Tag: Delhi Government

  • ಆದಾಯ ನಷ್ಟ ತಡೆಗೆ ಪ್ಲ್ಯಾನ್‌ – ಬಿಯರ್ ಕುಡಿಯುವ ಕಾನೂನುಬದ್ಧ ವಯಸ್ಸು 21ಕ್ಕೆ ಇಳಿಕೆ

    ಆದಾಯ ನಷ್ಟ ತಡೆಗೆ ಪ್ಲ್ಯಾನ್‌ – ಬಿಯರ್ ಕುಡಿಯುವ ಕಾನೂನುಬದ್ಧ ವಯಸ್ಸು 21ಕ್ಕೆ ಇಳಿಕೆ

    ನವದೆಹಲಿ: ಆದಾಯ ನಷ್ಟ ತಡೆಯಲು ಚಿಂತನೆ ನಡೆಸಿರುವ ದೆಹಲಿ ರಾಜ್ಯ ಸರ್ಕಾರ (Delhi Government) ಹೊಸ ಮದ್ಯ ನೀತಿಯನ್ನು ಜಾರಿಗೆ ತರಲು ಚಿಂತನೆ ನಡೆದಿದೆ. ಅದರ ಪ್ರಕಾರ, ಬಿಯರ್‌ (Beer) ಕುಡಿಯುವ ಕಾನೂನು ಬದ್ಧ ವಯಸ್ಸನ್ನು 25‌ ರಿಂದ 21 ವರ್ಷಕ್ಕೆ ಇಳಿಸಲು ಪ್ಲ್ಯಾನ್‌ ಮಾಡಿದೆ.

    ಮೂಲಗಳ ಪ್ರಕಾರ, ಇತ್ತೀಚೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ದೆಹಲಿ ಸರ್ಕಾರ ಈ ಬಗ್ಗೆ ಚರ್ಚಿಸಿದೆ. ದೆಹಲಿ ಸುತ್ತಮುತ್ತಲಿನ ಪ್ರದೇಶಗಳಾದ ನೋಯ್ಡಾ, ಗುರುಗ್ರಾಮ್, ಗಾಜಿಯಾಬಾದ್ ಮತ್ತು ಫರಿದಾಬಾದ್‌ಗಳಲ್ಲಿ ಈಗಾಗಲೇ ಬಿಯರ್‌ ಕುಡಿಯುವ ಕಾನೂನುಬದ್ಧ ವಯೋಮಿತಿಯನ್ನ 21 ವರ್ಷಕ್ಕೆ ಇಳಿಸಲಾಗಿದೆ. ದೆಹಲಿಯಲ್ಲೂ ವಯೋಮಿತಿ ಕಡಿಮೆ ಮಾಡುವುದರಿಂದ ಅಕ್ರಮ ಮದ್ಯ ಮಾರಾಟ ತಪ್ಪುತ್ತದೆ. ಜೊತೆಗೆ ಬ್ಲ್ಯಾಕ್‌ ಮಾರ್ಕೆಟ್‌ ಅನ್ನೂ ನಿಯಂತ್ರಿಸಬಹುದು ಎಂದು ಅಧಿಕಾರಿಗಳು ಸರ್ಕಾರಕ್ಕೆ ತಿಳಿಸಿದ್ದಾರೆ.

    ಇದಲ್ಲದೇ ರಾಷ್ಟ್ರ ರಾಜಧಾನಿಯಲ್ಲಿ ಮದ್ಯದ ಅಂಗಡಿಗಳನ್ನ ನಡೆಸಲು ಹೈಬ್ರಿಡ್ ಮಾದರಿ ಅನುಸರಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಅಂದ್ರೆ, ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಮಾರಾಟ ನಡೆಯಬೇಕು. ಪ್ರಸ್ತುತ, ದೆಹಲಿಯಲ್ಲಿ ಕೇವಲ 4 ಸರ್ಕಾರಿ ನಿಗಮಗಳು ಮಾತ್ರ ಮದ್ಯದ ಅಂಗಡಿಗಳನ್ನು ನಡೆಸುತ್ತಿವೆ. ಹೀಗಾಗಿ ಸರ್ಕಾರಿ ಮಾರಾಟಗಾರರ ಜೊತೆಗೆ ಖಾಸಗಿ ಸಹಭಾಗಿತ್ವ ತೊಡಗಿಸಿಕೊಳ್ಳುವ ಬಗ್ಗೆಯೂ ಚಿಂತನೆ ನಡೆದಿದೆ.

    ಆದಾಯ ನಷ್ಟ ತಡೆಯಲು ಪ್ಲ್ಯಾನ್‌
    ಮೂಲಗಳ ಪ್ರಕಾರ, ಹೊಸ ಅಬಕಾರಿ ನೀತಿಯ ಕರಡನ್ನು ಸಿದ್ಧಪಡಿಸಲಾಗುತ್ತಿದೆ. ಅದರಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ಪರಿಗಣಿಸಲಾಗುತ್ತಿದೆ. ನೆರೆಯ ರಾಜ್ಯಗಳ ಮದ್ಯದ ಬೆಲೆಗಳಲ್ಲಿನ ವ್ಯತ್ಯಾಸದಿಂದಾಗಿ ದೆಹಲಿ ನಷ್ಟ ಅನುಭವಿಸದಂತೆ ನೋಡಿಕೊಳ್ಳುವುದು ಹೊಸ ನೀತಿಯ ಗುರಿಯಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಪ್ರೀಮಿಯಂ ಬ್ರಾಂಡ್‌ಗಳ ಲಭ್ಯತೆ
    ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರೀಮಿಯಂ ಬ್ರ್ಯಾಂಡ್‌ಗಳು ದೆಹಲಿಯಲ್ಲಿ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳುವುದನ್ನು ಸಮಿತಿ ಪರಿಶೀಲಿಸುತ್ತಿದೆ. ಪ್ರಸ್ತುತ, ಅವುಗಳ ಕೊರತೆಯಿಂದಾಗಿ, ಗ್ರಾಹಕರು ಹರಿಯಾಣ ಮತ್ತು ಯುಪಿಯತ್ತ ಮುಖ ಮಾಡುತ್ತಾರೆ, ಇದರಿಂದಾಗಿ ದೆಹಲಿಗೆ ಆದಾಯ ನಷ್ಟವಾಗುತ್ತಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ ಜನನಿಬಿಡ ವಸತಿ ಪ್ರದೇಶಗಳಲ್ಲಿ ಮದ್ಯದ ಅಂಗಡಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಅಬಕಾರಿ ಇಲಾಖೆಗೆ ಸೂಚನೆ ನೀಡಿದೆ.

  • ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ – ಸಿಎನ್‌ಜಿ ಆಟೋಗಳಿಗೆ ಬ್ರೇಕ್, ಇವಿಗೆ ಮಾತ್ರ ಆದ್ಯತೆ?

    ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ – ಸಿಎನ್‌ಜಿ ಆಟೋಗಳಿಗೆ ಬ್ರೇಕ್, ಇವಿಗೆ ಮಾತ್ರ ಆದ್ಯತೆ?

    ನವದೆಹಲಿ: ಹತ್ತು ವರ್ಷ ಹಳೆಯ ಡೀಸೆಲ್, ಹದಿನೈದು ವರ್ಷಗಳ ಹಳೆಯ ಪೆಟ್ರೋಲ್ ವಾಹನಗಳನ್ನು ದೆಹಲಿ ಸರ್ಕಾರ (Delhi Government) ಸಂಪೂರ್ಣವಾಗಿ ನಿಷೇಧಿಸಿತ್ತು. ಇದೀಗ ವಾಯುಮಾಲಿನ್ಯ ನಿಯಂತ್ರಿಸುವ ದೃಷ್ಟಿಯಿಂದ ಸಿಎನ್‌ಜಿ (CNG) ಚಾಲಿತ ಆಟೋಗಳ ನೋಂದಣಿ ರದ್ದು ಮಾಡಲು ನಿರ್ಧರಿಸಿದೆ.

