3 ಪೆಟ್ರೋಲ್‌, ಡೀಸೆಲ್‌ ವಾಹನಗಳ ಸಂಚಾರಕ್ಕೆ ತಡೆ

    ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ದೆಹಲಿ ಸರ್ಕಾರದಿಂದ ಮೂರನೇ ಹಂತದ ಕ್ರಮ ಜಾರಿಯಾಗಿದೆ.

    ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲೆಯಿಂದ ವಿನಾಯಿತಿ ನೀಡಲಾಗಿದೆ. ಆನ್‌ಲೈನ್ ಮೂಲಕ ತರಗತಿ ನಡೆಸಲು ಸರ್ಕಾರ ಸೂಚಿಸಿದೆ. BS 3 ಪೆಟ್ರೋಲ್, ಡೀಸೇಲ್ ವಾಹನಗಳ ಸಂಚಾರಕ್ಕೆ ತಡೆ ನೀಡಲಾಗಿದೆ.

    ಸಿಎನ್‌ಜಿ, ಇವಿ ಸೇರಿದಂತೆ ಅಂತರರಾಜ್ಯಗಳ BS4 ಡಿಸೇಲ್ ಬಸ್‌ಗಳಿಗೆ ಮಾತ್ರ ದೆಹಲಿ ಪ್ರವೇಶ ಕಲ್ಪಿಸಿದೆ. ತುರ್ತು ಅಲ್ಲದ ನಿರ್ಮಾಣ ಮತ್ತು ಕಟ್ಟಡ ತೆರವು ಕಾರ್ಯಕ್ಕೆ ತಡೆ ನೀಡಲಾಗಿದೆ. ಸರ್ಕಾರ ಕಾಮಗಾರಿ, ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಕಟ್ಟಡಗಳ ಕಾಮಗಾರಿಗೆ ಮಾತ್ರ ಅನುಮತಿ ನೀಡಲಾಗಿದೆ.

    ಇಡೀ ವಿಶ್ವದಲ್ಲೇ ಮಾಲಿನ್ಯಯುತ ನಗರಗಳ ಪಟ್ಟಿಯಲ್ಲಿ ದೆಹಲಿ ಮೊದಲ ಸ್ಥಾನದಲ್ಲಿದೆ. ದೆಹಲಿಯಲ್ಲಿ AQI 450 ಅನ್ನು ಮೀರಿದೆ. AQI 50 ರೊಳಗೆ ಉಸಿರಾಟಕ್ಕೆ ಯೋಗ್ಯ ಗಾಳಿ. AQI 50-100 ಮಧ್ಯಮ ಮಾಲಿನ್ಯದ ಗಾಳಿ. ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಮಾಲಿನ್ಯದ ಮೀತಿ ಮೀರಿದೆ.

