Tag: Delhi Capitals

  • ಮೆಗ್ ಲ್ಯಾನಿಂಗ್ ಫಿಫ್ಟಿ – ಯುಪಿ ವಿರುದ್ಧ ಡೆಲ್ಲಿಗೆ 7 ವಿಕೆಟ್‌ಗಳ ರೋಚಕ ಜಯ

    ಮೆಗ್ ಲ್ಯಾನಿಂಗ್ ಫಿಫ್ಟಿ – ಯುಪಿ ವಿರುದ್ಧ ಡೆಲ್ಲಿಗೆ 7 ವಿಕೆಟ್‌ಗಳ ರೋಚಕ ಜಯ

    ವಡೋದರಾ: ಕೊನೆವರೆಗೂ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಯುಪಿ ವಾರಿಯರ್ಸ್‌ (UP Warriors) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡ 7 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.

    ಟಾಸ್ ಗೆದ್ದ ಡೆಲ್ಲಿ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್‌ಗೆ ಇಳಿದ ಯುಪಿ ವಾರಿಯರ್ಸ್ ತಂಡ 7 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿ, ಡೆಲ್ಲಿಗೆ 167 ರನ್‌ಗಳ ಟಾರ್ಗೆಟ್ ನೀಡಿತು. ಇದನ್ನೂ ಓದಿ: ಕೊಪ್ಪಳ| ನದಿಯಲ್ಲಿ ಈಜಲು ಹೋಗಿ ಹೈದರಾಬಾದ್‌ನ ವೈದ್ಯೆ ಸಾವು

    ಯುಪಿ ವಾರಿಯರ್ಸ್‌ ನೀಡಿದ ಗುರಿ ಬೆನ್ನಟ್ಟಿದ ಡೆಲ್ಲಿ ಟೀಂ ಕೇವಲ ಒಂದು ಬಾಲ್ ಬಾಕಿ ಇರುವಾಗಲೇ ಗುರಿ ತಲುಪಿತು. ತಂಡದ ನಾಯಕಿ ಮೆಗ್ ಲ್ಯಾನಿಂಗ್ 12 ಫೋರ್ ಬಾರಿಸುವ ಮೂಲಕ 49 ಬಾಲ್‌ಗೆ 69 ರನ್ ಗಳಿಸಿದರು. ಲ್ಯಾನಿಂಗ್ ಮತ್ತು ಶೆಫಾಲಿ ವರ್ಮಾ 42 ಬಾಲ್‌ಗೆ 65 ರನ್‌ಗಳ ಜೊತೆಯಾಟವಾಡಿ ತಂಡದ ಗೆಲುವಿಗೆ ಅಡಿಪಾಯ ಹಾಕಿದರು. ಸದರ್ಲ್ಯಾಂಡ್ 35 ಎಸೆತಕ್ಕೆ 42 ರನ್ ಬಾರಿಸಿದರೆ, ಕಾಪ್ 17 ಬಾಲ್‌ಗೆ 29 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಇದನ್ನೂ ಓದಿ: ಲಾಥಮ್ – ಯಂಗ್ ಶತಕಗಳ ಅಬ್ಬರಕ್ಕೆ ಪಾಕ್ ಪಂಚರ್; ನ್ಯೂಜಿಲೆಂಡ್‌ಗೆ 60 ರನ್‌ಗಳ ಭರ್ಜರಿ ಜಯ

    ಮೊದಲು ಬ್ಯಾಟಿಂಗ್ ಮಾಡಿದ ಯುಪಿ ತಂಡದ ಕಿರಣ್ ನವ್ಗಿರೆ 6 ಫೋರ್ ಹಾಗೂ 3 ಸಿಕ್ಸ್ ಬಾರಿಸಿ 27 ಎಸೆತಕ್ಕೆ 51 ರನ್ ಗಳಿಸಿ ಗಮನ ಸೆಳೆದಿದ್ದರು. ದಿನೇಶ್ ವೃಂದ 16 ರನ್ ಕಲೆ ಹಾಕಿದರೆ, ನಾಯಕಿ ದೀಪ್ತಿ ಶರ್ಮಾ ಕೇವಲ 7 ರನ್ ಗಳಿಸಿ ಪೆವಿಲಿಯನ್ ಪೆರೇಡ್ ನಡೆಸಿ ನಿರಾಸೆ ಮೂಡಿಸಿದರು. ಶ್ವೇತಾ ಸೆಹ್ರಾವತ್ 37 ಹಾಗೂ ಚಿನೆಲ್ಲೆ ಹೆನ್ರಿ 33 ರನ್ ಗಳಿಸಿ ತಂಡದ ಮೊತ್ತವನ್ನು 166 ಕ್ಕೇರಿಸಿದರು. ಇದನ್ನೂ ಓದಿ: ಹೆತ್ತ ತಾಯಿಯ ಮೇಲೆ ಹಲ್ಲೆ ಆರೋಪ – ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಎಫ್‌ಐಆರ್ ದಾಖಲು

  • ಮಂಧಾನ ಮ್ಯಾಜಿಕ್ ಬ್ಯಾಟಿಂಗ್‌ – ಆರ್‌ಸಿಬಿಗೆ 8 ವಿಕೆಟ್‌ಗಳ ಅದ್ಧೂರಿ ಜಯ

    ಮಂಧಾನ ಮ್ಯಾಜಿಕ್ ಬ್ಯಾಟಿಂಗ್‌ – ಆರ್‌ಸಿಬಿಗೆ 8 ವಿಕೆಟ್‌ಗಳ ಅದ್ಧೂರಿ ಜಯ

    ವಡೋದರಾ: ನಾಯಕಿ ಸ್ಮೃತಿ ಮಂಧಾನ (Smriti Mandhana) ಸ್ಫೋಟಕ ಅರ್ಧಶತಕದ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಮಹಿಳಾ ತಂಡ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ 8 ವಿಕೆಟ್‌ಗಳ ಅದ್ಧೂರಿ ಜಯ ಸಾಧಿಸಿದೆ. ಈ ಮೂಲಕ ಹಾಲಿ ಚಾಂಪಿಯನ್ಸ್‌ ತಂಡ ಸತತ ಎರಡು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಉಳಿಸಿಕೊಂಡಿದೆ.

    ಟಾಸ್ ಗೆದ್ದ ಆರ್‌ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮೊದಲು ಬೌಲಿಂಗ್ ಆಯ್ದುಕೊಂಡರು. ಮೊದಲು ಬ್ಯಾಟ್ ಬೀಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 19.3 ಓವರ್‌ಗಳಿಗೆ 141 ರನ್ ಗಳಿಸಿ ಆಲೌಟ್ ಆಯಿತು. ಈ ಮೂಲಕ ಆರ್‌ಸಿಬಿಗೆ 142 ರನ್‌ಗಳ ಗುರಿ ನೀಡಿತು.

     

    ಡೆಲ್ಲಿ ಕ್ಯಾಪಿಟಲ್ಸ್ ನೀಡಿದ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ತಂಡ 2 ವಿಕೆಟ್ ನಷ್ಟಕ್ಕೆ ರನ್ ಗಳಿಸಿ ಗೆಲುವಿನ ಪತಾಕೆ ಹಾರಿಸಿತು. ತಂಡದಿಂದ ಮೊದಲು ಕ್ರೀಸ್‌ಗಿಳಿದ ತಂಡದ ನಾಯಕಿ ಸ್ಮೃತಿ ಮಂಧಾನ ಹಾಗೂ ಡೇನಿಯಲ್ ವೈಟ್ ಜೊತೆಯಾಟವಾಡಿ 65 ಎಸೆತಗಳಲ್ಲಿ 107 ರನ್ ಕಲೆಹಾಕಿ ಗೆಲುವಿನ ದಡದತ್ತ ತಂಡವನ್ನು ಮುಟ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಡೇನಿಯಲ್ ವೈಟ್ 7 ಫೋರ್ ಸಿಡಿಸಿ 33 ಬಾಲ್‌ಗಳಿಗೆ 42 ರನ್ ಗಳಿಸಿ ಔಟಾದರು. ಸ್ಮೃತಿ ಮಂಧಾನ 3 ಸಿಕ್ಸ್ ಹಾಗೂ 10 ಫೋರ್ ಸಿಡಿಸಿ 47 ಎಸೆತಗಳಿಗೆ 81 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ರಿಚಾ ಘೋಷ್ ಕೊನೆಗೆ ಅಬ್ಬರದ ಸಿಕ್ಸ್ ಸಿಡಿಸಿ ಮಿಂಚಿದರು. ರಿಚಾ 5 ಎಸೆತಗಳಿಗೆ 11 ರನ್ ಗಳಿಸಿದರೆ, ಪೆರ‍್ರಿ 13 ಬಾಲ್‌ಗಳಿಗೆ 7 ರನ್ ಕಲೆಹಾಕಿ ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾದರು.

