Tag: Delhi High Court

  • ಬಡ ಹೆಚ್‍ಐವಿ ರೋಗಿಗಳಿಗೆ ಉಚಿತ ಆಹಾರ, ಚಿಕಿತ್ಸೆ ನೀಡಿ – ದೆಹಲಿ ಹೈಕೋರ್ಟ್

    ಬಡ ಹೆಚ್‍ಐವಿ ರೋಗಿಗಳಿಗೆ ಉಚಿತ ಆಹಾರ, ಚಿಕಿತ್ಸೆ ನೀಡಿ – ದೆಹಲಿ ಹೈಕೋರ್ಟ್

    ನವದೆಹಲಿ: ಬಡತನ ರೇಖೆಗಿಂತ ಕೆಳಗಿರುವ ಹೆಚ್‍ಐವಿ ಪಾಸಿಟಿವ್ ವ್ಯಕ್ತಿಗಳಿಗೆ (HIV Patients) ಉಚಿತ ಆಹಾರ (Food) ಹಾಗೂ ವೈದ್ಯಕೀಯ ಚಿಕಿತ್ಸೆಯನ್ನು (Treatment) ನೀಡಬೇಕು ಹಾಗೂ ಅವರ ಕುಂದುಕೊರತೆಗಳ ಬಗ್ಗೆ ಇರುವ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ದೆಹಲಿ ಸರ್ಕಾರಕ್ಕೆ (Delhi Government) ದೆಹಲಿ ಹೈಕೋರ್ಟ್ (Delhi High Court) ತಿಳಿಸಿದೆ.

    ಈ ಬಗ್ಗೆ ದೆಹಲಿ ಹೈಕೋರ್ಟ್‍ಗೆ ಹೆಚ್‍ಐವಿ/ ಏಡ್ಸ್ ಮತ್ತು ಇತರ ಬಹು ಅಂಗಾಗ ಕಾಯಿಲೆಗಳಿಂದ ಬಳಲುತ್ತಿರುವ ಮತ್ತು ಆಶ್ರಯವಿಲ್ಲದೆ ಇರುವ ವ್ಯಕ್ತಿಗಳು ಅರ್ಜಿಯನ್ನು ಸಲ್ಲಿಸಿದ್ದರು. ಹೆಚ್‍ಐವಿಯಿಂದ ಬಳಲುತ್ತಿರುವವರಿಗೆ ವಸತಿ, ಆಹಾರ, ವೈದ್ಯಕೀಯ ನೆರವು ಇತ್ಯಾದಿಗಳನ್ನು ಒದಗಿಸಲು ದೆಹಲಿ ಸರ್ಕಾರ ಮತ್ತು ಕೇಂದ್ರಕ್ಕೆ ಹಲವಾರು ನಿರ್ದೇಶನಗಳನ್ನು ನೀಡಬೇಕು ಎಂದು ಈ ಅರ್ಜಿಯಲ್ಲಿ ಮನವಿ ಮಾಡಿದ್ದರು.

    ಇಂದು ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿ ಆದೇಶವನ್ನು ಹೊರಡಿಸಿದೆ. ಹೆಚ್‍ಐವಿ ಪಾಸಿಟಿವ್ ರೋಗಿಗಳಿಗೆ ನೆರವು ಮತ್ತು ಸಹಾಯವನ್ನು ಒದಗಿಸಲು ದೆಹಲಿ ಸರ್ಕಾರವು ಕೈಗೆಟುಕುವ ಚಿಕಿತ್ಸೆ ಸೇರಿದಂತೆ ಹಲವಾರು ಪುನರ್ವಸತಿ ಯೋಜನೆಗಳು ಮತ್ತು ಕ್ರಮಗಳನ್ನು ಜಾರಿಗೆ ತರುವಂತೆ 2017ರ ಕಾಯಿದೆಯಲ್ಲಿ ತಿಳಿಸಿದೆ ಎಂದಿದೆ. ಇದನ್ನೂ ಓದಿ: ಪಾಕ್‌ ಭಯೋತ್ಪಾದನೆಯನ್ನು ಯಾಕೆ ಯುರೋಪ್‌ ರಾಷ್ಟ್ರಗಳು ಖಂಡಿಸಿಲ್ಲ – ಜೈಶಂಕರ್‌ ಪ್ರಶ್ನೆ

    2017ರ ಕಾಯಿದೆಯ ಶಾಸನಬದ್ಧ ನಿಬಂಧನೆಗಳ ಅಡಿಯಲ್ಲಿ ಸರ್ಕಾರವು ಕಟ್ಟುನಿಟ್ಟಾದ ಅನುಸರಣೆಯನ್ನು ಖಾತ್ರಿ ಪಡಿಸಿಕೊಳ್ಳುತ್ತಿದೆ ಎಂಬುದು ಸ್ಪಷ್ಟವಾಗಿದೆ. ಹೆಚ್‍ಐವಿ/ ಏಡ್ಸ್ ಪೀಡಿತ ವ್ಯಕ್ತಿಗಳಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ಲಭ್ಯವಾಗುವಂತೆ ಮಾಡಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ನ್ಯಾ. ಸುಬ್ರಮಣಿಯನ್ ಪ್ರಸಾದ್ ಅವರನ್ನೊಳಗೊಂಡ ಪೀಠವು ಹೇಳಿದೆ. ಇದನ್ನೂ ಓದಿ: ಸ್ವಾಮೀಜಿ ದರ್ಶನ ಮಾಡೋ ಪುಣ್ಯ ನಾನು ಪಡೆದುಕೊಂಡಿಲ್ಲ ಅನ್ನೋ ನೋವಾಗ್ತಿದೆ: ಜಮೀರ್

    Live Tv
    [brid partner=56869869 player=32851 video=960834 autoplay=true]

  • ತಾಯಿಯ ಆಯ್ಕೆಯೇ ಅಂತಿಮ – 33 ವಾರಗಳ ಗರ್ಭಿಣಿಯ ಗರ್ಭಪಾತಕ್ಕೆ ಹೈಕೋರ್ಟ್ ಅಸ್ತು

    ತಾಯಿಯ ಆಯ್ಕೆಯೇ ಅಂತಿಮ – 33 ವಾರಗಳ ಗರ್ಭಿಣಿಯ ಗರ್ಭಪಾತಕ್ಕೆ ಹೈಕೋರ್ಟ್ ಅಸ್ತು

    ನವದೆಹಲಿ: 33 ವಾರಗಳ ಗರ್ಭಿಣಿಯ (Pregnant Women) ಗರ್ಭಪಾತಕ್ಕೆ ದೆಹಲಿ ಹೈಕೋರ್ಟ್ (Delhi High Court) ಅನುಮತಿ ನೀಡಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾ. ಪ್ರತಿಭಾ ಎಂ. ಸಿಂಗ್ (Prathiba M Singh), ತಾಯಿಯ ಆಯ್ಕೆಯೇ ಅಂತಿಮವಾಗಿದ್ದು, ಅದರ ಆಧಾರದ ಮೇಲೆ ಅನುಮತಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

