Tag: Delhi Assembly Elections

  • ಮೆಟ್ರೋ ಟಿಕೆಟ್‌ ದರದಲ್ಲಿ 50% ರಿಯಾಯಿತಿ, ಉಚಿತ ವಿದ್ಯುತ್‌, ನೀರು – ದೆಹಲಿ ಚುನಾವಣೆಗೆ 15 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

    ಮೆಟ್ರೋ ಟಿಕೆಟ್‌ ದರದಲ್ಲಿ 50% ರಿಯಾಯಿತಿ, ಉಚಿತ ವಿದ್ಯುತ್‌, ನೀರು – ದೆಹಲಿ ಚುನಾವಣೆಗೆ 15 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

    ನವದೆಹಲಿ: ಮುಂದಿನ ಫೆ.5ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ (Arvind Kejriwal) ಅವರು 15 ಗ್ಯಾರಂಟಿಗಳನ್ನೊಳಗೊಂಡ ಎಎಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

    ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಯುವಕರಿಗೆ ಉದ್ಯೋಗ, ಮಹಿಳೆಯರಿಗೆ ಮಹಿಳಾ ಸಮ್ಮಾನ್ ಯೋಜನೆ, 24 ಗಂಟೆ ಉಚಿತ ನೀರು, ಉಚಿತ ವಿದ್ಯುತ್‌, ದಲಿತ ವಿದ್ಯಾರ್ಥಿಗಳಿಗಾಗಿ ಅಂಬೇಡ್ಕರ್ ಸ್ಕಾಲರ್‌ ಶಿಪ್, ಯಮುನಾ ನದಿ ಶುದ್ಧೀಕರಣ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೆ ತರುವುದಾಗಿ ʻಕೇಜ್ರವಾಲ್ ಕಿ ಗ್ಯಾರಂಟಿʼ (Kejriwal Ki Guarantee) ಹೆಸರಿನ ಪ್ರಣಾಳಿಕೆಯಲ್ಲಿ ತಿಳಿಸಿದ್ದಾರೆ.

    ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಮತ್ತು ಮೆಟ್ರೋ ಪ್ರಯಾಣ ದರದಲ್ಲಿ (Metro Ticket Price) ಶೇ.50ರಷ್ಟು ರಿಯಾಯಿತಿ ನೀಡುವುದಾಗಿಯೂ ಭರವಸೆ ನೀಡಿದ ಕೇಜ್ರಿವಾಲ್‌ ಇದು ಮೋದಿ ಅವರ ʻನಕಲಿ ಗ್ಯಾರಂಟಿʼ ಅಲ್ಲ ʻಕೇಜ್ರಿವಾಲ್‌ ಕೀ ಗ್ಯಾರಟಿʼ ಅಂತ ಹೇಳಿದ್ದಾರೆ.

    ಎಎಪಿಯ 15 ಗ್ಯಾರಂಟಿಗಳು ಯಾವುವು?
    * ಉದ್ಯೋಗದ ಖಾತ್ರಿ
    * ಮಹಿಳಾ ಗೌರವ ಯೋಜನೆ – ಪ್ರತಿ ಮಹಿಳೆಗೆ ತಿಂಗಳಿಗೆ 2,100 ರೂ.
    * ಸಂಜೀವನಿ ಯೋಜನೆ – 60 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ
    * ತಪ್ಪಾಗಿ ಬಂದ ನೀರಿನ ಬಿಲ್‌ ಮನ್ನಾ
    * 24 ಗಂಟೆ ನೀರು ಪೂರೈಕೆ
    * ಯುರೋಪ್‌ ಮಾದರಿಯಲ್ಲೇ ರಸ್ತೆ ಅಭಿವೃದ್ಧಿ
    * ಯಮುನಾ ನದಿ ಶುದ್ಧೀಕರಣ
    * ಡಾ.ಅಂಬೇಡ್ಕರ್ ವಿದ್ಯಾರ್ಥಿವೇತನ ಯೋಜನೆ
    * ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ, ದೆಹಲಿ ಮೆಟ್ರೋದಲ್ಲಿ 50% ರಿಯಾಯಿತಿ
    * ಅರ್ಚಕರಿಗೆ 18,000 ಸಾವಿರ ರೂ.
    * ಬಾಡಿಗೆದಾರರಿಗೆ ಉಚಿತ ವಿದ್ಯುತ್ ಮತ್ತು ನೀರು
    * ಒಳಚರಂಡಿ ಶುದ್ಧೀಕರಣ
    * ಪಡಿತರ ಚೀಟಿ
    * ಆಟೋ, ಟ್ಯಾಕ್ಸಿ ಮತ್ತು ಇ-ರಿಕ್ಷಾ ಚಾಲಕರ ಮಗಳ ಮದುವೆಗೆ 1 ಲಕ್ಷ ರೂ., ಮಕ್ಕಳಿಗೆ ಉಚಿತ ತರಬೇತಿ, ಜೀವ ವಿಮೆ
    * RWA ಗಳಿಗೆ (ವಸತಿ ಕಲ್ಯಾಣ ಸಂಘಗಳು) ಖಾಸಗಿ ಭದ್ರತಾ ಸಿಬ್ಬಂದಿ ಒದಗಿಸಲಾಗುವುದು.

  • Delhi Assembly Election | 29 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

    Delhi Assembly Election | 29 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

    ನವದೆಹಲಿ: ವಿಧಾನಸಭೆ ಚುನಾವಣೆ (Delhi Assembly Elections) ಹಿನ್ನೆಲೆ ಕಾಂಗ್ರೆಸ್‌, ಆಪ್ ಬಳಿಕ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ (BJP Candidate First List) ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 29 ಅಭ್ಯರ್ಥಿಗಳ ಹೆಸರು ಘೋಷಿಸಿದ್ದು, ಕಾಲ್ಕಾಜಿಯಲ್ಲಿ ಮುಖ್ಯಮಂತ್ರಿ ಅತಿಶಿ ವಿರುದ್ಧ ಹಿರಿಯ ನಾಯಕ ರಮೇಶ್ ಬಿಧುರಿ, ನವದೆಹಲಿ ಕ್ಷೇತ್ರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ವಿರುದ್ಧ ಮಾಜಿ ಸಂಸದ ಪರ್ವೇಶ ವರ್ಮಾ ಅವರನ್ನು ಕಣಕ್ಕಿಳಿಸಿದೆ.