    ಈ ಮೊದಲು ಬ್ಯಾಟ್ ಬೀಸಿದ ಡೆಲ್ಲಿ ತಂಡದ ಶೆಫಾಲಿ ವರ್ಮ 2ನೇ ಎಸೆತಕ್ಕೆ ಯಾವುದೇ ರನ್ ಗಳಿಸದೇ ವಿಕೆಟ್ ಒಪ್ಪಿಸಿದರು. ಬಳಿಕ ಕ್ರೀಸ್‌ಗೆ ಎಂಟ್ರಿಕೊಟ್ಟ ಡೆಲ್ಲಿ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಹಾಗೂ ಜೆಮಿಮಾ ರೊಡ್ರಿಗಸ್ ಜೊತೆಯಾಟವಾಡಿ 39 ಎಸೆತಗಳಿಗೆ 59 ರನ್ ಗಳಿಸಿಕೊಟ್ಟು ತಂಡವನ್ನು ಮುನ್ನಡೆಸಿದರು. ಜೆಮಿಮಾ ರೊಡ್ರಿಗಸ್ 2 ಸಿಕ್ಸ್ ಹಾಗೂ 4 ಫೋರ್‌ಗಳನ್ನು ಸಿಡಿಸಿ 22 ಬಾಲ್‌ಗಳಿಗೆ 34 ರನ್ ಕಲೆಹಾಕಿ ಪೆವಿಲಿಯನ್‌ಗೆ ಮರಳಿದರು. ಇವರಿಬ್ಬರ ಜೊತೆಯಾಟ 7ನೇ ಓವರ್‌ಗೆ ಮುರಿದುಬಿತ್ತು. ಮೆಗ್ ಲ್ಯಾನಿಂಗ್ 3 ಫೋರ್ ಹೊಡೆದು 19 ಎಸೆತಗಳಿಗೆ 17 ರನ್‌ಗಳಿಸಿ ಔಟಾದರು.

  • IPL Mega Auction | 14 ಕೋಟಿಗೆ ಡೆಲ್ಲಿ ಪಾಲಾದ ರಾಹುಲ್‌ – ಆರ್‌ಸಿಬಿ ಫ್ಯಾನ್ಸ್‌ಗೆ ಭಾರಿ ನಿರಾಸೆ

    IPL Mega Auction | 14 ಕೋಟಿಗೆ ಡೆಲ್ಲಿ ಪಾಲಾದ ರಾಹುಲ್‌ – ಆರ್‌ಸಿಬಿ ಫ್ಯಾನ್ಸ್‌ಗೆ ಭಾರಿ ನಿರಾಸೆ

    2025ರ ಐಪಿಎಲ್‌ ಭಾಗವಾಗಿ ನಡೆದ ಮಗಾ ಹರಾಜಿನಲ್ಲಿ (IPL Mega Auction) ಟೀಂ ಇಂಡಿಯಾದ ಸ್ಟಾರ್‌ ಆಟಗಾರ ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಮಾಜಿ ನಾಯಕ ಕೆ.ಎಲ್‌ ರಾಹುಲ್‌ (KL Rahul) 14 ಕೋಟಿ ರೂ.ಗಳಿಗೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪಾಲಾಗಿದ್ದಾರೆ.

    ಇದರಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ. ಆದ್ರೆ ರಾಹುಲ್‌ ಅವರನ್ನು ಹೊರದಬ್ಬಿದ ಲಕ್ನೋ (LSG) 27 ಕೋಟಿ ರೂ. ದಾಖಲೆ ಬೆಲೆ ರಿಷಬ್‌ ಪಂತ್‌ (Rishabh Pant) ಅವರನ್ನು ಆರ್‌ಟಿಎಂ ಕಾರ್ಡ್‌ ಅಡಿ ಖರೀದಿಸಿದೆ.

    2025ರ ಮೆಗಾ ಹರಾಜಿಗೆ ಪ್ರಕ್ರಿಯೆ ಶುರುವಾದಾಗಿನಿಂದಲೂ ರಾಹುಲ್‌, ಆರ್‌ಸಿಬಿ ತಂಡದ ಪಾಲಾಗುತ್ತಾರೆ ಎಂಬ ಹೈಪ್‌ ಕ್ರಿಯೇಟ್‌ ಆಗಿತ್ತು. ಇದರಿಂದ ಅಭಿಮಾನಿಗಳು ಹರ್ಷಗೊಂಡಿದ್ದರು. ಆದ್ರೆ ಹರಾಜಿನಲ್ಲಿ 8.75 ಕೋಟಿ ರೂ.ಗಳಿಗೆ ಇಂಗ್ಲೆಂಡ್‌ನ ಲಿಯಾಮ್‌ ಲಿವಿಂಗ್‌ಸ್ಟೋನ್‌ ಖರೀದಿಸಿದ ಆರ್‌ಸಿಬಿ, ರಾಹುಲ್‌ ಅವರಿಗಾಗಿ ಬಿಡ್‌ ಮಾಡಲು ಹಿಂದೇಟು ಹಾಕಿತು.

    ಆರ್‌ಸಿಬಿಯಿಂದಲೇ ವೃತ್ತಿ ಆರಂಭಿಸಿದ್ದ ಕನ್ನಡಿಗ:
    2013ರಿಂದ ಐಪಿಎಲ್‌ ವೃತ್ತಿ ಬದುಕು ಆರಂಭಿಸಿದ ಕೆ.ಎಲ್‌ ರಾಹುಲ್‌ ಮೊದಲು ಸೇರಿದ್ದು ಆರ್‌ಸಿಬಿ ತಂಡವನ್ನೇ. 2013ರಲ್ಲಿ ಆರ್‌ಸಿಬಿ ತಂಡದಲ್ಲಿ ಆಡಿದ್ದ ರಾಹುಲ್‌ 2014 ಮತ್ತು 2015ರಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಪಾಲಾಗಿದ್ದರು. ಪುನಃ 2016ರಲ್ಲಿ ಆರ್‌ಸಿಬಿ ತಂಡವನ್ನೇ ಸೇರಿಕೊಂಡಿದ್ದರು. 2017ರಲ್ಲಿ ಆರ್‌ಸಿಬಿಯಲ್ಲೇ ಆಡುವ ಅವಕಾಶವಿದ್ದರೂ ಗಾಯದ ಸಮಸ್ಯೆಯಿಂದ ಹೊರಗುಳಿದ್ದರು.

    ಬಳಿಕ 2018 ರಿಂದ 2021ರ ವರೆಗೆ ಪಂಜಾಬ್‌ ಕಿಂಗ್ಸ್‌ ತಂಡದಲ್ಲಿದ್ದ ಕೆ.ಎಲ್‌ ರಾಹುಲ್‌ 2022ರಿಂದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಸೇರಿಕೊಂಡರು. ಆಗಷ್ಟೇ ಪದಾರ್ಪಣೆ ಮಾಡಿದ್ದ ಲಕ್ನೋ ತಂಡವನ್ನು ತನ್ನ ನಾಯಕತ್ವದಲ್ಲಿ ಸತತ 2 ಬಾರಿ ಪ್ಲೇ ಆಫ್‌ ಪ್ರವೇಶಿಸುವಂತೆ ಮಾಡಿದ್ದರು.

    ಈ ವರೆಗೆ ಐಪಿಎಲ್‌ನಲ್ಲಿ 132 ಪಂದ್ಯಗಳನ್ನಾಡಿರುವ ಕೆ.ಎಲ್‌ ರಾಹುಲ್‌ 134.61 ಸ್ಟ್ರೈಕ್ ರೇಟ್‌ನಲ್ಲಿ 4,683 ರನ್ ಗಳಿಸಿದ್ದಾರೆ. ಇದರಲ್ಲಿ 4 ಶತಕ, 37 ಅರ್ಧಶತಕ ಸೇರಿವೆ.