    ವಾಯುಮಾಲಿನ್ಯ (Air Pollution) ನಿಯಂತ್ರಣಕ್ಕಾಗಿ ದೆಹಲಿ ಸರ್ಕಾರ ಹೊಸ ಇವಿ ನೀತಿಯನ್ನು ಜಾರಿ ಮಾಡಲು ಮುಂದಾಗಿದೆ. ಶೀಘ್ರದಲ್ಲಿ ಈ ಸಂಬಂಧ ಹೊಸ ಮಸೂದೆ ಮಂಡನೆಯಾಗುವ ಸಾಧ್ಯತೆಯಿದೆ. ಹೊಸ ನೀತಿಯ ಪ್ರಕಾರ ಈ ವರ್ಷದ ಆ.15ರಿಂದ ಸಿಎನ್‌ಜಿ ಆಟೋ ನೋಂದಣಿಯನ್ನು ನಿಲ್ಲಿಸಲಾಗುತ್ತದೆ. ಇದೇ ವೇಳೆ ಸಿಎನ್‌ಜಿ ಆಟೋಗಳ ನವೀಕರಣಕ್ಕೂ ಸರ್ಕಾರ ಬ್ರೇಕ್ ಹಾಕಲು ನಿರ್ಧರಿಸಿದೆ.ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆ ರಿಸಲ್ಟ್: ಪಾಸಾದವರಿಗೆ ವಿಶ್ ಮಾಡಿ, ಫೇಲ್ ಆದವರಿಗೆ ಧೈರ್ಯ ತುಂಬಿದ ಸಿಎಂ

    ಹೊಸ ನೀತಿಯಡಿ ಎಲ್ಲಾ ನವೀಕರಿಸಿದ ಅಥವಾ ಬದಲಿ ಪರವಾನಗಿಗಳನ್ನು ವಿದ್ಯುತ್ ಆಟೋಗಳಿಗೆ ಮಾತ್ರ ನೀಡಲಾಗುತ್ತದೆ. ಆಟೋರಿಕ್ಷಾಗಳಲ್ಲದೆ, ನಾಗರಿಕ ಸೇವೆಗಳಿಗೆ ಬಳಸುವ ಇಂಧನ ಚಾಲಿತ ವಾಹನಗಳನ್ನು ಸಹ ಈ ನೀತಿಯಡಿ ಗುರಿಯಾಗಿಸಿಕೊಂಡಿದೆ. ಹೆಚ್ಚು ಮಹತ್ವಾಕಾಂಕ್ಷೆಯ ಪ್ರಸ್ತಾವನೆಯಲ್ಲಿ, ಹೊಸ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ಚಾಲಿತ ದ್ವಿಚಕ್ರ ವಾಹನಗಳ ನೋಂದಣಿಯನ್ನು 2026ರ ಆ.15ರಿಂದ ನಿಷೇಧಿಸಬೇಕು ಎಂದು ಕರಡು ಹೇಳುತ್ತದೆ.

    ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (Delhi Municipal Corporation), ನವದೆಹಲಿ ಮುನ್ಸಿಪಲ್ ಕೌನ್ಸಿಲ್ ಮತ್ತು ದೆಹಲಿ ಜಲಮಂಡಳಿ ನಿರ್ವಹಿಸುವ ಎಲ್ಲಾ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ಚಾಲಿತ ಕಸ ಸಂಗ್ರಹಣಾ ವಾಹನಗಳನ್ನು ಹಂತ ಹಂತವಾಗಿ ಸ್ಥಗಿತಗೊಳಿಸಲು ಇದು ಶಿಫಾರಸು ಮಾಡುತ್ತದೆ. ಇವುಗಳನ್ನು 2027ರ ಡಿ.31ರೊಳಗೆ ಸಂಪೂರ್ಣವಾಗಿ ವಿದ್ಯುತ್ ಚಾಲಿತವಾಗಿ ಪರಿವರ್ತಿಸಲಾಗುವುದು.

    ದೆಹಲಿ ಸಾರಿಗೆ ನಿಗಮ ಮತ್ತು ದೆಹಲಿ ಇಂಟಿಗ್ರೇಟೆಡ್ ಮಲ್ಟಿ-ಮೋಡಲ್ ಟ್ರಾನ್ಸಿಟ್ ಸಿಸ್ಟಮ್ ನಿರ್ವಹಿಸುವ ಎಲ್ಲಾ ಇಂಟ್ರಾ-ಸಿಟಿ ಬಸ್‌ಗಳು ಇನ್ಮುಂದೆ ವಿದ್ಯುತ್ ಚಾಲಿತವಾಗಿರಬೇಕು ಎಂದು ನೀತಿಯು ಪ್ರಸ್ತಾಪಿಸುತ್ತದೆ. ಅಂತರ-ರಾಜ್ಯ ಮಾರ್ಗಗಳಿಗೆ ಬಿಎಸ್-ವಿಐ ಕಂಪ್ಲೈಂಟ್ ಬಸ್‌ಗಳನ್ನು ಮಾತ್ರ ಅನುಮತಿಸಲಾಗುತ್ತದೆ. ಹೊಸ ನೀತಿಯಡಿಯಲ್ಲಿ ನಗರ ಬಳಕೆಗಾಗಿ ಯಾವುದೇ ಹೊಸ ಪಳೆಯುಳಿಕೆ ಇಂಧನ ಆಧಾರಿತ ಬಸ್‌ಗಳನ್ನು ಖರೀದಿಸಲಾಗುವುದಿಲ್ಲ.

    ಕರಡು ಇನ್ನೂ ಪರಿಶೀಲನೆಯಲ್ಲಿದ್ದು, ದೆಹಲಿ ಸಚಿವ ಸಂಪುಟದ ಮುಂದೆ ಇಡುವ ಮೊದಲು ವಿಶೇಷವಾಗಿ ದ್ವಿಚಕ್ರ ವಾಹನಗಳ ಪ್ರಸ್ತಾವನೆಗೆ ಸಂಬಂಧಿಸಿದಂತೆ ಕೆಲವು ಬದಲಾವಣೆಗಳಿಗೆ ಒಳಗಾಗಬಹುದು. ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಾ.31 ರಂದು ಮುಕ್ತಾಯಗೊಂಡ ಪ್ರಸ್ತುತ ಇವಿ (Electric Vehicles) ನೀತಿಯ ಹೊಸ ಆವೃತ್ತಿಯನ್ನು ಅಂತಿಮಗೊಳಿಸಲು 15 ದಿನಗಳವರೆಗೆ ವಿಸ್ತರಿಸಲಾಗಿದೆ. ಪಳೆಯುಳಿಕೆ ಇಂಧನ ಚಾಲಿತ ವಾಹನಗಳನ್ನು ಎಲ್ಲಾ ವಿಭಾಗಗಳಲ್ಲಿ ಆಕ್ರಮಣಕಾರಿಯಾಗಿ ಬದಲಾಯಿಸುವ ಮೂಲಕ ದೆಹಲಿಯ ವಾಯುಮಾಲಿನ್ಯವನ್ನು ತೀವ್ರವಾಗಿ ಕಡಿಮೆ ಮಾಡುವುದು ಈ ನೀತಿಯ ಗುರಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ಭಾರತೀಯ ಷೇರುಪೇಟೆಯಲ್ಲಿ ಚೇತರಿಕೆ – ಜಾಗತಿಕ ಮಾರುಕಟ್ಟೆಯಲ್ಲೂ ಕಡಿಮೆಯಾದ ಒತ್ತಡ

  • ಮೋದಿ ಜಿ ಭರವಸೆ ನಂಬಿ ಮಹಿಳೆಯರು ಮೋಸ ಹೋಗಿದ್ದಾರೆ – ದೆಹಲಿ ಸಿಎಂಗೆ ಅತಿಶಿ ಪತ್ರ

    ಮೋದಿ ಜಿ ಭರವಸೆ ನಂಬಿ ಮಹಿಳೆಯರು ಮೋಸ ಹೋಗಿದ್ದಾರೆ – ದೆಹಲಿ ಸಿಎಂಗೆ ಅತಿಶಿ ಪತ್ರ

    – ಮಹಿಳೆಯರಿಗೆ 2,500 ರೂ. ಗ್ಯಾರಂಟಿ ಸ್ಕ್ರೀಂ ಕುರಿತು ಚರ್ಚಿಸಲು ಸಮಯ ಕೇಳಿದ ಮಾಜಿ ಸಿಎಂ

    ನವದೆಹಲಿ: ಮಹಿಳೆಯರಿಗೆ ತಿಂಗಳಿಗೆ 2,500 ರೂ. ಹಣ ನೀಡುವ ಗ್ಯಾರಂಟಿ ಯೋಜನೆ ಕುರಿತು ಚರ್ಚಿಸಲು ಭಾನುವಾರ ಸಮಯ ನೀಡುವಂತೆ ಕೋರಿ ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ಮಾಜಿ ಸಿಎಂ ಅತಿಶಿ ಪತ್ರ ಬರೆದಿದ್ದಾರೆ.

