Tag: Delhi Govt

  • ಭಾರೀ ಮಳೆಗೆ ಮೃತಪಟ್ಟವರ ಕುಟುಂಬಗಳಿಗೆ ದೆಹಲಿ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

    ಭಾರೀ ಮಳೆಗೆ ಮೃತಪಟ್ಟವರ ಕುಟುಂಬಗಳಿಗೆ ದೆಹಲಿ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ದಾಖಲೆಯ ಮಳೆ ಸುರಿದಿದ್ದು, ಶುಕ್ರವಾರ ಸುರಿದ ಭಾರೀ (Rain) ಮಳೆಯಿಂದಾಗಿ ಮೃಪಟ್ಟವರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರವನ್ನು ದೆಹಲಿ ಸರ್ಕಾರವು (Delhi Government) ಭಾನುವಾರ ಘೋಷಿಸಿದೆ.

    ಕಂದಾಯ ಇಲಾಖೆಗೆ ಅಧಿಕೃತ ಸಂವಹನದಲ್ಲಿ ದೆಹಲಿ ಹಣಕಾಸು ಸಚಿವ ಅತಿಶಿ (Atishi), ಜೂನ್ 28 ರಂದು ಸುರಿದ ವಿಪರೀತ ಮಳೆಗೆ ಸಾವು-ನೋವುಗಳು ಸಂಭವಿಸಿದೆ. ಹೀಗಾಗಿ ಭಾರೀ ಮಳೆಗೆ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರವನ್ನು ನೀಡುವಂತೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

    ಈ ಸಂಬಂಧ ಅತಿಶಿ ತಮ್ಮ ಎಕ್ಸ್‌ ಖಾತೆಯಲ್ಲಿ, ಜೂನ್ 28 ರಂದು ಹಲವು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿವೆ. 24 ಗಂಟೆಗಳಲ್ಲಿ 228 ಮಿ.ಮೀ ತೀವ್ರ ಮಳೆಯ ನಂತರ, ಪ್ರಾಣ ಕಳೆದುಕೊಂಡ ಎಲ್ಲರ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಾಗುವುದು. ಈ ಪರಿಹಾರವು ಮೃತರ ಕುಟುಂಬಗಳಿಗೆ ತ್ವರಿತವಾಗಿ ತಲುಪುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ರಿಯಾಸಿ ಭಯೋತ್ಪಾದಕ ದಾಳಿ – ಉಗ್ರರ ಮೇಲೆ ಹದ್ದಿನ ಕಣ್ಣು, ರಜೌರಿಯ ಹಲವೆಡೆ NIA ರೇಡ್‌

    ಎಲ್ಲೆಲ್ಲಿ ಏನೇನಾಗಿದೆ..?: ಎರಡು ದಿನಗಳ ಮುಂಗಾರು ಮಳೆಗೆ ಸುಮಾರು 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಾಯುವ್ಯ ದೆಹಲಿಯ ಬದ್ಲಿಯಲ್ಲಿ ಶನಿವಾರ ಇಬ್ಬರು ಬಾಲಕರು ನೀರು ತುಂಬಿದ್ದ ಅಂಡರ್‌ಪಾಸ್‌ನಲ್ಲಿ ಮುಳುಗಿ ಸಾವನ್ನಪ್ಪಿರುವುದು ಸೇರಿದಂತೆ ಕೆಲವು ಪ್ರಮುಖ ಘಟನೆಗಳು ನಡೆದಿದೆ. ಶುಕ್ರವಾರ ಸುರಿದ ಭಾರೀ ಮಳೆಗೆ ಅಂಡರ್‌ಪಾಸ್‌ ಜಲಾವೃತವಾಗಿತ್ತು.

    ಓಖ್ಲಾದಲ್ಲಿ 60 ವರ್ಷದ ವ್ಯಕ್ತಿ ದಿಗ್ವಿಜಯ್ ಕುಮಾರ್ ಚೌಧರಿ ಜಲಾವೃತಗೊಂಡ ಅಂಡರ್‌ಪಾಸ್‌ನಲ್ಲಿ ತನ್ನ ಸ್ಕೂಟರ್‌ನೊಂದಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಇದಲ್ಲದೆ ಜೂನ್ 28 ರಂದು ಸರಿದ ಭಾರೀ ಮಳೆಗೆ ವಸಂತ ವಿಹಾರ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಗೋಡೆಯ ಅವಶೇಷಗಳಿಂದ ಮೂವರು ಕಾರ್ಮಿಕರ ಶವಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ – ಶನಿವಾರ, ಭಾನುವಾರ ಕಂಪ್ಲೀಟ್‌  ಬಂದ್

    ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ – ಶನಿವಾರ, ಭಾನುವಾರ ಕಂಪ್ಲೀಟ್‌ ಬಂದ್

    ನವದೆಹಲಿ: ಕೊರೊನಾ, ಓಮಿಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೆ ಮುಂದಾಗಿದೆ.