    ಇಂದು ಬಿಡ್‌ ಆದ ಪ್ರಮುಖರು:
    * ಹರ್ಷ್‌ದೀಪ್‌ ಸಿಂಗ್‌ – 18 ಕೋಟಿ ರೂ.‌ – ಪಂಜಾಬ್‌ ಕಿಂಗ್ಸ್‌
    * ಕಾಗಿಸೋ ರಬಾಡ – 10.75 ಕೋಟಿ ರೂ. – ಗುಜರಾತ್‌ ಟೈಟಾನ್ಸ್‌
    * ಜೋಸ್‌ ಬಟ್ಲರ್‌ – 15.75 ಕೋಟಿ ರೂ. – ಗುಜರಾತ್‌ ಟೈಟಾನ್ಸ್‌
    * ಮಿಚೆಲ್‌ ಸ್ಟಾರ್ಕ್‌ – 11 ಕೋಟಿ ರೂ. – ಡೆಲ್ಲಿ ಕ್ಯಾಪಿಟಲ್ಸ್‌
    * ಡೇವಿಡ್‌ ಮಿಲ್ಲರ್‌ – 7.50 ಕೋಟಿ ರೂ. – ಲಕ್ನೋ ಸೂಪರ್‌ ಜೈಂಟ್ಸ್‌
    * ಮೊಹಮ್ಮದ್‌ ಸಿರಾಜ್‌ – 12.25 ಕೋಟಿ ರೂ. – ಗುಜರಾಜ್‌ ಟೈಟಾನ್ಸ್‌
    * ಯಜುವೇಂದ್ರ ಚಾಹಲ್‌ – 18 ಕೋಟಿ ರೂ. – ಪಂಜಾಬ್‌ ಕಿಂಗ್ಸ್‌
    * ಲಿಯಾಮ್‌ ಲಿವಿಂಗ್‌ಸ್ಟೋನ್‌ – 8.75 ಕೋಟಿ ರೂ. – ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

  • IPL Retention | ರಿಷಬ್‌ ಪಂತ್‌ ಸೇರಿ ಸ್ಟಾರ್‌ ಆಟಗಾರರೇ ಔಟ್‌ – ಆಲ್‌ರೌಂಡರ್‌ಗೆ ಮಣೆ ಹಾಕಿದ ಡೆಲ್ಲಿ

    IPL Retention | ರಿಷಬ್‌ ಪಂತ್‌ ಸೇರಿ ಸ್ಟಾರ್‌ ಆಟಗಾರರೇ ಔಟ್‌ – ಆಲ್‌ರೌಂಡರ್‌ಗೆ ಮಣೆ ಹಾಕಿದ ಡೆಲ್ಲಿ

    ಮುಂಬೈ: 2025ರ ಐಪಿಎಲ್‌ ಆವೃತ್ತಿಗಾಗಿ ಉಳಿಕೆ ಆಟಗಾರರ ಪಟ್ಟಿ ರಿಲೀಸ್‌ ಮಾಡಿರುವ ಡೆಲ್ಲಿ ಕ್ಯಾಪಿಟಲ್ಸ್‌ ಫ್ರಾಂಚೈಸಿಯು ನಾಯಕ ರಿಷಭ್‌ ಪಂತ್‌ (Rishabh Pant) ಸೇರಿ ಹಲವು ಸ್ಟಾರ್‌ ಆಟಗಾರರನ್ನೇ ಹೊರಗಿಟ್ಟು, ಆಲ್‌ರೌಂಡರ್‌ ಹಾಗೂ ಬೌಲರ್‌ಗಳಿಗೆ ಮಣೆಹಾಕಿದೆ.

    ನಿರೀಕ್ಷೆಯಂತೆ ರಿಷಬ್‌ ಪಂತ್‌ ಅವರನ್ನು ಉಳಿಕೆ ಪಟ್ಟಿಯಿಂದ ಕೈಬಿಟ್ಟಿದ್ದು, ಓರ್ವ ವಿದೇಶಿ ಆಟಗಾರ ಸೇರಿದಂತೆ ನಾಲ್ವರನ್ನು ಧಾರಣೆ ಮಾಡಿಕೊಂಡಿದೆ. ಅಕ್ಟರ್‌ ಪಟೇಲ್‌ (Akshar Patel) ಅತಿ ಹೆಚ್ಚು ಸಂಭಾವನೆ ಗಳಿಸಿದ್ದು, ಮುಂದಿನ ಕ್ಯಾಪ್ಟನ್‌ ಆಗಲಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಇದನ್ನೂ ಓದಿ: IPL Retention | ಡುಪ್ಲೆಸಿ ಔಟ್‌, ಆರ್‌ಸಿಬಿಯಲ್ಲಿ ತ್ರಿಬಲ್‌ ಸ್ಟಾರ್‌; ಕೊಹ್ಲಿ ಸಂಭಾವನೆಯಲ್ಲಿ ದಿಢೀರ್‌ 6 ಕೋಟಿ ಏರಿಕೆ

    ಯಾರಿಗೆ ಎಷ್ಟು ಮೊತ್ತ?
    * ಅಕ್ಷರ್‌ ಪಟೇಲ್‌ – 16.5 ಕೋಟಿ ರೂ.
    * ಕುಲ್ದೀಪ್‌ ಯಾದವ್‌ – 13.25 ಕೋಟಿ ರೂ.
    * ಟ್ರಿಸ್ಟನ್‌ ಸ್ಟಬ್ಸ್‌ – 10 ಕೋಟಿ ರೂ.
    * ಅಭಿಷೇಕ್‌ ಪೊರೆಲ್‌ – 4 ಕೋಟಿ ರೂ.

    ಸಿಎಸ್‌ಕೆಗೆ ಪಂತ್?‌
    ಹರಾಜು ಪ್ರಕ್ರಿಯೆ ಶುರುವಾದ ಆರಂಭದಿಂದಲೂ ರಿಷಭ್‌ ಪಂತ್‌ ಡೆಲ್ಲಿ ತಂಡವನ್ನು ತೊರೆಯುತ್ತಾರೆ ಎಂದು ಹೇಳಲಾಗುತ್ತಿತ್ತು. ಇದೀಗ ನಿರೀಕ್ಷೆಯಂತೆ ಫ್ರಾಂಚೈಸಿ ಅವರನ್ನು ಕೈಬಿಟ್ಟಿದೆ. ಸದ್ಯ ಅವರು ಸಿಎಸ್‌ಕೆ ತಂಡವನ್ನು ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಎಸ್‌ಕೆ ಫ್ರಾಂಚೈಸಿಯು ಒಂದು ಆರ್‌ಟಿಎಂ ಕಾರ್ಡ್‌ ಆಯ್ಕೆ ಬಾಕಿ ಉಳಿಸಿಕೊಂಡಿದ್ದು, ರಿಷಭ್‌ ಪಂತ್‌ ಅವರನ್ನ ಖರೀದಿ ಮಾಡಲಿದೆ. ಈಗಾಗಲೇ ಧೋನಿ ಫ್ರಾಂಚೈಸಿ ಮಾಲೀಕರೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದಾರೆ ಎಂದು ವರದಿಗಳು ಹೇಳಿವೆ. ಇದನ್ನೂ ಓದಿ: IPL Retention | 2025ರ ಐಪಿಎಲ್‌ಗೆ ಲೆಜೆಂಡ್‌ ಮಹಿ ಫಿಕ್ಸ್‌ – ರುತುರಾಜ್‌, ಜಡ್ಡುಗೆ ಬಂಪರ್‌

    ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಮೆಗಾ ಹರಾಜು ನಡೆಸಲು ಬಿಸಿಸಿಐ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಉಳಿಸಿಕೊಳ್ಳಬಹುದಾದ ಆಟಗಾರರ ಪಟ್ಟಿಯನ್ನು ಎಲ್ಲಾ ಫ್ರಾಂಚೈಸಿಗಳು ಬಿಡುಗಡೆ ಮಾಡಿವೆ. ಇದನ್ನೂ ಓದಿ: IPL Retention | ರೋಹಿತ್‌, ಪಾಂಡ್ಯಗಿಂತಲೂ ಬುಮ್ರಾ ದುಬಾರಿ – ಮುಂಬೈನಲ್ಲಿ ವಿದೇಶಿ ಆಟಗಾರರಿಗೆ ಕೊಕ್‌

  • IPLನಲ್ಲಿ ಡೆಲ್ಲಿ ಟೀಂ ಬಿಟ್ಟು ಬೇರೆ ತಂಡದ ಕ್ಯಾಪ್ಟನ್ ಆಗ್ತಾರಾ ರಿಷಬ್ ಪಂತ್?

    IPLನಲ್ಲಿ ಡೆಲ್ಲಿ ಟೀಂ ಬಿಟ್ಟು ಬೇರೆ ತಂಡದ ಕ್ಯಾಪ್ಟನ್ ಆಗ್ತಾರಾ ರಿಷಬ್ ಪಂತ್?

    ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ನಾಯಕ ರಿಷಬ್ ಪಂತ್ (Rishabh Pant) ಭವಿಷ್ಯ ಸದ್ಯಕ್ಕೆ ತೂಗುಯ್ಯಾಲೆಯಲ್ಲಿದೆ. ಐಪಿಎಲ್‌ನಲ್ಲಿ ಡೆಲ್ಲಿ ಟೀಂ ಬಿಟ್ಟು ಬೇರೆ ತಂಡಕ್ಕೆ ರಿಷಬ್‌ ಪಂತ್‌ ಕ್ಯಾಪ್ಟನ್‌ ಆಗ್ತಾರಾ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.