  • ಕೃಷಿ ತ್ಯಾಜ್ಯಕ್ಕೆ ಬೆಂಕಿ: ದಂಡ ದುಪ್ಪಟ್ಟುಗೊಳಿಸಿ ಕೇಂದ್ರ ಸರ್ಕಾರ ಆದೇಶ

    ಕೃಷಿ ತ್ಯಾಜ್ಯಕ್ಕೆ ಬೆಂಕಿ: ದಂಡ ದುಪ್ಪಟ್ಟುಗೊಳಿಸಿ ಕೇಂದ್ರ ಸರ್ಕಾರ ಆದೇಶ

    – 5 ಎಕರೆಗಿಂತ ಜಾಸ್ತಿ ಇದ್ದರೆ 30,000 ರೂ. ದಂಡ

    ನವದೆಹಲಿ: ದೆಹಲಿ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಕುಸಿಯುತ್ತಿರುವ ಹಿನ್ನೆಲೆ ಕೃಷಿ ತ್ಯಾಜ್ಯಕ್ಕೆ ಬೆಂಕಿ (Stubble Burning) ಹಚ್ಚುವ ಕೃಷಿಕರಿಗೆ ಕೇಂದ್ರ ಸರ್ಕಾರ (Central Government) ಬಿಸಿ ಮುಟ್ಟಿಸುವ ಕೆಲಸ ಮಾಡಿದೆ. ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಚ್ಚುವವರಿಗೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು ದುಪ್ಪಟ್ಟು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ದೆಹಲಿಯ ಎನ್‌ಸಿಆ‌ರ್ (Delhi NCR) ಹಾಗೂ ಅಕ್ಕಪಕ್ಕದ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಕುಸಿಯುತ್ತಿರುವ ಸಂಬಂಧ ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ, ನಿಯಮಗಳಿಗೆ ಸರ್ಕಾರ ತಿದ್ದುಪಡಿ ತಂದಿದೆ. ಇದನ್ನೂ ಓದಿ: ಮೋದಿ ಸರ್ಕಾರದಿಂದ ರಾಜ್ಯಗಳಿಗೆ ಆಗುತ್ತಿರುವ ಆರ್ಥಿಕ ಅನ್ಯಾಯ ನಿಲ್ಲಬೇಕು: ಎಲ್.ಹನುಮಂತಯ್ಯ

    ದಂಡದ ಪ್ರಮಾಣ ಎಷ್ಟು?
    ಹೊಸ ನಿಯಮಗಳ ಪ್ರಕಾರ, ಎರಡು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರು 5,000 ರೂ., 2 ಎಕರೆಗಿಂತ ಹೆಚ್ಚು ಮತ್ತು 5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರು 10,000 ರೂ. ಹಾಗೂ 10 ಎಕರೆಗಿಂತಲೂ ಅಧಿಕ ಜಮೀನು ಹೊಂದಿರುವವರು 30,000 ರೂ. ಪರಿಸರ ಪರಿಹಾರ ಪಾವತಿಸಬೇಕಾಗುತ್ತದೆ.

    ಗಾಳಿಯ ಗುಣಮಟ್ಟ ಸೂಚ್ಯಂಕವು (ಎಕ್ಯೂಐ) ದೆಹಲಿಯ ಆನಂದ್ ವಿಹಾರ, ಅಶೋಕ ವಿಹಾರ, ಬವಾನ, ಜಹಾಂಗಿರ್‌ಪುರಿ, ಮುಂಡ್ಯಾ, ರೋಹಿಣಿ, ಸೋನಿಯಾ ವಿಹಾ. ವಿವೇಕ್ ವಿಹಾರ, ವಾಝಿಪುರದಲ್ಲಿ ನವೆಂಬರ್ 7ರ ಬೆಳಿಗ್ಗೆ 9ರ ಹೊತ್ತಿಗೆ 367ಕ್ಕೆ ಕುಸಿದಿದೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ ಡಿ.ರೂಪಾಗೆ ಹಿನ್ನಡೆ

    ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪ್ರಕಾರ, ಎಕ್ಯೂಐ ಮಟ್ಟವು ಶೂನ್ಯದಿಂದ 50 ರಷ್ಟಿದ್ದರೆ ಉತ್ತಮ, 51 ರಿಂದ 100 ರಷ್ಟಿದ್ದರೆ ಸಮಾಧಾನಕರ, 101 ರಿಂದ 200 ರಷ್ಟಿದ್ದರೆ ಸಾಧಾರಣ, 201 ರಿಂದ 300 ರಷ್ಟಿದ್ದರೆ ಕಳಪೆ ಹಾಗೂ 301 ರಿಂದ 400 ರಷ್ಟಿದ್ದರೆ ಅತ್ಯಂತ ಕಳಪೆ, 401 ರಿಂದ 450ರಷ್ಟು ಕಂಡು ಬಂದರೆ ತೀವ್ರ ಕಳಪೆ ಹಾಗೂ 450ಕ್ಕಿಂತ ಹೆಚ್ಚಾದರೆ ಅತ್ಯಂತ ಅಪಾಯಕಾರಿ ಎಂದು ವರ್ಗೀಕರಿಸಲಾಗುತ್ತದೆ.