    ಬಿಜೆಪಿ ತನ್ನ ಗಾಂಧಿನಗರ ಶಾಸಕ ಅನಿಲ್ ಬಾಜ್‌ಪೇಯ್ ಅವರನ್ನು ಕೈಬಿಟ್ಟು ದೆಹಲಿಯ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿಗೆ ಟಿಕೆಟ್ ನೀಡಿದೆ. ಶೀಲಾ ದೀಕ್ಷಿತ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ (Congress Government) 2003 ರಿಂದ 2013ರ ವರೆಗೆ ಸಚಿವರಾಗಿದ್ದ ಲವ್ಲಿ ಕಳೆದ ವರ್ಷ ಬಿಜೆಪಿ ಸೇರಿದ್ದರು. ಮತ್ತೋರ್ವ ದೆಹಲಿಯ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕರಾಗಿದ್ದ ರಾಜ್‌ಕುಮಾರ್ ಚೌಹಾಣ್ ಅವರಿಗೆ ಬಿಜೆಪಿ ಮಂಗೋಲ್‌ಪುರಿಯಿಂದ ಟಿಕೆಟ್ ನೀಡಲಾಗಿದೆ.

    ಎಎಪಿ ಮಾಜಿ ಸಚಿವ, ಕೇಜ್ರಿವಾಲ್ ಆಪ್ತರಾಗಿದ್ದ ಕೈಲಾಶ್ ಗಹ್ಲೋಟ್ ಬಿಜೆಪಿಯಿಂದ ನಜಾಫ್‌ಗಢ್ ಬದಲಿಗೆ ಬಿಜ್ವಾಸನ್‌ನಿಂದ ಕಣಕ್ಕಿಳಿದಿದ್ದರೆ, ರಾಜ್ ಕುಮಾರ್ ಆನಂದ್ ಪಟೇಲ್ ನಗರದಿಂದ ಟಿಕೆಟ್ ಪಡೆದಿದ್ದಾರೆ. ಎಎಪಿಯಿಂದ ಬಿಜೆಪಿಗೆ ತೆರಳಿದ್ದ ಶಾಸಕ ಕರ್ತಾರ್ ಸಿಂಗ್ ತನ್ವಾರ್ ಅವರ ಛತ್ತರ್‌ಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

    ವಿಪಕ್ಷದ ನಾಯಕ ವಿಜೇಂದರ್ ಗುಪ್ತಾ, ಓಂ ಪ್ರಕಾಶ್ ಶರ್ಮಾ, ಅಜಯ್ ಮಹಾವರ್ ಮತ್ತು ಜಿತೇಂದರ್ ಮಹಾಜನ್ ಸೇರಿದಂತೆ ಬಿಜೆಪಿಯ ಹಾಲಿ ಶಾಸಕರು ಕ್ರಮವಾಗಿ ರೋಹಿಣಿ, ವಿಶ್ವಾಸ್ ನಗರ, ಘೋಂಡಾ ಮತ್ತು ರೋಹ್ತಾಸ್ ನಗರದಿಂದ ಸ್ಪರ್ಧಿಸಲಿದ್ದಾರೆ. ದೆಹಲಿ ಬಿಜೆಪಿ ಮಾಜಿ ಅಧ್ಯಕ್ಷ ಸತೀಶ್ ಉಪಾಧ್ಯಾಯ ಮಾಳವೀಯಾ ನಗರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದು, ಮನೋಜ್ ಶೋಕೀನ್ ನಂಗ್ಲೋಯ್ ಜಾಟ್‌ನಿಂದ ಕಣಕ್ಕಿಳಿದಿದ್ದಾರೆ.

    ಎಎಪಿ ಈಗಾಗಲೇ ದೆಹಲಿಯ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕಾಂಗ್ರೆಸ್ ಇದುವರೆಗೆ 47 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ‌.

  • ಅಮಿತ್ ಶಾ ಹೇಳಿಕೆಗೆ ತಿರುಗೇಟು – ಅಂಬೇಡ್ಕರ್ ಹೆಸರಿನಲ್ಲಿ ಸ್ಕಾಲರ್‌ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್

    ಅಮಿತ್ ಶಾ ಹೇಳಿಕೆಗೆ ತಿರುಗೇಟು – ಅಂಬೇಡ್ಕರ್ ಹೆಸರಿನಲ್ಲಿ ಸ್ಕಾಲರ್‌ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್

    ನವದೆಹಲಿ: ಡಾ. ಬಿ.ಆರ್ ಅಂಬೇಡ್ಕರ್ (BR Ambedkar) ಅವರ ವಿಚಾರಕ್ಕೆ ಸಂಬಂಧಿಸಿದಂತೆ ಸದ್ದು ಗದ್ದಲಗಳು ನಡೆಯುತ್ತಿರುವ ಹೊತ್ತಲ್ಲೇ ದಲಿತ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ಹೆಸರಿನ ವಿದ್ಯಾರ್ಥಿ ವೇತನ ಯೋಜನೆಯನ್ನು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಘೋಷಿಸಿದ್ದಾರೆ.

    ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಚಾರ ನಡೆಸುತ್ತಿರುವ ಕೇಜ್ರಿವಾಲ್ ಹೊಸ ಯೋಜನೆ ಘೋಷಿಸಿದರು. ಸಂವಿಧಾನದ ಪಿತಾಮಹ ಬಾಬಾ ಸಾಹೇಬರ ವಿರುದ್ಧ ಅಮಿತ್ ಶಾ (Amit Shah) ಅವರ “ಅಗೌರವ” ಹೇಳಿಕೆಗೆ ಪ್ರತಿಕ್ರಿಯೆಯಾಗಿ “ಡಾ.ಅಂಬೇಡ್ಕರ್ ಸಮ್ಮಾನ್” ವಿದ್ಯಾರ್ಥಿ ವೇತನವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದ್ದಾರೆ.ಇದನ್ನೂ ಓದಿ: 9/11 ದಾಳಿಯಂತೆ ರಷ್ಯಾ ಬಹುಮಹಡಿ ಕಟ್ಟಡಗಳ ಮೇಲೆ ಡ್ರೋನ್‌ ದಾಳಿ

    ವಿಧಾನಸಭಾ ಚುನಾವಣೆಯಲ್ಲಿ ಎಎಪಿ (AAP) ಗೆದ್ದರೆ ವಿದೇಶಿ ವಿಶ್ವವಿದ್ಯಾಲಯಗಳಿಗೆ ಪ್ರವೇಶ ಪಡೆದ ದಲಿತ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರ ಧನಸಹಾಯ ನೀಡಲಿದೆ. ದೆಹಲಿಯ ಯಾವುದೇ ದಲಿತ ವಿದ್ಯಾರ್ಥಿಯು ಹಣದ ಕೊರತೆಯಿಂದಾಗಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ತಮ್ಮ ಅಧ್ಯಯನವನ್ನು ತ್ಯಜಿಸಬಾರದು ಎಂದು ಕೇಜ್ರಿವಾಲ್ ತಮ್ಮ ಪ್ರಚಾರದಲ್ಲಿ ತಿಳಿಸಿದರು.

    ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಅ್ಯಂಡ್ ಪೊಲಿಟಿಕಲ್ ಸೈನ್ಸ್‌ನಲ್ಲಿ ಓದುವಾಗ ಹಣದ ಕೊರತೆಯಿಂದ ತಮ್ಮ ಶಿಕ್ಷಣವನ್ನು ಮಧ್ಯದಲ್ಲಿ ನಿಲ್ಲಿಸಬೇಕಾಯಿತು. ಅವರು ಮನೆಗೆ ಹಿಂದಿರುಗಿ ಹಣದ ವ್ಯವಸ್ಥೆ ಮಾಡಿಕೊಂಡು ಹಿಂತಿರುಗಿ ಅವರ ಶಿಕ್ಷಣವನ್ನು ಪೂರ್ಣಗೊಳಿಸಿದರು ಎಂದರು.

    ಅಮಿತ್ ಶಾ ಅವರು ಅಂಬೇಡ್ಕರ್ ಅವರನ್ನು ಅಪಹಾಸ್ಯ ಮಾಡುತ್ತಿದ್ದಾರೆ. ಅವರ ಹೇಳಿಕೆಯಿಂದ ನನಗೂ ಸೇರಿ ಕೋಟ್ಯಂತರ ಅನುಯಾಯಿಗಳಿಗೆ ನೋವಾಗಿದೆ. ಸ್ವತಂತ್ರ ಭಾರತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಯಾರಾದರೂ ಸಂಸತ್ತಿನಲ್ಲಿ ಅಪಹಾಸ್ಯ ಮಾಡುತ್ತಾರೆಂದು ಯಾರೂ ಊಹಿಸಿರಲಿಲ್ಲ. ಅಮಿತ್ ಶಾ ಅವರ ಅಗೌರವದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ನಾನು ಈ ಘೋಷಣೆ ಮಾಡುತ್ತಿದ್ದೇನೆ. ಯೋಜನೆಯಲ್ಲಿ ಸರ್ಕಾರಿ ನೌಕರರ ಮಕ್ಕಳನ್ನೂ ಸೇರಿಸಲಾಗುವುದು ಎಂದು ತಿಳಿಸಿದರು.ಇದನ್ನೂ ಓದಿ: ಬಾಂಗ್ಲಾದಲ್ಲಿ ಮುಂದುವರಿದ ಹಿಂದೂ ದೇವಾಲಗಳ ಮೇಲಿನ ದಾಳಿ – 2 ದಿನಗಳಲ್ಲಿ 8 ವಿಗ್ರಹ ಧ್ವಂಸ

  • ದೆಹಲಿ ಚುನಾವಣೆಗೆ ಕಾಂಗ್ರೆಸ್ ಜೊತೆ ಆಪ್ ಮೈತ್ರಿ ಇಲ್ಲ – ಅರವಿಂದ್ ಕೇಜ್ರಿವಾಲ್

    ದೆಹಲಿ ಚುನಾವಣೆಗೆ ಕಾಂಗ್ರೆಸ್ ಜೊತೆ ಆಪ್ ಮೈತ್ರಿ ಇಲ್ಲ – ಅರವಿಂದ್ ಕೇಜ್ರಿವಾಲ್

    ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ (Delhi Assembly Election) ತಮ್ಮ ಪಕ್ಷವು ಸ್ವಂತ ಬಲದಲ್ಲಿ ಸ್ಪರ್ಧಿಸಲಿದೆ. ಕಾಂಗ್ರೆಸ್ (Congress) ಜೊತೆಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಎಎಪಿ (AAP) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಸ್ಪಷ್ಟಪಡಿಸಿದ್ದಾರೆ.

    ಕಾಂಗ್ರೆಸ್ ಜೊತೆಗೆ ಆಪ್ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ವರದಿ ಬೆನ್ನಲ್ಲೇ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸ್ಪಷ್ಟಪಡಿಸಿದ ಅವರು, ಆಮ್ ಆದ್ಮಿ ಪಕ್ಷವು ದೆಹಲಿಯಲ್ಲಿ ತನ್ನ ಸ್ವಂತ ಬಲದ ಮೇಲೆ ಈ ಚುನಾವಣೆಯಲ್ಲಿ ಹೋರಾಡಲಿದೆ. ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.ಇದನ್ನೂ ಓದಿ: BBK 11: ಮೋಕ್ಷಿತಾ ಹೇಳಿದ್ದು ಸರಿ- ಮಂಜು ಜೊತೆಗಿನ ಫ್ರೆಂಡ್‌ಶಿಪ್‌ ಕಟ್‌ ಎಂದ ಗೌತಮಿ

    ಇಂಡಿಯಾ ವಿರೋಧ ಪಕ್ಷದ ಭಾಗವಾಗಿದ್ದರೂ ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಅರವಿಂದ್ ಕೇಜ್ರಿವಾಲ್ ತಳ್ಳಿಹಾಕಿದ್ದು ಇದೇ ಮೊದಲಲ್ಲ. ಈ ತಿಂಗಳ ಆರಂಭದಲ್ಲಿ, ಕೇಜ್ರಿವಾಲ್ ಪಕ್ಷವು ಸತತ ಮೂರನೇ ಅವಧಿಗೆ ಗಮಹರಿಸುತ್ತಿರುವುದರಿಂದ ದೆಹಲಿ ವಿಧಾನಸಭಾ ಚುನಾವಣೆಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಿಸ್ಸಂದಿಗ್ಧವಾಗಿ ಹೇಳಿದರು.