    ಅಲ್ಲದೇ ಬಿಜೆಪಿ ನೇತೃತ್ವದ ಸರ್ಕಾರ ತನ್ನ ಮೊದಲ ಕ್ಯಾಬಿನೆಟ್‌ ಸಭೆಯಲ್ಲಿ ಮಹಿಳೆಯರಿಗೆ ನೀಡಿದ್ದ ಆರ್ಥಿಕ ನೆರವು ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಪತ್ರದಲ್ಲಿ ಏನಿದೆ?
    ಮೊದಲಿಗೆ ದೆಹಲಿಯ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಿಮಗೆ ಹೃತ್ಪೂರ್ವಕ ಅಭಿನಂದನೆಗಳು. ಬಿಜೆಪಿಯ ನಾಯಕ ಹಾಗೂ ದೇಶದ ಪ್ರಧಾನಿಯೂ ಆಗಿರುವ ನರೇಂದ್ರ ಮೋದಿ ಜಿ ಅವರು 2025ರ ಜ.31ರಂದು ದೆಹಲಿಯ ತಾಯಂದಿರು ಹಾಗೂ ಸಹೋದರಿಯರಿಗೆ ಭರವಸೆ ನೀಡಿದ್ದರು. ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಮೊದಲ ಕ್ಯಾಬಿನೆಟ್‌ ಸಭೆಯಲ್ಲಿ ತಿಂಗಳಿಗೆ 2,500 ರೂ. ಆರ್ಥಿಕ ನೆರವು ಯೋಜನೆಯನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದ್ದರು. ಅಲ್ಲದೇ ಇದು ಮೋದಿ ಜಿ ಭರವಸೆ ಎಂದು ಒತ್ತಿ ಹೇಳಿದ್ದರು.

    ದೆಹಲಿ ಸರ್ಕಾರ ಫೆ.20ರಂದು ತನ್ನ ಮೊದಲ ಕ್ಯಾಬಿನೆಟ್‌ ಸಭೆ ನಡೆಸಿತು. ಆದ್ರೆ ಯೋಜನೆ ಬಗ್ಗೆ ಯಾವುದೇ ಪ್ರಸ್ತಾಪ ಇರಲಿಲ್ಲ. ದೆಹಲಿಯ ತಾಯಂದಿರು ಸಹೋದರಿಯರು ಮೋದಿ ಜೀ ಅವರ ಭರವಸೆ ನಂಬಿ ಮೋಸ ಹೋಗಿದ್ದಾರೆ. ಈ ಗ್ಯಾರಂಟಿ ಯೋಜನೆ ಸಂಬಂಧ ಚರ್ಚಿಸಲು ಎಎಪಿ ನಿಯೋಗ ಭಾನುವಾರ ನಿಮ್ಮನ್ನು ಭೇಟಿ ಮಾಡಲು ಇಚ್ಛಿಸುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಇದೇ ಫೆ.20ರಂದು ದೆಹಲಿಯ ನೂತನ ಸಿಎಂ ಆಗಿ ರೇಖಾ ಗುಪ್ತ ಪ್ರಮಾಣ ವಚನ ಸ್ವೀಕರಿಸಿದ್ದರು. ಜೊತೆಗೆ ಆರು ಇತರ ಶಾಸಕರು ಅವರ ಸಂಪುಟಕ್ಕೆ ಸೇರ್ಪಡೆಗೊಂಡರು. ಅದೇ ದಿನ ತನ್ನ ಮೊದಲ ಕ್ಯಾಬಿನೆಟ್ ಸಭೆಯಲ್ಲಿ, ದೆಹಲಿ ಸರ್ಕಾರವು ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯ ಅನುಷ್ಠಾನಕ್ಕೆ ಒಪ್ಪಿಗೆ ಸೂಚಿಸಿತ್ತು. ಅಲ್ಲದೇ ಮಹಿಳಾ ಸಮೃದ್ಧಿ ಯೋಜನೆ ಕುರಿತು ಚರ್ಚಿಸಿತು ಮತ್ತು ಬಾಕಿ ಇರುವ 14 ಸಿಎಜಿ ವರದಿಗಳನ್ನು ಮಂಡಿಸಲು ನಿರ್ಧರಿಸಿತು.

  • ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ – ಸರ್ಕಾರದ ಬೊಕ್ಕಸಕ್ಕೆ 2,026 ಕೋಟಿ ನಷ್ಟ: ಸಿಎಜಿ ವರದಿ

    ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ – ಸರ್ಕಾರದ ಬೊಕ್ಕಸಕ್ಕೆ 2,026 ಕೋಟಿ ನಷ್ಟ: ಸಿಎಜಿ ವರದಿ

    ನವದೆಹಲಿ: ದೆಹಲಿ ಮದ್ಯ ನೀತಿ (Delhi Liquor Policy) ಅಕ್ರಮದಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 2,026 ಕೋಟಿ ರೂ. ಆದಾಯ ನಷ್ಟವಾಗಿದೆ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ವರದಿ ಬಹಿರಂಗಪಡಿಸಿದೆ.

    ಮದ್ಯ ನೀತಿಯಲ್ಲಿ ಬಹಳಷ್ಟು ಲೋಪದೋಷಗಳು ಕಂಡುಬಂದಿದ್ದು, ಪರವಾನಗಿ ನೀಡುವಲ್ಲಿ ನಿಯಮ ಉಲ್ಲಂಘನೆ ಮಾಡಿರುವುದು ವರದಿಯಲ್ಲಿ ಕಂಡುಬಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: 5 ವರ್ಷಗಳಲ್ಲಿ 64 ಜನರಿಂದ ಲೈಂಗಿಕ ಶೋಷಣೆ – ಕರಾಳ ಅನುಭವ ಬಿಚ್ಚಿಟ್ಟ ದಲಿತ ಬಾಲಕಿ

    ಈ ಹಿಂದೆ ಕೇಜ್ರಿವಾಲ್‌ ನೇತೃತ್ವದ ಸರ್ಕಾರ (Kejriwal’s Government) ಜಾರಿಗೊಳಿಸಿದ್ದ ಮದ್ಯ ನೀತಿಯು ಉದ್ದೇಶಿತ ಗುರಿ ಸಾಧಿಸುವಲ್ಲಿ ವಿಫಲವಾಗಿದೆ. ಮುಖ್ಯವಾಗಿ ಆಪ್‌ ನಾಯಕರು ಕಿಕ್‌ಬ್ಯಾಕ್‌ ಲಾಭ ಪಡೆದಿದ್ದಾರೆ. ಮದ್ಯ ನೀತಿ ಅನುಷ್ಠಾನಗೊಳಿಸುವಲ್ಲಿ ಅಂದಿನ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನೇತೃತ್ವದ ಸಚಿವರ ಗುಂಪು ತಜ್ಞರ ಸಮಿತಿಯ ಶಿಫಾರಸುಗಳನ್ನು ಕಡೆಗಣಿಸಿದೆ ಎಂದು ಸಿಎಜಿ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮದ್ವೆಯಾಗುವಂತೆ ಒತ್ತಡ – ಲಿವ್‌ ಇನ್‌ ಗೆಳತಿ ಕೊಂದು ಶವವನ್ನ 8 ತಿಂಗಳು ಫ್ರಿಡ್ಜ್‌ನಲ್ಲಿಟ್ಟಿದ್ದ ಸೈಕೋ