    ದೆಹಲಿಯಲ್ಲಿ ಸತತವಾಗಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿರ್ವಹಣೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಚಾಟಿ ಬೀಸಿತ್ತು. ಹೀಗಾಗಿ ಕೇಂದ್ರ ಸರ್ಕಾರ ದಂಡದ ಪ್ರಮಾಣ ದುಪ್ಪಟ್ಟು ಮಾಡಿ ಆದೇಶ ಹೊರಡಿಸಿದೆ. ಇದನ್ನೂ ಓದಿ: 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶನ- ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ತಾರಕಕ್ಕೇರಿದ ಗದ್ದಲ 

  • ವಿಶ್ವದ ಅತ್ಯಂತ ಕಲುಷಿತ ನಗರ ಕುಖ್ಯಾತಿಗೆ ಪಾತ್ರವಾದ ದೆಹಲಿ

    ವಿಶ್ವದ ಅತ್ಯಂತ ಕಲುಷಿತ ನಗರ ಕುಖ್ಯಾತಿಗೆ ಪಾತ್ರವಾದ ದೆಹಲಿ

    – ನಿಷೇಧಕ್ಕೂ ಜಗ್ಗದೆ ಭಾರಿ ಪ್ರಮಾಣ ಪಟಾಕಿ ಸಿಡಿಸಿದ ಜನ

    ನವದೆಹಲಿ: ನಿಷೇಧ ನಡುವೆಯೋ ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಪ್ರಮಾಣ ಪಟಾಕಿ ಸಿಡಿಸಲಾಗಿದ್ದು, ಶುಕ್ರವಾರ ಬೆಳಗ್ಗೆ 6 ಗಂಟೆಗೆ ಏರ್ ಕ್ವಾಲಿಟಿ ಇಂಡೆಕ್ಸ್ (AQI – ಗಾಳಿ ಗುಣಮಟ್ಟ ಸೂಚ್ಯಂಕ) 359 ನಲ್ಲಿ ದಾಖಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ ಇದು ʻಅತ್ಯಂತ ಕಳಪೆʼ ವಿಭಾಗಕ್ಕೆ ಸೇರಿದ್ದು ಈ ಮೂಲಕ ದೆಹಲಿ (NewDelhi) ವಿಶ್ವದ ಅತ್ಯಂತ ಕಲುಷಿತ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದೆ.

    ಲಜಪತ್ ನಗರ್, ಕಲ್ಕಾಜಿ, ಛತ್ತರ್‌ಪುರ, ಜೌನಾಪುರ್, ಕೈಲಾಶ್ ಪೂರ್ವ, ಸಾಕೇತ್, ರೋಹಿಣಿ, ದ್ವಾರಕಾ, ಪಂಜಾಬಿ ಬಾಗ್, ವಿಕಾಸಪುರಿ, ದಿಲ್ಶಾದ್ ಗಾರ್ಡನ್, ಬುರಾರಿ ಮತ್ತು ಪೂರ್ವ ಮತ್ತು ಪಶ್ಚಿಮ ದೆಹಲಿಯ ಹಲವಾರು ಪ್ರದೇಶಗಳು ಪಟಾಕಿಗಳನ್ನು (FireCrackers) ಸಿಡಿಸಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ. ಇದನ್ನೂ ಓದಿ: Canada | ಗಾಯಕ ಎಪಿ ಧಿಲ್ಲೋನ್ ಮನೆ ಎದುರು ಗುಂಡು ಹಾರಿಸಿದ್ದ ವಿಡಿಯೋ ವೈರಲ್

    ಬೆಳಿಗ್ಗೆ 6 ಗಂಟೆಗೆ, ಬುರಾರಿ ಕ್ರಾಸಿಂಗ್ (394), ಜಹಾಂಗೀರ್‌ಪುರಿ (387), ಆರ್‌ಕೆ ಪುರಂ (395), ರೋಹಿಣಿ (385), ಅಶೋಕ್ ವಿಹಾರ್ (384), ದ್ವಾರಕಾ ಸೆಕ್ಟರ್ 8 (375), ಐಜಿಐ ವಿಮಾನ ನಿಲ್ದಾಣ (375), ಮಂದಿರ ಮಾರ್ಗ ( 369), ಪಂಜಾಬಿ ಬಾಗ್ (391), ಆನಂದ್ ವಿಹಾರ್ (395), ಸಿರಿ ಫೋರ್ಟ್ (373) ಮತ್ತು ಸೋನಿಯಾ ವಿಹಾರ್ (392) ಗಾಳಿಯ ಗುಣಮಟ್ಟ ದಾಖಲಾಗಿದೆ. ಇದನ್ನೂ ಓದಿ: ಬೆಳಕಿನ ಹಬ್ಬವನ್ನು ಕಣ್ತುಂಬಿಕೊಳ್ಳಬೇಕಾ? ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ಸ್ಥಳಗಳಿಗೆ ಭೇಟಿ ನೀಡಿ!