    33 ವಾರಗಳ ಗರ್ಭಿಣಿಯಾಗಿರುವ 26 ವರ್ಷದ ಮಹಿಳೆಯೊಬ್ಬರು ತಮ್ಮ ಗರ್ಭಾವಸ್ಥೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಪ್ರತಿಭಾ ಸಿಂಗ್, ಎನ್‌ಎನ್‌ಜೆಪಿ ಆಸ್ಪತ್ರೆ (LNJP Hospital) ವೈದ್ಯರ ಸಲಹೆ ಕೇಳಿದ್ದರು. ಆದರೆ ವರದಿಯಲ್ಲಿ ವೈದ್ಯರು ಗರ್ಭಪಾತವನ್ನು ತಿರಸ್ಕರಿಸಿದ್ದರು. ಇದನ್ನೂ ಓದಿ: ಭಾರತ ಜಾತ್ಯತೀತ ರಾಷ್ಟ್ರ ಎಂದ ಸುಪ್ರೀಂ – ಠಾಕೂರ್‌ ಚಂದ್ರರನ್ನು ʼಪರಮಾತ್ಮʼ ಎಂದು ಘೋಷಿಸಲು ಕೋರಿದ್ದ PIL ವಜಾ

    ಬಳಿಕ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಮತ್ತು ಸ್ತ್ರೀರೋಗತಜ್ಞರಿಂದ ವರದಿ ಕೇಳಿದರು. ನರಶಸ್ತ್ರಚಿಕಿತ್ಸಕರು ಮಗುವಿಗೆ ಏನಾದರೂ ನ್ಯೂನತೆ ಇರುವ ಸಾಧ್ಯತೆಯಿದೆ, ಮಗುವಿನ `ಜೀವನದ ಗುಣಮಟ್ಟ’ವನ್ನು ಊಹಿಸಲು ಸಾಧ್ಯವಿಲ್ಲ ಎಂದು ವರದಿ ನೀಡಿದ್ದರು. ಆದರೆ ಮಗುವಿನ ಜನನದ ಬಳಿಕ ಸುಮಾರು 10 ವಾರಗಳ ನಂತರ ಕೆಲವು ಸಮಸ್ಯೆಗಳಿಗೆ ಶಸ್ತ್ರಚಿಕಿತ್ಸೆ ನಡೆಸಬಹುದು ಎಂದು ತಿಳಿಸಿದ್ದರು.

    ವರದಿ ಆಧರಿಸಿ ತೀರ್ಪು ನೀಡಿದ ನ್ಯಾ. ಪ್ರತಿಭಾ ಸಿಂಗ್, ಭಾರತದ ಕಾನೂನಿನಲ್ಲಿ ಮಹಿಳೆ ತಾನು ಗರ್ಭಾವಸ್ಥೆಯಲ್ಲಿ ಮುಂದುವರಿಯಬೇಕೆ ಅಥವಾ ಬೇಡವೇ ಎಂಬುದು ಅಂತಿಮವಾಗಿ ಅವರೇ ನಿರ್ಧರಿಸಬೇಕು. ಈ ರೀತಿಯ ಪ್ರಕರಣಗಳಲ್ಲಿ ಮಹಿಳೆಯ ತೀವ್ರ ಸಂದಿಗ್ಧತೆಯನ್ನು ಎತ್ತಿ ತೋರಿಸುತ್ತವೆ. ಆಧುನಿಕ ತಂತ್ರಜ್ಞಾನದ ಸಹಾಯದಿಂದ ಗರ್ಭಪಾತ ಮಾಡಬಹುದು ಎಂದು ಆದೇಶಿಸಿದರು. ಇದನ್ನೂ ಓದಿ: ಮೋರ್ಬಿ ಸೇತುವೆ ದುರಂತದ ಬಗ್ಗೆ ಟ್ವೀಟ್ ಮಾಡಿದ TMC ವಕ್ತಾರ ಅರೆಸ್ಟ್ – ಮೋದಿ ವಿರುದ್ಧ ಮಮತಾ ಗರಂ

    ತಾಯಿಯ ಆಯ್ಕೆ ಮೇಲೆ ಈ ಆದೇಶ ನೀಡಲಾಗುತ್ತಿದ್ದು, ಅರ್ಜಿದಾರ ಮಹಿಳೆ ಎನ್‌ಎನ್‌ಜೆಪಿ ಅಥವಾ ಇತರೆ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಬಹುದು ಎಂದು ತಿಳಿಸಿದರು. ವೈದ್ಯರು ಅಗತ್ಯ ನೆರವು ನೀಡುವಂತೆ ನಿರ್ದೇಶಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶ್ರದ್ಧಾಳನ್ನ ಕೊಂದು ಗೆಳತಿಯೊಂದಿಗೆ ಸೆಕ್ಸ್- ಡಾಕ್ಟರ್ ಜೊತೆ ಡೇಟಿಂಗ್ ಮಾಡ್ತಿದ್ದ ಅಫ್ತಾಬ್

    ಶ್ರದ್ಧಾಳನ್ನ ಕೊಂದು ಗೆಳತಿಯೊಂದಿಗೆ ಸೆಕ್ಸ್- ಡಾಕ್ಟರ್ ಜೊತೆ ಡೇಟಿಂಗ್ ಮಾಡ್ತಿದ್ದ ಅಫ್ತಾಬ್

    ನವದೆಹಲಿ: ಲಿಂವಿಂಗ್ ರಿಲೇಶನ್‌ಶಿಪ್‌ನಲ್ಲಿದ್ದ (LiveIn RelationShip) ಗೆಳತಿ ಶ್ರದ್ಧಾ ವಾಕರ್‌ನನ್ನ (Shraddha Walker) ಕೊಂದು 35 ತುಂಡುಗಳಾಗಿ ಕತ್ತರಿಸಿ, ಬಿಸಾಡಿದ್ದ ಅಫ್ತಾಬ್ ಅಮೀನ್ ಪೂನಾವಾಲಾನ (Aftab Amin Poonawalla) ಮತ್ತೊಂದು ಕರಾಳಮುಖ ಪೊಲೀಸ್ ತನಿಖೆ (Police Investigation) ವೇಳೆ ಬಯಲಾಗಿದೆ.

    ತನ್ನ ಗೆಳತಿಯನ್ನ ಕ್ರೂರವಾಗಿ ಕೊಂದು ಬಳಿಕ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ಹೊಸ ಫ್ರಿಡ್ಜ್‌ನಲ್ಲಿಟ್ಟಿದ್ದರೂ ತನ್ನ ರೂಮಿಗೆ ಕರೆದುಕೊಂಡು ಮತ್ತೊಬ್ಬ ಗೆಳತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ. ಅಲ್ಲದೇ ಒಬ್ಬ ವೈದ್ಯೆ (Doctor) ಜೊತೆಗೂ ಡೇಟಿಂಗ್ (Dating) ನಡೆಸುತ್ತಿದ್ದ ಎನ್ನುವ ಸತ್ಯ ಬೆಳಕಿಗೆ ಬಂದಿದೆ. ಇವರು ಮನೋವೈದ್ಯರಾಗಿದ್ದು, ಡೇಟಿಂಗ್ ಆ್ಯಪ್‌ನಲ್ಲಿ (Dating APP) ಅಫ್ತಾಬ್‌ಗೆ ಪರಿಚಯವಾಗಿದ್ದರು ಎಂದು ಪೊಲೀಸರು (Police) ತಿಳಿಸಿದ್ದಾರೆ. ಶನಿವಾರ ವೈದ್ಯೆಯನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಹಿಂದಿ ಹೇರಿಕೆ ವಿರೋಧಿಸಿ ಬೆಂಕಿ ಹಚ್ಚಿಕೊಂಡು ತಮಿಳುನಾಡು ರೈತ ಸಾವು