    ಹೊಸ ಮದ್ಯ ನೀತಿ ದೆಹಲಿಯ ವಿಧಾನಸಭೆಯಲ್ಲಿ ಮಂಡನೆಯಾಗದೆಯೇ ಜಾರಿಗೆ ತರಲಾಗಿದೆ. ನೀತಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಕ್ಯಾಬಿನೆಟ್ ಅಥವಾ ರಾಜ್ಯಪಾಲರ ಅನುಮೋದನೆಯಿಲ್ಲದೆ ತೆಗೆದುಕೊಳ್ಳಲಾಗಿದೆ. ಎಲ್ಲಾ ಘಟಕಗಳಿಗೆ ಬಿಡ್‌ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಅಲ್ಲದೇ ಬಿಡ್‌ ದಾರರ ಆರ್ಥಿಕ ಪರಿಸ್ಥಿತಿಯನ್ನೂ ಪರಿಶೀಲಿಸಿರಲಿಲ್ಲ. ಇದರೊಂದಿಗೆ ಹೆಚ್ಚುವರಿಯಾಗಿ ನಿಯಮ ವಿಧಿಸುವವರಿಗೆ ಉದ್ದೇಶಪೂರ್ವಕವಾಗಿ ದಂಡ ವಿಧಿಸುವುದನ್ನು ಕೈಬಿಡಲಾಗಿದೆ ಎಂದು ಸಿಎಜಿ ವರದಿ ಹೇಳಿದೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ – ಮಂದಿರ ಅಲಂಕಾರಕ್ಕೆ 50 ಕ್ವಿಂಟಾಲ್‌ ಹೂವು

    ಏನಿದು ಹಗರಣ?
    ಕೋವಿಡ್‌ 2ನೇ ಅಲೆ ಉತ್ತುಂಗದಲ್ಲಿದ್ದಾಗ ಮನೀಶ್ ಸಿಸೋಡಿಯಾ 2021ರ ಏಪ್ರಿಲ್‌ನಲ್ಲಿ ಕ್ಯಾಬಿನೆಟ್‌ ಅನುಮೋದನೆ ಇಲ್ಲದೇ ಮದ್ಯದಂಗಡಿ ಟೆಂಡರ್‌ಗೆ ಅರ್ಜಿ ಸಲ್ಲಿಸಿದವರ 144.36 ಕೋಟಿ ಪರವಾನಗಿ ಶುಲ್ಕವನ್ನು ಮನ್ನಾ ಮಾಡಲು ಆದೇಶ ಹೊರಡಿಸುತ್ತಾರೆ. ಈ ಮಹತ್ವದ ನಿರ್ಧಾರದ ಬಳಿಕ ಮೇ ತಿಂಗಳಿನಲ್ಲಿ ಕೇಜ್ರಿವಾಲ್‌ ನೇತೃತ್ವದ ಕ್ಯಾಬಿನೆಟ್‌ ಸಭೆ ಕರೆದು ಅಬಕಾರಿ ನೀತಿಯಲ್ಲಿ ಬದಲಾವಣೆ ಮಾಡುತ್ತದೆ. ಮದ್ಯವನ್ನು ಮನೆಗ ಹೋಮ್‌ ಡೆಲಿವರಿ ಮಾಡಬಹುದು ಅಷ್ಟೇ ಅಲ್ಲದೇ ಮದ್ಯದ ಅಂಗಡಿಗಳನ್ನು ಬೆಳಗಿನ ಜಾವ 3 ಗಂಟೆಯವರೆಗೆ ತೆರೆಯಬಹುದು. ಪರವಾನಗಿದಾರರು ಅನಿಯಮಿತ ರಿಯಾಯಿತಿಗಳನ್ನು ನೀಡಲು ನೀತಿ ಅನುಮತಿ ಕಲ್ಪಿಸಿತ್ತು.

    ಲೆಫ್ಟಿನೆಂಟ್‌ ಗವರ್ನರ್‌ ಅವರು ಕ್ಯಾಬಿನೆಟ್‌ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಳಿಕ ದೆಹಲಿ ಸರ್ಕಾರ ತನ್ನ ನಿರ್ಧಾರವನ್ನು ಹಿಂದಕ್ಕೆ ಪಡೆಯುತ್ತದೆ. ಆದರೆ ಸಿಸೋಡಿಯಾ ಕೈಗೊಂಡ ನಿರ್ಧಾರ ಮುಂದುವರಿಯುತ್ತದೆ. ಸರ್ಕಾರದ ನಿರ್ಧಾರ ಬಗ್ಗೆ ದೆಹಲಿ ಮುಖ್ಯ ಕಾರ್ಯದರ್ಶಿ ಅವರು ಲೆಫ್ಟಿನೆಂಟ್‌ ಗವರ್ನರ್‌ ಬಳಿ ದೂರು ನೀಡುತ್ತಾರೆ. ಸಿಸೋಡಿಯಾ ನಿರ್ಧಾರದಿಂದ ಸರ್ಕಾರಕ್ಕೆ ಭಾರೀ ನಷ್ಟವಾಗಿದೆ. ವಿಸ್ಕಿ ಮತ್ತು ವೈನ್‌ ಮಾರಾಟ ಅನುಕ್ರಮವಾಗಿ 60% ಮತ್ತು 87%ರಷ್ಟು ಭಾರೀ ಏರಿಕೆಯಾಗಿದ್ದರೂ ಆದಾಯ 80% ರಷ್ಟು ಇಳಿಕೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸುತ್ತಾರೆ.

    ಕೇಜ್ರಿವಾಲ್‌- ಸಿಸೋಡಿಯಾ ಅವರು ಲೆಫ್ಟಿನೆಂಟ್‌ ಗವರ್ನರ್‌ ಗಮನಕ್ಕೆ ತಾರದೇ ತುರ್ತು ಕ್ಯಾಬಿನೆಟ್‌ ಸಭೆಯನ್ನು ಕರೆಯುತ್ತಾರೆ. ಸಿಸೋಡಿಯಾ ಅಕ್ರಮವಾಗಿ ಹೊರಡಿಸಿದ ಆದೇಶವನ್ನು ಸಕ್ರಮ ಮಾಡಲು ಕ್ಯಾಬಿನೆಟ್‌ನಲ್ಲಿ ಪ್ರಯತ್ನ ಮಾಡಲಾಗುತ್ತದೆ. ಈ ನಿರ್ಧಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್‌ ಭಾರೀ ವಿರೋಧ ವ್ಯಕ್ತಪಡಿಸಿ ಪ್ರತಿಭಟಿಸುತ್ತದೆ. ವಿರೋಧ ವ್ಯಕ್ತವಾಗುತ್ತಿದ್ದಂತೆ 2022ರ ಜುಲೈನಲ್ಲಿ ಮದ್ಯ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಲೆಫ್ಟಿನೆಂಟ್‌ ಗವರ್ನರ್‌ ಅವರು ಆದೇಶ ಹೊರಡಿಸುತ್ತಾರೆ. 2022ರ ಜುಲೈನಲ್ಲಿ ಕೇಜ್ರಿವಾಲ್‌ ಸರ್ಕಾರ ಈ ಹಿಂದೆ ಹೊರಡಿಸಿದ್ದ ಅಬಕಾರಿ ನೀತಿಯನ್ನು ಹಿಂದಕ್ಕೆ ಪಡೆಯುತ್ತದೆ.

  • ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆದ ವ್ಯಕ್ತಿಯನ್ನೇ ನೋಡಿಲ್ಲ – ಮೋದಿಗೆ ಕೇಜ್ರಿವಾಲ್ ತಿರುಗೇಟು

    ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆದ ವ್ಯಕ್ತಿಯನ್ನೇ ನೋಡಿಲ್ಲ – ಮೋದಿಗೆ ಕೇಜ್ರಿವಾಲ್ ತಿರುಗೇಟು

    ನವದೆಹಲಿ: ರಾಜಕೀಯ ಹಿತಾಸಕ್ತಿಗಳ ಕಾರಣದಿಂದ ಆಯುಷ್ಮಾನ್ ಭಾರತ್ (Ayushman Bharat) ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೊಳಿಸಲು ವಿಫಲವಾಗಿದೆ, ಸಾರ್ವಜನಿಕ ಆರೋಗ್ಯದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ.