    ಎನ್‌ಸಿಆರ್ ಪ್ರದೇಶಗಳಾದ ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ್‌ಗಳು ಕ್ರಮವಾಗಿ 293, 316 ಮತ್ತು 348 ಎಕ್ಯೂಐ ಮಟ್ಟವನ್ನು ದಾಖಲಿಸಿವೆ. ಅಕ್ಟೋಬರ್ 14 ರಂದು, ದೆಹಲಿ ಸರ್ಕಾರವು ನಗರದಾದ್ಯಂತ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯ ಮೇಲೆ ನಿಷೇಧವನ್ನು ವಿಧಿಸಿತು. ಅದಾಗ್ಯೂ ಜನರು ಅಧಿಕ ಪ್ರಮಾಣ ಪಟಾಕಿ ಸಿಡಿಸಿದ್ದಾರೆ.

    ದೀಪಾವಳಿ ಮುನ್ನಾದಿನದಂದು ದೆಹಲಿಯ ಪರಿಸರ ಸಚಿವ ಗೋಪಾಲ್ ರೈ ಅವರು ರಾಷ್ಟ್ರ ರಾಜಧಾನಿಯಾದ್ಯಂತ ಪಟಾಕಿ ನಿಷೇಧ ಜಾರಿಗೊಳಿಸಲು 377 ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದ್ದರು. ಜಾಗೃತಿ ಮೂಡಿಸಲು ಅಧಿಕಾರಿಗಳು ಸಂಘಗಳು, ಮಾರುಕಟ್ಟೆ ಸಂಘಗಳು ಮತ್ತು ಸಾಮಾಜಿಕ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಅವರು ಹೇಳಿದರು. ಪಟಾಕಿ ಸಿಡಿಸದಂತೆ ನೋಡಿಕೊಳ್ಳಲು ಪೊಲೀಸ್ ತಂಡಗಳನ್ನೂ ರಚಿಸಲಾಗಿದೆ.

    ಪಟಾಕಿಗಳನ್ನು ಸಿಡಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಆದೇಶಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರನ್ನು ಬಿಎನ್‌ಎಸ್ (ಭಾರತೀಯ ನ್ಯಾಯ ಸಂಹಿತೆ) ಯ ಸಂಬಂಧಿತ ವಿಭಾಗಗಳ ಅಡಿಯಲ್ಲಿಯೂ ದಾಖಲಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದರು‌. ಆದರೆ ಈ ಯಾವುದು ಪ್ರಯೋಜನಕ್ಕೆ ಬಂದಿಲ್ಲ.

  • ದೆಹಲಿಯಲ್ಲಿ ತಗ್ಗಿದ ವಾಯು ಮಾಲಿನ್ಯ – ಶಾಲೆ, ಕಾಲೇಜುಗಳು ಪುನಾರಂಭ

    ದೆಹಲಿಯಲ್ಲಿ ತಗ್ಗಿದ ವಾಯು ಮಾಲಿನ್ಯ – ಶಾಲೆ, ಕಾಲೇಜುಗಳು ಪುನಾರಂಭ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ (Delhi Air Pollution) ತಗ್ಗಿದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಪುನರಾರಂಭಗೊಂಡಿವೆ. ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳನ್ನು (Delhi Schools) ತೆರೆಯಲಾಗಿದ್ದು, ಇದರಲ್ಲಿ ನರ್ಸರಿಯಿಂದ 12ನೇ ತರಗತಿವರೆಗಿನ ಎಲ್ಲಾ ತರಗತಿಗಳನ್ನು ಭೌತಿಕ ಕ್ರಮದಲ್ಲಿ ನಡೆಸಲಾಗುತ್ತಿದೆ. ಆದರೆ, ಕೆಲವು ಖಾಸಗಿ ಶಾಲೆಗಳು ನರ್ಸರಿಯಿಂದ 5ನೇ ತರಗತಿವರೆಗಿನ ತರಗತಿಗಳನ್ನು ಮುಚ್ಚಲು ನಿರ್ಧರಿಸಿವೆ.