    ಶ್ರದ್ಧಾ ಮೊದಲಬಾರಿಗೆ ಭೇಟಿ ಮಾಡಿದ `ಬಂಬಲ್’ ಎಂಬ ಡೇಟಿಂಗ್ ಆ್ಯಪ್ ಮೂಲಕವೇ ಈಕೆಯನ್ನು ಅಫ್ತಾಬ್ ಮೊದಲಿಗೆ ಪರಿಚಯ ಮಾಡಿಕೊಂಡಿದ್ದ. ಅಲ್ಲದೇ ಈ ಆ್ಯಪ್ ಮೂಲಕ ಮತ್ತಷ್ಟು ಮಹಿಳೆಯರ ಪರಿಚಯ ಜೊತೆಗೂ ಸಂಪರ್ಕ ಹೊಂದಿರುವುದು ತಿಳಿದುಬಂದಿದೆ. ಪೊಲೀಸರು ಈ ಬಗ್ಗೆಯೂ ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನ ಸರ್ಕಾರಿ ಆಸ್ಪತ್ರೆಗೆ ಬಂತು ರೋಬೊ ಡಾಕ್ಟರ್ – ಏನಿದರ ವಿಶೇಷತೆ?

    ಅಫ್ತಾಬ್ ಜೈಲಿಗೆ: ಅಫ್ತಾಬ್ ಅಮೀನ್ ಪೂನಾವಾಲ ಪೊಲೀಸ್ ಕಸ್ಟಡಿ ಅವಧಿ ಮುಗಿದಿದೆ. ಹೀಗಾಗಿ 13 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಆತನ ಸುಳ್ಳು ಪತ್ತೆಗೆ ಮಂಪರು ಪರೀಕ್ಷೆ ಮಾಡಿಸೋದು ಬಾಕಿಯಿದೆ. ಅದಕ್ಕೂ ಮುನ್ನ ಪಾಲಿಗ್ರಾಫ್ ಪರೀಕ್ಷೆ ಮಾಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

    Live Tv
    [brid partner=56869869 player=32851 video=960834 autoplay=true]

  • ಶ್ರದ್ಧಾ ಹತ್ಯೆ ಮಾಡಿದ್ದಕ್ಕೆ ಪಶ್ಚಾತ್ತಾಪವಿದೆ – ಕೋರ್ಟ್ ಮುಂದೆ ತಪ್ಪೊಪ್ಪಿಕೊಂಡ ಅಫ್ತಾಬ್

    ಶ್ರದ್ಧಾ ಹತ್ಯೆ ಮಾಡಿದ್ದಕ್ಕೆ ಪಶ್ಚಾತ್ತಾಪವಿದೆ – ಕೋರ್ಟ್ ಮುಂದೆ ತಪ್ಪೊಪ್ಪಿಕೊಂಡ ಅಫ್ತಾಬ್

    ನವದೆಹಲಿ: ಮುಂಬೈ (Mumbai) ಮೂಲದ ಯುವತಿ ಶ್ರದ್ಧಾ ವಾಕರ್ (Shraddha Walker) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಅಮೀನ್ ಪೂನವಾಲಾ (Aaftab Ameen Poonawala) ಕೋರ್ಟ್ ಮುಂದೆ ಮೊದಲ ಬಾರಿ ತಪ್ಪೊಪ್ಪಿಕೊಂಡಿದ್ದಾನೆ. ಪೊಲೀಸ್ (Delhi Police) ಕಸ್ಟಡಿ ವಿಸ್ತರಣೆ ವೇಳೆ ಹತ್ಯೆ ಮಾಡಿರುವುದಾಗಿ ಕೋರ್ಟ್‌ನಲ್ಲಿ ಹೇಳಿಕೆ ದಾಖಲಿಸಿದ್ದಾನೆ.

    ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನಲೆ ಕಸ್ಟಡಿಗಾಗಿ ಸಾಕೇತ್ ಜಿಲ್ಲಾ ನ್ಯಾಯಲಯದ ಮುಂದೆ ಅಫ್ತಾಬ್ ನನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಕೊಂಡ ಅಫ್ತಾಬ್ ಜಗಳದ ಆವೇಶದಲ್ಲಿ ಹತ್ಯೆ ಮಾಡಿದ್ದೇನೆ, ಹತ್ಯೆಯ ಮಾಡಿರುವುದಕ್ಕೆ ಪಶ್ಚಾತ್ತಾಪ ಇದೆ, ಘಟನೆಯನ್ನು ನೆನಪಿಸಿಕೊಳ್ಳಲು ಬೇಸರವಿದೆ ಎಂದು ಹೇಳಿಕೊಂಡಿದ್ದಾನೆ. ಇದನ್ನೂ ಓದಿ: ಮಚ್ಚಿನಿಂದ ಹೊಡೆದು ಪತ್ನಿಯ ಕೊಲೆಗೈದ ಪಾಪಿ ಪತಿ!

    ಅಫ್ತಾಬ್ ಹೇಳಿಕೆ ಬಳಿಕ ಪೊಲೀಸರು ಕಸ್ಟಡಿ (Police Custody) ವಿಸ್ತರಣೆಗೆ ಮನವಿ ಮಾಡಿದರು. ಅಫ್ತಾಬ್ ಹೇಳಿಕೆ ಆಧರಿಸಿ ತನಿಖೆ ಮಾಡಬೇಕಿದೆ, ಉತ್ತರಾಖಂಡ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ತನಿಖೆ ನಡೆಸಬೇಕಿದೆ. ಈ ಹಿನ್ನಲೆ ಅವಧಿ ವಿಸ್ತರಣೆ ಮಾಡಬೇಕು ಎಂದು ದೆಹಲಿ ಪೊಲೀಸರ ಪರ ವಕೀಲರು ಮನವಿ ಮಾಡಿದರು. ಮನವಿಗೆ ಸ್ಪಂಧಿಸಿದ ಕೋರ್ಟ್ ನಾಲ್ಕು ದಿನಕ್ಕೆ ಕಸ್ಟಡಿಯನ್ನು ವಿಸ್ತರಿಸಿ ಆದೇಶ ನೀಡಿದೆ. ಇದನ್ನೂ ಓದಿ: ಮದುವೆ ನಿರಾಕರಿಸಿದ್ದಕ್ಕೆ ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿದ – ಇಬ್ಬರ ಸ್ಥಿತಿ ಚಿಂತಾಜನಕ

    ಈ ನಡುವೆ ಅಫ್ತಾಬ್‌ನ ಮಂಪರು ಪರೀಕ್ಷೆ ಮಾಡಲು ಪೊಲೀಸರು ತಯಾರಿ ನಡೆಸಿದ್ದು, ಅದಕ್ಕೂ ಮೊದಲು ಫಾಲಿಗ್ರಾಫ್ ಪರೀಕ್ಷೆ ನಡೆಸಲು ನಿರ್ಧರಿಸಿದ್ದಾರೆ. ಇಂದು ಅಫ್ತಾಬ್ ಫಾಲಿಗ್ರಾಫ್ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಈ ಪರೀಕ್ಷೆಯಲ್ಲಿ ಅಫ್ತಾಬ್ ಹೇಳಿಕೆಗಳಲ್ಲಿರುವ ಸತ್ಯ ಮತ್ತು ಸುಳ್ಳುಗಳನ್ನು ಪರಿಶೀಲಿಸುವ ಪ್ರಯತ್ನ ನಡೆಯಲಿದೆ.