    ದೆಹಲಿಯಲ್ಲಿ ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ, ಭಾನುವಾರ ಕಂಪ್ಲಿಟ್ ಬಂದ್ ಇರಲಿದೆ. ವಾಣಿಜ್ಯ ಚಟುವಟಿಕೆಗಳಿಗೆ ಶೇ. 50 ರಷ್ಟು ಮಾತ್ರ ಅವಕಾಶವನ್ನು ನೀಡಲಾಗಿದೆ. ಕೋವಿಡ್ ನಿಂದಾಗಿ ಕೇಂದ್ರದ ಶೇ. 50 ರಷ್ಟು ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ನೀಡಲಾಗಿದೆ. ಕಾರ್ಯದರ್ಶಿ ರ‍್ಯಾಂಕ್‌ಗಿಂತ ಕೆಳಗಿನ ಶೇ.50 ರಷ್ಟು ಮಂದಿಗೆ ಮನೆಯಿಂದಲೇ ಕೆಲಸ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಈ ಪ್ರಕಾರ ದಿವ್ಯಾಂಗರು, ಗರ್ಭಿಣಿಯರು ಕಚೇರಿಗೆ ಹಾಜರಾಗುವುದರಿಂದ ವಿನಾಯ್ತಿ ನೀಡಲಾಗಿದೆ.

    ಕಂಟೈನ್ಮೆಂಟ್ ವಲಯದ ಸಿಬ್ಬಂದಿ ಆ ವಲಯಗಳನ್ನು ಕೋವಿಡ್ ಕಂಟೈನ್ಮೆಂಟ್ ಮುಕ್ತವಾಗಿಸುವವರೆಗೆ ಕಚೇರಿಗೆ ಬರುವಂತಿಲ್ಲ. ಕಚೇರಿಯಲ್ಲಿ ಹೆಚ್ಚಿನ ಜನದಟ್ಟಣೆ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕಚೇರಿಯ ಒಟ್ಟಾರೆ ಸಂಖ್ಯೆಯ ಶೆ. 50 ರಷ್ಟು ಮಂದಿಗೆ ಮಾತ್ರವೇ ಕಚೇರಿಯಲ್ಲಿರಬೇಕು. ಈ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ. ಇದನ್ನೂ ಓದಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ ಕೊರೊನಾ

    ಕಳೆದ 24 ಗಂಟೆಗಳಲ್ಲಿ 4,099 ಹೊಸ ಕೇಸ್‍ಗಳು ಪತ್ತೆಯಾಗಿದೆ. ದೆಹಲಿಯ ಪಾಸಿಟಿವ್ ರೆಟ್ ಶೇ.6.46ಕ್ಕೆ ಏರಿದೆ. 6,288 ಕೊರೊನಾ ಸೋಂಕಿತರು ಹಾಗೂ ಸೋಂಕಿತರ ಸಂಪರ್ಕಕ್ಕೆ ಬಂದವರು ಹೋಂ ಐಸೋಲೇಶನ್‍ಲ್ಲಿ ಇದ್ದಾರೆ. ದೆಹಲಿಯಲ್ಲಿ ನಿನ್ನೆ ದಾಖಲೆ ಮಟ್ಟದಲ್ಲಿ ಕೊರೊನಾ ಸಾವಿನ ಸಂಖ್ಯೆ ಏರಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂವನ್ನು ಸರ್ಕಾರ ಜಾರಿ ಮಾಡಿದೆ. ಇದನ್ನೂ ಓದಿ: ಕೇಂದ್ರದ ಶೆ.50ರಷ್ಟು ಸಿಬ್ಬಂದಿಗೆ ವರ್ಕ್ ಫ್ರಂ ಹೋಂ