    ಮಾಲಿನ್ಯ ಇನ್ನೂ ಕೆಟ್ಟ ಪರಿಸ್ಥಿತಿಯಲ್ಲಿದ್ದು, ಸಣ್ಣ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗುತ್ತಿದೆ ಎಂದು ಖಾಸಗಿ ಶಾಲೆಗಳು ಹೇಳಿವೆ. ಈ ಸಂಬಂಧ ಶಿಕ್ಷಣ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದ್ದು, ಒಂದು ವಾರದವರೆಗೆ ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ಹಾಗೂ ಹೊರಾಂಗಣ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: ಗಾಜಾದ ಆಸ್ಪತ್ರೆಯನ್ನೇ ಉಗ್ರ ಚಟುವಟಿಕೆಗಳ ತಾಣವಾಗಿಸಿದ ಹಮಾಸ್- ಇಸ್ರೇಲ್ ವೀಡಿಯೋ ಸಾಕ್ಷಿ

    ದೆಹಲಿ ವಿಶ್ವವಿದ್ಯಾನಿಲಯವು ವಾಯು ಮಾಲಿನ್ಯದ ದೃಷ್ಟಿಯಿಂದ ನವೆಂಬರ್ 13-19ರ ವರೆಗೆ ಚಳಿಗಾಲದ ರಜೆಯನ್ನು ಘೋಷಿಸಿತ್ತು. ಮಾಲಿನ್ಯ ಕಡಿಮೆಯಾದ ಹಿನ್ನೆಲೆಯಲ್ಲಿ ಸೋಮವಾರದಿಂದ ಎಲ್ಲ ಕಾಲೇಜುಗಳಲ್ಲಿ ತರಗತಿಗಳನ್ನು ಆರಂಭಿಸಿದೆ. ಕಾಲೇಜುಗಳು ಬಹಳ ದಿನಗಳಿಂದ ಮುಚ್ಚಲ್ಪಟ್ಟಿವೆ, ಹೀಗಾಗಿ ಶಿಕ್ಷಣಕ್ಕೆ ನಷ್ಟವಾಗದಂತೆ ಕಾಲೇಜುಗಳನ್ನು ತೆರೆಯುವುದು ಕಡ್ಡಾಯವಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಮಿಚೆಲ್ ಮಾರ್ಷ್- ಭಾರೀ ಟ್ರೋಲ್

    ಗಾಳಿಯ ದಿಕ್ಕು ಮತ್ತು ಗಾಳಿಯ ವೇಗದಲ್ಲಿನ ಬದಲಾವಣೆಯಿಂದಾಗಿ ಗಾಳಿಯ ಗುಣಮಟ್ಟವು ತೀವ್ರ ವರ್ಗದಿಂದ ಕಡಿಮೆಯಾಗಿದೆ ಆದರೆ ಗಾಳಿಯು ಇನ್ನೂ ಅತ್ಯಂತ ಕಳಪೆ ವಿಭಾಗದಲ್ಲಿದೆ. ರಾಜಧಾನಿಯಲ್ಲಿನ ಗಾಳಿಯ ಗುಣಮಟ್ಟವು ಒಟ್ಟಾರೆ AQI 398 ರೊಂದಿಗೆ ಅತ್ಯಂತ ಕಳಪೆ ವರ್ಗದಲ್ಲಿದೆ. ಬೆಳಗಿನ ಜಾವ ಗಾಳಿ ಬೀಸುತ್ತಿರುವುದರಿಂದ ಮಂಜು ಮತ್ತು ಹೊಗೆಯ ಪ್ರಮಾಣ ಕಡಿಮೆಯಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ವಾಯು ಮಾಲಿನ್ಯ – ಪಂಜಾಬ್, ಹರಿಯಾಣ, ಯುಪಿ ಸರ್ಕಾರಕ್ಕೂ ಸುಪ್ರೀಂ ಚಾಟಿ

  • ದೆಹಲಿಯಲ್ಲಿ ವಾಯು ಮಾಲಿನ್ಯ – ಪಂಜಾಬ್, ಹರಿಯಾಣ, ಯುಪಿ ಸರ್ಕಾರಕ್ಕೂ ಸುಪ್ರೀಂ ಚಾಟಿ

    ದೆಹಲಿಯಲ್ಲಿ ವಾಯು ಮಾಲಿನ್ಯ – ಪಂಜಾಬ್, ಹರಿಯಾಣ, ಯುಪಿ ಸರ್ಕಾರಕ್ಕೂ ಸುಪ್ರೀಂ ಚಾಟಿ

    ನವದೆಹಲಿ: ಪ್ರತಿ ವರ್ಷವೂ ದೆಹಲಿಯಲ್ಲಿ ವಾಯು ಮಾಲಿನ್ಯದ (Delhi Air Pollution) ಪ್ರಮಾಣ ಹೆಚ್ಚುತ್ತಿದೆ, ತೀವ್ರ ವಾಯು ಮಾಲಿನ್ಯ ಎದುರಿಸಲು ಸಾಧ್ಯವಿಲ್ಲ ಇದಕ್ಕೆ ಪರಿಹಾರವೇನು? ಎಂದು ಸುಪ್ರೀಂ ಕೋರ್ಟ್ (Supreme Court) ಪ್ರಶ್ನೆ ಮಾಡಿದೆ.

    ದೆಹಲಿ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಕೆ ಕೌಲ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ದ್ವಿಸದಸ್ಯ ಪೀಠ ದೆಹಲಿ, ಪಂಜಾಬ್, ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸರ್ಕಾರಕ್ಕೆ (Rajasthan Government)  ಚಾಟೀ ಬೀಸಿದೆ.

    ದೆಹಲಿಯಲ್ಲಿನ ವಾಯುಮಾಲಿನ್ಯ ಸಮಸ್ಯೆಯನ್ನು ರಾಜಕೀಯ ಚರ್ಚೆಯಾಗಿ ಪರಿವರ್ತಿಸಲು ಸಾಧ್ಯವಿಲ್ಲ, ಮಕ್ಕಳು ಮಾಲಿನ್ಯದಿಂದಾಗಿ ಆರೋಗ್ಯ ಸಮಸ್ಯೆ (Health Problem) ಎದುರಿಸುತ್ತಿದ್ದಾರೆ, ಕೂಡಲೇ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಸಭೆ ನಡೆಸಬೇಕು ಮತ್ತು ಶುಕ್ರವಾರದೊಳಗೆ ಪರಿಸ್ಥಿತಿ ಸುಧಾರಣೆಗೆ ಕ್ರಮವಹಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

    ಕೃಷಿ ತಾಜ್ಯ ಅಥವಾ ಹುಲ್ಲು ಸುಡುವಿಕೆ 20-50 ದಿನಗಳವರೆಗೆ ಮಾತ್ರ ಸಂಭವಿಸುತ್ತದೆ ಎಂದು ಪಂಜಾಬ್ ಎ‌ಜಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನೀವು ಅದನ್ನು ಹೇಗೆ ಮಾಡುತ್ತೀರಿ ಎಂಬುದರ ಬಗ್ಗೆ ನಮಗೆ ಬೇಕಾಗಿಲ್ಲ, ಹುಲ್ಲು ಸುಡುವುದು ಕೂಡಲೇ ನಿಲ್ಲಬೇಕು, ಎಲ್ಲ ರಾಜ್ಯಗಳು ಬೆಂಕಿಯನ್ನು ನಿಲ್ಲಿಸುವ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ. ನಿಮ್ಮ ಸ್ಥಳೀಯ ಠಾಣೆಯ ಎಸ್‌ಎಚ್‌ಒ ಸಹ ಇದಕ್ಕೆ ಜವಾಬ್ದಾರಿಯಾಗಿರಬೇಕು. ಇಂದಿನಿಂದ ಅವರು ಕೆಲಸ ಮಾಡಲು ಪ್ರಾರಂಭಿಸಬೇಕು ಎಂದು ತಾಕೀತು ಮಾಡಿತು.