    ದೆಹಲಿ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೊಳಿಸಲು ವಿಫಲವಾಗಿದೆ ಎಂದು ಟೀಕಿಸಿದ ಪ್ರಧಾನಿ ಮೋದಿಗೆ (Narendra Modi) ಕೇಜ್ರಿವಾಲ್‌ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: Hyderabad | ಮೊಮೊಸ್ ತಿಂದು ಓರ್ವ ಮಹಿಳೆ ಸಾವು ಬೆನ್ನಲ್ಲೇ 20 ಜನರಿಗೆ ಫುಡ್ ಪಾಯ್ಸನ್

    ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು, ಸಾರ್ವಜನಿಕ ಆರೋಗ್ಯದ ವಿಷಯದ ಬಗ್ಗೆ ತಪ್ಪಾಗಿ ಮಾತನಾಡುವುದು ಮತ್ತು ಅದರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ. ಪ್ರಧಾನಿ ಮೋದಿ ದೆಹಲಿ ಮಾದರಿಯ ಆರೋಗ್ಯ ರಕ್ಷಣೆ ಯೋಜನೆಯನ್ನು ಅಧ್ಯಯನ ಮಾಡಬೇಕು. ದೆಹಲಿ ಸರ್ಕಾರದ ಯೋಜನೆಯಡಿಯಲ್ಲಿ, ನಗರದ ಪ್ರತಿಯೊಬ್ಬ ವ್ಯಕ್ತಿಯು ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ಪಡೆಯುತ್ತಾನೆ. 5 ರೂ. ಮಾತ್ರೆ ಅಥವಾ 1 ಕೋಟಿ ರೂ. ಮೌಲ್ಯದ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸುತ್ತದೆ ಎಂದು ಹೇಳಿದರು. ಇದನ್ನೂ ಓದಿ: Darshan Case File | ಜೂನ್‌ 8 ರಿಂದ ಅ.30ರ ವರೆಗೆ ಏನೆಲ್ಲಾ ಆಯ್ತು?

    ಜನರಿಗೆ ವಾಸ್ತವದಲ್ಲಿ ಆರೋಗ್ಯ ಪ್ರಯೋಜನಕ್ಕಾಗಿ ದೇಶದಾದ್ಯಂತ ದೆಹಲಿಯಂತೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯನ್ನು ಬದಲಿಸಬೇಕು ಎಂದು ಒತ್ತಾಯಿಸಿದ ಕೇಜ್ರಿವಾಲ್, ಈವರೆಗೂ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆದ ವ್ಯಕ್ತಿಯನ್ನು ತಾನು ಇನ್ನೂ ಭೇಟಿ ಮಾಡಿಲ್ಲ ಎಂದು ಕೇಜ್ರಿವಾಲ್ ವ್ಯಂಗ್ಯ ಮಾಡಿದರು. ಆಯುಷ್ಮಾನ್ ಭಾರತ್ ಯೋಜನೆಯಡಿ ಸಿಎಜಿ ಅದರಲ್ಲಿ ಹಲವಾರು ಅಕ್ರಮಗಳನ್ನು ಕಂಡುಹಿಡಿದಿದೆ ಎಂದು ಹೇಳಿದರು.

    ಆಯುಷ್ಮಾನ್ ಭಾರತ್ ʻವಿಫಲʼ ಯೋಜನೆಯಾಗಿದೆ ಎಂದು ದೆಹಲಿಯ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಯೋಜನೆಯನ್ನು ಜಾರಿಗೊಳಿಸಿದ ಉತ್ತರ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದಂತಹ ಬಿಜೆಪಿ ಆಡಳಿತ ರಾಜ್ಯಗಳ ಬಡ ರೋಗಿಗಳು ಶಸ್ತ್ರಚಿಕಿತ್ಸೆಗಾಗಿ ದೆಹಲಿಯ ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ ಎಂದು ಅವರು ತಿರಗೇಟು ನೀಡಿದರು. ಇದನ್ನೂ ಓದಿ: ದರ್ಶನ್‌ಗೆ ಜಾಮೀನು – ಪಾಸ್‌ಪೋರ್ಟ್‌ ಒಪ್ಪಿಸುವಂತೆ ಕೋರ್ಟ್‌ ಸೂಚಿಸಿದ್ದೇಕೆ?

  • ಕೆಂಡದಂತ ಬಿಸಿಲು, ಬಿಸಿಗಾಳಿ ಹೊಡೆತಕ್ಕೆ ದೆಹಲಿಯಲ್ಲಿ 15 ಮಂದಿ ಸಾವು

    ಕೆಂಡದಂತ ಬಿಸಿಲು, ಬಿಸಿಗಾಳಿ ಹೊಡೆತಕ್ಕೆ ದೆಹಲಿಯಲ್ಲಿ 15 ಮಂದಿ ಸಾವು

    ನವದೆಹಲಿ: ಉತ್ತರ ಭಾರತದಲ್ಲಿ ದಾಖಲೆ ಪ್ರಮಾಣದಲ್ಲಿ ತಾಪಮಾನ (Temperature) ಹೆಚ್ಚುತ್ತಿದ್ದು ಕಳೆದ 72 ಗಂಟೆಗಳಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) ಬಿಸಿ ಗಾಳಿಗೆ 5 ಮತ್ತು ನೋಯ್ಡಾದಲ್ಲಿ ಕಳೆದ 24 ಗಂಟೆಗಳಲ್ಲಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಬಿಸಿಗಾಳಿಯಿಂದ ಪೀಡಿತರಾದ ಸುಮಾರು 36 ಜನರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

    ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ (Ram Manohar Lohia Hospital) ಮತ್ತು ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ತಲಾ ಒಬ್ಬ ಸಾವು ವರದಿಯಾಗಿದೆ. ಲೋಕನಾಯಕ ಆಸ್ಪತ್ರೆಯಲ್ಲಿ ಮೂರು ಜನ ಸಾವನ್ನಪ್ಪಿದ್ದಾರೆ. ಜೂನ್ 16 ರಂದು ಶಾಖದ ಹೊಡೆತದಿಂದ ನಿಧನರಾದ ಕಾರ್ ಮೆಕ್ಯಾನಿಕ್ ಜೂನ್ 15 ರಂದು 106 ಡಿಗ್ರಿಗಳಷ್ಟು ತೀವ್ರ ಜ್ವರದಿಂದ ಬಳಲುತ್ತಿದ್ದರು ಎಂದು ವೈದ್ಯರು ಹೇಳಿದ್ದಾರೆ. ಇದನ್ನೂ ಓದಿ: ಮುಂಬೈನ 50 ಕ್ಕೂ ಅಧಿಕ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಕರೆ

    ದೆಹಲಿಯಲ್ಲಿ ಸಾವನ್ನಪ್ಪಿದ ಐವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಈ ಪೈಕಿ ಮೂವರು ರೋಗಿಗಳು 65 ವರ್ಷಕ್ಕಿಂತ ಮೇಲ್ಪಟ್ಟವರು. ಈ ಬಗ್ಗೆ ಎಲ್‌ಎನ್‌ಜೆಪಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಸುರೇಶ್ ಕುಮಾರ್ ಮಾತನಾಡಿ, ಶಾಖದ ಅಲೆಯಿಂದ ಬಳಲುತ್ತಿರುವ ಹೆಚ್ಚಿನ ಜನರು ಕಾರ್ಮಿಕರು ಅಥವಾ ರಿಕ್ಷಾ ಚಾಲಕರು ಮತ್ತು ಅವರಲ್ಲಿ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು. ಈ ರೋಗಿಗಳಲ್ಲಿ ಹೆಚ್ಚಿನವರು ಎಲೆಕ್ಟ್ರೋಲೈಟ್ ಕೊರತೆ, ಶಾಖದ ಹೊಡೆತ, 105 ಡಿಗ್ರಿಗಿಂತ ಹೆಚ್ಚಿನ ಜ್ವರ ಮತ್ತು ವಿಪರೀತ ನಿರ್ಜಲೀಕರಣದಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ.