    ದೆಹಲಿ ಸರ್ಕಾರ ನಾಲ್ಕು ಬಣ್ಣಗಳಲ್ಲಿ ಕೊರೊನಾ ಅಪಾಯ ಗುರುತಿಸಿದೆ. ಸೋಂಕಿನ ಪ್ರಮಾಣ ಆಧರಿಸಿ ನಾಲ್ಕು ಹಂತಗಳಲ್ಲಿ ವಿಭಾಗವನ್ನು ಮಾಡಲಾಗಿದೆ. ಹಳದಿ, ಹಳದಿ ಮತ್ತು ಕಿತ್ತಳೆ ಮಿಶ್ರಣ, ಕಿತ್ತಳೆ ಮತ್ತು ರೆಡ್ ಝೋನ್ ಆಗಿ ವಿಂಗಡಿಸಲಾಗಿದೆ. ಸೋಂಕಿನ ಪ್ರಮಾಣ 0.5% ರಷ್ಟಿದ್ದರೇ ಹಳದಿ, 1-2 % ನಷ್ಟಿದ್ದರೇ ಹಳದಿ ಮತ್ತು ಕಿತ್ತಳೆ ಮಿಶ್ರಿತ ಬಣ್ಣ2-5% ವರೆಗೂ ಕಿತ್ತಳೆ, 5% ಹೆಚ್ಚಿದ್ದರೆ ರೆಡ್ ಝೋನ್ ಎಂದು ವಿಭಾಗಿಸಿದೆ. ಇದನ್ನೂ ಓದಿ: ಗಡಿಯೊಳಗೆ ನುಸುಳಿದ ಪಾಕ್ ಯೋಧನ ಹತ್ಯೆ – ಶವವನ್ನ ಹಿಂದಕ್ಕೆ ತೆಗೆದುಕೊಳ್ಳಿ ಎಂದ ಭಾರತೀಯ ಸೇನೆ

    ಕರ್ನಾಟಕದಲ್ಲಿ ಕೊರೊನಾ ಮೂರನೇ ಅಲೆ ಶುರುವಾಗಿದೆ. ಟಫ್ ರೂಲ್ಸ್ ಜಾರಿಗೆ ರಾಜ್ಯ ಸರ್ಕಾರದ ಚಿಂತನೆ ಮಾಡುತ್ತಿದ್ದು, ಇಂದು ತಜ್ಞರ ಸಭೆ ಬಳಿಕ ಕಠಿಣ ನಿಯಮಗಳ ಜಾರಿಗೆ ತರಲು ಸರ್ಕಾರ ತಯಾರಿ ನೆಡೆಸಿದೆ. ದೆಹಲಿ, ಮಹಾರಾಷ್ಟ್ರ ಮಾಡೇಲ್ ಆಧರಿಸಿ ರಾಜ್ಯದಲ್ಲಿ ನಿಯಮಗಳು ಜಾರಿ ಸಾಧ್ಯತೆ ಇದೆ.

  • ನನ್ನ ಮಗನ ಜೊತೆ ಟೈಲರ್ ಮಗ ಐಐಟಿಯಲ್ಲಿ ಓದುತ್ತಿರುವುದು ಖುಷಿಯ ವಿಚಾರ: ಕೇಜ್ರಿವಾಲ್

    ನನ್ನ ಮಗನ ಜೊತೆ ಟೈಲರ್ ಮಗ ಐಐಟಿಯಲ್ಲಿ ಓದುತ್ತಿರುವುದು ಖುಷಿಯ ವಿಚಾರ: ಕೇಜ್ರಿವಾಲ್

    ನವದೆಹಲಿ: ನನ್ನ ಮಗನ ಜೊತೆ ಒಬ್ಬ ಟೈಲರ್ ಮಗನು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯಲ್ಲಿ ಓದುತ್ತಿರುವುದು ಖುಷಿಯ ವಿಚಾರ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

    ದೆಹಲಿಯಲ್ಲಿರುವ ನಮ್ಮ ಸರ್ಕಾರ ಜಾರಿಗೆ ತಂದಿರುವ ಉಚಿತ ವಿದ್ಯಾಭ್ಯಾಸ ಯೋಜನೆಯ ಅಡಿಯಲ್ಲಿ ಪ್ರತಿಷ್ಠಿತ ಐಐಟಿ ಕಾಲೇಜಿನಲ್ಲಿ ಒಬ್ಬ ಟೈಲರ್ ಮಗ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಇವರ ಜೊತೆ ನಮ್ಮ ಮಗನು ಕೂಡ ವಿದ್ಯಾಭ್ಯಾಸ ಮಾಡುತ್ತಿರುವುದು ನನಗೆ ಬಹಳ ಸಂತೋಷವಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಅರವಿಂದ್ ಕೇಜ್ರಿವಾಲ್, ವಿಜಯ್ ಕುಮಾರ್ ಅವರ ತಂದೆ ದರ್ಜಿ, ಅವರ ತಾಯಿ ಗೃಹಿಣಿ. ಆದರೆ ದೆಹಲಿ ಸರ್ಕಾರ ಉಚಿತ ವಿದ್ಯಾಭ್ಯಾಸ ಯೋಜನೆ ಅಡಿ ಅವರು ಐಐಟಿಯಲ್ಲಿ ಪ್ರವೇಶ ಪಡೆದಿದ್ದಾರೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಇದು ಬಾಬಾ ಸಾಹೇಬ್ ಅವರ (ಬಿ.ಆರ್ ಅಂಬೇಡ್ಕರ್) ಕನಸು ಇಂದು ನನಸಾಗಿತು ಎಂದು ಟ್ವೀಟ್ ಮಾಡಿದ್ದಾರೆ.