    2015 ರಿಂದ ದೆಹಲಿಯಲ್ಲಿ ಎಎಪಿ ಅಧಿಕಾರದಲ್ಲಿದೆ. ಈ ಚುನಾವಣೆ ಮೂಲಕ ದೆಹಲಿಯಲ್ಲಿ ಬಿಜೆಪಿ ತನ್ನ ಪ್ರಭಾವವನ್ನು ವಿಸ್ತರಿಸುವ ವಿಫಲ ಪ್ರಯತ್ನ ಮಾಡುತ್ತಿದೆ. ಆದರೆ ಇಂಡಿಯಾ ಒಕ್ಕೂಟ ಒಟ್ಟಾಗಿ ಚುನಾವಣೆಗೆ ಹೋಗುವ ಲೆಕ್ಕಾಚಾರದಲ್ಲಿದೆ.

    ಲೋಕಸಭೆ ಚುನಾವಣೆಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಒಟ್ಟಾಗಿ ಸ್ಪರ್ಧಿಸಿದ್ದವು ಆದರೆ ಬಿಜೆಪಿ ಎಲ್ಲಾ ಸ್ಥಾನಗಳನ್ನು ಗೆದ್ದಿತ್ತು. ಬಳಿಕ ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೆಂದರ್ ಯಾದವ್ ಅವರು ಎಎಪಿ ಜೊತೆಗಿನ ಮೈತ್ರಿಯನ್ನು “ತಪ್ಪು” ಎಂದು ಕರೆದರು ಮತ್ತು ನಗರದ ಎಲ್ಲಾ 70 ವಿಧಾನಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಪ್ರತಿಪಾದಿಸಿದರು.

    ಈ ನಿರ್ಧಾರವು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆಗೆ ವೇದಿಕೆಯನ್ನು ಸಿದ್ಧಪಡಿಸಿದ್ದು, ಎಎಪಿ, ಕಾಂಗ್ರೆಸ್ ಮತ್ತು ಬಿಜೆಪಿ ಅಧಿಕಾರಕ್ಕಾಗಿ ಪೈಪೋಟಿ ನಡೆಸುತ್ತಿವೆ. 2015 ಮತ್ತು 2020ರಲ್ಲಿ ನಡೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ, ಎಎಪಿ ಕ್ರಮವಾಗಿ 67 ಮತ್ತು 62 ಸ್ಥಾನಗಳನ್ನು ಗೆದ್ದಿದ್ದರೆ, 70 ಸದಸ್ಯರ ಶಾಸಕಾಂಗದಲ್ಲಿ ಬಿಜೆಪಿ ಮೂರು ಮತ್ತು ಎಂಟು ಸ್ಥಾನಗಳನ್ನು ಪಡೆದುಕೊಂಡಿತ್ತು. ಎರಡೂ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿತ್ತು.ಇದನ್ನೂ ಓದಿ: ಭಾರತಕ್ಕೂ ಮೊದಲೇ ಚಾಂಪಿಯನ್ಸ್‌ ಟ್ರೋಫಿ ಬಾಯ್ಕಾಟ್‌ ಮಾಡ್ಬೇಕು – ಪಾಕ್ ಹೊಸ ಕ್ಯಾತೆ

  • ದೆಹಲಿ ವಿಧಾನಸಭೆಯಲ್ಲಿ ಶೂನ್ಯ ಸಾಧನೆ – ಕಾಂಗ್ರೆಸ್ ಉಸ್ತುವಾರಿ ಸ್ಥಾನಕ್ಕೆ ಪಿ.ಸಿ ಚಾಕೋ ರಾಜೀನಾಮೆ

    ದೆಹಲಿ ವಿಧಾನಸಭೆಯಲ್ಲಿ ಶೂನ್ಯ ಸಾಧನೆ – ಕಾಂಗ್ರೆಸ್ ಉಸ್ತುವಾರಿ ಸ್ಥಾನಕ್ಕೆ ಪಿ.ಸಿ ಚಾಕೋ ರಾಜೀನಾಮೆ

    ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಿ 67 ಸ್ಥಾನಗಳಲ್ಲಿ ಠೇವಣಿ ಕಳೆದುಕೊಂಡಿದ್ದ ಕಾಂಗ್ರೆಸ್ ಕೆಲ ನಾಯಕರ ತಲೆ ದಂಡಕ್ಕೆ ಮುಂದಾಗಿದೆ. ದೆಹಲಿ ಕಾಂಗ್ರೆಸ್ ಉಸ್ತುವಾರಿ ಸ್ಥಾನಕ್ಕೆ ಪಿ.ಸಿ ಚಾಕೋ ರಾಜೀನಾಮೆ ನೀಡುವ ಮೂಲಕ ಇದಕ್ಕೆ ಮುನ್ನುಡಿ ಬರೆದಿದ್ದಾರೆ.

    2ನೇ ಬಾರಿಗೆ ಅತ್ಯಂತ ಹಳೆ ಪಕ್ಷವಾದ ಕಾಂಗ್ರೆಸ್ ಶೂನ್ಯ ಫಲಿತಾಂಶ ಪಡೆದಿರುವುದು ಪಕ್ಷಕ್ಕೆ ಮುಜುಗರ ತಂದಿದೆ. ಸೋಲಿಗೆ ಕಾರಣ ಹುಡುಕುವುದರ ಜೊತೆಗೆ ದೆಹಲಿ ಕಾಂಗ್ರೆಸ್ ಘಟಕದಲ್ಲಿ ಭಾರಿ ಬದಲಾವಣೆ ತರಲಿದ್ದೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಶೀಲಾ ದೀಕ್ಷಿತ್ ನಂತರ ದೆಹಲಿಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ನಾಯಕರು ವಿಫಲವಾಗಿರುವುದು ಕೂಡ ಚರ್ಚೆಗೆ ಒಳಪಟ್ಟಿದ್ದು, ಸೋಲಿಗೆ ಕಾರಣ ಹುಡುಕಲು ಕಾಂಗ್ರೆಸ್ ಮುಂದಾಗಿದೆ.

    ದೆಹಲಿ ಉಸ್ತುವಾರಿ ವಹಿಸಿಕೊಂಡಿದ್ದ ಪಿ.ಸಿ ಚಾಕೋ ಅವರಿಂದ ಪಕ್ಷಕ್ಕೆ ಸೋಲಾಯಿತು ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಪಕ್ಷದ ಸೋಲಿಗೆ ಕಾರಣ ಏನು ಎಂದು ಹುಡುಕಿ ತಳಮಟ್ಟದಿಂದ ಪಕ್ಷ ಸಂಘಟಿಸುತ್ತೇವೆ. ಸೋಲಿಗೆ ಯಾರನ್ನು ಹೊಣೆಗಾರರನ್ನಾಗಿ ಮಾಡುವುದಿಲ್ಲ. ಸಿದ್ಧಾಂತ ಬಿಟ್ಟುಕೊಡದೆ ಪಕ್ಷವನ್ನು ಕಟ್ಟುತ್ತೇವೆ. ಕೆಲವೊಂದು ತ್ಯಾಗ ಮಾಡಿ ಪಕ್ಷವನ್ನು ಬಲಪಡಿಸುತ್ತೇವೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.

  • ದೆಹಲಿ ಸರ್ಕಾರ ರಚನೆ ಫಿಕ್ಸ್, 45 ಸ್ಥಾನ ಗೆಲ್ಲುತ್ತೇವೆ: ಅಮಿತ್ ಶಾ

    ದೆಹಲಿ ಸರ್ಕಾರ ರಚನೆ ಫಿಕ್ಸ್, 45 ಸ್ಥಾನ ಗೆಲ್ಲುತ್ತೇವೆ: ಅಮಿತ್ ಶಾ

    ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನಾವು 45 ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಬಿಜೆಪಿ ಮಾಜಿ ಅಧ್ಯಕ್ಷ, ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅವರು, ಚುನಾವಣೆಯ ಪ್ರಚಾರದ ವೇಳೆ ದೆಹಲಿಯ ಜನರೊಂದಿಗೆ ಸಂವಹನ ನಡೆಸಲು ನನಗೆ ಅವಕಾಶ ಸಿಕ್ಕಿತು. ಸುಳ್ಳು ಭರವಸೆಗಳು, ಸಮಾಧಾನ ಮತ್ತು ಅರಾಜಕತೆ ಎದುರಿಸುತ್ತಿರುವ ದೆಹಲಿಗೆ ಈಗ ಅಭಿವೃದ್ಧಿಯ ಅಗತ್ಯವಿದೆ. ನಾವು ನೋಡಿದಂತೆ ಫೆಬ್ರವರಿ 11ರಂದು ಹೊರ ಬೀಳುವ ಫಲಿತಾಂಶದಲ್ಲಿ ಬಿಜೆಪಿ 45ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚಿಸಲಿದೆ ಎಂಬುದು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.

    ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಅನೇಕ ನಾಯಕರು ದೆಹಲಿಯ ವಿವಿಧ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಮಾಡಿದ್ದಾರೆ. ಇಂದು ಸಾರ್ವಜನಿಕ ಪ್ರಚಾರ, ಸಮಾವೇಶಕ್ಕೆ ತೆರೆ ಬೀಳುವ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ಇಂದು ಅದಿಪುರ, ಸೀಮಾಪುರಿ ಹಾಗೂ ಹರಿನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪರ ರೋಡ್ ಶೋ ಹಾಗೂ ಪ್ರಚಾರ ಕೈಗೊಂಡರು.

    ದೆಹಲಿಯ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳ ಮತದಾನವು ಫೆಬ್ರವರಿ 8ರಂದು ಬೆಳಗ್ಗೆ 8ರಿಂದ ಸಂಜೆ 6ರ ವರೆಗೆ ನಡೆಯಲಿದ್ದು, ಫೆಬ್ರವರಿ 11ರಂದು ಫಲಿತಾಂಶ ಹೊರ ಬೀಳಲಿದೆ. 2015ರ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ 67 ಕ್ಷೇತ್ರಗಳಲ್ಲಿ ಗೆದ್ದು ಸರ್ಕಾರ ರಚಿಸಿತ್ತು. ಬಿಜೆಪಿ ಕೇವಲ 3 ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಆದರೆ ಉಳಿದ ಪಕ್ಷಗಳಾದ ಕಾಂಗ್ರೆಸ್, ಸಮಾಜವಾದಿ ಪಕ್ಷ, ಶಿರೋಮಣಿ ಅಕಾಲಿಕ ದಳ, ಇಂಡಿಯ್ ನ್ಯಾಷನಲ್ ಲೋಕದಳ ಖಾತೆ ತೆರೆಯುವಲ್ಲಿ ವಿಫಲವಾಗಿದ್ದವು.

  • ಕೇಜ್ರಿವಾಲ್ ವಿರುದ್ಧ ಬಿಜೆಪಿಯ ಯುವ ಸಂಘಟನಾ ಚತುರ ಕಣಕ್ಕೆ

    ಕೇಜ್ರಿವಾಲ್ ವಿರುದ್ಧ ಬಿಜೆಪಿಯ ಯುವ ಸಂಘಟನಾ ಚತುರ ಕಣಕ್ಕೆ

    ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆಗೆ ನವದೆಹಲಿ ಕ್ಷೇತ್ರದಿಂದ ರಾಜ್ಯ ಯುವ ಮೊರ್ಚಾ ಅಧ್ಯಕ್ಷ ಸುನಿಲ್ ಯಾದವ್ ಅವರನ್ನ ಬಿಜೆಪಿ ಕಣಕ್ಕಿಳಿಸಿದೆ. ಯುವ ಮುಖಂಡ ಮತ್ತು ಹೊಸ ಮುಖಕ್ಕೆ ಮಣೆ ಹಾಕುವ ಮೂಲಕ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಓಟಕ್ಕೆ ಬ್ರೇಕ್ ಹಾಕಲು ಬಿಜೆಪಿ ಮುಂದಾಗಿದೆ.

    ನವದೆಹಲಿ ಕ್ರೇತ್ರದಿಂದ ಸ್ಪರ್ಧಿಸಿರುವ ಟೋಪಿವಾಲ್‍ನ ಹ್ಯಾಟ್ರಿಕ್ ಗೆಲುವಿಗೆ ತಡೆ ಹಾಕಲು ಮುಂದಾಗಿರುವ ಬಿಜೆಪಿ, ಅಳೆದು ತೂಗಿ ಟಿಕೆಟ್ ಫೈನಲ್ ಮಾಡಿದೆ. 2013 ಹಾಗೂ 2015ರಲ್ಲೇ ಸುನಿಲ್ ಯಾದವ್‍ಗೆ ಟಿಕೆಟ್ ಸಿಗುತ್ತದೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಕೊನೆ ಕ್ಷಣದಲ್ಲಿ ನೂಪುರ್ ಶರ್ಮಾ ಗೆ ಟಿಕೆಟ್ ನೀಡಿದ್ದರಿಂದ ಯಾದವ್ ಗೆ ಅವಕಾಶ ಸಿಕ್ಕಿರಲಿಲ್ಲ. ಈ ಬಾರಿ ಸುನಿಲ್ ಯಾದವ್ ಗೆ ಟಿಕೆಟ್ ನೀಡುವ ಮೂಲಕ ಹೊಸ ಪ್ರಯತ್ನಕ್ಕೆ ಮುಂದಾಗಿದೆ.

    ವಕೀಲ ವೃತ್ತಿಯಲ್ಲಿರುವ 44 ವರ್ಷದ ಸುನಿಲ್ ಯಾದವ್, ಬಿಜೆಪಿ ಯುವ ಮೋರ್ಚಾ ಘಟಕದ ಮಂಡಲ ಅಧ್ಯಕ್ಷರಾಗುವ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದ್ದರು. ಸಾಮಾಜಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದವರು. ಪಕ್ಷ ಸಂಘಟನೆಯಲ್ಲಿ ಅವರ ಪರಿಶ್ರಮವನ್ನು ಗುರುತಿಸಿದ ನಾಯಕರು, ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷರಾಗಿ ನೇಮಿಸಿದ್ದರು. ಬಳಿಕ ದೆಹಲಿ ವಲಯದ ಪ್ರಧಾನ ಕಾರ್ಯದರ್ಶಿ ಹಾಗೂ ದೆಹಲಿ ಘಟಕದ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.

    ಸಾಮಾಜಿಕ ಜಾಲತಾಣಗಳಲ್ಲೂ ಸುನಿಲ್ ಯಾದವ್ ಕ್ರಿಯಾಶೀಲರಾಗಿದ್ದಾರೆ. ಅವರ ಟ್ವಿಟ್ಟರ್ ಖಾತೆಯನ್ನು 16 ಸಾವಿರಕ್ಕೂ ಹೆಚ್ಚು ಮಂದಿ ಹಿಂಬಾಲಿಸುತ್ತಿದ್ದಾರೆ. ಅವರ ಫೇಸ್‍ಬುಕ್ ಖಾತೆಯಲ್ಲಿ ಸುಮಾರು ಒಂದು ಲಕ್ಷ ‘ಲೈಕ್’ಗಳಿರುವುದು ವಿಶೇಷವಾಗಿದೆ. ಸಾಮಾಜಿಕ ಜಾಲತಾಣಗಳನ್ನೂ ಇವರು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳಲಿದ್ದಾರೆ. ಸುನಿಲ್ ಯಾದವ್ ಉತ್ತರ ಪ್ರದೇಶದ ಪ್ರತಾಪಗಡ ಮೂಲದವರು.

  • ‘ಇಷ್ಟವಿರುವ ಪಕ್ಷಕ್ಕೆ ಹೋಗಬಹುದು’- ಪವನ್ ವರ್ಮಾಗೆ ನಿತೀಶ್ ಕುಮಾರ್ ಟಾಂಗ್

    ‘ಇಷ್ಟವಿರುವ ಪಕ್ಷಕ್ಕೆ ಹೋಗಬಹುದು’- ಪವನ್ ವರ್ಮಾಗೆ ನಿತೀಶ್ ಕುಮಾರ್ ಟಾಂಗ್

    ಪಾಟ್ನಾ: ಜೆಡಿಯು ಹಿರಿಯ ನಾಯಕ ಪವನ್ ವರ್ಮಾ ಅವರ ಟ್ವೀಟ್‍ಗೆ ತಿರುಗೇಟು ನೀಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಅವರು ಇಷ್ಟವಿರುವ ಪಕ್ಷಕ್ಕೆ ಹೋಗಬಹುದು, ಅವರಿಗೆ ಶುಭಾಶಯ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

    ಬಿಜೆಪಿಯೊಂದಿಗೆ ಜೆಡಿಯು ಮೈತ್ರಿ ಮಾಡಿಕೊಳ್ಳುವ ವಿಚಾರದಲ್ಲಿ ಸಿಎಂ ನಿತೀಶ್ ಕುಮಾರ್ ಅವರು ಹಿಂದೇಟು ಹಾಕುತ್ತಿದ್ದಾರೆ ಎಂದು ಪವನ್ ವರ್ಮಾ ಮಂಗಳವಾರ ಟ್ವೀಟ್ ಮಾಡಿದ್ದರು. ಸದ್ಯ ಈ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿರುವ ನಿತೀಶ್ ಕುಮಾರ್ ಅವರು ತಿರುಗೇಟು ನೀಡಿ ಟಾಂಗ್ ನೀಡಿದ್ದಾರೆ.

    ನವದೆಹಲಿಯಲ್ಲಿ ಫೆ.8 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಹಾಗೂ ಸಿಎಎ ವಿಚಾರವಾಗಿ ಹಿಂದೇಟು ಹಾಕುತ್ತಿದ್ದಾರೆ ಎಂದು ಪವನ್ ವರ್ಮಾ ಬಹಿರಂಗವಾಗಿಯೂ ಹೇಳಿಕೆ ನೀಡಿದ್ದರು. ಈ ಹೇಳಿಕೆ ನಿತೀಶ್ ಕುಮಾರ್ ಪ್ರತಿಕ್ರಿಯೆ ನೀಡಿ, ಪಕ್ಷದ ವಿಚಾರಗಳ ಕುರಿತು ಬಹಿರಂಗ ಹೇಳಿಕೆ ನೀಡುವುದು ಉತ್ತಮವಲ್ಲ. ಅವರಿಗೆ ನನ್ನ ಮೇಲೆ ಗೌರವವಿಲ್ಲದಿದ್ದರೂ, ನನಗೆ ಅವರ ಮೇಲೆ ಗೌರವವಿದೆ. ಪಕ್ಷದ ಆಂತರಿಕ ಸಭೆಯಲ್ಲಿ ಅವರ ಅಸಮಾಧಾನಗಳ ಕುರಿತು ಚರ್ಚೆ ನಡೆಸಿಬೇಕು. ಒಂದೊಮ್ಮೆ ಪಕ್ಷಾಂತರ ಮಾಡಬೇಕೆಂಬ ಮನಸ್ಸಿದ್ದರೆ ಅವರು ಮಾಡಬಹುದು ಎಂದು ಪರೋಕ್ಷವಾಗಿ ಪವನ್ ಶರ್ಮಾ ಹೆಸರು ಪ್ರಸ್ತಾಪ ಮಾಡದೆ ತಿರುಗೇಟು ನೀಡಿದರು.