    ದೆಹಲಿಯ ವಿವಿಧ ಖಾಸಗಿ ಆಸ್ಪತ್ರೆಗಳು ಮತ್ತು ಸಣ್ಣ ಚಿಕಿತ್ಸಾಲಯಗಳಲ್ಲಿ ಶಾಖದ ಹೊಡೆತದಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆ ಸರಾಸರಿ ಹೆಚ್ಚುತ್ತಿದೆ. ಪಹರ್‌ಗಂಜ್‌ನಲ್ಲಿ ಕ್ಲಿನಿಕ್ ನಡೆಸುತ್ತಿರುವ ಡಾ.ಗೌರವ್ ಕುಮಾರ್ ಪ್ರಕಾರ, ಕಳೆದ ತಿಂಗಳಲ್ಲಿ ಬಿಸಿಗಾಳಿಯಿಂದ ಬಳಲುತ್ತಿರುವವರ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ. ಹಾನಿಗೊಳಗಾದವರಲ್ಲಿ ಹೆಚ್ಚಿನವರು ರಿಕ್ಷಾ ಚಾಲಕರು ಅಥವಾ ದಿನಗೂಲಿ ಕಾರ್ಮಿಕರಾಗಿದ್ದಾರೆ. ಇದನ್ನೂ ಓದಿ: ಫುಟ್‌ಪಾತ್‌ನಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಕಾರು ಹರಿಸಿ ಹತ್ಯೆ – ರಾಜ್ಯಸಭಾ ಸಂಸದರ ಪುತ್ರಿಗೆ ಜಾಮೀನು!

  • ದೆಹಲಿ ಸರ್ಕಾರ ಉರುಳಿಸಿ, ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ಸಂಚು – ಆಪ್‌ ಸಚಿವೆ ಆರೋಪ

    ದೆಹಲಿ ಸರ್ಕಾರ ಉರುಳಿಸಿ, ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ಸಂಚು – ಆಪ್‌ ಸಚಿವೆ ಆರೋಪ

    ನವದೆಹಲಿ: ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರನ್ನು ಅಸ್ಥಿರಗೊಳಿಸಲು ರಾಜಕೀಯ ಪಿತೂರಿ ನಡೆಸುತ್ತಿರುವ ಬಿಜಪಿ, ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಪ್ರಯತ್ನಿಸುತ್ತಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿರುವುದಾಗಿ ದೆಹಲಿ ಸಚಿವೆ ಅತಿಶಿ (Atishi) ಆರೋಪಿಸಿದ್ದಾರೆ.

    ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅರವಿಂದ್ ಕೇಜ್ರಿವಾಲ್ ಅವರನ್ನು ಸುಳ್ಳು ಪ್ರಕರಣದಲ್ಲಿ (Liquor Policy Scam) ಬಂಧಿಸಲಾಗಿದೆ. ಅವರ ವಿರುದ್ಧ ಅಪರಾಧ ಸಾಬೀತುಪಡಿಸಲು ಯಾವುದೇ ಸಾಕ್ಷ್ಯಗಳಿಲ್ಲ. ಆದ್ದರಿಂದ ದೆಹಲಿಯ ಚುನಾಯಿತ ಸರ್ಕಾರ ಉರುಳಿಸಲು ಸಂಚು ನಡೆಯುತ್ತಿದೆ. ಈ ಹಿಂದೆ ನಡೆದ ಕೆಲವು ಬೆಳವಣಿಗೆಗಳನ್ನು ನೋಡಿದಾಗ ಪೂರ್ವನಿಯೋಜಿತವಾಗಿಯೇ ಪ್ಲ್ಯಾನ್‌ ಮಾಡಿದ್ದಾರೆ ಅನ್ನೋದು ಗೊತ್ತಾಗುತ್ತಿದೆ ಎಂದು ಅತಿಶಿ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಸ್ವತಂತ್ರ ಭಾರತದ 2ನೇ ಲೋಕಸಭಾ ಚುನಾವಣೆ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಜೆಪಿ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸಂಚು ರೂಪಿಸುತ್ತಿದೆ ಅನ್ನೋದು ಸ್ಪಷ್ಟವಾಗಿ ತಿಳಿಯುತ್ತಿದೆ. ಅದರ ಸೂಚನೆಗಳು ನಮಗೆ ಸಿಕ್ಕಿವೆ. ಲೋಕಸಭಾ ಚುನಾವಣೆ ಘೋಷಣೆಯಾದಾಗಿನಿಂದ ದೆಹಲಿಯಲ್ಲಿ ಯಾವುದೇ ಅಧಿಕಾರಿಯ ನೇಮಕಾತಿ, ವರ್ಗಾವಣೆ ಆಗಿಲ್ಲ. ಅಧಿಕಾರಿಗಳು ಸರ್ಕಾರದ ಸಭೆಗಳಿಗೆ ಬರುತ್ತಿಲ್ಲ. ಕಳೆದ ವಾರ, ಲೆಫ್ಟಿನೆಂಟ್ ಗವರ್ನರ್ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ಆಧಾರರಹಿತ ಪತ್ರ ಬರೆದು, ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿಯನ್ನೂ ವಜಾ ಮಾಡಿಸಿದ್ದಾರೆ. ಇವೆಲ್ಲವೂ ದೆಹಲಿ ಸರ್ಕಾರವನ್ನು ಮುಗಿಸಲು ಮಾಡಿರುವ ಸಂಚು ಎಂದು ಅತಿಶಿ ಆರೋಪಿಸಿದ್ದಾರೆ.

    ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೆ ತರುವುದು ಕಾನೂನು ಬಾಹಿರ, ಅಸಾಂವಿಧಾನಿಕ ಮತ್ತು ಜನರ ತೀರ್ಪಿಗೆ ವಿರುದ್ಧವಾದದ್ದು ಎಂದು ಬಿಜೆಪಿಯನ್ನು ಎಚ್ಚರಿಸಲು ಬಯಸುತ್ತೇನೆ. ದೆಹಲಿಯ ಜನರು ಅರವಿಂದ್‌ ಕೇಜ್ರವಾಲ್ ಮತ್ತು ಆಪ್‌ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ರಾಮನಗರಲ್ಲಿ 30 ಕೆಜಿಗೂ ಅಧಿಕ ಪ್ರಮಾಣದ ಚಿನ್ನ; ದಾವಣಗೆರೆಯಲ್ಲಿ 12.50 ಕೋಟಿ ರೂ. ಮೌಲ್ಯದ ಚಿನ್ನಾಭರಣ, ವಜ್ರ ಜಪ್ತಿ!

  • ಕೇಂದ್ರ ಗೃಹ ಇಲಾಖೆಯೊಂದಿಗಿನ ಸಂಘರ್ಷದ ಬಳಿಕ ದೆಹಲಿ ಬಜೆಟ್ ಮಂಡಿಸಿದ ಆಮ್ ಆದ್ಮಿ

    ಕೇಂದ್ರ ಗೃಹ ಇಲಾಖೆಯೊಂದಿಗಿನ ಸಂಘರ್ಷದ ಬಳಿಕ ದೆಹಲಿ ಬಜೆಟ್ ಮಂಡಿಸಿದ ಆಮ್ ಆದ್ಮಿ

    ನವದೆಹಲಿ : ಕೇಂದ್ರ ಗೃಹ ಇಲಾಖೆಯೊಂದಿಗೆ ಸಂಘರ್ಷದ ಎರಡು ದಿನಗಳ ಬಳಿಕ ದೆಹಲಿಯ (Delhi) ಹಣಕಾಸು ಸಚಿವ ಕೈಲಾಶ್ ಗಹ್ಲೋಟ್ (Kailash Gahlot) ಇಂದು 78,800 ಕೋಟಿ ರೂಪಾಯಿಗಳ ಬಜೆಟ್ (Budget) ಮಂಡಿಸಿದರು. ದೆಹಲಿಯನ್ನು ಸ್ವಚ್ಛ, ಸುಂದರ ಮತ್ತು ಆಧುನಿಕವಾಗಿಸಲು 21,000 ರೂಪಾಯಿಗಳನ್ನು ವ್ಯಯಿಸಲಾಗುವುದು ಎಂದು ಗಹ್ಲೋಟ್ ಹೇಳಿದ್ದಾರೆ.