    2025 ರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಮೆಗಾ ಹರಾಜಿನ ಮೊದಲು ಪಂತ್ ತಂಡಕ್ಕೆ ಆದ್ಯತೆಯ ಧಾರಣ ಎಂದು DC ಸಹ-ಮಾಲೀಕ ಪಾರ್ಥ್ ಜಿಂದಾಲ್ ಈ ಹಿಂದೆ ಭರವಸೆ ನೀಡಿದ್ದರು. ತಮ್ಮ ಫ್ರಾಂಚೈಸಿ ಖಂಡಿತವಾಗಿಯೂ ಪಂತ್‌ ಅವರನ್ನು ಉಳಿಸಿಕೊಳ್ಳುತ್ತದೆ ಎಂದಿದ್ದರು. ಅದರೆ, ಈಗ ಅವರನ್ನು ಉಳಿಸಿಕೊಳ್ಳುವ ಬಗ್ಗೆ ಯಾವುದೇ ಖಚಿತತೆ ಇಲ್ಲ. ಇದನ್ನೂ ಓದಿ: ಲಕ್ನೋ ತಂಡದಿಂದ ಕೆ.ಎಲ್ ರಾಹುಲ್ ರಿಲೀಸ್ – ಆರ್‌ಸಿಬಿ ಸೇರ್ತಾರಾ ಕನ್ನಡಿಗ?

    DC ಫ್ರಾಂಚೈಸಿ, ಪಂತ್ ಅವರನ್ನು ಉಳಿಸಿಕೊಳ್ಳಲು ಉತ್ಸುಕವಾಗಿದೆ. ಆದರೆ, JSW ಮತ್ತು GMR ಐಪಿಎಲ್‌ಗಾಗಿ ಜವಾಬ್ದಾರಿಗಳನ್ನು ವಿಭಜಿಸುವುದರಿಂದ ಬದಲಾವಣೆ ಆಗಬಹುದು ಎನ್ನಲಾಗಿದೆ. GMR ಮತ್ತು JSW ತಲಾ ಎರಡು ವರ್ಷಗಳ ಕಾಲ ದೆಹಲಿ ಕ್ಯಾಪಿಟಲ್ಸ್ ಅನ್ನು ನಿರ್ವಹಿಸುತ್ತವೆ ಎಂದು ಘೋಷಿಸಿದ ನಂತರ ಈ ಚರ್ಚೆ ಹುಟ್ಟುಕೊಂಡಿದೆ.

    ಒಪ್ಪಂದದ ಪ್ರಕಾರ, GMR 2025 ಮತ್ತು 2026ರ ಐಪಿಎಲ್‌ ಋತುಗಳಿಗಾಗಿ ಡೆಲ್ಲಿ ಕ್ಯಾಪಿಟಲ್ಸ್‌ ಅನ್ನು ನಿರ್ವಹಿಸುತ್ತದೆ. ಈ ಬದಲಾವಣೆಗಳಿಗೆ ಅನುಗುಣವಾಗಿ, ವೇಣುಗೋಪಾಲ್ ರಾವ್ ಮತ್ತು ಹೇಮಂಗ್ ಬದಾನಿ ಅವರನ್ನು ಕ್ರಮವಾಗಿ ಕ್ರಿಕೆಟ್ ನಿರ್ದೇಶಕ ಮತ್ತು ಡಿಸಿ ಮುಖ್ಯ ಕೋಚ್ ಆಗಿ ನೇಮಿಸಲಾಗಿದೆ. ಇದನ್ನೂ ಓದಿ: ನಾನು ಅವರ ಹಾಸಿಗೆಯ ಮೇಲೆ ಕುಳಿತಿದ್ದೆ – ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮತ್ತೆ ಸಾಕ್ಷಿ ಮಲಿಕ್‌ ಆರೋಪ

    ಏತನ್ಮಧ್ಯೆ, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ಸೇರಿದಂತೆ ಇತರ ಐಪಿಎಲ್ ತಂಡಗಳು ಪಂತ್ ಅವರನ್ನು ನಾಯಕನನ್ನಾಗಿ ಮಾಡಲು ಆಸಕ್ತಿ ತೋರಿಸಿವೆ. ಇದು ಅವರ ಧಾರಣೆಗೆ ಕರೆ ತೆಗೆದುಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್‌ ಮೇಲೆ ಮತ್ತಷ್ಟು ಒತ್ತಡವನ್ನು ಉಂಟುಮಾಡುತ್ತದೆ.

  • IPL 2025: ಮರಳಿ ಆರ್‌ಸಿಬಿಗೆ ರಾಹುಲ್‌? – ಡೆಲ್ಲಿ ತೊರೆದು ಸಿಎಸ್‌ಕೆ ಸೇರಲಿದ್ದಾರೆ ರಿಷಭ್‌ ಪಂತ್‌?

    IPL 2025: ಮರಳಿ ಆರ್‌ಸಿಬಿಗೆ ರಾಹುಲ್‌? – ಡೆಲ್ಲಿ ತೊರೆದು ಸಿಎಸ್‌ಕೆ ಸೇರಲಿದ್ದಾರೆ ರಿಷಭ್‌ ಪಂತ್‌?

    ಬೆಂಗಳೂರು: 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೆ ಸದ್ಯದಲ್ಲೇ ಬಿಸಿಸಿಐ ದಿನಾಂಕ ನಿಗದಿ ಪಡಿಸಲಿದೆ. ಇದೇ ಜುಲೈ ತಿಂಗಳಾಂತ್ಯದ ವೇಳೆಗೆ ಬಿಸಿಸಿಐ (BCCI) ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಈ ನಡುವೆ ಫ್ರಾಂಚೈಸಿಗಳಲ್ಲಿ ಮಹತ್ವದ ಬೆಳವಣಿಗೆಗಳು ಕಂಡುಬರುತ್ತಿವೆ.

    3 ವರ್ಷಗಳಿಗೊಮ್ಮೆ ನಡೆಯುವ ಮೆಗಾ ಹರಾಜಿನಲ್ಲಿ ಯಾವ ಯಾವ ದಿಗ್ಗಜ ಆಟಗಾರರು ಯಾವ ತಂಡವನ್ನು ಸೇರಲಿದ್ದಾರೆ ಅನ್ನೋ ಬಗ್ಗೆ ಕ್ರಿಕೆಟ್‌ ಪ್ರಿಯರ ಚಿತ್ತ ಹರಿದಿದೆ. ಸಿಎಸ್‌ಕೆ ತಂಡದ ಲೆಜೆಂಡ್‌ ಎಂ.ಎಸ್‌ ಧೋನಿ (MS Dhoni) ಅವರು ಐಪಿಎಲ್‌ಗೆ ನಿವೃತ್ತಿ ಹೇಳುವ ಸಾಧ್ಯತೆಗಳಿವೆ ಎಂಬ ಸುದ್ದಿಗಳ ನಡುವೆ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals0 ತಂಡದ ನಾಯಕ ರಿಷಭ್‌ ಪಂತ್‌, ಮುಂದಿನ ಆವೃತ್ತಿಗೆ ಸಿಎಸ್‌ಕೆ (CSK) ತಂಡ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: IPL 2025: ಮೆಗಾ ಹರಾಜು ಪ್ರಕ್ರಿಯೆ ಶುರು; ರಿಟೇನ್‌ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ!

    2016ರಿಂದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಪ್ರತಿನಿಧಿಸುತ್ತಿರುವ ವಿಕೆಟ್‌ ಕೀಪರ್‌ ಬ್ಯಾಟರ್‌ ರಿಷಭ್‌ ಪಂತ್‌ ಮುಂದಿನ ವರ್ಷದ ಐಪಿಎಲ್‌ಗೆ ನಡೆಯಲಿರುವ ಮೆಗಾ ಹರಾಜಿಗೂ ಮುನ್ನವೇ ಡೆಲ್ಲಿ ಫ್ರಾಂಚೈಸಿ ತೊರೆದು 5 ಬಾರಿ ಚಾಂಪಿಯನ್‌ ಆಗಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಸೇರಲಿದ್ದಾರೆ ಎಂಬ ವದಂತಿಗಳು ಕೇಳಿಬರುತ್ತಿವೆ. ಇದನ್ನೂ ಓದಿ: Women’s Asia Cup 2024: ಸಿಂಹಿಣಿಯರ ಅಬ್ಬರಕ್ಕೆ ಪಾಕ್ ಧೂಳಿಪಟ – ಭಾರತಕ್ಕೆ ಗೆಲುವಿನ ಶುಭಾರಂಭ!

