Tag: Delhi Election

  • ಜೇಬಲ್ಲಿರೋದು 9 ರೂಪಾಯಿ – ಕೇಜ್ರಿವಾಲ್ ವಿರುದ್ಧ ಕನ್ನಡಿಗನ ಸ್ಪರ್ಧೆ

    ಜೇಬಲ್ಲಿರೋದು 9 ರೂಪಾಯಿ – ಕೇಜ್ರಿವಾಲ್ ವಿರುದ್ಧ ಕನ್ನಡಿಗನ ಸ್ಪರ್ಧೆ

    ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಕಾವು ಹೆಚ್ಚಾಗುತ್ತಿದ್ದು, ಸೋಮವಾರ ಭರ್ಜರಿ ರೋಡ್ ಶೋ ಮಾಡಿದ್ದ ಅರವಿಂದ್ ಕೇಜ್ರಿವಾಲ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಅತ್ತ ಕಾಂಗ್ರೆಸ್, ಬಿಜೆಪಿಯಂತಹ ರಾಷ್ಟ್ರೀಯ ಪಕ್ಷಗಳು ಕೇಜ್ರಿವಾಲ್ ವಿರುದ್ಧ ಅಭ್ಯರ್ಥಿ ಇಲ್ಲದೆ ಪರದಾಡುತ್ತಿದ್ದರೆ, ಇತ್ತ ಕೇಜ್ರಿವಾಲ್ ವಿರುದ್ಧ ಕನ್ನಡಿಗರೊಬ್ಬರು ನಾಮಪತ್ರ ಸಲ್ಲಿಸಿದ್ದಾರೆ.

    ಶ್ರೀ ವೆಂಕಟೇಶ್ವರ್ ಮಹಾ ಸ್ವಾಮೀಜಿ ಅರವಿಂದ್ ಕೇಜ್ರಿವಾಲ್ ವಿರುದ್ಧ ನಾಮಪತ್ರ ಸಲ್ಲಿಸಿರುವ ಕನ್ನಡಿಗ. ಬಿಜಾಪುರ ಜಿಲ್ಲೆಯ ಚಡಚಣ ತಾಲೂಕು ಬರಡೊಲಾ ಗ್ರಾಮದ ಸ್ವಾಮೀಜಿ ಅವರ ಪೂರ್ವಾಶ್ರಮದ ಹೆಸರು ದೀಪಕ್. ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಇವರು ದೆಹಲಿ ಟೋಪಿವಾಲ್‍ನ ವಿರುದ್ಧ ತೊಡೆ ತಟ್ಟಿದ್ದಾರೆ.

    ಸ್ವಾಮೀಜಿ ಅವರು ಜನವರಿ 14ರಂದೇ ನಾಮಪತ್ರ ಸಲ್ಲಿಸಿದ್ದು, ಚುನಾವಣಾ ಅಫಿಡವಿಟ್‍ನಲ್ಲಿ ನನ್ನ ಬಳಿ ಇರೋದು ಒಂಭತ್ತು ರೂಪಾಯಿ, 99,999 ರೂಪಾಯಿ ಸಾಲ ಇದೆ ಎಂದು ಘೋಷಿಸಿಕೊಂಡಿದ್ದಾರೆ.

    ಸಮಾಜದಲ್ಲಿರುವ ಭ್ರಷ್ಟಾಚಾರಕ್ಕೆ ಅಂತ್ಯ ಹಾಡಬೇಕು, ನಿರುದ್ಯೋಗ ಸಮಸ್ಯೆ ಬಗೆಹರಿಸಬೇಕು, ಖಾದಿ ಹಾಕಿರುವ ರಾಜಕಾರಾಣಿಗಳು ಸಾಮಾಜಿಕ ಕಾರ್ಯ ಮಾಡದ ಹಿನ್ನೆಲೆ ಕಾವಿ ತೊಟ್ಟು ಚುನಾವಣೆಗೆ ಸ್ಪರ್ಧಿಸಿ ಅಭಿವೃದ್ಧಿ ಪರ ಕೆಲಸಗಳನ್ನು ಮಾಡುವುದು ಇವರ ಉದ್ದೇಶವಾಗಿದೆ. ಕಾಂಗ್ರೆಸ್, ಬಿಜೆಪಿ, ಎನ್‍ಸಿಪಿಯಿಂದ ಬಿ ಫಾರಂ ಕೇಳಿದ್ದರು. ಆದರೆ ಇವರಿಗೆ ಬಿ ಫಾರಂ ಸಿಗದ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

    ಹದಿನೆಂಟು ಚುನಾವಣೆಗಳಲ್ಲಿ ಸ್ಪರ್ಧೆ:
    ವೆಂಕಟೇಶ್ವರ್ ಮಹಾ ಸ್ವಾಮೀಜಿ ಅವರು ತಂಗಿರುವ ಗ್ರಾಮ ಪಂಚಾಯ್ತಿಯಿಂದ ಹಿಡಿದು ಲೋಕಸಭಾ, ರಾಜ್ಯಸಭಾ ಚುನಾವಣೆಗಳಲ್ಲೂ ಸ್ಪರ್ಧಿಸಿದ್ದಾರೆ. ಕರ್ನಾಟಕ, ಗುಜರಾತ್, ಉತ್ತರ ಪ್ರದೇಶ, ಮಹಾರಾಷ್ಟ್ರ, ಗೋವಾದಲ್ಲಿ ಇದುವರೆಗೂ ಹದಿನೆಂಟು ಚುನಾವಣೆಗಳಲ್ಲಿ ಇವರು ಸ್ಪರ್ಧೆ ಮಾಡಿದ್ದಾರೆ.

    ಒಂದಲ್ಲ ಒಂದು ದಿನ ನನ್ನ ಉದ್ದೇಶ ಜನರಿಗೆ ಅರ್ಥವಾಗಲಿದೆ, ಚುನಾವಣೆ ಗೆಲ್ಲಲಿದ್ದೇನೆ ಅನ್ನೊದು ಇವರ ವಿಶ್ವಾಸ. ಏನೇ ಆದರೂ ಕರ್ನಾಟಕ ಬಿಟ್ಟು ದೆಹಲಿಗೆ ಬಂದು ಸಿಎಂ ವಿರುದ್ಧ ನಾಮಪತ್ರ ಸಲ್ಲಿಸಿದ್ದ ಇವರ ಧೈರ್ಯವನ್ನ ನಿಜಕ್ಕೂ ಮೆಚ್ಚಬೇಕು.

  • ಟಿಕೆಟ್‍ಗಾಗಿ 10 ಕೋಟಿ ಡಿಮ್ಯಾಂಡ್ – ಕೇಜ್ರಿವಾಲ್ ವಿರುದ್ಧ ಆಪ್ ಶಾಸಕ ಗಂಭೀರ ಆರೋಪ

    ಟಿಕೆಟ್‍ಗಾಗಿ 10 ಕೋಟಿ ಡಿಮ್ಯಾಂಡ್ – ಕೇಜ್ರಿವಾಲ್ ವಿರುದ್ಧ ಆಪ್ ಶಾಸಕ ಗಂಭೀರ ಆರೋಪ

    ನವದೆಹಲಿ: ವಿಧಾನಸಭೆ ಚುನಾವಣೆ ಮುನ್ನ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಚುನಾವಣಾ ಟಿಕೆಟ್ ಗಾಗಿ ಹತ್ತು ಕೋಟಿ ಡಿಮ್ಯಾಂಡ್ ಮಾಡಿದ್ದರು ಎಂದು ದ್ವಾರಕ ಕ್ಷೇತ್ರದ ಆಪ್ ಶಾಸಕ ಆದರ್ಶ ಶಾಸ್ತ್ರಿ ಆರೋಪ ಮಾಡಿದ್ದಾರೆ.