    ಪಾಲಿಗ್ರಾಫ್ ಪರೀಕ್ಷೆ ಎಂದರೇನು?
    ಸುಳ್ಳು ಪತ್ತೆಕಾರಕ ಪರೀಕ್ಷೆಯನ್ನು ಪಾಲಿಗ್ರಾಫ್‌ ಪರೀಕ್ಷೆ ಎಂದು ಕರೆಯಲಾಗುತ್ತದೆ. ಇದು ಮಾನವನ ದೇಹದ ಮೇಲೆ ಸೆನ್ಸಾರ್‌ಗಳನ್ನು ಸ್ಥಾಪಿಸಿ, ಅದರ ಸಹಾಯದಿಂದ, ಪ್ರಶ್ನೆಯನ್ನು ಕೇಳಿದ ಸಮಯದಲ್ಲಿ ದೇಹದಲ್ಲಿ ಸಂಭವಿಸುವ ಜೈವಿಕ ಭೌತಿಕ ಬದಲಾವಣೆಗಳನ್ನು ಪತ್ತೆಹಚ್ಚಲು ಸಾಧ್ಯವಿದೆ. ಸರಳವಾಗಿ ಹೇಳುವುದಾದರೆ, ನಿರ್ದಿಷ್ಟ ಘಟನೆಯ ಬಗ್ಗೆ ಅಭ್ಯರ್ಥಿಯನ್ನು ಕೇಳಿದಾಗ, ಒಬ್ಬ ವ್ಯಕ್ತಿಯು ಸುಳ್ಳು ಹೇಳುತ್ತಿದ್ದಾನೆಯೇ ಅಥವಾ ಸತ್ಯ ಹೇಳುತ್ತಾನೆಯೇ ಎಂದು ಪ್ರತಿಪಾದಿಸಲು ಅನುಮತಿಸುವ ದತ್ತಾಂಶವನ್ನು ಪರದೆಯು ಪ್ರದರ್ಶಿಸುತ್ತದೆ. ಈ ಒಟ್ಟಾರೆ ಪ್ರಕ್ರಿಯೆಗೆ ಪಾಲಿಗ್ರಾಫ್‌ ಪರೀಕ್ಷೆ ಎಂದು ಹೇಳಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಶ್ರದ್ಧಾ ವಾಕರ್ ಹತ್ಯೆ ಕೇಸ್ – CBIಗೆ ವರ್ಗಾಯಿಸುವಂತೆ ದೆಹಲಿ ಹೈಕೋರ್ಟ್‌ಗೆ ಅರ್ಜಿ

    ಶ್ರದ್ಧಾ ವಾಕರ್ ಹತ್ಯೆ ಕೇಸ್ – CBIಗೆ ವರ್ಗಾಯಿಸುವಂತೆ ದೆಹಲಿ ಹೈಕೋರ್ಟ್‌ಗೆ ಅರ್ಜಿ

    ನವದೆಹಲಿ: ದೆಹಲಿಯಲ್ಲಿ ಭೀಕರವಾಗಿ ಹತ್ಯೆಯಾದ ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ (Shraddha Walker) ಪ್ರಕರಣವನ್ನು ಸಿಬಿಐ (CBI) ತನಿಖೆಗೆ ವರ್ಗಾಯಿಸುವಂತೆ ದೆಹಲಿ ಹೈಕೋರ್ಟ್‌ಗೆ (Delhi HighCourt) ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದೆ.

    ವಕೀಲ (Advocate) ಜೋಶಿನಿ ತುಲಿ (Joshini Tuli) ಈ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಲು ಮನವಿ ಮಾಡಲಾಗಿದೆ. ಇದನ್ನೂ ಓದಿ: ಪ್ರಬಲ ನಾಯಕನಿಲ್ಲದಿದ್ರೆ ಅಫ್ತಾಬ್‌ನಂಥ ಹಂತಕರು ಪ್ರತಿ ನಗರದಲ್ಲೂ ಹುಟ್ತಾರೆ – ಅಸ್ಸಾಂ ಸಿಎಂ

    ಅರ್ಜಿಯಲ್ಲಿ ಏನಿದೆ?: ಶ್ರದ್ಧಾ ಹತ್ಯೆಯಾಗಿ 6 ತಿಂಗಳಾಗಿದೆ, ದೇಹದ ತುಂಡುಗಳನ್ನು ಹಲವು ಸ್ಥಳಗಳಲ್ಲಿ ಎಸೆಯಲಾಗಿದೆ. ಸಾಕ್ಷಿಗಳನ್ನು ಹುಡುಕಲು ದೆಹಲಿ ಪೊಲೀಸರ (Delhi Police) ಬಳಿ ಆಡಳಿತಾತ್ಮಕ ಅಥವಾ ಸಿಬ್ಬಂದಿ ಕೊರತೆ ಮತ್ತು ಸಾಕಷ್ಟು ತಾಂತ್ರಿಕ ಮತ್ತು ವೈಜ್ಞಾನಿಕ ಸಲಕರಣೆಗಳ ಕೊರತೆ ಇದೆ. ಈ ಹಿನ್ನಲೆ ಅವರು ಸಮರ್ಥವಾಗಿ ತನಿಖೆ ನಡೆಸಲಾಗುವುದಿಲ್ಲ. ಇದನ್ನೂ ಓದಿ: ಪೀಸ್ ಪೀಸ್ ಪ್ರೇಮಿಯ ಮತ್ತಷ್ಟು ಕ್ರೂರತೆ ಬಹಿರಂಗ- ದೆಹಲಿ ಮಾತ್ರವಲ್ಲ ಡೆಹ್ರಾಡೂನ್‍ನಲ್ಲೂ ದೇಹದ ತುಂಡು ಎಸೆತ

    ಅಲ್ಲದೇ ದೆಹಲಿ ಪೊಲೀಸರು ತನಿಖೆಯ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ವಿವರಗಳನ್ನು ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಬಹಿರಂಗಪಡಿಸಿದ್ದಾರೆ. ಮಾಹಿತಿಯ ಪ್ರಕಾರ ತನಿಖೆಯ ಮುಂದುವರಿಕೆಗಾಗಿ ಆರೋಪಿಗಳನ್ನು ಐದು ವಿವಿಧ ರಾಜ್ಯಗಳಿಗೆ ಕರೆದೊಯ್ಯಲಾಗುವುದು ಎಂದು ಹೇಳಲಾಗಿದೆ. ಆದ್ದರಿಂದ ಈ ಪ್ರಕರಣವು ಅಂತರರಾಜ್ಯ ಮತ್ತು ದೆಹಲಿ ಪೊಲೀಸರ ಪ್ರಾದೇಶಿಕ ವ್ಯಾಪ್ತಿಯನ್ನು ಮೀರಿದೆ.

    ಇದು ಸೈಬರ್ ಕ್ರೈಂ (Cyber Crime) ವ್ಯಾಪ್ತಿಗೂ ಬರಲಿದೆ. ಡೇಟಿಂಗ್ ಆ್ಯಪ್‌ಗಳ (Dating App) ಸುರಕ್ಷತೆಯ ಬಗ್ಗೆಯೂ ಯೋಚಿಸಬೇಕಿದೆ. ಎಲ್ಲ ಆಯಾಮದಲ್ಲಿ ತನಿಖೆ ನಡೆಯಲು ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವುದು ಸೂಕ್ತ, ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಬಗ್ಗೆ ಸೂಚನೆ ನೀಡಬೇಕು ಎಂದು ವಕೀಲರು ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೆಹಲಿ ರೇಪ್ ಕೇಸ್ – ಮರಣದಂಡನೆಗೆ ಗುರಿಯಾಗಿದ್ದ ಮೂವರನ್ನು ಖುಲಾಸೆಗೊಳಿಸಿದ ಸುಪ್ರೀಂ

    ದೆಹಲಿ ರೇಪ್ ಕೇಸ್ – ಮರಣದಂಡನೆಗೆ ಗುರಿಯಾಗಿದ್ದ ಮೂವರನ್ನು ಖುಲಾಸೆಗೊಳಿಸಿದ ಸುಪ್ರೀಂ

    ನವದೆಹಲಿ: 2012ರಲ್ಲಿ ದೆಹಲಿಯ (NewDelhi) ಛಾವಾಲಾ ಪ್ರದೇಶದಲ್ಲಿ 19 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆಗೈದ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಮರಣದಂಡನೆಗೆ ಗುರಿಯಾಗಿದ್ದ ಮೂವರು ಅಪರಾಧಿಗಳನ್ನು ಸುಪ್ರೀಂ ಕೋರ್ಟ್ (Supreme Court)  ಖುಲಾಸೆಗೊಳಿಸಿದೆ.

    court order law

    2012ರಲ್ಲಿ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಮೂವರು ಅಪರಾಧಿಗಳಿಗೆ (Victim) ಮರಣದಂಡನೆ ವಿಧಿಸಲಾಗಿತ್ತು. ಸಂತ್ರಸ್ತೆಯ ಮೃತದೇಹ ವಿರೂಪಗೊಂಡ ಸ್ಥಿತಿಯಲ್ಲಿ ಗದ್ದೆಯೊಂದರಲ್ಲಿ ಪತ್ತೆಯಾಗಿತ್ತು. ಈ ವೇಳೆ ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿ, ಕಾರಿನ ಉಪಕರಣಗಳು ಹಾಗೂ ಇತರ ವಸ್ತುಗಳಿಂದ ಹಲ್ಲೆ ನಡೆಸಿರುವುದು ಸಾಬೀತಾಗಿತ್ತು. ಕೇಸ್ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ (Delhi HighCourt) 2014 ಫ್ರೆಬ್ರವರಿ ನಲ್ಲಿ ಮೂವರನ್ನು ದೋಷಿ ಎಂದು ಘೋಷಿಸಿ, ವಿವಿಧ ಆರೋಪಗಳ ಅಡಿಯಲ್ಲಿ ಶಿಕ್ಷೆ ವಿಧಿಸಲು ಮುಂದಾಗಿತ್ತು. ಇದನ್ನೂ ಓದಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ – ತಿದ್ದುಪಡಿಯು ಸಂವಿಧಾನ ಬದ್ಧವಾಗಿದೆ: ಸುಪ್ರೀಂಕೋರ್ಟ್

    2014ರ ಆಗಸ್ಟ್ 26ರಂದು ರಾಹುಲ್, ರವಿಕುಮಾರ್ ಹಾಗೂ ವಿನೋದ್ ಎಂಬ ಮೂವರು ಅಪರಾಧಿಗಳಿಗೆ ದೆಹಲಿ ಹೈಕೋರ್ಟ್ ಮರಣ ದಂಡನೆ ವಿಧಿಸಿತ್ತು. ಇದೀಗ ಸುಪ್ರೀಂ ಕೋರ್ಟ್ ಪ್ರಕರಣದಿಂದ (Supreme Court Case) ಅಪರಾಧಿಗಳನ್ನು ಖುಲಾಸೆಗೊಳಿಸಿದೆ. ಇದನ್ನೂ ಓದಿ: ಮೇಲ್ವರ್ಗದ ಬಡವರಿಗೆ ಶೇ.10 ಮೀಸಲಾತಿ ಅಳಿವು-ಉಳಿವು- ಇಂದು ಸುಪ್ರೀಂನಲ್ಲಿ ನಿರ್ಧಾರ

    ಏನಿದು ಪ್ರಕರಣ?
    2012ರ ಫೆಬ್ರವರಿ ತಿಂಗಳಲ್ಲಿ ಹರ್ಯಾಣದಲ್ಲಿ ದೆಹಲಿ ಮೂಲದ 19 ವರ್ಷದ ಯುವತಿಯ ಶವ ಪತ್ತೆಯಾಗಿತ್ತು. ನಂತರ ಅದು ಅತ್ಯಾಚಾರ ಎಂಬುದು ಗೊತ್ತಾಯಿತು. ಅತ್ಯಾಚಾರಕ್ಕೆ ಒಳಗಾದ ನಂತರ ಆಕೆಯನ್ನು ಬರ್ಬರವಾಗಿ ಕೊಲ್ಲಲಾಗಿತ್ತು. ಈ ಸಂಬಂಧ ದೆಹಲಿಯ ಛಾವಾಲಾ (ನಜಾಫ್‌ಗಢ) ಪೊಲೀಸ್ ಠಾಣೆಯಲ್ಲಿ (Delhi Police Station) ಪ್ರಕರಣ ದಾಖಲಾಗಿತ್ತು. ಅಪರಾಧಿಗಳು ಮೊದಲು ಯುವತಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿದ್ದಾರೆ. ನಂತರ ಕೊಂದು ಶವವನ್ನು ಹರಿಯಾಣದ ರೇವಾರಿ ಜಿಲ್ಲೆಯ ರೋಧೈ ಗ್ರಾಮದ ಹೊಲದಲ್ಲಿ ಎಸೆದು ವಿಕೃತಿ ಮೆರೆದಿದ್ದರು.

    Live Tv
    [brid partner=56869869 player=32851 video=960834 autoplay=true]

  • ಮುಸ್ಲಿಂ ಕಾನೂನಿನಲ್ಲಿ ಪೋಷಕರ ಅನುಮತಿಯಿಲ್ಲದೇ ಅಪ್ರಾಪ್ತೆ ವಿವಾಹವಾಗಬಹುದು: ಕೋರ್ಟ್‌

    ಮುಸ್ಲಿಂ ಕಾನೂನಿನಲ್ಲಿ ಪೋಷಕರ ಅನುಮತಿಯಿಲ್ಲದೇ ಅಪ್ರಾಪ್ತೆ ವಿವಾಹವಾಗಬಹುದು: ಕೋರ್ಟ್‌

    ನವದೆಹಲಿ: ಮುಸ್ಲಿಂ ಕಾನೂನು ಪ್ರಕಾರ, ಪೋಷಕರ ಅನುಮತಿಯಿಲ್ಲದೇ ಪ್ರೌಢಾವಸ್ಥೆಗೆ ಬಂದ ಅಪ್ರಾಪ್ತೆ ಮದುವೆಯಾಗಬಹುದು. ಅಲ್ಲದೇ ತನ್ನ ಪತಿಯೊಂದಿಗೆ ವಾಸಿಸುವ ಹಕ್ಕನ್ನು ಹೊಂದಿದ್ದಾಳೆ ಎಂದು ದೆಹಲಿ ಹೈಕೋರ್ಟ್‌ ಮಹತ್ವದ ತೀರ್ಪು ಪ್ರಕಟಿಸಿದೆ.

    ರಕ್ಷಣೆ ಕೋರಿ ಮುಸ್ಲಿಂ ದಂಪತಿ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್‌ ಪುರಸ್ಕರಿಸಿದೆ. ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರು ಬಿಹಾರದ ಔರಿಯಾ ಜಿಲ್ಲೆಯಲ್ಲಿ ಮೊಹಮ್ಮದೀಯ ವಿಧಿಗಳ ಪ್ರಕಾರ ಈ ವರ್ಷದ ಆರಂಭದಲ್ಲಿ ವಿವಾಹವಾದ ಮುಸ್ಲಿಂ ದಂಪತಿಗಳಿಗೆ ಪೊಲೀಸ್ ರಕ್ಷಣೆ ಒದಗಿಸುವಂತೆ ಆದೇಶಿಸಿದ್ದಾರೆ. ಇದನ್ನೂ ಓದಿ: ಬಿಲ್ಕಿಸ್‌ ಬಾನು ಕೇಸ್‌ – ಅಪರಾಧಿಗಳ ಬಿಡುಗಡೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

    ಅಂತಹ ಪ್ರಕರಣಗಳಲ್ಲಿ ಮದುವೆಯ ನಂತರವೇ ದೈಹಿಕ ಸಂಪರ್ಕ ಹೊಂದಿದಾಗ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ ಕಾಯಿದೆ) ಅಡಿಯಲ್ಲಿ ಅಪರಾಧ ಎನ್ನಲಾಗುವುದಿಲ್ಲ ಎಂದು ನ್ಯಾಯಾಲಯವು ಹೇಳಿದೆ.

    ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಪುರುಷನ ವಿರುದ್ಧ ಹುಡುಗಿಯ ಕುಟುಂಬದವರು ಎಫ್‌ಐಆರ್‌ ದಾಖಲಿಸಿ, ಕಾನೂನು ಕ್ರಮಕ್ಕೆ ಮನವಿ ಮಾಡಿದ್ದರು. ಇದೇ ವೇಳೆ ತಮಗೆ ರಕ್ಷಣೆ ಒದಗಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಮುಸ್ಲಿಂ ದಂಪತಿ ನ್ಯಾಯಾಲಯದ ಮೊರೆ ಹೋಗಿದ್ದರು.

    ಮದುವೆಯ ಸಮಯದಲ್ಲಿ ಹುಡುಗಿಗೆ 15 ವರ್ಷ 5 ತಿಂಗಳು ವಯಸ್ಸಾಗಿತ್ತು. ವಿವಾಹದ ಬಳಿಕ ಆಕೆ ಗರ್ಭಿಣಿಯಾಗಿದ್ದಳು. ಇದನ್ನೂ ಓದಿ: ಎಸಿಬಿ ರದ್ದು – ಹೈ ಆದೇಶಕ್ಕೆ ತಡೆ ಕೋರಿ ಸುಪ್ರೀಂನಲ್ಲಿ ಅರ್ಜಿ

    ಅರ್ಜಿದಾರರು ಒಬ್ಬರಿಗೊಬ್ಬರು ಕಾನೂನುಬದ್ಧವಾಗಿ ವಿವಾಹವಾಗಿದ್ದಾರೆ. ವಿವಾಹದ ನಂತರ ದೈಹಿಕ ಸಂಬಂಧ ಹೊಂದಿರುವುದರಿಂದ, ಇದು ಲೈಂಗಿಕ ಶೋಷಣೆಯ ಪ್ರಕರಣವಲ್ಲ. ಇಬ್ಬರೂ ಪ್ರೀತಿಸಿ ವಿವಾಹವಾಗಿ ನಂತರ ದೈಹಿಕ ಸಂಬಂಧ ಹೊಂದಿದ್ದರಿಂದ ಈ ಪ್ರಕರಣಕ್ಕೆ ಪೋಕ್ಸೊ ಕಾಯ್ದೆಯನ್ನು ಅನ್ವಯಿಸಲಾಗುವುದಿಲ್ಲ ಎಂದು ಕೋರ್ಟ್‌ ಅಭಿಪ್ರಾಯಟ್ಟಿದೆ.

    ಅರ್ಜಿದಾರರು ಬೇರ್ಪಟ್ಟರೆ ತಾಯಿ ಮತ್ತು ಆಕೆಗೆ ಹುಟ್ಟಲಿರುವ ಮಗುವಿಗೆ ಹೆಚ್ಚಿನ ಆಘಾತವನ್ನು ಉಂಟುಮಾಡುತ್ತದೆ. ಈ ಪ್ರಕರಣದಲ್ಲಿ ಅರ್ಜಿದಾರರ ಹಿತಕಾಪಾಡುವುದು ಮುಖ್ಯ. ಪರಸ್ಪರ ಒಪ್ಪಿ ಮದುವೆಯಾಗಿ ಸಂತೋಷವಾಗಿದ್ದರೆ, ಅವರನ್ನು ಬೇರ್ಪಡಿಸುವುದು ಸರಿಯಲ್ಲ ಎಂದು ನ್ಯಾಯಮೂರ್ತಿ ಸಿಂಗ್‌ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ನಾಯಕ ಸಲ್ಲಿಸಿದ್ದ ಅರ್ಜಿ ವಜಾ – ಅತ್ಯಾಚಾರ ಪ್ರಕರಣ ದಾಖಲಿಸಲು ಹೈಕೋರ್ಟ್‌ ಸೂಚನೆ

    ಬಿಜೆಪಿ ನಾಯಕ ಸಲ್ಲಿಸಿದ್ದ ಅರ್ಜಿ ವಜಾ – ಅತ್ಯಾಚಾರ ಪ್ರಕರಣ ದಾಖಲಿಸಲು ಹೈಕೋರ್ಟ್‌ ಸೂಚನೆ

    ಹೊಸದಿಲ್ಲಿ: ಅತ್ಯಾಚಾರ ಆರೋಪದಡಿ ಮಹಿಳೆಯೊಬ್ಬರ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸುವಂತೆ ದಿಲ್ಲಿ ಪೊಲೀಸರಿಗೆ ಸೂಚಿಸಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಬಿಜೆಪಿ ನಾಯಕ ಶಾನವಾಜ್ ಹುಸೇನ್ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ವಜಾಗೊಳಿಸಿದೆ.

    ನ್ಯಾಯಮೂರ್ತಿ ಆಶಾ ಮೆನನ್ ಅವರು, ಎಫ್‌ಐಆರ್ ದಾಖಲಿಸಲು ನಿರ್ದೇಶಿಸುವ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಯಾವುದೇ ಲೋಪವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಕೆ 47 ಪತ್ತೆಯಾದ ದೋಣಿ ಆಸ್ಟ್ರೇಲಿಯಾ ಪ್ರಜೆಗೆ ಸೇರಿದೆ: ಫಡ್ನವೀಸ್

    ಸಲ್ಲಿಕೆಯಾಗಿರುವ ಅರ್ಜಿಯಲ್ಲಿ ಒಪ್ಪುವಂತಹ ಅಂಶಗಳಿಲ್ಲ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಲಾಗಿದೆ. ಮಧ್ಯಂತರ ಆದೇಶಗಳು ತೆರವುಗೊಂಡಿವೆ. ಎಫ್‌ಐಆರ್ ಅನ್ನು ತಕ್ಷಣವೇ ದಾಖಲಿಸಬೇಕು. ತನಿಖೆಯನ್ನು ಪೂರ್ಣಗೊಳಿಸಿ ಮತ್ತು ಸೆಕ್ಷನ್ 173 ಸಿಆರ್‌ಪಿಸಿ ಅಡಿಯಲ್ಲಿ ವಿವರವಾದ ವರದಿಯನ್ನು ಮೂರು ತಿಂಗಳೊಳಗೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಸಲ್ಲಿಸಬೇಕು ಎಂದು ನ್ಯಾಯಾಲಯವು ಬುಧವಾರ ತನ್ನ ಆದೇಶದಲ್ಲಿ ತಿಳಿಸಿದೆ.

    ಪೊಲೀಸರು ಇನ್ನೂ ಕೂಡ ಎಫ್‌ಐಆರ್‌ ದಾಖಲಿಸದೇ ಇರುವುದಕ್ಕೆ ಕಿಡಿಕಾರಿರುವ ಹೈಕೋರ್ಟ್‌, ಈ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಲು ಪೊಲೀಸರು ನಿರಾಸಕ್ತಿ ಹೊಂದಿರುವಂತೆ ತೋರುತ್ತದೆ. ತನಿಖೆಯ ನಂತರವೇ ಪೊಲೀಸರು ಅಪರಾಧ ಎಸಗಿದ್ದಾರೆಯೇ ಅಥವಾ ಇಲ್ಲವೇ ಎಂಬುದು ತಿಳಿದು ಬರಲಿದೆ ಎಂದಿದೆ. ಇದನ್ನೂ ಓದಿ: ಏಕರೂಪದ ಚಾರ್ಜರ್‌ ಜಾರಿಗೆ ತಜ್ಞರ ಸಮಿತಿ ರಚನೆಗೆ ಮುಂದಾದ ಕೇಂದ್ರ : ಸಭೆಯಲ್ಲಿ ಏನಾಯ್ತು?

    2018ರಲ್ಲಿ ದೆಹಲಿ ಮೂಲದ ಮಹಿಳೆಯೊಬ್ಬರು, ಶಹನವಾಜ್ ಹುಸೇನ್ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿ ಎಫ್‌ಐಆರ್ ದಾಖಲಿಸಲು ಕೋರಿ ಕೆಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜುಲೈ 7, 2018 ರಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಬಿಜೆಪಿ ನಾಯಕನ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ನಾಯಕ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಜನರನ್ನು ದಾರಿ ತಪ್ಪಿಸಬೇಡಿ: ಬಾಬಾ ರಾಮದೇವ್‌ ವಿರುದ್ಧ ದೆಹಲಿ ಹೈಕೋರ್ಟ್‌ ಕಿಡಿ

    ಜನರನ್ನು ದಾರಿ ತಪ್ಪಿಸಬೇಡಿ: ಬಾಬಾ ರಾಮದೇವ್‌ ವಿರುದ್ಧ ದೆಹಲಿ ಹೈಕೋರ್ಟ್‌ ಕಿಡಿ

    ನವದೆಹಲಿ: ಅಧಿಕೃತ ಎನ್ನುವುದಕ್ಕಿಂತ ಹೆಚ್ಚಿನದ್ದನ್ನು ಅಥವಾ ಅಧಿಕೃತವಲ್ಲದ್ದನ್ನು ಹೇಳಿ ಜನರ ದಾರಿ ತಪ್ಪಿಸಬೇಡಿ ಎಂದು ಯೋಗ ಗುರು ಬಾಬಾ ರಾಮದೇವ್‌ ಅವರನ್ನು ದೆಹಲಿ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

    ಈ ಹಿಂದೆ ಅಲೋಪತಿ ವಿರುದ್ಧ ರಾಮದೇವ್‌ ಹೇಳಿಕೆ ನೀಡಿದ್ದರು. ವಿವಿಧ ವೈದ್ಯರ ಸಂಘಗಳು ಅವರ ವಿರುದ್ಧ ಮೊಕದ್ದಮೆ ಸಲ್ಲಿಸಿವೆ. ಇದರ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಭಂಬಾನಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಲಸಿಕೆ ಹಾಕಿಸಿಕೊಂಡಿದ್ದರೂ ಕೋವಿಡ್-19 ಪಾಸಿಟಿವ್ ಬಂದಿದೆ. ಇದು ವೈದ್ಯಕೀಯ ವಿಜ್ಞಾನದ ವೈಫಲ್ಯವಾಗಿದೆ ಎಂಬ ಯೋಗ ಗುರು ಬಾಬಾ ರಾಮದೇವ್ ಅವರ ಇತ್ತೀಚಿನ ಹೇಳಿಕೆ ನೀಡಿದ್ದರು. ಇದನ್ನು ದೆಹಲಿ ಹೈಕೋರ್ಟ್ ಬುಧವಾರ ಪ್ರಶ್ನಿಸಿದೆ. ಇದನ್ನೂ ಓದಿ: ಪತ್ನಿಯನ್ನು ಇತರ ಮಹಿಳೆಯರಿಗೆ ಹೋಲಿಸುವುದು ಮಾನಸಿಕ ಕ್ರೌರ್ಯಕ್ಕೆ ಸಮ: ಹೈಕೋರ್ಟ್

    ಆಯುರ್ವೇದಕ್ಕಿದ್ದ ಒಳ್ಳೆಯ ಹೆಸರು ಈಗ ಕುಂದುತ್ತಿರುವ ಬಗ್ಗೆ ನನಗೆ ಕಾಳಜಿ ಇದೆ. ನಾನು ಅದರ ಬಗ್ಗೆ ಚಿಂತಿಸುತ್ತಿದ್ದೇನೆ. ಆಯುರ್ವೇದವು ಪ್ರಾಚೀನ ವೈದ್ಯಕೀಯ ಪದ್ಧತಿಯಾಗಿದೆ. ಆಯುರ್ವೇದದ ಒಳ್ಳೆಯ ಹೆಸರಿಗೆ ಧಕ್ಕೆ ತರುವಂತಹ ಕೆಲಸವನ್ನು ನಾವು ಮಾಡಬಾರದು ಎಂದು ನ್ಯಾಯಮೂರ್ತಿ ಅನುಪ್ ಜೈರಾಮ್ ಭಂಬಾನಿ ಹೇಳಿದ್ದಾರೆ.

    ಕೆಲವೊಮ್ಮೆ ವಿದೇಶಿ ನಾಯಕರ ಹೆಸರುಗಳನ್ನು ಉಲ್ಲೇಖಿಸಲಾಗುತ್ತಿದೆ. ಇದು ವಿದೇಶಗಳೊಂದಿಗಿನ ಸಂಬಂಧದ ಮೇಲೆ ಪರಿಣಾಮ ಬೀರಬಹುದು ಎಂದಿದ್ದಾರೆ. ಇದನ್ನೂ ಓದಿ: ರೋಹಿಂಗ್ಯಾ ಮುಸ್ಲಿಮರಿಗೆ ಫ್ಲ್ಯಾಟ್‌ : ಯೂಟರ್ನ್‌ ಹೊಡೆದ ಕೇಂದ್ರ

    Live Tv
    [brid partner=56869869 player=32851 video=960834 autoplay=true]

  • ಸ್ಪೈಸ್‌ಜೆಟ್ ವಿಮಾನ ಹಾರಾಟ ನಿಲ್ಲಿಸಿ – ದೆಹಲಿ ಹೈಕೋರ್ಟ್‌ನಲ್ಲಿ ಮನವಿ

    ಸ್ಪೈಸ್‌ಜೆಟ್ ವಿಮಾನ ಹಾರಾಟ ನಿಲ್ಲಿಸಿ – ದೆಹಲಿ ಹೈಕೋರ್ಟ್‌ನಲ್ಲಿ ಮನವಿ

    ನವದೆಹಲಿ: ಕಳೆದ ಕೆಲವು ದಿನಗಳಿಂದ ಸ್ಪೈಸ್‌ಜೆಟ್ ವಿಮಾನಗಳು ಪ್ರಯಾಣದ ಸಂದರ್ಭದಲ್ಲಿ ಹಲವು ಬಾರಿ ತಾಂತ್ರಿಕ ದೋಷಗಳನ್ನು ಎದುರಿಸಿವೆ. ಘಟನೆಗಳು ಒಂದೊಂದಾಗಿ ವರದಿಯಾಗುತ್ತಿದ್ದಂತೆ ಪ್ರಯಾಣಿಕರಲ್ಲಿ ನಡುಕವೂ ಉಂಟಾಗಿದೆ. ಈ ಹಿನ್ನೆಲೆ ಸ್ಪೈಸ್‌ಜೆಟ್ ವಿಮಾನ ಹಾರಾಟವನ್ನು ನಿಲ್ಲಿಸುವಂತೆ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

    ಇತ್ತೀಚೆಗೆ ಸ್ಪೈಸ್‌ಜೆಟ್ ವಿಮಾನಗಳಲ್ಲಿ ಅನೇಕ ಅಹಿತಕರ ಘಟನೆಗಳು ಸಂಭವಿಸಿವೆ. ವಿಮಾನ ಸಂಸ್ಥೆ ಸರಿಯಾಗಿ ಕಾರ್ಯ ನಿರ್ವಹಿಸುತ್ತಿದೆಯೇ ಇಲ್ಲವೇ ಎಂಬುದರ ಕುರಿತು ತನಿಖೆ ನಡೆಸಲು ಆಯೋಗ ರಚಿಸಲು ಮನವಿಯಲ್ಲಿ ಕೋರಲಾಗಿದೆ ಎಂದು ವಕೀಲ ರಾಹುಲ್ ಭಾರದ್ವಾಜ್ ತಿಳಿಸಿದ್ದಾರೆ. ಇದನ್ನೂ ಓದಿ: ಉಪರಾಷ್ಟ್ರಪತಿ ಹುದ್ದೆಗೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಂಗಳೂರು ಮೂಲದ ಮಾರ್ಗರೇಟ್ ಆಳ್ವಾ ಆಯ್ಕೆ

    ಜೂನ್ 19 ರಿಂದ ಇಲ್ಲಿಯವರೆಗೆ 9 ಬಾರಿ ಸ್ಪೈಸ್‌ಜೆಟ್ ವಿಮಾನಗಳಲ್ಲಿ ತಾಂತ್ರಿಕ ದೋಷಗಳು ಕಂಡುಬಂದಿದ್ದು, ಈ ಹಿನ್ನೆಲೆ ಜುಲೈ 6 ರಂದು ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಸ್ಪೈಸ್‌ಜೆಟ್‌ಗೆ ಶೋಕಾಸ್ ನೋಟೀಸ್ ನೀಡಿತ್ತು. ಇದೀಗ ಹೆಚ್ಚುತ್ತಿರುವ ಭೀತಿಯ ನಡುವೆ ಸ್ಪೈಸ್‌ಜೆಟ್ ವಿಮಾನ ಹಾರಾಟವನ್ನು ನಿಲ್ಲಿಸಬೇಕೆಂದು ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಮನವಿ ಮಾಡಲಾಗಿದೆ. ಇದನ್ನೂ ಓದಿ: ಬುಡಕಟ್ಟು ವಿರೋಧಿ ಎಂದು ಬ್ಯಾನರ್ಜಿ ವಿರುದ್ಧ 50,000 ಪೋಸ್ಟರ್‌ ಹಾಕಿದ ಬಿಜೆಪಿ

    ಸುರಕ್ಷಿತ, ದಕ್ಷ ಹಾಗೂ ವಿಶ್ವಾಸಾರ್ಹ ವಿಮಾನ ಸೇವೆಗಳನ್ನು ನೀಡುವಲ್ಲಿ ಸ್ಪೈಸ್‌ಜೆಟ್ ವಿಫಲವಾಗಿದೆ ಎಂದು ಡಿಜಿಸಿಎ ಹೇಳಿದೆ. ಡಿಜಿಸಿಎ ಶೋಕಾಸ್ ನೋಟೀಸ್‌ಗೆ ಪ್ರತಿಕ್ರಿಯೆ ನೀಡಲು ಸ್ಪೈಸ್‌ಜೆಟ್‌ಗೆ 3 ವಾರಗಳ ಕಾಲಾವಕಾಶವನ್ನು ನೀಡಿದೆ. ಡಿಜಿಸಿಎ ಶೋಕಾಸ್ ನೋಟಿಸ್ ಬಳಿಕ ಸ್ಪೈಸ್‌ಜೆಟ್ ಅಧ್ಯಕ್ಷ ಅಜಯ್ ಸಿಂಗ್ ಸ್ಪೈಸ್‌ಜೆಟ್‌ನಲ್ಲಿ ಪ್ರಯಾಣ ಮಾಡಲು ಶೇ.100 ರಷ್ಟು ಸುರಕ್ಷಿತವಾಗಿದೆ ಎಂದು ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]