    ಇತ್ತೀಚೆಗೆ ಉದ್ಘಾಟನೆಗೊಂಡ ಆಶ್ರಮ್ ಮೇಲ್ಸೇತುವೆ ಸೇರಿದಂತೆ ಸರ್ಕಾರದ ಮೂಲಸೌಕರ್ಯ ಯೋಜನೆಗಳನ್ನು ಶ್ಲಾಘಿಸಿದ ಹಣಕಾಸು ಸಚಿವರು ನಗರದಲ್ಲಿ ಸುಗಮ ಸಂಚಾರವನ್ನು ಖಚಿತಪಡಿಸಿದರು. ಯಮುನಾ ನದಿಯ ಶುದ್ಧೀಕರಣವು ಆದ್ಯತೆಯಾಗಿದೆ ಮತ್ತು ದೆಹಲಿಯ ಮೂರು ಮುಖ್ಯ ಭೂಕುಸಿತಗಳನ್ನು ತೆರವುಗೊಳಿಸಲು ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ಯೊಂದಿಗೆ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.

    ಇದರ ಜೊತೆಗೆ ರಸ್ತೆ ಜಾಲದ 1,400 ಕಿ.ಮೀಗಳ ಉನ್ನತೀಕರಣ ಮತ್ತು ಸುಂದರೀಕರಣ, ದೆಹಲಿಯ ವಿವಿಧ ಭಾಗಗಳಲ್ಲಿ 26 ಹೊಸ ಮೇಲ್ಸೇತುವೆ/ ಅಂಡರ್‌ಪಾಸ್/ ಸೇತುವೆ ಯೋಜನೆಗಳ ನಿರ್ಮಾಣ, 3 ವಿಶಿಷ್ಟ ಡಬಲ್ ಡೆಕ್ಕರ್ ಫ್ಲೈಓವರ್‌ಗಳ ನಿರ್ಮಾಣ, 1,600 ಹೊಸ ಶೂನ್ಯ-ಹೊರಸೂಸುವಿಕೆ ಎಲೆಕ್ಟ್ರಿಕ್ ಬಸ್‌ಗಳ ಇಂಡಕ್ಷನ್, ದೆಹಲಿಯ 57 ಅಸ್ತಿತ್ವದಲ್ಲಿರುವ ಬಸ್ ಡಿಪೋಗಳ ವಿದ್ಯುದ್ಧೀಕರಣ, 3 ವಿಶ್ವ ದರ್ಜೆಯ ಅಂತರ-ರಾಜ್ಯ ಬಸ್ ಟರ್ಮಿನಲ್‌ಗಳ ನಿರ್ಮಾಣ ಮಾಡಲಾಗುವುದು ಎಂದರು‌.

    ಮನೀಶ್ ಸಿಸೋಡಿಯಾ (Manish Sisodia) ಅವರು ಬಜೆಟ್ ಮಂಡಿಸಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತಿತ್ತು. ಅವರು ನನ್ನ ಹಿರಿಯ ಸಹೋದರ. ಮನೀಶ್ ಸಿಸೋಡಿಯಾ ಅವರಿಗೆ ಪ್ರಪಂಚದದ ಎಲ್ಲಾ ಮಕ್ಕಳ ಹಾರೈಕೆ ಇರುತ್ತದೆ. ಇದು ದೆಹಲಿ ಸರ್ಕಾರದ 9ನೇ ಮತ್ತು ನನ್ನ ಮೊದಲ ಬಜೆಟ್ ಎಂದು ಕೈಲಾಶ್ ಗಹ್ಲೋಟ್ ಹೇಳಿದರು. ಇದನ್ನೂ ಓದಿ: ಸಂಸದರಾಗಲು ಹೊರಟಿದ್ದ ಸಿದ್ದರಾಮಯ್ಯ ಸಿಎಂ ಆಗಿದ್ದು ಹೇಗೆ?

    2023-24ರ ಆರ್ಥಿಕ ವರ್ಷದ ದೆಹಲಿಯ ಬಜೆಟ್ ಮಂಗಳವಾರ ಮಂಡನೆಯಾಗಬೇಕಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ಮೂಲಸೌಕರ್ಯ ಮತ್ತು ಜಾಹೀರಾತುಗಳಿಗೆ ಹಣ ಹಂಚಿಕೆಗೆ ಆಕ್ಷೇಪ ವ್ಯಕ್ತಪಡಿಸಿತು. ಬಜೆಟ್‌ಗೆ ತಡೆ ನೀಡಿ ದೆಹಲಿ ಸರ್ಕಾರದಿಂದ ಸ್ಪಷ್ಟನೆ ಕೇಳಿತ್ತು. ಈ ಸ್ಪಷ್ಟನೆ ಬಳಿಕ ಬಜೆಟ್ ಮಂಡನೆಗೆ ಅವಕಾಶ ನೀಡಿತ್ತು. ಇದನ್ನೂ ಓದಿ: H3N2 ಇನ್‌ಫ್ಲುಯೆಂಜಾ ಭೀತಿ ಮಧ್ಯೆ ಹೆಚ್ಚುತ್ತಿದೆ ಕೋವಿಡ್ ಸೋಂಕಿತರ ಸಂಖ್ಯೆ

  • ಜಾಹೀರಾತಿಗೆ ಸರ್ಕಾರಿ ಹಣ ದುರ್ಬಳಕೆ – 10 ದಿನದಲ್ಲಿ 163 ಕೋಟಿ ವಾಪಸ್ ಕೊಡಿ AAPಗೆ ನೋಟಿಸ್

    ಜಾಹೀರಾತಿಗೆ ಸರ್ಕಾರಿ ಹಣ ದುರ್ಬಳಕೆ – 10 ದಿನದಲ್ಲಿ 163 ಕೋಟಿ ವಾಪಸ್ ಕೊಡಿ AAPಗೆ ನೋಟಿಸ್

    ನವದೆಹಲಿ: ಸರ್ಕಾರಿ ಜಾಹೀರಾತು ಪ್ರಸಾರ ಮಾಡುವ ನೆಪದಲ್ಲಿ ರಾಜಕೀಯ ಜಾಹೀರಾತುಗಳನ್ನ (Political Advertisements) ಪ್ರಸಾರ ಮಾಡಲು ಆಮ್ ಆದ್ಮಿ ಪಕ್ಷವು (AAP) 163.62 ಕೋಟಿ ರೂ. ದುರ್ಬಳಕೆ ಮಾಡಿಕೊಂಡಿದೆ. ಆ ಮೊತ್ತವನ್ನು ಹಿಂದಿರುಗಿಸುವಂತೆ ದೆಹಲಿ ಸರ್ಕಾರ (Delhi Government) ನೋಟಿಸ್ ಜಾರಿಗೊಳಿಸಿದೆ.