    ಪ್ರಸುತ್ತ ಚುನಾವಣೆಯಲ್ಲಿ ಆದರ್ಶ ಶಾಸ್ತ್ರಿಗೆ ಆಪ್ ಟಿಕೆಟ್ ನಿರಾಕರಿಸಿತ್ತು. ಇದರಿಂದ ಬಂಡಾಯಗೊಂಡು ಶನಿವಾರ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಅವರು ಈ ಆರೋಪ ಮಾಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಪ್ರತಿ ಕ್ಷೇತ್ರದಲ್ಲಿ ಟಿಕೆಟ್ ಗಾಗಿ 10-20 ಕೋಟಿ ಹಣ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಳೆದ ಬಾರಿ ಆದರ್ಶ ಮಿಶ್ರಾ ಪ್ರತಿನಿಧಿಸಿದ್ದ ದ್ವಾರಕ ಕ್ಷೇತ್ರಕ್ಕೆ ಈ ಬಾರಿ ಆಮ್ ಆದ್ಮಿ ವಿನಯ್ ಮಿಶ್ರಾ ಎಂಬವರಿಗೆ ಟಿಕೆಟ್ ನೀಡಿದೆ. ಇದರಿಂದ ಆಕ್ರೋಶಗೊಂಡಿದ್ದ ಆದರ್ಶ ಶಾಸ್ತ್ರಿ ನಿನ್ನೆ ಡಿಸಿಸಿ ಅಧ್ಯಕ್ಷ ಸುಭಾಶ್ ಚೋಪ್ರಾ ಸಮ್ಮುಖದಲ್ಲಿ ಕಾಂಗ್ರೆಸ್ ಸೆರ್ಪಡೆಗೊಂಡರು. ಆದರ್ಶ ಶಾಸ್ತ್ರಿ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮನಾಗಿದ್ದು ಆಮ್ ಅದ್ಮಿ ರಾಷ್ಟ್ರೀಯ ವಕ್ತಾರರೂ ಆಗಿದ್ದರು.

    ಅರವಿಂದ ಕೇಜ್ರಿವಾಲ್ ವಿರುದ್ಧ ಇದೇ ಮೊದಲಲ್ಲ, 2019ರ ಲೋಕಸಭಾ ಚುನಾವಣೆ ವೇಳೆ ಟಿಕೆಟ್ ಗಾಗಿ ಆರು ಕೋಟಿ ಡಿಮ್ಯಾಂಡ್ ಮಾಡಿದ್ದರು ಎನ್ನುವ ಆರೋಪಗಳು ಕೇಳಿ ಬಂದಿತು.

  • ಪ್ರಣಾಳಿಕೆಯಲ್ಲ ‘ಗ್ಯಾರೆಂಟಿ ಕಾರ್ಡ್’ ಬಿಡುಗಡೆ ಮಾಡಿದ ಆಪ್

    ಪ್ರಣಾಳಿಕೆಯಲ್ಲ ‘ಗ್ಯಾರೆಂಟಿ ಕಾರ್ಡ್’ ಬಿಡುಗಡೆ ಮಾಡಿದ ಆಪ್

    ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆ ಸಿದ್ಧವಾಗಿರುವ ಆಮ್ ಆದ್ಮಿ ಪ್ರಣಾಳಿಕೆ ಬದಲು ಗ್ಯಾರೆಂಟಿ ಕಾರ್ಡ್ ಬಿಡುಗಡೆ ಮಾಡಿದೆ. ಅಧಿಕಾರಕ್ಕೆ ಬಂದಲ್ಲಿ ಗ್ಯಾರೆಂಟಿ ಕಾರ್ಡ್ ನಲ್ಲಿರುವ ಹತ್ತು ಅಂಶಗಳನ್ನು ಕಡ್ಡಾಯವಾಗಿ ಜಾರಿ ಮಾಡುವ ಭರವಸೆ ನೀಡಿದೆ.

    ಇಂದು ದೆಹಲಿಯ ಪಕ್ಷದ ಕಚೇರಿಯಲ್ಲಿ ಗ್ಯಾರೆಂಟಿ ಕಾರ್ಡ್ ಬಿಡುಗಡೆ ಮಾಡಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರ ರಚನೆಯಾಗಿ ಹತ್ತು ದಿನಗಳಲ್ಲಿ ಕೆಲಸ ಆರಂಭಿಸುವ ಭರವಸೆ ನೀಡಿದ್ದಾರೆ.

    ಹತ್ತು ಅಂಶಗಳ ಗ್ಯಾರೆಂಟಿ ಕಾರ್ಡ್ ನಲ್ಲಿ ಶಾಲಾ ಮಕ್ಕಳಿಗೆ ಭಾನುವಾರ ಉಚಿತ ಬಸ್ ಪ್ರಯಾಣ ಅವಕಾಶ ನೀಡುವ ಭರವಸೆ ನೀಡಿದೆ. ಮಹಿಳೆಯರ ಸುರಕ್ಷತೆಗಾಗಿ ದೆಹಲಿ ಬಸ್ ಗಳಲ್ಲಿ ‘ಮೊಹಲ್ಲಾ ಮಾರ್ಷಲ್’ಗಳನ್ನ ನೇಮಕ ಮಾಡಲಿದೆ. 200 ಯೂನಿಟ್ ವಿದ್ಯುತ್ ಮತ್ತು 2000 ಲೀಟರ್ ನೀರಿನ ಉಚಿತ ಬಳಕೆಯನ್ನ ಮುಂದುವರಿಸುವ ಆಶ್ವಾಸನೆ ಗ್ಯಾರೆಂಟಿ ಕಾರ್ಡ್ ನಲ್ಲಿ ನೀಡಿದೆ.

    ದೆಹಲಿಯ ಎಲ್ಲ ನಾಗರಿಕರಿಗೆ ಉಚಿತ ಆರೋಗ್ಯ ಸೌಲಭ್ಯ, ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ದೆಹಲಿ ಮತ್ತು ಎನ್‍ಸಿಆರ್ ಭಾಗದಲ್ಲಿ ಎರಡು ಕೋಟಿ ಸಸಿಗಳನ್ನು ನೆಡುವುದು, ಸಾರಿಗೆ ಉನ್ನತಿಕರಿಸುವ ನಿಟ್ಟಿನಲ್ಲಿ 11,000 ಹೆಚ್ಚುವರಿ ಬಸ್ ಗಳ ರಸ್ತೆಗಿಳಿಸುವುದು 500 ಕಿಮೀ ಮೆಟ್ರೊ ಲೈನ್ ಅಭಿವೃದ್ಧಿ ಪಡಿಸುವ ವಾಗ್ದಾನ ಆಮ್ ಆದ್ಮಿ ನೀಡಿದೆ.

    ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಶಿಕ್ಷಣ, ಅನಧಿಕೃತ ಕಾಲೋನಿಗಳಿಗೆ ರಸ್ತೆ ನೀರು, ಬೆಳಕಿನ ಸೌಲಭ್ಯ ಹಾಗೂ ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಅವಳವಡಿಕೆ, ನಿವಾಸ ರಹಿತರಿಗೆ ಸೂರು ಕಲ್ಪಿಸುವುದು, ಪಾರ್ಕ್ ಮತ್ತು ರೋಡ್ ಗಳನ್ನು ಸುಂದರಗೊಳಿಸುವುದು, ಯಮುನಾ ನದಿಯನ್ನ ಸ್ವಚ್ಛಗೊಳಿಸುವ ಆಶ್ವಾಸನೆ ನೀಡಲಾಗಿದೆ.

  • ದೆಹಲಿ ಚುನಾವಣೆಗೆ ಘೋಷಣೆಯಾಗದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ- ಖಾತೆ ತೆರೆಯಲು ‘ಕೈ’ ತಂತ್ರ

    ದೆಹಲಿ ಚುನಾವಣೆಗೆ ಘೋಷಣೆಯಾಗದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ- ಖಾತೆ ತೆರೆಯಲು ‘ಕೈ’ ತಂತ್ರ

    ನವದೆಹಲಿ: ದೆಹಲಿ ವಿಧಾನಸಭೆ ಚುನಾವಣಾ ರಣೋತ್ಸಾಹದಲ್ಲಿರುವ ಆಮ್ ಆದ್ಮಿ ಪಾರ್ಟಿ ಒಂದೇ ಹಂತದಲ್ಲಿ 70 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ. ಇತ್ತ ಬಿಜೆಪಿ ತನ್ನ ಮೊದಲು ಪಟ್ಟಿಯಲ್ಲಿ 57 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಆದರೆ ಕಾಂಗ್ರೆಸ್ ಮಾತ್ರ ಇದುವರೆಗೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡದೆ ಕುತೂಹಲ ಮೂಡಿಸಿದೆ.

    2015ರ ಚುನಾವಣೆಯಲ್ಲಿ 70 ಕ್ಷೇತ್ರಗಳ ಪೈಕಿ 67 ಸ್ಥಾನದಲ್ಲಿ ದಾಖಲೆಯ ಗೆಲವು ಸಾಧಿಸಿದ್ದ ಆಮ್ ಆದ್ಮಿ ಪಾರ್ಟಿ ಅದೇ ಉತ್ಸಾಹದಲ್ಲಿ ಪ್ರಚಾರ ಕಾರ್ಯ ಆರಂಭಿಸಿದೆ. ಮೂರು ಸ್ಥಾನಗಳನ್ನ ಪಡೆದು ಎರಡನೇ ಸ್ಥಾನದಲ್ಲಿದ್ದ ಬಿಜೆಪಿ, ಕಳೆದ ಚುನಾವಣೆಯಲ್ಲಿ ಹೆಚ್ಚು ಮತಗಳನ್ನ ಪಡೆದ ಮುಖಗಳಿಗೆ ಆದ್ಯತೆ ನೀಡಿದೆ. ಆದರೆ 2015ರಲ್ಲಿ ಖಾತೆ ತೆರೆಯದೆ ಮುಖಭಂಗ ಅನುಭವಿಸಿದ್ದ ಕಾಂಗ್ರೆಸ್ ಈ ಬಾರಿ ಟಿಕೆಟ್ ಹಂಚಿಕೆ ವಿಳಂಬ ಮಾಡುವ ಮೂಲಕ ಎಚ್ಚರಿಕೆಯ ನಡೆ ಅನುಸರಿಸಿದೆ.

    ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ವಿಳಂಬ ಹಿಂದೆ ಕಾಂಗ್ರೆಸ್ ಖಾತೆ ತೆರೆಯುವ ಸ್ಟಾಟರ್ಜಿ ಇದೆ ಎನ್ನಲಾಗಿದೆ. 2015ರಲ್ಲಿ ಒಂದು ಕ್ಷೇತ್ರದಲ್ಲಿ ಗೆಲ್ಲದ ಕಾಂಗ್ರೆಸ್ ಈ ಬಾರಿ ಅಳೆದು ತೂಗಿ ಟಿಕೆಟ್ ಫೈನಲ್ ಮಾಡುತ್ತಿದೆ. ಗುರುವಾರ ಸಭೆ ಮಾಡಿದ್ದ ಕಾಂಗ್ರೆಸ್ ಶುಕ್ರವಾರ ಪಟ್ಟಿ ಪ್ರಕಟಿಸಿವುದೆಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ತಂತ್ರ ಬದಲಿಸಿರುವ ಕಾಂಗ್ರೆಸ್ ಟಿಕೆಟ್ ಘೋಷಣೆ ಶನಿವಾರಕ್ಕೆ ಮುಂದೂಡಿದೆ.

    ಆಪ್ ಮತ್ತು ಬಿಜೆಪಿ ಘೋಷಿಸಿರುವ ಎರಡು ಪಟ್ಟಿಗಳನ್ನು ಅನುಸರಿಸಿ ಕಾಂಗ್ರೆಸ್ ಸರಿಯಾದ ಪೈಪೋಟಿ ನೀಡಬಹುದಾದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪ್ಲ್ಯಾನ್ ಮಾಡಿದೆ. ಈ ಮೂಲಕ ಕಾಂಗ್ರೆಸ್ ಈ ಬಾರಿ ಅಕೌಂಟ್ ತೆರೆಯುವ ಪ್ರಯತ್ನಕ್ಕೆ ಮುಂದಾಗಿದೆ.

    ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಿದ್ದ ಬೆನ್ನೆಲೇ ಶನಿವಾರ ಸಭೆ ಕರೆದಿರುವ ಕಾಂಗ್ರೆಸ್ ಮತ್ತೊಂದು ಹಂತದಲ್ಲಿ ಚುನಾವಣಾ ಸಮಿತಿ ಸಭೆ ನಡೆಸಲಿದೆ. ಈ ಸಭೆಯಲ್ಲಿ ಆಪ್ ಮತ್ತು ಬಿಜೆಪಿ ನೀಡಿರುವ ಟಿಕೆಟ್‍ಗಳನ್ನು ಆಧರಿಸಿ ತನ್ನ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಲು ಚಿಂತಿಸಿದ್ದು, ಈ ಮೂಲಕ ಟಿಕೆಟ್ ಹಂಚಿಕೆಯಲ್ಲಿ ಎಚ್ಚರಿಕೆ ನಡೆ ಇಟ್ಟಿರುವ ಕಾಂಗ್ರೆಸ್ ಈ ಬಾರಿ ಖಾತೆ ತೆರೆಯಲೆಬೇಕು ಎನ್ನುವ ಹಠಕ್ಕೆ ಬಿದ್ದಿದೆ.

    ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಫೆಬ್ರವರಿ 8ರಂದು ನಡೆಯಲಿದ್ದು, ಫೆಬ್ರವರಿ 11ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

  • ದೆಹಲಿ ಮತದಾರರನ್ನು ಸೆಳೆಯಲು ಬಿಜೆಪಿಯಿಂದ ಮಾಸ್ಟರ್ ಪ್ಲ್ಯಾನ್

    ದೆಹಲಿ ಮತದಾರರನ್ನು ಸೆಳೆಯಲು ಬಿಜೆಪಿಯಿಂದ ಮಾಸ್ಟರ್ ಪ್ಲ್ಯಾನ್

    – 5 ಸಾವಿರ ನಿರಾಶ್ರಿತರನ್ನು ರ‍್ಯಾಲಿಗೆ ಕರೆತರಲು ನಿರ್ಧಾರ
    – ಸಿಎಎ ಮೂಲಕವೇ ಮತ ಸೆಳೆಯಲು ಬಿಜೆಪಿ ನಿರ್ಧಾರ

    ನವದೆಹಲಿ: ರಾಷ್ಟ್ರ ರಾಜಧಾನಿಯನ್ನು ಶತಾಯಗತಾಯ ಗೆಲ್ಲಲೇಬೇಕೆಂದು ರಾಜಕೀಯ ಪಕ್ಷಗಳು ವಿವಿಧ ತಂತ್ರಗಳನ್ನು ಹೆಣೆಯುತ್ತಿದ್ದು, ಇದರ ಭಾಗವಾಗಿ ಬಿಜೆಪಿ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ.

    ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ರಂಗೇರುತ್ತಿದ್ದು, ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ಬಿಜೆಪಿ ನಾಯಕರು ಹಾಗೂ ಎಎಪಿ, ಕಾಂಗ್ರೆಸ್ ಭರ್ಜರಿ ಪ್ರಚಾರ ಕಾರ್ಯ ನಡೆಸಿವೆ. ಅಲ್ಲದೆ ಸಾರ್ವಜನಿಕ ಸಭೆಗಳನ್ನು ನಡೆಸುತ್ತಿವೆ. ಫೆಬ್ರವರಿ 8ಕ್ಕೆ ಮತದಾನ ದಿನಾಂಕ ನಿಗದಿಯಾಗಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಶುರುವಾಗಲಿದೆ. ಈಗಾಗಲೇ ಬಿಜೆಪಿ, ಆಮ್ ಅದ್ಮಿ ಮತ್ತು ಕಾಂಗ್ರೆಸ್ ಪ್ರಚಾರ ಕಾರ್ಯಗಳನ್ನು ಆರಂಭಿಸಿವೆ.

    ಆಮ್ ಅದ್ಮಿ ತನ್ನ ಐದು ವರ್ಷಗಳ ಸಾಧನೆಯನ್ನು ಜನರ ಮುಂದಿಟ್ಟರೆ, ಬಿಜೆಪಿ ಕೇಂದ್ರ ಸರ್ಕಾರದ ಅಭಿವೃದ್ಧಿ ಪರ ಕೆಲಸಗಳು ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ. ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ವಲಸೆ ಬಂದು ಅಕ್ರಮವಾಗಿ ದೆಹಲಿಯ ಹೊರ ಭಾಗದಲ್ಲಿ ಸಾಕಷ್ಟು ದೊಡ್ಡ ಪ್ರಮಾಣ ನಿರಾಶ್ರಿತರು ವಾಸವಾಗಿದ್ದು, ಈ ಮತಗಳನ್ನು ಪಡೆದುಕೊಳ್ಳಲು ಬಿಜೆಪಿ ತಂತ್ರ ರೂಪಿಸಿದೆ.

    ಪೌರತ್ವ ತಿದ್ದುಪಡಿ ಕಾಯ್ದೆಯ ಲಾಭ ಪಡೆಯಲು ಮುಂದಾಗಿರುವ ಬಿಜೆಪಿ ಜನವರಿ 18 ರಂದು ದೆಹಲಿಯಲ್ಲಿ ಬೃಹತ್ ರ‍್ಯಾಲಿ ನಡೆಸಲು ಉದ್ದೇಶಿಸಿದೆ. ಪಾಕಿಸ್ತಾನದಿಂದ ಬಂದು ದೆಹಲಿಯಲ್ಲಿ ವಾಸವಾಗಿರುವ ನಿರಾಶ್ರಿತರು ಈ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಜಂತರ್ ಮಂತರ್ ನಿಂದ ಬಿಜೆಪಿ ಕೇಂದ್ರ ಕಚೇರಿಯವರೆಗೆ ಮೆರವಣಿಗೆ ಮಾಡಲಿದ್ದಾರೆ. ಬಳಿಕ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಅಭಿನಂದನೆ ಸಲ್ಲಿಸಲಿದ್ದಾರೆ.

    ಅಖಿಲ ಭಾರತ ಭೋವಿ ಸಮುದಾಯದ ಅಧ್ಯಕ್ಷ ಹಾಗೂ ಬಿಜೆಪಿ ನಾಯಕ ಡಾ.ವೆಂಕಟೇಶ ಮೌರ್ಯ ನೇತೃತ್ವದಲ್ಲಿ ಪಾಕಿಸ್ತಾನದಿಂದ ಬಂದು ದೆಹಲಿಯಲ್ಲಿ ನೆಲೆಸಿರುವ ಐದು ಸಾವಿರ ಮಂದಿ ಭೋವಿ ಸಮುದಾಯದ ನಿರಾಶ್ರಿತರು ಈ ರ್ಯಾಲಿಯಲ್ಲಿ ಭಾಗಿಯಾಗಲಿದ್ದಾರೆ. 1988ರಲ್ಲಿ ಪಾಕಿಸ್ತಾನ ಸಂಸತ್‍ಗೆ ನಾಮ ನಿರ್ದೇಶಿತಗೊಂಡಿದ್ದ ಸಂಸದ ಡಿವ್ಯರಾಮ್, ಸಿಂದ್ ಪ್ರಾಂತ್ಯದ ಮಾಜಿ ಕಾರ್ಪೊರೇಟರ್ ಅಮಿತ್ ಚಂದ್, ಸಿಎಎ ಬೆಂಬಲಿಸಿ ಅಮಿತ್ ಶಾಗೆ ಪತ್ರ ಬರೆದಿದ್ದ ಸಾಹಿಬಾ ಮತ್ತು ರಾಬೇಲಿಯವರು ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

    ಸಿಎಎ ಜಾರಿ ತಂದಿದಕ್ಕೆ ಅಭಿನಂದನೆ ಜೊತೆಗೆ ಸಧ್ಯ ವಾಸವಾಗಿರುವ ಅಕ್ರಮ ಮನೆಗಳನ್ನು ಸರ್ಕಾರ ಸಕ್ರಮ ಮಾಡಿಕೊಡಬೇಕು. ಅಲ್ಲದೆ ಪ್ರತಿ ಕುಟುಂಬಕ್ಕೆ ಸರ್ಕಾರಿ ಉದ್ಯೋಗ, ಉಚಿತ ಮನೆ ಹಾಗೂ ಹಣಕಾಸಿನ ನೆರವು ನೀಡಬೇಕು ಎಂದು ಹೆಚ್ಚುವರಿ ಮನವಿ ಮಾಡಲಿದ್ದಾರೆ. ಬಿಜೆಪಿ ನಾಯಕರು ಈ ರ‍್ಯಾಲಿಯ ನೇತೃತ್ವದ ಹೊತ್ತಿದ್ದು, ದೆಹಲಿ ಚುನಾವಣೆಯಲ್ಲಿ ಸಿಎಎ ಮೂಲಕ ಮತಗಳನ್ನು ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ. ಅಲ್ಲದೆ ದೇಶಾದ್ಯಂತ ಎದ್ದಿರುವ ವಿರೋಧಿ ಅಲೆಗೆ ಪರೋಕ್ಷವಾಗಿ ಪ್ರತ್ಯುತ್ತರ ನೀಡುವ ಪ್ರಯತ್ನ ಬಿಜೆಪಿ ಮಾಡುತ್ತಿದೆ.