    ಇದರ ಜೊತೆಗೆ ಇನ್ನೊಂದು ಟ್ವೀಟ್ ಮಾಡಿರುವ ಕೇಜ್ರಿವಾಲ್, ನನ್ನ ಮಗ ಮತ್ತು ಟೈಲರ್ ಒಬ್ಬರ ಮಗ ಒಂದೇ ಸಮಯದಲ್ಲಿ ಐಐಟಿಯಲ್ಲಿ ಅಧ್ಯಯನ ಮಾಡುತ್ತಾರೆ ಎಂದು ನನಗೆ ತುಂಬಾ ಸಂತೋಷವಾಗಿದೆ. ಉತ್ತಮ ಶಿಕ್ಷಣದ ವಿಚಾರದಲ್ಲಿ ಬಡವನ ಮಗ ಬಡವನಾಗಿರುತ್ತಾನೆ ಎಂಬ ಸಂಪ್ರದಾಯವಿದೆ. ಆದರೆ ನಾವು ಗುಣಮಟ್ಟದ ಶಿಕ್ಷಣ ಮತ್ತು ತರಬೇತಿಯನ್ನು ನೀಡುವ ಮೂಲಕ ಬಡವರು ಮತ್ತು ಶ್ರೀಮಂತರ ನಡುವೆ ಇರುವ ಅಂತರವನ್ನು ಕಡಿಮೆ ಮಾಡಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

    ಮಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪುತ್ರ ಪುಲ್ಕಿತ್ ಈ ವರ್ಷದ ಆರಂಭದಲ್ಲಿ 12 ನೇ ತರಗತಿಯ ಸಿಬಿಎಸ್‍ಇ ಪರೀಕ್ಷೆಯಲ್ಲಿ ಶೇ.96.4 ರಷ್ಟು ಅಂಕಗಳನ್ನು ಗಳಿಸಿದ್ದಾರೆ. ಅವರ ಪುತ್ರಿ ಹರ್ಷಿತಾ ಕೇಜ್ರಿವಾಲ್ ಅವರು 2014 ರಲ್ಲಿ ತಮ್ಮ 12 ನೇ ತರಗತಿ ಸಿಬಿಎಸ್‍ಇ ಪರೀಕ್ಷೆಯಲ್ಲಿ ಶೇಕಡಾ 96 ರಷ್ಟು ಅಂಕಗಳನ್ನು ಗಳಿಸಿದ್ದರು. ನಂತರ, ಅವರು ಐಐಟಿ ಜಂಟಿ ಪ್ರವೇಶ ಪರೀಕ್ಷೆಯನ್ನು (ಜೆಇಇ) ಪಾಸ್ ಮಾಡಿದ್ದರು.

    ಅರವಿಂದ್ ಕೇಜ್ರಿವಾಲ್ ಐಐಟಿ ಖರಗ್‍ಪುರದಲ್ಲಿ ಎಂಜಿನಿಯರಿಂಗ್ ಓದಿದ್ದಾರೆ. ಶಿಕ್ಷಣ ಕ್ಷೇತ್ರವನ್ನು ಅಭಿವೃದ್ಧಿ ಮಾಡುವುದು ಕೇಜ್ರಿವಾಲ್ ಸರ್ಕಾರದ ಪ್ರಾಥಮಿಕ ಗುರಿಯಾಗಿತ್ತು. ಈ ನಿಟ್ಟಿನಲ್ಲಿ ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಮತ್ತು ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ವಿವಿಧ ಪ್ರಯತ್ನಗಳನ್ನು ನಡೆಸುತ್ತಿದೆ.

    ಮಕ್ಕಳ ಒತ್ತಡವನ್ನು ನಿರ್ವಹಿಸಿ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ದೆಹಲಿ ಸರ್ಕಾರವು ಪರಿಚಯಿಸಿದ ಸಂತೋಷ ತರಗತಿಗಳು ಎಂಬ ಯೋಜನೆ ಶಿಕ್ಷಣ ತಜ್ಞರು ಮತ್ತು ರಾಜಕಾರಣಿಗಳಿಂದ ಮೆಚ್ಚುಗೆ ಗಳಿಸಿದೆ.