    ದೆಹಲಿ ಆಡಳಿತ ಪಕ್ಷವು 10 ದಿನಗಳಲ್ಲಿ ಈ ಮೊತ್ತ ಪಾವತಿಸುವಂತೆ ಮಾಹಿತಿ ಮತ್ತು ಪ್ರಚಾರ ನಿರ್ದೇಶನಾಲಯ (DIP) ನೋಟಿಸ್‌ನಲ್ಲಿ ತಾಕೀತು ಮಾಡಿದೆ. 163,61,88,265 ರೂ. ಮೊತ್ತ ಠೇವಣಿ ಇಡುವ ಮೂಲಕ ಹಣ ಮರುಪಾವತಿಸಲು ಅಂತಿಮ ಅವಕಾಶ ನೀಡಿದೆ. ಇದನ್ನೂ ಓದಿ: ಕುಡಿದ ನಶೆಯಲ್ಲಿ ವಿಮಾನ ನಿಲ್ದಾಣದಲ್ಲೇ ವ್ಯಕ್ತಿ ಬಹಿರಂಗ ಮೂತ್ರ ವಿಸರ್ಜನೆ

    ಒಂದು ವೇಳೆ ಎಎಪಿ ಸಂಚಾಲಕರು ಠೇವಣಿ ಇಡಲು ವಿಫಲವಾದಲ್ಲಿ ಕಾನೂನಿನ ಅನ್ವಯ ಪಕ್ಷದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಜೊತೆಗೆ ನಿರ್ದಿಷ್ಟ ಕಾಲಮಿತಿಯಲ್ಲೇ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಜಾನ್ಸನ್‌ & ಜಾನ್ಸನ್‌ ಬೇಬಿ ಪೌಡರ್‌ ಉತ್ಪಾದನೆ, ಮಾರಾಟಕ್ಕೆ ಬಾಂಬೆ ಹೈಕೋರ್ಟ್‌ ಅನುಮತಿ

    ದೆಹಲಿ ರಾಜ್ಯಪಾಲ ವಿನಯ್ ಕುಮಾರ್ ಸಕ್ಸೇನಾ (Vinai Kumar Saxena), ಅರವಿಂದ್ ಕೇಜ್ರಿವಾಲ್ (Arvind Kejriwal) ನೇತೃತ್ವದ ಎಎಪಿ ಪಕ್ಷವು ಸರ್ಕಾರಿ ಜಾಹೀರಾತುಗಳ ಸೋಗಿನಲ್ಲಿ ರಾಜಕೀಯ ಜಾಹೀರಾತುಗಳನ್ನ ಪ್ರಚಾರ ಮಾಡ್ತಿದೆ ಎಂದು ಆರೋಪಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಒಂದು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ.

    ಆದ್ರೆ ಎಎಪಿ ಈ ರೀತಿಯ ಆದೇಶಗಳನ್ನು ಹೊರಡಿಸಲು ರಾಜ್ಯಪಾಲರಿಗೆ ಅಧಿಕಾರವಿಲ್ಲ. ರಾಜ್ಯಪಾಲರ ನಿರ್ದೇಶನಗಳು ಕಾನೂನಿನ ದೃಷ್ಟಿಯಲ್ಲಿ ನಿಲ್ಲುವುದಿಲ್ಲ ಎಂದು ಹೇಳಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಡ ಹೆಚ್‍ಐವಿ ರೋಗಿಗಳಿಗೆ ಉಚಿತ ಆಹಾರ, ಚಿಕಿತ್ಸೆ ನೀಡಿ – ದೆಹಲಿ ಹೈಕೋರ್ಟ್

    ಬಡ ಹೆಚ್‍ಐವಿ ರೋಗಿಗಳಿಗೆ ಉಚಿತ ಆಹಾರ, ಚಿಕಿತ್ಸೆ ನೀಡಿ – ದೆಹಲಿ ಹೈಕೋರ್ಟ್

    ನವದೆಹಲಿ: ಬಡತನ ರೇಖೆಗಿಂತ ಕೆಳಗಿರುವ ಹೆಚ್‍ಐವಿ ಪಾಸಿಟಿವ್ ವ್ಯಕ್ತಿಗಳಿಗೆ (HIV Patients) ಉಚಿತ ಆಹಾರ (Food) ಹಾಗೂ ವೈದ್ಯಕೀಯ ಚಿಕಿತ್ಸೆಯನ್ನು (Treatment) ನೀಡಬೇಕು ಹಾಗೂ ಅವರ ಕುಂದುಕೊರತೆಗಳ ಬಗ್ಗೆ ಇರುವ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ದೆಹಲಿ ಸರ್ಕಾರಕ್ಕೆ (Delhi Government) ದೆಹಲಿ ಹೈಕೋರ್ಟ್ (Delhi High Court) ತಿಳಿಸಿದೆ.

    ಈ ಬಗ್ಗೆ ದೆಹಲಿ ಹೈಕೋರ್ಟ್‍ಗೆ ಹೆಚ್‍ಐವಿ/ ಏಡ್ಸ್ ಮತ್ತು ಇತರ ಬಹು ಅಂಗಾಗ ಕಾಯಿಲೆಗಳಿಂದ ಬಳಲುತ್ತಿರುವ ಮತ್ತು ಆಶ್ರಯವಿಲ್ಲದೆ ಇರುವ ವ್ಯಕ್ತಿಗಳು ಅರ್ಜಿಯನ್ನು ಸಲ್ಲಿಸಿದ್ದರು. ಹೆಚ್‍ಐವಿಯಿಂದ ಬಳಲುತ್ತಿರುವವರಿಗೆ ವಸತಿ, ಆಹಾರ, ವೈದ್ಯಕೀಯ ನೆರವು ಇತ್ಯಾದಿಗಳನ್ನು ಒದಗಿಸಲು ದೆಹಲಿ ಸರ್ಕಾರ ಮತ್ತು ಕೇಂದ್ರಕ್ಕೆ ಹಲವಾರು ನಿರ್ದೇಶನಗಳನ್ನು ನೀಡಬೇಕು ಎಂದು ಈ ಅರ್ಜಿಯಲ್ಲಿ ಮನವಿ ಮಾಡಿದ್ದರು.

    ಇಂದು ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿ ಆದೇಶವನ್ನು ಹೊರಡಿಸಿದೆ. ಹೆಚ್‍ಐವಿ ಪಾಸಿಟಿವ್ ರೋಗಿಗಳಿಗೆ ನೆರವು ಮತ್ತು ಸಹಾಯವನ್ನು ಒದಗಿಸಲು ದೆಹಲಿ ಸರ್ಕಾರವು ಕೈಗೆಟುಕುವ ಚಿಕಿತ್ಸೆ ಸೇರಿದಂತೆ ಹಲವಾರು ಪುನರ್ವಸತಿ ಯೋಜನೆಗಳು ಮತ್ತು ಕ್ರಮಗಳನ್ನು ಜಾರಿಗೆ ತರುವಂತೆ 2017ರ ಕಾಯಿದೆಯಲ್ಲಿ ತಿಳಿಸಿದೆ ಎಂದಿದೆ. ಇದನ್ನೂ ಓದಿ: ಪಾಕ್‌ ಭಯೋತ್ಪಾದನೆಯನ್ನು ಯಾಕೆ ಯುರೋಪ್‌ ರಾಷ್ಟ್ರಗಳು ಖಂಡಿಸಿಲ್ಲ – ಜೈಶಂಕರ್‌ ಪ್ರಶ್ನೆ

    2017ರ ಕಾಯಿದೆಯ ಶಾಸನಬದ್ಧ ನಿಬಂಧನೆಗಳ ಅಡಿಯಲ್ಲಿ ಸರ್ಕಾರವು ಕಟ್ಟುನಿಟ್ಟಾದ ಅನುಸರಣೆಯನ್ನು ಖಾತ್ರಿ ಪಡಿಸಿಕೊಳ್ಳುತ್ತಿದೆ ಎಂಬುದು ಸ್ಪಷ್ಟವಾಗಿದೆ. ಹೆಚ್‍ಐವಿ/ ಏಡ್ಸ್ ಪೀಡಿತ ವ್ಯಕ್ತಿಗಳಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ಲಭ್ಯವಾಗುವಂತೆ ಮಾಡಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ನ್ಯಾ. ಸುಬ್ರಮಣಿಯನ್ ಪ್ರಸಾದ್ ಅವರನ್ನೊಳಗೊಂಡ ಪೀಠವು ಹೇಳಿದೆ. ಇದನ್ನೂ ಓದಿ: ಸ್ವಾಮೀಜಿ ದರ್ಶನ ಮಾಡೋ ಪುಣ್ಯ ನಾನು ಪಡೆದುಕೊಂಡಿಲ್ಲ ಅನ್ನೋ ನೋವಾಗ್ತಿದೆ: ಜಮೀರ್

    Live Tv
    [brid partner=56869869 player=32851 video=960834 autoplay=true]