  • ದೆಹಲಿ ವಿಧಾನಸಭೆ ಚುನಾವಣೆ – ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ವೈದ್ಯರೇ ಮೇಲುಗೈ

    ದೆಹಲಿ ವಿಧಾನಸಭೆ ಚುನಾವಣೆ – ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ವೈದ್ಯರೇ ಮೇಲುಗೈ

    ನವದೆಹಲಿ : ಪ್ರತಿಯೊಂದು ರಂಗದಲ್ಲಿ ಉನ್ನತ ಸ್ಥಾನಕ್ಕೇರಿದ ಮೇಲೆ ರಾಜಕೀಯದಲ್ಲೂ ಒಮ್ಮೆ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಬೇಕು ಎಂದು ಕೆಲವರು ಬಯಸುತ್ತಾರೆ. ಹಿಂದೆ ಕೆಲವು ನಟ ನಟಿಯರು, ಉದ್ಯಮಿಗಳು, ಕ್ರೀಡಾಪಟುಗಳು ಸೇರಿ ಇತರೆ ವಲಯದ ಪ್ರಮುಖರು ರಾಜಕೀಯಕ್ಕೆ ಸೇರಿ ಚುನಾಯಿತರಾಗಿದ್ದಾರೆ. ಅದೇ ಮಾದರಿಯಲ್ಲಿ ಈಗ ದೆಹಲಿ ಚುನಾವಣೆಯಲ್ಲಿ ಮೆಗಾ ಆಪರೇಷನ್ ಮಾಡಲು ವೈದ್ಯರು ಮುಂದಾಗಿದ್ದಾರೆ.

    ದೆಹಲಿ ವಿಧಾನಸಭೆ ಚುನಾವಣೆ ಘೋಷಣೆ ಆಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದ್ದು, ಈ ಪಟ್ಟಿಯಲ್ಲಿ ವೈದ್ಯರ ಸಂಖ್ಯೆ ಹೆಚ್ಚಾಗಿದೆ. ವೃತ್ತಿಯಲ್ಲಿ ವೈದ್ಯರಾಗಿರುವ ಹಲವರು ಈ ಬಾರಿ ಚುನಾವಣೆ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸುತ್ತಿದ್ದಾರೆ. ಕೆಲವರು ಒಂದು ಹಂತದ ಮಾತುಕತೆ ನಡೆಸಿದ್ದಾರೆ.

    2013 ರಲ್ಲಿ ಡಾ.ಹರ್ಷವರ್ಧನ್ ಕೃಷ್ಣನಗರದಿಂದ, ಲಕ್ಷ್ಮೀನಗರದಿಂದ ಡಾ.ಎ.ಕೆ.ವಾಲಿಯಾ, ಶಹದಾರಾದಿಂದ ಡಾ.ನರೇಂದ್ರನಾಥ್ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಮೂವರನ್ನು ಹೊರತಾಗಿ ಈ ಬಾರಿ ವೈದ್ಯ ಆಕಾಂಕ್ಷಿಗಳ ಪಟ್ಟಿ ಮತ್ತಷ್ಟು ಉದ್ದವಾಗಿದೆ.

    ಈ ಬಾರಿ ಡಾ.ಎ.ಕೆ.ವಾಲಿಯಾ ಕೃಷ್ಣನಗರದಿಂದ ಟಿಕೆಟ್ ಬಯಸಿದ್ದು, ಡಾ.ನರೇಂದ್ರ ನಾಥ್ ಶಹದಾರ ಸ್ಪರ್ಧಿಸಲು ಇಚ್ಛಿಸಿದ್ದಾರೆ. ಡಾ.ವಿ.ಕೆ.ಮೊಂಗಾ ಮತ್ತು ಡಾ.ಅನಿಲ್ ಗೋಯಲ್ ಕೂಡಾ ಈ ಬಾರಿ ಟಿಕೆಟ್ ಬಯಸಿದ್ದಾರೆ. ಬಿಜೆಪಿ ಸೇರಿದ್ದ ಡಾ.ವಿ.ಕೆ.ಮೊಂಗಾ ಬಳಿಕ ಕಾಂಗ್ರೆಸ್ ಸೇರಿಕೊಂಡಿದ್ದರು. 2013 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕೃಷ್ಣನಗರದಿಂದ ಡಾ.ಹರ್ಷ್ ವರ್ಧನ್ ಎದುರು ಸ್ಪರ್ಧಿಸಿ ಸೋಲನ್ನಪ್ಪಿದ್ದರು. ಈಗ ಪುನಃ ಬಿಜೆಪಿ ಸೇರಿರುವ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

    ಇವರಲ್ಲದೇ ಹಿರಿಯ ಮೂತ್ರಶಾಸ್ತ್ರಜ್ಞ ಡಾ. ಅನಿಲ್ ಗೋಯಲ್ ಕೃಷ್ಣನಗರದಿಂದ ಬಿಜೆಪಿಯಿಂದ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ದಂತ ತಜ್ಞ ಡಾ.ಕೆ.ಕೆ.ಚೌಧರಿ, ಮಹಿಳಾ ರೋಗಶಾಸ್ತ್ರಜ್ಞ ಡಾ. ವಂದನಾ ವಶಿಷ್ಠ ಹೂಡಾ ಸಿಟಿಯಿಂದ ಸ್ಪರ್ಧಿಸಲು ಕಸರತ್ತು ನಡೆಸಿದ್ದು, ಈ ಬಾರಿ ಒಟ್ಟು ಆರು ಮಂದಿ ವೈದ್ಯರು ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದಾರೆ.

  • ದೆಹಲಿ ಚುನಾವಣಾ ಕಣಕ್ಕೆ ನಿರ್ಭಯ ಸಂತ್ರಸ್ತೆಯ ತಾಯಿ?

    ದೆಹಲಿ ಚುನಾವಣಾ ಕಣಕ್ಕೆ ನಿರ್ಭಯ ಸಂತ್ರಸ್ತೆಯ ತಾಯಿ?

    ನವದೆಹಲಿ : ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 7 ವರ್ಷಗಳ ಕಾನೂನು ಹೋರಾಟದ ಬಳಿಕ ಸಂತ್ರಸ್ತೆಗೆ ನ್ಯಾಯ ದೊರಕಿದೆ. ಜನವರಿ 22 ಬೆಳಗ್ಗೆ 7 ಗಂಟೆಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಡೆತ್ ವಾರಂಟ್ ಜಾರಿ ಮಾಡಿದೆ. ನಿರಂತರ ಕಾನೂನು ಹೋರಾಟ ಮಾಡಿದ ಸಂತ್ರಸ್ತೆಯ ತಾಯಿ ಆಶಾದೇವಿ ಅವರ ಧೈರ್ಯವನ್ನು ಇಡೀ ದೇಶವೇ ಮೆಚ್ಚಿ ಅಭಿನಂದಿಸಿದ್ದು ಈ ಜನಪ್ರಿಯತೆಯನ್ನು ಬಳಸಿಕೊಳ್ಳಲು ರಾಜಕೀಯ ಪಕ್ಷಗಳು ಮುಂದಾಗಿವೆ.