    2024ರ ಐಪಿಎಲ್‌ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 14 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿ ಪ್ಲೇ ಆಫ್‌ ಪ್ರವೇಶಿಸುವಲ್ಲಿ ವಿಫಲವಾಯಿತು. ಟ್ರೋಫಿ ತಂದುಕೊಡುವಲ್ಲಿ ವಿಫಲರಾದ ಡೆಲ್ಲಿ ತಂಡದ ಮುಖ್ಯಕೋಚ್‌ ಆಗಿದ್ದ ರಿಕಿ ಪಾಂಟಿಂಗ್‌ಗೆ ಫ್ರಾಂಚೈಸಿ ಈಗಾಗಲೇ ಕೊಕ್‌ ನೀಡಿದೆ. ರಿಷಭ್‌ ಪಂತ್‌ ಅವರನ್ನೂ ಉಳಿಸಿಕೊಳ್ಳುವ ಬಗ್ಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಮುಂದಿನ ಕೋಚ್‌ ಎನ್ನಲಾಗುತ್ತಿರುವ ಗಂಗೂಲಿ ಅವರು ರಿಷಭ್‌ ಪರವಾಗಿದ್ದಾರೆ ಎನ್ನಲಾದರೂ ಫ್ರಾಂಚೈಸಿ ತೀರ್ಮಾನ ಅಂತಿಮವಾಗಲಿದೆ. ಹೀಗಾಗಿ ಪಂತ್‌ ಮೆಗಾ ಹರಾಜಿಗೂ ಮುನ್ನವೇ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಸೇರಲಿದ್ದಾರೆ ಎಂದು ಫ್ರಾಂಚೈಸಿ ಮೂಲಗಳು ತಿಳಿಸಿವೆ.

    ಕನ್ನಡಿಗನಿಗೆ ಮಣೆಹಾಕಲಿದೆಯೇ ಆರ್‌ಸಿಬಿ?
    2022ರಲ್ಲಿ ಆರಂಭವಾದ ಲಕ್ನೋ ಸೂಪರ್‌ ಜೈಂಟ್ಸ್‌ (LSG) ತಂಡದ ನಾಯಕನಾಗಿರುವ ಕನ್ನಡಿಗ ಕೆ.ಎಲ್‌ ರಾಹುಲ್‌ (KL Rahul) ಈ ಬಾರಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಸೇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿವೆ. 2024ರ ಐಪಿಎಲ್‌ ಆವೃತ್ತಿಯಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಲಕ್ನೋ ಹೀನಾಯವಾಗಿ ಸೋತಿತ್ತು. ಈ ವೇಳೆ ಲಕ್ನೋ ಫ್ರಾಂಚೈಸಿ ಮಾಲೀಕರಾದ ಸಂಜೀವ್‌ ಗೋಯೆಂಕಾ ರಾಹುಲ್‌ ವಿರುದ್ಧ ಮೈದಾನದಲ್ಲೇ ರೇಗಾಡಿದ್ದರು. ಈ ವೀಡಿಯೋ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಘಟನೆಯಿಂದ ರಾಹುಲ್‌, ಲಕ್ನೋ ತಂಡದಲ್ಲಿ ಮುಂದುವರಿಯುವ ಆಸಕ್ತಿ ಕಳೆದುಕೊಂಡಿದ್ದಾರೆ. ಮುಂಬರುವ ಮೆಗಾ ಹರಾಜಿಗೂ ಮುನ್ನ ಅವರು ಆರ್‌ಸಿಬಿ (RCB) ಪಾಲಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಭದ್ರತಾ ಕಾರಣಕ್ಕಾಗಿ ಭಾರತ ಸರ್ಕಾರ ಅನುಮತಿ ನಿರಾಕರಿಸಿದ್ರೆ ಬಿಸಿಸಿಐ ಬರೆದುಕೊಡಲಿ – ಪಾಕ್‌ ಪಟ್ಟು!

    ಐಪಿಎಲ್‌ ವೃತ್ತಿ ಆರಂಭಿಸಿದ್ದು ಆರ್‌ಸಿಬಿಯಿಂದಲೇ:
    2013ರಿಂದ ಐಪಿಎಲ್‌ ವೃತ್ತಿ ಬದುಕು ಆರಂಭಿಸಿದ ಕೆ.ಎಲ್‌ ರಾಹುಲ್‌ ಮೊದಲು ಸೇರಿದ್ದು ಆರ್‌ಸಿಬಿ ತಂಡವನ್ನೇ. 2013 ರಿಂದ 2016ರ ಆವೃತ್ತಿಗಳಲ್ಲಿ ರಾಹುಲ್‌ ಆರ್‌ಸಿಬಿ ತಂಡದಲ್ಲಿಯೇ ಇದ್ದರು. ಆ ನಂತರ 2014 ಮತ್ತು 2015ರಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಪಾಲಾದರು. 2018 ರಿಂದ 2021ರ ವರೆಗೆ ಪಂಜಾಬ್‌ ಕಿಂಗ್ಸ್‌ ತಂಡದಲ್ಲಿದ್ದ ಕೆ.ಎಲ್‌ ರಾಹುಲ್‌ 2022ರಿಂದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಸೇರಿಕೊಂಡರು. ಇದನ್ನೂ ಓದಿ: Wimbledon Champion: ಸತತ 2ನೇ ಬಾರಿಗೆ ಅಲ್ಕರಾಜ್‌ಗೆ ವಿಂಬಲ್ಡನ್‌ ಕಿರೀಟ – ಜೊಕೊವಿಕ್‌ಗೆ ಮತ್ತೆ ಸೋಲು!

  • IPL ಟ್ರೋಫಿ ತಂದುಕೊಡದಿದ್ದಕ್ಕೆ ತಲೆದಂಡ – ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆಯಿಂದ ರಿಕಿ ಪಾಂಟಿಂಗ್​ಗೆ ಕೊಕ್​!

    IPL ಟ್ರೋಫಿ ತಂದುಕೊಡದಿದ್ದಕ್ಕೆ ತಲೆದಂಡ – ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆಯಿಂದ ರಿಕಿ ಪಾಂಟಿಂಗ್​ಗೆ ಕೊಕ್​!

    ನವದೆಹಲಿ: 7 ಆವೃತ್ತಿ ಕಳೆದರೂ ಐಪಿಎಲ್‌ ಟ್ರೋಫಿ (IPL Trophy) ತಂದುಕೊಡುವಲ್ಲಿ ವಿಫಲರಾದ ರಿಕಿ ಪಾಟಿಂಗ್‌ (Ricky Ponting) ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ ಫ್ರಾಂಚೈಸಿ ಮುಖ್ಯ ಕೋಚ್‌ ಹುದ್ದೆಯಿಂದ ವಜಾಗೊಳಿಸಿದೆ. 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಆವೃತ್ತಿಯಿಂದ ಪಾಂಟಿಂಗ್‌ ಡೆಲ್ಲಿ ತಂಡದ ಮುಖ್ಯ ಕೋಚ್‌ ಆಗಿ ಕಾರ್ಯನಿರ್ವಹಿಸುವುದಿಲ್ಲ ಎಂದು ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಿರ್ದೇಶಕ ಸೌರವ್‌ ಗಂಗೂಲಿ ಖಚಿತಪಡಿಸಿದ್ದಾರೆ.

    ಆಸ್ಟ್ರೇಲಿಯಾ ತಂಡದ ಮಾಜಿ ನಾಯಕರೂ ಆಗಿರುವ ರಿಕಿ ಪಾಂಟಿಂಗ್‌ ಕಳೆದ 7 ಆವೃತ್ತಿಗಳಿಂದ ಡೆಲ್ಲಿ ಕ್ಯಾಪಿಟಲ್ಸ್‌ ಮುಖ್ಯಕೋಚ್‌ (Delhi Capitals Head Coach) ಆಗಿ ಸೇವೆ ಸಲ್ಲಿಸುತ್ತಿದ್ದರು. ಡೆಲ್ಲಿ ಕ್ಯಾಪಿಟಲ್ಸ್‌ ಸೇರುವ ಮುನ್ನ ಪಾಂಟಿಂಗ್‌ ಮುಂಬೈ ಇಂಡಿಯನ್ಸ್‌ ತಂಡವನ್ನು ಮುನ್ನಡೆಸಿದ್ದರು. ಪಾಂಟಿಂಗ್‌ ನೇತೃತ್ವದಲ್ಲಿ 2020ರಲ್ಲಿ ಪಾಂಟಿಂಗ್‌ ಅವರ ಸಾರಥ್ಯದಲ್ಲೇ ಡೆಲ್ಲಿ ತಂಡ ಫೈನಲ್‌ ಪ್ರವೇಶಿಸಿತ್ತು. ಆದ್ರೆ ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ಸೋತು ಪ್ರಶಸ್ತಿ ಗೆಲ್ಲಲು ವಿಫಲವಾಯಿತು.

    2024ರ ಆವೃತ್ತಿಯಲ್ಲಿ ಆರಂಭದಲ್ಲಿ ಸತತ ಮೂರು ಸೋಲು ಕಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಬಳಿಕ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡಿತ್ತು. 14 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿದರೂ ಪ್ಲೇ ಆಫ್‌ನಿಂದ ಹೊರಗುಳಿಯಿತು. ಇದನ್ನೂ ಓದಿ: ಯಶಸ್ವಿ ಕೈ ತಪ್ಪಿದ ಚೊಚ್ಚಲ T20I ಶತಕ – 10 ವಿಕೆಟ್‌ ಜಯದೊಂದಿಗೆ ಸರಣಿ ಗೆದ್ದ ಭಾರತ!