    ವಿಚಾರಣೆಯ ಸಂದರ್ಭದಲ್ಲಿ, ಅಮಿಕಸ್ ಕ್ಯೂರಿ ಅಪರಾಜಿತಾ ಸಿಂಗ್ ವಾದಿಸಿ, ದೆಹಲಿಯಲ್ಲಿ ಸ್ಥಾಪಿಸಲಾದ ಸ್ಮೋಗ್ ಟವರ್ ಕಾರ್ಯನಿರ್ವಹಿಸುತ್ತಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದಕ್ಕೆ ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಹಿಂದಿನ ನಿರ್ದೇಶನಗಳ ನಂತರ ಅಳವಡಿಸಲಾದ ಸ್ಮೋಗ್ ಟವರ್ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ. ನಾವು ಟವರ್‌ಗಳು ಕಾರ್ಯನಿರ್ವವಂತೆ ಮಾಡಬೇಕು ಎಂದು ಕೋರ್ಟ್‌ ನಿರ್ದೇಶನ ನೀಡಿತು. ಇದನ್ನೂ ಓದಿ: ಇಸ್ರೇಲ್‌ ದಾಳಿ ನಿಲ್ಲಿಸಲು ನಿಮ್ಮ ಸಾಮರ್ಥ್ಯ ಬಳಸಿ: ಮೋದಿಗೆ ಕರೆ ಮಾಡಿ ಇರಾನ್‌ ಅಧ್ಯಕ್ಷ ಮನವಿ

    ಇನ್ನೂ ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳ ಬಗ್ಗೆ ಚರ್ಚಿಸಿದ ಪೀಠ, ದೆಹಲಿ ಸರ್ಕಾರದ ಮಾಲಿನ್ಯ ನಿಯಂತ್ರಣ ಕ್ರಮಗಳು, ಅದರಲ್ಲೂ ವಿಶೇಷವಾಗಿ ಬೆಸ-ಸಮ ಯೋಜನೆಗೆ ಎಂದಾದರೂ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದೆಯೇ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿತು. ದೀಪಾವಳಿಯ ನಂತರ ಗಾಳಿಯ ಗುಣಮಟ್ಟ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ. ಈ ಯೋಜನೆ ಎಂದಾದರೂ ಯಶಸ್ವಿಯಾಗಿದಿಯೇ? ಎಂದು ಪ್ರಶ್ನಿಸಿತು. ಇದನ್ನೂ ಓದಿ: ಕೆಇಎ ಪರೀಕ್ಷಾ ಅಕ್ರಮದ ಕಿಂಗ್‌ಪಿನ್‌ ಬೆನ್ನಿಗೆ ಎಟಿಎಂ ಸರ್ಕಾರ ನಿಂತಿದೆ: ಆರೋಪಿ ಟ್ರೋಲ್‌ ಮಿನಿಸ್ಟರ್‌ ಖರ್ಗೆ ಆಪ್ತ ಎಂದ ಬಿಜೆಪಿ

    ದೆಹಲಿ ಸರ್ಕಾರ ಪರ ವಾದ ಮಂಡಿಸಿದ ವಕೀಲರು, ಮೂರು‌ ಹಂತಗಳಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳೇನು? ಮತ್ತು 4ನೇ ಹಂತದಲ್ಲಿ‌ ಕೈಗೊಳ್ಳಲಿರುವ ಪ್ರಯತ್ನಗಳೇನು? ಎಂದು ಮನವರಿಕೆ ಮಾಡಿದರು‌. ವರ್ಕ್‌ಫ್ರಮ್‌ ಹೋಮ್‌ ವಾಹನಗಳ ನಿರ್ಬಂಧ ಮತ್ತು ಮರಗಳಿಗೆ ನೀರಿನ ಸಿಂಪಡಿಕೆ‌ ಬಗ್ಗೆ ವಿವರಿಸಿದರು. ಶುಕ್ರವಾರ ವಿಚಾರಣೆ ಮುಂದುವರಿಯಲಿದೆ. ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ ಸದಾಶಿವ ಆಯೋಗ ವರದಿ ಜಾರಿಗೆ ಸಿಎಂಗೆ ಮನವಿ: ಪರಮೇಶ್ವರ್