    ಆಶಾದೇವಿ ದೆಹಲಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸುದ್ದಿ ಕೇಳಿ ಬಂದಿದೆ. ಕೆಲವು ಪಕ್ಷಗಳು ಈ ನಿಟ್ಟಿನಲ್ಲಿ ಚರ್ಚೆ ಮಾಡಿದ್ದು, ಟಿಕೆಟ್ ನೀಡುವ ಭರವಸೆ ನೀಡಲಾಗಿದೆ ಎನ್ನಲಾಗುತ್ತಿದೆ.

    ದೆಹಲಿಯಲ್ಲಿ ಫೆಬ್ರವರಿ 8 ರಂದು ಮತದಾನಕ್ಕೆ ದಿನಾಂಕ ನಿಗದಿಯಾಗಿದ್ದು, 11 ರಂದು ಫಲಿತಾಂಶ ಹೊರಬರಲಿದೆ. ಇದಕ್ಕೂ ಮೊದಲು ಅಂದರೆ ಜನವರಿ 22 ರಂದು ನಿರ್ಭಯ ದೋಷಿಗಳಿಗೆ ಗಲ್ಲು ಶಿಕ್ಷೆಯಾಗಲಿದೆ. ಈ ವೇಳೆ ಇಡೀ ದೇಶ ಸಂಭ್ರಮವನ್ನು ವ್ಯಕ್ತಪಡಿಸಲಿದೆ.

    ಪ್ರಕರಣದಿಂದ ಇಡೀ ದೇಶಕ್ಕೆ ಪರಿಚಯವಾಗಿರುವ ನಿರ್ಭಯ ತಾಯಿ ಆಶಾದೇವಿಯನ್ನು ಚುನಾವಣಾ ಕಣಕ್ಕೆ ಇಳಿಸಿದರೆ ಆ ಕ್ಷೇತ್ರದಲ್ಲಿ ಗೆಲುವು ಖಚಿತ ಮತ್ತು ಪಕ್ಷದ ಕೆಲವು ಕ್ಷೇತ್ರಗಳ ಮೇಲೂ ಇದು ಪರಿಣಾಮ ಬರಲಿದೆ ಎನ್ನುವುದು ರಾಜಕೀಯ ಪಕ್ಷಗಳ ಲೆಕ್ಕಾಚಾರ. ಹೀಗಾಗಿ ಆಶಾದೇವಿ ಮಾತುಕತೆ ನಡೆಸಿದ್ದು, ಯಾವುದು ಅಂತಿಮವಾಗದ ಹಿನ್ನೆಲೆ ಯಾವುದೇ ಪಕ್ಷ ಬಹಿರಂಗವಾಗಿ ಈ ಬಗ್ಗೆ ಮಾತನಾಡಿಲ್ಲ.

    ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಆಶಾದೇವಿ, ಮಗಳನ್ನ ಅತ್ಯಾಚಾರ ಮಾಡಿದ ದೋಷಿಗಳು ನೇಣು ಕುಣಿಕೆಯಲ್ಲಿ ನೇತಾಡುವುದನ್ನು ಮೊದಲು ನೋಡಬೇಕು. ಬಳಿಕ ಚುನಾವಣೆ ಸ್ವರ್ಧಿಸುವ ಬಗ್ಗೆ ಯೋಚನೆ ಮಾಡುತ್ತೇನೆ ಎಂದಿದ್ದಾರೆ. ಈ ಮೂಲಕ ಅವರು ಚುನಾವಣೆ ಸ್ಪರ್ಧಿಸುವ ಸಾಧ್ಯತೆಗಳನ್ನು ತಳ್ಳಿ ಹಾಕಿಲ್ಲ.

    ದೆಹಲಿಯಲ್ಲಿ ನೇರ ಫೈಟ್ ನೀಡುತ್ತಿರುವ ಬಿಜೆಪಿ ಮತ್ತು ಆಮ್ ಅದ್ಮಿ ಆಶಾದೇವಿ ಅವರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ. ಈಗಾಗಲೇ ಅವರ ಪರ ಬಹಿರಂಗ ಹೇಳಿಕೆಗಳನ್ನು ನೀಡುತ್ತಿದ್ದು ಏಳು ವರ್ಷಗಳ ಕಾಲ ಕಾನೂನು ಹೋರಾಟ ಮಾಡಿದ ಅವರ ಧೈರ್ಯವನ್ನು ಹಾಡಿ ಹೊಗಳುತ್ತಿದ್ದಾರೆ. ಕೆಲವು ಗುಪ್ತ ಸಭೆಗಳು ಕೂಡಾ ನಡೆದಿದ್ದು ಗೆಲ್ಲುವ ಕುದುರೆ ಸೆಳೆಯಲು ಎರಡು ಪಾರ್ಟಿಗಳು ನಿರಂತರ ಪ್ರಯತ್ನ ಮಾಡುತ್ತಿವೆ.

  • ದೆಹಲಿ ಗೆಲುವಿಗೆ ಎಎಪಿ ಪ್ರಚಾರ ತಂತ್ರ ಅನುಸರಿಸಲಿರುವ ಬಿಜೆಪಿ

    ದೆಹಲಿ ಗೆಲುವಿಗೆ ಎಎಪಿ ಪ್ರಚಾರ ತಂತ್ರ ಅನುಸರಿಸಲಿರುವ ಬಿಜೆಪಿ

    ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ದಿನದಿಂದ ದಿನಕ್ಕೆ ರಾಷ್ಟ್ರ ರಾಜಧಾನಿ ಚುನಾವಣೆ ರಣಕಣ ರಂಗು ಪಡೆದುಕೊಳ್ಳುತ್ತಿದೆ. ಈ ನಡುವೆ ಚುನಾವಣಾ ಪ್ರಚಾರಕ್ಕೆ ಬಿಜೆಪಿ, ಆಮ್ ಅದ್ಮಿ ತಂತ್ರಗಳನ್ನ ಅನುಸರಿಸಲಿದೆ ಎಂದು ತಿಳಿದು ಬಂದಿದೆ.

    2015 ರಲ್ಲಿ 70 ವಿಧಾನಸಭಾ ಕ್ಷೇತ್ರಗಳ ಪೈಕಿ 67 ಸ್ಥಾನಗಳನ್ನು ಗೆಲ್ಲುವ ಮೂಲಕ ದೆಹಲಿಯಲ್ಲಿ ಆಪ್ ದಾಖಲೆಯ ಗೆಲವು ಸಾಧಿಸಿತ್ತು. ಹೆಚ್ಚು ಆಡಂಬರದ ಬೃಹತ್ ಸಮಾವೇಶಗಳ ಮೊರೆ ಹೋಗದೆ ತನ್ನ ವಿಶಿಷ್ಟ ಪ್ರಚಾರ ಕಾರ್ಯಗಳಿಂದ ದೆಹಲಿಯ ಜನರನ್ನು ನೇರವಾಗಿ ತಲುಪಲು ಪ್ರಯತ್ನ ಮಾಡಿತ್ತು. ಇದೇ ತಂತ್ರವನ್ನು ಬಿಜೆಪಿ ಈ ಬಾರಿ ಚುನಾವಣೆಯಲ್ಲಿ ಅನುಸರಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

    ಆಪ್ ತನ್ನೆಲ್ಲ ಚುನಾವಣೆಗಳಲ್ಲೂ ಮೊಹಲ್ಲಾ ಮೀಟಿಂಗ್, ಮನೆ ಮನೆ ಪ್ರಚಾರ, ವಾರ್ಡ್ ಸಭೆಗಳು, ಕರಪತ್ರ ಹಂಚುವ ಮೂಲಕ ನೇರವಾಗಿ ಜನರನ್ನ ತಲುಪಿ ಪಕ್ಷದ ನಿಲುವುಗಳನ್ನು ಹೇಳುವ ಪ್ರಯತ್ನ ಮಾಡಲಾಗಿತ್ತು. ಇದೇ ಮಾದರಿಯನ್ನು ಬಿಜೆಪಿ ಈ ಬಾರಿ ಫಾಲೋ ಮಾಡಲಿದೆ ಎನ್ನಲಾಗುತ್ತಿದೆ. ಬೃಹತ್ ಸಮಾವೇಶಗಳು, ಪೋಸ್ಟರ್ ಗಳು, ಹೋಲ್ಡಿಂಗ್ಸ್ ಬ್ಯಾನರ್ ಗಳಿಗೆ ಹೆಚ್ಚು ಆದ್ಯತೆ ನೀಡದೆ ಮೊಹಲ್ಲಾ ಮೀಟಿಂಗ್ ಮಾಡಲು ಬಿಜೆಪಿ ನಿರ್ಧರಿಸಿದೆಯಂತೆ. ಇದನ್ನೂ ಓದಿ: ಆಪ್‍ಗಿಂತ ಐದು ಪಟ್ಟು ಹೆಚ್ಚು ಸಬ್ಸಿಡಿ- ಬಿಜೆಪಿಗೆ ಕೇಜ್ರಿವಾಲ್ ತಿರುಗೇಟು

    2013 ಮತ್ತು 2015ರ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಹೆಚ್ಚು ಸಂಪನ್ಮೂಲ ಹೊಂದಿದ್ದ ಪಕ್ಷಗಳಾಗಿದ್ದವು ಹೀಗಾಗೀ ದೊಡ್ಡ ಪ್ರಮಾಣದ ಸಮಾವೇಶ, ಕಟ್ಟೌಟ್ ಗಳನ್ನು ಹಾಕುವ ಮೂಲಕ ಅದ್ಧೂರಿ ಪ್ರಚಾರ ಮಾಡಿದ್ದವು. ಆದರೆ ಸಂಪನ್ಮೂಲ ಕೊರತೆ ಹೊಂದಿದ್ದ ಆಪ್ ತನ್ನ ಸ್ವಯಂ ಸೇವಕ ಕಾರ್ಯಕರ್ತರ ಮೂಲಕ ನೇರವಾಗಿ ಮೊಹಲ್ಲಾ ಮೀಟಿಂಗ್, ವಾರ್ಡ್ ಸಭೆಗಳು, ಮನೆ ಮನೆ ಪ್ರಚಾರ, ಕರಪತ್ರಗಳನ್ನು ಹಂಚುವ ಮೂಲಕ ಹೊಸ ಪ್ರಚಾರ ಪ್ರಯತ್ನ ಮಾಡಿದ್ದರು. ಅಲ್ಲದೇ ಆಪ್ ನ ಈ ಪ್ರಯತ್ನ ಯಶಸ್ವಿ ಆಗುವದಲ್ಲದೇ ಹೊಸ ಪಕ್ಷವೊಂದು 2013ರಲ್ಲಿ 28 ಮತ್ತು 2015 ರಲ್ಲಿ 67 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ಸು ಕಂಡಿತ್ತು. ಅದ್ಧೂರಿ ಪ್ರಚಾರ ಮಾಡಿದ್ದ ಬಿಜೆಪಿ ಮೂರು ಸ್ಥಾನ ಪಡೆದರೆ ಕಾಂಗ್ರೆಸ್ ಧೂಳಿಪಟವಾಗಿತ್ತು. ಸರಳ ಪ್ರಚಾರದ ಮೂಲಕ ಆಪ್ ದಾಖಲೆಯ ವಿಜಯ ಸಾಧಿಸಿತು. ಇದನ್ನೂ ಓದಿ: ಜನವರಿ 20ರೊಳಗೆ ಪ್ರಣಾಳಿಕೆ ಬಿಡುಗಡೆ- 2015ಕ್ಕಿಂತ ಚಿಕ್ಕದಿರಲಿದೆ ಆಪ್ ಭರವಸೆ ಪಟ್ಟಿ

    ಇದೇ ತಂತ್ರವನ್ನು ಬಿಜೆಪಿ ಅನುಸರಿಸಲು ರಾಷ್ಟ್ರೀಯ ಅಧ್ಯಕ್ಷ ಸೂಚಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಕಳೆದ ವಾರ ತಮ್ಮ ಭಾಷಣದಲ್ಲಿ ನಮ್ಮ ದೊಡ್ಡ ಕಾರ್ಯಕರ್ತರ ಪಡೆ ಪ್ರತಿ ಮನೆ ಮನೆಗೂ ತೆರಳಬೇಕು ಮೊಹಲ್ಲಾ ಸಭೆ ಮಾಡಬೇಕು ಅಂತಾ ಕರೆ ನೀಡಿದ್ದರು. ಅಲ್ಲದೇ ದೆಹಲಿಯಲ್ಲಿ ಸ್ವತಃ ಸಿಎಎ ಪರ ಮನೆ ಮನೆ ಅಭಿಯಾನ ಮಾಡುವ ಮೂಲಕ ಮಾದರಿಯಾಗುವ ಪ್ರಯತ್ನ ಮಾಡಿದ್ದರು. ಇದನ್ನೂ ಓದಿ: ಆಪ್ ಗೆ ಕಾಮ್, ಬಿಜೆಪಿಗೆ ಮೋದಿ ಜನಪ್ರಿಯತೆ, ಸಿಎಎ ಚುನಾವಣಾ ಅಸ್ತ್ರ

    ಮಾಹಿತಿಯ ಪ್ರಕಾರ, ಪ್ರತಿ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರು, ಮಂಡಲ ಅಧ್ಯಕ್ಷರು, ಜಿಲ್ಲಾಧ್ಯಕ್ಷರು, ವಾರ್ಡ್ ಕೌನ್ಸಿಲರ್ ಗಳ ನೇತೃತ್ವದಲ್ಲಿ ಕಾರ್ಯಕರ್ತರ ಗುಂಪುಗಳನ್ನು ಮಾಡಿಕೊಂಡು ಮೊಹಲ್ಲಾಗಳಿಗೆ ಭೇಟಿ ಮಾಡಿ 50 ರಿಂದ 150 ಜನರ ಒಳಗೊಳ್ಳುವ ಸಣ್ಣ ಸಣ್ಣ ಸಭೆಗಳನ್ನು ಮಾಡಿ ಅಭ್ಯರ್ಥಿಗಳು ಭಾವಚಿತ್ರ ಪಕ್ಷದ ಚಿಹ್ನೆ ಸೇರಿದಂತೆ ಕೇಂದ್ರ ಸರ್ಕಾರದ ಸಾಧನೆ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸಲು ಅಮಿತ್ ಶಾ ಸೂಚಿಸಿದ್ದಾರೆ ಎಂದು ಬಿಜೆಪಿ ಮೂಲಗಳ ಹೇಳಿದ್ದಾರೆ. ಇದಲ್ಲದೇ ಕೇಂದ್ರ ಸರ್ಕಾರದ ಪ್ರಮುಖ ನಾಯಕರು ಮಾತ್ರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಅಮಿತ್ ಶಾ ಸೂಚಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:

  • ಆಪ್ ಗೆ ಕಾಮ್, ಬಿಜೆಪಿಗೆ ಮೋದಿ ಜನಪ್ರಿಯತೆ, ಸಿಎಎ ಚುನಾವಣಾ ಅಸ್ತ್ರ

    ಆಪ್ ಗೆ ಕಾಮ್, ಬಿಜೆಪಿಗೆ ಮೋದಿ ಜನಪ್ರಿಯತೆ, ಸಿಎಎ ಚುನಾವಣಾ ಅಸ್ತ್ರ

    ನವದೆಹಲಿ: ಜಾರ್ಖಂಡ್ ಚುನಾವಣೆ ಸೋಲಿನ ಬಳಿಕ ಹೊಸದೊಂದು ಪ್ರಯೋಗಕ್ಕೆ ಬಿಜೆಪಿ ಮುಂದಾಗಿದೆ. ದೆಹಲಿಯಲ್ಲಿ ಈ ಬಾರಿ ಸಿಎಂ ಅಭ್ಯರ್ಥಿ ಇಲ್ಲದೆ ವಿಧಾನಸಭೆ ಚುನಾವಣೆ ಎದುರಿಸಲು ಪ್ಲಾನ್ ಮಾಡಿಕೊಂಡಿರುವ ಬಿಜೆಪಿ ಸಿಎಎ ಮತ್ತು ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆಯನ್ನೆ ಬಳಸಿಕೊಂಡು ಜನರ ಮುಂದೆ ಹೋಗಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

    ಸಿಎಎ ಜಾರಿಯಾದ ಬಳಿಕ ದೇಶದಾದ್ಯಂತ ಬೃಹತ್ ಪ್ರತಿಭಟನೆಗಳು ನಡೆಯುತ್ತಿದೆ. ಮತ್ತೊಂದು ಕಡೆ ಜಾರ್ಖಂಡ್ ನ ಮೊದಲ ಚುನಾವಣೆಯಲ್ಲಿ ಬಿಜೆಪಿ ಮುಗ್ಗರಿಸಿತ್ತು. ರಾಷ್ಟ್ರೀಯ ಮಟ್ಟದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಗೆ ಆದ ಹಿನ್ನಡೆ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಸೋಲು ಎಂದು ವಿಶ್ಲೇಷಣೆ ಮಾಡಲಾಗಿತ್ತು.

    ಈ ಹಿನ್ನೆಲೆ ಹೊಸ ಪ್ರಯತ್ನಕ್ಕೆ ಮುಂದಾಗಿರುವ ಬಿಜೆಪಿ ಈ ಬಾರಿ ಕೇವಲ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರದ ಯೋಜನೆಗೆಗಳು ಹಾಗೂ ಪೌರತ್ವ ತಿದ್ದು ಪಡಿ ಕಾಯ್ದೆಯನ್ನು ದೆಹಲಿ ಜನರ ಮುಂದಿಡಲು ಬಿಜೆಪಿ ಸಿದ್ದವಾಗಿದೆ ಎನ್ನಲಾಗಿದೆ. ಈಗಾಗಲೇ ಎಎಪಿ (ಕಾಮ್ ಕಾ ಚುನಾವ್) ಕೆಲಸದ ಮೇಲೆ ಚುನಾವಣೆ ಎಂದು ಘೋಷಿಸಿದ್ದು, ತಮ್ಮ ಐದು ವರ್ಷದ ಸಾಧನೆಗಳನ್ನು ಜನರ ಮುಂದಿಡಲು ನಿರ್ಧರಿಸಿದ್ದು ಅರವಿಂದ್ ಕೇಜ್ರಿವಾಲ್ ಹೆಸರಿನಲ್ಲಿ ಚುನಾವಣೆ ಎದುರಿಸಲಿದೆ.

    ದೆಹಲಿಯಲ್ಲೇ ಕೇಂದ್ರ ಸರ್ಕಾರ ಹೆಚ್ಚು ಕೇಂದ್ರಿಕೃತವಾಗಿರುವ ಹಿನ್ನೆಲೆ ಮೋದಿ ಮುಖ ಚುನಾವಣೆಗೆ ಸೂಕ್ತ ಅಲ್ಲದೇ ಅಕ್ರಮ ವಲಸಿಗರ ಸಂಖ್ಯೆ ದೆಹಲಿಯ ಹೊರ ಭಾಗದಲ್ಲಿದ್ದು ಹೆಚ್ಚಿದ್ದು ಸಿಎಎ ಯನ್ನು ಹೆಚ್ಚು ಪ್ರಚಾರ ಮಾಡುವ ಮೂಲಕ ಹೆಚ್ಚು ಮತಗಳನ್ನು ಪಡೆಯಬಹುದು ಎನ್ನುವುದು ಲೆಕ್ಕಚಾರ. ಜೊತೆಗೆ ಬಿಜೆಪಿಯಲ್ಲಿ ಸಿಎಂ ಅಭ್ಯರ್ಥಿ ಆಗಲು ಸಾಕಷ್ಟು ಪೈಪೋಟಿ ಇದೆ. ಮನೋಜ್ ತಿವಾರಿ, ಸಂಸದ ಗೌತಮ್ ಗಂಭೀರ್, ಕೇಂದ್ರ ಸಚಿವ ಹರ್ಷವರ್ಧನ್ ಸೇರಿ ದೊಡ್ಡ ಪಟ್ಟಿಯೇ ಇದ್ದು ಸಿಎಂ ಅಭ್ಯರ್ಥಿ ಘೋಷಣೆ ಮಾಡಿದಲ್ಲಿ ಅಸಮಾಧಾನ ವ್ಯಕ್ತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡದಿರಲು ಬಿಜೆಪಿ ಚಿಂತಿಸಿದೆ ಎಂದು ಹೇಳಲಾಗಿದೆ.

    ಈ ನಿಟ್ಟಿನಲ್ಲಿ ಸಿಎಎ ಅನ್ನು ದೆಹಲಿಯಲ್ಲಿ ಚುನಾವಣೆವರೆಗೂ ಹೆಚ್ಚು ಜೀವಂತವಾಗಿಡುವ ಪ್ರಯತ್ನ ಮಾಡುತ್ತಿದ್ದು, ಚುನಾವಣೆ ಪ್ರಚಾರಕ್ಕೆ ಹೆಚ್ಚು ಈ ವಿಷಯವನ್ನೆ ಬಳಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.