    ಇದೀಗ ತಂಡದ ಅದೃಷ್ಟ ಬದಲಾಯಿಸುವ ಪ್ರಯತ್ನದಲ್ಲಿ ನಿರಾಸೆ ಮೂಡಿಸಿದ ರಿಕಿ ಪಾಂಟಿಂಗ್ ಅವರನ್ನು ಮುಂದುವರಿಸರಿದಲು ಫ್ರಾಂಚೈಸಿ ನಿರ್ಧರಿಸಿದೆ. ಕ್ರಿಕೆಟ್ ನಿರ್ದೇಶಕ ಸೌರವ್ ಗಂಗೂಲಿ ಇದನ್ನು ದೃಢಪಡಿಸಿದ್ದಾರೆ.

    ಪಾಂಟಿಂಗ್‌ ಅವರನ್ನು ಮುಖ್ಯಕೋಚ್‌ ಹುದ್ದೆಯಿಂದ ವಜಾಗೊಳಿಸಿದ ಬೆನ್ನಲ್ಲೇ ಮುಖ್ಯಕೋಚ್‌ ಹುದ್ದೆಗೆ ಗಂಗೂಲಿ ಅವರ ಹೆಸರು ಕೇಳಿಬಂದಿದೆ. 2025ರ ಆವೃತ್ತಿಯಿಂದ ಗಂಗೂಲಿ ಅವರು ಡೆಲ್ಲಿ ತಂಡದ ಮುಖ್ಯಕೋಚ್‌ ಹುದ್ದೆ ಅಲಂಕರಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: 2.5 ಕೋಟಿ ನಗದು ಬಹುಮಾನ ನಿರಾಕರಿಸಿದ ದ್ರಾವಿಡ್‌ – ಕನ್ನಡಿಗನ ನಡೆಗೆ ವ್ಯಾಪಕ ಮೆಚ್ಚುಗೆ! 

  • ಲಕ್ನೋ ವಿರುದ್ಧ ಡೆಲ್ಲಿಗೆ 19 ರನ್‌ಗಳ ಜಯ – ರಾಹುಲ್‌ ಪಡೆಗೆ ಪ್ಲೇ-ಆಫ್‌ ಹಾದಿ ಕಠಿಣ

    ಲಕ್ನೋ ವಿರುದ್ಧ ಡೆಲ್ಲಿಗೆ 19 ರನ್‌ಗಳ ಜಯ – ರಾಹುಲ್‌ ಪಡೆಗೆ ಪ್ಲೇ-ಆಫ್‌ ಹಾದಿ ಕಠಿಣ

    – ಪೊರೆಲ್‌ ಹಾಗೂ ಟ್ರಿಸ್ಟನ್ ಫಿಫ್ಟಿಗೆ ಒಲಿದ ಜಯ
    – 3 ವಿಕೆಟ್‌ ಕಿತ್ತು ಮಿಂಚಿದ ಇಶಾಂತ್‌ ಶರ್ಮಾ
    – ನಿಕೋಲಸ್ ಪೂರನ್ ಮತ್ತು ಅರ್ಷದ್‌ ಖಾನ್‌ ಫಿಫ್ಟಿ ಆಟ ವ್ಯರ್ಥ

    ನವದೆಹಲಿ: ಅಭಿಷೇಕ್‌ ಪೊರೆಲ್‌ ಹಾಗೂ ಟ್ರಿಸ್ಟನ್‌ ಸ್ಟಬ್ಸ್‌ ಆಕರ್ಷಕ ಫಿಫ್ಟಿ ಹಾಗೂ ಇಶಾಂತ್‌ ಶರ್ಮಾ ಅಬ್ಬರದ ಬೌಲಿಂಗ್‌ ನೆರವಿನಿಂದ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ 19 ರನ್‌ಗಳ ಜಯ ಸಾಧಿಸಿತು. ಪ್ಲೇ-ಆಫ್‌ ಕನಸು ಕಂಡಿದ್ದ ರಾಹುಲ್‌ ಪಡೆಗೆ ಸೋಲಿನ ಹಾದಿ ಮತ್ತಷ್ಟು ಕಠಿಣವಾಗಿದೆ.

    ಇಲ್ಲಿ ನಡೆದ ಐಪಿಎಲ್‌ ಟಿ-20 ಕ್ರಿಕೆಟ್‌ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ 20 ಓವರ್‌ಗಳಿಗೆ 4 ವಿಕೆಟ್‌ ನಷ್ಟಕ್ಕೆ 208 ರನ್‌ ಗಳಿಸಿತು. 209 ರನ್‌ ಗುರಿ ಬೆನ್ನತ್ತಿದ ಲಕ್ನೋ 20 ಓವರ್‌ಗೆ 9 ವಿಕೆಟ್‌ ನಷ್ಟಕ್ಕೆ 189 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಡೆಲ್ಲಿಗೆ ಆರಂಭಿಕ ಆಘಾತ ಎದುರಾಯಿತು. ಸ್ಫೋಟಕ ಬ್ಯಾಟರ್‌ ಜೇಕ್‌ ಫ್ರೇಸರ್‌ ಮೆಕ್‌ಗುರ್ಕ್‌ ಡಕೌಟ್‌ ಆಗಿ ಪೆವಿಲಿಯನ್‌ ಸೇರಿದರು. ಆದರೂ ವಿಚಲಿತರಾಗದ ಡೆಲ್ಲಿ ಬ್ಯಾಟರ್‌ಗಳು ಅಬ್ಬರದ ಬ್ಯಾಟಿಂಗ್‌ ಪ್ರದರ್ಶನ ನೀಡಿದರು.

    ಮತ್ತೊಬ್ಬ ಓಪನರ್‌ ಅಭಿಷೇಕ್‌ ಪೊರೆಲ್‌ ಅರ್ಧಶತಕ (58 ರನ್‌, 33 ಎಸೆತ, 5 ಬೌಂಡರಿ, 4 ಸಿಕ್ಸರ್‌) ಸಿಡಿಸಿ ಮಿಂಚಿದರು. ಶಾಯ್‌ ಹೋಪ್‌ 38 ಹಾಗೂ ನಾಯಕ ರಿಷಭ್‌ ಪಂತ್‌ 33 ರನ್‌ ಗಳಿಸಿ ಸವಾಲಿನ ಮೊತ್ತ ಪೇರಿಸಲು ಸಹಕಾರಿಯಾದರು. ಕೊನೆಯ ಓವರ್‌ಗಳಲ್ಲಿ ಅಬ್ಬರಿಸಿದ ಟ್ರಿಸ್ಟನ್‌ ಸ್ಟಬ್ಸ್‌ 57 ರನ್‌ ಬಾರಿಸಿ (25 ಬಾಲ್‌, 3 ಫೋರ್‌, 4 ಸಿಕ್ಸರ್‌) ಉತ್ತಮ ಮೊತ್ತಕ್ಕೆ ನೆರವಾದರು.

    ಲಕ್ನೋ ಪರ ನವೀನ್-ಉಲ್-ಹಕ್ 2 ವಿಕೆಟ್‌ ಕಿತ್ತರು. ಅರ್ಷದ್ ಖಾನ್ ಹಾಗೂ ರವಿ ಬಿಷ್ಣೋಯ್ ತಲಾ ಒಂದು ವಿಕೆಟ್‌ ಪಡೆದರು.

    ಡೆಲ್ಲಿ ಕ್ಯಾಪಿಟಲ್ಸ್‌ ನೀಡಿದ 209 ರನ್‌ಗಳ ಬೃಹತ್‌ ಗುರಿ ಬೆನ್ನತ್ತಿದ ಲಕ್ನೋ ಬ್ಯಾಟಿಂಗ್‌ ವೈಫಲ್ಯ ಎದುರಿಸಿತು. ತಂಡದ ಮೊತ್ತ ಕೇವಲ 7 ರನ್‌ ಇದ್ದಾಗಲೇ ಲಕ್ನೋ ತಂಡದ ನಾಯಕ ಕೆ.ಎಲ್‌.ರಾಹುಲ್‌ ಕ್ಯಾಚ್‌ ನೀಡಿ ಪೆವಿಲಿಯನ್‌ಗೆ ಮರಳಿದರು. ಮೊದಲ ಪವರ್‌ ಪ್ಲೇ ಮುಕ್ತಾಯಕ್ಕೆ 59 ರನ್‌ ಗಳಿಸಿದ್ದ ಲಕ್ನೋ ಪ್ರಮುಖ 4 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

    ನಿಕೋಲಸ್ ಪೂರನ್ ಮತ್ತು ಅರ್ಷದ್‌ ಖಾನ್‌ ಫಿಫ್ಟಿ ಆಟ ವ್ಯರ್ಥವಾಯಿತು. ಪೂರನ್‌ 27 ಬಾಲ್‌ಗೆ 61 ರನ್‌ (6 ಫೋರ್‌, 4 ಸಿಕ್ಸರ್‌) ಹಾಗೂ ಖಾನ್‌ ಔಟಾಗದೇ 58 ರನ್‌ (33 ಬಾಲ್‌, 3 ಫೋರ್‌, 5 ಸಿಕ್ಸರ್‌) ಸಿಡಿಸಿ ಮಿಂಚಿದರೂ ಪ್ರಯೋಜನವಾಗಲಿಲ್ಲ. ಉಳಿದ ಬ್ಯಾಟರ್‌ಗಳು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲದ ಕಾರಣ ತಂಡದ ಸೋಲನುಭವಿಸಿತು.