    ಪವನ್ ವರ್ಮಾ ಮಾಜಿ ರಾಜ್ಯಸಭಾ ಸದಸ್ಯರಾಗಿದ್ದು, ಸದ್ಯ ಜೆಡಿಯು ಪಕ್ಷ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ಸಿಎಂ ನಿತೀಶ್ ಕುಮಾರ್ ಅವರ ಹೇಳಿಕೆಗೆ ಸ್ವಾಗತ ಕೋರಿರುವ ಪವನ್ ವರ್ಮಾ, ತಮ್ಮ ಪತ್ರಕ್ಕೆ ಪ್ರತಿಕ್ರಿಯೆ ಬರುವವರೆಗೂ ಕಾಯ್ದು ಆ ಬಳಿಕ ತಮ್ಮ ನಿರ್ಧಾರವನ್ನು ಕೈಗೊಳ್ಳುತ್ತೇನೆ ಎಂದಿದ್ದಾರೆ.

    ಸಿಎಂ ನಿತೀಶ್ ಕುಮಾರ್ ಅವರಿಗೆ ಬರೆದಿದ್ದ ಪತ್ರದಲ್ಲಿ ಪವನ್ ವರ್ಮಾ, ನಿತೀಶ್ ಕುಮಾರ್ ಅವರಿಗೆ ಜೆಡಿಯು ಪಕ್ಷ ಆರ್ ಎಸ್‍ಎಸ್ ಸಿದ್ಧಾಂತಗಳನ್ನು ಹೊಂದಿರುವ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಪಕ್ಷ ಹೇಗೆ ತನ್ನ ಸಿದ್ಧಾಂತಗಳನ್ನು ಉಳಿಸಿಕೊಳ್ಳಲು ಸಾಧ್ಯ ಎಂದು ಸ್ಪಷ್ಟನೆ ಕೇಳಿ ಸವಾಲು ಎಸೆದಿದ್ದರು. ಅಲ್ಲದೇ 2012ರಲ್ಲಿ ತಮ್ಮೊಂದಿಗೆ ಮಾತನಾಡುವ ವೇಳೆ ಮೋದಿ ಅವರ ರಾಜಕೀಯ ದೇಶಕ್ಕೆ ಏಕೆ? ಮಾರಕ ಎಂದು ನಿತೀಶ್ ವಿವರಿಸಿದ್ದನ್ನು ಪವನ್ ಶರ್ಮಾ ನೆನಪು ಮಾಡಿದ್ದರು.

     

  • ಪ್ರಣಾಳಿಕೆಯಲ್ಲ ‘ಗ್ಯಾರೆಂಟಿ ಕಾರ್ಡ್’ ಬಿಡುಗಡೆ ಮಾಡಿದ ಆಪ್

    ಪ್ರಣಾಳಿಕೆಯಲ್ಲ ‘ಗ್ಯಾರೆಂಟಿ ಕಾರ್ಡ್’ ಬಿಡುಗಡೆ ಮಾಡಿದ ಆಪ್

    ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆ ಸಿದ್ಧವಾಗಿರುವ ಆಮ್ ಆದ್ಮಿ ಪ್ರಣಾಳಿಕೆ ಬದಲು ಗ್ಯಾರೆಂಟಿ ಕಾರ್ಡ್ ಬಿಡುಗಡೆ ಮಾಡಿದೆ. ಅಧಿಕಾರಕ್ಕೆ ಬಂದಲ್ಲಿ ಗ್ಯಾರೆಂಟಿ ಕಾರ್ಡ್ ನಲ್ಲಿರುವ ಹತ್ತು ಅಂಶಗಳನ್ನು ಕಡ್ಡಾಯವಾಗಿ ಜಾರಿ ಮಾಡುವ ಭರವಸೆ ನೀಡಿದೆ.

    ಇಂದು ದೆಹಲಿಯ ಪಕ್ಷದ ಕಚೇರಿಯಲ್ಲಿ ಗ್ಯಾರೆಂಟಿ ಕಾರ್ಡ್ ಬಿಡುಗಡೆ ಮಾಡಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರ ರಚನೆಯಾಗಿ ಹತ್ತು ದಿನಗಳಲ್ಲಿ ಕೆಲಸ ಆರಂಭಿಸುವ ಭರವಸೆ ನೀಡಿದ್ದಾರೆ.

    ಹತ್ತು ಅಂಶಗಳ ಗ್ಯಾರೆಂಟಿ ಕಾರ್ಡ್ ನಲ್ಲಿ ಶಾಲಾ ಮಕ್ಕಳಿಗೆ ಭಾನುವಾರ ಉಚಿತ ಬಸ್ ಪ್ರಯಾಣ ಅವಕಾಶ ನೀಡುವ ಭರವಸೆ ನೀಡಿದೆ. ಮಹಿಳೆಯರ ಸುರಕ್ಷತೆಗಾಗಿ ದೆಹಲಿ ಬಸ್ ಗಳಲ್ಲಿ ‘ಮೊಹಲ್ಲಾ ಮಾರ್ಷಲ್’ಗಳನ್ನ ನೇಮಕ ಮಾಡಲಿದೆ. 200 ಯೂನಿಟ್ ವಿದ್ಯುತ್ ಮತ್ತು 2000 ಲೀಟರ್ ನೀರಿನ ಉಚಿತ ಬಳಕೆಯನ್ನ ಮುಂದುವರಿಸುವ ಆಶ್ವಾಸನೆ ಗ್ಯಾರೆಂಟಿ ಕಾರ್ಡ್ ನಲ್ಲಿ ನೀಡಿದೆ.

    ದೆಹಲಿಯ ಎಲ್ಲ ನಾಗರಿಕರಿಗೆ ಉಚಿತ ಆರೋಗ್ಯ ಸೌಲಭ್ಯ, ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ದೆಹಲಿ ಮತ್ತು ಎನ್‍ಸಿಆರ್ ಭಾಗದಲ್ಲಿ ಎರಡು ಕೋಟಿ ಸಸಿಗಳನ್ನು ನೆಡುವುದು, ಸಾರಿಗೆ ಉನ್ನತಿಕರಿಸುವ ನಿಟ್ಟಿನಲ್ಲಿ 11,000 ಹೆಚ್ಚುವರಿ ಬಸ್ ಗಳ ರಸ್ತೆಗಿಳಿಸುವುದು 500 ಕಿಮೀ ಮೆಟ್ರೊ ಲೈನ್ ಅಭಿವೃದ್ಧಿ ಪಡಿಸುವ ವಾಗ್ದಾನ ಆಮ್ ಆದ್ಮಿ ನೀಡಿದೆ.

    ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಶಿಕ್ಷಣ, ಅನಧಿಕೃತ ಕಾಲೋನಿಗಳಿಗೆ ರಸ್ತೆ ನೀರು, ಬೆಳಕಿನ ಸೌಲಭ್ಯ ಹಾಗೂ ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಅವಳವಡಿಕೆ, ನಿವಾಸ ರಹಿತರಿಗೆ ಸೂರು ಕಲ್ಪಿಸುವುದು, ಪಾರ್ಕ್ ಮತ್ತು ರೋಡ್ ಗಳನ್ನು ಸುಂದರಗೊಳಿಸುವುದು, ಯಮುನಾ ನದಿಯನ್ನ ಸ್ವಚ್ಛಗೊಳಿಸುವ ಆಶ್ವಾಸನೆ ನೀಡಲಾಗಿದೆ.

  • ಆಪ್‍ಗಿಂತ ಐದು ಪಟ್ಟು ಹೆಚ್ಚು ಸಬ್ಸಿಡಿ- ಬಿಜೆಪಿಗೆ ಕೇಜ್ರಿವಾಲ್ ತಿರುಗೇಟು

    ಆಪ್‍ಗಿಂತ ಐದು ಪಟ್ಟು ಹೆಚ್ಚು ಸಬ್ಸಿಡಿ- ಬಿಜೆಪಿಗೆ ಕೇಜ್ರಿವಾಲ್ ತಿರುಗೇಟು

    ನವದೆಹಲಿ: ಆಪ್ ಭದ್ರಕೋಟೆ ಎನಿಸಿಕೊಂಡಿರುವ ದೆಹಲಿಯನ್ನು ವಶಪಡಿಸಿಕೊಳ್ಳಲು ಬಿಜೆಪಿ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ತನ್ನ ಪ್ರಣಾಳಿಕೆಯಲ್ಲಿ ಆಮ್ ಆದ್ಮಿ ಸರ್ಕಾರಕ್ಕಿಂತ ಐದು ಪಟ್ಟು ಹೆಚ್ಚು ಸಬ್ಸಿಡಿ ನೀಡುವ ಭರವಸೆ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

    ಶೀಘ್ರದಲ್ಲೇ ಬಿಜೆಪಿ ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಪ್ರಾಣಾಳಿಕೆ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು ಐದು ಪಟ್ಟು ಸಬ್ಸಿಡಿ ಹೆಚ್ಚಿಸುವ ಬಗ್ಗೆ ಪ್ರಣಾಳಿಕೆ ತಯಾರಿಕೆ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ ಎನ್ನಲಾಗಿದೆ.

    ಪ್ರಣಾಳಿಕೆ ತಯಾರಿಕೆ ನೇತೃತ್ವದ ಹೊತ್ತಿರುವ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ, ನಾವು ಆಮ್ ಅದ್ಮಿ ಸರ್ಕಾರ ನೀಡಿರುವ ಸಬ್ಸಿಡಿಗಳನ್ನು ರದ್ದು ಪಡಿಸುವ ಯೋಚನೆ ಇಲ್ಲ. ಬದಲಿಗೆ ಸಬ್ಸಿಡಿಯನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಲಾಗಿದೆ ಎಂದಿದ್ದಾರೆ. 1731 ಅಕ್ರಮ ಕಾಲೋನಿಗಳನ್ನು ಕೇಂದ್ರ ಸರ್ಕಾರ ಸಕ್ರಮ ಮಾಡಿದ್ದು, ಸಿಎಎ ಮೂಲಕ ದೆಹಲಿಯ ಅಕ್ರಮ ನಿವಾಸಿಗರಿಗೆ ಪೌರತ್ವ ನೀಡಿದ್ದೇವೆ ಮತ್ತು ಅಕ್ರಮ ಕಾಲೋನಿಗಳನ್ನು ಸಕ್ರಮ ಮಾಡಿರುವುದು ಪ್ರಣಾಳಿಕೆಯಲ್ಲಿ ಸಮರ್ಥಿಸಿಕೊಳ್ಳಲಿದ್ದೇವೆ ಎಂದಿದ್ದಾರೆ.

    ದೆಹಲಿಯಲ್ಲಿ ಈಗಾಗಲೇ ಎಎಪಿ ಕುಡಿಯುವ ನೀರು, ವಿದ್ಯುತ್‍ಗೆ ಸಬ್ಸಿಡಿ ನೀಡಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಿದೆ. ಇದನ್ನು ಮುಂದುವರಿಸುವ ಜೊತೆಗೆ ಈ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಬಿಜೆಪಿ ಚಿಂತಿಸಿದೆ ಎನ್ನಲಾಗುತ್ತಿದೆ.

    ಇದಕ್ಕೆ ತಿರುಗೇಟು ನೀಡಿ ಟ್ವೀಟ್ ಮಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ‘ನಮ್ಮಕ್ಕಿಂತ ಐದು ಪಟ್ಟೇ’ ಎಂದು ವ್ಯಂಗ್ಯ ಮಾಡಿದ್ದಾರೆ. ಅಲ್ಲದೇ 200 ಯೂನಿಟ್‍ಗೆ ಹೆಚ್ಚು ಪಟ್ಟು ಎಂದರೆ 1000 ಯೂನಿಟ್? 20 ಸಾವಿರ ಲೀಟರ್ ಉಚಿತ ನೀರಿಗೆ ಐದು ಪಟ್ಟು ಎಂದರೆ ಒಂದು ಲಕ್ಷ ಲೀಟರ್ ನೀರು ಉಚಿತವಾಗಿ ನೀಡಲಾಗುವುದೇ ಎಂದಿದ್ದಾರೆ.

    ಬಿಜೆಪಿ ಈ ಹೇಳಿಕೆ ದೆಹಲಿಯ ಜನರನ್ನು ಗೇಲಿ ಮಾಡಿದಂತಿದೆ ಎಂದು ಟೀಕಿಸಿದ್ದಾರೆ. ಅಲ್ಲದೇ ದೆಹಲಿಗೂ ಮುನ್ನ ಬಿಜೆಪಿ ಆಡಳಿತ ರಾಜ್ಯದಲ್ಲಿ ಮೊದಲು ಸಬ್ಸಿಡಿ ಆರಂಭಿಸಿ ಎಂದು ಸವಾಲು ಹಾಕಿದ್ದಾರೆ.