    ಕೃನಾಲ್ ಪಾಂಡ್ಯ 18, ಯುದ್ಧವೀರ್ ಸಿಂಗ್ 14 ಗಳಿಸಿದರು. ಡೆಲ್ಲಿ ಪರ 3 ವಿಕೆಟ್‌ ಕಬಳಿಸಿ ಇಶಾಂತ್ ಶರ್ಮಾ ಮಿಂಚಿದರು. ಖಲೀಲ್ ಅಹಮದ್, ಅಕ್ಷರ್ ಪಟೇಲ್, ಮುಖೇಶ್ ಕುಮಾರ್, ಕುಲದೀಪ್ ಯಾದವ್, ಟ್ರಿಸ್ಟಾನ್ ಸ್ಟಬ್ಸ್ ತಲಾ 1 ವಿಕೆಟ್‌ ಕಿತ್ತರು.

  • ತವರಿನಲ್ಲಿ ಆರ್‌ಸಿಬಿಗೆ ಇಂದು ನಿರ್ಣಾಯಕ ಪಂದ್ಯ – ಗೆದ್ದರಷ್ಟೇ ಪ್ಲೇ-ಆಫ್‌ ಕನಸು ಜೀವಂತ

    ತವರಿನಲ್ಲಿ ಆರ್‌ಸಿಬಿಗೆ ಇಂದು ನಿರ್ಣಾಯಕ ಪಂದ್ಯ – ಗೆದ್ದರಷ್ಟೇ ಪ್ಲೇ-ಆಫ್‌ ಕನಸು ಜೀವಂತ

    – ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ V/S ಡೆಲ್ಲಿ ಫೈಟ್‌

    ಬೆಂಗಳೂರು: ತವರಿನಲ್ಲಿ ಇಂದು (ಭಾನುವಾರ) ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bengaluru) ತಂಡ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ ನಿರ್ಣಾಯಕ ಕದನಕ್ಕೆ ಸಜ್ಜಾಗಿದೆ. ಈ ಪಂದ್ಯ ಗೆದ್ದರಷ್ಟೇ ಆರ್‌ಸಿಬಿಗೆ (RCB) ಪ್ಲೇ-ಆಫ್‌ಗೇರುವ ಕನಸು ಜೀವಂತವಾಗಿರಲಿದೆ. ಒಂದರ್ಥದಲ್ಲಿ ಇದು ಆರ್‌ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಲಿದೆ.

    ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಇಂದು ನಡೆಯುವ ಪಂದ್ಯದಲ್ಲಿ ಒಂದು ವೇಳೆ ಆರ್‌ಸಿಬಿ ಸೋತರೆ ನಾಕೌಟ್‌ನಿಂದ ಅಧಿಕೃತವಾಗಿ ಹೊರಬೀಳಲಿದೆ. ಡೆಲ್ಲಿ ಕ್ಯಾಪಿಟಲ್ಸ್‌ಗೂ (DC) ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಸೋತರೆ ನಾಕೌಟ್‌ ಹಾದಿ ಕಠಿಣವಾಗಲಿದೆ. ಇದನ್ನೂ ಓದಿ: ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟ ಕೆಕೆಆರ್‌

    ಆರ್‌ಸಿಬಿ ಒಟ್ಟು 12 ಪಂದ್ಯಗಳನ್ನು ಆಡಿದ್ದು, 5 ಪಂದ್ಯಗಳಲ್ಲಿ ಜಯಗಳಿಸಿದೆ. ಟೂರ್ನಿಯ ಆರಂಭಿಕ 8 ಪಂದ್ಯಗಳಲ್ಲಿ ಡು ಪ್ಲೆಸಿಸ್‌ ನಾಯಕತ್ವದ ಆರ್‌ಸಿಬಿ 7 ರಲ್ಲಿ ಸೋತಿದೆ. ಆದರೆ ಕಳೆದ 4 ಪಂದ್ಯಗಳಲ್ಲಿ ಅಭೂತಪೂರ್ವ ಪ್ರದರ್ಶನದೊಂದಿಗೆ ಜಯಭೇರಿ ಬಾರಿಸಿದೆ. ಗುಜರಾತ್‌ ವಿರುದ್ಧ 9 ವಿಕೆಟ್‌ಗಳ ಗೆಲುವು ಮತ್ತು ಪಂಜಾಬ್‌ ವಿರುದ್ಧ 60 ರನ್‌ಗಳ ಜಯ ಆರ್‌ಸಿಬಿ ತಂಡದ ರನ್‌ ನೆಟ್‌ ರೇಟನ್ನು ಹೆಚ್ಚಿಸಿರುವುದು ಪ್ಲಸ್‌ ಪಾಯಿಂಟ್‌ ಆಗಿದೆ. ಸದ್ಯ ತಂಡಕ್ಕೆ ಎರಡು ಪಂದ್ಯಗಳಿದ್ದು, ಭಾರಿ ಅಂತರದಲ್ಲಿ ಗೆಲ್ಲಬೇಕಿದೆ. ಅದೃಷ್ಟ ಖುಲಾಯಿಸಿದರೆ ಪ್ಲೇ-ಆಫ್‌ಗೇರುವ ಸಾಧ್ಯತೆ ಇದೆ.

    ಡೆಲ್ಲಿ 12 ರಲ್ಲಿ 6 ಪಂದ್ಯಗಳನ್ನು ಗೆದ್ದಿದೆ. ತಂಡ 12 ಅಂಕ ಸಂಪಾದಿಸಿದ್ದು, ಪ್ಲೇ-ಆಫ್‌ಗೇರಲು ಉಳಿದಿರುವ ಎರಡೂ ಪಂದ್ಯಗಳನ್ನು ಗೆಲ್ಲಬೇಕು. ಆರ್‌ಸಿಬಿ ವಿರುದ್ಧ ಇಂದು ನಡೆಯುವ ಪಂದ್ಯದಲ್ಲಿ ಸೋತರೆ ಡೆಲ್ಲಿಗೆ ಪ್ಲೇ-ಆಫ್‌ ಹಾದಿ ಇನ್ನೂ ಕಠಿಣವಾಗಲಿದೆ. ಇದನ್ನೂ ಓದಿ: ಟೆಸ್ಟ್‌ಗೆ ಇಂಗ್ಲೆಂಡ್ ಕ್ರಿಕೆಟ್ ದಂತಕಥೆ ಜೇಮ್ಸ್ ಆಂಡರ್ಸನ್ ನಿವೃತ್ತಿ

    ವಿರಾಟ್‌ ಕೊಹ್ಲಿ ಉತ್ತಮ ಲಯದಲ್ಲಿದ್ದಾರೆ. ಪಂದ್ಯಗಳಲ್ಲಿ ದಾಖಲೆ ಕೂಡ ಬರೆಯುತ್ತಿದ್ದಾರೆ. ತವರಿನಲ್ಲಿ ಕೊಹ್ಲಿ ಆಟವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರರಾಗಿದ್ದಾರೆ. ವಿಲ್‌ ಜಾಕ್ಸ್‌, ರಜತ್‌ ಪಾಟೀದಾರ್‌ ಕೂಡ ನಿರೀಕ್ಷೆ ಮೂಡಿಸಿದ್ದಾರೆ. ಡು ಪ್ಲೆಸಿಸ್‌ ಮತ್ತು ದಿನೇಶ್‌ ಕಾರ್ತಿಕ್‌ ತಂಡದ ಕೈ ಹಿಡಿಯಬೇಕಿದೆ. ಬೌಲರ್‌ಗಳು ಕಳೆದ ನಾಲ್ಕು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಅದನ್ನೇ ಮುಂದುವರಿಸಿದರೆ ತಂಡಕ್ಕೆ ಸಹಕಾರಿಯಾಗಲಿದೆ.

    ಡೆಲ್ಲಿ ತಂಡದಲ್ಲೂ ಜೇಕ್‌ ಫ್ರೇಸರ್‌, ಅಭಿಷೇಕ್‌ ಪೊರೆಲ್‌ ಮೇಲೆ ಹೆಚ್ಚಿನ ನಿರೀಕ್ಷೆ ಇದೆ. ಬ್ಯಾಟಿಂಗ್‌ ಸ್ನೇಹಿ ಪಿಚ್‌ನಲ್ಲಿ ಡೆಲ್ಲಿ ಬೌಲರ್‌ಗಳು ಆರ್‌ಸಿಬಿ ಬ್ಯಾಟರ್‌ಗಳನ್ನು ಕಟ್ಟಿಹಾಕಬೇಕಿದೆ. ಇಂದು ಸಂಜೆ 7:30 ಪಂದ್ಯ ನಡೆಯಲಿದೆ.

  • ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಪಂತ್‌ ಔಟ್‌; ಡೆಲ್ಲಿ ತಂಡಕ್ಕೆ ಹೊಸ ನಾಯಕ – ಬೆಂಗಳೂರು ಬಾಯ್ಸ್‌ ಕೈಹಿಡಿಯುತ್ತಾ ಲಕ್‌?

    ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಪಂತ್‌ ಔಟ್‌; ಡೆಲ್ಲಿ ತಂಡಕ್ಕೆ ಹೊಸ ನಾಯಕ – ಬೆಂಗಳೂರು ಬಾಯ್ಸ್‌ ಕೈಹಿಡಿಯುತ್ತಾ ಲಕ್‌?

    ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಐಪಿಎಲ್‌ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ (Rishabh Pant) ಸೇವೆ ಅಲಭ್ಯವಾಗುವ ಹಿನ್ನೆಲೆಯಲ್ಲಿ ಬದಲಿ ನಾಯಕನನ್ನು ಫ್ರಾಂಚೈಸಿ ಘೋಷಿಸಿದೆ.

    ಮೂರುಬಾರಿ ನಿಧಾನಗತಿಯ ಓವರ್ ರೇಟ್ ನಿಂದ ಐಪಿಎಲ್‌ ನಿಯಮ (Slow Over Rate) ಉಲ್ಲಂಘಿಸಿದ್ದಕ್ಕಾಗಿ ರಿಷಭ್‌ ಪಂತ್‌ಗೆ ಬಿಸಿಸಿಐ 30 ಲಕ್ಷ ರೂ. ದಂಡ ವಿಧಿಸಿದೆ. ಇದರೊಂದಿಗೆ ಒಂದು ಪಂದ್ಯದಿಂದ ಅಮಾನತುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಭಾನುವಾರದ ಪಂದ್ಯಕ್ಕೆ ಬದಲಿ ನಾಯಕನನ್ನು ಘೋಷಿಸಲಾಗಿದೆ.

    ಸೂಪರ್‌ ಸಂಡೇ (ಮೇ 12) ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಿಂದ ರಿಷಭ್ ಪಂತ್ ಹೊರಗುಳಿಯಲಿದ್ದಾರೆ. ಹಾಗಾಗಿ ಅಕ್ಷರ್ ಪಟೇಲ್ (Axar Patel) ಅವರಿಗೆ ತಂಡವನ್ನು ಮುನ್ನಡೆಸುವ ಜವಾಬ್ದಾರಿ ನೀಡಲಾಗುವುದು ಎಂದು ಕೋಚ್‌ ರಿಕಿ ಪಾಂಟಿಂಗ್ ಖಚಿತಪಡಿಸಿದ್ದಾರೆ. ಭಾನುವಾರ ಸಂಜೆ 7:30ರ ವೇಳೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತಂಡಗಳು ಸೆಣಸಲಿವೆ.

    ಬ್ಯಾಟಿಂಗ್‌ ಬಲದ ಚಿಂತೆ:
    ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಅಗ್ರ ಕ್ರಮಾಂಕದಲ್ಲಿ ಫ್ರೆಸರ್‌ ಮೆಕ್‌ಗಾರ್ಕ್‌, ಪೃಥ್ವಿ ಶಾ, ಅಭಿಷೇಕ್‌ ಪೋರೆಲ್‌ ಬ್ಯಾಟಿಂಗ್‌ ಬಲ ನೀಡುತ್ತಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಶಾಯ್‌ ಹೋಪ್‌, ರಿಷಭ್‌ ಪಂತ್‌, ಅಕ್ಷರ್‌ ಪಟೇಲ್‌ ಫಾರ್ಮ್‌ನಲ್ಲಿದ್ದರು. ಆದ್ರೆ ರಿಷಭ್‌ ಪಂತ್‌ ಅವರ ಅಲಭ್ಯತೆಯು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಬಲದ ಚಿಂತೆ ತಂದೊಡ್ಡಿದೆ. ಅಲ್ಲದೇ ಪ್ಲೇ ಆಫ್‌ ರೇಸ್‌ನಲ್ಲಿರುವ ಡೆಲ್ಲಿ ತಂಡಕ್ಕೆ ಗೆಲುವು ಕೈ ಹಿಡಿಯುತ್ತಾ ಎಂಬುದನ್ನ ಕಾದು ನೋಡಬೇಕಿದೆ.

    ದಂಡ ವಿಧಿಸಿದ್ದು ಏಕೆ?
    ಮೇ 7 ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ (Arun Jaitley Stadium) ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ನಿಧಾನಗತಿಯ ಬೌಲಿಂಗ್‌ ನಡೆಸಿತ್ತು. ಇದಕ್ಕಾಗಿ ಪಂತ್‌ ಅವರಿಗೆ 30 ಲಕ್ಷ ರೂ. ದಂಡದೊಂದಿಗೆ ಒಂದು ಪಂದ್ಯದಿಂದ ಅಮಾನತುಗೊಳಿಸಲಾಗಿದೆ. ಇದರೊಂದಿಗೆ ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಉಳಿದ 11 ಸದಸ್ಯರಿಗೆ ತಲಾ 12 ಲಕ್ಷ ರೂ. ಅಥವಾ ಆಯಾ ಪಂದ್ಯ ಶುಲ್ಕದ 50 ಪ್ರತಿಶತದಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್‌ ಮಂಡಳಿ ತಿಳಿಸಿದೆ.

    30 ಲಕ್ಷ ದಂಡ ಯಾಕೆ?
    ಐಪಿಎಲ್‌ನಲ್ಲಿ ಮೊದಲ ಬಾರಿ ನಿಧಾನಗತಿ ಬೌಲಿಂಗ್ ಮಾಡಿದರೆ ನಾಯಕನಿಗೆ 12 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ. 2ನೇ ಬಾರಿ ಈ ತಪ್ಪನ್ನು ಮಾಡಿದರೆ ನಾಯಕನಿಗೆ 24 ಲಕ್ಷ ರೂ. ದಂಡದ ಜೊತೆ ಆಟಗಾರರಿಗೂ ದಂಡ ವಿಧಿಸಲಾಗುತ್ತದೆ. 3ನೇ ಬಾರಿಗೆ ದಂಡ ವಿಧಿಸಿದರೆ 30 ಲಕ್ಷ ದಂಡದೊಂದಿಗೆ ಒಂದು ಪಂದ್ಯದಿಂದ ನಾಯಕನನ್ನು ಅಮಾನತುಗೊಳಿಸಲಾಗುತ್ತದೆ.

    ಪಂದ್ಯಕ್ಕೆ ಮೀಸಲಾದ ಸಮಯ ಎಷ್ಟು?
    ಐಪಿಎಲ್‌ ನಿಯಮದ ಪ್ರಕಾರ ಒಂದು ತಂಡ 20 ಓವರ್‌ಗಳನ್ನು 90 ನಿಮಿಷದ ಒಳಗಡೆ ಮುಗಿಸಬೇಕು. ಈ ಅವಧಿಯಲ್ಲಿ ಓವರ್‌ಗಳನ್ನು ಪೂರ್ಣ ಮಾಡದೇ ಇದ್ದರೂ 20ನೇ ಓವರ್‌ ಅನ್ನು 90ನೇ ನಿಮಿಷದಲ್ಲೇ ಆರಂಭಿಸಬೇಕು. ಈ ನಿಯಮವನ್ನು ಮೊದಲ ಬಾರಿ ಉಲ್ಲಂಘಿಸಿದರೆ 12 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ. ಪ್ರತಿ ಪಂದ್ಯದಲ್ಲಿ 2 ನಿಮಿಷ 30 ಸೆಕೆಂಡಿನ 4 ಸ್ಟ್ರಟೆಜಿಕ್‌ ಟೈಮ್‌ ಔಟ್‌ ಬ್ರೇಕ್‌ಗಳು ಇರುತ್ತದೆ. ಮೊದಲ ಇನ್ನಿಂಗ್ಸ್‌ನಲ್ಲಿ ಬೌಲಿಂಗ್‌ ತಂಡ 6-9 ಓವರ್‌ ಮಧ್ಯೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು. 2ನೇ ಸ್ಟ್ರಟೆಜಿಕ್‌ ಟೈಮ್‌ ಔಟ್‌ ಅನ್ನು ಬ್ಯಾಟಿಂಗ್ ತಂಡ 13-16 ಓವರ್‌ ಮಧ್ಯೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು.